Tag: IPL 2023

  • ದುಷ್ಮನ್‌ ಅಲ್ಲ ದೋಸ್ತಿ – ಕೊಹ್ಲಿಯನ್ನು ಹಾಡಿ ಹೊಗಳಿದ ಗಂಭೀರ್‌, ಫ್ಯಾನ್ಸ್‌ ವಿರುದ್ಧ ಮತ್ತೆ ಗರಂ

    ದುಷ್ಮನ್‌ ಅಲ್ಲ ದೋಸ್ತಿ – ಕೊಹ್ಲಿಯನ್ನು ಹಾಡಿ ಹೊಗಳಿದ ಗಂಭೀರ್‌, ಫ್ಯಾನ್ಸ್‌ ವಿರುದ್ಧ ಮತ್ತೆ ಗರಂ

    ನವದೆಹಲಿ: ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯಕ್ಕೂ ಮುನ್ನ ವಿರಾಟ್‌ ಕೊಹ್ಲಿ (Virat Kohli) ಹಾಗೂ ನವೀನ್‌ ಉಲ್‌ ಹಕ್‌ (Naveen-ul-Haq) ಮೈದಾನದಲ್ಲಿ ಮುಖಾಮುಖಿಯಾಗುವ ಬಗ್ಗೆ ಸಾಕಷ್ಟು ಕುತೂಹಲವಿತ್ತು. 2023ರ ಐಪಿಎಲ್‌ ಬಳಿಕ ಇದೇ ಮೊದಲಬಾರಿಗೆ ಮುಖಾಮುಖಿಯಾಗಿದ್ದು, ಮತ್ತೆ ಕಿರಿಕ್‌ ಆಗಬಹುದೇ? ಕೊಹ್ಲಿ ಕಣಕ್ಕಿಳಿದ್ರೆ ಬ್ಯಾಟಿಂಗ್‌ನಲ್ಲಿ ಹೇಗೆ ಅಬ್ಬರಿಸುತ್ತಾರೆ? ಅನ್ನೋದನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದುಕುಳಿತಿದ್ದರು. ಆದ್ರೆ ಮೈದಾನದಲ್ಲಿ ನಡೆದಿದ್ದೇ ಬೇರೆ.

    ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ (Afghanistan) ನೀಡಿದ 273 ರನ್‌ಗಳ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ಪರ ರೋಹಿತ್‌ ಶರ್ಮಾ ಹಾಗೂ ಇಶಾನ್‌ ಕಿಶನ್‌ ಜೋಡಿ ಮೊದಲ ವಿಕೆಟ್‌ಗೆ 156 ರನ್‌ಗಳ ಜೊತೆಯಾಟ ನೀಡಿತ್ತು. ಸ್ಫೋಟಕ ಇನ್ನಿಂಗ್ಸ್‌ ಆರಂಭಿಸಿದ್ದ ರೋಹಿತ್‌ ಶರ್ಮಾಗೆ ಸಾಥ್‌ ನೀಡುತ್ತಿದ್ದ ಇಶಾನ್‌ ಕಿಶನ್‌ 47 ರನ್‌ಗಳಿಗೆ ಔಟಾಗಿ ಪೆವಿಲಿಯನ್‌ಗೆ ಮರಳಿದರು. ಬಳಿಕ 3ನೇ ಕ್ರಮಾಂಕದಲ್ಲಿ ಕೊಹ್ಲಿ ಕ್ರೀಸ್‌ಗೆ ಇಳಿಯುತ್ತಿದ್ದಂತೆ ಅಭಿಮಾನಿಗಳು ಜೈಕಾರ ಹಾಕುವ ಮೂಲಕ ಸ್ವಾಗತ ಕೋರಿದರು. ಕೊಹ್ಲಿ ಕ್ರೀಸ್‌ಗೆ ಬಂದು ನವೀನ್‌ ಉಲ್‌ ಹಕ್‌ ಬೌಲಿಂಗ್‌ನಲ್ಲಿ ಎದುರಾದ ಕೊಹ್ಲಿ ಅಬ್ಬರಿಸುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದ್ರೆ ಅಭಿಮಾನಿಗಳ ನಿರೀಕ್ಷೆ ಹುಸಿಯಾಯಿತು.

    ನವೀನ್‌ ಉಲ್‌ ಹಕ್‌ ಅವರ ಹಲವು ಎಸೆತಗಳನ್ನು ಕೊಹ್ಲಿ ಡಾಟ್‌ ಮಾಡಿಸಿದರು. ಜೊತೆಗೆ ಕೊಹ್ಲಿ… ಕೊಹ್ಲಿ… ಎಂದು ಜೈಕಾರ ಕೂಗುತ್ತಾ ನವೀನ್‌ ಉಲ್‌ ಹಕ್‌ ನನ್ನ ರೇಗಿಸುತ್ತಿದ್ದ ಅಭಿಮಾನಿಗಳನ್ನ ಕೈಸನ್ನೆಯಲ್ಲೇ ಸುಮ್ಮನಿರುವಂತೆ ಮನವಿ ಮಾಡಿದರು. ಅಷ್ಟೇ ಅಲ್ಲದೇ ಪಂದ್ಯದ ವೇಳೆ ನವೀನ್‌ ಉಲ್‌ ಹಕ್‌ನನ್ನ ಆತ್ಮೀಯವಾಗಿ ಅಪ್ಪಿಕೊಂಡು ಮಾತನಾಡಿಸಿದರು. ನವೀನ್‌ ಹೆಗಲಮೇಲೆ ಕೈಯಿಟ್ಟು ಪ್ರೀತಿಯಿಂದ ಮಾತನಾಡಿಸಿದರು. ವಿರಾಟ್‌ ಕೊಹ್ಲಿ ನಡೆಗೆ ಅಭಿಮಾನಿಗಳೂ ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: World Cup 2023: ಗುಡ್‌ನ್ಯೂಸ್‌ – ಪಾಕ್‌ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಸೇರಲಿದ್ದಾರೆ ಗಿಲ್‌

    ಕೊಹ್ಲಿ ಫ್ಯಾನ್ಸ್‌ ವಿರುದ್ಧ ಗಂಭೀರ್‌ ಗರಂ:
    ಇನ್ನೂ ಕೊಹ್ಲಿ-ನವೀನ್‌ ವಿಚಾರಕ್ಕೆ ಪ್ರತಿಕ್ರಿಯಿಸಿದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ (Gautam Gambhir), ಕೊಹ್ಲಿಯನ್ನು ಹೊಗಳುತ್ತಲೇ ಅಭಿಮಾನಿಗಳ ವಿರುದ್ಧ ಕಿಡಿ ಕಾರಿದ್ದಾರೆ. ಪ್ರತಿಯೊಬ್ಬ ಆಟಗಾರನೂ ತನ್ನ ತಂಡಕ್ಕಾಗಿ ಹೋರಾಡುತ್ತಾನೆ ಅನ್ನೋದಕ್ಕೆ ಕೊಹ್ಲಿ ಸಾಕ್ಷಿಯಾಗಿದ್ದಾರೆ. ಯಾರು ಯಾವ ದೇಶದವರು ಅನ್ನೋದಕ್ಕಿಂತ ಕ್ರೀಡೆಯಲ್ಲಿ ಎಷ್ಟು ಉತ್ತಮವಾಗಿ ಆಡುತ್ತಾರೆ ಎಂಬುದು ಮುಖ್ಯವಾಗುತ್ತದೆ. ಕೊಹ್ಲಿ ಮತ್ತು ನವೀನ್‌ ಅವರನ್ನು ಕ್ರೀಡೆಯ ಉದ್ದೇಶದಿಂದಲೇ ನೋಡಿದ್ರೆ ಒಳ್ಳೆಯದು. ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗಿ ಆಟಗಾರರನ್ನ ಟ್ರೋಲ್‌ ಮಾಡುವುದನ್ನು ನಿಲ್ಲಿಸಬೇಕು ಎಂದು ಕೊಹ್ಲಿ ಅಭಿಮಾನಿಗಳಿಗೆ ಸಲಹೆ ನೀಡಿದ್ದಾರೆ.

    ನವೀನ್‌ ಉಲ್‌ ಹಕ್‌ ರಿಯಾಕ್ಷನ್‌ ಏನು?
    ಇನ್ನೂ ಪಂದ್ಯ ಮುಗಿದ ಬಳಿಕ ಕೊಹ್ಲಿ ಜೊತೆಗಿನ ಮಾತುಗಳನ್ನ ರಿವೀಲ್‌ ಮಾಡಿರುವ ನವೀನ್‌ ಉಲ್‌ ಹಕ್‌, ಕೊಹ್ಲಿ ತುಂಬಾ ಒಳ್ಳೆಯ ವ್ಯಕ್ತಿ, ಉತ್ತಮ ಆಟಗಾರ ಕೂಡ ಹೌದು. ಪಂದ್ಯದ ವೇಳೆ ಪರಸ್ಪರ ಕೈಕುಲುಕಿದೆವು. ಆದ್ರೆ ಅಭಿಮಾನಿಗಳೇ ಅದನ್ನ ದೊಡ್ಡದು ಮಾಡ್ತಿದ್ದಾರೆ. ಅಂದು ನಡೆದ ಘಟನೆಯನ್ನ ನಾವು ಅಲ್ಲಿಗೆ ಬಿಟ್ಟಿದ್ದೇವೆ. ಅಭಿಮಾನಿಗಳು ಅದನ್ನ ಮುಂದುವರಿಸಿದ್ದಾರೆ ಎಂದು ಬೇಸರದಿಂದ ಹೇಳಿಕೊಂಡಿದ್ದಾರೆ.

    ಒಟ್ಟಿನಲ್ಲಿ ವಿರಾಟ್‌ ಕೊಹ್ಲಿ ಹಾಗೂ ನವೀನ್‌ ಉಲ್‌ ಹಕ್‌ ನಡುವಣ ಕದನ ಅಂತ್ಯವಾಗಿದೆ ಎಂದೆಲ್ಲಾ ನೆಟ್ಟಿಗರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರೋಹಿತ್‌ ಶರ್ಮಾ ಸ್ಫೋಟಕ ಶತಕ – 8 ವಿಕೆಟ್‌ಗಳ ಜಯದೊಂದಿಗೆ ಪಾಕ್‌ ಹಿಂದಿಕ್ಕಿದ ಭಾರತ

    2023ರ ಐಪಿಎಲ್‌ನಲ್ಲಿ ಏನಾಗಿತ್ತು?
    2023ರ ಐಪಿಎಲ್‌ ಟೂರ್ನಿವೇಳೆ ಏಕನಾ ಕ್ರೀಡಾಂಗಣದಲ್ಲಿ ನಡೆದ 43ನೇ ಪಂದ್ಯದಲ್ಲಿ ಆರ್‌ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 18 ರನ್‌ಗಳ ಜಯ ಸಾಧಿಸಿತು. ಈ ಹಿಂದೆ ಆರ್‌ಸಿಬಿ ತವರಿನಲ್ಲಿ ಲಕ್ನೋ ವಿರುದ್ಧದ ವಿರೋಚಿತ ಸೋಲಿಗೆ ಸೇಡು ತೀರಿಸಿಕೊಂಡಿತು. ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಈ ಹಿಂದೆಯೂ ಹಲವು ಬಾರಿ ಜಗಳ ನಡೆದಿವೆ. ಆ ನಂತರ ಇಬ್ಬರ ನಡುವೆ ಉತ್ತಮ ಬಾಂಧವ್ಯವಿತ್ತು. ಆದರೆ ಅಂದು ನಡೆದ ಪಂದ್ಯದ ಬಳಿಕ ಇವರಿಬ್ಬರ ನಡುವಿನ ಜಗಳ ಅತಿರೇಕಕ್ಕೆ ತಲುಪಿತ್ತು. ಒಂದು ವೇಳೆ ಸಹ ಆಟಗಾರರು ಮಧ್ಯ ಬಾರದೇ ಇದ್ದಿದ್ದರೆ ಕೈಕೈ ಮಿಲಾಯಿಸುವುದಕ್ಕೂ ಕಾರಣವಾಗುತ್ತಿತ್ತು.

    ಅಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಎಲ್‌ಎಸ್‌ಜಿ ನಡುವಣ ಪಂದ್ಯದಲ್ಲಿ ಲಕ್ನೋ ತಂಡ 1 ವಿಕೆಟ್‌ಗಳ ಜಯ ದಾಖಲಿಸಿತ್ತು. ಆ ಪಂದ್ಯದ ಬಳಿಕ ಗಂಭೀರ್ ಬಾಯ್ಮೇಲೆ ಬೆರೆಳಿಟ್ಟು ಆರ್‌ಸಿಬಿ ಪ್ರೇಕ್ಷಕರು ಸುಮ್ಮನಿರುವಂತೆ ಸೂಚಿಸಿ ಸಂಭ್ರಮಿಸಿದ್ದರು. ಲಕ್ನೋ ತಂಡದ ಅವೇಶ್ ಖಾನ್ ಹೆಲ್ಮೆಟ್ ಕಿತ್ತೆಸೆದು ಅತಿರೇಖದ ವರ್ತನೆ ತೋರಿಸಿದ್ದರು. ಇದಕ್ಕೆ ಪ್ರತಿಯಾಗಿ ತವರಿನಲ್ಲಿ ಬುದ್ಧಿ ಕಲಿಸಲು ನಿರ್ಧರಿಸಿದ್ದ ಕೊಹ್ಲಿ ಪಂದ್ಯದ ನಡುವೆ ಅಭಿಮಾನಿಗಳು ಸುಮ್ಮನಿರಬಾರದು? ಹೃದಯತುಂಬಿ ಸಂಭ್ರಮಿಸಬೇಕು ಎಂದು ಸನ್ನೆ ಮೂಲಕ ತೋರಿಸಿದ್ದರು. ಇದನ್ನೂ ಓದಿ: ಲಂಕಾ ವಿರುದ್ಧ ಮೋಸದಾಟವಾಡಿತಾ ಪಾಕ್‌? – ಮತ್ತೆ ಮತ್ತೆ ಟೀಕೆಗೆ ಗುರಿಯಾಗ್ತಿರೋದೇಕೆ?

    127 ರನ್ ಗುರಿ ಬೆನ್ನತ್ತಿದ್ದ ಲಕ್ನೋ ತಂಡ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇನಿಂಗ್ಸ್ ಅಂತ್ಯದಲ್ಲಿ ಅಮಿತ್ ಮಿಶ್ರಾ 19 ರನ್ ಮತ್ತು ವೇಗಿ ನವೀನ್ ಉಲ್ ಹಕ್ 13 ನಡುವೆ ಸಣ್ಣ ಜೊತೆಯಾಟವೊಂದು ಮೂಡಿಬಂದಿತ್ತು. ಕವರ್ಸ್ ವಿಭಾಗದಲ್ಲಿ ಒಂದು ಫೋರ್ ಕೂಡ ಬಾರಿಸಿದ್ದ ನವೀನ್ ಉಲ್‌ಹಕ್‌ ಆರ್‌ಸಿಬಿ ಸ್ಟಾರ್‌ ವಿರಾಟ್ ಕೊಹ್ಲಿ ಅವರನ್ನ ದುರುಗುಟ್ಟಿ ನೋಡಿ, ದೊಡ್ಡ ಜಗಳಕ್ಕೆ ಸಣ್ಣ ಕಿಡಿ ಹಚ್ಚಿದ್ದರು. ಪಂದ್ಯ ಮುಗಿದ ಬಳಿಕ ನವೀನ್ ಮತ್ತು ಕೊಹ್ಲಿ ಕೈ ಕುಲುಕುವಾಗಲೂ ಮಾತಿನ ಚಕಮಕಿ ನಡೆದಿತ್ತು. ಕೈ-ಕೈ ಮಿಲಾಯಿಸುವುದಕ್ಕೂ ಮುಂದಾಗಿದ್ದರು. ಆದ್ರೆ ಮ್ಯಾಕ್ಸ್ವೆಲ್ ಹಾಗೂ ಹರ್ಷಲ್ ಪಟೇಲ್ ಸಮಾಧಾನಪಡಿಸಿ ಕಳುಹಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿತ್ತು ತಿನ್ನುವ ಬಡತನ, ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಯುವಕ ಈಗ ಟೀಂ ಇಂಡಿಯಾ ಆಟಗಾರ

    ಕಿತ್ತು ತಿನ್ನುವ ಬಡತನ, ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಯುವಕ ಈಗ ಟೀಂ ಇಂಡಿಯಾ ಆಟಗಾರ

    ಮುಂಬೈ: ಕಿತ್ತು ತಿನ್ನುವ ಬಡತನ, ಹಳ್ಳಿಯಲ್ಲೇ ಜೀವನ, ಅಪೌಷ್ಟಿಕತೆಯಿಂದ ಬಳಲುತ್ತಾ ಶಕ್ತಿ ಕಳೆದುಕೊಂಡಿದ್ದ ಬಿಹಾರ ಮೂಲದ ಯುವಕ ಮುಕೇಶ್‌ಕುಮಾರ್‌ (Mukesh Kumar) ಈಗ ಟೀಂ ಇಂಡಿಯಾ‌ (Team India) ಆಟಗಾರನಾಗಿ ಆಯ್ಕೆಯಾಗಿದ್ದಾರೆ.

    ಹೌದು. ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಕುಗ್ರಾಮದವರಾದ ಮುಖೇಶ್‌ ಕುಮಾರ್‌ ಹಳ್ಳಿಯಲ್ಲಿ ಹುಟ್ಟಿ-ಬೆಳೆದು ಬಡತನದಲ್ಲೇ ಜೀವನ ಸಾಗಿಸುತ್ತಿದ್ದರು. ಇದೀಗ ವೆಸ್ಟ್ ಇಂಡೀಸ್ ಸರಣಿಗೆ ಭಾರತ ತಂಡಕ್ಕೆ ಆಯ್ಕೆಯಾಗುವ ಮೂಲಕ ತಮ್ಮ ಹಲವು ವರ್ಷಗಳ ಕನಸನ್ನ ನನಸು ಮಾಡಿಕೊಂಡಿದ್ದಾರೆ.

    ಮುಖೇಶ್ ಕುಮಾರ್ ಅವರ ತಂದೆ ಕಾಶಿನಾಥ್ ಸಿಂಗ್ ಟ್ಯಾಕ್ಸಿ ಚಾಲಕರಾಗಿದ್ದರು. ಕುಟುಂಬದ ನಿರ್ವಹಣೆಗೆ ಸಾಕಷ್ಟು ಕಷ್ಟಪಟ್ಟಿದ್ದರು. ಮುಕೇಶ್‌ ಕುಮಾರ್‌ ಕ್ರಿಕೆಟ್‌ ಆಡುವುದು ಆರಂಭದಲ್ಲಿ ಅವರ ತಂದೆಗೆ ಇಷ್ಟವಿರಲಿಲ್ಲ. 2012ರಲ್ಲಿ ಕೋಲ್ಕತ್ತಾಗೆ ಬಂದ ಮುಖೇಶ್‌ ಕುಮಾರ್‌, ರಾತ್ರಿ ವೇಳೆ ಈಡನ್ ಗಾರ್ಡನ್ ಕ್ರಿಕೆಟ್ ಅಂಗಳದ ಸಮೀಪದ ಛತ್ರಗಳಲ್ಲೇ ಮಲಗುತ್ತಿದ್ದರು. ಆದ್ರೆ ಮೆದುಳು ರಕ್ತಸ್ರಾವದಿಂದ ಬಳಲುತ್ತಿದ್ದ ಮುಕೇಶ್‌ ತಂದೆ 2019ರಲ್ಲಿ ನಿಧನರಾಗಿದ್ದರು. ಇದನ್ನೂ ಓದಿ: SAFF Championship 2023: ಚೆಟ್ರಿ ಮ್ಯಾಜಿಕ್‌, ನೇಪಾಳ ವಿರುದ್ಧ 2-0 ಜಯ – ಸೆಮಿಫೈನಲ್‌ಗೆ ಭಾರತ

    ಶಕ್ತಿ ಕಳೆದುಕೊಂಡಿದ್ದರು:
    ಕಿತ್ತು ತಿನ್ನುವ ಬಡತನದ ನಡುವೆಯೂ ಕ್ರಿಕೆಟ್‌ (Cricket) ಲೋಕದಲ್ಲಿ ಮೈಲುಗಲ್ಲು ಸಾಧಿಸಬೇಕೆಂಬ ಕನಸು ಕಂಡಿದ್ದ ಮುಕೇಶ್‌ ಅಪೌಷ್ಟಿಕತೆಯಿಂದ ಬಳಲುತ್ತಿದ್ದರು. ಇದರಿಂದ ದೇಹದಲ್ಲಿ ಶಕ್ತಿ ಕುಂದಿತ್ತು. ಹಾಗಾಗಿ ಹಲವು ಪಂದ್ಯಗಳಲ್ಲಿ ಆಡುವ ಅವಕಾಶವನ್ನೂ ಅವರು ಕಳೆದುಕೊಂಡಿದ್ದರು. 2014ರ ಬೇಸಿಗೆ ಶಿಬಿರದಲ್ಲಿ ಮುಕೇಶ್‌ಗೆ ಅದೃಷ್ಟ ಒಲಿಯಿತು. ಮಾಜಿ ವೇಗಿ ರಾಮದೇವ್ ಬೋಸ್ ಅವರು ಕೊಟ್ಟ ಪ್ರೋತ್ಸಾಹ ಹಾಗೂ ಸತತ ಪರಿಶ್ರಮದ ಫಲದಿಂದ ಈಗ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ.

    ಈ ಕುರಿತು ಮಾತನಾಡಿರುವ ಮುಕೇಶ್‌, ನಾನು ಯಾವಾಗಲೂ ಟೀಂ ಇಂಡಿಯಾ ಪರ ಟೆಸ್ಟ್ ಪಂದ್ಯ (Test Cricket Match) ಆಡಬೇಕೆಂಬ ಕನಸು ಕಂಡಿದ್ದೆ.‌ ಈಗ ಆ ಸಮಯ ಬಂದಿದೆ. ನನ್ನ ಈ ಏಳಿಗೆಯನ್ನು ನಮ್ಮ ತಂದೆ ನೋಡಿದ್ದರೆ ನಿಜಕ್ಕೂ ಸಂತಸಪಡುತ್ತಿದ್ದರು ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ಪೂಜಾರ ಔಟ್‌, ಯಶಸ್ವಿ ಇನ್‌ – ವಿಂಡೀಸ್‌ ಸರಣಿಗೆ ಭಾರತ ಟೆಸ್ಟ್‌, ಏಕದಿನ ತಂಡ ಪ್ರಕಟ

    ದಾದಾಗೆ ಥ್ಯಾಂಕ್ಸ್‌ ಹೇಳಿದ ವೇಗಿ:
    ಮುಂದುವರಿದು… ನಮ್ಮ ಪೋಷಕರು, ಸ್ನೇಹಿತರು ಸದಾ ನನಗೆ ಬೆಂಬಲ ನೀಡುತ್ತಿದ್ದರು. ಬಂಗಾಳ ಕ್ರಿಕೆಟ್ ಸಂಸ್ಥೆಯ “ವಿಷನ್ 2020″ರ ಮೂಲಕ ಆಗಿನ ಕಾರ್ಯದರ್ಶಿ ಸೌರವ್ ಗಂಗೂಲಿ, ಜೋಗ್ ದೀಪ್ ( ಮುಖರ್ಜಿ) ಹಾಗೂ ನನ್ನ ಗುರುಗಳಾದ ರಾಮದೇವ್ ಬೋಸ್ ಅವರು ರೆಡ್ ಬಾಲ್ (ಟೆಸ್ಟ್) ಕ್ರಿಕೆಟ್‌ನಲ್ಲಿ ನನಗೆ ಸದಾ ಸಲಹೆ ನೀಡಿ ನೆರವು ನೀಡುತ್ತಿದ್ದರು. ಅವರು ಸಹಾಯವಿಲ್ಲದೆ ನಾನು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ನೆನೆದಿದ್ದಾರೆ.

    149 ವಿಕೆಟ್‌ ಕಿತ್ತ ಸಾಧನೆ:
    ಮುಖೇಶ್ ಈವರೆಗೆ ಆಡಿರುವ 39 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳಿಂದ 21.55ರ ಸರಾಸರಿಯಲ್ಲಿ 149 ವಿಕೆಟ್ ಪಡೆದಿದ್ದಾರೆ. ಅದರಲ್ಲಿ 6 ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. 24 ಲಿಸ್ಟ್ ʻAʼ ಪಂದ್ಯಗಳಲ್ಲಿ 26 ವಿಕೆಟ್ ಕಬಳಿಸಿದ್ದರು. 2018-19ನೇ ಸಾಲಿನಲ್ಲಿ ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಸಿಕ್ಕಿತು. ಈ ಅವಧಿಯಲ್ಲಿ ಪಶ್ಚಿಮ ಬಂಗಾಳದ ರಣಜಿ ಟೂರ್ನಿಯಲ್ಲಿ 5 ಪಂದ್ಯಗಳಲ್ಲಿ 22 ವಿಕೆಟ್‌ ಪಡೆಯುವ ಮೂಲಕ ಗುರುತಿಸಿಕೊಂಡಿದ್ದ ಮುಖೇಶ್, 2023ರ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ 10 ಪಂದ್ಯಗಳಿಂದ 7 ವಿಕೆಟ್ ಉಡೀಸ್‌ ಮಾಡಿದ್ದಾರೆ.

  • T20 ಕ್ರಿಕೆಟ್‌ನಲ್ಲಿ ಸಿಕ್ಸರ್‌ ಬ್ಲಾಸ್ಟ್‌ – ಒಂದೇ ಓವರ್‌ನಲ್ಲಿ 6,6,6,6,6 ಚಚ್ಚಿದ RCB ಸ್ಟಾರ್‌

    T20 ಕ್ರಿಕೆಟ್‌ನಲ್ಲಿ ಸಿಕ್ಸರ್‌ ಬ್ಲಾಸ್ಟ್‌ – ಒಂದೇ ಓವರ್‌ನಲ್ಲಿ 6,6,6,6,6 ಚಚ್ಚಿದ RCB ಸ್ಟಾರ್‌

    ಲಂಡನ್‌: RCB ತಂಡದ ಸ್ಟಾರ್‌ ಆಟಗಾರ ಹಾಗೂ ಇಂಗ್ಲೆಂಡ್‌ (England) ತಂಡದ ಆಲ್‌ರೌಂಡರ್‌ ಆಗಿರುವ ವಿಲ್ ಜ್ಯಾಕ್ಸ್ (Will Jacks) ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್‌ ಟೂರ್ನಿಯಲ್ಲಿ ಒಂದೇ ಓವರ್‌ನಲ್ಲಿ 5 ಭರ್ಜರಿ ಸಿಕ್ಸರ್‌ ಸಿಡಿಸುವ ಮೂಲಕ ಗಮನ ಸೆಳೆದಿದ್ದಾರೆ.

    2023ರ 16ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ (IPL 2023) ಆರ್‌ಸಿಬಿ ತಂಡದಲ್ಲಿ ಕಣಕ್ಕಿಳಿಯಬೇಕಿದ್ದ ವೀಲ್‌ ಜ್ಯಾಕ್ಸ್‌ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರಗುಳಿದರು. ಬಳಿಕ ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡು ಟಿ20 ಬ್ಲಾಸ್ಟ್‌ ಟೂರ್ನಿಯಲ್ಲಿ ಸರ್ರೆ (Surrey) ತಂಡ ಪ್ರತಿನಿಧಿಸಿರುವ ಜ್ಯಾಕ್ಸ್‌ ಎದುರಾಳಿ ಮಿಡ್ಲ್‌ಎಸೆಕ್ಸ್‌ (Middlesex) ತಂಡದ ವಿರುದ್ಧ ಒಂದೇ ಓವರ್‌ನಲ್ಲಿ ಭರ್ಜರಿ 5 ಸಿಕ್ಸರ್‌ ಚಚ್ಚಿದರು.

    ಮಿಡ್ಲ್‌ಎಸೆಕ್ಸ್‌ ವಿರುದ್ಧದ ಪಂದ್ಯದಲ್ಲಿ 11ನೇ ಓವರ್‌ನಲ್ಲಿ ಲೂಕ್ ಹೋಲ್‌ಮನ್ ಬೌಲಿಂಗ್‌ಗೆ ಜ್ಯಾಕ್ಸ್ ಸತತ 5 ಸಿಕ್ಸರ್ ಸಿಡಿಸಿದರು. 6ನೇ ಎಸೆತವನ್ನ ಹೈ ಫುಲ್‌ ಟಾಸ್ ಹಾಕಿದ್ದರಿಂದ ಆ ಎಸೆತವನ್ನು ಎದುರಿಸುವಲ್ಲಿ ಜ್ಯಾಕ್ಸ್‌ ವಿಫಲರಾಗಿ, 6 ಎಸೆತಗಳಲ್ಲಿ 6 ಸಿಕ್ಸರ್‌ ಚಚ್ಚುವ ಅವಕಾಶದಿಂದ ವಂಚಿತರಾದರು. ಈ ಪಂದ್ಯದಲ್ಲಿ ಒಟ್ಟು 45 ಎಸೆತಗಳನ್ನ ಎದುರಿಸಿದ ಜ್ಯಾಕ್ಸ್‌ ಸ್ಫೋಟಕ 96 ರನ್‌ ಚಚ್ಚಿದರು. ಈಗಾಗಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್, ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಹರ್ಷಲ್ ಗಿಬ್ಸ್, ವೆಸ್ಟ್‌ ಇಂಡೀಸ್ ತಂಡದ ಮಾಜಿ ನಾಯಕ ಕೀರನ್ ಪೊಲ್ಲಾರ್ಡ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸತತ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. 2023ರ ಐಪಿಎಲ್‌ ಆವೃತ್ತಿಯಲ್ಲಿ ಕೆಕೆಆರ್‌ ತಂಡದ ಆಟಗಾರ ರಿಂಕು ಸಿಂಗ್‌ ಒಂದೇ ಓವರ್‌ನಲ್ಲಿ 5 ಸಿಕ್ಸರ್‌ ಸಿಡಿಸಿ ಮಿಂಚಿದ್ದರು.

    16ನೇ ಆವೃತ್ತಿಯ ಐಪಿಎಲ್‌ನಲ್ಲಿ ಆಟಗಾರರ ಹರಾಜಿನ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 3.2 ಕೋಟಿ ರೂ.ಗೆ ವಿಲ್‌ ಜ್ಯಾಕ್ಸ್‌ನನ್ನ ಖರೀದಿಸಿತ್ತು. ಆದ್ರೆ ಟೂರ್ನಿ ಆರಂಭಕ್ಕೂ ಮುನ್ನವೇ ವಿಲ್‌ ಜ್ಯಾಕ್ಸ್‌ ಸ್ನಾಯು ಸೆಳೆತ ಸಮಸ್ಯೆಗೆ ಒಳಗಾಗಿದ್ದರಿಂದ ಐಪಿಎಲ್ ಟೂರ್ನಿಯಿಂದಲೇ ಹೊರಗುಳಿದರು.

    ಚೇಸಿಂಗ್‌ ದಾಖಲೆ ಬರೆದ ಮಿಡ್ಲ್‌ಎಸೆಕ್ಸ್‌:
    ಟಿ20 ಬ್ಲಾಸ್ಟ್‌ ಕ್ರಿಕೆಟ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸರ್ರೆ ತಂಡ 20 ಓವರ್‌ಗಳಲ್ಲಿ 252 ರನ್‌ ಪೇರಿಸಿತ್ತು. ಈ ಗುರಿ ಬೆನ್ನತ್ತಿದ ಮಿಡ್ಲ್‌ಎಸೆಕ್ಸ್‌ ತಂಡ 19.2 ಓವರ್‌ಗಳಲ್ಲೇ 254 ರನ್‌ ಪೇರಿಸಿ ಗೆಲುವು ದಾಖಲಿಸಿತು. ಸಿಕ್ಸರ್‌, ಬೌಂಡರಿಗಳ ಆಟದಲ್ಲಿ 236 ಎಸೆತಗಳಲ್ಲಿ ಬರೋಬ್ಬರಿ 506 ರನ್‌ ಗಳು ದಾಖಲಾಯಿತು. ಅಲ್ಲದೇ ಟಿ20 ಕ್ರಿಕೆಟ್‌ ನಲ್ಲಿ ಚೇಸಿಂಗ್‌ನಲ್ಲಿ ಅತಿಹೆಚ್ಚು ರನ್‌ ಸಿಡಿಸಿದ ದಾಖಲೆಯನ್ನೂ ಮಿಡ್ಲ್‌ಎಸೆಕ್ಸ್‌ ತಂಡ ಬರೆಯಿತು.

