Tag: Ishwar Khandre

  • ಪಾದಯಾತ್ರೆ ಮೊಟಕುಗೊಳಿಸಲು ಸರ್ಕಾರದಿಂದ ವೀಕೆಂಡ್ ಕರ್ಫ್ಯೂ ಜಾರಿ: ಈಶ್ವರ್ ಖಂಡ್ರೆ

    ಪಾದಯಾತ್ರೆ ಮೊಟಕುಗೊಳಿಸಲು ಸರ್ಕಾರದಿಂದ ವೀಕೆಂಡ್ ಕರ್ಫ್ಯೂ ಜಾರಿ: ಈಶ್ವರ್ ಖಂಡ್ರೆ

    ಬೀದರ್: ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕಿಡಿಕಾರಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು. ಇದನ್ನು ನಿನ್ನೆ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯುವ ಮೂಲಕ ಬಿಜೆಪಿ ಸರ್ಕಾರವೇ ಸಾಬೀತು ಮಾಡಿದೆ ಎಂದು ಆರೋಪಿಸಿದರು.

    ನಾವು ರಾಜಕೀಯ ಉದ್ದೇಶದಿಂದಲೇ ವೀಕೆಂಡ್ ಕರ್ಫ್ಯೂ ಹಾಕಿದ್ದು ಎಂದು ಜನರ ಮುಂದೆ ಸರ್ಕಾರವೇ ಸಾಬೀತು ಮಾಡಿದ್ದಾರೆ. ಬಿಜೆಪಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ಕಿಡಿಕಾರಿದ ಅವರು, ಸಾವಿರಾರು ಜನರನ್ನು ಸೇರಿಸಿ ಕೇಂದ್ರ ಸಚಿವ ಭಗವಂತ್ ಖೂಬಾ ಜನಾಶೀರ್ವಾದ ಯಾತ್ರೆಯಲ್ಲಿ ಮಾಡಿದ್ದರು. ಅಲ್ಲಿ ಅವರನ್ನು ಅಕ್ರಮ ಬಂದೂಕಿನಿಂದ ಸ್ವಾಗತ ಮಾಡಿದರು. ಈವರೆಗೂ ಪೊಲೀಸರು ಖೂಬಾ ಮೇಲೆ ಎಫ್‌ಐಆರ್ ದಾಖಲೆ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ ಯಾತ್ರೆ: ಎಸ್.ಆರ್.ಹಿರೇಮಠ

    Bhagwanth khuba Bidar MP

    ಮೇಕೆದಾಟು ಪಾದಯಾತ್ರೆ ವಿಚಾರಕ್ಕೆ ನನ್ನ ಮೇಲೆ ಹಾಗೂ ನಮ್ಮ ನಾಯಕರಾದ ಡಿಕೆಶಿ, ಸಿದ್ದರಾಮಯ್ಯ ಮೇಲೆ ಮೂರು ಕೇಸ್‌ಗಳನ್ನು ದಾಖಲಿಸಿದ್ದಾರೆ ಎಂದ ಅವರು, ಕೊರೊನಾ ಕೇಸ್ ಕಡಿಮೆಯಾದ ಮೇಲೆ ಮತ್ತೆ ರಾಮನಗರದಿಂದ ನಮ್ಮ ಪಾದಯಾತ್ರೆ ಮುಂದುವರೆಸುತ್ತೆವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಚಾಮುಂಡೇಶ್ವರಿಯಿಂದ ಓಡಿಸಲಾಗಿದೆ, ಬಾದಾಮಿಯಿಂದ ಓಡಿಸುವುದು ಬಾಕಿ ಇದೆ: ಸಿದ್ದು ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

    ಪಂಚ ರಾಜ್ಯ ಚುನಾವಣೆಯ ಸಮೀಕ್ಷೆಗಳೆಲ್ಲಾ ಸುಳ್ಳಾಗಲಿದ್ದು, ಬಿಜೆಪಿ ಪಂಚರಾಜ್ಯ ಚುನಾವಣೆಯಲ್ಲಿ ಧೂಳಿ ಪಟವಾಗುತ್ತದೆ ಎಂದ ಅವರು ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

  • ಮತಗಟ್ಟೆ ಬಳಿ ಹಾಕಿರುವ ಬೌಂಡರಿ ಒಳಗೆ ಬನ್ನಿ: ಈಶ್ವರ್ ಖಂಡ್ರೆಗೆ ಪ್ರಕಾಶ್ ಖಂಡ್ರೆ ಸವಾಲು

    ಮತಗಟ್ಟೆ ಬಳಿ ಹಾಕಿರುವ ಬೌಂಡರಿ ಒಳಗೆ ಬನ್ನಿ: ಈಶ್ವರ್ ಖಂಡ್ರೆಗೆ ಪ್ರಕಾಶ್ ಖಂಡ್ರೆ ಸವಾಲು

    ಬೀದರ್: ಸರ್ಕಾರ ಕೊಟ್ಟಿರುವ ನಿಮ್ಮ ಎಸ್ಕಾರ್ಟ್ ಬಿಟ್ಟು ಮತಗಟ್ಟೆ ಬಳಿ ಹಾಕಿರುವ ಬೌಂಡರಿ ಒಳಗೆ ಬನ್ನಿ ನೋಡೋಣ ಎಂದು ಪರಿಷತ್ ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ಬಹಿರಂಗವಾಗಿ ಸವಾಲನ್ನು ಹಾಕಿದರು.

    ಚುನಾವಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಶ್ವರ್ ಖಂಡ್ರೆ ಅವರೆ ನಿಮ್ಮ ಪಕ್ಷ ಒಂದು ದೊಡ್ಡ ಸ್ಥಾನ ಕೊಟ್ಟಿದೆ ಎಂದು ನಿಮ್ಮ ಕಣ್ಣು ತಲೆ ಮೇಲೆ ಹೋಗಿದೆ. ನಿಮ್ಮತರ ನನಗೆ ಬಾಪ್ ಕಮಾಯಿ(ಅಪ್ಪನ ದುಡಿಮೆ) ಇಲ್ಲ ಎಂದು ಟಾಂಗ್ ಕೊಟ್ಟ ಅವರು, ಚುನಾವಣೆಯ ದಿನ ನಾನು ಮತಗಟ್ಟೆ ಒಳಗಡೆ ಬರುತ್ತೇನೆ. ನೀವು ನನ್ನ ಎದುರು ಮತದಾನ ಮಾಡಬೇಕು ಎಂದು ಮತದಾರರಿಗೆ ಹೇಳುತ್ತೀರಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಮೊಟ್ಟೆ ವಿತರಣೆ ಕೈಬಿಡಿ, ಇಲ್ಲದಿದ್ದರೆ ಸಸ್ಯಾಹಾರಿಗಳಿಗೆ ಪ್ರತ್ಯೇಕ ಶಾಲೆ ತೆರೆಯಿರಿ: ದಯಾನಂದ ಸ್ವಾಮೀಜಿ

    BJP - CONGRESS

    ಅದು ಯಾವ ಕಾನೂನು, ಯಾವ ಎಲೆಕ್ಷನ್ ರೂಲ್ಸ್ ಇದೆ. ನಿಮ್ಮ ಬಳಿ ನಾನು ನೋಡಬೇಕಿದೆ. ಈ ರೀತಿ ಮತದಾರರಿಗೆ ದಬ್ಬಾಳಿಕೆ, ಶೋಷಣೆ ಮಾಡೋದು ಬಿಡ್ರಿ ಎಂದು ಕಿಡಿಕಾರಿದರು. ಇದು ಕಾನೂನು ಬಾಹಿರವಾಗಿದ್ದು, 10ನೇ ತಾರೀಖು ತಾವು ಹೇಗೆ ಬರುತ್ತೀರಿ ನೋಡೋಣ ಎಂದು ಬಹಿರಂಗ ಸವಾಲು ಹಾಕಿದರು.

  • ಬಿಜೆಪಿ ಅಂದ್ರೆ ಭಾರತೀಯ ಜೂಟಾ ಪಾರ್ಟಿ: ಈಶ್ವರ್ ಖಂಡ್ರೆ

    ಬಿಜೆಪಿ ಅಂದ್ರೆ ಭಾರತೀಯ ಜೂಟಾ ಪಾರ್ಟಿ: ಈಶ್ವರ್ ಖಂಡ್ರೆ

    ಬೀದರ್: ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದ್ದು, ಈಗ ಬಿಜೆಪಿ ಅವರು ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ. ಬಿಜೆಪಿ ಎಂದರೆ ಭಾರತೀಯ ಜೂಟಾ ಪಾರ್ಟಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

    ಬೀದರ್ ನಲ್ಲಿ ಸುದ್ದಿಗೋಷ್ಠಿ ಮಾಡಿದ ಖಂಡ್ರೆ, ಗಾಂಧಿಜೀ ಅವರ ಸ್ವರಾಜ್ ಕಲ್ಪನೆಯನ್ನು ಪೂರ್ತಿಯಾಗಿ ಮಾಡದೆ ಗಾಂಧಿಜೀಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ. ಬಹಿರಂಗವಾಗಿ ಗಾಂಧಿಜಿ ಕೊಲೆ ಮಾಡಿದ ಗೋಡ್ಸೆಯ ದೇವಾಲಯ ಕಟ್ಟಲು ಹೋರಟಿದ್ದೀರಿ ಎಂದು ಜನ ಸ್ವರಾಜ್ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟರು. ಇದನ್ನೂ ಓದಿ:  70 ವರ್ಷದ ದೇಶದ ಸಾಧನೆಯನ್ನು ಪ್ರಶ್ನಿಸುತ್ತಿರುವುದು ದುರದೃಷ್ಟಕರ: ಭೂಪೇಶ್ ಬಘೇಲ್

    ಪಂಚ ರಾಜ್ಯಗಳ ಚುನಾವಣೆ ಇದ್ದು, ಚುನಾವಣೆಯ ದೃಷ್ಟಿಯಿಂದ ಹೆದರಿ ಪ್ರಧಾನಿ ಮೋದಿ ಅವರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದಾರೆ. ಇದು ಪ್ರಜಾಪ್ರಭುತ್ವ ಹಾಗೂ ರೈತರಿಗೆ ಸಿಕ್ಕ ಜಯ ಜೊತೆಗೆ ಬೆಂಬಲ ನೀಡಿದ್ದ ವಿರೋಧ ಪಕ್ಷಗಳ ಜಯ ಎಂದರು.

    Bhagwanth khuba Bidar MP

    ಕೇಂದ್ರ ಸಚಿವ ಭಗವಂತ್ ಖೂಬಾ ರಸಗೊಬ್ಬರದ ಕೊರತೆ ಇಲ್ಲ ಎನ್ನುತ್ತಿದ್ದಾರೆ. ಆದರೆ ಒಂದೂವರೆ ತಿಂಗಳಿನಿಂದ ರಸಗೊಬ್ಬರದ ಕೊರತೆ ಇದೆ. ನೀವೇ ಹೋಗಿ ರಸಗೊಬ್ಬರದ ಅಂಗಡಿಗಳಲ್ಲಿ ಡಿಎಪಿ ರಸಗೊಬ್ಬರ ಕೇಳಿ ಆದ್ರೆ ರಸಗೊಬ್ಬರ ಸಿಗಲ್ಲ. ಏಕೆಂದರೆ ರಸಗೊಬ್ಬರ ಕೊರತೆ ಇದೆ ಎಂದು ಖೂಬಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ:  ಅನುಷ್ಕಾ ಸಂಗೀತ ಸಮಾರಂಭದಲ್ಲಿ ಕುಣಿದು ಕುಪ್ಪಳಿಸಿದ ಆಲಿಯಾ

  • ಎಲ್ಲ ಜನರಿಗೆ ಲಸಿಕೆ – ಬೀದರ್ ಜಿಲ್ಲೆಯ ಗ್ರಾಮ ಈಗ ರಾಜಕ್ಕೆ ಮಾದರಿ

    ಎಲ್ಲ ಜನರಿಗೆ ಲಸಿಕೆ – ಬೀದರ್ ಜಿಲ್ಲೆಯ ಗ್ರಾಮ ಈಗ ರಾಜಕ್ಕೆ ಮಾದರಿ

    ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಉಚ್ಛಾ ಗ್ರಾಮದ ಜನರು ನೂರಕ್ಕೆ ನೂರು ಲಸಿಕೆ ಪಡೆಯುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದ್ದಾರೆ.

    ಆರಂಭದಲ್ಲಿ ಲಸಿಕೆ ಪಡೆದರೆ ಅಡ್ಡಪರಿಣಾಮಗಳು ಆಗುತ್ತವೆ ವದಂತಿ ಹರಡಿದ್ದರೂ ಜನ ಈ ಸುಳ್ಳು ವದಂತಿಯನ್ನು ನಂಬದ ಕಾರಣ 45 ವರ್ಷ ಮೇಲ್ಪಟ್ಟ ಎಲ್ಲ ಜನ ಲಸಿಕೆ ಹಾಕಿದ್ದಾರೆ. ಈ ಗ್ರಾಮದ ಒಟ್ಟು 2,473 ಜನರು ಲಸಿಕೆ ಪಡೆಯುವ ಮೂಲಕ ರಾಜ್ಯಕ್ಕೆ ಮಾದರಿ ಗ್ರಾಮವಾಗಿ ಹೊರಹೊಮ್ಮಿದೆ.

    45 ವರ್ಷ ಮೇಲ್ಪಟ್ಟ 1,054 ಮಂದಿ, 18 ದಿಂದ 44 ವರ್ಷದ ಒಳಗಿನ ವಿಶೇಷ ಚೇತನರು, ವ್ಯಾಪಾರಿಗಳು ಸೇರಿದಂತೆ 589 ಜನ ಲಸಿಕೆ ಪಡೆದಿದ್ದಾರೆ. ಇದರ ಜೊತೆಗೆ 60 ವರ್ಷ ಮೇಲ್ಪಟ್ಟ 758 ವಯೋವೃದ್ಧರಿಗೂ ಮತ್ತು 71 ಜನ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದವರಿಗೂ ಲಸಿಕೆ ನೀಡಲಾಗಿದೆ. ಯಾವುದೇ ವದಂತಿಗಳಿಗೆ ಕಿವಿಗೊಡದೆ ಗ್ರಾಮಸ್ಥರು ಎಲ್ಲರು ಲಸಿಕೆ ಸ್ವೀಕರಿಸಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ.

    ಹಲವು ತಿಂಗಳಿಂದ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಭುವನೇಶ್ ಪಾಟೀಲ್, ತಹಸೀಲ್ದಾರ್, ಸ್ಥಳೀಯ ಆರೋಗ್ಯಾಧಿಕಾರಿಗಳು ಗ್ರಾಮಕ್ಕೆ ಹಲವು ಬಾರಿಗೆ ಭೇಟಿ ನೀಡಿ ಜನರಲ್ಲಿ ಲಸಿಕೆ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಅಲ್ಲದೇ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸ್ಥಳೀಯ ಸಿಬ್ಬಂದಿ ಕೂಡಾ ಹಗಲಿ ಇರುಳು ಲಸಿಕೆ ಬಗ್ಗೆ ಜಾಗೃತಿ ಮೂಡಿಸಿ ಶ್ರಮಿಸಿದ್ದರಿಂದ ಈ ಸಾಧನೆ ನಿರ್ಮಾಣವಾಗಿದೆ. ಇದನ್ನು ಓದಿ:ಬೆಂಗಳೂರಿನ ಸ್ಮಶಾನಗಳಲ್ಲಿರುವ ಅನಾಥ ಅಸ್ಥಿಗಳಿಗೆ ಇಂದು ಮಂಡ್ಯದಲ್ಲಿ ಮೋಕ್ಷ

    ಸ್ಥಳೀಯ ಶಾಸಕರಾದ ಈಶ್ವರ್ ಖಂಡ್ರೆ ಕೂಡಾ ಗ್ರಾಮದ ಜನರಲ್ಲಿ ಆತ್ಮಸ್ಥೈರ್ಯ ಮೂಡಿಸಿ ಲಸಿಕೆ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸತತ ಪರಿಶ್ರಮದಿಂದಾಗಿ ಇಂದು ಈ ಗ್ರಾಮ ಸಂಪೂರ್ಣವಾಗಿ ಲಸಿಕೆ ಪಡೆಯುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ.

    ಜಿಲ್ಲೆಯ 19 ಲಕ್ಷ ಜನಗಳ ಪೈಕಿ ಸದ್ಯ 3 ಲಕ್ಷ ಲಸಿಕೆ ವಿತರಣೆಯಾಗಿದೆ. ಇಡೀ ಜಿಲ್ಲೆಗೆ ಸಂಪೂರ್ಣವಾಗಿ ಲಸಿಕೆ ನೀಡುವ ಗುರಿಯನ್ನು ಜಿಲ್ಲಾಡಳಿತ ಹೊಂದಿದೆ. ಅಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳ ಪರಿಶ್ರಮದಿಂದಾಗಿ ಸಂರ್ಪೂಣವಾಗಿ ಈ ಗ್ರಾಮದಲ್ಲಿ ಲಸಿಕೆ ಮಾಡಲಾಗಿದೆ. ನಮ್ಮದು ಗಡಿ ಜಿಲ್ಲೆಯಾಗಿದ್ದರಿಂದ ಯಾವುದೇ ಸಮಸ್ಯೆಯಾಗದಂತೆ ವೇಗವಾಗಿ ಈ ಲಸಿಕೆ ಕಾರ್ಯಕ್ರಮ ಮಾಡುತ್ತಿದ್ದೇವೆ. ಲಸಿಕೆ ಪಡೆದ ಗ್ರಾಮಸ್ಥರು ಸುರಕ್ಷವಾಗಿದ್ದು, ಎಲ್ಲರು ಈ ಗ್ರಾಮವನ್ನು ಮಾದರಿಯಾಗಿ ತೆಗೆದುಕೊಂಡು ಎಲ್ಲರು ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ಮನವಿ ಮಾಡಿಕೊಂಡಿದ್ದಾರೆ. ಇದನ್ನು ಓದಿ:ಜುಲೈ ಮಧ್ಯ, ಆಗಸ್ಟ್ ಆರಂಭದಲ್ಲಿ ದಿನಕ್ಕೆ 1 ಕೋಟಿ ಲಸಿಕೆ ಲಭ್ಯ – ಕೇಂದ್ರ

  • ವಸತಿ ಯೋಜನೆಯಲ್ಲಿ ಅಕ್ರಮ ಸಾಬೀತು – 7 ಜನ ಪಿಡಿಓಗಳು ಅಮಾನತು

    ವಸತಿ ಯೋಜನೆಯಲ್ಲಿ ಅಕ್ರಮ ಸಾಬೀತು – 7 ಜನ ಪಿಡಿಓಗಳು ಅಮಾನತು

    ಬೀದರ್ : ಭಾಲ್ಕಿ ತಾಲೂಕಿನ ವಿವಿಧ ವಸತಿ ಯೋಜನೆಯಲ್ಲಿ ಅಕ್ರಮ ಸಾಬೀತಾದ ಹಿನ್ನಲೆಯಲ್ಲಿ 7 ಜನ ಪಿಡಿಓಗಳನ್ನು ಅಮಾನತು ಮಾಡಲಾಗಿದೆ.

    ಬೀದರ್‍ನ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ 2015 ರಿಂದ 2019ರವರೆಗೆ ಅನುಷ್ಠಾನಗೊಂಡ ವಿವಿಧ ವಸತಿ ಯೋಜನೆಯಲ್ಲಿ ಅಕ್ರಮ ಸಾಬೀತಾಗಿದೆ. ಈ ಹಿನ್ನಲೆ ಜಿಲ್ಲಾ ಪಂಚಾಯತ್ ಸಿಇಓ ಗ್ಯಾನೇಂದ್ರಕುಮಾರ್ ಈ ಆದೇಶ ಹೊರಡಿಸಿದ್ದಾರೆ.

    ಬಾಳೂರು ಗ್ರಾಮ ಪಂಚಾಯತಿ ಪಿಡಿಓ ಸಂಗಮೇಶ ಸಾವಳೆ, ಬೀರಿ ಗ್ರಾಮಪಂಚಾಯತಿ ಪಿಡಿಓ ಮಲ್ಲೇಶ್ ಮಾರುತಿ, ಜ್ಯಾಂತಿ ಗ್ರಾಮಪಂಚಾಯತಿ ಪಿಡಿಓ ರೇವಪ್ಪ, ಮೊರಂಬಿ ಗ್ರಾಮಪಂಚಾಯತಿ ಪಿಡಿಓ ರೇಖಾ, ತಳವಾಡ ಕೆ ಗ್ರಾಮಪಂಚಾಯತಿ ಪಿಡಿಓ ಚಂದ್ರಶೇಖರ, ವರವಟ್ಟಿ ಗ್ರಾಮಪಂಚಾಯತಿ ಪಿಡಿಓ ಸಂತೋಷ್, ಎಣಕೂರು ಗ್ರಾಮಪಂಚಾಯತಿ ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

    ವಸತಿ ಯೋಜನೆಯ ಮನೆಗಳನ್ನು ನಿಜವಾದ ಫಲಾನುಭವಿಗಳಿಗೆ ಹಂಚಿಕೆ ಮಾಡದೇ, ತಮ್ಮ ಬೆಂಬಲಿಗರಿಗೆ ಖಂಡ್ರೆ ಹಂಚಿಕೆ ಮಾಡಿದ್ದಾರೆ. ಈ ಮೂಲಕ ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ವಸತಿ ಯೋಜನೆಯ ಮನೆಗಳ ಹಂಚಿಕೆಯಲ್ಲಿ ಅಕ್ರಮ ಮಾಡಿದ್ದಾರೆ ಎಂದು ಸಂಸದ ಭಗವಂತ್ ಖೂಬಾ ಆರೋಪ ಮಾಡಿದ್ದರು.

    ಸಂಸದರ ಆರೋಪ ಹಿನ್ನೆಲೆ ರಾಜ್ಯ ಮಟ್ಟದ ಅಧಿಕಾರಿಗಳ ತಂಡ ಭಾಲ್ಕಿಗೆ ಬಂದು ತನಿಖೆ ಮಾಡಿತ್ತು. ಒಟ್ಟು 26 ಸಾವಿರ ವಸತಿಗಳಲ್ಲಿ 9 ಸಾವಿರ ವಸತಿಗಳಲ್ಲಿ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಹೇಳಲಾಗಿತ್ತು. ರಾಜ್ಯ ತಂಡ ತನಿಖೆ ಮಾಡಿ 8 ತಿಂಗಳ ಬಳಿಕ ಜಿಲ್ಲಾ ಪಂಚಾಯತ್ ಅಧಿಕಾರಿಗಳ ವಿರುದ್ಧ ಈ ಕ್ರಮ ತೆಗೆದುಕೊಂಡಿದೆ.

  • ತೇಜಸ್ವಿ ಸೂರ್ಯ ರಾಕ್ಷಸ, ರಾಜ್ಯದ ಜನರ ದಿಕ್ಕು ತಪ್ಪಿಸ್ತಿದ್ದಾನೆ: ಈಶ್ವರ್ ಖಂಡ್ರೆ

    ತೇಜಸ್ವಿ ಸೂರ್ಯ ರಾಕ್ಷಸ, ರಾಜ್ಯದ ಜನರ ದಿಕ್ಕು ತಪ್ಪಿಸ್ತಿದ್ದಾನೆ: ಈಶ್ವರ್ ಖಂಡ್ರೆ

    ಬೆಳಗಾವಿ: ಸಂಸದ ತೇಜಸ್ವಿ ಸೂರ್ಯ ರಾಕ್ಷಸ, ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ.

    ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ 14 ನೇಯ ಹಣಕಾಸು ಯೋಜನೆಯಲ್ಲಿ ಎಲ್ಲ ರಾಜ್ಯ ಸರ್ಕಾರಗಳಿಗೆ ನೆರವು ನೀಡಲೇಬೆಕು ಎಂದು ಹೇಳಿದರು.

    ಮಾನವೀಯತೆಯ ಆಧಾರದ ಮೇಲೆ ಪ್ರಧಾನಿ ಮೋದಿ ರಷ್ಯಾಕ್ಕೆ ಹಣ ನೀಡುತ್ತಾರೆ. ಆದರೆ ನಮ್ಮ ರಾಜ್ಯ ಕರ್ನಾಟಕಕ್ಕೆ ಯಾಕೆ ಪರಿಹಾರ ನೀಡುತ್ತಿಲ್ಲ. ರಾಜ್ಯ ಮತ್ತು ಕೇಂದ್ರದಲ್ಲಿ ನಮ್ಮದೇ ಸರ್ಕಾರವಿದೆ. ನಾವು ರಾಜ್ಯವನ್ನು ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿ ಹಿಂಬದಿಯಿಂದ ಬಿಜೆಪಿ ನಾಯಕರು ಅಧಿಕಾರಕ್ಕೆ ಬಂದರು. ಆದರೆ ನೆರೆ ಬಂದು 50 ದಿನ ಕಳೆದರೂ ಪರಿಹಾರ ಬಂದಿಲ್ಲ. ರಾಜ್ಯ ಬಿಜೆಪಿ ನಾಯಕರು ಎಲ್ಲಿದ್ದೀರಪ್ಪ ಎಂದು ವ್ಯಂಗ್ಯವಾಡಿದರು. ಇದನ್ನು ಓದಿ: ತೇಜಸ್ವಿ ಸೂರ್ಯ ತಕ್ಷಣ ಸಂತ್ರಸ್ತರ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು: ಹೆಚ್‍ಕೆ ಪಾಟೀಲ್

    ಕೇಂದ್ರ ಸಚಿವರು, ನಮ್ಮ ಸಿಎಂ ಯಡಿಯೂರಪ್ಪ ಅವರಿಗೆ ಭೇಟಿಯಾಗಲೂ ಸಮಯ ನೀಡುತ್ತಿಲ್ಲ. ಈ ಅಭಿವೃದ್ಧಿ ಮಾಡಲು 25 ಸಂಸದರು ಬೇರೆ ಕೇಡು. ಇವತ್ತಿನ ಪ್ರತಿಭಟನೆಯನ್ನು ನೋಡಿ ಮೋದಿ ಸರ್ಕಾರ ಕೂಡಲೇ ಪರಿಹಾರ ಕೊಡಬೇಕು ಎಂದು ಒತ್ತಾಯ ಮಾಡಿದರು.

  • ಡಿಕೆಶಿಯನ್ನು ಮಾನಸಿಕ, ದೈಹಿಕವಾಗಿ ಕ್ರೂರವಾಗಿ ನಡೆಸಿಕೊಳ್ಳುತ್ತಿದ್ದಾರೆ- ಖಂಡ್ರೆ

    ಡಿಕೆಶಿಯನ್ನು ಮಾನಸಿಕ, ದೈಹಿಕವಾಗಿ ಕ್ರೂರವಾಗಿ ನಡೆಸಿಕೊಳ್ಳುತ್ತಿದ್ದಾರೆ- ಖಂಡ್ರೆ

    ಬೀದರ್: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ರಾಜಕೀಯ ಪ್ರೇರಿತ ಪ್ರಕರಣ ದಾಖಲಿಸಿ ಕೇಂದ್ರ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ. ಅಲ್ಲದೆ, ತನಿಖಾ ಸಂಸ್ಥೆಗಳು ಮಾನಸಿಕ, ದೈಹಿಕವಾಗಿ ಕ್ರೂರವಾಗಿ ನಡೆಸಿಕೊಳ್ಳುತ್ತಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.

    ಬೀದರ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ರೀತಿ ನಡೆದುಕೊಳ್ಳುವುದು ಖಂಡನೀಯವಾಗಿದ್ದು, ಡಿಕೆಶಿಗೆ ನ್ಯಾಯ ಸಿಕ್ಕು ಜಯಶಾಲಿಯಾಗಿ ಹೊರ ಬರುತ್ತಾರೆ. ಡಿಕೆಶಿಯನ್ನು ಸಿದ್ದರಾಮಯ್ಯ ಭೇಟಿಯಾಗಲಿದ್ದು, ಅವರ ಜೊತೆ ಕಾಂಗ್ರೆಸ್ ಪಕ್ಷ ಇದೆ ಎಂದು ತಿಳಿಸಿದರು.

    ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವ ಹಿನ್ನೆಲೆ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದು, ಮೋದಿ, ಅಮಿತ್ ಶಾ ಬಳಿ ಪರಿಹಾರ ಕೇಳಲು ಸಿಎಂ, ಸಂಸದರು, ಸಚಿವರಿಗೆ ಎದೆಗಾರಿಕೆ ಇಲ್ಲ. ರಾಜ್ಯಕ್ಕೆ ಮೋದಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ನಿರಾಶ್ರಿತರ ಬಗ್ಗೆ ಎಳ್ಳಷ್ಟು ಕಳಕಳಿ ಇಲ್ಲ. ಇಂಥಾ ಸರ್ಕಾರ ಬೇಕಾ? 25 ಸಂಸದರನ್ನು ಗೆಲ್ಲಿಸಿ ಕಳಿಸಿದ್ದೇವೆ. ನಮ್ಮ ಸಂಸದರು ಎಲ್ಲಿದ್ದಾರೆ? ಎಂದು ಖಂಡ್ರೆ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

  • ಕುದುರೆ ವ್ಯಾಪಾರ ನಡೆಸಲು ಬಿಡದ್ದಕ್ಕೆ ಡಿಕೆಶಿಯಿಂದ ಕಣ್ಣೀರು ಹಾಕಿಸುತ್ತಿದ್ದಾರೆ- ಈಶ್ವರ್ ಖಂಡ್ರೆ

    ಕುದುರೆ ವ್ಯಾಪಾರ ನಡೆಸಲು ಬಿಡದ್ದಕ್ಕೆ ಡಿಕೆಶಿಯಿಂದ ಕಣ್ಣೀರು ಹಾಕಿಸುತ್ತಿದ್ದಾರೆ- ಈಶ್ವರ್ ಖಂಡ್ರೆ

    ಬೀದರ್: ಗುಜರಾತ್‍ನ ಶಾಸಕರುಗಳನ್ನು ಕುದುರೆ ವ್ಯಾಪರ ಮಾಡಲು ಬಿಡದಿದಕ್ಕೆ ಇದೀಗ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ಇಡಿ ಅಧಿಕಾರಿಗಳು ಕಣ್ಣೀರು ಹಾಕಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೇಡು, ದ್ವೇಷ ರಾಜಕಾರಣದಿಂದ ಡಿ.ಕೆ.ಶಿವಕುಮಾರ್ ಅವರಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಯಾವ ರೀತಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಆ ಚಿತ್ರಣವನ್ನು ನೋಡಿದರೆ ಶಾಕ್ ಆಗುತ್ತಿದೆ. ಹಬ್ಬದ ದಿನ ಸಂಭ್ರಮದಿಂದ ಇರಬೇಕು. ಹಬ್ಬ, ಸಂಪ್ರದಾಯ, ಪೂರ್ವಿಕರ ಕಾರ್ಯಕ್ಕೆ ಅವಕಾಶ ನೀಡದೆ ಕಿರುಕುಳ ನೀಡುವುದು ಯಾವ ರೀತಿಯ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

    ಇದು ಅತ್ಯಂತ ಖಂಡನೀಯ, ಬಿಜೆಪಿ ಸರ್ಕಾರ ಮಾನವೀಯತೆಯನ್ನು ಮರೆತು ಸೇಡಿನ ರಾಜಕೀಯ ಮಾಡುತ್ತಿದೆ. ಜನರು ಎಲ್ಲವನ್ನೂ ನೋಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಜೊತೆ ಕಾಂಗ್ರೆಸ್ ಪಕ್ಷ ಇದೆ, ಸತ್ಯಕ್ಕೆ ಜಯ ಸಿಗುತ್ತದೆ ಎಂದು ಈಶ್ವರ್ ಖಂಡ್ರೆ ಭರವಸೆ ವ್ಯಕ್ತಪಡಿಸಿದರು.

    ಮೂರನೇ ದಿನವಾದ ಇಂದು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವ ಮುನ್ನ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಕಣ್ಣೀರು ಹಾಕಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಕಣ್ಣಲ್ಲಿ ನೀರು ಹಾಕುತ್ತಿರೋದು ನಮ್ಮ ತಂದೆಗೆ ಪೂಜೆ ಮಾಡುವ ಅವಕಾಶವನ್ನು ನನ್ನ ಬಿಜೆಪಿ ಸ್ನೇಹಿತರು ಅಧಿಕಾರದ ಮುಖಾಂತರ ಕೊಟ್ಟಿಲ್ಲ. ನನಗೆ ದುಃಖ ಯಾಕೆ ಆಗುತ್ತಿದೆ ಎಂದರೆ ಇವತ್ತು ತಂದೆ ಹಾಗೂ ಹಿರಿಯರಿಗೆ ನಾನು, ನನ್ನ ತಮ್ಮ ಪೂಜೆ ಮಾಡಬೇಕಿತ್ತು. ಅವರಿಗೆ ಎಡೆ ಇಡಲು ಸಹ ಅವಕಾಶ ಕೊಟ್ಟಿಲ್ಲ. ಪರವಾಗಿಲ್ಲ, ಇಡಿ ಕಚೇರಿಯಲ್ಲೇ ಎಲ್ಲರನ್ನೂ ಸ್ಮರಿಸಿಕೊಳ್ಳುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪಾರ್ಥಿಸುತ್ತೇನೆ ಎಂದು ಡಿಕೆಶಿ ಕಣ್ಣೀರಿಟ್ಟಿದ್ದಾರೆ.

    ಉಪ್ಪು ತಿಂದವರು ನೀರು ಕುಡಿಬೇಕು ಎಂದು ನನ್ನ ಸ್ನೇಹಿತರು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೋಸ್ಕರ, ನಮ್ಮ ನಾಯಕರಿಗೋಸ್ಕರ, ನನ್ನನ್ನು ನಂಬಿದ ಜನಕ್ಕೋಸ್ಕರ ಹೋರಾಟ ಮಾಡಿಕೊಂಡು ನಾನು ಬಂದಿದ್ದೇನೆ. ಇಂದು ನಮ್ಮ ಅನೇಕ ಸ್ನೇಹಿತರು, ಕಾರ್ಯಕರ್ತರು, ನಾಯಕರು ಪಕ್ಷ ಬೆಳೆಸಿರುವುದರಿಂದ ಇಲ್ಲಿಯವರೆಗೆ ಬಂದಿದ್ದೇನೆ. ಇದನ್ನೆಲ್ಲಾ ಎದುರಿಸುವಂತಹ ಶಕ್ತಿ ದೇವರು ನನಗೆ ಕೊಟ್ಟಿದ್ದಾನೆ. ನಾನು ಯಾರಿಗೂ ಮೋಸ ಮಾಡಿಲ್ಲ, ಕಳ್ಳತನ ಮಾಡಿಲ್ಲ, ಜಮೀನನ್ನು ಒತ್ತುವರಿ ಮಾಡಿಕೊಂಡಿಲ್ಲ, ಲಂಚದ ಆರೋಪವಿಲ್ಲ, ಅಧಿಕಾರ, ಸರ್ಕಾರದ ಹಣ ದುರುಪಯೋಗ ಮಾಡಿಕೊಂಡಿಲ್ಲ. ನೇರವಾಗಿ ನುಡಿದಂತೆ ನಡೆದಿದ್ದೇನೆ ಎಂದು ತಿಳಿಸಿದ್ದಾರೆ.

  • ದೋಸ್ತಿ ಸರ್ಕಾರದ ವಿರುದ್ಧ ಹೊಸ ಬಾಂಬ್ ಸಿಡಿಸಿದ ಶೋಭಾ ಕರಂದ್ಲಾಜೆ

    ದೋಸ್ತಿ ಸರ್ಕಾರದ ವಿರುದ್ಧ ಹೊಸ ಬಾಂಬ್ ಸಿಡಿಸಿದ ಶೋಭಾ ಕರಂದ್ಲಾಜೆ

    ಬೆಂಗಳೂರು: ರಹೀಂ ಖಾನ್ ಅವರಿಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ದೂರವಾಣಿ ಕರೆ ಮಾಡಿದ್ದರು ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಆರೋಪಕ್ಕೆ ತಿರುಗೇಟು ನೀಡಿರುವ ಅವರು ಮೈತ್ರಿ ಸರ್ಕಾರ ವಿರುದ್ಧ ದೂರವಾಣಿ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಹೀಂಖಾನ್ ಯಾರು ಎಂದು ಈಶ್ವರ್ ಖಂಡ್ರೆ ಹೇಳಬೇಕು. ಅವರಿಗೂ ಬಿಜೆಪಿಗೂ ಏನು ಸಂಬಂಧ ಹೇಳಿ. ನಮ್ಮ ಸ್ಪೀಕರ್ ಇದ್ದ ಸಂದರ್ಭದಲ್ಲಿ ಅವರತ್ತ ಪೇಪರ್ ಎಸೆದ ಸಂದರ್ಭದಲ್ಲಿ ಅವರನ್ನ ನಾನು ನೋಡಿದ್ದೆ ಅಷ್ಟೇ. ಮಾತನಾಡುವ ಮುನ್ನ ನಾಲಿಗೆ ಬಿಗಿ ಹಿಡಿದು ಮಾತಾಡಬೇಕು ಎಂದು ಎಚ್ಚರಿಕೆ ನೀಡಿದರು.

    ಸುಖಾ ಸುಮ್ಮನೆ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ಕೆಲಸವನ್ನು ಬಿಟ್ಟು ನಿಜವಾದ ಸಂಗತಿಗಳ ಬಗ್ಗೆ ಹೇಳಬೇಕು. ನಾನು ಅವರೊಂದಿಗೆ ಮಾತನಾಡಿದಲ್ಲಿ ಆ ಆಡಿಯೋ ಬಿಡುಗಡೆ ಮಾಡಿ. ಸರ್ಕಾರ ಉರುಳುತ್ತೆ ಎಂದು ತಿಳಿದ ಕೂಡಲೇ ಮೈತ್ರಿ ಸರ್ಕಾರ ದೂರವಾಣಿ ಕದ್ದಾಲಿಕೆ ಮಾಡುವ ಕಾರ್ಯ ಮಾಡುತ್ತಿದೆ. ಆದ್ದರಿಂದಲೇ ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಈಗ ಇಡಿ ಒಬ್ಬ ಖಾನ್ ನನ್ನು ಬಂಧಿಸಿ ತನಿಖೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಯಾವ ಯಾವ ಖಾನ್ ಗಳು ಒಳಗೆ ಹೋಗುತ್ತಾರೆ, ಯಾವ ಅಧಿಕಾರಿಗಳು, ರಾಜಕಾರಣಿಗಳು ಯಾವ ಖಾನ್‍ಗಳ ಜೊತೆ ಸಂಬಂಧ ಇದೆ ಎಂಬುವುದು ಗೊತ್ತಾಗುತ್ತದೆ ಎಂದರು.

    ಸದ್ಯ ನಿಮ್ಮದೇ ಸರ್ಕಾರ ಇರುವುದರಿಂದ ನಿಮ್ಮ ಬಳಿಯೇ ಗುಪ್ತಚರ ಇಲಾಖೆ ಇದೆ. ಇದನ್ನು ಬಳಸಿಕೊಂಡು ಒಮ್ಮೆ ಚೆಕ್ ಮಾಡಿಕೊಳ್ಳಿ. ಸುಖಾ ಸುಮ್ಮನೆ ಆರೋಪ ಮಾಡುತ್ತಿರುವ ಈಶ್ವರ್ ಖಂಡ್ರೆ ಅವರ ನಡೆಯೇ ಮೈತ್ರಿ ಸರ್ಕಾರ ಉರುಳಲಿದೆ ಎಂಬುವುದಕ್ಕೆ ತಾಜಾ ಉದಾಹರಣೆ ಆಗಿದೆ ಎಂದರು. ಅಲ್ಲದೇ ವಿಧಾನಸಭಾ ಮಂಡಲದಲ್ಲಿ ಕಾಲಹರಣ ಮಾಡಲಾಗುತ್ತಿದೆ. ಸ್ಪೀಕರ್ ಅವರ ನೇತೃತ್ವದಲ್ಲಿ ಇದು ನಡೆಯುತ್ತಿದ್ದು, ಮೈತ್ರಿ ಸರ್ಕಾರ ಬಹುಮತ ಸಾಬೀತು ಪಡಿಸಲು ಸಾಧ್ಯವಿಲ್ಲ ಎಂದರು.

  • ಸಚಿವ ರಹೀಂಖಾನ್‍ಗೆ ‘ಕೈ’ ಕಾರ್ಯಕರ್ತನಿಂದ್ಲೇ ಫುಲ್ ಕ್ಲಾಸ್!

    ಸಚಿವ ರಹೀಂಖಾನ್‍ಗೆ ‘ಕೈ’ ಕಾರ್ಯಕರ್ತನಿಂದ್ಲೇ ಫುಲ್ ಕ್ಲಾಸ್!

    ಬೀದರ್: ಈಶ್ವರ್ ಖಂಡ್ರೆಗೆ ಮತ ಹಾಕಿ ಎಂದ ಸಚಿವ ರಹೀಂಖಾನ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರೇ ಕ್ಲಾಸ್ ತೆಗೆದುಕೊಂಡಿರುವ ಘಟನೆ ನಡೆದಿದೆ.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಖಂಡ್ರೆಗೆ ಮತ ಹಾಕಿ ಎಂದು ಸಚಿವ ರಹೀಂಖಾನ್ ಕಾರ್ಯಕರ್ತರ ಸಭೆ ಕರೆದಿದ್ದರು. ಈ ಸಭೆಯಲ್ಲಿ ಸಚಿವರ ವಿರುದ್ಧ ಅಸಮಾಧಾನ ಸ್ಫೋಟಗೊಂಡಿದ್ದು, ಅಭಿವೃದ್ಧಿ ವಿಷಯಕ್ಕೆ ಕಾರ್ಯಕರ್ತರು ತರಾಟೆ ತೆಗೆದುಕೊಂಡಿದ್ದರು. ಕೊನೆಗೆ ಕಾರ್ಯಕರ್ತ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸಚಿವರು ತಡವರಿಸಿದ್ದಾರೆ.

    ನೀವು ಒಂದು ರೂಪಾಯಿ ಕೆಲಸವನ್ನ ನಮ್ಮ ಗಲ್ಲಿಗೆ ಮಾಡಿದ್ದೀರಾ? ನೀವು ಕಾರ್ಯಕರ್ತರಿಗೆ ಒಂದು ರೂಪಾಯಿ ಮರ್ಯಾದೆ ಕೊಟ್ರೆ ನಾವು ಕೊಡುತ್ತೀವಿ, ಮೊದಲು ನಮ್ಮ ವಾರ್ಡ್ ಗಳಲ್ಲಿ ಕಾಂಗ್ರೆಸ್ 70 ಮತಗಳನ್ನ ಕಾಂಗ್ರೆಸ್ ಪಡಿಯುತ್ತಿತ್ತು. ಆದರೆ ಈಗ 500ಕ್ಕೂ ಹೆಚ್ಚು ಮತಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ ನೀವು ಮಾಡಿದ ಅಭಿವೃದ್ಧಿ ಕೆಲಸ ಏನು ಅಂತ ಕಾರ್ಯಕರ್ತನೊಬ್ಬ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.