Tag: IPC

  • ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – ಪತಿ ಕುಟುಂಬದ ಮೇಲೆ ಪ್ರಕರಣ ದಾಖಲು

    ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – ಪತಿ ಕುಟುಂಬದ ಮೇಲೆ ಪ್ರಕರಣ ದಾಖಲು

    ಕೋಲಾರ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಪತಿ ಸೇರಿ 6 ಜನರ ವಿರುದ್ಧ ಅತ್ಮಹತ್ಯೆಗೆ ಪ್ರಚೋದನೆ ಕೇಸ್ ದಾಖಲಾಗಿದೆ.

    ಮೃತ ಮಹಿಳೆಯನ್ನು ಸುಗುಣ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ತನ್ನ ಗಂಡ ಮುರಳಿ, ಅತ್ತೆ ಹಾಗೂ ಆತನ ಕುಟುಂಬಸ್ಥರ ಕಿರುಕುಳ ಕಾರಣ ಎಂದು ಡೆತ್‍ನೋಟ್‍ನಲ್ಲಿ ಉಲ್ಲೇಖಿಸಿದ್ದಾಳೆ. ಡೆತ್‍ನೋಟ್‍ನ್ನು ಮೊಬೈಲ್ ಮೂಲಕ ತನ್ನ ಸಹೋದರ ನಿಖಿತ್‍ಗೆ ಕಳುಹಿಸಿದ್ದಾಳೆ. ಅದರಂತೆ ಮೃತ ಸುಗುಣ ಡೆತ್‍ನೋಟ್ ಹಾಗೂ ಆಕೆಯ ಅಣ್ಣ ಸತೀಶ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ

    ಇಬ್ಬರು ಮಕ್ಕಳನ್ನ ಕೊಂದ ಹಿನ್ನೆಲೆ ಸುಗುಣ ವಿರುದ್ಧ ಐಪಿಸಿ (IPC) ಸೆಕ್ಷನ್ 302 ರಡಿ ಪ್ರಕರಣ ದಾಖಲಾಗಿದೆ. ಡೆತ್‍ನೋಟ್ ಆಧರಿಸಿ 6 ಜನರ ವಿರುದ್ಧ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ದೂರು ದಾಖಲಾಗಿದೆ. 6 ಜನರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಕೋಲಾರದ (Kolar) ಎಸ್ಪಿ ನಾರಾಯಣ ತಿಳಿಸಿದ್ದಾರೆ.

    ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಮೃತಳ ಹುಟ್ಟೂರು ಗಿರ್ನಹಳ್ಳಿಯಲ್ಲಿ ಮೂರು ಜನರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ. ಇದನ್ನೂ ಓದಿ: ಬ್ರ‍್ಯಾಂಡ್ ಬೆಂಗಳೂರು ಕಟ್ಟಲು ನೀವೂ ಕೊಡಿ ಸಲಹೆ: ಸಾರ್ವಜನಿಕರಲ್ಲಿ ಡಿಕೆಶಿ ಮನವಿ

  • The Kerala Story Effect: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿಯಿಂದ ಪ್ರಿಯಕರನ ವಿರುದ್ಧ ರೇಪ್ ಕೇಸ್

    The Kerala Story Effect: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿಯಿಂದ ಪ್ರಿಯಕರನ ವಿರುದ್ಧ ರೇಪ್ ಕೇಸ್

    ಭೋಫಾಲ್: ದಿ ಕೇರಳ ಸ್ಟೋರಿ ಸಿನಿಮಾ ನೋಡಿದ ಮಧ್ಯಪ್ರದೇಶದ (Madhya Pradesh) ಇಂದೋರ್‌ನ ಯುವತಿಯೊಬ್ಬಳು ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ (Live IN RelationShip) ತನ್ನ ಪ್ರಿಯಕರನ ವಿರುದ್ಧವೇ ಪೊಲೀಸರಿಗೆ ದೂರು ನೀಡಿರುವ ಘಟನೆ ನಡೆದಿದೆ.

    ಯುವತಿಯು ತನ್ನನ್ನು ಪ್ರೀತಿ ಹೆಸರಲ್ಲಿ ಟ್ರ್ಯಾಪ್‌ ಮಾಡಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ತನ್ನ ಮತಾಂತರವಾಗುವಂತೆ (Conversion) ಒತ್ತಡ ಹೇರುತ್ತಿದ್ದಾನೆ ಎಂದು ದೂರು ನೀಡಿದ್ದಾಳೆ. ಯುವತಿ ನೀಡಿದ ದೂರಿನ ಮೇರೆಗೆ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು, 23 ವರ್ಷದ ಯುವಕನನ್ನ ಬಂಧಿಸಿದ್ದಾರೆ.

    ಇತ್ತೀಚಿಗೆ ನಾವಿಬ್ಬರೂ `ದಿ ಕೇರಳ ಸ್ಟೋರಿ’ ಸಿನಿಮಾ (The Kerala Story Cinema) ನೋಡಿದ್ವಿ, ಇದಾದ ನಂತರ ನಮ್ಮ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಇದನ್ನೂ ಓದಿ: ಬ್ಯಾಂಕ್‌ಗಳಲ್ಲಿ ಶುರುವಾಯ್ತು ಪಿಂಕ್ ನೋಟ್ ವಿನಿಮಯ – RBI ಆದೇಶದ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

    ಮಾಹಿತಿ ಪ್ರಕಾರ, ಆ ಯುವಕನ ಜೊತೆಯೇ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದಿದ್ದಾಗಿ ದೂರುದಾರ ಯುವತಿ ತಿಳಿಸಿದ್ದಾಳೆ. ಅಂದ ಹಾಗೇ, ಆರೋಪಿ ಪ್ರಿಯಕರ 12ನೇ ತರಗತಿ ಪಾಸ್ ಆಗಿದ್ದು, ನಿರುದ್ಯೋಗಿಯಾಗಿದ್ದಾನೆ. ಸಂತ್ರಸ್ತ ಯುವತಿ ಸುಶಿಕ್ಷಿತಳಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ಯುವಕನ ವಿರುದ್ಧ ಬಲವಂತ ಅಥವಾ ಮೋಸದಿಂದ ಮತಾಂತರ ಮಾಡುವುದನ್ನು ನಿಷೇಧಿಸುವ, ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ-2021 ಹಾಗೂ IPC ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಖಜ್ರಾನಾ ಪೊಲೀಸ್ ಠಾಣೆಯ ಉಸ್ತುವಾರಿ ದಿನೇಶ್ ವರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: IT ಕ್ಷೇತ್ರದಲ್ಲಿ ಒಂದೇ ವರ್ಷಕ್ಕೆ 60 ಸಾವಿರ ಜಾಬ್‌ ಕಟ್‌

  • ಸಂದರ್ಶನ ಮಾಡುವ ನೆಪದಲ್ಲಿ ಕರೆಸಿ ಟೆಕ್ಕಿ ಯುವತಿ ಮೇಲೆ ಅತ್ಯಾಚಾರ

    ಸಂದರ್ಶನ ಮಾಡುವ ನೆಪದಲ್ಲಿ ಕರೆಸಿ ಟೆಕ್ಕಿ ಯುವತಿ ಮೇಲೆ ಅತ್ಯಾಚಾರ

    ಲಕ್ನೋ: ಕೆಲಸಕ್ಕಾಗಿ ಸಂದರ್ಶನ (Interview) ಮಾಡುವ ನೆಪದಲ್ಲಿ ಕರೆಸಿ, ಮಾದಕ ದ್ರವ್ಯ ನೀಡಿ ಎಂಜಿನಿಯರಿಂಗ್ ಪದವೀಧರೆಯ ಮೇಲೆ ಕಾರಿನಲ್ಲೇ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದಲ್ಲಿ (Uttar Pradesh) ನಡೆದಿದೆ.

    ಗುರುಗ್ರಾಮ್‌ನ ಮಾಲ್‌ವೊಂದರ (Sahara Ganj Mall) ನೆಲಮಾಳಿಗೆಯಲ್ಲಿ ಕಾರಿನಲ್ಲಿ 27 ವರ್ಷದ ಎಂಜಿನಿಯರಿಂಗ್ ಪದವೀಧರ ಯುವತಿಯ ಮೇಲೆ ಕಾಮುಕ ತುಷಾರ್ ಶರ್ಮಾ ಅತ್ಯಾಚಾರ ಎಸಗಿದ್ದಾನೆ. ಆಕೆಗೆ ಕುಡಿಯುವ ನೀರಿನಲ್ಲಿ ನಿದ್ರೆ ಔಷಧಿ ಬೆರಸಿ, ಪ್ರಜ್ಞೆ ತಪ್ಪಿದ ನಂತರ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು (UP Police) ತಿಳಿಸಿದ್ದಾರೆ. ಇದನ್ನೂ ಓದಿ: ಕೆನಡಾ ವಾಯುನೆಲೆಯಲ್ಲಿ ಅಪರಿಚಿತ ವಸ್ತುವನ್ನು ಹೊಡೆದುರುಳಿಸಿದ US ಫೈಟರ್ ಜೆಟ್

    ಗುರುಗ್ರಾಮ್‌ನ (Gurugram) ಸೆಕ್ಟರ್-51ರ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದು, ತುಷಾರ್ ಶರ್ಮಾ ಎಂಬ ವ್ಯಕ್ತಿ ತನ್ನೊಂದಿಗೆ ಸಂಪರ್ಕ ಹೊಂದಿದ್ದನು. ಕೆಲಸ ಕೊಡಿಸುವುದಾಗಿ ಭರವಸೆಯನ್ನೂ ನೀಡಿದ್ದ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಲ್‌ಟಿಟಿಇ ಮುಖ್ಯಸ್ಥ ಜೀವಂತವಾಗಿದ್ದಾನಾ? – ಇದು ತಮಾಷೆ ಎಂದ ಶ್ರೀಲಂಕಾ

    ಏನಿದು ಘಟನೆ?
    ಆರೋಪಿ ತುಷಾರ್ ಶರ್ಮಾ ಉದ್ಯೋಗಕ್ಕಾಗಿ ಸಂದರ್ಶನ ಇರುವುದಾಗಿ ಪದವೀಧರೆಯನ್ನ ಮಾಲ್‌ಗೆ ಕರೆಸಿದ್ದಾನೆ. ಆಕೆ ತನ್ನ ಎಲ್ಲ ದಾಖಲೆಗಳೊಂದಿಗೆ ಮಾಲ್‌ಗೆ ಬಂದಿದ್ದಾಳೆ. ನಂತರ ಆರೋಪಿ ಆಕೆಯನ್ನ ನೆಲಮಾಳಿಗೆ ಕಾರ್ ಪಾರ್ಕಿಂಗ್ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಈ ವೇಳೆ ಆಕೆಗೆ ಕುಡಿಯುವ ನೀರಿನಲ್ಲಿ ನಿದ್ರೆ ಬರುವ ಔಷಧಿ ಬೆರೆಸಿಕೊಟ್ಟಿದ್ದಾನೆ. ಆಕೆ ನೀರು ಕುಡಿದ ಕೆಲವೇ ಕ್ಷಣಗಳಲ್ಲಿ ಪ್ರಜ್ಞೆ ಕಳೆದುಕೊಂಡಿದ್ದಾಳೆ. ನಂತರ ಆಕೆಯನ್ನು ಕಾರಿನೊಳಕ್ಕೆ ತಳ್ಳಿ ಆರೋಪಿ ಶರ್ಮಾ ಅತ್ಯಾಚಾರ ಎಸಗಿದ್ದಾನೆ. ಬಳಿಕ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿ, ಆಕೆಯನ್ನು ಮಾಲ್ ಪಾರ್ಕಿಂಗ್‌ನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಂತ್ರಸ್ತೆಯಿಂದ ದೂರು ಸ್ವೀಕರಿಸಿದ ಬಳಿಕ ಆಕೆಯನ್ನ ವೈದ್ಯಕೀಯ ಪರೀಕ್ಷೆಗಾಗಿ ದಾಖಲಿಸಲಾಗಿದೆ. ಆರೋಪಿ ವಿರುದ್ಧ ಐಪಿಸಿ (IPC) ಸೆಕ್ಷನ್ 328, 376 (ಅತ್ಯಾಚಾರ), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

    ಪೊಲೀಸರು ಮಾಲ್‌ನ ಸಿಸಿಟಿವಿ (CCTV) ದೃಶ್ಯಾವಳಿಗಳನ್ನ ಪರಿಶೀಲಿಸುತ್ತಿದ್ದು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 55 ಸಾವಿರ ರೂ.ಗೆ ಖರೀದಿಸಿ, 13ರ ಬಾಲಕಿ ಮೇಲೆ ನಿರಂತರ ಅತ್ಯಾಚಾರ – ಓರ್ವ ಅರೆಸ್ಟ್

    ಜೈಪುರ: ಮಹಿಳೆಯೊಬ್ಬಳು (Women) 55 ಸಾವಿರ ರೂ.ಗೆ ಬಾಲಕಿಯನ್ನು ಖರೀದಿಸಿ ತನ್ನ ಮಗ ಹಾಗೂ ಪತಿಯಿಂದ ನಿರಂತರವಾಗಿ ಅತ್ಯಾಚಾರ ಮಾಡಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ (Jaipur) ನಡೆದಿದೆ.

    ಜಾರ್ಖಂಡ್‌ನ (Jharkhand) 13 ವರ್ಷದ ಬಾಲಕಿ ನಗರದ ಮನಕ್ ಚೌಕ್ ಪೊಲೀಸ್ ಠಾಣೆಗೆ (Manak Chowk Police Station) ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿದ್ದಾರೆ. ಆರೋಪಿ ವಿಕಾಸ್ ರಾಣಾ (27) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: Cyber Crimeː 1 ತಿಂಗಳಲ್ಲಿ 1,228 ಕೇಸ್ – ಪರಿಹರಿಸಲು ಪೊಲೀಸ್ ಸಿಬ್ಬಂದಿ ಕೊರತೆ

    ತನ್ನನ್ನು ಜೈಪುರದಿಂದ 55 ಸಾವಿರ ರೂ.ಗೆ ಖರೀದಿಸಿ ಕರೆತಂದು ತನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿಸಿದ್ದಾಳೆ ಎಂದು ಬಾಲಕಿ ಆರೋಪಿಸಿದ್ದಾರೆ.

    ಏನಿದು ಘಟನೆ?
    ಸುಮಾರು 2 ತಿಂಗಳಿನಿಂದ ಜಾರ್ಖಂಡ್ ನಗರದಲ್ಲಿ ತರಕಾರಿ ಮಾರಾಟ ಮಾಡಿಕೊಂಡಿದ್ದ ಮಹಿಳೆ ಬಾಲಕಿಯನ್ನ ನೋಡಿದ್ದಾಳೆ. ಈ ವೇಳೆ ಮದುವೆ ಪ್ರಸ್ತಾಪದೊಂದಿಗೆ ಬಾಲಕಿ ಕುಟುಂಬವನ್ನ ಸಂಪರ್ಕಿಸಿದ್ದಾಳೆ. ಬಾಲಕಿ ಮನೆಗೆ ಬಂದು ಜೈಪುರದ ಉತ್ತಮ ಕುಟುಂಬಕ್ಕೆ ನಿಮ್ಮ ಹುಡುಗಿಯನ್ನು ಮದುವೆ ಮಾಡಿಸಿಕೊಡುವುದಾಗಿ ಆಕೆಯ ತಾಯಿ ಹಾಗೂ ಅಜ್ಜಿಗೆ ಹೇಳಿದ್ದಾಳೆ. ಅಲ್ಲದೇ ಹುಡುಗಿಯನ್ನು ತನ್ನೊಂದಿಗೆ ಕಳುಹಿಸಿಕೊಟ್ಟರೆ 55 ಸಾವಿರ ರೂ. ನೀಡುವುದಾಗಿ ಆಸೆ ತೋರಿಸಿದ್ದಾಳೆ. ಇದರಿಂದ ಬಾಲಕಿಯ ಅಜ್ಜಿ ಮರುದಿನವೇ ರೈಲಿನಲ್ಲಿ ಜೈಪುರಕ್ಕೆ ಕರೆತಂದಿದ್ದಾರೆ.

    ನಂತರ ಬಾಲಕಿಯನ್ನು ಮಹಿಳೆಯ ಕುಟುಂಬದೊಂದಿಗೆ ಇರಲು ಬಿಡಲಾಗಿದೆ. ಈ ವೇಳೆ ಖರೀದಿಸಿದ ಮಹಿಳೆ ತನ್ನ ಮಗನಿಂದ ಅತ್ಯಾಚಾರ ಮಾಡಿಸಿದ್ದಾಳೆ. ಆಕೆಯ ಪತಿ ಎಂದು ಹೇಳಿಕೊಂಡ ವ್ಯಕ್ತಿ ಸಹ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 58ರ ಮಹಿಳೆ ಮೇಲೆ ಅತ್ಯಾಚಾರ ಮಾಡಿ, ಹೊಡೆದು ಸಾಯಿಸಿದ 16ರ ಬಾಲಕ

    ಮನಕ್ ಚೌಕ್ ಪೊಲೀಸ್ ಠಾಣೆಯ ಬಳಿ ಬಾಲಕಿ ಅಳುತ್ತಾ ತಿರುಗಾಡುತ್ತಿರುವುದನ್ನು ಗಮನಿಸಿದ ಪೊಲೀಸರು ಆಕೆಯನ್ನ ಪ್ರಶ್ನಿಸಿದ್ದಾರೆ. ನಂತರ ಬಾಲಕಿ ವಿಷಯ ಬಾಯ್ಬಿಟ್ಟಿದ್ದಾಳೆ.

