ಡಬ್ಲಿನ್: ವಿಂಡೀಸ್ ಆಟಗಾರ ಮ್ಯಾಥ್ಯೂ ಫೋರ್ಡ್ (Matthew Forde) 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ 10 ವರ್ಷಗಳ ಹಿಂದೆ ಎಬಿ ಡಿ ವಿಲಿಯರ್ಸ್ (AB de Villiers) ಮಾಡಿದ್ದ ವಿಶ್ವದಾಖಲೆಯೊಂದನ್ನ ಸರಿಗಟ್ಟಿದ್ದಾರೆ.
ಆದ್ರೆ ಈ ಇನ್ನಿಂಗ್ಸ್ನಲ್ಲಿ 8ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಫೋರ್ಡ್ 16 ಎಸೆತಗಳಲ್ಲಿ 1 ಬೌಂಡರಿ, 8 ಸಿಕ್ಸರ್ ಸಹಿತ 50 ರನ್ ಬಾರಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಅತಿವೇಗದ ಅರ್ಧಶತಕ ಸಿಡಿಸಿದ್ದ ಲೆಜೆಂಡ್ ಎಬಿ ಡಿ ವಿಲಿಯರ್ಸ್ ಅವರ ವಿಶ್ವದಾಖಲೆಯನ್ನು ಸರಿಗಟ್ಟಿದ್ದಾರೆ. 2015ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧವೇ ಡಿವಿಲಿಯರ್ಸ್ 16 ಎಸೆತಗಳಲ್ಲಿ ಸ್ಫೋಟಕ ಫಿಫ್ಟಿ ಸಿಡಿಸಿದ ಸಾಧನೆ ಮಾಡಿದ್ದರು.
ನ್ಯೂಯಾರ್ಕ್: ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ (T20 World Cup) ಟೂರ್ನಿಯಲ್ಲಿ ಭಾರತ (Team India) ಶುಭಾರಂಭ ಕಂಡಿದೆ. ಐರ್ಲೆಂಡ್ ವಿರುದ್ಧ ನಡೆದ ಆರಂಭಿಕ ಪಂದ್ಯದಲ್ಲೇ ಹಾರ್ದಿಕ್ ಪಾಂಡ್ಯ (Hardik Pandya) ಅವರ ಬೌಲಿಂಗ್ ಕಮಾಲ್, ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ನೆರವಿನಿಂದ ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಇಲ್ಲಿನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ತಂಡ 20 ಓವರ್ಗಳಲ್ಲಿ ಕೇವಲ 96 ರನ್ಗಳಿಗೆ ಸರ್ವಪತನ ಕಂಡಿತು. ಅಲ್ಪಮೊತ್ತದ ಗುರಿ ಬೆನ್ನತ್ತಿದ ಟೀಂ ಇಂಡಿಯಾ 12.2 ಓವರ್ಗಳಲ್ಲೇ 2 ವಿಕೆಟ್ ನಷ್ಟಕ್ಕೆ 97 ರನ್ ಗಳಿಸಿ ಗೆದ್ದು ಬೀಗಿತು.
ಚೇಸಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ ಜೋಡಿ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ವಿರಾಟ್ ಕೇವಲ 1 ರನ್ ಗಳಿಸಿ ಔಟಾದರು. ಬಳಿಕ ಜೊತೆಗೂಡಿದ ರಿಷಭ್ ಪಂತ್ ಹಾಗೂ ಸೂರ್ಯಕುಮಾರ್ ಜೋಡಿ ತಾಳ್ಮೆಯ ಆಟವಾಡಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ನಾಯಕ ರೋಹಿತ್ ಶರ್ಮಾ 52 ರನ್ (37 ಎಸೆತ, 3 ಸಿಕ್ಸರ್, 4 ಬೌಂಡರಿ) ಚಚ್ಚಿದರೆ, ರಿಷಭ್ ಪಂತ್ 36 ರನ್, ಸೂರ್ಯಕುಮಾರ್ ಯಾದವ್ 2 ರನ್ ಗಳಿಸಿದರು.
ಪಾಂಡ್ಯ ಭರ್ಜರಿ ಕಂಬ್ಯಾಕ್:
2024ರ ಐಪಿಎಲ್ ಆವೃತ್ತಿಯಲ್ಲಿ ಕಳಪೆ ಬೌಲಿಂಗ್ ಪ್ರದರ್ಶನದಿಂದ ಟೀಕೆಗೆ ಗುರಿಯಾಗಿದ್ದ ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್ ಆರಂಭಿಕ ಪಂದ್ಯದಲ್ಲೇ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ. 4 ಓವರ್ಗಳಲ್ಲಿ 27 ರನ್ ಬಿಟ್ಟುಕೊಟ್ಟ ಪಾಂಡ್ಯ 3 ಪ್ರಮುಖ ವಿಕೆಟ್ ಪಡೆದಿದ್ದಾರೆ. ಇನ್ನೂ ಜಸ್ಪ್ರೀತ್ ಬುಮ್ರಾ, ಹರ್ಷ್ದೀಪ್ ಸಿಂಗ್ ತಲಾ 2 ವಿಕೆಟ್ ಕಿತ್ತರೆ, ಮೊಹಮ್ಮದ್ ಸಿರಾಜ್ ಮತ್ತು ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು. ಇದನ್ನೂ ಓದಿ: ಗೌತಮ್ ಗಂಭೀರ್ಗೆ ಬ್ಲ್ಯಾಂಕ್ ಚೆಕ್ ಆಫರ್ ಕೊಟ್ಟಿದ್ದೇಕೆ ಶಾರುಖ್?
ಬೆಂಗಳೂರು: ನಂದಿನಿ ಬ್ರಾಂಡ್ನಲ್ಲಿ (Nandini Milk) ತನ್ನ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (KMF), ಟಿ20 ಕ್ರಿಕೆಟ್ ವಿಶ್ವಕಪ್ಗಾಗಿ (T20 World Cup 2024) ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳಿಗೆ ಪ್ರಾಯೋಜಕತ್ವ ನೀಡಿದೆ.
ಈ ಕುರಿತು ಮಾತನಾಡಿರುವ ಕೆಎಂಎಫ್ನ ವ್ಯವಸ್ಥಾಪಕ ಎಂ.ಕೆ.ಜಗದೀಶ್, ಏ.20 ರಂದು ಒಪ್ಪಂದ ಅಧಿಕೃತಗೊಂಡಿದೆ. ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ (Scotland and Ireland) ತಂಡಗಳ ಆಟಗಾರರ ಜೆರ್ಸಿಯ ತೋಳಿನ ಭಾಗದ ಮೇಲೆ ಕೆಎಂಎಫ್ ಲೋಗೋ ಇರಲಿದೆ ಎಂದು ತಿಳಿಸಿದ್ದಾರೆ.
ಮಧ್ಯಪ್ರಾಚ್ಯ, ಸಿಂಗಾಪುರ, ಭೂತಾನ್, ಮ್ಯಾನ್ಮಾರ್ ಸೇರಿದಂತೆ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕೆಎಂಎಫ್ ಅಸ್ತಿತ್ವ ಹೊಂದಿದೆ. ವಿಶ್ವಕಪ್ ವೇಳೆ ಕೆಎಂಎಫ್ನ ಉತ್ಪನ್ನಗಳು ಅಮೆರಿಕದಲ್ಲಿ ಲಭ್ಯವಿರಲಿದೆ ಎಂದು ತಿಳಿಸಿದ್ದಾರೆ.
ಡಬ್ಲಿನ್: ಐರ್ಲೆಂಡ್ (Ireland) ವಿರುದ್ಧದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ (Team India) 33 ರನ್ಗಳಿಂದ ಜಯಗಳಿಸುವ ಮೂಲಕ ಇನ್ನೂ ಒಂದು ಪಂದ್ಯ ಇರುವಂತೆಯೇ ಸರಣಿಯನ್ನು ಗೆದ್ದುಕೊಂಡಿದೆ.
ಗೆಲ್ಲಲು 186 ರನ್ಗಳ ಗುರಿಯನ್ನು ಪಡೆದ ಐರ್ಲೆಂಡ್ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಈ ಮೂಲಕ ತಮ್ಮ ಮೊದಲ ನಾಯಕತ್ವದಲ್ಲಿ ಬುಮ್ರಾ ವಿದೇಶಿ ನೆಲದಲ್ಲಿ ಸರಣಿ ಗೆದ್ದಿದ್ದಾರೆ.
ಐರ್ಲೆಂಡ್ 63 ರನ್ಗಳಿಗೆ 4 ವಿಕೆಟ್ ಕಳೆದುಕೊಂಡಾಗ ಭಾರತ ಸುಲಭವಾಗಿ ಪಂದ್ಯವನ್ನು ಗೆಲ್ಲಬಹುದು ಎಂದು ಅಂದಾಜಿಸಲಾಗಿತ್ತು. ಆದರೆ 5ನೇ ವಿಕೆಟಿಗೆ ಆಂಡಿ ಬಾಲ್ಬಿರ್ನಿ ಮತ್ತು ಜಾರ್ಜ್ ಡಾಕ್ರೆಲ್ 30 ಎಸೆತಗಳಲ್ಲಿ 52 ರನ್ ಜೊತೆಯಾಟವಾಡಿ ಬಿಸಿ ಮುಟ್ಟಿಸಿದರು.
ತಂಡದ ಮೊತ್ತ 115 ರನ್ ಆಗಿದ್ದಾಗ ಜಾರ್ಜ್ ಡಾಕ್ರೆಲ್ ಎರಡನೇ ರನ್ ಓಡಲು ಯತ್ನಿಸಿದಾಗ ರನೌಟ್ ಆದರು. ಜಾರ್ಜ್ ಡಾಕ್ರೆಲ್ 13 ರನ್ ಗಳಿಸಿ ಔಟಾದರು. ಕೇವಲ 39 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ಆಂಡಿ ಬಾಲ್ಬಿರ್ನಿ 72 ರನ್ (51 ಎಸೆತ, 5 ಬೌಂಡರಿ, 4 ಸಿಕ್ಸರ್) ಸಿಡಿಸಿ ಔಟಾದರು. ಇವರಿಬ್ಬರು ಔಟಾದ ಬೆನ್ನಲ್ಲೇ ತಂಡದ ರನ್ ವೇಗ ಇಳಿಕೆಯಾಯಿತು. ಬುಮ್ರಾ, ಪ್ರಸಿದ್ಧ್ ಕೃಷ್ಣ, ರವಿ ಬಿಷ್ಣೋಯಿ ತಲಾ ಎರಡು ವಿಕೆಟ್ ಪಡೆದರೆ ಅರ್ಶ್ದೀಪ್ ಸಿಂಗ್ 1 ವಿಕೆಟ್ ಪಡೆದರು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ 34 ರನ್ಗಳಿಸುವಷ್ಟರಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ತಿಲಕ್ ವರ್ಮಾ ಅವರ ವಿಕೆಟ್ ಕಳೆದುಕೊಂಡಿತ್ತು. ಮೂರನೇ ವಿಕೆಟಿಗೆ ಸಂಜು ಸ್ಯಾಮ್ಸನ್ (Sanju Samson) ಮತ್ತು ಋತ್ರಾಜ್ ಗಾಯಕ್ವಾಡ್ (Ruturaj Gaikwad ) 49 ಎಸೆತಗಳಿಗೆ 71 ರನ್ ಜೊತೆಯಾಟವಾಡಿ ತಂಡದ ಮೊತ್ತವನ್ನು 100ರ ಗಡಿ ದಾಟಿಸಿದರು.
ಸ್ಯಾಮ್ಸನ್ 40 ರನ್ (26 ಎಸೆತ, 5 ಬೌಂಡರಿ, 1 ಸಿಕ್ಸರ್), ಗಾಯಕ್ವಾಡ್ 58 ರನ್ (43 ಎಸೆತ, 6 ಬೌಂಡರಿ 1 ಸಿಕ್ಸರ್) ಹೊಡೆದು ಔಟಾದರು. ನಂತರ ಶಿವಂ ದುಬೆ ಮತ್ತು ರಿಂಕು ಸಿಂಗ್ (Rinku Singh) 5ನೇ ವಿಕೆಟಿಗೆ 28 ಎಸೆತಗಳಲ್ಲಿ 55 ರನ್ ಜೊತೆಯಾಟವಾಡಿದರು. ರಿಂಕು ಸಿಂಗ್ 38 ರನ್ (21 ಎಸೆತ, 2 ಬೌಂಡರಿ, 3 ಸಿಕ್ಸರ್) ಶಿವಂ ದುಬೆ ಔಟಾಗದೇ 22 ರನ್(16 ಎಸೆತ, 2 ಸಿಕ್ಸರ್) ಹೊಡೆದರು.
ಡಬ್ಲಿನ್: ಬರೋಬ್ಬರಿ 11 ತಿಂಗಳ ಬಳಿಕ ಟೀಂ ಇಂಡಿಯಾಕ್ಕೆ ಉತ್ತಮ ಕಂಬ್ಯಾಕ್ ಮಾಡಿರುವ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಐರ್ಲೆಂಡ್ ವಿರುದ್ಧ ನಾಯಕನಾಗಿ ಕಣಕ್ಕಿಳಿದು ಟೀಂ ಇಂಡಿಯಾಕ್ಕೆ (Team India) ಜಯ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಮೊದಲ ಓವರ್ನ 4 ಎಸೆತಗಳಲ್ಲೇ 2 ವಿಕೆಟ್ ಪಡೆಯುವ ಮೂಲಕ ಮತ್ತೆ ಫಾರ್ಮ್ ಸಾಬೀತುಪಡಿಸಿದ್ದಾರೆ.
ಐರ್ಲೆಂಡ್ (Ireland) ವಿರುದ್ಧ ಆರಂಭಗೊಂಡಿರುವ 3 ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯದಲ್ಲೇ 2 ರನ್ಗಳ ರೋಚಕ ಜಯ ಸಾಧಿಸಿದೆ. ಮಲಾಹೈಡ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ 7 ವಿಕೆಟ್ ನಷ್ಟಕ್ಕೆ 139 ರನ್ ಕಲೆಹಾಕಿತ್ತು. 140 ರನ್ಗಳ ಗುರಿ ಪಡೆದ ಟೀಂ ಇಂಡಿಯಾ 6.5 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 47 ರನ್ ಗಳಿಸಿತ್ತು. ಈ ನಡುವೆ ಮಳೆ ಅಡ್ಡಿಯಾಗಿದ್ದರಿಂದ ಡಕ್ವರ್ತ್ ಲೂಯಿಸ್ ನಿಯಮ ಅನ್ವಯಿಸಲಾಯಿತು. ಇದರಿಂದ ಭಾರತ 2 ರನ್ಗಳ ರೋಚಕ ಜಯ ಸಾಧಿಸಿತು.
ಟಾಸ್ ಸೋತು ಕ್ರೀಸ್ಗಿಳಿದ ಐರ್ಲೆಂಡ್, ಟೀಂ ಇಂಡಿಯಾ ಬೌಲರ್ಗಳ ದಾಳಿಗೆ ತತ್ತರಿಸಿತು. ಪವರ್ ಪ್ಲೇ ಮುಗಿಯುವ ವೇಳೆಗೆ 30 ರನ್ ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡಿತ್ತು. ಆದ್ರೆ ಕೊನೆಯಲ್ಲಿ ಆಲ್ರೌಂಡರ್ ಬ್ಯಾರಿ ಜಾನ್ ಮೆಕಾರ್ಥಿ (Barry John McCarthy) 33 ಎಸೆತಗಳಲ್ಲಿ ಅಜೇಯ 51 ರನ್ (4 ಬೌಂಡರಿ, 4 ಸಿಕ್ಸರ್) ಹಾಗೂ ಕರ್ಟಿಸ್ ಕ್ಯಾಂಫರ್ 33 ಎಸೆತಗಳಲ್ಲಿ 33 ರನ್ ಗಳಿಸುವ ಮೂಲಕ ತಂಡದ ಮೊತ್ತವನ್ನು 130ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಪರಿಣಾಮ ಐರ್ಲೆಂಡ್ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿತ್ತು. ಇದನ್ನೂಓದಿ: ಇಂದಿನಿಂದ IND vs IRE ಟಿ20 ಸರಣಿ ಆರಂಭ – 11 ತಿಂಗಳ ಬಳಿಕ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ ಬುಮ್ರಾ
ಮೊದಲು ಫೀಲ್ಡಿಂಗ್ ಆಯ್ದುಕೊಂಡ ನಾಯಕ ಬುಮ್ರಾ 4 ಓವರ್ಗಳಲ್ಲಿ 24 ರನ್ ಬಿಟ್ಟುಕೊಟ್ಟು 2 ವಿಕೆಟ್ ಪಡೆದರೆ, ಪ್ರಸಿದ್ಧ್ ಕೃಷ್ಣ 4 ಓವರ್ಗಳಲ್ಲಿ 2 ವಿಕೆಟ್ ಪಡೆದು ಫಾರ್ಮ್ ಸಾಬೀತು ಮಾಡಿದರು. ಇದರೊಂದಿಗೆ ರವಿ ಬಿಷ್ಣೋಯಿ 2 ವಿಕೆಟ್ ಹಾಗೂ ಅರ್ಷ್ದೀಪ್ ಸಿಂಗ್ 1 ವಿಕೆಟ್ ಪಡೆದರು. ಇದನ್ನೂಓದಿ: ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 15 ವರ್ಷ ಪೂರೈಸಿದ ವಿರಾಟ್ – ಕಿಂಗ್ ಆದ ಕೊಹ್ಲಿಯ ರೋಚಕ ಜರ್ನಿ
140 ರನ್ಗಳ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (Yashasvi Jaiswal) 23 ಎಸೆತಗಳಲ್ಲಿ 24 ರನ್ ಗಳಿಸಿ ಔಟಾದರು. ಈ ಬೆನ್ನಲ್ಲೇ ತಿಲಕ್ ವರ್ಮಾ ಕೋಡ ಸುಲಭ ಕ್ಯಾಚ್ಗೆ ತುತ್ತಾದರು. ಆರಂಭಿಕ ಋತುರಾಜ್ ಗಾಯಕ್ವಾಡ್ 19 ರನ್ ಹಾಗೂ ಸಂಜು ಸ್ಯಾಮ್ಸನ್ 1 ರನ್ ಗಳಿಸಿ ಕ್ರೀಸ್ನಲ್ಲಿದರು. ಈ ವೇಳೆ ಮಳೆ ಅಡ್ಡಿಯಾಯಿತು, ಮಳೆ ನಿಲ್ಲದ ಕಾರಣ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಜಯದ ತಂಡವನ್ನ ಘೋಷಿಸಲಾಯಿತು. ಭಾರತ 2 ರನ್ಗಳ ರೋಚಕ ಜಯ ಸಾಧಿಸಿತು. ಐರ್ಲೆಂಡ್ ಪರ ಕ್ರೇಗ್ ಯಂಗ್ 5 ಎಸೆತಗಳಲ್ಲಿ 2 ರನ್ ನೀಡಿ 2 ವಿಕೆಟ್ ಕಿತ್ತರು.
ಡಬ್ಲಿನ್: ಏಕದಿನ ಏಷ್ಯಾಕಪ್ (AsiaCup 2023) ಹಾಗೂ ವಿಶ್ವಕಪ್ (WorldCup 2023) ಟೂರ್ನಿಗೆ ಬಲಿಷ್ಠ ತಂಡ ಆಯ್ಕೆ ಮಾಡಲು ಕಸರತ್ತು ನಡೆಸುತ್ತಿರುವ ಬಿಸಿಸಿಐ ಶುಕ್ರವಾರದಿಂದ ಆರಂಭಗೊಳ್ಳಲಿರುವ ಐರ್ಲೆಂಡ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನೂ ಲಘುವಾಗಿ ಪರಿಗಣಿಸುವಂತಿಲ್ಲ.
ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ (Jasprit Bumrah) ಬರೋಬ್ಬರಿ 11 ತಿಂಗಳ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್ಗೆ ವಾಪಸಾಗುತ್ತಿದ್ದು, ಐರ್ಲೆಂಡ್ ಸರಣಿಯಲ್ಲಿ ಟೀಂ ಇಂಡಿಯಾವನ್ನ ಮುನ್ನಡೆಸಲಿದ್ದಾರೆ. ಈ ಸರಣಿಯು ಹಲವು ಯುವ ಆಟಗಾರರಿಗೆ 2024ರ ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಸ್ಥಾನಕ್ಕಾಗಿ ಆಯ್ಕೆಗಾರರ ಗಮನ ಸೆಳೆಯಲು ಅವಕಾಶ ನೀಡಲಿದೆ. ವಿಂಡೀಸ್ ಸರಣಿಯಲ್ಲಿ ಅನುಭವಿ ಆಟಗಾರರೊಂದಿಗೆ ಹೊಸಬರನ್ನ ಕಣಕ್ಕಿಳಿಸುವ ಪ್ರಯೋಗ ಮಾಡಿದ್ದ ಟೀಂ ಇಂಡಿಯಾ (Team India) ಸರಣಿ ಸೋತು ನಿರಾಸೆ ಅನುಭವಿಸಿತ್ತು. ಇದೀಗ ಐರ್ಲೆಂಡ್ ಸರಣಿಯಲ್ಲಿ ಬಹುತೇಕ ಹೊಸ ಮುಖಗಳಿಗೆ ಮಣೆಹಾಕಿರುವುದು ಕುತೂಹಲ. ಇದನ್ನೂ ಓದಿ: ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುವುದು ಮುಖ್ಯ, ನನ್ನ ಆಯ್ಕೆಯಲ್ಲ: ಮೌನ ಮುರಿದ ಅಶ್ವಿನ್
ಬೂಮ್ರಾ ಜೊತೆ ಮತ್ತೊಬ್ಬ ವೇಗಿ ಪ್ರಸಿದ್ಧ ಕೃಷ್ಣ ಸಹ ಹಲವು ತಿಂಗಳ ಬಳಿಕ ಕ್ರಿಕೆಟ್ಗೆ ವಾಪಾಸಾಗಿದ್ದು, ಕಣಕ್ಕಿಳಿಯಲು ಕಾತರಿಸುತ್ತಿದ್ದಾರೆ. ಏಷ್ಯಾಕಪ್ ಹಾಗೂ ವಿಶ್ವಕಪ್ ತಂಡಕ್ಕೆ ಆಯ್ಕೆ ನಿರೀಕ್ಷೆಯಲ್ಲಿರುವ ಈ ಇಬ್ಬರು, ಫಿಟ್ನೆಸ್ ಸಾಬೀತುಪಡಿಸಲು ಎದುರು ನೋಡುತ್ತಿದ್ದಾರೆ. 2024ರ ಟಿ20 ವಿಶ್ವಕಪ್ಗೂ ಯುವ ಆಟಗಾರರ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾ 2023ರ ಐಪಿಎಲ್ನಲ್ಲಿ ಮಿಂಚಿದ ಜಿತೇಶ್ ಶರ್ಮಾ, ರಿಂಕು ಸಿಂಗ್, ಋತುರಾಜ್ ಗಾಯಕ್ವಾಡ್ ಜೊತೆಗೆ ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ಟೀಂ ಇಂಡಿಯಾಕ್ಕೆ ಆರಂಭಿಕನಾಗಿ ಎಂಟ್ರಿ ಕೊಟ್ಟ ಯಶಸ್ವಿ ಜೈಸ್ವಾಲ್ ಮೇಲೂ ನಿರೀಕ್ಷೆ ಇಡಲಾಗಿದೆ.
ಟಿ20ಗೆ ಭಾರತ ತಂಡ ಹೀಗಿದೆ:
ಜಸ್ಪ್ರೀತ್ ಬುಮ್ರಾ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷ್ದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್. ಇದನ್ನೂ ಓದಿ: ಸೋಲುವುದು ಕೂಡ ಒಳ್ಳೆಯದೇ, ಒಂದು ಸರಣಿ ಮ್ಯಾಟರ್ ಅಲ್ವೇ ಅಲ್ಲ – ಪಾಂಡ್ಯ ಸಮರ್ಥನೆ
ಪಂದ್ಯ ಎಲ್ಲಿ ಯಾವಾಗ?
ಮೊದಲ ಟಿ20 – ಆಗಸ್ಟ್ 18
2ನೇ ಟಿ20 – ಆಗಸ್ಟ್ 20
3ನೇ ಟಿ20 – ಆಗಸ್ಟ್ 23
ಮುಂಬೈ: ಐರ್ಲೆಂಡ್ (Ireland) ವಿರುದ್ಧದ ಅಂತಾರಾಷ್ಟ್ರೀಯ ಟಿ20 ಸರಣಿಗೆ 15 ಸದಸ್ಯರ ಭಾರತ ತಂಡವನ್ನ ಬಿಸಿಸಿಐ ಸೋಮವಾರ ಪ್ರಕಟಿಸಿದ್ದು, ಗಾಯದಿಂದ ಸಂಪೂರ್ಣ ಗುಣಮುಖರಾಗಿರುವ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಅವರು ಸ್ಥಾನ ಪಡದಿದ್ದಾರೆ.
ಹಾರ್ದಿಕ್ ಪಾಂಡ್ಯ (Hardik Pandya) ಅನುಪಸ್ಥಿತಿಯಿಂದಾಗಿ ಬುಮ್ರಾ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಆರಂಭಿಕ ಬ್ಯಾಟ್ಸ್ಮ್ಯಾನ್ ಋತುರಾಜ್ ಗಾಯಕ್ವಾಡ್ಗೆ (Ruturaj Gaikwad) ಉಪ ನಾಯಕನ ಜವಾಬ್ದಾರಿ ನೀಡಲಾಗಿದೆ. ಈ ಮೂಲಕ ಕಳೆದ ವರ್ಷ ಸೆಪ್ಟೆಂಬರ್ ತಿಂಗಳ ಬಳಿಕ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಕೊನೆಗೂ ಟೀಂ ಇಂಡಿಯಾಕ್ಕೆ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ.
ಆಗಸ್ಟ್ 18 ರಿಂದ 23ರ ವರೆಗೆ ನಡೆಯಲಿರುವ ಐರ್ಲೆಂಡ್ ಟಿ20 ಸರಣಿಗೆ (Ireland T20I Series) ಸೋಮವಾರ ಭಾರತ ತಂಡ ಪ್ರಕಟವಾಗಿದ್ದು ಬುಮ್ರಾಗೆ ನಾಯಕತ್ವದ ಹೊಣೆ ನೀಡಲಾಗಿದೆ. ಅಲ್ಲದೇ ಐರ್ಲೆಂಡ್ ಸರಣಿಗೆ ಬಹುತೇಕ ಹೊಸ ಯುವ ಆಟಗಾರರಿಗೆ ಟೀಂ ಇಂಡಿಯಾ ಮಣೆಹಾಕಿದೆ.
ಈ ಕುರಿತು ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಬುಬ್ರಾ ಸಂಪೂರ್ಣ ಫಿಟ್ ಆಗಿದ್ದಾರೆ. ಅವರು ಮತ್ತೆ ಟೀಂ ಇಂಡಿಯಾಕ್ಕೆ ಮರಳುತ್ತಿರುವುದು ಖುಷಿ ತಂದಿದೆ. ಮುಂದಿನ ವಿಶ್ವಕಪ್ ತಂಡದಲ್ಲಿ ಖಂಡಿತ ಅವರಿಗೆ ಸ್ಥಾನವಿದೆ. ಏಕದಿನ ಏಷ್ಯಾಕಪ್ ಟೂರ್ನಿಯಲ್ಲೂ ಬುಮ್ರಾ ಪಾಲ್ಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಬೆನ್ನಿನ ಗಾಯದ ಸಮಸ್ಯೆಯಿಂದ ಜಸ್ಪ್ರೀತ್ ಬುಮ್ರಾ ಅವರು 2022ರ ಸೆಪ್ಟಂಬರ್ ತಿಂಗಳಿನಿಂದ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ದೂರ ಉಳಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ದ ತವರು ಟಿ20 ಸರಣಿಯಲ್ಲಿ ಕೊನೆಯ ಬಾರಿ ಬುಮ್ರಾ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದರು. ಶಸ್ತ್ರ ಚಿಕಿತ್ಸೆಗೂ ಒಳಗಾಗಿದ್ದ ಅವರು, ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿದ್ದರು. ಮುಂದಿನ ತಿಂಗಳಲ್ಲಿ ಏಷ್ಯಾಕಪ್ ಹಾಗೂ ಇದಾದ ಬಳಿಕ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ನಡೆಯುವ ಹಿನ್ನೆಲೆಯಲ್ಲಿ ಬುಮ್ರಾ ಅವರಿಗೆ ತಮ್ಮದೇ ಆಟದ ಸಮಯ ಕಲ್ಪಿಸಲು ಬಿಸಿಸಿಐ ಐರ್ಲೆಂಡ್ ಪ್ರವಾಸಕ್ಕೆ ಕಳುಹಿಸುತ್ತಿದೆ.
ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕಳೆದ ವರ್ಷದ ಸಪ್ಟೆಂಬರ್ ತಿಂಗಳ ಬಳಿಕ ಗಾಯದ ಸಮಸ್ಯೆಯಿಂದಾಗಿ ಕ್ರಿಕೆಟ್ನಿಂದ ದೂರ ಉಳಿದಿದ್ದರು. 2022ರ T20 ಏಷ್ಯಾಕಪ್, T20 ವಿಶ್ವಕಪ್ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಸೇರಿದಂತೆ ಪ್ರಮುಖ ಟೂರ್ನಿಗಳಲ್ಲಿ ಪಾಲ್ಗೊಳ್ಳುವ ಅವಕಾಶದಿಂದ ವಂಚಿತರಾಗಿದ್ದರು. ಇದನ್ನೂ ಓದಿ: 10 ಬೌಂಡರಿ, 13 ಸಿಕ್ಸರ್ – ನಿಕೋಲಸ್ ಪೂರನ್ ಸ್ಫೋಟಕ ಶತಕ; ವಿದೇಶದಲ್ಲೂ ಮುಂಬೈ ಚಾಂಪಿಯನ್
ಆಡಿಲೇಡ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಟಿ20 ವಿಶ್ವಕಪ್ನಲ್ಲಿ (T20 World Cup) ಐರ್ಲೆಂಡ್ (Ireland) ಬೌಲರ್ ಜೋಶುವಾ ಲಿಟಲ್ (Joshua Little) ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಜೋಶುವಾ ಲಿಟಲ್ ಹ್ಯಾಟ್ರಿಕ್ ವಿಕೆಟ್ ಪಡೆದು 2022ರ ಟಿ20 ವಿಶ್ವಕಪ್ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಈ ಮೊದಲು ಅರ್ಹತಾ ಸುತ್ತಿನಲ್ಲಿ ಯುಎಇಯ ಕಾರ್ತಿಕ್ ಮಯ್ಯಪ್ಪನ್ ಹ್ಯಾಟ್ರಿಕ್ ಪಡೆದಿದ್ದರು. ಇದನ್ನೂ ಓದಿ: ಆಫ್ರಿಕಾಗೆ ಸೋಲು – ಚಿಗುರಿಕೊಂಡ ಪಾಕಿಸ್ತಾನದ ಸೆಮಿಫೈನಲ್ ಕನಸು
ಕಿವೀಸ್ ವಿರುದ್ಧ 19ನೇ ಎಸೆದ ಜೋಶುವಾ ಲಿಟಲ್ ಮೊದಲು ಕೇನ್ ವಿಲಿಯಮ್ಸನ್ ವಿಕೆಟ್ ಪಡೆದರೆ ಮುಂದಿನ ಎರಡು ಎಸೆತಗಳಲ್ಲಿ ಜೆಮ್ಮಿ ನಿಶಾಮ್ ಮತ್ತು ಮಿಚೆಲ್ ಸ್ಯಾಂಟ್ನರ್ ವಿಕೆಟ್ ಪಡೆದು ಹ್ಯಾಟ್ರಿಕ್ ಸಾಧನೆ ಮಾಡಿದರು. ಇದನ್ನೂ ಓದಿ: ಬಾಂಗ್ಲಾ ಸೋತ ಬಳಿಕ ಕೊಹ್ಲಿ ವಿರುದ್ಧ ಫೇಕ್ ಫೀಲ್ಡಿಂಗ್ ಆರೋಪ
ಈ ಪಂದ್ಯದಲ್ಲಿ ಐರ್ಲೆಂಡ್ ಸೋಲುನುಭವಿಸಿದೆ. ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 185 ರನ್ ಬಾರಿಸಿತು. 186 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಐರ್ಲೆಂಡ್ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 150 ರನ್ ಗಲಿಸಲಷ್ಟೇ ಶಕ್ತವಾಯಿತು. ಈ ಮೂಲಕ 35 ರನ್ಗಳ ಭರ್ಜರಿ ಜಯದೊಂದಿಗೆ ಕಿವೀಸ್ ಸೆಮಿಫೈನಲ್ ಹಾದಿ ಮತ್ತಷ್ಟು ಸುಗಮಗೊಂಡಿದೆ.
Live Tv
[brid partner=56869869 player=32851 video=960834 autoplay=true]
ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ (T20 World Cup) ಅರ್ಹತಾ ಸುತ್ತಿನಲ್ಲಿ ಐರ್ಲೆಂಡ್ (Ireland) ವಿರುದ್ಧ ಸೋತ ವೆಸ್ಟ್ ಇಂಡೀಸ್ (West Indies) ತಂಡ ಟೂರ್ನಿಯಿಂದ ಹೊರಬಿದ್ದಿದೆ.
ಟಿ20 ಕ್ರಿಕೆಟ್ನಲ್ಲಿ ಅಪಾಯಕಾರಿ ಆಟಗಾರರನ್ನು ಹೊಂದಿದ್ದಂತ ತಂಡವಾಗಿ ಗುರುತಿಸಿಕೊಂಡಿದ್ದ ವೆಸ್ಟ್ ಇಂಡೀಸ್ಗೆ ಸೂಪರ್ 12 ಹಂತಕ್ಕೇರಲು ಐರ್ಲೆಂಡ್ ವಿರುದ್ಧದ ಪಂದ್ಯ ಮಹತ್ವದಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿತು. 147 ರನ್ಗಳ ಟಾರ್ಗೆಟ್ ಪಡೆದ ಐರ್ಲೆಂಡ್ 17.3 ಓವರ್ಗಳಲ್ಲಿ ಕೇವಲ 1 ವಿಕೆಟ್ ನಷ್ಟಕ್ಕೆ 150 ರನ್ ಬಾರಿಸಿ 9 ವಿಕೆಟ್ಗಳ ಜಯ ಸಾಧಿಸಿ ಸೂಪರ್ 12 ಹಂತಕ್ಕೆ ಲಗ್ಗೆ ಇಟ್ಟಿದೆ. ಇದನ್ನೂ ಓದಿ: ಗ್ರೀನ್ಗೆ ಸಿಕ್ತು ಟಿ20 ವಿಶ್ವಕಪ್ ಗ್ರೀನ್ ಸಿಗ್ನಲ್
ಈ ಮೊದಲು ವಿಂಡೀಸ್ ಪರ ಬ್ರೆಂಡನ್ ಕಿಂಗ್ ಬ್ಯಾಟಿಂಗ್ನಲ್ಲಿ ಅಜೇಯ 62 ರನ್ (48 ಎಸೆತ, 6 ಬೌಂಡರಿ, 1 ಸಿಕ್ಸ್) ಸಿಡಿಸಿದ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 146 ರನ್ಗಳ ಸಾಧಾರಣ ಮೊತ್ತ ಪೇರಿಸಿತು.
ಈ ಪಂದ್ಯವನ್ನು ಜಯಿಸುವ ಮೂಲಕ ಐರ್ಲೆಂಡ್ ಸಂಭ್ರಮಿಸಿದೆ. ಇತ್ತ ಹೀನಾಯವಾಗಿ ಸೋತ ವೆಸ್ಟ್ ಇಂಡೀಸ್ ಮನೆ ದಾರಿ ಹಿಡಿದಿದೆ. ಈ ಹಿಂದೆ 2012 ಮತ್ತು 2016 ರಲ್ಲಿ ವೆಸ್ಟ್ ಇಂಡೀಸ್ ತಂಡ ಟಿ20 ವಿಶ್ವಕಪ್ ಗೆದ್ದಿತ್ತು. ಇದೀಗ ಅರ್ಹತಾ ಸುತ್ತಿನಲ್ಲೇ ಸೋತು ಮುಖಭಂಗ ಅನುಭವಿಸಿದೆ.
Live Tv
[brid partner=56869869 player=32851 video=960834 autoplay=true]
ಡಬ್ಲಿನ್: 66 ವರ್ಷದ ಮಹಿಳೆಯ (Woman) ಹೊಟ್ಟೆ ಹಾಗೂ ಕರುಳಿನಿಂದ ಬರೋಬ್ಬರಿ 55 ಬ್ಯಾಟರಿಗಳನ್ನು (Battery) ವೈದ್ಯರು (Doctor) ಹೊರ ತೆಗೆದಿರುವ ವಿಚಿತ್ರ ಘಟನೆ ಐರ್ಲೆಂಡಿನಲ್ಲಿ (Ireland) ನಡೆದಿದೆ. ಮಹಿಳೆ ಉದ್ದೇಶಪೂರ್ವಕವಾಗಿಯೇ ತನ್ನನ್ನು ತಾನು ಘಾಸಿಗೊಳಿಸುವ ಉದ್ದೇಶದಿಂದ ಬ್ಯಾಟರಿಗಳನ್ನು ನುಂಗಿದ್ದಾಳೆ ಎಂದು ತಿಳಿದುಬಂದಿದೆ.
ಮಹಿಳೆ ಕೈಗೆ ಸಿಕ್ಕ ಬ್ಯಾಟರಿಗಳನ್ನೆಲ್ಲಾ ನುಂಗಿರುವುದಾಗಿ ತಿಳಿಸಿದ್ದಾಳೆ. ಆದರೆ ಎಷ್ಟು ಬ್ಯಾಟರಿಗಳನ್ನು ನುಂಗಿದ್ದಾಳೆ ಎಂಬ ಲೆಕ್ಕ ಆಕೆಯೂ ಇಟ್ಟುಕೊಂಡಿರಲಿಲ್ಲ. ಆಕೆ ಆಸ್ಪತ್ರೆಗೆ ದಾಖಲಾದ ಬಳಿಕ ಆಕೆಯ ಹೊಟ್ಟೆಯ ಭಾಗದ ಎಕ್ಸ್-ರೇ ಪರೀಕ್ಷೆಯ ವೇಳೆ ಹೊಟ್ಟೆಯಲ್ಲಿ ಹಾಗೂ ಕರುಳಿನಲ್ಲಿ ಹಲವು ಬ್ಯಾಟರಿಗಳು ಇರುವುದನ್ನು ನೋಡಿ ದಂಗಾಗಿದ್ದಾರೆ.
ಆರಂಭದಲ್ಲಿ ವೈದ್ಯರು ಮಹಿಳೆಯ ದೇಹದಿಂದ ಬ್ಯಾಟರಿಗಳನ್ನು ನೈಸರ್ಗಿಕವಾಗಿಯೇ ಹೊರ ಹಾಕಲು ಕಾದಿದ್ದಾರೆ. 1 ವಾರದ ಬಳಿಕ ಮತ್ತೆ ಸ್ಕ್ಯಾನ್ ಮಾಡಿ ನೋಡಿದಾಗ ಮತ್ತಷ್ಟು ಬ್ಯಾಟರಿಗಳು ಇದ್ದುದನ್ನು ನೋಡಿದ್ದಾರೆ. ಆಕೆ ತಾನಾಗಿಯೇ AA ಬ್ಯಾಟರಿಗಳನ್ನು ಮಾತ್ರವೇ ಹೊರ ಹಾಕಲು ಸಾಮರ್ಥ್ಯಳಾಗಿದ್ದು, AAA ಬ್ಯಾಟರಿಗಳನ್ನು ಹೊರ ಹಾಕಲು ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: ಸತತ ಎರಡೂವರೆ ಗಂಟೆಗಳ ಕಾಲ ಲಿಫ್ಟ್ನಲ್ಲಿ ಸಿಕ್ಕಿಬಿದ್ದ 6ರ ಬಾಲಕ
ಬ್ಯಾಟರಿಗಳ ತೂಕದಿಂದಾಗಿ ಆಕೆಯ ಹೊಟ್ಟೆ ಹಿಗ್ಗಿದ್ದು ಮಾತ್ರವಲ್ಲದೇ ಅವು ಗುದದ್ವಾರದ ಮೂಳೆಗಳಲ್ಲೂ ನೇತಾಡಿಕೊಂಡಿದ್ದವು ಎಂದು ವೈದ್ಯರು ತಿಳಿಸಿದ್ದಾರೆ. ಬಳಿಕ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ, ಎಲ್ಲಾ ಬ್ಯಾಟರಿಗಳನ್ನೂ ತೆಗೆದುಹಾಕಿದ್ದಾರೆ.
ವೈದ್ಯರು ಶಸ್ತ್ರಚಿಕಿತ್ಸೆಯಲ್ಲಿ ಒಟ್ಟು 55 ಬ್ಯಾಟರಿಗಳನ್ನು ತೆಗೆದಿದ್ದು, ಇದು ಇಲ್ಲಿಯವರೆಗೆ ಶಸ್ತ್ರಚಿಕಿತ್ಸೆಯಲ್ಲಿ ಮನಿಷ್ಯರ ಹೊಟ್ಟೆಯಿಂದ ತೆಗೆಯಲಾದ ಅತಿ ಹೆಚ್ಚು ಬ್ಯಾಟರಿಗಳು ಎಂದು ತಿಳಿಸಿದ್ದಾರೆ. ಮಾತ್ರವಲ್ಲದೇ ಆ ಬ್ಯಾಟರಿಗಳು ಆಕೆಯ ಜೀರ್ಣಕ್ರಿಯೆಗೆ ಯಾವುದೇ ರೀತಿಯ ತೊಂದರೆ ಕೊಟ್ಟಿಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಟೈಂನಲ್ಲಿ ನಾಪತ್ತೆಯಾಗಿದ್ದ ಬೆಕ್ಕು 2 ವರ್ಷಗಳ ನಂತರ ತಾನೇ ಮನೆಗೆ ಬಂತು!
Live Tv
[brid partner=56869869 player=32851 video=960834 autoplay=true]