Tag: IPL

  • 6 ಸಾವಿರ ರನ್‌ಗಳ ಗಡಿ ದಾಟಿ ಐಪಿಎಲ್ `ಶಿಖರ’ವೇರಿದ ಧವನ್

    6 ಸಾವಿರ ರನ್‌ಗಳ ಗಡಿ ದಾಟಿ ಐಪಿಎಲ್ `ಶಿಖರ’ವೇರಿದ ಧವನ್

    ಮುಂಬೈ: ಚೆನ್ನೈ ಸೂಪರ್‌ಕಿಂಗ್ಸ್ (CSK) ವಿರುದ್ಧ ಸೋಮವಾರ ನಡೆದ ಪಂದ್ಯದಲ್ಲಿ ಅಧಿಕ ರನ್‌ಗಳಿಸಿ ಮ್ಯಾನ್ ಆಫ್ ದಿ ಮ್ಯಾಚ್ (ಪಂದ್ಯಶ್ರೇಷ್ಠ) ಪ್ರಶಸ್ತಿ ಗಳಿಸಿದ ಶಿಖರ್ ಧವನ್ ಐಪಿಎಲ್‌ನಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದ್ದಾರೆ. ಐಪಿಎಲ್‌ನಲ್ಲಿ ಹೆಚ್ಚು ರನ್‌ಗಳಿಸಿರುವ ಬ್ಯಾಟ್ಸ್‌ಮನ್‌ ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ.

    CRICKET-IND-T20-IPL-DELHI-PUNJAB

    ಐಪಿಎಲ್‌ನಲ್ಲಿ ತಮ್ಮದೇ ಪ್ರಾಬಲ್ಯ ಹೊಂದಿರುವ ಶಿಖರ್ ಧವನ್, ತಮ್ಮ ಅದ್ಭುತ ಬ್ಯಾಟಿಂಗ್ ವೈಖರಿಯಿಂದ ಅಬ್ಬರಿಸಿದ್ದಾರೆ. ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತಮ್ಮ 200ನೇ ಪಂದ್ಯವಾಡಿದ ಅವರು, 6 ಸಾವಿರ ರನ್‌ಗಳ ಗಡಿ ದಾಟಿದ್ದಾರೆ. ಪೂರೈಸುವ ಮೂಲಕ ಐಪಿಎಲ್‌ನಲ್ಲಿ ಹೆಚ್ಚು ರನ್‌ಗಳಿಸಿದ 2ನೇ ಬ್ಯಾಟ್ಸ್‌ಮನ್‌ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಮೊದಲ ಪತ್ನಿಯಿಂದ ಒಪ್ಪಿಗೆ ಪಡೆದು 38 ವರ್ಷದ ಟೀಚರ್ ಜೊತೆ 66ರ ಅರುಣ್ ಲಾಲ್ ಮದುವೆ

    DHAVAN

    ಶಿಖರ್ ಧವನ್ ಅವರಿಗಿಂತ ಮೊದಲು ಈ ಸಾಧನೆ ಮಾಡಿರುವ ಆರ್‌ಸಿಬಿ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮ 3ನೇ ಸ್ಥಾನ, ಡೇವಿಡ್ ವಾರ್ನರ್ ನಾಲ್ಕನೇ ಸ್ಥಾನ ಹಾಗೂ ಸುರೇಶ್ ರೈನಾ 5ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: 4 ವರ್ಷಗಳ ನಂತರ ನನಗೆ ಐಪಿಎಲ್‍ನಲ್ಲಿ ಅವಕಾಶ ಸಿಕ್ಕಿದೆ: ರಿಷಿ ಧವನ್

    2022ರಲ್ಲಿ ನಡೆಯುತ್ತಿರುವ 15ನೇ ಆವೃತ್ತಿಯ ಐಪಿಎಲ್‌ನಲ್ಲಿ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ಬ್ಯಾಟ್ಸ್‌ಮನ್‌ ಆಗಿರುವ ಶಿಖರ್ ಧವನ್, ಈ ಹಿಂದೆ ಡೆಕ್ಕನ್ ಚಾರ್ಜರ್ಸ್, ಸನ್‌ರೈಸರ್ಸ್ ಹೈದ್ರಾಬಾದ್, ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳಲ್ಲಿ ಆಡಿರುವ ಅನುಭವ ಹೊಂದಿದ್ದಾರೆ.

    ಅಲ್ಲದೆ, ತಮ್ಮ ಟಿ20 ಕ್ರಿಕೆಟ್‌ನಲ್ಲಿ 9 ಸಾವಿರ ರನ್‌ಗಳ ಗಡಿ ದಾಟಿದ್ದು, ಇದೀಗ ಅತಿಹೆಚ್ಚು ರನ್‌ಗಳಿಸಿದ ಭಾರತದ 3ನೇ ಆಟಗಾರ ಎಂಬ ಖ್ಯಾತಿಯನ್ನೂ ಗಳಿಸಿದ್ದಾರೆ.

    ಐಪಿಎಲ್‌ನಲ್ಲಿ ಅತ್ಯಧಿಕ ರನ್‌ಗಳಿಸಿದವರು
    ವಿರಾಟ್ ಕೊಹ್ಲಿ – 215 ಪಂದ್ಯಗಳು- 6402 ರನ್
    ಶಿಖರ್ ಧವನ್ – 200 ಪಂದ್ಯಗಳು- 6086 ರನ್
    ರೋಹಿತ್ ಶರ್ಮಾ 221 ಪದ್ಯಗಳು- 5764
    ಡೇವಿಡ್ ವಾರ್ನರ್ 155 ಪಂದ್ಯಗಳು – 5668
    ಸುರೇಶ್ ರೈನಾ- 205 ಪಂದ್ಯಗಳು- 5528

  • ಕೊನೆಯವರೆಗೆ ಹೋರಾಡಿ ಸೋತ ಚೆನ್ನೈ – ಪಂಜಾಬ್‌ಗೆ 11 ರನ್‌ಗಳ ಜಯ

    ಕೊನೆಯವರೆಗೆ ಹೋರಾಡಿ ಸೋತ ಚೆನ್ನೈ – ಪಂಜಾಬ್‌ಗೆ 11 ರನ್‌ಗಳ ಜಯ

    ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ 187 ರನ್‌ಗಳಿಸಿದ ಕಿಂಗ್ಸ್ ಪಂಜಾಬ್ ತಂಡವು ಶಿಖರ್ ಧವನ್(88) ಹಾಗೂ ಬನುಕಾ ರಾಜಪಕ್ಸ ಅವರ ಅಬ್ಬರ ಆಟದಿಂದ 11 ರನ್‌ಗಳ ಗೆಲುವು ದಾಖಲಿಸಿದೆ.

    ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲ ಬ್ಯಾಟಿಂಗ್ ಅವಕಾಶ ಪಡೆದ ಪಂಜಾಬ್ ಕಿಂಗ್ಸ್, 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 187 ರನ್‌ಗಳ ಮೊತ್ತಗಳಿಸಿತು. 187 ರನ್‌ಗಳ ಗುರಿ ಬೆನ್ನತ್ತಿದ ಚೆನ್ನೈ ತಂಡವು 20 ಓವರ್‌ಗಳಲ್ಲಿ 176 ರನ್‌ಗಳನ್ನು ಗಳಿಸಲಷ್ಟೇ ಸಾಧ್ಯವಾಯಿತು. ಇದನ್ನೂ ಓದಿ: ವಿಕೆಟ್ ನೀಡಿದ ಪೋಲಾರ್ಡ್‍ಗೆ ಮುತ್ತು ಕೊಟ್ಟು ಸಂಭ್ರಮಿಸಿದ ಕೃನಾಲ್ ಪಾಂಡ್ಯ

    Dhavan

    ಚೆನ್ನೈ ಮೊದಲ 6 ಎಸೆತಗಳಲ್ಲಿ 10 ರನ್‌ಗಳನ್ನು ಗಳಿಸಿತು. ನಂತರದಲ್ಲಿ ರಾಬಿನ್ ಉತ್ತಪ್ಪ. ಶಿವಂ ದುಬೆ ಬಹುಬೇಗನೇ ನಿರ್ಗಮಿಸಿದರು. ಆದರೆ 2ನೇ ಕ್ರಮಾಂಕದಲ್ಲಿ ಬ್ಯಾಟ್ಸ್‌ಮನ್‌ ಆಗಿ ಕ್ರೀಸ್‌ಗಿಳಿದ ಅಂಬಟಿ ರಾಯುಡು 78ರನ್ (39 ಎಸೆತ, 7 ಬೌಂಡರಿ, 6 ಸಿಕ್ಸರ್) ಗಳನ್ನು ಚಚ್ಚುವ ಮೂಲಕ ಪಂಜಾಬ್ ಬೌಲರ್‌ಗಳ ಬೆವರಳಿಸಿದ್ದರು. ಇದರಿಂದಾಗಿ ಚೆನ್ನೈ ತಂಡಕ್ಕೆ ಗೆಲುವಿನ ಕನಸು ಚಿಗುರಿತ್ತು. ಇದನ್ನೂ ಓದಿ: 3.10 ಕೋಟಿ ರೂಪಾಯಿಯ ಐಷಾರಾಮಿ ಕಾರು ಖರೀದಿಸಿದ ಹಿಟ್ ಮ್ಯಾನ್