  • ಮೊಬೈಲ್ ಆ್ಯಪ್ ಬಳಕೆದಾರರಿಗೆ ಗುಡ್‌ನ್ಯೂಸ್ ಕೊಟ್ಟ Hotstar – ವಿಶ್ವಕಪ್, ಏಷ್ಯಾಕಪ್ ಟೂರ್ನಿ ವೀಕ್ಷಣೆ ಫ್ರೀ

    ಮೊಬೈಲ್ ಆ್ಯಪ್ ಬಳಕೆದಾರರಿಗೆ ಗುಡ್‌ನ್ಯೂಸ್ ಕೊಟ್ಟ Hotstar – ವಿಶ್ವಕಪ್, ಏಷ್ಯಾಕಪ್ ಟೂರ್ನಿ ವೀಕ್ಷಣೆ ಫ್ರೀ

    ಮುಂಬೈ: ಮೊಬೈಲಿನಲ್ಲಿ ಕ್ರಿಕೆಟ್ ವೀಕ್ಷಿಸುವ ಬಳಕೆದಾರರಿಗೆ ಡಿಸ್ನಿ ಹಾಟ್‌ಸ್ಟಾರ್ (Disney Hotstar) ಸಿಹಿ ಸುದ್ದಿ ಕೊಟ್ಟಿದೆ. ಪ್ರಸಕ್ತ ವರ್ಷದಲ್ಲೇ ನಡೆಯಲಿರುವ ಏಕದಿನ ಏಷ್ಯಾಕಪ್ (Asia Cup 2023) ಹಾಗೂ ಏಕದಿನ ವಿಶ್ವಕಪ್ ಟೂರ್ನಿಗಳನ್ನ (ICC Cricket World Cup) ಮೊಬೈಲ್ ಆ್ಯಪ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.

    2023ರಲ್ಲಿ ನಡೆದ 16ನೇ ಐಪಿಎಲ್ ಆವೃತ್ತಿಯಲ್ಲಿ ಜಿಯೋಸಿನಿಮಾ (JioCinema) ಆ್ಯಪ್ ಕ್ರಿಕೆಟ್ ಅಭಿಮಾನಿಗಳಿಗೆ ಉಚಿತ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟು ಸಕ್ಸಸ್ ಕಂಡಿತು. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಫೈನಲ್ ಪಂದ್ಯವನ್ನ 3.2 ಕೋಟಿ ಜನ ಏಕಕಾಲಕ್ಕೆ ವೀಕ್ಷಣೆ ಮಾಡಿದ್ದರು. ಇದು ಈ ಹಿಂದಿನ ಎಲ್ಲಾ ದಾಖಲೆಗಳನ್ನ ಉಡೀಸ್ ಮಾಡಿತು. ಹಾಗಾಗಿ ಪ್ರತಿಸ್ಪರ್ಧಿ ಡಿಸ್ನಿ ಹಾಟ್‌ಸ್ಟಾರ್ 2023ರಲ್ಲಿ ನಡೆಯಲಿರುವ ಏಕದಿನ ಏಷ್ಯಾಕಪ್ ಹಾಗೂ ಐಸಿಸಿ ಪುರುಷರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಉಚಿತವಾಗಿ ವೀಕ್ಷಿಸಲು ಬಳಕೆದಾರರಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಹೇಳಿದೆ.

    ಅಕ್ಟೋಬರ್ 5 ರಿಂದ ನವೆಂಬರ್ 19ರ ವರೆಗೆ ಏಕದಿನ ವಿಶ್ವಕಪ್ ನಡೆಯಲಿದೆ. ಸೆಪ್ಟಂಬರ್ 2 ರಿಂದ ಸೆಪ್ಟಂಬರ್ 17ರ ವರೆಗೆ ಏಕದಿನ ಏಷ್ಯಾಕಪ್ ಟೂರ್ನಿ ನಡೆಯಲಿದೆ. ಏಕದಿನ ಏಷ್ಯಾಕಪ್ ಶ್ರೀಲಂಕಾದಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ. ಈ ಟೂರ್ನಿಗಳನ್ನ ಹಾಟ್‌ಸ್ಟಾರ್ ಮೊಬೈಲ್ ಆ್ಯಪ್ ಬಳಕೆದಾರರು ಚಂದಾದಾರರಾಗದೆಯೂ ಉಚಿತವಾಗಿ ವೀಕ್ಷಿಸಬಹುದಾಗಿದೆ. ಇದನ್ನೂ ಓದಿ:  Record… Record… Record: ಫೈನಲ್‌ ಮ್ಯಾಚ್‌ನಲ್ಲಿ ಎಲ್ಲಾ ದಾಖಲೆ ಉಡೀಸ್‌ – ಜಿಯೋಸಿನಿಮಾದಲ್ಲಿ ಏಕಕಾಲಕ್ಕೆ 3.2 ಕೋಟಿ ಜನ ವೀಕ್ಷಣೆ

    2023ರ ಐಪಿಎಲ್ ಟೂರ್ನಿ ವೇಳೆ ಜಿಯೋಸಿನಿಮಾ ಮೊದಲ 5 ವಾರಗಳಲ್ಲೇ ದಾಖಲೆಯ 13 ಕೋಟಿ ಡಿಜಿಟಲ್ ವೀಕ್ಷಣೆ ಕಂಡಿತ್ತು. ಪ್ರತಿ ವೀಕ್ಷಕರು ಪ್ರತಿ ಪಂದ್ಯವನ್ನು ಕನಿಷ್ಠ 1 ಗಂಟೆ ವೀಕ್ಷಣೆ ಮಾಡಿದ್ದರು. 2023ರ ಐಪಿಎಲ್ ಹಕ್ಕು ಕಳೆದುಕೊಂಡ ನಂತರ ಹಾಟ್‌ಸ್ಟಾರ್ ಆ್ಯಪ್ ತನ್ನ 50 ಲಕ್ಷ ಮೂಲ ಬಳಕೆದಾರರನ್ನ ಕಳೆದುಕೊಂಡಿದೆ ಎಂದು ಸಿಎಲ್‌ಎಸ್‌ಎ ಸಂಶೋಧನಾ ಸಂಸ್ಥೆ ಅಂದಾಜಿಸಿದೆ. ಈ ಹಿನ್ನೆಲೆಯಲ್ಲಿ ಡಿಸ್ನಿ ಹಾಟ್‌ಸ್ಟಾರ್ ಸಹ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಟೂರ್ನಿಗಳನ್ನ ಮೊಬೈಲ್ ಆ್ಯಪ್ ಬಳಕೆದಾರಿಗೆ ಉಚಿತ ಸ್ಟ್ರೀಮಿಂಗ್ ನೀಡಲು ನಿರ್ಧರಿಸಿದೆ. ಇದನ್ನೂ ಓದಿ: ಆಸೀಸ್‌ ಮಾರಕ ಬೌಲಿಂಗ್‌ಗೆ ಟಾಪ್‌ ಬ್ಯಾಟರ್‌ಗಳು ಪಲ್ಟಿ – 318 ರನ್‌ಗಳ ಹಿನ್ನಡೆಯಲ್ಲಿ ಭಾರತ

    ಈ ಕುರಿತು ಪ್ರತಿಕ್ರಿಯಿಸಿರುವ ವಿಶ್ಲೇಷಕ ಕರಣ್ ತೌರಾನಿ, ಉಚಿತ ಕೊಡುಗೆಗಳು ದೀರ್ಘಾವಧಿಯಾಗಿ ಮುಂದುವರಿದರೇ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ಗಳಿಗೆ ನಷ್ಟ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.

  • ಚೆನ್ನೈ ಟೀಮ್ ಗೆದ್ದ ಖುಷಿಯಲ್ಲಿ ಸಾಕ್ಷಿ ಧೋನಿ ಜೊತೆ ವಿಘ್ನೇಶ್ ಶಿವನ್ ಪೋಸ್

    ಚೆನ್ನೈ ಟೀಮ್ ಗೆದ್ದ ಖುಷಿಯಲ್ಲಿ ಸಾಕ್ಷಿ ಧೋನಿ ಜೊತೆ ವಿಘ್ನೇಶ್ ಶಿವನ್ ಪೋಸ್

    ಕಾಲಿವುಡ್ ನಿರ್ದೇಶಕ ವಿಘ್ನೇಶ್ ಶಿವನ್ (Vignesh Shivan) ಅವರು IPLನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಟೀಮ್ ಗೆದ್ದ ಖುಷಿಯಲ್ಲಿದ್ದಾರೆ. ಈ ಖುಷಿಯನ್ನು ಧೋನಿ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಸಂಭ್ರಮಿಸಿದ್ದಾರೆ. ಈ ಕುರಿತ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ನಿರ್ದೇಶಕ ವಿಘ್ನೇಶ್ ಶೇರ್ ಮಾಡಿದ್ದಾರೆ.

     

    View this post on Instagram

     

    A post shared by Vignesh Shivan (@wikkiofficial)

    ತಮಿಳಿನ ಸಾಕಷ್ಟು ಸಿನಿಮಾಗಳಿಗೆ ನಿರ್ದೇಶನ ಮಾಡುವ ಮೂಲಕ ಸೈ ಎನಿಸಿಕೊಂಡಿರುವ ವಿಘ್ನೇಶ್ ಶಿವನ್ ಅವರು ಸದ್ಯ ಹೊಸ ಸಿನಿಮಾ ಸ್ಕ್ರೀಪ್ಟ್‌ ಕಡೆ ಗಮನ ವಹಿಸುತ್ತಿದ್ದಾರೆ. ನಟ ಅಜಿತ್‌ಗೆ ನಿರ್ದೇಶನ ಮಾಡೋದ್ದಕ್ಕೆ ಎಲ್ಲಾ ಫೈನಲ್ ಆಗಿತ್ತು. ಕೊನೆಯ ಹಂತದಲ್ಲಿ ಕಥೆ ಬದಲಾವಣೆ ಕೇಳಿದ್ದರಿಂದ ವಿಘ್ನೇಶ್, ಅಜಿತ್ ಸಿನಿಮಾವನ್ನು ಕೈಬಿಟ್ಟರು. ಇದನ್ನೂ ಓದಿ:ಖಾಸಗಿ ಫೋಟೋ ಹಂಚಿಕೊಂಡ ಮಲೈಕಾ: ನಟ ಅರ್ಜುನ್ ಗರಂ

     

    View this post on Instagram

     

    A post shared by Vignesh Shivan (@wikkiofficial)

    ವಿಘ್ನೇಶ್ ಶಿವನ್ ಅವರು ಕ್ರಿಕೆಟ್ ವಿಚಾರದಲ್ಲಿ ಸಿಕ್ಕಾಪಟ್ಟೆ ಕ್ರೇಜಿ. ಇದೀಗ ನಿನ್ನೆ (ಮೇ.29) ನಡೆದ ಮ್ಯಾಚ್‌ನಲ್ಲಿ ಗುಜರಾತ್ ಟೈಟಾನ್ ವಿರುದ್ಧ ಚೆನ್ನೈಸೂಪರ್ ಕಿಂಗ್ಸ್ ತಂಡ ಗೆದ್ದಿದ್ದಾರೆ. ವಿಘ್ನೇಶ್ ನೆಚ್ಚಿನ ಟೀಮ್ ಚೆನ್ನೈ ಗೆದ್ದಿದ್ದಕ್ಕೆ ಸಂಭ್ರಮಿಸಿದ್ದಾರೆ. ಇದೇ ಖುಷಿಯಲ್ಲಿ ಕ್ರಿಕೆಟಿಗ ಧೋನಿ ಪತ್ನಿ ಸಾಕ್ಷಿ (Sakshi Dhoni) ಜೊತೆ ವಿಘ್ನೇಶ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

     

    View this post on Instagram

     

    A post shared by Vignesh Shivan (@wikkiofficial)

    ಕೆಲದಿನಗಳ ಹಿಂದೆ ಪತ್ನಿ ನಯನತಾರಾ ಜೊತೆ ವಿಘ್ನೇಶ್ ಶಿವನ್ IPL ಮ್ಯಾಚ್ ವೀಕ್ಷಿಸಿದ್ದರು. ಆದರೆ ಬಾರಿ ನಯನತಾರಾ ಮಿಸ್ಸಿಂಗ್. ಸ್ನೇಹಿತರ ಜೊತೆ ವಿಘ್ನೇಶ್ ಶಿವನ್ ಕ್ರಿಕೆಟ್ ಮ್ಯಾಚ್ ನೋಡಿ ಎಂಜಾಯ್ ಮಾಡಿದ್ದಾರೆ.

  • ಐಪಿಎಲ್‌ಗೆ ಗುಡ್‌ ಬೈ ಹೇಳಿದ CSK ಸ್ಟಾರ್‌ ಅಂಬಾಟಿ ರಾಯುಡು

    ಐಪಿಎಲ್‌ಗೆ ಗುಡ್‌ ಬೈ ಹೇಳಿದ CSK ಸ್ಟಾರ್‌ ಅಂಬಾಟಿ ರಾಯುಡು

    ಅಹ್ಮದಾಬಾದ್: ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡದ ಸ್ಟಾರ್‌ ಆಟಗಾರ ಅಂಬಾಟಿ ರಾಯುಡು (37) (Ambati Rayudu) ಐಪಿಎಲ್‌ ವೃತ್ತಿಬದುಕಿಗೆ ವಿದಾಯ ಹೇಳಿದ್ದಾರೆ.

    ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಗುಜರಾತ್‌ ಟೈಟಾನ್ಸ್‌ (GT) ಫೈನಲ್‌ ಪಂದ್ಯವು ತಮ್ಮ ವೃತ್ತಿ ಜೀವನದ ಕೊನೆಯ ಪಂದ್ಯವಾಗಿರಲಿದೆ ಎಂದು‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: IPL 2023 Finals: ಕ್ಲೈಮ್ಯಾಕ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ – ಪಂದ್ಯ ರದ್ದಾದ್ರೆ ಕಥೆ ಏನು?

    5 ಬಾರಿ ಚಾಂಪಿಯನ್ಸ್‌ ಪಟ್ಟ ಗಿಟ್ಟಿಸಿಕೊಂಡಿರುವ ಮುಂಬೈ ಇಂಡಿಯನ್ಸ್‌ (MI) ಹಾಗೂ 4 ಬಾರಿ ಚಾಂಪಿಯನ್‌ ಪಟ್ಟ ಗೆದ್ದಿರುವ ಚೆನ್ನೈ ಸೂಪರ್‌ ಕಿಂಗ್ಸ್‌ನಂತಹ ಬಲಿಷ್ಠ ತಂಡಗಳನ್ನ ಪ್ರತಿನಿಧಿಸಿದ್ದ ಅಂಬಟಿ ರಾಯುಡು 14 ಆವೃತ್ತಿಯಲ್ಲಿ 204 ಪಂದ್ಯಗಳನ್ನಾಡಿದ್ದಾರೆ. 11 ಬಾರಿ ಪ್ಲೇ ಆಫ್ಸ್‌, 8 ಬಾರಿ ಫೈನಲ್ಸ್‌ ಪ್ರವೇಶಿಸಿದ್ದು ಮತ್ತು 5 ಟ್ರೋಫಿಗಳು. ಇದೀಗ 6ನೇ ಟ್ರೋಫಿ ಗೆಲ್ಲುವ ಅವಕಾಶ ಸಿಗಲಿ ಎಂಬ ಆಶಯದಲ್ಲಿದ್ದೇನೆ. ಇದೊಂದು ಅಮೋಘ ಪಯಣ. ಈ ಬಾರಿ ಐಪಿಎಲ್‌ ಫೈನಲ್‌ ನನ್ನ ಅಂತಿಮ ಐಪಿಎಲ್‌ ಪಂದ್ಯ ಎಂದು ನಿರ್ಧರಿಸಿದ್ದೇನೆ. ಈ ಅದ್ಭುತ ಟೂರ್ನಿಯಲ್ಲಿ ಆಡುವುದನ್ನು ಬಹಳ ಆನಂದಿಸಿದ್ದೇನೆ. ಎಲ್ಲರಿಗೂ ಧನ್ಯವಾದ. ಇಲ್ಲಿ ಯೂ ಟರ್ನ್ ಇಲ್ಲವೇ ಇಲ್ಲʼ ಎಂದು ಭಾವುಕವಾಗಿ ಬರೆದುಕೊಂಡಿದ್ದಾರೆ.

    2010ರಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ಮೂಲಕ ಐಪಿಎಲ್‌ ಪ್ರವೇಶಿಸಿದ ರಾಯುಡು, 2013ರಲ್ಲಿ ತಂಡದೊಂದಿಗೆ ಮೊದಲ ಟ್ರೋಫಿಗೆ ಮುತ್ತಿಟ್ಟಿದ್ದರು. 2015, 2017ರಲ್ಲೂ ಟ್ರೋಫಿ ಗೆದ್ದ ಸಾಧನೆ ಮಾಡಿದ್ದರು. ಆ ನಂತರ ಹರಾಜಿನಲ್ಲಿ ಸಿಎಸ್‌ಕೆ ತಂಡದ ಪಾಲಾದರು. ಸಿಎಸ್‌ಕೆ ಪರವೂ 2018, 2021ರ ಆವೃತ್ತಿಗಳಲ್ಲಿ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದ್ರೆ 2023ರ ಆವೃತ್ತಿಯಲ್ಲಿ ಬ್ಯಾಟಿಂಗ್‌ ಫಾರ್ಮ್‌ ಕಳೆದುಕೊಂಡಿದ್ದರಿಂದ ಪ್ರತಿ ಇನ್ನಿಂಗ್ಸ್‌ನಲ್ಲೂ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿಯೇ ಕಣಕ್ಕಿಳಿದರು. ಈ ಬಾರಿ ಆಡಿದ ಒಟ್ಟು 15 ಪಂದ್ಯಗಳಲ್ಲಿ ರಾಯುಡು 132.38ರ ಸ್ಟ್ರೈಕ್‌ರೇಟ್‌ನಲ್ಲಿ ಕೇವಲ 139 ರನ್‌ ಮಾತ್ರವೇ ಗಳಿಸಿದ್ದಾರೆ.

    ambati rayudu

    ಯಶಸ್ವಿ ಆಟಗಾರ:
    ಯಾವುದೇ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ಗೆ ಆನೆ ಬಲ ತಂದುಕೊಡಬಲ್ಲ ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಅಂಬಾಟಿ ರಾಯುಡು, ಐಪಿಎಲ್‌ ಕೆರಿಯರ್‌ನಲ್ಲಿ ಈವರೆಗೆ ಆಡಿದ 203 ಪಂದ್ಯಗಳಲ್ಲಿ ಬರೋಬ್ಬರಿ 4,329 ರನ್‌ಗಳನ್ನು ಬಾರಿಸಿದ್ದಾರೆ. ಇದರಲ್ಲಿ 22 ಅರ್ಧಶತಕಗಳು ಮತ್ತು ಏಕೈಕ ಶತಕವಿದೆ. ಇದನ್ನೂ ಓದಿ: IPL 2023 Finals: ಗಿಲ್‌ ಅಬ್ಬರಕ್ಕೆ ಮುಂಬೈ ಬರ್ನ್‌ – 2ನೇ ಬಾರಿಗೆ ಗುಜರಾತ್‌ ಟೈಟಾನ್ಸ್‌ ಫೈನಲ್‌ಗೆ

    ಟೀಮ್ ಇಂಡಿಯಾದಲ್ಲಿ ನೋ ಚಾನ್ಸ್‌:
    ಐಪಿಎಲ್‌ 2018 ಟೂರ್ನಿಯಲ್ಲಿ ನೀಡಿದ್ದ ಶ್ರೇಷ್ಠ ಪ್ರದರ್ಶನದ ಫಲವಾಗಿ ಟೀಂ ಇಂಡಿಯಾದಲ್ಲೂ ಸ್ಥಾನ ಪಡೆದಿದ್ದ ಅಂಬಾಟಿ ರಾಯುಡು, ಒಡಿಐ ಮತ್ತು ಟಿ20-ಐನಲ್ಲಿ ಸಿಕ್ಕ ಬೆರಳೆಣಿಕೆಯ ಅವಕಾಶಗಳಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದರು. ಆದರೂ ಅವರಿಗೆ ದೀರ್ಘಕಾಲದ ಅವಕಾಶ ಸಿಗದೇ ಹೋದದ್ದು ದುರದೃಷ್ಟವೇ ಸರಿ. 2019 ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲೂ ರಾಯುಡುಗೆ ಟೀಂ ಇಂಡಿಯಾದಲ್ಲಿ ಸ್ಥಾನ ನಿರಾಕರಿಸಲಾಯಿತು.

  • IPL 2023 Finals: ಗಿಲ್‌ ಅಬ್ಬರಕ್ಕೆ ಮುಂಬೈ ಬರ್ನ್‌ – 2ನೇ ಬಾರಿಗೆ ಗುಜರಾತ್‌ ಟೈಟಾನ್ಸ್‌ ಫೈನಲ್‌ಗೆ

    IPL 2023 Finals: ಗಿಲ್‌ ಅಬ್ಬರಕ್ಕೆ ಮುಂಬೈ ಬರ್ನ್‌ – 2ನೇ ಬಾರಿಗೆ ಗುಜರಾತ್‌ ಟೈಟಾನ್ಸ್‌ ಫೈನಲ್‌ಗೆ

    ಅಹಮದಾಬಾದ್‌: ಶುಭಮನ್‌ ಗಿಲ್‌ ಸ್ಫೋಟಕ ಶತಕದ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದ ಗುಜರಾತ್‌ ಟೈಟಾನ್ಸ್‌ ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ 62 ರನ್‌ಗಳ ಭರ್ಜರಿ ಜಯದೊಂದಿಗೆ ಸತತ 2ನೇ ಬಾರಿಗೆ ಐಪಿಎಲ್‌ನಲ್ಲಿ ಫೈನಲ್‌ ಪ್ರವೇಶಿಸಿದೆ. ಇನ್ನೂ 5 ಬಾರಿ ಚಾಂಪಿಯನ್ಸ್‌ ಪಟ್ಟಕ್ಕೇರಿದ್ದ ಮುಂಬೈ ಇಂಡಿಯನ್ಸ್‌ ಸೋಲಿನೊಂದಿಗೆ 2023ರ ಐಪಿಎಲ್‌ ಆವೃತ್ತಿಗೆ ವಿದಾಯ ಹೇಳಿದೆ.

    2022ರ ಆವೃತ್ತಿಯಲ್ಲಿ ಐಪಿಎಲ್‌ ಪ್ರವೇಶಿಸಿದ ಹಾರ್ದಿಕ್‌ ಪಾಂಡ್ಯ ನಾಯಕತ್ವದ ಗುಜರಾತ್‌ ಟೈಟಾನ್ಸ್‌ ತಂಡ ಸತತ 2ನೇ ಬಾರಿಗೆ ಐಪಿಎಲ್‌ನಲ್ಲಿ ಫೈನಲ್‌ ತಲುಪಿದೆ. ಸೂಪರ್‌ ಸಂಡೇನಲ್ಲಿ (ಮೇ 28) ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೆಣಸಲಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟಾನ್ಸ್‌ 20 ಓವರ್‌ಗಳಲ್ಲಿ 20 ಓವರ್‌ಗಳಲ್ಲಿ 233 ರನ್‌ ಗಳಿಸಿತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ 18.2 ಓವರ್‌ಗಳಲ್ಲಿ 171 ರನ್‌ಗಳಿಗೆ ಸರ್ವಪತನ ಕಂಡಿತು.

    ಚೇಸಿಂಗ್‌ ಆರಂಭಿಸಿದ ಮುಂಬೈ ಇಂಡಿಯನ್ಸ್‌ ಆರಂಭದಲ್ಲೇ ರೋಹಿತ್‌ ಶರ್ಮಾ ಹಾಗೂ ನೆಹಾಲ್‌ ವಧೇರಾ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿತ್ತು. ನಂತರ ಕಣಕ್ಕಿಳಿದ ‌14 ಎಸೆತಗಳಲ್ಲಿ ವರ್ಮಾ 307.14 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿ ಸ್ಫೋಟಕ 43 ರನ್‌ (5 ಬೌಂಡರಿ, 3 ಸಿಕ್ಸರ್‌) ಚಚ್ಚಿ ತಂಡಕ್ಕೆ ಚೇತರಿಕೆ ತಂದರು.

    ನಂತರ 4ನೇ ವಿಕೆಟ್‌ಗೆ ಜೊತೆಯಾದ ಕ್ಯಾಮರೂನ್‌ ಗ್ರೀನ್‌ ಹಾಗೂ ಸೂರ್ಯಕುಮಾರ್‌ ಯಾದವ್‌ ಜೋಡಿ 32 ಎಸೆತಗಳಲ್ಲಿ 52 ರನ್‌ ಜೊತೆಯಾಟ ನೀಡಿತ್ತು. ಅಷ್ಟರಲ್ಲೇ 20 ಎಸೆತಗಳಲ್ಲಿ 30 ರನ್‌ (2 ಸಿಕ್ಸರ್‌, 2 ಬೌಂಡರಿ) ಗಳಿಸಿದ್ದ ಗ್ರೀನ್‌ ವಿಕೆಟ್‌ ಕೈಚೆಲ್ಲಿ ನಿರಾಸೆ ಮೂಡಿಸಿದರು. ಇನ್ನೂ ಅರ್ಧಶತಕ ಗಳಿಸಿ ಸ್ಫೋಟಕ ಬ್ಯಾಟಿಂಗ್‌ ಮಾಡುತ್ತಿದ್ದ ಸೂರ್ಯಕುಮಾರ್‌ ಯಾದವ್‌, ತಂಡಕ್ಕೆ ಗೆಲುವು ತಂದುಕೊಡುತ್ತಾರೆ ಎಂಬ ನಿರೀಕ್ಷೆಯಿತ್ತು. ಆದ್ರೆ ಬೇಡದ ಶಾಟ್‌ ಹೊಡೆಯಲು ಯತ್ನಿಸಿ ಸೂರ್ಯ ಕ್ಲೀನ್‌ ಬೌಲ್ಡ್‌ ಆಗಿ ತಂಡದ ಗೆಲುವಿನ ಕನಸನ್ನ ನುಚ್ಚು ನೂರು ಮಾಡಿದರು.

    ಸೂರ್ಯಕುಮಾರ್‌ ಯಾದವ್‌ 61 ರನ್‌ (38 ಎಸೆತ, 7 ಬೌಂಡರಿ, 2 ಸಿಕ್ಸರ್‌) ಗಳಿಸಿ ಔಟಾಗುತ್ತಿದ್ದಂತೆ ವಿಷ್ಣು ವಿನೋದ್‌ 5 ರನ್‌ ಗಳಿಸಿ ಔಟಾದರು. ಕೊನೆಯಲ್ಲಿ ಟಿಮ್‌ ಡೇವಿಡ್‌ 2 ರನ್‌, ಕ್ರಿಸ್‌ ಜೋರ್ಡಾನ್‌ 2 ರನ್‌ ಗಳಿಸಿದರೆ ಪಿಯೂಷ್‌ ಚಾವ್ಲಾ ಶೂನ್ಯಕ್ಕೆ ನಿರ್ಗಮಿಸಿದರು. ಕುಮಾರ್‌ ಕಾರ್ತಿಕೇಯನ್‌ 6 ರನ್‌ ಗಳಿಸಿ ಔಟಾದರೆ, ಜೇಸನ್ ಬೆಹ್ರೆನ್ಡಾರ್ಫ್ 3 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟಾನ್ಸ್‌ತಂಡ ಉತ್ತಮ ಆರಂಭ ಪಡೆಯುವಲ್ಲಿ ವಿಫಲರಾದರೂ ಬಳಿಕ ಆಕ್ರಮಣಕಾರಿ ಬ್ಯಾಟಿಂಗ್‌ನಿಂದ ಬೃಹತ್‌ ಮೊತ್ತ ದಾಖಲಿಸಿತು. 6.3 ಓವರ್‌ಗಳಲ್ಲಿ 54 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡರು. 2ನೇ ವಿಕೆಟ್‌ಗೆ 16.5 ಓವರ್‌ಗಳಲ್ಲಿ ತಂಡದ ಮೊತ್ತ 192ಕ್ಕೆ ಏರಿತ್ತು.

    ಶುಭಮನ್‌ ಗಿಲ್‌ ಸ್ಫೋಟಕ ಶತಕದಾಟಕ್ಕೆ ಮುಂಬೈ ಬೌಲರ್‌ಗಳು ಕಂಗಾಲಾಗಿದ್ದರು. ಸಾಯಿ ಸುದರ್ಶನ್‌ ಹಾಗೂ ಶುಭಮನ್‌ ಗಿಲ್‌ ಜೋಡಿ 64 ಎಸೆತಗಳಲ್ಲಿ 138 ರನ್‌ ಗಳಿಸಿತ್ತು. ಮೊದಲ 32 ಎಸೆತಗಳಲ್ಲಿ 50 ರನ್‌ ಗಳಿಸಿದ್ದ ಗಿಲ್‌, ಮುಂದಿನ 17 ಎಸೆತಗಳಲ್ಲಿ 50 ರನ್‌ ಚಚ್ಚಿ ಶತಕ ಪೂರೈಸಿದರು. ಕೊನೆಗೆ 60 ಎಸೆತಗಳನ್ನು ಎದುರಿಸಿ 10 ಭರ್ಜರಿ ಸಿಕ್ಸರ್‌ ಹಾಗೂ 7 ಬೌಂಡರಿಗಳೊಂದಿಗೆ 129 ರನ್‌ ಗಳಿಸಿ ಔಟಾದರು.

    ಈ ನಡುವೆ ಸಾಯಿ ಸುದರ್ಶನ್‌ 43 ರನ್‌ (‌ 31 ಎಸೆತ, 5 ಬೌಂಡರಿ, 1 ಸಿಕ್ಸರ್), ವೃದ್ಧಿಮಾನ್‌ ಸಾಹಾ 18 ರನ್‌, ಹಾರ್ದಿಕ್‌ ಪಾಂಡ್ಯ ಅಜೇಯ 28 ರನ್‌, ರಶೀದ್‌ ಖಾನ್‌ ಅಜೇಯ 5 ರನ್‌ ಗಳಿಸಿದರು.

    ಮುಂಬೈ ಪರ ಆಕಾಶ್‌ ಮಧ್ವಾಲ್‌, ಪಿಯೂಷ್‌ ಚಾವ್ಲಾ ತಲಾ ಒಂದೊಂದು ವಿಕೆಟ್‌ ಪಡೆದರು.

  • ಗಿಲ್‌ ಗಿಲ್‌ ಗಿಲ್‌ – ಕೊಹ್ಲಿ IPL ದಾಖಲೆ ಉಡೀಸ್‌ ಮಾಡ್ತಾರಾ ಗಿಲ್‌?

    ಗಿಲ್‌ ಗಿಲ್‌ ಗಿಲ್‌ – ಕೊಹ್ಲಿ IPL ದಾಖಲೆ ಉಡೀಸ್‌ ಮಾಡ್ತಾರಾ ಗಿಲ್‌?

    ಅಹಮದಾಬಾದ್‌: ಭರ್ಜರಿ ಬ್ಯಾಟಿಂಗ್‌ ಫಾರ್ಮ್‌ನಲ್ಲಿರುವ ಟೀಂ ಇಂಡಿಯಾ ಹಾಗೂ ಗುಜರಾತ್‌ ಟೈಟಾನ್ಸ್‌ (GT) ಆಟಗಾರ ಶುಭಮನ್‌ ಗಿಲ್‌ (Shubman Gill) ಈ ಬಾರಿ ವಿರಾಟ್‌ ಕೊಹ್ಲಿ (Virat Kohli) ಐಪಿಎಲ್‌ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ.

    ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಆರ್‌ಸಿಬಿ ಪಾಲಿಗೆ ಮುಳ್ಳಾಗಿ ಕಾಡಿದ ಗಿಲ್‌, ಶತಕ ಬಾರಿಸಿ ಆರ್‌ಸಿಬಿ ತಂಡವನ್ನು ಪ್ಲೇ ಆಫ್‌ಗೆ ಬಾರದಂತೆ ತಡೆದರು. ಶುಕ್ರವಾರ (ಮೇ 26) ಕ್ವಾಲಿಫೈಯರ್‌ 2ನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಮಾಡಿದ ಗಿಲ್‌ ಮುಂಬೈ ಬೌಲರ್‌ಗಳನ್ನ ಚೆಂಡಾಡಿದರು. ಆರಂಭಿಕನಾಗಿ ಕಣಕ್ಕಿಳಿದ ಶುಭಮನ್‌ ಗಿಲ್‌ 60 ಎಸೆತಗಳಲ್ಲಿ 10 ಸಿಕ್ಸ್‌, 7 ಬೌಂಡರಿಗಳೊಂದಿಗೆ ಬರೋಬ್ಬರಿ 129 ರನ್‌ ಚಚ್ಚಿದರು. ಈ ಮೂಲಕ 2023ರ ಐಪಿಎಲ್‌ನಲ್ಲಿ ಅತಿಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮ್ಯಾನ್‌ ಆಗಿದ್ದಾರೆ. ಇದನ್ನೂ ಓದಿ: IPL 2023: ಧೋನಿಯಿಂದ ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ- ಲಾಸ್ಟ್ 5 ಓವರ್‌ಗೂ ಮುನ್ನ ನಡೆದಿದ್ದೇನು?

    ಆರ್‌ಸಿಬಿ ತಂಡದ ನಾಯಕ ಫಾಫ್‌ ಡು ಪ್ಲೆಸಿಸ್‌ 730 ರನ್‌ಗಳಿಸಿ ಆರೆಂಜ್‌ಕ್ಯಾಪ್‌ ರೇಸ್‌ನಲ್ಲಿದ್ದರು. ಆದ್ರೆ ಗಿಲ್‌ ಈ ಸೀಸನ್‌ನಲ್ಲಿ 3 ಶತಕಗಳನ್ನ ಸಿಡಿಸುವ ಮೂಲಕ ಆರೆಂಜ್‌ ಕ್ಯಾಪ್‌‌ ರೇಸ್‌ನಲ್ಲಿ ಮೊದಲಿಗರಾಗಿದ್ದಾರೆ.

    ಕೊಹ್ಲಿ ದಾಖಲೆ ಉಡೀಸ್‌ ಆಗುತ್ತಾ?
    ಆರ್‌ಸಿಬಿ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ 2016ರ ಐಪಿಎಲ್‌ ಒಂದೇ ಸೀಸನ್‌ನಲ್ಲಿ 4 ಭರ್ಜರಿ ಶತಕ, 7 ಅರ್ಧಶತಕಗಳೊಂದಿಗೆ 973 ರನ್‌ ಗಳಿಸಿದ್ದರು. ಇದು ಈವರೆಗೆ ಯಾರೂ ಮುರಿಯದ ದಾಖಲೆಯಾಗಿದೆ. 2016ರ ಸೀಸನ್‌ನಲ್ಲೇ ಡೇವಿಡ್‌ ವಾರ್ನರ್‌ 848 ರನ್‌ ಗಳಿಸಿದ್ದರು. 2022ರ ಐಪಿಎಲ್‌ ಸೀಸನ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡದ ಜೋಸ್‌ ಬಟ್ಲರ್‌ 4 ಶತಕಗಳೊಂದಿಗೆ 863 ರನ್‌ ಗಳಿಸಿದ್ದರು.

    2023ರ ಸೀಸನ್‌ನಲ್ಲಿ 16 ಪಂದ್ಯ 16 ಇನ್ನಿಂಗ್ಸ್‌ಗಳನ್ನಾಡಿರುವ ಶುಭಮನ್‌ ಗಿಲ್‌ 3 ಶತಕಗಳೊಂದಿಗೆ 851 ರನ್‌ ಗಳಿಸಿದ್ದಾರೆ. ಈ ಮೂಲಕ ಡೇವಿಡ್‌ ವಾರ್ನರ್‌ ದಾಖಲೆಯನ್ನ ಮುರಿದಿದ್ದು, ಜೋಸ್‌ ಬಟ್ಲರ್‌ ಹಾಗೂ ವಿರಾಟ್‌ ಕೊಹ್ಲಿ ಅವರ ಸಾರ್ವಕಾಲಿಕ ದಾಖಲೆಯನ್ನ ಮುರಿಯುವ ಸನಿಹದಲ್ಲಿದ್ದಾರೆ. ಒಂದು ವೇಳೆ ಶುಕ್ರವಾರದ ಪಂದ್ಯದಲ್ಲಿ ಟೈಟಾನ್ಸ್‌ ಫೈನಲ್‌ ತಲುಪಿ, ಇದೇ ಆಟ ಮುಂದುವರಿಸಿದರೆ,‌ ಗಿಲ್‌ ಕೊಹ್ಲಿಯ ದಾಖಲೆಯನ್ನ ಮುರಿಯುವ ಸಾಧ್ಯತೆಗಳಿದೆ. ಇದನ್ನೂ ಓದಿ: ಕೊಹ್ಲಿ ಕೆಣಕಿದ ನವೀನ್‌ಗೆ ಮುಂಬೈ ಸ್ಟಾರ್ಸ್‌ ಕೊಟ್ರು ಪಂಚ್‌ – RCB ಫ್ಯಾನ್ಸ್‌ಗೆ ಡಬಲ್‌ ಖುಷಿ

  • ಕೊಹ್ಲಿ ಕೆಣಕಿದ ನವೀನ್‌ಗೆ ಮುಂಬೈ ಸ್ಟಾರ್ಸ್‌ ಕೊಟ್ರು ಪಂಚ್‌ – RCB ಫ್ಯಾನ್ಸ್‌ಗೆ ಡಬಲ್‌ ಖುಷಿ

    ಕೊಹ್ಲಿ ಕೆಣಕಿದ ನವೀನ್‌ಗೆ ಮುಂಬೈ ಸ್ಟಾರ್ಸ್‌ ಕೊಟ್ರು ಪಂಚ್‌ – RCB ಫ್ಯಾನ್ಸ್‌ಗೆ ಡಬಲ್‌ ಖುಷಿ

    ಚೆನ್ನೈ: ಮುಂಬೈ ಇಂಡಿಯನ್ಸ್ (MI) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ನಡುವೆ ನಡೆದ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 81 ರನ್‌ ಗಳಿಂದ ಭರ್ಜರಿ ಜಯ ಸಾಧಿಸಿ, 2ನೇ ಹಂತಕ್ಕೆ ತಲುಪಿದೆ.

    ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು ಮತ್ತು ಲಕ್ನೋಗೆ 20 ಓವರ್‌ ಗಳಲ್ಲಿ 182 ರನ್‌ ಗುರಿಯನ್ನು ನೀಡಿತು. ಆದ್ರೆ ಲಕ್ನೋ ತಂಡ 101 ರನ್‌ ಗಳಿಗೆ ಆಲ್ ಔಟ್ ಹೀನಾಯ ಸೋಲನುಭವಿಸಿತು. ಇದನ್ನೂ ಓದಿ: IPL 2023 Eliminator: 5 ರನ್‌ಗೆ 5 ವಿಕೆಟ್‌ ಉಡೀಸ್‌ – ಲಕ್ನೋ ಮನೆಗೆ, ಮುಂಬೈಗೆ 81ರನ್‌ಗಳ ಭರ್ಜರಿ ಜಯ

    ಈ ಐಪಿಎಲ್ ಸೀಸನ್‌ ನಲ್ಲಿ ಬಹಳ ವೈರಲ್ ಆದ ‘ಸ್ವೀಟ್ ಮ್ಯಾಂಗೊ’ ಎಂಬ ಪದವನ್ನು ನೀವೆಲ್ಲರೂ ಕೇಳಿರಬಹುದು. ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್‌ ನಡುವೆ 2ನೇ ಬಾರಿಗೆ ನಡೆದ ಲೀಗ್ ‌ಪಂದ್ಯದಲ್ಲಿ ವಿರಾಟ್‌ ಕೊಹ್ಲಿ (Virat Kohli), ಪಿಯೂಷ್‌ ಚಾವ್ಲಾ ಅವರ ಬೌಲಿಂಗ್‌ಗೆ ಔಟಾಗುತ್ತಿದ್ದಂತೆ, ಪಿಯೂಷ್‌ ಅವರ ಚಿತ್ರವನ್ನು ಕ್ಲಿಕ್ಕಿಸಿದ್ದ ಅಫ್ಘಾನಿಸ್ತಾನ ಮೂಲದ ಲಕ್ನೋ ಆಟಗಾರ ನವೀನ್ ಉಲ್ ಹಕ್ (Naveen ul Haq) ʻಸ್ವೀಟ್‌ ಮ್ಯಾಂಗೋಸ್‌ʼ ಪದದೊಂದಿಗೆ ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಮೂಲಕ ಲಕ್ನೋ ಪಂದ್ಯದ ವೇಳೆ ನಡೆದ ಮಾತಿನ ಚಕಮಕಿ ಬಳಿಕ ಕೊಹ್ಲಿಯನ್ನ ಮತ್ತೆ ಕೆಣಕಿದ್ದರು.

    ಇದರಿಂದ ಕೊಹ್ಲಿ ಮತ್ತು ಆರ್‌ಸಿಬಿ ಫ್ಯಾನ್ಸ್‌ (RCB Fans) ಕೆಂಡಾಮಂಡಲವಾಗಿದ್ದರು. ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದರು. ಇದೇ ವೇಳೆ ಮುಂಬೈ ಮತ್ತು ಲಖನೌ ನಡುವಿನ ಎಲಿಮಿನೇಟರ್-1 ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮಾಡುತ್ತಿದ್ದ ನವೀನ್ 4 ಓವರ್‌ ಗಳಲ್ಲಿ 38 ರನ್ ನೀಡಿದರೂ 4 ವಿಕೆಟ್ ಕಬಳಿಸಿ ಮುಂಬೈ ತಂಡವನ್ನು ಒಂದು ಹಂತದಲ್ಲಿ ಸಂಕಷ್ಟಕ್ಕೆ ಸಿಲುಕಿಸಿದ್ದರು. ರೋಹಿತ್ ಶರ್ಮಾರನ್ನ ಔಟ್‌ ಮಾಡಿದ ನಂತರ ನವೀನ್ ಉಲ್ ಹಕ್ ಕಿವಿ ಮುಚ್ಚಿಕೊಂಡು, ಕೆ.ಎಲ್‌ ರಾಹುಲ್‌ ಸ್ಟೈಲ್‌ ಕಾಪಿ ಮಾಡಿ ಸಂಭ್ರಮಿಸಿದ್ದರು.

    ಅದೇ ರೀತಿಯಲ್ಲಿ ಮುಂಬೈ ಇಂಡಿಯನ್ಸ್ ಆಟಗಾರರು ಪಂದ್ಯ ಗೆದ್ದ ಬಳಿಕ ರೆಸ್ಟ್‌ ರೂಮ್‌ನಲ್ಲಿ ಕುಳಿತಿದ್ದಾಗ, ಮೂರು ಮಾವಿನ ಹಣ್ಣುಗಳನ್ನು ಮೇಜಿನ ಮೇಲೆ ಇಟ್ಟುಕೊಂಡು ಕಿವಿ, ಕಣ್ಣು, ಬಾಯಿ ಮುಚ್ಚಿಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಫೋಟೋ ಸದ್ದು ಮಾಡುತ್ತಿದ್ದಂತೆ ಆರ್‌ಸಿಬಿ ಹಾಗೂ ವಿರಾಟ್‌ ಕೊಹ್ಲಿ ಅಭಿಮಾನಿಗಳು ನವೀನ್‌ನನ್ನ ಸಿಕ್ಕಾಪಟ್ಟೆ ಟ್ರೋಲ್‌ ಮಾಡಿದ್ದಾರೆ.

    ಮತ್ತೊಂದೆಡೆ ಆರ್‌ಸಿಬಿ ತಂಡವನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ಸೋಲಿಸಿ, ಪ್ಲೇ ಆಫ್‌ಗೆ ಬರದಂತೆ ಮಾಡಿದ ಗುಜರಾತ್‌ ಟೈಟಾನ್ಸ್‌, ಪ್ಲೇ ಆಫ್‌ ಮೊದಲ ಪಂದ್ಯದಲ್ಲಿ ಸೋತಿದ್ದು ಅಭಿಮಾನಿಗಳಿಗೆ ಡಬಲ್‌ ಖುಷಿ ಕೊಟ್ಟಿದೆ. ಆರ್‌ಸಿಬಿ ಅಭಿಮಾನಿಗಳೂ ಸಹ ಇದರಿಂದ ಸಿಎಸ್‌ಕೆಗೆ ಸಪೋರ್ಟ್‌ ಮಾಡಿದ್ದಾರೆ. ಇದನ್ನೂ ಓದಿ: IPL 2023: ಧೋನಿಯಿಂದ ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ- ಲಾಸ್ಟ್ 5 ಓವರ್‌ಗೂ ಮುನ್ನ ನಡೆದಿದ್ದೇನು?

  • ಧೋನಿ ಫ್ಯಾನ್ಸ್‌ ಜೊತೆ ಕಿರಿಕ್‌ ತೆಗೆದ ಜಡೇಜಾ – RCB ತಂಡ ಸೇರಲು ಆಫರ್‌ ಕೊಟ್ರು ಫ್ಯಾನ್ಸ್‌

    ಧೋನಿ ಫ್ಯಾನ್ಸ್‌ ಜೊತೆ ಕಿರಿಕ್‌ ತೆಗೆದ ಜಡೇಜಾ – RCB ತಂಡ ಸೇರಲು ಆಫರ್‌ ಕೊಟ್ರು ಫ್ಯಾನ್ಸ್‌

    ಚೆನ್ನೈ: ಗುಜರಾತ್‌ ಟೈಟಾನ್ಸ್‌ (GT) ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ನಡುವಿನ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ 15 ರನ್‌ಗಳ ಜಯ ಸಾಧಿಸಿ, ಫೈನಲ್‌ಗೆ 10ನೇ ಬಾರಿಗೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದೆ.

    ಮಂಗಳವಾರ ನಡೆದ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್‌ಕೆ 20 ಓವರ್‌ಗಳಲ್ಲಿ 172 ರನ್‌ ಗಳಿತ್ತು. ಈ ಗುರಿ ಬೆನ್ನತ್ತಿದ್ದ ಟೈಟಾನ್ಸ್‌ ನಿಗದಿತ ಓವರ್‌ಗಳಲ್ಲಿ 157 ರನ್‌ ಗಳಿಗೆ ಸರ್ವಪತನಕಂಡಿತು. ಈ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ 22 ರನ್‌ಗಳ ಕೊಡುಗೆ ನೀಡಿದ್ದ ಜಡೇಜಾ (Ravindrasinh jadeja) ಬೌಲಿಂಗ್‌ನಲ್ಲಿ 4 ಓವರ್‌ಗಳಲ್ಲಿ ಕೇವಲ 18 ರನ್‌ ನೀಡಿ 2 ವಿಕೆಟ್‌ ಕಿತ್ತರು. ಜಡೇಜಾ ಉತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಮೋಸ್ಟ್‌ ವ್ಯಾಲ್ಯುಯಬಲ್‌ ಪ್ರಶಸ್ತಿ ನೀಡಲಾಯಿತು. ಇದನ್ನೂ ಓದಿ: CSKvsGT: ಜಿಯೋಸಿನಿಮಾದಲ್ಲಿ ಏಕಕಾಲಕ್ಕೆ 2.5 ಕೋಟಿ ಜನರಿಂದ ವೀಕ್ಷಣೆ – ಎಲ್ಲಾ ದಾಖಲೆಗಳು ಉಡೀಸ್‌

    ಮೋಸ್ಟ್ ವ್ಯಾಲ್ಯುಯಬಲ್ ಪ್ರಶಸ್ತಿಯ ಫೋಟೊವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಜಡೇಜಾ ‘ನಾನು ಮೋಸ್ಟ್ ವ್ಯಾಲ್ಯುಯಬಲ್ ಪ್ಲೇಯರ್ ಎಂಬುದು ಅಪ್‌ಸ್ಟಾಕ್ಸ್‌ಗೆ ಗೊತ್ತಿದೆ. ಆದರೆ ಕೆಲವು ಅಭಿಮಾನಿಗಳಿಗೆ ತಿಳಿದಿಲ್ಲ ಎಂದು ನಗುವಿನ ಎಮೋಜಿ ಹಾಕಿ ಬರೆದುಕೊಂಡಿದ್ದಾರೆ. ಹೀಗೆ ರವೀಂದ್ರ ಜಡೇಜಾ ಯಾಕೆ ಅಭಿಮಾನಿಗಳ ವಿರುದ್ಧವೇ ಬರೆದುಕೊಂಡಿದ್ದಾರೆ ಎಂದು ಅನೇಕರು ಗೊಂದಲಕ್ಕೀಡಾಗಿದ್ದಾರೆ. ಆದರೆ ಜಡೇಜಾ ತಮ್ಮದ್ದೇ ತಂಡದ ಅಭಿಮಾನಿಗಳನ್ನು ಕೆಣಕುವಂತೆ ಈ ರೀತಿ ಬರೆದುಕೊಂಡಿರುವುದು ಧೋನಿ ಫ್ಯಾನ್ಸ್‌ಗೆ ಬೇಸರ ತರಿಸಿದೆ. ಇದನ್ನೂ ಓದಿ: IPL 2023 Final: ಗುಜರಾತ್‌ಗೆ ಗುನ್ನ ಕೊಟ್ಟ ಚೆನ್ನೈ – 10ನೇ ಬಾರಿಗೆ ಫೈನಲ್‌ಗೆ CSK ಎಂಟ್ರಿ

    ಹೌದು, ರವೀಂದ್ರ ಜಡೇಜಾ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಬ್ಯಾಟಿಂಗ್ ಮಾಡುವಾಗ ಸ್ಟೇಡಿಯಂನದಲ್ಲಿ ನೆರೆದಿರುವ ಧೋನಿ ಫ್ಯಾನ್ಸ್ ತಮ್ಮ ನೆಚ್ಚಿನ ಆಟಗಾರ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಕಾರಣ ಧೋನಿ ಧೋನಿ ಎಂದು ಹಲವಾರು ಪಂದ್ಯಗಳಲ್ಲಿ ಕೂಗಿದ್ದರು. ಅಲ್ಲದೇ ಜಡೇಜಾ ವಿಕೆಟ್ ಬಿದ್ದ ಕೂಡಲೇ ಸಂಭ್ರಮಿಸಿದ್ದರು. ಇದರ ಬಗ್ಗೆ ಕಳೆದ ಪಂದ್ಯವೊಂದರ ನಂತರ ಸ್ವತಃ ಪ್ರತಿಕ್ರಿಯಿಸಿದ್ದ ರವೀಂದ್ರ ಜಡೇಜಾ ಧೋನಿ ಬ್ಯಾಟಿಂಗ್ ನೋಡಲು ನಾನು ಔಟ್‌ಆಗಲಿ ಅಂತಾನೇ ಕೇಳಿಕೊಳ್ಳುತ್ತಾರೆ ಎಂದು ನೇರವಾಗಿಯೇ ಹೇಳಿದ್ದರು. ಹೀಗಾಗಿ ಜಡೇಜಾ ನಾನು ಮೋಸ್ಟ್ ವ್ಯಾಲ್ಯುಯಬಲ್ ಪ್ಲೇಯರ್ ಎಂಬುದು ಅಪ್‌ಸ್ಟಾಕ್ಸ್‌ಗೆ ಗೊತ್ತಿದೆ. ಆದರೆ ಕೆಲವು ಅಭಿಮಾನಿಗಳಿಗೆ ತಿಳಿದಿಲ್ಲ ಅಂತಾ ಧೋನಿ ಫ್ಯಾನ್ಸ್‌ ವಿರುದ್ಧ ಪರೋಕ್ಷವಾಗಿ ಟೀಕಿಸಿದ್ದಾರೆ.

    RCB ತಂಡಕ್ಕೆ ಆಹ್ವಾನ: ಜಡೇಜಾ ತಮ್ಮದೇ ತಂಡದ ಅಭಿಮಾನಿಗಳ ವಿರುದ್ಧ ತಿರುಗಿಬೀಳುತ್ತಿದ್ದಂತೆ ಆರ್‌ಸಿಬಿ ತಂಡದ ಫ್ಯಾನ್ಸ್‌ಗಳು ಜಡೇಜಾಗೆ ಆಹ್ವಾನ ಕೊಟ್ಟಿದ್ದಾರೆ. ನೀವು ಆರ್‌ಸಿಬಿ ತಂಡ ಸೇರಲು ಇದು ಸಕಾಲ. ನಮ್ಮ ಆರ್‌ಸಿಬಿ ತಂಡದಲ್ಲಿ ಬಂದು ಆಡಿ ಎಂದು ಟ್ವೀಟ್‌ ಮೂಲಕ ಆಹ್ವಾನ ಕೊಟ್ಟಿದ್ದಾರೆ.