Tag: Islamabad

  • ಸಾರ್ಕ್ ಶೃಂಗ ಸಭೆಗೆ ಪ್ರಧಾನಿ ಮೋದಿಗೆ ಪಾಕ್ ಆಹ್ವಾನ

    ಸಾರ್ಕ್ ಶೃಂಗ ಸಭೆಗೆ ಪ್ರಧಾನಿ ಮೋದಿಗೆ ಪಾಕ್ ಆಹ್ವಾನ

    ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನಡೆಯುವ ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಸ್ಥೆ(ಸಾರ್ಕ್)ಯ 19ನೇ ಶೃಂಗ ಸಭೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯನ್ನು ಆಹ್ವಾನಿಸುವುದಾಗಿ ಪಾಕಿಸ್ತಾನ ಹೇಳಿದೆ.

    ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಾಕ್ ವಿದೇಶಾಂಗ ವಕ್ತಾರ ಡಾ. ಮೊಹಮ್ಮದ್ ಫೈಸಲ್, ಸಾರ್ಕ್ ಶೃಂಗಸಭೆಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಾಗುವುದು. ಅಲ್ಲದೇ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಮೊದಲ ಭಾಷಣದಲ್ಲಿ ಭಾರತ ಮತ್ತು ಪಾಕಿಸ್ತಾನದ ದ್ವಿಪಕ್ಷೀಯ ಮಾತುಕತೆಯ ವಿಚಾರದಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ, ಪಾಕ್ ಎರಡು ಹೆಜ್ಜೆ ಮುಂದಿಡುತ್ತದೆ ಎನ್ನುವ ವಿಚಾರವನ್ನೂ ಸಹ ಪ್ರಸ್ತಾಪಿಸಿದರು.

    ಸಾರ್ಕ್ ಶೃಂಗ ಸಭೆ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುತ್ತವೆ. 2014ರಲ್ಲಿ ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ಮೋದಿಯವರು ಪಾಲ್ಗೊಂಡಿದ್ದರು. ಆದರೆ 2016ರಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ನಡೆಯಬೇಕಿದ್ದ ಸಭೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿರಲಿಲ್ಲ. ಏಕೆಂದರೆ 2016ರ ಸೆಪ್ಟೆಂಬರ್ 18 ರಂದು ಪಾಕ್ ಉಗ್ರಗಾಮಿಗಳು ಜಮ್ಮು ಕಾಶ್ಮೀರದ ಉರಿ ಪ್ರದೇಶದಲ್ಲಿನ ಭಾರತೀಯ ಸೇನಾ ಶಿಬಿರದ ಮೇಲೆ ದಾಳಿ ನಡೆಸಿ, 19 ಯೋಧರನ್ನು ಬಲಿ ಪಡೆದುಕೊಂಡಿದ್ದರು. ಹೀಗಾಗಿ ದಾಳಿಯನ್ನು ಖಂಡಿಸಿ ಭಾರತ ಶೃಂಗ ಸಭೆಯಲ್ಲಿ ಪಾಲ್ಗೊಳ್ಳುವುದು ಅಸಾಧ್ಯವೆಂದು ತಿಳಿಸಿತ್ತು.

    ಉಗ್ರ ದಾಳಿಯಿಂದಾಗಿ ಭಾರತ ಶೃಂಗ ಸಭೆಗೆ ಹಿಂದೆ ಸರಿದ ಬೆನ್ನಲ್ಲೇ, ಸಾರ್ಕ್ ಸದಸ್ಯ ರಾಷ್ಟ್ರಗಳಾದ ಬಾಂಗ್ಲಾದೇಶ, ಭೂತಾನ್ ಹಾಗೂ ಅಪ್ಘಾನಿಸ್ತಾನ ದೇಶಗಳು ಕೂಡ ಸಭೆಗೆ ವಿರೋಧ ವ್ಯಕ್ತಪಡಿಸಿದ್ದವು. ಹೀಗಾಗಿ ಪಾಕಿಸ್ತಾನ ಅನಿವಾರ್ಯವಾಗಿ ಶೃಂಗಸಭೆಯನ್ನು ಮುಂದೂಡಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಪಾಕ್ ವಿದೇಶಾಂಗ ಇಲಾಖೆ, ಶೃಂಗಸಭೆಯನ್ನು ಮುಂದೂಡಿದ್ದರೂ ಭವಿಷ್ಯದಲ್ಲಿ ಮತ್ತೆ ಸಭೆಯ ಆತಿಥ್ಯವನ್ನು ನಾವೇ ವಹಿಸುತ್ತೇವೆ ಎಂದು ಹೇಳಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೇಶ ನಡೆಸಲು ದುಡ್ಡಿಲ್ಲ, ನಮ್ಮನ್ನ ಬದಲಿಸಲು ದೇವರೇ ಬಿಕ್ಕಟ್ಟು ಸೃಷ್ಟಿಸಿದ್ದಾನೆ-ಇಮ್ರಾನ್ ಖಾನ್

    ದೇಶ ನಡೆಸಲು ದುಡ್ಡಿಲ್ಲ, ನಮ್ಮನ್ನ ಬದಲಿಸಲು ದೇವರೇ ಬಿಕ್ಕಟ್ಟು ಸೃಷ್ಟಿಸಿದ್ದಾನೆ-ಇಮ್ರಾನ್ ಖಾನ್

    ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಇಮ್ರಾನ್‍ಖಾನ್ ಸದ್ಯ ದೇಶದ ಆಡಳಿತ ನಡೆಸಲು ದುಡ್ಡಿಲ್ಲ ಎಂದು ಹೇಳುವ ದೇಶದ ಆರ್ಥಿಕ ಪರಿಸ್ಥಿತಿಯ ನೈಜತೆಯನ್ನು ಬಿಚ್ಚಿಟ್ಟಿದ್ದಾರೆ.

    ಇಸ್ಲಾಮಾಬಾದ್‍ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಇಮ್ರಾನ್ ಖಾನ್ ಈ ಹಿಂದಿನ ಸರ್ಕಾರ ಆಡಳಿತ ವೈಖರಿಯನ್ನು ಟೀಕೆ ಮಾಡಿದರು. ಅಲ್ಲದೇ ದೇಶಕ್ಕೆ ನಷ್ಟವನ್ನು ಉಂಟು ಮಾಡುವ ಯೋಜನೆಗಳನ್ನು ಮಾತ್ರ ಜಾರಿಗೆ ಮಾಡಲಾಗಿದೆ. ದೇಶದ ಯುವ ಜನ ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ. ದೇಶವನ್ನು ಸಾಲದ ಸುಳಿಗೆ ಸಿಲುಕಿಸಲಾಗಿದೆ. ಸದ್ಯ ಸರ್ಕಾರ ಈ ಸಾಲದ ಸುಳಿಯಿಂದ ಹೊರ ಬರಲು ಪ್ರಯತ್ನಿಸಬೇಕಿದೆ. ಇದಕ್ಕಾಗಿ ನಮ್ಮನ್ನು ನಾವು ಬದಲಾಯಿಸಿಕೊಳ್ಳುವ ಮೂಲಕ ದೇಶದ ಸ್ಥಿತಿಯನ್ನು ಬದಲಿಸಬೇಕಿದೆ ಎಂದು ಹೇಳಿದರು.

    ಸರ್ಕಾರ ಜನರ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆ. ಹಾಗೆಯೇ ಜನರು ಸರ್ಕಾರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಜನರು ಸರ್ಕಾರ ಒಟ್ಟಾಗಿ ನಡೆದರೆ ಸಮಸ್ಯೆ ಬಗೆಹರಿಸಬಹುದು. ನಮ್ಮನ್ನು ನಾವು ಬದಲಾಯಿಸಿಕೊಳ್ಳಲು ದೇವರೇ ಈ ಬಿಕ್ಕಟ್ಟನ್ನು ಸೃಷ್ಟಿ ಮಾಡಿರಬಹುದು ಎಂದು ತಿಳಿಸಿದರು.

    ಇದೇ ವೇಳೆ ತಮ್ಮ ಸ್ನೇಹಿತ ಉದಾಹರಣೆ ನೀಡಿರುವ ಇಮ್ರಾನ್ ಖಾನ್, ನನ್ನ ಕಾಲೇಜು ದಿನಗಳಲ್ಲಿ ತರಗತಿಯಲ್ಲಿ ಮೊದಲು ಬರುತ್ತಿದ್ದ ಗೆಳೆಯನ್ನು ಭೇಟಿ ಮಾಡಿದ್ದೆ. ಆತ ಸದ್ಯ ನಾಗರಿಕ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ ತನ್ನ ಮಕ್ಕಳ ಶಾಲೆಯ ಶುಲ್ಕ ಭರಿಸಲು ಕಷ್ಟಪಡುತ್ತಿದ್ದಾನೆ ಎಂದು ಹೇಳಿದರು. ಅಲ್ಲದೇ ಸರ್ಕಾರಿ ಅಧಿಕಾರಿಗಳು ಕೂಡ ಜನರ ಕಷ್ಟ ನಿವಾರಿಸಲು ಶ್ರಮಿಸಬೇಕು ಎಂದು ಮನವಿ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಷ್ಟ್ರೀಯ ಸಮಾರಂಭದಲ್ಲಿ ತಂಬಾಕು ಸೇವಿಸಿ ಸಿಕ್ಕಿಬಿದ್ದ ಅಫ್ರಿದಿ

    ರಾಷ್ಟ್ರೀಯ ಸಮಾರಂಭದಲ್ಲಿ ತಂಬಾಕು ಸೇವಿಸಿ ಸಿಕ್ಕಿಬಿದ್ದ ಅಫ್ರಿದಿ

    ಇಸ್ಲಾಮಾಬಾದ್: ಕ್ರಿಕೆಟ್ ವೃತ್ತಿ ಜೀವನದಲ್ಲಿ ಹಲವು ಬಾರಿ ವಿವಾದಕ್ಕೆ ಗುರಿಯಾಗಿದ್ದ ಪಾಕ್ ಮಾಜಿ ಆಟಗಾರ ಶಾಹಿದ್ ಅಫ್ರಿದಿ ನಿವೃತ್ತಿಯ ಬಳಿಕವೂ ತಮ್ಮ ಚಾಳಿಯನ್ನು ಮುಂದುವರೆಸಿದ್ದಾರೆ.

    ಪಾಕಿಸ್ತಾನದ ರಕ್ಷಣಾ ದಿವಸ್ ಕಾರ್ಯಕ್ರಮ ಸೆ.6 ರ ಗುರುವಾರದಂದು ರಾವಲ್ಪಿಂಡಿಯಲ್ಲಿ ಏರ್ಪಡಿಸಲಾಗಿತ್ತು. ಈ ಸಮಾರಂಭದಲ್ಲಿ ಭಾಗವಹಿಸಿದ್ದ ವೇಳೆ ಅಫ್ರಿದಿ ಯಾರಿಗೂ ತಿಳಿದಂತೆ ತಂಬಾಕು ಸೇವನೆ ಮಾಡಿ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದ್ದಾರೆ. ಕಾರ್ಯಕ್ರಮದಲ್ಲಿ ಪಾಕ್ ನೂತನ ಪ್ರಧಾನಿ ಇಮ್ರಾನ್ ಖಾನ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

    https://twitter.com/babarbinatta/status/1037726413959450624

    ಅಫ್ರಿದಿ ತಂಬಾಕು ಸೇವಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಕಾರ್ಯಕ್ರಮದಲ್ಲಿ ಗಣ್ಯರೊಂದಿಗೆ ಕುಳಿತಿದ್ದ ಅಫ್ರಿದಿ ತಮ್ಮ ಜೇಬಿನಿಂದ ತಂಬಾಕು ತಗೆದು ಯಾರಿಗೂ ತಿಳಿಯದಂತೆ ಸೇವಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದಂತೆ ಟ್ವೀಟಿಗರು ಅಫ್ರಿದಿಯನ್ನು ಟ್ರೋಲ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    ಪಾಕಿಸ್ತಾನದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಅಫ್ರಿದಿಯ ವಿಡಿಯೋ ನೋಡಿದವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ರಕ್ಷಣಾ ಕಾರ್ಯಕ್ರಮದಲ್ಲಿ ಉನ್ನತ ರಕ್ಷಣಾ ಅಧಿಕಾರಿಗಳು ಹಾಗೂ ಪೊಲೀಸರ ಪಕ್ಕದಲ್ಲೇ ಕುಳಿತು ಅಫ್ರಿದಿ ಈ ರೀತಿ ವರ್ತಿಸಿದ್ದ ವಿರುದ್ಧ ಬೇಸರ ವ್ಯಕ್ತಪಡಿಸಿ ಕಿಡಿಕಾರಿದ್ದಾರೆ. ಕೆಲವರು ಅಫ್ರಿದಿ ಕಾಲೆಳೆದು ರೀ ಟ್ವೀಟ್ ಮಾಡಿದ್ದಾರೆ.

  • ಅಪ್ಪಿಕೊಂಡು ಕಿಸ್ ಮಾಡ್ತಿದ್ದ ಜೋಡಿ ಅರೆಸ್ಟ್!

    ಅಪ್ಪಿಕೊಂಡು ಕಿಸ್ ಮಾಡ್ತಿದ್ದ ಜೋಡಿ ಅರೆಸ್ಟ್!

    ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‍ನ ಸಾರ್ವಜನಿಕ ಸ್ಥಳದಲ್ಲಿ ಕಾರು ನಿಲ್ಲಿಸಿ, ಅಪ್ಪಿಕೊಂಡು ಕಿಸ್ ಮಾಡುತ್ತಿದ್ದ ಜೋಡಿಯನ್ನು ಪೊಲೀಸರು ಬಂಧಿಸಿದ್ದಾರೆ.

    ರವಿವಾರ 18 ರಿಂದ 19 ವರ್ಷದ ಜೊಡಿ, ಇಸ್ಲಾಮಾಬಾದ್ ನಗರದ ಮಧ್ಯದ ಪ್ರದೇಶವೊಂದರಲ್ಲಿ ಕಾರು ನಿಲ್ಲಿಸಿ, ಅದರಲ್ಲಿ ಕುಳಿತು ತಬ್ಬಿಕೊಂಡು ಮುತ್ತು ಕೊಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದರೂ, ಗಮನಿಸದ ಜೋಡಿ ತಮ್ಮ ಕಾರ್ಯದಲ್ಲಿಯೇ ನಿರತರಾಗಿದ್ದರು.

    ಸಾರ್ವಜನಿಕರಲ್ಲಿ ಅಶೀಲವಾಗಿ ನಡೆದುಕೊಂಡ ಕಾಯ್ದೆ ಅಡಿ ಜೋಡಿಗಳ ಮೇಲೆ ಪ್ರಕರಣ ದಾಖಲಿಸಿ, ಇಸ್ಲಾಮಾಬಾದ್ ನಲ್ಲಿರುವ ಕರಾಚಿ ಕಂಪೆನಿ ಠಾಣೆ ಪೊಲೀಸರು ಬಂಧಿಸಿದ್ದರು. ಈಗ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಆರೋಪ ಸಾಬೀತಾದರೆ ಅವರಿಗೆ 3 ತಿಂಗಳ ಜೈಲು, ಇಲ್ಲವೇ ದಂಡ, ಅಥವಾ ಎರಡನ್ನು ನ್ಯಾಯಾಲಯ ವಿಧಿಸಬಹುದು.

    ಪಾಕಿಸ್ತಾನ ಬಹುಸಂಖ್ಯಾತ ಮುಸ್ಲಿಂ ರಾಷ್ಟ್ರವಾಗಿದ್ದು, ಪಾರ್ಕ್, ಮಳಿಗೆಗಳಿಗೆ ಭೇಟಿ ನೀಡುವ ಯುವ ಜೋಡಿಗಳಿಗೆ ಪೊಲೀಸರು ತೊಂದರೆ ಕೊಡುತ್ತಿದ್ದಾರೆ ಎಂದು ವರದಿಯಾಗಿದೆ. ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವ ಜೋಡಿಗಳ ಮೇಲೆ ದೌರ್ಜನ್ಯ ಎಸಗಿ ಸುಲಿಗೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಹಲವು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಭಾರತ ರಾಯಭಾರಿಯಿಂದ ಇಮ್ರಾನ್ ಖಾನ್‍ಗೆ ಗಿಫ್ಟ್!

    ಭಾರತ ರಾಯಭಾರಿಯಿಂದ ಇಮ್ರಾನ್ ಖಾನ್‍ಗೆ ಗಿಫ್ಟ್!

    ಇಸ್ಲಾಮಾಬಾದ್: ಭಾರತದ ಪಾಕ್ ರಾಯಭಾರಿ ಅಜಯ್ ಬಿಸಾರಿಯಾ ಅವರು ಪಾಕಿಸ್ತಾನದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಪಾಕಿಸ್ತಾನ್ ತೆಹ್ರೇಕ್ ಇ ಇಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ರನ್ನು ಭೇಟಿ ಮಾಡಿ ಟೀಂ ಇಂಡಿಯಾ ಆಟಗಾರರು ಸಹಿ ಮಾಡಿದ ಕ್ರಿಕೆಟ್ ಬ್ಯಾಟನ್ನು ಕಾಣಿಕೆಯಾಗಿ ನೀಡಿದ್ದಾರೆ.

    ಭಾರತದ ಹೈ ಕಮಿಷನರ್ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಶುಕ್ರವಾರ ಇಮ್ರಾನ್ ಖಾನ್ ರನ್ನು ಭೇಟಿ ಮಾಡಿ ಎರಡು ದೇಶಗಳ ನಡುವಿನ ಸಹಕಾರ ವೃದ್ಧಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಭೇಟಿಯ ವೇಳೆ ನೆನಪಿನ ಕಾಣಿಕೆಯಾಗಿ ಬ್ಯಾಟ್ ನೀಡಿದ್ದಾರೆ.

    ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೇಕ್ ಇ ಇಸಾಫ್ ಪಕ್ಷ ಜುಲೈ 25 ರಂದು ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆಗಸ್ಟ್ 18 ರಂದು ಪಾಕಿಸ್ತಾನದ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಿಟಿಐ ಪಕ್ಷದ ಮೂಲಗಳು ಮಾಹಿತಿ ನೀಡಿದೆ. ಅಲ್ಲದೇ ಟೀಂ ಇಂಡಿಯಾ ಮಾಜಿ ಆಟಗಾರರದ ಕಪಿಲ್ ದೇವ್, ನವಜೋಥ್ ಸಿಂಗ್ ಸಿಧು ಹಾಗೂ ಸುನೀಲ್ ಗವಾಸ್ಕರ್ ಅವರಿಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

    65 ವರ್ಷದ ಇಮ್ರಾನ್ ಖಾನ್ ಪಾಕ್ ಕ್ರಿಕೆಟ್ ತಂಡದ ನಾಯಕರಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು, ಬಳಿಕ ರಾಜಕೀಯಕ್ಕೆ ಪ್ರವೇಶ ನೀಡಿ ತಮ್ಮದೇ ಪಕ್ಷವನ್ನು ಸ್ಥಾಪಿಸಿದ್ದರು. ಹಲವು ಏಳುಬೀಳುಗಳ ಬಳಿಕ ಈ ಬಾರಿಯ ಚುನಾವಣೆಯಲ್ಲಿ ಪಕ್ಷವೂ ಬಹುದೊಡ್ಡ ಸಂಖ್ಯೆಯಲ್ಲಿ ಸ್ಥಾನ ಗಳಿಸಿತ್ತು. ಈ ವೇಳೆ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ ಇಮ್ರಾನ್ ಖಾನ್ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಹಕಾರ ವೃದ್ಧಿ ಹೆಚ್ಚಿನಗೆ ಒತ್ತು ನೀಡಲಾಗವುದು ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಪತಿಯ ಗುಂಡೇಟಿಗೆ ಖ್ಯಾತ ನಟಿ, ಗಾಯಕಿ ಬಲಿ!

    ಪತಿಯ ಗುಂಡೇಟಿಗೆ ಖ್ಯಾತ ನಟಿ, ಗಾಯಕಿ ಬಲಿ!

    ಇಸ್ಲಾಮಾಬಾದ್: ಪತಿಯ ಗುಂಡೇಟಿಗೆ ಪಾಕಿಸ್ತಾನದ ಖ್ಯಾತ ನಟಿ ಹಾಗೂ ಗಾಯಕಿ ರೇಷ್ಮಾ ಬಲಿಯಾದ ಘಟನೆ ಪಾಕಿಸ್ತಾನದ ಖೈಬರ್ ಫಕ್ತುಂಖ್ವಾದಲ್ಲಿ ನಡೆದಿದೆ.

    ರೇಷ್ಮಾ ಪತಿಯ ನಾಲ್ಕನೇ ಪತ್ನಿಯಾಗಿದ್ದು, ತನ್ನ ಸಹೋದರನ ಜೊತೆ ಹಾಕಿಮ್‍ಬಾದ್‍ನಲ್ಲಿ ವಾಸಿಸುತ್ತಿದ್ದಳು. ಅಲ್ಲಿಗೆ ಬಂದ ಪತಿ ರೇಷ್ಮಾ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಪಾಕಿಸ್ತಾನದ ಮಾಧ್ಯಮಗಳಲ್ಲಿ ವರದಿಯಾಗಿದೆ.

    ರೇಷ್ಮಾ ಹಾಗೂ ಪತಿಯ ನಡುವೆ ಮೈಮನಸ್ಸು ಉಂಟಾಗಿತ್ತು. ಈ ಕಾರಣದಿಂದಾಗಿ ರೇಷ್ಮಾ ತನ್ನ ಸಹೋದರನ ಮನೆಯಲ್ಲೇ ವಾಸಿಸುತ್ತಿದ್ದಳು. ನಂತರ ಅಲ್ಲಿಗೆ ಬಂದ ಪತಿ ರೇಷ್ಮಾ ಮೇಲೆ ಗುಂಡು ಹಾರಿಸಿದ್ದಾನೆ. ಅಲ್ಲದೇ ಅಲ್ಲಿಂದ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.

    ರೇಷ್ಮಾ ‘ಪಾಶ್ತೋ’ ಹಾಡಿನಿಂದ ಹೆಚ್ಚು ಜನಪ್ರಿಯಗೊಂಡಿದ್ದು, ‘ಜೋಬಲ್ ಗೋಲುನಾ’ ಚಿತ್ರದಲ್ಲಿ ನಟಿಸಿದ್ದರು. ಪಾಕಿಸ್ತಾನದ ಖೈಬರ್ ಫಕ್ತುಂಖ್ವಾದಲ್ಲಿ ಮಹಿಳಾ ಕಲಾವಿದರ ಮೇಲೆ ನಡೆಯುತ್ತಿರುವ ಹಿಂಸಾಚಾರದ 15ನೇ ಪ್ರಕರಣ ಇದಾಗಿದ್ದು, ಈ ಹಿಂದೆ ಫೆಬ್ರವರಿ 3 ರಂದು ವೇದಿಕೆಯ ನಟಿ ಸನ್ಬುಲ್ ರನ್ನು ಗುಂಡು ಹಾರಿಸಲಾಯಿತ್ತು.

     

  • ಇಮ್ರಾನ್ ಖಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿದೇಶಿ ನಾಯಕರಿಗೆ ಆಹ್ವಾನವಿಲ್ಲ

    ಇಮ್ರಾನ್ ಖಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿದೇಶಿ ನಾಯಕರಿಗೆ ಆಹ್ವಾನವಿಲ್ಲ

    ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ಕೆ ಮೋದಿ ಸೇರಿದಂತೆ ಯಾವುದೇ ಅಂತರಾಷ್ಟ್ರೀಯ ನಾಯಕರಿಗೆ ಆಹ್ವಾನ ನೀಡಿಲ್ಲ ಎಂದು ತೆಹ್ರಿಕ್- ಇ-ಇನ್ಸಾಫ್ (ಪಿಟಿಐ) ಪಕ್ಷ ಸ್ಪಷ್ಟಪಡಿಸಿದೆ.

    ಕಳೆದ ಕೆಲ ದಿನಗಳ ಹಿಂದೆ ಭಾರತ ಪ್ರಧಾನಿ ಮೋದಿ ಸೇರಿದಂತೆ ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರಿ ಸಂಘದ (ಸಾರ್ಕ್) ರಾಷ್ಟ್ರಗಳ ಎಲ್ಲಾ ನಾಯಕರಿಗೆ ಆಗಸ್ಟ್ 11 ರಂದು ನಡೆಯುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗುತ್ತದೆ ಎಂದು ವರದಿಯಾಗಿತ್ತು. ಆದರೆ ಸದ್ಯ ಈ ವರದಿಯನ್ನು ತಿರಸ್ಕರಿಸಲಾಗಿದ್ದು, ಭದ್ರತೆಯ ಕಾರಣದಿಂದ ಯಾವುದೇ ನಾಯಕರಿಗೆ ಆಹ್ವಾನ ನೀಡಿಲ್ಲ ಎಂಬ ಮಾಹಿತಿ ಲಭಿಸಿದೆ.

    ಇಮ್ರಾನ್ ಖಾನ್ ಮುಂದಾಳತ್ವದ ತೆಹ್ರಿಕ್- ಇ-ಇನ್ಸಾಫ್ ಪಕ್ಷದ ವಕ್ತಾರರು ಭಾರತದ ಕಪಿಲ್ ದೇವ್, ನಟ ಅಮೀರ್ ಖಾನ್, ಸುನೀಲ್ ಗವಾಸ್ಕರ್ ಸೇರಿದಂತೆ ನವಜೋತ್ ಸಿಂಗ್ ಸಿದ್ದು ಅವರಿಗೆ ಆಹ್ವಾನ ನೀಡಲಾಗುತ್ತದೆ ಎಂದು ತಿಳಿಸಿದ್ದರು. ಆದರೆ ಸದ್ಯ ಪಿಟಿಐ ಹಿರಿಯಾ ನಾಯಕ ಫೈಸಲ್ ಜಾವೇದ್ ನಾವು ಯಾವುದೇ ಸ್ಟಾರ್ ಅಥವಾ ರಾಜಕೀಯ ನಾಯಕರಿಗೆ ಆಹ್ವಾನ ನೀಡಿಲ್ಲ. ಸಮಾರಂಭದಲ್ಲಿ ಕೇವಲ ದೇಶದ ನಾಯಕರಷ್ಟೇ ಭಾಗವಹಿಸುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಈ ಹಿಂದೆ ಪಿಟಿಐ ವಕ್ತಾರರೊಬ್ಬರು ವಿದೇಶಿ ನಾಯಕರು ಸೇರಿದಂತೆ ಕೆಲ ಸ್ಟಾರ್ ಗಳಿಗೆ ಆಹ್ವಾನ ನೀಡಿದ್ದಾಗಿ ಹೇಳಿದ್ದರು.

    ಬಹುದೊಡ್ಡ ಸಮಾರಂಭ ಮಾಡುವುದರಿಂದ ಜನರ ತೆರಿಗೆ ಹಣ ವ್ಯರ್ಥವಾಗುತ್ತದೆ. ಅದ್ದರಿಂದ ಸರಳ ಸಮಾರಂಭ ಮಾಡುತ್ತೇವೆ ಎಂದು ಪಿಟಿಐ ಮುಖಂಡರೊಬ್ಬರು ಹೇಳಿದ್ದಾರೆ. ಈ ಹಿಂದೆ ಚುನಾವಣೆ ಸಮಯದಲ್ಲಿ ಇಮ್ರಾನ್ ಖಾನ್ ಅನಗತ್ಯ ದುಂದುವೆಚ್ಚ ಮಾಡುವುದಿಲ್ಲ. ಅಲ್ಲದೇ ಪ್ರಧಾನಿ ನಿವಾಸವನ್ನು ಬಳಕೆ ಮಾಡುವುದಿಲ್ಲ ಎಂದು ಭಾಷಣವೊಂದರಲ್ಲಿ ತಿಳಿಸಿದ್ದರು.

    ಇಮ್ರಾನ್ ರ ಈ ಹೇಳಿಕೆಯನ್ನು ಅಲ್ಲಗೆಳೆದಿರುವ ಪಾಕ್ ಮಾಧ್ಯಮಗಳು ಪ್ರಧಾನಿ ನಿವಾಸಿದಲ್ಲಿ ಸರಿಯಾದ ರಕ್ಷಣಾ ವ್ಯವಸ್ಥೆ ಇಲ್ಲದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿ ಮಾಡಿದೆ. ಅಲ್ಲದೇ ಪ್ರಮಾಣ ವಚನ ಸಮಾರಂಭಕ್ಕೆ ಗಣ್ಯರಿಗೆ ಆಹ್ವಾನ ನೀಡದಿರಲು ಭದ್ರತೆಯ ಕೊರತೆಯೇ ಪ್ರಮುಖ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

    ಜುಲೈ 25ರಂದು ನಡೆದ ಪಾಕಿಸ್ತಾನ ನಡೆದ ಸಂಸತ್ ಚುನಾವಣೆಯಲ್ಲಿ ಪಿಟಿಐ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಈ ವೇಳೆ ನರೇಂದ್ರ ಮೋದಿ, ಇಮ್ರಾನ್ ಖಾನ್‍ಗೆ ಫೋನ್ ಕರೆ ಮಾಡಿ ವಿಜಯೋತ್ಸವದ ಶುಭಾಶಯ ತಿಳಿಸಿದ್ದರು. ಇದಕ್ಕೂ ಮುನ್ನ ಮಾತನಾಡಿದ ಇಮ್ರಾನ್ ಖಾನ್ ಅವರು, ದ್ವಿಪಕ್ಷೀಯ ನಿಟ್ಟಿನಲ್ಲಿ ಭಾರತ ಹಾಗೂ ಪಾಕಿಸ್ತಾನ ಒಟ್ಟಿಗೆ ಕೆಲಸ ಮಾಡಿ, ಹೊಸ ಅಧ್ಯಾಯ ಬರೆಯಬೇಕು ಎಂದು ಹೇಳಿದ್ದರು.

    2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರಮಾಣವಚನ ಕಾರ್ಯಕ್ರಮಕ್ಕೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಅವರನ್ನು ಆಹ್ವಾನಿಸಿದ್ದರು.

  • ನವಾಜ್ ಷರೀಫ್, ಪುತ್ರಿ ಬಂಧನಕ್ಕೆ ಲಾಹೋರ್ ವಿಮಾನ ನಿಲ್ದಾಣದಲ್ಲಿ ಭಾರೀ ಸಿದ್ಧತೆ!

    ನವಾಜ್ ಷರೀಫ್, ಪುತ್ರಿ ಬಂಧನಕ್ಕೆ ಲಾಹೋರ್ ವಿಮಾನ ನಿಲ್ದಾಣದಲ್ಲಿ ಭಾರೀ ಸಿದ್ಧತೆ!

    ಲಾಹೋರ್: ಪನಾಮಾ ಪೇಪರ್ಸ್ ಹಗರಣದಲ್ಲಿ 7 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ ಲಂಡನ್‍ನಿಂದ ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ಏರ್ ಫೋರ್ಟ್‍ನಲ್ಲೇ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ.

    ಲಂಡನ್ ನಿಂದ ಲಾಹೋರ್ ಗೆ ಶುಕ್ರವಾರ ಸಂಜೆ ವೇಳಗೆ ನವಾಜ್ ಷರೀಫ್ ಪುತ್ರಿ ಮಾರಿಯಾಮ್ ಜೊತೆ ಆಗಮಿಸುತ್ತಿದ್ದು, ಈ ವೇಳೆ ಸ್ವಾಗರ ಕೋರಿ ಬೆಂಬಲಿಗರು ಮೆರವಣಿಗೆ ನಡೆಸುವ ಸಾಧ್ಯತೆಯಿರುವುದರಿಂದ ಎಚ್ಚರಿಕೆ ವಹಿಸಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾಗಿ ಮಾಧ್ಯಮಗಳು ವರದಿ ಮಾಡಿದೆ. ಭದ್ರತೆಗೆ 10 ಸಾವಿರ ಪೊಲೀಸ್ ನಿಯೋಜನೆ ಮಾಡಲಾಗಿದ್ದು, ಬಂಧನದ ಬಳಿಕ ಹೆಲಿಕಾಪ್ಟರ್ ಮೂಲಕ ಇಸ್ಲಾಮಾಬಾದ್ ನ ಅದೀಲಾ ಜೈಲಿಗೆ ಕರೆದ್ಯೊಯುವ ಸಾಧ್ಯತೆ ಇದೆ.

    ಪಾಕಿಸ್ತಾನ ಸುಪ್ರೀಂಕೋರ್ಟ್ ನವಾಜ್ ಷರೀಫ್ ದೋಷಿ ಎಂದು 2017ರ ಜುಲೈ 28 ರಂದು ತೀರ್ಪು ನೀಡಿತ್ತು. ಅಲ್ಲದೇ ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯಲು ನವಾಜ್ ಷರೀಫ್ ಅರ್ಹರಲ್ಲ ಎಂದು ತನ್ನ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ಬಳಿಕ ಈ ವೇಳೆ ಶರೀಫ್ ತಮ್ಮ ಹುದ್ದೆ ತೋರೆದು ಅನಾರೋಗ್ಯದ ಕಾರಣ ಕೆಲ ದಿನಗಳ ಹಿಂದೆ ಲಂಡನ್ ಗೆ ತೆರಳಿದ್ದರು.

    2017ರ ಜುಲೈನಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಎಂದು ನವಾಜ್ ಷರೀಫ್ ವಿರುದ್ಧ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ನಂತರ ಕಳೆದ ವಾರ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, ಲಂಡನ್‍ನಲ್ಲಿ ಐಷಾರಾಮಿ ಬಂಗಲೆ ಸೇರಿದಂತೆ ಅಕ್ರಮ ಆಸ್ತಿ ಖರೀದಿಸಿದ್ದ ಆರೋಪದ ಮೇರೆಗೆ ನವಾಜ್ ಷರೀಫ್‍ಗೆ 10 ವರ್ಷ ಜೈಲು ಶಿಕ್ಷೆ ಮತ್ತು ಪನಾಮ ಹಗರಣದಲ್ಲಿ ಪುತ್ರಿ ಮರಿಯಮ್ ನವಾಜ್‍ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.

    ಏನಿದು ಪ್ರಕರಣ?
    ಪನಾಮ ಪೇಪರ್ ಹೊರ ಹಾಕಿರುವ ಮಾಹಿತಿ ಆಧಾರವನ್ನು ಇಟ್ಟುಕೊಂಡು ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್ ಪಕ್ಷದ ಮುಖ್ಯಸ್ಥ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಸುಪ್ರೀಂಕೋರ್ಟ್ ನಲ್ಲಿ ಷರೀಫ್ ವಿರುದ್ಧ ಕೇಸ್ ದಾಖಲಿಸಿದ್ದರು. ಏಪ್ರಿಲ್ ನಲ್ಲಿ ಸುಪ್ರೀಂ ಕೋರ್ಟ್ ಪ್ರಧಾನಿ ಷರೀಫ್ ಹಾಗೂ ಭ್ರಷ್ಟಾಚಾರದ ಪ್ರಕರಣದ ಕುರಿತು ಜಂಟಿ ತನಿಖಾ ತಂಡ(ಜೆಐಟಿ) ತನಿಖೆ ನಡೆಸುವಂತೆ ಆದೇಶಿಸಿತ್ತು. ಷರೀಫ್ ಲಂಡನ್ ನಲ್ಲಿ 2 ಬೇನಾಮಿ ಆಸ್ತಿ ಹೊಂದಿದ್ದಾರೆ ಎಂದು ಜೆಐಟಿ ವರದಿ ನೀಡಿತ್ತು. ಆದರೆ ಷರೀಫ್ ಅವರು ನನ್ನ ಮೇಲಿರುವ ಆರೋಪಗಳು ಎಲ್ಲ ಸುಳ್ಳು, ಯಾವುದೇ ಸಾಕ್ಷ್ಯಧಾರಗಳು ಇಲ್ಲ ಎಂದು ವಾದಿಸಿದ್ದರು.

    ಏನಿದು ಪನಾಮ ಪೇಪರ್ ಕೇಸ್?
    ಅಂತಾರಾಷ್ಟ್ರೀಯ ತನಿಖಾ ಪತ್ರಕರ್ತರ ಒಕ್ಕೂಟ (ಐಸಿಐಜೆ) ಎಂಬ ಅಮೆರಿಕ ಮೂಲದ ಸರ್ಕಾರೇತರ ಸಂಘಟನೆಯೊಂದು `ಪನಾಮ ಪೇಪರ್’ ಹೆಸರಿನಲ್ಲಿ ದಾಖಲೆಗಳನ್ನು 2015ರ ಏಪ್ರಿಲ್ ನಲ್ಲಿ ಬಿಡುಗಡೆ ಮಾಡಿತ್ತು. ಪನಾಮ ಮೂಲದ ಕಾನೂನು ಸೇವಾ ಕಂಪನಿ ಮೊಸ್ಸಾಕ್ ಫೋನ್ಸೆಕಾದಿಂದ ಗುಪ್ತವಾಗಿ ಪಡೆದಿದ್ದ ಮಾಹಿತಿಗಳನ್ನು ಐಸಿಐಜೆ ಬಿಡುಗಡೆ ಮಾಡಿತ್ತು. ವಿಶ್ವದ ಸುಮಾರು 12 ವಿವಿಧ ಈಗಿನ ಮತ್ತು ಮಾಜಿ ನಾಯಕರು, 128 ವಿವಿಧ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು, ಸಿನಿಮಾ ಸೆಲೆಬ್ರಿಟಿಗಳು ವಿವಿಧ ಕಡೆ ಹಣವನ್ನು ಸಂಗ್ರಹಿಸಿದ್ದ ಮಾಹಿತಿ ಈ ವರದಿಯಲ್ಲಿತ್ತು. 1977 ರಿಂದ 2015 ರವರೆಗೆ 40 ವರ್ಷದ ಅವಧಿಯ ಮಾಹಿತಿಗಳು, 2.14 ಲಕ್ಷ ವಿದೇಶಿ ಸಂಸ್ಥೆಗಳ ಮಾಹಿತಿಗಳು ಇದರಲ್ಲಿತ್ತು.

  • ಮಾಲ್ ನಲ್ಲಿ ಯುವಕನ ಡ್ಯಾನ್ಸ್ ಗೆ ಜನ ಫುಲ್ ಫಿದಾ: ವಿಡಿಯೋ ವೈರಲ್

    ಮಾಲ್ ನಲ್ಲಿ ಯುವಕನ ಡ್ಯಾನ್ಸ್ ಗೆ ಜನ ಫುಲ್ ಫಿದಾ: ವಿಡಿಯೋ ವೈರಲ್

    ಇಸ್ಲಾಮಾಬಾದ್: ಕರಾಚಿ ಮಾಲ್‍ವೊಂದರಲ್ಲಿ ಪಂಜಾಬಿ ಹಾಡಿಗೆ ಪಾಕಿಸ್ತಾನಿ ಯುವಕನೊಬ್ಬ ಸಖತ್ ಸ್ಟೆಪ್ಸ್ ಹಾಕಿರುವ ವಿಡಿಯೋ ಫೇಸ್‍ಬುಕ್ ನಲ್ಲಿ ವೈರಲ್ ಆಗಿದ್ದು ಸಾಕಷ್ಟು ಜನರ ಮೆಚ್ಚುಗೆಯನ್ನ ಪಡೆದಿದೆ.

    ಪಾಕಿಸ್ತಾನಿ ಮೂಲದ ಮೆಹರೋಜ್ ಬೇಗ್ ಬೇಬಿ ಪಿಂಕ್ ಶರ್ಟ್ ಹಾಗೂ ಕಪ್ಪು ಪ್ಯಾಂಟ್ ಧರಿಸಿಕೊಂಡು ಹೈಪಸ್ರ್ಟಾರ್ ಮಾಲ್‍ವೊಂದರಲ್ಲಿ ‘ಲಾಂಗ್ ಲಾಚಿ’ ಎಂಬ ಪಂಜಾಬಿ ಹಾಡಿಗೆ ಕುಣಿದ ವಿಡಿಯೋ ವೈರಲ್ ಆಗಿ ಸುಮಾರು 6.8 ಲಕ್ಷಕ್ಕೂ ವೀಕ್ಷಣೆಯನ್ನ ಪಡೆದುಕೊಂಡಿದೆ.

    ಅವರು ಪೊಸ್ಟ್ ಮಾಡಿರುವ ಶೀರ್ಷಿಕೆಯನ್ನ ನೋಡಿದರೆ ಡ್ಯಾನ್ಸ್ ಪ್ರದರ್ಶನವು ಒಂದು ಧೈರ್ಯದ ಮಾತು ಎಂಬುದು ತಿಳಿದಿದೆ. ಒಬ್ಬ ವಿದ್ಯಾರ್ಥಿಯಾಗಿರುವ ಬೇಗ್ ನೃತ್ಯವನ್ನು ಎಷ್ಟು ಇಷ್ಟಪಡುತ್ತಾರೆ ಹಾಗೂ ಎಷ್ಟು ಪ್ರೀತಿಸುತ್ತಾರೆ ಎಂಬುದು ಅವರ ಫೇಸ್‍ಬುಕ್ ಪೋಸ್ಟ್ ನಿಂದ ತಿಳಿಯುತ್ತದೆ.

    ಅವರ ಈ ಸೂಪರ್ ಡ್ಯಾನ್ಸ್ ನ್ನು ವೀಕ್ಷಿಸಿದ ಜನರು ಸಾಕಷ್ಟು ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ. ಕಮೆಂಟ್ಸ್ ಇಲ್ಲಿದೆ ನೋಡಿ,

    ಫಹಾದ್ ಬಶೀರ್-” ಅದ್ಭುತ ಮೆಹರೋಝ್ ಬೇಗ್, ಪಾಕಿಸ್ತಾನದಲ್ಲಿ ಈ ರೀತಿಯ ನಡೆಯುವುದು ತುಂಬ ಸಹಜ, ಇದೇ ರೀತಿ ಎಲ್ಲರನ್ನ ಆನಂದಿಸುತ್ತ ಎಲ್ಲರಲ್ಲಿ ಸಂತೋಷವನ್ನು ಹರಡಿ”

    ಮಹೆಕ್ ನಬೀಲ್-“ಎಂತಹ ಪೋಸಿಟಿವ್ ಡ್ಯಾನ್ಸ್, ನಿಮ್ಮ ನಗು ಹಾಗೂ ಖುಷಿ ನಿಮ್ಮ ನೃತ್ಯವನ್ನ ಇನ್ನಷ್ಟು ಅದ್ಭುತಗೊಳಿಸಿದೆ. ಗುಡ್ ಜಾಬ್, ನಿಮ್ಮ ಈ ನೃತ್ಯದಿಂದ ಎಲ್ಲರೂ ಖುಷಿಪಡುತ್ತಾರೆ. ಸೂಪರ್ ಎಸ್.ಐ.ಸಿ”.

    ಸನಂ ಫಹೀಮ್-” ನಾನು ಇಲ್ಲಿಯವರೆಗೆ ಕಂಡ ಡ್ಯಾನ್ಸ್ ಗಳಲ್ಲಿ ಇದು ಅದ್ಭುತವಾದ ನೃತ್ಯ! ಹೀಗೆ ಮುಂದುವರೆಸಿ”

  • ಪಾಕ್ ವಿಧಾನಸಭಾ ಎಲೆಕ್ಷನ್ ನಲ್ಲಿ ಮೊದಲ ಬಾರಿಗೆ ಹಿಂದೂ ಮಹಿಳೆ ಸ್ಪರ್ಧೆ

    ಪಾಕ್ ವಿಧಾನಸಭಾ ಎಲೆಕ್ಷನ್ ನಲ್ಲಿ ಮೊದಲ ಬಾರಿಗೆ ಹಿಂದೂ ಮಹಿಳೆ ಸ್ಪರ್ಧೆ

    ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಾಂತೀಯ ವಿಧಾನಸಭೆ ಚುನಾವಣೆ ಇದೇ ತಿಂಗಳ 15ರಂದು ನಡೆಯಲಿದ್ದು, ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಸ್ಪರ್ಧೆ ಮಾಡುತ್ತಿದ್ದಾರೆ.

    ಸಿಂಧ್ ಪ್ರಾಂತ್ಯಕ್ಕೆ ಸೇರಿರುವ ಸುನೀತಾ ಪರ್ಮಾರ್ (31) ಅಲ್ಪಸಂಖ್ಯಾತ ಸಮುದಾಯದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಮೂಲತಃ ಮೇಘರ್ ಸಮುದಾಯಕ್ಕೆ ಸೇರಿರುವ ಸುನಿತಾ ಅವರು, ಹೆಚ್ಚು ಹಿಂದೂ ಸಮುದಾಯದ ಜನಸಂಖ್ಯೆ ಹೊಂದಿರುವ ಥಾರ್ಪಾರ್ಕರ್ ಜಿಲ್ಲೆಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ.

    ಈ ಕುರಿತು ಸುನಿತಾ ಅವರು ಸ್ಥಳೀಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ತಮ್ಮ ಕ್ಷೇತ್ರ ಜನರ ಮೂಲಭೂತ ಅಗತ್ಯತೆಗಳನ್ನು ಪೂರೈಸಲು ಈ ಹಿಂದಿನ ಸರ್ಕಾರಗಳು ವಿಫಲವಾಗಿದೆ. ಆದ್ದರಿಂದ ಜನರು ಉತ್ತಮ ಜೀವನ ನಡೆಸುವಂತೆ ಮಾಡಲು ಹಾಗೂ ಹೆಣ್ಣು ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ, ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಮಾಡಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ತಿಳಿಸಿದ್ದಾಗಿ ವರದಿಯಾಗಿದೆ.

    ಕಳೆದ ಮಾರ್ಚ್ ನಲ್ಲಿ ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮೂಲಕ ಹಿಂದೂ ದಲಿತ ಮಹಿಳೆ ಕೃಷ್ಣ ಕುಮಾರಿ ಎಂಬವರು ಮೊದಲ ಸೆನೆಟರ್ ಆಗಿ ಆಯ್ಕೆ ಆಗಿದ್ದರು.