Tag: Investments

  • ಚಿಪ್ ಘಟಕ ತೆರೆಯಲ್ಲ- ವೇದಾಂತ ಜೊತೆಗಿನ 1.61 ಲಕ್ಷ ಕೋಟಿ ಒಪ್ಪಂದವನ್ನ ರದ್ದುಗೊಳಿಸಿದ ಫಾಕ್ಸ್‌ಕಾನ್‌

    ಚಿಪ್ ಘಟಕ ತೆರೆಯಲ್ಲ- ವೇದಾಂತ ಜೊತೆಗಿನ 1.61 ಲಕ್ಷ ಕೋಟಿ ಒಪ್ಪಂದವನ್ನ ರದ್ದುಗೊಳಿಸಿದ ಫಾಕ್ಸ್‌ಕಾನ್‌

    ನವದೆಹಲಿ: ಭಾರತದ ವೇದಾಂತ (Vedanta) ಕಂಪನಿ ಜೊತೆಗೂಡಿ ಗುಜರಾತ್‌ನಲ್ಲಿ 1.61 ಲಕ್ಷ ಕೋಟಿ ರೂ.(19 ಶತಕೋಟಿ ಡಾಲರ್‌) ಹೂಡಿಕೆಯೊಂದಿಗೆ ಆರಂಭವಾಗಬೇಕಿದ್ದ ಸೆಮಿಕಂಡಕ್ಟರ್‌ (Semiconductor) ಘಟಕದ ಒಪ್ಪಂದವನ್ನ ತೈವಾನ್‌ನ ಫಾಕ್ಸ್‌ಕಾನ್‌ (Foxconn) ಕಂಪನಿ ರದ್ದು ಮಾಡಿದೆ.

    ಭಾರತದಲ್ಲಿ ವೇದಾಂತ ಜೊತೆ ಜಂಟಿ ಉದ್ಯಮವಾಗಿ ಸೆಮಿ ಕಂಡಕ್ಟರ್‌ ತಯಾರಿಸುವುದಿಲ್ಲ ಎಂದು ಫಾಕ್ಸ್‌ಕಾನ್‌ ಹೇಳಿದ ನಂತರ ಪರಸ್ಪರ ಉದ್ಯಮವನ್ನು ಕೊನೆಗೊಳಿಸುವ ನಿರ್ಧಾರವನ್ನ ಎರಡೂ ಸಂಸ್ಥೆಗಳಿಂದ ಪ್ರಕಟಿಸಲಾಗಿದೆ. ಇದನ್ನೂ ಓದಿ: Rafale Deal: 90,000 ಕೋಟಿ ವೆಚ್ಚ, 26 ರಫೇಲ್‌ ಖರೀದಿಸಲು ಭಾರತ ಸರ್ಕಾರ ಮೆಗಾ ಪ್ಲ್ಯಾನ್‌!

    ಫಾಕ್ಸ್‌ಕಾನ್‌ ಮತ್ತು ವೇದಾಂತ ಕಂಪನಿ ಗುಜರಾತ್‌ನಲ್ಲಿ 1.61 ಲಕ್ಷ ಕೋಟಿ ರೂ. ಹೂಡಿಕೆಯ ಸೆಮಿಕಂಡಕ್ಟರ್‌ ಘಟಕ (Semiconductor Unit) ಸ್ಥಾಪನೆ ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದವು. ಎರಡೂ ಕಂಪನಿಗಳು ಜಂಟಿಯಾಗಿ ಸೆಮಿಕಂಡಕ್ಟರ್ ಮತ್ತು ಡಿಸ್ಪ್ಲೇ ಉತ್ಪಾದನಾ ಘಟಕಗಳನ್ನು ಸ್ಥಾಪಿಸಬೇಕಿತ್ತು. ಇದೀಗ ಒಪ್ಪಂದ ರದ್ದಾಗಿದ್ದು, ಭಾರತದ ಸೆಮಿ ಕಂಡಕ್ಟರ್‌ ಕ್ಷೇತ್ರಕ್ಕೆ ಭಾರೀ ಪೆಟ್ಟು ಬಿದ್ದಿದೆ.

