Tag: IPL

  • ಚೇಸಿಂಗ್ ಮಾಸ್ಟರ್ ಕೊಹ್ಲಿ ಇಸ್ ಬ್ಯಾಕ್ – ಗುಜರಾತ್ ವಿರುದ್ಧ ಗೆಲುವಿನೊಂದಿಗೆ ಆರ್‌ಸಿಬಿ ಪ್ಲೇ ಆಫ್ ಆಸೆ ಜೀವಂತ

    ಚೇಸಿಂಗ್ ಮಾಸ್ಟರ್ ಕೊಹ್ಲಿ ಇಸ್ ಬ್ಯಾಕ್ – ಗುಜರಾತ್ ವಿರುದ್ಧ ಗೆಲುವಿನೊಂದಿಗೆ ಆರ್‌ಸಿಬಿ ಪ್ಲೇ ಆಫ್ ಆಸೆ ಜೀವಂತ

    ಮುಂಬೈ: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‌ಸಿಬಿ ಪರ ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ ಅಬ್ಬರಿಸಿದ ಪರಿಣಾಮ ಗುಜರಾತ್ ವಿರುದ್ಧ ಭರ್ಜರಿ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ಇದರೊಂದಿಗೆ ಆರ್‌ಸಿಬಿ ಪ್ಲೇ ಆಫ್ ಆಸೆ ಜೀವಂತವಾಗಿರಿಸಿದೆ.


    169 ರನ್‍ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿಗೆ ಮೊದಲ ವಿಕೆಟ್‍ಗೆ 115 ರನ್ (87 ಎಸೆತ)ಗಳ ಜೊತೆಯಾಟದ ಮೂಲಕ ಕೊಹ್ಲಿ ಹಾಗೂ ಡುಪ್ಲೆಸಿಸ್ ಗೆಲುವಿನ ಆಸೆ ಚಿಗುರಿಸಿದರು. ಅಂತಿಮವಾಗಿ ಮಾಕ್ಸ್‌ವೆಲ್‌ ಅಬ್ಬರದ ಅಜೇಯ 40 ರನ್ (18 ಎಸೆತ, 5 ಬೌಂಡರಿ, 2 ಸಿಕ್ಸ್) ಚಚ್ಚಿ ಇನ್ನೂ 8 ಎಸೆತ ಬಾಕಿ ಇರುವಂತೆ ಆರ್‌ಸಿಬಿಗೆ 8 ವಿಕೆಟ್‍ಗಳ ಭರ್ಜರಿ ಜಯ ತಂದುಕೊಟ್ಟರು. ಈ ಮೂಲಕ ಆರ್‌ಸಿಬಿ ಪ್ಲೇ ಆಫ್ ಕನಸು ಕಾಣುತ್ತಿದೆ. ಇದಕ್ಕಾಗಿ ಮುಂದಿನ ಪಂದ್ಯದಲ್ಲಿ ಡೆಲ್ಲಿ ಸೋಲಬೇಕಾದ ಅನಿವಾರ್ಯ ಆರ್‌ಸಿಬಿಗಿದೆ. ಇತ್ತ ಗುಜರಾತ್ ಪಂದ್ಯ ಸೋತರು ಪಾಯಿಂಟ್ ಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿ ಮುಂದುವರಿದಿದೆ.

    ಪೈಪೋಟಿಯ ಮೊತ್ತವನ್ನು ಬೆನ್ನಟ್ಟಿದ ಬೆಂಗಳೂರು ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಫಾಪ್ ಡುಪ್ಲೆಸಿಸ್ ಭರ್ಜರಿ ಆರಂಭ ನೀಡಿದರು. ಬ್ಯಾಟಿಂಗ್ ಲಯಕ್ಕೆ ಮರಳಿದಂತೆ ಕಂಡ ಕೊಹ್ಲಿ ಬ್ಯಾಟ್ ಹೆಚ್ಚು ಸದ್ದು ಮಾಡಿತು. ಅಲ್ಲದೇ ಆರಂಭಿಕ ಜೋಡಿ ಮೊದಲ ವಿಕೆಟ್‍ಗೆ 115 ರನ್ (87 ಎಸೆತ)ಗಳ ಭದ್ರ ಬುನಾದಿ ಹಾಕಿಕೊಟ್ಟಿತು. ಡು ಪ್ಲೆಸಿಸ್ 44 ರನ್ (38 ಎಸೆತ, 5 ಬೌಂಡರಿ) ಸಿಡಿಸಿ ಔಟ್ ಆದ ಕೆಲಹೊತ್ತಿನಲ್ಲಿ ಕೊಹ್ಲಿ 73 ರನ್ (54 ಎಸೆತ, 8 ಬೌಂಡರಿ, 2 ಸಿಕ್ಸ್) ಸಿಡಿಸಿ ವಿಕೆಟ್ ಒಪ್ಪಿಸಿದರು.

    ಈ ಮೊದಲು ಟಾಸ್ ಜಯಿಸಿದ ಗುಜರಾತ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದರು. ಆದರೆ ಪಾಂಡ್ಯ ನಿರ್ಧಾರ ಆರಂಭದಲ್ಲೇ ತಲೆಕೆಳಗಾಯಿತು. ಆರಂಭಿಕ ಆಟಗಾರ ಶುಭಮನ್ ಗಿಲ್ 1 ರನ್‍ಗಳಿಗೆ ಸುಸ್ತಾಗಿ ಪೆವಿಲಿಯನ್‍ಗೆ ಹೆಜ್ಜೆ ಹಾಕಿದರು. ಆ ಬಳಿಕ ಬಂದ ಮ್ಯಾಥ್ಯೂ ವೇಡ್ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪಿಗೆ ಬಲಿಯಾಗಿ 16 ರನ್ (13 ಎಸೆತ, 2 ಬೌಂಡರಿ, 1 ಸಿಕ್ಸ್) ಸಿಡಿಸಿ ಔಟ್ ಆದರು.

    ಪಾಂಡ್ಯ ಪವರ್ ಹಿಟ್
    ಇತ್ತ ಉತ್ತಮವಾಗಿ ಬ್ಯಾಟ್‍ಬೀಸುತ್ತಿದ್ದ ವೃದ್ಧಿಮಾನ್ ಸಹಾ 31 ರನ್ (22 ಎಸೆತ, 4 ಬೌಂಡರಿ, 1 ಸಿಕ್ಸ್) ಬಾರಿಸಿ ರನ್‍ಔಟ್ ಆದರು. ಇನ್ನೂಂದು ಕಡೆ ನಾಯಕ ಹಾರ್ದಿಕ್ ಪಾಂಡ್ಯ ಗುಜರಾತ್ ತಂಡದ ರನ್ ಏರಿಸುವ ಜವಾಬ್ದಾರಿ ಹೊತ್ತರು. ಡೇವಿಡ್ ಮಿಲ್ಲರ್ ಜೊತೆಗೂಡಿ ಭರ್ಜರಿ ಬ್ಯಾಟಿಂಗ್‍ಗೆ ಮುಂದಾದ ಪಾಂಡ್ಯ ಆರ್‌ಸಿಬಿ ಬೌಲರ್‌ಗಳಿಗೆ ಕಂಟಕವಾದರು. ಮಿಲ್ಲರ್ 34 ರನ್ (25 ಎಸೆತ, 3 ಸಿಕ್ಸ್) ಬಾರಿಸಿ ಔಟ್ ಆಗುವ ಮುನ್ನ 4ನೇ ವಿಕೆಟ್‍ಗೆ ಪಾಂಡ್ಯ ಜೊತೆ 61 ರನ್‍ಗಳ ಜೊತೆಯಾಟವಾಡಿದರು.

    ಡೆತ್ ಓವರ್‌ಗಳಲ್ಲಿ ಇನ್ನಷ್ಟು ಬಿರುಸು ಪಡೆದುಕೊಂಡ ಪಾಂಡ್ಯ ಬ್ಯಾಟ್ ಅಜೇಯ 62 ರನ್ (47 ಎಸೆತ, 4 ಬೌಂಡರಿ, 3 ಸಿಕ್ಸ್) ಸಿಡಿಸಿ ಮೆರೆದಾಡಿತು. ಇವರಿಗೆ ಉತ್ತಮ ಸಾಥ್ ನೀಡಿದ ರಶೀದ್ ಖಾನ್ 6 ಎಸೆತಗಳಲ್ಲಿ 1 ಬೌಂಡರಿ, 2 ಸಿಕ್ಸ್ ಸಹಿತ ಅಜೇಯ 19 ರನ್ ಚಚ್ಚಿ ಗುಜರಾತ್ ಮೊತ್ತವನ್ನು 165ರ ಗಡಿದಾಟಿಸಿದರು. ಅಂತಿಮವಾಗಿ ಗುಜರಾತ್ ತಂಡ 20 ಓವರ್‌ಗಳ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 168 ರನ್ ಒಟ್ಟು ಗೂಡಿಸಿತು.

