Tag: IPL

  • ರಸೆಲ್ ಆಲ್‍ರೌಂಡರ್ ಆಟ – ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಕೋಲ್ಕತ್ತಾಗೆ ಭರ್ಜರಿ ಜಯ

    ರಸೆಲ್ ಆಲ್‍ರೌಂಡರ್ ಆಟ – ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಕೋಲ್ಕತ್ತಾಗೆ ಭರ್ಜರಿ ಜಯ

    ಪುಣೆ: ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಕೋಲ್ಕತ್ತಾ ತಂಡದ ಸ್ಟಾರ್ ಆಲ್‍ರೌಂಡರ್ ಆಂಡ್ರೆ ರಸೆಲ್ ಬ್ಯಾಟಿಂಗ್ ಮತ್ತು ಬೌಲಿಂಗ್ ಮೂಲಕ ತಂಡಕ್ಕೆ ನೆರವಾಗಿ ಹೈದರಾಬಾದ್ ವಿರುದ್ಧ 54 ರನ್‍ಗಳ ಗೆಲುವಿನ ರೂವಾರಿಯಾದರು. ಜೊತೆಗೆ ಪ್ಲೇ ಆಫ್ ಕನಸನ್ನು ಜೀವಂತವಾಗಿಡುವಲ್ಲಿ ನೆರವಾದರು.


    ಕೋಲ್ಕತ್ತಾ ನೀಡಿದ 178 ರನ್‍ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್ ತಂಡಕ್ಕೆ ರಸೆಲ್ ಪ್ರಮುಖ ಮೂರು ವಿಕೆಟ್ ಕಿತ್ತು ಮುಳುವಾದರು. ಇತ್ತ ಬ್ಯಾಟಿಂಗ್ ವೈಫಲ್ಯದಿಂದ ಹೈದರಾಬಾದ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 123 ರನ್ ಪೇರಿಸಲಷ್ಟೇ ಶಕ್ತವಾಗಿ ಸೋಲುಂಡಿತು. ಜೊತೆಗೆ ತನ್ನ ಪ್ಲೇ ಆಫ್ ಹಾದಿಯನ್ನು ಇನ್ನಷ್ಟು ದುರ್ಗಮಗೊಳಿಸಿಕೊಂಡಿದೆ.

    ಹೈದರಾಬಾದ್ ಪರ ಅಭಿಷೇಕ್ ಶರ್ಮಾ 43 ರನ್ (28 ಎಸೆತ, 4 ಬೌಂಡರಿ, 2 ಸಿಕ್ಸ್) ಮತ್ತು ಮಾಕ್ರಾರ್ಮ್ 32 ರನ್ (25 ಎಸೆತ, 3 ಸಿಕ್ಸ್)  ಬಾರಿಸಿದನ್ನು ಹೊರತು ಪಡಿಸಿ ಇನ್ನೂಳಿದ 7 ಮಂದಿ ಆಟಗಾರರು ಒಂದಂಕಿ ಮೊತ್ತಕ್ಕೆ ಸುಸ್ತಾದರು.

    ಈ ಮೊದಲು ಟಾಸ್ ಗೆದ್ದ ಕೋಲ್ಕತ್ತಾ ತಂಡ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿತು. ಆದರೆ ಕೋಲ್ಕತ್ತಾಗೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಆಟಗಾರ ವೆಂಕಟೇಶ್ ಅಯ್ಯರ್ 7 ರನ್‍ಗಳಿಗೆ ಔಟ್ ಆಗಿ ನಿರಾಸೆ ಮೂಡಿಸಿದರು.

    ಈ ಮೊದಲು ಟಾಸ್ ಗೆದ್ದ ಕೋಲ್ಕತ್ತಾ ತಂಡ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿತು. ಆದರೆ ಕೋಲ್ಕತ್ತಾಗೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಆಟಗಾರ ವೆಂಕಟೇಶ್ ಅಯ್ಯರ್ 7 ರನ್‍ಗಳಿಗೆ ಔಟ್ ಆಗಿ ನಿರಾಸೆ ಮೂಡಿಸಿದರು.

    ನಂತರ ಒಂದಾದ ಅಜಿಂಕ್ಯಾ ರಹಾನೆ ಮತ್ತು ನಿತೀಶ್ ರಾಣಾ ಕೋಲ್ಕತ್ತಾ ತಂಡಕ್ಕೆ ಚೇತರಿಕೆ ನೀಡಿದರು. ಆದರೆ ದೊಡ್ಡ ಮೊತ್ತ ಪೇರಿಸಲು ಈ ಜೋಡಿ ವಿಫಲವಾಯಿತು. ರಹಾನೆ 28 ರನ್ (24 ಎಸೆತ, 3 ಸಿಕ್ಸ್) ಮತ್ತು ರಾಣಾ 26 ರನ್ (16 ಎಸೆತ, 1 ಬೌಂಡರಿ, 3 ಸಿಕ್ಸ್) ಸಿಡಿಸಿ 2ನೇ ವಿಕೆಟ್‍ಗೆ 48 ರನ್ (33) ಜೊತೆಯಾಟವಾಡಿ ಈ ಜೋಡಿ ಬೇರ್ಪಟ್ಟಿತು.

    ಉಮ್ರಾನ್ ಮಲಿಕ್ ಘಾತಕ ದಾಳಿ
    ಕೋಲ್ಕತ್ತಾದ ಅಗ್ರಕ್ರಮಾಂಕದ ಮೇಲೆ ಹೈದರಾಬಾದ್ ಘಾತಕ ವೇಗಿ ಉಮ್ರಾನ್ ಮಲಿಕ್ ತಮ್ಮ ಉರಿ ಚೆಂಡಿನ ದಾಳಿಯ ಮೂಲಕ ಪ್ರಮುಖ 3 ವಿಕೆಟ್ ಕಿತ್ತು ಸವಾರಿ ನಡೆಸಿದರು. ಆ ಬಳಿಕ ಕೋಲ್ಕತ್ತಾ ತಂಡಕ್ಕೆ ಸ್ಯಾಮ್ ಬಿಲ್ಲಿಂಗ್ಸ್ ಮತ್ತು ರಸೆಲ್ ರನ್ ಹೆಚ್ಚಿಸುವ ಸಾಹಸಕ್ಕೆ ಮುಂದಾದರು.

    ಬಿಲ್ಲಿಂಗ್ಸ್ 34 ರನ್ (29 ಎಸೆತ, 3 ಬೌಂಡರಿ, 1 ಸಿಕ್ಸ್) ಬಾರಿಸಿ 18ನೇ ಓವರ್‌ನಲ್ಲಿ ವಿಕೆಟ್ ಕಳೆದುಕೊಂಡರು. ಆದರೆ ಇತ್ತ ರೆಸೆಲ್ ಮಾತ್ರ ತಮ್ಮ ಎಂದಿನ ಹೊಡಿಬಡಿ ಆಟದ ಮೂಲಕ ಕೆಲಕಾಲ ಪ್ರೇಕ್ಷಕರನ್ನು ರಂಜಿಸಿದರು. ಜೊತೆಗೆ ಅಜೇಯ 49 ರನ್ (28 ಎಸೆತ, 3 ಬೌಂಡರಿ, 4 ಸಿಕ್ಸ್) ಚಚ್ಚಿ ತಂಡದ ಮೊತ್ತವನ್ನು 170ರ ಗಡಿದಾಟಿಸಿದರು.

    ಅಂತಿಮವಾಗಿ ಕೋಲ್ಕತ್ತಾ ತಂಡ 6 ವಿಕೆಟ್ ಕಳೆದುಕೊಂಡು 177 ರನ್ ಪೇರಿಸಿತು. ಹೈದರಾಬಾದ್ ಪರ ಉಮ್ರಾನ್ ಮಲಿಕ್ 3 ವಿಕೆಟ್ ಕಿತ್ತು ಮಿಂಚಿದರೆ, ಭುವನೇಶ್ವರ್ ಕುಮಾರ್, ಜಾನ್ಸನ್ ಮತ್ತು ನಟರಾಜನ್ ತಲಾ 1 ವಿಕೆಟ್ ಪಡೆದರು.

  • ಅವನಿಗಿಂತ ಉತ್ತಮ ಫಿನಿಶರ್ ಇಲ್ಲ, ಆತ T20 ವಿಶ್ವಕಪ್ ಪಂದ್ಯಕ್ಕೆ ಅರ್ಹ – ಬಜ್ಜಿ ಹೇಳಿದ್ದು ಯಾರಿಗೆ?

    ಅವನಿಗಿಂತ ಉತ್ತಮ ಫಿನಿಶರ್ ಇಲ್ಲ, ಆತ T20 ವಿಶ್ವಕಪ್ ಪಂದ್ಯಕ್ಕೆ ಅರ್ಹ – ಬಜ್ಜಿ ಹೇಳಿದ್ದು ಯಾರಿಗೆ?

    ಮುಂಬೈ: 2022ರ IPL ಆವೃತ್ತಿ ಹೊಸ – ಹೊಸ ಪ್ರತಿಭೆಗಳು ಹುಟ್ಟಿಕೊಳ್ಳುವಂತೆ ಮಾಡಿದೆ. ಕಳೆದ ಐಪಿಎಲ್‌ನಲ್ಲಿ ಕಳಪೆ ಆಟ ಪ್ರದರ್ಶಿಸಿ ಟೀಂ ಇಂಡಿಯಾದಿಂದ ಹೊರಗುಳಿಯುವ ಸಾಧ್ಯತೆಗಳಿದ್ದ ಪ್ಲೇಯರ್‌ಗಳು ಈ ಬಾರಿ ಬೆಸ್ಟ್ ಕ್ರಿಕೆಟರ್ಸ್ ಎನ್ನಿಸಿಕೊಂಡಿದ್ದಾರೆ. ಇನ್ನು ಕೆಲ ಹಿರಿಯ ಆಟಗಾರರು ಲಯ ಕಂಡುಕೊಂಡು ಶಹಬ್ಬಾಸ್ ಎನಿಸಿಕೊಳ್ಳುತ್ತಿದ್ದಾರೆ.

    dinesh karthik

    ಟೀ-20 ವಿಶ್ವಕಪ್‌ನಲ್ಲಿ ಕಳೆದ ಬಾರಿ ಲೀಗ್ ಹಂತದಲ್ಲೇ ಹೊರಗುಳಿದಿದ್ದ ಟೀಂ ಇಂಡಿಯಾ ಈ ಬಾರಿ ಕಪ್ ಗೆಲ್ಲುವ ಉತ್ಸಾಹದಲ್ಲಿದ್ದು, ಅದಕ್ಕಾಗಿ ಯಾವೆಲ್ಲಾ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ಚರ್ಚೆಯನ್ನೂ ನಡೆಸುತ್ತಿದೆ. ಈ ಬೆನ್ನಲ್ಲೇ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್ ಹಾಗೂ ಸುನೀಲ್ ಗವಾಸ್ಕರ್ ಓರ್ವ ಆಟಗಾರನ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಟೀಕೆಗಳ ನಡುವೆಯೂ ಮೈಲಿಗಲ್ಲು ಸಾಧಿಸಿದ ಕಿಂಗ್ ಕೊಹ್ಲಿ

    ಒಂದು ವೇಳೆ ನಾನು ಆಯ್ಕೆಗಾರರ ಸಮಿತಿಯಲ್ಲಿದ್ದರೆ, ಆತನನ್ನು ಆಯ್ಕೆ ಮಾಡಿಕೊಳ್ಳುತ್ತೇನೆ. ಎಂದು ಭರವಸೆ ನೀಡಿದ್ದಾರೆ. ಅದು ಮತ್ಯಾರೂ ಅಲ್ಲ, ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ದಿನೇಶ್ ಕಾರ್ತಿಕ್.

    dinesh karthik

    ಈ ಕುರಿತು ಮಾತನಾಡಿರುವ ಸಿಂಗ್, ದಿನೇಶ್ ಕಾರ್ತಿಕ್ ಆರ್‌ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲ ಪಂದ್ಯವನ್ನು ಗೆಲುವಿನ ದಡಕ್ಕೆ ಕೊಂಡೊಯ್ಯುವುದನ್ನು ಖಚಿತಪಡಿಸಿಕೊಳ್ಳುತ್ತಾರೆ. ನನ್ನ ಪ್ರಕಾರ, ಈ ಬಾರಿಯ ಐಪಿಎಲ್‌ನಲ್ಲಿ ಅತ್ಯುತ್ತಮ ಫಿನಿಷರ್ ಯಾರೆಂದರೆ ಅದು ದಿನೇಶ ಕಾರ್ತಿಕ್. ಅವರು ಆಫ್ ಸೈಡ್‌ಗಿಂತಲೂ ಲೆಗ್ ಸೈಡ್‌ನಲ್ಲಿ ಚೆನ್ನಾಗಿ ಆಡುತ್ತಿದ್ದಾರೆ. ಅವರಿಗಿಂತ ಉತ್ತಮ ಫಿನಿಷರ್ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

    ನಾನು ಆಯ್ಕೆಗಾರನಾದರೆ, ದಿನೇಶ್ ಕಾರ್ತಿಕ್‌ಗೆ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ನೀಡಲಿದ್ದೇನೆ. ಆತ ಅರ್ಹನಾಗಿದ್ದಾನೆ. ಟೀಂ ಇಂಡಿಯಾಕ್ಕೆ ಅತ್ಯುತ್ತಮ ಫಿನಿಶರ್ ಬೇಕೆಂದಿದ್ದರೆ ಅದು ದಿನೇಶ್ ಕಾರ್ತಿಕ್ ಹಾಗೂ ಹಾರ್ದಿಕ್ ಪಾಂಡ್ಯ ಆಗಿರಬೇಕು. ಅವರು ತಂಡವನ್ನು ಬಲಿಷ್ಠಗೊಳಿಸುತ್ತಾರೆ ಎಂದು ಹರ್ಭಜನ್ ಹೇಳಿದ್ದಾರೆ. ಇದನ್ನೂ ಓದಿ: RCB ಫ್ಯಾನ್ಸ್‌ಗಳಿಗೆ ಭರ್ಜರಿ ಗುಡ್‌ನ್ಯೂಸ್ – ಎಬಿಡಿ ಮತ್ತೆ ಎಂಟ್ರಿ

    dinesh karthik

    15ನೇ ಆವೃತ್ತಿಯ ಐಪಿಎಲ್‌ನ 12 ಪಂದ್ಯಗಳಲ್ಲಿ 274 ರನ್‌ಗಳಿಸಿರುವ ದಿನೇಶ್ ಕಾರ್ತಿಕ್ ಕೆಲ ಮ್ಯಾಚ್‌ಗಳಲ್ಲಿ ಉತ್ತಮ ಫಿನಿಶರ್ ಆಗಿ ಬ್ಯಾಟಿಂಗ್ ಅಬ್ಬರಿಸಿದ್ದಾರೆ. ಮುಂದಿನ ಟಿ20 ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ತಂಡದೊಂದಿಗೆ ಟಿ20 ಸರಣಿ ನಡೆಯಲಿದೆ. ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಮಾತುಗಳು ಕೇಳಿಬರುತ್ತಿವೆ.

    ಇದಕ್ಕೆ ಪ್ರತಿಕ್ರಿಯಿಸಿರುವ ಭಾರತದ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಸಹ, ಕಳೆದ ಬಾರಿ ಟಿ20 ವರ್ಲ್ಡ್ ಕಪ್‌ನಲ್ಲಿ ದಿನೇಶ್ ಕಾರ್ತಿಕ್ ಆಯ್ಕೆಯಾಗಲಿಲ್ಲ. ಆದರೆ ಈ ಬಾರಿ ಐಪಿಎಲ್‌ನಲ್ಲಿ ಅವರು ಆಡಿದ ರೀತಿ ಉತ್ತಮವಾಗಿದೆ. ನಾನು ಆಯ್ಕೆ ತಂಡದಲ್ಲಿದ್ದರೆ, ಖಂಡಿತವಾಗಿ ದಿನೇಶ್ ಕಾರ್ತಿಕ್ ಅವರನ್ನು ಟಿ20 ವರ್ಲ್ಡ್ ಕಪ್‌ಗೆ ಆಯ್ಕೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

    IPL 2022 GT VS LSG

    ರೇಸ್‌ನಲ್ಲಿ ಪಾಂಡ್ಯ: ಕಳೆದ ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಹಾರ್ದಿಕ್ ಪಾಂಡ್ಯ ಈ ಬಾರಿ ಹೊಸ ತಂಡದ ಮೂಲಕ ನಾಯಕನಾಗಿ ಪ್ರತಿನಿಧಿಸಿದ್ದು, ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದಾರೆ. ತಂಡದ ನಾಯಕನಾಗಿ ಉತ್ತಮ ಜವಾಬ್ದಾರಿ ನಿರ್ವಹಿಸಿದ್ದಾರೆ. ಈ ಐಪಿಎಲ್‌ನ 12 ಪಂದ್ಯಗಳಲ್ಲಿ 273 ರನ್‌ಗಳನ್ನು ಸಿಡಿಸಿ, ತಂಡ ಸೇರ್ಪಡೆಯಾದ ಮೊದಲ ಐಪಿಎಲ್‌ನಲ್ಲೇ ಪ್ಲೇ ಆಫ್ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

  • ಆರ್‌ಸಿಬಿ ಬೌಲರ್‌ಗಳನ್ನು ಚೆಂಡಾಡಿದ ಬೈರ್‌ಸ್ಟೋವ್, ಲಿವಿಂಗ್‌ಸ್ಟೋನ್ – ಪಂಜಾಬ್ ಪ್ಲೇ ಆಫ್ ಆಸೆ ಜೀವಂತ

    ಆರ್‌ಸಿಬಿ ಬೌಲರ್‌ಗಳನ್ನು ಚೆಂಡಾಡಿದ ಬೈರ್‌ಸ್ಟೋವ್, ಲಿವಿಂಗ್‌ಸ್ಟೋನ್ – ಪಂಜಾಬ್ ಪ್ಲೇ ಆಫ್ ಆಸೆ ಜೀವಂತ

    ಮುಂಬೈ: ಆರ್‌ಸಿಬಿ ಬೌಲರ್‌ಗಳನ್ನು ಚೆಂಡಾಡಿದ ಜಾನಿ ಬೈರ್‌ಸ್ಟೋವ್, ಲಿಯಾಮ್‌ ಲಿವಿಂಗ್‌ಸ್ಟೋನ್ ಬ್ಯಾಟಿಂಗ್ ಮೋಡಿಯ ಮುಂದೆ ಆರ್‌ಸಿಬಿ ಕಂಗಾಲಾಗಿ 54 ಗಳಿಂದ ಸೋಲುಂಡಿದೆ.

    ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಆರ್‌ಸಿಬಿ 210 ರನ್‍ಗಳ ಕಠಿಣ ಗುರಿ ನೀಡಿದ ಪಂಜಾಬ್ ನಂತರ ಬೌಲಿಂಗ್‍ನಲ್ಲೂ ಆರ್‌ಸಿಬಿ ಬ್ಯಾಟ್ಸ್‌ಮ್ಯಾನ್‌ಗಳನ್ನು 20 ಓವರ್‌ಗಳಲ್ಲಿ 155 ರನ್‌ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ ಆರ್‌ಸಿಬಿ ವಿರುದ್ಧ 54 ರನ್‌ಗಳ ಅಂತರದ ಗೆಲುವಿನೊಂದಿಗೆ ಪಂಜಾಬ್ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ. ಇತ್ತ ಆರ್‌ಸಿಬಿ ಪ್ಲೇ ಆಫ್ ಹಾದಿ ಮತ್ತಷ್ಟು ಕಠಿಣ ಗೊಂಡಿದೆ.

    ಪಂಜಾಬ್ ನೀಡಿದ ಬೃಹತ್ ಮೊತ್ತ ಬೆನ್ನಟ್ಟುವಲ್ಲಿ ಆರಂಭದಲ್ಲೇ ಎಡವಿದ ಆರ್‌ಸಿಬಿ ತಂಡ ವಿರಾಟ್ ಕೊಹ್ಲಿ 20 ರನ್ (14 ಎಸೆತ, 2 ಬೌಂಡರಿ, 1 ಸಿಕ್ಸ್) ಮತ್ತು ಡು ಫ್ಲೆಸಿಸ್ 10 ರನ್ (8 ಎಸೆತ, 2 ಬೌಂಡರಿ) ಸಿಡಿಸಿ ಪಂಜಾಬ್ ಬೌಲರ್‌ಗಳ ಮುಂದೆ ಮಂಡಿಯೂರಿದರು.

    ನಂತರ ಜೊತೆಯಾದ ರಜತ್ ಪಾಟಿದಾರ್ ಮತ್ತು ಮ್ಯಾಕ್ಸ್‌ವೆಲ್ ಮೂರನೇ ವಿಕೆಟ್‍ಗೆ ವೇಗದ 64 ರನ್ (37 ಎಸೆತ) ಜೊತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿದರು. ಪಾಟಿದರ್ 26 ರನ್ (21 ಎಸೆತ, 1 ಬೌಂಡರಿ, 2 ಸಿಕ್ಸ್) ಮತ್ತು ಮ್ಯಾಕ್ಸ್‌ವೆಲ್ 35 ರನ್ (22 ಎಸೆತ, 3 ಬೌಂಡರಿ, 1 ಸಿಕ್ಸ್) ಸಿಡಿಸಿ ಔಟ್ ಆಗುವುದರೊಂದಿಗೆ ವೇಗ ಪಡೆದಿದ್ದ ಆರ್‌ಸಿಬಿ ಚೇಸಿಂಗ್ ಮಂಕಾಯಿತು. ಆ ಬಳಿಕ ಬಂದ ದಿನೇಶ್ ಕಾರ್ತಿಕ್ 11 ರನ್ (11 ಎಸೆತ, 1 ಬೌಂಡರಿ) ಬಾರಿಸಿ ಔಟ್ ಆಗುವುದರೊಂದಿಗೆ ಗೆಲುವಿನ ಆಸೆ ಕಮರಿತು.

    ಟಾಸ್ ಗೆದ್ದ ಬೆಂಗಳೂರು ಪಂಜಾಬ್ ತಂಡವನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿ ಕೈಸುಟ್ಟುಕೊಂಡಿತು. ಆರಂಭದಿಂದಲೇ ಆರ್‌ಸಿಬಿ ಬೌಲರ್‌ಗಳ ಮೇಲೆ ಸವಾರಿ ನಡೆಸಿದ ಪಂಜಾಬ್‍ನ ಆರಂಭಿಕ ಜೋಡಿ ಮೊದಲ ವಿಕೆಟ್‍ಗೆ 60 ರನ್ (30 ಎಸೆತ) ಚಚ್ಚಿ ಉತ್ತಮ ಜೊತೆಯಾಟವಾಡಿತು.

    ಬೈರ್‌ಸ್ಟೋವ್, ಲಿವಿಂಗ್‌ಸ್ಟೋನ್ ಅಬ್ಬರ
    ಜಾನಿ ಬೈರ್‌ಸ್ಟೋವ್ ಬೌಂಡರಿ, ಸಿಕ್ಸರ್‌ಗಳ ಸುರಿಮಳೆ ಸುರಿಸಿದರೆ, ಶಿಖರ್ ಧವನ್ 21 ರನ್ (15 ಎಸೆತ, 2 ಬೌಂಡರಿ, 1 ಸಿಕ್ಸ್) ಸಿಡಿಸಿ ಮ್ಯಾಕ್ಸ್‌ವೆಲ್ ಬೌಲಿಂಗ್‍ನಲ್ಲಿ ವಿಕೆಟ್ ಕೈಚೆಲ್ಲಿಕೊಂಡರು. ನಂತರ ಬೈರ್‌ಸ್ಟೋವ್ ಜೊತೆಯಾದ ಲಿವಿಂಗ್‌ಸ್ಟೋನ್ ನಿಧಾನವಾಗಿ ಅಬ್ಬರಿಸಲು ಆರಂಭಿಸಿದರು. ಆದರೆ ಇತ್ತ ಬೈರ್‌ಸ್ಟೋವ್ 66 ರನ್ (29 ಎಸೆತ, 4 ಬೌಂಡರಿ, 7 ಸಿಕ್ಸ್) ಚಚ್ಚಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ಔಟ್ ಆದರು.

    ಅಕ್ಷರ್ ಪಟೇಲ್ ಮ್ಯಾಜಿಕ್ ಬೌಲಿಂಗ್
    ಬೈರ್‌ಸ್ಟೋವ್ ವಿಕೆಟ್ ಕಳೆದುಕೊಂಡ ಬಳಿಕ ಅಕ್ಷರ್ ಪಟೇಲ್ ದಾಳಿಗೆ ಪಂಜಾಬ್ ಕುಸಿತಕ್ಕೊಳಗಾಯಿತು. ಆದರೆ ಇನ್ನೊಂದು ಕಡೆ ಲಿವಿಂಗ್‌ಸ್ಟೋನ್ ಆರ್‌ಸಿಬಿ ಬೌಲರ್‌ಗಳ ಚಳಿ ಬಿಡಿಸಿದರು. ಮೈದಾನ ಅಷ್ಟ ದಿಕ್ಕುಗಳಿಗೂ ಬೌಂಡರಿ, ಸಿಕ್ಸರ್‌ಗಳ ಮೂಲಕ ಬಾಲ್ ಪರಿಚಯಿಸಿದರು. ಕೊನೆಗೆ ಅವರ ಅಬ್ಬರದಾಟ 70 ರನ್ (42 ಎಸೆತ, 5 ಬೌಂಡರಿ, 4 ಸಿಕ್ಸ್)ಗೆ ಕೊನೆಗೊಳಿಸುವಲ್ಲಿ ಅಕ್ಷರ್ ಪಟೇಲ್ ಯಶಸ್ವಿಯಾದರು.

    ಅಷ್ಟೊತ್ತಿಗಾಗಲೇ ಪಂಜಾಬ್ ತಂಡ 200ರ ಗಡಿದಾಟಿತ್ತು. ಅಂತಿಮವಾಗಿ ಪಂಜಾಬ್ 9 ವಿಕೆಟ್ ನಷ್ಟಕ್ಕೆ 209 ರನ್‍ಗಳ ಬೃಹತ್ ಮೊತ್ತ ಪೇರಿಸಿತು. ಆರ್‌ಸಿಬಿ ಪರ ಬೌಲಿಂಗ್‍ನಲ್ಲಿ ಹರ್ಷಲ್ ಪಟೇಲ್ 4 ವಿಕೆಟ್ ಕಿತ್ತು ಮಿಂಚಿದರು.

    ರನ್ ಏರಿದ್ದು ಹೇಗೆ?
    50 ರನ್ 23 ಎಸೆತ
    100 ರನ್ 54 ಎಸೆತ
    150 ರನ್ 88 ಎಸೆತ
    200 ರನ್ 114 ಎಸೆತ
    209 ರನ್ 120 ಎಸೆತ

  • ಚೆನ್ನೈ ವಿರುದ್ಧ ಸಮರ ಸಾರಿದ ಸ್ಯಾಮ್ಸ್ – ಸಿಎಸ್‍ಕೆ ಪ್ಲೇ ಆಫ್ ಕನಸು ಭಗ್ನ

    ಚೆನ್ನೈ ವಿರುದ್ಧ ಸಮರ ಸಾರಿದ ಸ್ಯಾಮ್ಸ್ – ಸಿಎಸ್‍ಕೆ ಪ್ಲೇ ಆಫ್ ಕನಸು ಭಗ್ನ

    ಮುಂಬೈ: ಬೌಲರ್‌ಗಳ ಮೇಲಾಟಕ್ಕೆ ಸಾಕ್ಷಿಯಾದ ಮುಂಬೈ ಮತ್ತು ಚೆನ್ನೈ ನಡುವಿನ ಪಂದ್ಯದಲ್ಲಿ 5 ವಿಕೆಟ್‍ಗಳಿಂದ ಮುಂಬೈ ಗೆದ್ದು ಚೆನ್ನೈಗೆ ತೆರೆದುಕೊಂಡಿದ್ದ ಪ್ಲೇ ಆಫ್ ಬಾಗಿಲನ್ನು ಮುಚ್ಚಿಸಿದೆ.

    98 ರನ್‍ಗಳ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಮುಂಬೈ ತಂಡಕ್ಕೆ ಚೆನ್ನೈ ಬೌಲರ್‌ಗಳ ಪ್ರತಿರೋಧದ ನಡುವೆಯೂ ತಿಲಕ್ ವರ್ಮಾರ ಜವಾಬ್ದಾರಿಯುತ ಆಟ ಮುಂಬೈ ಗೆಲುವಿಗೆ ನೆರವಾಯಿತು. ತಿಲಕ್‌ ವಮಾ ಅಜೇಯ 34 ರನ್ (32 ಎಸೆತ, 4 ಬೌಂಡರಿ) ನೆರವಿನಿಂದ 14.5 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 103 ಸಿಡಿಸಿ ಇನ್ನೂ 31 ಎಸೆತ ಬಾಕಿ ಇರುವಂತೆ ಮುಂಬೈ 5 ವಿಕೆಟ್‍ಗಳ ಅಂತರದ ಜಯ ದಾಖಲಿಸಿತು. ಈ ಮೂಲಕ ಟೂರ್ನಿಯ ಮೂರನೇ ಗೆಲುವಿನ ಸಂಭ್ರಮ ಪಟ್ಟಿತು.

    98 ರನ್‍ಗಳ ಅಲ್ಪಮೊತ್ತ ಗುರಿ ಪಡೆದ ಮುಂಬೈ ಕೂಡ ಚೆನ್ನೈ ಬೌಲರ್‌ಗಳ ಮುಂದೆ ಪರದಾಟ ಆರಂಭಿಸಿತು. ಇಶಾನ್ ಕಿಶನ್ 6 ರನ್‍ಗೆ ಆಟ ನಿಲ್ಲಿಸಿದರು. ಆ ಬಳಿಕ ರೋಹಿತ್ ಶರ್ಮಾ 18 ರನ್ (14 ಎಸೆತ, 4 ಬೌಂಡರಿ) ಸಿಡಿಸಿ ವಿಕೆಟ್ ಕೈ ಚೆಲ್ಲಿಕೊಂಡರು. ನಂತರ ದಿಡೀರ್ ಕುಸಿತ ಕಂಡ ಮುಂಬೈ 33 ರನ್‍ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.  ಆ ಬಳಿಕ ಜೊತೆಯಾದ ತಿಲಕ್‌ ವರ್ಮಾ ಮತ್ತು ಹೃತಿಕ್ ಶೋಕೀನ್ ತಂಡದ ಗೆಲುವಿಗಾಗಿ ಹೋರಾಡಿದರು. ಶೋಕೀನ್‌ 18 ರನ್‌ (23 ಎಸೆತ, 2 ಬೌಂಡರಿ) ಬಾರಿಸಿ ಔಟ್‌ ಆದರು.

    ಈ ಮೊದಲು ಟಾಸ್ ಗೆದ್ದ ಮುಂಬೈ ನಾಯಕ ರೋಹಿತ್ ಶರ್ಮಾ ಚೆನ್ನೈ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದರು. ಇತ್ತ ರೋಹಿತ್ ನಿರ್ಧಾರವನ್ನು ಸರಿಯಾಗಿ ಬಳಸಿಕೊಂಡ ಮುಂಬೈ ಬೌಲರ್‌ಗಳು ನಾ ಮುಂದು ತಾ ಮುಂದು ಎನ್ನುವಂತೆ ವಿಕೆಟ್ ಬೇಟೆ ಆರಂಭಿಸಿದರು.

    ಚೆನ್ನೈ ಬ್ಯಾಟಿಂಗ್ ಬೆನ್ನೆಲುಬು ಮುರಿದ ಸ್ಯಾಮ್ಸ್
    ಆರಂಭದಲ್ಲೇ ಬಿಗಿ ದಾಳಿಯ ಮೂಲಕ ಡೇನಿಯಲ್ ಸ್ಯಾಮ್ಸ್ ಚೆನ್ನೈ ತಂಡದ ಅಕ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳಾದ ಕಾನ್ವೇ ಮತ್ತು ಅಲಿಯನ್ನು ಶೂನ್ಯಕ್ಕೆ ಪೆವಿಲಿಯನ್‍ಗೆ ಅಟ್ಟಿದರೆ, ಗಾಯಕ್ವಾಡ್‌ರನ್ನು 7 ರನ್‍ಗಳಿಗೆ ಡಗೌಟ್‌ ಸೇರಿಸಿದರು.

    ಒಂದು ಕಡೆ ವಿಕೆಟ್ ಪಟಪಟನೇ ಉರುಳುತ್ತಿದ್ದರೆ, ಇನ್ನೊಂದೆಡೆ ಧೋನಿ ತಂಡಕ್ಕಾಗಿ ಏಕಾಂಗಿ ಹೋರಾಟ ನಡೆಸಿದರು. ಆದರೆ ಇವರಿಗೆ ಯಾವೊಬ್ಬ ಬ್ಯಾಟ್ಸ್‌ಮ್ಯಾನ್‌ ಕೂಡ ಸಾಥ್ ನೀಡಲಿಲ್ಲ. ಧೋನಿ ಅಜೇಯ 36 ರನ್ (33 ಎಸೆತ, 4 ಬೌಂಡರಿ, 1 ಸಿಕ್ಸ್) ಸಿಡಿಸಿದ್ದನ್ನು ಹೊರತು ಪಡಿಸಿ ಬ್ರಾವೋ ಸಿಡಿಸಿದ 12 ರನ್ (15 ಎಸೆತ, 1 ಸಿಕ್ಸ್) ಅತಿ ಹೆಚ್ಚಿನ ಗಳಿಕೆಯಾಯಿತು.

    ಅಂತಿಮವಾಗಿ ಚೆನ್ನೈ ತಂಡ 16 ಓವರ್‌ಗಳಲ್ಲಿ ಸರ್ವ ಪತನ ಕಂಡಿತು. ಮುಂಬೈ ಪರ ಸ್ಯಾಮ್ಸ್ 3 ವಿಕೆಟ್ ಕಿತ್ತು ಮಿಂಚಿದರೆ, ರಿಲೆ ಮೆರೆಡಿತ್ ಮತ್ತು ಕುಮಾರ್ ಕಾರ್ತಿಕೇಯ ತಲಾ 2 ವಿಕೆಟ್ ಪಡೆದರು. ಇನ್ನೂಳಿದ 2 ವಿಕೆಟ್‍ಗಳನ್ನು ತಲಾ ಒಂದೊಂದರಂತೆ ಬುಮ್ರಾ ಮತ್ತು ರಮಣದೀಪ್ ಸಿಂಗ್ ಹಂಚಿಕೊಂಡು ಚೆನ್ನೈ ಬ್ಯಾಟ್ಸ್‌ಮ್ಯಾನ್‌ಗಳನ್ನು ಅಲ್ಪಮೊತ್ತಕ್ಕೆ ಕಟ್ಟಿ ಹಾಕಿದರು.

  • ಜಡೇಜಾ ಐಪಿಎಲ್‍ನಿಂದ ಹೊರಗುಳಿದಂತೆ ಸಿಎಸ್‍ಕೆ ಫ್ರಾಂಚೈಸ್ ಇನ್‍ಸ್ಟಾಗ್ರಾಂ ಅನ್‍ಫಾಲೋ ಮಾಡಿದ್ಯಾಕೆ?

    ಜಡೇಜಾ ಐಪಿಎಲ್‍ನಿಂದ ಹೊರಗುಳಿದಂತೆ ಸಿಎಸ್‍ಕೆ ಫ್ರಾಂಚೈಸ್ ಇನ್‍ಸ್ಟಾಗ್ರಾಂ ಅನ್‍ಫಾಲೋ ಮಾಡಿದ್ಯಾಕೆ?

    ಮುಂಬೈ: ಗಾಯದ ಸಮಸ್ಯೆಯಿಂದ 15ನೇ ಆವೃತ್ತಿ ಐಪಿಎಲ್‍ನ ಉಳಿದ ಪಂದ್ಯಗಳಿಂದ ರವೀಂದ್ರ ಜಡೇಜಾ ಹೊರ ನಡೆದಿದ್ದಾರೆ. ಈ ನಡುವೆ ಇಂದು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸ್ ಜಡೇಜಾ ಅವರ ಇನ್‍ಸ್ಟಾಗ್ರಾಂ ಖಾತೆಯನ್ನು ಅನ್‍ಫಾಲೋ ಮಾಡಿದೆ. ಇದು ಬಾರಿ ಚರ್ಚೆಗೆ ಗ್ರಾಸವಾಗಿದೆ.

    15ನೇ ಆವೃತ್ತಿ ಐಪಿಎಲ್ ಆರಂಭಕ್ಕೂ ಮುನ್ನ ಧೋನಿ ಚೆನ್ನೈ ತಂಡದ ನಾಯಕತ್ವ ತೊರೆದು ಜಡೇಜಾಗೆ ನಾಯಕತ್ವದ ಪಟ್ಟ ಕಟ್ಟಿದ್ದರು. ಆ ಬಳಿಕ ಚೆನ್ನೈ ಹೀನಾಯ ಪ್ರದರ್ಶನ ತೋರಿತು. ನಂತರ ಮತ್ತೆ ಧೋನಿ ನಾಯಕತ್ವ ವಹಿಸಿಕೊಂಡ ಬೆನ್ನಲ್ಲೇ ಜಡೇಜಾ ಗಾಯಾಳುವಾಗಿ ತಂಡ ತೊರೆದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ತಂಡದೊಳಗೆ ಕಿತ್ತಾಟ ನಡೆಯುತ್ತಿದೆ ಎಂಬ ಮಾತಿಗೆ ಜೀವ ತುಂಬಿದೆ. ಜಡೇಜಾ ಅವರ ಇನ್‍ಸ್ಟಾಗ್ರಾಂ ಖಾತೆಯನ್ನು ಚೆನ್ನೈ ಫ್ರಾಂಚೈಸ್ ಅನ್‍ಫಾಲೋ ಮಾಡಿರುವುದು‌ ಯಾಕೆ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ. ಇದನ್ನೂ ಓದಿ: ಜಿಮ್‍ನಲ್ಲಿ ಒಟ್ಟಿಗೆ ವರ್ಕೌಟ್ ಮಾಡಿದ ಶಿಖರ್ ಧವನ್, ಪ್ರೀತಿ ಜಿಂಟಾ ವೀಡಿಯೋ ವೈರಲ್

    IPL 2022 RR VS LSG

    ಈ ನಡುವೆ ಮಾಜಿ ಆಟಗಾರ ಆಕಾಶ್ ಚೋಪ್ರಾ, ಜಡೇಜಾ ಗಾಯದ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಜಡೇಜಾ ಮುಂದಿನ ಐಪಿಎಲ್‍ನಲ್ಲಿ ಚೆನ್ನೈ ತಂಡದಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇದನ್ನೂ ಓದಿ: ಕೆ.ಎಲ್ ರಾಹುಲ್ ಜೊತೆ ಮಗಳ ಮದುವೆಗೆ ಸುನೀಲ್ ಶೆಟ್ಟಿ ಗ್ರೀನ್ ಸಿಗ್ನಲ್

    ಚೆನ್ನೈ ತಂಡ ಜಡೇಜಾಗೆ 16 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿತ್ತು. ಆದರೆ ಜಡೇಜಾ 15ನೇ ಆವೃತ್ತಿ ಐಪಿಎಲ್‍ನಲ್ಲಿ ಒಟ್ಟು 10 ಪಂದ್ಯಗಳಿಂದ 116 ರನ್ ಮತ್ತು 3 ವಿಕೆಟ್ ಕಿತ್ತು ಕಳಪೆ ಪ್ರದರ್ಶನ ನೀಡಿದ್ದಾರೆ. ಡೆಲ್ಲಿ ವಿರುದ್ಧದ ಕಳೆದ ಪಂದ್ಯದಲ್ಲಿ ಜಡೇಜಾರನ್ನು ಗಾಯದ ಸಮಸ್ಯೆ ಎಂದು ಹೊರಗಿಡಲಾಗಿತ್ತು. ಆ ಬಳಿಕ ಜಡೇಜಾ ಟೂರ್ನಿಯಿಂದಲೇ ಔಟ್ ಆಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆ ಆಗುತ್ತಿದೆ.

     

  • ಮಾರ್ಷ್‌, ವಾರ್ನರ್‌ ಅಬ್ಬರಕ್ಕೆ ರಾಜಸ್ಥಾನ ಪಂಚರ್‌ – ಡೆಲ್ಲಿಗೆ 8 ವಿಕೆಟ್‌ಗಳ ಭರ್ಜರಿ ಜಯ

    ಮಾರ್ಷ್‌, ವಾರ್ನರ್‌ ಅಬ್ಬರಕ್ಕೆ ರಾಜಸ್ಥಾನ ಪಂಚರ್‌ – ಡೆಲ್ಲಿಗೆ 8 ವಿಕೆಟ್‌ಗಳ ಭರ್ಜರಿ ಜಯ

    ಮುಂಬೈ: ಮಿಚೆಲ್ ಮಾರ್ಷ್ ಮತ್ತು ಡೇವಿಡ್‌ ವಾರ್ನರ್‌ ಅವರ ಅಬ್ಬರದ ಆಟದಿಂದ ಡೆಲ್ಲಿ ಕ್ಯಾಪಿಟಲ್ಸ್‌ ರಾಜಸ್ಥಾನ ರಾಯಲ್ಸ್‌ ವಿರುದ್ಧ 8 ವಿಕೆಟ್‌ಗಳ ಜಯ ಸಾಧಿಸಿದೆ.

    ಗೆಲ್ಲಲು 161 ರನ್‌ಗಳ ಗುರಿಯನ್ನು ಪಡೆದ ಡೆಲ್ಲಿ 18.1 ಓವರ್‌ಗಳಲ್ಲಿ 2  ವಿಕೆಟ್‌ ನಷ್ಟಕ್ಕೆ 161 ರನ್‌ ಹೊಡೆಯುವ ಮೂಲಕ ಗೆಲುವು ಸಾಧಿಸಿತು. ಪ್ಲೇ ಆಫ್‌ಗೆ ಹೋಗಲು ಡೆಲ್ಲಿಗೆ ಇಂದಿನ ಪಂದ್ಯದಲ್ಲಿ ಗೆಲುವು ಅಗತ್ಯವಾಗಿತ್ತು.

    ಬ್ಯಾಟಿಂಗ್‌ ಆರಂಭಿಸಿದ ಡೆಲ್ಲಿ ಮೊದಲ ಓವರ್‌ನ ಎರಡನೇ ಎಸೆತದಲ್ಲೇ ಮೊದಲ ವಿಕೆಟ್‌ ಕಳೆದುಕೊಂಡಿತ್ತು. ಟ್ರೆಂಟ್‌ ಬೌಲ್ಟ್‌ ಎಸೆತದಲ್ಲಿ ಶ್ರೀಕಾರ್‌ ಭರತ್‌ ಖಾತೆ ತೆರೆಯದೇ ಕೀಪರ್‌ ಸ್ಯಾಮ್ಸನ್‌ಗೆ ಕ್ಯಾಚ್‌ ನೀಡಿ ಔಟಾಗಿದ್ದರು.

    ಸಂಕಷ್ಟದ ಸಮಯದಲ್ಲಿ ಒಂದಾದ ಆಸ್ಟ್ರೇಲಿಯಾದ ಆಟಗಾರರಾದ ಮಾರ್ಷ್‌ ಮತ್ತು ಡೇವಿಡ್‌ ವಾರ್ನರ್‌ ನಿಧನವಾಗಿ ಇನ್ನಿಂಗ್ಸ್‌ ಕಟ್ಟಲು ಆರಂಭಿಸಿದರು. ಇವರಿಬ್ಬರೂ ಎರಡನೇ ವಿಕೆಟ್‌ಗೆ 101 ಎಸೆತಗಳಲ್ಲಿ 144 ರನ್‌ ಜೊತೆಯಾಡುವ  ಮೂಲಕ ಭದ್ರವಾದ ಅಡಿಪಾಯ ಹಾಕಿದರು.  ಇದನ್ನೂ ಓದಿ: RCB ಫ್ಯಾನ್ಸ್‌ಗಳಿಗೆ ಭರ್ಜರಿ ಗುಡ್‌ನ್ಯೂಸ್ – ಎಬಿಡಿ ಮತ್ತೆ ಎಂಟ್ರಿ

    ನಾಯಕ ಸಂಜು ಸ್ಯಾಮ್ಸನ್‌ ಅವರು ವಾರ್ನರ್‌ ಮತ್ತು ಮಾರ್ಷ್‌ ಅವರನ್ನು ಬೇರ್ಪಡಿಸಲು ಸಾಕಷ್ಟು ತಂತ್ರ ಮಾಡಿದರೂ ಇಬ್ಬರು ಸಿಕ್ಸರ್‌, ಬೌಂಡರಿಗಳನ್ನು ಸಿಡಿಸುತ್ತಿದ್ದರು.  ಮಾರ್ಷ್‌ 89 ರನ್‌(62 ಎಸೆತ, 5 ಬೌಂಡರಿ, 7 ಸಿಕ್ಸ್‌)  ಗಳಿಸಿದ್ದಾಗ ಸಿಕ್ಸ್‌ ಸಿಡಿಸಲು ಹೋಗಿ ಕ್ಯಾಚ್‌ ನೀಡಿ ಔಟಾದರು.

    ಡೇವಿಡ್‌ ವಾರ್ನರ್‌ ಔಟಾಗದೇ 52 ರನ್‌( 41 ಎಸೆತ, 5 ಬೌಂಡರಿ, 1 ಸಿಕ್ಸರ್‌) ನಾಯಕ ರಿಷಭ್‌ ಪಂತ್‌ ಔಟಾಗದೇ  13 ರನ್‌( 4 ಎಸೆತ, 2 ಸಿಕ್ಸರ್)‌ ಸಿಡಿಸಿ ತಂಡಕ್ಕೆ ಜಯವನ್ನು ತಂದುಕೊಟ್ಟರು.

    ಇಂದಿನ ಪಂದ್ಯವನ್ನು ಜಯಗಳಿಸಿದ ಡೆಲ್ಲಿ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲೇ ಮುಂದುವರಿದಿದೆ. 12 ಪಂದ್ಯವಾಡಿರುವ ಡೆಲ್ಲಿ 6 ಜಯದೊಂದಿಗೆ 12 ಅಂಕವನ್ನು ಪಡೆದಿದೆ. ಗುಜರಾತ್‌ ಟೈಟನ್ಸ್‌ 18 ಅಂಕದೊಂದಿಗೆ ಈಗಾಗಲೇ ಫ್ಲೇ ಆಫ್‌ ಪ್ರವೇಶಿಸಿದೆ. 16 ಅಂಕ ಸಂಪಾದಿಸಿರುವ ಲಕ್ನೋ ಎರಡನೇ ಸ್ಥಾನದಲ್ಲಿದೆ. 14 ಅಂಕ ಪಡೆದಿರುವ ರಾಜಸ್ಥಾನ ಮತ್ತು ಬೆಂಗಳೂರು ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದೆ.

    ಸಾಧಾರಣ ಮೊತ್ತ:
    ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ ರಾಯಲ್ಸ್‌ 11 ರನ್‌ ಗಳಿಸುವಷ್ಟರಲ್ಲೇ ಜೋಸ್‌ ಬಟ್ಲರ್‌ ವಿಕೆಟ್‌ ಕಳೆದುಕೊಂಡಿತ್ತು. ಯಶಸ್ವಿ ಜೈಸ್ವಾಲ್‌ 19 ರನ್‌ ಹೊಡೆದು ಔಟಾದರೆ ಸ್ಪಿನ್ನರ್‌ ಅಶ್ವಿನ್‌ ಸ್ಫೋಟಕ ಅರ್ಧಶತಕ ಸಿಡಿಸಿ ಔಟಾದರು.

    ಅಶ್ವಿನ್‌ 50 ರನ್‌(38 ಎಸೆತ, 4 ಬೌಂಡರಿ, 2 ಸಿಕ್ಸರ್‌) ಹೊಡೆದರೆ ದೇವದತ್‌ ಪಡಿಕ್ಕಲ್‌ 48 ರನ್‌(30 ಎಸೆತ, 6 ಬೌಂಡರಿ, 2 ಸಿಕ್ಸರ್‌) ಹೊಡೆದು ಔಟಾದರು. ಮಧ್ಯಮ ಕ್ರಮಾಂಕದಲ್ಲಿ ಕುಸಿತ ಕಂಡಿದ್ದರಿಂದ ಅಂತಿಮವಾಗಿ ರಾಜಸ್ಥಾನ 6 ವಿಕೆಟ್‌ ನಷ್ಟಕ್ಕೆ 160 ರನ್‌ ಹೊಡೆಯಿತು.

    ಚೇತನ್‌ ಸಕಾರಿಯಾ, ಅನ್ರಿಚ್ ನಾರ್ಟ್ಜೆ, ಮಿಚೆಲ್ ಮಾರ್ಷ್ ತಲಾ ಎರಡು ವಿಕೆಟ್‌ ಪಡೆದರು.

  • T20 ವಿಶ್ವಕಪ್‌ಗೂ ಮುನ್ನ ಭಾರತ, ಆಸ್ಟ್ರೇಲಿಯಾ T20 ಸರಣಿ

    T20 ವಿಶ್ವಕಪ್‌ಗೂ ಮುನ್ನ ಭಾರತ, ಆಸ್ಟ್ರೇಲಿಯಾ T20 ಸರಣಿ

    ಮುಂಬೈ: ಅಕ್ಟೋಬರ್-ನವೆಂಬರ್‌ನಲ್ಲಿ ನಿಗದಿಯಾಗಿರುವ 8ನೇ ಆವೃತ್ತಿಯ ಟಿ20 ವಿಶ್ವಕಪ್‌ಗೂ ಮುನ್ನ ತವರಿನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 3 ಟಿ20 ಪಂದ್ಯಗಳ ಸರಣಿ ಆಡಲಿದೆ. ಇದರೊಂದಿಗೆ 2023ರಲ್ಲಿ ಆಸೀಸ್ ತಂಡ ಮತ್ತೊಮ್ಮೆ ಭಾರತಕ್ಕೆ ಪ್ರವಾಸ ಕೈಗೊಳ್ಳಲಿದ್ದು, ಫೆಬ್ರವರಿ-ಮಾರ್ಚ್‌ನಲ್ಲಿಯೂ 4 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ ಎಂದು ವರದಿಯಾಗಿದೆ.

    eng ind t20 virat kohli rohit sharma

    ಸದ್ಯ ಆಸ್ಟ್ರೇಲಿಯಾದ ಮುಂದಿನ ಕ್ರಿಕೆಟ್ ಸರಣಿಗಳ ವೇಳಾಪಟ್ಟಿ ಪ್ರಕಾರ, ಆಸೀಸ್ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಪ್ರವಾಸ ಕೈಗೊಳ್ಳಲಿದ್ದು, 3 ಟಿ20 ಪಂದ್ಯಗಳನ್ನಾಡಲಿದೆ. ಬಳಿಕ ಕೆಲ ದಿನಗಳಲ್ಲೇ ಟಿ20 ವಿಶ್ವಕಪ್ ನಡೆಯಲಿರುವುದರಿಂದ ಉಭಯ ತಂಡಗಳಿಗೂ ಇದು ಮಹತ್ವದ ಸರಣಿ ಎನಿಸಿಕೊಂಡಿದೆ. ಇದನ್ನೂ ಓದಿ: ‘ಸಮ’ಬಲಶಾಲಿಗಳ ಹೋರಾಟದಲ್ಲಿ 62 ರನ್‌ಗಳ ಜಯ – ಪ್ಲೇ ಆಫ್‌ಗೆ ಗುಜರಾತ್ ಟೈಟನ್ಸ್ ಭರ್ಜರಿ ಎಂಟ್ರಿ

    ಐಪಿಎಲ್ ಬಳಿಕ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಜೂ.9ರಿಂದ 19ರ ವರೆಗೆ ತವರಿನಲ್ಲಿ 5 ಪಂದ್ಯಗಳ ಟಿ20 ಸರಣಿ ಆಡಲಿದ್ದು, ನಂತರ 2 ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಜುಲೈ 1 ರಿಂದ ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಮತ್ತು 3 ಟಿ20, 3 ಏಕದಿನ ಪಂದ್ಯಗಳನ್ನು ಆಡಬೇಕಿದೆ.

    T20 IND

    2021ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಆಸ್ಟ್ರೇಲಿಯಾ ಈ ಬಾರಿಯ ವಿಶ್ವಕಪ್ ಟೂರ್ನಿಯ ಆತಿಥ್ಯವನ್ನು ವಹಿಸಿಕೊಳ್ಳಲಿದೆ. ಮುಂದಿನ ತಿಂಗಳ ಜೂನ್-ಜುಲೈನಿಂದಲೇ ವಿವಿಧ ದೇಶದ ತಂಡಗಳೊಂದಿಗೆ ಟಿ20, ಟೆಸ್ಟ್ ಹಾಗೂ ಏಕದಿನ ಇನ್ನಿಂಗ್ಸ್ ಪಂದ್ಯಗಳು ಪ್ರಾರಂಭವಾಗಲಿದ್ದು, 2023ರ ಅಕ್ಟೋಬರ್ – ನವಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನೊಂದಿಗೆ ಈ ಆಸ್ಟ್ರೇಲಿಯಾದ ಸರಣಿ ಅಂತ್ಯಗೊಳ್ಳಲಿದೆ. ಇದನ್ನೂ ಓದಿ: ಝೀರೋ.. ಝೀರೋ.. ಝೀರೋ – ಶೂನ್ಯ ಸುತ್ತಿದ ಕೊಹ್ಲಿಗೆ ರಾಕಿಭಾಯ್ ಸ್ಟೈಲ್‌ನಲ್ಲಿ ಟ್ರೋಲ್

    ಕಳೆದ ಬಾರಿಯ ಟೂರ್ನಿಯಿಂದ ಲೀಗ್ ಹಂತದಲ್ಲಿಯೇ ಹೊರಬಿದ್ದಿದ್ದ ಟೀಂ ಇಂಡಿಯಾ ಈ ಬಾರಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿದು ಟ್ರೋಫಿ ಗೆಲ್ಲುವತ್ತ ಚಿತ್ತ ಹರಿಸಿದೆ.

    T20

    2020ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಭಾರತ ಆಸ್ಟ್ರೇಲಿಯಾವನ್ನು 2 – 1 ಅಂತರದಲ್ಲಿ ಸೋಲಿಸಿ ಸರಣಿಯನ್ನು ವಶಪಡಿಸಿಕೊಂಡಿತ್ತು. ಇಂಡಿಯಾ-ಆಸಿಸ್ ನಡುವೆ ಇದುವರೆಗೆ ಒಟ್ಟು 23 ಟಿ20 ಪಂದ್ಯಗಳು ನಡೆದಿದ್ದು ಈ ಪೈಕಿ ಭಾರತ 13 ಪಂದ್ಯಗಳಲ್ಲಿ ಗೆದ್ದಿದ್ದರೆ, ಆಸ್ಟ್ರೇಲಿಯಾ 9 ಪಂದ್ಯಗಳಲ್ಲಿ ಗೆದ್ದಿದೆ ಉಳಿದ ಒಂದು ಪಂದ್ಯಗಳಲ್ಲಿ ಫಲಿತಾಂಶ ಕಾಣದೇ ಅಂತ್ಯಗೊಂಡಿದೆ.

  • ಬೂಮ್ರಾ ಮಿಂಚಿನ ಬೌಲಿಂಗ್ ದಾಳಿಗೆ ಒಲಿಯದ ಜಯ- ಕೋಲ್ಕತ್ತಾಗೆ ಪ್ಲೇ ಆಫ್‌ ಕನಸು ಜೀವಂತ

    ಬೂಮ್ರಾ ಮಿಂಚಿನ ಬೌಲಿಂಗ್ ದಾಳಿಗೆ ಒಲಿಯದ ಜಯ- ಕೋಲ್ಕತ್ತಾಗೆ ಪ್ಲೇ ಆಫ್‌ ಕನಸು ಜೀವಂತ

    ಮುಂಬೈ: ಸತತ ಹ್ಯಾಟ್ರಿಕ್ ಗೆಲುವಿನ ಕನಸು ಕಂಡಿದ್ದ ಮುಂಬೈ ಇಂಡಿಯನ್ಸ್ ಆಸೆಗೆ ಕೋಲ್ಕತ್ತಾ ನೈಟ್‌ರೈಡರ್ಸ್ ತಂಡವು ತಣ್ಣೀರು ಎರಚಿದೆ. 165 ರನ್‌ಗಳ ಸಾಧಾರಣ ಮೊತ್ತ ಗಳಿಸಿದರೂ ಕೆಕೆಆರ್ ತಂಡವು ಮುಂಬೈ ವಿರುದ್ಧ 52 ರನ್‌ಗಳ ಭರ್ಜರಿ ಜಯ ಸಾಧಿಸಿ, ಪ್ಲೇ ಆಫ್‌ ಕನಸು ಜೀವಂತವಾಗಿಸಿಕೊಂಡಿದೆ.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್‌ರೈಡರ್ಸ್ (KKR) ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿ, 166 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 17.3 ಓವರ್‌ಗಳಲ್ಲೇ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 113 ರನ್‌ಗಳಿಸಿ, ಸೋಲನ್ನು ಒಪ್ಪಿಕೊಂಡಿತು.

    IPL 2022 MI VS KKR 02

    ಟಾಸ್ ಗೆದ್ದು ಮೊದಲು ಫೀಲ್ಡಿಂಗ್‌ಗೆ ಇಳಿದ ಮುಂಬೈ ಇಂಡಿಯನ್ಸ್ ತಂಡವು (MI) ಐಪಿಎಲ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ ಚೊಚ್ಚಲ 5 ವಿಕೆಟ್ (10ಕ್ಕೆ 5) ಸಾಧನೆ ನೆರವಿನಿಂದ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು 165 ರನ್‌ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಯಿತು. ಆದರೆ ಬ್ಯಾಟಿಂಗ್ ವಿಭಾಗದಲ್ಲಿ ಪ್ರಮುಖ ಬ್ಯಾಟ್ಸ್ಮನ್‌ಗಳ ವೈಫಲ್ಯ ಕಂಡಿತು. ಮತ್ತೆ ಫಾರ್ಮ್ ಕಳೆದುಕೊಂಡ ರೋಹಿತ್ ಶರ್ಮಾ 2 ರನ್‌ಗಳಿಗೆ ಮಂಡಿಯೂರಿದರು.

    IPL 2022 MI VS KKR 02

    ಇದರ ಬೆನ್ನಲ್ಲೇ ತಿಲಕ್‌ವರ್ಮಾ 6 ರನ್, ರಮಣದೀಪ್ ಸಿಂಗ್ 12 ರನ್, ಟಿಮ್ ಡೇವಿಡ್ 13 ರನ್‌ಗಳಿಸಿ ಹೊರ ನಡೆದರು. ಆದರೂ ಕೆಕೆಆರ್ ವಿರುದ್ಧ ಸತತ ಹೋರಾಟ ನಡೆಸಿದ ಇಶಾನ್ ಕಿಶನ್ ಜವಾಬ್ದಾರಿ ಅರ್ಧಶತಕ ಗಳಿಸಿದರು. 42 ಎಸೆತಗಳಲ್ಲಿ 51 ರನ್ (1 ಸಿಕ್ಸರ್, 5 ಬೌಂಡರಿ) ಗಳಿಸಿ 43ನೇ ಎಸೆತದಲ್ಲಿ ಬೌಂಡರಿ ಕ್ಯಾಚ್ ನೀಡಿದರು. ಆದರೂ ಕಿರನ್ ಪೋಲಾರ್ಡ್ ಅವರ ನಿಲುವಿನಿಂದ ಗೆಲುವಿನ ಕನಸು ಉಳಿಸಿಕೊಂಡಿದ್ದ ಮುಂಬೈ 17ನೇ ಓವರ್‌ನ ಮೊದಲ ಎಸೆತದಲ್ಲಿ ಸಿಕ್ಸ್ ಎತ್ತುವ ಪ್ರಯತ್ನದಲ್ಲಿ ಕೀಪರ್ ಕ್ಯಾಚ್ ನೀಡಿದರು. ಇದರಿಂದ ಮುಂಬೈ ಸಂಪೂರ್ಣ ಗೆಲುವಿನ ಭರವಸೆ ಕಳೆದುಕೊಂಡಿತು. ಪೊಲಾರ್ಡ್ 15 ರನ್‌ಗಳಿಸಿ ಹೊರನಡೆದರು.

    IPL 2022 MI VS KKR 02

    ಬೂಮ್ರಾ ಮಾರಕ ದಾಳಿ: ಪವರ್‌ಪ್ಲೇ ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ನಷ್ಟಕ್ಕೆ 60 ರನ್ ಕಲೆಹಾಕಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್ (ಕೆಕೆಆರ್)ಗೆ ಕಡಿವಾಣ ಹಾಕಿದ್ದು ಮುಂಬೈ ಪ್ರೈಮ್‌ ಬೌಲರ್ ಜಸ್ಪಿತ್‌ ಬುಮ್ರಾ. 18ನೇ ಓವರ್‌ನಲ್ಲಿ ಮೇಡನ್ ಸೇರಿದಂತೆ 3 ವಿಕೆಟ್ ಕಬಳಿಸಿದ ಜಸ್ಪಿತ್ ಬುಮ್ರಾ ಐಪಿಎಲ್‌ನಲ್ಲಿ ಮೊದಲ ಬಾರಿಗೆ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇದು ಕೇವಲ ಐಪಿಎಲ್ ಅಷ್ಟೇ ಅಲ್ಲದೆ ಟಿ20 ಫಾರ್ಮೆಟ್‌ನಲ್ಲಿ ಬುಮ್ರಾ ಬೆಸ್ಟ್ ಬೌಲರ್ ಆಗಿ ಮಿಂಚಿದ್ದಾರೆ.

    4 ಓವರ್‌ಗೆ ಕೇವಲ 10 ರನ್ ನೀಡಿ 1 ಮೇಡನ್ ಸೇರಿದಂತೆ 5 ವಿಕೆಟ್ ಪಡೆದ ದಾಖಲೆಯನ್ನ ಬುಮ್ರಾ ಮಾಡಿದರು. ಅದರಲ್ಲೂ ಕೊನೆಯ ಓವರ್‌ನಲ್ಲಿ ಕೇವಲ 1 ರನ್ ನೀಡಿದ ಬುಮ್ರಾ ಬೌಲಿಂಗ್ ದಾಳಿಗೆ ಕೆಕೆಆರ್ 165 ರನ್ ಗಳಿಸಲಷ್ಟೇ ಶಕ್ತವಾಯಿತು. 2020ರ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 14 ರನ್ ನೀಡಿ 4 ವಿಕೆಟ್ ಪಡೆದಿದ್ದು ಬುಮ್ರಾರ ಇದುವರೆಗಿನ ಬೆಸ್ಟ್ ಬೌಲಿಂಗ್ ಆಗಿತ್ತು. ಈ ಮೂಲಕ ಬೂಮ್ರಾ 10 ರನ್ ನೀಡಿ ಐಪಿಎಲ್‌ನಲ್ಲಿ 5 ವಿಕೆಟ್ ಸಾಧನೆ ಮಾಡಿದರು.

    IPL 2022 MI VS KKR 02

    15ನೇ ಓವರ್‌ನಲ್ಲಿ ರಸೆಲ್ ಜೊತೆಗೆ ನಿತೀಶ್ ರಾಣಾ ಅವರನ್ನು ತಮ್ಮ ಮಿಂಚಿನ ಬೌಲಿಂಗ್ ದಾಳಿಯಿಂದ ಹೊರ ದಬ್ಬಿದರು. ಪರಿಣಾಮ 14.5 ಓವರ್‌ಗಳಲ್ಲಿ 139 ರನ್ನಿಗೆ 5 ವಿಕೆಟ್ ಕಳೆದುಕೊಂಡಿತು. 26 ಎಸೆತಗಳನ್ನು ಎದುರಿಸಿದ ರಾಣಾ 43 ರನ್ (4 ಸಿಕ್ಸರ್, 3 ಬೌಂಡರಿ) ಗಳಿಸಿ ಹೊರನಡೆದರು. 18ನೇ ಓವರ್‌ನಲ್ಲಿ ಮತ್ತೆ 3 ವಿಕೆಟ್ ಗಳಿಸಿದ ಬೂಮ್ರಾ ಬಲವಾದ ಪೆಟ್ಟು ನೀಡಿದರು.

    ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಕೋಲ್ಕತ್ತ ಪರ ನಿತೀಶ್ ರಾಣಾ ಹಾಗೂ ವೆಂಕಟೇಶ್ ಅಯ್ಯರ್ ತಲಾ 43 ರನ್ ಗಳಿಸಿದರು. ಇಬ್ಬರ ಬ್ಯಾಟಿಂಗ್ ನೆರವಿನಿಂದ ಕೋಲ್ಕತ್ತಾ ತಂಡವು 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಲಷ್ಟೇ ಸಾಧ್ಯವಾಯಿತು.

    IPL 2022 MI VS KKR 02

    ಈ ಪಂದ್ಯಕ್ಕಾಗಿ ಕೆಕೆಆರ್ ತಂಡದಲ್ಲಿ 5 ಬದಲಾವಣೆಗಳನ್ನು ತರಲಾಗಿತ್ತು. ಮಗದೊಮ್ಮೆ ಆರಂಭಿಕರಾಗಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಹಾಗೂ ಅಜಿಂಕ್ಯ ರಹಾನೆ ಮೊದಲ ವಿಕೆಟ್‌ಗೆ 5.4 ಓವರ್‌ಗಳಲ್ಲಿ 60 ರನ್ ಪೇರಿಸಿದರು. ಅಜಿಂಕ್ಯಾ ರಹಾನೆ 24 ಎಸೆತಗಳಲ್ಲಿ 25 ರನ್ ಬಾರಿಸಿದರೆ, ವೆಂಕಟೇಶ್ 24 ಎಸೆತಗಳಲ್ಲಿ 43 ರನ್ (4 ಸಿಕ್ಸರ್, 3 ಬೌಂಡರಿ) ಸಿಡಿಸಿ ಮಿಂಚಿದರು.

    ಬಳಿಕ ಕ್ರೀಸ್‌ಗಿಳಿಸಿದ ನಿತೀಶ್ ರಾಣಾ ಮುಂಬೈ ವಿರುದ್ಧ ಹೋರಾಡಿದರು. ಈ ನಡುವೆ ಉತ್ತಮವಾಗಿ ಆಡುತ್ತಿದ್ದ ವೆಂಕಟೇಶ್ ವಿಕೆಟ್ ನಷ್ಟವಾಯಿತು. 24 ಎಸೆತಗಳನ್ನು ಎದುರಿಸಿದ ವೆಂಕಟೇಶ್ 43 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇದನ್ನೂ ಓದಿ: ಕ್ರೀಸ್‌ಗಿಳಿಯುವ ಮುನ್ನ ಧೋನಿ ಬ್ಯಾಟ್ ಕಚ್ಚಿದ್ದೇಕೆ? ರಹಸ್ಯ ಬಿಚ್ಚಿಟ್ಟ ಮಿಶ್ರಾ

    ಭರವಸೆಯ ಆಟಗಾರ ಆಂಡ್ರೆ ರಸೆಲ್ (9 ರನ್), ನಾಯಕ ಶ್ರೇಯಸ್ ಅಯ್ಯರ್ (6ರನ್) ಇಬ್ಬರ ಬ್ಯಾಟಿಂಗ್ ವೈಫಲ್ಯ ತಂಡವನ್ನು 170 ಗಡಿಯೊಳಗೇ ಕಟ್ಟಿಹಾಕಿತು. 13ನೇ ಓವರ್ ಮುಕ್ತಾಯದ ವೇಳೆಗೆ 131 ರನ್‌ಗಳಿದ್ದರೂ ಸಹ ನಂತರ ಪ್ರಮುಖ ಬ್ಯಾಟ್ಸ್ಮನ್‌ಗಳ ಬ್ಯಾಟಿಂಗ್ ವೈಫಲ್ಯ ತಂಡವನ್ನು ಅತೀ ಕಡಿಮೆ ರನ್‌ಗಳಲ್ಲೇ ಕಟ್ಟಿ ಹಾಕಿತು.

    ಶೆಲ್ಡನ್ ಜ್ಯಾಕ್ಸನ್ 5 ರನ್ ಗಳಿಸಿದರೆ, ಪ್ಯಾಟ್ ಕಮಿನ್ಸ್ ಹಾಗೂ ಸುನಿಲ್ ನಾರಾಯಣ್ ಶೂನ್ಯಕ್ಕೆ ಪೆವಿಲಿಯನ್ ಸೇರಿಕೊಂಡರೆ, ವರುಣ್ ಚಕ್ರವರ್ತಿ ಯಾವುದೇ ರನ್ ಕಲೆ ಹಾಕದೆ ಅಜೇಯರಾಗಿ ಉಳಿದರು. 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಂಕು ಸಿಂಗ್ 19 ಎಸೆತಗಳಲ್ಲಿ ಅಜೇಯ 23 ರನ್ ಬಾರಿಸಿದರು. ಒಟ್ಟಿನಲ್ಲಿ ಕೆಕೆಆರ್ ತಂಡದ ಪರ ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ ಮತ್ತು ರಿಂಕು ಸಿಂಗ್ ಹೊರತುಪಡಿಸಿ ಉಳಿದ ಯಾವುದೇ ಆಟಗಾರರು ಸಹ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿಲ್ಲ. ಹಾಗಾಗಿಯೇ ಕೆಕೆಆರ್ 20 ಓವರ್‌ಗಳಲ್ಲಿ ಸಾಧಾರಣ ಮೊತ್ತ ದಾಖಲಿಸಿತು.

    IPL 2022 KKR

    ಕಮಿನ್ಸ್, ರಸೆಲ್ ಬೌಲಿಂಗ್ ಕಮಾಲ್: ಪ್ರಮುಖ ಬ್ಯಾಟ್ಸ್ಮನ್‌ಗಳ ವೈಫಲ್ಯ ಎದುರಿಸಿದ ಕೆಕೆಆರ್ ತಂಡದಲ್ಲಿ ಪ್ಯಾಟ್ ಕಮಿನ್ಸ್, ಆಂಡ್ರೆ ರಸೆಲ್ ಬೌಲಿಂಗ್‌ನಲ್ಲಿ ಕಮಾಲ್ ಮಾಡಿದರು. 2 ಓವರ್‌ಗಳಲ್ಲಿ 21 ರನ್ ನೀಡಿದ ರಸೆಲ್ 2 ವಿಕೆಟ್ ಪಡೆದರೆ, ಕಮಿನ್ಸ್ 4 ಓವರ್‌ಗಳಲ್ಲಿ 22 ರನ್ ನೀಡಿ 3 ವಿಕೆಟ್ ಉರುಳಿಸಿದರು.

  • ಕ್ರೀಸ್‌ಗಿಳಿಯುವ ಮುನ್ನ ಧೋನಿ ಬ್ಯಾಟ್ ಕಚ್ಚಿದ್ದೇಕೆ? ರಹಸ್ಯ ಬಿಚ್ಚಿಟ್ಟ ಮಿಶ್ರಾ

    ಕ್ರೀಸ್‌ಗಿಳಿಯುವ ಮುನ್ನ ಧೋನಿ ಬ್ಯಾಟ್ ಕಚ್ಚಿದ್ದೇಕೆ? ರಹಸ್ಯ ಬಿಚ್ಚಿಟ್ಟ ಮಿಶ್ರಾ

    ಮುಂಬೈ: IPL 15ನೇ ಆವೃತ್ತಿಯಲ್ಲಿ ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರಸಿಂಗ್ ಧೋನಿ ಬ್ಯಾಟ್ ಕಚ್ಚುತ್ತಿದ್ದ ದೃಶ್ಯ ಬಾರೀ ಕುತೂಹಲ ಮೂಡಿಸಿತ್ತು.

    ಚೆನ್ನೈ ಇನ್ನಿಂಗ್ಸ್ ವೇಳೆ ಕೊನೆಯ ಹಂತದಲ್ಲಿ ಕುಳಿತಿದ್ದ ಧೋನಿ, ತಮ್ಮ ಬ್ಯಾಟ್ ಅನ್ನು ಕಚ್ಚುತ್ತಿದ್ದರು. ಈ ಫೋಟೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ, ಬ್ಯಾಟ್ ಕಚ್ಚಿದ್ದರ ಹಿಂದಿನ ರಹಸ್ಯವನ್ನು ಭಾರತೀಯ ಮಾಜಿ ಕ್ರಿಕೆಟಿಗ ಅಮಿತ್ ಮಿಶ್ರಾ ಬಹಿರಂಗಪಡಿಸಿದ್ದಾರೆ.

    https://twitter.com/Im_Perfect45/status/1523325474805456896?ref_src=twsrc%5Etfw%7Ctwcamp%5Etweetembed%7Ctwterm%5E1523325474805456896%7Ctwgr%5E%7Ctwcon%5Es1_&ref_url=https%3A%2F%2Fwww.prajavani.net%2Fsports%2Fcricket%2Fipl-2022-amit-mishra-explains-why-does-dhoni-bite-his-bat-935353.html

    ಧೋನಿ ಬ್ಯಾಟ್ ಅನ್ನು ಕಚ್ಚಿದ್ದೇಕೆ ಎಂದು ನೀವು ಆಶ್ಚರ್ಯಪಟ್ಟಿದ್ದರೆ, ಧೋನಿ ಅವರು ಬ್ಯಾಟಲ್ಲಿ ಇದ್ದ ಟೇಪ್ ಅನ್ನು ತೆಗೆಯಲು ಪ್ರಯತ್ನಿಸುತ್ತಿದ್ದರು. ಅವರು ಯಾವಾಗಲೂ ಕ್ಲೀನ್ ಬ್ಯಾಟ್ ಇಷ್ಟಪಡುತ್ತಾರೆ. ಎಂಎಸ್‌ಡಿ ಬ್ಯಾಟಿಂಗ್ ಮಾಡುವಾಗ ಒಂದೇ ಒಂದು ತುಂಡು ಟೇಪ್ ಸಹ ಕಾಣಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

    ಡೆಲ್ಲಿ ವಿರುದ್ಧ ನಡೆದ ಪಂದ್ಯದಲ್ಲಿ 91 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದ ಚೆನ್ನೈ , ಪ್ಲೇ-ಆಫ್ ಕನಸನ್ನು ಜೀವಂತವಾರಿಗಿಸಿದೆ. ಬ್ಯಾಟಿಂಗ್‌ನಲ್ಲಿ ಮಿಂಚಿದ ಧೋನಿ ಕೇವಲ 8 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 1 ಬೌಂಡರಿ ಸಿಡಿಸಿ 21 ರನ್ ಗಳಿಸಿ ಅಜೇಯರಾಗುಳಿದರು.

  • ಕಾನ್ವೆ ಬ್ಯಾಟಿಂಗ್ ಅಬ್ಬರ, ಮೊಯಿನ್ ಬೌಲಿಂಗ್ ದಾಳಿಗೆ ಡೆಲ್ಲಿ ತತ್ತರ – ಚೆನ್ನೆಗೆ 91 ರನ್‌ಗಳ ಗೆಲುವು

    ಕಾನ್ವೆ ಬ್ಯಾಟಿಂಗ್ ಅಬ್ಬರ, ಮೊಯಿನ್ ಬೌಲಿಂಗ್ ದಾಳಿಗೆ ಡೆಲ್ಲಿ ತತ್ತರ – ಚೆನ್ನೆಗೆ 91 ರನ್‌ಗಳ ಗೆಲುವು

    ಮುಂಬೈ: ಡಿವೈನ್ ಕಾನ್ವೆಯ ಸ್ಫೋಟಕ ಬ್ಯಾಟಿಂಗ್ ಹಾಗೂ ಮೊಯಿನ್ ಅಲಿ ಅವರ ಮಿಂಚಿನ ಬೌಲಿಂಗ್ ದಾಳಿಯಿಂದ ಚೆನ್ನೈ ಸೂಪರ್‌ಕಿಂಗ್ಸ್ 91 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

    ಮುಂಬೈನ ಡಾ.ಡಿ.ವೈ.ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್‌ಕಿಂಗ್ಸ್ ತಂಡವು 20 ಓವರ್‌ಗಳಲ್ಲಿ ಭರ್ಜರಿ 208 ರನ್ ಪೇರಿಸಿ, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 209 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.4 ಓವರ್‌ಗಳಲ್ಲೇ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 117 ರನ್‌ಗಳಿಸಿ ಸಿಎಸ್‌ಕೆಗೆ ಮಂಡಿಯೂರಿತು.

    IPL 2022 CSK VS DC 06

    ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದು ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 208 ರನ್ ಕಲೆಹಾಕಿದ್ದು ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 209 ರನ್‌ಗಳ ಬೃಹತ್ ಗುರಿಯನ್ನು ನೀಡಿತು. ಇದನ್ನೂ ಓದಿ: ಹೈದ್ರಾಬಾದ್ ಹಾರಾಟಕ್ಕೆ ಬ್ರೇಕ್ ಹಾಕಿದ ‘ಗ್ರೀನ್‌ಬಾಯ್ಸ್’- RCBಗೆ 67 ರನ್‌ಗಳ ಭರ್ಜರಿ ಜಯ

    IPL 2022 CSK VS DC 5

    ಈ ಗುರಿ ಬೆನ್ನತ್ತಿದ ಡೆಲ್ಲಿ ತಂಡದಲ್ಲಿ ಪ್ರಮುಖ ಬ್ಯಾಟರ್‌ಗಳ ವೈಫಲ್ಯ ಕಂಡುಬಂದಿತು. ಆರಂಭಿಕ ಆಟಗಾರ ಶ್ರೀಕರ್ ಭರತ್ 8 ರನ್‌ಗಳಿಗೆ ಹಾಗೂ ಸ್ಫೋಟಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ 19 ರನ್ (12 ಎಸೆತ) ಗಳಿಸಿ ವಿಕೆಟ್ ಒಪ್ಪಿಸಿದ್ದು, ಡೆಲ್ಲಿಗೆ ಆಘಾತ ನೀಡಿತು. ಈ ವೇಳೆ ರಿಷಭ್ ಪಂತ್ ಹಾಗೂ ಮಿಚೆಲ್ ಮಾರ್ಷ್ ಜೋಡಿ 19 ಎಸೆತಗಳಲ್ಲಿ 36 ರನ್‌ಗಳಿಸಿ, ತಂಡಕ್ಕೆ ಗೆಲುವಿನ ಕನಸು ಚಿಗುರುವಂತೆ ಮಾಡಿತ್ತು. ಆದರೆ ಪ್ರಮುಖ ಬ್ಯಾಟರ್‌ಗಳ ಸಾಂಗಿಕ ಪ್ರದರ್ಶನಕ್ಕೆ ಎಲ್ಲಿಯೂ ಅವಕಾಶ ಕೊಡದ ಸಿಎಸ್‌ಕೆ ಟೀಂ ಡೆಲ್ಲಿ ಬ್ಯಾಟರ್‌ಗಳನ್ನು ಕಟ್ಟಿ ಹಾಕಿತ್ತು.

    2 ವಿಕೆಟ್‌ಗಳನ್ನು ಕಳೆದುಕೊಂಡರೂ ಉತ್ತಮ ಪ್ರದರ್ಶನವನ್ನೇ ನೀಡಿದ್ದ ಡೆಲ್ಲಿ ತಂಡವು ಮೊದಲ 7 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 71 ರನ್‌ಗಳನ್ನು ಪೇರಿಸಿತ್ತು. ನಂತರ ಬಂದ ಪ್ರಮುಖ ಬ್ಯಾಟರ್‌ಗಳ ವೈಫಲ್ಯದ ಆಟ ತಂಡದ ಸೋಲನ್ನು ಒಪ್ಪಿಕೊಳ್ಳುವಂತೆ ಮಾಡಿತು.

    IPL 2022 CSK VS DC 5

    ಡೆಲ್ಲಿ ತಂಡದ ಪರ ಮಿಚೆಲ್ ಮಾರ್ಷ್ 25 ರನ್ (20 ಎಸೆತ, 3 ಬೌಂಡರಿ, 1 ಸಿಕ್ಸರ್), ರಿಷಭ್‌ಪಂತ್ 21 (11 ಎಸೆತ, 4 ಬೌಂಡರಿ), ಶಾರ್ದೂಲ್ ಠಾಕೂರ್ 24 ರನ್ (19 ಎಸೆತ, 1 ಸಿಕ್ಸರ್, 2 ಬೌಂಡರಿ), ರೋವ್ಮನ್ ಪೋವೆಲ್ 3, ಅಕ್ಸರ್ ಪಟೇಲ್ 6, ರಿಪಾಲ್ ಪಟೇಲ್ 1 ರನ್ ಗಳಿಸಿದರೆ, ಅನ್ರಿಚ್ ನಾರ್ಟ್ಜೆ 1 ರನ್‌ಗಳಿಸಿ ಅಜೇಯರಾಗುಳಿದರು. ಡೆಲ್ಲಿ ಪರ ಎನ್ರಿಚ್ ನಾಕಿಯಾ 3 ಹಾಗೂ ಖಲೀಲ್ ಅಹ್ಮದ್ 2 ವಿಕೆಟ್ ಗಳಿಸಿದರು.

    ಮೊಯಿನ್ ಬೌಲಿಂಗ್ ಮಿಂಚಿನ ದಾಳಿ: ಡೆಲ್ಲಿ ಬೌಲರ್‌ಗಳ ವಿರುದ್ಧ ಮಿಂಚಿನ ದಾಳಿ ನಡೆಸಿದ ಆಲ್‌ರೌಂಡರ್ ಮೊಯಿನ್ ಅಲಿ, ಡೆಲ್ಲಿ ಬ್ಯಾಟರ್‌ಗಳನ್ನು ಬಗ್ಗುಬಡಿದರು. 4 ಓವರ್‌ನಲ್ಲಿ ಕೇವಲ 13 ರನ್‌ಗಳನ್ನು ನೀಡಿ 3 ವಿಕೆಟ್ ಉರುಳಿಸಿದರು. ಇದಕ್ಕೆ ತಾವೇನು ಕಮ್ಮಿ ಇಲ್ಲವೆನ್ನುವಂತೆ ಮುಖೇಶ್ ಚೌಧರಿ, 2 ಸಿಮರ್ಜೀತ್ ಸಿಂಗ್ 2 ವಿಕೆಟ್ ಗಳಿಸಿದರು.

    IPL 2022 CSK VS DC 5

    ಕಾನ್ವೆ ಸ್ಫೋಟಕ ಬ್ಯಾಟಿಂಗ್: ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಸಿಎಸ್‌ಕೆ ತಂಡದ ಡಿವೋನ್ ಕಾನ್ವೆ ಹಾಗೂ ಋತುರಾಜ್ ಗಾಯಕವಾಡ್ ಮಗದೊಮ್ಮೆ ಅತ್ಯುತ್ತಮ ಪ್ರದರ್ಶನ ನೀಡಿದರು. ಆರಂಭದಲ್ಲಿ ಡೆಲ್ಲಿ ಬೌಲರ್‌ಗಳನ್ನು ಬೆಂಡಿತ್ತಿದ ಈ ಜೋಡಿ ಮೊದಲ ವಿಕೆಟ್ ಕಳೆದುಕೊಳ್ಳುವ ವೇಳೆಗೆ 11 ಓವರ್‌ಗಳಲ್ಲಿ 110 ರನ್‌ಗಳ ಜೊತೆಯಾಟ ಕಲೆಹಾಕಿತ್ತು. ಇಬ್ಬರ ಸಾಂಗಿಕ ಬ್ಯಾಟಿಂಗ್ ಪ್ರದರ್ಶನದಿಂದ ತಂಡವು 200 ರನ್‌ಗಳ ಗಡಿ ದಾಟಲು ಸಾಧ್ಯವಾಯಿತು.  ಇದನ್ನೂ ಓದಿ: ಮುಂಬೈ ತಂಡಕ್ಕೆ ರೋಚಕ ಜಯ – 3ನೇ ಸೋಲಿನ ಕಹಿ ಅನುಭವಿಸಿದ ಗುಜರಾತ್‌

    IPL 2022 CSK VS DC 5

    ಕಾನ್ವೆ ಕೇವಲ 27 ಎಸೆತಗಳಲ್ಲಿ ಅಮೋಘ ಅರ್ಧಶತಕ ಸಿಡಿಸಿ, ಈ ಸೀಸನ್‌ನಲ್ಲೇ ಹ್ಯಾಟ್ರಿಕ್ ಅರ್ಧಶತಕಗಳ ಸಾಧನೆ ಮಾಡಿದರು. ಅತ್ತ ಕಲಾತ್ಮಕ ಇನ್ನಿಂಗ್ಸ್ ಕಟ್ಟಿದ ಗಾಯಕವಾಡ್ 41 ರನ್ (33 ಎಸೆತ, 4 ಬೌಂಡರಿ, 1 ಸಿಕ್ಸರ್) ಗಳಿಸಿ ಔಟ್ ಆದರು. ಇದೇ ವೇಳೆ ಶತಕದ ಸನಿಹದಲ್ಲಿ ಕಾನ್ವೆ ಎಡವಿದರು. ಅಲ್ಲದೆ ಕೇವಲ 13 ರನ್ ಅಂತರದಿಂದ ಶತಕ ವಂಚಿತರಾದರು. 49 ಎಸೆತಗಳನ್ನು ಎದುರಿಸಿದ ಕಾನ್ವೆ ಏಳು ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 87 ರನ್ ಗಳಿಸಿದರು. ಇದಾದ ಬೆನ್ನಲ್ಲೇ ದುಬೆ 19 ಎಸೆತಗಳಲ್ಲಿ ಸ್ಪೋಟಕ 32 ರನ್ (2 ಬೌಂಡರಿ, 2 ಸಿಕ್ಸರ್) ಚಚ್ಚಿ ವಿಕೆಟ್ ಒಪ್ಪಿಸಿದರು.

    ಕೊನೆಯ ಹಂತದಲ್ಲಿ ನಾಯಕ ಮಹೇಂದ್ರ ಸಿಂಗ್ ಧೋನಿ 8 ಎಸೆತಗಳಲ್ಲಿ 21 ರನ್ ಗಳಿಸಿ (2 ಸಿಕ್ಸರ್, 1 ಬೌಂಡರಿ) ಅಜೇಯರಾಗುಳಿದರು. ಈ ಮೂಲಕ ಸಿಎಸ್‌ಕೆ 6 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿತು.

    IPL 2022 CSK VS DC 5

    ಡೆಲ್ಲಿ ಪ್ಲೇ ಆಫ್ ಕನಸು ಭಗ್ನ: ಮೊದಲ 10 ಪಂದಗಳಲ್ಲಿ 5 ಪಂದ್ಯಗಳನ್ನು ಗೆದ್ದಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇ ಆಫ್‌ಗೆ ಬರಲು ಇನ್ನೂ ಕನಿಷ್ಠ 3 ಪಂದ್ಯಗಳನ್ನು ಗೆಲ್ಲಬೇಕಿತ್ತು. ಆದರೆ ಚೆನ್ನೈಗೆ ಶರಾಣದ ಡೆಲ್ಲಿ ಉಳಿದ ನಾಲ್ಕು ಪಂದ್ಯಗಳಲ್ಲಿ ಕನಿಷ್ಠ ಮೂರು ಪಂದ್ಯಗಳನ್ನಾದರೂ ಗೆಲ್ಲಬೇಕಿದೆ. ನಂತರದ ರೇಸ್‌ನಲ್ಲಿ ಹೈದರಾಬಾದ್, ಕಿಂಗ್ಸ್ ಪಂಜಾಬ್ ತಂಡಗಳಿವೆ.

    ರನ್ ಏರಿದ್ದು ಹೇಗೆ?
    35 ಎಸೆತ 50 ರನ್
    61 ಎಸೆತ 100 ರನ್
    92 ಎಸೆತ 150 ರನ್
    120 ಎಸೆತ 208 ರನ್