Tag: IPL

  • ಆರ್‌ಸಿಬಿ ಇಂದ ಮೆಕಲಮ್, ವೋಕ್ಸ್ ಔಟ್ – ಅಬ್ಬರಿಸಲು ಎಬಿಡಿ ಸಿದ್ಧ!

    ಆರ್‌ಸಿಬಿ ಇಂದ ಮೆಕಲಮ್, ವೋಕ್ಸ್ ಔಟ್ – ಅಬ್ಬರಿಸಲು ಎಬಿಡಿ ಸಿದ್ಧ!

    ಮುಂಬೈ: 2019 ಐಪಿಎಲ್ ಆವೃತ್ತಿಗೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ 10 ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆರ್‌ಸಿಬಿ ತಂಡದಿಂದ ನ್ಯೂಜಿಲೆಂಡ್ ನ ಬ್ರೆಂಡನ್ ಮೆಕಲಮ್, ಕ್ರಿಸ್ ವೋಕ್ಸ್ ಹಾಗೂ ಸರ್ಫರಾಜ್ ಖಾನ್ ಸೇರಿದಂತೆ ಹಲವು ಆಟಗಾರನ್ನು ಕೈಬಿಟ್ಟಿದೆ.

    2019ರ ಟೂರ್ನಿಯ ಹರಾಜು ಪ್ರಕ್ರಿಯೆ ಕಾರಣ ಆರ್‌ಸಿಬಿ ಕೆಲ ಆಟಗಾರರಿಗೆ ಗೇಟ್ ಪಾಸ್ ನೀಡಿದ್ದು, ತಂಡದಲ್ಲಿ ನಾಯಕ ವಿರಾಟ್ ಕೊಹ್ಲಿ, ಎ ಬಿ ಡಿವಿಯರ್ಸ್, ಪಾರ್ಥಿವ್ ಪಟೇಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಪವನ್ ನೇಗಿ, ಮೊಯಿನ್ ಅಲಿ, ಯಜುವೇಂದ್ರ ಚಹಲ್, ಮೊಹಮ್ಮದ್ ಸಿರಾಜ್, ಟಿಮ್‌ ಸೌಥಿ, ಉಮೇಶ್ ಯಾದವ್, ನವದೀಪ್ ಸೈನಿ ಉಳಿದುಕೊಂಡಿದ್ದಾರೆ.

    ಇತ್ತ ಆರ್‌ಸಿಬಿ ದಕ್ಷಿಣ ಅಫ್ರಿಕಾ ಸ್ಫೋಟಕ ಆಟಗಾರ ಎಬಿ ಡಿವಿಲಿಯರ್ಸ್ ರನ್ನು ಉಳಿಸಿಕೊಂಡಿದ್ದು, ಈ ಮೂಲಕ ದಿಢೀರ್ ನಿವೃತ್ತಿ ಘೋಷಿಸಿ ಅಭಿಮಾನಿಗಳಿಕೆ ಶಾಕ್ ನೀಡಿದ್ದ ಎಬಿಡಿ ಆಟವನ್ನು ನೋಡಲು ಅಭಿಮಾನಿಗಳಿಗೆ ಅವಕಾಶ ಲಭಿಸಿದೆ. ಈ ಬಾರಿ ಎಬಿಡಿ ಬ್ಯಾಟಿಂಗ್ ಅರ್ಭಟ ಶುರುವಾದರೆ ಕಪ್ ಗೆಲ್ಲುವುದು ಖಚಿತವಾಗಿದ್ದು, ನಿವೃತ್ತಿಯ ಬಳಿಕ ಕ್ರಿಕೆಟ್ ಗೆ ಮತ್ತೆ ಕಮ್ ಬ್ಯಾಕ್ ಮಾಡಿದ್ದ ಎಬಿಡಿ ಮಜಾನ್ಸಿ ಸೂಪರ್ ಲೀಗ್ ಅಭ್ಯಾಸ ಪಂದ್ಯದಲ್ಲಿ 96 ರನ್ ಸಿಡಿಸಿ ಮಿಂಚಿದ್ದರು. ಈ ಮೂಲಕ 6 ತಿಂಗಳ ಬಳಿಕ ಮತ್ತೆ ಸ್ಫೋಟಕ ಪ್ರದರ್ಶನ ನೀಡಿದ್ದರು.

    2016 ರಲ್ಲಿ ಆವೃತ್ತಿಯಲ್ಲಿ ಫೈನಲ್ ಪ್ರವೇಶ ಮಾಡಿದ್ದ ಆರ್‍ಸಿಬಿ ಬಳಿಕ ನಡೆದ ಟೂರ್ನಿಗಳಲ್ಲಿ ಪ್ಲೇಆಫ್ ಹಂತ ಪ್ರವೇಶ ಮಾಡಲು ವಿಫಲವಾಗಿತ್ತು. ಇದರಿಂದ ಈ ಬಾರಿ ಬಲಿಷ್ಠ ತಂಡದ ರೂಪಿಸಲು ತಂಡವನ್ನು ಆಯ್ಕೆ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಐಪಿಎಲ್‍ನಲ್ಲಿ ನಾನು ಕೈಫ್ ಅಹಂಕಾರ ಇಳಿಸಿದ್ದೆ: ಶೇನ್ ವಾರ್ನ್

    ಐಪಿಎಲ್‍ನಲ್ಲಿ ನಾನು ಕೈಫ್ ಅಹಂಕಾರ ಇಳಿಸಿದ್ದೆ: ಶೇನ್ ವಾರ್ನ್

    ಮುಂಬೈ: ಚೊಚ್ಚಲ ಐಪಿಎಲ್ ಕ್ರಿಕೆಟ್ ನಡೆಯುವ ಸಂದರ್ಭದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಮುನ್ನಡೆಸುತ್ತಿದ್ದಾಗ ನಾನು ಮೊಹಮ್ಮದ್ ಕೈಫ್ ಅವರ ಅಹಂಕಾರವನ್ನು ಇಳಿಸಿದ್ದೆ ಎಂದು ಆಸ್ಟ್ರೇಲಿಯಾ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೇಳಿದ್ದಾರೆ.

    ಶೇನ್ ವಾರ್ನ್ ತಮ್ಮ ಕ್ರಿಕೆಟ್ ಜೀವನದ ಬಗ್ಗೆ `ನೋ ಸ್ಪಿನ್’ ಹೆಸರಿನಲ್ಲಿ ಆತ್ಮ ಚರಿತ್ರೆ ಬರೆದಿದ್ದು ಇದರಲ್ಲಿ ಐಪಿಎಲ್ ಪಂದ್ಯಗಳ ವೇಳೆ ನಡೆದ ಘಟನೆಯನ್ನು ಮೆಲುಕು ಹಾಕಿದ್ದಾರೆ.

    ವಾರ್ನ್ ಪುಸ್ತಕದಲ್ಲಿ ಏನಿದೆ?
    ನನ್ನ ತಂಡದಲ್ಲಿ ಕೈಫ್ ಆಡುತ್ತಿದ್ದರು. ಒಂದು ದಿನ ರಾಜಸ್ಥಾನ ತಂಡ ಹೋಟೆಲ್‍ಗೆ ಹೋದ ಸಂದರ್ಭದಲ್ಲಿ ಆಟಗಾರರೆಲ್ಲರೂ ತಮ್ಮ ರೂಮ್ ಕೀ ತೆಗೆದುಕೊಂಡು ಅವರ ಕೊಠಡಿಗೆ ತೆರಳಿದರು. ಈ ಸಮಯದಲ್ಲಿ ಕೈಫ್ ರಿಸೆಪ್ಷನಿಸ್ಟ್ ಬಳಿ ತೆರಳಿ “ನಾನು ಕೈಫ್” ಎಂದು ಹೇಳಿದರು.

    ಈ ಸಮಯದಲ್ಲಿ ಹೋಟೆಲ್ ಸಿಬ್ಬಂದಿ,”ನಮ್ಮಿಂದ ಏನು ಸಹಾಯ ಬೇಕು” ಎಂದು ಕೇಳಿದ್ದರು. ಇದಕ್ಕೆ ಕೈಫ್,”ನಾನು ಕೈಫ್” ಎಂದು ಮತ್ತೊಮ್ಮೆ ಹೇಳಿದರು. ಕೈಫ್ ಸಿಬ್ಬಂದಿ ಜೊತೆ ಮಾತನಾಡುವುದನ್ನು ಕಂಡು ನಾನು ಅಲ್ಲಿಗೆ ತೆರಳಿ,”ಏನಾದ್ರೂ ಸಮಸ್ಯೆ ಇದ್ಯಾ?” ಎಂದು ಪ್ರಶ್ನಿಸಿದೆ. ಈ ಸಮಯದಲ್ಲೂ ಕೈಫ್,”ನಾನು ಕೈಫ್” ಎಂದು ಉತ್ತರಿಸಿದರು.

    “ನಾನು ಟೀಂ ಇಂಡಿಯಾದ ಹಿರಿಯ ಆಟಗಾರ, ಹೀಗಾಗಿ ನನಗೆ ದೊಡ್ಡ ಕೊಠಡಿ ನೀಡಬೇಕು” ಎನ್ನುವ ಅರ್ಥದಲ್ಲಿ ಕೈಫ್ ಹೇಳುತ್ತಿದ್ದಾರೆ ಎನ್ನುವುದು ನನಗೆ ಗೊತ್ತಾಯಿತು. ಇದಕ್ಕೆ ನಾನು,”ನನ್ನನ್ನು ಬಿಟ್ಟು ಉಳಿದ ಎಲ್ಲರಿಗೂ ಸಣ್ಣ ರೂಮ್ ನೀಡಲಾಗಿದೆ. ನನ್ನ ಕೊಠಡಿಯಲ್ಲಿ ಆಗಾಗ ಸಭೆ ನಡೆಯಲಿರುವ ಕಾರಣ ದೊಡ್ಡ ರೂಮ್ ನೀಡಲಾಗಿದೆ” ಎಂದಾಗ ಕೈಫ್ ಅಲ್ಲಿಂದ ತೆರಳಿದರು ಎಂದು ವಾರ್ನ್ ಬರೆದುಕೊಂಡಿದ್ದಾರೆ.

    ತಮ್ಮ ಪುಸ್ತಕದಲ್ಲಿ ವಾರ್ನ್,”ಕೆಲ ಭಾರತೀಯ ಹಿರಿಯ ಆಟಗಾರರು ಕಿರಿಯ ಆಟಗಾರಲ್ಲಿ ಬ್ಯಾಗ್ ತರಲು ಹೇಳುತ್ತಾರೆ. ನನಗೆ ಇದು ಸರಿ ಕಾಣುವುದಿಲ್ಲ. ಮೈದಾನದಲ್ಲಿ ಎಲ್ಲರೂ ಸಮಾನರು. ಹಿರಿಯರು, ಕಿರಿಯರು ಎಂಬುದಿಲ್ಲ. ಎಲ್ಲರಿಗೂ ಒಂದೇ ನಿಯಮ ಅನ್ವಯವಾಗಬೇಕು” ಎಂದು ಬರೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಬೆಂಗ್ಳೂರಿನಿಂದ ಐಪಿಎಲ್ ಹರಾಜು ಪ್ರಕ್ರಿಯೆ ಶಿಫ್ಟ್

    ಬೆಂಗ್ಳೂರಿನಿಂದ ಐಪಿಎಲ್ ಹರಾಜು ಪ್ರಕ್ರಿಯೆ ಶಿಫ್ಟ್

    ಮುಂಬೈ: ಐಪಿಎಲ್ 12ನೇ ಆವೃತ್ತಿಗೆ ಬಿಸಿಸಿಐ ಸಿದ್ಧತೆ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಟೂರ್ನಿಯ ದಿನಾಂಕ ನಿಗದಿ ಮುನ್ನವೇ ಆಟಗಾರರ ಹರಾಜು ದಿನಾಂಕವನ್ನು ಬಿಸಿಸಿಐ ಘೋಷಣೆ ಮಾಡಿದೆ.

    ಡಿ.17 ಮತ್ತು 18 ರಂದು ಐಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದ್ದು, ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲಿನಲ್ಲಿ ನಡೆಯುತ್ತಿದ್ದ ಹರಾಜು ಪ್ರಕ್ರಿಯೆಯನ್ನು ಜೈಪುರಕ್ಕೆ ಶಿಫ್ಟ್ ಮಾಡಲಾಗಿದೆ. 2019ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ಬಿಸಿಸಿಐ ಐಪಿಎಲ್ ಆವೃತ್ತಿಯನ್ನು ಯುಎಇ ಅಥವಾ ದಕ್ಷಿಣ ಆಫ್ರಿಕಾದಲ್ಲಿ ನಡೆಸುವ ಚಿಂತನೆ ಮಾಡಲಾಗಿದೆ. ಈ ಕಾರಣದಿಂದಲೇ ಮೊದಲು ಹರಾಜು ದಿನಾಂಕವನ್ನು ಪ್ರಕಟ ಮಾಡಿದೆ ಎನ್ನಲಾಗಿದೆ.

    ಬಿಸಿಸಿಐ ಈ ತೀರ್ಮಾನಕ್ಕೆ ಕೆಲ ಫ್ರಾಂಚೈಸಿಗಳು ಅಸಮಾಧಾನ ವ್ಯಕ್ತಪಡಿಸಿದೆ ಎನ್ನಲಾಗಿದ್ದು, ಐಪಿಎಲ್ ಆವೃತ್ತಿ ದಿನಾಂಕ ಪ್ರಕಟಿಸಿದ ಬಳಿಕ ಆಟಗಾರರ ಹರಾಜು ಪ್ರಕ್ರಿಯೆ ನಡೆದರೆ ಉತ್ತಮ. ಇದರಿಂದ ಆಟಗಾರರ ಆಯ್ಕೆಗೆ ಅನುಕೂಲ ಆಗಲಿದೆ ಎಂದು ಕೆಲ ಫ್ರಾಂಚೈಸಿಗಳು ತಿಳಿಸಿದ್ದಾಗಿ ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

    ಈ ಹಿಂದೆ 2014ರ ಲೋಕಸಭಾ ಚುನಾವಣೆಯ ವೇಳೆಯೂ ಭಾರತದಿಂದ ದಕ್ಷಿಣ ಆಫ್ರಿಕಾಗೆ ಐಪಿಎಲ್ ಶಿಫ್ಟ್ ಮಾಡಲಾಗಿತ್ತು. ಚುನಾವಣೆಯ ವೇಳೆ ಕ್ರೀಡಾಂಗಣದ ಬಳಿ ಹೆಚ್ಚಿನ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರ ಬಿಸಿಸಿಐ ಸಮಿತಿಗೆ ತಿಳಿಸಿತ್ತು. ಕಳೆದ ಬಾರಿ ಚಾಂಪಿಯನ್ ಆಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತೆ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿದ್ದು, 2016 ಮತ್ತು 2017 ಆವೃತ್ತಿಗಳ ವೇಳೆ ವಿಧಿಸಲಾಗಿದ್ದ ನಿಷೇಧದ ಬಳಿಕವೂ ಚೆನ್ನೈ ಭರ್ಜರಿ ಕಮ್ ಬ್ಯಾಕ್ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಟೀಂ ಇಂಡಿಯಾ ಅಂಡರ್ 19 ತಂಡಕ್ಕೆ ನನ್ನ ಸಮಯ ಮೀಸಲು ಎಂದಿದ್ದ ದ್ರಾವಿಡ್

    ಟೀಂ ಇಂಡಿಯಾ ಅಂಡರ್ 19 ತಂಡಕ್ಕೆ ನನ್ನ ಸಮಯ ಮೀಸಲು ಎಂದಿದ್ದ ದ್ರಾವಿಡ್

    ಮುಂಬೈ: ಐಪಿಎಲ್ ಹಾಗೂ ಅಂಡರ್ 19 ತಂಡ ಎರಡು ಆಯ್ಕೆಗಳನ್ನು ರಾಹುಲ್ ದ್ರಾವಿಡ್ ಅವರ ಮುಂದಿಟ್ಟಾಗ ಅವರು ಟೀಂ ಇಂಡಿಯಾವನ್ನು ಆಯ್ಕೆ ಮಾಡಿಕೊಂಡಿದ್ದರು ಎಂದು ಬಿಸಿಸಿಐ ಆಡಳಿತ ಮಂಡಳಿ ಮುಖ್ಯಸ್ಥ ವಿನೋದ್ ರಾಯ್ ಹೇಳಿದ್ದಾರೆ.

    ಖಾಸಗಿ ವಾಹಿನಿಯ ಸಂರ್ದನದ ವೇಳೆ ಈ ಕುರಿತು ಮಾತನಾಡಿರುವ ಅವರು, ಕಳೆದ ವರ್ಷದ ಐಪಿಎಲ್ ವೇಳೆ ರಾಹುಲ್ ದ್ರಾವಿಡ್ ಅವರಿಗೆ ಬಿಸಿಸಿಐ ಮಾಜಿ ಆಡಳಿತ ಮಂಡಳಿ (ಸಿಒಎ) ಸದಸ್ಯ ರಾಮಚಂದ್ರ ಗುಹಾ ಅವರು ಐಪಿಎಲ್, ಟೀಂ ಇಂಡಿಯಾ `ಎ’ ಹಾಗೂ ಇದೇ ವೇಳೆ ಅಂಡರ್ 19 ತಂಡದ ಆಯ್ಕೆಗಳನ್ನು ಮುಂದಿಟ್ಟಿದ್ದರು. ಈ ವೇಳೆ ರಾಹುಲ್ ದ್ರಾವಿಡ್ ತಮ್ಮ ಸಮಯವನ್ನು ಟೀಂ ಇಂಡಿಯಾಗೆ ನೀಡುವುದಾಗಿ ಹೇಳಿ ಒಂದು ವರ್ಷದ ಒಪ್ಪಂದಕ್ಕೆ ಸಹಿ ಮಾಡಿದ್ದಾಗಿ ತಿಳಿಸಿದ್ದಾರೆ.

    2016 ಮತ್ತು 2017 ರ ಐಪಿಎಲ್‍ನಲ್ಲಿ ರಾಹುಲ್ ದ್ರಾವಿಡ್ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸಿದ್ದರು. ಬಳಿಕ 2018 ರ ಆವೃತ್ತಿಗೆ ಆಸೀಸ್ ಮಾಜಿ ಆಟಗಾರ ರಿಕ್ಕಿ ಪಾಟಿಂಗ್ ಮೆಂಟರ್ ಆಗಿ ಆಯ್ಕೆ ಮಾಡಿಕೊಳ್ಳಲಾಗಿತ್ತು. ಈ ವೇಳೆ ಕೇವಲ ರಾಹುಲ್ ದ್ರಾವಿಡ್ ಮಾತ್ರವಲ್ಲದೇ ಇತರೇ ಕೋಚ್‍ಗಳಿಗೂ ಇದೇ ಆಯ್ಕೆಗಳನ್ನು ನೀಡಲಾಗಿತ್ತು. ಉದಾಹರಣೆಗೆ ಭರತ ಅರುಣ್, ಶಂಕರ್ ಬಸು, ಪ್ಯಾಟ್ರಿಕ್ ಫಾರ್ಹಟ್ ಸೇರಿದಂತೆ ಹಲವರು ಬಿಸಿಸಿಐ ಕೋಚ್ ಆಗಿ ಮುಂದುವರಿಯಲು ಐಪಿಎಲ್ ನಲ್ಲಿ ಸ್ಥಾನ ತೊರೆದಿದ್ದರು.

    ಪ್ರಮುಖವಾಗಿ ಬಿಸಿಸಿಐ ಜೂನಿಯರ್ ತಂಡದ ಆಯ್ಕೆ ಸಮಿತಿ ಸದಸ್ಯರಾಗಿದ್ದ ವೆಂಕಟೇಶ್ ಪ್ರಸಾದ್ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬೌಲಿಂಗ್ ಕೋಚ್ ಆಗಲು ತಮ್ಮ ಸ್ಥಾನ ತೊರೆದಿದ್ದರು. ಅಲ್ಲದೇ ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಅವರು ಸಹ ಐಪಿಎಲ್ ತೊರೆದು ಬಿಸಿಸಿಐ ನಿಯಮಗಳನ್ನು ಪಾಲನೆ ಮಾಡಿದ್ದರು.

    ನಿಯಮ ಏನು ಹೇಳುತ್ತೆ: ಬಿಸಿಸಿಐ ಸಂಸ್ಥೆಯಲ್ಲಿ ಲೋಧಾ ಸಮಿತಿ ನೀಡಿದ್ದ ಸಲಹೆಗಳನ್ನು ಜಾರಿಗೆ ತರಲು ಸುಪ್ರೀಂ ಕೋರ್ಟ್ ಬಿಸಿಸಿಐಗೆ ಆಡಳಿತ ಮಂಡಳಿಯನ್ನು ನೇಮಕ ಮಾಡಿತ್ತು. ಲೋಧಾ ಸಮಿತಿ ಶಿಫಾರಸ್ಸಿನ ಅನ್ವಯ ಬಿಸಿಸಿಐ ನಲ್ಲಿ ಕಾರ್ಯನಿರ್ವಹಿಸುವವರು ಏಕಕಾಲದಲ್ಲಿ ಎರಡು ಹುದ್ದೆ ನಿರ್ವಹಿಸುವಂತಿಲ್ಲ. ಇದರಂತೆ ಅಂದು ಟೀಂ ಇಂಡಿಯಾ ಮುಖ್ಯ ಕೋಚ್ ಆಗಿದ್ದ ರವಿಶಾಸ್ತ್ರಿ ಹಾಗೂ ಅಂಡರ್ 19 ತಂಡದ ಕೋಚ್ ಆಗಿದ್ದ ದ್ರಾವಿಡ್ ಐಪಿಎಲ್ ಮೆಂಟರ್ ಹುದ್ದೆಗಳನ್ನು ತೊರೆದಿದ್ದರು.

  • ದೆಹಲಿ ಮಾಲಿನ್ಯದಿಂದ ಡ್ರಗ್ ಟೆಸ್ಟ್ ನಲ್ಲಿ ಪಾಸಿಟಿವ್ – ಬ್ರೆಂಡನ್ ಮೆಕ್ಲಮ್

    ದೆಹಲಿ ಮಾಲಿನ್ಯದಿಂದ ಡ್ರಗ್ ಟೆಸ್ಟ್ ನಲ್ಲಿ ಪಾಸಿಟಿವ್ – ಬ್ರೆಂಡನ್ ಮೆಕ್ಲಮ್

    ನವದೆಹಲಿ: 2016 ರ ಐಪಿಎಲ್ ಟೂರ್ನಿಯ ವೇಳೆ ನಡೆದ ಡ್ರಗ್ ಪರೀಕ್ಷೆಯಲ್ಲಿ ಪಾಸಿಟಿವ್ ಬರಲು ದೆಹಲಿ ಮಾಲಿನ್ಯವೇ ಕಾರಣ ಎಂದು ನ್ಯೂಜಿಲೆಂಡ್ ತಂಡದ ಮಾಜಿ ಆಟಗಾರ ಬ್ರೆಂಡನ್ ಮೆಕ್ಲಮ್ ಆರೋಪಿಸಿದ್ದಾರೆ.

    ಖಾಸಗಿ ಮಾಧ್ಯಮವೊಂದರ ಸಂದರ್ಶನದ ವೇಳೆ ಮೆಕ್ಲಮ್, ಟೂರ್ನಿಯ ವೇಳೆ ತಾನು ಅಸ್ತಮಾ ಹಾಗೂ ಗಂಟಲು ಸಮಸ್ಯೆಯಿಂದ ಬಳಲಿದ್ದೆ. ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಳ್ಳಲು ಔಷಧಿಯ ಪ್ರಮಾಣವನ್ನು ಹೆಚ್ಚಿಸಲಾಯಿತು. ಅದ್ದರಿಂದ ಡೋಪಿಂಗ್ ವರದಿಯಲ್ಲಿ ಪಾಸಿಟಿವ್ ಬಂದಿತ್ತು ಎಂದು ತಿಳಿಸಿದ್ದಾರೆ.  

    ಬಿಸಿಸಿಐ ಈ ವೇಳೆ ತಮ್ಮನ್ನು ಸಂಪರ್ಕಿಸಿ ವಿವರಣೆ ಕೇಳಿದ್ದು, ತಮ್ಮ ಆರೋಗ್ಯದ ಕುರಿತು ವಿವರಣ ಸ್ಪಷ್ಟನೆ ನೀಡಲು ತಾವು ಸ್ವೀಡನ್ ನ ಪರಿಣಿತ ವೈದ್ಯರ ಸಹಾಯ ಪಡೆದು ವರದಿ ನೀಡಿದ್ದಾಗಿ ಹೇಳಿದ್ದಾರೆ.

    ಡ್ರಗ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದನ್ನು ತಾನು ಫೇಲ್ ಎಂದು ಪರಿಗಣಿಸಲಿಲ್ಲ. ಆದರೆ ಈ ಕುರಿತು ಕೆಲ ಸ್ಪಷ್ಟೀಕರಣ ನೀಡಬೇಕಾಯಿತು. ಈ ಕುರಿತು ಎಲ್ಲಾ ರೀತಿಯ ರೂಮರ್ ಗಳನ್ನು ಸೂಕ್ತ ಸಾಕ್ಷ್ಯ ನೀಡಲಾಗದ ಕಾರಣ ಅಲ್ಲಗೆಳೆಯಲಾಯಿತು. ಇದು ಕೇವಲ ಒಂದು ಪ್ರಕ್ರಿಯೇ ಅಷ್ಟೇ. ಆದರೆ ಬಿಸಿಸಿಐನಂತಹ ಸಂಸ್ಥೆಯೊಂದಿಗೆ ಕಾರ್ಯನಿರ್ವಹಿಸಿದ್ದು ಉತ್ತಮ ಅನುಭವ ಎಂದು ಹೇಳಿದ್ದಾರೆ.

    2016 ರ ಟೂರ್ನಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ವಿರುದ್ಧ 36 ಬಾಲ್ ಗಳಲ್ಲಿ 60 ರನ್ ಸಿಡಿಸಿದ್ದರು. ಈ ಪಂದ್ಯದಲ್ಲಿ ಗುಜರಾತ್ ಲಯನ್ಸ್ 1 ರನ್ ನಿಂದ ಜಯ ಗಳಿಸಿತ್ತು. ಪಂದ್ಯದ ಬಳಿಕ ಮೆಕ್ಲಮ್ ಅವರಿಗೆ ಡ್ರಗ್ ಪರೀಕ್ಷೆ ನಡೆಸಲಾಗಿತ್ತು. 2016ರ ಟೂರ್ನಿಯಲ್ಲಿ ಗುಜರಾತ್ ಲಯನ್ಸ್ ಪರ ಮೆಕ್ಲಮ್ ಆಡಿದ್ದರು.

  • ಐಪಿಎಲ್ ಟೂರ್ನಿಯಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದ ಆರ್‌ಸಿಬಿ ಕೋಚ್ – ಯಾರಿಗೆ ಎಷ್ಟು ಸಂಭಾವನೆ? ಇಲ್ಲಿದೆ ಮಾಹಿತಿ

    ಐಪಿಎಲ್ ಟೂರ್ನಿಯಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದ ಆರ್‌ಸಿಬಿ ಕೋಚ್ – ಯಾರಿಗೆ ಎಷ್ಟು ಸಂಭಾವನೆ? ಇಲ್ಲಿದೆ ಮಾಹಿತಿ

    ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎಂದೇ ಹೆಸರು ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನಲ್ಲಿ ಕಪ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭರ್ಜರಿ ಬಹುಮಾನ ಪಡೆದಿದ್ದು ಎಲ್ಲರಿಗೂ ತಿಳಿದ ವಿಚಾರ. ಆದರೆ ಟೂರ್ನಿಯ ತಂಡದ ಕೋಚ್ ಗಳಿಗೆ ಎಷ್ಟು ಸಂಭಾವನೆ ನೀಡಲಾಗಿದೆ ಎಂಬುವುದು ಮಾತ್ರ ಅಚ್ಚರಿಯಾಗಿ ಉಳಿದಿದ್ದು, ಸದ್ಯ ಈ ಕುರಿತು ಮಾಹಿತಿ ಲಭಿಸಿದೆ.

    ಅಂದಹಾಗೇ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿದ್ದ ವಿರೇಂದ್ರ ಸೆಹ್ವಾಗ್ ಅತೀ ಹೆಚ್ಚು ಸಂಭಾವನೆ ಪಡೆದವರು ಎನ್ನಲಾಗಿತ್ತು, ಆದರೆ ಖಾಸಗಿ ಮಾಧ್ಯಮವೊಂದು ಮಾಡಿರುವ ವರದಿಯ ಅಂಕಿ ಅಂಶಗಳ ಪ್ರಕಾರ ಆರ್ ಸಿಬಿ ತಂಡದ ಮುಖ್ಯ ಆಗಿ ಕಾರ್ಯನಿರ್ವಹಿಸಿದ್ದ ನ್ಯೂಜಿಲೆಂಡ್ ಮಾಜಿ ಆಟಗಾರ ಡೇನಿಯಲ್ ವೆಟ್ಟೋರಿ ಹೆಚ್ಚು ಸಂಭಾವನೆ ಪಡೆದ ಕೋಚ್ ಆಗಿದ್ದಾರೆ. ಆದರೆ ವೆಟ್ಟೋರಿ ಪಡೆದ ಮೊತ್ತದ ಖಚಿತ ಮಾಹಿತಿ ನೀಡಿಲ್ಲ. ಉಳಿದಂತೆ ಆರ್ ಸಿಬಿ ಬೌಲಿಂಗ್ ಕೋಚ್ ನೆಹ್ರಾ ಅವರು 4 ಕೋಟಿ ರೂ. ಪಡೆದು ಎರಡನೇ ಸ್ಥಾನ ಪಡೆದಿದ್ದಾರೆ.

    ಉಳಿದಂತೆ ಅಧಿಕ ಸಂಭಾವನೆ ಪಡೆದ ಕೋಚ್‍ಗಳ ಪಟ್ಟಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ಮುಖ್ಯ ಕೋಚ್ ರಿಕ್ಕಿ ಪಾಂಟಿಂಗ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಿಫನ್ ಫ್ಲೆಮಿಂಗ್ ಕ್ರಮವಾಗಿ 3.7 ಕೋಟಿ ರೂ. ಹಾಗೂ 3.2 ಕೋಟಿ ರೂ. ಪಡೆದಿದ್ದಾರೆ. ಇನ್ನು ಪಂಜಾಬ್ ತಂಡದ ಕೋಚ್ ವಿರೇಂದ್ರ ಸೆಹ್ವಾಗ್ 3 ಕೋಟಿ ರೂ. ರಾಜಸ್ಥಾನ ರಾಯಲ್ಸ್ ತಂಡದ ಕೋಚ್ ಶೇನ್ ವಾರ್ನ್ 2.7 ಕೋಟಿ ರೂ. ಕೋಲ್ಕತ್ತಾ ತಂಡದ ಜ್ಯಾಕ್ ಕಾಲಿಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಕೋಚ್ ಮಹೇಲಾ ಜಯವರ್ಧನೆ 2.25 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ.

    ಸನ್ ರೈಸರ್ಸ್ ಹೈದರಾಬಾದ್ ತಂಡದ ವಿವಿಎಸ್ ಲಕ್ಷ್ಮಣ್ ಮತ್ತು ಟಾಮ್ ಮೂಡಿ 2 ಕೋಟಿ ರೂ. ಹಾಗೂ ಆರ್ ಸಿಬಿ ತಂಡದ ಬ್ಯಾಟಿಂಗ್ ಕೋಚ್ ಗ್ಯಾರಿ ಕಸ್ಟರ್ನ್ ಮುಂಬೈ ಬೌಲಿಂಗ್ ಕೋಚ್ ಲಸಿತ್ ಮಾಲಿಂಗ 1.5 ಕೋಟಿ ರೂ. ಪಡೆದಿದ್ದಾರೆ.

    ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಕಪ್ ಗೆದ್ದ ಚೆನ್ನೈ ತಂಡ 20 ಕೋಟಿ ರೂ. ಹಾಗೂ ರನ್ನರ್ ಆಪ್ ಆಗಿದ್ದ ಹೈದರಾಬಾದ್ ತಂಡ 12.5 ಕೋಟಿ ರೂ. ಬಹುಮಾನ ಪಡೆದಿತ್ತು. ಉಳಿದಂತೆ ಟೂರ್ನಿಯಲ್ಲಿ ಕ್ರಮವಾಗಿ 3 ಮತ್ತು 4ನೇ ಸ್ಥಾನ ಪಡೆದಿದ್ದ ಕೋಲ್ಕತ್ತಾ ಹಾಗೂ ರಾಜಸ್ಥಾನ ತಂಡಗಳು 8.75 ಕೋಟಿ ರೂ. ಪಡೆದುಕೊಂಡಿತ್ತು.

     

  • ಐಪಿಎಲ್ ಬೆಟ್ಟಿಂಗ್ ಮಾಡಿದ್ದೇನೆ: ತಪ್ಪೊಪ್ಪಿಕೊಂಡ ಅರ್ಬಾಜ್ ಖಾನ್

    ಐಪಿಎಲ್ ಬೆಟ್ಟಿಂಗ್ ಮಾಡಿದ್ದೇನೆ: ತಪ್ಪೊಪ್ಪಿಕೊಂಡ ಅರ್ಬಾಜ್ ಖಾನ್

    ಮುಂಬೈ: ಬಾಲಿವುಡ್ ನಟ ಅರ್ಬಾಜ್ ಖಾನ್ ಐಪಿಎಲ್ ಪಂದ್ಯದ ಬೆಟ್ಟಿಂಗ್ ನಲ್ಲಿ ಪಾಲ್ಗೊಂಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

    ತನಿಖೆ ನಡೆಸುತ್ತಿರುವ ಥಾಣೆ ಪೊಲೀಸರು ಬೆಟ್ಟಿಂಗ್ ನ ಕಿಂಗ್ ಪಿನ್ ಜಲಾನ್ ನ ವಿಚಾರಣೆ ವೇಳೆ ಅರ್ಬಾಜ್ ಖಾನ್ ಹೆಸರು ಕೇಳಿಬಂದಿತ್ತು. ನಿನ್ನೆಯಷ್ಟೆ ಪೊಲೀಸರು ಅರ್ಬಾಜ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದರು.

    ಜಲಾನ್ ಮತ್ತು ಅರ್ಬಾಜ್ ಅವರ ನಡುವೆ ಬಹಳಷ್ಟು ವಹಿವಾಟು ನಡೆದಿದ್ದು ಇದನ್ನೇ ಕಾರಣವಾಗಿ ಇಟ್ಟುಕೊಂಡು ಜಲಾನ್ ಅರ್ಬಾಜ್ ಅವರಿಗೆ ಹಣ ಕೊಡುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದನು. ಇದೇ ವಿಚಾರವಾಗಿ ಅರ್ಬಾಜ್ ಹೇಳಿಕೆಯನ್ನು ಪಡೆದ ಮೇಲೆ ತನಿಖೆ ನಡೆಸಲಾಗುವುದು ಎಂದು ತನಿಖಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ.ಇದನ್ನೂ ಓದಿ:ಐಪಿಎಲ್ ಬೆಟ್ಟಿಂಗ್: ಬಾಲಿವುಡ್ ಸ್ಟಾರ್ ಅರ್ಬಾಜ್ ಖಾನ್ ಗೆ ಸಮನ್ಸ್

    ಪ್ರಾಥಮಿಕ ತನಿಖೆ ಪ್ರಕಾರ ಜಲಾನ್ 1 ಸಾವಿರ ಕೋಟಿ ರೂ ಬೆಟ್ಟಿಂಗ್ ಹಗರಣ ನಡೆಸಿದ್ದಾನೆ. ಇವನ ಜೊತೆ ಇರುವ ಜೂಜುಕೋರರು 3,500 ಕೋಟಿ ರೂ ನಷ್ಟು ಹಗರಣ ನಡೆಸಿರಬಹುದು ಎಂದು ತಿಳಿಸಿದ್ದಾರೆ.

  • ಐಪಿಎಲ್ ಬೆಟ್ಟಿಂಗ್: ಬಾಲಿವುಡ್ ಸ್ಟಾರ್ ಅರ್ಬಾಜ್ ಖಾನ್ ಗೆ ಸಮನ್ಸ್

    ಐಪಿಎಲ್ ಬೆಟ್ಟಿಂಗ್: ಬಾಲಿವುಡ್ ಸ್ಟಾರ್ ಅರ್ಬಾಜ್ ಖಾನ್ ಗೆ ಸಮನ್ಸ್

    ಮುಂಬೈ: ಹಿಂದಿ ಚಿತ್ರ ನಟ ಹಾಗೂ ನಿರ್ದೇಶಕ ಅರ್ಬಾಜ್ ಖಾನ್ ಗೆ ಐಪಿಎಲ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಣೆ ಪೊಲೀಸರು ಸಮನ್ಸ್ ನೀಡಿದ್ದಾರೆ.

    ಹೈ ಪ್ರೊಫೈಲ್ ಬುಕ್ಕಿ 42 ವರ್ಷದ ಸೂನ್ ಜಲಾನ್ ದೇಶ ವಿದೇಶಗಳಲ್ಲಿ ಬೆಟ್ಟಿಂಗ್ ಮಾಡಿದ್ದು ಇತ್ತೀಚೆಗಷ್ಟೆ ಪೊಲೀಸರು ಬಂಧಿಸಿದ್ದರು. ಈತನ ವಿಚಾರಣೆ ವೇಳೆ ಅರ್ಬಾಜ್ ಖಾನ್ ಹೆಸರು ಕೇಳಿ ಬಂದಿತ್ತು. ಹಾಗಾಗಿ ಥಾಣೆ ಅಪರಾಧ ವಿಭಾಗದ ಪೊಲೀಸರು ಹೇಳಿಕೆ ದಾಖಲಿಸಲು ಸಮನ್ಸ್ ಜಾರಿ ಮಾಡಿದ್ದಾರೆ.

    ಪಂದ್ಯ ಒಂದರ ಬೆಟ್ಟಿಂಗ್ ನಲ್ಲಿ ಜಲಾನ್ ಅರ್ಬಾಜ್ ಜೊತೆ ಸೋತಿದ್ದನು. ಇದೇ ಕಾರಣಕ್ಕೆ ಅರ್ಬಾಜ್ ನನ್ನು ಹೆದರಿಸಿದ್ದನು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ.

    ಜಲಾನ್ ಬಂಧನದ ನಂತರ ಅವನ ಮನೆಯಲ್ಲಿ ಒಂದು ಡೈರಿ ಸಿಕ್ಕಿತು. ಡೈರಿಯಲ್ಲಿ 100 ಕ್ಕೂ ಹೆಚ್ಚು ಬುಕ್ಕಿಗಳ ಫೋನ್ ನಂಬರ್ ಪತ್ತೆಯಾಗಿದೆ. ಇದರಲ್ಲಿ ಬಾಲಿವುಡ್ ಸೆಲಿಬ್ರಿಟಿಗಳ, ಗುತ್ತಿಗೆದಾರರ, ಬಿಲ್ಡರ್ ಗಳ ಹೆಸರುಗಳು ಪತ್ತೆಯಾಗಿದೆ. ಇದೇ ವಿಚಾರವಾಗಿ ಜಲಾನ್ ನ ವಿಚಾರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ದುಬೈನಲ್ಲಿ ಪಂದ್ಯ ಫಿಕ್ಸ್ ಮಾಡುವ ಸಭೆಯನ್ನು ಜಲಾನ್ ವ್ಯವಸ್ಥೆ ಮಾಡಿದ್ದು ಸೆಲಿಬ್ರಿಟಿ ಕೂಡ ಬಾಗಿಯಾಗಿದ್ದರು ಎನ್ನುವುದು ತಿಳಿದುಬಂದಿದೆ. ಯಾವ ಪಂದ್ಯ ಎನ್ನುವುದನ್ನು ತಿಳಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ತಿಳಿಸಿದರು.

  • ನಟಿ ನಿಧಿ ಅಗರ್ವಾಲ್ ಜೊತೆ ಸುತ್ತಾಟ: ಸ್ಪಷ್ಟನೆ ಕೊಟ್ಟ ಕ್ರಿಕೆಟಿಗ ರಾಹುಲ್

    ನಟಿ ನಿಧಿ ಅಗರ್ವಾಲ್ ಜೊತೆ ಸುತ್ತಾಟ: ಸ್ಪಷ್ಟನೆ ಕೊಟ್ಟ ಕ್ರಿಕೆಟಿಗ ರಾಹುಲ್

    ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಬಾಲಿವುಡ್ ನಟಿ ನಿಧಿ ಅಗರ್ವಾಲ್ ಜೊತೆಗಿನ ಫೋಟೋ ಕುರಿತು ಸ್ಪಷ್ಟನೆ ನೀಡಿರುವ ಕ್ರಿಕೆಟಿಗ ಕೆಎಲ್ ರಾಹುಲ್, ನಾವಿಬ್ಬರು ಉತ್ತಮ ಸ್ನೇಹಿತರಾಗಿದ್ದು, ಹಲವು ವರ್ಷಗಳಿಂದ ಪರಸ್ಪರ ಪರಿಚಯವಿರುವ ಕಾರಣ ಭೇಟಿ ಮಾಡಿದ್ದಾಗಿ ತಿಳಿಸಿದ್ದಾರೆ.

    ಇದೇ ವೇಳೆ ಡೇಟಿಂಗ್ ಕುರಿತ ಪ್ರಶ್ನೆಗೆ ಉತ್ತರಿಸಿ, ತಾನು ಪ್ರೀತಿಸುವ ಮಹಿಳೆಯನ್ನು ಮಹಾರಾಣಿಯಾಗಿ ನೋಡಿಕೊಳ್ಳುತ್ತೇನೆ. ಅಲ್ಲದೇ ಈ ವಿಷಯವನ್ನು ಯಾರಿಂದಲೂ ಮುಚ್ಚಿಡಲು ಪ್ರಯತ್ನ ಪಡುವುದಿಲ್ಲ. ನಾವಿಬ್ಬರು ಒಂದೇ ನಗರದದಿಂದ ಮುಂಬೈಗೆ ಆಗಮಿಸಿದ್ದು, ಇಬ್ಬರ ವೃತ್ತಿ ಜೀವನದಲ್ಲಿ ಸಾಕಷ್ಟು ಬೆಳವಣಿಗೆ ಹೊಂದುತ್ತಿದ್ದೇವೆ. ಹಲವು ಬಾರಿ ಈ ಕುರಿತು ಮಾತನಾಡಲು ಸಿಗುತ್ತೇವೆ ಎಂದು ಹೇಳಿದ್ದಾರೆ.

    ಬಾಲಿವುಡ್ ನಲ್ಲಿ ನಟಿ ನಿಧಿ ಅಗರ್ವಾಲ್ ಉತ್ತಮ ಅವಕಾಶಗಳನ್ನು ಪಡೆಯುತ್ತಿದ್ದಾರೆ. ಅಲ್ಲದೇ ನಾವಿಬ್ಬರೇ ಎಲ್ಲೂ ಭೇಟಿ ಆಗುವುದಿಲ್ಲ. ನಮ್ಮೊಂದಿಗೆ ಬೆಂಗಳೂರಿನಿಂದ ಆಗಮಿಸಿದ ಮೂವರು ಸ್ನೇಹಿತರು ಸಹ ಸೇರಿ ಕೊಳುತ್ತಾರೆ. ಒಂದೇ ಊರಿನ ಸ್ನೇಹಿತರು ಬೇರೆ ಊರಲ್ಲಿ ಭೇಟಿ ಮಾಡಿ ಮಾತನಾಡುವುದು ಸಂತಸ ನೀಡುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

    https://instagram.com/p/BjZxMiNBl9d/?utm_source=ig_embed

    ಕಳೆದ ಎರಡು ದಿನಗಳ ಹಿಂದೆ ಬೆಂಗಳೂರು ಮೂಲದ ಬಾಲಿವುಡ್ ನಟಿ ನಿಧಿ ಅಗರ್ವಾಲ್ ಜೊತೆ ರಾಹುಲ್ ಕಾಣಿಸಿಕೊಂಡಿದ್ದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಲ್ಲದೇ ಇಬ್ಬರು ಡೇಟಿಂಗ್ ನಡೆಸುತ್ತಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಆದರೆ ಈಗ ಖಾಸಗಿ ಮಾಧ್ಯಮದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ರಾಹುಲ್ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

    ಈ ಬಾರಿಯ ಐಪಿಎಲ್ ನಲ್ಲಿ ತಮ್ಮ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ರಾಹುಲ್ ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿದ್ದರು. ಬೆಂಗಳೂರಿನಲ್ಲಿ ನಡೆಯುವ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಪಂದ್ಯದಲ್ಲಿ ರಾಹುಲ್ ಆಡಲಿದ್ದಾರೆ. ಇನ್ನು ಬೆಂಗಳೂರು ಮೂಲದ ನಟಿ ನಿಧಿ ಅಗರ್ವಾಲ್ 2017 ರಲ್ಲಿ ತೆರೆಕಂಡ ಬಾಲಿವುಡ್ `ಮುನ್ನ ಮೈಕಲ್’ ಸಿನಿಮಾದಲ್ಲಿ ನಟಿಸಿದ್ದರು.

    https://www.instagram.com/p/BjZ2T-YgW_3/?utm_source=ig_embed

  • ಬಾಲಿವುಡ್ ನಟಿಯೊಂದಿಗೆ ಕಾಣಿಸಿಕೊಂಡ ಕ್ರಿಕೆಟಿಗ ಕೆಎಲ್ ರಾಹುಲ್

    ಬಾಲಿವುಡ್ ನಟಿಯೊಂದಿಗೆ ಕಾಣಿಸಿಕೊಂಡ ಕ್ರಿಕೆಟಿಗ ಕೆಎಲ್ ರಾಹುಲ್

    ಮುಂಬೈ: ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಕನ್ನಡಿಗ ಕೆಎಲ್ ರಾಹುಲ್, ಬಾಲಿವುಟ್ ನಟಿ ನಿಧಿ ಅಗರ್‍ವಾಲ್ ಅವರೊಂದಿಗೆ ಮುಂಬೈನಲ್ಲಿ ಕಾಣಿಸಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    https://www.instagram.com/p/BjY127NAXBE/?utm_source=ig_embed

    ಕೆಎಲ್ ರಾಹುಲ್ ಅವರ ಅಭಿಮಾನಿ ಬಳಗದ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋಗಳನನ್ನು ಪೋಸ್ಟ್ ಮಾಡಲಾಗಿದೆ. ಬೆಂಗಳೂರಿನ ಹುಡುಗಿ ಮಾಡೆಲ್ ಕಮ್ ನಟಿ ನಿಧಿ ಅಗರ್ ವಾಲ್ ಬಾಲಿವುಡ್ ನ `ಮುನ್ನ ಮೈಕೆಲ್’ ಚಿತ್ರದಲ್ಲಿ ನಟಿಸಿದ್ದಾರೆ. ಈ ಬಾರಿಯ ಐಪಿಎಲ್ ನಲ್ಲಿ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದ ರಾಹುಲ್ ಪಂಜಾಬ್ ತಂಡದ ಪರ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದರು. ಸದ್ಯ ಜೂನ್ 14 ರಂದು ಬೆಂಗಳೂರಿನಲ್ಲಿ ನಡೆಯುವ ಅಫ್ಘಾನಿಸ್ತಾನ ವಿರುದ್ಧ ಏಕೈಕ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಭಾಗವಹಿಸಲಿದ್ದಾರೆ.

    https://www.instagram.com/p/BjZ2T-YgW_3/?utm_source=ig_embed

    ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ 54.91 ಸರಾಸರಿಯಲ್ಲಿ 14 ಪಂದ್ಯಗಳಿಂದ 659 ರನ್ ಗಳಿಸಿ ರಾಹುಲ್ ಟೂರ್ನಿಯ ಟಾಪ್ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ. ಟೂರ್ನಿಯ ಆರಂಭಿಕ ಪಂದ್ಯದಲ್ಲೇ ರಾಹುಲ್ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಟೂರ್ನಿಯ ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿದ್ದ ರಾಹುಲ್ ಟೂರ್ನಿಯ ಅತ್ಯಂತ ರೋಚಕ ಕ್ಷಣ ತನ್ನದಾಗಿತ್ತು. ತನಗೆ ಈ ಕುರಿತು ಹೆಮ್ಮೆ ಇದೆ. ಟೂರ್ನಿಯಲ್ಲಿ ಭಾಗವಹಿಸಿದ ಕಾರಣ ಹಲವು ಸ್ನೇಹಿತರು ದೊರೆತಿದ್ದಾರೆ. ಅಲ್ಲದೇ ಇನ್ನೂ ಸಾಕಷ್ಟು ಕಲಿಯುವುದು ಬಾಕಿ ಇದೆ ಎಂದು ತಿಳಿಸಿದ್ದರು.

    https://www.instagram.com/p/BjZxMiNBl9d/?utm_source=ig_embed