Tag: Islamabad

  • ಗಂಭೀರ್ ನಾನು ಉತ್ತಮ ಸ್ನೇಹಿತರು, ಒಟ್ಟಿಗೆ ಊಟ ಮಾಡುತ್ತಿದ್ದೆವು- ಪಾಕ್ ಕ್ರಿಕೆಟಿಗ

    ಗಂಭೀರ್ ನಾನು ಉತ್ತಮ ಸ್ನೇಹಿತರು, ಒಟ್ಟಿಗೆ ಊಟ ಮಾಡುತ್ತಿದ್ದೆವು- ಪಾಕ್ ಕ್ರಿಕೆಟಿಗ

    ಇಸ್ಲಾಮಾಬಾದ್: ಭಾರತ ಮಾಜಿ ಆಟಗಾರ, ಬಿಜೆಪಿ ಸಂಸದ ಗೌತಮ್ ಗಂಭೀರ್ ಹಾಗೂ ನಾನು ಉತ್ತಮ ಸ್ನೇಹಿತರು. ಇಬ್ಬರು ಒಟ್ಟಿಗೆ ಕುಳಿತು ಊಟ ಮಾಡುತ್ತಿದ್ದೆವು ಎಂದು ಪಾಕಿಸ್ತಾನ ಅನುಭವಿ ವಿಕೆಟ್ ಕೀಪರ್ ಕಮ್ರಾನ್ ಅಕ್ಮಲ್ ಹೇಳಿದ್ದಾರೆ.

    ಶ್ರೀಲಂಕಾದಲ್ಲಿ 2010ರಲ್ಲಿ ನಡೆದಿದ್ದ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದ ವೇಳೆ ಪರಸ್ಪರ ಮುಖಾಮಖಿಯಾಗಿ ಅಕ್ಮಲ್, ಗಂಭೀರ್ ಜಗಳವಾಡಿದ್ದ ಘಟನೆ ಸಾಕಷ್ಟು ಮಂದಿಗೆ ನೆನಪಿರುತ್ತದೆ. ಅಂದು ಗಂಭೀರ್ ಬ್ಯಾಟಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ವಿಕೆಟ್ ಕೀಪರ್ ಆಗಿದ್ದ ಅಕ್ಮಲ್ ಅನಗತ್ಯವಾಗಿ ಅಂಪೈರ್ ಗೆ ಮನವಿ ಮಾಡುತ್ತಿದ್ದರು. ಪರಿಣಾಮ ತಾಳ್ಮೆ ಕಳೆದುಕೊಂಡ ಗಂಭೀರ್ ಅಕ್ಮಲ್‍ಗೆ ಎಚ್ಚರಿಕೆ ನೀಡಿದ್ದರು. ಇದೇ ವೇಳೆ ಅಕ್ಮಲ್ ಕೂಡ ಕೋಪಗೊಂಡ ಹಿನ್ನೆಲೆಯಲ್ಲಿ ಆನ್‍ಫೀಲ್ಡ್ ನಲ್ಲೇ ಜಗಳ ವಾಡಿದ್ದರು. ಇದೇ ಪಂದ್ಯದಲ್ಲಿ ಡ್ರಿಂಕ್ಸ್ ವೇಳೆ ಮತ್ತೊಮ್ಮೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಇತ್ತ ಮತ್ತೊಂದು ಬದಿಯಲ್ಲಿದ್ದ ನಾಯಕ ಧೋನಿ, ಗಂಭೀರ್ ಅವರಿಗೆ ಸಮಾಧಾನ ಹೇಳಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದ್ದರು. ಈ ಘಟನೆ ಕ್ರಿಕೆಟ್ ಇತಿಹಾಸದಲ್ಲಿ ಗಮನರ್ಹವಾಗಿ ಎಲ್ಲರ ನೆನಪಿನಲ್ಲಿದೆ.

