Tag: IPL 2023

  • CSKvsGT: ಜಿಯೋಸಿನಿಮಾದಲ್ಲಿ ಏಕಕಾಲಕ್ಕೆ 2.5 ಕೋಟಿ ಜನರಿಂದ ವೀಕ್ಷಣೆ – ಎಲ್ಲಾ ದಾಖಲೆಗಳು ಉಡೀಸ್‌

    CSKvsGT: ಜಿಯೋಸಿನಿಮಾದಲ್ಲಿ ಏಕಕಾಲಕ್ಕೆ 2.5 ಕೋಟಿ ಜನರಿಂದ ವೀಕ್ಷಣೆ – ಎಲ್ಲಾ ದಾಖಲೆಗಳು ಉಡೀಸ್‌

    – GT vs CSK ಕ್ವಾಲಿಫೈಯರ್-1 ಪಂದ್ಯದ ವೇಳೆ ಏಕಕಾಲಕ್ಕೆ ದಾಖಲೆಯ ವೀಕ್ಷಣೆ

    ಮುಂಬೈ: ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಟಾಟಾ ಐಪಿಎಲ್ 2023ರ ಕ್ವಾಲಿಫೈಯರ್-1 (IPl 2023 Qualifier-1) ಪಂದ್ಯವನ್ನು ಜಿಯೋಸಿನಿಮಾದಲ್ಲಿ (JioCinema) ದಾಖಲೆಯ 2.5 ಕೋಟಿ ಜನರು ವೀಕ್ಷಿಸಿದ್ದಾರೆ. ಈ ಮೂಲಕ ಜಿಯೋಸಿನಿಮಾ ಹೊಸ ಮೈಲಿಗಲ್ಲು ಸಾಧಿಸಿದೆ.

    ಜಿಯೋಸಿನಿಮಾ ಹಾಲಿ ಐಪಿಎಲ್ ಆವೃತ್ತಿಯಲ್ಲಿ 3ನೇ ಬಾರಿಗೆ ತನ್ನದೇ ವೀಕ್ಷಕರ ದಾಖಲೆಯನ್ನ ಮುರಿದಿದೆ. ಜೊತೆಗೆ 2019ರ ಐಸಿಸಿ ಏಕದಿನ ವಿಶ್ವಕಪ್ (ICC WorldCup) ವೇಳೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ವೇಳೆ ನಿರ್ಮಿಸಲ್ಪಟ್ಟಿದ್ದ ವಿಶ್ವದಾಖಲೆಯನ್ನೂ ಸರಿಗಟ್ಟಿದೆ. ಇದನ್ನೂ ಓದಿ: IPL 2023 Final: ಗುಜರಾತ್‌ಗೆ ಗುನ್ನ ಕೊಟ್ಟ ಚೆನ್ನೈ – 10ನೇ ಬಾರಿಗೆ ಫೈನಲ್‌ಗೆ CSK ಎಂಟ್ರಿ

    ಏಪ್ರಿಲ್ 17ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ (CSK) ನಡುವಿನ ಪಂದ್ಯದ ವೇಳೆ ಎಂ.ಎಸ್ ಧೋನಿ (MS Dhoni) ಅವರ ಆಟ ವೀಕ್ಷಿಸಲು 2.4 ಕೋಟಿ ವೀಕ್ಷಕರು ಜಿಯೋಸಿನಿಮಾದಲ್ಲಿ ಒಟ್ಟಾಗಿ ಸೇರಿದ್ದು ಹಿಂದಿನ ದಾಖಲೆ ಎನಿಸಿತ್ತು. ಅದಕ್ಕೂ ಮುನ್ನ ಏಪ್ರಿಲ್ 12ರಂದು ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ಗತವೈಭವ ನೆನಪಿಸುವಂಥ ಬ್ಯಾಟಿಂಗ್ ಪ್ರದರ್ಶಿಸಿದಾಗ ಗರಿಷ್ಠ 2.2 ಕೋಟಿ ವೀಕ್ಷಕರ ದಾಖಲೆ ಕಂಡಿತ್ತು.

    ಟಾಟಾ ಐಪಿಎಲ್ 2023ರ (TATA IPL 2023) ಪಂದ್ಯಗಳನ್ನು ವೀಕ್ಷಿಸಲು ಜಿಯೋಸಿನಿಮಾ, ಕ್ರಿಕೆಟ್ ಅಭಿಮಾನಿಗಳ ಪ್ರಮುಖ ಆದ್ಯತೆ ಆಗಿದೆ ಎಂಬುದಕ್ಕೆ ಈ ದಾಖಲೆಗಳು ಸಾಕ್ಷಿಯಾಗಿವೆ. ರೋಚಕ ಪಂದ್ಯಗಳನ್ನು ವೀಕ್ಷಿಸುವ ವೇಳೆ ಜಿಯೋಸಿನಿಮಾದಲ್ಲಿ ಅಭಿಮಾನಿ ಕೇಂದ್ರಿತವಾದ ಹಲವಾರು ಕೊಡುಗೆಗಳನ್ನು ನೀಡಲಾಗುತ್ತಿದೆ. ಉದಾಹರಣೆಗೆ ಎಲ್ಲಾ ನೆಟ್ವರ್ಕ್ ಚಂದಾದಾರರಿಗೆ ಉಚಿತ ಸ್ಟ್ರೀಮಿಂಗ್ ನೀಡಲಾಗಿದೆ. 4K ಸ್ಟ್ರೀಮಿಂಗ್ ವಿಶೇಷವೆನಿಸಿದೆ. 12 ಭಾಷೆಗಳಲ್ಲಿ ವೀಕ್ಷಕ ವಿವರಣೆ ನೀಡಲಾಗುತ್ತಿದೆ. ಜೀತೋ ಧನ್ ಧನಾ ಧನ್ ಸ್ಪರ್ಧೆಯ ಮೂಲಕ ಪ್ರತೀ ಪಂದ್ಯದ ವೀಕ್ಷಣೆಯ ವೇಳೆ ಕಾರು ಗೆಲ್ಲುವ ಜೊತೆ ಅತ್ಯಾಕರ್ಷಕ ಬಹುಮಾನಗಳನ್ನೂ ವಿತರಿಸಲಾಗುತ್ತಿದೆ.

    ಜಿಯೋಸಿನಿಮಾ ಡಿಜಿಟಲ್ ಕ್ರೀಡಾ ವೀಕ್ಷಣೆಯ ಜಗತ್ತಿನಲ್ಲಿ ಜಾಗತಿಕ ಮಾನದಂಡ ನಿರ್ಮಿಸುವುದನ್ನು ಮುಂದುವರಿಸಿದೆ. ಟಾಟಾ ಐಪಿಎಲ್ 2023ರ ಮೊದಲ 5 ವಾರಗಳಲ್ಲಿ 1,300 ಕೋಟಿಗೂ ಅಧಿಕ ವಿಡಿಯೋ ವೀಕ್ಷಣೆಯ ದಾಖಲೆ ರಚಿಸಲಾಗಿತ್ತು. ವೀಕ್ಷಕರು ಜಿಯೋಸಿನಿಮಾದ ಅಭಿಮಾನಿ-ಕೇಂದ್ರಿತ ಪ್ರಸ್ತುತಿಗೆ ಮನಸೋತಿದ್ದಾರೆ. ಪ್ರತಿ ಪಂದ್ಯದ ವೇಳೆ ಪ್ರತಿ ವೀಕ್ಷಕರು ಸರಾಸರಿ 60 ನಿಮಿಷಗಳಷ್ಟು ಸಮಯವನ್ನು ಜಿಯೋಸಿನಿಮಾದಲ್ಲಿ ಕಳೆಯುತ್ತಿದ್ದಾರೆ. ಕನೆಕ್ಟೆಡ್ ಟಿವಿಯಲ್ಲಿನ ಟಾಟಾ ಐಪಿಎಲ್ 2023ರ ಪಂದ್ಯಗಳ ವೀಕ್ಷಣೆ ಈಗಾಗಲೇ HD TVಗಿಂತ ಎರಡು ಪಟ್ಟು ಅಧಿಕ ವೀಕ್ಷಕರ ಸಂಖ್ಯೆಯನ್ನು ತಲುಪಿದೆ. ಇದನ್ನೂ ಓದಿ: ಪ್ಲೇ ಆಫ್ಸ್‌ನಲ್ಲಿ ಒಂದೊಂದು ಡಾಟ್‌ ಬಾಲ್‌ಗೂ 500 ಗಿಡ ನೆಡಲಿದೆ BCCI – ಏಕೆ ಗೊತ್ತೇ?

