Tag: iran

  • 162 ರಾಷ್ಟ್ರ, ಪ್ರಾಂತ್ಯಗಳಿಗೆ ಹರಡಿದ ಮಹಾಮಾರಿ ಕೊರೊನಾ – ಭಾರತದಲ್ಲಿ 114 ಮಂದಿಗೆ ಸೋಂಕು

    162 ರಾಷ್ಟ್ರ, ಪ್ರಾಂತ್ಯಗಳಿಗೆ ಹರಡಿದ ಮಹಾಮಾರಿ ಕೊರೊನಾ – ಭಾರತದಲ್ಲಿ 114 ಮಂದಿಗೆ ಸೋಂಕು

    ನವದೆಹಲಿ: ವಿಶ್ವದಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್‍ಗೆ 162 ರಾಷ್ಟ್ರ ಹಾಗೂ ಪ್ರಾಂತ್ಯಗಳು ತುತ್ತಾಗಿವೆ. ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ಈಗ ವಿಶ್ವದೆಲ್ಲೆಡೆ ಹರುಡುತ್ತಿದ್ದು ತನ್ನ ಕರಾಳತೆಯನ್ನು ಪ್ರದರ್ಶಿಸುತ್ತಿದೆ. ಈವರೆಗೆ ಸೋಂಕಿಗೆ 7,171 ಮಂದಿ ಬಲಿಯಾಗಿದ್ದಾರೆ.

    ಒಟ್ಟು 162 ರಾಷ್ಟ್ರ ಹಾಗೂ ಪ್ರಾಂತ್ಯಗಳಲ್ಲಿ ಕೊರೊನಾ ವೈರಸ್ ಹರಡಿದ್ದು, ಈವರೆಗೆ ಸುಮಾರು 1,82,605 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಅಲ್ಲದೇ ಚೀನಾದಲ್ಲಿ 3,226 ಮಂದಿ ಸೇರಿದಂತೆ ವಿಶ್ವದೆಲ್ಲೆಡೆ ಒಟ್ಟು 7,171 ಮಂದಿ ಕೊರೊನಾ ಸೋಂಕು ತಗುಲಿ ಜೀವ ಕಳೆದುಕೊಂಡಿದ್ದಾರೆ. ಸುಮಾರು 79,881 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಸ್ತುತ 95,546 ಮಂದಿ ಸೋಂಕಿನಿಂದ ಬಳಲುತ್ತಿದ್ದು, ಅವರಲ್ಲಿ 6,163 ಮಂದಿ ಸ್ಥಿತಿ ಚಿಂತಾಜನಕವಾಗಿದೆ.

    ಭಾರತಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್‍ಗೆ ಈವರೆಗೆ 129 ಮಂದಿ ತುತ್ತಾಗಿದ್ದು, 13 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 114 ಮಂದಿ ಕೊರೊನಾದಿಂದ ಬಳಳುತ್ತಿದ್ದಾರೆ. ಈಗಾಗಲೇ ಕೊರೊನಾಗೆ ಕರ್ನಾಟಕದ ಕಲಬುರ್ಗಿಯ ವೃದ್ಧರೊಬ್ಬರು ಹಾಗೂ ದೆಹಲಿಯ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಕರ್ನಾಟದಲ್ಲಿ ಒಟ್ಟು 10 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು 39 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ.

    ಚೀನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ, ಸ್ಪೇನ್, ಫ್ರಾನ್ಸ್, ಜರ್ಮನಿ, ಅಮೆರಿಕದಲ್ಲಿ ಕೊರೊನಾ ವ್ಯಾಪಕವಾಗಿ ಹರಡಿದೆ. ಈ ರಾಷ್ಟ್ರಗಳಲ್ಲಿ ಸೋಂಕಿತರ ಸಂಖ್ಯೆ ಸಾವಿರ ಗಡಿಯನ್ನು ದಾಟಿದೆ.

    1. ಚೀನಾ – ಈವರೆಗೆ ಕೊರೊನಾ ಸೋಂಕಿಗೆ 80,881 ಮಂದಿ ತುತ್ತಾಗಿದ್ದಾರೆ. ಅವರಲ್ಲಿ 68,688 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,226 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 8,967 ಮಂದಿ ಕೊರೊನಾದಿಂದ ಬಳಲುತ್ತಿದ್ದು, 3,226 ರೋಗಿಗಳ ಸ್ಥಿತಿ ಗಂಭಿರವಾಗಿದೆ.

    2. ಇಟಲಿ – ಸೋಂಕಿಗೆ ಈವರೆಗೆ ಇಟಲಿಯಲ್ಲಿ ಸುಮಾರು 27,980 ಮಂದಿ ತುತ್ತಾಗಿದ್ದು, ಅವರಲ್ಲಿ 2,749 ಮಂದಿ ಚೇತರಿಸಿಕೊಂಡಿದ್ದಾರೆ. 2158 ಮಂದಿ ಮೃತಪಟ್ಟಿದ್ದು, ಪ್ರಸ್ತುತ 23,073 ಮಂದಿ ಕೊರೊನಾದಿಂದ ಬಳಲುತ್ತಿದ್ದರೆ, 1,851 ರೋಗಿಗಳ ಸ್ಥಿತಿ ಚಿಂತಾಜನಕವಾಗಿದೆ.

    3. ಇರಾನ್ – 14,991 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಅವರಲ್ಲಿ 4,996 ಮಂದಿ ಸೊಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 9,142 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದು, 853 ಸೋಂಕಿತರು ಸಾವನ್ನಪ್ಪಿದ್ದಾರೆ.

    4. ಸ್ಪೇನ್ – 9,942 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರಲ್ಲಿ 530 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 9,070 ರೋಗಿಗಳು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, 342 ಮಂದಿ ಬಲಿಯಾಗಿದ್ದಾರೆ.

    5. ದಕ್ಷಿಣ ಕೊರಿಯಾ – 8,320 ಮಂದಿಗೆ ಸೋಂಕು ತಗುಲಿತ್ತು. ಆದರೆ ಅವರಲ್ಲಿ 1,401 ರೋಗಿಗಳು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. 81 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಪ್ರಸ್ತುತ 6,838 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

    6. ಜರ್ಮನಿ – 7,272 ಮಂದಿಯಲ್ಲಿ ಕಾಣಿಕೊಂಡ ಕೊರೊನಾ ಸೋಂಕಿನಿಂದ 67 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸದ್ಯ 17 ಮಂದಿ ಬಲಿಯಾಗಿದ್ದು, ಪ್ರಸ್ತುತ 7,188 ರೋಗಿಗಳು ಕೊರೊನಾದಿಂದ ನರಳುತ್ತಿದ್ದಾರೆ.

    7. ಫ್ರಾನ್ಸ್ – 6,633 ಮಂದಿ ಕೊರೊನಾಗೆ ತುತ್ತಾಗಿದ್ದರು. ಅವರಲ್ಲಿ 12 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 6,473 ಮಂದಿ ಸೋಂಕಿನಿಂದ ಬಳಲುತ್ತಿದ್ದು, 148 ಮಂದಿ ಜೀವ ಕಳೆದುಕೊಂಡಿದ್ದಾರೆ.

    8. ಅಮೆರಿಕ – ಯುಎಸ್‍ಎನಲ್ಲಿ ಕೊರೊನಾಗೆ 91 ಮಂದಿ ಬಲಿಯಾಗಿದ್ದಾರೆ. 4,704 ಮಂದಿಯಲ್ಲಿ ಕಾಣಿಸಿಕೊಂಡ ಸೋಂಕಿನಿಂದ 74 ಮಂದಿ ಗುಣಮುಖರಾಗಿದ್ದಾರೆ. ಸದ್ಯ 4,539 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದಾರೆ.

    9. ಪಾಕಿಸ್ತಾನ – ಭಾರತದ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿಯೂ ಕೊರೊನಾ ವೈರಸ್ ಹರಡಿದೆ. ಈವರೆಗೆ 184 ಮಂದಿ ಸೋಂಕಿಗೆ ತುತ್ತಾಗಿದ್ದು, ಇಬ್ಬರು ಚೇತರಿಸಿಕೊಂಡಿದ್ದಾರೆ.

  • ಕೊರೊನಾ ಭೀತಿಗೆ ಇರಾನ್‍ನಿಂದ 53 ಭಾರತೀಯರು ವಾಪಾಸ್ – ದೇಶದಲ್ಲಿ ಸೋಂಕಿತರ ಸಂಖ್ಯೆ 110ಕ್ಕೆ ಏರಿಕೆ

    ಕೊರೊನಾ ಭೀತಿಗೆ ಇರಾನ್‍ನಿಂದ 53 ಭಾರತೀಯರು ವಾಪಾಸ್ – ದೇಶದಲ್ಲಿ ಸೋಂಕಿತರ ಸಂಖ್ಯೆ 110ಕ್ಕೆ ಏರಿಕೆ

    ನವದೆಹಲಿ: ವಿಶ್ವದಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್ ಭೀತಿಗೆ ಇರಾನ್‍ನಲ್ಲಿದ್ದ 53 ಮಂದಿ ಭಾರತೀಯರು ಇಂದು ದೇಶಕ್ಕೆ ವಾಪಸ್ಸಾಗಿದ್ದಾರೆ. ಮುಂಜಾನೆ ರಾಜಸ್ಥಾನದ ಜೈಸಲ್ಮೇರ್ ವಿಮಾನ ನಿಲ್ದಾಣಕ್ಕೆ ಬಂದಿರುವ ಭಾರತೀಯರನ್ನು ಪ್ರಾಥಮಿಕ ಸ್ಕ್ರೀನಿಂಗ್ ತಪಾಸಣೆಗಾಗಿ ಸೇನಾ ಸ್ವಾಸ್ಥ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ.

    ಸದ್ಯ ದೇಶಕ್ಕೆ ಮರಳಿರುವ ಭಾರತೀಯರು ಇರಾನ್‍ನ ಟೆಹ್ರಾನ್ ಹಾಗೂ ಶಿರಾಜ್ ನಗರಗಳಲ್ಲಿ ನೆಲೆಸಿದ್ದವರಾಗಿದ್ದು, ಎಲ್ಲರನ್ನು ಸೋಂಕಿನ ಪ್ರಾಥಮಿಕ ತಪಾಸಣೆಗೆ ವಿಮಾನ ನಿಲ್ದಾಣದಿಂದ ಜೈಸಲ್ಮೇರ್‍ನಲ್ಲಿರುವ ಸೇನಾ ಸ್ವಾಸ್ಥ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಇರಾನ್‍ನಿಂದ ಬಂದವರ ಬ್ಯಾಗ್‍ ಗಳಿಗೆ ವೈರಸ್ ತಗುಲಿದ್ದರೆ ಅವುಗಳು ನಾಶವಾಗಲಿ ಎಂದು ಮುಂಜಾಗ್ರತಾ ಕ್ರಮವಾಗಿ ಔಷಧಿಯನ್ನು ಸಿಂಪಡಿಸಲಾಯಿತು.

    ವಿಶ್ವದಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್‍ಗೆ 127 ರಾಷ್ಟ್ರ ಹಾಗೂ ಪ್ರಾಂತ್ಯಗಳು ತುತ್ತಾಗಿವೆ. ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ಈಗ ವಿಶ್ವದೆಲ್ಲೆಡೆ ಹರುಡುತ್ತಿದ್ದು, ಈವರೆಗೆ 6,516 ಮಂದಿಯನ್ನು ಬಲಿಪಡೆದಿದೆ. ಹೀಗೆ ಎಲ್ಲೆಡೆ ತನ್ನ ಕರಿನೆರಳು ಬೀರುತ್ತಿರುವ ಕೊರೆನಾ ಜನರಲ್ಲಿ ಭಯ ಹುಟ್ಟಿಸಿದೆ.

    ಒಟ್ಟು 127 ರಾಷ್ಟ್ರ ಹಾಗೂ ಪ್ರಾಂತ್ಯಗಳಲ್ಲಿ ಕೊರೊನಾ ವೈರಸ್ ಹರಡಿದ್ದು, ಈವರೆಗೆ ಸುಮಾರು 1,69,577 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಅಲ್ಲದೇ ಚೀನಾದಲ್ಲಿ 3,213 ಮಂದಿ ಸೇರಿದಂತೆ ವಿಶ್ವದೆಲ್ಲೆಡೆ ಒಟ್ಟು 6,516 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸುಮಾರು 77,764 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಸ್ತುತ 79,376 ಮಂದಿ ಸೋಂಕಿನಿಂದ ಬಳಲುತ್ತಿದ್ದು, ಅವರಲ್ಲಿ 5,921 ಮಂದಿ ಸ್ಥಿತಿ ಚಿಂತಾಜನಕವಾಗಿದೆ.

    ಚೀನಾದಲ್ಲಿ ಈವರೆಗೆ ಕೊರೊನಾ ಸೋಂಕಿಗೆ 80,860 ಮಂದಿ ತುತ್ತಾಗಿದ್ದಾರೆ. ಅವರಲ್ಲಿ 67,752 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,213 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 9,895 ಮಂದಿ ಕೊರೊನಾದಿಂದ ಬಳಲುತ್ತಿದ್ದು, 3,226 ರೋಗಿಗಳ ಸ್ಥಿತಿ ಗಂಭಿರವಾಗಿದೆ.

    ಇರಾನ್ 13,938 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅವರಲ್ಲಿ 4,590 ಮಂದಿ ಸೊಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 8,624 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದು, 724 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

    ಇತ್ತ ಕೊರೊನಾ ಪೀಡಿತ ದೇಶಗಳಲ್ಲಿ ಇರುವ ಭಾರತೀಯರನ್ನು ರಾಷ್ಟ್ರಕ್ಕೆ ವಾಪಸ್ ಕರೆತರುವ ಕಾರ್ಯ ಕೂಡ ಭರದಿಂದ ನಡೆಯುತ್ತಿದ್ದು, ಹೀಗೆ ಭಾರತಕ್ಕೆ ಬಂದವರ ಮೇಲೆ ನಿಗಾವಹಿಸಿ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯನ್ನು ಕೂಡ ಘೋಷಿಸಲಾಗಿದೆ. ಭಾರತದಲ್ಲಿ ಈವರೆಗೆ 110ಕ್ಕೆ ಮಂದಿ ತುತ್ತಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾತರೆ.

    ರಾಜ್ಯಾವಾರು ಕೊರೊನಾ ಸೋಂಕಿತರ ಸಂಖ್ಯೆ ಹೀಗಿದೆ:
    ಆಂಧ್ರ ಪ್ರದೇಶ – 01
    ದೆಹಲಿ – 07
    ಹರಿಯಾಣ – 14
    ಕರ್ನಾಟಕ- 07
    ಕೇರಳ- 22
    ಮಹಾರಾಷ್ಟ್ರ – 33
    ಪಂಜಾಬ್ – 01

    ರಾಜಾಸ್ಥಾನ – 04
    ತಮಿಳುನಾಡು – 01
    ತೆಲಂಗಾಣ- 03
    ಜಮ್ಮು-ಕಾಶ್ಮೀರಾ – 02
    ಲಡಕ್ – 03
    ಉತ್ತರ ಪ್ರದೇಶ – 13
    ಉತ್ತರಕಾಂಡ- 01

  • ಕೊರೊನಾ ವೈರಸ್- ಪ್ರಧಾನಿ ಮೋದಿಗೆ ಪತ್ರ ಬರೆದ ಇರಾನ್ ಅಧ್ಯಕ್ಷ

    ಕೊರೊನಾ ವೈರಸ್- ಪ್ರಧಾನಿ ಮೋದಿಗೆ ಪತ್ರ ಬರೆದ ಇರಾನ್ ಅಧ್ಯಕ್ಷ

    ನವದೆಹಲಿ: ಕೊರೊನಾ ವೈರಸ್ ವಿರುದ್ಧ ಹೋರಾಡುವುದರ ಕುರಿತು ಹಾಗೂ ಇತರ ದೇಶಗಳು ಸಹಕಾರ ನೀಡುವ ಕುರಿತು ಇರಾನ್ ಅಧ್ಯಕ್ಷ ಹಸನ್ ರೂಹಾನಿ ಅವರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರೆ ರಾಷ್ಟ್ರಗಳ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.

    ಪತ್ರದಲ್ಲಿ ತಿಳಿಸಿರುವ ಅವರು, ಕೊರೊನಾ ವಿರುದ್ಧ ಹೋರಾಡಲು ಒಗ್ಗಟ್ಟು, ಸಂಘಟಿತ ಪ್ರಾದೇಶಿಕ, ಅಂತರಾಷ್ಟ್ರೀಯ ಕ್ರಮಗಳನ್ನು ಹೆಚ್ಚಿಸುವುದು, ಗಂಭೀರ ಕಾರ್ಯತಂತ್ರ ರೂಪಿಸುವುದು ಸೇರಿದಂತೆ ವೈದ್ಯಕೀಯ ಉಪಕರಣಗಳ ದರ ಹೆಚ್ಚಾಗದಂತೆ ನೋಡಿಕೊಳ್ಳಬೇಕಿದೆ. ಈ ಎಲ್ಲ ಕ್ರಮಗಳನ್ನು ವಹಿಸುವುದು ಅಗತ್ಯವಾಗಿದೆ. ಹೀಗಾಗಿ ಎಲ್ಲ ದೇಶಗಳು ಒಟ್ಟಾಗಿ ಇದನ್ನು ಎದುರಿಸಬೇಕಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

    ಈ ವೈರಸ್‍ಗೆ ಯಾವುದೇ ಗಡಿ ಇಲ್ಲ, ರಾಜಕೀಯ, ಧಾರ್ಮಿಕ, ಜನಾಂಗೀಯ, ಸಾಂಸ್ಕøತಿಕ ಸೇರಿದಂತೆ ಯಾವುದರ ಕುರಿತು ಪರಿಗಣನೆ ಇಲ್ಲ. ಕೊರೊನಾ ವೈರಸ್‍ನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದ್ದು, ಇಂತಹ ರೋಗದ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಬೇಕಾಗಿದೆ ಎಂದು ಉಲ್ಲೇಖಿಸಿದ್ದಾರೆ.

    ಇರಾನ್ ವಿದೇಶಾಂಗ ಸಚಿವ ಜಾವಾದ್ ಜಾರೀಫ್ ಸಹ ಈ ಕುರಿತು ಟ್ವೀಟ್ ಮಾಡಿದ್ದು, ಈ ಸಾಂಕ್ರಾಮಿಕ ರೋಗದ ವಿರುದ್ಧ ಪ್ರಪಂಚ ಹೇಗೆ ಹೋರಾಡುತ್ತಿದೆ ಎಂಬುದು ತಿಳಿದಿದೆ. ಅಮೆರಿಕಾದ ನಿರ್ಬಂಧಗಳು ಇದಕ್ಕೆ ಅಡ್ಡಿಯುಂಟುಮಾಡುತ್ತವೆ. ಹೆದರಿಸುವ ಮೂಲಕ ಅಮಾಯಕರನ್ನು ಕೊಲ್ಲಲು ಅವಕಾಶ ನೀಡುವುದು ಅಮಾನುಷವಾಗಿದೆ. ವೈರಸ್‍ಗಳು ಯಾವುದೇ ರಾಜಕೀಯ ಅಥವಾ ಭೌಗೋಳಿಕತೆಯನ್ನು ಗುರುತಿಸುವುದಿಲ್ಲ, ಇದನ್ನು ನಾವೂ ಮಾಡಬಾರದು ಎಂದು ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.

    ಇರಾನ್ ಮಾಧ್ಯಮಗಳ ವರದಿ ಪ್ರಕಾರ, ಇರಾನ್ ಅಧ್ಯಕ್ಷರು ವಿಶ್ವ ನಾಯಕರಿಗೆ ಬರೆದ ಪತ್ರದಲ್ಲಿ, ಇಸ್ಲಾಮಿಕ್ ಗಣರಾಜ್ಯವು ಎರಡು ವರ್ಷಗಳ ವ್ಯಾಪಕ ಮತ್ತು ಅಕ್ರಮ ನಿರ್ಬಂಧಗಳಿಂದ ಗಂಭೀರ ಅಡೆತಡೆಗಳು ಮತ್ತು ನಿರ್ಬಂಧಗಳನ್ನು ಎದುರಿಸಿದ್ದರೂ, ಅಮೆರಿಕಾ ಕಾನೂನು ಬಾಹಿರವಾಗಿ ಇರಾನ್ ಮೇಲೆ ಒತ್ತಡ ಹೇರುತ್ತಿದೆ. ಇದು ಕೊರೊನಾ ವೈರಸ್ ವ್ಯಾಪಿಸಿದ ನಂತರವೂ ಮುಂದುವರಿದಿದೆ ಎಂದು ಹೇಳಿವೆ.

    ಇರಾನ್‍ನಲ್ಲಿ ಕೊರೊನಾ ವೈರಸ್‍ನಿಂದಾಗಿ 611 ಜನ ಸಾವನ್ನಪ್ಪಿದ್ದು, ಒಟ್ಟು 12,700 ಜನರಲ್ಲಿ ಕೊರೊನಾ ಸೋಂಕಿರುವುದು ಪತ್ತೆಯಾಗಿದೆ. ಹೀಗಾಗಿ ಯುಎಸ್ ಒತ್ತಡದ ಕುರಿತು ಇರಾನ್ ಮೌನ ಮುರಿದಿದ್ದು, ಕೊರೊನಾ ವೈರಸ್ ತಡೆಗೆ ವಿಶ್ವ ನಾಯಕರು ಒಗ್ಗೂಡುವಂತೆ ಕರೆ ನೀಡಿದೆ.

    ಭಾರತ ಇರಾನ್‍ನ ಪ್ರಮುಖ ಪಾಲುದಾರನಾಗಿದ್ದು, ಕಾಶ್ಮೀರ, ಸಿಎಎ ಹಾಗೂ ಇತ್ತೀಚಿನ ದೆಹಲಿ ಗಲಭೆ ಸಂದರ್ಭಗಳಲ್ಲಿ ಭಾರತದ ನಿರ್ಧಾರಗಳ ಕುರಿತು ಇರಾನ್‍ನಿಂದ ಕಠಿಣ ಮಾತುಗಳು ಕೇಳಿ ಬಂದರೂ ಭಾರತ ಇರಾನ್ ನಾಯಕತ್ವದಲ್ಲಿ ತೊಡಗಿಸಿಕೊಂಡಿದೆ.

    ಇತ್ತೀಚೆಗೆ ಇರಾನ್ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. 2018ರ ನವೆಂಬರ್‍ನಲ್ಲಿ ಜಾಯಿಂಟ್ ಕಾಂಪ್ರೆಹೆನ್ಸಿವ್ ಪ್ಯಾನ್ ಆಫ್ ಆಕ್ಷನ್(ಜೆಸಿಪಿಒಎ) ರದ್ದು ಪಡಿಸಿದ ನಂತರ ಅಮೆರಿಕಾ ಇರಾನ್ ಮೇಲೆ ದಂಡ ವಿಧಿಸುವ ನಿರ್ಬಂಧಗಳನ್ನು ಹೇರಿದೆ. ಆಗಿನಿಂದ ಇರಾನ್ ಆರ್ಥಿಕವಾಗಿ ಇನ್ನಷ್ಟು ಮುಗ್ಗರಿಸಿದೆ. ಹೀಗಾಗಿ ಇರಾನ್ ಅಧ್ಯಕ್ಷ ವಿಶ್ವದ ರಾಷ್ಟ್ರಗಳು ಒಟ್ಟಾಗಿ ಕೊರೊನಾ ವೈರಸ್‍ನ್ನು ಎದುರಿಸಬೇಕು ಎಂದು ಪತ್ರ ಬರೆದಿದ್ದಾರೆ.

  • ಕೊರೊನಾ ಭೀತಿ: ಇರಾನ್‍ನಿಂದ 234 ಮಂದಿ ಭಾರತೀಯರು ವಾಪಸ್

    ಕೊರೊನಾ ಭೀತಿ: ಇರಾನ್‍ನಿಂದ 234 ಮಂದಿ ಭಾರತೀಯರು ವಾಪಸ್

    ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಗೆ ಇಡೀ ವಿಶ್ವವೇ ಆತಂಕ್ಕೀಡಾಗಿದೆ. ಈ ಮಧ್ಯೆ ಇರಾನ್ ನಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅಲ್ಲಿ ಸಿಲುಕಿದ್ದ 234 ಮಂದಿ ಭಾರತೀಯರನ್ನು ತಾಯ್ನಾಡಿಗೆ ವಾಪಸ್ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು 103 ಯಾತ್ರಿಕರು, 131 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 234 ಮಂದಿಯನ್ನು ಭಾರತಕ್ಕೆ ಕರೆತರಲಾಗಿದೆ ಎಂದಿದ್ದಾರೆ. ಅಲ್ಲದೇ ರಾಯಭಾರಿ ಧಾಮು ಗದ್ದಾಮ್ ಹಾಗೂ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇರಾನ್ ಅಧಿಕಾರಿಗಳ ತಂಡಕ್ಕೆ ಜೈಶಂಕರ್ ಧನ್ಯವಾದ ತಿಳಿಸಿದ್ದಾರೆ.

    ಮೊದಲ ಬ್ಯಾಚ್ ನ 58 ಮಂದಿ ಭಾರತೀಯ ಯಾತ್ರಿಕರನ್ನು ಮಂಗಳವಾರ ಇರಾನ್ ನಿಂದ ಕರೆತರಲಾಯಿತು. ಎರಡನೇ ಬ್ಯಾಚ್‍ನ 44 ಮಂದಿ ಯಾತ್ರಿಕರು ಶುಕ್ರವಾರ ಬಂದಿದ್ದಾರೆ. ಶನಿವಾರ ಮುಂಜಾನೆ ಮೂರನೇ ಬಾಚಿನ ಭಾರತೀಯರು ಇರಾನ್ ನಿಂದ ಬಂದಿಳಿದಿದ್ದಾರೆ.

    ಸದ್ಯ ಇರಾನ್ ನಲ್ಲಿ ಕೊರೊನಾ ಭೀಕರತೆ ಹೆಚ್ಚಾಗಿದ್ದು, ಅಲ್ಲಿ ಸರ್ಕಾರ ಭಾರತೀಯರನ್ನು ವಾಪಸ್ ಕಳುಹಿಸಲು ಎಲ್ಲಾ ರೀತಿಯಲ್ಲಿಯೂ ಪ್ರಯತ್ನಿಸುತ್ತಿದೆ.

  • 127 ರಾಷ್ಟ್ರ, ಪ್ರಾಂತ್ಯಗಳ ಮೇಲೆ ಕೊರೊನಾ ಕರಿ ನೆರಳು – ಸೋಂಕಿಗೆ ಬಲಿಯಾದವರೆಷ್ಟು? ಚೇತರಿಸಿಕೊಂಡವರೆಷ್ಟು?

    127 ರಾಷ್ಟ್ರ, ಪ್ರಾಂತ್ಯಗಳ ಮೇಲೆ ಕೊರೊನಾ ಕರಿ ನೆರಳು – ಸೋಂಕಿಗೆ ಬಲಿಯಾದವರೆಷ್ಟು? ಚೇತರಿಸಿಕೊಂಡವರೆಷ್ಟು?

    ನವದೆಹಲಿ: ವಿಶ್ವದಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್‍ಗೆ 127 ರಾಷ್ಟ್ರ ಹಾಗೂ ಪ್ರಾಂತ್ಯಗಳು ತುತ್ತಾಗಿವೆ. ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ಈಗ ವಿಶ್ವದೆಲ್ಲೆಡೆ ಹರುಡುತ್ತಿದ್ದು, ಈವರೆಗೆ 4,986 ಮಂದಿಯನ್ನು ಬಲಿಪಡೆದಿದೆ. ಹೀಗೆ ಎಲ್ಲೆಡೆ ತನ್ನ ಕರಿನೆರಳು ಬೀರುತ್ತಿರುವ ಕೊರೊನಾ ಜನರಲ್ಲಿ ಭಯ ಹುಟ್ಟಿಸಿದೆ.

    ಒಟ್ಟು 127 ರಾಷ್ಟ್ರ ಹಾಗೂ ಪ್ರಾಂತ್ಯಗಳಲ್ಲಿ ಕೊರೊನಾ ವೈರಸ್ ಹರಡಿದ್ದು, ಈವರೆಗೆ ಸುಮಾರು 1,34,769 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಅಲ್ಲದೇ ಚೀನಾದಲ್ಲಿ 3,117 ಮಂದಿ ಸೇರಿದಂತೆ ವಿಶ್ವದೆಲ್ಲೆಡೆ ಒಟ್ಟು 4,983 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸುಮಾರು 70,388 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಸ್ತುತ 59,398 ಮಂದಿ ಸೋಂಕಿನಿಂದ ಬಳಲುತ್ತಿದ್ದು, ಅವರಲ್ಲಿ 5,757 ಮಂದಿ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಬೀ ಕೇರ್ ಫುಲ್: ಕೊರೊನಾ ಲಕ್ಷಣ ಏನು? ಹೇಗೆ ಹರಡುತ್ತದೆ? ಮುಂಜಾಗೃತ ಕ್ರಮ ಏನು?

    ಎಷ್ಟು ಸಾವು? ಎಷ್ಟು ಚೇತರಿಕೆ?
    ಚೀನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ, ಸ್ಪೇನ್, ಫ್ರಾನ್ಸ್, ಜರ್ಮನಿ, ಅಮೆರಿಕದಲ್ಲಿ ಕೊರೊನಾ ವ್ಯಾಪಕವಾಗಿ ಹರಡಿದೆ. ಈ ರಾಷ್ಟ್ರಗಳಲ್ಲಿ ಸೋಂಕಿತರ ಸಂಖ್ಯೆ ಸಾವಿರ ಗಡಿಯನ್ನು ದಾಟಿದೆ.

    1. ಚೀನಾ – ಈವರೆಗೆ ಕೊರೊನಾ ಸೋಂಕಿಗೆ 80,814 ಮಂದಿ ತುತ್ತಾಗಿದ್ದಾರೆ. ಅವರಲ್ಲಿ 64,118 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,117 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 13,519 ಮಂದಿ ಕೊರೊನಾದಿಂದ ಬಳಲುತ್ತಿದ್ದು, 4,020 ರೋಗಿಗಳ ಸ್ಥಿತಿ ಗಂಭಿರವಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕೊರೊನಾ ಎಫೆಕ್ಟ್ – 1 ರಿಂದ 6ನೇ ತರಗತಿವರೆಗಿನ ಪರೀಕ್ಷೆ ರದ್ದು

    2. ಇಟಲಿ – ಸೋಂಕಿಗೆ ಈವರೆಗೆ ಇಟಲಿಯಲ್ಲಿ ಸುಮಾರು 15,113 ಮಂದಿ ತುತ್ತಾಗಿದ್ದು, ಅವರಲ್ಲಿ 1,258 ಮಂದಿ ಚೇತರಿಸಿಕೊಂಡಿದ್ದಾರೆ. 1,016 ಮಂದಿ ಮೃತಪಟ್ಟಿದ್ದು, ಪ್ರಸ್ತುತ 12,839 ಮಂದಿ ಕೊರೊನಾದಿಂದ ಬಳಲುತ್ತಿದ್ದರೆ ಹಾಗೂ 1,153 ರೋಗಿಗಳ ಸ್ಥಿತಿ ಚಿಂತಾಜನಕವಾಗಿದೆ.

    3. ಇರಾನ್ – 10,075 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಅವರಲ್ಲಿ 3,276 ಮಂದಿ ಸೊಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 6,370 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದು, 429 ಸೋಂಕಿತರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಂ, ಚೀನಾದ ಹುಬೆ ಪ್ರಾಂತ್ಯದಲ್ಲಿ ಸಿಂಗಲ್ ಡಿಜಿಟ್‍ಗೆ ಕೊರೊನಾ ಕೇಸ್ ಇಳಿಕೆ

    4. ದಕ್ಷಿಣ ಕೊರಿಯಾ – 7,979 ಮಂದಿಗೆ ಸೋಂಕು ತಗುಲಿತ್ತು. ಆದರೆ ಅವರಲ್ಲಿ 510 ರೋಗಿಗಳು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. 67 ಮಂದಿ ಕೊರೊನಾಗೆ ಬಲಿಯಾಗಿದ್ದರೆ, 93 ಮಂದಿ ಸೋಂಕಿತರ ಸ್ಥಿತಿ ಚಿಂತಾಜನಕವಾಗಿದೆ. ಪ್ರಸ್ತುತ 7,402 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

    5. ಸ್ಪೇನ್ – 3,146 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರಲ್ಲಿ 189 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 2,871 ರೋಗಿಗಳು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, 190 ಮಂದಿ ಸ್ಥಿತಿ ಗಂಭಿರವಾಗಿದೆ ಹಾಗೂ 86 ಮಂದಿ ಬಲಿಯಾಗಿದ್ದಾರೆ. ಇದನ್ನೂ ಓದಿ: ಡೆಡ್ಲಿ ಕೊರೊನಾಗೂ ‘ಎಣ್ಣೆ’ನೇ ಮದ್ದು- ಕೈಗೂ, ಹೊಟ್ಟೆಗೂ ಎಣ್ಣೆ ಬಿದ್ರೆ ಫುಲ್ ಸೇಫ್ ಅಂತೆ!

    6. ಫ್ರಾನ್ಸ್ – 2,876 ಮಂದಿ ಕೊರೊನಾಗೆ ತುತ್ತಾಗಿದ್ದರು. ಅವರಲ್ಲಿ 12 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದರೆ, 129 ರೋಗಿಗಳ ಸ್ಥಿತಿ ಗಂಭಿರವಾಗಿದೆ. ಸದ್ಯ 2,803 ಮಂದಿ ಸೋಂಕಿನಿಂದ ಬಳಲುತ್ತಿದ್ದು, 61 ಮಂದಿ ಜೀವ ಕಳೆದುಕೊಂಡಿದ್ದಾರೆ.

    7. ಜರ್ಮನಿ – 2,745 ಮಂದಿಯಲ್ಲಿ ಕಾಣಿಕೊಂಡ ಕೊರೊನಾ ಸೋಂಕಿನಿಂದ 25 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸದ್ಯ 6 ಮಂದಿ ಬಲಿಯಾಗಿದ್ದು, 9 ಮಂದಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಪ್ರಸ್ತುತ 2,714 ರೋಗಿಗಳು ಕೊರೊನಾದಿಂದ ಬಳಲುತ್ತಿದ್ದಾರೆ.

    8. ಅಮೆರಿಕ – ಯುಎಸ್‍ಎನಲ್ಲಿ ಕೊರೊನಾಗೆ 41 ಮಂದಿ ಬಲಿಯಾಗಿದ್ದಾರೆ. 1,762 ಮಂದಿಯಲ್ಲಿ ಕಾಣಿಸಿಕೊಂಡ ಸೋಂಕಿನಿಂದ 31 ಮಂದಿ ಗುಣಮುಖರಾಗಿದ್ದಾರೆ. ಸದ್ಯ 1,690 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದರೆ, 10 ಮಂದಿ ಸ್ಥಿತಿ ಗಂಭಿರವಾಗಿದೆ.

    9. ಭಾರತ – ದೇಶಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್‍ಗೆ ಈವರೆಗೆ 75 ಮಂದಿ ತುತ್ತಾಗಿದ್ದು, 4 ಮಂದಿ ಗುಣಮುಖರಾಗಿದ್ದಾರೆ. ಈಗಾಗಲೇ ಕೊರೊನಾಗೆ ಕರ್ನಾಟಕದ ಕಲಬುರ್ಗಿಯ ವೃದ್ಧರೊಬ್ಬರು ಬಲಿಯಾಗಿದ್ದಾರೆ.

    10. ಪಾಕಿಸ್ತಾನ – ಭಾರತದ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿಯೂ ಕೊರೊನಾ ವೈರಸ್ ಹರಡಿದೆ. ಈವರೆಗೆ 21 ಮಂದಿ ಸೋಂಕಿಗೆ ತುತ್ತಾಗಿದ್ದು, ಇಬ್ಬರು ಚೇತರಿಸಿಕೊಂಡಿದ್ದಾರೆ.

    ಇತ್ತ ಕೊರೊನಾ ಪೀಡಿತ ದೇಶಗಳಲ್ಲಿ ಇರುವ ಭಾರತೀಯರನ್ನು ರಾಷ್ಟ್ರಕ್ಕೆ ವಾಪಸ್ ಕರೆತರುವ ಕಾರ್ಯ ಕೂಡ ಭರದಿಂದ ನಡೆಯುತ್ತಿದ್ದು, ಹೀಗೆ ಭಾರತಕ್ಕೆ ಬಂದವರ ಮೇಲೆ ನಿಗಾವಹಿಸಿ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳಿಗೆ ರಜೆಯನ್ನು ಕೂಡ ಘೋಷಿಸಲಾಗಿದೆ. ಹಾಗೆಯೇ ಐಟಿ ಕಂಪನಿಗಳ ಸಾಕಷ್ಟು ಮಂದಿ ಉದ್ಯೋಗಿಗಳು ಕೊರೊನಾ ಭೀತಿಯಿಂದ ‘ವರ್ಕ್ ಫ್ರಮ್ ಹೋಮ್’ ವ್ಯವಸ್ಥೆ ಮೊರೆಹೋಗುತ್ತಿದ್ದು, ಕಂಪನಿ, ಆಫೀಸ್, ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.

  • ಇಂದು 120 ಮಂದಿ ಭಾರತೀಯರನ್ನು ಇರಾನ್‍ನಿಂದ ಕರೆತರುತ್ತಿರುವ ಸೇನೆ

    ಇಂದು 120 ಮಂದಿ ಭಾರತೀಯರನ್ನು ಇರಾನ್‍ನಿಂದ ಕರೆತರುತ್ತಿರುವ ಸೇನೆ

    – ಸೇನಾ ಕೇಂದ್ರಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ

    ಜೈಪುರ: ಮಹಾಮಾರಿ ಕೊರೊನಾ ವೈರಸ್‍ಗೆ ಇಡೀ ವಿಶ್ವವೇ ಆತಂಕಕ್ಕೀಡಾಗಿದೆ. ಅದರಲ್ಲೂ ಇರಾನ್‍ನಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು, ಅಲ್ಲಿರುವ ಸುಮಾರು 120 ಮಂದಿ ಭಾರತೀಯರನ್ನು ಇಂದು ದೇಶಕ್ಕೆ ವಾಪಸ್ ಕರೆತರಲಾಗುತ್ತಿದೆ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ.

    ಏರ್ ಇಂಡಿಯಾ ವಿಮಾನದ ಮೂಲಕ ಇರಾನ್‍ನಲ್ಲಿ ಇರುವ 120 ಮಂದಿ ಭಾರತೀಯರನ್ನು ಇಂದು ರಾಜಸ್ಥಾನದ ಜೈಸಲ್ಮರ್ ಗೆ ಕರೆತರಲಾಗುತ್ತಿದೆ. ಅಲ್ಲದೇ ಅವರಿಗೆ ಸೇನಾ ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ಇರಿಸಲಾಗುತ್ತದೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ. ಈ ಬಗ್ಗೆ ರಕ್ಷಣಾ ಇಲಾಖೆ ವಕ್ತಾರ ಕರ್ನಲ್ ಸೊಂಬಿತ್ ಘೋಷ್ ಅವರು ಪ್ರತಿಕ್ರಿಯಿಸಿ, ದಕ್ಷಿಣ ಕಮಾಂಡರ್ ಅವರ ರಕ್ಷಣೆಯಲ್ಲಿ ಭಾರತೀಯ ಸೇನಾ ಕೇಂದ್ರಗಳಲ್ಲಿ ಇರಾನ್‍ನಿಂದ ಬಂದ ಭಾರತೀಯರನ್ನು ಕೆಲ ದಿನಗಳ ಕಾಲ ಇರಿಸಲಾಗುತ್ತದೆ. ಇರಾನ್‍ನಿಂದ ವಾಪಸ್ ಬಂದ ಭಾರತೀಯರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆಯಾ ಎಂದು ತಿಳಿಯಲು ವಿಮಾನ ನಿಲ್ದಾಣದಲ್ಲೇ ಆರಂಭಿಕ ಹಂತದ ತಪಾಸಣೆ ಮಾಡಿ, ಬಳಿಕ ಜೈಸಲ್ಮರ್ ನಲ್ಲಿರುವ ಸೇನಾ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    ಸದ್ಯ ಇಂದು 120 ಮಂದಿ ಭಾರತೀಯರನ್ನು ಇರಾನ್‍ನಿಂದ ಕರೆತರಲಾಗುತ್ತಿದೆ. ಮಾರ್ಚ್ 15ರಂದು ಸುಮಾರು 250 ಭಾರತೀಯರನ್ನು ಇರಾನ್‍ನಿಂದ ಕರೆತರಲಾಗುವುದು. ಅವರನ್ನು ಕೂಡ ತಪಾಸಣೆಗೆ ಒಳಪಡಿಸಿದ ಬಳಿಕ ಜೈಸಲ್ಮರ್ ನ ಸೇನಾ ಕೇಂದ್ರದಲ್ಲಿಯೇ ಇರಿಸಲಾಗುವುದು ಎಂದರು.

    ಕೊರೊನಾ ಪೀಡಿತ ದೇಶದಲ್ಲಿ ಇರುವ ಭಾರತೀಯರನ್ನು ಸುರಕ್ಷಿತವಾಗಿ ರಾಷ್ಟ್ರಕ್ಕೆ ವಾಪಾಸ್ ಕರೆತರಲು ಭಾರತೀಯ ಸೇನೆ ಸಿದ್ಧವಿದೆ. ಈಗಾಗಲೇ 7 ಸೇನಾ ಕೇಂದ್ರಗಳನ್ನು ಕೊರೊನಾ ವೈರಸ್ ರೋಗಿಗಳಿಗೆ ಸ್ಥಾಪಿಸಿದ್ದು, ಜೈಸಲ್ಮರ್, ಸೂರತ್ ಗದ್, ಜಾನ್ಸಿ, ಜೋಧ್ ಪುರ್, ದಿಯೊಲಾಲಿ, ಕೋಲ್ಕತ್ತಾ ಮತ್ತು ಚೆನ್ನೈಗಳಲ್ಲಿ ಈ ಸೇನಾ ಕೇಂದ್ರಗಳಿವೆ. ಅವುಗಳಲ್ಲಿ ವಿದೇಶಗಳಿಂದ ಬರುವ ಭಾರತೀಯರನ್ನು ಇರಿಸಲಾಗುತ್ತದೆ.

    ಮುಂದಿನ ದಿನಗಳಲ್ಲಿ ಕೊರೊನಾ ಪೀಡಿತ ರಾಷ್ಟ್ರಗಳಲ್ಲಿ ಇರುವ ಇನ್ನಷ್ಟು ಭಾರತೀಯರನ್ನು ರಾಷ್ಟ್ರ ಕರೆತರುವ ನಿರೀಕ್ಷೆಯಿದೆ. ಹೀಗೆ ಭಾರತಕ್ಕೆ ಬಂದವರಿಗೆ ವಾಸ್ತವ್ಯ ವ್ಯವಸ್ಥೆಯನ್ನು ತಕ್ಷಣವೇ ರಕ್ಷಣಾ ಇಲಾಖೆ ಮಾಡಿಕೊಡುತ್ತದೆ ಎಂದು ಸೇನಾ ವಕ್ತಾರ ಕರ್ನಲ್ ಅಮನ್ ಆನಂದ್ ತಿಳಿಸಿದ್ದಾರೆ.

    ಸದ್ಯ ಇರಾನ್‍ನಲ್ಲಿ ಕೊರೊನಾ ಸೋಂಕು ತಗುಲಿ 1,016 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ 75 ಮಂದಿಗೆ ಸೋಂಕು ತಗುಲಿದ್ದು, ಈಗಾಗಲೇ 4 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ ಓರ್ವನನ್ನು ಕೊರೊನಾ ಬಲಿ ಪಡೆದಿದೆ. ಇತ್ತ ಇಟಲಿ ಮತ್ತು ಯುರೋಪ್ ರಾಷ್ಟ್ರಗಳಲ್ಲಿ ಒಟ್ಟು 15,113 ಮಂದಿಗೆ ಸೋಕು ತಗುಲಿದ್ದು, ಚೀನಾದಲ್ಲಿ 80 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಬಳಲುತ್ತಿದ್ದು, 3,117 ಮಂದಿ ಸಾವನ್ನಪ್ಪಿದ್ದಾರೆ. ವಿಶ್ವದಾದ್ಯಂತ 1,34,769 ಮಂದಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಅಲ್ಲದೇ ಈವರೆಗೆ ವಿಶ್ವದೆಲ್ಲೆಡೆ 4,983 ಮಂದಿಯನ್ನು ಮಹಾಮಾರಿ ಕೊರೊನಾ ಬಲಿಪಡೆದಿದ್ದರೆ, 70,387 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

  • ಇರಾನಿನ ಶೇ.7ರಷ್ಟು ಸಂಸದರಿಗೆ ಬಂದಿದೆ ಕೊರೊನಾ – 54 ಸಾವಿರ ಕೈದಿಗಳಿಗೆ ಬಿಡುಗಡೆ ಭಾಗ್ಯ

    ಇರಾನಿನ ಶೇ.7ರಷ್ಟು ಸಂಸದರಿಗೆ ಬಂದಿದೆ ಕೊರೊನಾ – 54 ಸಾವಿರ ಕೈದಿಗಳಿಗೆ ಬಿಡುಗಡೆ ಭಾಗ್ಯ

    ಟೆಹರಾನ್: ಇರಾನಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಇರಾನಿನ ಸಂಸತ್ತಿನ ಶೇ.7 ರಷ್ಟು ಸದಸ್ಯರು ಕೊರೊನಾ ಪೀಡಿತರಾಗಿದ್ದಾರೆ.

    ಇರಾನ್ ದೇಶದಲ್ಲಿ ಇಲ್ಲಿಯವರೆಗೆ 2,336 ಮಂದಿಗೆ ಕೊರೊನಾ ಬಾಧಿಸಿದೆ. ಆದರೆ ಈ ಸಂಖ್ಯೆ ಅಧಿಕೃತವಲ್ಲ. ಸಂಖ್ಯೆ ಮತ್ತಷ್ಟು ಹೆಚ್ಚಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈಗಾಗಲೇ ಒಟ್ಟು 77 ಮಂದಿ ಮೃತಪಟ್ಟಿದ್ದಾರೆ. ಚೀನಾ ಬಿಟ್ಟರೆ ವಿಶ್ವದಲ್ಲಿ ಅತಿ ಹೆಚ್ಚಿ ಸಂಖ್ಯೆಯ ಸಾವು ಇರಾನಿನಲ್ಲಿ ದಾಖಲಾಗಿದೆ.

    ಒಟ್ಟು ಸಂಸತ್ ಸದಸ್ಯರ ಪೈಕಿ ಶೇ.7 ರಷ್ಟು ಸದಸ್ಯರ ರಕ್ತದ ಮಾದರಿ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಇರಾನಿನ ತುರ್ತು ವೈದ್ಯಕೀಯ ಸೇವೆಯ ಮುಖ್ಯಸ್ಥರೇ ಕೊರೊನಾಗೆ ತುತ್ತಾಗಿದ್ದಾರೆ ಎಂದು ಸಂಸತ್ತಿನ ಉಪ ಸ್ಪೀಕರ್ ಹೇಳಿದ್ದಾರೆ. ಒಟ್ಟು 290 ಸದಸ್ಯರ ಪೈಕಿ 23 ಮಂದಿಗೆ ಕೊರೊನಾ ಭಾದಿಸಿದ್ದು ರೋಗ ನಿಯಂತ್ರಣ ಮಾಡಲು ಹರಸಾಹಸ ಪಡುತ್ತಿದೆ.

    ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ 54 ಸಾವಿರ ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗುತ್ತಿದೆ ಎಂದು ಇರಾನ್ ನ್ಯಾಯಾಂಗ ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ಪರೀಕ್ಷೆಯ ವೇಳೆ ನೆಗೆಟಿವ್ ಬಂದವರನ್ನು ಜಾಮೀನಿನ ಮೇಲೆ ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗುತ್ತಿದೆ. ಗಂಭೀರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕೈದಿಗಳನ್ನು ಬಿಡುಗಡೆ ಮಾಡುವುದಿಲ್ಲ. ಕೈದಿಗಳು ಸಹ ಮನುಷ್ಯರೇ. ಮಾನವೀಯ ಆಧಾರದ ಹಿನ್ನೆಲೆಯಲ್ಲಿ ಇವರನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

  • ಅಮೆರಿಕ, ಇರಾನ್ ಯುದ್ಧದ ಕಾರ್ಮೋಡ- ಭಾರೀ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ರೈತರು

    ಅಮೆರಿಕ, ಇರಾನ್ ಯುದ್ಧದ ಕಾರ್ಮೋಡ- ಭಾರೀ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ರೈತರು

    ಬಳ್ಳಾರಿ: ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಕಾರ್ಮೋಡ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದೆ. ಅಲ್ಲದೇ ಈ ಯುದ್ಧದ ಭೀತಿ ಹಲವು ರಾಷ್ಟ್ರಗಳಲ್ಲಿ ಋಣತ್ಮಾಕ ಪ್ರಭಾವವನ್ನು ಬೀರಿದೆ. ಅದರಲ್ಲೂ ರಾಜ್ಯದ ಬಳ್ಳಾರಿಯ ಕಂಪ್ಲಿ ರೈತರಿಗೆ ಸಂಕಷ್ಟ ಎದುರಾಗಿದೆ.

    ಇರಾನ್ ಹಾಗೂ ಅಮೆರಿಕ ನಡುವಣ ಉದ್ವಿಗ್ನ ಸ್ಥಿತಿ ಭಾರತದ ಮೇಲೆ ಹಲವು ರೀತಿಯಲ್ಲಿ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತಿದೆ. ತೈಲ ಸಂಪದ್ಭರಿತವಾದ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಬಿಕ್ಕಟ್ಟು, ಭಾರತಕ್ಕೆ ಕೇವಲ ಪೆಟ್ರೋಲಿಯಂ ಉತ್ಪನ್ನಗಳು ಮಾತ್ರವಲ್ಲದೇ ಹಲವು ವಹಿವಾಟುಗಳಿಗೂ ಹೊಡೆತ ನೀಡುತ್ತಿದೆ.

    ಭಾರತದಿಂದ ಬಾಸುಮತಿ ಅಕ್ಕಿಯನ್ನು ಖರೀದಿಸುವ ಪ್ರಮುಖ ರಾಷ್ಟ್ರಗಳಲ್ಲಿ ಇರಾನ್ ಕೂಡ ಒಂದಾಗಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇರಾನ್‍ಗೆ ಬಾಸುಮತಿ ಅಕ್ಕಿಯನ್ನು ರಫ್ತು ಮಾಡಲು ಸಾಧ್ಯವಿಲ್ಲ. ಉದ್ವಿಗ್ನ ಪರಿಸ್ಥಿತಿಯು ತಿಳಿಯಾಗುವವರೆಗೂ ರಫ್ತು ಬೇಡಿಕೆ ಸ್ವೀಕರಿಸಬೇಡಿ ಎಂದು ಅಖಿಲ ಭಾರತ ಅಕ್ಕಿ ರಫ್ತುದಾರರ ಸಂಘ ತನ್ನ ಸದಸ್ಯರಲ್ಲಿ ಮನವಿ ಮಾಡಿದೆ.

    ಕಂಪ್ಲಿಯಲ್ಲಿ ಬೆಳೆಯುವ ಬಾಸುಮತಿ ಮತ್ತು ಸೋನಾ ಮಸೂರಿಗೆ ಇರಾನ್ ಮತ್ತು ದುಬೈನಲ್ಲಿ ಉತ್ತಮ ಬೇಡಿಕೆ ಇದ್ದು ಪ್ರತಿ ಕೆಜಿಗೆ 105 ರೂ. ಬೆಲೆ ಇದೆ. ಆದರೆ ಕೇವಲ ಒಂದೇ ವಾರದಲ್ಲಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಪ್ರತಿ ಕೆಜಿ ದರ 63 ರೂ. ಇಳಿಕೆಯಾಗಿದೆ. ಇಲ್ಲಿ ಬೆಳೆದ ಅಕ್ಕಿಯನ್ನು ರೈತರು ಮುಂಬೈ ಮಾರ್ಗವಾಗಿ ದುಬೈ, ಇರಾನ್ ರಾಷ್ಟ್ರಗಳಿಗೆ ಕಳುಹಿಸುತ್ತಿದ್ದರು.

    ಈಗಿರುವ ಪರಿಸ್ಥಿತಿಯಲ್ಲಿ ಯಾವುದೇ ಸಾಗಾಣಿಕೆ, ಪಾವತಿ ಹಲವಾರು ತಿಂಗಳು ವಿಳಂಬವಾಗುವುದು ಖಚಿತ. ಬಾಸುಮತಿ ಅಕ್ಕಿ ರಫ್ತು ಸ್ಥಗಿತಗೊಂಡರೆ ದೇಶದಲ್ಲಿ ಅಕ್ಕಿ ಸಂಗ್ರಹ ಹೆಚ್ಚಳಗೊಳ್ಳಲಿದೆ. ಆದ್ದರಿಂದ ಬೆಲೆ ಭಾರೀ ಕುಸಿತಗೊಂಡು ಬೆಳೆಗಾರರ ಆದಾಯಕ್ಕೆ ಹೊಡೆತ ಬೀಳಲಿದೆ ಎಂಬುದು ಇಲ್ಲಿನ ರೈತರ ವಾದ. ಪ್ರತಿ ವರ್ಷ ಇಲ್ಲಿ ಬೆಳೆದ ಅಕ್ಕಿಗೆ ಒಳ್ಳೆಯ ಬೆಲೆ ಸಿಗುತಿತ್ತು. ಕಳೆದ ವರ್ಷ 68 ಮೆಟ್ರಿಕ್ ಟನ್ ಅಕ್ಕಿ ಕೇವಲ ಬಳ್ಳಾರಿಯಿಂದಲೇ ರಫ್ತಾಗುತ್ತಿದ್ದು, ಹೀಗಾಗಿ ಈ ಬಾರಿ ಇರಾನ್‍ಗೆ ಅಕ್ಕಿ ರಫ್ತಾಗುವ ಬಹುತೇಕ ನಿಲ್ಲಿಸಲಾಗಿದೆ.

    ರಫ್ತು ಸ್ಥಗಿತಗೊಂಡಿರುವುದು ರೈತರನ್ನು ಚಿಂತೆಗೆ ದೂಡಿದೆ. ಕಳೆದ ಮೂರು ವರ್ಷಕ್ಕೆ ಹೋಲಿಸಿದರೆ ಈ ಬಾರಿ ಉತ್ತಮ ಇಳುವರಿ ಬಂದಿದೆ. ಜೊತೆಗೆ ತುಂಗಭದ್ರಾ ಡ್ಯಾಂ ಸಂಪೂರ್ಣವಾಗಿ ತುಂಬಿರುವ ಕಾರಣ ಹಿಂಗಾರು ಬೆಳೆ ಕೂಡಾ ಉತ್ತಮವಾಗಿ ಬರುವ ನೀರಿಕ್ಷೆಯಲ್ಲಿ ರೈತರಿದ್ದಾರೆ. ದೇಶದಲ್ಲಿ ಉತ್ಪಾದನೆಯಾಗುವ ಬಾಸುಮತಿ ಒಟ್ಟು ರಫ್ತಿನಲ್ಲಿ 3ನೇ ಒಂದು ಭಾಗಕ್ಕಿಂತ ಹೆಚ್ಚಿನದನ್ನು ಇರಾನ್ ಖರೀದಿಸುತ್ತದೆ. ಆದರೆ ಈಗ ರಫ್ತಿಗೆ ತಡೆ ಬೀಳುವ ಸಾಧ್ಯತೆ ಹಿನ್ನೆಲೆ ಬಾಸುಮತಿ ವ್ಯಾಪಾರಕ್ಕೆ ತೀವ್ರ ಹೊಡೆತ ಬಿದ್ದಿದೆ.

  • ಇರಾನ್ ಸಿಡಿಸಿದ ಕ್ಷಿಪಣಿಯಿಂದ ಉಕ್ರೇನ್ ವಿಮಾನ ಪತನ – ಘಟನೆಯ ಸುತ್ತ ಅನುಮಾನದ ಹುತ್ತ

    ಇರಾನ್ ಸಿಡಿಸಿದ ಕ್ಷಿಪಣಿಯಿಂದ ಉಕ್ರೇನ್ ವಿಮಾನ ಪತನ – ಘಟನೆಯ ಸುತ್ತ ಅನುಮಾನದ ಹುತ್ತ

    – ತಪ್ಪಾಗಿ ಭಾವಿಸಿ ಉಕ್ರೇನ್ ವಿಮಾನವನ್ನು ಹೊಡೆದ ಇರಾನ್
    – ಅನುಮಾನ ವ್ಯಕ್ತಪಡಿಸಿದ ಡೊನಾಲ್ಡ್ ಟ್ರಂಪ್

    ವಾಷಿಂಗ್ಟನ್: ಉಕ್ರೇನ್‍ನಿಂದ ಹೊರಟಿದ್ದ ವಿಮಾನವನ್ನು ಇರಾನ್ ತಪ್ಪಾಗಿ ತಿಳಿದುಕೊಂಡು ಹೊಡೆದು ಹಾಕಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶಂಕಿಸಿದ್ದಾರೆ.

    ಮೂಲಗಳನ್ನು ಆಧಾರಿಸಿ ಅಮೆರಿಕದ ಮಾಧ್ಯಮಗಳು ವರದಿ ಮಾಡಿದ್ದು, ಇರಾನಿನ ವಾಯು ಸೇನೆ ತಪ್ಪಾಗಿ ಭಾವಿಸಿಕೊಂಡು ಕ್ಷಿಪಣಿ ಬಳಸಿಕೊಂಡು ಉಕ್ರೇನ್ಇಂಟರ್‌ನ್ಯಾಷನಲ್ ಏರ್‌ಲೈನ್ಸ್‌ ಬೋಯಿಂಗ್ 737 ವಿಮಾನವನ್ನು ಹೊಡೆದು ಹಾಕಿದೆ ಎಂದು ತಿಳಿಸಿವೆ. ಟ್ರಂಪ್ ಖಚಿತವಾಗಿ ಹೇಳದೇ ಇದ್ದರೂ ಇರಾನ್ ಹೊಡೆದಿರಬಹುದು ಎಂದು ಅಂದಾಜಿಸಿದ್ದಾರೆ.

    ಇರಾನ್ ರಾಜಧಾನಿ ಟೆಹ್ರಾನ್‍ನ ಇಮಾಮ್ ಖೊಮೇನಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದ ಉಕ್ರೇನ್ ವಿಮಾನ ತಾಂತ್ರಿಕ ಸಮಸ್ಯೆಗಳಿಂದಾಗಿ ಬುಧವಾರ ಅಪಘಾತಕ್ಕೀಡಾಗಿತ್ತು. ಈ ವಿಮಾನದಲ್ಲಿ ಸಿಬ್ಬಂದಿ ಸೇರಿ 180 ಮಂದಿಯೂ ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ವರದಿ ಮಾಡಿತ್ತು.

    ಸಾಧಾರಣವಾಗಿ ವಿಮಾನ ತಾಂತ್ರಿಕ ದೋಷದಿಂದ ಪತನಗೊಂಡು ನೆಲಕ್ಕೆ ಬಿದ್ದ ನಂತರ ಬೆಂಕಿ ಹೊತ್ತಿಕೊಳ್ಳುತ್ತದೆ. ಆದರೆ ಈ ವಿಮಾನ ಪತನಕ್ಕೂ ಮುನ್ನವೇ ಬೆಂಕಿ ಹೊತ್ತಿಕೊಂಡಿತ್ತು ಎನ್ನುವುದಕ್ಕೆ ವಿಡಿಯೋ ಸಾಕ್ಷ್ಯಗಳು ಸಿಕ್ಕಿದೆ. ವಿಮಾನ ಬೆಂಕಿಹೊತ್ತಿಕೊಂಡು ಪತನವಾಗುವುದು ಬಹಳ ಅಪರೂಪ. ಹೀಗಾಗಿ ಈ ಪ್ರಕರಣದ ಸುತ್ತ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

    ಖಾಸಿಮ್ ಸುಲೈಮಾನಿ ಹತ್ಯೆಗೆ ಪ್ರತೀಕಾರವಾಗಿ ಇರಾಕಿನಲ್ಲಿದ್ದ ಅಮೆರಿಕದ ಎರಡು ವಾಯು ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿತ್ತು. ಈ ದಾಳಿ ನಡೆಸಿದ ಕೆಲವೇ ಗಂಟೆಗಳ ಹೊತ್ತಿನಲ್ಲಿ ಉಕ್ರೇನ್ ವಿಮಾನ ಟೆಹ್ರಾನ್ ವಿಮಾನ ನಿಲ್ದಾಣದ ಬಳಿ ಪತನಗೊಂಡಿತ್ತು.

    https://twitter.com/ShabbaAlaBiafra/status/1214839520778235904

    ವಿಮಾನದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಇರಲಿಲ್ಲ. ಎರಡು ದಿನದ ಹಿಂದೆ ಪರಿಶೀಲಿಸಲಾಗಿತ್ತು. ವಿಮಾನ ಹಾರಿಸುತ್ತಿದ್ದ ಪೈಲಟ್‍ಗಳು ಅನುಭವಿಯಾಗಿದ್ದರು ಎಂದು ಕಂಪನಿ ತಿಳಿಸಿದೆ. ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ. ಆದರೆ ತನಿಖೆಗೆ ನಾವು ಬೋಯಿಂಗ್ ಕಂಪನಿ ಅಥವಾ ಅಮೆರಿಕಕ್ಕೆ ನೀಡುವುದಿಲ್ಲ. ವಿಮಾನ ಪತನದ ತನಿಖೆಯನ್ನು ನಾವೇ ಮಾಡುತ್ತೇವೆ ಎಂದು ಇರಾನ್ ಹೇಳಿಕೊಂಡಿದೆ. ಇತ್ತ ಅಮೆರಿಕವೂ ಈ ವಿಮಾನ ಪತನಕ್ಕೆ ಕಾರಣಗಳನ್ನು ಪತ್ತೆ ಹಚ್ಚುತ್ತೇವೆ ಎಂದು ತಿಳಿಸಿದೆ.

  • ಇರಾನ್, ಅಮೆರಿಕ ಸಂಘರ್ಷ- ಬಾಗ್ದಾದ್ ಮೇಲೆ ಮತ್ತೆ 2 ಕ್ಷಿಪಣಿ ದಾಳಿ

    ಇರಾನ್, ಅಮೆರಿಕ ಸಂಘರ್ಷ- ಬಾಗ್ದಾದ್ ಮೇಲೆ ಮತ್ತೆ 2 ಕ್ಷಿಪಣಿ ದಾಳಿ

    ಬಾಗ್ದಾದ್: ಇರಾಕ್‍ನಲ್ಲಿರುವ ಅಮೆರಿಕ ಸೇನಾ ಕ್ಯಾಂಪ್‍ಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಮತ್ತೆ ಇರಾಕ್ ಮೇಲೆ 2 ಕ್ಷಿಪಣಿ ದಾಳಿ ನಡೆದಿದೆ.

    ಇರಾಕ್ ರಾಜಧಾನಿ ಬಾಗ್ದಾದ್‍ನ ಸುರಕ್ಷಿತ ಪ್ರದೇಶವಾದ ಹಸಿರು ವಲಯದಲ್ಲಿ 2 ಕ್ಷಿಪಣಿ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಇರಾನ್ ಕ್ಷಿಪಣಿ ದಾಳಿ ನಡೆದ ಕೇವಲ 24 ಗಂಟೆಗಳ ಒಳಗೆ ಮತ್ತೆರಡು ಕ್ಷಿಪಣಿಗಳ ದಾಳಿಯಿಂದ ಇರಾಕ್‍ನಲ್ಲಿ ಭಯಯ ವಾತಾವರಣ ಸೃಷ್ಟಿಯಾಗಿದೆ. ಇದನ್ನೂ ಓದಿ: ಇರಾನ್ ಮೇಲೆ‌ ಯುದ್ಧವಿಲ್ಲ, ಪರಮಾಣು ಶಸ್ತ್ರಾಸ್ತ್ರ ಹೊಂದಲು ಬಿಡಲ್ಲ: ಟ್ರಂಪ್

    ಬಾಗ್ದಾದ್‍ನ ಹಸಿರು ವಲಯವನ್ನು ಇರಾಕ್‍ನ ಸುರಕ್ಷಿತ ಸ್ಥಳವಾಗಿದ್ದು, ಇಲ್ಲಿ ಅಮೆರಿಕ ಸೇರಿದಂತೆ ವಿಶ್ವದ ವಿವಿಧ ದೇಶಗಳ ರಾಯಭಾರ ಕಚೇರಿಗಳಿವೆ. ಹೀಗಾಗಿ ಇದೇ ಪ್ರದೇಶವನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ಮಾಡಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‍ಗೆ ಎಚ್ಚರಿಕೆ ನೀಡಿದ ಬೆನ್ನೆಲ್ಲೇ ಈ ದಾಳಿ ನಡೆದಿದ್ದು, ದಾಳಿಯಲ್ಲಿ ಯಾವುದೇ ರೀತಿಯ ಹಾನಿಯಾಗಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ತೈಲ ಬೆಲೆ ಏರಿಕೆ ಎಚ್ಚರಿಕೆ!

    ಇರಾನ್ ಮತ್ತು ಅಮೆರಿಕದ ಮಧ್ಯೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಬುಧವಾರ ಟ್ರಂಪ್ ಪ್ರತಿಕ್ರಿಯೆ ನೀಡಿದ್ದರು. ಕಳೆದ ರಾತ್ರಿ ಇರಾಕ್ ನಲ್ಲಿರುವ ನಮ್ಮ ವಾಯುನೆಲೆಯ ಮೇಲೆ ನಡೆದ ದಾಳಿಯಲ್ಲಿ ಯಾವುದೇ ಸೈನಿಕ ಹಾಗೂ ಅಧಿಕಾರಿಗಳಿಗೆ ತೊಂದರೆಯಾಗಿಲ್ಲ. ಯಾವುದೇ ಸಾವು, ನೋವುಗಳನ್ನು ಸಂಭವಿಸಿಲ್ಲ. ನಮ್ಮ ಎಲ್ಲಾ ಸೈನಿಕರು ಸುರಕ್ಷಿತರಾಗಿದ್ದಾರೆ. ಅಮೆರಿಕದ ಮಿಲಿಟರಿ ನೆಲೆಗಳಲ್ಲಿ ಕನಿಷ್ಠ ಹಾನಿಯಾಗಿದೆ ಎಂದು ತಿಳಿಸಿದ್ದರು.

    ಮೊದಲಿಗಿಂತಲೂ ಅಮೆರಿಕ ಸೈನ್ಯವೂ ಎಲ್ಲದಕ್ಕೂ ಸಿದ್ಧವಾಗಿದೆ. ಸುಧಾರಿತ ಕ್ಷಿಪಣಿಗಳನ್ನು ಹೊಂದಿದ್ದೇವೆ. ಆದರೆ ಅವುಗಳನ್ನು ನಾವು ಬಳಸಲು ಇಚ್ಛಿಸುವುದಿಲ್ಲ. ಯಾಕೆಂದರೆ ನಾವು ಶಾಂತಿಯನ್ನು ಬಯಸುತ್ತೇವೆ. ಇರಾನ್ ಜೊತೆಗೆ ಉತ್ತಮ ಬಾಂಧವ್ಯ ಹೊಂದಲು ಹಾಗೂ ವಿಶ್ವ ಶಾಂತಿಯನ್ನು ಕಾಪಾಡಲು ಇಚ್ಛಿಸುತ್ತೇವೆ ಎಂದು ಟ್ರಂಪ್ ಹೇಳಿದ್ದರು. ಇದನ್ನೂ ಓದಿ: ಇರಾನ್ ಕ್ಷಿಪಣಿ ದಾಳಿಗೆ 80 ಅಮೆರಿಕ ಸೈನಿಕರು ಹತ 

    ಇರಾನ್ ದೇಶದ ಸೇನಾ ಮುಖ್ಯಸ್ಥ ಖಾಸಿಂ ಸೊಲೈಮನಿ ಉಗ್ರರಿಗೆ ತರಬೇತಿ ನೀಡುತ್ತಿದ್ದ. ಅಷ್ಟೇ ಅಲ್ಲದೆ ಅಮೆರಿಕದ ಭದ್ರತೆಗೆ ಬೆದರಿಕೆ ಒಡ್ಡಿದ್ದ. ಇದರಿಂದಾಗಿ ಆತನನ್ನು ಹತ್ಯೆಗೈಯುವುದು ಅನಿವಾರ್ಯವಾಗಿತ್ತು ಎಂದು ಖಾಸಿಂ ಸೊಲೈಮನಿ ಹತ್ಯೆಯನ್ನು ಸಮರ್ಥಿಸಿಕೊಂಡಿದ್ದರು.

    ಇಂಧನ ಹಾಗೂ ಅನಿಲ ಉತ್ಪಾದನೆಯಲ್ಲಿ ವಿಶ್ವದಲ್ಲಿಯೇ ನಾವು ನಂಬರ್ 1. ಸ್ಥಾನದಲ್ಲಿದ್ದೇವೆ. ಹೀಗಾಗಿ ತೈಲ ವಿಚಾರದಲ್ಲಿ ಯಾವುದೇ ದೇಶದ ಮೇಲೆ ಅವಲಂಬಿಸಿಲ್ಲ ಎಂದಿದ್ದರು. ಇರಾನ್ ಉಗ್ರರ ತವರೂರು ಆಗಿದ್ದು ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಕೃತ್ಯಗಳಿಗೆ ಪ್ರೋತ್ಸಾಹ ನೀಡುತ್ತಿದೆ. ನಮ್ಮ ಅವಧಿಯಲ್ಲಿ ಆಲ್ ಖೈದಾ ಉಗ್ರ ಬಾಗ್ದಾದಿಯನ್ನು ಹತ್ಯೆ ಮಾಡಲಾಗಿದೆ. ಆರ್ಥಿಕವಾಗಿ ನಾವು ಪ್ರಬಲವಾಗಿದ್ದೇವೆ. ಸೇನೆಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದ್ದರು.