Tag: IRS officer

  • ಮಹಿಳೆಯಿಂದ ಪುರುಷನಾದ ಐಆರ್‌ಎಸ್‌ ಅಧಿಕಾರಿ – ಲಿಂಗ, ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ

    ಮಹಿಳೆಯಿಂದ ಪುರುಷನಾದ ಐಆರ್‌ಎಸ್‌ ಅಧಿಕಾರಿ – ಲಿಂಗ, ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ

    ನವದೆಹಲಿ: ಹೈದರಾಬಾದ್ ಮೂಲದ ಭಾರತೀಯ ಕಂದಾಯ ಸೇವೆ (IRS) ಹಿರಿಯ ಅಧಿಕಾರಿಯೊಬ್ಬರು ತಮ್ಮ ಹೆಸರು ಮತ್ತು ಲಿಂಗವನ್ನು ಬದಲಾಯಿಸುವಂತೆ ಮಾಡಿದ ಮನವಿಯನ್ನು ಕೇಂದ್ರ ಹಣಕಾಸು ಸಚಿವಾಲಯ ಅನುಮೋದಿಸಿದೆ. ಭಾರತೀಯ ನಾಗರಿಕ ಸೇವೆಯ ಇತಿಹಾಸದಲ್ಲಿ ಇಂತಹ ಬದಲಾವಣೆಯಾಗಿರುವುದು ಇದೇ ಮೊದಲು.

    ಹೈದರಾಬಾದ್‌ನಲ್ಲಿರುವ ಕಸ್ಟಮ್ಸ್ ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣದ ಮುಖ್ಯ ಆಯುಕ್ತರ ಕಚೇರಿಯಲ್ಲಿ ಜಂಟಿ ಆಯುಕ್ತರಾಗಿ ನೇಮಕಗೊಂಡಿರುವ ಎಂ.ಅನುಸೂಯಾ ಅವರು ತಮ್ಮ ಹೆಸರನ್ನು ಎಂ.ಅನುಕತಿರ್ ಸೂರ್ಯ ಎಂದು ಮತ್ತು ಲಿಂಗವನ್ನು ಹೆಣ್ಣಿನಿಂದ ಪುರುಷ ಎಂದು ಬದಲಾಯಿಸಲು ವಿನಂತಿಸಿದ್ದರು. ಇದನ್ನೂ ಓದಿ: ಮಹಿಳೆ ಕಿಡ್ನ್ಯಾಪ್‌ ಕೇಸ್‌ – ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್‌ ನೋಟಿಸ್‌

    ಅಧಿಕಾರಿಯ ಮನವಿಯನ್ನು ಪರಿಗಣಿಸಿ ಅನುಮೋದನೆ ನೀಡಲಾಗಿದೆ ಎಂದು ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ಎಂ.ಅನುಸೂಯಾ ಅವರ ಮನವಿಯನ್ನು ಪರಿಗಣಿಸಲಾಗಿದೆ. ಇನ್ಮುಂದೆ ಅಧಿಕಾರಿಯನ್ನು ಎಲ್ಲಾ ಅಧಿಕೃತ ದಾಖಲೆಗಳಲ್ಲಿ ‘ಎಂ.ಅನುಕತಿರ್ ಸೂರ್ಯ’ ಎಂದು ಪರಿಗಣಿಸಲಾಗುತ್ತದೆ ಎಂದು ಕಂದಾಯ ಇಲಾಖೆಯ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ ಆದೇಶದಲ್ಲಿ ತಿಳಿಸಿದೆ.

    ಪ್ರಸ್ತುತ IRS ಅಧಿಕಾರಿಯಾಗಿರುವ ಸೂರ್ಯ, 2013 ರಲ್ಲಿ ಚೆನ್ನೈನಲ್ಲಿ ಸಹಾಯಕ ಆಯುಕ್ತರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 2018 ರಲ್ಲಿ ಡೆಪ್ಯೂಟಿ ಕಮಿಷನರ್ ಶ್ರೇಣಿಗೆ ಬಡ್ತಿ ಪಡೆದರು. ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ಮಹತ್ವದ ತೀರ್ಪು

    ಸೂರ್ಯ ಚೆನ್ನೈನ ಮದ್ರಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್‌ನಲ್ಲಿ ಬ್ಯಾಚುಲರ್ ಪದವಿ ಪಡೆದರು. ನಂತರ ಅವರು ನ್ಯಾಷನಲ್ ಲಾ ಇನ್‌ಸ್ಟಿಟ್ಯೂಟ್ ವಿಶ್ವವಿದ್ಯಾಲಯದಿಂದ ಸೈಬರ್ ಕಾನೂನು ಮತ್ತು ಸೈಬರ್ ಫೋರೆನ್ಸಿಕ್ಸ್‌ನಲ್ಲಿ ಪಿಜಿ ಡಿಪ್ಲೊಮಾ ಶಿಕ್ಷಣ ಪೂರೈಸಿದರು.

  • ಐಆರ್‌ಎಸ್ ಅಧಿಕಾರಿಯ ಫ್ಲಾಟ್‍ನಲ್ಲಿ ಮಹಿಳೆಯ ಶವ ಪತ್ತೆ – ಕೊಲೆ ಆರೋಪ

    ಐಆರ್‌ಎಸ್ ಅಧಿಕಾರಿಯ ಫ್ಲಾಟ್‍ನಲ್ಲಿ ಮಹಿಳೆಯ ಶವ ಪತ್ತೆ – ಕೊಲೆ ಆರೋಪ

    ಲಕ್ನೋ: ಭಾರತೀಯ ಕಂದಾಯ ಇಲಾಖೆಯ (IRS) ಅಧಿಕಾರಿ ಸೌರಭ್ ಮೀನಾ ಅವರ ನೋಯ್ಡಾದ (Noida) ಅಪಾರ್ಟ್‍ಮೆಂಟ್‍ನಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಮೃತ ಮಹಿಳೆಯನ್ನು ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್‍ನ (ಬಿಹೆಚ್‍ಇಎಲ್) ಮಾನವ ಸಂಪನ್ಮೂಲ ಅಧಿಕಾರಿ ಶಿಲ್ಪಾ ಗೌತಮ್ ಎಂದು ಗುರುತಿಸಲಾಗಿದೆ. ಶಿಲ್ಪಾ ಹಾಗೂ ಸೌರಭ್ ಕಳೆದ ಮೂರು ವರ್ಷಗಳಿಂದ ಸಂಬಂಧ ಹೊಂದಿದ್ದರು. ಅವರು ಡೇಟಿಂಗ್ ಅಪ್ಲಿಕೇಶನ್ (Dating app) ಮೂಲಕ ಪರಿಚಯವಾಗಿದ್ದು, ಸೌರಭ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಹನುಮಾನ್ ಚಾಲೀಸಾ ಹಾಕಲು ಅನುಮತಿ ಇಲ್ಲ, ರಸ್ತೆಯಲ್ಲಿ ನಮಾಜ್‌ ಮಾಡಲು ಅನುಮತಿ ಬೇಕಿಲ್ಲ: ಬಿಜೆಪಿ ಕಿಡಿ

    ಶಿಲ್ಪಾಳ ತಂದೆ ಗೌತಮ್, ಸೌರಭ್ ವಿರುದ್ಧ ವಂಚನೆ ಮತ್ತು ದೈಹಿಕ ಕಿರುಕುಳದ ಆರೋಪ ಮಾಡಿದ್ದು, ಆಗಾಗ ಆಕೆಯ ಮೇಲೆ ಹಲ್ಲೆ ನಡೆಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ಸಾವಿಗೆ ನಿಖರ ಕಾರಣ ತಿಳಿಯಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಅಲ್ಲದೇ ಇಬ್ಬರ ಮೊಬೈಲ್ ಫೋನ್‍ಗಳು ಹಾಗೂ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಯಾದಗಿರಿಯಲ್ಲಿ ತಡರಾತ್ರಿವರೆಗೂ ಭಾರೀ ಮಳೆ- ಮಹಿಳೆ ಸಾವು, ಜನಜೀವನ ಅಸ್ತವ್ಯಸ್ತ

  • ಬಾಲಿವುಡ್ ತಾರೆಯರಿಗೆ, ಉದ್ಯಮಿಗಳಿಗೆ ಮುಲಾಜಿಲ್ಲದೆ ಜಾಡಿಸಿ ನೋಟಿಸ್ ನೀಡಿದ ಕನ್ನಡಿಗ

    ಬಾಲಿವುಡ್ ತಾರೆಯರಿಗೆ, ಉದ್ಯಮಿಗಳಿಗೆ ಮುಲಾಜಿಲ್ಲದೆ ಜಾಡಿಸಿ ನೋಟಿಸ್ ನೀಡಿದ ಕನ್ನಡಿಗ

    – ಮುಂಬೈಯಲ್ಲಿ ಸದ್ದು ಮಾಡಿದ ಹಾಸನ ಜಿಲ್ಲೆಯ ವರುಣ್ ರಂಗಸ್ವಾಮಿ

    ಹಾಸನ: ದೇಶದ ಪ್ರಮುಖ ವಾಣಿಜ್ಯ ನಗರ ಮುಂಬೈಯಲ್ಲಿ (Mumbai) ತೆರಿಗೆ ಕಳ್ಳರು ಜಾಸ್ತಿ. ಹೆಚ್ಚಿನದಾಗಿ ಉದ್ಯಮಿಗಳು, ನಂ.1 ನಟ ನಟಿಯರು, ರಾಜಕಾರಣಿಗಳು ಅನೇಕ ಮಂದಿ ಸರ್ಕಾರಕ್ಕೆ ತೆರಿಗೆ ವಂಚಿಸುತ್ತಾರೆ. ಅವರ ಪ್ರಭಾವಕ್ಕೆ ಅಧಿಕಾರಿಗಳು ಮುಟ್ಟಲು ಹಿಂಜರಿಯುತ್ತಾರೆ.

    ಇಂತಹ ಸನ್ನಿವೇಶದಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಲು ಜಿಎಸ್‌ಟಿ (GST) ವಿಭಾಗದ ಹಿರಿಯ ಅಧಿಕಾರಿಗಳು ಆಯ್ದುಕೊಂಡಿದ್ದು ಕನ್ನಡಿಗ ಯುವ ಅಧಿಕಾರಿಯನ್ನು. ಹೀಗೆ ಆಯ್ಕೆಯಾಗಿ ಜಂಟಿ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಅವರು ಬಾಲಿವುಡ್‌ನ ದೊಡ್ಡ ತಾರೆಯರು, ಉದ್ಯಮಿಗಳಿಗೆ ಮುಲಾಜಿಲ್ಲದೆ ನೋಟೀಸ್ ನೀಡಿದರು. ಸರ್ಕಾರಕ್ಕೆ ಬರಬೇಕಿದ್ದ ತೆರಿಗೆಯನ್ನು ತ್ವರಿತ ಗತಿಯಲ್ಲಿ ವಸೂಲು ಮಾಡಿದರು. ಹೀಗೆ ಮುಂಬೈಯಲ್ಲಿ ಸದ್ದು ಮಾಡಿದ ಐಆರ್‌ಎಸ್ ಅಧಿಕಾರಿ (IRS Officer) ಅರಕಲಗೂಡಿನ ವರುಣ್ ರಂಗಸ್ವಾಮಿ.

    ವರುಣ್ ರಂಗಸ್ವಾಮಿ (Varun Rangaswamy) ಅರಕಲಗೂಡು ತಾಲೂಕಿನ, ಮಗ್ಗೆ ಗ್ರಾಮದವರು. ಪ್ರಸ್ತುತ ಮುಂಬೈ ಜಿಎಸ್‌ಟಿ ವಿಭಾಗದ ಜಂಟಿ ಆಯುಕ್ತರಾಗಿ ಸೇವೆಯಲ್ಲಿದ್ದಾರೆ. ಬೆಂಗಳೂರಿನಲ್ಲಿ ಜಿಎಸ್‌ಟಿ ಆಯುಕ್ತರಾಗಿದ್ದಾಗ ಆಡಳಿತದಲ್ಲಿ ಕನ್ನಡ ಬಳಕೆ, ಸರಳ ನಡವಳಿಕೆಯಿಂದ ಸೆಳೆದಿದ್ದರು. ಶಾಲಾ, ಕಾಲೇಜು ಶಿಕ್ಷಣವನ್ನು ಹಾಸನ, ಪುತ್ತೂರಿನಲ್ಲಿ ಪೂರ್ಣಗೊಳಿಸಿ ಬೆಂಗಳೂರಿನ ಎಂಎಸ್‌ಆರ್‌ಐಟಿಯಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್‌ನಲ್ಲಿ ಸ್ನಾತಕ ಪದವಿ ಪಡೆದಿದ್ದಾರೆ.

    ಪ್ರಸ್ತುತ ಇವರು ಬೆಂಗಳೂರಿನ ಪ್ರತಿಷ್ಠಿತ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಿಂದ ವ್ಯವಹಾರ ಕಾನೂನಿನಲ್ಲಿ ಸ್ನಾತಕ ಪದವಿಗೆ ಅಧ್ಯಯನ ಮಾಡುತ್ತಿದ್ದಾರೆ. 2012ರಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ವರುಣ್ ರಂಗಸ್ವಾಮಿ ಭಾರತೀಯ ಕಂದಾಯ ಸೇವೆಗೆ ಆಯ್ಕೆಯಾಗಿ, ಹಣಕಾಸು ಸಚಿವಾಲಯದಲ್ಲಿ ಸೇವೆಗೆ ನಿಯೋಜನೆಗೊಂಡರು. ನಂತರ ತಮಿಳುನಾಡು ಕಳ್ಳಸಾಗಣೆ ವಿರೋಧಿ ಘಟಕದಲ್ಲಿ ಸಹಾಯಕ ಆಯುಕ್ತರಾಗಿ ವೃತ್ತಿ ಜೀವನ ಆರಂಭಿಸಿದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲೇ ಯತ್ನಾಳ್‍ಗೆ ಬೊಮ್ಮಾಯಿ ತಿರುಗೇಟು

    ಚಿನ್ನ ಮತ್ತು ಮಾದಕ ವಸ್ತುಗಳನ್ನು ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಕಾರೈಕಲ್ ಮತ್ತು ನಾಗಪಟ್ಟಣಂ ಬಂದರುಗಳ ಮೇಲ್ವಿಚಾರಣೆಯ ಹೊಣೆಗಾರಿಕೆಯಲ್ಲಿದ್ದಾಗ ಕಳ್ಳಸಾಗಾಣಿಕೆ ತಡೆಗಟ್ಟುವಿಕೆ ಮತ್ತು ಸಮುದ್ರದಲ್ಲಿ ಗಸ್ತು ತಿರುಗುವಿಕೆಯನ್ನು ಬಿಗಿಗೊಳಿಸಿದರು. 2016 ರಲ್ಲಿ ಉಪ ಆಯುಕ್ತರಾಗಿ ಬಡ್ತಿ ಪಡೆದು ಟುಟಿಕೋರಿನ್‌ಗೆ ವರ್ಗಾವಣೆಯಾಗಿದರು. ಆದಾಯ ಸಂಗ್ರಹದಲ್ಲಿ ಹೆಚ್ಚಳ, ನಕಲಿ ರಫ್ತುಗಳಿಗೆ ತಡೆವೊಡ್ಡಿ ಕಳ್ಳದಂಧೆಗಳನ್ನು ಮಟ್ಟಹಾಕಿದರು. ಉಗಾಂಡದಲ್ಲಿ ನಡೆದ ಕಸ್ಟಮ್ಸ್ ಅಧಿಕಾರಿಗಳ ಸಮ್ಮೇಳನದಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ವರುಣ್ ರಂಗಸ್ವಾಮಿ ಸೇವಾ ದಕ್ಷತೆಗಾಗಿ ಪ್ರಶಂಸೆ ಪಡೆದಿದ್ದಾರೆ.

    2018ರಲ್ಲಿ ಜಿಎಸ್‌ಟಿ ತನಿಖಾ ಘಟಕದ ಉಪಆಯುಕ್ತರಾಗಿ ಬೆಂಗಳೂರಿಗೆ ವರ್ಗಾವಣೆಯಾದರು. ನಂತರ ಇವರ ಸಾಮರ್ಥ್ಯ ಮತ್ತು ಸೇವಾ ದಕ್ಷತೆಯನ್ನು ಪರಿಗಣಿಸಿ ಜಿಎಸ್‌ಟಿ ತೆರಿಗೆಗಳ ಜಂಟಿ ಆಯುಕ್ತರಾಗಿ ಮುಂಬೈಗೆ ವರ್ಗಾಯಿಸಲಾಗಿದೆ. ಅಲ್ಲಿಯೂ ಯಶಸ್ವಿ ಕಾರ್ಯಾಚರಣೆ ಮತ್ತು ಪ್ರಾಮಾಣಿಕ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ಗೃಹಜ್ಯೋತಿಗೆ ಭರ್ಜರಿ ನೋಂದಣಿ- 8 ದಿನದಲ್ಲಿ 51 ಲಕ್ಷ ಮಂದಿ ಅರ್ಜಿ ಸಲ್ಲಿಕೆ

  • ಮಂಡ್ಯ ರಾಜಕಾರಣಕ್ಕೆ ಮತ್ತೊಬ್ಬ ಗೌಡ್ತಿ ಎಂಟ್ರಿ?

    ಮಂಡ್ಯ ರಾಜಕಾರಣಕ್ಕೆ ಮತ್ತೊಬ್ಬ ಗೌಡ್ತಿ ಎಂಟ್ರಿ?

    ಮಂಡ್ಯ: ಜಿಲ್ಲೆಯಲ್ಲಿ ರಾಜಕಾರಣಕ್ಕೆ ಮತ್ತೊಬ್ಬ ಗೌಡ್ತಿ ಎಂಟ್ರಿ ಕೊಡಲಿದ್ದಾರೆ ಅಂತ ಹೇಳಲಾಗಿದೆ. ಮಾಜಿ ಸಂಸದೆ ರಮ್ಯಾ ಬಳಿಕ ಈಗ ಜೆಡಿಎಸ್ ಪಾಳಯದಲ್ಲಿ ಮತ್ತೊಬ್ಬ ಗೌಡ್ತಿ ಕಾಣಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.

    ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗಲೇ ಮಂಡ್ಯದ ನಾಗಮಂಗಲದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಜೆಡಿಎಸ್ ಬಂಡಾಯ ಶಾಸಕ ಚೆಲುರಾಯಸ್ವಾಮಿ ಕಾಂಗ್ರೆಸ್ ಕದ ತಟ್ಟಿದ್ದು, ಅವರ ಎದುರಾಳಿಗಳು, ಮಾಜಿ ಶಾಸಕರು ಆದ ಎಲ್‍ಆರ್ ಶಿವರಾಮೇಗೌಡ ಮತ್ತು ಸುರೇಶ್‍ಗೌಡ ಜೆಡಿಎಸ್ ಟಿಕೆಟ್‍ಗಾಗಿ ಪೈಪೋಟಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಮಹಿಳಾ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಅನ್ನೋ ಮಾತು ಕೇಳಿ ಬರುತ್ತಿದೆ. ಅವರೇ ಐಆರ್‍ಎಸ್ ಆಫೀಸರ್ ಲಕ್ಷ್ಮಿ ಅಶ್ವಿನ್ ಗೌಡ.

    2012ರ ಬ್ಯಾಚ್‍ನ ಐಆರ್‍ಎಸ್ ಆಫೀಸರ್ ಲಕ್ಷ್ಮಿ ಅಶ್ವಿನ್ ಗೌಡ, ಸದ್ಯ ರೈಲ್ವೆ ಇಲಾಖೆಯಲ್ಲಿ ಸಹಾಯಕ ಹಣಕಾಸು ಅಧಿಕಾರಿ. ಇವರು ನಾಗಮಂಗಲ ಕ್ಷೇತ್ರದಲ್ಲಿ ಕಳೆದ ಕೆಲ ದಿನಗಳಿಂದ ಹೆಚ್ಚಾಗಿ ಕಾಣಿಸಿಕೊಳ್ತಿದ್ದಾರೆ. ತಾಲೂಕಿನ ಸೊಸೆಯೂ ಆಗಿರೋ ಲಕ್ಷ್ಮಿ ಅಶ್ವಿನ್ ಗೌಡ, ತಮ್ಮ ಎನ್‍ಜಿಓ ಮೂಲಕ ಎಲ್ಲಾ ಹಳ್ಳಿಗಳಿಗೂ ಕುಡಿಯುವ ನೀರು ಪೂರೈಸ್ತಿದ್ದಾರೆ. ಹೀಗಾಗಿ ಇವರೇ ಜೆಡಿಎಸ್ ಅಭ್ಯರ್ಥಿ ಆಗ್ತಾರೆ ಅಂತಾ ಜನ ಮಾತಾಡಿಕೊಳ್ತಿದ್ದಾರೆ.

    ಈ ತಾಲೂಕು ಅತ್ಯಂತ ಬರಪೀಡಿತವಾಗಿದೆ. ಜೀವನಾಧಾರ ಒದಗಿಸುತ್ತಿದ್ದೇವೆ. ನನ್ನದೇ ಆದ ಸೇವೆ ಮಾಡಬೇಕು ಅಂತ ಬಂದಿದ್ದೇನೆ ಅಂತಾರೆ ಲಕ್ಷ್ಮಿ ಅಶ್ವಿನ್ ಗೌಡ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‍ನ ಮಾಜಿ ಶಾಸಕ ಸುರೇಶ್ ಗೌಡ, ಇದು ಪ್ರಜಾಪ್ರಭುತ್ವ. ಇಲ್ಲಿ ಯಾರು ಬೇಕಾದರೂ ಸ್ಪರ್ಧೆ ಮಾಡಬಹುದು ಅಂತಾರೆ. ಅಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಲು ನಾನೂ ಪ್ರಯತ್ನ ಮಾಡ್ತಿದ್ದೀನಿ ಅಂತ ಹೇಳಿಕೊಂಡಿದ್ದಾರೆ.

    ಒಟ್ಟಾರೆ ನಾಗಮಂಗಲದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಲು ಪೈಪೋಟಿ ಹೆಚ್ಚಿದೆ. ಇವರಲ್ಲಿ ಯಾರಿಗೆ ಟಿಕೆಟ್ ಸಿಗುತ್ತೆ ಅನ್ನೋದು ಇನ್ನೂ ಕೆಲವೇ ದಿನಗಳಲ್ಲಿ ಪಕ್ಕಾ ಆಗುವ ನಿರೀಕ್ಷೆಯಿದೆ.