Tag: iraq

  • ವೈಮಾನಿಕ ದಾಳಿಯಲ್ಲಿ ಐಸಿಸ್‌ ಕಮಾಂಡರ್‌ ಅಬು ಖದೀಜಾ ಹತ್ಯೆ – ಬಲದ ಮೂಲಕ ಶಾಂತಿ ಎಂದ ಟ್ರಂಪ್‌

    ವೈಮಾನಿಕ ದಾಳಿಯಲ್ಲಿ ಐಸಿಸ್‌ ಕಮಾಂಡರ್‌ ಅಬು ಖದೀಜಾ ಹತ್ಯೆ – ಬಲದ ಮೂಲಕ ಶಾಂತಿ ಎಂದ ಟ್ರಂಪ್‌

    ಬಾಗ್ದಾದ್: ಇರಾಕ್‌ನ (Iraq) ಅಲ್ ಅನ್ಬರ್ ಪ್ರಾಂತ್ಯದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಇಸ್ಲಾಮಿಕ್ ಸ್ಟೇಟ್ (ISIS) ಭಯೋತ್ಪಾದಕ ಗುಂಪಿನ ಜಾಗತಿಕ ಕಾರ್ಯಾಚರಣೆಗಳ ಮುಖ್ಯಸ್ಥ ಅಬ್ದುಲ್ಲಾ ಮಕ್ಕಿ ಮುಸ್ಲಿಹ್ ಅಲ್-ರಿಫಾಯಿ (ಅಬು ಖದೀಜಾ) ಹತ್ಯೆಯಾಗಿದ್ದಾನೆ ಎಂದು ಅಮೆರಿಕ ಘೋಷಿಸಿದೆ.

    ವೈಮಾನಿಕ ದಾಳಿಯ ನಂತರ ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ಮತ್ತು ಇರಾಕ್‌ನ ಸೇನಾ ಪಡೆಗಳು ಸ್ಥಳಕ್ಕೆ ಭೇಟಿ ನೀಡಿ ಅಬು ಖದೀಜಾ (Abu Khadija) ಮತ್ತು ಇತರ ಐಸಿಸ್ ಉಗ್ರರ ಸಾವನ್ನು ದೃಢಪಡಿಸಿವೆ. ಆತನ ಗುರುತನ್ನು ಡಿಎನ್ಎ ಹೋಲಿಕೆಯ ಮೂಲಕ ದೃಢಪಡಿಸಲಾಯಿತು. ಈ ಹಿಂದೆ ನಡೆದ ದಾಳಿಯಲ್ಲಿ ಅವನು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದ. ಉಗ್ರರ ಶವ ಪತ್ತೆಯಾದ ಜಾಗದಲ್ಲಿ ಭಾರೀ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಹತ್ಯೆಗೀಡಾದ ಅಬು ಖದೀಜಾ ಐಸಿಸ್‌ ಉಗ್ರ ಸಂಘಟನೆಯ ಎರಡನೇ ಕಮಾಂಡರ್ ಸಹ ಆಗಿದ್ದ. ವಿಶ್ವಾದ್ಯಂತ ಭಯೋತ್ಪಾದಕ ಗುಂಪಿನ ಲಾಜಿಸ್ಟಿಕ್ಸ್, ಯೋಜನೆ ಮತ್ತು ಹಣಕಾಸು ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದ ಎಂದು ಅಮೆರಿಕ ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.

    ಇರಾಕ್‌ ಪ್ರಧಾನಿ ಮೊಹಮ್ಮದ್ ಶಿಯಾ ಅಲ್-ಸುಡಾನಿ ಈ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಬು ಖದೀಜಾ ಇರಾಕ್ ಮತ್ತು ವಿಶ್ವದ ಅತ್ಯಂತ ಅಪಾಯಕಾರಿ ಭಯೋತ್ಪಾದಕರಲ್ಲಿ ಒಬ್ಬ. ಆತನನ್ನು ಅಮೆರಿಕ ಸೇನೆಯ ಬೆಂಬಲದೊಂದಿಗೆ ಹತ್ಯೆಗೈಯ್ಯಲಾಗಿದೆ ಎಂದು ಬರೆದುಕೊಂಡಿದ್ದಾರೆ.

    ಇಂದು ಇರಾಕ್‌ನಲ್ಲಿ ಐಸಿಸ್‌ನ ನಾಯಕನನ್ನು ಕೊಲ್ಲಲಾಯಿತು. ನಮ್ಮ ನಿರ್ಭೀತ ರಣ ಯೋಧರು ಅವರನ್ನು ಬೇಟೆಯಾಡಿದರು. ಬಲದ ಮೂಲಕ ಶಾಂತಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

  • ಇರಾಕ್, ಬಾಂಗ್ಲಾದೇಶ ಸೈಕ್ಲೋನ್ ಎಫೆಕ್ಟ್ – ಭಾರತದ 18 ರಾಜ್ಯಗಳಿಗೆ ಮಳೆ ಅಲರ್ಟ್

    ಇರಾಕ್, ಬಾಂಗ್ಲಾದೇಶ ಸೈಕ್ಲೋನ್ ಎಫೆಕ್ಟ್ – ಭಾರತದ 18 ರಾಜ್ಯಗಳಿಗೆ ಮಳೆ ಅಲರ್ಟ್

    ನವದೆಹಲಿ: ಇರಾಕ್ (Iraq) ಹಾಗೂ ಬಾಂಗ್ಲಾದೇಶದಲ್ಲಿ (Bangladesh) ಹುಟ್ಟಿಕೊಂಡ ಚಂಡಮಾರುತದ (Cyclone) ಪರಿಣಾಮ ಭಾರತದ 18 ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಮಳೆಯ ಎಚ್ಚರಿಕೆ ಕೊಟ್ಟಿದೆ.

    ಜಮ್ಮು ಮತ್ತು ಕಾಶ್ಮೀರ, ಬಿಹಾರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ದೇಶದ 18 ರಾಜ್ಯಗಳಲ್ಲಿ ಮಾ.15ರವರೆಗೆ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ. ಇದನ್ನೂ ಓದಿ: ಮಾ.27 ರಿಂದ ಶ್ರೀಶೈಲ ಮಹಾಕ್ಷೇತ್ರದಲ್ಲಿ ಯುಗಾದಿ ಮಹೋತ್ಸವ

    ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್‌ನಲ್ಲಿ ಮಾ.15ರವರೆಗೆ ಮಳೆ, ಭಾರೀ ಹಿಮಪಾತ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಮಾ.12 ಮತ್ತು 13ರಂದು ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಮಾ.13ರಿಂದ 15ರ ನಡುವೆ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಅಕ್ರಮ ಮದರಸಾಗಳ ಮೇಲೆ ಕ್ರಮ – 15 ದಿನಗಳಲ್ಲಿ 52 ಮದರಸಾಗಳು ಬಂದ್

    ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ ಮತ್ತು ತ್ರಿಪುರಾಗಳಲ್ಲಿ ಮಾ.15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಮಾ.13ರೊಳಗೆ ಅರುಣಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗುವ ಸಂಭವವಿದೆ. ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿಯೂ ಮಾ.13ರ ಒಳಗಾಗಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: ಭಾರತಕ್ಕೆ ಶೀಘ್ರವೇ ಸ್ಟಾರ್‌ಲಿಂಕ್‌ ಸ್ಯಾಟಲೈಟ್‌ ಇಂಟರ್ನೆಟ್‌ – ಮಸ್ಕ್‌ ಕಂಪನಿ ಜೊತೆ ಜಿಯೋ, ಏರ್‌ಟೆಲ್‌ ಒಪ್ಪಂದ

    ಪೂರ್ವ ಕರಾವಳಿಯ ಮೀನುಗಾರರು ಪರಿಸ್ಥಿತಿ ಸ್ಥಿರವಾಗುವವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಪೂರ್ವ ಕರಾವಳಿಯಲ್ಲಿ ಅತಿಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮಾರ್ಚ್ 15ರ ನಂತರ ಚಂಡಮಾರುತದ ಪರಿಸ್ಥಿತಿ ದುರ್ಬಲಗೊಳ್ಳುವ ಸಾಧ್ಯತೆಯಿದ್ದು, ಕೆಲವು ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಂಭವವಿದೆ. ಇದನ್ನೂ ಓದಿ: ಪ್ರಯಾಣಿಕರ ಸೋಗಿನಲ್ಲಿ ಗಾಂಜಾ ಸಾಗಾಟ – 14 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

  • ಏರೋಸ್ಪೇಸ್‌ ಕಚೇರಿ ದಾಳಿಗೆ ಪ್ರತೀಕಾರ – ಇರಾಕ್‌, ಸಿರಿಯಾದಲ್ಲಿರುವ ಉಗ್ರರ ನೆಲೆ ಮೇಲೆ ಟರ್ಕಿ ಏರ್‌ಸ್ಟ್ರೈಕ್‌

    ಏರೋಸ್ಪೇಸ್‌ ಕಚೇರಿ ದಾಳಿಗೆ ಪ್ರತೀಕಾರ – ಇರಾಕ್‌, ಸಿರಿಯಾದಲ್ಲಿರುವ ಉಗ್ರರ ನೆಲೆ ಮೇಲೆ ಟರ್ಕಿ ಏರ್‌ಸ್ಟ್ರೈಕ್‌

    ಅಂಕಾರಾ: ಟರ್ಕಿಶ್ ಏರೋಸ್ಪೇಸ್ ಇಂಡಸ್ಟ್ರೀಸ್ (TUSAS) ಪ್ರಧಾನ ಕಚೇರಿ ಮೇಲೆ ದಾಳಿ (Terror Attack) ನಡೆಸಿದ್ದಕ್ಕೆ ಪ್ರತಿಯಾಗಿ ಟರ್ಕಿ ವಾಯುಪಡೆಯು ಬುಧವಾರ ಇರಾಕ್ (Iraq) ಮತ್ತು ಸಿರಿಯಾದಲ್ಲಿನ (Syria) ಕುರ್ದಿಶ್ ಉಗ್ರಗಾಮಿಗಳ ಮೇಲೆ ವಾಯು ದಾಳಿ (Airstrikes) ನಡೆಸಿದೆ.

    ಈ ವೈಮಾನಿಕ ದಾಳಿಯಲ್ಲಿ 30ಕ್ಕೂ ಹೆಚ್ಚು ಗುರಿಗಳನ್ನು ನಾಶಗೊಳಿಸಲಾಗಿದೆ ಎಂದು ಟರ್ಕಿಯ (Turkey) ರಕ್ಷಣಾ ಸಚಿವಾಲಯ ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ.

    ಕುರ್ದಿಶ್ ಉಗ್ರಗಾಮಿಗಳು (Kurdish Militants) ಏರೋಸ್ಪೇಸ್ ಕಚೇರಿ ಮೇಲೆ ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿರುವುದು ವಿಶೇಷ. ರಕ್ಷಣಾ ಕಂಪನಿಯ ಮೇಲಿನ ದಾಳಿಯ ಹಿಂದೆ ಕುರ್ದಿಸ್ತಾನ್ ವರ್ಕರ್ಸ್ ಪಾರ್ಟಿ ಅಥವಾ ಪಿಕೆಕೆ ಕೈವಾಡವಿದೆ ಟರ್ಕಿ ರಕ್ಷಣಾ ಸಚಿವ ಯಾಸರ್ ಗುಲೇರ್ ಹೇಳಿದ್ದಾರೆ.

    ಇರಾಕ್‌ನಲ್ಲಿ ನೆಲೆ ಹೊಂದಿರುವ ಪಿಕೆಕೆ ಮತ್ತು ಸಿರಿಯಾದಲ್ಲಿರುವ ಕುರ್ದಿಶ್‌ ಉಗ್ರರ ಮೇಲೆ ಟರ್ಕಿ ನಿಯಮಿತವಾಗಿ ವಾಯುದಾಳಿಗಳನ್ನು ನಡೆಸಿಕೊಂಡೇ ಬಂದಿದೆ. ಕೊನೆಯ ಉಗ್ರನನ್ನು ನಿರ್ಮೂಲನೆ ಮಾಡುವರೆಗೂ ನಾವು ದಾಳಿ ನಡೆಸುತ್ತೇವೆ ಎಂದು ಗುಲೇರ್ ತಿಳಿಸಿದ್ದಾರೆ. ಇದನ್ನೂ ಓದಿ: ಬೈರೂತ್‌ ಮೇಲೆ ಇಸ್ರೇಲ್‌ ಮತ್ತೊಂದು ದಾಳಿ; ಮೂರೇ ಸೆಕೆಂಡುಗಳಲ್ಲಿ ದೈತ್ಯ ಕಟ್ಟಡಗಳು ಧ್ವಂಸ

    ಬ್ರಿಕ್ಸ್‌ ಸಭೆಯಲ್ಲಿ ಭಾಗಿಯಾಗಿರುವ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್, ನಾನು ಈ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

    TUSAS ಸಂಸ್ಥೆ ನಾಗರಿಕ ಮತ್ತು ಮಿಲಿಟರಿ ವಿಮಾನಗಳು, ಮಾನವರಹಿತ ವೈಮಾನಿಕ ವಾಹನಗಳು, ರಕ್ಷಣಾ ಉಪಕರಣಗಳನ್ನು ಅಭಿವೃದ್ಧಿಪಡಿಸಿ ಜೋಡಿಸುತ್ತದೆ. ಕುರ್ದಿಶ್ ಉಗ್ರಗಾಮಿಗಳ ವಿರುದ್ಧದ ಹೋರಾಟದಲ್ಲಿ ಟರ್ಕಿ ಮೇಲುಗೈ ಸಾಧಿಸುವಲ್ಲಿ ಅದರ UAV ಗಳು ಪ್ರಮುಖ ಪಾತ್ರವಹಿಸಿದ್ದು ಸುಮಾರು 10 ಸಾವಿರ ಮಂದಿ ಉದ್ಯೋಗ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಇಬ್ಬರು ಉಗ್ರರು ಈ ಸಂಸ್ಥೆಯ ಮೇಲೆ ದಾಳಿ ನಡೆಸಿದ್ದಾರೆ.

     

    1980 ರ ದಶಕದಿಂದಲೂ ಕುರ್ದಿಶ್‌ಗಳು ಆಗ್ನೇಯ ಟರ್ಕಿಯಲ್ಲಿ ಪ್ರತ್ಯೇಕ ರಾಷ್ಟ್ರಕ್ಕಾಗಿ ಹೋರಾಡುತ್ತಿದ್ದಾರೆ. ಇದನ್ನು ಟರ್ಕಿ ಮತ್ತು ಅದರ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳು ಇದನ್ನು ಉಗ್ರ ಸಂಘಟನೆ ಎಂದು ಕರೆದಿವೆ.

     


    ಬುಧವಾರ ಶಸ್ತ್ರಸಜ್ಜಿತರಾಗಿ ಓರ್ವ ಪುರುಷ, ಮಹಿಳೆ TUSAS ಕಾಂಪ್ಲೆಕ್ಸ್‌ಗೆ ಆಗಮಿಸಿ ಮನಸ್ಸಿಗೆ ಬಂದಂತೆ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ 5 ಮಂದಿ ಸಾವನ್ನಪ್ಪಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೊನೆಗೆ ಭದ್ರತಾ ಪಡೆ ಇಬ್ಬರು ಹತ್ಯೆ ಮಾಡಿದ್ದಾರೆ.

  • ಇರಾಕ್‍ನಿಂದ ಚೀನಾಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಹಠಾತ್‍ ಕುಸಿದು ಬಿದ್ದು ಬಾಲಕಿ ಸಾವು

    ಇರಾಕ್‍ನಿಂದ ಚೀನಾಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಹಠಾತ್‍ ಕುಸಿದು ಬಿದ್ದು ಬಾಲಕಿ ಸಾವು

    – ಕೊಲ್ಕತ್ತಾ ಏರ್‌ಪೋರ್ಟ್‌ನಲ್ಲಿ ವಿಮಾನ ತುರ್ತು ಭೂಸ್ಪರ್ಶ

    ಕೋಲ್ಕತ್ತಾ: ಇರಾಕ್‌ನ (Iraq) ಬಾಗ್ದಾದ್‍ನಿಂದ ಚೀನಾದ (China) ಗುವಾಂಗ್‍ಝೌಗೆ ತೆರಳುತ್ತಿದ್ದ ಇರಾಕಿ ಏರ್‌ವೇಸ್ ವಿಮಾನದಲ್ಲಿ 16 ವರ್ಷದ ಬಾಲಕಿಯೊಬ್ಬಳು ಕುಸಿದುಬಿದ್ದ ಮೃತಪಟ್ಟ ಘಟನೆ ನಡೆದಿದೆ.

    ವಿಮಾನದಲ್ಲಿದ್ದ ಬಾಲಕಿ ಹಠಾತ್ ಅಸ್ವಸ್ಥಗೊಂಡಿದ್ದಾಳೆ. ಬಳಿಕ ಬಾಲಕಿ ಕುಸಿದು ಬಿದ್ದಿದ್ದಾಳೆ. ಇದರಿಂದಾಗಿ ವಿಮಾನನ್ನು ತಕ್ಷಣ ಕೋಲ್ಕತ್ತಾದ (Kolkata) ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ತುರ್ತು ಭೂಸ್ಪರ್ಶ ಮಾಡಲಾಗಿದೆ.

    ಬಳಿಕ ವಿಮಾನ ನಿಲ್ದಾಣದ ಆರೋಗ್ಯ ಅಧಿಕಾರಿ ಬಾಲಕಿಯನ್ನು ಪರೀಕ್ಷಿಸಿದಾಗ ನಾಡಿಮಿಡಿತ ಹಾಗೂ ಹೃದಯ ಬಡಿತ ಕಂಡು ಬರಲಿಲ್ಲ. ಹೆಚ್ಚಿನ ಚಿಕಿತ್ಸೆಗೆ ವೈದ್ಯರು ಹತ್ತಿರದ ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ವೇಳೆ ಬಾಲಕಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ರದ್ದು, ಒಪಿಎಸ್ ಜಾರಿ: ನಾಸಿರ್ ಹುಸೇನ್

    ವೈದ್ಯರು ನೀಡಿದ ಮಾಹಿತಿಯ ಆಧಾರದ ಮೇಲೆ ಬಾಗುಯಾಟಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

    ಬಾಲಕಿ ಇರಾಕ್‍ನ ಬಾಗ್ದಾದ್ ಜಿಲ್ಲೆಯ ಸರ್ ಚಿನಾರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿದ್ದಳು. ಬಾಲಕಿಯೊಂದಿಗೆ ಪ್ರಯಾಣಿಸುತ್ತಿದ್ದ ಆಕೆಯ ಸಂಬಂಧಿಕರಿಗೆ ಇಂಗ್ಲಿಷ್‍ನಲ್ಲಿ ಮಾತನಾಡಲು ಸಾಧ್ಯವಾಗದ ಕಾರಣ ಅವರೊಂದಿಗೆ ಸಂವಹನ ನಡೆಸುವುದು ಕಷ್ಟಕರವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಇರಾಕಿನ ಬಾಲಕಿಯ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದೆಹಲಿಯಲ್ಲಿರುವ ಇರಾಕ್ ರಾಯಭಾರ ಕಚೇರಿಯನ್ನೂ ಪೊಲೀಸರು ಸಂಪರ್ಕಿಸಲಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ದುರಂತ; ಮಗನಿಗಾಗಿ ಆಟಿಕೆ ಖರೀದಿಸಿದ್ದ ಮೃತ ಅರ್ಜುನ್

  • ಹೆಣ್ಣುಮಕ್ಕಳ ವಿವಾಹದ ವಯಸ್ಸನ್ನು 9 ಕ್ಕೆ ಇಳಿಸಲು ಪ್ರಸ್ತಾಪ – ಇರಾಕ್‌ ಮಸೂದೆಗೆ ಆಕ್ರೋಶ

    ಹೆಣ್ಣುಮಕ್ಕಳ ವಿವಾಹದ ವಯಸ್ಸನ್ನು 9 ಕ್ಕೆ ಇಳಿಸಲು ಪ್ರಸ್ತಾಪ – ಇರಾಕ್‌ ಮಸೂದೆಗೆ ಆಕ್ರೋಶ

    ಬಾಗ್ದಾದ್: ಇರಾಕ್ (Iraq) ಸಂಸತ್ತಿನಲ್ಲಿ ಪ್ರಸ್ತಾವಿತ ಮಸೂದೆಯೊಂದು ವ್ಯಾಪಕ ಆಕ್ರೋಶ ಮತ್ತು ಕಳವಳ ಹುಟ್ಟುಹಾಕಿದೆ. ಈ ಮಸೂದೆ, ಹೆಣ್ಣುಮಕ್ಕಳ ವಿವಾಹದ ಕಾನೂನುಬದ್ಧ ವಯಸ್ಸನ್ನು ಕೇವಲ 9 ವರ್ಷಕ್ಕೆ ಇಳಿಸಲು ಪ್ರಯತ್ನಿಸುತ್ತಿದೆ.

    ಇರಾಕ್ ನ್ಯಾಯ ಸಚಿವಾಲಯವು ಪರಿಚಯಿಸಿದ ವಿವಾದಾತ್ಮಕ ಶಾಸನವು, ದೇಶದ ವೈಯಕ್ತಿಕ ಸ್ಥಿತಿಯ ಕಾನೂನನ್ನು ತಿದ್ದುಪಡಿ ಮಾಡುವ ಗುರಿಯನ್ನು ಹೊಂದಿದೆ. ಈಗಾಗಲೇ ಇರುವ ಕಾನೂನು ಮದುವೆಗೆ ಕನಿಷ್ಠ ವಯಸ್ಸನ್ನು 18 ಕ್ಕೆ ನಿಗದಿಪಡಿಸುತ್ತದೆ.

    ಕೌಟುಂಬಿಕ ವ್ಯವಹಾರಗಳನ್ನು ನಿರ್ಧರಿಸಲು ಧಾರ್ಮಿಕ ಅಧಿಕಾರಿಗಳು ಅಥವಾ ನಾಗರಿಕ ನ್ಯಾಯಾಂಗದ ನಡುವೆ ಆಯ್ಕೆ ಮಾಡಲು ಈ ಮಸೂದೆಯು ನಾಗರಿಕರಿಗೆ ಅವಕಾಶ ನೀಡುತ್ತದೆ. ಇದು ಉತ್ತರಾಧಿಕಾರ, ವಿಚ್ಛೇದನ ಮತ್ತು ಮಕ್ಕಳ ಪಾಲನೆಯ ವಿಷಯಗಳಲ್ಲಿ ಹಕ್ಕುಗಳ ಕಡಿತಕ್ಕೆ ಕಾರಣವಾಗುತ್ತದೆ ಎಂದು ಕೆಲ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

    ಮಸೂದೆ ಅಂಗೀಕಾರವಾದರೆ, 9 ವರ್ಷ ವಯಸ್ಸಿನ ಹುಡುಗಿಯರು ಮತ್ತು 15 ವರ್ಷ ವಯಸ್ಸಿನ ಹುಡುಗರು ವಿವಾಹವಾಗಲು ಅವಕಾಶ ಇರುತ್ತದೆ. ಇದು ಹೆಚ್ಚಿನ ಬಾಲ್ಯ ವಿವಾಹ ಮತ್ತು ಹೆಣ್ಣಿನ ಶೋಷಣೆಗೆ ದಾರಿ ಮಾಡಿಕೊಡುತ್ತದೆ. ಈ ಪ್ರತಿಗಾಮಿ ಕ್ರಮವು ಮಹಿಳೆಯರ ಹಕ್ಕುಗಳು ಮತ್ತು ಲಿಂಗ ಸಮಾನತೆಯನ್ನು ದುರ್ಬಲಗೊಳಿಸುತ್ತದೆ ಎಂದು ವಿಮರ್ಶಕರು ವಾದಿಸುತ್ತಾರೆ.

    ಮಾನವ ಹಕ್ಕುಗಳ ಸಂಘಟನೆಗಳು, ಮಹಿಳಾ ಗುಂಪುಗಳು ಮತ್ತು ನಾಗರಿಕ ಸಮಾಜದ ಕಾರ್ಯಕರ್ತರು ಈ ಮಸೂದೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಯುವತಿಯರ ಶಿಕ್ಷಣ, ಆರೋಗ್ಯ ಮತ್ತು ಯೋಗಕ್ಷೇಮದ ಮೇಲೆ ಬೀರಬಹುದಾದ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಸಿದ್ದಾರೆ.

    ವಿಶ್ವಸಂಸ್ಥೆಯ UNICEF ಪ್ರಕಾರ, ಇರಾಕ್‌ನಲ್ಲಿ 28% ಹುಡುಗಿಯರು ಈಗಾಗಲೇ 18 ವರ್ಷಕ್ಕಿಂತ ಮುಂಚೆಯೇ ಮದುವೆಯಾಗಿದ್ದಾರೆ. ಈ ಕಾನೂನನ್ನು ಅಂಗೀಕರಿಸುವುದರಿಂದ ದೇಶವು ಮತ್ತೆ ಹಿಂದಿನ ಕಾಲದ ಸಂಪ್ರದಾಯಕ್ಕೆ ಜೋತುಬಿದ್ದಂತಾಗುತ್ತದೆ ಎಂದು ಹ್ಯೂಮನ್ ರೈಟ್ಸ್ ವಾಚ್ ಸಂಶೋಧಕಿ ಸಾರಾ ಸಾನ್ಬರ್ ಅಭಿಪ್ರಾಯಪಟ್ಟಿದ್ದಾರೆ.

  • ಮದುವೆ ಹಾಲ್‍ನಲ್ಲಿ ಅಗ್ನಿ ಅವಘಡ- 100 ಮಂದಿ ದುರ್ಮರಣ

    ಮದುವೆ ಹಾಲ್‍ನಲ್ಲಿ ಅಗ್ನಿ ಅವಘಡ- 100 ಮಂದಿ ದುರ್ಮರಣ

    ಬಾಗ್ದಾದ್: ಮದುವೆ ಹಾಲ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 100 ಮಂದಿ ಸಾವನ್ನಪ್ಪಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಉತ್ತರ ಇರಾಕ್‍ನಲ್ಲಿ (Northern Iraq) ನಡೆದಿದೆ.

    ಇರಾಕ್‍ನ ನಿನೆವೆ ಪ್ರಾಂತ್ಯದ ಹಮ್ದನಿಯಾ (Nineveh Province) ಪ್ರದೇಶದಲ್ಲಿ ಬೆಂಕಿ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಪ್ರಧಾನವಾಗಿ ಕ್ರಿಶ್ಚಿಯನ್ ಪ್ರದೇಶವಾಗಿದ್ದು, ಮೊಸುಲ್ ನಗರದ ಹೊರಗೆ ರಾಜಧಾನಿ ಬಾಗ್ದಾದ್‍ನ ವಾಯುವ್ಯಕ್ಕೆ ಸುಮಾರು 335 ಕಿಲೋಮೀಟರ್ (205 ಮೈಲುಗಳು) ದೂರದಲ್ಲಿದೆ.

    ಈ ಎಲ್ಲಾ ದೃಶ್ಯಗಳು ಹಾಲ್‍ನಲ್ಲಿದ್ದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಗೊಂಡವರಲ್ಲಿ ಕೆಲವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ನಿನೆವೆ ಪ್ರಾಂತೀಯ ಗವರ್ನರ್ ನಜೀಮ್ ಅಲ್-ಜುಬೌರಿ ಹೇಳಿದ್ದಾರೆ. ಇದನ್ನೂ ಓದಿ: ನಾಪತ್ತೆಯಾದ ಯುವಕನ ಪತ್ತೆ ಮಾಡಿದ ಸಾಕುನಾಯಿ- ಗ್ರಾಮಸ್ಥರಿಂದ ಇಬ್ಬರ ಮೆರವಣಿಗೆ

    ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪಟಾಕಿಯಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇರಾಕ್‌ನಲ್ಲಿ ಮಾರಾಟವಾದ ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ – WHO ಎಚ್ಚರಿಕೆ

    ಇರಾಕ್‌ನಲ್ಲಿ ಮಾರಾಟವಾದ ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ – WHO ಎಚ್ಚರಿಕೆ

    ಬಗ್ದಾದ್: ಇರಾಕ್‌ನಲ್ಲಿ (Iraq) ಮಾರಾಟವಾಗಿರುವ ಭಾರತದಲ್ಲಿ (India) ತಯಾರಿಸಲಾದ ಕಾಮನ್ ಕೋಲ್ಡ್ ಕೆಮ್ಮಿನ ಸಿರಪ್‌ನಲ್ಲಿ (Cough Syrup) ವಿಷಕಾರಿ ಅಂಶ ಪತ್ತೆಯಾಗಿದ್ದು, ಬಳಕೆಗೆ ಯೋಗ್ಯವಲ್ಲದ್ದಾಗಿರುವುದು ಕಂಡುಬಂದ ಬಳಿಕ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದೆ.

    ಕೋಲ್ಡ್ ಔಟ್ ಎಂಬ ಹೆಸರಿನ ಸಿರಪ್ ಅನ್ನು ಭಾರತದ ಫೋರ್ಟ್ಸ್ ಲ್ಯಾಬೋರೇಟರೀಸ್ ತಯಾರಿಸಿದೆ. ಗ್ಲೋಬಲ್ ಹೆಲ್ತ್ ಏಜೆನ್ಸಿಯು ಈ ಸಿರಪ್‌ನಲ್ಲಿ ವಿಷಕಾರಿ ಅಂಶವನ್ನು ಪತ್ತೆಹಚ್ಚಿದೆ. ಇದರಲ್ಲಿ ಡೈಥಿಲೀನ್ ಮತ್ತು ಎಥಿಲೀನ್ ಗ್ಲೈಕೋಲ್‌ಗಿಂತ ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದನ್ನು ಕಂಡುಹಿಡಿದಿರುವುದಾಗಿ ವರದಿಯಾಗಿದೆ.

    ಕೆಮ್ಮಿನ ಸಿರಪ್ ತಯಾರಕರು ಹಾಗೂ ಮಾರಾಟಗಾರರು ಉತ್ಪನ್ನದ ಗುಣಮಟ್ಟ ಹಾಗೂ ಸುರಕ್ಷತೆಯ ಬಗ್ಗೆ ಏಜೆನ್ಸಿಗೆ ಯಾವುದೇ ಖಾತರಿಗಳನ್ನು ನೀಡಿಲ್ಲ. ಕಂಪನಿಗಳು ಈ ಆರೋಪಗಳಿಗೆ ಹಾಗೂ ಎಚ್ಚರಿಕೆಗಳಿಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಮಹಾರಾಷ್ಟ್ರದ ಮಂತ್ರಾಲಯಕ್ಕೆ ಬೆದರಿಕೆ ಕರೆ, ವ್ಯಕ್ತಿ ಅರೆಸ್ಟ್‌

    ಕಳೆದ ವರ್ಷ ಗ್ಯಾಂಬಿಯಾದಲ್ಲಿ 66 ಹಾಗೂ ಉಜ್ಬೇಕಿಸ್ತಾನದಲ್ಲಿ 18 ಮಕ್ಕಳ ಸಾವಿಗೆ ಭಾರತದಿಂದ ರಫ್ತಾಗಿದ್ದ ಕೆಮ್ಮಿನ ಸಿರಪ್‌ಗಳು ಕಾರಣವಾಗಿದೆ ಎಂದು ಆರೋಪಿಸಲಾಗಿತ್ತು. ಇದಾದ ಬಳಿಕ ಭಾರತದ 5 ಕಂಪನಿಗಳ ಸಿರಪ್‌ಗಳನ್ನು ಪರೀಕ್ಷೆಗೆ ಒಳಪಡಿಸಿ ಅದರಲ್ಲಿ ವಿಷಕಾರಿ ಅಂಶಗಳನ್ನು ಪತ್ತೆಹಚ್ಚಲಾಯಿತು. ಇದನ್ನೂ ಓದಿ: ಒಡಿಶಾ ರೈಲು ದುರಂತ- ಸಂತ್ರಸ್ತರಿಗಾಗಿ ಅಮೆರಿಕಾದಲ್ಲಿ 8 ಲಕ್ಷ ರೂ. ಸಂಗ್ರಹಿಸಿದ 16ರ ಹುಡುಗಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುದ್ಧದಲ್ಲಿ ಐಸಿಸ್ ನಾಯಕ ಖುರಾಶಿ ಸಾವು

    ಯುದ್ಧದಲ್ಲಿ ಐಸಿಸ್ ನಾಯಕ ಖುರಾಶಿ ಸಾವು

    ಬೈರುತ್: ಇಸ್ಲಾಮಿಕ್ ಸ್ಟೇಟ್ಸ್ ಅಥವಾ ಐಸಿಸ್‌ (ISIS) ಭಯೋತ್ಪಾದಕ ಗುಂಪಿನ ನಾಯಕ ಅಬು ಹಸನ್ ಅಲ್-ಹಶಿಮಿ ಅಲ್-ಖುರಾಶಿ (Abu Hasan al-Hashimi al-Qurashi) ಯುದ್ಧದಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ಭಯೋತ್ಪಾದಕ ಗುಂಪು ಘೋಷಿಸಿದೆ. ಈ ಬೆನ್ನಲ್ಲೇ ಗುಂಪಿಗೆ ಬದಲಿ ನಾಯಕನನ್ನೂ ಘೋಷಣೆ ಮಾಡಿದೆ.

    ಐಸಿಸ್‌ (ISIS) ಭಯೋತ್ಪಾದಕ ಸಂಘಟನೆಯು ಗುಂಪನ್ನು ಮುನ್ನಡೆಸಲು ಬದಲಿ ನಾಯಕನಾಗಿ ಅಬು ಅಲ್-ಹುಸೇನ್ ಅಲ್-ಹುಸೇನಿ ಅಲ್-ಖುರಾಶಿ ಹೆಸರನ್ನು ಘೋಷಿಸಿದೆ. ಇದನ್ನೂ ಓದಿ: ಇರಾಕ್ ಏರ್‌ಸ್ಟ್ರೈಕ್ – 6 ಐಸಿಸ್‌ ಉಗ್ರರ ಹತ್ಯೆ

    ದೇವರ ಶತ್ರುಗಳೊಂದಿಗಿನ ಯುದ್ಧದಲ್ಲಿ ನಾಯಕ ಹಸನ್ ಅಲ್-ಹಶಿಮಿ ಅಲ್-ಖುರಾಶಿ ಕೊಲ್ಲಲ್ಪಟ್ಟಿದ್ದಾರೆ ಎಂದು ಗುಂಪು ಘೋಷಿಸಿದೆ. ಇದನ್ನೂ ಓದಿ: ಝಾಕೀರ್‌ ನಾಯ್ಕ್‌ The Real Inspiration – ಐಸಿಸ್‌ ಉಗ್ರರಂತೆ ಪೋಸ್‌ ನೀಡಿ ಪ್ರತೀಕಾರದ ಪ್ರತಿಜ್ಞೆ

    ಐಸಿಸ್‌ನ ಹಿಂದಿನ ನಾಯಕ ಅಬು ಇಬ್ರಾಹಿಂ ಅಲ್-ಖುರಾಶಿ ಈ ವರ್ಷದ ಆರಂಭದಲ್ಲಿ ಉತ್ತರ ಸಿರಿಯಾದ ಇಡ್ಲಿಬ್ ಪ್ರಾಂತ್ಯದಲ್ಲಿ ಅಮೆರಿಕ ನಡೆಸಿದ ದಾಳಿಯಲ್ಲಿ ಹತ್ಯೆಯಾಗಿದ್ದ. ಹಿಂದಿನ ನಾಯಕ ಅಬುಬಕರ್ ಅಲ್-ಬಾಗ್ದಾದಿಯನ್ನು 2019ರ ಅಕ್ಟೋಬರ್ ನಲ್ಲಿ ಇಡ್ಲಿಬ್‌ನಲ್ಲಿ ಪ್ರದೇಶದಲ್ಲಿ ಸಾವನ್ನಪ್ಪಿದ್ದ

    Live Tv
    [brid partner=56869869 player=32851 video=960834 autoplay=true]

  • ಇರಾಕ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ – ಗುಂಡಿನ ದಾಳಿಗೆ 23 ಮಂದಿ ಸಾವು, 300 ಜನರಿಗೆ ಗಾಯ

    ಇರಾಕ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ – ಗುಂಡಿನ ದಾಳಿಗೆ 23 ಮಂದಿ ಸಾವು, 300 ಜನರಿಗೆ ಗಾಯ

    ಬಾಗ್ದಾದ್: ಪ್ರಭಾವಿ ಶಿಯಾ ಧರ್ಮಗುರು ಮೊಕ್ತಾದ ಅಲ್ ಸದರ್ ತಮ್ಮ ರಾಜಕೀಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಬಳಿಕ ಇರಾಕ್ ರಾಜಧಾನಿ ಬಾಗ್ದಾದ್‌ನಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

    ಸದರ್ ಅವರ ಬೆಂಬಲಿಗರು ಹಾಗೂ ಇರಾಕಿನ ಪಡೆಗಳ ನಡುವಿನ ಘರ್ಷಣೆಯಲ್ಲಿ 23 ಮಂದಿ ಸಾವನ್ನಪ್ಪಿದ್ದಾರೆ. 380ಕ್ಕೂ ಹೆಚ್ಚು ಜನರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಡ್ರಗ್ಸ್ ಖರೀದಿಗೆ ಫೇಕ್ ಐಡಿ ಬಳಸುತ್ತಿದ್ದ ಮೈಕಲ್ ಜಾಕ್ಸನ್

    ಪ್ರತಿಭಟನಾಕಾರರು ಸರ್ಕಾರಿ ಅರಮನೆ ಹೊರಗಿನ ಸಿಮೆಂಟ್ ತಡೆಗೋಡೆಯನ್ನು ಒಡೆದು, ಅರಮನೆಯ ದ್ವಾರಗಳನ್ನು ಹಗ್ಗಗಳಿಂದ ಎಳೆದು ಮುರಿದಿದ್ದಾರೆ. ಇರಾಕಿನ ನಾಯಕರು ಹಾಗೂ ವಿದೇಶಿ ಗಣ್ಯರನ್ನು ಸದ್ಯ ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸ ಪ್ರಕರಣ; ನ್ಯಾಯಂಗ ನಿಂದನೆ ಪ್ರಕರಣ ಕೈಬಿಟ್ಟ ಸುಪ್ರೀಂ – BJP ನಾಯಕರಿಗೆ ಬಿಗ್ ರಿಲೀಫ್

    ಭಾರೀ ಪ್ರತಿಭಟನೆಯ ಹಿನ್ನೆಲೆ ಇರಾಕ್‌ನಾದ್ಯಂತ ಕರ್ಫ್ಯೂ ಘೋಷಿಸಲಾಗಿದೆ. ಉಸ್ತುವಾರಿ ಪ್ರಧಾನ ಮಂತ್ರಿ ಕ್ಯಾಬಿನೆಟ್ ಅಧಿವೇಶನವನ್ನು ಅಮಾನತುಗೊಳಿಸಲಾಗಿದೆ. ಬಾಗ್ದಾದ್‌ನಾದ್ಯಂತ ಮೆಷಿನ್ ಗನ್‌ಗಳಿಂದ ಗುಂಡಿನ ಸದ್ದುಗಳು ಕೇಳಿಬರುತ್ತಿದೆ ಎಂದು ವರದಿಯಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಇರಾಕ್‌ನಲ್ಲಿ ಮರಳಿನ ಬಿರುಗಾಳಿ – 4 ಸಾವಿರ ಜನರು ಆಸ್ಪತ್ರೆಗೆ

    ಇರಾಕ್‌ನಲ್ಲಿ ಮರಳಿನ ಬಿರುಗಾಳಿ – 4 ಸಾವಿರ ಜನರು ಆಸ್ಪತ್ರೆಗೆ

    ಬಗ್ದಾದ್: ಇರಾಕ್‌ನಲ್ಲಿ ಸೋಮವಾರ ಪ್ರಾರಂಭವಾದ ಮರಳಿನ ಬಿರುಗಾಳಿಯಿಂದಾಗಿ ಬರೋಬ್ಬರಿ 4,000 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಏಪ್ರಿಲ್ ಮಧ್ಯಭಾಗದ ಬಳಿಕ ಇರಾಕ್‌ನಲ್ಲಿ ಅಪ್ಪಳಿಸಿದ 8ನೇ ಧೂಳಿನ ಬಿರುಗಾಳಿ ಇದಾಗಿದ್ದು, ರೋಗಿಗಳು ಉಸಿರಾಟದ ತೊಂದರೆಯಿಂದ ಆಸ್ಪತ್ರೆ ದಾಖಲಾಗುತ್ತಿದ್ದಾರೆ.

    ಇರಾಕ್ ದೇಶದಲ್ಲಿ ತೀವ್ರವಾದ ಬರ, ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಕಡಿಮೆ ಮಳೆಯ ಕಾರಣದಿಂದಾಗಿ ತೀವ್ರವಾದ ಮರಳಿನ ಬಿರುಗಾಳಿ ಏಳುತ್ತಿದೆ. ಮೇ ತಿಂಗಳ ಆರಂಭದಲ್ಲಿ ಇರಾಕ್‌ನಲ್ಲಿ ಇದೇ ರೀತಿ ಮರಳಿನ ಬಿರುಗಾಳಿ ಎದ್ದಿದ್ದು, ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು. ಸುಮಾರು 5,000 ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಇದನ್ನೂ ಓದಿ: ಏರ್‌ಲೈನ್ ಸಿಬ್ಬಂದಿ ಸಹಾಯದಿಂದ ವಿಮಾನದಲ್ಲೇ ಆಯ್ತು ಹೆರಿಗೆ

    ಸೋಮವಾರ ಪ್ರಾರಂಭವಾದ ಬಿರುಗಾಳಿಯಿಂದಾಗಿ ಅಲ್ಲಿನ ಜನರಿಗೆ ಉಸಿರಾಟದ ತೊಂದರೆ ಹೆಚ್ಚಾಗಿದೆ. ಮುಂಜಾಗೃತಾ ಕ್ರಮವಾಗಿ ಅಲ್ಲಿನ ವಿಮಾನ ನಿಲ್ದಾಣಗಳು, ಶಾಲೆಗಳು ಹಾಗೂ ಕಚೇರಿಗಳನ್ನು ಮುಚ್ಚಲಾಗಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ

    ಮರಳಿನ ಬಿರುಗಾಳಿಯ ಪರಿಣಾಮ ಇರಾಕ್ ರಾಜಧಾನಿ ಬಗ್ದಾದ್‌ನಲ್ಲಿ ಧೂಳು ಆವರಿಸಿಕೊಂಡಿದೆ. ದಕ್ಷಿಣ ಇರಾಕ್‌ನ ನಜಾಫ್ ಹಾಗೂ ಉತ್ತರ ಕುರ್ದ್ ಸೇರಿದಂತೆ ಇತರ ನಗರಗಳ ಪರಿಸ್ಥಿತಿಯೂ ಹದಗೆಟ್ಟಿದೆ ಎಂದು ವರದಿಗಳು ತಿಳಿಸಿವೆ.