    ಬಾಲಕಿ ನೀಡಿದ ದೂರಿನ ಆಧಾರದ ಮೇರೆಗೆ ಐಪಿಸಿ (IPC) ಹಾಗೂ ಪೋಕ್ಸೊ ಕಾಯ್ದೆಯ (POCSO Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ವಿಕಾಸ್ ರಾಣಾ (27) ನನ್ನ ಬಂಧಿಸಲಾಗಿದೆ. ಉಳಿದವರಿಗಾಗಿ ಶೋಧ ಆರಂಭಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಾಗಲ್ ಪ್ರೇಮಿ ಕಾಟಕ್ಕೆ ಬೇಸತ್ತು UP ಮೂಲದ ದಂತ ವೈದ್ಯೆ ಆತ್ಮಹತ್ಯೆ

    ಪಾಗಲ್ ಪ್ರೇಮಿ ಕಾಟಕ್ಕೆ ಬೇಸತ್ತು UP ಮೂಲದ ದಂತ ವೈದ್ಯೆ ಆತ್ಮಹತ್ಯೆ

    ಬೆಂಗಳೂರು: ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ದಂತ ವೈದ್ಯೆ (Dentist) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಸಂಜಯ್ ನಗರದಲ್ಲಿ (SanjayNagar) ನಡೆದಿದೆ.

    ಜನವರಿ 25ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಿಯಾಂನ್ಷಿ ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ. ಇದನ್ನೂ ಓದಿ: ವಿಡಿಯೋ ಕಾಲ್ ಮಾಡಿ ಹೆಂಡತಿ ತೋರಿಸದಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ

    ಉತ್ತರಪ್ರದೇಶ (Uttar Pradesh) ಲಕ್ನೋ ಮೂಲದ ಪ್ರಿಯಾಂನ್ಷಿ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ (MS Ramaiah Memorial Hospital) ದಂತವೈದ್ಯೆ ಆಗಿ ಕೆಲಸ ಮಾಡುತ್ತಿದ್ದರು.

    ಅದೇ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯನಾಗಿದ್ದ ಸುಮಿತ್ ತನ್ನನ್ನು ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ಆದ್ರೆ ಪ್ರಿಯಾಂನ್ಷಿ ತ್ರಿಪಾಠಿ, ಪ್ರೀತಿಗೆ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡ ವೈದ್ಯ ಸುಮಿತ್, ಪ್ರಿಯಾಂನ್ಷಿ ತ್ರಿಪಾಠಿಯ ವ್ಯಕ್ತಿತ್ವದ ಬಗ್ಗೆ ಕೆಟ್ಟದಾಗಿ ಬಿಂಬಿಸಿದ್ದ. ಆಕೆ ಸರಿಯಿಲ್ಲ, ಸಿಗರೆಟ್ ಸೇದುತ್ತಾಳೆ, ಡ್ರಿಂಗ್ಸ್ ಮಾಡ್ತಾಳೆ.. ಸಿಕ್ಕ ಸಿಕ್ಕವರ ಜೊತೆಗೆ ಓಡಾಡ್ತಾಳೆ ಅಂತಾ ಹೇಳಿಕೊಂಡು ಬರ್ತಿದ್ದ. ಇದರಿಂದ ಮನನೊಂದ ಪ್ರಿಯಾಂನ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಪ್ರಿಯಾಂನ್ಷಿ ತಂದೆ ಸುಶೀಲ್ ತ್ರಿಪಾಠಿ ಅವರು ನೀಡಿದ ದೂರು ಆಧರಿಸಿ ಸಂಜಯ್ ನಗರದ ಪೊಲೀಸರು ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಗುಬ್ಬಿ ಜಾತ್ರೆಯಲ್ಲಿ ಅನ್ಯಕೋಮಿನವರ ವ್ಯಾಪಾರಕ್ಕೆ ನಿಷೇಧ ಹೇರಲು ಒತ್ತಾಯ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 2013ರ ರೇಪ್‌ಕೇಸ್‌: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

    2013ರ ರೇಪ್‌ಕೇಸ್‌: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

    ಗಾಂಧಿನಗರ: 2013ರ ಅತ್ಯಾಚಾರ ಪ್ರಕರಣದರಲ್ಲಿ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ (81) (Asaram Bapu) ಗುಜರಾತ್‌ನ ಸೆಷನ್ಸ್ ನ್ಯಾಯಾಲಯವು (Gujarat Sessions Court) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

    ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಡಿ.ಕೆ. ಸೋನಿ (DK Soni) ಅವರು ವಾದ-ವಿವಾದ ಆಲಿಸಿದ ನಂತರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಇದನ್ನೂ ಓದಿ: ವಿಸ್ತಾರ ವಿಮಾನದಲ್ಲಿ ಅರೆಬೆತ್ತಲಾಗಿ ಓಡಾಡಿದ ಮಹಿಳೆ – ಗಲಾಟೆ ಮಾಡಿ ಸಿಬ್ಬಂದಿ ಮೇಲೆ ಹಲ್ಲೆ

    2013ರಲ್ಲಿ ತನ್ನ ಶಿಷ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ 81 ವರ್ಷದ ಅಸಾರಾಂ ಬಾಪುವನ್ನು ದೋಷಿ ಎಂದು ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: ಹುಡುಗಿಯರೇ.. ಮದುವೆಗೂ ಮುನ್ನ ಭಾವಿ ಪತಿಗೆ ಈ ಪ್ರಶ್ನೆ ಕೇಳೋದನ್ನ ಮರಿಬೇಡಿ

    ಸೋಮವಾರ ವಿಚಾರಣೆ ನಡೆಸಿದ್ದ ಗಾಂಧಿನಗರದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 2013ರ ಈ ಪ್ರಕರಣದಲ್ಲಿ ಅಸಾರಾಂ ಬಾಪುವಿನ ಪತ್ನಿ ಸೇರಿ ಪ್ರಕರಣದ ಆರೋಪಿಗಳಾಗಿದ್ದ 6 ಮಂದಿಯನ್ನ ಖುಲಾಸೆಗೊಳಿಸಿತು. ಪೂರಕ ಸಾಕ್ಷ್ಯಾಧಾರ ಇಲ್ಲದ ಕಾರಣ ಐವರು ಆರೋಪಿಗಳನ್ನು ಖುಲಾಸೆಗೊಳಿಸಿತು. ಇದರಲ್ಲಿ ಅಸಾರಾಂ ಬಾಪುವಿನ ಪತ್ನಿಯೂ ಸೇರಿದ್ದಾರೆ.

    ನಂತರ ನ್ಯಾಯಾಧೀಶರಾದ ಡಿ.ಕೆ ಸೋನಿ ಅವರು, ಐಪಿಸಿ (IPC) ಸೆಕ್ಷನ್ 376 (2)(ಸಿ) (ಬಲವಂತವಾಗಿ ಸಂಭೋಗ ಹಾಗೂ ತನ್ನ ಅಭಿರಕ್ಷೆಯಲ್ಲಿರುವ ಸ್ತ್ರೀಯೊಡನೆ ಸಂಭೋಗ ಮಾಡುವುದು), 377 (ಅಸ್ವಾಭಾವಿಕ ಲೈಂಗಿಕತೆ), 342 (ಅಕ್ರಮ ಬಂಧನಕ್ಕಾಗಿ ದಂಡನೆ), 506 (2) (ಅಪರಾಧಿಕ ಭಯೋತ್ಪಾದಕರಿಗೆ ದಂಡನೆ), 354 (ಮಹಿಳೆಯನ್ನು ಮಾನಭಂಗ ಮಾಡುವ ಉದ್ದೇಶದಿಂದ ಅವಳ ಮೇಲೆ ಹಲ್ಲೆ), 357 (ಒಬ್ಬ ವ್ಯಕ್ತಿಯನ್ನು ಅಕ್ರಮವಾಗಿ ಬಂಧನದಲ್ಲಿಡುವ ಪ್ರಯತ್ನದಲ್ಲಿ ಅವನ ಮೇಲೆ ಹಲ್ಲೆ) ಅಡಿಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

    ಅಸಾರಾಂ ಬಾಪು ಈಗಾಗಲೇ ಎರಡು ಪ್ರತ್ಯೇಕ ಲೈಂಗಿಕ ಅಪರಾಧ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ. 2013 ರಲ್ಲಿ ಅವನನ್ನು ಇಂದೋರ್‌ನಿಂದ ಕರೆತಂದು 2018 ರಿಂದ ಜೋಧ್‌ಪುರದ ಜೈಲಿನಲ್ಲಿ ಇರಿಸಲಾಗಿದೆ.

    2013ರಲ್ಲಿ ರಾಜಸ್ಥಾನದ ತನ್ನ ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಇನ್ನೊಂದು ಪ್ರಕರಣದಲ್ಲಿ ಇದೀಗ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • UAE ಸುಲ್ತಾನ್ ಅಂತಾ ಹೇಳ್ಕೊಂಡು ಹೋಟೆಲ್‌ಗೆ 23 ಲಕ್ಷ ವಂಚನೆ – ಖತರ್ನಾಕ್ ಅಂದರ್

    UAE ಸುಲ್ತಾನ್ ಅಂತಾ ಹೇಳ್ಕೊಂಡು ಹೋಟೆಲ್‌ಗೆ 23 ಲಕ್ಷ ವಂಚನೆ – ಖತರ್ನಾಕ್ ಅಂದರ್

    ನವದೆಹಲಿ: ಯುಎಇ ರಾಜಮನೆತನದ (UAE Royal Family)  ಕಚೇರಿ ಉದ್ಯೋಗಿ ಎಂದು ಹೇಳ್ಕೊಂಡು ದೆಹಲಿಯ ಲೀಲಾ ಪ್ಯಾಲೇಸ್‌ಗೆ (Leela Hotel) 23 ಲಕ್ಷ ವಂಚಿಸಿದ್ದ ಖತರ್ನಾಕ್ ವ್ಯಕ್ತಿಯನ್ನು ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ.

    ದೆಹಲಿ ಪೊಲೀಸರು ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಪುತ್ತೂರಿನ ಮಹಮದ್ ಷರೀಫ್ (41) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಧರ್ಮ, ಜಾತಿ ಆಧಾರದ ಮೇಲೆ ವೋಟ್ ಕೇಳಲ್ಲ – ಅಭಿವೃದ್ಧಿ ಅಜೆಂಡಾ ಇಟ್ಟುಕೊಂಡು ಪ್ರಚಾರ: HDK

    ಈತ ಲೀಲಾ ಪ್ಯಾಲೇಸ್‌ನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಗಸ್ಟ್ 1 ರಿಂದ ನವೆಂಬರ್ 20ರ ವರೆಗೆ ತಂಗಿದ್ದ. ನಂತರ 23 ಲಕ್ಷ ಬಿಲ್ ಕಟ್ಟದೇ ಸದ್ದಿಲ್ಲದೇ ಎಸ್ಕೇಪ್ ಆಗಿದ್ದ. ಈ ಬಗ್ಗೆ ಲೀಲಾ ಪ್ಯಾಲೇಸ್ ಹೋಟೆಲ್ ಮ್ಯಾನೇಜರ್ ದೂರು ನೀಡಿದ್ದರು. ಇದನ್ನೂ ಓದಿ: ಸುಮ್ಮನಿರದಿದ್ದರೇ ಸಿದ್ಧವನದಲ್ಲಿ ನಡೆಸಿದ ಷಡ್ಯಂತ್ರ ಬಿಚ್ಚಿಡುತ್ತೇನೆ – ಸಿದ್ದುಗೆ HDK ಎಚ್ಚರಿಕೆ

    ದೂರಿನಲ್ಲಿ, ಮಹಮ್ಮದ್ ಶರೀಫ್ ತನ್ನನ್ನು ತಾನು ಯುಎಇ ಸುಲ್ತಾನ್ ಶೇಖ್ ಫಲ್ಹಾ ಬಿನ್ ಜಾಯೇದ್ ಅಲ್ ನಹ್ಯಾನ್ ಕಚೇರಿಯ ಅಧಿಕಾರಿ ಎಂದು ಬಿಂಬಿಸಿಕೊಂಡಿದ್ದ ಎಂಬುದು ತಿಳಿದುಬಂದಿದೆ.