    RAYUDU CSK.png IPl

    ರಾಯುಡು ಆಟಕ್ಕೆ ಬ್ರೇಕ್ ಹಾಕುವಲ್ಲಿ ರಬಾಡಾ ಯಶಸ್ವಿಯಾದರು. 39ನೇ ಎಸೆತದಲ್ಲಿ ತಮ್ಮ ವಿಕೆಟ್ ಒಪ್ಪಿಸಿ ಹೊರನಡೆದರು. 5ನೇ ಕ್ರಮಾಂಕದಲ್ಲಿ ಬಂದ ಮಹೇಂದ್ರ ಸಿಂಗ್ ಧೋನಿ ಅವರು ಬಿರುಸಿನ ಆಟವನ್ನೇ ಆಡಿದರು. ಕೊನೆಯ 7ನೇ ಎಸೆತದಲ್ಲಿ ಸಿಂಗಲ್ ತೆಗೆದುಕೊಂಡ ಧೋನಿ ಕೊನೆಯ ಓವರ್‌ನಲ್ಲಿ ತಮ್ಮಲ್ಲೇ ಸ್ಟ್ರೈಕ್‌ ಉಳಿಸಿಕೊಂಡರು. 6 ಎತೆಗಳಿಗೆ 28 ರನ್‌ಗಳಷ್ಟೇ ಬೇಕಿತ್ತು. ಮೊದಲ ಬಾಲ್‌ಗೆ ಸಿಕ್ಸರ್ ಬಾರಿಸಿದರು. ಆದರೆ, 2ನೇ ಎಸೆತ ಬೌನ್ಸ್ ಆದ ಹಿನ್ನೆಲೆ ಮತ್ತೊಂದು ಸಿಕ್ಸ್ ಹೊಡೆಯುವ ಪ್ರಯತ್ನವೂ ಕೈತಪ್ಪಿತು. 3ನೇ ಎಸೆತವೂ ವಿಫಲವಾಯಿತು. ನಾಲ್ಕನೆ ಎಸೆತದಲ್ಲಿ ಸಿಕ್ಸ್ ಎತ್ತುವ ಪ್ರಯತ್ನದಲ್ಲಿದ್ದ ಧೋನಿ ಕ್ಯಾಚ್ ನೀಡಿ ನಿರ್ಗಮಿಸಿದರು. ಚೆನ್ನೈ ಅನಿವಾರ್ಯವಾಗಿ ಸೋಲಿನ ಹೊಣೆ ಹೊರಬೇಕಾಯಿತು. ಋತುರಾಜ್ ಗಾಯಕ್ವಾಡ್ 30(27), ರಾಬಿನ್ ಉತ್ತಪ್ಪ 1 (7), ಮಿಚೆಲ್ ಸ್ಯಾಟ್ನರ್ 9 (15), ಶಿವಂ ದುಬೆ 8 (7) ರನ್‌ಗಳಿಸಿದರು. ಚೆನ್ನೈ ಸೂಪರ್ ಕಿಂಗ್ಸ್ ಪರ ಡ್ವೇನ್ ಬ್ರಾವೋ(2/42) ಹಾಗೂ ಮಹೀಶ್ ತೀಕ್ಷಣ(1/32) ವಿಕೆಟ್ ಪಡೆದರು.

    CSK

    ಟಾಸ್ ಸೋತು ಬ್ಯಾಂಟಿಂಗ್ ಇಳಿದ ಪಂಜಾಬ್ ತಂಡದ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್(88) ಹಾಗೂ ಬನುಕಾ ರಾಜಪಕ್ಸ(42) ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಪಂಜಾಬ್ ಕಿಂಗ್ಸ್ 187 ರನ್‌ಗಳ ಪೈಪೋಟಿಯ ಮೊತ್ತ ಕಲೆಹಾಕಿತು.

    ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ಪರ ನಾಯಕ ಮಯಾಂಕ್ ಅಗರ್ವಾಲ್(18) ಬಹುಬೇಗನೆ ನಿರ್ಗಮಿಸಿದರು. ಆದರೆ 2ನೇ ಜೊತೆಯಾದ ಶಿಖರ್ ಧವನ್ 88 ರನ್(59 ಬಾಲ್, 9 ಬೌಂಡರಿ, 2 ಸಿಕ್ಸ್) ಐಪಿಎಲ್‌ನಲ್ಲಿ ಮತ್ತೊಂದು ಅರ್ಧಶತಕ ಬಾರಿಸಿ ಅಬ್ಬರಿಸಿದರು. ಇವರಿಗೆ ಸಾಥ್ ನೀಡಿದ ಬನುಕಾ ರಾಜಪಕ್ಸ 42 ರನ್(32 ಬಾಲ್, 2 ಬೌಂಡರಿ, 2 ಸಿಕ್ಸ್) ಬ್ಯಾಟಿಂಗ್ ಪ್ರದರ್ಶಿಸಿದರು. ಸಿಎಸ್‌ಕೆ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಈ ಜೋಡಿ 2ನೇ ವಿಕೆಟ್‌ಗೆ 110(71) ರನ್‌ಗಳ ಜೊತೆಯಾಟದ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು.

    panjab

    ರಾಜಪಕ್ಸ ವಿಕೆಟ್ ಪತನದ ನಂತರ ಬಂದ ಲಿಯಮ್ ಲಿವಿಂಗ್‌ಸ್ಟೋನ್ 19 ರನ್ (7 ಬಾಲ್, 1 ಬೌಂಡರಿ, 2 ಸಿಕ್ಸ್) ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೇ ಧವನ್ ಹಾಗೂ ಲಿವಿಂಗ್‌ಸ್ಟೋನ್ 3ನೇ ವಿಕೆಟ್‌ಗೆ 27(11 ಎಸೆತ) ಜೊತೆಯಾಟದ ಕಾಣಿಕೆ ನೀಡಿದರು. ನಂತರ ಬಂದ ಇಂಗ್ಲೆಂಡ್ ಟೀಂನ ಆರಂಭಿಕ ಆಟಗಾರ ಜಾನಿ ಬ್ರೈಸ್ಟೋ 3 ಎಸೆತಗಳಲ್ಲಿ ಕೇವಲ 6 ರನ್‌ಗಳನ್ನು ಗಳಿಸಿ ರನೌಟ್‌ನಲ್ಲಿ ತಮ್ಮ ವಿಕೆಟ್ ಒಪ್ಪಿಸಿ ನಡೆದರು. ಬೌಲಿಂಗ್‌ನಲ್ಲಿ ಕಾಗಿಸೋ ರಬಾಡಾ ಹಾಗೂ ರಿಶಿ ಧವನ್ ತಲಾ 2 ವಿಕೆಟ್‌ಗಳನ್ನು ಪಡೆದುಕೊಳ್ಳುವ ಮೂಲಕ ತಂಡದ ಗೆಲುವಿಗೆ ನೆರವಾದರು.

    IPL 2022 PBKS VS CSK

    ರನ್ ಏರಿಕೆಯಾಗಿದ್ದು ಹೇಗೆ?
    74 ಎಸೆತಗಳಲ್ಲಿ 50 ರನ್
    75 ಎಸೆತಗಳಲ್ಲಿ 100 ರನ್
    108 ಎಸೆತಗಳಲ್ಲಿ 150 ರನ್
    120 ಎಸೆತಗಳಲ್ಲಿ 187 ರಬ್

  • ವಿಕೆಟ್ ನೀಡಿದ ಪೋಲಾರ್ಡ್‍ಗೆ ಮುತ್ತು ಕೊಟ್ಟು ಸಂಭ್ರಮಿಸಿದ ಕೃನಾಲ್ ಪಾಂಡ್ಯ

    ವಿಕೆಟ್ ನೀಡಿದ ಪೋಲಾರ್ಡ್‍ಗೆ ಮುತ್ತು ಕೊಟ್ಟು ಸಂಭ್ರಮಿಸಿದ ಕೃನಾಲ್ ಪಾಂಡ್ಯ

    ಮುಂಬೈ: ಮುಂಬೈ ಮತ್ತು ಲಕ್ನೋ ನಡುವಿನ ಪಂದ್ಯದಲ್ಲಿ ಲಕ್ನೋ ತಂಡದ ಬೌಲರ್ ಕೃನಾಲ್ ಪಾಂಡ್ಯ ಬೌಲಿಂಗ್‍ನಲ್ಲಿ ವಿಕೆಟ್ ಕಳೆದುಕೊಂಡ ಮುಂಬೈ ಬ್ಯಾಟ್ಸ್‌ಮ್ಯಾನ್‌ ಕೀರನ್ ಪೋಲಾರ್ಡ್ ಪೆವಿಲಿಯನ್‍ಗೆ ಹೆಜ್ಜೆಹಾಕುತ್ತಿದ್ದಂತೆ ಪಾಂಡ್ಯ ಮುತ್ತುಕೊಟ್ಟು ಸಂಭ್ರಮಿಸಿದ ಫೋಟೋ ವೈರಲ್ ಆಗುತ್ತಿದೆ.

    ಈ ಹಿಂದೆ ಕೃನಾಲ್ ಪಾಂಡ್ಯ ಮತ್ತು ಪೋಲಾರ್ಡ್ ಮುಂಬೈ ತಂಡದಲ್ಲಿ ಜೊತೆಯಾಗಿ ಆಡುತ್ತಿದ್ದರು. ಆದರೆ 15ನೇ ಅವೃತ್ತಿ ಐಪಿಎಲ್‍ನಲ್ಲಿ ಪೋಲಾರ್ಡ್ ಮುಂಬೈ ತಂಡದ ಪರ ಆಡುತ್ತಿದ್ದರೆ, ಪಾಂಡ್ಯ ಲಕ್ನೋ ಪರ ಆಡುತ್ತಿದ್ದಾರೆ. ಆದರೂ ಇವರಿಬ್ಬರ ನಡುವೆ ಉತ್ತಮ ಸ್ನೇಹ ಸಂಬಂಧವಿದೆ. ನಿನ್ನೆಯ ಪಂದ್ಯದಲ್ಲಿ ಇವರಿಬ್ಬರ ನಡುವೆ ರೋಚಕ ಹಣಾಹಣಿ ನಡೆದಿತ್ತು. ಇದನ್ನೂ ಓದಿ: ರಾಹುಲ್ ತೂಫಾನ್ – ಮುಂಬೈಗೆ ಸೋಲಿನ ಬರೆ

    ಕೃನಾಲ್ ಪಾಂಡ್ಯ ವಿಕೆಟ್‍ನ್ನು ಪೋಲಾರ್ಡ್ ಕಿತ್ತಿದ್ದರು. ಆ ಬಳಿಕ ಮುಂಬೈ ತಂಡದ ಗೆಲುವಿಗಾಗಿ ಹೋರಾಡುತ್ತಿದ್ದ ಪೋಲಾರ್ಡ್ 19 ರನ್ (20 ಎಸೆತ, 1 ಸಿಕ್ಸ್) ಸಿಡಿಸಿ ಅಪಾಯಕಾರಿಯಾಗಿ ಗೋಚರಿಸುತ್ತಿದ್ದಾಗ ದಾಳಿಗಿಳಿದ ಕೃನಾಲ್ ಪಾಂಡ್ಯ, ಪೋಲಾರ್ಡ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ವಿಕೆಟ್ ಪಡೆದ ಬಳಿಕ ಪೆವಿಲಿಯನ್‍ಗೆ ಹೊರಟ ಪೋಲಾರ್ಡ್ ಬಳಿ ತೆರಳಿದ ಪಾಂಡ್ಯ ಮುತ್ತು ಕೊಟ್ಟು ಸಂಭ್ರಮಿಸಿದರು. ಈ ವೀಡಿಯೋ ಮತ್ತು ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: 3.10 ಕೋಟಿ ರೂಪಾಯಿಯ ಐಷಾರಾಮಿ ಕಾರು ಖರೀದಿಸಿದ ಹಿಟ್ ಮ್ಯಾನ್

    ಈ ಕುರಿತು ಪಂದ್ಯದ ಬಳಿಕ ಮಾತನಾಡಿದ ಪಾಂಡ್ಯ, ನಾನು ದೇವರಿಗೆ ಧನ್ಯವಾದ ತಿಳಿಸುತ್ತೇನೆ. ಪೋಲಾರ್ಡ್ ವಿಕೆಟ್ ಸಿಗದೇ ಇದ್ದಿದ್ದರೆ ನನಗೆ ಜೀವನಪೂರ್ತಿ ಕಾಡುತ್ತಿತ್ತು. ಇದೀಗ 1-1 ಸಮಬಲಗೊಂಡಿದೆ. ಪೋಲಾರ್ಡ್ ಮಾತನಾಡದಂತಾಗಿದೆ ಎಂದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಮತ್ತು ಮೈಕಲ್ ಕ್ಲಾರ್ಕ್ ಸಂಬಂಧ ಕೆಡಲು ಐಪಿಎಲ್ ಕಾರಣ: ಸೈಮಂಡ್ಸ್

    ಮುಂಬೈ ಮತ್ತು ಲಕ್ನೋ ನಡುವಿನ ಪಂದ್ಯದಲ್ಲಿ ಕೆ.ಎಲ್ ರಾಹುಲ್ ಶತಕದಾಟ ಮತ್ತು ಲಕ್ನೋ ಬೌಲರ್‌ಗಳ ಶ್ರೇಷ್ಠ ನಿರ್ವಹಣೆಯ ಫಲವಾಗಿ 36 ರನ್‍ಗಳಿಂದ ಗೆದ್ದಿತು. ಈ ಮೂಲಕ ಮುಂಬೈ ಟೂರ್ನಿಯಲ್ಲಿ ಸತತ 8ನೇ ಸೋಲು ಕಂಡು ಮತ್ತೆ ನಿರಾಸೆ ಅನುಭವಿಸಿತು.

  • ನನ್ನ ಮತ್ತು ಮೈಕಲ್ ಕ್ಲಾರ್ಕ್ ಸಂಬಂಧ ಕೆಡಲು ಐಪಿಎಲ್ ಕಾರಣ: ಸೈಮಂಡ್ಸ್

    ನನ್ನ ಮತ್ತು ಮೈಕಲ್ ಕ್ಲಾರ್ಕ್ ಸಂಬಂಧ ಕೆಡಲು ಐಪಿಎಲ್ ಕಾರಣ: ಸೈಮಂಡ್ಸ್

    ಸಿಡ್ನಿ: ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಮತ್ತು ನನ್ನ ನಡುವಿನ ಸ್ನೇಹ ಕೆಡಲು ಐಪಿಎಲ್ ಪ್ರಮುಖ ಕಾರಣ ಎಂದು ಆಸ್ಟ್ರೇಲಿಯಾದ ಮಾಜಿ ಆಲ್‍ರೌಂಡರ್ ಆಟಗಾರ ಆಂಡ್ರ್ಯೂ ಸೈಮಂಡ್ಸ್ ಆರೋಪಿಸಿದ್ದಾರೆ.

    ಬ್ರೆಟ್ ಲೀ ಪಾಡ್‍ಕ್ಯಾಸ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2008ರಲ್ಲಿ ಐಪಿಎಲ್ ಪ್ರಾರಂಭಗೊಂಡಾಗ ಡೆಕ್ಕನ್ ಚಾರ್ಜರ್ಸ್ ತಂಡ ನನ್ನನ್ನು 5.4 ಕೋಟಿ ರೂ. ನೀಡಿ ಖರೀದಿಸಿತು. ಆದರೆ ಮೈಕಲ್ ಕಾರ್ಕ್ ಅನ್‍ಸೋಲ್ಡ್ ಆಟಗಾರನಾಗಿದ್ದರು. ಇದರಿಂದ ರಾಷ್ಟ್ರೀಯ ತಂಡಕ್ಕೆ ಆಡಲು ಮುಂದಾದಾಗ ಮೈಕಲ್ ಕಾರ್ಕ್‍ಗೆ ನನ್ನ ಮೇಲೆ ಅಸೂಯೆ ಹುಟ್ಟಿಕೊಂಡು ನಮ್ಮಿಬ್ಬರ ಸ್ನೇಹ ಮುರಿದು ಬಿತ್ತು ಇದಕ್ಕೆಲ್ಲ ಕಾರಣ ಐಪಿಎಲ್‍ನ ಹಣ ಎಂದು ದೂರಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ಹಾರಾಟ – ಹೋರಾಟವಿಲ್ಲದೆ ಸೋತ ಆರ್‌ಸಿಬಿ

    ರಾಷ್ಟ್ರೀಯ ತಂಡದಲ್ಲಿದ್ದಾಗ ಕಾರ್ಕ್ ಮತ್ತು ನಾನು ಉತ್ತಮ ಸ್ನೇಹಿತರಾಗಿದ್ದೇವು. 2008ರ ಬಳಿಕ ನಮ್ಮ ಸ್ನೇಹದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಆ ಬಳಿಕ ರಾಷ್ಟ್ರೀಯ ತಂಡಕ್ಕಾಗಿ ಒಟ್ಟಿಗೆ ಆಡುವಾಗ ನಮ್ಮಿಬ್ಬರ ನಡುವೆ ಹೊಂದಾಣಿಕೆ ಇರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನೋ ಬಾಲ್ ವಿವಾದದ ನಡುವೆ ಕುಲ್ಚಾ ಜೋಡಿಯ ಕೀಟ್ಲೆ

    2015ರಲ್ಲಿ ಸೈಮಂಡ್ಸ್, ಕಾರ್ಕ್ ನಾಯಕತ್ವದ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದರು. ಕಾರ್ಕ್, ಸೈಮಂಡ್ಸ್ ಕುಡಿದು ಮೈದಾನಕ್ಕಿಳಿಯುತ್ತಾರೆ ಎಂಬ ಆಪಾದನೆ ಹೊರಿಸಿದ್ದರು. ಬಳಿಕ ಸೈಮಂಡ್ಸ್ 2012ರಲ್ಲಿ ಮತ್ತು ಕಾರ್ಕ್ 2015ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದರು.

  • ಹೈದರಾಬಾದ್ ಹಾರಾಟ – ಹೋರಾಟವಿಲ್ಲದೆ ಸೋತ ಆರ್‌ಸಿಬಿ

    ಹೈದರಾಬಾದ್ ಹಾರಾಟ – ಹೋರಾಟವಿಲ್ಲದೆ ಸೋತ ಆರ್‌ಸಿಬಿ

    ಮುಂಬೈ: ಸನ್ ರೈಸರ್ಸ್ ಹೈದರಾಬಾದ್ ಬೌಲರ್‌ಗಳ ಬೆಂಕಿ ದಾಳಿಗೆ ಒದ್ದಾಡಿದ ಆರ್‌ಸಿಬಿ ಬ್ಯಾಟ್ಸ್‌ಮ್ಯಾನ್‌ಗಳು ಹೀನಾಯ ಪ್ರದರ್ಶನ ನೀಡಿ ಸೋಲುಂಡಿದ್ದಾರೆ.

    ಆರ್‌ಸಿಬಿ ನೀಡಿದ ಅಲ್ಪಮೊತ್ತ ಸನ್‍ ರೈಸರ್ಸ್‍ಗೆ ಮುಗಿಸಲು ಕೇವಲ 8 ಓವರ್ ಸಾಕಾಯಿತು. 69 ರನ್‍ಗಳ ಗುರಿಯನ್ನು 8 ಓವರ್‌ಗಳ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 72 ರನ್ ಸಿಡಿಸಿ ಹೈದರಾಬಾದ್ 9 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿತು.

    ಹೈದರಾಬಾದ್ ಪರ ಅಭಿಷೇಕ್ ಶರ್ಮಾ 47 ರನ್ (28, 37 ಎಸೆತ, 8 ಬೌಂಡರಿ, 1 ಸಿಕ್ಸ್) ಸಿಡಿಸಿ ಆರ್ಭಟಿಸಿದರು. ನಂತರ ವಿಲಿಯಮ್ಸನ್ ಅಜೇಯ 16 ರನ್ (17 ಎಸೆತ, 2 ಬೌಂಡರಿ) ಮತ್ತು ತ್ರಿಪಾಠಿ 7 ರನ್ (3 ಎಸೆತ, 1 ಬೌಂಡರಿ) ನೆರವಿನಿಂದ ಸುಲಭವಾಗಿ ಗೆಲುವಿನ ನಗೆ ಬೀರಿತು.

    ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಇತ್ತ ಬ್ಯಾಟಿಂಗ್ ಆರಂಭಿಸಿದ ಆರ್‌ಸಿಬಿ ಬ್ಯಾಟ್ಸ್‌ಮ್ಯಾನ್‌ಗಳು ಬಂದ ಪುಟ್ಟ ಹೋದ ಪುಟ್ಟ ಎಂಬಂತೆ ಪೆವಿಲಿಯನ್ ಪರೇಡ್ ಆರಂಭಿಸಿದರು. ವಿರಾಟ್ ಕೊಹ್ಲಿ, ಅಂಜು ರಾವತ್, ದಿನೇಶ್ ಕಾರ್ತಿಕ್ ಶೂನ್ಯ ಸುತ್ತಿ ನಿರಾಸೆ ಮೂಡಿಸಿದರು.

    ನಟರಾಜನ್, ಜಾನ್ಸೆನ್ ಜರ್ಬದಸ್ತ್ ಬೌಲಿಂಗ್
    ಆರ್‌ಸಿಬಿಯ ಬಲಿಷ್ಠ ಬ್ಯಾಟಿಂಗ್ ಲೈನಪ್‍ಗೆ ಸನ್‍ರೈಸರ್ಸ್ ಬೌಲರ್‌ಗಳು ಎಲ್ಲಿಯೂ ಮೇಲುಗೈ ಸಾಧಿಸಲು ಅವಕಾಶ ನೀಡಲಿಲ್ಲ. ನಟರಾಜನ್ ಮತ್ತು ಮಾರ್ಕೊ ಜಾನ್ಸೆನ್ ಉರಿಚೆಂಡಿನ ದಾಳಿಗೆ ಪತರುಗುಟ್ಟಿದ ಆರ್‌ಸಿಬಿ 16.1 ಓವರ್‌ಗಳಲ್ಲಿ ಕೇವಲ 68 ರನ್‍ಗಳಿಗೆ ಗಂಟುಮೂಟೆ ಕಟ್ಟಿತು.

    ಆರ್‌ಸಿಬಿ ಸರದಿಯಲ್ಲಿ ಮ್ಯಾಕ್ಸ್‌ವೆಲ್ 12 ಮತ್ತು ಪ್ರಭುದೇಸಾಯಿ 15 ರನ್ ಹೊರತು ಪಡಿಸಿ ಉಳಿದ ಯಾವೊಬ್ಬ ಬ್ಯಾಟ್ಸ್‌ಮ್ಯಾನ್‌ ಕೂಡ ಎರಡಂಕ್ಕಿ ಮೊತ್ತ ದಾಟಲಿಲ್ಲ. ಸನ್‍ರೈಸರ್ಸ್ ಹೈದರಾಬಾದ್ ಪರ ನಟರಾಜನ್ ಮತ್ತು ಜಾನ್ಸೆನ್ ತಲಾ 3 ವಿಕೆಟ್ ಕಿತ್ತು ಮಿಂಚಿದರು. ಉಳಿದಂತೆ ಸುಜೀತ್ 2, ಭುವನೇಶ್ವರ್ ಕುಮಾರ್ ಮತ್ತು ಉಮ್ರಾನ್ ಮಲಿಕ್ ತಲಾ 1 ವಿಕೆಟ್ ಪಡೆದು ಆರ್‌ಸಿಬಿಗೆ ಖೆಡ್ಡಾ ತೋಡಿದರು.

  • ಕೊನೆಯ ಓವರ್‌ನಲ್ಲಿ ರಸೆಲ್ ವಿಕೆಟ್ ಲಾಸ್ – ಗುಜರಾತ್‍ಗೆ 8 ರನ್‍ಗಳ ಜಯ

    ಕೊನೆಯ ಓವರ್‌ನಲ್ಲಿ ರಸೆಲ್ ವಿಕೆಟ್ ಲಾಸ್ – ಗುಜರಾತ್‍ಗೆ 8 ರನ್‍ಗಳ ಜಯ

    ಮುಂಬೈ: ಆಂಡ್ರೆ ರಸೆಲ್ ಆಲ್‍ರೌಂಡರ್ ಆಟದ ನಡುವೆಯೂ ಕೊನೆಯಲ್ಲಿ ಮೇಲುಗೈ ಸಾಧಿಸಿದ ಗುಜರಾತ್ ಬೌಲರ್‌ಗಳು ಕೋಲ್ಕತ್ತಾ ವಿರುದ್ಧ 8 ರನ್‍ಗಳ ಜಯ ತಂದುಕೊಟ್ಟರು.

    ಕೋಲ್ಕತ್ತಾ ಗೆಲುವಿಗೆ ಕೊನೆಯ ಓವರ್‌ನಲ್ಲಿ 6 ಎಸೆತಗಳಲ್ಲಿ 18 ರನ್ ಬೇಕಾಗಿತ್ತು. 20ನೇ ಓವರ್‌ನ ಮೊದಲ ಎಸೆತವನ್ನು ಸಿಕ್ಸರ್‌ಗಟ್ಟಿದ ರಸೆಲ್ ಮರು ಎಸೆತದಲ್ಲಿ ಕ್ಯಾಚ್ ನೀಡಿ ಔಟ್ ಆಗುವುದರೊಂದಿಗೆ ತಂಡದ ಗೆಲುವಿನ ಆಸೆ ಕಮರಿತು. ಅಂತಿಮವಾಗಿ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 148 ರನ್ ಸಿಡಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು.

    ಗುಜರಾತ್ ನೀಡಿದ 157 ರನ್‍ಗಳ ಸಾಧಾರಣ ಮೊತ್ತ ಬೆನ್ನಟ್ಟಿದ ಕೋಲ್ಕತ್ತಾ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. 34 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ರಿಂಕು ಸಿಂಗ್ 35 ರನ್ (28 ಎಸೆತ, 4 ಬೌಂಡರಿ, 1 ಸಿಕ್ಸ್) ಚಚ್ಚಿ ನೆರವಾದರು. ಇವರನ್ನು ಹೊರತು ಪಡಿಸಿ ಉಳಿದ ಬ್ಯಾಟ್ಸ್‌ಮ್ಯಾನ್‍ಗಳು ಅಲ್ಪ ಮೊತ್ತಕ್ಕೆ ವಿಕೆಟ್ ಕೈ ಚೆಲ್ಲಿ ಪೆವಿಲಿಯನ್ ಸೇರಿಕೊಂಡರು. ರೆಸೆಲ್ 48 ರನ್ (25 ಎಸೆತ, 1 ಬೌಂಡರಿ, 6 ಸಿಕ್ಸರ್) ಚಚ್ಚಿ ಮಿಂಚಿದರು.

    ಈ ಮೊದಲು ಟಾಸ್ ಗೆದ್ದ ಗುಜರಾತ್ ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಗುಜರಾತ್‍ಗೆ ಉತ್ತಮ ಆರಂಭ ಸಿಗಲಿಲ್ಲ. ಶುಭಮನ್ ಗಿಲ್ 7 ರನ್‍ಗೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಬಳಿಕ ವೃದ್ಧಿಮಾನ್ ಸಹಾ ಮತ್ತು ಹಾರ್ದಿಕ್ ಪಾಂಡ್ಯ ತಂಡಕ್ಕೆ ಚೇತರಿಕೆ ನೀಡಿದರು. ಈ ಜೋಡಿ 2ನೇ ವಿಕೆಟ್‍ಗೆ 75 ರನ್ (56 ಎಸೆತ) ಒಟ್ಟುಗೂಡಿಸಿದರು. ಈ ವೇಳೆ ಉತ್ತಮವಾಗಿ ಆಡುತ್ತಿದ್ದ ಸಹಾ 25 ರನ್ (25 ಎಸೆತ, 2 ಬೌಂಡರಿ, 1 ಸಿಕ್ಸ್) ಬಾರಿಸಿ ವಿಕೆಟ್ ನೀಡಿ ಹೊರನಡೆದರು.

    ನಂತರ ಒಂದಾದ ಹಾರ್ದಿಕ್ ಪಾಂಡ್ಯ ಮತ್ತು ಡೇವಿಡ್ ಮಿಲ್ಲರ್ 3ನೇ ವಿಕೆಟ್‍ಗೆ ಕೆಲಕಾಲ ಬೌಂಡರಿ, ಸಿಕ್ಸರ್ ಸಿಡಿಸಿ 50 ರನ್ (35 ಎಸೆತ) ಜೊತೆಯಾಟವಾಡಿ ದೊಡ್ಡ ಮೊತ್ತ ಪೇರಿಸುವ ಸೂಚನೆ ನೀಡಿದರು. ಆದರೆ ಮಿಲ್ಲರ್ ಆಟ 27 ರನ್ (20 ಎಸೆತ, 1 ಬೌಂಡರಿ, 1 ಸಿಕ್ಸ್)ಗೆ ಅಂತ್ಯ ಗೊಂಡಿತು.

    ಈ ನಡುವೆ ಪಾಂಡ್ಯ ಅರ್ಧಶತಕ ಸಿಡಿಸಿ ತಂಡಕ್ಕೆ ನೆರವಾದರು. ಪಾಂಡ್ಯ 67 ರನ್ (49 ಎಸೆತ, 4 ಬೌಂಡರಿ, 2 ಸಿಕ್ಸ್) ಸಿಡಿಸಿ ಮುನ್ನುಗ್ಗುತ್ತಿದ್ದ ವೇಳೆ ಟಿಮ್ ಸೌಥಿ ವಿಕೆಟ್ ಬೇಟೆಯಾಡಿ ಪಾಂಡ್ಯಗೆ ಬ್ರೇಕ್ ಹಾಕಿದರು.

    ರಸೆಲ್ ಬಿಗಿ ದಾಳಿ ಕುಸಿದ ಗುಜರಾತ್:
    138 ರನ್‍ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಗುಜರಾತ್ ದಿಢೀರ್ ಕುಸಿತ ಕಂಡಿತು. ಆಂಡ್ರೆ ರಸೆಲ್ 4 ವಿಕೆಟ್ (1 ಓವರ್ 5 ರನ್) ಕಿತ್ತು ಗುಜರಾತ್ ಬ್ಯಾಟ್ಸ್‍ಮ್ಯಾನ್‍ಗಳ ಮೇಲೆ ಮಾರಕವಾಗಿ ಎರಗಿದರು. ಗುಜರಾತ್ 18 ರನ್‍ಗಳ ಅಂತರದಲ್ಲಿ 5 ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 156 ರನ್ ಪೇರಿಸಿತು.

    ಕೋಲ್ಕತ್ತಾ ಪರ ರೆಸೆಲ್ 4 ವಿಕೆಟ್ ಕಿತ್ತು ಮಿಂಚಿದರು. ಟಿಮ್ ಸೌಥಿ 3 ವಿಕೆಟ್ ಪಡೆದರೆ, ಉಮೇಶ್ ಯಾದವ್ 1 ಮತ್ತು ಶಿವಂ ಮಾವಿ 1 ವಿಕೆಟ್ ಕಿತ್ತರು.

  • ನೋ ಬಾಲ್ ವಿವಾದದ ನಡುವೆ ಕುಲ್ಚಾ ಜೋಡಿಯ ಕೀಟ್ಲೆ

    ನೋ ಬಾಲ್ ವಿವಾದದ ನಡುವೆ ಕುಲ್ಚಾ ಜೋಡಿಯ ಕೀಟ್ಲೆ

    ಮುಂಬೈ: ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಮತ್ತು ರಾಜಸ್ಥಾನ ನಡುವಿನ ಪಂದ್ಯದ ನಡುವೆ ನಡೆದ ನೋ ಬಾಲ್ ವಿವಾದ ಬಾರಿ ಚರ್ಚೆಯಾಗುತ್ತಿದೆ. ಈ ನಡುವೆ ಕುಲ್ಚಾ ಜೋಡಿ ಖ್ಯಾತಿಯ ಯಜುವೇಂದ್ರ ಚಹಲ್ ಮತ್ತು ಕುಲ್‍ದೀಪ್ ಯಾದವ್ ನಡುವಿನ ಮಾತುಕತೆ ವೈರಲ್ ಆಗುತ್ತಿದೆ.


    ರಾಜಾಸ್ಥಾನ್ ರಾಯಲ್ಸ್ ನೀಡಿದ 222 ರನ್‍ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರಂಭದಲ್ಲಿ ಉತ್ತಮ ಪ್ರದರ್ಶನವನ್ನೇ ನೀಡಿತ್ತಾದರೂ ನಂತರದಲ್ಲಿ ಪ್ರಮುಖ ವಿಕೆಟ್‍ಗಳನ್ನು ಕಳೆದುಕೊಂಡಿತು. ಕೊನೆಯಲ್ಲಿ ರೋವ್ಮನ್ ಪೋವೆಲ್ ಅವರ ಆಟ ತಂಡಕ್ಕೆ ಗೆಲುವಿನ ಆಸೆ ಚಿಗುರುವಂತೆ ಮಾಡಿತ್ತು. ಅಂತಿಮ ಓವರ್‌ನಲ್ಲಿ ಡೆಲ್ಲಿ ಗೆಲುವಿಗೆ 36 ರನ್‍ಗಳು ಬೇಕಾಗಿತ್ತು. ಆರು ಬಾಲ್‍ನಲ್ಲಿ 6 ಸಿಕ್ಸರ್ ಸಿಡಿಸುವ ಸವಾಲು ಎದುರಾಗಿತ್ತು. ಶೇ.90 ರಷ್ಟು ಗೆಲುವು ಅಸಾಧ್ಯ ಎಂಬುದೂ ಗೊತ್ತಿತ್ತು. ಈ ವೇಳೆ ಕ್ರೀಸ್‍ನಲ್ಲಿದ್ದ ಪೋವೆಲ್ ಸತತ 3 ಎಸೆತಗಳನ್ನೂ ಸಿಕ್ಸರ್‌ಗೆ ಅಟ್ಟಿದರು. ಇನ್ನೂ ಮೂರು ಎಸೆತಗಳು ಬಾಕಿ ಇರುವ ವೇಳೆ ದೊಡ್ಡ ಹೈಡ್ರಾಮವೇ ನಡೆದು ಹೋಯಿತು. ಇದನ್ನೂ ಓದಿ: ಅಂಪೈರ್ ವಿರುದ್ಧ ಸಿಟ್ಟಾಗಿ ಬ್ಯಾಟರ್‌ಗಳನ್ನು ಕರೆದ ಪಂತ್ – ನಿಜಕ್ಕೂ ನಡೆದಿದ್ದು ಏನು?

    Rishabh-Pant-1 ipl

    ಮೆಕಾಯ್ ಅವರ 3 ಎಸೆತಗಳನ್ನೂ ಸಿಕ್ಸ್ ಬಾರಿಸಿದ್ದರು. ಆದರೆ, 3ನೇ ಎಸೆತ ಫುಲ್‍ಟಾಸ್ ಆಗಿದ್ದು ಇದನ್ನು ಕೂಡ ಪೋವೆಲ್ ಸಿಕ್ಸರ್‌ಗಟ್ಟಿದರು. ಈ ಎಸೆತ ವಿವಾದಕ್ಕೆ ಎಡೆಮಾಡಿಕೊಟ್ಟಿತು. ಅಂಪೈರ್ ನೋಬಾಲ್ ಕೊಡದೇ ಇದ್ದರೂ ಡೆಲ್ಲಿ ಆಟಗಾರರು ಕುಳಿತಲ್ಲಿಂದಲೇ ನೋಬಾಲ್ ಸಿಗ್ನಲ್ ತೋರಿಸಿದರು. ಅಂಪೈರ್ ಇದು ನೋ ಬಾಲ್ ಅಲ್ಲ ಎಂದು ತಮ್ಮ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಇದರಿಂದ ಸಿಟ್ಟಾದ ಡೆಲ್ಲಿ ನಾಯಕ ರಿಷಭ್ ಪಂತ್ ಇದು ಅನ್ಯಾಯ ಎಂದು ಮೈದಾನದಲ್ಲಿದ್ದ ಪೋವೆಲ್ ಮತ್ತು ಕುಲ್‍ದೀಪ್ ಯಾದವ್ ಅವರನ್ನು ಉದ್ದೇಶಿಸಿ ಬೌಂಡರಿ ಗೆರೆ ಬಳಿ ನಿಂತು ಪೆವಿಲಿಯನ್‍ಗೆ ಬನ್ನಿ ಎಂದು ಕರೆದರು. ಇದನ್ನೂ ಓದಿ: ಡೆಲ್ಲಿಯ ಪ್ರವೀಣ್‌ಗೆ ದಂಡದೊಂದಿಗೆ ಒಂದು ಪಂದ್ಯ ಬ್ಯಾನ್

    ಈ ವೇಳೆ ಕುಲ್‍ದೀಪ್ ಯಾದವ್ ಅಂಪೈರ್ ಜೊತೆ ನೋ ಬಾಲ್ ವಾಗ್ವಾದಕ್ಕೆ ಇಳಿದರು. ಈ ಸಂದರ್ಭ ಪಕ್ಕದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಚಹಲ್ ಬಂದು ಕುಲ್‍ದೀಪ್ ಯಾದವ್‍ರನ್ನು ಸಮಾಧಾನ ಪಡಿಸಲು ಮುಂದಾದರು. ಈ ವೇಳೆ ಕುಲ್‍ದೀಪ್ ಮತ್ತೆ ಅಂಪೈರ್ ಕಡೆ ಮಾತನಾಡಲು ಯತ್ನಿಸುತ್ತಿದ್ದಂತೆ, ಚಹಲ್, ಕುಲ್‍ದೀಪ್‍ರನ್ನು ಹೋಗು ಬ್ಯಾಟಿಂಗ್ ಮಾಡು ಎನ್ನುವಂತೆ ಕೈ ಹಿಡಿದು ತಳ್ಳಿದರು. ಇವರಿಬ್ಬರೂ ಕೂಡ ಟೀಂ ಇಂಡಿಯಾದಲ್ಲಿ ಜೊತೆಯಾಗಿ ಆಡುತ್ತಿದ್ದಾಗ ಉತ್ತಮ ಸ್ನೇಹಿತರಾಗಿದ್ದರು. ಹಾಗಾಗಿ ಈ ಕಿರಿಕ್ ನಡುವೆ ಇವರಿಬ್ಬರು ತಮಾಷೆಗಿಳಿದು ಎಲ್ಲರನ್ನೂ ನಗಿಸಿದ್ದಾರೆ.

  • ಡೆಲ್ಲಿಯ ಪ್ರವೀಣ್‌ಗೆ  ದಂಡದೊಂದಿಗೆ ಒಂದು ಪಂದ್ಯ ಬ್ಯಾನ್

    ಡೆಲ್ಲಿಯ ಪ್ರವೀಣ್‌ಗೆ ದಂಡದೊಂದಿಗೆ ಒಂದು ಪಂದ್ಯ ಬ್ಯಾನ್

    ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಾಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನೋಬಾಲ್ ಕೇಳುವಂತೆ ಒತ್ತಾಯಿಸಿ ಬ್ಯಾಟರ್‌ಗಳನ್ನು ಕರೆಯಲು ಕರೆದು ಹೈಡ್ರಾಮ ಮಾಡಿದ ಡೆಲ್ಲಿ ತಂಡದ ನಾಯಕ ರಿಷಭ್‌ಪಂತ್‌ಗೆ ಐಪಿಎಲ್ ಮಂಡಳಿ ದಂಡದ ವಿಧಿಸುವ ಮೂಲಕ ಪಂಚ್‌ಕೊಟ್ಟಿದೆ.

    ವಾಂಖೆಡೆ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ತಮ್ಮ ತಂಡದ ಪಂದ್ಯದ ವೇಳೆ ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL) ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್‌ಪಂತ್ ಅವರಿಗೆ ಪಂದ್ಯದ ಶುಲ್ಕದ ಶೇ.100 ರಷ್ಟು ದಂಡ ವಿಧಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

    IPL ನೀತಿ ಸಂಹಿತೆಯ ನಿಯಮ 2.7 ಅಡಿಯಲ್ಲಿ 2ನೇ ಹಂತದ ಅಪರಾಧಕ್ಕೆ ಪಂತ್ ಗುರಿಯಾಗಿದ್ದಾರೆ. ಆದ್ದರಿಂದ ಪಂತ್‌ಗೆ ಶೇ.100ರಷ್ಟು ದಂಡಶುಲ್ಕ ವಿಧಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಅವರಿಗೂ ಪಂದ್ಯದ ಶುಲ್ಕದ ಶೇ.50ರಷ್ಟು ದಂಡ ವಿಧಿಸಲಾಗಿದೆ. ಇನ್ನೂ ಪಂದ್ಯದ ವೇಳೆ ಅಂಗಳಕ್ಕೆ ಇಳಿದು 3ನೇ ಅಂಪೈರ್‌ಗೆ ಮನವಿ ಮಾಡುವಂತೆ ಒತ್ತಾಯಿಸಿದಕ್ಕಾಗಿ ಸಹಾಯಕ ಕೋಚ್ ಪ್ರವೀಣ್ ಆಮ್ರೆ ಅವರಿಗೂ 2.2ರ ನಿಯಮದ ಪ್ರಕಾರ ಶೇ.100 ದಂಡ ವಿಧಿಸುವ ಜೊತೆಗೆ ಮುಂದಿನ ಒಂದು ಪಂದ್ಯದಲ್ಲಿ ಸಹಾಯ ಕೋಚ್ ಆಗಿ ನಿರ್ವಹಿಸುವುದನ್ನು ಬ್ಯಾನ್ ಮಾಡಿದೆ.

    RISHAB PANTH

    ಏನಿದು ಆರ್ಟಿಕಲ್ 2.7, 2.2 ನಿಯಮ?: ಐಪಿಎಲ್ ನಿಯಮದ ಪ್ರಕಾರ ಪಂದ್ಯದ ಅವಧಿ ಮುಗಿಯುವವೆರೆಗೆ ಯಾವುದೇ ನಿರ್ಧಾರಗಳನ್ನು ಕ್ರೀಸ್‌ನಲ್ಲಿರುವವರೇ ಬಗೆಹರಿಸಿಕೊಳ್ಳಬೇಕು. ಅಂಪೈರ್ ತೀರ್ಪು ಪರಿಶೀಲನೆ ಮಾಡುವುದಿದ್ದರೂ ಬ್ಯಾಟರ್‌ಗಳೇ ಮನವಿ ಮಾಡಬೇಕು. ಒಂದು ವೇಳೆ ಪಂದ್ಯ ನಡೆಯುವ ವೇಳೆ ಉಳಿದವರು ಅಪೀಲ್ ಮಾಡುವಂತೆ ಒತ್ತಾಯಿಸುವುದು, ಅವರನ್ನು ಹೊರಬರುವಂತೆ ಸೂಚನೆ ನೀಡುವುದು ಅವರ ಪರವಾಗಿ ಅಪೀಲ್ ಮಾಡಲು ಕ್ರೀಡಾಂಗಣಕ್ಕೆ ಬರುವಂತಿಲ್ಲ.

  • ಅಂಪೈರ್ ವಿರುದ್ಧ ಸಿಟ್ಟಾಗಿ ಬ್ಯಾಟರ್‌ಗಳನ್ನು ಕರೆದ ಪಂತ್ – ನಿಜಕ್ಕೂ ನಡೆದಿದ್ದು ಏನು?

    ಅಂಪೈರ್ ವಿರುದ್ಧ ಸಿಟ್ಟಾಗಿ ಬ್ಯಾಟರ್‌ಗಳನ್ನು ಕರೆದ ಪಂತ್ – ನಿಜಕ್ಕೂ ನಡೆದಿದ್ದು ಏನು?

    ಮುಂಬೈ: ಐಪಿಎಲ್ ಕ್ರಿಕೆಟ್‌ನಲ್ಲಿ ಆಗಾಗ ವಿವಾದಗಳು ನಡೆಯುತ್ತಿರುತ್ತವೆ. ಆದರೆ ಶುಕ್ರವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಾಸ್ಥಾನ್ ರಾಯಲ್ಸ್ ಪಂದ್ಯ ಹೊಸ ವಿವಾದಕ್ಕೆ ಸಾಕ್ಷಿಯಾಗಿದೆ.

    ಕೊನೆಯ ಓವರ್‌ನಲ್ಲಿ ಅಂಪೈರ್ ನೀಡಿದ ತೀರ್ಪಿನಿಂದ ಅಸಮಧಾನಗೊಂಡ ಡೆಲ್ಲಿ ತಂಡದ ನಾಯಕ ರಿಷಭ್‌ಪಂತ್ ನಡೆದುಕೊಂಡ ರೀತಿ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸಾಮಾಜಿಕ ಜಾಲತಾಣ ಮಾತ್ರವಲ್ಲದೇ, ಹಿರಿಯ ಕ್ರಿಕೆಟಿಗರಿಂದಲೂ ಟೀಕೆಗೆ ಗುರಿಯಾಗಿದೆ. ಇಷ್ಟಕ್ಕೂ ಆ ಕೊನೆಯ ಓವರ್‌ನಲ್ಲಿ ನಡೆದಿದ್ದೇನು? ಇಲ್ಲಿದೆ ಮಾಹಿತಿ. ಇದನ್ನೂ ಓದಿ: ಬಟ್ಲರ್‌ ಬಿರುಗಾಳಿ ಬೆದರಿದ ಡೆಲ್ಲಿ – ಅಂಕಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ರಾಜಸ್ಥಾನ

    wtson

    ರಾಜಾಸ್ಥಾನ್ ರಾಯಲ್ಸ್ ನೀಡಿದ 222 ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರಂಭದಲ್ಲಿ ಉತ್ತಮ ಪ್ರದರ್ಶನವನ್ನೇ ನೀಡಿತ್ತಾದರೂ ನಂತರದಲ್ಲಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಕೊನೆಯಲ್ಲಿ ವೆಸ್ಟ್ಇಂಡೀಸ್ ಕ್ರಿಕೆಟಿಗ ರೋವನ್ ಪೊವೆಲ್ ಅವರ ಆಟ ತಂಡಕ್ಕೆ ಗೆಲುವಿನ ಆಸೆ ಚಿಗುರುವಂತೆ ಮಾಡಿತ್ತು. ಅಂತಿಮ ಓವರ್‌ನಲ್ಲಿ ಡೆಲ್ಲಿ ತಂಡಕ್ಕೆ 36 ರನ್‌ಗಳು ಬೇಕಾಗಿತ್ತು. ಅಂದರೆ ಆರು ಬಾಲ್‌ನಲ್ಲಿ 6 ಸಿಕ್ಸರ್, ಇದು ಶೇ.90 ರಷ್ಟು ಗೆಲುವು ಅಸಾಧ್ಯ ಎಂಬುದೂ ಗೊತ್ತಿತ್ತು. ಈ ವೇಳೆ ಕ್ರೀಸ್‌ನಲ್ಲಿದ್ದ ಪೋವೆಲ್ ಸತತ 3 ಎಸೆತಗಳನ್ನೂ ಸಿಕ್ಸ್‌ಗೆ ಅಟ್ಟಿದರು. ಇನ್ನೂ ಮೂರು ಎಸೆತಗಳು ಬಾಕಿ ಇರುವ ವೇಳೆ ದೊಡ್ಡ ಹೈಡ್ರಾಮವೇ ನಡೆದು ಹೋಯಿತು.

    ಮೆಕಾಯ್ ಅವರ 3 ಎಸೆತಗಳನ್ನೂ ಸಿಕ್ಸ್ ಬಾರಿಸಿದ್ದರು. ಆದರೆ, 3ನೇ ಎಸೆತ ಫುಲ್‌ಟಾಸ್ ಆಗಿದ್ದು ಇದನ್ನು ಕೂಡ ಪೊವೆಲ್ ಸಿಕ್ಸ್ಗೆ ಅಟ್ಟಿದರು. ಆದರೆ ಇದು ಅವರ ಸೊಂಟದ ಭಾಗಕ್ಕಿಂತಲೂ ಮೇಲಿತ್ತು. ಅಂಪೈರ್ ನೋಬಾಲ್ ಕೊಡದೇ ಇದ್ದರೂ ಡೆಲ್ಲಿ ಆಟಗಾರರು ಕುಳಿತಲ್ಲಿಂದಲೇ ನೋಬಾಲ್ ಸಿಗ್ನಲ್ ತೋರಿಸಿದರು.

    ಅಂಪೈರ್ ಇದು ನೋ ಬಾಲ್ ಅಲ್ಲ ಎಂದು ತಮ್ಮ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಇದರಿಂದ ಸಿಟ್ಟಾದ ಡೆಲ್ಲಿ ನಾಯಕ ರಿಷಭ್‌ಪಂತ್ ಇದು ಅನ್ಯಾಯ ಎಂದು ಮೈದಾನದಲ್ಲಿದ್ದ ರೋವನ್ ಪೊವೆಲ್ ಮತ್ತು ಕುಲೀಪ್ ಯಾದವ್ ಅವರನ್ನು ಉದ್ದೇಶಿಸಿ ಬೌಂಡರಿ ಗೆರೆ ಬಳಿ ನಿಂತು ಟೆಸ್ಟ್ ಕ್ರಿಕೆಟ್‌ನಲ್ಲಿ ಡಿಕ್ಲೇರ್ ಘೋಷಣೆ ಮಾಡುವಂತೆ ಪೆವಿಲಿಯನ್‌ಗೆ ಬನ್ನಿ ಎಂದು ಕರೆದರು.

    ಆಕ್ರೋಷದಲ್ಲಿದ್ದ ಪಂತ್ ತಮ್ಮ ತಂಡದ ಕೋಚ್ ಪ್ರವೀಣ್ ಆಮ್ರೆ ಅವರನ್ನು ಅಂಪೈರ್ ಬಳಿ ಚರ್ಚಿಸಲು ಮೈದಾನಕ್ಕೆ ಕಳುಹಿಸಿದರು. ಅಂಗಣಕ್ಕೆ ಧಾವಿಸಿ ಆನ್ ಫೀಲ್ಡ್ ಅಂಪೈರ್‌ಗಳ ಜೊತೆಗೆ ಚರ್ಚಿಸಿ ಕನಿಷ್ಠ 3ನೇ ಅಂಪೈರ್‌ಗೆ ಈ ನಿರ್ಧಾರ ತೆಗೆದುಕೊಳ್ಳುವಂತೆ ಮನವಿ ಮಾಡಿದರು. ಆದರೆ, ಲೆಗ್ ಅಂಪೈರ್ ನಿತಿನ್ ಮೆನನ್ ಅದು ನೋ-ಬಾಲ್ ಅಲ್ಲ ಎಂದು ತೀರ್ಪು ನೀಡಿದ್ದ ಕಾರಣ, ಅದೇ ತೀರ್ಪಿಗೆ ಬದ್ಧರಾಗಿ ನಿಂತು ಆಟ ಮುಂದುವರಿಸಲು ಆನ್‌ಫೀಲ್ಡ್ ಅಂಪೈರ್ ತೀರ್ಮಾನಿಸಿದರು. ಅತ್ತ ಬೌಂಡರಿ ಗೆರೆ ಬಳಿಯಿದ್ದ ಆರ್‌ಆರ್ ಬ್ಯಾಟರ್ ಜಾಸ್ ಬಟ್ಲರ್ ಜೊತೆಗೂ ಪಂತ್ ರೇಗಾಡಿದರು. ಹಿರಿಯ ಆಟಗಾರ ಶೇನ್ ವಾಟ್ಸನ್ ಮೇಲೂ ಕೋಪಗೊಂಡರು. ಇದನ್ನೂ ಓದಿ: ರಾಜಸ್ಥಾನ ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಆಘಾತ – ತಂಡದೊಂದಿಗಿಲ್ಲ ಕೋಚ್ ಪಾಟಿಂಗ್

    IPL 2022 JOS BUTLER

    ಬಳಿಕ ಡೈವರ್ಟ್ ಆದ ಪೋವೆಲ್ 4ನೇ ಎಸೆತವನ್ನು ಎದುರಿಸುವಲ್ಲಿ ವಿಫಲರಾದರು. 5ನೇ ಎಸೆತದಲ್ಲಿ 2ರನ್‌ಗಳಿಸಿ 6ನೇ ಎಸೆತಕ್ಕೆ ಕ್ಯಾಚ್ ನೀಡಿ ನಿರ್ಗಮಿಸಿದರು. ಗೆಲ್ಲುವ ಕನಸು ಕಂಡಿದ್ದ ಡೆಲ್ಲಿಗೆ ರಿಷಬ್ ಪಂಥ್ ಅವರ ನಿರ್ಧಾರ ತಂಡದ ದಿಕ್ಕನ್ನೇ ಬದಲಾಯಿತು. ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಆವೃತ್ತಿಯಲ್ಲಿ ಶುಕ್ರವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ರೋಚಕವಾಗಿತ್ತು. ಜೋಸ್ ಬಟ್ಲರ್, ದೇವದತ್ ಪಡಿಕಲ್ ಹಾಗೂ ಸಂಜು ಸಾಮ್ಸನ್ ಅವರ ಮಿಂಚಿನಾಟ ರನ್ 200ರ ಗಡಿದಾಟುವಂತೆ ಮಾಡಿತ್ತು.

    ನೋಬಾಲ್ ನಿಯಮಗಳೇನು?: ಸಾಮಾನ್ಯವಾಗಿ ಬೌಲಿಂಗ್ ವೇಳೆ ಬೌಲರ್ ಕೈನಿಂದ ಬಾಲ್ ಹೊರಡುವ ಮುನ್ನವೇ ಕ್ರೀಸ್‌ನಿಂದ ಕಾಲು ಹೊರಕ್ಕಿದ್ದರೆ ಅದು ನೋಬಾಲ್ ಆಗುತ್ತದೆ. ಈ ತೀರ್ಮಾನ ಮುಖ್ಯ ಅಂಪೈರ್ ನೀಡುತ್ತಾರೆ. ಒಂದು ವೇಳೆ ಕ್ರೀಸ್‌ನಲ್ಲಿ ಸಮಸ್ಯೆಯಿಲ್ಲದೆ ಬಾಲು ಫುಲ್‌ಟಾಸ್ ಆಗಿ ಸೊಂಟಕ್ಕಿಂತ ಮೇಲ್ಭಾಗದಲ್ಲಿದ್ದರೆ ಅದು ನೋಬಾಲ್ ಆಗುತ್ತದೆ. ಈ ತೀರ್ಪನ್ನು ಲೆಗ್‌ಅಂಪೈರ್ ಕೊಡಬೇಕು. ಇಲ್ಲದಿದ್ದರೆ ಅದು ನೋಬಾಲ್ ಆಗುವುದಿಲ್ಲ. ಹಾಗೆಯೇ ಸೊಂಟದ ಮೇಲ್ಭಾಗಕ್ಕೆ ಬಾಲ್ ಬರುವ ಸಾಧ್ಯತೆಯಿದ್ದರೂ ಬ್ಯಾಟ್ಸ್‌ಮನ್‌ ಕ್ರೀಸ್‌ನಿಂದ ಆಚೆಯಿದ್ದರೆ ಅದನ್ನು ನೋಬಾಲ್ ನೀಡದಂತೆ ತೀರ್ಪು ನೀಡಬಹುದು.

  • ಬಟ್ಲರ್‌ ಬಿರುಗಾಳಿ ಬೆದರಿದ ಡೆಲ್ಲಿ – ಅಂಕಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ರಾಜಸ್ಥಾನ

    ಬಟ್ಲರ್‌ ಬಿರುಗಾಳಿ ಬೆದರಿದ ಡೆಲ್ಲಿ – ಅಂಕಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ರಾಜಸ್ಥಾನ

    ಮುಂಬೈ: ಜೋಸ್ ಬಟ್ಲರ್ ಬ್ಯಾಟಿಂಗ್ ಮತ್ತು ಪ್ರಸಿದ್ಧ್ ಕೃಷ್ಣ ಬೌಲಿಂಗ್ ನೆರವಿನಿಂದ ಡೆಲ್ಲಿ ವಿರುದ್ಧ ರಾಜಸ್ಥಾನ 15 ರನ್‍ಗಳ ಭರ್ಜರಿ ಜಯ ಸಾಧಿಸಿದೆ.


    223 ರನ್‍ಗಳ ಬೃಹತ್ ಗುರಿ ಪಡೆದ ಡೆಲ್ಲಿ ತಂಡದ ಗೆಲುವಿಗಾಗಿ ರೋವ್ಮನ್ ಪೊವೆಲ್ ಕಡೆಯ ವರೆಗೆ ಹೋರಾಡಿ 36 ರನ್ (15 ಎಸೆತ, 5 ಬೌಂಡರಿ) ಚಚ್ಚಿ ಔಟ್ ಆಗುವುದರೊಂದಿಗೆ ಸೋಲಿನಲ್ಲೂ ಗಮನ ಸೆಳೆದರು. ಅಂತಿಮವಾಗಿ ಡೆಲ್ಲಿ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 207 ರನ್ ಗಳಿಸಲಷ್ಟೇ ಶಕ್ತವಾಯಿತು.

    ಬೃಹತ್ ಮೊತ್ತದ ಗುರಿ ಪಡೆದ ಡೆಲ್ಲಿಗೆ ಆರಂಭಿಕ ಆಟಗಾರರಾದ ಪೃಥ್ವಿ ಶಾ 37 ರನ್ (27 ಎಸೆತ, 5 ಬೌಂಡರಿ, 1 ಸಿಕ್ಸ್) ಮತ್ತು ಡೇವಿಡ್ ವಾರ್ನರ್ 28 ರನ್ (14 ಎಸೆತ, 5 ಬೌಂಡರಿ, 1 ಸಿಕ್ಸ್) ಕೊಡುಗೆ ನೀಡಿ ಔಟ್ ಆದರು. ಆ ಬಳಿಕ ಪಂತ್ 44 ರನ್ (24 ಎಸೆತ, 4 ಬೌಂಡರಿ, 2 ಸಿಕ್ಸ್) ಮತ್ತು ಲಲಿತ್ ಯಾದವ್ 37 ರನ್ (24 ಎಸೆತ, 3 ಬೌಂಡರಿ, 2 ಸಿಕ್ಸ್) ಚಚ್ಚಿ ಪೆವಿಲಿಯನ್ ಸೇರಿಕೊಂಡರು.

    ಈ ಮೊದಲು ಟಾಸ್ ಗೆದ್ದ ಡೆಲ್ಲಿ ನಾಯಕ ರಿಷಭ್ ಪಂತ್ ಎದುರಾಳಿ ತಂಡವನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿದರು. ಅವರ ಆ ಲೆಕ್ಕಾಚಾರ ಆರಂಭದಿಂದಲೇ ತಲೆಕೆಳಗಾಯಿತು. ರಾಜಸ್ಥಾನದ ಆರಂಭಿಕ ಆಟಗಾರರಾದ ಜೋಸ್ ಬಟ್ಲರ್ ಮತ್ತು ದೇವದತ್ ಪಡಿಕ್ಕಲ್ ರನ್ ಮಳೆ ಸುರಿಸಿದರು. ಆರಂಭದಿಂದಲೇ ಸ್ಫೋಟಕ ಆಟಕ್ಕೆ ಮುಂದಾದ ಇವರಿಬ್ಬರು ಮನಬಂದಂತೆ ಬ್ಯಾಟ್‍ಬೀಸಿ ರನ್ ಪ್ರವಾಹ ಹರಿಸಿದರು.

    ಬಟ್ಲರ್ ಬಿರುಗಾಳಿ
    ಒಂದು ಕಡೆ ಪಡಿಕ್ಕಲ್ ಇನ್ನೊಂದು ಕಡೆ ಬಟ್ಲರ್ ಬ್ಯಾಟಿಂಗ್ ಬಿರುಗಾಳಿಗೆ ಡೆಲ್ಲಿ ಬೌಲರ್‌ಗಳು ಹೈರಾಣಾದರು. ಸಿಕ್ಕ ಸಿಕ್ಕ ಬೌಲರ್‌ಗಳಿಗೆ ಬೌಂಡರಿ, ಸಿಕ್ಸರ್ ಚಚ್ಚಿದ ಈ ಜೋಡಿಯನ್ನು ಬೇರ್ಪಡಿಸಲು 15ನೇ ಓವರ್‌ನಲ್ಲಿ ಖಲೀಲ್ ಅಹಮ್ಮದ್ ಸಫಲರಾದರು. ಪಡಿಕ್ಕಲ್ 54 ರನ್ (35 ಎಸೆತ, 7 ಬೌಂಡರಿ, 2 ಸಿಕ್ಸ್) ಸಿಡಿಸಿ ವಿಕೆಟ್ ಒಪ್ಪಿಸಿದರು. ಈ ಮೊದಲು ಬಟ್ಲರ್ ಜೊತೆ ಮೊದಲ ವಿಕೆಟ್‍ಗೆ 155 ರನ್ (91 ಎಸೆತ) ಜೊತೆಯಾಟವಾಡಿ ಡೆಲ್ಲಿಗೆ ಮುಳುವಾದರು.

    ಆ ಬಳಿಕ ಬಟ್ಲರ್ ಜೊತೆಗೂಡಿದ ಸಂಜು ಸ್ಯಾಮ್ಸನ್ ನಾನೇನು ಕಮ್ಮಿ ಇಲ್ಲ ಎಂಬಂತೆ ಬೌಂಡರಿ, ಸಿಕ್ಸ್ ಸಿಡಿಸಿ ಮೆರೆದಾಡಿದರು. ಇತ್ತ ಬಟ್ಲರ್ ಐಪಿಎಲ್‍ನ ಕಳೆದ 8 ಇನ್ನಿಂಗ್ಸ್‌ಗಳ ಪೈಕಿ 4ನೇ ಶತಕ ಬಾರಿಸಿ ಎದುರಾಳಿ ತಂಡದಲ್ಲಿ ನಡುಕ ಹುಟ್ಟಿಸಿದರು. ಅಂತಿಮವಾಗಿ ಬಟ್ಲರ್ 116 ರನ್ (65 ಎಸೆತ, 9 ಬೌಂಡರಿ, 9 ಸಿಕ್ಸ್) ಸಿಡಿಸಿ ಔಟ್ ಆದರು. ನಂತರ ಸ್ಯಾಮ್ಸನ್ ಅಜೇಯ 46 ರನ್ (19 ಎಸೆತ, 5 ಬೌಂಡರಿ, 3 ಸಿಕ್ಸ್) ಬಾರಿಸಿ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು. ಅಂತಿಮವಾಗಿ 20 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 222 ರನ್‍ಗಳ ಬೃಹತ್ ಮೊತ್ತ ಪೇರಿಸಿತು.

    ರನ್ ಏರಿದ್ದು ಹೇಗೆ?
    41 ಎಸೆತ 50 ರನ್
    66 ಎಸೆತ 100 ರನ್
    87 ಎಸೆತ 150 ರನ್
    112 ಎಸೆತ 200 ರನ್
    120 ಎಸೆತ 222 ರನ್