    ಟಾಟಾ ಐಪಿಎಲ್ 2023ರ ಡಿಜಿಟಲ್ ಸ್ಟ್ರೀಮಿಂಗ್‌ಗಾಗಿ ಜಿಯೋಸಿನಿಮಾ 26 ಅಗ್ರ ಬ್ರ್ಯಾಂಡ್‌ಗಳ ಜೊತೆ ಒಪ್ಪಂದ ಮಾಡಿಕೊಂಡಿದೆ. ಇವುಗಳಲ್ಲಿ (ಸಹ-ಪ್ರಸ್ತುತ ಪ್ರಾಯೋಜಕ) ಡ್ರೀಮ್11, (ಕೋ-ಪವರ್ಡ್) ಜಿಯೋಮಾರ್ಟ್, ಫೋನ್ಪೆ, ಟಿಯಾಗೋ ಇವಿ, ಜಿಯೋ (ಸಹ ಪ್ರಾಯೋಜಕ) ಆ್ಯಪ್ಪಿ ಫಿಜ್, ಇಟಿಮನೀ, ಕ್ಯಾಸ್ಟ್ರಾಲ್, ಟಿವಿಎಸ್, ಓರಿಯೊ, ಬಿಂಗೋ, ಸ್ಟಿಂಗ್, ಅಜಿಯೋ, ಹೈಯರ್, ರುಪೇ, ಲೂಯಿಸ್ ಜೀನ್ಸ್, ಅಮೆಜಾನ್, ರಾಪಿಡೊ, ಅಲ್ಟ್ರಾ ಟೆಕ್ ಸಿಮೆಂಟ್, ಪೂಮಾ, ಕಮಲಾ ಪಸಂದ್, ಕಿಂಗ್‌ಫಿಶರ್ ಪವರ್ ಸೋಡಾ, ಜಿಂದಾಲ್ ಪ್ಯಾಂಥರ್ ಟಿಎಂಟಿ ರೆಬಾರ್, ಸೌದಿ ಪ್ರವಾಸೋದ್ಯಮ, ಸ್ಪಾಟಿಫೈ ಮತ್ತು ಎಎಂಎಫ್ಐ ಸೇರಿವೆ.

  • ಪ್ಲೇ ಆಫ್ಸ್‌ನಲ್ಲಿ ಒಂದೊಂದು ಡಾಟ್‌ ಬಾಲ್‌ಗೂ 500 ಗಿಡ ನೆಡಲಿದೆ BCCI – ಏಕೆ ಗೊತ್ತೇ?

    ಪ್ಲೇ ಆಫ್ಸ್‌ನಲ್ಲಿ ಒಂದೊಂದು ಡಾಟ್‌ ಬಾಲ್‌ಗೂ 500 ಗಿಡ ನೆಡಲಿದೆ BCCI – ಏಕೆ ಗೊತ್ತೇ?

    ಚೆನ್ನೈ/ಮುಂಬೈ: 16ನೇ ಆವೃತ್ತಿಯ ಐಪಿಎಲ್‌ ಪ್ಲೇ ಆಫ್‌ (IPL Playoffs) ಪಂದ್ಯ ಆರಂಭಗೊಂಡಿದ್ದು, ಪ್ಲೇ ಆಫ್‌ನಲ್ಲಿ ಬೌಲಿಂಗ್‌ ಮಾಡುವ ಪ್ರತಿಯೊಂದು ಡಾಟ್‌ ಬಾಲ್‌ಗೆ (Dot Ball) 500 ಗಿಡಗಳನ್ನು (500 Trees) ನೆಡುವುದಾಗಿ ಬಿಸಿಸಿಐ (BCCI) ಮಹತ್ತರ ನಿರ್ಧಾರ ಪ್ರಕಟಿಸಿದೆ.

    ಪಂದ್ಯಾವಳಿಯ ಅಧಿಕೃತ ಪ್ರಸಾರಕರು ಅದಕ್ಕಾಗಿ ವಿಶೇಷ ಗ್ರಾಫಿಕ್ ಅನ್ನು ಡಿಜಿಟಲ್‌ ಸ್ಕೂರ್‌ ಬೋರ್ಡ್‌ನಲ್ಲಿ ಪ್ರದರ್ಶಿಸುತ್ತಿದ್ದಾರೆ, ಡಾಟ್ ಬಾಲ್‌ಗಳನ್ನು ಕಪ್ಪುಯ ಬದಲಾಗಿ ʻಗಿಡದʼ ಚಿತ್ರಗಳನ್ನು ತೋರಿಸಲಾಗುತ್ತಿದೆ.

    ಮಂಗಳವಾರ ನಡೆಯುತ್ತಿರುವ ಸಿಎಸ್‌ಕೆ ಹಾಗೂ ಗುಜರಾತ್‌ ಟೈಟಾನ್ಸ್‌ ನಡುವಿನ ಪಂದ್ಯದಲ್ಲಿ ಪ್ರತಿ ಡಾಟ್‌ ಬಾಲ್‌ ಮಾಡಿದಾಗಲೆಲ್ಲಾ ಡಾಟ್‌ ಬದಲಿಗೆ ಗಿಡದ ಚಿತ್ರದ ಗ್ರಾಫಿಕ್‌ಗಳನ್ನ ತೋರಿಸಲಾಗುತ್ತಿದೆ. ಇದನ್ನೂ ಓದಿ: ನಿವೃತ್ತಿ ಘೋಷಣೆ ಬಳಿಕ ಮತ್ತೆ ಐಪಿಎಲ್‍ನಲ್ಲಿ ಬ್ಯಾಟ್ ಬೀಸುವ ಸೂಚನೆ ಕೊಟ್ಟ ಗೇಲ್

    ಏಕೆ ಈ ನಿರ್ಧಾರ?
    ಪ್ರತಿ ಐಪಿಎಲ್‌ನಲ್ಲೂ ಅಭಿಮಾನಿಗಳಿಗೆ ಮನರಂಜನೆ ಸಿಗುವಂತೆ ಮಾಡುವ ಬಿಸಿಸಿಐ ಪರಿಸರ ಕಾಳಜಿ ದೃಷ್ಟಿಯಿಂದ ಗಿಡಗಳನ್ನ ನೆಡುವ ನಿರ್ಧಾರಕ್ಕೆ ಬಂದಿದೆ. ಪರಿಸರ ಸಂರಕ್ಷಣೆಗಾಗಿ ತನ್ನ ಕೈಲಾದಷ್ಟು ಸೇವೆ ಮಾಡಲು ಭಾರತದಾದ್ಯಂತ ಗಿಡಗಳನ್ನು ನೆಡುವ ಮಹತ್ತರ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಂಡಿದೆ.

    ಚೆನ್ನೈನ ಚೇಪಾಕ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಪ್ಲೇ ಆಫ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಗುಜರಾತ್‌ ಟೈಟಾನ್ಸ್‌ ನಾಯಕ ಹಾರ್ದಿಕ್‌ ಪಾಂಡ್ಯ ಫೀಲ್ಡಿಂಗ್‌ ಆಯ್ದುಕೊಂಡರು. ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್‌ಕೆ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 172 ರನ್‌ ಗಳಿಸಿದೆ. ಇದನ್ನೂ ಓದಿ: IPL 2023: ಶುಭಮನ್‌ ಗಿಲ್‌ ಶತಕದಾಟ, ಗುಜರಾತ್‌ ಟೈಟಾನ್ಸ್‌ಗೆ ಜಯ – RCB ಮನೆಗೆ, ಮುಂಬೈ ಪ್ಲೇ ಆಫ್‌ಗೆ

  • IPL 2023 Playoffs: ಮೇ 23ಕ್ಕೆ CSK vs GT ಹೈವೋಲ್ಟೇಜ್‌ ಕದನ – ಮಹಿ ಮೇಲೆ ಎಲ್ಲರ ಕಣ್ಣು

    IPL 2023 Playoffs: ಮೇ 23ಕ್ಕೆ CSK vs GT ಹೈವೋಲ್ಟೇಜ್‌ ಕದನ – ಮಹಿ ಮೇಲೆ ಎಲ್ಲರ ಕಣ್ಣು

    ಚೆನ್ನೈ: 16ನೇ ಆವೃತ್ತಿಯ ಐಪಿಎಲ್‌ನಲ್ಲಿ (IPL 2023) ಲೀಗ್‌ ಹಂತದ ಎಲ್ಲಾ ಪಂದ್ಯಗಳು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಪ್ಲೇ ಆಫ್‌ ರೋಚಕ ಘಟ್ಟ ತಲುಪಿದೆ. ಮೇ 23 ರಿಂದ ಪ್ಲೇ ಆಫ್‌ (IPL 2023 Playoffs) ಪಂದ್ಯಗಳು ಆರಂಭವಾಗಲಿದೆ.

    10 ತಂಡಗಳ ಪೈಕಿ ಗುಜರಾತ್‌ ಟೈಟಾನ್ಸ್‌ (GT), ಚೆನ್ನೈ ಸೂಪರ್‌ ಕಿಂಗ್ಸ್‌ (CSK), ಲಕ್ನೋ ಸೂಪರ್‌ ಜೈಂಟ್ಸ್‌ (LSG) ಹಾಗೂ ಮುಂಬೈ ಇಂಡಿಯನ್ಸ್‌ (MI) ತಂಡಗಳು ಪ್ಲೇ ಆಫ್‌ನಲ್ಲಿ ಉಳಿದಿವೆ.

    ಮೇ 23ರಂದು ಮೊದಲ ಕ್ವಾಲಿಫೈಯರ್‌ ಪಂದ್ಯ ಗುಜರಾತ್‌ ಟೈಟಾನ್ಸ್‌ ಹಾಗೂ ಸಿಎಸ್‌ಕೆ ಬಲಿಷ್ಠ ತಂಡಗಳ ನಡುವೆ ನಡೆಯಲಿದೆ. ಮೇ 24ರಂದು ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವೆ ಮೊದಲ ಎಲಿಮಿನೇಟರ್‌ ಪಂದ್ಯಗಳು ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದನ್ನೂ ಓದಿ: RCB ಔಟ್, ಮುಂಬೈಗೆ ಪ್ಲೇ ಆಫ್ ಗಿಫ್ಟ್ – ಪಂದ್ಯ ಸೋತಿದ್ದಕ್ಕೆ ಕಣ್ಣೀರಿಟ್ಟ ಕೊಹ್ಲಿ

    ಇನ್ನೂ ಕ್ವಾಲಿಫೈಯರ್‌ ಮೊದಲ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಅದಾದ ಬಳಿಕ ಕ್ವಾಲಿಫೈಯರ್‌ ಮೊದಲ ಪಂದ್ಯದಲ್ಲಿ ಸೋತ ತಂಡ ಹಾಗೂ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಗೆದ್ದ ತಂಡಗಳ ನಡುವೆ ಮೇ 26ರಂದು 2ನೇ ಎಲಿಮಿನೇಟರ್‌ ಪಂದ್ಯ ನಡೆಯಲಿದೆ. ಜಯಭೇರಿ ಬಾರಿಸಿದ ಎರಡು ತಂಡಗಳು ಅಂತಿಮವಾಗಿ ಮೇ 28ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್‌ ಪಂದ್ಯದಲ್ಲಿ ಸೆಣಸಲಿವೆ. ಇದನ್ನೂ ಓದಿ: IPL Playoffs Schedule: ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್‌ ಫೈನಲ್‌

    ಕಳೆದ ವರ್ಷವೂ 2ನೇ ಕ್ವಾಲಿಫೈಯರ್‌ ಹಾಗೂ ಫೈನಲ್‌ ಪಂದ್ಯಗಳು ಅಹಮದಾಬಾದ್‌ನಲ್ಲೇ ನಡೆದಿದ್ದವು. ಮೊದಲ ಕ್ವಾಲಿಫೈಯರ್‌ ಹಾಗೂ ಎಲಿಮಿನೇಟರ್‌ ಪಂದ್ಯಗಳು ಕೋಲ್ಕತಾದಲ್ಲಿ ನಡೆದಿತ್ತು. ಈ ವರ್ಷ ಉದ್ಘಾಟನಾ ಸಮಾರಂಭ ಹಾಗೂ ಫೈನಲ್‌ ಪಂದ್ಯಕ್ಕೂ ಮೋದಿ ಕ್ರೀಡಾಂಗಣವನ್ನೇ ಬಿಸಿಸಿಐ (BCCI) ಆಯ್ಕೆ ಮಾಡಿದೆ.

    ಅಲ್ಲದೇ ಸಿಎಸ್‌ಕೆ ತಂಡದ ನಾಯಕ ಎಂ.ಎಸ್‌ ಧೋನಿ ಈ ಬಾರಿ ಐಪಿಎಲ್‌ನೊಂದಿಗೆ ಕ್ರಿಕೆಟ್‌ ವೃತ್ತಿ ಬದುಕಿಗೆ ವಿದಾಯ ಹೇಳಲಿದ್ದಾರೆ. ಈ ಹಿನ್ನೆಲೆಯಲ್ಲಿ ತವರು ಅಂಗಳದಲ್ಲಿ ಮಹಿ ಬ್ಯಾಟಿಂಗ್‌ ಅಬ್ಬರವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರವಾಗಿದ್ದಾರೆ.

  • RCB ಔಟ್, ಮುಂಬೈಗೆ ಪ್ಲೇ ಆಫ್ ಗಿಫ್ಟ್ – ಪಂದ್ಯ ಸೋತಿದ್ದಕ್ಕೆ ಕಣ್ಣೀರಿಟ್ಟ ಕೊಹ್ಲಿ

    RCB ಔಟ್, ಮುಂಬೈಗೆ ಪ್ಲೇ ಆಫ್ ಗಿಫ್ಟ್ – ಪಂದ್ಯ ಸೋತಿದ್ದಕ್ಕೆ ಕಣ್ಣೀರಿಟ್ಟ ಕೊಹ್ಲಿ

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ಗುಜರಾತ್ ಟೈಟಾನ್ಸ್ (GT) ಹಾಗೂ ಆರ್‌ಸಿಬಿ (RCB) ನಡುವಿನ ಪಂದ್ಯ ರೋಚಕತೆಯಿಂದ ಕೂಡಿತ್ತು. ಆದ್ರೆ ಕೊಹ್ಲಿ (Virat Kohli) ಶತಕದಾಟದ ಹೊರತಾಗಿಯೂ, ಶುಭಮನ್ ಗಿಲ್ (Shubman Gill) ಕೌಂಟರ್ ಅಟ್ಯಾಕ್‌ಗೆ ಆರ್‌ಸಿಬಿ ಮಂಡಿಯೂರಿತು.

    ಕೊನೆ ಕ್ಷಣದಲ್ಲಿ ಶುಭಮನ್ ಗಿಲ್ ಸಿಕ್ಸರ್, ಬೌಂಡರಿ ಬಾರಿಸುತ್ತಿದ್ದಂತೆ ಕ್ಯಾಪ್‌ನಿಂದ ಮುಖ ಮುಚ್ಚಿಕೊಂಡ ಕೊಹ್ಲಿ ಕಣ್ಣೀರಿಟ್ಟರು. ಬಳಿಕ ಕ್ಯಾಪ್ ಕಿತ್ತೆಸೆದು ಕಣ್ಣಲ್ಲಿ ನೀರು ತುಂಬಿಕೊಂಡೇ ಶೇಕ್‌ಹ್ಯಾಂಡ್ ಮಾಡಿದರು. ಈ ಕುರಿತ ವೀಡಿಯೋ ತುಣುಕು ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕೊಹ್ಲಿ ಅಭಿಮಾನಿಗಳು ಶುಭಮನ್ ಗಿಲ್ ವಿರುದ್ಧ ತಿರುಗಿಬಿದ್ದಿದ್ದಾರೆ. ಜೊತೆಗೆ ‘ಹೆದರಿಬೇಡಿ ಬಾಸ್, ಮುಂದಿನ ಸಲ ಕಪ್ ನಮ್ದೆ’ ಎಂದು ಧೈರ್ಯ ತುಂಬಿದ್ದಾರೆ. ಇದನ್ನೂ ಓದಿ: IPL 2023: ಶುಭಮನ್‌ ಗಿಲ್‌ ಶತಕದಾಟ, ಗುಜರಾತ್‌ ಟೈಟಾನ್ಸ್‌ಗೆ ಜಯ – RCB ಮನೆಗೆ, ಮುಂಬೈ ಪ್ಲೇ ಆಫ್‌ಗೆ

    ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಕೊಹ್ಲಿ ಭರ್ಜರಿ ಶತಕದೊಂದಿಗೆ 197 ರನ್ ಗಳಿಸಿತ್ತು. ಆದ್ರೆ ಗುಜರಾತ್ ಟೈಟಾನ್ಸ್ ಶುಭಮನ್ ಗಿಲ್ ಬ್ಯಾಟಿಂಗ್ ನೆರವಿನಿಂದ ನಿರಾಯಾಸವಾಗಿ ಗೆದ್ದು ಬೀಗಿತು. ಅಗ್ರ ಕ್ರಮಾಂಕದ ಬ್ಯಾಟ್ಸ್ಮ್ಯಾನ್‌ಗಳು ಕೈಚೆಲ್ಲಿದ ಹೊರತಾಗಿಯೂ ಏಕಾಂಗಿ ಹೋರಾಟ ನಡೆಸಿದ ಕೊಹ್ಲಿ 61 ಎಸೆತಗಳಲ್ಲಿ ಔಟಾಗದೇ 101 ರನ್ (13 ಬೌಂಡರಿ, 1 ಸಿಕ್ಸ್) ಗಳಿಸಿದರು. ಭಾರತ ತಂಡದ ಭವಿಷ್ಯ ಎಂದೇ ಹೇಳಲಾಗುತ್ತಿರುವ ಶುಭಮನ್ ಗಿಲ್ 52 ಎಸೆತಗಳಲ್ಲಿ 104 ರನ್ (8 ಸಿಕ್ಸರ್, 5 ಬೌಂಡರಿ) ಚಚ್ಚಿ ಟೈಟಾನ್ಸ್ಗೆ ಗೆಲುವು ತಂದುಕೊಟ್ಟರು.

    ಸೋತು ಗೆದ್ದ ಕೊಹ್ಲಿ:
    ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ ಕೊಹ್ಲಿ ಪಂದ್ಯ ಸೋತರೂ ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. 237 ಪಂದ್ಯ, 229 ಇನ್ನಿಂಗ್ಸ್‌ಗಳನ್ನಾಡಿರುವ ಕೊಹ್ಲಿ 7,263 ರನ್ ಗಳಿಸಿದ್ದಾರೆ. ಜೊತೆಗೆ ಐಪಿಎಲ್‌ನಲ್ಲಿ ಅತಿಹೆಚ್ಚು ಶತಕ ಬಾರಿಸಿದ ನಂ.1 ಆಟನಾಗಿದ್ದಾರೆ. ಇದನ್ನೂ ಓದಿ: ಡಿಕೆ ಡಕೌಟ್‌ – IPLನಲ್ಲಿ ಕೆಟ್ಟ ದಾಖಲೆ ಹೆಗಲಿಗೇರಿಸಿಕೊಂಡ ದಿನೇಶ್‌ ಕಾರ್ತಿಕ್‌

    ಆರ್‌ಸಿಬಿ ತಂಡದ ಮಾಜಿ ಕ್ರಿಕೆಟಿಗ ಕ್ರಿಸ್‌ಗೇಲ್ ಐಪಿಎಲ್‌ನಲ್ಲಿ 6 ಶತಕ ಗಳಿಸಿದ್ದು ಈವರೆಗಿನ ದಾಖಲೆಯಾಗಿತ್ತು. ಕಳೆದವಾರ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಕೊಹ್ಲಿ 6ನೇ ಶತಕ ಸಿಡಿಸಿ ಗೇಲ್ ದಾಖಲೆಯನ್ನ ಸರಿಗಟ್ಟಿದ್ದರು. ಭಾನುವಾರ ಟೈಟಾನ್ಸ್ ವಿರುದ್ಧ ಶತಕ ಸಿಡಿಸುವ ಮೂಲಕ ಅತಿಹೆಚ್ಚು ಶತಕ ಸಿಡಿಸಿದ ಆಟಗಾರನಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಜೋಸ್ ಬಟ್ಲರ್ 5 ಶತಕ ಸಿಡಿಸಿ 3ನೇ ಸ್ಥಾನದಲ್ಲಿದ್ದಾರೆ.

    ಭಾನುವಾರ ರಾಜಕೀಯ ಒತ್ತಡದ ನಡುವೆಯೂ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಪುತ್ರಿ ಐಶ್ವರ್ಯ ಜೊತೆಗೆ ಆರ್‌ಸಿಬಿ ಪಂದ್ಯ ವೀಕ್ಷಿಸಿ ಖುಷಿಪಟ್ಟರು.

  • ಡಿಕೆ ಡಕೌಟ್‌ – IPLನಲ್ಲಿ ಕೆಟ್ಟ ದಾಖಲೆ ಹೆಗಲಿಗೇರಿಸಿಕೊಂಡ ದಿನೇಶ್‌ ಕಾರ್ತಿಕ್‌

    ಡಿಕೆ ಡಕೌಟ್‌ – IPLನಲ್ಲಿ ಕೆಟ್ಟ ದಾಖಲೆ ಹೆಗಲಿಗೇರಿಸಿಕೊಂಡ ದಿನೇಶ್‌ ಕಾರ್ತಿಕ್‌

    ಬೆಂಗಳೂರು: 2022ರ ಐಪಿಎಲ್‌ (IPL) ಸೀಸನ್‌ನಲ್ಲಿ ಭರ್ಜರಿ ಬ್ಯಾಟಿಂಗ್‌ನಿಂದ T20 ವಿಶ್ವಕಪ್‌ಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡಿದ್ದ ದಿನೇಶ್‌ ಕಾರ್ತಿಕ್‌ (Dinesh Karthik) ಈ ಬಾರಿ ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿ ಬೇಡದ ದಾಖಲೆಯೊಂದನ್ನ ಹೆಗಲಿಗೇರಿಸಿಕೊಂಡಿದ್ದಾರೆ.

    ಆರಂಭದಿಂದಲೂ ಕಳಪೆ ಬ್ಯಾಟಿಂಗ್‌ ಮುಂದುವರಿಸಿದ ದಿನೇಶ್‌ ಕಾರ್ತಿಕ್‌ 17ನೇ ಬಾರಿಗೆ ಡಕೌಟ್‌ ಆಗುವ ಮೂಲಕ ಐಪಿಎಲ್‌ನಲ್ಲಿ ಅತಿಹೆಚ್ಚು ಬಾರಿ ಡಕೌಟ್‌ ಆದ ಕೆಟ್ಟ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: ಗ್ರೀನ್‌ ಸ್ಫೋಟಕ ಶತಕ, ಮುಂಬೈಗೆ 8 ವಿಕೆಟ್‌ಗಳ ಭರ್ಜರಿ ಜಯ – RCB ಗೆದ್ದರಷ್ಟೇ ಪ್ಲೇ ಆಫ್‌ಗೆ

    ಐಪಿಎಲ್‌ನಲ್ಲಿ ಕೆಕೆಆರ್‌ (KKR) ತಂಡದ ಆಟಗಾರ ಸುನೀಲ್‌ ನರೇನ್‌, ಮಂದೀಪ್‌ ಸಿಂಗ್‌ ತಲಾ 15 ಬಾರಿ, ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ (Rohit Sharma) 16 ಬಾರಿ ಡಕೌಟ್‌ ಆದ ಕೆಟ್ಟ ಸಾಧನೆ ಮಾಡಿದ್ದರು. ಆದ್ರೆ 2023ರ ಸೀಸನ್‌ನಲ್ಲಿ ಸತತ ಕಳಪೆ ಬ್ಯಾಟಿಂಗ್‌ನಿಂದ ದಿನೇಶ್‌ ಕಾರ್ತಿಕ್‌ ಅತಿಹೆಚ್ಚುಬಾರಿ ಡಕೌಟ್‌ ಆದ ಕೆಟ್ಟ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: ಕೊನೆಯಲ್ಲಿ ರಿಂಕು 6,4,6 – ಹೋರಾಡಿ ಸೋತ KKR – 1 ರನ್‌ನಿಂದ ಗೆದ್ದು ಪ್ಲೇ ಆಫ್‌ಗೆ ಹಾರಿದ ಲಕ್ನೋ

    dinesh karthik

    ಒಟ್ಟಾರೆಯಾಗಿ ಕ್ರಿಕೆಟ್‌ ವೃತ್ತಿ ಬದುಕಿನಲ್ಲಿ 386 ಟಿ20 ಪಂದ್ಯಗಳನ್ನಾಡಿರುವ ದಿನೇಶ್‌ ಕಾರ್ತಿಕ್‌ 25 ಬಾರಿ ಡಕೌಟ್‌ ಆಗಿದ್ದರೆ, ರೋಹಿತ್‌ ಶರ್ಮಾ 27 ಬಾರಿ ಡಕೌಟ್‌ ಆಗಿದ್ದಾರೆ. ಇದರಿಂದ ಆರ್‌ಸಿಬಿ ಅಭಿಮಾನಿಗಳು ದಿನೇಶ್‌ ಕಾರ್ತಿಕ್‌ ವಿರುದ್ಧ ಕಿಡಿ ಕಾರಿದ್ದಾರೆ.

    ಸೂಪರ್‌ ಸಂಡೇನಲ್ಲಿ ಗುಜರಾತ್‌ ಟೈಟಾನ್ಸ್‌ ವಿರುದ್ಧ ಕೊನೆಯ ಲೀಗ್‌ ಪಂದ್ಯವನ್ನಾಡುತ್ತಿರುವ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 197 ರನ್‌ಗಳನ್ನು ಕಲೆಹಾಕಿತು.

  • ಮುಂಬೈಗೆ 11.5 ಓವರ್‌ಗಳಲ್ಲಿ 201 ರನ್‌ ಟಾರ್ಗೆಟ್‌ – ಪ್ಲೇ ಆಫ್‌ ತಲುಪುತ್ತಾ RCB?

    ಮುಂಬೈಗೆ 11.5 ಓವರ್‌ಗಳಲ್ಲಿ 201 ರನ್‌ ಟಾರ್ಗೆಟ್‌ – ಪ್ಲೇ ಆಫ್‌ ತಲುಪುತ್ತಾ RCB?

    ಮುಂಬೈ: 16ನೇ ಆವೃತ್ತಿಯ ಪ್ಲೇ ಆಫ್‌ ಫೈಟ್‌ ರಣರೋಚಕ ಘಟ್ಟಕ್ಕೆ ತಲುಪಿದೆ. ಈಗಾಗಲೇ ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್​ ಪ್ರವೇಶಿಸಿವೆ. ಇನ್ನುಳಿದ ಒಂದು ಸ್ಥಾನಕ್ಕಾಗಿ ಮುಂಬೈ ಹಾಗೂ ಆರ್‌ಸಿಬಿ ನಡುವೆ ಪೈಪೋಟಿ ನಡೆದಿದೆ.

    ಅದರಂತೆ ಸೂಪರ್ ಸಂಡೆಯ 2 ಪಂದ್ಯಗಳು ಉಭಯ ತಂಡಗಳ ಪ್ಲೇಆಫ್ ಹಾದಿಯನ್ನು ನಿರ್ಧರಿಸಲಿದೆ. ಇಲ್ಲಿ ಮಧ್ಯಾಹ್ನ ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿದಿದೆ. ಹೈದರಾಬಾದ್‌ 201 ರನ್‌ ಗಳ ಬೃಹತ್‌ ಮೊತ್ತದ ಗುರಿ ನೀಡಿರುವುದರಿಂದ ಮುಂಬೈ ಇಂಡಿಯನ್ಸ್‌ 11.5 ಓವರ್‌ಗಳಲ್ಲೇ ಈ ಗುರಿ ತಲುಪಬೇಕಾದ ಅನಿವಾರ್ಯತೆ ಎದುರಾಗಿದೆ.

    ಈ ಪಂದ್ಯದಲ್ಲಿ ಗೆದ್ದರೇ ಮುಂಬೈ ತಂಡಕ್ಕೆ 16 ಅಂಕ ಸಿಗಲಿದೆ. ಆದರೂ ಪ್ಲೇ ಆಫ್ ಹಂತಕ್ಕೇರುವುದನ್ನು ಖಚಿತಪಡಿಸಿಕೊಳ್ಳಲಾಗುವುದಿಲ್ಲ. ಏಕೆಂದರೆ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಇಂದೇ ಸೆಣಸಲಿವೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಮುಂಬೈ ಪ್ಲೇ ಆಫ್‌ ಸ್ಥಾನ ಕಳೆದುಕೊಳ್ಳಲಿದೆ.

    13 ರಲ್ಲಿ 7 ಪಂದ್ಯಗಳನ್ನು ಗೆದ್ದಿರುವ ಆರ್‌ಸಿಬಿ +0.180 ರನ್‌ರೇಟ್‌ನೊಂದಿಗೆ 14 ಅಂಕ ಪಡೆದು 4ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್‌ ಸಹ 7 ಪಂದ್ಯ ಗೆದ್ದು 14 ಅಂಕ ಪಡೆದು -0.128 ರನ್‌ರೇಟ್‌ನೊಂದಿಗೆ 6ನೇ ಸ್ಥಾನದಲ್ಲಿದೆ. ಹೈದರಾಬಾದ್‌ ನೀಡಿರುವ ಮೊತ್ತವನ್ನು ಮುಂಬೈ 11.5 ಓವರ್‌ಗಳಲ್ಲಿ ತಲುಪಿದರೇ 16 ಅಂಕ ಪಡೆದುಕೊಳ್ಳುವುದರ ಜೊತೆಗೆ ಅಧಿಕ ರನ್‌ರೇಟ್‌ನೊಂದಿಗೆ ಪ್ಲೇ ಆಫ್‌ಗೆ ಲಗ್ಗೆಯಿಡಲಿದೆ. ಅಲ್ಲದೇ ಗುಜರಾತ್‌ ಟೈಟಾನ್ಸ್‌ ವಿರುದ್ಧ ಆರ್‌ಸಿಬಿ ಸಹ ಹೆಚ್ಚು ರನ್‌ ಅಂತರದಿಂದ ಗೆಲ್ಲಬೇಕಿದೆ. ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೆ, ಇತ್ತಂಡಗಳಿಗೂ ತಲಾ ಒಂದೊಂದು ಅಂಕ ಸಿಗಲಿದೆ.

    ಬೆಂಗಳೂರಿನಲ್ಲಿ ಮಳೆಯ ಆರ್ಭಟ ಜೋರಾದ ಹಿನ್ನೆಲೆ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣ ಜಲಾವೃತಗೊಂಡಿತ್ತು. ಇದೀಗ ಕ್ರೀಡಾಂಗಣವನ್ನು ಶುದ್ಧೀಕರಿಸುವ ಪ್ರಕ್ರಿಯೆ ನಡೆದಿದೆ.

  • ಬೆಂಗ್ಳೂರಿನಲ್ಲಿ ಮಳೆ ಆರ್ಭಟ – ಇಂದಿನ RCB ಮ್ಯಾಚ್ ರದ್ದಾಗುತ್ತಾ?

    ಬೆಂಗ್ಳೂರಿನಲ್ಲಿ ಮಳೆ ಆರ್ಭಟ – ಇಂದಿನ RCB ಮ್ಯಾಚ್ ರದ್ದಾಗುತ್ತಾ?

    ಬೆಂಗಳೂರು: ಭಾನುವಾರ ಮಧ್ಯಾಹ್ನ ಬೆಂಗಳೂರು ನಗರದಲ್ಲಿ ಮಳೆಯ ಆರ್ಭಟ (Rain In Bengaluru) ಜೋರಾಗಿದ್ದು, ರಸ್ತೆಗಳು ಕೆರೆಯಂತಾಗಿವೆ. ಮಠ ಮಠ ಮಧ್ಯಾಹ್ನ 3:30ರ ವೇಳೆಗೆ ಕತ್ತಲು ಆವರಿಸಿದ್ದು, ವಾಹನ ಸವಾರರು ಪರದಾಡಿದ್ದಾರೆ.

    ಮಳೆಯ ಆರ್ಭಟ ಜೋರಾದ ಹಿನ್ನೆಲೆ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್ (GT) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹೈವೋಲ್ಟೇಜ್ ಪಂದ್ಯ ರದ್ದಾಗುವ ಸಾಧ್ಯತೆ ಏರ್ಪಟ್ಟಿದೆ. ಇದನ್ನೂ ಓದಿ: ಕೊನೆಯಲ್ಲಿ ರಿಂಕು 6,4,6 – ಹೋರಾಡಿ ಸೋತ KKR – 1 ರನ್‌ನಿಂದ ಗೆದ್ದು ಪ್ಲೇ ಆಫ್‌ಗೆ ಹಾರಿದ ಲಕ್ನೋ

