Tag: islam

  • ಪ್ರವಾದಿ ಮೊಹಮ್ಮದ್‌ರ ವಿರುದ್ಧ ಅವಹೇಳನಕಾರಿ ಹೇಳಿಕೆ – ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ 67 FIR

    ಪ್ರವಾದಿ ಮೊಹಮ್ಮದ್‌ರ ವಿರುದ್ಧ ಅವಹೇಳನಕಾರಿ ಹೇಳಿಕೆ – ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ 67 FIR

    – ಬಾಂಬೆ ಹೈಕೋರ್ಟ್‌ಗೆ ಮಹಾರಾಷ್ಟ್ರ ಸರ್ಕಾರದ ಮಾಹಿತಿ

    ಮುಂಬೈ: ಇಸ್ಲಾಂ ಧರ್ಮ ಮತ್ತು ಪ್ರವಾದಿ ಮೊಹಮ್ಮದ್‌ರ (Prophet Mohammed) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ ರಾಜ್ಯಾದ್ಯಂತ ಸುಮಾರು 67 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್‌ಗೆ (Bombay High Court) ಹೇಳಿದೆ.

    ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ (Mahant Ramgiri Maharaj) ಅವರು ನೀಡಿದ ಅವಹೇಳಕಾರಿ ಹೇಳಿಕೆಗಳನ್ನು ಎಲ್ಲ ಸೋಶಿಯಲ್ ಮೀಡಿಯಾದಿಂದ ಸೈಬರ್ ಕ್ರೈಂ ಪೊಲೀಸರು (Cyber Crime Police) ತೆಗೆದುಹಾಕುತ್ತಿದ್ದಾರೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಇದನ್ನೂ ಓದಿ: 14 ಸೈಟ್‌ ಕೇಸ್‌ಗಿಂತಲೂ ಇದು ದೊಡ್ಡ ಪ್ರಕರಣ – ಹಳೆಯ ಡಿನೋಟಿಫಿಕೇಶನ್‌ ಕೆದಕಿ ಸಿಎಂಗೆ ಹೆಚ್‌ಡಿಕೆ ಗುದ್ದು

    ಮಹಾರಾಜರೊಂದಿಗೆ ವೇದಿಕೆ ಹಂಚಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ ಎಫ್‌ಐಆರ್‌ಗಳು ದಾಖಲಾದ ಹಿನ್ನಲೆ, ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಮಹಾರಾಷ್ಟ್ರ ಅಡ್ವೊಕೇಟ್ ಜನರಲ್ ಡಾ.ಬೀರೇಂದ್ರ ಸರಾಫ್ ಅವರು ಕೋರ್ಟ್‌ಗೆ ಈ ವಿಷಯ ತಿಳಿಸಿದರು.

    ವಕೀಲ ಮೊಹಮ್ಮದ್ ವಾಸಿ ಸಯೀದ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದು, 2014 ರಿಂದ ಕೋಮು ಘಟನೆಗಳು ತೀವ್ರವಾಗಿ ಏರಿಕೆಯಾಗುತ್ತಿವೆ ಮತ್ತು ಮುಸ್ಲಿಮರ ಬಹಿಷ್ಕಾರ ಮತ್ತು ವ್ಯವಸ್ಥಿತ ಇಸ್ಲಾಮೋಫೋಬಿಕ್ ಪದ್ಧತಿಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರಕ್ಷಿಸುತ್ತವೆ ಮತ್ತು ಸಂರಕ್ಷಿಸುತ್ತಿವೆ, ಇದರಿಂದಾಗಿ ಗುಂಪು-ಗುಂಪು ಹತ್ಯೆಗಳು, ಗಲಭೆಗಳು ಸಂಭವಿಸುತ್ತಿವೆ ಎಂದು ಆರೋಪಿಸಿದರು. ಇದನ್ನೂ ಓದಿ: ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್

    ಈ ಬಗ್ಗೆ ವಾದ ಮಂಡಿಸಿದ ವಕೀಲ ಎಜಾಜ್ ನಖ್ವಿ, ರಾಮಗಿರಿ ಮಹಾರಾಜರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುವ ಬದಲು ಸಿಎಂ ಏಕನಾಥ್ ಶಿಂಧೆ ಮಹಂತ್ ರಾಮಗಿರಿ ಮಹಾರಾಜ್ ಅವರೊಂದಿಗೆ ವೇದಿಕೆ ಹಂಚಿಕೊಂಡು ರಾಜ್ಯದಲ್ಲಿ ಸಂತರಿಗೆ ರಕ್ಷಣೆ ನೀಡುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅವಹೇನಕಾರಿ ಹೇಳಿಕೆ ನೀಡಲು ಪ್ರಚೋದನೆ ನೀಡದಂತಾಗಲಿದೆ ಹೀಗಾಗೀ ಅವರು ವಿರುದ್ಧವೂ ದೂರು ದಾಖಲಿಸಬೇಕು ಎಂದರು.

    ದ್ವೇಷದ ಭಾಷಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ-ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರ ಪೀಠವು, ನಾವು ಭಾಷಣ ಮಾಡುವುದನ್ನು ತಡೆಯಲು ಸಾಧ್ಯವಿಲ್ಲ, ಆದರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಮತ್ತು ಅವರು ಸಾಧ್ಯವಿರುವ ಕಡೆ ಎಫ್‌ಐಆರ್‌ಗಳನ್ನು ದಾಖಲಿಸುತ್ತಿದ್ದಾರೆ ಎಂದು ಹೇಳಿತು. ಇದನ್ನೂ ಓದಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ದರ ಏರಿಕೆ ಬಿಸಿ – ಇಂದಿನಿಂದಲೇ ಹೊಸ ದರ ಅನ್ವಯ

    ಅಲ್ಲದೇ ಸಿಎಂ ಸ್ವಾಮಿಜಿ ಜೊತೆಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ ಎಂಬ ಕಾರಣಕ್ಕೆ ಎಫ್‌ಐಆರ್ ದಾಖಲಿಸಲು ಸಾಧ್ಯವಿಲ್ಲ. ಅವರು ಕಾನೂನು ಉಲ್ಲಂಘಿಸಿರುವ ಬಗ್ಗೆ ಸಾಕ್ಷ್ಯಗಳನ್ನು ನೀಡಿದರೆ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ. ವೀಡಿಯೊಗಳನ್ನು ತೆಗೆದುಹಾಕುವುದು ನಿಮ್ಮ ಮುಖ್ಯ ವಿಷಯ ಅಲ್ಲವೇ ಎಂದು ಕೋರ್ಟ್ ಪ್ರಶ್ನಿಸಿತು. ಈ ವೇಳೆ ಸಿಎಂ ಪರ ವಕೀಲರು ಸಿಎಂ ಹೆಸರು ಪ್ರಕರಣದಿಂದ ಕೈಬಿಡಬೇಕು ಎಂದರು. ಕೋರ್ಟ್ ಅಕ್ಟೊಬರ್ 17 ಕ್ಕೆ ವಿಚಾರಣೆ ಮುಂದೂಡಿದೆ.

  • ಎಲ್ಲರ ಜೊತೆಗೂಡಿ ಸಾಗುವಂತೆ ಇಸ್ಲಾಂ, ಅಲ್ಲಾ ನಮಗೆ ಕಲಿಸಿದ್ದಾನೆ- ಮೋದಿಗೆ ಫಾರೂಕ್‌ ಅಬ್ದುಲ್ಲಾ ಟಾಂಗ್

    ಎಲ್ಲರ ಜೊತೆಗೂಡಿ ಸಾಗುವಂತೆ ಇಸ್ಲಾಂ, ಅಲ್ಲಾ ನಮಗೆ ಕಲಿಸಿದ್ದಾನೆ- ಮೋದಿಗೆ ಫಾರೂಕ್‌ ಅಬ್ದುಲ್ಲಾ ಟಾಂಗ್

    ನವದೆಹಲಿ: ಮಂಗಳ ಸೂತ್ರದ ಕುರಿತು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆಯನ್ನು ನ್ಯಾಷನಲ್ ಕಾನ್ಫರೆನ್ಸ್‌ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ (Farooq Abdullah) ಖಂಡಿಸಿದ್ದಾರೆ.

    ಈ ಸಂಬಂಧ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಅಲ್ಲಾ (Allah) ಮತ್ತು ಇಸ್ಲಾಂ (Islam) ನಮಗೆ ಎಲ್ಲರೊಂದಿಗೆ ಒಟ್ಟಾಗಿ ಸಾಗಲು ಕಲಿಸಿದೆ. ನಮ್ಮ ಧರ್ಮವು ನಮಗೆ ಇತರ ಧರ್ಮಗಳನ್ನು ಕೀಳಾಗಿ ಕಾಣುವುದನ್ನು ಕಲಿಸಿಲ್ಲ, ಬದಲಿಗೆ ಯಾವಾಗಲೂ ಇತರ ಧರ್ಮಗಳನ್ನು ಗೌರವಿಸಲು ಕಲಿಸಿದೆ. ಒಬ್ಬ ವ್ಯಕ್ತಿಯು ಮಂಗಳಸೂತ್ರವನ್ನು ಕಿತ್ತುಕೊಂಡರೆ ಅವನು ಮುಸ್ಲಿಮನಲ್ಲ ಎಂದು ವಾಗ್ದಾಳಿ ನಡೆಸಿದರು.

    2024ರ ಲೋಕಸಭಾ ಚುನಾವಣೆಗೆ (Loksabha Elections 2024) ಮುನ್ನ ಭಾನುವಾರ ಬನ್ಸ್ವಾರಾದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅದು ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡುತ್ತದೆ ಎಂದು ಆರೋಪಿಸಿದರು. ಇದನ್ನೂ ಓದಿ:  ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳೋದು ಅಪರಾಧ: ಬೆಂಗ್ಳೂರಿನ ಹಲ್ಲೆ ಪ್ರಸ್ತಾಪಿಸಿ ಮೋದಿ ಕಿಡಿ

    ಇದೇ ವೇಳೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದರು. ಅಲ್ಪಸಂಖ್ಯಾತ ಸಮುದಾಯ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಹೊಂದಿತ್ತು. ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಮಂಗಳಸೂತ್ರ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ನೀಡಲು ಕಾಂಗ್ರೆಸ್ ಯೋಜಿಸುತ್ತಿದೆ ಎಂದು ಮೋದಿ ಗಂಭೀರ ಆರೋಪ ಮಾಡಿದ್ದರು.

  • ಫೇಸ್‌ಬುಕ್‌ನಲ್ಲಿ ಪರಿಚಯವಾದ ಪಾಕಿಸ್ತಾನಿ ಗೆಳೆಯನನ್ನು ವರಿಸಿದ ಅಂಜು – ಇಸ್ಲಾಂ ಧರ್ಮಕ್ಕೆ ಮತಾಂತರ

    ಫೇಸ್‌ಬುಕ್‌ನಲ್ಲಿ ಪರಿಚಯವಾದ ಪಾಕಿಸ್ತಾನಿ ಗೆಳೆಯನನ್ನು ವರಿಸಿದ ಅಂಜು – ಇಸ್ಲಾಂ ಧರ್ಮಕ್ಕೆ ಮತಾಂತರ

    ಇಸ್ಲಾಮಾಬಾದ್: ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾಗಿದ್ದ ಗೆಳೆಯನನ್ನು ಭೇಟಿ ಮಾಡುವ ಸಲುವಾಗಿ ಕಾನೂನುಬದ್ಧವಾಗಿ ಪಾಕಿಸ್ತಾನಕ್ಕೆ ತೆರಳಿದ್ದ ಇಬ್ಬರು ಮಕ್ಕಳ ತಾಯಿ ಅಂಜು ಇಸ್ಲಾಂ ಧರ್ಮಕ್ಕೆ (Islam Religion) ಮತಾಂತರಗೊಂಡ ಬಳಿಕ ತನ್ನ ಪಾಕಿಸ್ತಾನಿ (Pakistan) ಸ್ನೇಹಿತನನ್ನು ವಿವಾಹವಾಗಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಅಂಜು (34) ತನ್ನ ಪಾಕಿಸ್ತಾನಿ ಸ್ನೇಹಿತನಾದ ನಸ್ರುಲ್ಲಾ (29) ಎಂಬಾತನನ್ನು ಭೇಟಿ ಮಾಡುವ ಸಲುವಾಗಿ ಪಾಕಿಸ್ತಾನಕ್ಕೆ ತೆರಳಿದ್ದು, ಆತನ ಮನೆಯಲ್ಲಿಯೇ ತಂಗಿದ್ದಳು. 2019ರಲ್ಲಿ ಫೇಸ್‌ಬುಕ್‌ನಲ್ಲಿ ಪರಿಚಯವಾದ ಇವರು ಸ್ನೇಹಿತರಾಗಿದ್ದು, ಮಂಗಳವಾರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸ್ಥಳೀಯ ನ್ಯಾಯಾಲಯದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಇದನ್ನೂ ಓದಿ: ಪ್ರಿಯಕರನಿಗಾಗಿ 6 ವರ್ಷದ ಮಗಳೊಂದಿಗೆ ಭಾರತಕ್ಕೆ ಹಾರಿಬಂದ 49ರ ಪೋಲೆಂಡ್‌ ಮಹಿಳೆ

    ಅಂಜು, ನಸ್ರುಲ್ಲಾ ಹಾಗೂ ಆತನ ಕುಟುಂಬಸ್ಥರು ಪೊಲೀಸ್ ಸಿಬ್ಬಂದಿ ಮತ್ತು ವಕೀಲರ ಸಮ್ಮುಖದಲ್ಲಿ ದಿರ್ ಬಾಲಾದಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಮಲಕಂಡ್ ವಿಭಾಗದ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ನಾಸಿರ್ ಮೆಹಮೂದ್ ಸತ್ತಿ, ಅಂಜು ಮತ್ತು ನಸ್ರುಲ್ಲಾ ಅವರ ಮದುವೆಯನ್ನು (Marriage) ದೃಢಪಡಿಸಿದ್ದು, ಇಸ್ಲಾಂಗೆ ಮತಾಂತರಗೊಂಡ ಅಂಜುಗೆ ಫಾತಿಮಾ ಎಂದು ಹೆಸರಿಡಲಾಗಿದೆ ಎಂದು ಹೇಳಿದರು. ಅಲ್ಲದೇ ಪೊಲೀಸ್ ಭದ್ರತೆಯಲ್ಲಿ ಭಾರತೀಯ ಮಹಿಳೆ ಅಂಜುವನ್ನು ನ್ಯಾಯಾಲಯದಿಂದ ಮನೆಗೆ ಕರೆದೊಯ್ಯಲಾಗಿದೆ ಎಂದರು. ಇದನ್ನೂ ಓದಿ: ಪಬ್‌ಜೀ ಮೂಲಕವೇ ಭಾರತದ ಹಲವರನ್ನ ಸಂಪರ್ಕಿಸಿದ್ದಾಳೆ ಸೀಮಾ – ಸ್ಫೋಟಕ ರಹಸ್ಯ ಬಯಲು

    ಉತ್ತರಪ್ರದೇಶದ (Uttar Pradesh) ಕೈಲೋರ್ ಗ್ರಾಮದಲ್ಲಿ ಜನಿಸಿದ ಅಂಜು ರಾಜಸ್ಥಾನದ (Rajasthan) ಅಲ್ವಾರ್ ಜಿಲ್ಲೆಯಲ್ಲಿ ವಾಸಿಸುತ್ತಿದ್ದಳು. ಪಾಕಿಸ್ತಾನಕ್ಕೆ ತೆರಳಿದ ಬಳಿಕ ‘ಇಲ್ಲಿ ಸುರಕ್ಷಿತವಾಗಿದ್ದೇನೆ’ ಎಂದು ಹೇಳುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾಳೆ. ಅಂಜು ಈ ಹಿಂದೆ ಅರವಿಂದ್ ಎಂಬವರನ್ನು ಮದುವೆಯಾಗಿದ್ದು, 15 ವರ್ಷದ ಮಗಳು ಮತ್ತು 6 ವರ್ಷದ ಮಗ ಇದ್ದಾನೆ. ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ ಭಾರತದಲ್ಲೇ ಇರಲು ಅವಕಾಶ ಕೊಡಿ – ರಾಷ್ಟ್ರಪತಿಗೆ ಸೀಮಾ ಹೈದರ್‌ ಪತ್ರ

    ನವದೆಹಲಿಯಲ್ಲಿರುವ (New Delhi) ಪಾಕಿಸ್ತಾನದ ಹೈಕಮಿಷನ್‌ಗೆ ಕಳುಹಿಸಲಾದ ಆಂತರಿಕ ಸಚಿವಾಲಯದ ಅಧಿಕೃತ ದಾಖಲೆಯ ಪ್ರಕಾರ ಅಪ್ಪರ್ ದಿರ್‌ಗೆ ಮಾತ್ರ ಮಾನ್ಯವಾಗಿರುವ ಅಂಜುಗೆ 30 ದಿನಗಳ ವೀಸಾವನ್ನು ನೀಡಲು ನಿರ್ಧರಿಸಲಾಗಿದೆ. ಆ ಪ್ರಕಾರ ಆಗಸ್ಟ್ 20ರಂದು ಅಂಜು ಭಾರತಕ್ಕೆ ಮರಳಲಿದ್ದಾಳೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ದೋಣಿ ಮುಳುಗಿ 15 ಮಂದಿ ಸಾವು, ಹಲವರು ನಾಪತ್ತೆ

    ಈ ಹಿಂದೆ ಹಿಂದೂ ಧರ್ಮದಲ್ಲಿದ್ದ ಅಂಜು ಅವರ ಕುಟುಂಬ ಕ್ರಿಶ್ಚಿಯನ್ (Christian) ಧರ್ಮಕ್ಕೆ ಮತಾಂತರಗೊಂಡಿದ್ದು, ಆಕೆಯ ತಂದೆ ಗಯಾ ಪ್ರಸಾದ್ ವರ್ಮಾ ಅವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಬಳಿಕ ತಮ್ಮ ಹೆಸರನ್ನು ಗಯಾ ಪ್ರಸಾದ್ ಥೋಮನ್ ಎಂದು ಬದಲಾಯಿಸಿಕೊಂಡಿದ್ದಾರೆ. ಅಲ್ಲದೇ ಅಂಜು ಮತ್ತು ಅರವಿಂದ್ ಅವರ ವಿವಾಹವು ರಾಜಸ್ಥಾನದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆಸಲಾಗಿತ್ತು ಎಂದು ಅಂಜು ಚಿಕ್ಕಪ್ಪ ಹೇಳಿದ್ದಾರೆ. ಇದನ್ನೂ ಓದಿ: ಬೇಗ ಬಂದುಬಿಡು ಸೀಮಾ, ಹೊಸ ಜೀವನ ಶುರು ಮಾಡೋಣ – ಸೌದಿಯಲ್ಲಿ ಮೊದಲ ಪತಿಯ ಗೋಳಾಟ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 14ರ ಹಿಂದೂ ಬಾಲಕಿ ಕಿಡ್ನ್ಯಾಪ್‌ ಮಾಡಿ ಇಸ್ಲಾಂಗೆ ಮತಾಂತರ – ಪೋಷಕರ ಜೊತೆ ಕಳುಹಿಸಲು ಪಾಕ್‌ ಕೋರ್ಟ್‌ ನಿರಾಕರಣೆ

    14ರ ಹಿಂದೂ ಬಾಲಕಿ ಕಿಡ್ನ್ಯಾಪ್‌ ಮಾಡಿ ಇಸ್ಲಾಂಗೆ ಮತಾಂತರ – ಪೋಷಕರ ಜೊತೆ ಕಳುಹಿಸಲು ಪಾಕ್‌ ಕೋರ್ಟ್‌ ನಿರಾಕರಣೆ

    ಇಸ್ಲಾಮಾಬಾದ್: ಕಿಡ್ನ್ಯಾಪ್‌ ಆಗಿ ಬಲವಂತವಾಗಿ ಇಸ್ಲಾಂಗೆ (Islam) ಮತಾಂತರಗೊಂಡು (Conversion) ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿದ್ದ 14 ವರ್ಷದ ಹಿಂದೂ ಬಾಲಕಿಯನ್ನು ಆಕೆಯ ಪೋಷಕರ ಜೊತೆಗೆ ಕಳುಹಿಸಿಕೊಡಲು ಪಾಕಿಸ್ತಾನ ಕೋರ್ಟ್‌ (Pakistan Court) ನಿರಾಕರಿಸಿದೆ.

    ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 14 ವರ್ಷದ ಹಿಂದೂ ಬಾಲಕಿಯನ್ನು ಅಪಹರಿಸಿ, ಬಲವಂತವಾಗಿ ಇಸ್ಲಾಂಗೆ ಮತಾಂತರಿಸಿ ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆ ಮಾಡಲಾಗಿತ್ತು. ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪೋಷಕರ ಜೊತೆಗೆ ಹೋಗಲು ಆಕೆ ಬಯಸಿದರೂ, ಕಳುಹಿಸಲು ಪಾಕ್‌ ಕೋರ್ಟ್‌ ನಿರಾಕರಿಸಿದೆ. ಇದನ್ನೂ ಓದಿ: ಸೆಕ್ಸ್ ಕೂಡ ಒಂದು ಕೆಲಸ – ಕಾನೂನುಬದ್ಧಗೊಳಿಸಲು ಹೊಸ ಮಸೂದೆ ಮಂಡನೆ

    ಜೂನ್ 2 ರಂದು ದಕ್ಷಿಣ ಸಿಂಧ್ ಪ್ರಾಂತ್ಯದ ಬೆನಜಿರಾಬಾದ್ ಜಿಲ್ಲೆಯ ನಿವಾಸಿಯಾಗಿದ್ದ ಬಾಲಕಿಯನ್ನು ಆಕೆಯ ತಾಯಿಯ ಮುಂದೆಯೇ ಗನ್‌ ತೋರಿಸಿ ಬೆದರಿಸಿ ಅಪಹರಿಸಲಾಗಿತ್ತು. ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಪೊಲೀಸ್‌ ಠಾಣೆಯಲ್ಲಿ ಆಕೆಯ ತಂದೆ ದೂರು ದಾಖಲಿಸಿದ್ದರು.

    ಬಾಲಕಿಯನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿ ಮುಸ್ಲಿಂ ವ್ಯಕ್ತಿಯೊಂದಿಗೆ ಆಕೆಯನ್ನು ಮದುವೆ ಮಾಡಲಾಗಿದೆ. ಈ ಸಂಬಂಧದ ವೀಡಿಯೋ ಕೂಡ ಮಾಡಲಾಗಿತ್ತು. ಅಪಹರಣಕ್ಕೊಳಗಾದ ಐದ ದಿನಗಳ ನಂತರ ಬಾಲಕಿ ಸಾಮಾಜಿಕ ಜಾಲತಾಣದಲ್ಲಿ ತನ್ನ ಅಳಲು ತೋಡಿಕೊಂಡು ವೀಡಿಯೋ ಮಾಡಿದ್ದಳು. ನಂತರ ಕಾರ್ಯಪ್ರವೃತ್ತರಾದ ಮನೆಯವರು ಮನೆಯೊಂದರಿಂದ ಬಾಲಕಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಜಗತ್ತಿನ ಅತ್ಯಂತ ಬಡರಾಷ್ಟ್ರ ಸೊಮಾಲಿಯಾದಲ್ಲಿ ಬಾಂಬ್ ಸ್ಫೋಟವಾಗಿ 25 ಮಕ್ಕಳು ಸಾವು

    PAK

    ನಂತರ ಆಕೆಯನ್ನು ಲರ್ಕಾನಾದ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ತನ್ನನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿದ್ದಾರೆ. ನಾನು ನನ್ನ ಪೋಷಕರ ಬಳಿಗೆ ಹೋಗಬೇಕು ಎಂದು ನ್ಯಾಯಾಧೀಶರ ಮುಂದೆ ಬಾಲಕಿ ಅಳಲು ತೋಡಿಕೊಂಡಿದ್ದಾಳೆ. ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಜೂ.12 ಕ್ಕೆ ಮುಂದೂಡಿದೆ.

    ಹಿಂದೂಗಳು ಪಾಕಿಸ್ತಾನದಲ್ಲಿ ಅತಿ ದೊಡ್ಡ ಅಲ್ಪಸಂಖ್ಯಾತ ಸಮುದಾಯವಾಗಿದೆ. ಅಧಿಕೃತ ಮಾಹಿತಿ ಪ್ರಕಾರ, ಮುಸ್ಲಿಂ ಬಹುಸಂಖ್ಯಾತ ದೇಶದಲ್ಲಿ 75 ಲಕ್ಷ ಹಿಂದೂಗಳು ವಾಸಿಸುತ್ತಿದ್ದಾರೆ. ಇದನ್ನೂ ಓದಿ: ಟ್ರಂಪ್‌ ಮನೆಯ ಬೆಡ್‌ರೂಮ್‌, ಬಾತ್‌ರೂಮ್‌ನಲ್ಲಿ ರಹಸ್ಯ ದಾಖಲೆಗಳು

  • ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಯುವಕ

    ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಯುವಕ

    ಕಾರವಾರ: ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಕಾಂಗ್ರೆಸ್ (Congress) ಭರ್ಜರಿಯಾಗಿ ಜಯಗಳಿಸಿದ್ದು, ಇದರ ಬೆನ್ನಲ್ಲೇ ಕೇಸರಿ ಬಾವುಟದ ಪಕ್ಕ ಇಸ್ಲಾಂ ಬಾವುಟ ಹಾರಿಸಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkala) ನಡೆದಿದೆ.

    ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಕ್ಕಿದ್ದು, ಅಭ್ಯರ್ಥಿ ಮಂಕಾಳು ವೈದ್ಯರಿಗೆ ಗೆಲುವಾಗಿದೆ. ಹೀಗಾಗಿ ಭಟ್ಕಳದ ಮುಸ್ಲಿಂ ಯುವಕರು ಇಸ್ಲಾಂ ಧ್ವಜವನ್ನು ಹಿಡಿದು ನಗರದ ಬೀದಿಯಲ್ಲಿ ಸಂಭ್ರಮಿಸಿದ್ದಲ್ಲದೇ ಭಟ್ಕಳ ಸಂಶುದ್ದೀನ್ ಸರ್ಕಲ್ ಮೇಲೆ ನಿಂತು ಕೇಸರಿ ಬಾವುಟದ ಪಕ್ಕದಲ್ಲಿ ಇಸ್ಲಾಂ ಧ್ವಜ ಹಿಡಿದು ಸಂಭ್ರಮಾಚರಣೆ ನಡೆಸಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

    ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ ಅವರು ಬಿಜೆಪಿಯ ಸುನಿಲ್ ನಾಯಕ್ ವಿರುದ್ಧ 32 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಮಂಕಾಳು ವೈದ್ಯರ ಗೆಲುವನ್ನು ಸಂಭ್ರಮಿಸುವ ವೇಳೆ ಭಟ್ಕಳ ಪಟ್ಟಣದಲ್ಲಿರುವ ಸಂಶುದ್ದೀನ್ ವೃತ್ತದ ಮೇಲೇರಿದ ಮುಸ್ಲಿಂ ಯುವಕರು ಕೇಸರಿ ಧ್ವಜದ ಪಕ್ಕ ನಿಂತು ಇಸ್ಲಾಂ ಧ್ವಜ ಪ್ರದರ್ಶನ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೋಲಿನ ಜವಾಬ್ದಾರಿ ನಾನೇ ಹೊರುತ್ತೇನೆ: ಬೊಮ್ಮಾಯಿ

    ಮಂಕಾಳು ವೈದ್ಯ ಭಾವಚಿತ್ರವಿರುವ ಧ್ವಜ, ಅಂಬೇಡ್ಕರ್‌ರ ಧ್ವಜದೊಂದಿಗೆ ಮುಸ್ಲಿಂ ಧ್ವಜ ಪ್ರದರ್ಶನ ಮಾಡಿ ವೃತ್ತದಲ್ಲಿ ಹಾಕಲಾಗಿದ್ದ ಕೇಸರಿ ಧ್ವಜದ ಪಕ್ಷದಲ್ಲೇ ಮುಸ್ಲಿಂ ಧ್ವಜ ಹಾಕಿದ್ದಾರೆ. ಸದ್ಯ ಇದರ ವೀಡಿಯೋ ವೈರಲ್ ಆಗುತ್ತಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

    ಹಿಂದೂಗಳ ಹೆಣ ಎತ್ತಲೂ ಯಾರು ಇರಬಾರದು:
    ಕಾಂಗ್ರೆಸ್‌ಗೆ ಬಹುಮತ ಬರುತ್ತಿದ್ದಂತೆ ಇದರ ಸಂತೋಷಕ್ಕೆ ಭಟ್ಕಳದಲ್ಲಿ ಇಸ್ಲಾಂ ಧ್ವಜ ಹಾರಿಸಲಾಯಿತು. ಮಾತ್ರವಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಸಮಾಜಘಾತುಕ ಸಂದೇಶಗಳನ್ನು ರವಾನಿಸಲಾಗುತ್ತಿದೆ. ಹಿಂದೂಗಳ ಹೆಣ ಎತ್ತಲೂ ಯಾರೂ ಇರಬಾರದು. ಕರ್ನಾಟಕದಲ್ಲಿ ಇನ್ನು ಮುಂದೆ ಮುಸ್ಲಿಂ ಹವಾ, ಅಲ್ಲಾಹು ಅಕ್ಬರ್ ಎಂದು ಮುಸ್ಲಿಂ ಯುವಕನೊಬ್ಬ ಮಾಡಿದ ಕಾಮೆಂಟ್‌ನ ಸ್ಕ್ರೀನ್ ಶಾಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ 136, ಬಿಜೆಪಿ 65, ಜೆಡಿಎಸ್‌ 19 ಮುನ್ನಡೆ LIVE Updates

  • ಸಂಸ್ಕೃತ ಪರೀಕ್ಷೆಯಲ್ಲಿ ಇರ್ಫಾನ್‌ಗೆ ಮೊದಲ ಸ್ಥಾನ – 13,000 ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಸಾಧನೆ

    ಸಂಸ್ಕೃತ ಪರೀಕ್ಷೆಯಲ್ಲಿ ಇರ್ಫಾನ್‌ಗೆ ಮೊದಲ ಸ್ಥಾನ – 13,000 ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಸಾಧನೆ

    ಲಕ್ನೋ: ಉತ್ತರ ಪ್ರದೇಶ (Uttar Pradesh) ಮಾಧ್ಯಮಿಕ ಸಂಸ್ಕೃತ (Sanskrit) ಶಿಕ್ಷಾ ಪರಿಷತ್ತು ಮಂಡಳಿ ನಡೆಸಿದ ಪರೀಕ್ಷೆಯಲ್ಲಿ 13,738 ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಮೊಹಮ್ಮದ್ ಇರ್ಫಾನ್ ಅಗ್ರ ಸ್ಥಾನ ಪಡೆದು ಅಭೂತಪೂರ್ವ ಸಾಧನೆ (Achievement) ಮಾಡಿದ್ದಾನೆ.

    ಈತ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯವನಾಗಿದ್ದು, ಸಂಪೂರ್ಣಾನಂದ ಸಂಸ್ಕೃತ ಸರ್ಕಾರಿ ಶಾಲೆಯಲ್ಲಿ (Sampoornananda Sanskrit Government School)  ದ್ವಿತೀಯ ಪಿಯುಸಿ ವ್ಯಾಸಂಗ ಮುಗಿಸಿ ಸಂಸ್ಕೃತ ಪರೀಕ್ಷೆಯಲ್ಲಿ 82.71% ಅಂಕ ಪಡೆದು ಮೊದಲನೇ ಸ್ಥಾನ ಪಡೆದಿದ್ದಾನೆ. ಈತ ಇಸ್ಲಾಂ (Islam) ಧರ್ಮಕ್ಕೆ ಸೇರಿದವನಾಗಿದ್ದು, ತಂದೆ ಸಲಾಲುದ್ದೀನ್ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಾರೆ. ಮಗನ ಸಾಧನೆ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಜ್ಜಿ ಗೆದ್ದಿದ್ದ ತೆಲಂಗಾಣದ ಮೇದಕ್ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಲೋಕಸಭೆಗೆ ಸ್ಪರ್ಧೆ?

    ಪುತ್ರನ ಸಾಧನೆ ಬಗ್ಗೆ ಮಾತನಾಡಿದ ಅವರು, ಮಗನ ಸಾಧನೆ ತುಂಬಾ ಸಂತೋಷ ತಂದಿದೆ. ನಾನು ದಿನಗೂಲಿ ಕಾರ್ಮಿಕನಾಗಿರುವುದರಿಂದ ಮಗನನ್ನು ಉನ್ನತ ಶಾಲೆಯಲ್ಲಿ ಕಲಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಸಂಪೂರ್ಣಾನಂದ ಸಂಸ್ಕೃತ ಶಾಲೆಗೆ ಸೇರಿಸಿದ್ದೆ. ಆ ಶಾಲೆಯಲ್ಲಿ ಸಂಸ್ಕೃತ ಕಡ್ಡಾಯ ವಿಷಯವಾಗಿದ್ದರಿಂದ ನನ್ನ ಮಗ ಅದನ್ನು ಇಷ್ಟಪಟ್ಟು ಕಲಿತ. ಈಗ ಅವನಿಗೆ ಸಂಸ್ಕೃತದಲ್ಲಿ ಬರೆಯಲು ಹಾಗೂ ಮಾತನಾಡಲು ಬರುತ್ತದೆ. ಅವನ ಮುಂದಿನ ಆಸೆಯಂತೆ ಸಂಸ್ಕೃತದಲ್ಲಿ ಶಾಸ್ತ್ರಿ (ಬಿಎ ಸಮಾನ) ಹಾಗೂ ಆಚಾರ್ಯ (ಎಂಎ ಸಮಾನ) ಓದಿಸುತ್ತೇನೆ. ಮುಂದೆ ಅವನು ಸಂಸ್ಕೃತ ಉಪನ್ಯಾಸಕನಾಗಬೇಕು ಎಂಬ ಆಸೆ ಹೊಂದಿದ್ದಾನೆ ಎಂದು ಸಂತೋಷ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿದ್ಯುತ್ ಕಡಿತ : ಮಂದ ಬೆಳಕಿನಲ್ಲೇ ಭಾಷಣ ಮಾಡಿದ ರಾಷ್ಟ್ರಪತಿ ಮುರ್ಮು

  • ಸ್ವರ್ಗ ಪ್ರಾಪ್ತಿಗೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ – ಬ್ರಿಟನ್ ಶಾಲೆಗಳಲ್ಲಿ ಹಿಂದೂಗಳಿಗೆ ಕಿರುಕುಳ

    ಸ್ವರ್ಗ ಪ್ರಾಪ್ತಿಗೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ – ಬ್ರಿಟನ್ ಶಾಲೆಗಳಲ್ಲಿ ಹಿಂದೂಗಳಿಗೆ ಕಿರುಕುಳ

    ಲಂಡನ್: ಬ್ರಿಟನ್‌ನ (Britain) ಶಾಲೆಗಳಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ಇಸ್ಲಾಂ (Islam) ಧರ್ಮಕ್ಕೆ ಮತಾಂತರಿಸುವ (Conversion) ಪ್ರಯತ್ನಗಳು ನಡೆಯುತ್ತಿದೆ ಎಂಬ ಆಘಾತಕಾರಿ ವಿಷಯವನ್ನು ಹೆನ್ರಿ ಜಾಕ್ಸನ್ ಸೊಸೈಟಿಯ ವರದಿಗಳು ತಿಳಿಸಿವೆ.

    ಇಸ್ರೇಲ್‌ನ ಕ್ರಮಗಳಿಗೆ ಯಹೂದಿಗಳನ್ನು ಹೊಣೆಗಾರರನ್ನಾಗಿ ಮಾಡಿದ ರೀತಿಯಲ್ಲಿಯೇ ಭಾರತದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಹಿಂದೂ ಮಕ್ಕಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತಿದೆ ಎಂದು ಶಾರ್ಲೆಟ್ ಲಿಟಲ್‌ವುಡ್ ಬರೆದಿರುವ ‘ಆ್ಯಂಟಿ ಹಿಂದೂ ಹೇಟ್ ಇನ್ ಸ್ಕೂಲ್ಸ್’ ಪುಸ್ತಕದಲ್ಲಿ ಉಲ್ಲೇಖವಾಗಿದೆ. ಈ ಪುಸ್ತಕವನ್ನು 998 ಪೋಷಕರ ಸಂದರ್ಶನವನ್ನು ಆಧಾರಿಸಿ ಬರೆಯಲಾಗಿದೆ. ಇದನ್ನೂ ಓದಿ: ಶವವಾಗಿ ಪತ್ತೆಯಾದ 25 ವರ್ಷದ ಖ್ಯಾತ ಪಾಪ್ ಗಾಯಕ: ಮುಂದುವರೆದ ಸರಣಿ ಸಾವು

    CRIME

    ಬ್ರಿಟೀಷ್ ಶಾಲೆಗಳಲ್ಲಿ ಹಿಂದೂ ಧರ್ಮದ ಕುರಿತು ಅತ್ಯಂತ ಕಳಪೆ ಗುಣಮಟ್ಟದ ಶಿಕ್ಷಣವನ್ನು (Education) ನೀಡಲಾಗುತ್ತಿದೆ ಎಂದು ಪೋಷಕರು ದೂರಿದ್ದಾರೆ. ಅಲ್ಲದೇ ಹಿಂದೂ (Hindu) ಧರ್ಮದ ಬಗ್ಗೆ ಬ್ರಿಟನ್ ಶಾಲೆಯಲ್ಲಿ ನೀಡುವ ಶಿಕ್ಷಣವು ಧರ್ಮವನ್ನು ಅಪಹಾಸ್ಯ ಮಾಡುವ ರೀತಿಯಲ್ಲಿರುತ್ತದೆ ಎಂದು ಪೋಷಕರೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ನೇಪಾಳದ ಅನ್ನಪೂರ್ಣ ಪರ್ವತವೇರುತ್ತಿದ್ದಾಗ ನಾಪತ್ತೆಯಾಗಿದ್ದ ಭಾರತದ ಪರ್ವತಾರೋಹಿ ಜೀವಂತವಾಗಿ ಪತ್ತೆ

    ಬ್ರಿಟಿಷರು 400 ವರ್ಷಗಳ ಕಾಲಾ ಭಾರತವನ್ನು ಆಳ್ವಿಕೆ ಮಾಡಿದರೂ ಸಹ ಅವರಲ್ಲಿ ಹಿಂದೂ ಧರ್ಮದ ಜ್ಞಾನದ ಕೊರತೆಯಿದೆ. ಅವರು ನಮಗೆ ದೇವರ ಮೇಲಿರುವ ನಂಬಿಕೆಯನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಇದರಿಂದಾಗಿ ಹಿಂದೂ ಮಕ್ಕಳು ಬ್ರಿಟನ್ ಶಾಲೆಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದನ್ನೂ ಓದಿ: ಪ್ರವಾಸಕ್ಕೆ ತೆರಳಿದ್ದ ಮೂವರು ಯುವತಿಯರ ಭೀಕರ ಹತ್ಯೆ – ಈಕ್ವೆಡಾರ್‌ ಬೀಚ್‌ನಲ್ಲಿ ನಡೆದಿದ್ದೇನು?

    ಹಿಂದೂ ಧರ್ಮದ ಆಚರಣೆಗಳನ್ನು, ನಂಬಿಕೆಗಳನ್ನು ಬ್ರಿಟನ್ ಶಾಲೆಗಳಲ್ಲಿ ಅಪಹಾಸ್ಯ ಮಾಡಲಾಗುತ್ತಿದೆ. ಹಿಂದೂಗಳು ಗೋಮಾತೆಯನ್ನು ಪವಿತ್ರವೆಂದು ಪೂಜಿಸುತ್ತಾರೆ. ಆದರೆ ಅಲ್ಲಿ ಹಿಂದೂ ಎಂಬ ಕಾರಣಕ್ಕೆ ಒಬ್ಬ ಹೆಣ್ಣುಮಗಳ ಮೇಲೆ ಗೋ ಮಾಂಸವನ್ನು ಎಸೆದಿದ್ದಲ್ಲದೆ, ಇಸ್ಲಾಂ ಧರ್ಮಕ್ಕೆ ಮತಾಂತರವಾದರೆ ಮಾತ್ರ ಈ ದೌರ್ಜನ್ಯ ನಿಲ್ಲುತ್ತದೆ ಎಂದು ಬೆದರಿಕೆಯೊಡ್ಡಿದ್ದಾರೆ. ಈ ರೀತಿಯಾದ ದೌರ್ಜನ್ಯ ಮತ್ತು ಬೆದರಿಕೆಗಳಿಂದಾಗಿ ಹಿಂದೂ ಮಕ್ಕಳು ಶಾಲೆಗೆ ಹೋಗಲು ನಿರಾಕರಿಸುತ್ತಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಸೆಕ್ಸ್‌ – 6 ಮಂದಿ US ಶಿಕ್ಷಕಿಯರು ಅರೆಸ್ಟ್‌

    ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಆರ್ಟಿಕಲ್ 370ನ್ನು ರದ್ದುಗೊಳಿಸಿದ ಬಳಿಕ ಅನೇಕ ಹಿಂದೂ ಮಕ್ಕಳು ಬ್ರಿಟನ್ ಶಾಲೆಗಳಲ್ಲಿ ಹಿಂಸೆಯನ್ನು ಅನುಭವಿಸಿದ್ದಾರೆ. ಅಲ್ಲದೆ ನಿಮಗೆ ಸ್ವರ್ಗ ಲಭಿಸಬೇಕಾದರೇ ನೀವು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಬೇಕು ಎಂದು ಮಕ್ಕಳನ್ನು ಪೀಡಿಸಿದ್ದಾರೆ. ಹಿಂದೂಗಳು ಆನೆಗಳು, ಕೋತಿಗಳು ಮತ್ತು ಮೂರ್ತಿಗಳಂತಹ 33 ಕೋಟಿ ದೇವರುಗಳನ್ನು ಪೂಜಿಸುತ್ತಾರೆ ಎಂದು ಅಪಹಾಸ್ಯ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: US ಜೈಲಿನಲ್ಲಿ ಕೈದಿಯನ್ನ ಜೀವಂತವಾಗಿ ತಿಂದುಮುಗಿಸಿದ ಕೀಟಗಳು!

    ಸಮೀಕ್ಷೆ ನಡೆಸಿದ ಹಿಂದೂ ಪೋಷಕರಲ್ಲಿ ಶೇ.51ರಷ್ಟು ಪೋಷಕರು ತಮ್ಮ ಮಕ್ಕಳು ಹಿಂದೂ ದ್ವೇಷಕ್ಕೆ ತುತ್ತಾಗಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೇ ಮಕ್ಕಳಿಗೆ ಝಾಕಿರ್ ನಾಯ್ಕ್‌ನ ವಿಡಿಯೋ ನೋಡಿ ಇಸ್ಲಾಂಗೆ ಮತಾಂತರವಾಗುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸುಡಾನ್ ಸೈನಿಕರ ಸಂಘರ್ಷ – 200ಕ್ಕೆ ಏರಿದ ಸಾವಿನ ಸಂಖ್ಯೆ, ಸಾವಿರಾರು ಜನರಿಗೆ ಗಾಯ

  • ಮತಾಂತರಕ್ಕೆ ಒಪ್ಪದ ಪತ್ನಿಗೆ ಸಿಗರೇಟ್‍ನಿಂದ ಸುಟ್ಟು, ಒತ್ತಾಯದಿಂದ ಮಾಂಸ ತಿನ್ನಿಸಿದ!

    ಮತಾಂತರಕ್ಕೆ ಒಪ್ಪದ ಪತ್ನಿಗೆ ಸಿಗರೇಟ್‍ನಿಂದ ಸುಟ್ಟು, ಒತ್ತಾಯದಿಂದ ಮಾಂಸ ತಿನ್ನಿಸಿದ!

    ಲಕ್ನೋ: ಮತಾಂತರ (Conversion) ಕ್ಕೆ ಒಪ್ಪದ ಪತ್ನಿಯನ್ನು ಪ್ರತಿನಿತ್ಯ ಥಳಿಸಿ, ಸಿಗರೇಟ್‍ (Cigrette) ನಿಂದ ಸುಟ್ಟು ಬಲವಂತವಾಗಿ ಮಾಂಸ ತಿನ್ನಿಸಿದ ಘಟನೆಯೊಂದು ಉತ್ತರಪ್ರದೆಶ (Uttarapradesh) ಲಕ್ನೋದಲ್ಲಿ ನಡೆದಿದೆ.

    ಆರೋಪಿ ಪತಿಯನ್ನು ಚಂದ್ ಮೊಹಮ್ಮದ್ (Chand Mohammad) ಎಂದು ಗುರುತಿಸಲಾಗಿದೆ. ಈತ ತಾನು ಹಿಂದೂ ಅಂತ ಹೇಳಿಕೊಂಡು ಸಂತ್ರಸ್ತೆಯನ್ನು ಮದುವೆಯಾಗಿದ್ದಾನೆ. ಆ ಬಳಿಕ ಇಬ್ಬರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಇದನ್ನೂ ಓದಿ: ಹರಿಯಾಣದ ಮಾಜಿ ಸಚಿವರ ಪುತ್ರ ವಿಷ ಸೇವಿಸಿ ಆತ್ಮಹತ್ಯೆ

    ಪತಿ ನನಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ದೇಹದ ಮೇಲೆಲ್ಲ ಸಿಗರೇಟ್‍ನಿಂದ ಸುಟ್ಟಿದ್ದಾನೆ. ಅಲ್ಲದೆ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಲು ಒಪ್ಪದಿದ್ದಕ್ಕೆ ನನ್ನ ಮೇಲೆ ಬಿಸಿ ಎಣ್ಣೆ ಎರಚಿದ್ದಾನೆ. ಇಷ್ಟು ಸಾಲದೆಂಬಂತೆ ಒಂದು ವೇಳೆ ನೀನು ಮತಾಂತರಕ್ಕೆ ಒಪ್ಪದಿದ್ದರೆ ನನ್ನ ಸಂಬಂಧಿಕರಿಂದಲೇ ನಿನ್ನ ಮೇಲೆ ಅತ್ಯಾಚಾರ ಮಾಡಿಸುತ್ತೇನೆ. ಅಲ್ಲದೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಪೊಲೀಸರ ಬಳಿ ದೂರಿದ್ದಾಳೆ.

    ಪ್ರತಿ ದಿನ ಪತಿಯ ಹಿಂಸೆ ತಡೆದುಕೊಳ್ಳಲು ಸಾಧ್ಯವಾಗದಿದ್ದಾಗ ದೂರು ನೀಡಲೆಂದು ಹೋದರೆ ಪತಿ ನನ್ನನ್ನು ಕೂಡಿ ಹಾಕಿ ಥಳಿಸುತ್ತಾನೆ. 5 ತಿಂಗಳ ಗರ್ಭಿಣಿ ಇದ್ದಾಗಲೂ ಆತ ನನ್ನ ಹೊಟ್ಟೆಗೆ ಹೊಡೆದಿದ್ದರಿಂದ ಗರ್ಭಪಾತವಾಗಿತ್ತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

    ಸದ್ಯ ಮಹಿಳೆಯ ದೂರನ್ನು ಪೊಲೀಸರು ಸ್ವೀಕರಿಸಿದ್ದು, ಪತಿಯಿಂದ ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಒಂಟಿ ಮನೆ ಕಳ್ಳತನ ಮಾಡಲು ಹೋಗಿದ್ದ ಗ್ಯಾಂಗ್‌ಗೆ ಶಾಕ್ – ಸಿನಿಮೀಯ ರೀತಿಯಲ್ಲಿ ರೋಚಕವಾಗಿ ಸೆರೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಮ್ಜಾದ್ ಖಾನ್ ಧರ್ಮಕ್ಕೆ ಮತಾಂತರ ಆಗಿ ಮದುವೆ ಆಗಿರುವೆ: ನಟಿ ದಿವ್ಯಾ ಶ್ರೀಧರ್

    ಅಮ್ಜಾದ್ ಖಾನ್ ಧರ್ಮಕ್ಕೆ ಮತಾಂತರ ಆಗಿ ಮದುವೆ ಆಗಿರುವೆ: ನಟಿ ದಿವ್ಯಾ ಶ್ರೀಧರ್

    ಟಿ ದಿವ್ಯಾ ಶ್ರೀಧರ್ (Divya Sridhar) ಇಸ್ಲಾಂ ಧರ್ಮಕ್ಕೆ ಮತಾಂತರ (Conversion) ಆಗಿಯೇ ಅಮ್ಜಾದ್ ಖಾನ್ ಜೊತೆ ಮದುವೆ ಆಗಿರುವುದಾಗಿ ತಿಳಿಸಿದ್ದಾರೆ. ತಮಿಳು ಮಾಧ್ಯಮಗಳ ಜೊತೆ ಮಾತನಾಡಿರುವ ಅವರು  ‘ನಾವಿಬ್ಬರೂ ಒಂದೇ ಸೀರಿಯಲ್ ನಲ್ಲಿ ನಟಿಸುತ್ತಿದ್ದಾಗ ಪರಿಚಯವಾಗಿದ್ದು. ಆಮೇಲೆ ಪರಸ್ಪರ ಪ್ರೀತಿಸೋಕೆ ಶುರು ಮಾಡಿದೆವು. ಮೊದಲು ಅವರು ಮುಸ್ಲಿಂ ಅಂತ ಗೊತ್ತಿರಲಿಲ್ಲ. ಆನಂತರ ಗೊತ್ತಾಗಿದ್ದು. ಆಮೇಲೆ ತಮ್ಮ ಧರ್ಮಕ್ಕೆ ಮತಾಂತರ ಆಗುವಂತೆ ಅಮ್ಜದ್ ಖಾನ್ ಒತ್ತಾಯಿಸಿದ್ದರಂತೆ.

    ನಾನು ಇಷ್ಟಪಟ್ಟ ಹುಡುಗನನ್ನು ಮದುವೆ ಆಗುವುದಕ್ಕಾಗಿ ನಾನು ಇಸ್ಲಾಂ (Islam) ಧರ್ಮಕ್ಕೆ ಮತಾಂತರ ಆದೆ. ಅದು ಅವರ ಒತ್ತಾಯವೂ ಆಗಿತ್ತು. ಆನಂತರ ಹಿಂದೂ ವಿವಾಹದ ಪ್ರಕಾರವೂ ನಾವಿಬ್ಬರೂ ಮದುವೆ ಆಗಲು ತೀರ್ಮಾನಿಸಿದ್ದೆವು. ಹಾಗಾಗಿ ಕಾಂಚಿಪುರಂನಲ್ಲಿರುವ ದೇವಾಲಯದಲ್ಲಿ ಹಿಂದೂಗಳ ಪ್ರಕಾರ ಮದುವೆ ಆದೆವು. ಅದೊಂದು ಸರಳವಾಗಿ ನಡೆದ ವಿವಾಹವಾಗಿತ್ತು ಎಂದು ಹೇಳಿಕೊಂಡಿದ್ದಾರೆ ದಿವ್ಯಾ. ಇದನ್ನೂ ಓದಿ : ಕನ್ನಡದ ನಟಿ ದಿವ್ಯಾ ಶ್ರೀಧರ್ ಲವ್ ಜಿಹಾದ್ ಆರೋಪಕ್ಕೆ ಪತಿ ಅಮ್ಜಾದ್ ಖಾನ್ ಪ್ರತಿಕ್ರಿಯೆ

    ನಾವಿಬ್ಬರೂ ಮದುವೆ (Marriage) ಆದ ಫೋಟೋ ಮತ್ತು ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದೆ. ಅದಕ್ಕೆ ಅವರು ವಿರೋಧ ವ್ಯಕ್ತ ಪಡಿಸಿದ್ದರು. ನನ್ನ ಕೆರಿಯರ್ ಗೆ ತೊಂದರೆ ಆಗುತ್ತದೆ. ಹಾಗಾಗಿ ಅವುಗಳನ್ನು ಡಿಲಿಟ್ ಮಾಡುವಂತೆ ಒತ್ತಡ ಹೇರಿದರು. ಯಾರಾದರೂ ಆ ಫೋಟೋ ಬಗ್ಗೆ ಕೇಳಿದರೆ, ಅವು ಜಾಹೀರಾತಿಗಾಗಿ ತಗೆದದ್ದು ಎಂದು ಹೇಳುವಂತೆ ತಿಳಿಸಿದ್ದರು ಎನ್ನುತ್ತಾ ದಿವ್ಯಾ.

    ದಿವ್ಯಾ ಗರ್ಭಿಣಿ ಎನ್ನುವುದು ತಿಳಿಯುತ್ತಿದ್ದಂತೆಯೇ ಅಮ್ಜದ್ ಖಾನ್ (Amjad Khan) ದೂರ ಆಗುವುದಕ್ಕೆ ಶುರು ಮಾಡಿದರಂತೆ. ಅಲ್ಲದೇ ಮಗುವನ್ನು ಗರ್ಭಪಾತ ಮಾಡಿಸಲು ಒತ್ತಾಯಿಸಿದರಂತೆ. ಈ ಕಾರಣಕ್ಕಾಗಿ ತಮ್ಮಿಬ್ಬರ ನಡುವೆ ಜಗಳವಾಗಿದೆ ಎನ್ನುತ್ತಾರೆ ದಿವ್ಯಾ. ಈ ಜಗಳ ತಾರಕಕ್ಕೇರಿ ದೈಹಿಕ ಹಲ್ಲೆಗೆ ಒಳಗಾಗಿ ಸದ್ಯ ದಿವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ತಮಗಾದ ಅನ್ಯಾಯಕ್ಕೆ ದೂರು ಕೂಡ ದಾಖಲಿಸಲು ಮುಂದಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇಸ್ಲಾಂ ಅನ್ನೋದು ಧರ್ಮವಲ್ಲ, ಕಾಮುಕರ ಗ್ಯಾಂಗ್: ರಾಧಾಕೃಷ್ಣ ಅಡ್ಯಂತಾಯ ವಿವಾದಾತ್ಮಕ ಹೇಳಿಕೆ

    ಇಸ್ಲಾಂ ಅನ್ನೋದು ಧರ್ಮವಲ್ಲ, ಕಾಮುಕರ ಗ್ಯಾಂಗ್: ರಾಧಾಕೃಷ್ಣ ಅಡ್ಯಂತಾಯ ವಿವಾದಾತ್ಮಕ ಹೇಳಿಕೆ

    ಮಂಗಳೂರು: ಇಸ್ಲಾಂ ಅನ್ನೋದು ಧರ್ಮವಲ್ಲ, ಅದೊಂದು ಕ್ರೌರ್ಯ, ಕಾಮುಕರ ಗ್ಯಾಂಗ್ ಎಂಬುದಾಗಿ ಅರ್ಥೈಸಿಕೊಳ್ಳಬಹುದು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದ ಹಿಂದೂ ಜಾಗೃತಿ ಸಭೆಯ ಪ್ರಧಾನ ಭಾಷಣದಲ್ಲಿ ಈ ರೀತಿ ಹೇಳಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಪುಂಡ, ಪೋಕರಿಯಂತೆ ಮಾತನಾಡುತ್ತಿದ್ದಾರೆ: ಸಿದ್ದು ವಿರುದ್ಧ ಶೆಟ್ಟರ್ ವಾಗ್ದಾಳಿ

    ಇಸ್ಲಾಂ ಎನ್ನುವಂತದ್ದು ಧರ್ಮವಲ್ಲ, ಮತವಲ್ಲ, ಸಂಸ್ಕೃತಿಯಲ್ಲ, ಸಭ್ಯತೆಯಲ್ಲ, ಸಂಸ್ಕಾರವಲ್ಲ, ಮಾನವೀಯತೆಯೂ ಅಲ್ಲ. ಅದೊಂದು ಕ್ರೌರ್ಯ, ಅಮಾನುಷತೆ, ಅತ್ಯಾಚಾರ, ಲೂಟಿಕೋರರ ತಂಡ. ಅದೊಂದು ಕಾಮುಕರ ಗ್ಯಾಂಗ್. ಈ ರೀತಿಯಾಗಿ ಇಸ್ಲಾಂನ್ನು ಅರ್ಥೈಸಿಕೊಳ್ಳಬಹುದು ಅನ್ನಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: RSS ಚಡ್ಡಿ ಬಗ್ಗೆ ಸಿದ್ದರಾಮಯ್ಯ ಭಯಭೀತರಾಗಿದ್ದಾರೆ: ಕೋಟ ಶ್ರೀನಿವಾಸ ಪೂಜಾರಿ

    ಅವರ ಎಲ್ಲ ಚಟುವಟಿಕೆಗಳು ಮುಂಚೂಣಿಗೆ ಬಂದಾಗ, ನಾವು ಅದನ್ನು ಗಮನಿಸಿದಾಗ ಈ ಎಲ್ಲ ಬೆಳವಣಿಗೆಗಳು ನಮಗೆ ಅರ್ಥವಾಗುತ್ತದೆ ಎಂದ ರಾಧಾಕೃಷ್ಣ, ಲವ್ ಜಿಹಾದ್ ಬಗ್ಗೆಯೂ ಖಂಡನೆ ವ್ಯಕ್ತಪಡಿಸಿದ್ದಾರೆ.