Tag: IPC

  • RCBvsDC | ಪಂದ್ಯದ ಟಿಕೆಟ್ ಕಾಳಸಂತೆಯಲ್ಲಿ ಮಾರಾಟ – 8 ಮಂದಿ ಸಿಸಿಬಿ ಬಲೆಗೆ

    RCBvsDC | ಪಂದ್ಯದ ಟಿಕೆಟ್ ಕಾಳಸಂತೆಯಲ್ಲಿ ಮಾರಾಟ – 8 ಮಂದಿ ಸಿಸಿಬಿ ಬಲೆಗೆ

    ಬೆಂಗಳೂರು: ಐಪಿಎಲ್ (IPL) ಮ್ಯಾಚ್‌ಗಳ ಟಿಕೆಟ್ ಸಿಕ್ಕರೆ ಅವರೇ ಪುಣ್ಯವಂತರು ಎನ್ನುವ ಹಾಗಾಗಿದೆ. ಯಾಕೆಂದರೆ ಎಷ್ಟೇ ಕಷ್ಟಪಟ್ಟರೂ ಸಹ ಟಿಕೆಟ್‌ಗಳು ಸಿಕ್ತಿಲ್ಲ. ಗುರುವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್‌ಸಿಬಿ (Royal Challengers Bengaluru) ಹಾಗೂ ದೆಹಲಿ (Delhi Capitals) ನಡುವಿನ ಪಂದ್ಯದ ಟಿಕೆಟ್‌ಗಳನ್ನ ದುಪ್ಪಟ್ಟು ಬೆಲೆಗೆ ಬ್ಲಾಕ್‌ನಲ್ಲಿ ಮಾರಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಚಿನ್ನಸ್ವಾಮಿ ಸ್ಟೇಡಿಯಂನ (Chinnaswamy Stadium) ಸುತ್ತಮುತ್ತ, ಕಬ್ಬನ್ ಪಾರ್ಕ್ (Cubbon Park) ಒಳಗೆ ಟಿಕೆಟ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಡಿಸಿಪಿ ಅಕಾಯ್ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ರಾಣಾ ಕರೆತಂದ ವಿಮಾನಕ್ಕೆ ನೀಡಲಾಗಿತ್ತು ಡಮ್ಮಿ ಕೋಡ್‌, ಮಧ್ಯೆ 11 ಗಂಟೆ ಪಿಟ್‌ ಸ್ಟಾಪ್‌!

    ಮಫ್ತಿಯಲ್ಲಿ ಟಿಕೆಟ್ ಖರೀದಿಸುವ ನೆಪದಲ್ಲಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, ಆರೋಪಿಗಳನ್ನು ಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಒಪ್ಪಿಸಿದರು. ಈ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರನ್ನು ವಿಚಾರಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ಆಕಾಶದಲ್ಲೇ ತುಂಡಾದ ಹೆಲಿಕಾಪ್ಟರ್‌ನ ಫ್ಯಾನ್‌ – ಐವರು ದುರ್ಮರಣ

    ಬ್ಲಾಕ್ ಟಿಕೆಟ್ ಹಿಂದೆ ಯಾರಿದ್ದಾರೆ. ಟಿಕೆಟ್ ಹೇಗೆ ಸಿಕ್ತು ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಹೊಸ ಕಾನೂನಿನಡಿ ಮೊದಲ ದಿನವೇ ರಾಜ್ಯಾದ್ಯಂತ 63 FIR ದಾಖಲು

    ಹೊಸ ಕಾನೂನಿನಡಿ ಮೊದಲ ದಿನವೇ ರಾಜ್ಯಾದ್ಯಂತ 63 FIR ದಾಖಲು

    ಬೆಂಗಳೂರು: ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್‌ ಕಾನೂನುಗಳು (New Criminal Laws) ಜಾರಿಯಾಗಿದೆ. ಭಾರತೀಯ ದಂಡ ಸಂಹಿತೆಯು (IPC) ಭಾರತೀಯ ನ್ಯಾಯ ಸಂಹಿತೆಯಾಗಿ (BSN), ಅಪರಾಧ ಪ್ರಕ್ರಿಯಾ ಸಂಹಿತೆಯು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಾಗಿ ಮತ್ತು ಸಾಕ್ಷ್ಯ ಕಾಯ್ದೆಯು ಭಾರತೀಯ ಸಾಕ್ಷ್ಯ ಕಾಯ್ದೆಯಾಗಿ ಜಾರಿಗೆ ಬಂದಿದೆ. ಹೊಸ ಕಾನೂನು ಜಾರಿಯಾದ ಮೊದಲ ದಿನವೇ ರಾಜ್ಯಾದ್ಯಂತ 63 ಎಫ್‌ಐಆರ್ ದಾಖಲಾಗಿವೆ ಎಂದು ಪೊಲೀಸ್‌ ಇಲಾಖೆ (Police department) ಮಾಹಿತಿ ನೀಡಿದೆ.

    ಭಾರತೀಯ ನ್ಯಾಯ ಸಂಹಿತೆ ಕಾನೂನು ಅಡಿಯಲ್ಲಿ ಸೋಮವಾರ (ಜು.1) ಒಂದೇ ದಿನ ರಾತ್ರಿ 8 ಗಂಟೆ ವರೆಗೆ 63 ಎಫ್‌ಐಆರ್ (FIR) ದಾಖಲಾಗಿದೆ ಎಂದು ಮಾಹಿತಿ ನೀಡಿದೆ.

    ಬ್ರಿಟಿಷ್ ಕಾಲದ ಕಾನೂನಿಗೆ ಗುಡ್‌ಬೈ:
    ಹೊಸ ಕ್ರಿಮಿನಲ್ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯನ್ನು ವಸಾಹತು ಕಾಲದ ಜಡತ್ವದಿಂದ ಹೊರತರುತ್ತದೆ ಎಂಬುದು ಕೇಂದ್ರ ಸರ್ಕಾರದ ಪ್ರತಿಪಾದನೆ. ಹೊಸ ಕಾನೂನು ಪ್ರಯೋಗಕ್ಕೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಇನ್ಪೆಕ್ಟರ್‌ಗಳಿಗೆ ತರಬೇತಿ ನೀಡಲಾಗಿದೆ. ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು, ಪಬ್ಲಿಕ್ ಪ್ರಾಸಿಕ್ಯೂಟರ್‌ಗಳು ಹಾಗೂ ಹಿರಿಯ ವಕೀಲರಿಂದ ತರಬೇತಿ ಕೊಡಿಸಲಾಗಿದೆ. ಸಿವಿಲ್ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಆದ್ಯತೆ ಮೇರೆಗೆ ತರಬೇತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    163 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ದಂಡ ಸಂಹಿತೆ 126 ವರ್ಷಗಳ ಹಿಂದಿನ ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು 151 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಈ ಮೂರು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಈ ಕಾನೂನುಗಳಲ್ಲಿ 20 ಹೊಸ ಅಪರಾಧಗಳ ಸೇರ್ಪಡೆಯಾಗಿದೆ. 33 ಅಪರಾಧಗಳಿಗೆ ಶಿಕ್ಷೆ ಪ್ರಮಾಣ ಹೆಚ್ಚಿಸಲಾಗಿದೆ. 83 ಅಪರಾಧಗಳಿಗೆ ಅಧಿಕ ದಂಡ ವಿಧಿಸುವ ಜೊತೆಗೆ 23 ಅಪರಾಧಗಳಿಗೆ ಕಠಿಣ ಶಿಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

    ಪ್ರಮುಖ ಸೆಕ್ಷನ್‌ಗಳು ಯಾವುವು?
    420 – ಹಣಕಾಸು ಅಥವಾ ಬೇರೆ ಯಾವುದೇ ಆಮಿಷ ಒಡ್ಡಿ ವಂಚಿಸಿದ ಆರೋಪದ ಅಡಿ ಐಪಿಸಿ ಸೆಕ್ಷನ್ 420ರ ಅಡಿ ಕೇಸ್ ದಾಖಲಾಗುತ್ತಿತ್ತು. ಇದೀಗ ಬಿಎನ್‌ಎಸ್‌ನಲ್ಲಿ ಸೆಕ್ಷನ್ 318 ಆಗಿದೆ.
    302 – ಭಾರತೀಯ ದಂಡ ಸಂಹಿತೆಯಲ್ಲಿ ಕೊಲೆ ಪ್ರಕರಣಕ್ಕೆ ಈ ಸೆಕ್ಷನ್ ಬಳಸಲಾಗುತ್ತಿತ್ತು. ಇದೀಗ ಭಾರತೀಯ ನ್ಯಾಯ ಸಂಹಿತೆಯಲ್ಲಿ 103 ಆಗಿದೆ.
    307 – ಭಾರತೀಯ ದಂಡ ಸಂಹಿತೆಯಲ್ಲಿ ಕೊಲೆ ಯತ್ನಕ್ಕೆ ಬಳಸಲಾಗುತ್ತಿತ್ತು. ಇದೀಗ ಸೆಕ್ಷನ್ 103 ಆಗಿದೆ.
    376 – ಭಾರತೀಯ ದಂಡ ಸಂಹಿತೆಯಲ್ಲಿ ಅತ್ಯಾಚಾರ ಪ್ರಕಣಗಳಿಗೆ ಈ ಸೆಕ್ಷನ್ ಬಲಸಲಾಗುತ್ತಿತ್ತು. ಇದೀಗ 64 ಆಗಿದೆ.
    304(ಬಿ) – ಐಪಿಸಿ ನಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಬಳಸುತ್ತಿದ್ದ ಸೆಕ್ಷನ್ ಈಗ ಬಿಎನ್‌ಎಸ್‌ನಲ್ಲಿ 80 ಆಗಿದೆ.
    304(ಎ) – ಐಪಿಸಿ ನಲ್ಲಿ ನಿರ್ಲಕ್ಷ್ಯದಿಂದ ಮರಣ (ರಸ್ತೆ ಅಪಘಾತ ಅಥವಾ ಇತರೇ ಸಂದರ್ಭ) ವೇಳೆ ಬಳಸಲಾಗುತ್ತಿತ್ತು. ಇದೀಗ ಬಿಎನ್‌ಎಸ್‌ನಲ್ಲಿ 106 ಆಗಿದೆ.
    359 – ವ್ಯಕ್ತಿ ಅಪಹರಣ ಪ್ರಕರಣದಲ್ಲಿ ಐಪಿಸಿ ನಲ್ಲಿ ಈ ಸೆಕ್ಷನ್ ಬಳಕೆಯಾಗುತ್ತಿತ್ತು. ಈಗ ಸೆಕ್ಷನ್ 137 ಆಗಿದೆ.
    309 – ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದರೆ ಆತನ ವಿರುದ್ಧ ಐಪಿಸಿ ಅಡಿ ಈ ಸೆಕ್ಷನ್ ವಿಧಿಸಲಾಗುತ್ತಿತ್ತು. ಈಗ ಬಿಎನ್‌ಎಸ್ ಅಡಿ 226 ಆಗಿದೆ.

  • ಬ್ರಿಟಿಷರ ಕಾಲದ `ಐಪಿಸಿ’ಗೆ ತಿಲಾಂಜಲಿ – ಇದು ಭಾರತೀಯರೇ ರೂಪಿಸಿದ ಪಕ್ಕಾ ದೇಸಿ ಕಾನೂನು!

    ಬ್ರಿಟಿಷರ ಕಾಲದ `ಐಪಿಸಿ’ಗೆ ತಿಲಾಂಜಲಿ – ಇದು ಭಾರತೀಯರೇ ರೂಪಿಸಿದ ಪಕ್ಕಾ ದೇಸಿ ಕಾನೂನು!

    ಬ್ರಿಟಿಷರ ಕಾಲದ ಕ್ರಿಮಿನಲ್‌ ಅಪರಾಧಗಳಿಗೆ ಸಂಬಂಧಿಸಿದ ಕಾನೂನಿನ ಬದಲಿಗೆ ರೂಪಿಸಲಾಗಿರುವ ಹೊಸ ಕಾನೂನು ಇಂದಿನಿಂದ ಜಾರಿಗೆ ಬಂದಿದೆ. ಭಾರತೀಯ ದಂಡ ಸಂಹಿತೆಯು (IPC) ಭಾರತೀಯ ನ್ಯಾಯ ಸಂಹಿತೆಯಾಗಿ (BNS), ಅಪರಾಧ ಪ್ರಕ್ರಿಯಾ ಸಂಹಿತೆಯು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಾಗಿ ಮತ್ತು ಸಾಕ್ಷ್ಯ ಕಾಯ್ದೆಯು ಭಾರತೀಯ ಸಾಕ್ಷ್ಯ ಕಾಯ್ದೆಯಾಗಿ ಜಾರಿಗೆ ಬಂದಿದೆ. ಈ ಮೂಲಕ ಹೊಸ ಕ್ರಿಮಿನಲ್‌ ಕಾನೂನುಗಳು (New Criminal Laws) ದೇಶದ ಅಪರಾಧ ನ್ಯಾಯ ವ್ಯವಸ್ಥೆಯನ್ನು ವಸಾಹತು ಕಾಲದ ಜಡತ್ವದಿಂದ ಹೊರತರುತ್ತದೆ ಎಂಬುದು ಕೇಂದ್ರ ಸರ್ಕಾರದ ಪ್ರತಿಪಾದನೆ. ಹೊಸ ಕಾನೂನು ಪ್ರಯೋಗಕ್ಕೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಇನ್ಪೆಕ್ಟರ್‌ಗಳಿಗೆ ತರಬೇತಿ ನೀಡಲಾಗಿದೆ. ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು, ಪಬ್ಲಿಕ್‌ ಪ್ರಾಸಿಕ್ಯೂಟರ್‌ಗಳು ಹಾಗೂ ಹಿರಿಯ ವಕೀಲರಿಂದ ತರಬೇತಿ ಕೊಡಿಸಲಾಗಿದೆ. ಸಿವಿಲ್‌ ಪೊಲೀಸ್‌ ಅಧಿಕಾರಿಗಳು (Civil Police Officers) ಹಾಗೂ ಸಿಬ್ಬಂದಿ ಆದ್ಯತೆ ಮೇರೆಗೆ ತರಬೇತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    163 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ದಂಡ ಸಂಹಿತೆ 126 ವರ್ಷಗಳ ಹಿಂದಿನ ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು 151 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಈ ಮೂರು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಈ ಕಾನೂನುಗಳಲ್ಲಿ 20 ಹೊಸ ಅಪರಾಧಗಳ ಸೇರ್ಪಡೆಯಾಗಿದೆ. 33 ಅಪರಾಧಗಳಿಗೆ ಶಿಕ್ಷೆ ಪ್ರಮಾಣ ಹೆಚ್ಚಿಸಲಾಗಿದೆ. 83 ಅಪರಾಧಗಳಿಗೆ ಅಧಿಕ ದಂಡ ವಿಧಿಸುವ ಜೊತೆಗೆ 23 ಅಪರಾಧಗಳಿಗೆ ಕಠಿಣ ಶಿಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

    ಅಷ್ಟಕ್ಕೂ ಏನಿದು ಕ್ರಿಮಿನಲ್‌ ಕಾನೂನು? ಹೊಸ ಕಾನೂನಿನಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ? ಯಾವ ಅಪರಾಧಗಳಿಗೆ ಯಾವ ಶಿಕ್ಷೆ ವಿಧಿಸಲಾಗುತ್ತದೆ ಎಂಬುದನ್ನು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…

    2020ರಲ್ಲಿ ಕಾನೂನು ಪರಿಣತರ ಸಮಿತಿ ರಚನೆ:

    ಕೇಂದ್ರ ಸರ್ಕಾರವು (Central Government) 2020ರ ಮಾರ್ಚ್‌ನಲ್ಲಿ ಐಪಿಸಿ, ಸಿಆರ್‌ಪಿಸಿ ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್‌ ಅನ್ನು ಪರಿಷ್ಕರಿಸಲು ಅಪರಾಧ ಕಾನೂನು ಸುಧಾರಣಾ ಸಮಿತಿ ರಚಿಸಿತ್ತು. ದೆಹಲಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಆಗಿನ ಉಪ ಕುಲಪತಿ ಪ್ರೊಫೆಸರ್ ಡಾ.ರಣಬೀರ್ ಸಿಂಗ್ ನೇತೃತ್ವದ ಸಮಿತಿಯು, ಎನ್‌ಎಲ್‌ಯು-ಡಿಯ ಹಿಂದಿನ ರಿಜಿಸ್ಟ್ರಾರ್ ಪ್ರೊ ಡಾ ಜಿ.ಎಸ್ ಬಾಜಪಾಯಿ, ಡಿಎನ್‌ಎಲ್‌ಯುದ ಉಪ ಕುಲಪತಿ ಪ್ರೊ.ಡಾ.ಬಾಲರಾಜ್ ಚೌಹಾಣ್, ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ, ದೆಹಲಿಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನಿವೃತ್ತ ಜಡ್ಜ್ ಜಿ.ಪಿ ಥರೇಜಾ ಅವರನ್ನ ಒಳಗೊಂಡಿತ್ತು. 2022ರ ಫೆಬ್ರವರಿಯಲ್ಲಿ ಸಮಿತಿಯು ಸಾರ್ವಜನಿಕರ ಸಲಹೆಗಳನ್ನು ಪಡೆದ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಅಪರಾಧ ಕಾನೂನುಗಳ ಸಮಗ್ರ ಪರಾಮರ್ಶೆಗೆ ಪ್ರಕ್ರಿಯೆ ಆರಂಭಿಸಿರುವುದಾಗಿ ರಾಜ್ಯಸಭೆಗೆ ಕಾನೂನು ಸಚಿವಾಲಯ 2022ರ ಏಪ್ರಿಲ್‌ನಲ್ಲಿ ತಿಳಿಸಿತ್ತು.

    ಭಯೋತ್ಪಾದನೆಗೆ ಹೊಸ ವ್ಯಾಖ್ಯಾನ:

    ಭಯೋತ್ಪಾದನೆಯನ್ನು ಮೊದಲ ಬಾರಿಗೆ ಭಾರತೀಯ ನ್ಯಾಯ ಸಂಹಿತೆಯಲ್ಲಿ ಸೆಕ್ಷನ್ 113 (1) ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ವ್ಯಾಖ್ಯಾನಿಸಲಾಗಿದೆ. ಭಾರತದಲ್ಲಿ ಅಥವಾ ಯಾವುದೇ ವಿದೇಶದಲ್ಲಿ ಭಾರತದ ಏಕತೆ, ಸಮಗ್ರತೆ ಮತ್ತು ಭದ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಯಾವುದೇ ಕೃತ್ಯವನ್ನು ಎಸಗುವ ವ್ಯಕ್ತಿಯನ್ನು ಈ ಕಾನೂನಿನಲ್ಲಿ ಭಯೋತ್ಪಾದಕ ಎಂದು ವ್ಯಾಖ್ಯಾನಿಸಲಾಗುತ್ತದೆ. ಅಲ್ಲದೇ ಹೊಸ ಕಾಯ್ದೆಗಳಲ್ಲಿ ಸಂಘಟಿತ ಭಯೋತ್ಪಾದನೆಯನ್ನು ವ್ಯಾಖ್ಯಾನ ಮಾಡಲಾಗಿದೆ. ದೇಶದ್ರೋಹ ಪದವನ್ನು ಬದಲಿಸಿ, ವಿಶ್ವಾಸದದ್ರೋಹ ಪದ ಬಳಸಲಾಗಿದೆ.

    ಅತ್ಯಾಚಾರಕ್ಕೆ ಮರಣ ದಂಡನೆ ಶಿಕ್ಷೆ:

    ಭಾರತೀಯ ನ್ಯಾಯ ಸಂಹಿತೆ ಲೈಂಗಿಕ ಅಪರಾಧಗಳನ್ನು ಪರಿಹರಿಸಲು ‘ಮಹಿಳೆ ಮತ್ತು ಮಕ್ಕಳ ವಿರುದ್ಧದ ಅಪರಾಧಗಳು’ ಎಂಬ ಅಧ್ಯಾಯವನ್ನು ಪರಿಚಯಿಸಿದೆ. ಇದಲ್ಲದೆ, ಸಂಹಿತೆ 18 ವರ್ಷದೊಳಗಿನ ಬಾಲಕಿಯರ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಗಳಿಗೆ ಮಾರ್ಪಾಡುಗಳನ್ನು ಶಿಫಾರಸು ಮಾಡುತ್ತದೆ. ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಯನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ)ಗೆ ಅನುಗುಣವಾಗಿ ಮಾಡಲಾಗಿದೆ. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಕನಿಷ್ಠ 20 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ಸಾಮೂಹಿಕ ಅತ್ಯಾಚಾರಕ್ಕೂ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಗೆ ಅವಕಾಶವಿದೆ. ಇದಲ್ಲದೆ ಮದುವೆ, ಉದ್ಯೋಗ, ಬಡ್ತಿಯ ನೆಪದಲ್ಲಿ ಅಥವಾ ಯಾವುದೇ ಆಮಿಷದ ಮೂಲಕ ಮಹಿಳೆಯರ ಲೈಂಗಿಕ ಶೋಷಣೆಯನ್ನು ಅಪರಾಧವೆಂದು ಪರಿಗಣಿಸಲಾಗುತ್ತದೆ.

    ಗುಂಪು ಹತ್ಯೆಗೆ ಶಿಕ್ಷೆಯ ಹೆಚ್ಚಳ:

    ಮೊದಲ ಬಾರಿಗೆ ಮೂಲ ಮಸೂದೆಯು ಗುಂಪು ಹತ್ಯೆ ಮತ್ತು ದ್ವೇಷದ ಅಪರಾಧಗಳನ್ನು ಪ್ರತ್ಯೇಕ ರೀತಿಯ ಕೊಲೆಗಳೆಂದು ವರ್ಗೀಕರಿಸಿದೆ. ಈ ಕಾಯ್ದೆಯು ಗುಂಪು ಹತ್ಯೆಯಂತಹ ಅಪರಾಧಗಳಿಗೆ ಗರಿಷ್ಠ ಮರಣದಂಡನೆ ವಿಧಿಸಲು ಬಯಸುತ್ತದೆ.

    ದೇಶ ವಿರೋಧಿ ಕೃತ್ಯಗಳಿಗೆ ಜೀವಾವಧಿ ಶಿಕ್ಷೆ:

    ʻಸಶಸ್ತ್ರ ದಂಗೆ ಅಥವಾ ವಿಧ್ವಂಸಕ ಚಟುವಟಿಕೆಗಳಿಗೆʼ ಸಂಬಂಧಿಸಿದ ಕೃತ್ಯಗಳ ಸಂದರ್ಭದಲ್ಲಿ ಕಾನೂನುಗಳು ಕಠಿಣ ಶಿಕ್ಷೆಯನ್ನು ಒದಗಿಸುತ್ತವೆ. ಅಕ್ರಮ ಚಟುವಟಿಕೆಗಳು ಅಥವಾ ಪ್ರತ್ಯೇಕತಾವಾದಿ ಚಟುವಟಿಕೆಗಳ ಭಾವನೆಗಳನ್ನು ಪ್ರೋತ್ಸಾಹಿಸುವುದು ಅಥವಾ ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಯಾವುದೇ ಕೃತ್ಯದಲ್ಲಿ ತೊಡಗಿದರೆ ಜೀವಾವಧಿ ಶಿಕ್ಷೆ ಅಥವಾ ಏಳು ವರ್ಷಗಳವರೆಗೆ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗುತ್ತದೆ. ಹಾಗೂ ಗರಿಷ್ಠ ಪ್ರಮಾಣದ ದಂಡ ವಿಧಿಸಬಹುದು.

    45 ದಿನಗಳ ಒಳಗೆ ಕೋರ್ಟ್‌ ತೀರ್ಪು:

    ಹೊಸ ಕಾಯ್ದೆಗಳ ಪ್ರಕಾರ ಕ್ರಿಮಿನಲ್‌ ಪ್ರಕರಣಗಳಲ್ಲಿ ವಿಚಾರಣೆ ಮುಗಿದು, 45 ದಿನಗಳ ಒಳಗೆ ಕೋರ್ಟ್‌ ತೀರ್ಪು ನೀಡಬೇಕು. ಕೋರ್ಟ್‌ನಲ್ಲಿ ಮೊದಲ ವಿಚಾರಣೆ ನಡೆದು 60 ದಿನಗಳ ಒಳಗೆ ಪೊಲೀಸರು ಆರೋಪ ಪಟ್ಟಿ ಸಲ್ಲಿಸಬೇಕು. ಅತ್ಯಾಚಾರ ಪ್ರಕರಣಗಳ ಸಂತ್ರಸ್ತರ ಹೇಳಿಕೆಯನ್ನು ಆಕೆಯ ಸಂಬಂಧಿಕರ ಸಮ್ಮುಖದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿಯೇ ದಾಖಲಿಸಬೇಕು. ವೈದ್ಯಕೀಯ ವರದಿ 7 ದಿನಗಳ ಒಳಗೆ ಬರಬೇಕು. ಜೊತೆಗೆ 3 ವರ್ಷಕ್ಕಿಂತ ಕಡಿಮೆ ಜೈಲು ಶಿಕ್ಷೆಗೆ ಒಳಪಡುವ ಪ್ರಕರಣಗಳಿಗೆ ಸಾಮಾನ್ಯ ವಿಚಾರಣೆ ಸಾಕಾಗುತ್ತದೆ. ಇದರಿಂದ ಸೆಷನ್ ಕೋರ್ಟ್‌ಗಳಲ್ಲಿನ ಪ್ರಕರಣಗಳು ಶೇ. 40ರಷ್ಟು ಕಡಿಮೆಯಾಗಲಿವೆ. ಶೂನ್ಯ ಎಫ್‌ಐಆರ್ ದಾಖಲಿಸುವ ಪದ್ಧತಿಯನ್ನು ಸಾಂಸ್ಥಿಕಗೊಳಿಸಲಾಗಿದೆ. ಎಲ್ಲೇ ಘಟನೆ ನಡೆದರೂ ಎಲ್ಲಿ ಬೇಕಾದರೂ ಎಫ್‌ಐಆರ್‌ ದಾಖಲಿಸಬಹುದಾಗಿದೆ.

    ಭಾರತೀಯರೇ ರೂಪಿಸಿದ ಕಾನೂನು:

    ಹೊಸ ಕಾನೂನುಗಳ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ʻಈ ಕಾನೂನುಗಳು ಭಾರತೀಯರೇ ಭಾರತೀಯರಿಗಾಗಿ ರೂಪಿಸಿದ ಕಾನೂನು, ಭಾರತೀಯ ಸಂಸತ್ತು ಇವುಗಳನ್ನು ಅಂಗೀಕರಿಸಿದೆ. ತನ್ಮೂಲಕ ಬ್ರಿಟಿಷ್‌ ಕಾಲದ ಕ್ರಿಮಿನಲ್‌ ಕಾಯ್ದೆಗಳಿಗೆ ವಿದಾಯ ಹೇಳಲಾಗಿದೆ. ಇದರೊಂದಿಗೆ ಎಲ್ಲವೂ ಭಾರತೀಯವೇ ಆಗಿದೆ ಎಂದು ಶ್ಲಾಘಿಸಿದ್ದಾರೆ.

    420 ಅಲ್ಲ 318 ಎಂದು ಹೇಳಬೇಕು: ಯಾವ ಸೆಕ್ಷನ್‌ ಏನು ಹೇಳುತ್ತೆ?

    420 – ಹಣಕಾಸು ಅಥವಾ ಬೇರೆ ಯಾವುದೇ ಆಮಿಷ ಒಡ್ಡಿ ವಂಚಿಸಿದ ಆರೋಪದ ಅಡಿ ಐಪಿಸಿ ಸೆಕ್ಷನ್‌ 420ರ ಅಡಿ ಕೇಸ್‌ ದಾಖಲಾಗುತ್ತಿತ್ತು. ಇದೀಗ ಬಿಎನ್‌ಎಸ್‌ನಲ್ಲಿ ಸೆಕ್ಷನ್‌ 318 ಆಗಿದೆ.
    302 – ಭಾರತೀಯ ದಂಡ ಸಂಹಿತೆಯಲ್ಲಿ ಕೊಲೆ ಪ್ರಕರಣಕ್ಕೆ ಈ ಸೆಕ್ಷನ್‌ ಬಳಸಲಾಗುತ್ತಿತ್ತು. ಇದೀಗ ಭಾರತೀಯ ನ್ಯಾಯ ಸಂಹಿತೆಯಲ್ಲಿ 103 ಆಗಿದೆ.
    307 – ಭಾರತೀಯ ದಂಡ ಸಂಹಿತೆಯಲ್ಲಿ ಕೊಲೆ ಯತ್ನಕ್ಕೆ ಬಳಸಲಾಗುತ್ತಿತ್ತು. ಇದೀಗ ಸೆಕ್ಷನ್‌ 103 ಆಗಿದೆ.
    376 – ಭಾರತೀಯ ದಂಡ ಸಂಹಿತೆಯಲ್ಲಿ ಅತ್ಯಾಚಾರ ಪ್ರಕಣಗಳಿಗೆ ಈ ಸೆಕ್ಷನ್‌ ಬಲಸಲಾಗುತ್ತಿತ್ತು. ಇದೀಗ 64 ಆಗಿದೆ.
    304(ಬಿ) – ಐಪಿಸಿ ನಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಬಳಸುತ್ತಿದ್ದ ಸೆಕ್ಷನ್‌ ಈಗ ಬಿಎನ್‌ಎಸ್‌ನಲ್ಲಿ 80 ಆಗಿದೆ.
    304(ಎ) – ಐಪಿಸಿ ನಲ್ಲಿ ನಿರ್ಲಕ್ಷ್ಯದಿಂದ ಮರಣ (ರಸ್ತೆ ಅಪಘಾತ ಅಥವಾ ಇತರೇ ಸಂದರ್ಭ) ವೇಳೆ ಬಳಸಲಾಗುತ್ತಿತ್ತು. ಇದೀಗ ಬಿಎನ್‌ಎಸ್‌ನಲ್ಲಿ 106 ಆಗಿದೆ.
    359 – ವ್ಯಕ್ತಿ ಅಪಹರಣ ಪ್ರಕರಣದಲ್ಲಿ ಐಪಿಸಿ ನಲ್ಲಿ ಈ ಸೆಕ್ಷನ್‌ ಬಳಕೆಯಾಗುತ್ತಿತ್ತು. ಈಗ ಸೆಕ್ಷನ್‌ 137 ಆಗಿದೆ.
    309 – ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದರೆ ಆತನ ವಿರುದ್ಧ ಐಪಿಸಿ ಅಡಿ ಈ ಸೆಕ್ಷನ್‌ ವಿಧಿಸಲಾಗುತ್ತಿತ್ತು. ಈಗ ಬಿಎನ್‌ಎಸ್‌ ಅಡಿ 226 ಆಗಿದೆ.

  • ಬ್ರಿಟಿಷರ ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಗುಡ್‌ಬೈ – ಇಂದಿನಿಂದ 3 ದೇಶಿ ಕಾನೂನು ಜಾರಿ

    ಬ್ರಿಟಿಷರ ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಗುಡ್‌ಬೈ – ಇಂದಿನಿಂದ 3 ದೇಶಿ ಕಾನೂನು ಜಾರಿ

    – ಎಸ್‌ಎಂಎಸ್‌, ವಾಟ್ಸಪ್‌ ಮೂಲಕವೂ ಸಮನ್ಸ್‌
    – ತ್ವರಿತ ನ್ಯಾಯದಾನಕ್ಕೆ ಹೊಸ ಕಾನೂನು ಜಾರಿ

    ನವದೆಹಲಿ: ದೇಶದಲ್ಲಿ ಇಂದಿನಿಂದ ಕಾನೂನು (Law) ಬದಲಾಗಲಿದ್ದು, ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ (Indian Penal Code), ಸಿಆರ್‌ಪಿಸಿ (Code of Criminal Procedure), ಇಂಡಿಯನ್ ಎವಿಡೆನ್ಸ್ ಆಕ್ಟ್‌ಗೆ (Indian Evidence Act) ಗುಡ್‌ಬೈ ಹೇಳಲಾಗುತ್ತದೆ.

    ಐಪಿಸಿ ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ (Bharatiya Nyaya Sanhita), ಸಿಆರ್‌ಪಿಸಿ ಜಾಗದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (Bharatiya Nagarik Suraksha Sanhita), ಇಂಡಿಯನ್ ಎವಿಡೆನ್ಸ್ ಆಕ್ಟ್ ಜಾಗದಲ್ಲಿ ಭಾರತೀಯ ಸಾಕ್ಷ್ಯ ಅಧಿನಿಯಮ (Bharatiya Sakshya Adhiniyam) ಜಾರಿಗೆ ಬರುತ್ತಿದೆ.

    ಭಾರತೀಯ ನ್ಯಾಯ ಸಂಹಿತೆಯು 358 ಸೆಕ್ಷನ್ ಒಳಗೊಂಡಿದೆ. 20 ಹೊಸ ಅಪರಾಧಗಳು ಸೇರಿಸಲ್ಪಟ್ಟಿವೆ, 33 ಅಪರಾಧಗಳ ಶಿಕ್ಷೆ ಅವಧಿ ಹೆಚ್ಚಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 531 ಸೆಕ್ಷನ್ ಒಳಗೊಂಡಿದೆ. 177 ಕಲಂಗಳನ್ನು ಬದಲಿಸಲಾಗಿದೆ. ಭಾರತೀಯ ಸಾಕ್ಷ್ಯ ಅಧಿನಿಯಮ 170 ಸೆಕ್ಷನ್ ಒಳಗೊಂಡಿದೆ. ಇದನ್ನೂ ಓದಿ: T20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ – ಬರೋಬ್ಬರಿ 125 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ

    ಹಿಂದೆ ಎಷ್ಟಿತ್ತು? ಈಗ ಎಷ್ಟು ಸೆಕ್ಷನ್‌ಗಳು ಇದೆ?
    ಭಾರತೀಯ ದಂಡ ಸಂಹಿತೆ (IPC) 511 ಸೆಕ್ಷನ್‌ ಇದ್ದರೆ ಭಾರತೀಯ ನ್ಯಾಯ ಸಂಹಿತಾ(BNS)-358 ಸೆಕ್ಷನ್‌ಗಳು ಇದೆ.
    ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) 484 ಸೆಕ್ಷನ್‌ಗಳು ಇದ್ದರೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ(BNSS) – 531 ಸೆಕ್ಷನ್‌ಗಳು ಇದೆ.
    ಭಾರತೀಯ ಸಾಕ್ಷ್ಯ ಕಾಯ್ದೆ (IEA) 167 ಸೆಕ್ಷನ್‌ಗಳು ಇದ್ದರೆ ಭಾರತೀಯ ಸಾಕ್ಷ್ಯ ಅಧಿನಿಯಮ (BSA) 170 ಸೆಕ್ಷನ್‌ಗಳು ಇದೆ.

    ಹೊಸ ಕಾನೂನಿನಲ್ಲಿ ಏನು ಬದಲಾವಣೆ?
    * ಪೊಲೀಸ್ ಕಸ್ಟಡಿ ಗರಿಷ್ಠ ಅವಧಿ 14ದಿನದಿಂದ 60 ದಿನಗಳವರೆಗೂ ಹೆಚ್ಚಳ
    * 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳಲ್ಲಿ ದೂರು ನೀಡಿದ 24 ಗಂಟೆಯೊಳಗೆ ಎಫ್‌ಐಆರ್
    * 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳ ತನಿಖೆಯನ್ನು 14 ದಿನದಲ್ಲಿ ಒಂದು ಹಂತಕ್ಕೆ ತರಬೇಕು
    * ಏಳು ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗುವ ಪ್ರಕರಣಗಳಲ್ಲಿ ಫೊರೆನ್ಸಿಕ್ ತನಿಖೆ ಕಡ್ಡಾಯ

    * ಆರ್ಥಿಕ ಅಪರಾಧ ಕೇಸ್‌ಗಳಲ್ಲಿ ಪೊಲೀಸರಿಗೆ ಸ್ಥಿರಾಸ್ತಿ-ಚರಾಸ್ತಿ ಜಪ್ತಿ ಮಾಡುವ ಅಧಿಕಾರ
    * ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು 2 ತಿಂಗಳಲ್ಲಿ ತನಿಖೆ ಮುಗಿಸಬೇಕು
    * ರೇಪ್ ಕೇಸ್‌ಗಳಲ್ಲಿ ಸಂತ್ರಸ್ತೆ ಹೇಳಿಕೆಯನ್ನು ಆಕೆಯ ಸಂಬಂಧಿಕರ ಸಮ್ಮುಖದಲ್ಲಿ ಮಹಿಳಾ ಅಧಿಕಾರಿಯ ಮುಂದೆ ಹೇಳಬೇಕು.

    * ಪೋಕ್ಸೋ ಕೇಸ್‌ಗಳಲ್ಲಿ ಸಂತ್ರಸ್ತರ ಹೇಳಿಕೆಯನ್ನು ಮಹಿಳಾ ಅಧಿಕಾರಿ ಕೂಡ ದಾಖಲಿಸಿಕೊಳ್ಳಬಹುದು
    * ಕ್ರಿಮಿನಲ್ ಕೇಸ್ ವಿಚಾರಣೆ. ಕೋರ್ಟ್ ಗರಿಷ್ಠ 2-3 ವಾಯಿದೆಗಳನ್ನು ಮಾತ್ರ ನೀಡಬೇಕು.
    * ತನಿಖೆ, ಕೋರ್ಟ್ ಸಮನ್ಸ್‌ಗಳನ್ನು ಮಸೇಜ್‌, ವಾಟ್ಸಪ್ ಸೇರಿ ಡಿಜಿಟಲ್ ರೂಪದಲ್ಲಿಯೇ ಕಳಿಸಬಹುದು
    * ಕೇಸ್ ನಮೂದು-ಕೋರ್ಟ್ ವಿಚಾರಣೆವರೆಗೂ ಸಂತ್ರಸ್ತರಿಗೆ ವಾಟ್ಸಪ್ ಮೂಲಕ ಪ್ರತಿಹಂತದ ಮಾಹಿತಿ

    * ರಾಷ್ಟ್ರಮಟ್ಟದ ಡಿಜಿ ಲಾಕರ್‌ನಲ್ಲಿ ಸಾಕ್ಷಿಗಳ ಹೇಳಿಕೆ, ಆಡಿಯೋ, ವೀಡಿಯೋ ಸಾಕ್ಷ್ಯ ಭದ್ರ
    * ರೇಡ್ ಪ್ರಕ್ರಿಯೆಯ ಕಡ್ಡಾಯ ಚಿತ್ರೀಕರಣ. 48 ಗಂಟೆಯಲ್ಲಿ ನ್ಯಾಯಾಲಯಕ್ಕೆ ವರದಿ
    * ಸಂತ್ರಸ್ತರು ಠಾಣೆಗೆ ಹೋಗದೆಯೂ ಆನ್‌ಲೈನ್ ಮೂಲಕ ದೂರು ನೀಡಬಹುದು. ಮಹಿಳೆಯರು, ವಿಕಲಚೇತನರು, ರೋಗಿಗಳು, ಮಕ್ಕಳು, ಹಿರಿಯರು ಠಾಣೆಗೆ ಹೋಗುವ ಅಗತ್ಯವಿಲ್ಲ. ಈ ಐದು ವರ್ಗದ ಮಂದಿ ತಾವಿರುವ ಕಡೆಯೇ ಪೊಲೀಸರನ್ನು ಕರೆಸಬಹುದು.

    * ಯಾವುದೇ ಘಟನೆಯ ಮಾಹಿತಿಯನ್ನು ಆನ್‌ಲೈನ್ ಮೂಲಕ ಯಾವ ಠಾಣೆಗಾದ್ರೂ ತಿಳಿಸಬಹುದು.
    * ಝೀರೋ ಎಫ್‌ಐಆರ್; ಠಾಣಾ ವ್ಯಾಪ್ತಿ ಲೆಕ್ಕಿಸದೇ ಯಾವ ಠಾಣೆಗಾದ್ರೂ ದೂರು ಸಲ್ಲಿಸಬಹುದು.
    * ಆರೋಪಿಗಳ ಬಂಧನದ ಬಗ್ಗೆ ಅವರ ಸ್ನೇಹಿತರು, ಕುಟುಂಬ ಸದಸ್ಯರಿಗೆ ಪೊಲೀಸರು ತಿಳಿಸಬೇಕು.
    * ಆರೋಪಿಗಳಿಗೆ, ಸಂತ್ರಸ್ತರಿಗೆ ಎಫ್‌ಐಆರ್ ಕಾಪಿ ಉಚಿತವಾಗಿ ನೀಡಬೇಕು.
    * ಮದುವೆ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗುವವರಿಗೆ 10 ವರ್ಷಗಳವರೆಗೆ ಶಿಕ್ಷೆ.

     

  • ಜು.1 ರಿಂದ ದೇಶದಲ್ಲಿ ಮೂರು ಹೊಸ ಕಾನೂನು ಜಾರಿ – ಹೇಗಿದೆ ಸಿದ್ಧತೆ?

    ಜು.1 ರಿಂದ ದೇಶದಲ್ಲಿ ಮೂರು ಹೊಸ ಕಾನೂನು ಜಾರಿ – ಹೇಗಿದೆ ಸಿದ್ಧತೆ?

    ನವದೆಹಲಿ: ದೇಶದಲ್ಲಿ ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ, ಸಿಆರ್‌ಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್ಗೆ ಗುಡ್‌ಬೈ ಹೇಳಲಾಗ್ತಿದೆ.

    ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (Indian Civil Protection Code) ಮತ್ತು ಭಾರತೀಯ ಸಾಕ್ಷಿ ಕಾಯ್ದೆ (Indian Evidence Act) ಜುಲೈ 1ರಿಂದ ಜಾರಿಗೆ ಬರಲಿವೆ. ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯ್ದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆ ಎಂದು ಬದಲಿಸಲಾಗಿದೆ. ಇದನ್ನೂ ಓದಿ: T20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ – ಬರೋಬ್ಬರಿ 125 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ

    ಭಾರತೀಯ ನ್ಯಾಯ ಸಂಹಿತೆಯು 358 ಸೆಕ್ಷನ್ ಒಳಗೊಂಡಿದೆ. 20 ಹೊಸ ಅಪರಾಧಗಳು ಸೇರಿಸಲ್ಪಟ್ಟಿವೆ, 33 ಅಪರಾಧಗಳ ಶಿಕ್ಷೆ ಅವಧಿ ಹೆಚ್ಚಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 531 ಸೆಕ್ಷನ್ ಒಳಗೊಂಡಿದ್ದು, 177 ಕಲಂಗಳನ್ನ ಬದಲಿಸಲಾಗಿದೆ. ಇನ್ನೂ ಭಾರತೀಯ ಸಾಕ್ಷ್ಯ ಅಧಿನಿಯಮ 170 ಸೆಕ್ಷನ್ ಒಳಗೊಂಡಿದೆ. ಹೊಸ ಕಾನೂನುಗಳ ಬಗ್ಗೆ ವಕೀಲರ ಸಮುದಾಯದಿಂದ ಆಕ್ಷೇಪ ವ್ಯಕ್ತವಾಗ್ತಿದೆ. ಇದರ ನಡುವೆಯೇ ಹೊಸ ಕಾನೂನು ಜಾರಿಗೆ ಪೊಲೀಸ್ ಇಲಾಖೆ ಸನ್ನದ್ಧವಾಗ್ತಿದೆ. ಈಗಾಗಲೇ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಕಾನೂನು ತಜ್ಞರು, ಹಿರಿಯ ವಕೀಲರಿಂದ ಪೊಲೀಸರಿಗೆ ತರಬೇತಿ ಸಹ ನೀಡಲಾಗಿದೆ. ಜೊತೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶಾಲೆ, ಕಾಲೇಜು ಆಸ್ಪತ್ರೆಗಳಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶುಭಂ ಗೋಲ್ಡ್ ನಂದಿನಿ ಹಾಲಿನ ದರ 2 ರೂ. ಅಲ್ಲ, ಲೀಟರ್‌ಗೆ 4 ರೂ. ಹೆಚ್ಚಳ!

    ಹೊಸ ಕಾನೂನು.. ಏನೆಲ್ಲಾ ಬದಲಾವಣೆ..?
    * ಪೊಲೀಸ್ ಕಸ್ಟಡಿ ಗರಿಷ್ಠ ಅವಧಿ 14 ದಿನದಿಂದ 60 ದಿನಗಳವರೆಗೂ ಹೆಚ್ಚಳ
    * 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳಲ್ಲಿ ದೂರು ನೀಡಿದ 24 ಗಂಟೆಯೊಳಗೆ ಎಫ್‌ಐಆರ್
    * 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳ ತನಿಖೆಯನ್ನು 14 ದಿನದಲ್ಲಿ ಒಂದು ಹಂತಕ್ಕೆ ತರಬೇಕು
    * 7 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗುವ ಪ್ರಕರಣಗಳಲ್ಲಿ ಫೊರೆನ್ಸಿಕ್ ತನಿಖೆ ಕಡ್ಡಾಯ
    * ಆರ್ಥಿಕ ಅಪರಾಧ ಕೇಸ್‌ಗಳಲ್ಲಿ ಪೊಲೀಸರಿಗೆ ಸ್ಥಿರಾಸ್ತಿ-ಚರಾಸ್ತಿ ಜಪ್ತಿ ಮಾಡುವ ಅಧಿಕಾರ
    * ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ಕೇಸ್.. 2 ತಿಂಗಳಲ್ಲಿ ತನಿಖೆ ಮುಗಿಸಬೇಕು
    * ರೇಪ್ ಕೇಸ್‌ಗಳಲ್ಲಿ ಸಂತ್ರಸ್ತೆ ಹೇಳಿಕೆಯನ್ನು ಆಡಿಯೋ, ವೀಡಿಯೋ ಮೂಲಕ ದಾಖಲು
    * ಪೋಕ್ಸೋ ಕೇಸ್‌ಗಳಲ್ಲಿ ಸಂತ್ರಸ್ತರ ಹೇಳಿಕೆಯನ್ನು ಮಹಿಳಾ ಅಧಿಕಾರಿ ಕೂಡ ದಾಖಲಿಸಿಕೊಳ್ಳಬಹುದು
    * ಕ್ರಿಮಿನಲ್ ಕೇಸ್ ವಿಚಾರಣೆ.. ಕೋರ್ಟ್ ಗರಿಷ್ಠ 2-3 ವಾಯಿದೆಗಳನ್ನು ಮಾತ್ರ ನೀಡಬೇಕು
    * ತನಿಖೆ, ಕೋರ್ಟ್ ಸನ್ಸ್‌ಗಳನ್ನು ವಾಟ್ಸಪ್ ಸೇರಿ ಡಿಜಿಟಲ್ ರೂಪದಲ್ಲಿಯೇ ಕಳಿಸಬಹುದು
    * ಕೇಸ್ ನಮೂದು-ಕೋರ್ಟ್ ವಿಚಾರಣೆವರೆಗೂ ಸಂತ್ರಸ್ತರಿಗೆ ವಾಟ್ಸಪ್ ಮೂಲಕ ಪ್ರತಿಹಂತದ ಮಾಹಿತಿ
    * ರೇಡ್ ಪ್ರಕ್ರಿಯೆಯ ಕಡ್ಡಾಯ ಚಿತ್ರೀಕರಣ, 48 ಗಂಟೆಯಲ್ಲಿ ಕೋರ್ಟ್‌ಗೆ ವರದಿ ಸಲ್ಲಿಕೆ
    * ಸಂತ್ರಸ್ತರು ಠಾಣೆಗೆ ಹೋಗದೆಯೂ ಆನ್‌ಲೈನ್ ಮೂಲಕ ದೂರು ನೀಡಬಹುದು
    * ಮಹಿಳೆಯರು, ವಿಕಲಚೇತನರು, ರೋಗಿಗಳು, ಮಕ್ಕಳು, ಹಿರಿಯರು ಠಾಣೆಗೆ ಹೋಗುವ ಅಗತ್ಯವಿಲ್ಲ
    * ಈ ಐದು ವರ್ಗದ ಮಂದಿ ತಾವಿರುವ ಕಡೆಯೇ ಪೊಲೀಸರನ್ನು ಕರೆಸಬಹುದು
    * ಯಾವುದೇ ಘಟನೆಯ ಮಾಹಿತಿಯನ್ನು ಆನ್‌ಲೈನ್ ಮೂಲಕ ಯಾವ ಠಾಣೆಗಾದ್ರೂ ತಿಳಿಸಬಹುದು
    * ಝೀರೋ ಎಫ್‌ಐಆರ್, ಠಾಣಾ ವ್ಯಾಪ್ತಿ ಲೆಕ್ಕಿಸದೇ ಯಾವ ಠಾಣೆಗಾದ್ರೂ ದೂರು ಸಲ್ಲಿಸಬಹುದು
    * ಆರೋಪಿಗಳ ಬಂಧನದ ಬಗ್ಗೆ ಅವರ ಸ್ನೇಹಿತರು, ಕುಟುಂಬ ಸದಸ್ಯರಿಗೆ ಪೊಲೀಸರು ತಿಳಿಸಬೇಕು
    * ಆರೋಪಿಗಳಿಗೆ, ಸಂತ್ರಸ್ತರಿಗೆ ಎಫ್‌ಐಆರ್ ಕಾಪಿ ಉಚಿತವಾಗಿ ನೀಡಬೇಕು.
    * ಮದುವೆ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗುವವರಿಗೆ 10 ವರ್ಷಗಳವರೆಗೆ ಶಿಕ್ಷೆ ವಿಧಿಸಬಹುದು.

  • ಜು.1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿ – ಅರ್ಜುನ್ ರಾಮ್ ಮೇಘವಾಲ್

    ಜು.1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿ – ಅರ್ಜುನ್ ರಾಮ್ ಮೇಘವಾಲ್

    ಕೋಲ್ಕತ್ತಾ: ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್‌ ಕಾನೂನುಗಳು (New Criminal Laws) ಜಾರಿಗೆ ಬರಲಿವೆ. ಐಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್, ಕ್ರಿಮಿನಲ್ ಪ್ರೊಸೀಜರ್ ಕೋಡ್ (CRPC) ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಎಂಬ ಮೂರು ಮಾದರಿ ಕಾನೂನುಗಳು ಜಾರಿಗೆ ಬರಲಿವೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ತಿಳಿಸಿದ್ದಾರೆ.

    ಕೋಲ್ಕತ್ತಾದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೆ ಜಾರಿಗೊಳಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಮುಂದುವರಿದು ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿದ್ದು, ಅವುಗಳ ಅನುಷ್ಠಾನಕ್ಕೆ ಅಗತ್ಯ ತರಬೇತಿ ಈಗಾಗಲೇ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

    ಇಂದಿನ ಕಾಲದ ಪರಿಸ್ಥಿತಿಗಳಿಗೆ ಅನುಗುಣವಾಗಿ ಈ ಮೂರು ಕಾಯ್ದೆಗಳನ್ನು ಜಾರಿ ಮಾಡಲಾಗುತ್ತದೆ. ಈಗಾಗಲೇ ಬಿಪಿಆರ್‌ಡಿ, ಜ್ಯೂಡಿಷಿಯಲ್ ಅಕಾಡೆಮಿಗಳು, ಕಾನೂನು ವಿಶ್ವವಿದ್ಯಾಲಯಗಳು ಅಧಿಕಾರಿಗಳಿಗೆ ತರಬೇತಿ ನೀಡುತ್ತಿವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಸ್ಪೀಕರ್‌ ಹುದ್ದೆ ಬಿಜೆಪಿಗೆ, ಡೆಪ್ಯೂಟಿ ಸ್ಪೀಕರ್‌ ಹುದ್ದೆ ಎನ್‌ಡಿಎ ಮಿತ್ರ ಪಕ್ಷಕ್ಕೆ?

    2023ರ ಡಿಸೆಂಬರ್‌ನಲ್ಲಿ ಈ ಮೂರು ಕಾನೂನುಗಳನ್ನು ಸಂಸತ್‌ನಲ್ಲಿ ಅಂಗೀಕರಿಸಲಾಗಿತ್ತು. ಬಳಿಕ ಈ ಮೂರು ಕಾಯ್ದೆಗಳಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು. ಆದ್ರೆ ಕೇಂದ್ರ ಸರ್ಕಾರ ಅಧಿಸೂಚನೆ ಮುಂದೂಡಿದ್ದರಿಂದ ಅಧಿಕೃತವಾಗಿ ಜಾರಿಗೆ ಬಂದಿರಲಿಲ್ಲ. ಪ್ರಸಕ್ತ ವರ್ಷಾರಂಭದಲ್ಲಿ ಮೂರು ಕಾನೂನುಗಳು ಜಾರಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದನ್ನೂ ಓದಿ: ಜಾರ್ಖಂಡ್‌ನಲ್ಲಿ ಎನ್‍ಕೌಂಟರ್ – ಹೊಂಚು ಹಾಕಿ ಕುಳಿತಿದ್ದ ನಾಲ್ವರು ನಕ್ಸಲರ ಹತ್ಯೆ

  • ಮಸೀದಿ ಪಕ್ಕ ನಿಂತಿದ್ದ ಹುಡ್ಗಿಯನ್ನ ʻಹಾಟ್‌ʼ ಅಂತ ಕರೆದಿದ್ದ ವೃದ್ಧ – 7 ವರ್ಷಗಳ ಬಳಿಕ 3 ವರ್ಷ ಜೈಲು ಶಿಕ್ಷೆ

    ಮುಂಬೈ: ಅಪ್ರಾಪ್ತ ಹುಡುಗಿಯನ್ನು ಅನುಚಿತವಾಗಿ ಸ್ಪರ್ಶಿಸಿ ʻಹಾಟ್‌ʼಎಂದು ಕರೆದಿದ್ದಕ್ಕಾಗಿ 50 ವರ್ಷದ ವೃದ್ಧನಿಗೆ ಮುಂಬೈ ವಿಶೇಷ ನ್ಯಾಯಾಲಯವು (Mumbai Speical Court) 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

    ಈ ಕೃತ್ಯವು ಆರೋಪಿಯು ಲೈಂಗಿಕ ದೌರ್ಜನ್ಯ ಎಸಗುವ ಉದ್ದೇಶವನ್ನು ತೋರಿಸುತ್ತದೆ ಎಂದು ಕೋರ್ಟ್‌ ಗಮನಿಸಿದೆ. ಈ ಹಿನ್ನೆಲೆಯಲ್ಲಿ 2016ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 3 ವರ್ಷ ಜೈಲು (Jail) ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ಸಂಸತ್‌ ಮೇಲಿನ ದಾಳಿ ಗಂಭೀರವಾದದ್ದು; ಚರ್ಚೆ ಬೇಡ, ವಿಸ್ತೃತ ತನಿಖೆಯಾಗಲಿ: ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ

    ವಿಶೇಷ ಪೋಕ್ಸೊ ನ್ಯಾಯಾಲಯದ (POCSO Court) ನ್ಯಾಯಾಧೀಶರಾದ ಎಸ್.ಸಿ ಜಾಧವ್ ಅವರು ಡಿಸೆಂಬರ್ 14 ರಂದು ಆರೋಪಿಗೆ ಭಾರತೀಯ ದಂಡ ಸಂಹಿತೆಗೆ (IPC) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಹಿಂಬಾಲಿಸುವುದು ಮತ್ತು ಕಿರುಕುಳ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ದೋಷಿ ಎಂದು ಪರಿಗಣಿಸಿ ತೀರ್ಪು ನೀಡಿದ್ದಾರೆ.

    ಈ ಪ್ರಕರಣವು 2016ರ ಮೇ 24ರಂದು ನಡೆದಿತ್ತು. ಆಗ ಹುಡುಗಿಗೆ 13 ವರ್ಷ ವಯಸ್ಸಾಗಿತ್ತು. ಸಂತ್ರಸ್ತೆ ಮತ್ತು ಪ್ರಾಸಿಕ್ಯೂಷನ್‌ ಸಾಕ್ಷಿಯ ಒಟ್ಟಾರೆ ಸಾಕ್ಷ್ಯವನ್ನು ಪರಿಶೀಲಿಸಿಸಲಾಯಿತು. ಈ ವೇಳೆ ಹುಡುಗಿ ಆ ದಿನಾಂಕದಂದು ಅಂದು ಮಸೀದಿ ಬಳಿ ನಿಂತಿದ್ದಾಗ ಆರೋಪಿ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ, ಜೊತೆಗೆ ಆಕೆ ತುಂಬಾ ʻಹಾಟ್‌ʼ ಆಗಿ ಕಾಣ್ತಿದ್ದಾಳೆ ಎಂದು ಕರೆದಿದ್ದ. ಅಷ್ಟೇ ಅಲ್ಲದೇ ಆಕೆ ಕೆನ್ನೆಗೆ ಮುತ್ತಿಡಲು ಬಯಸಿದ್ದ, ಆಕೆಯನ್ನು ತನ್ನೊಂದಿಗೆ ಕೆರೆದುಕೊಂಡು ಹೋಗಬೇಕು ಅನ್ನಿಸುತ್ತದೆ ಎಂಬ ಮಾತುಗಳನ್ನಾಡಿರುವುದು ಸಾಬೀತಾಗಿದೆ.

    ಆರೋಪಿಯ ಈ ಹೇಳಿಕೆಗಳು ಲೈಂಗಿಕ ದೌರ್ಜನ್ಯ ಎಸಗುವ ಉದ್ದೇಶ ಸೂಚಿಸುತ್ತದೆ ಎಂಬುದನ್ನು ಗಮನಿಸಿ ಆರೋಪಿಗೆ ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ನನ್ನ 3ನೇ ಅವಧಿಯಲ್ಲಿ ಭಾರತ ಟಾಪ್‌-3 ಆರ್ಥಿಕತೆಯಲ್ಲಿ ಒಂದಾಗಲಿದೆ: ಮೋದಿ ಮತ್ತೊಂದು ಗ್ಯಾರಂಟಿ 

  • ಮನೆ ಕ್ಲೀನ್‌ ಮಾಡು ಅಂತ ಹೇಳಿದ್ದಕ್ಕೆ ಜಗಳ – ಗಂಡನ ಕಿವಿ ಕಚ್ಚಿ ತುಂಡು ಮಾಡಿದ ಹೆಂಡ್ತಿ ವಿರುದ್ಧ ಕೇಸ್‌!

    ಮನೆ ಕ್ಲೀನ್‌ ಮಾಡು ಅಂತ ಹೇಳಿದ್ದಕ್ಕೆ ಜಗಳ – ಗಂಡನ ಕಿವಿ ಕಚ್ಚಿ ತುಂಡು ಮಾಡಿದ ಹೆಂಡ್ತಿ ವಿರುದ್ಧ ಕೇಸ್‌!

    ನವದೆಹಲಿ: ಮನೆ ಸ್ವಚ್ಛ ಮಾಡು ಅಂತ ಹೇಳಿದ್ದಕ್ಕೆ ಗಂಡ-ಹೆಂಡತಿ (Husband And Wife) ನಡುವೆ ಜಗಳವಾಗಿದೆ. ಈ ವೇಳೆ ಆಕ್ರೋಶದಿಂದ ಹೆಂಡತಿ ತನ್ನ ಬಲ ಕಿವಿಯನ್ನು ಕಚ್ಚಿ ತುಂಡುಮಾಡಿರುವುದಾಗಿ ಪತಿ ಪೊಲೀಸ್‌ ಕೇಸ್‌ ದಾಖಲಿಸಿರುವ ಘಟನೆ ದೆಹಲಿ ಸುಲ್ತಾನ್‌ಪುರಿ (Sultanpuri) ಪ್ರದೇಶದಲ್ಲಿ ನಡೆದಿದೆ.

    ಹೆಂಡತಿ ಕಿವಿ ಕಚ್ಚಿ ಎರಡು ತುಂಡಾಗಿದ್ದರಿಂದ 45 ವರ್ಷದ ಬಲಿಪಶು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಸ್ಥಳೀಯ ಪೊಲೀಸರು. ಸಂತ್ರಸ್ತ ಪತಿ ನೀಡಿದ ದೂರಿನ ಆಧಾರದ ಮೇಲೆ ಪತ್ನಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಸಿಡಿಲು ಬಡಿದು 20 ಮಂದಿ ದುರ್ಮರಣ – ಅಮಿತ್‌ ಶಾ ಸಂತಾಪ

    ಪತ್ನಿ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 324 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಶಸ್ತ್ರಾಸ್ತ್ರಗಳು ಅಥವಾ ವಿಧಾನಗಳಿಂದ ಗಾಯ ಉಂಟುಮಾಡುವುದು) ಅಡಿಯಲ್ಲಿ FIR ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ.

    ಅಷ್ಟಕ್ಕೂ ನಡೆದಿದ್ದೇನು?
    ಇದೇ ತಿಂಗಳ ನವೆಂಬರ್‌ 20 ರಂದು ಬೆಳಗ್ಗೆ 9:20ರ ಸುಮಾರಿಗೆ ನನ್ನ ಹೆಂಡತಿಗೆ ಮನೆ ಸ್ವಚ್ಛಗೊಳಿಸುವಂತೆ ಹೇಳಿ, ಮನೆಯ ಹೊರಗೆ ಕಸ ಎಸೆಯಲು ಹೋಗಿದ್ದೆ. ನಾನು ಮನೆಗೆ ವಾಪಸ್‌ ಬಂದ ಕೂಡಲೇ ನನ್ನ ಹೆಂಡತಿ ಜಗಳ ತೆಗೆದಿದ್ದಾಳೆ. ಜಗಳದ ಮಧ್ಯೆ ಮಕ್ಕಳೊಂದಿಗೆ ಪ್ರತ್ಯೇಕವಾಗಿರಲು ಮನೆ ಮಾರಾಟ ಮಾಡಿ, ತನಗೂ ಪಾಲು ನೀಡುವಂತೆ ಪತ್ನಿ ಕೇಳಿದ್ದಾಳೆ. ಈ ವೇಳೆ ಪತಿ ಸಮಾಧಾನಪಡಿಸಿದರೂ ಬಗ್ಗದೇ ಮಾತಿನ ಚಕಮಕಿ ಮುಂದುವರಿದಿದೆ.

    ಇದರಿಂದ ಆಕೆಯ ಕೋಪ ಮಿತಿಮೀರಿ ನನ್ನನ್ನೇ ಹೊಡೆಯಲು ಬಂದಿದ್ದಳು. ಆಕೆಯನ್ನು ತಳ್ಳಿ, ನಾನು ಮನೆಯಿಂದ ಹೊರಹೋಗುತ್ತಿದೆ. ಆಗ ಹಿಂಬದಿಯಿಂದ ನನ್ನನ್ನ ಹಿಡಿದುಕೊಂಡು ಬಲ ಕಿವಿಯನ್ನು ಕಚ್ಚಿದಳು. ನನ್ನ ಕಿವಿ ಮೇಲಿನ ಭಾಗ ತುಂಡಾಗಿ ರಕ್ತಸ್ರಾವವಾಯಿತು ಎಂದು ದೂರಿನಲ್ಲಿ ಹೇಳಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

    ಸದ್ಯ ಸಂತ್ರಸ್ತ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಆದ್ರೆ ಇನ್ನೂ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ. ನವೆಂಬರ್‌ 22ರಂದು ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಪ್ರತ್ಯೇಕ ತಂಡ ಕಳುಹಿಸಲಾಗಿದೆ. ಇದನ್ನೂ ಓದಿ: ಚೀನಾದಲ್ಲಿ ಮತ್ತೊಂದು ವೈರಸ್; ಆಸ್ಪತ್ರೆಗಳಲ್ಲಿ ತುರ್ತುಕ್ರಮ ಪರಿಶೀಲಿಸುವಂತೆ ರಾಜ್ಯಗಳಿಗೆ ಖಡಕ್‌ ವಾರ್ನಿಂಗ್‌

  • ಭಾರತದ ಕಾನೂನು ಬದಲಿಸುವ ಮೂರು ಮಸೂದೆಗಳು ಶೀಘ್ರದಲ್ಲಿ ಅಂಗೀಕಾರ: ಅಮಿತ್ ಶಾ

    ಭಾರತದ ಕಾನೂನು ಬದಲಿಸುವ ಮೂರು ಮಸೂದೆಗಳು ಶೀಘ್ರದಲ್ಲಿ ಅಂಗೀಕಾರ: ಅಮಿತ್ ಶಾ

    ನವದೆಹಲಿ: ಭಾರತೀಯ ದಂಡ ಸಂಹಿತೆ (IPC), ಸಿಆರ್‌ಪಿಸಿ (CrPC) ಹಾಗೂ ಇಂಡಿಯನ್ ಎವಿಡೆನ್ಸ್ ಕಾಯಿದೆಯನ್ನು ಬದಲಿಸುವ ಮೂರು ಹೊಸ ಮಸೂದೆಗಳನ್ನು ಶೀಘ್ರದಲ್ಲೇ ಸಂಸತ್ತಿನಲ್ಲಿ ಅಂಗೀಕರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.

    ಹೈದರಾಬಾದ್‍ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಐಪಿಎಸ್ ಕೆಡೆಟ್‍ಗಳ ಪಾಸಿಂಗ್ ಔಟ್ ಪರೇಡ್‍ನಲ್ಲಿ ಅವರು ಮಾತನಾಡಿದ್ದಾರೆ. ಈ ವೇಳೆ ಭಾರತವು ಬ್ರಿಟಿಷರ ಆಳ್ವಿಕೆಯಲ್ಲಿ ಮಾಡಿದ ಕಾನೂನುಗಳನ್ನು ತ್ಯಜಿಸುತ್ತಿದೆ. ಈಗ ಹೊಸ ಆತ್ಮವಿಶ್ವಾಸ ಮತ್ತು ಹೊಸ ಭರವಸೆಗಳೊಂದಿಗೆ ಹೊಸ ಯುಗವನ್ನು ಪ್ರವೇಶಿಸುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ನಾಯಕರ ಭೇಟಿಗೆ ಆಗಮಿಸಿದ್ದ DVSಗೆ ತೀವ್ರ ನಿರಾಸೆ

    ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಮೂರು ಹೊಸ ಮಸೂದೆಗಳನ್ನು ಪರಿಶೀಲಿಸುತ್ತಿದೆ. ಪರಿಶೀಲನೆ ಬಳಿಕ ಅಂಗೀಕರಿಸಲಾಗುತ್ತದೆ. ಹೊಸ ಕಾನೂನುಗಳು ಜನರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿವೆ ಎಂದು ಅವರು ತಿಳಿಸಿದ್ದಾರೆ.

    ಮಹಿಳಾ ಐಪಿಎಸ್ ಕೆಡೆಟ್‍ಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ, ಪ್ರಧಾನಿ ನರೇಂದ್ರ ಮೋದಿ (Narendra Modi )ಅವರ ನಾಯಕತ್ವದಲ್ಲಿ ದೇಶವು ಮಹಿಳಾ ನೇತೃತ್ವದ ಅಭಿವೃದ್ಧಿಯಲ್ಲಿ ಪ್ರಗತಿಯಲ್ಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಮ್ಮ ನಾಯಕ ಡಿಕೆಶಿ ಸಿಎಂ ಆಗ್ತಾರೆ, 70 ಶಾಸಕರ ಬೆಂಬಲವಿದೆ: ಶಿವಗಂಗಾ ಬಸವರಾಜ್ ಬಾಂಬ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಲಿಸುತ್ತಿದ್ದ ಬೈಕ್‌ ಮೇಲೆ ಕುಳಿತು ಪ್ರಿಯಕರನೊಂದಿಗೆ ಲಿಪ್‌ ಲಾಕ್‌ – ಪೊಲೀಸರು ಕೊಟ್ರು ಶಾಕ್

    ಚಲಿಸುತ್ತಿದ್ದ ಬೈಕ್‌ ಮೇಲೆ ಕುಳಿತು ಪ್ರಿಯಕರನೊಂದಿಗೆ ಲಿಪ್‌ ಲಾಕ್‌ – ಪೊಲೀಸರು ಕೊಟ್ರು ಶಾಕ್

    ಜೈಪುರ: ಪ್ರೇಮಿಗಳಿಗೆ (Lovers) ಜಗತ್ತೇ ಕುರುಡಾಗಿರುತ್ತದೆ. ಕೆಲ ಪ್ರೇಮಿಗಳಂತೂ ಅಕ್ಕ-ಪಕ್ಕ ಯಾರಿರುತ್ತಾರೆ ಎಂಬ ಅರಿವೇ ಇಲ್ಲದೇ ಸಾರ್ವಜನಿಕ ಪ್ರದೇಶಗಳಲ್ಲೂ ಹುಚ್ಚಾಟ ಮರೆಯುವುದನ್ನು ನೋಡಿರುತ್ತೇವೆ. ಅದೇ ರೀತಿ ಪ್ರೇಮಿಗಳಿಬ್ಬರು ಹಾಡಹಗಲೇ ನಡುರಸ್ತೆಯಲ್ಲಿ ಬೈಕ್ ಮೇಲೆ ಕುಳಿತು ರೊಮ್ಯಾನ್ಸ್ ಮಾಡಿಕೊಂಡು ಚಲಿಸುತ್ತಿರುವ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ.

    ರಾಜಸ್ಥಾನದ (Rajasthan) ಜೈಪುರದಲ್ಲಿ ಯುವ ಪ್ರೇಮಿಗಳಿಬ್ಬರು ಹಾಡಹಗಲೇ ಬೈಕ್ ಮೇಲೆ ರಾಜಾರೋಷವಾಗಿ ತಬ್ಬಿಕೊಂಡು ಹೋಗುತ್ತಿದ್ದಾರೆ, ಈ ವೇಳೆ ಯುವಕ ಹಿಂಬದಿಗೆ ತಿರುಗಿ ಪರಸ್ಪರ ಲಿಪ್‌ಲಾಕ್‌ ಮಾಡಿ ಚುಂಬಿಸಿದ್ದಾರೆ. ಈ ವೀಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೀಡಿಯೋ ಜಾಲತಾಣದಲ್ಲಿ (Social Media) ಹರಿದಾಡುತ್ತಿದ್ದಂತೆ ಜೈಪುರದ ಸಂಚಾರ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಇದನ್ನೂ ಓದಿ: ಗುಡ್ಡೆಯಂಗಡಿಯಲ್ಲಿ ಗೌಪ್ಯವಾಗಿ ನಿರ್ಮಾಣವಾಗುತ್ತಿದ್ದ ಮನೆ ಯಾರದ್ದು? ಚೈತ್ರಾ ಪ್ರಕರಣಕ್ಕೆ ಇದೆಯಂತೆ ಲಿಂಕ್

    ಬೈಕ್‌ ಸವಾರರು ಹೆಲ್ಮೆಟ್‌ ಧರಿಸಿರಲಿಲ್ಲ, ಜೊತೆಗೆ ಸಂಚಾರ ನಿಯಮ ಉಲ್ಲಂಘಿಸಿದ್ದಾರೆ ಎಂದು ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ. ಮೋಟಾರು ವಾಹನ ಕಾಯ್ದೆ (ಎಂವಿ)-1988 (Motor Vehicle Act-1988) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕನಿಗೆ ದಂಡ ವಿಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: SIIMA 2023: ರಾರಾ ರಕ್ಕಮ್ಮ ಸೇರಿ ವಿಕ್ರಾಂತ್ ರೋಣಕ್ಕೆ ಎರಡು ಪ್ರಶಸ್ತಿ

    ಬೈಕ್‌ ಮೇಲೆ ಕುಳಿತು ಪ್ರೇಮಿಗಳು ಹುಚ್ಚಾಟ ಮೆರೆದಿರುವುದು ಇದೇ ಮೊದಲೇನಲ್ಲ. ಈ ಹಿಂದೆ ದೆಹಲಿಯಲ್ಲಿ ರಾತ್ರಿ ವೇಳೆ ಪ್ರೇಮಿಗಳಿಬ್ಬರು ನಡು ರಸ್ತೆಯಲ್ಲಿ ರೊಮ್ಯಾನ್ಸ್ ಮಾಡಿಕೊಂಡು ಹೋಗುತ್ತಿದ್ದದ್ದು, ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲೂ ಇಂತಹದ್ದೇ ಕೇಸ್ ಬೆಳಕಿಗೆ ಬಂದಿತ್ತು. ಹೋಳಿ ಹಬ್ಬದಂದು ಜೈಪುರದಲ್ಲೇ ಇದೇ ರೀತಿ ಘಟನೆ ವರದಿಯಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]