  • ಐಪಿಎಲ್ ಫೈನಲ್ ಪಂದ್ಯದ ಟೈಮಿಂಗ್ ಚೇಂಜ್ – ರಾತ್ರಿ 7:30ರ ಬದಲು 8 ಗಂಟೆಗೆ ಆರಂಭ

    ಐಪಿಎಲ್ ಫೈನಲ್ ಪಂದ್ಯದ ಟೈಮಿಂಗ್ ಚೇಂಜ್ – ರಾತ್ರಿ 7:30ರ ಬದಲು 8 ಗಂಟೆಗೆ ಆರಂಭ

    ಮುಂಬೈ: 15ನೇ ಆವೃತ್ತಿ ಐಪಿಎಲ್ ಫೈನಲ್ ಪಂದ್ಯದ ಸಮಯ ಬದಲಾವಣೆಯಾಗಿರುವ ಬಗ್ಗೆ ಮೂಲಗಳಿಂದ ವರದಿಯಾಗಿದೆ.

    ಐಪಿಎಲ್ ಪಂದ್ಯಗಳು ರಾತ್ರಿ 7:30ಕ್ಕೆ ಆರಂಭವಾಗುತ್ತಿತ್ತು. ಈ ಬಾರಿ ಫೈನಲ್ ಪಂದ್ಯವನ್ನು ಅರ್ಧ ಗಂಟೆ ಲೇಟ್ ಆಗಿ ಆರಂಭಿಸಲು ಬಿಸಿಸಿಐ ಒಪ್ಪಿಗೆ ಸೂಚಿಸಿರುವ ಬಗ್ಗೆ ವರದಿಯಾಗಿದೆ. ಐಪಿಎಲ್ ಫೈನಲ್ ಪಂದ್ಯ ಮೊಟೆರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 29 ಭಾನುವಾರ ರಂದು ನಡೆಸಲು ಈಗಾಗಲೇ ವೇಳಾಪಟ್ಟಿ ನಿಗದಿಪಡಿಸಲಾಗಿದೆ. ಇದನ್ನೂ ಓದಿ: ವಿರೋಚಿತ ಸೋಲು – ಕಣ್ಣೀರಿಟ್ಟ ರಿಂಕು ಸಿಂಗ್

    ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ ಸಮಾರೋಪ ಸಮಾರಂಭ ನಡೆಯಲಿದ್ದು, ಸಂಜೆ 6:30ಕ್ಕೆ ಮತ್ತು ಪಂದ್ಯದ ಬಳಿಕ 50 ನಿಮಿಷಗಳ ಕಾಲ ಸಮಾರೋಪ ಸಮಾರಂಭ ನಡೆಯಲಿದೆ. ಹಾಗಾಗಿ ಪಂದ್ಯವನ್ನು ರಾತ್ರಿ 7:30ರ ಬದಲಾಗಿ 8 ಗಂಟೆಗೆ ಆರಂಭಿಸಲು ಐಪಿಎಲ್ ಆಡಳಿತ ಮಂಡಳಿ ನಿರ್ಧರಿಸಿದೆ. ಸಮಾರೋಪ ಸಮಾರಂಭಕ್ಕೆ ಹಲವು ಗಣ್ಯರು ಭಾಗವಹಿಸಲಿದ್ದು, ಬಾಲಿವುಡ್‍ನ ಸ್ಟಾರ್‌ಗಳು ಮೆರುಗು ಹೆಚ್ಚಿಸಲಿದ್ದಾರೆ. ಇದನ್ನೂ ಓದಿ: RCBಗೆ ಇಂದು ಅಗ್ನಿಪರೀಕ್ಷೆ – ಗೆದ್ದರಷ್ಟೇ ಪ್ಲೆ-ಆಫ್ ಕನಸು ಜೀವಂತ

    IPL 2022 GT VS LSG PLAYOFF

    ಈಗಾಗಲೇ ಐಪಿಎಲ್‍ನ ಕಡೆಯ ಕೆಲಪಂದ್ಯಗಳು ನಡೆಯುತ್ತಿದ್ದು, ಗುಜರಾತ್ ಮತ್ತು ಲಕ್ನೋ ತಂಡಗಳು ಪ್ಲೇ ಆಫ್‍ಗೆ ಎಂಟ್ರಿಕೊಟ್ಟಿದೆ. ಇನ್ನೆರಡು ತಂಡಗಳು ಪ್ಲೇ ಆಫ್‍ಗೇರುವ ಅವಕಾಶ ಹೊಂದಿದ್ದು, ಡೆಲ್ಲಿ ಮತ್ತು  ಆರ್​ಸಿಬಿ ತಂಡ ತೀವ್ರ ಪೈಪೋಟಿ ನಡೆಸುತ್ತಿದೆ.

  • ವಿರೋಚಿತ ಸೋಲು – ಕಣ್ಣೀರಿಟ್ಟ ರಿಂಕು ಸಿಂಗ್

    ವಿರೋಚಿತ ಸೋಲು – ಕಣ್ಣೀರಿಟ್ಟ ರಿಂಕು ಸಿಂಗ್

    ಮುಂಬೈ: ಲಕ್ನೋ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ತಂಡದ ಮಧ್ಯಮಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ ರಿಂಕು ಸಿಂಗ್ ತಮ್ಮ ಏಕಾಂಗಿ ಹೋರಾಟದಿಂದ ಇನ್ನೇನು ತಂಡಕ್ಕೆ ಗೆಲುವು ತಂದು ಕೊಟ್ಟರು ಎನ್ನುವಷ್ಟರಲ್ಲಿ ವಿಕೆಟ್ ಕೈಜೆಲ್ಲಿಕೊಂಡರು. ಇದರೊಂದಿಗೆ ಗೆಲುವಿನ ಹೊಸ್ತಿಲಲ್ಲಿದ್ದ ಕೆಕೆಆರ್ ವಿರೋಚಿತ 2 ರನ್‍ಗಳಿಂದ ಸೋಲುಕಂಡಿತು.

    ಈ ಸೋಲಿನಲ್ಲೂ ಕೂಡ ಕೆಕೆಆರ್ ತಂಡದ ಗೆಲುವಿಗಾಗಿ ಹೋರಾಡಿದ ರಿಂಕು ಸಿಂಗ್ ಎಲ್ಲರ ಮನಗೆದ್ದರು. 144 ರನ್‍ಗಳಿಗೆ 5 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿದ್ದ ವೇಳೆ ಬ್ಯಾಟಿಂಗ್‍ಗೆ ಆಗಮಿಸಿದ ರಿಂಕು ಸಿಂಗ್ ಮುಂದೆ 24 ಎಸೆತಗಳಲ್ಲಿ 67 ರನ್ ಗುರಿ ಇತ್ತು. ಒಂದು ಕಡೆ ವಿಕೆಟ್ ಉರುಳುತ್ತಿದ್ದರೆ, ಇನ್ನೊಂದೆಡೆ ರಿಂಕು ಸಿಂಗ್ ಅಬ್ಬರಿಸಲು ಆರಂಭಿಸಿದರು. ಇದನ್ನೂ ಓದಿ: RCBಗೆ ಇಂದು ಅಗ್ನಿಪರೀಕ್ಷೆ – ಗೆದ್ದರಷ್ಟೇ ಪ್ಲೆ-ಆಫ್ ಕನಸು ಜೀವಂತ

    ಲಕ್ನೋ ಬೌಲರ್‌ಗಳ ಮೇಲೆ ಏಕಾಏಕಿ ಮುಗಿಬಿದ್ದ ರಿಂಕು ಸಿಂಗ್ ತಂಡದ ಗೆಲುವು ಖಚಿತ ಪಡಿಸಲು ಮುಂದಾದರು. 19 ಓವರ್‌ನಲ್ಲಿ ಕೋಲ್ಕತ್ತಾಗೆ 17 ರನ್ ಹರಿದುಬಂತು. ಕೊನೆಯ 6 ಎಸೆತದಲ್ಲಿ ಕೆಕೆಆರ್ ಗೆಲುವಿಗೆ 21 ರನ್ ಬೇಕಾಗಿತ್ತು. ಸ್ಟೋಯಿನಿಸ್ ಎಸೆದ ಮೊದಲ ಎಸೆತವನ್ನೇ ರಿಂಕು ಸಿಂಗ್ ಬೌಂಡರಿಗಟ್ಟಿದರು, ಆ ಬಳಿಕ ಸತತ ಎರಡು ಎಸೆತಗಳನ್ನು ಸಿಕ್ಸ್ ಬಾರಿಸಿದರು. 4 ನೇ ಎಸೆತದಲ್ಲಿ 2 ರನ್ ಬಂತು. ಆ ಬಳಿಕ ಎರಡು ಎಸೆತಗಳಲ್ಲಿ ಕೆಕೆಆರ್ ಗೆಲುವಿಗೆ 3 ರನ್ ಬೇಕಾಗಿತ್ತು. ಈ ವೇಳೆ ದೊಡ್ಡ ಹೊಡೆತಕ್ಕೆ ಕೈ ಹಾಕಿದ ರಿಂಕು ಸಿಂಗ್ 5ನೇ ಎಸೆತದಲ್ಲಿ ಲೂಯಿಸ್ ಹಿಡಿದ ಅದ್ಭುತ ಕ್ಯಾಚ್‍ಗೆ ವಿಕೆಟ್ ಕೈಚೆಲ್ಲಿಕೊಂಡರು. ಈ ಮೂಲಕ ರಿಂಕ್ ಸಿಂಗ್ 40 ರನ್ (15 ಎಸೆತ, 2 ಬೌಂಡರಿ, 4 ಸಿಕ್ಸ್) ಸಿಡಿಸಿ ಹೋರಾಟದ ಇನ್ನಿಂಗ್ಸ್ ಕೊನೆಗೊಂಡಿತು. ಇದನ್ನೂ ಓದಿ: ಸ್ಟೋಯಿನಿಸ್ ಸ್ಟನ್‌ ಬೌಲಿಂಗ್, ಡಿ ಕಾಕ್ ದರ್ಬಾರ್‌ – ಪ್ಲೇ ಆಫ್‍ಗೆ ಎರಡನೇ ತಂಡವಾಗಿ ಎಂಟ್ರಿಕೊಟ್ಟ ಲಕ್ನೋ

    ಇತ್ತ 1 ಎಸೆತದಲ್ಲಿ 3 ರನ್‍ಗಳ ಗುರಿ ಪಡೆದ ಕೋಲ್ಕತ್ತಾ ತಂಡ ಗೆಲುವು ದಾಖಲಿಸಲಾಗದೆ 2 ರನ್‍ಗಳಿಂದ ವಿರೋಚಿತ ಸೋಲು ಕಂಡಿತು. ಈ ಸೋಲು ಕಂಡ ರಿಂಗ್ ಸಿಂಗ್ ಮೈದಾನದಲ್ಲಿ ಕಣ್ಣೀರಿಟ್ಟರು. ಇದೀಗ ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ರಿಂಕು ಸಿಂಗ್ ಬ್ಯಾಟಿಂಗ್ ಪರಾಕ್ರಮವನ್ನು ನೆಟ್ಟಿಗರು ಹಾಡಿ ಹೊಗಳುತ್ತಿದ್ದಾರೆ.

  • ಸ್ಟೋಯಿನಿಸ್ ಸ್ಟನ್‌ ಬೌಲಿಂಗ್, ಡಿ ಕಾಕ್ ದರ್ಬಾರ್‌ – ಪ್ಲೇ ಆಫ್‍ಗೆ ಎರಡನೇ ತಂಡವಾಗಿ ಎಂಟ್ರಿಕೊಟ್ಟ ಲಕ್ನೋ

    ಸ್ಟೋಯಿನಿಸ್ ಸ್ಟನ್‌ ಬೌಲಿಂಗ್, ಡಿ ಕಾಕ್ ದರ್ಬಾರ್‌ – ಪ್ಲೇ ಆಫ್‍ಗೆ ಎರಡನೇ ತಂಡವಾಗಿ ಎಂಟ್ರಿಕೊಟ್ಟ ಲಕ್ನೋ

    ಮುಂಬೈ: ಕೊನೆಯ ಎಸೆತದಲ್ಲಿ ಕೆಕೆಆರ್ ಗೆಲುವಿಗೆ 3 ರನ್ ಬೇಕಾಗಿದ್ದ ವೇಳೆ ಲಕ್ನೋ ಗೆಲುವಿಗಾಗಿ ಮಾರ್ಕಸ್ ಸ್ಟೋಯಿನಿಸ್ ಎಸೆದ ಕೊನೆಯ ಎಸೆತದಲ್ಲಿ ಉಮೇಶ್ ಯಾದವ್ ಬೌಲ್ಡ್ ಆಗುವ ಮೂಲಕ ಸ್ಟನಿಂಗ್ ವಿನ್ನಿಂಗ್ ಮೂಮೆಂಟ್ ಲಕ್ನೋ ಪಾಲಾಯಿತು. ಈ ಮೂಲಕ ಲಕ್ನೋ ಪ್ಲೇ ಆಫ್‍ಗೆ ಎರಡನೇ ತಂಡವಾಗಿ ಎಂಟ್ರಿಕೊಟ್ಟಿದೆ.

    ಗೆದ್ದಿದ್ದು ಹೇಗೆ?
    19 ಓವರ್‌ನಲ್ಲಿ ಕೋಲ್ಕತ್ತಾಗೆ 17 ರನ್ ಹರಿದುಬಂತು. ಕೊನೆಯ 6 ಎಸೆತದಲ್ಲಿ ಕೆಕೆಆರ್‌ ಗೆಲುವಿಗೆ 21 ರನ್ ಬೇಕಾಗಿತ್ತು. ಸ್ಟೋಯಿನಿಸ್ ಎಸೆದ ಮೊದಲ ಎಸೆತವನ್ನೇ ರಿಂಕು ಸಿಂಗ್ ಬೌಂಡರಿಗಟ್ಟಿದರು, ಆ ಬಳಿಕ ಸತತ ಎರಡು ಎಸೆತಗಳನ್ನು ಸಿಕ್ಸ್ ಬಾರಿಸಿದರು. 4 ನೇ ಎಸೆತದಲ್ಲಿ 2 ರನ್ ಬಂತು. 5ನೇ ಎಸೆತದಲ್ಲಿ ರಿಂಕು ಸಿಂಗ್ ಔಟ್ ಆದರು. ಕೊನೆಯ ಎಸೆತದಲ್ಲಿ ಕೆಕೆಆರ್ ಗೆಲುವಿಗೆ 3 ರನ್ ಬೇಕಾಗಿತ್ತು. ಉಮೇಶ್ ಯಾದವ್ ಕ್ರೀಸ್‍ನಲ್ಲಿದ್ದರು. ಆದರೆ ಸ್ಟೋಯಿನಿಸ್ ಎಸೆದ ಯಾರ್ಕರ್ ಎಸೆತವನ್ನು ಜಡ್ಜ್‌ ಮಾಡಲು ಎಡವಿದ ಯಾದವ್‌ ಕ್ಲೀನ್ ಬೌಲ್ಡ್ ಆಗುವ ಮೂಲಕ ಕೆಕೆಆರ್ ಸೋತರೆ, ಲಕ್ನೋ 2 ರನ್‍ಗಳ ರೋಚಕ ಜಯ ಸಾಧಿಸಿತು.

    ಲಕ್ನೋ ನೀಡಿದ 211 ರನ್‍ಗಳ ಬೃಹತ್ ಮೊತ್ತವನ್ನು ಚೇಸ್ ಮಾಡಿದ ಕೆಕೆಆರ್ ಆರಂಭದಲ್ಲಿ ನಿಧಾನವಾಗಿ ಕಂಡರು, ಕೊನೆಯಲ್ಲಿ ರೋಚಕವಾಗಿತ್ತು. ಕೋಲ್ಕತ್ತಾ ಪರ ನಿತೀಶ್ ರಾಣಾ 42 ರನ್ (22 ಎಸೆತ, 9 ಬೌಂಡರಿ), ಶ್ರೇಯಸ್ ಅಯ್ಯರ್ 50 ರನ್ (29 ಎಸೆತ, 4 ಬೌಂಡರಿ, 3 ಸಿಕ್ಸ್) ಮತ್ತು ಬಿಲ್ಲಿಂಗ್ಸ್ 36 ರನ್ (24 ಎಸೆತ, 2 ಬೌಂಡರಿ, 3 ಸಿಕ್ಸ್) ಬಾರಿಸಿ ಔಟ್ ಆದರು. ಆ ಬಳಿಕ ರಿಂಕು ಸಿಂಗ್ 40 ರನ್ (15 ಎಸೆತ, 2 ಬೌಂಡರಿ, 4 ಸಿಕ್ಸ್) ಚಚ್ಚಿ ಹೋರಾಡಿ ಕೊನೆಯಲ್ಲಿ ವಿಕೆಟ್ ಕೈ ಚೆಲ್ಲಿ ಕೆಕೆಆರ್ ಸೋಲುವಂತಾದರು.

    ಈ ಮೊದಲು ಟಾಸ್‍ಗೆದ್ದ ಲಕ್ನೋ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಮಾಡುವ ನಿರ್ಧಾರ ತೆಗೆದುಕೊಂಡರು. ರಾಹುಲ್ ನಿರ್ಧಾರಕ್ಕೆ ಆರಂಭದಿಂದಲೇ ಬೆಂಬಲವಾಗಿ ಕ್ವಿಂಟನ್ ಡಿ ಕಾಕ್ ನಿಂತರು.

    ರಾಹುಲ್, ಡಿಕಾಕ್ ದಾಖಲೆಯ ಆಟ
    ಆರಂಭದಲ್ಲಿ ನಿಧಾನವಾಗಿ ಇನ್ನಿಂಗ್ಸ್ ಕಟ್ಟಿದ ಈ ಜೋಡಿ ಕೆಲ ಓವರ್‌ಗಳ ಆಟದ ಬಳಿಕ ಇಬ್ಬರೂ ಕೂಡ ಕೆಕೆಆರ್ ಬೌಲರ್‌ಗಳ ಮೇಲೆ ಸವಾರಿ ಆರಂಭಿಸಿದರು. ಡಿಕಾಕ್ ಅಂತೂ ಬೌಂಡರಿ, ಸಿಕ್ಸ್ ಸಿಡಿಸಿ ಕೆಕೆಆರ್ ಬೌಲರ್‌ಗಳ ಬೆವರಿಳಿಸಿದರು.

    ಕೋಲ್ಕತ್ತಾದ 6 ಮಂದಿ ಬೌಲರ್‌ಗಳು ದಾಳಿಗಿಳಿದರೂ ರನ್ ವೇಗಕ್ಕೆ ಬ್ರೇಕ್ ಹಾಕುವಲ್ಲಿ ಸಾಧ್ಯವಾಗಲಿಲ್ಲ. ಮೊದಲ ಎಸೆತದಿಂದ ಕೊನೆಯ ಎಸೆತದ ವರೆಗೆ ಕೆಕೆಆರ್ ತಂಡವನ್ನು ಕಾಡಿದ ಈ ಜೋಡಿ ಅಜೇಯ 210 ರನ್ (120 ಎಸೆತ) ಗಳಿಂದ ಮೊದಲನೇ ವಿಕೆಟ್‍ಗೆ ದಾಖಲೆಯ ಜೊತೆಯಾಟವಾಡಿ ಮಿಂಚಿತು.

    ಡಿಕಾಕ್ ಅಜೇಯ 140 ರನ್ (70 ಎಸೆತ, 10 ಬೌಂಡರಿ, 10 ಸಿಕ್ಸ್) ಮತ್ತು ರಾಹುಲ್ 68 ರನ್ (51 ಎಸೆತ, 3 ಬೌಂಡರಿ, 4 ಸಿಕ್ಸ್) ಚಚ್ಚಿ ಬಿಸಾಕಿದರು. ಈ ಮೂಲಕ ಲಕ್ನೋ ವಿಕೆಟ್ ನಷ್ಟವಿಲ್ಲದೆ 20 ಓವರ್‌ಗಳಲ್ಲಿ 210 ರನ್‍ಗಳ ಬೃಹತ್ ಮೊತ್ತ ಪೇರಿಸಿತು. ಇತ್ತ ಕೆಕೆಆರ್ ಬೌಲರ್‌ಗಳ ಪಾಡಂತೂ ಹೇಳತೀರದಾಯಿತು. ಒಂದು ವಿಕೆಟ್ ಪಡೆಯಲಾಗದೆ, ಭರ್ಜರಿ ರನ್ ನೀಡಿ ದುಬಾರಿ ಎನಿಸಿಕೊಂಡರು.

    ರನ್ ಏರಿದ್ದು ಹೇಗೆ?
    44 ಎಸೆತ 50 ರನ್
    77 ಎಸೆತ 100 ರನ್
    104 ಎಸೆತ 150 ರನ್
    200 ಎಸೆತ 118 ರನ್
    210 ಎಸೆತ 120 ರನ್

  • ಗೇಲ್, ಎಬಿಡಿಗೆ ಆರ್‌ಸಿಬಿ ಹಾಲ್ ಆಫ್ ಫೇಮ್ ಗೌರವ

    ಗೇಲ್, ಎಬಿಡಿಗೆ ಆರ್‌ಸಿಬಿ ಹಾಲ್ ಆಫ್ ಫೇಮ್ ಗೌರವ

    ಮುಂಬೈ: ಲೆಜೆಂಡರಿ ಕ್ರಿಕೆಟಿಗರಾದ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಲ್ ಆಫ್ ಫೇಮ್‍ಗೆ ಸೇರ್ಪಡೆಗೊಂಡ ಮೊದಲ ಇಬ್ಬರು ಆಟಗಾರರಾಗಿದ್ದಾರೆ.

    CHRIS GAYLE

    ಈ ಕುರಿತು ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಇಬ್ಬರು ಆತ್ಮೀಯ ಸ್ನೇಹಿತರ ಸೇರ್ಪಡೆಯ ಬಗ್ಗೆ ಮಾತನಾಡಿ, ಆರ್‌ಸಿಬಿ ಪ್ಲೇ ಬೋಲ್ಡ್ ತತ್ವವನ್ನು ನಿಜವಾಗಿಯೂ ತಂದಿದ್ದು ಅವರೇ. ಕ್ರೀಡಾಮನೋಭಾವದಿಂದ ಎಬಿಡಿ ಕ್ರಿಕೆಟ್ ಆಟವನ್ನು ನಿಜವಾಗಿಯೂ ಬದಲಾಯಿಸಿದ್ದಾರೆ ಎಂದು ಫ್ರಾಂಚೈಸಿಯ ವೆಬ್‍ಸೈಟ್‍ನಲ್ಲಿ ಪೋಸ್ಟ್ ಮಾಡಿ ಹೇಳಿದ್ದಾರೆ.

    ಇಬ್ಬರೂ ಆಟಗಾರರನ್ನು ಹಾಲ್ ಆಫ್ ಫೇಮ್‍ನಲ್ಲಿ ಸೇರ್ಪಡೆ ಮಾಡಿರುವುದು ಹೆಮ್ಮೆಯ ವಿಷಯ. ಅವರ ಆಟದ ವೀಡಿಯೊಗಳನ್ನು ನೋಡುವಾಗ ರೋಮಾಂಚನವಾಗುತ್ತದೆ. ಐಪಿಎಲ್ ಯಶಸ್ವಿಯಾಗಿ ಬೆಳೆಯುವಲ್ಲಿ ಇವರಿಬ್ಬರ ಕಾಣಿಕೆ ದೊಡ್ಡದು ಎಂದು ಕೊಹ್ಲಿ ಹೇಳಿದ್ದಾರೆ.

    2011 ರಿಂದ 2017 ರವರೆಗೆ ಆರ್‌ಸಿಬಿ ಪರ ಆಡಿರುವ ಗೇಲ್ ಮಾತನಾಡಿ, ನನಗೆ ತಂಡದಲ್ಲಿ ಅವಕಾಶ ನೀಡಿದ್ದಕ್ಕಾಗಿ ಆರ್‌ಸಿಬಿ ಕುಟುಂಬಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ. ನನಗೆ ಇದು ನಿಜಕ್ಕೂ ವಿಶೇಷವಾಗಿತ್ತು. ಹಾಲ್ ಆಫ್ ಫೇಮ್‍ಗೆ ಸೇರ್ಪಡೆಗೊಂಡಿರುವುದು ನಿಜಕ್ಕೂ ಅದ್ಭುತವಾಗಿದೆ. ನಾನು ಯಾವಾಗಲೂ ಬೆಂಗಳೂರು ತಂಡವನ್ನು ನನ್ನ ಹೃದಯಕ್ಕೆ ಹತ್ತಿರ ಇಡುತ್ತೇನೆ ಎಂದು ಭಾವನಾತ್ಮಕವಾಗಿ ಹೇಳಿದ್ದಾರೆ.

    ABD

    ದಕ್ಷಿಣ ಆಫ್ರಿಕಾದ ದೈತ್ಯ ಆಟಗಾರ ಡಿವಿಲಿಯರ್ಸ್ 2011 ರಿಂದ 2021 ರವರೆಗೆ ಆರ್‌ಸಿಬಿ ತಂಡದ ಅವಿಭಾಜ್ಯ ಅಂಗವಾಗಿದ್ದರು. ವೆಸ್ಟ್ ಇಂಡೀಸ್‍ನ ಎಡಗೈ ಬ್ಯಾಟ್ಸ್‌ಮ್ಯಾನ್ ಗೇಲ್ ಆರು ವರ್ಷಗಳ ಕಾಲ ಫ್ರಾಂಚೈಸಿಯಲ್ಲಿದ್ದರು.

  • ಪ್ಲೇ ಆಫ್ ಸನಿಹಕ್ಕೆ ಡೆಲ್ಲಿ – ಪಂಜಾಬ್ ಕನಸು ನುಚ್ಚುನೂರು

    ಪ್ಲೇ ಆಫ್ ಸನಿಹಕ್ಕೆ ಡೆಲ್ಲಿ – ಪಂಜಾಬ್ ಕನಸು ನುಚ್ಚುನೂರು

    ಮುಂಬೈ: ಪ್ಲೇ ಆಫ್‍ಗೇರಲು ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಉತ್ತಮ ನಿರ್ವಹಣೆ ತೋರಿದ ಡೆಲ್ಲಿ ತಂಡ ಪಂಜಾಬ್ ವಿರುದ್ಧ 17 ರನ್‍ಗಳ ಅಂತರದ ಗೆಲುವು ದಾಖಲಿಸಿತು. ಈ ಮೂಲಕ ಡೆಲ್ಲಿ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡರೆ, ಇತ್ತ ಪಂಜಾಬ್ ಈ ಸೋಲಿನೊಂದಿಗೆ ಬಹತೇಕ ಟೂರ್ನಿಯಿಂದ ಹೊರಬಿದ್ದಿದೆ.

    ಡೆಲ್ಲಿ ನೀಡಿದ 160 ರನ್‍ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ತಂಡದ ಗೆಲುವಿಗಾಗಿ ಜಿತೇಶ್ ಶರ್ಮಾ ಮತ್ತು ರಾಹುಲ್ ಚಾಹರ್ ಹೋರಾಟ ನಡೆಸಿದರು. ಕೊನೆಯಲ್ಲಿ ಡೆಲ್ಲಿ ಬೌಲರ್‌ಗಳ ವೇಗಕ್ಕೆ ಥಂಡಾ ಹೂಡಿದ ಪಂಜಾಬ್ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 142 ರನ್ ಸಿಡಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.

    ಅಲ್ಪಮೊತ್ತವನ್ನು ಬೆನ್ನಟ್ಟುವ ವಿಶ್ವಾಸದಲ್ಲಿ ಕಣಕ್ಕಿಳಿದ ಪಂಜಾಬ್‍ನ ಆರಂಭಿಕ ಆಟಗಾರರಾದ ಜಾನಿ ಬೈರ್‌ಸ್ಟೋವ್ ಮತ್ತು ಶಿಖರ್ ಧವನ್ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು. ಬೈರ್‌ಸ್ಟೋವ್ ಸಿಡಿಯುವ ಸೂಚನೆ ನೀಡಿ 28 ರನ್ (15 ಎಸೆತ, 4 ಬೌಂಡರಿ, 1 ಸಿಕ್ಸ್) ಬಾರಿಸಿ ವಿಕೆಟ್ ಕೈಚೆಲ್ಲಿಕೊಂಡರು. ಆ ಬಳಿಕ ವಿಕೆಟ್ ಒಂದರ ಹಿಂದೆ ಒಂದು ಬೀಳತೊಡಗಿತು. ಈ ನಡುವೆ ಉತ್ತಮವಾಗಿ ಬ್ಯಾಟ್‍ಬೀಸುತ್ತಿದ್ದ ಧವನ್ 19 ರನ್ (16 ಎಸೆತ, 3 ಬೌಂಡರಿ) ವಿಕೆಟ್ ಕಳೆದುಕೊಂಡರು. ಆ ಬಳಿಕ ಡೆಲ್ಲಿ ಚೇತರಿಸಿಕೊಳ್ಳಲಿಲ್ಲ.

    ಈ ಮೊದಲು ಟಾಸ್ ಗೆದ್ದ ಪಂಜಾಬ್ ಎದುರಾಳಿ ತಂಡವನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿತು. ಡೆಲ್ಲಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಶೂನ್ಯ ಸುತ್ತಿ ನಿರಾಸೆ ಮೂಡಿಸಿದರು. ಇನ್ನೋರ್ವ ಆರಂಭಿಕ ಆಟಗಾರ ಸರ್ಫರಾಜ್ ಖಾನ್ ಸ್ಫೋಟಕ 32 ರನ್ (16 ಎಸೆತ, 5 ಬೌಂಡರಿ, 1 ಸಿಕ್ಸ್) ಚಚ್ಚಿ ಔಟ್ ಆದರು.

    ಇನ್ನೊಂದೆಡೆ ಮಿಚೆಲ್ ಮಾರ್ಷ್ ಡೆಲ್ಲಿ ರನ್ ಏರಿಸುವ ಹೊಣೆ ಹೊತ್ತರು. ಇವರಿಗೆ ಕೆಲ ಹೊತ್ತು ಲಲಿತ್ ಯಾದವ್ 24 ರನ್ (21 ಎಸೆತ, 1 ಬೌಂಡರಿ, 1 ಸಿಕ್ಸ್) ಬಾರಿಸಿ ಔಟ್ ಆದರು. ಆ ಬಳಿಕ ಪಟಪಟನೇ ವಿಕೆಟ್ ಕಳೆದುಕೊಂಡು ಸಾಗಿದ ಡೆಲ್ಲಿಗೆ ಮಾರ್ಷ್ ಮಾತ್ರ ಏಕಾಂಗಿ ಹೋರಾಟ ನಡೆಸಿ ಅರ್ಧಶತಕ ಸಿಡಿಸಿ ಮಿಂಚಿದರು.

    ಪಂಜಾಬ್ ಬೌಲರ್‌ಗಳಿಗೆ ಕಾಡಿದ ಮಾರ್ಷ್ 63 ರನ್ (48 ಎಸೆತ, 4 ಬೌಂಡರಿ, 3 ಸಿಕ್ಸ್) ಬಾರಿಸಿ ವಿಕೆಟ್ ಕಳೆದುಕೊಂಡರು. ಕೊನೆಯಲ್ಲಿ ಅಕ್ಷರ್ ಪಟೇಲ್ ಅಜೇಯ 17 ರನ್ (20 ಎಸೆತ, 2 ಬೌಂಡರಿ) ಸಿಡಿಸಿ ತಂಡದ ಮೊತ್ತವನ್ನು 150ರ ಗಡಿದಾಟಿಸಿದರು.

    ಅಂತಿಮವಾಗಿ ಡೆಲ್ಲಿ 7 ವಿಕೆಟ್ ಕಳೆದುಕೊಂಡು 159 ರನ್ ಒಟ್ಟುಗೂಡಿಸಿತು. ಪಂಜಾಬ್ ಪರ ಲಿವಿಂಗ್‍ಸ್ಟೋನ್ ಮತ್ತು ಅರ್ಷದೀಪ್ ಸಿಂಗ್ ತಲಾ 3 ವಿಕೆಟ್ ಕಿತ್ತು ಡೆಲ್ಲಿ ರನ್ ಓಟಕ್ಕೆ ಬ್ರೇಕ್ ಹಾಕಿದರು.

  • ಮಹಿಳಾ T20 ಚಾಲೆಂಜ್‍ಗೆ ದೀಪ್ತಿ, ಹರ್ಮನ್‍ಪ್ರೀತ್, ಮಂದಾನ ನಾಯಕಿಯರು – 3 ತಂಡ ಪ್ರಕಟಿಸಿದ ಬಿಸಿಸಿಐ

    ಮಹಿಳಾ T20 ಚಾಲೆಂಜ್‍ಗೆ ದೀಪ್ತಿ, ಹರ್ಮನ್‍ಪ್ರೀತ್, ಮಂದಾನ ನಾಯಕಿಯರು – 3 ತಂಡ ಪ್ರಕಟಿಸಿದ ಬಿಸಿಸಿಐ

    ಮುಂಬೈ: ಐಪಿಎಲ್ ನಡುವೆ ಮಹಿಳಾ ಟಿ20 ಚಾಲೆಂಜ್ ಟೂರ್ನಿಗಾಗಿ ಬಿಸಿಸಿಐ ಮೂರು ತಂಡಗಳನ್ನು ಪ್ರಕಟಿಸಿ ಟೀಂ ಇಂಡಿಯಾದ ಆಟಗಾರ್ತಿಯರಾದ ಹರ್ಮನ್ ಪ್ರೀತ್ ಕೌರ್, ಸ್ಮೃತಿ ಮಂದಾನ ಮತ್ತು ದೀಪ್ತಿ ಶರ್ಮಾರನ್ನು ನಾಯಕಿರನ್ನಾಗಿ ಆಯ್ಕೆ ಮಾಡಿದೆ.

    ಈ ಬಾರಿ ಟಿ20 ಚಾಲೆಂಜ್‍ಗೆ ಸೂಪರ್ನೋವಾಸ್, ಟ್ರೈಲ್ಬ್ಲೇಜರ್ಸ್ ಮತ್ತು ವೆಲಾಸಿಟಿ ಮೂರು ತಂಡಗಳನ್ನು ಬಿಸಿಸಿಐ ಆಯ್ಕೆ ಮಾಡಿದೆ. ಸೂಪರ್ನೋವಾಸ್‍ಗೆ ಹರ್ಮನ್ ಪ್ರೀತ್ ಕೌರ್, ಟ್ರೈಲ್ಬ್ಲೇಜರ್ಸ್‍ಗೆ ಸ್ಮೃತಿ ಮಂದಾನ ಮತ್ತು ವೆಲಾಸಿಟಿ ತಂಡಕ್ಕೆ ದೀಪ್ತಿ ಶರ್ಮಾರನ್ನು ನಾಯಕಿಯರನ್ನಾಗಿ ಆಯ್ಕೆ ಮಾಡಿದೆ. ಮಹಿಳಾ ಟಿ20 ಚಾಲೆಂಜ್ ಮೇ 23 ರಿಂದ 28ರ ವರೆಗೆ ಪುಣೆಯ ಎಮ್‍ಸಿಎ ಮೈದಾನದಲ್ಲಿ ನಡೆಯಲಿದೆ. ಇದನ್ನೂ ಓದಿ: ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ: ಮೋದಿ

    ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾದ ಒಟ್ಟು 12 ಮಂದಿ ಅಂತಾರಾಷ್ಟ್ರೀಯ ಆಟಗಾರ್ತಿಯರು ಭಾಗವಹಿಸುತ್ತಿದ್ದಾರೆ. 16 ಸದಸ್ಯರ ಮೂರು ತಂಡಗಳನ್ನು ಅಂತಾರಾಷ್ಟ್ರೀಯ ಆಯ್ಕೆ ಸಮಿತಿ ಆಯ್ಕೆ ಮಾಡಿದ್ದು, ಮೊದಲ ಪಂದ್ಯ ಸೂಪರ್ನೋವಾಸ್ ಮತ್ತು ಟ್ರೈಲ್ಬ್ಲೇಜರ್ಸ್ ನಡುವೆ ಮೇ 23 ರಂದು ನಡೆಯಲಿದೆ. ಇದನ್ನೂ ಓದಿ: ಉದ್ದನೆ ಕೂದಲಿನ, ತುಟಿಗೆ ಬಣ್ಣ ಹಚ್ಚಿ ದೈತ ದಾಂಡಿಗನಾಗಿ ಗಮನಸೆಳೆದ ಸೈಮಂಡ್ಸ್ ಇನ್ನು ನೆನಪು ಮಾತ್ರ

    ಮೇ 24 ರಂದು ಸೂಪರ್ನೋವಾಸ್ ಮತ್ತು ವೆಲಾಸಿಟಿ ನಡುವೆ ನಡೆಯಲಿದ್ದು, 26 ರಂದು ವೆಲಾಸಿಟಿ ತಂಡ ಟ್ರೈಲ್ಬ್ಲೇಜರ್ಸ್ ಎದುರಿಸಲಿದೆ. ಮೇ 28 ರಂದು ಫೈನಲ್ ಪಂದ್ಯ ನಡೆಯಲಿದೆ.

  • ರಾಜಸ್ಥಾನ ರಾಯಲ್ ಆಟ – ಲಕ್ನೋಗೆ ಕೈ ತಪ್ಪಿದ ಪ್ಲೇ ಆಫ್ ಖಾತ್ರಿ ಟಿಕೆಟ್

    ರಾಜಸ್ಥಾನ ರಾಯಲ್ ಆಟ – ಲಕ್ನೋಗೆ ಕೈ ತಪ್ಪಿದ ಪ್ಲೇ ಆಫ್ ಖಾತ್ರಿ ಟಿಕೆಟ್

    ಮುಂಬೈ: ರಾಜಸ್ಥಾನ ರಾಯಲ್ಸ್ ತಂಡದ ಕೆಚ್ಚೆದೆಯ ಹೋರಾಟದಿಂದಾಗಿ ಲಕ್ನೋ ವಿರುದ್ಧ 24 ರನ್‍ಗಳ ಭರ್ಜರಿ ಜಯದೊಂದಿಗೆ ಅಂಕಪಟ್ಟಿಯಲ್ಲಿ 16 ಅಂಕಗಳಿಸಿ ಲಕ್ನೋ ತಂಡದೊಂದಿಗೆ ಪ್ಲೇ ಆಫ್ ಫೈನಲ್ ಟಿಕೆಟ್‍ಗಾಗಿ ತೀವ್ರ ಸ್ಪರ್ಧೆಯೊಡ್ಡಿದೆ.

    ಕೊನೆಯ 12 ಎಸೆತಗಳಲ್ಲಿ 48 ರನ್‍ಗಳ ಗುರಿ ಪಡೆದ ಲಕ್ನೋ ತಂಡಕ್ಕೆ 19ನೇ ಓವರ್‌ನಲ್ಲಿ 15 ರನ್ ಬಂತು. ಕೊನೆಯ ಓವರ್‌ನಲ್ಲಿ 34 ರನ್ ಬೇಕಿತ್ತು. ಮಾರ್ಕಸ್ ಸ್ಟೊಯಿನಿಸ್ ಹೋರಾಟದ ಮುಂಚೂಣಿಯಲ್ಲಿದ್ದರೂ ಕೊನೆಯ ಓವರ್‌ನಲ್ಲಿ 27 ರನ್ (17 ಎಸೆತ, 1 ಬೌಂಡರಿ, 2 ಸಿಕ್ಸ್) ಸಿಡಿಸಿ ಔಟ್ ಆಗುವುದರೊಂದಿಗೆ ಗೆಲುವಿನ ಆಸೆ ಕಮರಿತು. ಇತ್ತ ರಾಜಸ್ಥಾನ ಈ ಗೆಲುವಿನೊಂದಿಗೆ ಪ್ಲೇ ಆಫ್‍ಗೆ ಮತ್ತಷ್ಟು ಸನಿಹವಾಗಿದೆ.

    ಗೆಲ್ಲಲು 179 ರನ್‍ಗಳ ಗುರಿ ಪಡೆದ ಲಕ್ನೋ ತಂಡ ಗೆಲುವಿಗಾಗಿ ಹೋರಾಡಿ ಕೊನೆಗೆ 8 ವಿಕೆಟ್ ಕಳೆದುಕೊಂಡು 154 ರನ್ ಪೇರಿಸಲಷ್ಟೇ ಶಕ್ತವಾಗಿ ಪ್ಲೇ ಆಫ್ ಟಿಕೆಟ್ ಖಾತ್ರಿ ಪಡಿಸುವಲ್ಲಿ ವಿಫಲವಾಯಿತು.

    ಪೈಪೋಟಿಯ ಮೊತ್ತವನ್ನು ಬೆನ್ನಟ್ಟಿದ ಲಕ್ನೋ 29 ರನ್ ಆಗುವಷ್ಟರಲ್ಲಿ ಅಗ್ರಕ್ರಮಾಂಕದ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಬಳಿಕ ದೀಪಕ್ ಹೂಡಾ ಮತ್ತು ಕೃನಾಲ್ ಪಾಂಡ್ಯ ಲಕ್ನೋ ತಂಡದ ಚೇಸಿಂಗ್ ಜವಾಬ್ದಾರಿ ವಹಿಸಿಕೊಂಡರು. ಈ ಜೋಡಿ 4ನೇ ವಿಕೆಟ್‍ಗೆ 65 ರನ್ (46 ಎಸೆತ) ಸಿಡಿಸಿ ಬೇರ್ಪಟ್ಟಿತು. ಪಾಂಡ್ಯ 25 ರನ್ (23 ಎಸೆತ, 1 ಬೌಂಡರಿ, 1 ಸಿಕ್ಸ್) ಬಾರಿಸಿ ಔಟ್ ಆದರು. ಇತ್ತ ಹೂಡಾ ಮಾತ್ರ ಹೂಡಿಬಡಿ ಆಟದ ಮೂಲಕ ಲಕ್ನೋಗೆ ಪ್ಲೇ ಆಫ್ ಟಿಕೆಟ್ ಕೊಡಿಸುವಲ್ಲಿ ಹೋರಾಡಿ ಕೊನೆಗೆ 59 ರನ್ (39 ಎಸೆತ, 5 ಬೌಂಡರಿ, 2 ಸಿಕ್ಸ್) ಸಿಡಿಸಿ ವಿಕೆಟ್ ಕೈಚೆಲ್ಲಿಕೊಂಡರು.


    ಟಾಸ್ ಗೆದ್ದ ರಾಜಸ್ಥಾನ ತಂಡ ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ರಾಜಸ್ಥಾನದ ಪರ ಅಬ್ಬರದಾಟ ಪ್ರದರ್ಶಿಸುತ್ತಿದ್ದ ಜೋಸ್ ಬಟ್ಲರ್ 2 ರನ್‍ಗಳಿಗೆ ಸೈಲೆಂಟಾದರು. ಇತ್ತ ಯಶಸ್ವಿ ಜೈಸ್ವಾಲ್ ವೈಲೆಂಟ್ ಆಟಕ್ಕೆ ಮೊರೆ ಹೋದರು. ನಾಯಕ ಸಂಜು ಸ್ಯಾಮ್ಸನ್ ಜೊತೆ 2ನೇ ವಿಕೆಟ್‍ಗೆ 64 ರನ್(40 ಎಸೆತ) ಗಳ ಜೊತೆಯಾಟವಾಡಿ ತಂಡಕ್ಕೆ ಆಸರೆಯಾದರು. ಸ್ಯಾಮ್ಸನ್ ಆಟ 32 ರನ್‍ಗೆ (24 ಎಸೆತ, 6 ಬೌಂಡರಿ)ಗೆ ಅಂತ್ಯಗೊಂಡಿತು.

    ಬಳಿಕ ಜೈಸ್ವಾಲ್ ಜೊತೆ ಕನ್ನಡಿಗ ದೇವದತ್ ಪಡಿಕ್ಕಲ್ ಅಬ್ಬರಿಸಲು ಆರಂಭಿಸಿದರು. ಕೆಲ ಕಾಲ ಲಕ್ನೋ ತಂಡದ ಬೌಲರ್‍ಗಳಿಗೆ ಕಾಟಕೊಟ್ಟ ಜೈಸ್ವಾಲ್ 41 ರನ್ (29 ಎಸೆತ, 6 ಬೌಂಡರಿ, 1 ಸಿಕ್ಸ್) ಮತ್ತು ಪಡಿಕ್ಕಲ್ 39 ರನ್ (18 ಎಸೆತ, 5 ಬೌಂಡರಿ, 2 ಸಿಕ್ಸ್) ಬಾರಿಸಿ ಔಟ್ ಆಗಿ ಹೊರ ನಡೆದರು.

    ಆ ಬಳಿಕ ರಿಯಾನ್ ಪರಾಗ್ 19 ರನ್, ನಿಶಾಮ್ 14, ಅಶ್ವಿನ್ ಅಜೇಯ 10 ರನ್ ಮತ್ತು ಟ್ರೆಂಟ್ ಬೌಲ್ಟ್ 17 ರನ್‍ಗಳ ನೆರವಿನಿಂದ ರಾಜಸ್ಥಾನ ನಿಗದಿತ ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 178 ರನ್‍ಗಳ ಉತ್ತಮ ಮೊತ್ತ ಪೇರಿಸಿತು.

  • ಉದ್ದನೆ ಕೂದಲಿನ, ತುಟಿಗೆ ಬಣ್ಣ ಹಚ್ಚಿ ದೈತ ದಾಂಡಿಗನಾಗಿ ಗಮನಸೆಳೆದ ಸೈಮಂಡ್ಸ್ ಇನ್ನು ನೆನಪು ಮಾತ್ರ

    ಉದ್ದನೆ ಕೂದಲಿನ, ತುಟಿಗೆ ಬಣ್ಣ ಹಚ್ಚಿ ದೈತ ದಾಂಡಿಗನಾಗಿ ಗಮನಸೆಳೆದ ಸೈಮಂಡ್ಸ್ ಇನ್ನು ನೆನಪು ಮಾತ್ರ

    ಸಿಡ್ನಿ: ಆಸ್ಟ್ರೇಲಿಯಾ ತಂಡದಲ್ಲಿ ದೈತ ಆಲ್‍ರೌಂಡರ್ ಆಗಿ ವಿಶ್ವದ ಗಮನಸೆಳೆದಿದ್ದ ಆಂಡ್ರ್ಯೂ ಸೈಮಂಡ್ಸ್ ಇಂದು ಕಾರು ಅಪಘಾತದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿಗೆ ಮಾಜಿ ಆಟಗಾರರಾದ ಸಚಿನ್ ತೆಂಡೂಲ್ಕರ್, ಹರ್ಭಜನ್ ಸಿಂಗ್ ಸಹಿತ ಹಲವು ಮಾಜಿ ಹಾಗೂ ಹಾಲಿ ಆಟಗಾರರು ಕಂಬನಿ ಮಿಡಿದಿದ್ದಾರೆ.

    ಹೌದು 1988 ರಿಂದ 2009ರ ವರೆಗೆ ಆಸ್ಟ್ರೇಲಿಯಾ ತಂಡದಲ್ಲಿ ತನ್ನ ವಿಶಿಷ್ಟ ಕೂದಲಿನ ವಿನ್ಯಾಸ ಮತ್ತು ತುಟಿಗೆ ಬಿಳಿ ಬಣ್ಣದೊಂದಿಗೆ ಮೈದಾನದಲ್ಲಿ ಗೋಚರಿಸುತ್ತಿದ್ದ ಸೈಮಂಡ್ಸ್, ಇಂದು ಕಾರು ಅಪಘಾತದಲ್ಲಿ ಮರಣ ಹೊಂದಿ ವಿಶ್ವ ಕ್ರಿಕೆಟ್ ಲೋಕಕ್ಕೆ ವಿದಾಯ ಹೇಳಿದ್ದಾರೆ. ಇದನ್ನೂ ಓದಿ: ಥಾಮಸ್‌ ಕಪ್‌ ಬ್ಯಾಡ್ಮಿಂಟನ್‌ – ಭಾರತ ಚಾಂಪಿಯನ್‌, ಇತಿಹಾಸ ಸೃಷ್ಟಿ

    ಸೈಮಂಡ್ಸ್ ಕ್ರಿಕೆಟ್ ಮೈದಾನದಲ್ಲಿ ಹೋರಾಟಗಾರ ಆಸ್ಟ್ರೇಲಿಯಾ ತಂಡಕ್ಕೆ ಮಧ್ಯಮಕ್ರಮಾಂಕದಲ್ಲಿ ಬಲಿಷ್ಠ ದಾಂಡಿಗನಾಗಿ ಎದುರಾಳಿ ಆಟಗಾರರಿಗೆ ಸಿಂಹಸ್ವಪ್ನರಾಗಿದ್ದರು. ಸೈಮಂಡ್ಸ್ ಆಟದೊಂದಿಗೆ ಹಲವು ವಿವಾದಗಳನ್ನು ತನ್ನ ಮೈಮೇಲೆ ಎಳೆದುಕೊಂಡು ಹೆಸರುವಾಸಿಯಾದವರು. ಇದನ್ನೂ ಓದಿ:  ಆಸ್ಟ್ರೇಲಿಯಾ ಮಾಜಿ ಆಟಗಾರ ಸೈಮಂಡ್ಸ್‌ ರಸ್ತೆ ಅಪಘಾತದಲ್ಲಿ ಸಾವು

    2009ರಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿ ವೇಳೆ ಭಾರತದ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ಸೈಮಂಡ್ಸ್ ನಡುವಿನ ಮಂಕಿಗೇಟ್ ಪ್ರಕರಣ ಬಾರಿ ಚರ್ಚೆಗೆ ಕಾರಣವಾಗಿತ್ತು. ಹರ್ಭಜನ್ ಪಂದ್ಯದ ವೇಳೆ ಸೈಮಂಡ್ಸ್‌ಗೆ ಮಂಕಿ ಎಂದಿದ್ದರು ಎಂದು ಆಸ್ಟ್ರೇಲಿಯಾ ತಂಡ ದೂರಿತ್ತು. ಇದು ಜನಾಂಗೀಯ ನಿಂದನೆಗೆ ಗುರಿಯಾಗಿತ್ತು. ಆ ಬಳಿಕ ಐಪಿಎಲ್‍ನಲ್ಲಿ ಇವರಿಬ್ಬರೂ ಕೂಡ ಮುಂಬೈ ಇಂಡಿಯನ್ಸ್ ತಂಡಕ್ಕಾಗಿ ಜೊತೆಯಾಗಿ ಆಡಿ ಉತ್ತಮ ಸಂಬಂಧವನ್ನು ಹೊಂದಿದ್ದರು. ಇದನ್ನೂ ಓದಿ: IPLಗೆ ಗುಡ್ ಬೈ ಹೇಳಿದ CSK ಸ್ಟಾರ್ ಅಂಬಾಟಿ ರಾಯುಡು?

    ಸೈಮಂಡ್ಸ್ ಆಸ್ಟ್ರೇಲಿಯಾ ತಂಡ 2 ಬಾರಿ ವಿಶ್ವಕಪ್ ಗೆದ್ದಾಗ ತಂಡದಲ್ಲಿದ್ದ ಆಲ್‍ರೌಂಡರ್. ಆಸ್ಟ್ರೇಲಿಯಾ ತಂಡದಲ್ಲಿ ಖಾಯಂ ಸದಸ್ಯನಾಗಿದ್ದ ಸೈಮಂಡ್ಸ್ ಮೂರು ಮಾದರಿ ಕ್ರಿಕೆಟ್‍ಗೂ ಹೊಗ್ಗಿಕೊಂಡ ಲೆಜೆಂಡ್ ಆಟಗಾರರಾಗಿದ್ದರು. ಆಸ್ಟ್ರೇಲಿಯಾ ಪರ 26 ಟೆಸ್ಟ್ ಪಂದ್ಯಗಳಿಂದ 2 ಶತಕ, 10 ಅರ್ಧಶತಕ ಸಹಿತ 1,462 ರನ್, 24 ವಿಕೆಟ್, ಏಕದಿನ ಕ್ರಿಕೆಟ್‍ನಲ್ಲಿ 198 ಪಂದ್ಯಗಳಿಂದ 6 ಶತಕ, 30 ಅರ್ಧಶತಕ ಸಹಿತ 5,088 ರನ್ 133 ವಿಕೆಟ್ ಮತ್ತು ಟಿ20 ಕ್ರಿಕೆಟ್‍ನಲ್ಲಿ 14 ಪಂದ್ಯದಲ್ಲಿ 2 ಅರ್ಧಶತಕ ಸಹಿತ 337 ರನ್, 8 ವಿಕೆಟ್ ಪಡೆದು ಮಿಂಚಿದ್ದರು.

    ಐಪಿಎಲ್‍ನಲ್ಲಿ ಡೆಕ್ಕನ್ ಚಾರ್ಜರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡದ ಪರ ಆಡಿದ್ದರು. 2009ರಲ್ಲಿ ಡೆಕ್ಕನ್ ಚಾರ್ಜರ್ಸ್ ಚಾಂಪಿಯನ್ ಆದಾಗ ತಂಡದಲ್ಲಿ ಸೈಮಂಡ್ಸ್ ಇದ್ದರು.

  • ಈ ಬಾರಿ ಗುಜರಾತಿಗೆ ಐಪಿಎಲ್‌ ಕಪ್‌, ಮೋಟಾಬಾಯಿ ಖಚಿತಪಡಿಸಬೇಕು: ಪ್ರಿಯಾಂಕ್‌ ಖರ್ಗೆ ವ್ಯಂಗ್ಯ

    ಈ ಬಾರಿ ಗುಜರಾತಿಗೆ ಐಪಿಎಲ್‌ ಕಪ್‌, ಮೋಟಾಬಾಯಿ ಖಚಿತಪಡಿಸಬೇಕು: ಪ್ರಿಯಾಂಕ್‌ ಖರ್ಗೆ ವ್ಯಂಗ್ಯ

    ಬೆಂಗಳೂರು: ಗುಜರಾತ್ ಟೈಟಾನ್ಸ್ ಈ ಬಾರಿ ಸ್ಪಷ್ಟ ಕಾರಣಗಳಿಂದಾಗಿ ಐಪಿಎಲ್ ಕಪ್ ಗೆಲ್ಲಬಹುದು ಎಂದು ಕಾಂಗ್ರೆಸ್‌ ನಾಯಕ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ.

    ಐಪಿಎಲ್ ಅಂಕಪಟ್ಟಿಯನ್ನು ಅಪ್ಲೋಡ್‌ ಮಾಡಿ ಪ್ರಿಯಾಂಕ್‌ ಖರ್ಗೆ ಮೋಟಾಬಾಯಿ ಮತ್ತು ಅವರ ಮಗ ಇದನ್ನು ಖಚಿತಪಡಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಮತ್ತು ಬಿಸಿಸಿಐ ಕಾರ್ಯರ್ದದರ್ಶಿ ಜಯ್‌ ಹೆಸರನ್ನು ಪರೋಕ್ಷವಾಗಿ ಪ್ರಸ್ತಾಪ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದು, ಡಿಕೆಶಿ ಇಬ್ಬರಿಗೂ ಮುಸ್ಲಿಮರೇ ಬೇಕು: ಪ್ರತಾಪ್ ಸಿಂಹ

    ಇಷ್ಟೇ ಅಲ್ಲದೇ ಐಟಿ, ಇಡಿ, ಸಿಬಿಐ ಮೊದಲಾದವು ಯಾವಾಗ ಬೇಕಾದರು ಕೆಲಸಕ್ಕೆ ಬರಬಹುದು ಎಂದು ಬರೆದು ಕಾಲೆಳೆದಿದ್ದಾರೆ. ಈ ಟ್ವೀಟ್‌ಗೆ ಪರ ಮತ್ತು ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ.

    ಮೊದಲ ಬಾರಿ ಐಪಿಎಲ್‌ ಆಡುತ್ತಿರುವ ಗುಜರಾತ್‌ ಟೈಟನ್ಸ್‌ ಈಗಾಗಲೇ ಪ್ಲೇ ಆಫ್‌ ಪ್ರವೇಶಿಸಿದೆ. ಆಡಿರುವ 12 ಪಂದ್ಯಗಳಲ್ಲಿ 9 ಪಂದ್ಯಗಳನ್ನು ಗೆದ್ದು 18 ಅಂಕ ಸಂಪಾದಿಸಿ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಲಕ್ನೋ ತಂಡ 16 ಅಂಕ ಸಂಪಾದಿಸಿ ಎರಡನೇ ಸ್ಥಾನದಲ್ಲಿದೆ.