    ಬಳಿಕ 2012-13ರ ಭಾರತ, ಪಾಕ್ ನಡುವೆ ಬೆಂಗಳೂರಿನಲ್ಲಿ ನಡೆದಿದ್ದ ಟಿ20 ಪಂದ್ಯದಲ್ಲಿ ಇಶಾಂತ್ ಶರ್ಮಾ, ಕಮ್ರಾನ್ ಅಕ್ಮಲ್ ವಾಗ್ವಾದ ನಡೆಸಿದ್ದರು. ಈ ಎರಡು ಘಟನೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಮ್ರಾನ್ ಅಕ್ಮಲ್, ಈ ಘಟನೆಗಳನ್ನು ಕ್ರೀಡಾಂಗಣದಲ್ಲೇ ಮರೆತು ಹೋಗಿದ್ದೇನೆ. ನನ್ನ ಹಾಗೂ ಗಂಭೀರ್, ಇಶಾಂತ್ ನಡುವೆ ಉತ್ತಮ ಸ್ನೇಹವಿದೆ. ಪಂದ್ಯದ ಸಂದರ್ಭದಲ್ಲಿ ಉಂಟಾದ ಗೊಂದಲಗಳ ಕಾರಣದಿಂದ ಜಗಳ ನಡೆದಿತ್ತು. ಗಂಭೀರ್ ನನಗೆ ಕ್ರೀಡಾಂಗಣದಲ್ಲಿ ಏನು ಹೇಳಿದರು ಎಂಬುವುದು ಅರ್ಥವಾಗದ ಕಾರಣ ಜಗಳ ನಡೆದಿತ್ತು. ಗಂಭೀರ್ ನಾನು ಉತ್ತಮ ಸ್ನೇಹಿತರಾದ ಕಾರಣ ಕ್ರಿಕೆಟ್ ಟೂರ್ನಿಗಳ ವೇಳೆ ಭೇಟಿ ಮಾಡಿ ಒಟ್ಟಿಗೆ ಊಟ ಮಾಡುತ್ತಿದ್ದೆವು. ಇಶಾಂತ್ ಜೊತೆಗಿನ ಘಟನೆಯೂ ಕೂಡ ಇಂತಹದ್ದೆ. ಇಂದಿಗೂ ನಾವು ಪರಸ್ಪರ ಗೌರವದಿಂದ ನಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.

    ಕಮ್ರಾನ್ ಅಕ್ಮಲ್ ಪಾಕಿಸ್ತಾನದ ಪರ 53 ಟೆಸ್ಟ್, 157 ಏಕದಿನ ಹಾಗೂ 58 ಟಿ20 ಪಂದ್ಯಗಳನ್ನು ಆಡಿದ್ದು, ಇತ್ತೀಚೆಗೆ ಕಮ್ರಾನ್ ಅಕ್ಮಲ್ ಸಹೋದರ ಉಮರ್ ಅಕ್ಮಲ್ ವಿರುದ್ಧ ಪಿಸಿಬಿ ಮೂರು ವರ್ಷ ನಿಷೇಧ ವಿಧಿಸಿತ್ತು. ಫಿಕ್ಸಿಂಗ್ ನಡೆಸಲು ಬುಕ್ಕಿಗಳು ಸಂಪರ್ಕ ನಡೆಸಿದ ವಿಚಾರವನ್ನು ಕ್ರಿಕೆಟ್ ಬೋರ್ಡಿಗೆ ತಿಳಿಸದ ಕಾರಣ ಪಿಸಿಬಿ ನಿಷೇಧ ವಿಧಿಸಿತ್ತು.

