Tag: iran

  • ಇರಾನ್, ಇಸ್ರೇಲ್‍ಗೆ ಪ್ರಯಾಣಿಸದಂತೆ ನಾಗರಿಕರಿಗೆ ಕೇಂದ್ರದ ಸಲಹೆ

    ಇರಾನ್, ಇಸ್ರೇಲ್‍ಗೆ ಪ್ರಯಾಣಿಸದಂತೆ ನಾಗರಿಕರಿಗೆ ಕೇಂದ್ರದ ಸಲಹೆ

    ನವದೆಹಲಿ: ಇರಾನ್ (Iran) ಮತ್ತು ಇಸ್ರೇಲ್ (Israel) ನಡುವಿನ ಸಂಘರ್ಷದಿಂದ ಉಂಟಾಗಿರುವ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಸೂಚನೆ ಬರುವವರೆಗೆ ಎರಡೂ ದೇಶಗಳಿಗೆ ಪ್ರಯಾಣಿಸದಂತೆ ಕೇಂದ್ರ ಸರ್ಕಾರ ನಾಗರಿಕರಿಗೆ ಸಲಹೆ ನೀಡಿದೆ.

    ಸಿರಿಯಾದಲ್ಲಿರುವ ತನ್ನ ರಾಯಭಾರಿ ಕಚೇರಿಯ ಮೇಲೆ ಶಂಕಿತ ಇಸ್ರೇಲಿ ವೈಮಾನಿಕ ದಾಳಿಗೆ (Airstrike) ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್‍ನ ಬೆದರಿಕೆ ಬಂದ ನಂತರ ವಿದೇಶಾಂಗ ಸಚಿವಾಲಯ (Foreign Ministry) ಈ ಸಲಹೆ ನೀಡಿದೆ. ಉಭಯ ದೇಶಗಳಲ್ಲಿನ ತಮ್ಮ ದೇಶದ ನಾಗರಿಕರು ಸುರಕ್ಷತೆಯ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕು. ಅನಗತ್ಯ ಸಂಚಾರ ಮಾಡಬಾರದು ಎಂದು ವಿದೇಶಾಂಗ ಸಚಿವಾಲಯ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ರಾತ್ರಿ 10 ಗಂಟೆ ನಂತರವೂ ಪ್ರಚಾರ – ಅಣ್ಣಾಮಲೈ ವಿರುದ್ಧ ದೂರು ದಾಖಲು

    ಅಮೆರಿಕ ಮತ್ತು ರಷ್ಯಾ ಸೇರಿದಂತೆ ಇತರೆ ದೇಶಗಳು ತಮ್ಮ ಸಿಬ್ಬಂದಿ ಮತ್ತು ನಾಗರಿಕರಿಗೆ ಇದೇ ರೀತಿಯ ಸಲಹೆಗಳನ್ನು ನೀಡಿವೆ.

    ಇರಾನ್‍ನ ಪ್ರತೀಕಾರ, ಗಾಜಾದಲ್ಲಿ ಇರಾನ್ ಬೆಂಬಲಿತ ಹಮಾಸ್ ಉಗ್ರರು ಮತ್ತು ಇಸ್ರೇಲ್ ನಡುವಿನ ಯುದ್ಧದಂತೆ ಮರುಕಳಿಸಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ.

    ಸಂಘರ್ಷವನ್ನು ನಿಯಂತ್ರಿಸುವ ಸಲುವಾಗಿ ಅಮೆರಿಕ, ಸೌದಿ ಅರೇಬಿಯಾ, ಯುಎಇ, ಕತಾರ್ ಮತ್ತು ಇರಾಕ್‍ನ ವಿದೇಶಾಂಗ ಮಂತ್ರಿಗಳಿಗೆ ಮಾತುಕತೆ ನಡೆಸಿದೆ. ಇರಾನ್‍ಗೆ ಇಸ್ರೇಲ್‍ನೊಂದಿಗಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಒತ್ತಾಯಿಸುವಂತೆ ಕೇಳಿಕೊಳ್ಳಲಾಗಿದೆ. ಇದನ್ನೂ ಓದಿ: ಫುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿದ್ದ ಮತೀನ್‌ ಬಾಂಬ್‌ ಸ್ಫೋಟದ ಸೂತ್ರಧಾರ!

  • ಇರಾನ್ ಮೇಲೆ ಪಾಕ್ ಪ್ರತಿದಾಳಿ – ನಾಲ್ಕು ಮಕ್ಕಳು ಸೇರಿ 7 ಮಂದಿ ಹತ್ಯೆ

    ಇರಾನ್ ಮೇಲೆ ಪಾಕ್ ಪ್ರತಿದಾಳಿ – ನಾಲ್ಕು ಮಕ್ಕಳು ಸೇರಿ 7 ಮಂದಿ ಹತ್ಯೆ

    ಇಸ್ಲಾಮಾಬಾದ್: ಇರಾನ್‌ನ ಉಗ್ರರ ನೆಲೆಗಳ ಮೇಲೆ ಪಾಕಿಸ್ತಾನ (Pakistan) ಪ್ರತಿದಾಳಿ ನಡೆಸಿದ್ದು, 7 ಮಂದಿ ಇರಾನಿಯನ್ನರನ್ನು ಹತ್ಯೆಗೈದಿದೆ. ಈ ಮೂಲಕ ತನ್ನ ವಿರುದ್ಧದ ದಾಳಿಗೆ ಸೇಡು ತೀರಿಸಿಕೊಂಡಿದೆ.

    ಪಾಕಿಸ್ತಾನದ ಬಲೂಚಿಸ್ತಾನ (Balochistan) ಪ್ರಾಂತ್ಯದಲ್ಲಿರುವ `ಜೈಷ್ ಎ ಅದ್ಲ್’ ಎಂಬ ಉಗ್ರ ಸಂಘಟನೆಯ 2 ನೆಲೆಗಳ ಮೇಲೆ ಇರಾನ್ ಮಾರಣಾಂತಿಕ ಕ್ಷಿಪಣಿ ಹಾಗೂ ಡ್ರೋನ್‌ಗಳಿಂದ ದಾಳಿ (Iran Missile Attack) ನಡೆಸಿತ್ತು. ಇದಾದ ಒಂದು ದಿನದ ನಂತರ ಪಾಕಿಸ್ತಾನ ಸಹ ಪ್ರತೀಕಾರದ ದಾಳಿ ನಡೆಸಿದೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ರೇಸ್‌ನಿಂದ ಹೊರಗುಳಿದ ಭಾರತೀಯ ಮೂಲದ ವಿವೇಕ್‌ – ಟ್ರಂಪ್‌ಗೆ ಬೆಂಬಲ

    ಪಾಕಿಸ್ತಾನವು ಗುರುವಾರ ಇರಾನ್ ಪ್ರದೇಶದೊಳಗಿನ ಉಗ್ರಗಾಮಿ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿ, 7 ಮಂದಿಯನ್ನ ಹತ್ಯೆಗೈದಿದೆ. ಇರಾನ್ ಪಾಕ್ ಮೇಲಿನ ಆಕ್ರಮಣವನ್ನು ಒಪ್ಪಿಕೊಂಡ ನಂತರ ಪಾಕಿಸ್ತಾನ ದಾಳಿ ನಡೆಸಿದೆ.

    ಗುರುವಾರ ಬೆಳಗ್ಗೆ ಪಾಕಿಸ್ತಾನವು ಬಲೂಚಿಸ್ತಾನ ಪ್ರತ್ಯೇಕತಾವಾದಿ ಸಂಘಟನೆಗಳಾದ ಬಲೂಚಿಸ್ತಾನ್ ಲಿಬರೇಷನ್ ಫ್ರಂಟ್ ಹಾಗೂ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ ಸಂಘಟನೆಯ ನೆಲೆಗಳ ಮೇಲೆ ದಾಳಿ ನಡೆಸಿದೆ. ಪಾಕ್ ದಾಳಿ ವೇಳೆ ಹಲವು ಭಯೋತ್ಪಾದಕರು ಹತ್ಯೆಗೀಡಾಗಿರುವುದು ಕಂಡುಬಂದಿದೆ. ಈ ನಡುವೆ ಪಾಕಿಸ್ತಾನಿ ವಿರೋಧಿ ಉಗ್ರಗಾಮಿ ಸಂಘಟನೆ ಮೇಲೆ ದಾಳಿ ನಡೆಸಲಾಗಿದೆ ಎಂದಷ್ಟೇ ನಾನು ಹೇಳಬಲ್ಲೆ ಎಂದು ಪಾಕಿಸ್ತಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ದಾಳಿ ನಡೆದ ಕೆಲಸ ಸಮಯದ ಬಳಿಕ ಸಿಯೆಸ್ತಾನ್-ಒ-ಬಲೂಚಿಸ್ತಾನ್ ಪ್ರಾಂತ್ಯದಲ್ಲಿರುವ ಅಡಗು ತಾಣಗಳ (Terrorist Hideouts) ಮೇಲೆ ಮಿಸೈಲ್ ದಾಳಿ ನಡೆದಿರುವುದಾಗಿ ಇರಾನ್ ಮಾಧ್ಯಮಗಳು ವರದಿ ಮಾಡಿವೆ.

    ಪಾಕಿಸ್ತಾನದ ಅಧಿಕಾರಿಯೊಬ್ಬರ ಪ್ರಕಾರ, ಆಗ್ನೇಯ ಇರಾನ್ ನಗರವಾದ ಸರವನ್‌ನಲ್ಲಿ ಸರಣಿ ಸ್ಫೋಟಗಳು ಸಂಭವಿಸಿವೆ. ಈ ಸ್ಫೋಟದಲ್ಲಿ 7 ಇರಾನಿಯನ್ನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಮೂವರು ಮಹಿಳೆಯರು, ನಾಲ್ವರು ಮಕ್ಕಳು ಸೇರಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮೇಯರ್‌ ಚುನಾವಣೆ : ಮಾಲ್ಡೀವ್ಸ್‌ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ಪಕ್ಷಕ್ಕೆ ಭರ್ಜರಿ ಜಯ

    ಒಂದು ದಿನದ ಹಿಂದೆಯಷ್ಟೇ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಮೇಲೆ ಜೈಷ್-ಅಲ್-ಅದ್ ಉಗ್ರ ಸಂಘಟನೆಯ ಎರಡು ನೆಲೆಗಳ ಮೇಲೆ ಇರಾನ್ ದಾಳಿ ನಡೆಸಿತ್ತು. ಈ ಘಟನೆಯಲ್ಲಿ ಇಬ್ಬರು ಮಕ್ಕಳು ಸಾವಿಗೀಡಾಗಿದ್ದರು. ಮೂವರು ಗಾಯಗೊಂಡಿದ್ದರು. ಈ ದಾಳಿ ತನ್ನ ವಾಯುಸೀಮೆ ಹಾಗೂ ಸಾರ್ವಭೌಮತೆಯ ಉಲ್ಲಂಘನೆ ಎಂದು ಪಾಕಿಸ್ತಾನ ಹೇಳಿತ್ತು. ಈ ಕಾನೂನುಬಾಹಿರ ಕೃತ್ಯಕ್ಕೆ ತಿರುಗೇಟು ನೀಡುವ ಅಧಿಕಾರವೂ ತನಗಿದೆ ಎಂದು ಹೇಳಿಕೊಂಡಿತ್ತು. ಈ ಬೆನ್ನಲ್ಲೇ ಇರಾನ್ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು – ಪಾಕಿಸ್ತಾನದಲ್ಲಿ 1 ಮೊಟ್ಟೆಯ ಬೆಲೆ 33 ರೂ. – ಈರುಳ್ಳಿ ಪ್ರತಿ ಕೆಜಿಗೆ 250 ರೂ.

  • Iran Blasts: ಅವಳಿ ಬಾಂಬ್‌ ಸ್ಫೋಟದಲ್ಲಿ 103 ಸಾವು, 141ಕ್ಕೂ ಹೆಚ್ಚು ಮಂದಿಗೆ ಗಾಯ

    Iran Blasts: ಅವಳಿ ಬಾಂಬ್‌ ಸ್ಫೋಟದಲ್ಲಿ 103 ಸಾವು, 141ಕ್ಕೂ ಹೆಚ್ಚು ಮಂದಿಗೆ ಗಾಯ

    ಟೆಹ್ರಾನ್‌: ಇರಾನ್‌ನಲ್ಲಿ ಅವಳಿ ಬಾಂಬ್‌ ಸ್ಫೋಟಗೊಂಡು 103 ಮಂದಿ ಸಾವನ್ನಪ್ಪಿ, 141 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

    ಇರಾನ್‌ನ ದಕ್ಷಿಣ ನಗರಿ ಕೆರ್ಮಾನ್‌ನಲ್ಲಿ ಕಮಾಂಡರ್‌ ಕಾಸ್ಸೇಮ್‌ ಸೋಲೈಮನಿ (Iranian general Qasem Soleimani) ಅವರ ಸ್ಮರಣೆಯ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ದುರ್ಘಟನೆ ನಡೆದಿದ್ದು, ಭಾರೀ ಆತಂಕವನ್ನೂ ಸೃಷ್ಟಿ ಮಾಡಿದೆ.

    2020ರಲ್ಲಿ ಅಮೆರಿಕಾವು ಬಾಗ್ದಾದ್‌ದ ವಿಮಾನ ನಿಲ್ದಾಣದ ಮೇಲೆ ಡ್ರೋಣ್‌ ದಾಳಿ (US drone strike in Iraq) ನಡೆಸಿತ್ತು. ಈ ದಾಳಿಯಲ್ಲಿ ಕಮಾಂಡರ್‌ ಕಾಸ್ಸೇಮ್‌ ಸೋಲೈಮನಿ ಹತರಾಗಿದ್ದರು. ಇವರ ಸ್ಮರಣಾರ್ಥ ಕಾರ್ಯಕ್ರಮವನ್ನು ಪ್ರತಿ ವರ್ಷ ಇರಾನ್‌ನಲ್ಲಿ ಆಯೋಜಿಸಲಾಗುತ್ತಿದೆ. ಕೆರ್ಮಾನ್‌ನಲ್ಲಿರುವ ಕಾಸ್ಸೇಮ್‌ ಸೋಲೈಮನಿ ಅವರ ಸ್ಮಾರಕದ ಬಳಿಯೇ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ.

    ಈ ವರ್ಷದ ಕಾರ್ಯಕ್ರಮವನ್ನು ಇಂದು ಆಯೋಜನೆ ಮಾಡಲಾಗಿದ್ದು, ಇದೇ ಸಂದರ್ಭ ಅವಳಿ ಬಾಂಬ್‌ ಸ್ಫೋಟ (Bomb Blast) ನಡೆದಿದೆ. ಘಟನೆಯ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದ್ದರು. ಈ ವೇಳೆ ಮೊದಲು ಅನಿಲ ತುಂಬಿದ ಡಬ್ಬಿಯನ್ನು ಎಸೆಯಲಾಯಿತು. ಇದು ಸಿಡಿಯುತಲೇ ಇನ್ನಷ್ಟು ಡಬ್ಬಗಳನ್ನು ನಿರಂತರವಾಗಿ ಎಸೆಯಲಾಯಿತು. ಆಗ ಭಯಾನಕ ಸ್ಪೋಟಗಳು ಸಂಭವಿಸಿದವು ಎಂದು ಇರಾನ್‌ನ ಮಾಧ್ಯಮಗಳು ವರದಿ ಮಾಡಿವೆ.

    ಈ ದಾಳಿಯಿಂದ ಮೊದಲು 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಸಂಜೆಯ ವೇಳೆಗೆ ಸಾವಿನ ಸಂಖ್ಯೆ ಹೆಚ್ಚಾಗಿದ್ದು, 103 ದಾಟಿತ್ತು. 141ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇನ್ನು ಬಾಂಬ್‌ ಸ್ಟೋಟಗಳಿಂದ ಗಾಯಗೊಂಡ ಹಲವರ ಆಕ್ರಂದನ, ಅಲ್ಲಿನ ರಕ್ತಸಿಕ್ತ ಪರಿಸ್ಥಿತಿಯನ್ನು ಕಂಡು ಹಲವರು ನಿಂತಲ್ಲೇ ಕುಸಿದು ಬಿದ್ದ ಪ್ರಸಂಗವೂ ನಡೆದಿದೆ. ಇದನ್ನೂ ಓದಿ: ಜಪಾನ್‌ ಭೂಕಂಪ; ಮೃತರ ಸಂಖ್ಯೆ 62 ಕ್ಕೇರಿಕೆ – ಮತ್ತೆ ಭೂಕುಸಿತ, ಭಾರೀ ಮಳೆಯ ಎಚ್ಚರಿಕೆ

    ಘಟನೆ ನಡೆಯುತ್ತಿದ್ದಂತೆಯೇ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಿದರು. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ. ಸದ್ಯ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಕೆರ್ಮಾನ್‌ ಪ್ರದೇಶದ ರೆಡ್‌ ಕ್ಸೆಸೆಂಟ್‌ನ ಮುಖ್ಯಸ್ಥ ರೇಝಾ ಫಲ್ಹಾಹ್‌ ತಿಳಿಸಿದ್ದಾರೆ.

    ಈ ಸಂಬಂಧ ಇರಾನ್‌ ಸರ್ಕಾರ ಪ್ರತಿಕ್ರಿಯಿಸಿ, ಉಗ್ರರ ಕೈವಾಡ ಈ ದಾಳಿಗಳ ಹಿಂದೆ ಇರಬಹುದು ಎಂದು ಶಂಕಿಸಿದೆ. ರಕ್ಷಣಾ ಕಾರ್ಯದ ನಂತರ ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದೆ.

  • ಇಸ್ರೇಲ್‌ ದಾಳಿ ನಿಲ್ಲಿಸಲು ನಿಮ್ಮ ಸಾಮರ್ಥ್ಯ ಬಳಸಿ: ಮೋದಿಗೆ ಕರೆ ಮಾಡಿ ಇರಾನ್‌ ಅಧ್ಯಕ್ಷ ಮನವಿ

    ಇಸ್ರೇಲ್‌ ದಾಳಿ ನಿಲ್ಲಿಸಲು ನಿಮ್ಮ ಸಾಮರ್ಥ್ಯ ಬಳಸಿ: ಮೋದಿಗೆ ಕರೆ ಮಾಡಿ ಇರಾನ್‌ ಅಧ್ಯಕ್ಷ ಮನವಿ

    ಟೆಹ್ರಾನ್: ಗಾಜಾ (Gaza) ಮೇಲಿನ ಇಸ್ರೇಲ್‌ (Israel) ದಾಳಿಗಳನ್ನು ಕೊನೆಗೊಳಿಸಲು ಭಾರತ ತನ್ನ ಎಲ್ಲಾ ಸಾಮರ್ಥ್ಯಗಳನ್ನು ಬಳಸಬೇಕು ಎಂದು ಪ್ರಧಾನಿ ಮೋದಿಗೆ (Narendra Modi) ಕರೆ ಮಾಡಿ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಒತ್ತಾಯಿಸಿದ್ದಾರೆ.

    ಮೋದಿ ಜೊತೆಗೆ ಫೋನ್‌ ಕರೆ ಮಾತುಕತೆ ವೇಳೆ ಇರಾನ್‌ (Iran) ಅಧ್ಯಕ್ಷ, ಪಾಶ್ಚಿಮಾತ್ಯ ವಸಾಹತುಶಾಹಿ ವಿರುದ್ಧ ಭಾರತದ ಹೋರಾಟಗಳು ಹಾಗೂ ವಿಶ್ವದ ಅಲಿಪ್ತ ಚಳವಳಿಯ ಸಂಸ್ಥಾಪಕರ ದೇಶವಾದ ಭಾರತದ ಸ್ಥಾನವನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಗಾಜಾ ನಗರವನ್ನೇ ವಿಭಜಿಸಿದ ಇಸ್ರೇಲ್‌ – 2 ನಗರಗಳ ಮಧ್ಯೆ ಸಂಪರ್ಕ ಕಡಿತ

    ಗಾಜಾದ ತುಳಿತಕ್ಕೊಳಗಾದ ಜನರ ವಿರುದ್ಧ ಜಿಯೋನಿಸ್ಟ್‌ ಅಪರಾಧಗಳನ್ನು ಕೊನೆಗೊಳಿಸಲು ಭಾರತವು ತನ್ನೆಲ್ಲಾ ಸಾಮರ್ಥ್ಯ ಬಳಸುವ ನಿರೀಕ್ಷಿ ಇದೆ. ಕದನ ವಿರಾಮಕ್ಕಾಗಿ ಯಾವುದೇ ಜಾಗತಿಕ ಜಂಟಿ ಪ್ರಯತ್ನವನ್ನು ಟೆಹ್ರಾನ್ ಬೆಂಬಲಿಸುತ್ತದೆ. ಸಂಕಷ್ಟದಲ್ಲಿರುವ ಗಾಜಾದ ಜನರಿಗೆ ನೆರವು ನೀಡುತ್ತದೆ ಎಂದು ರೈಸಿ ತಿಳಿಸಿದ್ದಾರೆ.

    ಪ್ಯಾಲೆಸ್ತೀನ್‌ ಜನರ ಹತ್ಯೆಯು ಪ್ರಪಂಚದ ಎಲ್ಲಾ ಸ್ವತಂತ್ರ ರಾಷ್ಟ್ರಗಳನ್ನು ಕೆರಳಿಸಿದೆ. ಅಮಾಯಕ ಮಹಿಳೆಯರು ಮತ್ತು ಮಕ್ಕಳ ಹತ್ಯೆ, ಆಸ್ಪತ್ರೆಗಳು, ಶಾಲೆಗಳು, ಮಸೀದಿಗಳು, ಚರ್ಚ್‌ಗಳು ಮತ್ತು ವಸತಿ ಪ್ರದೇಶಗಳ ಮೇಲಿನ ದಾಳಿಗಳು ಖಂಡನೀಯ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪತ್ನಿಗೆ 17 ಬಾರಿ ಇರಿದು, ದೇಹದ ಮೇಲೆ ಗಾಡಿ ಓಡಿಸಿದ್ದ ಕೇರಳದ ವ್ಯಕ್ತಿಗೆ ಅಮೆರಿಕದಲ್ಲಿ ಜೀವಾವಧಿ ಶಿಕ್ಷೆ

    ಎಲ್ಲಾ ದೇಶಗಳು ಸ್ವಾತಂತ್ರ್ಯಕ್ಕಾಗಿ ಪ್ಯಾಲೇಸ್ಟಿನಿ ಜನರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕು. ನಾಜಿ ಜರ್ಮನಿಯ ವಿರುದ್ಧ ಯುರೋಪಿಯನ್ ರಾಷ್ಟ್ರಗಳ ಹೋರಾಟ ಶ್ಲಾಘನೀಯ ಮತ್ತು ವೀರರ ಕೃತ್ಯವಾಗಿದೆ. ಆದರೆ ಮಕ್ಕಳ ಹತ್ಯೆ ಮತ್ತು ಕ್ರಿಮಿನಲ್ ಜಿಯೋನಿಸ್ಟ್ ಆಡಳಿತದ ವಿರುದ್ಧ ಪ್ಯಾಲೇಸ್ಟಿನಿಯನ್ ಜನರು ಹೋರಾಟ ನಡೆಸುವುದು ಖಂಡನೀಯವೇ ಎಂದು ಪ್ರಶ್ನಿಸಿದ್ದಾರೆ.