    ದೂರಿನ ಅನ್ವಯ ಆರೋಪಿ ವಿರುದ್ಧ ಐಪಿಸಿ (IPC) ಸೆಕ್ಷನ್ 149, 420 ಹಾಗೂ 380ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನ ಬಂಧಿಸಲಾಯಿತು. ನಂತರ ದೆಹಲಿ ನ್ಯಾಯಾಲಯದ (Delhi Court) ಎದುರು ಹಾಜರುಪಡಿಸಲಾಯಿತು. ವಾದ-ವಿವಾದಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ ಆರೋಪಿಯನ್ನ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮದ್ವೆಗೆ ಮುಂಚೆನೇ ಮಗು- ಬಾತ್‌ರೂಂ ಕಿಟಕಿಯಿಂದ ಶಿಶು ಎಸೆದ 20ರ ಯುವತಿ!

    ಮದ್ವೆಗೆ ಮುಂಚೆನೇ ಮಗು- ಬಾತ್‌ರೂಂ ಕಿಟಕಿಯಿಂದ ಶಿಶು ಎಸೆದ 20ರ ಯುವತಿ!

    ನವದೆಹಲಿ: ಮದುವೆಯಾಗದೇ (Marriage) ಮಗುವಿಗೆ ಜನ್ಮ ನೀಡಿದ 20 ವರ್ಷದ ಯುವತಿ ಸಾಮಾಜಿಕ ಕಳಂಕಕ್ಕೆ ಹೆದರಿ ಅಪಾರ್ಟ್ಮೆಂಟ್‌ನ ಬಾತ್‌ರೂಮ್ ಕಿಟಕಿಯಿಂದ ಮಗುವನ್ನು ಎಸೆದು ಕೊಂದಿರುವ ಘಟನೆ ಪೂರ್ವ ದೆಹಲಿಯ ನ್ಯೂಅಶೋಕ್ ವಿಹಾರದಲ್ಲಿ ನಡೆದಿದೆ.

    ನೋಯ್ಡಾದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಯುವತಿ, ಸೋಮವಾರ ಮಗುವಿಗೆ ಜನ್ಮ ನೀಡಿದ್ದಾಳೆ. ನಂತರ ಸಾಮಾಜಿಕ ಕಳಂಕಕ್ಕೆ (Social Stigma) ಹೆದರಿ ಮಗುವನ್ನು ತಾನು ವಾಸಿಸುತ್ತಿದ್ದ ಜೈ ಅಂಬೆ ಅಪಾರ್ಟ್ಮೆಂಟ್‌ನ ಬಾತ್‌ರೂಮ್ ಕಿಟಕಿಯಿಂದ ಎಸೆದು ಕೊಂದಿದ್ದಾಳೆ. ಇದೀಗ ಪೊಲೀಸರಿಗೆ (Police) ಸಿಕ್ಕಿಬಿದ್ದಿದ್ದಾಳೆ. ಇದನ್ನೂ ಓದಿ: ಮುದ್ದಿನ ಶ್ವಾನ ಹುಡುಕಿಕೊಡಿ- 10 ಸಾವಿರ ಬಹುಮಾನ ಘೋಷಿಸಿದ ಕುಟುಂಬ!

    ಮಗು ರಸ್ತೆಯಲ್ಲಿ ಬಿದ್ದಿದ್ದನ್ನು ಕಂಡು ಸ್ಥಳೀಯರು ನೋಯ್ಡಾದ ಮೆಟ್ರೋ ಆಸ್ಪತ್ರೆಗೆ (Metro Hospital) ಕರೆದೊಯ್ದರು, ಹೆಚ್ಚಿನ ಚಿಕಿತ್ಸೆಗಾಗಿ ಎಲ್‌ಬಿಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಷ್ಟರಲ್ಲಿ ಮಗು ಮೃತಪಟ್ಟಿದ್ದು. ನಂತರ ಶಿಶು ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸ್ ಉಪ ಆಯುಕ್ತ (ಪೂರ್ವ) ಅಮೃತ ಗುಗುಲೋತ್, ರಕ್ತದ ಕಲೆಗಳ ಜಾಡು ಹಿಡಿದು ಆರೋಪಿ ಯುವತಿಯನ್ನ ಬಂಧಿಸುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ದಿಢೀರ್‌ ಉರುಳಿದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ – ತಾಯಿ, ಮಗು ದುರ್ಮರಣ

    ಬಳಿಕ ತನಿಖೆಯಲ್ಲಿ ತಾನು ಅವಿವಾಹಿತೆ, ಸಾಮಾಜಿಕ ಕಳಂಕಕ್ಕೆ ಹೆದರಿ ಮಗುವನ್ನು ಬಾತ್‌ರೂಮಿನ ಕಿಟಕಿಯಿಂದ ಎಸೆದಿದ್ದಾಗಿ ಒಪ್ಪಿಕೊಂಡಿದ್ದಾಳೆ. ಆರೋಪಿ ಯುವತಿ ವಿರುದ್ಧ ಐಪಿಸಿ (IPC) ಸೆಕ್ಷನ್ 302 (ಕೊಲೆ), 201 ಅಪರಾಧದ ಸಾಕ್ಷಿಗಳನ್ನು ಮರೆಮಾಚುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಯುವತಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಪೊಲೀಸರು ಕಣ್ಗಾವಲು ಇರಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆಪರೇಷನ್ ಥಿಯೇಟರ್‌ನಲ್ಲಿ ಮಹಿಳೆಯ ಖಾಸಗಿ ಭಾಗಗಳನ್ನು ಮುಟ್ಟಿ ಕಿರುಕುಳ

    ಆಪರೇಷನ್ ಥಿಯೇಟರ್‌ನಲ್ಲಿ ಮಹಿಳೆಯ ಖಾಸಗಿ ಭಾಗಗಳನ್ನು ಮುಟ್ಟಿ ಕಿರುಕುಳ

    ಕೋಲ್ಕತ್ತಾ: ಇಲ್ಲಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ (Operation Theatre) ಅರೆಪ್ರಜ್ಞಾವಸ್ಥೆಯಲ್ಲಿ ಮಲಗಿದ್ದಾಗ ಆಸ್ಪತ್ರೆ (Hospital) ಸಿಬ್ಬಂದಿಯೊಬ್ಬ ಆಕೆಯ ಖಾಸಗಿ ಭಾಗಗಳನ್ನ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮಹಿಳೆಯೊಬ್ಬರು ಆರೋಪಿಸಿ ಫೂಲ್ಬಗಾನ್ ಪೊಲೀಸರಿಗೆ (Police) ದೂರು ನೀಡಿದ್ದಾರೆ.

    CRIME COURT

    ಕೋಲ್ಕತ್ತಾ (Kolkata) ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಪಿತ್ತಕೋಶದ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದರು. ಗುರುವಾರ ಬೆಳಗ್ಗೆ 9 ಗಂಟೆ ವೇಳೆಗೆ ಆಪರೇಷನ್ ಥಿಯೇಟರ್‌ಗೆ ವರ್ಗಾಯಿಸಿ ಅರಿವಳಿಕೆ ನೀಡಿದ್ದಾರೆ. 11 ಗಂಟೆಗೆ ವೇಳೆಗೆಲ್ಲಾ ಶಸ್ತçಚಿಕಿತ್ಸೆ ಮುಗಿದಿದೆ. ಬಳಿಕ ಮಹಿಳೆ ಅರೆ ಪ್ರಜ್ಞಾವಸ್ಥೆಯಲ್ಲಿ ಮಲಗಿದ್ದಾಗ ಯಾರೋ ತನ್ನ ಖಾಸಗಿ ಭಾಗಗಳನ್ನು ಮುಟ್ಟಿ ಕಿರುಕುಳ ನೀಡಿರುವುದಾಗಿ ಮಹಿಳೆ ಲಿಖಿತ ದೂರು ನೀಡಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ 10 ಲಕ್ಷ ಹಣ ಸಿಕ್ಕಿದ ಕೇಸ್ – ಆರೋಪಿ ಜಗದೀಶ್‌ಗೆ ಷರತ್ತುಬದ್ಧ ಜಾಮೀನು

    ಮಹಿಳೆ ಹೇಳಿದ್ದೇನು?
    ನಾನು ನಿಧಾನವಾಗಿ ಪ್ರಜ್ಞಾವಸ್ಥೆಗೆ ಬರುತ್ತಿದ್ದೆ. ಈ ವೇಳೆ ಸ್ವಲ್ಪವೇ ಕಣ್ಣು ತೆರೆದು ನೋಡಿದಾಗ ನನ್ನ ಬಲಭಾಗದಲ್ಲಿ ವ್ಯಕ್ತಿಯೊಬ್ಬ ನಿಂತಿದ್ದ. ಅವನು ನನ್ನನ್ನು ತಬ್ಬಿಕೊಳ್ಳುತ್ತಿದ್ದ. ನನಗೆ ತುಂಬಾ ನೋವಾಗುತ್ತಿತ್ತು. ನನಗೆ ಅರಿವಳಿಕೆ ನೀಡಿದ್ದರಿಂದ ಅವನನ್ನು ತಡೆಯಲು ಸಾಧ್ಯವಾಗಲಿಲ್ಲ. ಆದರೆ ನನಗೆ ಪ್ರಜ್ಞೆ ಬಂದು ನೋಡಿದಾಗ ನನ್ನ ಖಾಸಗಿ ಭಾಗಗಳಲ್ಲಿ ಆಗಿದ್ದ ಗುರುತುಗಳನ್ನು ಗಮನಿಸಿದೆ ಎಂದು ಹೇಳಿದ್ದಾರೆ.

    ಆಪರೇಷನ್ ಥಿಯೇಟರ್‌ನಲ್ಲಿ ನನಗೆ ಏನಾಯಿತು ಅನ್ನೋದು ಸಂಪೂರ್ಣವಾಗಿ ತಿಳಿದಿಲ್ಲ. ಆದ್ರೆ ಅಪರಾಧ ನಡೆಯುವಾಗ ಯಾರೊಬ್ಬರೂ ಮಹಿಳಾ ಸಿಬ್ಬಂದಿ ಇರಲಿಲ್ಲ. ಆದ್ರೆ ನನ್ನ ಬಲ ಎದೆಯ ಮೇಲೆ ಗುರುತುಗಳು ಕಂಡುಬಂದಿವೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಕೈಗಾರಿಕೆಗಳ ಉದ್ಯೋಗದಲ್ಲಿ ಶೇ.80 ರಷ್ಟು ಪ್ರಾಶಸ್ತ್ಯ, ಭಾಷಾ ಅಭಿವೃದ್ಧಿಗೆ ಶೀಘ್ರ ಕಾನೂನು ಸ್ವರೂಪ: ಬೊಮ್ಮಾಯಿ

    ಮಹಿಳೆ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಫೂಲ್ಬಗಾನ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಆರೋಪಿ ವಿರುದ್ಧ ಐಪಿಸಿ (IPC) ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಿದ್ದು, ಮೆಡಿಕಲ್ ರಿಪೋರ್ಟ್‌ಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚಲಿಸುತ್ತಿದ್ದ ಬೈಕ್‌ಟ್ಯಾಂಕ್ ಮೇಲೆ ಕುಳಿತು ಪ್ರಿಯಕರನೊಂದಿಗೆ ರೊಮ್ಯಾನ್ಸ್ – ಪೊಲೀಸರು ಕೊಟ್ರು ಶಾಕ್

    ಚಲಿಸುತ್ತಿದ್ದ ಬೈಕ್‌ಟ್ಯಾಂಕ್ ಮೇಲೆ ಕುಳಿತು ಪ್ರಿಯಕರನೊಂದಿಗೆ ರೊಮ್ಯಾನ್ಸ್ – ಪೊಲೀಸರು ಕೊಟ್ರು ಶಾಕ್

    ಅಮರಾವತಿ: ಪ್ರೇಮಿಗಳಿಗೆ (Lovers) ಜಗತ್ತೇ ಕುರುಡಾಗಿರುತ್ತದೆ. ಕೆಲ ಪ್ರೇಮಿಗಳಂತೂ ಅಕ್ಕಪಕ್ಕ ಯಾರಿರುತ್ತಾರೆ ಎಂಬ ಅರಿವೇ ಇಲ್ಲದೇ ಸಾರ್ವಜನಿಕ ಪ್ರದೇಶಗಳಲ್ಲೂ ಹುಚ್ಚಾಟ ಮರೆಯುವುದನ್ನು ನೋಡಿರುತ್ತೇವೆ. ಸದ್ಯ ಪ್ರೇಮಿಗಳಿಬ್ಬರು ಹಾಡಹಗಲೇ ರಸ್ತೆಯಲ್ಲಿ ಬೈಕ್ ಮೇಲೆ ಕುಳಿತು ರೊಮ್ಯಾನ್ಸ್ ಮಾಡಿಕೊಂಡು ಚಲಿಸುತ್ತಿರುವ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ.

    ಯುವ ಪ್ರೇಮಿಗಳಿಬ್ಬರು ಹಾಡಹಗಲೇ ಬೈಕ್ ಮೇಲೆ ರಾಜಾರೋಷವಾಗಿ ತಬ್ಬಿಕೊಂಡು ಹೋಗುತ್ತಿದ್ದಾರೆ. ಬೈಕಿನ (Bike) ಪೆಟ್ರೋಲ್ ಟ್ಯಾಂಕ್ ಮೇಲೆ ಉಲ್ಟಾ ಕುಳಿತ ಯುವತಿ ತನ್ನ ಪ್ರಿಯಕರನನ್ನು ಬಿಗಿದಪ್ಪಿಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಇದೇ ವೇಳೆ ಹಿಂಬಂದಿಯಿಂದ ಬರುತ್ತಿದ್ದ ವಾಹನ ಸವಾರರು ಇಬ್ಬರ ರೊಮ್ಯಾನ್ಸ್ (Romance) ದೃಶ್ಯವನ್ನು ವೀಡಿಯೋ ಮಾಡಿ ಜಾಲತಾಣದಲ್ಲಿ (Social Media) ಹರಿಬಿಟ್ಟಿದ್ದಾರೆ. ಈ ಪ್ರೇಮಿಗಳ ನಡೆಗೆ ಎಲ್ಲೆಡೆ ಆಕ್ಷೇಪ ವ್ಯಕ್ತವಾಗಿದೆ. ಇದನ್ನೂ ಓದಿ: ಹೊಸ ವರ್ಷದಂದೇ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 25 ರೂ. ಏರಿಕೆ

    ಪೊಲೀಸರು ಕೊಟ್ರು ಶಾಕ್: ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣಂನ ಸ್ಟೀಲ್ ಪ್ಲಾಂಟ್ ರಸ್ತೆಯಲ್ಲಿ ಬೈಕ್ ಮೇಲೆ ರೊಮ್ಯಾನ್ಸ್ ಮಾಡುತ್ತಾ ತೆರಳುತ್ತಿದ್ದ ಪ್ರೇಮಿಗಳಿಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯನ್ನು ಇಲ್ಲಿನ ಚೋಡವರಂ ನಿವಾಸಿ ಕೆ.ಶೈಲಜಾ (19) ಹಾಗೂ ಯುವಕ ಅಜಯ್ ಕುಮಾರ್ (22) ಎಂದು ಗುರುತಿಸಲಾಗಿದೆ. ಬಳಿಕ ಯುವಕನ ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಪ್ರೇಮಿಗಳಿಬ್ಬರು ನಡೆಸಿದ ಹುಚ್ಚಾಟದಿಂದ ರಸ್ತೆ ಸುರಕ್ಷತೆ ನಿಯಮವನ್ನು ಉಲ್ಲಂಘಿಸಿದ್ದು, ಐಪಿಸಿ (IPC) ಸೆಕ್ಷನ್ 336, 279 ಹಾಗೂ ಮೋಟಾರು ವಾಹನ ಕಾಯ್ದೆ (Motor Vehicle Act) ಸೆಕ್ಷನ್ 132, 129ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ವಿಶಾಖಪಟ್ಟಣಂ ಪೊಲೀಸ್ ಆಯುಕ್ತ ಸಿ.ಎಚ್. ಶ್ರೀಕಾಂತ್ ತಿಳಿಸಿದ್ದಾರೆ. ಅಲ್ಲದೇ ನಾಗಕರಿಕರು ವಾಹನ ಚಲಾಯಿಸುವಾಗ ಸಂಚಾರ ನಿಯಮ ಪಾಲನೆ ಮಾಡುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಬೈಕ್ ಟ್ಯಾಂಕ್ ಮೇಲೆ ಕುಳಿತು ಪ್ರೇಮಿಗಳ ಲಿಪ್‍ಲಾಕ್ – ಲವರ್ಸ್ ಜಾಲಿ ರೈಡ್ ವೀಡಿಯೋ ವೈರಲ್

    lovers

    ಈ ಹಿಂದೆ ದೆಹಲಿಯಲ್ಲಿ ರಾತ್ರಿ ವೇಳೆ ಪ್ರೇಮಿಗಳಿಬ್ಬರು ನಡು ರಸ್ತೆಯಲ್ಲಿ ರೊಮ್ಯಾನ್ಸ್ ಮಾಡಿಕೊಂಡು ಹೋಗುತ್ತಿದ್ದದ್ದು, ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲೂ ಇಂತಹದ್ದೇ ಕೇಸ್ ಬೆಳಕಿಗೆ ಬಂದಿತ್ತು.

    Live Tv
    [brid partner=56869869 player=32851 video=960834 autoplay=true]