    ಭಾರೀ ಮಳೆ ಹಿನ್ನೆಲೆಯಲ್ಲಿ ಮೈದಾನದ ತುಂಬಾ ನೀರು ಆವರಿಸಿದೆ. ಜೊತೆಗೆ ಪ್ರೇಕ್ಷಕರು ಕುಳಿತುಕೊಳ್ಳುವ ಆಸನಗಳ ಸ್ಥಳ ಹಾಗೂ ವಿಐಪಿ ಕ್ಯಾಬಿನ್‌ಗಳಿಗೂ ನೀರು ನುಗ್ಗಿದೆ. ಈ ಹಿನ್ನೆಲೆಯಲ್ಲಿ ಲೀಗ್ ಹಂತದ ಕೊನೆಯ ಪಂದ್ಯ ರದ್ದಾಗುವ ಸಾಧ್ಯತೆಯಿದೆ. ಇದನ್ನೂ ಓದಿ: IPL 2023: ಗೆದ್ದು ಪ್ಲೇ ಆಫ್‌ಗೆ ಹಾರಿದ ಚೆನ್ನೈ – ಹೀನಾಯವಾಗಿ ಸೋತು ಆಟ ಮುಗಿಸಿದ ಡೆಲ್ಲಿ ಕ್ಯಾಪಿಟಲ್ಸ್‌

    ಭಾನುವಾರ ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಕೊನೆಯ ಲೀಗ್ ಪಂದ್ಯ ಇದ್ದು, ಆರ್‌ಸಿಬಿ ಪ್ಲೇ ಆಫ್ ತಲುಪಲು ಈ ಪಂದ್ಯ ನಿರ್ಣಾಯಕವಾಗಿದೆ. ಉತ್ತಮ ರನ್‌ರೇಟ್‌ನೊಂದಿಗೆ 4ನೇ ಸ್ಥಾನ ಖಚಿತಪಡಿಸಿಕೊಂಡಿರುವ ಆರ್‌ಸಿಬಿ ತಂಡಕ್ಕೆ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಒಂದು ವೇಳೆ ಪಂದ್ಯ ಸಂಪೂರ್ಣ ರದ್ದಾದರೆ, ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಸಹ ಸೋಲಬೇಕಾಗುತ್ತದೆ. ಮುಂಬೈ ಇಂಡಿಯನ್ಸ್ ಗೆದ್ದರೆ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಕಳೆದುಕೊಳ್ಳಲಿದೆ.

    ಚಿನ್ನಸ್ವಾಮಿ ಅಂಗಳಕ್ಕೆ ಸಮಸ್ಯೆಯಿಲ್ಲ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಷ್ಟೇ ಮಳೆಯಾದರೂ, ಮಳೆ ನಿಂತ ನಂತರ ಕೆಲವೇ ನಿಮಿಷಗಳಲ್ಲಿ ಪಂದ್ಯಗಳು ಆರಂಭಿಸಬಹುದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರೀ ಮಳೆ ಸುರಿದರೆ ಕೇವಲ 7 ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದು. ಕ್ರೀಡಾಂಗಣದಲ್ಲಿ ಸಬ್ ಏರ್ ಸಿಸ್ಟಂ ಅಳವಡಿಕೆಯಾಗಿದ್ದು ಕೂಡಲೇ ನೀರನ್ನು ಹೊರ ಹಾಕಲಾಗುತ್ತದೆ. ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನ ಒಣಗಿಸುವ ವ್ಯವಸ್ಥೆಯಿದೆ. 4.5 ಕೋಟಿ ರೂ. ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

  • IPL 2023: ಸಂಜು ಸೈನ್ಯಕ್ಕೆ ಪ್ಲೇ ಆಫ್‌ ಕನಸು ಜೀವಂತ – ರಾಜಸ್ಥಾನ್‌ಗೆ 4 ವಿಕೆಟ್‌ಗಳ ರೋಚಕ ಜಯ

    IPL 2023: ಸಂಜು ಸೈನ್ಯಕ್ಕೆ ಪ್ಲೇ ಆಫ್‌ ಕನಸು ಜೀವಂತ – ರಾಜಸ್ಥಾನ್‌ಗೆ 4 ವಿಕೆಟ್‌ಗಳ ರೋಚಕ ಜಯ

    ಶಿಮ್ಲಾ: ಶಿಮ್ರಾನ್‌ ಹೆಟ್ಮೇಯರ್‌, ಯಶಸ್ವಿ ಜೈಸ್ವಾಲ್‌, ದೇವದತ್‌ ಪಡಿಕಲ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ರಾಜಸ್ಥಾನ್‌ ರಾಯಲ್ಸ್‌, ಪಂಜಾಬ್‌ ಕಿಂಗ್ಸ್‌ ವಿರುದ್ಧ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಪ್ಲೇ ಆಫ್‌ ಕನಸು ಜೀವಂತವಾಗಿಸಿಕೊಂಡಿದೆ. ಕೊನೆಯವರೆಗೂ ಹೋರಾಡಿದ ಪಂಜಾಬ್‌ ಕಿಂಗ್ಸ್‌ ಸೋಲಿನೊಂದಿಗೆ ವಿದಾಯ ಹೇಳಿದೆ.

    ಪಂಜಾಬ್‌ ವಿರುದ್ಧ ಗೆಲುವು ಸಾಧಿಸುವ ಮೂಲಕ 14 ಅಂಕ ಪಡೆದು +0.148 ರನ್‌ರೇಟ್‌ನೊಂದಿಗೆ 5ನೇ ಸ್ಥಾನಕ್ಕೆ ಜಿಗಿದಿದೆ. ಒಂದು ವೇಳೆ ಭಾನುವಾರದ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಮುಂಬೈ ತಂಡಗಳು ಸೋತರೇ ರಾಜಸ್ಥಾನ್‌ ರಾಯಲ್ಸ್‌ಗೆ ಪ್ಲೇ ಆಫ್‌ ತಲುಪುವ ಅವಕಾಶ ಸಿಗಲಿದೆ.

    ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕಿಂಗ್ಸ್‌ ಪಂಜಾಬ್‌ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಪಡೆದ ರಾಜಸ್ಥಾನ್‌ ರಾಯಲ್ಸ್‌ 19.4 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 189 ರನ್‌ ಗಳಿಸಿ ಗೆಲುವು ಸಾಧಿಸಿತು.

    ಕೊನೆಯ 4 ಓವರ್‌ಗಳಲ್ಲಿ ರಾಜಸ್ಥಾನ್‌ಗೆ 39 ರನ್‌ಗಳ ಅಗತ್ಯವಿತ್ತು. 17ನೇ ಓವರ್‌ನಲ್ಲಿ 6 ರನ್‌, 18ನೇ ಓವರ್‌ನಲ್ಲಿ 14 ರನ್‌ ಹಾಗೂ 19ನೇ ಓವರ್‌ನಲ್ಲಿ 11 ರನ್‌ ಸೇರ್ಪಡೆಯಾಯಿತು. ಈ ವೇಳೆ ಸ್ಫೋಟಕ ಆಟವಾಡುತ್ತಿದ್ದ ಶಿಮ್ರಾನ್‌ ಹೆಟ್ಮೇಯರ್‌ 28 ಎಸೆತಗಳಲ್ಲಿ ಭರ್ಜರಿ 46 ರನ್‌ (4 ಬೌಂಡರಿ, 3 ಸಿಕ್ಸ್‌) ಚಚ್ಚಿ ಔಟಾದರು. ಕೊನೆಯ 6 ಎಸೆತಗಳಲ್ಲಿ 9 ರನ್‌ ಬೇಕಿದ್ದಾಗ. ಮೊದಲ 3 ಎಸೆತಗಳಲ್ಲಿ 4 ರನ್‌ ಸೇರ್ಪಡೆಯಾಯಿತು. 4ನೇ ಎಸೆತದಲ್ಲಿ ಕ್ರೀಸ್‌ ತೆಗೆದುಕೊಂಡ ಧ್ರುವ್‌ ಜುರೆಲ್‌ ಸಿಕ್ಸ್‌ ಬಾರಿಸುವ ಮೂಲಕ ಜಯ ತಂದುಕೊಟ್ಟರು.

    ಚೇಸಿಂಗ್‌ ಆರಂಭಿಸಿದ ರಾಜಸ್ಥಾನ್ ರಾಯಲ್ಸ್‌ ಮೊದಲ ವಿಕೆಟ್‌ ಕಳೆದುಕೊಂಡರೂ 2 ವಿಕೆಟ್‌ಗೆ ಉತ್ತಮ ಆರಂಭ ಪಡೆಯಿತು. 2ನೇ ವಿಕೆಟ್‌ಗೆ ಜೊತೆಯಾದ ದೇವದತ್‌ ಪಡಿಕಲ್‌ ಹಾಗೂ ಯಶಸ್ವೀ ಜೈಸ್ವಾಲ್‌ ಭರ್ಜರಿ ಅರ್ಧ ಶತಕ ಸಿಡಿಸಿ ಔಟಾದರು.

    ಜೈಸ್ವಾಲ್‌ 36 ಎಸೆತಗಳಲ್ಲಿ 8 ಬೌಂಡರಿಗಳೊಂದಿಗೆ 50 ರನ್‌ ಗಳಿಸಿದರು. ಈ ಮೂಲಕ 14 ಲೀಗ್‌ ಪಂದ್ಯಗಳಲ್ಲಿ 600 ರನ್‌ ಪೂರೈಸಿದರು. ಪಡಿಕಲ್‌ 30 ಎಸೆತಗಳಲ್ಲಿ 51 ರನ್‌ (3 ಸಿಕ್ಸರ್‌, 5 ಬೌಂಡರಿ) ಚಚ್ಚಿದರು. ಕೊನೆಯ ಪಂದ್ಯದಲ್ಲೂ ನಾಯಕ ಸಂಜು ಸ್ಯಾಮ್ಸನ್‌ ಕೇವಲ 2 ರನ್‌ ಗಳಿಸಿ ನಿರಾಸೆ ಮೂಡಿಸಿದರು. ರಿಯಾನ್‌ ಪರಾಗ್‌ 12 ಎಸೆತಗಳಲ್ಲಿ 2 ಸಿಕ್ಸರ್‌, 1 ಬೌಂಡರಿಯೊಂದಿಗೆ 20 ರನ್‌ ಗಳಿಸುವ ಮೂಲಕ ತಂಡಕ್ಕೆ ಇನ್ನಷ್ಟು ರನ್‌ ಕೊಡುಗೆ ನೀಡಿದರು.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಯಾಮ್‌ ಕರ್ರನ್‌, ಜಿತೇಶ್‌ ಶರ್ಮಾ ಹಾಗೂ ಶಾರೂಖ್‌ ಖಾನ್‌ ಬ್ಯಾಟಿಂಗ್‌ ನೆರವಿನಿಂದ 187 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು.

    ಜಿತೇಶ್‌ ಶರ್ಮಾ 44 ರನ್‌ (28 ಎಸೆತ, 3 ಸಿಕ್ಸ್‌, 3 ಬೌಂಡರಿ) ಗಳಿಸಿದರೆ, ಶಾರೂಖ್‌ ಖಾನ್‌ 41 ರನ್‌ (23 ಎಸೆತ, 2 ಸಿಕ್ಸರ್‌, 4 ಬೌಂಡರಿ), ಸ್ಯಾಮ್‌ ಕರ್ರನ್‌ 49 ರನ್‌ (31 ಎಸೆತ, 4 ಬೌಂಡರಿ, 2 ಸಿಕ್ಸ್‌) ಗಳಿಸಿ ಅಜೇಯರಾಗುಳಿದರು. ನಾಯಕ ಶಿಖರ್‌ ಧವನ್‌ 17 ರನ್‌, ಅಥರ್ವ್‌ ಟೈಡೆ 19 ರನ್‌ ಕೊಡುಗೆ ನೀಡಿದರು.

    ರಾಜಸ್ಥಾನ್‌ ಪರ ನವದೀಪ್‌ ಸೈನಿ 4 ಓವರ್‌ಗಳಲ್ಲಿ 40 ರನ್‌ ನೀಡಿ 3 ವಿಕೆಟ್‌ ಕಿತ್ತರೆ, ಟ್ರೆಂಟ್‌ ಬೋಲ್ಟ್‌ ಹಾಗೂ ಆಡಂ ಜಂಪಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • RCB ಪಾಲಿಗೆ ಅಂದು ಹೀರೋ ಆಗಿದ್ದ ಮುಂಬೈ, ಈಗ ವಿಲನ್‌ ಆಗಿರೋದೇಕೆ..?

    RCB ಪಾಲಿಗೆ ಅಂದು ಹೀರೋ ಆಗಿದ್ದ ಮುಂಬೈ, ಈಗ ವಿಲನ್‌ ಆಗಿರೋದೇಕೆ..?

    ಬೆಂಗಳೂರು: ಅಂದು ಆರ್‌ಸಿಬಿ (RCB), ಮುಂಬೈ ಇಂಡಿಯನ್ಸ್‌ (Mumbai Indians) ತಂಡದ ಗೆಲುವಿಗಾಗಿ ಪ್ರಾರ್ಥಿಸಿತ್ತು. ಆರ್‌ಸಿಬಿ ಅಭಿಮಾನಿಗಳೆಲ್ಲಾ ಮುಂಬೈ ಇಂಡಿಯನ್ಸ್‌ ತಂಡವೇ ಗೆಲ್ಲಬೇಕು ಎಂದು ಅಲ್ಲಲ್ಲಿ ವಿಶೇಷ ಪೂಜೆಗಳನ್ನೂ ಮಾಡಿಸಿದ್ದುಂಟು. ಆದರಿಂದು ಅದೇ ಅಭಿಮಾನಿಗಳು ಮುಂಬೈ ಇಂಡಿಯನ್ಸ್‌ ತಂಡ ಸೋಲುವಂತೆ ಪ್ರಾರ್ಥಿಸುತ್ತಿದ್ದಾರೆ.

    ಹೌದು.. 2022ರ ಐಪಿಎಲ್‌ ಆವೃತ್ತಿಯಲ್ಲಿ ರಿಷಭ್‌ ಪಂತ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ಹಾಗೂ ಫಾಫ್‌ ಡು ಪ್ಲೆಸಿಸ್‌ (Faf du Plessis) ನಾಯಕತ್ವದ ಆರ್‌ಸಿಬಿ ನಡುವೆ ಪ್ಲೇ ಆಫ್‌ ರೇಸ್‌ಗೆ ಪೈಪೋಟಿ ನಡೆದಿತ್ತು. ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವೆ ಸೆಣಸಾಟ ನಡೆದಿತ್ತು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಗೆದ್ದರೆ ಆರ್‌ಸಿಬಿ ಪ್ಲೇ ಆಫ್‌ ಕನಸು ಭಗ್ನಗೊಳ್ಳುತ್ತದೆ ಎಂಬ ಕಾರಣಕ್ಕೆ ಮುಂಬೈ ಇಂಡಿಯನ್ಸ್‌ ಗೆಲ್ಲುವಂತೆ ಆರ್‌ಸಿಬಿ ತಂಡ ಪ್ರಾರ್ಥಿಸುತ್ತಿತ್ತು. ಆರ್‌ಸಿಬಿ ಚಿಹ್ನೆಯನ್ನು ನೀಲಿ ಬಣ್ಣಕ್ಕೆ ಬದಲಿಸಿ ಮುಂಬೈ ಗೆಲುವಿಗೆ ಸಪೋರ್ಟ್‌ ಮಾಡಿತ್ತು. ಇದನ್ನೂ ಓದಿ: ರಾಜಕೀಯ ಒತ್ತಡದ ನಡುವೆಯೂ IPL ವೀಕ್ಷಿಸಿ ರಿಲ್ಯಾಕ್ಸ್ ಆದ ನೂತನ ಸಿಎಂ ಸಿದ್ದರಾಮಯ್ಯ

    ಅಂದುಕೊಂಡಂತೆ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ 5 ವಿಕೆಟ್‌ಗಳ ಜಯ ಸಾಧಿಸಿತು. ಆದರೆ 2023ರ ಐಪಿಎಲ್‌ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡವೇ ಪ್ಲೇ ಆಫ್‌ ರೇಸ್‌ನಲ್ಲಿರೋದ್ರಿಂದ ಹೈದರಾಬಾದ್‌ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್‌ ಸೋಲುವಂತೆ ಆರ್‌ಸಿಬಿ ಫ್ಯಾನ್ಸ್‌ ಪ್ರಾರ್ಥಿಸುತ್ತಿದ್ದಾರೆ. ಇದನ್ನೂ ಓದಿ: RCB ಮ್ಯಾಚ್‌ ನೋಡಲು ಟಿಕೆಟ್ ಸಿಗದಿದ್ದಕ್ಕೆ ರೊಚ್ಚಿಗೆದ್ರು ಫ್ಯಾನ್ಸ್‌ – ದ್ರಾವಿಡ್‌ ಕಾರಿಗೆ ಮುತ್ತಿಗೆ

    ಭಾನುವಾರ ಮುಂಬೈ ಇಂಡಿಯನ್ಸ್‌ vs ಸನ್‌ ರೈಸರ್ಸ್‌ ಹೈದರಾಬಾದ್‌ (MIvsSRH) ಹಾಗೂ ಆರ್‌ಸಿಬಿ vs ಗುಜರಾತ್‌ ಟೈಟಾನ್ಸ್‌ (RCBvsGT) ವಿರುದ್ಧ ನಡೆಯಲಿರುವ ರಣರೋಚಕ ಪಂದ್ಯಗಳನ್ನು ವೀಕ್ಷಣೆ ಮಾಡಲು ಅಭಿಮಾನಿಗಳು ಕಾದು ಕುಳಿತಿದ್ದಾರೆ. ಮುಂಬೈ ತಂಡಕ್ಕೆ ಫೇವ್‌ರೆಟ್‌ ಪಿಚ್‌ ಆಗಿರುವ ವಾಂಖೆಡೆ ಕ್ರೀಡಾಂಗಣದಲ್ಲಿ ಹೈದರಾಬಾದ್‌ ಎದುರಿಸುವುದು ಸಾಧ್ಯವೇ? ಬೌಲಿಂಗ್‌ ಬ್ಯಾಟಿಂಗ್‌ನಲ್ಲಿ ಬಲಿಷ್ಠವಾಗಿರುವ ಪಾಂಡ್ಯನ ಟೈಟಾನ್ಸ್‌ ಪಡೆಯನ್ನು ಆರ್‌ಸಿಬಿ ಸೋಲಿಸುತ್ತದೆಯೇ? ಎಂಬ ಕುತೂಹಲ ಅಭಿಮಾನಿಗಳನ್ನ ಕಾಡುತ್ತಿದೆ. ಆದರೆ ತವರಿನಲ್ಲಿ ಅನೇಕ ಬಾರಿ‌ 200ಕ್ಕೂ ಹೆಚ್ಚು ಮೊತ್ತ ದಾಖಲಿಸಿರುವ ಆರ್‌ಸಿಬಿ ಈ ಪಂದ್ಯದಲ್ಲಿ ಹೇಗೆ ಪ್ರದರ್ಶನ ನೀಡಲಿದೆ ಎಂಬುದೇ ಪ್ರಶ್ನೆಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಆರ್‌ಸಿಬಿ ಖಚಿತವಾಗಿ ಪ್ಲೇ ಆಫ್‌ ಪ್ರವೇಶಿಸಲಿದೆ.

  • RCB ಮ್ಯಾಚ್‌ ನೋಡಲು ಟಿಕೆಟ್ ಸಿಗದಿದ್ದಕ್ಕೆ ರೊಚ್ಚಿಗೆದ್ರು ಫ್ಯಾನ್ಸ್‌ – ದ್ರಾವಿಡ್‌ ಕಾರಿಗೆ ಮುತ್ತಿಗೆ

    RCB ಮ್ಯಾಚ್‌ ನೋಡಲು ಟಿಕೆಟ್ ಸಿಗದಿದ್ದಕ್ಕೆ ರೊಚ್ಚಿಗೆದ್ರು ಫ್ಯಾನ್ಸ್‌ – ದ್ರಾವಿಡ್‌ ಕಾರಿಗೆ ಮುತ್ತಿಗೆ

    ಬೆಂಗಳೂರು: ಐಪಿಎಲ್‌ (IPL 2023) 16ನೇ ಆವೃತ್ತಿಯ ಯಶಸ್ವಿಯಾಗಿ ಮುಗಿಯುವ ಹಂತಕ್ಕೆ ಬಂದಿದೆ. 10 ತಂಡಗಳು ಭಾಗಿಯಾಗಿದ್ದು, ಎಲ್ಲ ತಂಡಗಳಿಗೂ ತಲಾ ಒಂದೊಂದು ಲೀಗ್‌ ಪಂದ್ಯಗಳು ಬಾಕಿಯಿವೆ. ಅದರಲ್ಲೂ ಕ್ರೇಜ್‌ ಹೆಚ್ಚಿಸಿರುವ ಆರ್‌ಸಿಬಿ (RCB) ತಂಡ ಲೀಗ್‌ ಹಂತದ ಫೈನಲ್‌ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಭಾನುವಾರ ನಡೆಯಲಿದ್ದು, ಪಂದ್ಯದ ಸೋಲು-ಗೆಲುವಿನ ಮೇಲೆ ಆರ್‌ಸಿಬಿ ಭವಿಷ್ಯ ನಿರ್ಧಾರವಾಗಲಿದೆ.

    ಈಗಾಗಲೇ ಪ್ಲೇ ಆಫ್‌ ತಲುಪಿರುವ ಗುಜರಾತ್‌ ಟೈಟಾನ್ಸ್‌ (Gujarat Titans) ತಂಡ ಅಗ್ರ ಸ್ಥಾನದಲ್ಲಿದ್ದು, ಭಾನುವಾರ ಆರ್‌ಸಿಬಿ ತಂಡದೊಂದಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಲಿದೆ. ರಣರೋಚಕ ಪಂದ್ಯ ವೀಕ್ಷಣೆ ಮಾಡಲು ತಮಗೆ ಟಕೆಟ್‌ ಸಿಕ್ಕಿಲ್ಲ ಎಂಬ ಕಾರಣಕ್ಕೆ ಶುಕ್ರವಾರ ಆರ್‌ಸಿಬಿ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜಮಾಯಿಸಿದ್ದರು. ಇದನ್ನೂ ಓದಿ: ಕೊಹ್ಲಿ, ಡುಪ್ಲೆಸಿಸ್‌ ಹೊಡೆತಕ್ಕೆ ರೈಸ್‌ ಆಗದ ಸನ್‌ – ಹೈದರಾಬಾದ್‌ ವಿರುದ್ಧ 8 ವಿಕೆಟ್‌ಗಳ ಜಯ; 4ನೇ ಸ್ಥಾನಕ್ಕೆ ಜಿಗಿದ RCB

    ಗಲಾಟೆ, ಗದ್ದಲ ಎಬ್ಬಿಸಿದ್ದಲ್ಲದೇ ಟೀಂ ಇಂಡಿಯಾ (Team India) ಕೋಚ್‌ ರಾಹುಲ್ ದ್ರಾವಿಡ್ (Rahul Dravid) ಅವರ ಕಾರನ್ನು ಅಡ್ಡಗಟ್ಟಿ ಸರ್‌ ಟಿಕೆಟ್‌ ಸಿಕ್ತಿಲ್ಲ ಎಂದು ಅಳಲುತೋಡಿಕೊಂಡರು. ಟಿಕೆಟ್‌ ಸಿಗೋವರೆಗೂ ಸದ್ಯ ಆರ್‌ಸಿಬಿ ಅಭಿಮಾನಿಗಳು ರಾಹುಲ್‌ ದ್ರಾವಿಡ್‌ ಅವರನ್ನು ಮುಂದಕ್ಕೆ ಬಿಡುವಂತೆ ಕಾಣುತ್ತಿರಲಿಲ್ಲ. ಅಷ್ಟರಲ್ಲಿ ಪೊಲೀಸರು ಅಭಿಮಾನಿಗಳನ್ನು ಹಿಂದೆ ಸರಿಸಿ ರಾಹುಲ್‌ ದ್ರಾವಿಡ್‌ ಅವರು ತೆರಳಲು ಅವಕಾಶ ಮಾಡಿಕೊಟ್ಟರು. ಇದನ್ನೂ ಓದಿ: RCB ಪ್ಲೇ ಆಫ್‌ ಲೆಕ್ಕಾಚಾರ ಏನು? – ಮತ್ತೆ ಮುಖಾಮುಖಿಯಾಗ್ತಾರಾ ಕೊಹ್ಲಿ-ಗಂಭೀರ್‌?

    ಈ ಬಾರಿ ಪ್ಲೇ ಆಫ್‌ ಪ್ರವೇಶಿಸಲು ಆರ್‌ಸಿಬಿ ತಂಡ ಬಲಿಷ್ಠ ಗುಜರಾತ್‌ ಟೈಟಾನ್ಸ್‌ ಪಡೆಯನ್ನು ಸೋಲಿಸಲೇಬೇಕಿದೆ. ಒಂದು ವೇಳೆ ಆರ್‌ಸಿಬಿ, ಗುಜರಾತ್‌ ಟೈಟಾನ್ಸ್‌ ಎದುರು ಸೋತರೆ, ಮುಂಬೈ ಇಂಡಿಯನ್ಸ್‌ ಸಹ ಹೈದರಾಬಾದ್‌ ಎದುರು ಸೋಲಬೇಕಾಗುತ್ತದೆ. ಆಗಷ್ಟೇ ಆರ್‌ಸಿಬಿ ಪ್ಲೇ ಆಫ್‌ ಅವಕಾಶ ಪಡೆದುಕೊಳ್ಳಲಿದೆ.