  • ಹಿಜಬ್ ಕಾನೂನು ಉಲ್ಲಂಘನೆ – ಇರಾನ್‌ನಲ್ಲಿ 12 ನಟಿಯರಿಗೆ ನಿಷೇಧ

    ಹಿಜಬ್ ಕಾನೂನು ಉಲ್ಲಂಘನೆ – ಇರಾನ್‌ನಲ್ಲಿ 12 ನಟಿಯರಿಗೆ ನಿಷೇಧ

    ಟೆಹ್ರಾನ್: ಇರಾನ್‌ನಲ್ಲಿ (Iran) ಮಹಿಳೆಯರಿಗೆ ಕಡ್ಡಾಯವಾದ ಹಿಜಬ್ (Hijab) ಒಳಗೊಂಡ ಡ್ರೆಸ್ ಕೋಡ್ (Dress Code) ಅನ್ನು ಅನುಸರಿಸಲು ವಿಫಲರಾಗಿದ್ದಕ್ಕೆ 12 ನಟಿಯರನ್ನು ನಟನೆಯ ವೃತ್ತಿಯಿಂದ ನಿಷೇಧಿಸಿರುವುದಾಗಿ ಇರಾನ್‌ನ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

    ಕಾನೂನನ್ನು ಅನುಸರಿಸದವರಿಗೆ ಕೆಲಸ ಮಾಡಲು ಅನುಮತಿಸಲಾಗುವುದಿಲ್ಲ ಎಂದು ಇರಾನ್‌ನ ಸಂಸ್ಕೃತಿ ಮತ್ತು ಇಸ್ಲಾಮಿಕ್ ಮಾರ್ಗದರ್ಶನ ಸಚಿವ ಮೊಹಮ್ಮದ್ ಮೆಹದಿ ಎಸ್ಮಾಯಿಲಿ ತಿಳಿಸಿದ್ದಾರೆ.

    ಇರಾನ್‌ನ ನಟಿಯರಾದ ತರನೆಹ್ ಅಲಿದೋಸ್ತಿ, ಕಟಾಯೂನ್ ರಿಯಾಹಿ, ಫತೇಮೆ ಮೊಟಮೆಡ್ ಅರಿಯಾ ಸೇರಿದಂತೆ 12 ನಟಿಯರು ಹಿಜಬ್ ಕಾನೂನನ್ನು ಉಲ್ಲಂಘಿಸುತ್ತಿದ್ದು, ಅವರಿಗೆ ಇನ್ನುಮುಂದೆ ಚಲನಚಿತ್ರಗಳಲ್ಲಿ ಪಾತ್ರಗಳನ್ನು ನಿರ್ವಹಿಸಲು ಅನುಮತಿಸಲಾಗುವುದಿಲ್ಲ ಎಂದು ಮಂಗಳವಾರ ಇರಾನ್‌ನ ಮಾಧ್ಯಮಗಳು ವರದಿ ಮಾಡಿವೆ.

    ಕಳೆದ ವರ್ಷ ಇರಾನ್‌ನಲ್ಲಿ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಂಧಿತಳಾಗಿದ್ದ 22 ವರ್ಷದ ಕುರ್ದ್ ಮಹ್ಸಾ ಅಮಿನಿ ಪೊಲೀಸ್ ಕಸ್ಟಡಿಯಲ್ಲಿ ಸಾವಾಗಿತ್ತು. ಬಳಿಕ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆದಿತ್ತು. ಈ ಸಂದರ್ಭ ಬಂಧಿಸಲ್ಪಟ್ಟಿದ್ದ ಸಾರ್ವಜನಿಕ ವ್ಯಕ್ತಿಗಳಲ್ಲಿ ಅಲಿದೂಸ್ತಿ ಮತ್ತು ರಿಯಾಹಿ ಕೂಡಾ ಸೇರಿದ್ದರು.

    ಇರಾನ್‌ನ ಮಹಿಳೆಯರ ಕಟ್ಟುನಿಟ್ಟಿನ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ ಮಹ್ಸಾ ಅಮಿನಿಯನ್ನು ಈ ಹಿಂದೆ ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆಕೆಯ ಸಾವಾಗಿತ್ತು. ಈ ಹಿನ್ನೆಲೆ ಮಹಿಳೆಯರ ಕಟ್ಟುನಿಟ್ಟಿನ ಡ್ರೆಸ್ ಕೋಡ್ ಅನ್ನು ವಿರೋಧಿಸಿ ತಿಂಗಳುಗಳವರೆಗೆ ದೇಶಾದ್ಯಂತ ಭಾರೀ ಪ್ರತಿಭಟನೆ, ಗಲಭೆಗಳು ನಡೆದಿತ್ತು. ಇದನ್ನೂ ಓದಿ: ಹುಲಿ ಉಗುರಿನ ಸಂಕಷ್ಟ- ದರ್ಶನ್ ಮನೆಗೆ ಅರಣ್ಯಾಧಿಕಾರಿಗಳ ಭೇಟಿ

    ಇರಾನ್‌ನ 1979ರ ಇಸ್ಲಾಮಿಕ್ ಕ್ರಾಂತಿಯ ನಂತರ 1983 ರಿಂದ ಕುತ್ತಿಗೆ ಮತ್ತು ತಲೆಯನ್ನು ಮುಚ್ಚುವ ವಸ್ತ್ರವನ್ನು ಧರಿಸುವುದು ಮಹಿಳೆಯರಿಗೆ ಕಡ್ಡಾಯವಾಗಿದೆ. ಆದರೆ ಕಳೆದ ವರ್ಷದ ಈ ಸಾಮೂಹಿಕ ಪ್ರತಿಭಟನೆಗಳ ನಂತರ ಇರಾನ್‌ನಲ್ಲಿ ಮಹಿಳೆಯರು ಹಿಜಬ್ ಸೇರಿದಂತೆ ಡ್ರೆಸ್ ಕೋಡ್ ಅನ್ನು ಹೆಚ್ಚಾಗಿ ಉಲ್ಲಂಘಿಸುತ್ತಿದ್ದಾರೆ.

    ಹಿಜಬ್ ನಿಯಮಗಳನ್ನು ಉಲ್ಲಂಘಿಸುವ ಮಹಿಳೆಯರ ವಿರುದ್ಧ ಇರಾನ್ ಕಳೆದ ಕೆಲವು ತಿಂಗಳುಗಳಿಂದ ಕ್ರಮಗಳನ್ನು ಹೆಚ್ಚಿಸಿದೆ. ಸೆಪ್ಟೆಂಬರ್‌ನಲ್ಲಿ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸುವ ಮಹಿಳೆಯರಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡವನ್ನು ಹೆಚ್ಚಿಸುವ ಪರವಾಗಿ ಶಾಸಕರು ಮತ ಹಾಕಿದ್ದಾರೆ. ಇದನ್ನೂ ಓದಿ: 4 ಕೋಟಿ ಮೊತ್ತದ ಲ್ಯಾಂಬೊರ್ಗೀನಿ ಕಾರು ಖರೀದಿಸಿದ ಶ್ರದ್ಧಾ ಕಪೂರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಷರತ್ತು ಪಾಲಿಸಿದ್ರೆ ಒತ್ತೆಯಾಳುಗಳ ಬಿಡುಗಡೆ – ಇಸ್ರೇಲ್‌ ಜೊತೆ ಸಂಧಾನಕ್ಕೆ ಮುಂದಾದ ಇರಾನ್‌

    ಷರತ್ತು ಪಾಲಿಸಿದ್ರೆ ಒತ್ತೆಯಾಳುಗಳ ಬಿಡುಗಡೆ – ಇಸ್ರೇಲ್‌ ಜೊತೆ ಸಂಧಾನಕ್ಕೆ ಮುಂದಾದ ಇರಾನ್‌

    ಟೆಹರಾನ್‌: ಇಸ್ರೇಲ್-ಹಮಾಸ್‌ (Israel – Hamas) ಯುದ್ಧ 10ನೇ ದಿನಕ್ಕೆ ಕಾಲಿಟ್ಟ ಬೆನ್ನಲ್ಲೇ ಇರಾನ್‌ (Iran) ಈಗ ಷರತ್ತು ವಿಧಿಸಿ ಸಂಧಾನ ಮಾಡಲು ಮುಂದಾಗಿದೆ.

    ಗಾಜಾಪಟ್ಟಿ (Gaza Strip) ಮೇಲೆ ಇಸ್ರೇಲ್‌ ನಡೆಸುತ್ತಿರುವ ಏರ್‌ಸ್ಟ್ರೈಕ್‌ (Air Strike) ನಿಲ್ಲಿಸಿದರೆ ಇಸ್ರೇಲ್‌ ಒತ್ತೆಯಾಳುಗಳನ್ನು (Hostages) ಬಿಡುಗಡೆ ಮಾಡಲು ಪ್ರಯತ್ನ ನಡೆಸಲಾಗುವುದು ಎಂದು ಹೇಳಿದೆ.

     

    ಟೆಹರಾನ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ, ಗಾಜಾಪಟ್ಟಿ ಮೇಲೆ ಇಸ್ರೇಲ್ ತನ್ನ ವೈಮಾನಿಕ ದಾಳಿ ನಿಲ್ಲಿಸಿದರೆ ಹಮಾಸ್ ಒತ್ತೆಯಾಳಾಗಿ ಇಟ್ಟುಕೊಂಡಿರುವ ಇಸ್ರೇಲ್‌ ಪ್ರಜೆಗಳನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಎಂದು ಹೇಳಿದ್ದಾರೆ.  ಇದನ್ನೂ ಓದಿ: 199 ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳಾಗಿಟ್ಟುಕೊಂಡ ಹಮಾಸ್

    ಹಮಾಸ್‌ ಉಗ್ರರಿಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಇರಾನ್‌ ಹೇಳುತ್ತಾ ಬಂದಿದೆ. ಆದರೆ ಹಮಾಸ್‌ ಉಗ್ರರಿಗೆ ಶಸ್ತ್ರಾಸ್ತ್ರವನ್ನು ಇರಾನ್‌ ನೀಡಿದೆ ಎಂದು ಇಸ್ರೇಲ್‌ ನೇರವಾಗಿ ಹೇಳುತ್ತಾ ಬಂದಿದೆ.

    ತನ್ನ ಮೇಲೆ 5000 ರಾಕೆಟ್‌ ಉಡಾವಣೆ ಮಾಡಿದ ಬೆನ್ನಲ್ಲೇ ಇಸ್ರೇಲ್‌ ಹಮಾಸ್‌ ಉಗ್ರರನ್ನು ಸಂಪೂರ್ಣ ನಾಶ ಮಾಡಲು ಪಣತೊಟ್ಟಿದೆ. ಗಾಜಾ ಪಟ್ಟಿಯ ಮೇಲೆ ಬಾಂಬ್‌ ದಾಳಿ ನಡೆಸಿ ಉಗ್ರರ ಸಂಹಾರ ಮಾಡುತ್ತಿದೆ. ಯುದ್ಧವನ್ನು ಹಮಾಸ್‌ ಆರಂಭಿಸಿದರೂ ಈ ಯುದ್ಧವನ್ನು ನಾವೇ ನಿಲ್ಲಿಸುತ್ತೇವೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಘೋಷಿಸಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಬಡ್ಡಿಯಲ್ಲಿ ಪಾಯಿಂಟ್‌ಗಾಗಿ ಕಿತ್ತಾಟ, 1 ಗಂಟೆ ಆಟ ಸ್ಥಗಿತ – ಕೊನೆಗೂ ಚಿನ್ನ ಗೆದ್ದ ಭಾರತ

    ಕಬಡ್ಡಿಯಲ್ಲಿ ಪಾಯಿಂಟ್‌ಗಾಗಿ ಕಿತ್ತಾಟ, 1 ಗಂಟೆ ಆಟ ಸ್ಥಗಿತ – ಕೊನೆಗೂ ಚಿನ್ನ ಗೆದ್ದ ಭಾರತ

    ಹ್ಯಾಂಗ್‌ಝೋ: ಹಲವು ನಾಟಕೀಯ ಬೆಳವಣಿಗೆಗಳಿಗೆ ಕಾರಣವಾಗಿದ್ದ ಏಷ್ಯನ್‌ ಗೇಮ್ಸ್‌ (Asian Games 2023) ಕಬಡ್ಡಿ ಫೈನಲ್‌ನಲ್ಲಿ (Kabaddi Final) ಇರಾನ್‌ (Iran) ತಂಡವನ್ನು29 -33 ಅಂಕಗಳಿಂದ ಸೋಲಿಸಿ ಭಾರತ ಚಿನ್ನದ ಪದಕವನ್ನು (Gold Medal) ಗೆದ್ದುಕೊಂಡಿದೆ.

    ಈ ಮೂಲಕ ಈ ಕ್ರೀಡಾಕೂಟದ ಮಹಿಳೆಯರ ಮತ್ತು ಪುರುಷರ ಎರಡೂ ಕಬಡ್ಡಿಯಲ್ಲಿ ಭಾರತ (India) ಚಾಂಪಿಯನ್‌ ಪಟ್ಟ ಅಲಂಕರಿಸಿದೆ. ಇದನ್ನೂ ಓದಿ: Asian Games 2023: ಚಿನ್ನದ ಮಳೆ – ಚೊಚ್ಚಲ ಚಾಂಪಿಯನ್‌ ಕಿರೀಟ ಧರಿಸಿದ ಭಾರತ

    https://twitter.com/TheCrickFun/status/1710574840963600783

    ಆಗಿದ್ದೇನು?
    ಎರಡು ತಂಡಗಳು 28 ಅಂಕಗಳಿಸಿದ್ದಾಗ ಭಾರತದ ಪವನ್‌ ಶೆರಾವತ್‌ (Pawan Sehrawat) ರೈಡ್ ಮಾಡುತ್ತಿದ್ದರು. ಡು-ಆರ್‌-ಡೈ ರೈಡ್‌ ವೇಳೆ ಇರಾನ್‌ ಆಟಗಾರನ್ನು ಟಚ್‌ ಮಾಡಲು ಪ್ರಯತ್ನಿಸಿ ವಿಫಲರಾಗಿ ಲಾಬಿ ಗೆರೆಯನ್ನು ಟಚ್‌ ಮಾಡಿದರು. ಈ ವೇಳೆ ಇರಾನಿನ 4 ಆಟಗಾರರು ಲಾಬಿಯಲ್ಲಿ ಪವನ್‌ ಅವರನ್ನು ಹಿಡಿದರು.

    ಪವನ್‌ ಔಟಾದ ಬೆನ್ನಲ್ಲೇ ಇರಾನ್‌ ತಂಡಕ್ಕೆ 1 ಅಂಕವನ್ನು ನೀಡಲಾಯಿತು. ಈ ತೀರ್ಪು ಬಂದ ಕೂಡಲೇ ಭಾರತದ ತಂಡ ಆಟಗಾರರು, ಕೋಚ್‌ ಅಂಪೈರ್‌ ಜೊತೆ ಅಂಕ ನೀಡುವುಂತೆ ಚರ್ಚೆ ನಡೆಸಿದರು.

    ನಂತರ ರಿವ್ಯೂ ನೋಡಿದಾಗ ಪವನ್‌ ಇರಾನ್‌ ಆಟಗಾರರನ್ನು ಟಚ್‌ ಮಾಡದೇ ಇರುವ ವಿಷಯ ದೃಢಪಟ್ಟಿತ್ತು. ರಿವ್ಯೂ ನಂತರ ಭಾರತ ತಂಡಕ್ಕೆ 4 ಅಂಕಗಳನ್ನು ನೀಡಲಾಯಿತು. ಭಾರತಕ್ಕೆ 4 ಅಂಕ ನೀಡಿದ್ದಕ್ಕೆ ಇರಾನ್‌ ತಂಡ ಭಾರೀ ವಿರೋಧ ವ್ಯಕ್ತಪಡಿಸಿತು. ಎರಡು ತಂಡಗಳು ಅಂಕದ ವಿಷಯದ ಬಗ್ಗೆ ವಾದ ಮುಂದುವರಿಸುತ್ತಿದ್ದಂತೆ ಪಂದ್ಯವನ್ನೇ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

    ನಿಮಯ ಏನು ಹೇಳುತ್ತೆ?
    ರೈಡರ್‌ ಎದುರಾಳಿ ಆಟಗಾರನನ್ನು ಟಚ್‌ ಮಾಡದೇ ಲಾಬಿಯನ್ನು ಟಚ್‌ ಮಾಡಿದಾಗ ಎದುರಾಳಿ ಆಟಗಾರರು ರೈಡರ್‌ ಅನ್ನು ಹಿಡಿದರೆ ಆಗ ಆ ಎಲ್ಲಾ ಡಿಫೆಂಡರ್‌ಗಳು ಔಟ್‌ ಎಂದು ಅಂತಾರಾಷ್ಟ್ರೀಯ ಕಬಡ್ಡಿಯ ನಿಯಮ ಹೇಳುತ್ತದೆ. ಆದರೆ ಭಾರತದಲ್ಲಿ ನಡೆಯುವ ಪ್ರೊ ಕಬಡ್ಡಿಯಲ್ಲಿ ಈ ನಿಯಮವನ್ನು ಬದಲಾಯಿಸಲಾಯಿಸಲಾಗಿದ್ದು, ಸಂದರ್ಭದಲ್ಲಿ ರೈಡರ್‌ ಮಾತ್ರ ಔಟ್‌ ಎಂದು ಘೋಷಿಸಲಾಗುತ್ತದೆ.

    ಅಂತಾರಾಷ್ಟ್ರೀಯ ಕಬಡ್ಡಿ ನಿಯಮದ ಪ್ರಕಾರ 4 ಮಂದಿಯೂ ಔಟ್‌ ಎಂದು ಭಾರತ ವಾದಿಸಿತ್ತು. ಕೊನೆಗೆ ಯಾವ ತಂಡಕ್ಕೆ ಅಂಕ ನೀಡಬೇಕೆಂದು ಎಂದು ನಿರ್ಧಾರ ತೆಗೆದುಕೊಳ್ಳಲು ಸುಮಾರು ಒಂದು ಗಂಟೆ ಕಾಲ ಆಟವನ್ನು ಸ್ಥಗಿತಗೊಳಿಸಲಾಗಿತ್ತು. ಅಂತಿಮವಾಗಿ ವಿಡಿಯೋ ರಿಪ್ಲೈ ನೋಡಿ ರೆಫ್ರಿಗಳು ಚರ್ಚೆ ಮಾಡಿ ಭಾರತಕ್ಕೆ 4 ಅಂಕ ನೀಡಿದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಜಬ್‌ ಧರಿಸದೇ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಇರಾನಿನ ಚೆಸ್‌ ಆಟಗಾರ್ತಿಗೆ ದೇಶದ ಪೌರತ್ವ ಕೊಟ್ಟ ಸ್ಪೇನ್‌

    ಹಿಜಬ್‌ ಧರಿಸದೇ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಇರಾನಿನ ಚೆಸ್‌ ಆಟಗಾರ್ತಿಗೆ ದೇಶದ ಪೌರತ್ವ ಕೊಟ್ಟ ಸ್ಪೇನ್‌

    ಮ್ಯಾಡ್ರಿಡ್: ಪ್ರಸ್ತಕ ವರ್ಷದ ಜನವರಿಯಲ್ಲಿ ಹಿಜಬ್‌ (Hijab) ಧರಿಸದೇ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಇರಾನಿನ ಚೆಸ್‌ ಆಟಗಾರ್ತಿಗೆ ಸ್ಪೇನ್‌ ತನ್ನ ದೇಶದ ಪೌರತ್ವ (Spain Citizenship) ನೀಡಿರುವುದಾಗಿ ತಿಳಿಸಿದೆ.

    ಚೆಸ್‌ ಸ್ಪರ್ಧೆಗಾಗಿ ಸ್ಪೇನ್‌ಗೆ ತೆರಳಿದ್ದ ಚೆಸ್‌ ಆಟಗಾರ್ತಿ (Chess Player) ಸರಸಾದತ್ ಖಡೆಮಲ್ಶರೀಹ್ (Sarasadat Khademalsharieh) ಹಿಜಬ್‌ ಧರಿಸದೇ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಈ ಬೆಳವಣಿಗೆ ಕಂಡುಬಂದ ನಂತರ ಇರಾನ್‌ (Iran) ಆಕೆಯ ಬಂಧನಕ್ಕೆ ವಾರಂಟ್‌ ಜಾರಿಗೊಳಿಸಿತ್ತು. ಆ ನಂತರ ಸ್ಪೇನ್‌ ತನ್ನ ದೇಶದ ಪೌರತ್ವ ನೀಡಿರುವುದಾಗಿ ಬುಧವಾರ ಘೋಷಣೆ ಮಾಡಿದೆ. ಇದನ್ನೂ ಓದಿ: ಸ್ನ್ಯಾಪ್‌ಚಾಟ್‌ ಮೂಲಕ ಯುವಕನೊಂದಿಗೆ ಪ್ರೀತಿ – ದೇಶ ಬಿಟ್ಟು ಪಾಕಿಸ್ತಾನಕ್ಕೆ ಬಂದ ಚೀನಾ ಯುವತಿ

    ಸರಸಾದತ್ ಖಡೆಮಲ್ಶರೀಹ್ 2022ರ ಡಿಸೆಂಬರ್‌ ಅಂತ್ಯದಲ್ಲಿ ಕಜಕಿಸ್ತಾನ್‌ನಲ್ಲಿ ನಡೆದ ಎಫ್‌ಐಡಿಇ ವರ್ಲ್ಡ್‌ ರ‍್ಯಾಪಿಡ್‌ ಮತ್ತು ಬ್ಲಿಟ್ಜ್‌ ಚೆಸ್‌ ಚಾಂಪಿಯನ್‌ ಶಿಪ್‌ (Chess Championships) ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಇರಾನ್‌ನ ಇಸ್ಲಾಮಿಕ್‌ ಕಾನೂನಿನ ಅನ್ವಯ ಕಡ್ಡಾಯವಾಗಿ ಹಿಜಬ್‌ ಧರಿಸಬೇಕಿತ್ತು. ಆದ್ರೆ ಹಿಜಬ್‌ ಧರಿಸದೇ ಖಡೆಮಲ್ಶರೀಹ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಹಿಜಬ್ ಧರಿಸದ ಮಹಿಳೆಯರನ್ನು ಗುರುತಿಸಿ ದಂಡ ವಿಧಿಸಲು ಇರಾನ್‌ನಲ್ಲಿ ಸಿಸಿಟಿವಿ ಅಳವಡಿಕೆ

    ಈ ಹಿನ್ನೆಲೆಯಲ್ಲಿ ಸರಸಾದತ್ ಖಡೆಮಲ್ಶರೀಹ್ ಬಂಧನಕ್ಕೆ ವಾರಂಟ್‌ ಜಾರಿಗೊಳಿಸಲಾಗಿತ್ತು. ಇದನ್ನ ವಿಶೇಷ ಸಂದರ್ಭವಾಗಿ ಪರಿಗಣನೆಗೆ ತೆಗೆದುಕೊಂಡ ಸ್ಪೇನ್‌ ಸರ್ಕಾರ ಕ್ಯಾಬಿನೆಟ್‌ನಲ್ಲಿ ಅನುಮೋದನೆ ನೀಡಿದ್ದು, ಚೆಸ್‌ ಆಟಗಾರ್ತಿಗೆ ತನ್ನ ದೇಶದ ಪೌರತ್ವ ನೀಡಿರುವುದಾಗಿ ಹೇಳಿದೆ.

    ಹಿನ್ನೆಲೆ ಏನು?
    ಕಳೆದ ವರ್ಷ ಸೆಪ್ಟೆಂಬರ್ 16 ರಂದು, 22 ವಯಸ್ಸಿನ ಮಹ್ಸಾ ಅಮಿನಿ ಹಿಜಬ್ ಧರಿಸದೇ ಇದ್ದಿದ್ದಕ್ಕೆ ಟೆಹ್ರಾನ್‍ನಲ್ಲಿ ಬಂಧನಕ್ಕೊಳಗಾಗಿ ನೈತಿಕ ಪೊಲೀಸ್‍ಗಿರಿಗೆ ಬಲಿಯಾಗಿದ್ದರು. ನಂತರ ಇರಾನ್‍ನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಯಿತು. ಮಹಿಳೆಯರು ಹಿಜಬ್ ಸುಟ್ಟು, ತಲೆಗೂದಲು ಕತ್ತರಿಸಿ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಜಬ್ ಧರಿಸದ ಮಹಿಳೆಯರನ್ನು ಗುರುತಿಸಿ ದಂಡ ವಿಧಿಸಲು ಇರಾನ್‌ನಲ್ಲಿ ಸಿಸಿಟಿವಿ ಅಳವಡಿಕೆ

    ಹಿಜಬ್ ಧರಿಸದ ಮಹಿಳೆಯರನ್ನು ಗುರುತಿಸಿ ದಂಡ ವಿಧಿಸಲು ಇರಾನ್‌ನಲ್ಲಿ ಸಿಸಿಟಿವಿ ಅಳವಡಿಕೆ

    ಟೆಹ್ರಾನ್: ಇರಾನ್‌ನಲ್ಲಿ (Iran) ಮಹಿಳೆಯರಿಗೆ (Women) ಕಡ್ಡಾಯ ಮಾಡಲಾಗಿರುವ ಡ್ರೆಸ್ ಕೋಡ್ (Dress Code) ಅನ್ನು ಧಿಕ್ಕರಿಸುತ್ತಿರುವವರ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಿದೆ. ಮಹಿಳೆಯರು ನಿಯಮವನ್ನು ಉಲ್ಲಂಘಿಸುವುದನ್ನು ತಡೆಯಲು ಇದೀಗ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿಗಳನ್ನು (CCTV) ಅಳವಡಿಸಿ, ಹಿಜಬ್ (Hijab) ಧರಿಸದ ಮಹಿಳೆಯರನ್ನು ಗುರುತಿಸಿ, ಬಳಿಕ ದಂಡ ವಿಧಿಸಲಾಗುತ್ತಿದೆ.

    ಇರಾನ್‌ನಲ್ಲಿ ಈ ಕ್ರಮವನ್ನು ಹಿಜಬ್ ಕಾನೂನಿನ ವಿರುದ್ಧ ಪ್ರತಿರೋಧವನ್ನು ತಡೆಗಟ್ಟುವ ಸಲುವಾಗಿ ಕೈಗೊಳ್ಳಲಾಗುತ್ತಿದೆ. ಹಿಜಬ್ ಧರಿಸದೇ ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿದರೆ ಅಂತಹವರಿಗೆ ಅಧಿಕಾರಿಗಳು ದಂಡ ವಿಧಿಸುವುದರೊಂದಿಗೆ ಮುಂದೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡುತ್ತಿದ್ದಾರೆ ಎನ್ನಲಾಗಿದೆ.

     

    ಹಿಜಬ್‌ಗೆ ಸಂಬಂಧಿಸಿದಂತೆ ಕಳೆದ ಹಲವು ತಿಂಗಳುಗಳಿಂದ ಇರಾನ್‌ನಲ್ಲಿ ವಿವಾದಗಳು ಏಳುತ್ತಲೇ ಇದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ 22 ವರ್ಷದ ಯುವತಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ನಿಯಮವನ್ನು ಉಲ್ಲಂಘಿಸಿ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಹಿಜಬ್ ಅನ್ನು ಸರಿಯಾಗಿ ಧರಿಸದೇ ಇದ್ದುದಕ್ಕೆ ಯುವತಿ ಮಹ್ಸಾ ಅಮಿನಿಯನ್ನು ಪೊಲೀಸರು ಬಂಧಿಸಿದ್ದರು. ಆಕೆ ಪೊಲೀಸ್ ಕಸ್ಟಡಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಬಳಿಕ ಇರಾನ್‌ನಾದ್ಯಂತ ಭಾರೀ ಹಿಂಸಾಚಾರ ನಡೆದಿದೆ. ಇದನ್ನೂ ಓದಿ: ಬಂಡೀಪುರದಲ್ಲಿ ಮೋದಿ ಸಫಾರಿ – ಪ್ರಕೃತಿ ಸೌಂದರ್ಯ ಸವಿದ ಪ್ರಧಾನಿ

    ಇರಾನ್‌ನಲ್ಲಿ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸುವುದರಿಂದ ಬಂಧನದ ಸಾಧ್ಯತೆಗಳಿದ್ದರೂ ದೇಶಾದ್ಯಂತ ಮಾಲ್, ರೆಸ್ಟೊರೆಂಟ್, ಅಂಗಡಿ, ಬೀದಿಗಳಲ್ಲಿ ಹಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಿಜಬ್ ಧರಿಸದೇ ಓಡಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೀಗೆ ಡ್ರೆಸ್ ಕೋಡ್‌ಗಳನ್ನು ಉಲ್ಲಂಘಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಮಹಿಳೆಯರ ನೈತಿಕ ಪೊಲೀಸ್‌ಗಿರಿಯನ್ನು ವಿರೋಧಿಸುವ ವೀಡಿಯೋಗಳು ಕೂಡಾ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಿವೆ.

    ಇದರೊಂದಿಗೆ ಹೆಣ್ಣುಮಕ್ಕಳ ವಿದ್ಯಾಭ್ಯಾಸವನ್ನು ಮೊಟಕುಗೊಳಿಸುವ ಸಲುವಾಗಿ ಅವರಿಗೆ ವಿಷಪ್ರಾಶನ ಮಾಡಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಕಳೆದ ವರ್ಷ ಸೆಪ್ಟೆಂಬರ್ ಬಳಿಕ ದೇಶಾದ್ಯಂತ ಸಾವಿರಾರು ವಿದ್ಯಾರ್ಥಿನಿಯರು ವಿಷ ಸೇವಿಸಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.  ಇದನ್ನೂ ಓದಿ: ರಾಹುಲ್‌ಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸ್ತೀನಿ – ಬೆದರಿಕೆ ಹಾಕಿದ ಕಾಂಗ್ರೆಸ್ ನಾಯಕನ ವಿರುದ್ಧ ಪ್ರಕರಣ ದಾಖಲು

  • ಹಿಜಬ್ ಧರಿಸಿಲ್ಲ ಅಂತ ಮಹಿಳೆಯರ ತಲೆ ಮೇಲೆ ಮೊಸರು ಸುರಿದು ಹಲ್ಲೆ

    ಹಿಜಬ್ ಧರಿಸಿಲ್ಲ ಅಂತ ಮಹಿಳೆಯರ ತಲೆ ಮೇಲೆ ಮೊಸರು ಸುರಿದು ಹಲ್ಲೆ

    ಟೆಹ್ರಾನ್: ಮಹಿಳೆಯರಿಬ್ಬರು (Women) ಸಾರ್ವಜನಿಕ ಸ್ಥಳದಲ್ಲಿ ಹಿಜಬ್ (Hijab) ಧರಿಸದ್ದಕ್ಕೆ ಮೊಸರು ಸುರಿದು (Yoghurt) ಹಲ್ಲೆ ನಡೆಸಿದ ಘಟನೆ ಇರಾನಿನಲ್ಲಿ (Iran) ನಡೆದಿದೆ.

    ಇರಾನಿನ ಅಂಗಡಿಯೊಂದರಲ್ಲಿ ಈ ಘಟನೆ ನಡೆದಿದೆ. ಘಟನೆಯ ಸಂಪೂರ್ಣ ವೀಡಿಯೋ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೀಡಿಯೋವು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ವೀಡಿಯೋದಲ್ಲಿ ಏನಿದೆ?: ಇಬ್ಬರು ಮಹಿಳೆಯರು ಅಂಗಡಿಯೊಂದಕ್ಕೆ ಹಿಜಬ್ ಧರಿಸದೇ ಬಂದಿದ್ದಾರೆ. ಅದೇ ಸಂದರ್ಭದಲ್ಲಿ ಬಂದ ವ್ಯಕ್ತಿಯೊಬ್ಬ ಆ ಇಬ್ಬರು ಮಹಿಳೆಯರ ಮೇಲೆ ಕೂಗಾಡಿದ್ದಾನೆ. ನಂತರ ಆತ ಹತ್ತಿರ ಕಪಾಟಿನಲ್ಲಿದ್ದ ಮೊಸರಿನ ಪ್ಯಾಕೆಟ್‍ನ್ನು ತೆಗೆದುಕೊಂಡು ಕೋಪದಿಂದ ಇಬ್ಬರು ಮಹಿಳೆಯರ ತಲೆ ಮೇಲೆ ಎಸೆದಿದ್ದಾನೆ. ನಂತರ ಅಂಗಡಿಯಿಂದ ಹೊರಗೆ ಓಡಿ ಹೋಗಿದ್ದಾನೆ.

    ಘಟನೆಯ ನಂತರ ಇರಾನ್ ಪೊಲೀಸರು ಹಿಜಬ್ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ. ಜೊತೆಗೆ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದಿದ್ದಕ್ಕೆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕಾನೂನಿನ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಅಂಗಡಿಯ ಮಾಲೀಕರಿಗೆ ನೋಟೀಸ್ ನೀಡಲಾಗಿದೆ.

    ಇರಾನ್‍ನಲ್ಲಿ ಮಹಿಳೆಯರೂ ಹಿಜಬ್ ಧರಿಸುವುದು ಕಡ್ಡಾಯವಾಗಿದ್ದು, 7 ವರ್ಷದ ಹುಡುಗಿಯಿಂದ ಹಿಡಿದು ಪ್ರತಿಯೊಬ್ಬ ಮಹಿಳೆಯು ಹಿಜಬ್ ಧರಿಸಬೇಕು ಎಂದು ಕಾನೂನು ಇದೆ. ಆದರೆ ಕಳೆದ ವರ್ಷದಿಂದ ಹಲವೆಡೆ ಹಿಜಬ್ ವಿರೋಧಿಸಿ ಇರಾನ್‍ನ ನಾನಾ ಪ್ರದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಕ್ಕೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್

    ಹಿಜಬ್ ವಿರೋಧಿ ಹೋರಾಟ?: ಕಳೆದ ವರ್ಷ ಮಹ್ಸಾ ಅಮಿನಿ ಎಂಬ ಯುವತಿಯನ್ನು ಹಿಜಬ್ ಧರಿಸಿಲ್ಲ ಎಂಬ ಕಾರಣಕ್ಕೆ ಬಂಧಿಸಲಾಗಿತ್ತು. ನೈತಿಕ ಪೊಲೀಸ್‍ಗಿರಿಗೆ ಆಕೆ ಬಲಿಯಾಗಿದ್ದಳು. ಸಾವಿನ ಸುದ್ದಿ ಬಹಿರಂಗವಾಗುತ್ತಿದ್ದಂತೆ ಇರಾನ್‍ನಲ್ಲಿ ಸಾವಿರಾರು ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ್ದರು. ಯುವತಿ ಸಾವಿನ ಬಳಿಕ ಇರಾನ್‍ನಲ್ಲಿ ಹಿಜಬ್ ವಿರೋಧಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಸುಮಾರು 14,000 ಮಂದಿಯನ್ನು ಆಗ ಬಂಧಿಸಲಾಗಿತ್ತು. ಅವರಲ್ಲಿ ಸಾವಿರಾರು ಪುರುಷರು, ಮಹಿಳೆಯರು, ಮಕ್ಕಳೂ ಸೇರಿದ್ದರು. ಮಾತ್ರವಲ್ಲದೇ ಹಿಜಬ್ ವಿರೋಧಿ ಪ್ರತಿಭಟನೆಯನ್ನು ಬೆಂಬಲಿಸಿ ಹಲವರು ಮಹಿಳೆಯರು ತಮ್ಮ ಕೂದಲನ್ನು ಕತ್ತರಿಸಿಕೊಂಡು, ನಡುರಸ್ತೆಯಲ್ಲೇ ಹಿಜಬ್ ಸುಟ್ಟು ಆಕ್ರೋಶ ಹೊರಹಾಕಿದ್ದರು. ಇದನ್ನೂ ಓದಿ:  ಬೆಂಗಳೂರಿನಲ್ಲಿ ಬೈಕ್‌ಗೆ ಲಾರಿ ಡಿಕ್ಕಿ- ಮಹಿಳೆ ಸಾವು