    ಈ ಬಗ್ಗೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಪ್ರತಿಕ್ರಿಯಿಸಿ, ಜಂಟಿ ಉದ್ಯಮದ ಸ್ಥಗಿತವು ಭಾರತವನ್ನು ಸೆಮಿಕಂಡಕ್ಟರ್ ಚಿಪ್ ಹಬ್ ಮಾಡುವ ನಮ್ಮ ಗುರಿಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಕರ್ನಾಟಕವನ್ನು ಬಿಟ್ಟು ಗುಜರಾತ್‌ ಆಯ್ಕೆ ಮಾಡಿದ್ದು ಯಾಕೆ – ಪ್ರಶ್ನೆಗೆ ಉತ್ತರ ಕೊಟ್ಟ ವೇದಾಂತ ಕಂಪನಿ

    ಈ ನಡುವೆ ಸೆಮಿಕಂಡಕ್ಟರ್‌ಗಳ ಪೂರೈಕೆಗೆ ಸ್ಥಳೀಯ ಪಾಲುದಾರರ ಮೂಲಕ ವ್ಯವಸ್ಥೆ ಮಾಡುವುದಾಗಿ ತಿಳಿಸಿದೆ. ಒಪ್ಪಂದವನ್ನು ಮುರಿಯಲು ಫಾಕ್ಸ್‌ಕಾನ್ ಕಾರಣವನ್ನು ನೀಡಿಲ್ಲ. ಜಂಟಿ ಉದ್ಯಮದಿಂದ ಬೇರೆ ಬೇರೆಯಾದ ನಂತರ ವೇದಾಂತ ಕಂಪನಿ ಸೆಮಿಕಂಡಕ್ಟರ್‌ ಪ್ಲ್ಯಾಂಟ್‌ ಸ್ಥಾಪಿಸಲು ಇತರ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗಿದೆ.

    ಕಳೆದ ವರ್ಷ ವೇದಾಂತ ಲಿಮಿಟೆಡ್‌ (Vedanta Ltd.) ಮತ್ತು ತೈವಾನ್‌ನ ಫಾಕ್ಸ್‌ಕಾನ್‌ (Foxconn) ಕಂಪನಿಯು ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಜಾಗ ನೀಡಲು ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಗುಜರಾತ್‌ ಮುಂದಾಗಿದ್ದವು. ರಾಜ್ಯಗಳು ಪೈಪೋಟಿಗೆ ಇಳಿದ ಹಿನ್ನೆಲೆಯಲ್ಲಿ ಕಂಪನಿ ಭಾರೀ ರಿಯಾಯಿಯಿತಿಯನ್ನು ಬಯಸಿತ್ತು. ಮುಖ್ಯವಾಗಿ 1000 ಎಕ್ರೆ ಭೂಮಿಯನ್ನು ಯಾವುದೇ ಶುಲ್ಕವಿಲ್ಲದೇ 99 ವರ್ಷಗಳ ಅವಧಿಗೆ ಗುತ್ತಿಗೆ (Lease) ನೀಡಬೇಕು. ಇದರ ಜೊತೆ 20 ವರ್ಷಗಳ ಅವಧಿಗೆ ನೀರು ಮತ್ತು ವಿದ್ಯುತ್‌ ಅನ್ನು ರಿಯಾಯಿತಿ ದರದಲ್ಲಿ ಒದಗಿಸಬೇಕು ಎಂದು ಬೇಡಿಕೆ ಇಟ್ಟಿತ್ತು. ಈ ಬೇಡಿಕೆಗೆ ಗುಜರಾತ್‌ ಸರ್ಕಾರ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಅಹಮದಾಬಾದ್‌ನಲ್ಲಿ ಹೊಸ ಸೆಮಿಕಂಡಕ್ಟರ್‌ ಮತ್ತು ಡಿಸ್‌ಪ್ಲೇ ಉತ್ಪಾದನಾ ಘಟಕ ಆರಂಭಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು.

    ಪ್ರಸ್ತುತ ವಿಶ್ವದ ಚಿಪ್‌ ಮಾರುಕಟ್ಟೆಯಲ್ಲಿ ಚೀನಾ ಮತ್ತು ತೈವಾನ್‌ ಕಂಪನಿಗಳೇ ಹೆಚ್ಚು ಪ್ರಾಬಲ್ಯ ಹೊಂದಿದೆ. ಭಾರತವನ್ನ ಚಿಪ್‌, ಮೊಬೈಲ್‌ ಉತ್ಪಾದನಾ ಹಬ್‌ ದೇಶವನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ಸ್ (ಪಿಎಲ್ಐ) ಯೋಜನೆಯನ್ನು ಆರಂಭಿಸಿತ್ತು. ಉದ್ಯೋಗ ಸೃಷ್ಟಿಗಾಗಿ ಆರಂಭಿಸಲಾದ ಈ ಯೋಜನೆ ಅಡಿ ಮುಂದಿನ 5 ವರ್ಷದಲ್ಲಿ ನಿಗದಿತ ವೆಚ್ಚದಲ್ಲಿ ಮೊಬೈಲ್ ಫೋನ್ ಹಾಗೂ ಬಿಡಿಭಾಗಗಳನ್ನ ಉತ್ಪಾದಿಸುವ ಗುರಿಯನ್ನು ಹಾಕಿಕೊಂಡಿತ್ತು.

    2020ರ ವೇಳೆಗೆ ಕೇವಲ 1.12 ಲಕ್ಷ ಕೋಟಿ ರೂ. ನಷ್ಟಿದ್ದ ಭಾರತದ ಸೆಮಿಕಂಡಕ್ಟರ್‌ ವಲಯ 2026ರ ವೇಳೆಗೆ 5 ಲಕ್ಷ ಕೋಟಿ ರೂ.ಗೆ ತಲುಪುವ ನಿರೀಕ್ಷೆಯನ್ನು ಹೊಂದಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೈಸೂರು, ಮಂಗಳೂರು ಸೇರಿ ರಾಜ್ಯದ 6 ಕಡೆ ಹೊಸ ನಗರಗಳ ನಿರ್ಮಾಣ – ಬೊಮ್ಮಾಯಿ

    ಮೈಸೂರು, ಮಂಗಳೂರು ಸೇರಿ ರಾಜ್ಯದ 6 ಕಡೆ ಹೊಸ ನಗರಗಳ ನಿರ್ಮಾಣ – ಬೊಮ್ಮಾಯಿ

    ಬೆಂಗಳೂರು: ರಾಜ್ಯದಲ್ಲಿ 6 ಹೊಸ ನಗರಗಳ (New Cities) ನಿರ್ಮಾಣ ಮಾಡಲಾಗುತ್ತಿದೆ. ಕಲಬುರಗಿ, ಹುಬ್ಬಳ್ಳಿ (Hubballi) ಧಾರವಾಡ, ಮೈಸೂರು (Mysuru), ಮಂಗಳೂರು ಸುತ್ತ ಹೊಸ ನಗರಗಳು ಬರಲಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Narendra Modi) ವರ್ಚುಯಲ್ ಆಗಿ ಉದ್ಘಾಟಿಸಿದ, ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿರುವ 3 ದಿನಗಳ ಟೆಕ್ ಸಮ್ಮೇಳನ (BengaluruTechSummit) ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: ಎಲೆಕ್ಟ್ರಾನಿಕ್‌ ವಲಯದಲ್ಲಿ 36 ಸಾವಿರ ಕೋಟಿ ರೂ.ಗೂ ಹೆಚ್ಚು ಹೂಡಿಕೆ : ಅಶ್ವತ್ಥನಾರಾಯಣ

    ರಾಜ್ಯದಲ್ಲಿ 6 ಹೊಸ ನಗರಗಳ ನಿರ್ಮಾಣ ಮಾಡಲಾಗುತ್ತಿದೆ. ಕಲಬುರಗಿ, ಹುಬ್ಬಳ್ಳಿ ಧಾರವಾಡ, ಮೈಸೂರು, ಮಂಗಳೂರು ಸುತ್ತ ಹೊಸ ನಗರಗಳು ಬರಲಿವೆ. ಬೆಂಗಳೂರಿನ ಪಕ್ಕ ಹೊಸ ನಗರ ನಿರ್ಮಾಣ ಮಾಡಲಾಗುತ್ತದೆ. ಜ್ಞಾನ, ವಿಜ್ಞಾನ ಹಾಗೂ ಟೆಕ್ ಸಿಟಿ (Tech City) ನಿರ್ಮಾಣ ಮಾಡಲಾಗುತ್ತಿದ್ದು, ಇದು ವಿಮಾನ ನಿಲ್ದಾಣಕ್ಕೆ ಹತ್ತಿರವಿರಲಿದೆ. 6 ತಿಂಗಳೊಳಗೆ ಈ ನಗರ ನಿರ್ಮಾಣದ ಬಗ್ಗೆ ಘೋಷಣೆ ಮಾಡಲಿದ್ದು, ಯೋಜನೆಯನ್ನು ರೂಪಿಸಲಾಗುವುದು. ಸ್ಟಾರ್ಟ್ ಅಪ್‌ಗಳನ್ನು (Startups)  ಪ್ರೋತ್ಸಾಹಿಸಲು ಅನೇಕ ಕಾರ್ಯಕ್ರಮಗಳಿದ್ದು, ಸರ್ಕಾರದ (Government) ವತಿಯಿಂದ ಇನ್ನಷ್ಟು ಕಾರ್ಯಕ್ರಮ ರೂಪಿಸಬೇಕಿದೆ. ಸ್ಟಾರ್ಟ್ ಅಪ್ ಪಾರ್ಕ್ ನಿರ್ಮಾಣಕ್ಕೆ ತೀರ್ಮಾನಿಸಿದ್ದು ಇದೂ ಕೂಡ 6 ತಿಂಗಳಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

    ಸೃಜನಶೀಲತೆ ಹಲವಾರು ಆಯಾಮಗಳನ್ನು ಒಳಗೊಂಡಿದೆ. ನಾವು ಜಾಗತಿಕವಾಗಿ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದೇವೆ. ಜಗತ್ತು ಸಮಸ್ಯೆಗಳಿಂದ ಮುಳುಗುತ್ತಿದೆ. ಹಣಕಾಸು ಮೂಲಗಳು ಪ್ರತಿ ಕ್ಷಣವೂ ಇಳಿಮುಖವಾಗುತ್ತಿದೆ. ನಾವು ಪರಿಹಾರ ಕಂಡುಕೊಳ್ಳದಿದ್ದರೆ ಭವಿಷ್ಯದಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ಉದ್ಯಮಿಗಳು ಆವಿಷ್ಕಾರ ಮಾಡುವುದರ ಜೊತೆಗೆ ಅಭಿವೃದ್ದಿಗೆ ಪೂರಕವಾದ ಕೆಲಸ ಮಾಡಿ ಸರ್ಕಾರಕ್ಕೂ ಆದಾಯ ತರುವ ಕೆಲಸ ಮಾಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು. ಇದನ್ನೂ ಓದಿ: ಬೆಂಗಳೂರು ತಂತ್ರಜ್ಞಾನ, ನಾವೀನ್ಯತೆ, ನಾಯಕತ್ವದ ತವರು: ಮೋದಿ

    ನಮ್ಮ ಪೂರ್ವಜರು ವ್ಯವಸ್ಥಿತ ಜೀವನ ಮಾಡುತ್ತಿದ್ದರು. ನಾವು ನಮ್ಮ ಮಕ್ಕಳಿಗೂ ಉತ್ತಮ ಭವಿಷ್ಯ ನೀಡಬೇಕು. ಭವಿಷ್ಯದಿಂದ ಕಳ್ಳತನ ಮಾಡಬಾರದು. ಭವಿಷ್ಯಕ್ಕಾಗಿ ಭೂಮಿಯನ್ನು ಉಳಿಸಬೇಕು. ಭೂಮಿಯನ್ನು ಉಳಿಸುವ ನಿಟ್ಟಿನಲ್ಲಿ ಜಾಗತಿಕವಾಗಿ ಚಿಂತನೆ ಅಗತ್ಯ. ಯಾವುದೇ ತಂತ್ರಜ್ಞಾನ ಬಂದರೂ ಈ ಪರಿಸರ ಉಳಿಸುವ ಗುಣ ಹೊಂದಿರಬೇಕು. ಡಿಜಿಟಲ್ ಅಂತರ ಕಡಿಮೆ ಮಾಡುವತ್ತಲೂ ನಾವು ಗಮನಹರಿಸಬೇಕು. ಪರಿಸರ ಸ್ನೇಹಿ ವಾತಾವರಣ ಹೊಂದಬೇಕು ಎಂದು ಹತ್ತು ಹಲವು ಸಲಹೆ ನೀಡಿದರು.

    ಪರಿಸರ ಸ್ನೇಹಿ ತಂತ್ರಜ್ಞಾನ, ನಾವೀನ್ಯತೆ ಹಾಗೂ ಇಕೋ ಇಕನಾಮಿಕ್ಸ್ ಅನ್ನು ಸಾಧ್ಯವಾಗಿಸಬೇಕು. ಐಟಿ ಬಿಟಿ, ಕೃತಕ ಬುದ್ಧಿಮತ್ತೆ ನಮ್ಮ ಸಂಪನ್ಮೂಲಗಳನ್ನು ಉಳಿಸಿ ರಕ್ಷಣೆ ಮಾಡುವ ಸಾಧ್ಯತೆ ಇದೆ. ಮನುಕುಲಕ್ಕೆ ಯಾವುದು ಅನುಕೂಲವಾಗುತ್ತದೆ ಅನ್ನೊದನ್ನ ನೀವರ ಪರೀಕ್ಷಿಸಬೇಕು. ತಂತ್ರಜ್ಞಾನ ಮಾಹಿತಿಯ ಕಣಜವನ್ನೇ ನಮ್ಮ ಮುಂದಿರಿಸಿದೆ. ನವೀಕರಿಸಬಹುದಾದ ಇಂಧನ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು.

    ಮೈಸೂರು ಮಹಾರಾಜರು ವಿಜ್ಞಾನ ತಂತ್ರಜ್ಞಾನಕ್ಕೆ, ಶಿಕ್ಷಣಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಂತರ ಉದ್ಯಮಕ್ಕೆ ಆದ್ಯತೆ ನೀಡಿದ್ದಾರೆ. ಈಗ ಐಟಿ, ಬಿಟಿ ಬಂದಿದೆ. ಬೆಂಗಳೂರಿಗೆ ಬಂದವರು ಐಟಿ-ಬಿಟಿ ಕಂಪನಿಗಳಿಗೆ ಭೇಟಿ ನೀಡುತ್ತಾರೆ. ಮೊದಲು ಸಂಪತ್ತು ಉಳ್ಳವರ ಕಾಲವಿತ್ತು. ಈಗ ಜ್ಞಾನ ಇರುವವರ ಕಾಲ. ಬೆಂಗಳೂರಿಗೆ ಪ್ರತಿದಿನ 5,000ಕ್ಕೂ ಹೆಚ್ಚು ಇಂಜಿನಿಯರ್‌ಗಳು ಬಂದು ಹೋಗುತ್ತಾರೆ. 400 ಆರ್ ಆಂಡ್ ಡಿ ಸೆಂಟರ್ ಇವೆ. ಬಿಯಾಂಡ್ ಬೆಂಗಳೂರು ಸಾಕಾರಗೊಳಿಸಲು ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದರು.

    ಮೈಸೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ ಕಡೆಗಳಲ್ಲಿ ಐಟಿ ಉದ್ಯಮಕ್ಕೆ ಆದ್ಯತೆ ನೀಡುತ್ತೇವೆ. ಮುಂದಿನ 10 ವರ್ಷದಲ್ಲಿ ನಗರೀಕರಣ ಹೆಚ್ಚಳವಾಗಲಿದೆ. ಭಾರತದಲ್ಲಿ ಶೇ.40 ರಷ್ಟು ನಗರೀಕರಣವಾಗಲಿದೆ. ಹೀಗಾಗಿ ಐಟಿ-ಬಿಟಿ ಕಂಪನಿಗಳು ಸರಳ ನಗರೀಕರಣ ಜೀವನ ನಿರ್ವಹಣೆಗೆ ತಂತ್ರಜ್ಞಾನ ಅಭಿವೃದ್ದಿ ಪಡಿಸಬೇಕು ಎಂದು ಕರೆ ನೀಡಿದರು.

    ಆರೋಗ್ಯ ಕ್ಷೇತ್ರದಲ್ಲಿಯೂ ತಂತ್ರಜ್ಞಾನ ಬಳಕೆ ಮಾಡುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕು. ದೇಶದಲ್ಲಿ ಒಂದು ವರ್ಷದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ 7 ಕೋಟಿ ಮನೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲಾಗುತ್ತಿದೆ. ನಮ್ಮ ಪ್ರಧಾನಿಗಳು ಬಿಐಎಎಲ್‌ನ 2 ನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ಜಗತ್ತಿನಲ್ಲಿಯೇ ಅತ್ಯಂತ ಸುಂದರವಾದ ಟರ್ಮಿನಲ್ ಇದಾಗಿದೆ. ಬೆಂಗಳೂರಿನಲ್ಲಿ ಎಲ್ಲವೂ ಸಾಧ್ಯವಿದೆ. ತಂತ್ರಜ್ಞಾನಗಳೆಲ್ಲವೂ ವಿಶ್ವದ ಭವಿಷ್ಯಕ್ಕೆ ಮಾನವ ಅಭಿವೃದ್ಧಿ ಸಮಾವೇಶದ ಧ್ಯೇಯವಾಗಲಿ ಎಂದು ಶ್ಲಾಘಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕುಡಿದ ಮತ್ತಿನಲ್ಲಿ ಪಂಜಾಬ್ ಸಿಎಂ ತೂರಾಟ – ವಿಮಾನದಿಂದ ಕೆಳಗಿಳಿಸಿದ Lufthansa?

    ಕುಡಿದ ಮತ್ತಿನಲ್ಲಿ ಪಂಜಾಬ್ ಸಿಎಂ ತೂರಾಟ – ವಿಮಾನದಿಂದ ಕೆಳಗಿಳಿಸಿದ Lufthansa?

    ಚಂಡೀಗಢ: ಕುಡಿದ (Drunk) ಮತ್ತಿನಲ್ಲಿದ್ದ ಪಂಜಾಬ್ ಸಿಎಂ ಭಗವಂತ್ ಮಾನ್ (Bhagwant Mann) ಅವರನ್ನ ಜರ್ಮನಿಯ ಲುಫ್ಥಾನ್ಸಾ ವಿಮಾನದಿಂದ (Lufthansa Flight) ಕೆಳಗಿಳಿಸಲಾಗಿತ್ತು ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಫ್ರಾಂಕ್‌ಫರ್ಟ್‌ನಿಂದ (Frankfurt) ದೆಹಲಿಗೆ (New Delhi) ಬರುತ್ತಿದ್ದ ವಿಮಾನ 4 ಗಂಟೆ 40 ನಿಮಿಷ ತಡವಾಗಲು ಭಗವಂತ್ ಮಾನ್ ಕಾರಣ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

    ನಡೆದಿದ್ದು ಏನು?
    ಪಂಜಾಬ್‌ಗೆ (Panjab) ಹಲವು ಹೂಡಿಕೆ ಆಕರ್ಷಿಸಲು ಮಾನ್ ಸೆಪ್ಟೆಂಬರ್ 11 ರಿಂದ 18ರ ವರೆಗೆ ಜರ್ಮನಿ ಪ್ರವಾಸ ಕೈಗೊಂಡಿದ್ದರು. ಅವರಿಂದು ಹಿಂದಿರುಗುವಾಗ ಕುಡಿದ ಮತ್ತಿನಲ್ಲಿ ತೂರಾಡುತ್ತಿದ್ದರು. ಈ ಕಾರಣ ಅವರನ್ನು ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಬರುತ್ತಿದ್ದ ಲುಫ್ಥಾನ್ಸ 760 ವಿಮಾನದಿಂದ ಕೆಳಗಿಳಿಸಲಾಯಿತು. ಜರ್ಮನಿಯಿಂದ (Germany) ಮಧ್ಯಾಹ್ನ 1.40ಕ್ಕೆ ಟೇಕ್ ಆಫ್ ಆದ ವಿಮಾನವು (Flight) ಸಂಜೆ 5.30ಕ್ಕೆ ದೆಹಲಿಗೆ ಬಂದಿಳಿಯಿತು. ಮಾನ್ ಅವರ ವರ್ತನೆಯಿಂದಾಗಿ 4 ಗಂಟೆಗಳ ಕಾಲ ವಿಮಾನ ತಡವಾಯಿತು ಎಂದು ಮಾಧ್ಯಮಗಳು ವರದಿ ಮಾಡಿವೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಂಜಾಬ್ ಸಿಎಂ ಕಚೇರಿಯು (Panjab CM Office), ಮಾನ್ ಅವರು ಪಾನಮತ್ತರಾಗಿರಲಿಲ್ಲ, ಅವರಿಗೆ ಆರೋಗ್ಯ ಸಮಸ್ಯೆಯಿದ್ದ ಕಾರಣ ವಿಮಾನ ಹತ್ತಲು ಸಾಧ್ಯವಾಗಲಿಲ್ಲವೇ ಹೊರತು ಲುಪ್ಥಾನ್ಸ ಅವರನ್ನು ಹೊರಹಾಕಿಲ್ಲ ಎಂದು ಸ್ಪಷ್ಟನೆ ನೀಡಿದೆ. ಆದರೆ ವಿರೋಧ ಪಕ್ಷಗಳು, ಭಗವಂತ್ ಮಾನ್ ಪಂಜಾಬಿಗಳು ನಾಚಿಕೆಪಡುವಂತೆ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿವೆ.

    ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತುಂಬಾ ಕುಡಿದಿದ್ದರಿಂದ ಅವರನ್ನು ಲುಫ್ಥಾನ್ಸ ವಿಮಾನದಿಂದ ಕೆಳಗಿಳಿಸಲಾಗಿದೆ ಎಂದು ಅವರ ಸಹ ಪ್ರಯಾಣಿಕರೊಬ್ಬರು ಮಾಧ್ಯಮಗಳಿಗೆ ಹೇಳಿದ್ದಾರೆ.’

    ಇದರಿಂದ ವಿಮಾನ ನಾಲ್ಕು ಗಂಟೆ ವಿಳಂಬವಾಗಿದೆ. ಅಲ್ಲದೇ ಅವರು ಎಎಪಿಯ (AAP) ರಾಷ್ಟ್ರೀಯ ಸಮಾವೇಶಕ್ಕೂ ಗೈರಾಗಿದ್ದಾರೆ. ಈ ಬೆಳವಣಿಗೆಗಳು ಪಂಜಾಬ್ ಸರ್ಕಾರವನ್ನು ತೀವ್ರ ಮುಖಭಂಗಕ್ಕೀಡಾಗುವಂತೆ ಮಾಡಿವೆ. ಜೊತೆಗೆ ಜಗತ್ತಿನಾದ್ಯಂತ ಇರುವ ಪಂಜಾಬಿಗಳನ್ನು ನಾಚಿಕೆಪಡುವಂತಾಗಿದೆ. ಘಟನೆ ಬಗ್ಗೆ ಪಂಜಾಬ್ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಅಕಾಲಿ ದಳದ ಮುಖಂಡ ಸುಖಬೀರ್ ಸಿಂಗ್ ಬಾದಲ್ ಟ್ವೀಟ್ ಮಾಡಿದ್ದಾರೆ. ಒತ್ತಾಯಿಸಿದ್ದಾರೆ.

    ಮಾನ್ ಅವರು ಅತಿಯಾಗಿ ಕುಡಿದಿದ್ದರು. ಅವರಿಗೆ ನಡೆಯಲೂ ಸಾಧ್ಯವಾಗುತ್ತಿರಲಿಲ್ಲ. ಅವರ ಪತ್ನಿ ಮತ್ತು ಭದ್ರತಾ ಸಿಬ್ಬಂದಿ ಅವರಿಗೆ ನೆರವಾಗುತ್ತಿದ್ದರು ಎಂಬ ಪ್ರಯಾಣಿಕರೊಬ್ಬರ ಹೇಳಿಕೆಯ ವರದಿಯನ್ನು ಕಾಂಗ್ರೆಸ್ ಟ್ವೀಟ್‌ನಲ್ಲಿ ಹಂಚಿಕೊಂಡಿದೆ.

    ಈ ಕುರಿತು ಮಾತನಾಡಿರುವ ಎಎಪಿ ವಕ್ತಾರ ಮಲ್ವಿಂದರ್ ಸಿಂಗ್ ಕಾಂಗ್, ಮುಖ್ಯಮಂತ್ರಿ ಅವರು ನಿಗದಿಯಂತೇ ಸೆಪ್ಟೆಂಬರ್ 19ರಂದು ಹಿಂತಿರುಗಿದ್ದಾರೆ. ಈ ಎಲ್ಲಾ ಸಾಮಾಜಿಕ ಮಾಧ್ಯಮ (Social Media) ವರದಿಗಳು ಕೇವಲ ಅಪಪ್ರಚಾರವಷ್ಟೇ. ಮಾನ್ ಅವರು ತಮ್ಮ ವಿದೇಶ ಪ್ರವಾಸದ ಮೂಲಕ ಒಂದಷ್ಟು ಹೂಡಿಕೆ ತರುತ್ತಿರುವುದನ್ನು ಕಂಡು ವಿರೋಧ ಪಕ್ಷಗಳು ಕಂಗಾಲಾಗಿವೆ. ಅಗತ್ಯವಿದ್ದವರು ಲುಪ್ಥಾನ್ಸ ಏರ್‌ಲೈನ್ಸ್‌  ಬಳಿ ಪರಿಶೀಲಿಸಬಹುದು ಎಂದು ಸಮರ್ಥಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ವಂತ ಮನೆ ಬಿಟ್ಟರೇ ಪ್ರಧಾನಿ ಬಳಿ ಯಾವುದೇ ವಾಹನವಿಲ್ಲ! -ಮೋದಿ ಆಸ್ತಿ ವಿವರ ಇಲ್ಲಿದೆ

    ಸ್ವಂತ ಮನೆ ಬಿಟ್ಟರೇ ಪ್ರಧಾನಿ ಬಳಿ ಯಾವುದೇ ವಾಹನವಿಲ್ಲ! -ಮೋದಿ ಆಸ್ತಿ ವಿವರ ಇಲ್ಲಿದೆ

    ನವದಹಲಿ: ಪ್ರಧಾನಿ ನರೇಂದ್ರ ಮೋದಿ ಎರಡು ಕೋಟಿ ಮೌಲ್ಯದ ಸ್ಥಿರಾಸ್ತಿ ಮತ್ತು ಚರಾಸ್ತಿ ಹೊಂದಿದ್ದು, ಮನೆಯೊಂದನ್ನು ಬಿಟ್ಟು, ಕಾರು, ಬೈಕ್ ಸೇರಿದಂತೆ ಯಾವುದೇ ಚರಾಸ್ತಿಯನ್ನು ಹೊಂದಿಲ್ಲ.

    ನರೇಂದ್ರ ಮೋದಿ ಅವರ ವಾರ್ಷಿಕ ಆಸ್ತಿ ವಿವರವನ್ನು ಪ್ರಧಾನಿ ಕಾರ್ಯಾಲಯ ಸ್ವಯಂ ಪ್ರೇರಣೆಯಿಂದ ಪ್ರಕಟಿಸಿದ್ದು, ಇದರಲ್ಲಿ 2018ರ ಮಾರ್ಚ್ 31ರ ವರೆಗಿನ ಮಾಹಿತಿಯನ್ನು ನೀಡಿದೆ.

    48,944 ರೂ. ನಗದು, ಗುಜರಾತ್‍ನ ಗಾಂಧಿನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಖಾತೆಯಲ್ಲಿ 11,29,690 ರೂ. ಹಾಗೂ ಮತ್ತೊಂದು ಖಾತೆಯಲ್ಲಿ 1,09,96,288 ರೂ. ಠೇವಣಿ ಹೊಂದಿದ್ದಾರೆ ಎಂದು ತಿಳಿಸಲಾಗಿದೆ.

    ಗಾಂಧಿನಗರಲ್ಲಿ ಮೋದಿ ಅವರು 2002ರಲ್ಲಿ ನಾಲ್ಕನೇ ಒಂದರಷ್ಟು ಷೇರು (1.30 ಲಕ್ಷ ರೂ.) ನೀಡಿ, ವಸತಿ ಕಟ್ಟಡವೊಂದನ್ನು ಖರೀದಿಸಿದ್ದರು. ಅದರ ಬೆಲೆ ಈಗ ಒಂದು ಕೋಟಿ ರೂ. ಮೌಲ್ಯ ಎಂದು ಅಂದಾಜಿಸಲಾಗಿದೆ.

    ಮೋದಿ ಅವರು ಚರಾಸ್ತಿಯಾಗಿ ಮನೆಯನ್ನು ಮಾತ್ರ ಹೊಂದಿದ್ದಾರೆ. ಉಳಿದಂತೆ ಅವರ ಬಳಿ ಯಾವುದೇ ಸ್ವಂತ ಕಾರು, ಬೈಕ್ ಸೇರಿದಂತೆ ಯಾವುದೇ ವಾಹನಗಳು ಕೂಡಾ ಇಲ್ಲ ಎಂದು ಉಲ್ಲೇಖಿಸಲಾಗಿದೆ.

    ನಾಲ್ಕು ಚಿನ್ನದ ಉಂಗುರಗಳಿದ್ದು, ಅವುಗಳ ಮೌಲ್ಯ 1,38,060 ರೂ. ಆಗಿದೆ. ಎಲ್ ಅಂಡ್ ಟಿ ಇನ್‍ಫ್ರಾಸ್ಟ್ರಕ್ಚರ್ ನಲ್ಲಿ ಸದ್ಯ 20,000 ರೂ. ಮೌಲ್ಯದ ಹೂಡಿಕೆ ಹಾಗೂ ನ್ಯಾಷನಲ್ ಸೇವಿಂಗ್ ಸರ್ಟಿಫಿಕೇಟ್ ಅಡಿ 5,18,235 ರೂ. ಹೂಡಿಕೆ ಮಾಡಿದ್ದಾರೆ. ಇದರ ಜೊತೆಗೆ 1,59,281 ರೂ. ಮೌಲ್ಯದ ಎಲ್‍ಐಸಿ ಪಾಲಿಸಿಯನ್ನು ಮೋದಿ ಹೊಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv