Tag: Iron Ore

  • ರಾಜ್ಯದ ಮೂರು ಜಿಲ್ಲೆಗಳ ಅದಿರು ರಫ್ತಿಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

    ರಾಜ್ಯದ ಮೂರು ಜಿಲ್ಲೆಗಳ ಅದಿರು ರಫ್ತಿಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

    ನವದೆಹಲಿ: ರಾಜ್ಯದ ಬಳ್ಳಾರಿ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಂದ ಕಬ್ಬಿಣದ ಅದಿರು ಮಾರಾಟ ಮತ್ತು ರಫ್ತಿಗೆ ಹೇರಲಾಗಿದ್ದ ನಿರ್ಬಂಧವನ್ನು ಸುಪ್ರೀಂಕೋರ್ಟ್ ಸಡಿಲಿಸಿದೆ. ಭಾರತ ಸರ್ಕಾರದ ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಅದಿರು ರಫ್ತು ಮಾಡಲು ಅನುಮತಿ ನೀಡಲಾಗಿದೆ.

    2011ರಲ್ಲಿ ಕರ್ನಾಟಕದಿಂದ ಕಬ್ಬಿಣದ ಅದಿರು ಮಾರಾಟ ಮತ್ತು ರಫ್ತಿಗೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವು ಮಾಡುವಂತೆ ಗಣಿ ನಿರ್ವಾಹಕರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎನ್.ವಿ ರಮಣ ನೇತೃತ್ವದ ದ್ವಿ ಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ. ಇದನ್ನೂ ಓದಿ: BBMPಗೆ ಕೊನೆಗೂ ಚುನಾವಣೆ ಫಿಕ್ಸ್‌

    SUPREME COURT

    ಕರ್ನಾಟಕದ ಗಣಿಗಳು ದೇಶದ ಇತರೆ ಗಣಿಗಳ ಜೊತೆಗೆ ಸಮತಟ್ಟಾದ ಮೈದಾನದಲ್ಲಿರುವುದು ಅಗತ್ಯ ಎನ್ನುವ ಭಾರತದ ಒಕ್ಕೂಟದ ನಿಲುವಿಗೆ ನಾವು ಸಹಮತ ಹೊಂದಿದ್ದೇವೆ. ಮೂರು ಜಿಲ್ಲೆಯ ಅದಿರಿಗಾಗಿ ತಂದಿರುವ ನಿಯಮಗಳನ್ನು ಪರಿಶೀಲಿಸುವ ಸಮಯ ಬಂದಿದೆ. 2011 ರಿಂದ ಇ-ಹರಾಜು ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇದು ಪರಿಸ್ಥಿತಿಯನ್ನು ಉತ್ತಮವಾಗಿಸಿದೆ.

    ಪರಿಸರ ಪರಿಸ್ಥಿತಿ ಸುಧಾರಿಸಿದ್ದು ನಿಯಮ ಸಡಿಲಿಸುವ ಸಮಯ ಬಂದಿದೆ. ಹೀಗಾಗಿ ಅದಿರು ಮಾರಾಟ ಮತ್ತು ರಫ್ತು ಮೇಲಿನ ನಿರ್ಬಂಧಗಳನ್ನು ನಾವು ಸಡಿಲಗೊಳಿಸುತ್ತಿದ್ದೇವೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ನಿನ್ನೆ ರಾತ್ರಿ ರಹಸ್ಯ ಸಭೆ- ಇಂದು ದಿಢೀರ್‌ ದೆಹಲಿಗೆ ಹೊರಟ ಸಿಎಂ

    ಈಗಾಗಲೇ ಅಗೆದಿರುವ ಕಬ್ಬಿಣದ ಅದಿರನ್ನು ಇ-ಹರಾಜು ಮಾಡದೇ ನೇರ ಒಪ್ಪಂದ ಮಾಡಿಕೊಂಡು ಮಾರಾಟ ಮಾಡಲು ಗಣಿ ನಿರ್ವಾಹಕರಿಗೆ ಕೋರ್ಟ್ ಅನುಮತಿ ನೀಡಿದೆ. ಈಗ ನಿರ್ಬಂಧಗಳನ್ನು ತೆಗೆದುಹಾಕಲಾಗುತ್ತಿದ್ದು, ಮುಂದೆ ಭಾರತ ಸರ್ಕಾರದ ನೀತಿಗಳ ಪ್ರಕಾರ ರಫ್ತು ಮಾಡಬೇಕು ಎಂದು ಕೋರ್ಟ್ ಸೂಚಿಸಿದೆ.

  • ಕರ್ನಾಟಕದಲ್ಲಿ 1.26 ದಶಲಕ್ಷ ಟನ್ ಚಿನ್ನ ಪತ್ತೆ!- ರಾಜ್ಯದಲ್ಲಿ ಎಲ್ಲಿ ಏನು ಪತ್ತೆ?

    ಕರ್ನಾಟಕದಲ್ಲಿ 1.26 ದಶಲಕ್ಷ ಟನ್ ಚಿನ್ನ ಪತ್ತೆ!- ರಾಜ್ಯದಲ್ಲಿ ಎಲ್ಲಿ ಏನು ಪತ್ತೆ?

    ಸಾಂದರ್ಭಿಕ ಚಿತ್ರ

    – 10 ವರ್ಷಗಳ ಕಾಲ ಜಿಎಸ್‍ಐ ಅಧ್ಯಯನ
    – ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಅಧ್ಯಯನ
    – ತಮಿಳುನಾಡಿನಲ್ಲಿ ಪ್ಲಾಟಿನಂ ನಿಕ್ಷೇಪ ಪತ್ತೆ

    ಹೈದರಾಬಾದ್: ಕರ್ನಾಟಕದಲ್ಲಿ ಚಿನ್ನ ಮತ್ತು ತಮಿಳುನಾಡಿನಲ್ಲಿ ಪ್ಲಾಟಿನಂ ನಿಕ್ಷೇಪ ಪತ್ತೆಯಾಗಿದೆ ಎಂದು ಭಾರತೀಯ ಭೂಗರ್ಭ ಸರ್ವೇಕ್ಷಣಾ ಇಲಾಖೆ (ಜಿಎಸ್‍ಐ) ಹೇಳಿದೆ.

    ಹೈದರಾಬಾದಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಎಸ್‍ಐ ದಕ್ಷಿಣ ವಿಭಾಗದ ಹೆಚ್ಚುವರಿ ನಿರ್ದೇಶಕ ಎಂ ಶ್ರೀಧರ್, ಕಳೆದ 10 ವರ್ಷಗಳಿಂದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶಲ್ಲಿ ಅಧ್ಯಯನ ನಡೆಸಿದ್ದು, ತುಮಕೂರಿನ ಅಜ್ಜನಹಳ್ಳಿಯಲ್ಲಿ 1.26 ದಶಲಕ್ಷ ಟನ್ ಚಿನ್ನದ ನಿಕ್ಷೇಪ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ಅಜ್ಜನಹಳ್ಳಿಯ ಬ್ಲಾಕ್ ಸಿಯಲ್ಲಿ 1.26 ದಶಲಕ್ಷ ಟನ್ ಸಂಪತ್ತು ಇದ್ದರೆ, ತಮಿಳುನಾಡಿನ ತಾಸಂಪಲೆಯಂನಂಲ್ಲಿ 0.402 ದಶಲಕ್ಷ ಟನ್ ಪ್ಲಾಟಿನಂ ನಿಕ್ಷೇಪವಿದೆ ಎಂದು ಅವರು ತಿಳಿಸಿದ್ದಾರೆ.

    ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭೂಕೂಸಿತ ವಾಗುವ ಸ್ಥಳಗಳ ಮ್ಯಾಪ್ ಮಾಡಿದ್ದೇವೆ. ತಮಿಳುನಾಡಿನ ಥೇನಿ, ನೀಲಗಿರಿ, ದಿಂಡಿಗಲ್, ಮಧುರೈ, ತಿರುನಲ್ವೇಲಿ, ಕನ್ಯಾಕುಮರಿ ಜಿಲ್ಲೆಯಲ್ಲಿ ಅಧ್ಯಯನ ನಡೆಸಿದ್ದೇವೆ ಎಂದು ಶ್ರೀಧರ್ ತಿಳಿಸಿದರು.

    ಸಿಮೆಂಟ್ ತಯಾರಿಕೆಯಲ್ಲಿ ಬಳಸುವ ಸುಣ್ಣ ಕರ್ನಾಟಕದ ಬೆಳಗಾವಿ, ಹೊಸಕೋಟೆ, ಆಂಧ್ರದ ಗುಂಟೂರು ಮತ್ತು ಕರ್ನೂಲ್ ಜಿಲ್ಲೆಯಲ್ಲಿ ಪತ್ತೆಯಾಗಿದೆ.

    ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿ ಪ್ರದೇಶದಲ್ಲಿ ಮ್ಯಾಂಗನೀಸ್ ನಿಕ್ಷೇಪದ ಲಭ್ಯತೆಯ ಬಗ್ಗೆ ಅಧ್ಯಯನ ನಡೆಯುತ್ತಿದ್ದು, ಸದ್ಯದ ಮಾಹಿತಿಯ ಅನ್ವಯ ಈ ಪ್ರದೇಶದಲ್ಲಿ ಸುಮಾರು 3 ಮೆಟ್ರಿಕ್ ಟನ್ ಮೆಗ್ನೀಷಿಯಂ ಲೋಹದ ಮಾದರಿಗಳು ಪತ್ತೆಯಾಗಿದೆ ಎಂಬ ಮಾಹಿತಿ ನೀಡಿದ್ದಾರೆ. ಬಳ್ಳಾರಿಯ ರಮಣದುರ್ಗ ಪ್ರದೇಶದಲ್ಲೂ ಮ್ಯಾಗನೀಸ್ ನಿಕ್ಷೇಪದ ಪತ್ತೆಯಾಗಿದೆ. ಉಳಿದಂತೆ 2016-17 ಅವಧಿಯಲ್ಲಿ ನಡೆದ ಅಧ್ಯಯನದ ವೇಳೆ ತೆಲಂಗಾಣದ ಕರೀಂ ನಗರ್, ಅದಿಲಾಬಾದ್, ಖಮ್ಮಂ ಹಾಗೂ ವರಂಗಲ್ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ 89.22 ಮೆಟ್ರಿಕ್ ಟನ್ ಕಬ್ಬಿಣ ಅದಿರು ಸಂಪನ್ಮೂಲಗಳು ಇರುವುದು ಜಿಎಸ್‍ಐ ಅಧ್ಯಯನದಲ್ಲಿ ಪ್ರಕಟವಾಗಿದೆ.

    ಕೇಂದ್ರ ಸರ್ಕಾರದ ಗಣಿ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಭಾರತೀಯ ಭೂಗರ್ಭ ಸರ್ವೇಕ್ಷಣಾ ಇಲಾಖೆ ಪತ್ತೆ ಹಚ್ಚಿರುವ ನಿಕ್ಷೇಪಗಳ ಬಗ್ಗೆ ಹೆಚ್ಚಿನ ಅಧ್ಯನವನ್ನು ನಡೆಸಿದೆ. ಸಂಶೋಧನಾ ಕಾರ್ಯದ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸಲು ‘ಭೂಮಿ ಸಂವಾದ’ ಎಂಬ ಕಾರ್ಯಕ್ರಮವನ್ನು ನಡೆಸಿ ಮಾಹಿತಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com

  • ಚಾಲಕನಿಲ್ಲದೇ 92 ಕಿ.ಮೀ ಚಲಿಸಿದ ರೈಲು!

    ಚಾಲಕನಿಲ್ಲದೇ 92 ಕಿ.ಮೀ ಚಲಿಸಿದ ರೈಲು!

    ಪರ್ಥ್: ಕಬ್ಬಿಣದ ಅದಿರನ್ನು ಲೋಡ್ ಮಾಡಲಾದ ರೈಲೊಂದು ಚಾಲಕನಿಲ್ಲದೇ 92 ಕಿ.ಮೀ ಚಲಿಸಿರುವ ಘಟನೆ ಪಶ್ಚಿಮ ಆಸ್ಟ್ರೇಲಿಯಾದಲ್ಲಿ ನಡೆದಿದೆ.

    ಈ ಘಟನೆಯಿಂದಾಗಿ ರೈಲನ್ನು ನಿಲ್ಲಿಸಲು ಉದ್ದೇಶಪೂರ್ವಕವಾಗಿ ಹಳಿತಪ್ಪಿಸಲಾಗಿದೆ. ದಕ್ಷಿಣ ಆಸ್ಟ್ರೇಲಿಯಾ ಪಿಲಾಬರ ಗಣಿ ಕಂಪನಿಗೆ ಸೇರಿದ ಕಬ್ಬಿಣ ಅದಿರನ್ನು ತುಂಬಿದ್ದ ರೈಲು ಚಾಲಕನಿಲ್ಲದೇ ಸುಮಾರು 92 ಕಿ.ಮೀ. ಚಲಿಸಿದೆ. ಈ ಘಟನೆಯ ನಂತರ ಬಿಎಚ್‍ಪಿ ಸಂಸ್ಥೆಯು ರೈಲು ನಿರ್ವಹಣೆ ಮಾಡುತ್ತಿದ್ದವರನ್ನು ಅಮಾನತುಗೊಳಿಸಿದ್ದು, ಘಟನೆ ಕುರಿತು ತನಿಖೆ ನಡೆಸುತ್ತಿದೆ.

    ಚಲಿಸುತ್ತಿದ್ದ ರೈಲನ್ನು ತಡೆಯುವುದಕ್ಕಾಗಿ ಹಳಿತಪ್ಪಿಸಿದ್ದರಿಂದ ರೈಲಿಗೆ ಹಾನಿ ಉಂಟಾಗಿದ್ದು, ಈ ಅವಘಡದಿಂದಾಗಿ ಯಾವುದೇ ಪ್ರಾಣಪಾಯಗಳು ಸಂಭವಿಸಿಲ್ಲ. ಚಾಲಕ ರೈಲಿನಲ್ಲಿದ್ದ ಸಮಸ್ಯೆಯನ್ನು ನೋಡುತ್ತಿದ್ದಾಗ ರೈಲು ಇದ್ದಕ್ಕಿದ್ದಂತೆ ಚಲಿಸಿದೆ.

    ಬಿಎಚ್‍ಪಿ ಸಂಸ್ಥೆ ವಿಶ್ವದ ಅತಿದೊಡ್ಡ ಗಣಿಗಾರಿಕಾ ಕಂಪನಿಯಾಗಿದ್ದು, ಗಣಿಯಿಂದ ಬಂದರಿಗೆ ಕಬ್ಬಿಣದ ಅದಿರನ್ನು ಸಾಗಿಸಲು 1 ಸಾವಿರ ಕಿ.ಮೀ ಉದ್ದದ ರೈಲ್ವೇ ಹಳಿ ಜಾಲವನ್ನು ಹೊಂದಿದೆ. ಈ ಕಂಪನಿ ಜಪಾನ್ ಮತ್ತು ಚೀನಾಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಅದಿರನ್ನು ರಫ್ತು ಮಾಡುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv