Tag: Islamabad

  • ಭಾರತ ದಾಳಿಗೆ ಪಾಕ್ ಗಢ ಗಢ – ಮತ್ತೆ ಶಾಂತಿ ಮಂತ್ರ ಪಠಿಸಿದ ಇಮ್ರಾನ್ ಖಾನ್

    ಭಾರತ ದಾಳಿಗೆ ಪಾಕ್ ಗಢ ಗಢ – ಮತ್ತೆ ಶಾಂತಿ ಮಂತ್ರ ಪಠಿಸಿದ ಇಮ್ರಾನ್ ಖಾನ್

    ಇಸ್ಲಾಮಾಬಾದ್: ಪಾಕಿಸ್ತಾನದ ಉಗ್ರ ಕೇಂದ್ರಗಳ ಮೇಲೆ ಭಾರತ ವಾಯುದಾಳಿ ನಡೆಸಿದ ಒಂದು ದಿನದ ಬಳಿಕ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮತ್ತೆ ಮಾತುಕತೆಗೆ ಆಹ್ವಾನ ನೀಡಿ ಶಾಂತಿಮಂತ್ರವನ್ನು ಪಠಿಸಿದ್ದಾರೆ.

    ವಿಶ್ವದಲ್ಲಿ ನಡೆದ ಯುದ್ಧಗಳನ್ನು ಕೂಡ ತಪ್ಪಾಗಿ ಆರ್ಥೈಸಲಾಗಿದೆ. ಯುದ್ಧಗಳು ಪ್ರಾರಂಭವಾದ ಬಳಿಕ ಅವು ಎಲ್ಲಿ ಹೋಗಿ ನಿಲ್ಲುತ್ತದೆ ಎನ್ನುವುದು ತಿಳಿಯುವುದಿಲ್ಲ. ನಿಮ್ಮ ಬಳಿಯೂ ಶಸ್ತ್ರಾಸ್ತ್ರವಿದ್ದು ನಮ್ಮ ಬಳಿಯೂ ಶಸ್ತ್ರಾಸ್ತ್ರವಿದೆ. ಆದರೆ ನಾವು ಈ ಸಂದರ್ಭದಲ್ಲಿ ತಪ್ಪಾಗಿ ಶಸ್ತ್ರಾಸ್ತ್ರವನ್ನು ಬಳಸುವುದು ಸರಿಯೇ ಎಂದು ಪ್ರಶ್ನಿಸುತ್ತೇನೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

    ಒಂದೊಮ್ಮೆ ಯುದ್ಧ ಆರಂಭವಾದರೆ ಅದರ ನಿಯಂತ್ರಣ ನನ್ನ ಕೈಯಲ್ಲೂ ಇರುವುದಿಲ್ಲ, ನರೇಂದ್ರ ಮೋದಿ ಅವರ ಕೈಯಲ್ಲೂ ಇಲ್ಲ. ಉಗ್ರವಾದದ ಬಗ್ಗೆ ಮಾತುಕತೆ ನಡೆಸಲು ನಾವು ಸಿದ್ಧವಿದ್ದೇವೆ. ನಾವು ಕುಳಿತು ಮಾತನಾಡುವ ಅಗತ್ಯವಿದೆ ಎಂದಿದ್ದಾರೆ.

    ಪುಲ್ವಾಮಾ ದಾಳಿಯ ಬಳಿಕ ನಾನು ಭಾರತದೊಂದಿಗೆ ಶಾಂತಿ ಮಾತುಕತೆ ಆಹ್ವಾನ ನೀಡಿದ್ದೆ. ನನಗೂ ಯೋಧರ ಕುಟುಂಬಗಳ ನೋವು ಏನಿದು ತಿಳಿಯುತ್ತದೆ. ಈ ಹಿಂದೆ ನಮ್ಮವರನ್ನು ಕಳೆದುಕೊಂಡ ವೇಳೆ ಆಸ್ಪತ್ರೆಗೆ ಭೇಟಿ ನೀಡಿ ಯೋಧರ ನೋವನ್ನು ಕಂಡಿದ್ದೇನೆ. ಇದರಿಂದಲೇ ನಾನು ಮಾತುಕತೆಗೆ ಆಹ್ವಾನ ನೀಡಿದ್ದೇನೆ ಎಂದರು.

    ಇದೇ ವೇಳೆ ಭಾರತ ಎರಡು ಯುದ್ಧ ವಿಮಾನಗಳನ್ನು ಪಾಕ್ ಸೇನೆ ಹೊಡೆದುರುಳಿಸಿದ್ದಾಗಿ ತಿಳಿಸಿದ ಇಮ್ರಾನ್ ಖಾನ್, ನಾವು ಯಾವುದೇ ಕಠಿಣ ನಿರ್ಧಾರ ಕೈಗೊಳ್ಳಲು ಸಿದ್ಧ. ಆದ್ದರಿಂದಲೇ ನಿಮ್ಮ ದಾಳಿಯ ಪ್ರತಿಕ್ರಿಯೆಯಾಗಿ ನಮ್ಮ ಯುದ್ಧ ವಿಮಾನಗಳು ಗಡಿದಾಟಿ ಬಂದಿದೆ ಎಂದು ಸ್ಪಷ್ಟನೆ ನೀಡಿದರು.

    ಮೊದಲ ವಿಶ್ವಯುದ್ಧ ಒಂದು ವಾರದಲ್ಲಿ ಪೂರ್ಣಗೊಳ್ಳುತ್ತದೆ ಎನ್ನಲಾಗಿತ್ತು. ಆದರೆ ಅದು 6 ವರ್ಷ ನಡೆಯಿತು. ಭಯೋತ್ಪಾದನೆಯ ಹೆಸರಿನಲ್ಲಿ ನಡೆಯುವ ಯುದ್ಧ 17 ವರ್ಷಗಳ ಕಾಲ ನಡೆಯುತ್ತದೆ ಎಂದು ಅಮೆರಿಕ ಸಹ ನಿರೀಕ್ಷೆ ಮಾಡಲಿಲ್ಲ. ಹೀಗಾಗಿ ಈಗ ಮತ್ತೊಮ್ಮೆ ಮಾತುಕತೆಗೆ ಆಹ್ವಾನ ನೀಡುತ್ತಿದ್ದು, ಕುಳಿತು ಚರ್ಚೆ ಮಾಡೋಣ ಎಂದು ಇಮ್ರಾನ್ ಖಾನ್ ಆಹ್ವಾನ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಳೆಯ ಎಲ್ಲ ಬಾಕಿ ತೀರಿಸ್ತೇವೆ – ಮೋದಿ ಹೇಳಿಕೆಯ ಬೆನ್ನಲ್ಲೇ ಶಾಂತಿ ಮಂತ್ರ ಪಠಿಸಿದ ಪಾಕಿಸ್ತಾನ

    ಹಳೆಯ ಎಲ್ಲ ಬಾಕಿ ತೀರಿಸ್ತೇವೆ – ಮೋದಿ ಹೇಳಿಕೆಯ ಬೆನ್ನಲ್ಲೇ ಶಾಂತಿ ಮಂತ್ರ ಪಠಿಸಿದ ಪಾಕಿಸ್ತಾನ

    ಇಸ್ಲಾಮಾಬಾದ್: ಭಾರತ ಯುದ್ಧ ಆರಂಭಿಸಿದರೆ ನಾವು ಯುದ್ಧಕ್ಕೆ ತಯಾರಿದ್ದೇವೆ ಎಂದು ಹೇಳಿಕೆ ನೀಡಿದ್ದ ಪಾಕಿಸ್ತಾನ ಈಗ ಶಾಂತಿ ಮಾತುಕತೆ ಪ್ರಸ್ತಾಪವನ್ನು ಇಟ್ಟಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಏಕಾಂಗಿಯಾಗಿಸುವ ಭಾರತದ ಪ್ರಯತ್ನಗಳು ಒಂದೊಂದಾಗಿ ಫಲ ಕೊಡಲಾರಂಭಿಸಿದ ಬೆನ್ನಲ್ಲೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಈಗ ಶಾಂತಿಮಂತ್ರವನ್ನು ಪಠಿಸಲು ಆರಂಭಿಸಿದ್ದಾರೆ.

    ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಸಾಕ್ಷ್ಯವನ್ನು ನೀಡಿದರೆ ಪಾಕಿಸ್ತಾನ ತಕ್ಷಣವೇ ಸ್ಪಂಧಿಸುತ್ತದೆ. ಹಾಗೆಯೇ ಶಾಂತಿ ನೆಲೆಸಲು ಅವಕಾಶ ಮಾಡಿಕೊಟ್ಟರೆ ನನ್ನ ಮಾತಿಗೆ ನಾನು ಬದ್ಧನಾಗಿರುತ್ತೇನೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿ, ಉಗ್ರರ ವಿರುದ್ಧ ಇಡೀ ವಿಶ್ವದಲ್ಲಿ ಒಂದೇ ಮಾತು ಕೇಳಿಬರುತ್ತಿದೆ. ಭಯೋತ್ಪಾದನೆ ನಡೆಸುವವರನ್ನು ಮತ್ತು ಇಂತಹ ದುಷ್ಕೃತ್ಯಕ್ಕೆ  ಬೆಂಬಲ ನೀಡುವವರಿಗೆ ಪಾಠ ಕಲಿಸಬೇಕು ಎನ್ನುವ ಆಗ್ರಹ ಎಲ್ಲ ಕಡೆ ಕೇಳಿಬರುತ್ತಿದೆ. ಭಾರತ ಈಗ ಬದಲಾಗುತ್ತಿದೆ. ಈ ಬಾರಿ ಉಗ್ರರು ಹಾಗೂ ಭಯೋತ್ಪಾದನೆ ವಿರುದ್ಧ ಹೋರಾಡಲು ಸಮಯ ಬಂದಿದೆ. ಅನ್ಯಾಯವಾಗಿ ಸೈನಿಕರು ಬಲಿಯಾದ ನೋವನ್ನು ಮರೆಯಲು ಸಾಧ್ಯವೇ ಇಲ್ಲ. ಭಯೋತ್ಪಾದನೆ ಹಾಗೂ ಉಗ್ರರ ವಿರುದ್ಧ ಹೇಗೆ ಹೋರಾಡಬೇಕು ಅವರನ್ನು ಯಾವ ರೀತಿ ಸದೆಬಡಿಯಬೇಕು ಎನ್ನುವುದು ನಮಗೆ ಗೊತ್ತಿದೆ. ಅಷ್ಟೇ ಅಲ್ಲದೇ ಈ ಬಾರಿ ಹಳೆಯ ಎಲ್ಲ ಬಾಕಿಗಳನ್ನು ತೀರಿಸುತ್ತೇವೆ. ಅಂತಿಮ ಜಯ ನಮಗೆ ಸಿಗಲಿದೆ ಎಂದು ಗುಡುಗಿದ್ದರು.

    ಮೋದಿಯಿಂದ ಖಾರವಾದ ಪ್ರತಿಕ್ರಿಯೆ ವ್ಯಕ್ತವಾದ ಬೆನ್ನಲ್ಲೇ ಇಮ್ರಾನ್ ಖಾನ್ ಅವರು ಶಾಂತಿ ಮಾತನ್ನು ಆಡಲು ಆರಂಭಿಸಿದ್ದಾರೆ. ಬಡತನ ಮತ್ತು ಅನಕ್ಷರಸ್ಥತೆಯ ವಿರುದ್ಧ ಒಟ್ಟಾಗಿ ಹೋರಾಟ ನಡೆಸೋಣ ಎಂದು ನರೇಂದ್ರ ಮೋದಿ ಹೇಳಿದ್ದರು. ಆ ಮಾತಿಗೆ ನಾನು ಬದ್ಧನಾಗಿದ್ದೇನೆ. ಶಾಂತಿಗೆ ಒಂದು ಅವಕಾಶ ನೀಡಿ, ಪುಲ್ವಾಮಾ ದಾಳಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

    ಇಮ್ರಾನ್ ಖಾನ್ ಅವರು ಪಾಕಿಸ್ತಾನದ ಪ್ರಧಾನಿಯಾದ ನಂತರ ಮೋದಿ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದರು. ಬಳಿಕ ಮಾತನಾಡುತ್ತ ಬಡತನ ಮತ್ತು ಅನಕ್ಷರತೆ ವಿರುದ್ಧ ಒಟ್ಟಾಗಿ ಹೋರಾಡಬೇಕು ಎಂದು ಹೇಳಿದ್ದಾಗ ನಾನು ‘ಪ್ಯಾಥನ್ ಮಗ’ ಎಂದು ಇಮ್ರಾನ್ ಖಾನ್ ಹೇಳಿದ್ದರು. ಪ್ಯಾಥನ್ ಎಂದರೆ ಇರಾನಿನ ಒಂದು ಜನಾಂಗ. ಇವರು ಪ್ರಾಮಾಣಿಕತೆ ಮತ್ತು ಸತ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಆದರೆ ಇಂದು ಪಾಕ್ ಪ್ರಧಾನಿ ತಮ್ಮ ಮಾತನ್ನು ಮರೆತಿದ್ದಾರೆ, ಅವರು ತಮ್ಮ ಮಾತಿನ ಪ್ರಕಾರ ನಡೆದುಕೊಳ್ಳುತ್ತಿಲ್ಲ ಎಂದು ಮೋದಿ ಟೀಕಿಸಿದ್ದರು.

    ಕಳೆದ ಫೆಬ್ರವರಿ 19ರಂದು ಪುಲ್ವಾಮಾ ದಾಳಿ ಕುರಿತು ಪ್ರತಿಕ್ರಿಯೆ ನೀಡಿದ್ದ ಇಮ್ರಾನ್ ಖಾನ್ ಅವರು, ಭಾರತ ಪಾಕಿಸ್ತಾನ ಜೊತೆಗೆ ಸಹಕರಿಸಿದರೆ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳಲು ಪಾಕಿಸ್ತಾನ ಸಿದ್ಧವಿದೆ ಎಂದು ಭರವಸೆ ನೀಡಿದ್ದರು. ಅಷ್ಟೇ ಅಲ್ಲದೆ ಉಗ್ರರ ದಾಳಿಗೆ ಪ್ರತ್ಯುತ್ತರ ನೀಡಲು ಆಕ್ರಮಣಕ್ಕೆ ಮುಂದಾದರೆ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆಯನ್ನು ಕೂಡ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಾರತ ಪ್ರತೀಕಾರ ಘರ್ಜನೆಗೆ ಬೆದರಿದ ಪಾಕ್ – ಜೈಶ್ ಸಂಘಟನೆ ಪ್ರಧಾನ ಕಾರ್ಯಸ್ಥಳ ವಶಕ್ಕೆ

    ಭಾರತ ಪ್ರತೀಕಾರ ಘರ್ಜನೆಗೆ ಬೆದರಿದ ಪಾಕ್ – ಜೈಶ್ ಸಂಘಟನೆ ಪ್ರಧಾನ ಕಾರ್ಯಸ್ಥಳ ವಶಕ್ಕೆ

    ಇಸ್ಲಾಮಾಬಾದ್: ಉಗ್ರವಾದಕ್ಕೆ ಬೆಂಬಲ ನೀಡಿ ಭಾರತದ ದಾಳಿಗೆ ಕಾರಣವಾಗಿದ್ದ ಪಾಕಿಸ್ತಾನ ಕರಾಳ ಮುಖವನ್ನು ವಿಶ್ವಕ್ಕೆ ಭಾರತ ತೆರೆದಿಡುತ್ತಿದಂತೆ ದೇಶದೊಳಗಿನ ಭಯೋತ್ಪಾದನ ಸಂಘಟನೆಗಳ ವಿರುದ್ಧ ಕ್ರಮಕೈಗೊಳ್ಳಲು ಪಾಕಿಸ್ತಾನ ಸರ್ಕಾರ ಮುಂದಾಗಿದೆ.

    ಪಾಕಿಸ್ತಾನದಿಂದಲೇ ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದ ಜೈಶ್ ಎ ಮೊಹಮದ್ ಸಂಘಟನೆ ಪ್ರಧಾನ ಕಾರ್ಯ ಸ್ಥಳವನ್ನು ಪಾಕಿಸ್ತಾನದ ಪಂಜಾಬ್ ಸರ್ಕಾರ ವಶಕ್ಕೆ ಪಡೆದಿರುವುದಾಗಿ ಮಾಹಿತಿ ನೀಡಿದೆ. ಜೈಶ್ ಸಂಘಟನೆಯ ಪ್ರಧಾನ ಕೇಂದ್ರ ಸ್ಥಳದಲ್ಲಿ 70 ತಜ್ಞ ಬೋಧಕ ವರ್ಗ, 600 ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಈ ಸಂಬಂಧ ಪಾಕಿಸ್ತಾನ ಸಚಿವಾಲಯದ ವಕ್ತಾರರೊಬ್ಬರ ಹೇಳಿಕೆ ಬಿಡುಗಡೆ ಆಗಿದ್ದು, ಪಂಜಾಬ್ ಸರ್ಕಾರ ಜೈಶ್ ಎ ಮೊಹಮದ್ ಸಂಘಟನೆಯ ಪ್ರಧಾನ ಕಚೇರಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಕ್ಯಾಂಪಸ್​ನಲ್ಲಿರುವ ಮದ್ರಸೆತುಲ್​ ಸಬೀರ್​ ಮತ್ತು ಜಮಾ ಇ ಮಸ್ಜಿದ್ ಸುಬಾನಲ್ಲಾ ಅನ್ನು ನಿಯಂತ್ರಣಕ್ಕೆ ಪಡೆಯಲಾಗಿದ್ದು, ಇದರ ವ್ಯವಹಾರಗಳನ್ನು ನೋಡಿಕೊಳ್ಳಲು ನಿರ್ವಹಾಕರನ್ನು ನೇಮಕ ಮಾಡಿದೆ. ಸದ್ಯ ಕೇಂದ್ರ ಪಂಜಾಬ್ ಸರ್ಕಾರದ ಪೊಲೀಸರ ವಶದಲ್ಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಇದನ್ನು ಓದಿ: ಮತ್ತೊಂದು ಗೆಲುವು, ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕ್ ಮಾನ ಮತ್ತೊಮ್ಮೆ ಹರಾಜು!

    ಜೈಶ್ ಎ ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಅಜರ್ ಮಸೂದ್ ಆಗಿದ್ದು, ಈತನೇ ಪುಲ್ವಾಮಾ ದಾಳಿಯ ಹಿಂದಿನ ಮಸ್ಟರ್ ಮೈಡ್ ಆಗಿದ್ದ. ಸದ್ಯ ಮಸೂದ್ ರಾವಲ್ಪಿಂಡಿಯಲ್ಲಿರೋ ಶಂಕೆ ವ್ಯಕ್ತವಾಗಿದೆ. ಇಲ್ಲಿನ ಪಾಕ್ ಮಿಲಿಟರಿ ಆಸ್ಪತ್ರೆಯಲ್ಲಿ ಆಶ್ರಯ ಪಡೆದಿದ್ದನೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪುಲ್ವಾಮ ದಾಳಿ ಖಂಡಿಸಿ ಉಗ್ರರ ವಿರುದ್ಧ ಸಿಡಿದ ಪಾಕ್ ಯುವ ಜನತೆ!

    ಪುಲ್ವಾಮ ದಾಳಿ ಖಂಡಿಸಿ ಉಗ್ರರ ವಿರುದ್ಧ ಸಿಡಿದ ಪಾಕ್ ಯುವ ಜನತೆ!

    ಇಸ್ಲಾಮಾಬಾದ್: ಭಾರತದಲ್ಲಿಯೇ ಇದ್ದುಕೊಂಡು ಪಾಕ್ ಉಗ್ರರನ್ನು ಕೆಲ ದೇಶದ್ರೋಹಿಗಳು ಬೆಂಬಲಿಸುತ್ತಿರುವಾಗ, ಉಗ್ರರ ನಡೆ ಹಾಗೂ ಪುಲ್ವಾಮ ದಾಳಿಯನ್ನು ಖಂಡಿಸಿ ಪಾಕಿಸ್ತಾನದ ಕೆಲ ಯುವ ಜನತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವ ಮೂಲಕ ಭಾರತಕ್ಕೆ ಬೆಂಬಲ ನೀಡಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ನಾನು ಪಾಕಿಸ್ತಾನಿ ಆದರೆ ನಾನು ಪುಲ್ವಾಮ ದಾಳಿಯನ್ನು ಖಂಡಿಸುತ್ತೇನೆ ಎಂದು ಮಾನವೀಯತೆಗೆ ಬೆಲೆ ನೀಡಿದ್ದಾರೆ. ಹಾಗೆಯೇ #AntiHateChallenge #NoToWar ಎಂದು ಬರೆದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

    https://www.facebook.com/photo.php?fbid=10158983178331515&set=a.10150427150031515&type=3

    “ನಾನು ಪಾಕಿಸ್ತಾನಿ ಮತ್ತು ಪುಲ್ವಾಮಾ ದಾಳಿಯನ್ನು ಖಂಡಿಸುತ್ತೇನೆ, #AntiHateChallenge #NoToWar”. ಎಂದು ಬರೆದು ಯುವ ಪತ್ರಕರ್ತೆ ಮತ್ತು ಭಾರತ- ಪಾಕ್ ಶಾಂತಿ ಹೋರಾಟಗಾರ್ತಿ ಸೆಹೈರ್ ಮಿರ್ಜಾ ಪ್ಲೇಕಾರ್ಡ್ ಹಿಡಿದುಕೊಂಡಿರುವ ತಮ್ಮ ಫೋಟೋವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೆಯೇ ಈ ಫೋಟೋ ಅಡಿಯಲ್ಲಿ “I won’t trade humanity for patriotism” (ದೇಶಭಕ್ತಿಗಾಗಿ ನಾನು ಮಾನವೀಯತೆಯನ್ನು ಮಾರುವುದಿಲ್ಲ) ಎಂದು ಬರೆದು ಪುಲ್ವಾಮ ದಾಳಿಯನ್ನು ಖಂಡಿಸಿ ಫೋಸ್ಟ್ ಮಾಡಿದ್ದಾರೆ. ಅವರೊಂದಿಗೆ ಕೆಲ ಪಾಕ್ ಯುವತಿಯರು ಕೂಡ ಈ ಅಭಿಯಾನಕ್ಕೆ ಸಾಥ್ ಕೊಟ್ಟಿದ್ದಾರೆ.

    https://www.facebook.com/amankiasha.destinationpeace/posts/2196502283729334

    ಅಲ್ಲದೆ ಅಮನ್ ಕಿ ಆಶಾ ಎಂಬ ಫೇಸ್‍ಬುಕ್ ಗ್ರೂಪ್ ಪೇಜ್ ಈ ಫೋಸ್ಟ್ ಗಳನ್ನು ಶೇರ್ ಮಾಡಿ ಯುವತಿಯರ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದೆ. ಆದರಿಂದ ಈ ಫೋಸ್ಟ್‍ಗೆ ಪ್ರತಿಕ್ರಿಯಿಸಿದ ಸೆಹೈರ್ ಮಿರ್ಜಾ “ಕಾಶ್ಮೀರದಲ್ಲಿ ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡ ಉಗ್ರ ದಾಳಿ ನಮಗೆ ತೀವ್ರ ನೋವು ತಂದಿದೆ. ಈ ದಾಳಿಯ ವಿರುದ್ಧ ನಿಲ್ಲುವ ಸಮಯವಿದು. ಯುದ್ಧ ಮತ್ತು ಭಯೋತ್ಪಾದನೆ ವಿರುದ್ಧ ಮಾತನಾಡಲು ನಮಗೆ ಹೆಚ್ಚು ಹೆಚ್ಚು ವಿವೇಕಯುಳ್ಳ ಧ್ವನಿಗಳು ಬೇಕಾಗಿವೆ. ದಾಳಿಯನ್ನು ಖಂಡಿಸುವುದು ಮಾತ್ರವಲ್ಲದೆ ನಮ್ಮ ಭಾರತೀಯ ಸ್ನೇಹಿತರ ಜೊತೆ ಭಾವನೆ ವ್ಯಕ್ತಪಡಿಸಲು ನಾವು ಈ #AntiHateChallenge ಅಭಿಯಾನ ಪ್ರಾರಂಭಿಸಿದ್ದೇವೆ. ಪಾಕ್ ಪ್ರಜೆಗಳೇ, ನಿಮ್ಮ ಭಾವನೆಗಳನ್ನು ಹಂಚಿಕೊಳ್ಳಲು ನಮ್ಮೊಂದಿಗೆ ಕೈ ಜೊಡಿಸಿ” ಎಂದು ಕರೆ ನೀಡಿದ್ದಾರೆ.

    https://www.facebook.com/beenasarwarofficial/posts/2211981312174134

    ಅಷ್ಟೇ ಅಲ್ಲದೆ ಅವರು ಭಾರತೀಯ ಕವಿ ಸಾಹಿರ್ ಲುದಿಯಾನ್ವಿ ಅವರ ಕವಿತೆಯನ್ನು ಫೋಸ್ಟ್ ಮಾಡಿದ್ದಾರೆ.
    “ರಕ್ತ ನಮ್ಮದೋ ಅಥವಾ ಅವರದೋ, ಅದು ಮನುಕುಲದ ರಕ್ತ
    ಪೂರ್ವ ಅಥವಾ ಪಶ್ಚಿಮದಲ್ಲಿ ಯುದ್ಧಗಳು ನಡೆಯದಿರಲಿ, ಅದು ವಿಶ್ವಶಾಂತಿಯ ಹತ್ಯೆ
    ಬಾಂಬ್ ದಾಳಿಯ ಗುರಿ ಮನೆಗಳಾಗಿರಲಿ ಅಥವಾ ಗಡಿಯಾಗಿರಲಿ, ಗಾಯವಾಗುವುದು ಆತ್ಮದ ಗುಡಿಗೆ
    ಯುದ್ಧವೇ ಒಂದು ಬಹುದೊಡ್ಡ ಸಮಸ್ಯೆ, ಅದು ಹೇಗೆ ಸಮಸ್ಯೆಗಳಿಗೆ ಪರಿಹಾರವಾಗುತ್ತದೆ?
    ಇಂದು ಇದು ಬೆಂಕಿ ಮತ್ತು ರಕ್ತದ ಮಳೆಯನ್ನು ಸುರಿಸುತ್ತದೆ, ನಾಳೆ, ಹಸಿವು ಮತ್ತು ದಾರಿದ್ರ್ಯದ ಸುರಿಮಳೆ ” ಎಂದು ಕವಿ ಸಾಹಿರ್ ಲುದಿಯಾನ್ವಿ ಯುದ್ಧವನ್ನು ಮಾಡಬೇಡಿ ಎಂದು ಕವಿತೆ ಬರೆದಿದ್ದಾರೆ.

    ಪಾಕಿಸ್ತಾನಿ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಇ-ಮೊಹಮ್ಮದ್ ಸಂಘಟನೆ ಪುಲ್ವಾಮಾ ದಾಳಿಯ ಹೊಣೆ ಹೊತ್ತುಕೊಂಡಿದೆ. ಆದರೆ ಇದರಲ್ಲಿ ನಮ್ಮದೇನೂ ಪಾತ್ರವಿಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಾಕ್ಷ್ಯ ಕೊಡಿ ಭಾರತಕ್ಕೆ ಕೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಸಾಕ್ಷ್ಯ ನೀಡಿದ್ರೆ ಕ್ರಮ, ಯುದ್ಧ ನಡೆದರೆ ಉತ್ತರ ಕೊಡ್ತೀವಿ: ಭಾರತವನ್ನು ಕೆಣಕಿದ ಇಮ್ರಾನ್ ಖಾನ್

    ಸಾಕ್ಷ್ಯ ನೀಡಿದ್ರೆ ಕ್ರಮ, ಯುದ್ಧ ನಡೆದರೆ ಉತ್ತರ ಕೊಡ್ತೀವಿ: ಭಾರತವನ್ನು ಕೆಣಕಿದ ಇಮ್ರಾನ್ ಖಾನ್

    ಇಸ್ಲಾಮಾಬಾದ್: ಮುಂಬೈ ದಾಳಿ ಬಳಿಕ ಸಾಕಷ್ಟು ಸಾಕ್ಷ್ಯ ನೀಡಿದ್ರೂ ಇನ್ನೂ ದೇಶದಲ್ಲಿನ ಉಗ್ರರನ್ನು ಮಟ್ಟ ಹಾಕದ ಪಾಕಿಸ್ತಾನ ಈಗ ಪುಲ್ವಾಮಾ ದಾಳಿ ಬಗ್ಗೆ ಸಾಕ್ಷ್ಯವನ್ನು ಕೇಳುವ ಮೂಲಕ ಮತ್ತೆ ಭಾರತೀಯರನ್ನು ಕೆಣಕಿದೆ.

    ಪುಲ್ವಾಮಾ ದಾಳಿಯ ನಡೆಸಿದವರ ಮೇಲೆ ಕ್ರಮ ತೆಗೆದುಕೊಳ್ಳಬೇಕಾದರೆ ನಮಗೆ ಸಾಕ್ಷಿ ನೀಡಬೇಕೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತದಲ್ಲಿ ಕೇಳಿಕೊಂಡಿದ್ದಾರೆ.

    ಘಟನೆಯ ನಂತರ ಇದೇ ಮೊದಲ ಬಾರಿಗೆ ದೀರ್ಘವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಕೃತ್ಯದಲ್ಲಿ ಪಾಕಿಸ್ತಾನ ಕೈವಾಡ ಇದೆ ಎನ್ನುವುದಕ್ಕೆ ಭಾರತ ಸಾಕ್ಷ್ಯ ನೀಡಿದರೆ ನಾನು ಕ್ರಮ ಕೈಗೊಂಡು ತನಿಖೆಗೆ ಆದೇಶ ನೀಡುತ್ತೇನೆ ಎಂದು ಹೇಳಿದ್ದಾರೆ.

    ನಾವು ಸಹ ಉಗ್ರರಿಂದ ಸಂತ್ರಸ್ತರಾಗಿದ್ದೇವೆ. ಯಾರೂ ಹಿಂಸೆಗೆ ಪ್ರಚೋದನೆ ನೀಡುತ್ತಾರೋ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಆದರೆ ದಾಳಿಯ ಬಗ್ಗೆ ನಮಗೆ ಸಾಕ್ಷ್ಯಾಧಾರಗಳ ಅವಶ್ಯಕತೆ ಇದೆ. ಅಂತಹ ದಾಳಿಯನ್ನು ನಾವು ಯಾಕೆ ಮಾಡಿಸುತ್ತೇವೆ ಪ್ರಶ್ನಿಸಿದ್ದಾರೆ.

    ಮಾತುಕತೆಯ ಮೂಲವೇ ಇಂತಹ ಸಮಸ್ಯೆಗಳನ್ನು ವಶಕ್ಕೆ ಪಡೆಯಬೇಕು ಎಂದು ಅಭಿಪ್ರಾಯ ಪಟ್ಟ ಇಮ್ರಾನ್ ಖಾನ್, ಯುದ್ಧವನ್ನು ಪ್ರಾರಂಭಿಸುವುದು ಮಾನವರ ಕೈಯಲ್ಲಿದೆ, ಇದು ಎಲ್ಲಿಯವರೆಗೂ ಕೊಂಡ್ಯೊಯುತ್ತದೆ ಎಂಬುವುದು ಆ ದೇವರಿಗೆ ಮಾತ್ರಗೊತ್ತು. ಆದರೆ ಈ ಸಮಯದಲ್ಲಿ ಭಾರತ ಸರ್ಕಾರ ಕಾಶ್ಮೀರಿ ಜನರನ್ನು ಪ್ರಶ್ನಿಸಬೇಕಿದ್ದು, ಹಿಂಸೆಯಲ್ಲಿ ಏಕೆ ಭಾಗವಹಿಸುತ್ತಿದ್ದಾರೆ ಎಂಬುವುದು ತಿಳಿಯಬೇಕಿದೆ ಎಂದು ಸಲಹೆ ನೀಡಿದ್ದಾರೆ.

    ಮುಂದಿನ ದಿನಗಳು ಚುನಾವಣೆಯ ವರ್ಷ ಎಂಬುದು ನನಗೆ ತಿಳಿದಿದೆ. ಭಾರತ ಸರ್ಕಾರ ಒಂದೊಮ್ಮೆ ನಮ್ಮ ಮೇಲೆ ದಾಳಿ ನಡೆಸಿದರೆ ನಾವು ಕೂಡ ಸುಮ್ಮನೆ ಕೂರುವುದಿಲ್ಲ. ಪ್ರತಿದಾಳಿ ನಡೆಸಲು ನಮಗೆ ಬರುತ್ತದೆ. ಆದರೆ ಈ ವಿಚಾರ ಮಾತುಕತೆಯಲ್ಲಿ ಬಗೆ ಹರಿಸಿಕೊಳ್ಳಬಹುದು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಾಂಪತ್ಯ ಜೀವನಕ್ಕೆ ಕಾಲಿಡುವ ಮೊದ್ಲೇ ವಧು ಸೇರಿ ಐವರು ಸಜೀವ ದಹನ

    ದಾಂಪತ್ಯ ಜೀವನಕ್ಕೆ ಕಾಲಿಡುವ ಮೊದ್ಲೇ ವಧು ಸೇರಿ ಐವರು ಸಜೀವ ದಹನ

    ಇಸ್ಲಾಮಾಬಾದ್: ಮದುವೆ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ವಧು ಮತ್ತು ಆಕೆಯ ಸ್ನೇಹಿತರು ಸೇರಿ ಐವರು ಸಜೀವ ದಹನವಾಗಿರುವ ಘಟನೆ ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆದಿದೆ.

    ರಾವಲ್ಪಿಂಡಿ ರಸ್ತೆಯಲ್ಲಿರುವ ಮನೆಯಲ್ಲಿ ಮದುವೆಗೆ ಸಿದ್ಧತೆ ನಡೆಯುತ್ತಿತ್ತು. ಮಂಗಳವಾರ ಮೆಹಂದಿ ಶಾಸ್ತ್ರ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಅಂದು ವಧುವಿನ ಜೊತೆ ಕೊಠಡಿಯಲ್ಲಿ ಆಕೆಯ ಐವರು ಸ್ನೇಹಿತರು ಇದ್ದರು. ಇತ್ತ ಸಂಬಂಧಿಗಳು ಮದುವೆಗಾಗಿ ತಯಾರಿ ಮಾಡಿಕೊಳ್ಳುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಮದುವೆ ಮನೆಯಲ್ಲಿ ಬೆಂಕಿ ಆವರಿಸಿದೆ. ಆಗ ಕೊಠಡಿಯಿಂದ ಹೊರಬರಲು ಸಾಧ್ಯವಾಗದೇ ವಧು ಸೇರಿದಂತೆ ನಾಲ್ವರು ಸ್ನೇಹಿತರು ಬೆಂಕಿಯಲ್ಲಿ ಸಜೀವ ದಹನರಾಗಿದ್ದಾರೆ.

    ಮೆಹಂದಿ ಶಾಸ್ತ್ರದಲ್ಲಿ ಸುಮಾರು 40-50 ಅತಿಥಿಗಳು ಉಪಸ್ಥಿತರಿದ್ದು, ಬೆಂಕಿ ಆವರಿಸಿದ ತಕ್ಷಣ ಕೆಲವರು ಕೆಳಗೆ ಧುಮುಕಿ ಮನೆಯಿಂದ ಪರಾರಿಯಾಗಿದ್ದಾರೆ. ಇತ್ತ ರಕ್ಷಣಾ ಪಡೆ ಬೇಗ ಬಂದಿದ್ದರೆ ನನ್ನ ಮಗಳು ಉಳಿಯುತ್ತಿದ್ದಳು. ಸಿಬ್ಬಂದಿಯ ಉದಾಸೀನತೆಯಿಂದ ಈ ದೊಡ್ಡ ಘಟನೆ ನಡೆದಿದೆ ಎಂದು ವಧುವಿನ ಪೋಷಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    ಈ ಘಟನೆಯ ಬಗ್ಗೆ ಅಗ್ನಿಶಾಮಕ ದಳದವರಿಗೆ ಮಾಹಿತಿ ತಿಳಿಸಿದರೂ ಅವರು ತಡವಾಗಿ ಬಂದಿದ್ದಾರೆ. ಅವರು ಬೇಗ ಬಂದಿದ್ದಾರೆ ವಧುವನ್ನು ಉಳಿಸಬಹುದಾಗಿತ್ತು. ಹೀಗಾಗಿ ರಕ್ಷಣಾ ತಂಡದ ನಿರ್ಲಕ್ಷ್ಯದಿಂದಾಗಿ ವಧು ಮತ್ತು ಆಕೆಯ ಸ್ನೇಹಿತೆಯರು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

    ಕೆಲವು ಜನರು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಗ್ಯಾಸ್ ಸೋರಿಕೆ ಕಾರಣದಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಹೇಳಿದ್ದಾರೆ. ಸದ್ಯಕ್ಕೆ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ.

    ಈ ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ರೈಲ್ವೆ ಮಂತ್ರಿ ಸ್ಥಳಕ್ಕೆ ಹೋಗಿ ಮೃತ ಕುಟುಂಬದವರನ್ನು ಭೇಟಿಯಾಗಿ ಸಾಂತ್ವಾನ ಹೇಳಿದ್ದಾರೆ. ಇಡೀ ಮನೆಯನ್ನು ಮರದಿಂದ ಮಾಡಲ್ಪಟ್ಟಿತ್ತು. ಆದ್ದರಿಂದ ಬೆಂಕಿಯು ವೇಗವಾಗಿ ಮನೆಯನ್ನು ಆವರಿಸಿದೆ. ಈ ಬಗ್ಗೆ ತನಿಖೆ ಕೈಗೊಂಡು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವರದಿ ಮಾಡಲು ಹೋಗಿ ಕತ್ತೆ ಮೇಲಿನಿಂದ ಬಿದ್ದ ಪತ್ರಕರ್ತ!

    ವರದಿ ಮಾಡಲು ಹೋಗಿ ಕತ್ತೆ ಮೇಲಿನಿಂದ ಬಿದ್ದ ಪತ್ರಕರ್ತ!

    ಇಸ್ಲಾಮಾಬಾದ್: ಪಾಕಿಸ್ತಾನದ ಪತ್ರಕರ್ತರೊಬ್ಬರು ಕತ್ತೆ ಮೇಲೆ ಕುಳಿತು ವರದಿ ಮಾಡಲು ಹೋಗಿ ಕೆಳಗೆ ಬಿದ್ದಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಕತ್ತೆಗಳ ಸಾಕಾಣಿಕೆ ಮತ್ತು ಮಾರಾಟದ ಕುರಿತು ಕತ್ತೆ ಮೇಲೆಯೇ ಕುಳಿತು ವರದಿ ಮಾಡಲು ಹೋಗಿ ಉರ್ದು ಭಾಷೆಯ ಜಿಯೋ ಟಿವಿ ವರದಿಗಾರ ಅಮಿನ್ ಹಫೀಜ್ ಕೆಳಗೆ ಬಿದ್ದಿದ್ದಾರೆ.

    ಅಮೀನ್ ಹಫೀಜ್ ಹೀಗೆ ನಗೆಪಾಟಲಿಗೆ ಈಡಾಗುವುದು ಮೊದಲ ಬಾರಿ ಅಲ್ಲ. ಹಿಂದೆ ಕೂಡ ಎಮ್ಮೆ, ಕುರಿಗಳಿಗೆ ಅವರು ಸಂದರ್ಶನ ಮಾಡಿರುವ ವಿಡಿಯೋ ಕೂಡ ವೈರಲ್ ಆಗಿತ್ತು.

    ಯಾಕೆ ನೀವು ಹೀಗೆ ಮಾಡ್ತೀರ ಅಂತ ಅಮೀನ್ ಅವರನ್ನು ಕೇಳಿದ್ರೆ, ಐ ಲವ್ ಮೈ ಜಾಬ್. ನನಗೆ ಈ ರೀತಿ ವರದಿ ಮಾಡಲು ಇಷ್ಟವಾಗುತ್ತೆ. ನಾನು ಸೀರಿಯಸ್ ವಿಷಯದ ಕುರಿತು ವರದಿ ಮಾಡಲ್ಲ ಎಂದು ನಗುಮುಖದಿಂದ ಉತ್ತರಿಸುತ್ತಾರೆ. ಅಮೀನ್ ಅವರ ಡಿಫರೆಂಟ್ ವರದಿಗಾರಿಕೆ ಶೈಲಿಯಿಂದಲೇ ಪಾಕಿಸ್ತಾನದಲ್ಲಿ ಅವರು ಹೆಸರುವಾಸಿಯಾಗಿದ್ದಾರೆ.

    https://www.youtube.com/watch?time_continue=15&v=NeAYCPK_-To

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಮೋದಿಯೊಂದಿಗೆ ಮಾತುಕತೆಗೆ ಸಿದ್ಧ: ಪಾಕ್ ಪ್ರಧಾನಿ

    ಪ್ರಧಾನಿ ಮೋದಿಯೊಂದಿಗೆ ಮಾತುಕತೆಗೆ ಸಿದ್ಧ: ಪಾಕ್ ಪ್ರಧಾನಿ

    ಇಸ್ಲಾಮಾಬಾದ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲು ನಾನು ಸಿದ್ಧನಿದ್ದೇನೆಂದು ಪಾಕಿಸ್ತಾನ ಪ್ರಧಾನಿ ಇರ್ಮಾನ್ ಖಾನ್ ಹೇಳಿದ್ದಾರೆ.

    ಪಾಕ್ ಪ್ರಧಾನಿಯಾಗಿ 100 ದಿನ ಪೂರೈಸಿರುವ ಇಮ್ರಾನ್ ಖಾನ್, ಗುರುವಾರ ಭಾರತೀಯ ಪತ್ರಕರ್ತರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಸೇನೆಯ ಮೂಲಕ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವೇ ಇಲ್ಲ. ಕೇವಲ ಈ ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಬಹುದೆಂದು ಹೇಳಿದ್ದಾರೆ.

    ಸಮಸ್ಯೆಯನ್ನು ಬಗೆಹರಿಸಲು ಅಸಾಧ್ಯವೆಂದು ಹೇಳಲಾಗುವುದಿಲ್ಲ. ಪಾಕಿಸ್ತಾನ ಶಾಂತಿಯನ್ನು ಬಯಸುತ್ತದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸಲು ನಾನು ಸಿದ್ಧನಿದ್ದೇನೆ. ಅಲ್ಲದೇ ಪಾಕಿಸ್ತಾನ ತನ್ನ ಪ್ರದೇಶವನ್ನು ಉಗ್ರರು ಬಳಸಿಕೊಳ್ಳಲು ಬಿಡುವುದಿಲ್ಲವೆಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

    ಇತ್ತೀಚೆಗೆ ಪಾಕ್ ವಿದೇಶಾಂಗ ಸಚಿವಾಲಾಯ ಇಸ್ಲಾಮಾಬಾದಿನಲ್ಲಿ ನಡೆಯಲಿರುವ ಸಾರ್ಕ್ ಶೃಂಗ ಸಭೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿತ್ತು. ಆದರೆ ಈ ಆಹ್ವಾನವನ್ನು ಭಾರತ ಖಡಾಖಂಡಿತವಾಗಿ ತಿರಸ್ಕರಿಸಿತ್ತು.

    ಈ ಕುರಿತು ಪ್ರತಿಕ್ರಿಯಿಸಿದ್ದ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಶಾಂತಿ ಮಾತುಕತೆ ಹಾಗೂ ಭಯೋತ್ಪಾದನೆ ಒಟ್ಟಾಗಿ ಸಾಗಲು ಸಾಧ್ಯವಿಲ್ಲ. ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವುದನ್ನು ಪಾಕ್ ಬಿಡುವವರೆಗೂ ಮಾತುಕತೆ ಅಸಾಧ್ಯ. ಹೀಗಾಗಿ ಪಾಕಿಸ್ತಾನದಲ್ಲಿ ನಡೆಯುವ ಸಾರ್ಕ್ ಸಭೆಯಲ್ಲಿ ಭಾರತ ಭಾಗಿಯಾಗುವುದಿಲ್ಲ. ಅಲ್ಲದೇ ಪಾಕ್ ಆಹ್ವಾನವನ್ನು ಪ್ರಧಾನಿ ಮೋದಿಯವರು ಎಂದಿಗೂ ಒಪ್ಪಿಕೊಳ್ಳುವುದಿಲ್ಲವೆಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಎರಡು ದೇಶಗಳ ಸ್ನೇಹ ವೃದ್ಧಿಸಲು ಸಿದ್ದು ಭಾರತ ಪ್ರಧಾನಿ ಆಗಬೇಕಿಲ್ಲ – ಗೆಳೆಯನನ್ನು ಹಾಡಿಹೊಗಳಿದ ಇಮ್ರಾನ್ ಖಾನ್

    ಎರಡು ದೇಶಗಳ ಸ್ನೇಹ ವೃದ್ಧಿಸಲು ಸಿದ್ದು ಭಾರತ ಪ್ರಧಾನಿ ಆಗಬೇಕಿಲ್ಲ – ಗೆಳೆಯನನ್ನು ಹಾಡಿಹೊಗಳಿದ ಇಮ್ರಾನ್ ಖಾನ್

    ಇಸ್ಲಾಮಾಬಾದ್: ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ನವಜೋತ್ ಸಿಂಗ್ ಸಿದ್ದುರನ್ನು ಏಕೆ ಟೀಕೆ ಮಾಡುತ್ತಿದ್ದಾರೆಂದು ನನಗೆ ತಿಳಿಯುತ್ತಿಲ್ಲ. ಆದರೆ ಎರಡು ದೇಶಗಳ ಸ್ನೇಹವನ್ನು ವೃದ್ಧಿಸಲು ಸಿದ್ದು ಭಾರತದ ಪ್ರಧಾನಿ ಆಗಬೇಕೆಂದು ನನಗೆ ಆನ್ನಿಸುತ್ತಿಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

    ಸಿಖ್ಖರ ಧಾರ್ಮಿಕ ಕೇಂದ್ರವಾಗಿರುವ ದರ್ಬಾರ್ ಗೆ ಭಾರತದಿಂದ ಸಂಪರ್ಕ ಕಲ್ಪಿಸುವ ಕರ್ತಾರಪುರ ಮಾರ್ಗದ ಕಾರಿಡಾರ್ ಕಾಮಗಾರಿಗೆ ಇಮ್ರಾನ್ ಖಾನ್ ಶಂಕುಸ್ಥಾಪನೆ ಮಾಡಿದರು. ಈ ವೇಳೆ ಮಾತನಾಡಿದ ಇಮ್ರಾನ್ ಖಾನ್, ಎರಡು ದೇಶಗಳ ನಡುವೆ ಉತ್ತಮ ನಾಗರಿಕ ಸಂಬಂಧ ವೃದ್ಧಿಯಾಗಬೇಕಿದೆ. ನಾನು ಭಾರತಕ್ಕೆ ಭೇಟಿ ನೀಡಿದ ವೇಳೆ ಪಾಕಿಸ್ತಾನದ ಸೈನ್ಯಕ್ಕೆ ಶಾಂತಿ ಅಗತ್ಯವಿಲ್ಲ ಎಂಬ ಮಾತು ಹೇಳಿದ್ದರು. ಆದರೆ ಇಂದು ನಾನು ಪಾಕಿಸ್ತಾನದ ಪ್ರಧಾನಿಯಾಗಿ, ಪಕ್ಷದ ನಾಯಕನಾಗಿ ಹಾಗೂ ನಮ್ಮ ದೇಶದ ಸೈನ್ಯದ ಪರವಾಗಿ ಹೇಳುತ್ತಿದ್ದು, ಎರಡು ದೇಶಗಳೊಂದಿಗೆ ಉತ್ತಮ ನಾಗರಿಕ ಸಂಬಂಧಗಳು ಬೆಳೆಯಬೇಕು ಎಂದು ತಿಳಿಸಿದ್ರು.

    ಇದೇ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡ, ಶಾಸಕ ನವಜೋತ್ ಸಿಂಗ್ ಸಿದ್ದುರನ್ನು ಹಾಡಿಹೊಗಳಿದ ಇಮ್ರಾನ್ ಖಾನ್, ನನ್ನ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿದ್ದುರನ್ನ ಏಕೆ? ಭಾರತದಲ್ಲಿ ಟೀಕೆ ಮಾಡಿದರು ಎಂದು ನನಗೆ ಗೊತ್ತಿಲ್ಲ. ಸಿದ್ದು ಶಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ಅಷ್ಟೇ. ಒಂದೊಮ್ಮೆ ಸಿದ್ದು ಪಾಕ್ ನೆಲದಲ್ಲಿ ಚುನಾವಣೆ ಎದುರಿಸಿದರು ಗೆದ್ದು ಬರುತ್ತಾರೆ. ಎರಡು ದೇಶಗಳ ನಡುವಿನ ಬಾಂಧವ್ಯ ವೃದ್ಧಿಗೆ ಸಿದ್ದು ಭಾರತದ ಪ್ರಧಾನಿ ಆಗಬೇಕು ಎಂದು ನನಗೆ ಆನ್ನಿಸುತ್ತಿಲ್ಲ ಎಂದರು.

    ಭಾರತೀಯರಿಗೆ ಗುರುದ್ವಾರದ ಮಾರ್ಗ ತೆರೆದ ಕಾರಣ ವಿಸಾ ಇಲ್ಲದೇ ತೆರಳಬಹುದಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆಗೆ ಸಿದ್ದು ಮಂಗಳವಾರವೇ ಪಂಜಾಬ್‍ಗೆ ತೆರಳಿದ್ದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಹರ್ ಸಿಮ್ರತ್ ಕೌರ್ ಭಾಗಿಯಾಗಿದ್ದರು.

    ಇತ್ತ ಪಾಕ್ ಕಾರ್ಯಕ್ರಮದಲ್ಲಿ ಭಾರತದ ಸಚಿವೆ ಭಾಗವಹಿಸಿರುವುದು ದ್ವಿಪಕ್ಷೀಯ ಸಂಬಂಧದ ಆರಂಭದ ಸೂಚನೆ ಅಲ್ಲ. ಕಳೆದ 20 ವರ್ಷಗಳಿಂದ ಈ ಕಾರಿಡಾರ್ ಆರಂಭ ಮಾಡಲು ಭಾರತ ಮನವಿ ಸಲ್ಲಿಸಿತ್ತು. ಇದೇ ಮೊದಲ ಬಾರಿ ಪಾಕ್ ಪ್ರತಿಕ್ರಿಯೆ ನೀಡಿದೆ. ಆದರೆ ಭಯೋತ್ಪಾದನೆಗೆ ಪಾಕ್ ಸಂಪೂರ್ಣವಾಗಿ ಬೆಂಬಲ ನೀಡುವುದನ್ನು ನಿಲ್ಲಿಸಿದ ಬಳಿಕವೇ ಮಾತುಕತೆ ಆರಂಭವಾಗುತ್ತದೆ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv