Tag: IPL

  • ತಂದೆ ಮಗನನ್ನು ಬೈಯಬಹುದು – ಶ್ರೀನಿವಾಸನ್ ಹೇಳಿಕೆಗೆ ರೈನಾ ಪ್ರತಿಕ್ರಿಯೆ

    ತಂದೆ ಮಗನನ್ನು ಬೈಯಬಹುದು – ಶ್ರೀನಿವಾಸನ್ ಹೇಳಿಕೆಗೆ ರೈನಾ ಪ್ರತಿಕ್ರಿಯೆ

    ಚೆನ್ನೈ: ಒಬ್ಬ ತಂದೆ ಮಗನನ್ನು ಬೈಯಬಹುದು ಎಂದು ಹೇಳುವ ಮೂಲಕ ಸುರೇಶ್ ರೈನಾ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಲೀಕ ಶ್ರೀನಿವಾಸನ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಐಪಿಎಲ್‍ಗಾಗಿ ಸಿದ್ಧತೆ ನಡೆಸಿದ್ದ ರೈನಾ, ಯುಎಇಗೆ ತೆರಳಿದ್ದರು. ಆದರೆ ಇದಕ್ಕಿದ್ದಂತೆ ಅಗಸ್ಟ್ 29ರಂದು ರೈನಾ ಭಾರತಕ್ಕೆ ವಾಪಸ್ ಬಂದಿದ್ದರು. ವೈಯಕ್ತಿಕ ಕಾರಣದಿಂದ ಐಪಿಎಲ್‍ನಿಂದ ಹೊರ ಹೋಗಿದ್ದಾರೆ ಎಂದು ಸಿಎಸ್‍ಕೆ ತಂಡ ಹೇಳಿತ್ತು. ಇದಾದ ಬಳಿಕ ಶ್ರೀನಿವಾಸನ್ ಅವರು, ಕೆಲ ವಿವಾದತ್ಮಾಕ ಹೇಳಿಕೆಗಳನ್ನು ಕೊಟ್ಟಿದ್ದರು.

    ಈಗ ಇದರ ಬಗ್ಗೆ ಖಾಸಗಿ ಕ್ರೀಡಾ ವಾಹಿನಿಯಲ್ಲಿ ಮಾತನಾಡಿರುವ ರೈನಾ, ಅವರು ನಮ್ಮ ತಂದೆಯಿದ್ದಂತೆ. ನಮಗೆ ಬಹಳ ಹತ್ತಿರದವರು. ಅವರು ನನ್ನನ್ನು ಕಿರಿಮಗನಂತೆ ನೋಡಿಕೊಳ್ಳುತ್ತಾರೆ. ಕೆಲ ಸಂದರ್ಭದಲ್ಲಿ ಬೇಸರವಾಗಿ ಮಾತನಾಡಿದ್ದಾರೆ. ಒಬ್ಬ ತಂದೆ ಮಗನನ್ನು ಬೈಯಬಹುದು ಅಲ್ಲವೆ. ನಾನು ಯುಎಇಯಿಂದ ಬರುವಾಗ ಅವರಿಗೆ ಏನೂ ಹೇಳಿ ಬಂದಿರಲಿಲ್ಲ. ಅದಕ್ಕಾಗಿ ಕೆಲ ಮಾತುಗಳನ್ನು ಆಡಿದ್ದಾರೆ. ನಂತರ ಅವರಿಗೆ ಮೆಸೇಜ್ ಮಾಡಿ ತಿಳಿಸಿದೆ. ಆಗ ಓಕೆ ಎಂದರು ಎಂದು ತಿಳಿಸಿದ್ದಾರೆ.

    ರೈನಾ ಅವರು ಐಪಿಎಲ್‍ನಿಂದ ಹೊರಬರುತ್ತಿದ್ದಂತೆ ಮಾತನಾಡಿದ್ದ ಶ್ರೀನಿವಾಸನ್, ಕೆಲವೊಮ್ಮೆ ಯಶಸ್ಸು ನಿಮ್ಮ ತಲೆಗೆ ಸೇರುತ್ತದೆ. ನಾನು ಯಾರನ್ನು ಏನನ್ನೂ ಮಾಡಲು ಒತ್ತಾಯಿಸುವುದಿಲ್ಲ. ಆದರೆ ನೀವು ಹಿಂಜರಿಯುತ್ತಿದ್ದರೆ ಅಥವಾ ಸಂತೋಷವಾಗಿದ್ದರೆ ಹಿಂತಿರುಗಿ ಎಂದು ಹೇಳಿದ್ದರು. ಇದಾದ ನಂತರ ರೈನಾ ಅವರು ಹೊರಕ್ಕೆ ಬರಲು ರೂಮ್ ವಿಚಾರದಲ್ಲಿ ಜಗಳವಾಗಿದ್ದೆ ಕಾರಣ ಎಂದು ಹೇಳಲಾಗಿತ್ತು. ಇದನ್ನು ಓದಿ: ಧೋನಿ ನನ್ನ ದೊಡ್ಡಣ್ಣನಂತೆ – ಕೊನೆಗೂ ಮೌನ ಮುರಿದ ರೈನಾ

    ಇದಾದ ನಂತರ ಮತ್ತೆ ಯೂಟರ್ನ್ ಹೊಡೆದಿದ್ದ ಶ್ರೀನಿವಾಸನ್, ಸಿಎಸ್‍ಕೆ ತಂಡಕ್ಕೆ ರೈನಾ ಅವರ ಕೊಡುಗೆ ಅದ್ಭುತವಾಗಿದೆ. ಸುರೇಶ್ ರೈನಾ ಅವರು ಇದೀಗ ಏನು ಮಾಡುತ್ತಿದ್ದಾರೆ ಎಂಬುವುದನ್ನು ಅರ್ಥ ಮಾಡಿಕೊಂಡು ಅವರಿಗೆ ಅವಕಾಶ ನೀಡುವುದು ಮುಖ್ಯ. ನಮ್ಮ ತಂಡದ ಆಟಗಾರರು ಒಂದೇ ಕುಟುಂಬದಂತೆ. ಕಳೆದ ಒಂದು ದಶಕದಿಂದ ಕುಟುಂಬವಾಗಿದ್ದೇವೆ ಎಂದು ಹೇಳಿದ್ದರು.

    ಐಪಿಎಲ್‍ನಿಂದ ಹೊರ ಬಂದಿದ್ದಕ್ಕೆ ಕಾರಣ ತಿಳಿಸಿರುವ ರೈನಾ, ಮಹಿಭಾಯ್ ನನ್ನ ದೊಡ್ಡಣ್ಣನಂತೆ. ಅವರೊಂದಿಗೆ ಭಿನ್ನಾಭಿಪ್ರಾಯವಿಲ್ಲ, ಇವೆಲ್ಲ ಕಟ್ಟುಕಥೆ ಎಂದಿದ್ದಾರೆ. ಜೊತೆಗೆ ನಾನು ಐಪಿಎಲ್‍ನಿಂದ ಹೊರಬರಲು ಕೊರೊನಾ ವೈರಸ್ ಕಾರಣ, ಸದ್ಯ ದುಬೈನಲ್ಲಿ ಪರಿಸ್ಥಿತಿ ಸರಿಯಿಲ್ಲ. ನನಗೆ ಕುಟುಂಬವಿದೆ. ಎರಡು ಮಕ್ಕಳು, ವಯಸ್ಸಾದ ಪೋಷಕರು ಇದ್ದಾರೆ. ಇದೆಲ್ಲದರ ನಡುವೆ ನಾನು ಅಲ್ಲಿ ಉಳಿಯಲು ಆಗಲಿಲ್ಲ ಎಂದು ರೈನಾ ಹೇಳಿದ್ದಾರೆ.

  • ಧೋನಿ ನನ್ನ ದೊಡ್ಡಣ್ಣನಂತೆ – ಕೊನೆಗೂ ಮೌನ ಮುರಿದ ರೈನಾ

    ಧೋನಿ ನನ್ನ ದೊಡ್ಡಣ್ಣನಂತೆ – ಕೊನೆಗೂ ಮೌನ ಮುರಿದ ರೈನಾ

    – ಐಪಿಎಲ್‍ನಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಪವರ್ ಹಿಟ್ಟರ್

    ನವದೆಹಲಿ: ಮಹಿಭಾಯ್ ನನ್ನ ದೊಡ್ಡಣ್ಣನಂತೆ ಎಂದು ಹೇಳುವ ಮೂಲಕ ಭಾರತದ ಮಾಜಿ ಆಟಗಾರ ಸುರೇಶ್ ರೈನಾ ಅವರು ಕಟ್ಟುಕಥೆಗಳಿಗೆ ತೆರೆ ಎಳೆದಿದ್ದಾರೆ.

    2020ರ ಐಪಿಎಲ್ ಆಡಲೆಂದು ಯುಎಇಗೆ ತೆರೆಳಿದ್ದ ರೈನಾ, ವೈಯಕ್ತಿಕ ಕಾರಣಗಳಿಂದ ಭಾರತಕ್ಕೆ ವಾಪಸ್ ಆಗಿದ್ದರು. ಐಪಿಎಲ್‍ನಲ್ಲಿ ಎರಡನೇ ಅಧಿಕ ರನ್ ಸಿಡಿಸಿದ ಆಟಗಾರ ಹೊರಬಂದಿರುವುದಕ್ಕೆ ಧೋನಿಯವರ ಜೊತೆ ರೂಮ್ ವಿಚಾರವಾಗಿ ಭಿನ್ನಾಭಿಪ್ರಾಯ ಇದ್ದದೇ ಕಾರಣ ಎಂದು ಹೇಳಲಾಗಿತ್ತು. ಆದರೆ ಈಗ ಈ ಎಲ್ಲ ಗಾಳಿಸುದ್ದಿಗೆ ರೈನಾ ಅವರು ತೆರೆ ಎಳೆದಿದ್ದಾರೆ.

    ಈ ವಿಚಾರವಾಗಿ ರಾಷ್ಟ್ರೀಯ ಮಾಧ್ಯಮವೊಂದರ ಜೊತೆ ಮಾತನಾಡಿರುವ ರೈನಾ, ಮಹಿಭಾಯ್ ನನ್ನ ದೊಡ್ಡಣ್ಣನಂತೆ. ಇವೆಲ್ಲ ಕಟ್ಟುಕಥೆ ಎಂದಿದ್ದಾರೆ. ಜೊತೆಗೆ ನಾನು ಐಪಿಎಲ್‍ನಿಂದ ಹೊರಬರಲು ಕೊರೊನಾ ವೈರಸ್ ಕಾರಣ, ಸದ್ಯ ದುಬೈನಲ್ಲಿ ಪರಿಸ್ಥಿತಿ ಸರಿಯಿಲ್ಲ. ನನಗೆ ಕುಟುಂಬವಿದೆ. ಎರಡು ಮಕ್ಕಳು, ವಯಸ್ಸಾದ ಪೋಷಕರು ಇದ್ದಾರೆ. ಇದೆಲ್ಲದರ ನಡುವೆ ನಾನು ಅಲ್ಲಿ ಉಳಿಯಲು ಆಗಲಿಲ್ಲ ಎಂದು ರೈನಾ ಹೇಳಿದ್ದಾರೆ. ಇದನ್ನು ಓದಿ: 2020ರ ಐಪಿಎಲ್‍ನಿಂದ ದೂರವಾದ ರೈನಾಗೆ ಎಷ್ಟು ಕೋಟಿ ನಷ್ಟ?

    ನಾನು ತೆಗೆದುಕೊಂಡ ನಿರ್ಧಾರ ಬಹಳ ಕಠಿಣವಾಗಿತ್ತು. ಆದರೆ ದುಬೈನಲ್ಲಿ ನನ್ನ ಮಕ್ಕಳ ಆರೋಗ್ಯದ ಬಗ್ಗೆ ನನಗೆ ಬಹಳ ಚಿಂತೆಯಾಗಿತ್ತು. ಅದಕ್ಕೆ ನಾನು ವಾಪಸ್ ಬರುವ ನಿರ್ಧಾರ ಮಾಡಿದ್ದೇನೆ. ನಾನೂ ಯಾವಗಲೂ ಸಿಎಸ್‍ಕೆ ಆಟಗಾರನೇ, ಚೆನ್ನೈ ತಂಡ ನನ್ನ ಕುಟುಂಬವಿದ್ದಂತೆ. ಅಲ್ಲಿನ ಪರಿಸ್ಥಿತಿ ತಿಳಿಯಾದರೆ, ನಾನು ಮತ್ತೆ ಹೋಗುತ್ತೇನೆ. ಅಲ್ಲಿನ ಬಾಗಿಲು ನನಗೆ ಮುಚ್ಚಿಲ್ಲ ಎಂದು ರೈನಾ ಮತ್ತೆ ವಾಪಸ್ ಹೋಗುವ ಬಗ್ಗೆ ಮಾತನಾಡಿದ್ದಾರೆ. ಇದನ್ನು ಓದಿ: ನನ್ನ ಸೋದರ ಮಾವನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ: ಸುರೇಶ್ ರೈನಾ

    ಐಪಿಎಲ್‍ಗಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದ ಚೆನ್ನೈ ತಂಡ ಅಗಸ್ಟ್ 21ರಂದು ಯುಎಇಗೆ ತೆರಳಿತ್ತು. ಆದರೆ 6 ದಿನ ಕ್ವಾರಂಟೈನ್‍ನಲ್ಲಿ ಇದ್ದ ಸಿಎಸ್‍ಕೆ ತಂಡದ ಇಬ್ಬರು ಆಟಗಾರರು ಮತ್ತು 11 ಮಂದಿ ಸಹಾಯ ಸಿಬ್ಬಂದಿಗೆ ಕೊರೊನಾ ವೈರಸ್ ತಗುಲಿತ್ತು. ಇದು ಗೊತ್ತಾದ ದಿನವೇ ರೈನಾ ಅವರು ಕೂಡ ವೈಯಕ್ತಿಕ ಕಾರಣವನ್ನು ಕೊಟ್ಟು ಭಾರತಕ್ಕೆ ವಾಪಸ್ ಆಗಿದ್ದರು. ಇದು ಚೆನ್ನೈ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತೆ ಆಗಿತ್ತು.

  • ನನ್ನ ಸೋದರ ಮಾವನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ: ಸುರೇಶ್ ರೈನಾ

    ನನ್ನ ಸೋದರ ಮಾವನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ: ಸುರೇಶ್ ರೈನಾ

    – ನನ್ನ ಸಹೋದರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ

    ನವದೆಹಲಿ: ನನ್ನ ಸೋದರ ಮಾವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಹೇಳಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಐಪಿಎಲ್-2020 ಆಡಲು ಯುಎಇಗೆ ಹೋಗದಿದ್ದ ರೈನಾ ಅವರು ವೈಯಕ್ತಿಕ ಕಾರಣದಿಂದ ವಾಪಸ್ ಬಂದಿದ್ದರು. ಇದಾದ ಬಳಿಕ ಅವರು ಐಪಿಎಲ್‍ನಿಂದ ಹೊರಗೆ ಬಂದಿರುವ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಇಷ್ಟಾದರೂ ರೈನಾ ಅವರು ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ. ಈಗ ಮೊದಲ ಬಾರಿಗೆ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ರೈನಾ, ಪಂಜಾಬ್‍ನಲ್ಲಿ ನನ್ನ ಕುಟುಂಬದವರಿಗೆ ಆಗಿರುವುದು ಭಯಾನಕತೆಯನ್ನು ಮೀರಿದೆ. ನನ್ನ ಸೋದರಮಾವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನನ್ನ ಸೋದರತ್ತೆ ಮತ್ತು ನನ್ನ ಸೋದರತ್ತೆ ಮಕ್ಕಳ ಮೇಲೂ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ದುರದೃಷ್ಟವಶಾತ್ ನನ್ನ ಸೋದರತ್ತೆ ಮಗನೋರ್ವ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡಿ ಸಾವನ್ನಪ್ಪಿದ್ದಾರೆ. ನನ್ನ ಸೋದರತ್ತೆ ಸಾವು ಬದುಕಿನ ನಡುವೆ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದಾರೆ ಎಂದಿದ್ದಾರೆ.

    ಜೊತೆಗೆ ಇದೂವರೆಗೂ ಅಂದು ರಾತ್ರಿ ಏನಾಯಿತು ಮತ್ತು ಯಾರೂ ಮಾಡಿದರು ಎಂಬುದು ಏನೂ ಗೊತ್ತಿಲ್ಲ. ನಾನು ಪಂಜಾಬ್ ಪೊಲೀಸರಿಗೆ ಮನವಿ ಮಾಡುತ್ತೇನೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ. ನಾವು ಕೊನೆ ಪಕ್ಷ ಈ ಘೋರ ಕೃತ್ಯವನ್ನು ಯಾರು ಮಾಡಿದ್ದಾರೆ ಎಂದು ತಿಳಿದುಕೊಳ್ಳಲು ಬಯಸುತ್ತೇವೆ. ಆ ಅಪರಾಧಿಗಳು ಇನ್ನೊಂದು ಕೃತ್ಯ ಮಾಡಲು ನಾವು ಬಿಡಬಾರದು ಎಂದು ರೈನಾ ಟ್ವೀಟ್ ಮೂಲಕ ಕೇಳಿಕೊಂಡಿದ್ದಾರೆ.

    ರಾಷ್ಟ್ರೀಯ ಮಾಧ್ಯಮದ ವರದಿಯ ಪ್ರಕಾರ, ಪಂಜಾಬ್‍ನ ಪಠಾಣ್‍ಕೋಟ್‍ನ ತರಿಯಾಲ್ ಗ್ರಾಮದಲ್ಲಿ ವಾಸವಿರುವ ರೈನಾ ಅವರ ಸೋದರತ್ತೆ ಕುಟುಂಬ ತಮ್ಮ ಮನೆಯ ಮಹಡಿ ಮೇಲೆ ಮಲಗಿತ್ತು. ಈ ವೇಳೆ ಅವರ ಮೇಲೆ ಅಪರಿಚಿತ ದಾಳಿಕೋರರು ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಪರಿಣಾಮ ಅವರ ಸೋದರ ಮಾವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮನೆಯ ಎಲ್ಲ ಸದಸ್ಯರು ಕೂಡ ಗಂಭೀರವಾಗಿ ಗಾಯಗೊಂಡಿದ್ದರು.

    ರೈನಾ ಅವರ ತಂದೆಯ ಸಹೋದರಿ ಆಶಾ ದೇವಿಯವರ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮತ್ತೊಂದೆಡೆ ಅವರ ಚಿಕ್ಕಪ್ಪ, 58 ವರ್ಷದ ಅಶೋಕ್ ಕುಮಾರ್ ಅವರು ದಾಳಿಯಲ್ಲಿ ಮೃತಪಟ್ಟಿದ್ದಾರೆ. ರೈನಾರ ಅತ್ತೆ ಮತ್ತು ಅತ್ತೆಯ ಮಕ್ಕಳಾದ 32 ವರ್ಷದ ಕೌಶಲ್ ಕುಮಾರ್ ಮತ್ತು 24 ವರ್ಷದ ಅಪಿನ್ ಕುಮಾರ್ ಕೂಡ ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

  • ಕೇನ್ ರಿಚರ್ಡ್‍ಸನ್ ಔಟ್ – ಆರ್​ಸಿಬಿಗೆ ಬಂದ್ರು ಹೊಸ ಲೆಗ್ ಸ್ಪಿನ್ನರ್

    ಕೇನ್ ರಿಚರ್ಡ್‍ಸನ್ ಔಟ್ – ಆರ್​ಸಿಬಿಗೆ ಬಂದ್ರು ಹೊಸ ಲೆಗ್ ಸ್ಪಿನ್ನರ್

    ಅಬುಧಾಬಿ: ಆರ್​ಸಿಬಿ ತಂಡದಲ್ಲಿ ಆಡುತ್ತಿದ್ದ ಆಸ್ಟ್ರೇಲಿಯಾದ ವೇಗದ ಬೌಲರ್ ಕೇನ್ ರಿಚರ್ಡ್‍ಸನ್ ಅವರು ಟೂರ್ನಿಯಿಂದ ಹೊರಬಂದಿದ್ದಾರೆ. ಈ ಜಾಗಕ್ಕೆ ಆಸಿಸ್‍ನ ಮತ್ತೋರ್ವ ಲೆಗ್ ಸ್ಪಿನ್ನರ್ ಎಂಟ್ರಿ ಕೊಟ್ಟಿದ್ದಾರೆ.

    ಐಪಿಎಲ್ ಆರಂಭಗೊಳ್ಳಲು ಇನ್ನೇನು ಕೆಲವೇ ದಿನ ಬಾಕಿಯಿದೆ. ಅಂತೆಯೇ ಎಲ್ಲ ತಂಡಗಳು ಈಗಾಗಲೇ ಯುಎಇ ತಲುಪ್ಪಿದ್ದು, ಚೆನ್ನೈ ತಂಡವನ್ನು ಹೊರತುಪಡಿಸಿ ಉಳಿದ ತಂಡಗಳು ಅಭ್ಯಾಸವನ್ನು ಆರಂಭ ಮಾಡಿವೆ. ಇದರ ನಡುವೆ ಆರ್​ಸಿಬಿ ತಂಡಕ್ಕೆ ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಆಡಮ್ ಜಂಪಾ ಅವರು ಹೊಸದಾಗಿ ಸೇರ್ಪಡೆಯಾಗಿದ್ದಾರೆ.

    ಕಳೆದ ಸೀಸನ್ ಅಲ್ಲಿ ಆರ್​ಸಿಬಿ ಪರವಾಗಿ ಆಡಿದ್ದ ಕೇನ್‍ಗೆ ಈ ಬಾರಿಯ ಬಿಡ್ಡಿಂಗ್‍ನಲ್ಲಿ ಬರೋಬ್ಬರಿ 4 ಕೋಟಿಗೆ ಆರ್​ಸಿಬಿ ತಂಡ ಕೊಂಡುಕೊಂಡಿತ್ತು. ಆದರೆ ಅಪ್ಪ ಆಗುತ್ತಿರುವ ಖುಷಿಯಲ್ಲಿರುವ ಕೇನ್ ರಿಚರ್ಡ್‍ಸನ್ ಈ ಬಾರಿಯ ಐಪಿಎಲ್ ಆಡುವುದಿಲ್ಲ ಎಂದು ಹೇಳಿದ್ದಾರೆ. ಈ ಕಾರಣದಿಂದ ಇವರ ಜಾಗಕ್ಕೆ ಆಸ್ಟ್ರೇಲಿಯಾದ ಮತ್ತೋರ್ವ ಯುವ ಲೆಗ್ ಸ್ಪಿನ್ನರ್ ಆಡಮ್ ಜಂಪಾ ಅವರು ಬಂದಿದ್ದಾರೆ.

    ಆಡಮ್ ಜಂಪಾ ಅವರು ಈ ಬಾರಿ ಐಪಿಎಲ್ ಹಾರಾಜು ಪ್ರಕ್ರಿಯೆಯಲ್ಲಿ ಅನ್‍ಸೋಲ್ಡ್ ಆಗಿದ್ದರು. ಅವರು ಕಳೆದ 2017ರ ಐಪಿಎಲ್‍ನಲ್ಲಿ ರೈಸಿಂಗ್ ಪುಣೆ ಸೂಪರ್‍ಜಿಯಂಟ್ ತಂಡದಲ್ಲಿ ಆಡಿದ್ದರು. ಆ ಟೂರ್ನಿಯಲ್ಲಿ 11 ಪಂದ್ಯಗಳನ್ನಾಡಿ 19 ವಿಕೆಟ್ ಪಡೆದಿದ್ದರು. ಈಗ ಆರ್​ಸಿಬಿಯ ಸ್ಪಿನ್ನರ್ ಗಳಾದ ಯುಜ್ವೇಂದ್ರ ಚಾಹಲ್, ಮೊಯೀನ್ ಅಲಿ, ವಾಷಿಂಗ್ಟನ್ ಸುಂದರ್, ಮತ್ತು ಪವನ್ ನೇಗಿ ಅವರನ್ನು ಸೇರಿಕೊಳ್ಳಲಿದ್ದಾರೆ.

    ಈ ವಿಚಾರವನ್ನು ಟ್ವೀಟ್ ಮಾಡುವ ಮೂಲಕ ಬಹಿರಂಗ ಪಡಿಸಿರುವ ಆರ್​ಸಿಬಿ ತಂಡ, ಆಡಮ್ ಜಂಪಾ ಅವರನ್ನು ಆರ್‍ಸಿಬಿ ಜೆರ್ಸಿಯಲ್ಲಿ ನೋಡಲು ತುಂಬಾ ಉತ್ಸುಕತೆಯಿಂದ ಕಾಯುತ್ತಿದ್ದೇವೆ. ಅವರು ಕೇನ್ ರಿಚರ್ಡ್‍ಸನ್ ಅವರ ಬದಲಿಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಜೊತೆಗೆ ತಮ್ಮ ಮೊದಲ ಮಗುವಿನ ಜನನವನ್ನು ನಿರೀಕ್ಷಿಸುತ್ತಿರುವ ಕೇನ್ ಮತ್ತು ಅವರ ಪತ್ನಿಗಾಗಿ ಆರ್‍ಸಿಬಿ ಕುಟುಂಬವು ಉತ್ಸುಕವಾಗಿದೆ ಮತ್ತು ಟೂರ್ನಿಯಿಂದ ಹೊರಗುಳಿಯುವ ಅವರ ನಿರ್ಧಾರವನ್ನು ಗೌರವಿಸುತ್ತದೆ ಎಂದು ಟ್ವೀಟ್ ಮಾಡಿದೆ.

    ಐಪಿಎಲ್-2020ರ ಆರ್​ಸಿಬಿ ತಂಡ: ವಿರಾಟ್ ಕೊಹ್ಲಿ (ನಾಯಕ), ಆರನ್ ಫಿಂಚ್, ಎಬಿ ಡಿವಿಲಿಯರ್ಸ್, ಜೋಶ್ ಫಿಲಿಪ್, ಪಾರ್ಥಿವ್ ಪಟೇಲ್, ಡೇಲ್ ಸ್ಟೇನ್, ಆಡಮ್ ಜಂಪಾ, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಉಮೇಶ್ ಯಾದವ್, ಯುಜ್ವೇಂದ್ರ ಚಾಹಲ್, ದೇವದತ್ ಪಡಿಕ್ಕಲ್, ಕ್ರಿಸ್ ಮೋರಿಸ್, ಗುರ್ಕೀರತ್ ಸಿಂಗ್ ಮನ್, ಇಸುರು ಉದಾನಾ, ಮೊಯೀನ್ ಅಲಿ, ಪವನ್ ದೇಶಪಾಂಡೆ, ಪವನ್ ನೇಗಿ, ಶಹಬಾಜ್ ಅಹ್ಮದ್, ಶಿವಮ್ ದುಬೆ, ವಾಷಿಂಗ್ಟನ್ ಸುಂದರ್.

  • ರೈನಾ ಹೊರಬಂದಿರುವುದು ಧೋನಿಗೆ ಒಳ್ಳೆಯ ಅವಕಾಶ: ಗಂಭೀರ್

    ರೈನಾ ಹೊರಬಂದಿರುವುದು ಧೋನಿಗೆ ಒಳ್ಳೆಯ ಅವಕಾಶ: ಗಂಭೀರ್

    ನವದೆಹಲಿ: ರೈನಾ ಐಪಿಎಲ್‍ನಿಂದ ಹೊರಬಂದಿರುವುದು ಧೋನಿಗೆ ಮೂರನೇ ಕ್ರಮಾಂಕದಲ್ಲಿ ಆಡಲು ಒಳ್ಳೆಯ ಅವಕಾಶ ಎಂದು ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.

    ಕೆಲ ವೈಯಕ್ತಿಕ ಕಾರಣಗಳಿಂದ ಸುರೇಶ್ ರೈನಾ ಅವರು, ಐಪಿಎಲ್-2020ಯಿಂದ ಹೊರಬಂದಿದ್ದಾರೆ. ಐಪಿಎಲ್‍ನಲ್ಲಿ ಭಾಗವಹಿಸಲು ಅಗಸ್ಟ್ 21ರಂದು ಯುಎಇಗೆ ತೆರಳಿದ್ದ ರೈನಾ, ಕಳೆದ ಮೂರು ದಿನಗಳ ಹಿಂದೆ ಭಾರತಕ್ಕೆ ವಾಪಸ್ ಬಂದಿದ್ದರು. ಈಗ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಯಾರೂ ಮೂರನೇ ಕ್ರಮಾಂಕದಲ್ಲಿ ಆಡಬೇಕು ಎಂಬ ವಿಚಾರ ಬಹಳ ಚೆರ್ಚೆಯಾಗುತ್ತಿದೆ.

    ಈ ವಿಚಾರವಾಗಿ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿರುವ ಗಂಭೀರ್, ರೈನಾ ಐಪಿಎಲ್‍ನಿಂದ ಹೊರಬಂದಿರುವುದು ಧೋನಿಗೆ ಮೂರನೇ ಕ್ರಮಾಂಕದಲ್ಲಿ ಆಡಲು ಒಳ್ಳೆಯ ಅವಕಾಶ. ಇದನ್ನು ಧೋನಿಯವರು ಬಳಸಿಕೊಳ್ಳಲಿದ್ದಾರೆ ಎಂದು ನಾನು ಭಾವಿಸಿದ್ದೇನೆ. ಈಗ ರೈನಾ ಟೂರ್ನಿ ಆಡುತ್ತಿಲ್ಲ. ಮೂರನೇ ಕ್ರಮಾಂಕದಲ್ಲಿ ಅನುಭವಿ ಆಟಗಾರ ಬ್ಯಾಟ್ ಮಾಡಬೇಕಿದೆ. ಹೀಗಾಗಿ ಈ ಸ್ಥಾನವನ್ನು ಧೋನಿ ತುಂಬಿದರೆ ಒಳ್ಳೆಯದು ಎಂದು ತಿಳಿಸಿದ್ದಾರೆ.

    ಧೋನಿ ಕಳೆದ ಒಂದು ವರ್ಷದಿಂದ ಕ್ರಿಕೆಟ್‍ನಿಂದ ದೂರವಿದ್ದಾರೆ. ಹೀಗಾಗಿ ಮೂರನೇ ಕ್ರಮಾಂಕದಲ್ಲಿ ಆಡಿದರೆ ಹೆಚ್ಚು ಬಾಲ್ ಎದುರಿಸಬಹುದು. ಜೊತೆಗೆ ಒಳ್ಳೆಯ ಇನ್ನಿಂಗ್ಸ್ ಕಟ್ಟುವ ನಿಟ್ಟಿನಲ್ಲಿ ಬ್ಯಾಟ್ ಬೀಸಬಹುದು. ಧೋನಿ ಮೂರನೇ ಕ್ರಮಾಂಕದಲ್ಲಿ ಆಡಿದರೆ, ಅವರ ನಂತರ ಬಂದು ಮ್ಯಾಚ್ ಫಿನಿಶ್ ಮಾಡುವ ಆಟಗಾರರು ಇದ್ದಾರೆ. ಧೋನಿ ನಂತರ ಕೇದಾರ್ ಜಾಧವ್, ಡ್ವೇನ್ ಬ್ರಾವೋ ಮತ್ತು ಸ್ಯಾಮ್ ಕರ್ರನ್ ಬಂದು ಮ್ಯಾಚ್ ಫಿನಿಶ್ ಮಾಡುತ್ತಾರೆ ಎಂದು ಗಂಭೀರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಐಪಿಎಲ್-2020 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದರ ನಡುವೆ ಕೊರೊನಾ ಕೆರಿನೆರಳು ದೂರದ ಯುಎಇಯಲ್ಲೂ ಐಪಿಎಲ್ ಮೇಲೆ ಬಿದ್ದಿದೆ. ಇತ್ತೀಚೆಗಷ್ಟೆ ಚೆನ್ನೈ ತಂಡದ ಇಬ್ಬರು ಆಟಗಾರರು ಸೇರಿದಂತೆ 13 ಮಂದಿಗೆ ಕೊರೊನಾ ಸೋಂಕು ತಗಲುಲಿದೆ. ಈ ನಡುವೆ ತಂಡದ ಸ್ಟಾರ್ ಆಟಗಾರ ಸುರೇಶ್ ರೈನಾ ಐಪಿಎಲ್‍ನಿಂದ ಹೊರಕ್ಕೆ ಬಂದಿದ್ದಾರೆ. ಇದು ಚೆನ್ನೈ ತಂಡದ ಅಭಿಮಾನಿಗಳಿಗೆ ನಿರಾಸೆಯನ್ನುಂಟು ಮಾಡಿದೆ. ಸೆಪ್ಟಂಬರ್ 19ರಿಂದ ಐಪಿಎಲ್ ಟೂರ್ನಿ ಆರಂಭಗೊಳ್ಳಲಿದೆ.

  • ಸಿಎಸ್‍ಕೆ ಬದಲು ಐಪಿಎಲ್ ಆರಂಭಿಕ ಪಂದ್ಯದಲ್ಲಿ ಕಣಕ್ಕಿಳಿಯಲಿದ್ಯಾ ಆರ್‌ಸಿಬಿ?

    ಸಿಎಸ್‍ಕೆ ಬದಲು ಐಪಿಎಲ್ ಆರಂಭಿಕ ಪಂದ್ಯದಲ್ಲಿ ಕಣಕ್ಕಿಳಿಯಲಿದ್ಯಾ ಆರ್‌ಸಿಬಿ?

    ಅಬುಧಾಬಿ: ಐಪಿಎಲ್ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬದಲು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ ಎಂದು ಹೇಳಲಾಗಿದೆ.

    ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿದೆ. ವಾಡಿಕೆಯಂತೆ ಕಳೆದ ಐಪಿಎಲ್‍ನ ಫೈನಲ್‍ನಲ್ಲಿ ಮುಖಾಮುಖಿಯಾಗಿದ್ದ ಸಿಎಸ್‍ಕೆ ಮತ್ತು ಮುಂಬೈ ತಂಡದ ಈ ಟೂರ್ನಿಯ ಮೊದಲ ಪಂದ್ಯವನ್ನು ಆಡಬೇಕಿತ್ತು. ಆದರೆ ಸಿಎಸ್‍ಕೆ ತಂಡದ ಕೆಲ ಸಹಾಯಕ ಸಿಬ್ಬಂದಿ ಮತ್ತು ಇಬ್ಬರು ಆಟಗಾರರಿಗೆ ಕೊರೊನಾ ಬಂದ ಕಾರಣ ಚೆನ್ನೈ ತಂಡ ಮೊದಲ ಪಂದ್ಯವನ್ನು ಆಡಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.

    ಐಪಿಎಲ್‍ನ ಆರಂಭಿಕ ಪಂದ್ಯದಲ್ಲಿ ನಾಲ್ಕು ಬಾರಿ ಐಪಿಎಲ್ ಟ್ರೋಫಿ ಗೆದ್ದ ಮುಂಬೈ ತಂಡ ಮತ್ತು ಮೂರು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ತಂಡವನ್ನು ಆಡಿಸಲು ಬಿಸಿಸಿಐ ತೀರ್ಮಾನ ಮಾಡಿತ್ತು. ಆದರೆ ಈ ನಡುವೆ ಈ ಪಂದ್ಯಕ್ಕೆ ಕೊರೊನಾ ಅಡ್ಡಗಾಲು ಹಾಕಿದ್ದು, ಸೆಪ್ಟೆಂಬರ್ 19ರೊಳಗೆ ಸಿಎಸ್‍ಕೆ ತಂಡದ ಆಟಗಾರರು ಸೋಂಕಿನಿಂದ ಹೊರಬರುವುದು ಡೌಟು ಎನ್ನಲಾಗಿದೆ. ಈ ಕಾರಣಕ್ಕೆ ಐಪಿಎಲ್‍ನಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್‌ಸಿಬಿ ತಂಡ ಆರಂಭಿಕ ಪಂದ್ಯವನ್ನು ಆಡಲಿದೆ ಎನ್ನಲಾಗಿದೆ.

    ಈ ವಿಚಾರವಾಗಿ ಬಿಸಿಸಿಐ ಉನ್ನತ ಮೂಲಗಳಿಂದ ಮಾಹಿತಿ ಹೊರಬಿದ್ದಿದ್ದು, ಈ ಬಾರಿ ಐಪಿಎಲ್ ಆರಂಭಿಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ. ಮೊದಲ ಪಂದ್ಯದಲ್ಲಿ ಸ್ಟಾರ್ ಆಟಗಾರರು ಮೈದಾನಕ್ಕೆ ಇಳಿದರೆ, ಆಟದ ಕ್ರೇಜ್ ಜಾಸ್ತಿಯಾಗುತ್ತದೆ. ಒಂದು ಕಡೆ ರೋಹಿತ್ ಸಿದ್ಧವಾಗಿದ್ದಾರೆ. ಆದರೆ ಧೋನಿಯವರ ತಂಡ ಆಡುವುದು ಅನುಮಾನವಾಗಿದೆ. ಹೀಗಾಗಿ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡವನ್ನು ಆಡಿಸಲು ತಯಾರಿ ನಡೆದಿದೆ ಎಂದು ತಿಳಿದು ಬಂದಿದೆ.

    ಸೆ.19ರ ವೇಳೆಗೆ ಚೆನ್ನೈ ತಂಡ ಪೂರ್ಣ ಪ್ರಮಾಣದಲ್ಲಿ ಕೊರೊನಾದಿಂದ ಚೇತರಿಸಿಕೊಳ್ಳುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಟೂರ್ನಿಯ ಶೆಡ್ಯೂಲ್‍ನಲ್ಲಿ ಸಣ್ಣ ಬದಲಾವಣೆ ಮಾಡಿ ಮೊದಲ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಲಾಗಿದೆ. ಇತ್ತ ಎರಡು ದಿನಗಳ ಅವಧಿಯಲ್ಲಿ ಚೆನ್ನೈ ತಂಡದಲ್ಲಿ 12 ಕೊರೊನಾ ಪ್ರಕರಣಗಳು ಪತ್ತೆಯಾಗಿವುದರಿಂದ ಮತ್ತಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುವ ನಿರೀಕ್ಷೆ ಇದೆ.

  • ನಾವು ಕುಟುಂಬದ ಜೊತೆ ಇದ್ದಾಗ ಮಾಸ್ಕ್ ಹಾಕಲ್ಲ- ಚಹರ್ ಕಮೆಂಟ್ ವೈರಲ್

    ನಾವು ಕುಟುಂಬದ ಜೊತೆ ಇದ್ದಾಗ ಮಾಸ್ಕ್ ಹಾಕಲ್ಲ- ಚಹರ್ ಕಮೆಂಟ್ ವೈರಲ್

    ನವದೆಹಲಿ: ನಾವು ಕುಟುಂಬದ ಜೊತೆ ಇದ್ದಾಗ ಮಾಸ್ಕ್ ಹಾಕಲ್ಲ ಎಂದು ಸಿಎಸ್‍ಕೆ ತಂಡದ ವೇಗಿ ದೀಪಕ್ ಚಹರ್ ಈ ಹಿಂದೆ ಮಾಡಿದ್ದ ಕಮೆಂಟ್ ವೈರಲ್ ಆಗಿದೆ.

    ಶುಕ್ರವಾರವಷ್ಟೇ ಯುಎಇಯಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗಿ ದೀಪಕ್ ಚಹರ್ ಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇವರ ಜೊತೆ ತಂಡದ 10 ಸಹಾಯಕ ಸಿಬ್ಬಂದಿಗೂ ಕೊರೊನಾ ವೈರಸ್ ತಗುಲಿದ್ದು, ಮಾಸ್ಕ್ ಬಗ್ಗೆ ಚಹರ್ ಈ ಹಿಂದೆ ಮಾಡಿದ್ದ ಇನ್‍ಸ್ಟಾ ಕಮೆಂಟ್ ಈಗ ವೈರಲ್ ಆಗಿದೆ.

    ಯುಎಇಗೆ ಹೊರಡುವ ಮುನ್ನಾ ದೀಪಕ್ ಚಹರ್ ಅವರು, ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದೇ ಸಿಎಸ್‍ಕೆ ಇತರ ಆಟಗಾರರ ಜೊತೆ ಸೆಲ್ಫಿ ತೆಗೆದುಕೊಂಡಿದ್ದರು. ಈ ಫೋಟೋವನ್ನು ಚಹರ್ ಅವರು, ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿಕೊಂಡಿದ್ದರು. ಇದಕ್ಕೆ ಸ್ವತಃ ಅವರ ಸಹೋದರ ರಾಹುಲ್ ಚಹರ್ ಅವರು, ನಿಮ್ಮ ಮಾಸ್ಕ್ ಎಲ್ಲಿ ಸಹೋದರ, ಸಾಮಾಜಿಕ ಅಂತರ ಎಲ್ಲಿ ಎಂದು ಕಮೆಂಟ್ ಮಾಡಿದ್ದರು.

    ಸಹೋದರನ ಕಮೆಂಟ್‍ಗೆ ಪ್ರತಿಕ್ರಿಯೆ ಕೊಟ್ಟಿದ್ದ ಚಹರ್, ನಾನು ಎರಡು ಸಲ ಕೊರೊನಾ ಟೆಸ್ಟ್ ಮಾಡಿಸಿದ್ದೇನೆ ಅದರಲ್ಲಿ ನೆಗೆಟಿವ್ ಬಂದಿದೆ ಸಹೋದರ. ನಾವು ಕುಟುಂಬದ ಜೊತೆ ಇದ್ದಾಗ ಮಾಸ್ಕ್ ಹಾಕಿಕೊಳ್ಳಲ್ಲ ಎಂದಿದ್ದರು. ಈಗ ಅವರಿಗೇ ಯುಎಇಗೆ ತೆರಳಿದ ನಂತರ ಕೊರೊನಾ ಪಾಸಿಟಿವ್ ಬಂದಿದ್ದು, ಈಗ ಈ ಕಮೆಂಟ್ ವೈರಲ್ ಆಗಿದೆ. ಇದನ್ನೇ ಇಟ್ಟುಕೊಂಡು ನೆಟ್ಟಿಗರು ಚಹರ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

    ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗಸ್ಟ್ 21ರಂದೇ ಯುಎಇಗೆ ತೆರಳಿತ್ತು. ಎಂದಿನಂತೆ ಎಲ್ಲ ಆಟಗಾರರಿಗೆ ಭಾರತದಲ್ಲೂ ಕೂಡ ಒಂದು ಬಾರಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅಂತೆಯೇ ಯುಎಇಗೆ ತೆರಳಿದ ತಂಡ ಅಲ್ಲಿ ಆರು ದಿನಗಳ ಕಾಲ ಕ್ವಾರಂಟೈನ್‍ಗೆ ಒಳಗಾಗಿತ್ತು. ಶುಕ್ರವಾರಕ್ಕೆ ಆ ಅವಧಿ ಮುಗಿಯಲಿದ್ದು, ಚೆನ್ನೈ ತಂಡ ಅಭ್ಯಾಸ ನಡೆಸಬೇಕಿತ್ತು. ಆದರೆ ಕೊರೊನಾ ಟೆಸ್ಟ್ ನಲ್ಲಿ ತಂಡದ ಸದಸ್ಯರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಹೀಗಾಗಿ ತಂಡ ಸೆಪ್ಟೆಂಬರ್ 1ರಿಂದ ಅಭ್ಯಾಸ ಆರಂಭಿಸಲಿದೆ.

  • ರೈನಾ ಸೋದರತ್ತೆ ಕುಟುಂಬದ ಮೇಲೆ ದಾಳಿಕೋರರಿಂದ ಹಲ್ಲೆ – ಸೋದರ ಮಾವ ಸಾವು

    ರೈನಾ ಸೋದರತ್ತೆ ಕುಟುಂಬದ ಮೇಲೆ ದಾಳಿಕೋರರಿಂದ ಹಲ್ಲೆ – ಸೋದರ ಮಾವ ಸಾವು

    – ಸೋದರತ್ತೆ, ಮಕ್ಕಳಿಬ್ಬರು ಗಂಭೀರ ಸ್ಥಿತಿ

    ನವದೆಹಲಿ: ಭಾರತದ ಮಾಜಿ ಕ್ರಿಕೆಟ್ ಆಟಗಾರ ಸುರೇಶ್ ರೈನಾ ಅವರ ಸೋದರತ್ತೆಯ ಕುಟುಂಬದ ಮೇಲೆ ದಾಳಿಕೋರರು ಹಲ್ಲೆ ಮಾಡಿದ್ದು, ಸೋದರಮಾವ ಸಾವನ್ನಪ್ಪಿದ್ದಾರೆ.

    ಸುರೇಶ್ ರೈನಾ ಅವರು ಐಪಿಎಲ್-2020ಯಲ್ಲಿ ಭಾಗವಹಿಸಲು ಆಗಸ್ಟ್ 21ರಂದು ಯುಎಇಗೆ ಹೋಗಿದ್ದರು. ಇದರ ನಡುವೆ ಅವರ ಸೋದರಮಾವ ಸಾವನ್ನಪ್ಪಿರುವ ವಿಚಾರ ತಿಳಿದು ಈಗ ವಾಪಸ್ ಆಗಲಿದ್ದಾರೆ. ಈ ಮೂಲಕ ಐಪಿಎಲ್ ಟೂರ್ನಿಯಿಂದಲೇ ರೈನಾ ಅವರು ಹೊರಬಂದಿದ್ದಾರೆ.

    ರಾಷ್ಟ್ರೀಯ ಮಾಧ್ಯಮದ ವರದಿಯ ಪ್ರಕಾರ, ಪಂಜಾಬ್‍ನ ಪಠಾಣ್‍ಕೋಟ್‍ನ ತರಿಯಾಲ್ ಗ್ರಾಮದಲ್ಲಿ ವಾಸವಿರುವ ರೈನಾ ಅವರ ಸೋದರತ್ತೆ ಕುಟುಂಬ ತಮ್ಮ ಮನೆಯ ಮಹಡಿ ಮೇಲೆ ಮಲಗಿತ್ತು. ಈ ವೇಳೆ ಅವರ ಮೇಲೆ ಅಪರಿಚಿತ ದಾಳಿಕೋರರು ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಪರಿಣಾಮ ಅವರ ಸೋದರ ಮಾವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮನೆಯ ಎಲ್ಲ ಸದಸ್ಯರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.

    ರೈನಾ ಅವರ ತಂದೆಯ ಸಹೋದರಿ ಆಶಾ ದೇವಿಯವರ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮತ್ತೊಂದೆಡೆ ಅವರ ಚಿಕ್ಕಪ್ಪ, 58 ವರ್ಷದ ಅಶೋಕ್ ಕುಮಾರ್ ಅವರು ದಾಳಿಯಲ್ಲಿ ಮೃತಪಟ್ಟಿದ್ದಾರೆ. ರೈನಾರ ಅತ್ತೆ ಮತ್ತು ಅತ್ತೆಯ ಮಕ್ಕಳಾದ 32 ವರ್ಷದ ಕೌಶಲ್ ಕುಮಾರ್ ಮತ್ತು 24 ವರ್ಷದ ಅಪಿನ್ ಕುಮಾರ್ ಕೂಡ ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

    ರೈನಾ ಅವರ ವಿಚಾರವಾಗಿ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಚೆನ್ನೈ ತಂಡದ ಸಿಇಓ ವಿಶ್ವನಾಥನ್, ಸುರೇಶ್ ರೈನಾ ಅವರು ವೈಯಕ್ತಿಕ ಕಾರಣಗಳಿಗಾಗಿ ಭಾರತಕ್ಕೆ ವಾಪಸ್ ಹೋಗುತ್ತಿದ್ದಾರೆ ಮತ್ತು ಮುಂದೆ ಆರಂಭವಾಗುವ ಐಪಿಎಲ್ ಟೂರ್ನಿಯಲ್ಲಿ ಅವರು ಲಭ್ಯವಿರುವುದಿಲ್ಲ. ಈ ಸಮಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸುರೇಶ್ ರೈನಾ ಮತ್ತು ಅವರ ಕುಟುಂಬಕ್ಕೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದಿದ್ದರು.

    ಶುಕ್ರವಾರಷ್ಟೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ವೇಗಿ ದೀಪಕ್ ಚಹರ್ ಅವರು ಸೇರಿದಂತೆ ಕೆಲ ಸಹಾಯ ಸಿಬ್ಬಂದಿಗೆ ಕೊರೊನಾ ಪಾಸಿಟವ್ ಬಂದಿತ್ತು. ಇದರಿಂದ ಶುಕ್ರವಾರದಿಂದ ಅಭ್ಯಾಸವನ್ನು ಆರಂಭ ಮಾಡಬೇಕಿದ್ದ ಚೆನ್ನೈ ತಂಡ ಸೆಪ್ಟೆಂಬರ್ 1ರವರೆಗೆ ಕ್ವಾರಂಟೈನ್‍ನಲ್ಲಿ ಇರಲು ತೀರ್ಮಾನ ಮಾಡಿತ್ತು. ಇದರ ನಡುವೆ ರೈನಾ ಕೂಡ ಹೊರಗೆ ಬಂದಿರುವುದು ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.

  • ಸಿಎಸ್‍ಕೆ ತಂಡಕ್ಕೆ ಬಿಗ್ ಶಾಕ್ – ಐಪಿಎಲ್‍ನಿಂದ ಹೊರಬಂದ ರೈನಾ

    ಸಿಎಸ್‍ಕೆ ತಂಡಕ್ಕೆ ಬಿಗ್ ಶಾಕ್ – ಐಪಿಎಲ್‍ನಿಂದ ಹೊರಬಂದ ರೈನಾ

    ಅಬುಧಾಬಿ: ಐಪಿಎಲ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಅಘಾತವೊಂದು ಎದುರಾಗಿದೆ. ತಂಡದ ಅನುಭವಿ ಮತ್ತು ಸ್ಟಾರ್ ಆಟಗಾರ ಸುರೇಶ್ ರೈನಾ ಐಪಿಎಲ್ ಟೂರ್ನಿಯಿಂದ ಹೊರಬಂದಿದ್ದಾರೆ.

    ಈಗಾಗಲೇ ಯುಎಇಯಲ್ಲಿರುವ ಚೆನ್ನೈ ತಂಡದ ವೇಗಿ ದೀಪಕ್ ಚಹರ್ ಮತ್ತು ತಂಡದ ಕೆಲ ಸಹಾಯ ಸಿಬ್ಬಂದಿಗೆ ಕೊರೊನಾ ಬಂದು ಸುದ್ದಿಯಾಗಿತ್ತು. ಈಗ ಸುರೇಶ್ ರೈನಾ ಅವರು ತಮ್ಮ ವೈಯಕ್ತಿಕ ಕಾರಣದಿಂದ ಭಾರತಕ್ಕೆ ವಾಪಸ್ ಬರುತ್ತಿದ್ದಾರೆ ಮತ್ತು ಐಪಿಎಲ್‍ನಲ್ಲಿ ಅಲಭ್ಯರಾಗಲಿದ್ದಾರೆ ಎಂದು ಸ್ವತಃ ಚೆನ್ನೈ ತಂಡವೇ ಹೇಳಿಕೊಂಡಿದೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಚೆನ್ನೈ ತಂಡದ ಸಿಇಓ ವಿಶ್ವನಾಥನ್, ಸುರೇಶ್ ರೈನಾ ಅವರು ವೈಯಕ್ತಿಕ ಕಾರಣಗಳಿಗಾಗಿ ಭಾರತಕ್ಕೆ ವಾಪಸ್ ಹೋಗುತ್ತಿದ್ದಾರೆ ಮತ್ತು ಮುಂದೆ ಆರಂಭವಾಗುವ ಐಪಿಎಲ್ ಟೂರ್ನಿಯಲ್ಲಿ ಅವರು ಲಭ್ಯವಿರುವುದಿಲ್ಲ. ಈ ಸಮಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸುರೇಶ್ ರೈನಾ ಮತ್ತು ಅವರ ಕುಟುಂಬಕ್ಕೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

    ಶುಕ್ರವಾರಷ್ಟೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ವೇಗಿ ದೀಪಕ್ ಚಹರ್ ಅವರು ಸೇರಿದಂತೆ ಕೆಲ ಸಹಾಯ ಸಿಬ್ಬಂದಿಗೆ ಕೊರೊನಾ ಪಾಸಿಟವ್ ಬಂದಿತ್ತು. ಇದರಿಂದ ಶುಕ್ರವಾರದಿಂದ ಅಭ್ಯಾಸವನ್ನು ಆರಂಭ ಮಾಡಬೇಕಿದ್ದ ಚೆನ್ನೈ ತಂಡ ಸೆಪ್ಟೆಂಬರ್ 1ರವರೆಗೆ ಕ್ವಾರಂಟೈನ್‍ನಲ್ಲಿ ಇರಲು ತೀರ್ಮಾನ ಮಾಡಿತ್ತು. ಇದರ ನಡುವೆ ವೈಯಕ್ತಿಕ ಕಾರಣದಿಂದ ರೈನಾ ಕೂಡ ಹೊರಗೆ ಬಂದಿರುವುದು ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.

    ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗಸ್ಟ್ 21ರಂದೇ ಯುಎಇಗೆ ತೆರಳಿತ್ತು. ಎಂದಿನಂತೆ ಎಲ್ಲ ಆಟಗಾರರಿಗೆ ಭಾರತದಲ್ಲೂ ಕೂಡ ಒಂದು ಬಾರಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅಂತೆಯೇ ಯುಎಇಗೆ ತೆರಳಿದ ತಂಡ ಅಲ್ಲಿ ಆರು ದಿನಗಳ ಕಾಲ ಕ್ವಾರಂಟೈನ್‍ಗೆ ಒಳಗಾಗಿತ್ತು. ಶುಕ್ರವಾರಕ್ಕೆ ಆ ಅವಧಿ ಮುಗಿಯಲಿದ್ದು, ಚೆನ್ನೈ ತಂಡ ಅಭ್ಯಾಸ ನಡೆಸಬೇಕಿತ್ತು. ಆದರೆ ಕೊರೊನಾ ಟೆಸ್ಟ್ ನಲ್ಲಿ ತಂಡದ ಸದಸ್ಯರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಹೀಗಾಗಿ ತಂಡ ಸೆಪ್ಟೆಂಬರ್ 1ರಿಂದ ಅಭ್ಯಾಸ ಆರಂಭಿಸಲಿದೆ.

  • ಸಿಎಸ್‍ಕೆ ದೀಪಕ್ ಚಹರ್‌ಗೆ ಕೊರೊನಾ – ಮುಂದಕ್ಕೆ ಹೋಗುತ್ತಾ ಐಪಿಎಲ್?

    ಸಿಎಸ್‍ಕೆ ದೀಪಕ್ ಚಹರ್‌ಗೆ ಕೊರೊನಾ – ಮುಂದಕ್ಕೆ ಹೋಗುತ್ತಾ ಐಪಿಎಲ್?

    – ಬಿಸಿಸಿಐ ಲೆಕ್ಕಾಚಾರವೇನು?

    ಅಬುಧಾಬಿ: ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಓರ್ವ ವೇಗದ ಬೌಲರ್ ಮತ್ತು ಕೆಲ ಸಹಾಯಕ ಸಿಬ್ಬಂದಿಗೆ ಕೊರೊನಾ ಪಾಸಿಟವ್ ಬಂದಿದೆ ಎಂಬ ಸುದ್ದಿ ಹೊರಬಿದ್ದಿತ್ತು.

    ಆದರೆ ಸಿಎಸ್‍ಕೆ ತಂಡದಲ್ಲಿ ಯಾವ ವೇಗಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ತಿಳಿದಿರಲಿಲ್ಲ. ಈಗ ಆ ಮಾಹಿತಿ ಹೊರಬಂದಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ವೇಗಿ ದೀಪಕ್ ಚಹರ್‌ಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬ ಮಾಹಿತಿ ಲಭಿಸಿದೆ. ದೀಪಕ್ ಚಹರ್ ಜೊತೆಗೆ ತಂಡದ 10 ಸಹಾಯಕ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ.

    ಐಪಿಎಲ್ ಆರಂಭವಾಗಲು ಕೇವಲ ಇನ್ನು 20 ದಿನ ಮಾತ್ರ ಬಾಕಿ ಉಳಿದಿದೆ. ಇದರ ಮಧ್ಯೆ ಮುಂದಿನ ವಾರದಲ್ಲಿ ಬಿಸಿಸಿಐ ಐಪಿಎಲ್ ಪಂದ್ಯಗಳ ಔಪಚಾರಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ಯೋಜನೆಯನ್ನು ಹೊಂದಿತ್ತು. ಆದರೆ ಈಗ ಪರಿಸ್ಥಿತಿ ಸ್ವಲ್ಪ ಬಿಗುಡಯಾಸಿದ್ದು, ಸದ್ಯಕ್ಕೆ ಪರಿಸ್ಥಿತಿ ಹಿಡಿತಕ್ಕೆ ಬರುವವರೆಗೂ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವುದು ಬೇಡ ಎಂದು ಬಿಸಿಸಿಐ ತೀರ್ಮಾನಿಸಿದೆ. ಹೀಗಾಗಿ ಐಪಿಎಲ್ ಮತ್ತೆ ಮುಂದಕ್ಕೆ ಹೋಗುತ್ತಾ ಎಂಬ ಅನುಮಾನ ಮೂಡಿದೆ.

    ಸದ್ಯ ಪರಿಸ್ಥಿತಿಯನ್ನು ನಿಭಾಯಿಸಲು ಸಾಕಷ್ಟು ಕ್ರಮಗಳನ್ನು ನಾವು ಕೈಗೊಂಡಿದ್ದೇವೆ. ಈಗ ಪಂದ್ಯಾವಳಿಗಳನ್ನು ತಕ್ಷಣದ ಆರಂಭ ಮಾಡಬೇಕು ಎಂಬ ಯಾವುದೇ ತುರ್ತು ಪರಿಸ್ಥಿತಿಯಿಲ್ಲ. ಈಗ ಆಗಿರುವ ಬೆಳವಣಿಗೆಯಿಂದಾಗಿ ಪಂದ್ಯಗಳ ಘೋಷಣೆ ವಿಳಂಬವಾಗಿದೆ. ಪರಿಸ್ಥಿತಿ ನಮ್ಮ ಹಿಡಿತಕ್ಕೆ ಬಂದ ನಂತರ ನಾವು ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದು ಬಿಸಿಸಿಐನ ಉನ್ನತ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

    ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗಸ್ಟ್ 21ರಂದೇ ಯುಎಇಗೆ ತೆರಳಿತ್ತು. ಎಂದಿನಂತೆ ಎಲ್ಲ ಆಟಗಾರರಿಗೆ ಭಾರತದಲ್ಲೂ ಕೂಡ ಒಂದು ಬಾರಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅಂತೆಯೇ ಯುಎಇಗೆ ತೆರಳಿದ ತಂಡ ಅಲ್ಲಿ ಆರು ದಿನಗಳ ಕಾಲ ಕ್ವಾರಂಟೈನ್‍ಗೆ ಒಳಗಾಗಿತ್ತು. ಶುಕ್ರವಾರಕ್ಕೆ ಆ ಅವಧಿ ಮುಗಿಯಲಿದ್ದು, ಚೆನ್ನೈ ತಂಡ ಅಭ್ಯಾಸ ನಡೆಸಬೇಕಿತ್ತು. ಆದರೆ ಕೊರೊನಾ ಟೆಸ್ಟ್ ನಲ್ಲಿ ತಂಡದ ಸದಸ್ಯರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಹೀಗಾಗಿ ತಂಡ ಸೆಪ್ಟೆಂಬರ್ 1ರಿಂದ ಅಭ್ಯಾಸ ಆರಂಭಿಸಲಿದೆ.

    ಕೊರೊನಾ ವೈರಸ್ ಕಾರಣದಿಂದಲೇ ಕಳೆದ ಮಾರ್ಚ್‍ನಲ್ಲೇ ನಡೆಯಬೇಕಿದ್ದ, ಐಪಿಎಲ್-2020 ಮುಂದಕ್ಕೆ ಹೋಗಿತ್ತು. ಭಾರತದಲ್ಲಿ ಕೊರೊನಾ ಹಿಡಿತಕ್ಕೆ ಸಿಗದ ಹಿನ್ನೆಲೆ ಸೋಂಕಿನ ಪ್ರಮಾಣ ಕಮ್ಮಿ ಇರುವ ಯುಎಇಯಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ತೀರ್ಮಾನ ಮಾಡಿದೆ. ಅಂತೆಯೇ ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನವೇ ಐಪಿಎಲ್ ಮೇಲೆ ಕೊರೊನಾ ಕರಿನೆರಳು ಬಿದ್ದಿದೆ.