  • ಏಷ್ಯಾ ಕಪ್-2020ರ ಭವಿಷ್ಯ ಭಾರತ, ಪಾಕ್ ನಡುವಿನ ನಿರ್ಧಾರವಲ್ಲ: ಪಿಸಿಬಿ ಅಧ್ಯಕ್ಷ

    ಏಷ್ಯಾ ಕಪ್-2020ರ ಭವಿಷ್ಯ ಭಾರತ, ಪಾಕ್ ನಡುವಿನ ನಿರ್ಧಾರವಲ್ಲ: ಪಿಸಿಬಿ ಅಧ್ಯಕ್ಷ

    ಇಸ್ಲಾಮಾಬಾದ್: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆಯೋಜನೆಯ ಕುರಿತು ಕೇಳಿ ಬರುತ್ತಿರುವ ಸುದ್ದಿಗಳಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಎಹ್ಸಾನ್ ಮನಿ ಸ್ಪಷ್ಟನೆ ನೀಡಿದ್ದು, ಟೂರ್ನಿ ಆಯೋಜಿಸುವುದು ಅಥವಾ ಬಿಡುವುದು ಕೇವಲ ಭಾರತ-ಪಾಕಿಸ್ತಾನ ನಡುವಿನ ನಿರ್ಧಾರವಲ್ಲ ಎಂದಿದ್ದಾರೆ.

    ಎಲ್ಲವೂ ಅಂದುಕೊಂಡದಂತೆ ನಡೆದಿದ್ದರೆ ಸೆಪ್ಟೆಂಬರ್ ತಿಂಗಳಲ್ಲಿ ಯುಎಇನಲ್ಲಿ 2020ರ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆಯೋಜಿಸಲು ಪಿಸಿಬಿ ಸಿದ್ಧತೆ ನಡೆಸಬೇಕಿತ್ತು. ಆದರೆ ಕೋವಿಡ್-12 ಸೋಂಕಿನ ಪರಿಣಾಮ ಕ್ರೀಡಾ ಜಗತ್ತು ತಲ್ಲಣಿಸಿದೆ. ಈಗಾಗಲೇ ಹಲವು ಟೂರ್ನಿಗಳನ್ನು ಮುಂದೂಡಲಾಗಿದ್ದರೆ. ಮತ್ತಷ್ಟು ಟೂರ್ನಿಗಳು ರದ್ದಾಗಿದೆ. ಬಿಸಿಸಿಐ ಕೂಡ ಮಹತ್ವದ ಐಪಿಎಲ್ ಟೂರ್ನಿಯನ್ನು ನಿರ್ದಿಷ್ಟಾವಧಿಗೆ ಮುಂದೂಡಿದೆ.

    ಕೆಲ ದಿನಗಳ ಹಿಂದೆ ಏಷ್ಯಾ ಕಪ್ ಆಯೋಜನೆ ಕುರಿತು ಅನುಮಾನ ವ್ಯಕ್ತಪಡಿಸಿದ್ದ ಎಹ್ಸಾನ್ ಮನಿ, ಮಾಧ್ಯಮಗಳ ಸುದ್ದಿಗಳಿಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಟೂರ್ನಿ ಆಯೋಜನೆಯ ಕುರಿತು ಪ್ರಕಟವಾಗಿರುವ ವರದಿಗಳ ಮಾಹಿತಿ ಪಡೆದಿದ್ದೇನೆ. ಆದರೆ ಈ ವೇಳೆ ಟೂರ್ನಿಯನ್ನು ಏರ್ಪಡಿಸುವುದು ಅಥವಾ ರದ್ದು ಮಾಡುವುದು ಭಾರತ ಹಾಗೂ ಪಾಕ್ ನಡುವಿನ ನಿರ್ಧಾರವಲ್ಲ. ಟೂರ್ನಿಯಲ್ಲಿ ಪಾಲ್ಗೊಳ್ಳುವ ಇತರೆ ದೇಶಗಳು ಕೂಡ ಅಭಿಪ್ರಾಯ ತಿಳಿಸಬೇಕಿದೆ ಎಂದಿದ್ದಾರೆ.

    ಸದ್ಯದ ಪರಿಸ್ಥಿತಿಯಲ್ಲಿ ಏಷ್ಯಾ ಟೂರ್ನಿಯನ್ನು ಆಯೋಜಿಸುವುದು ಏಷ್ಯಾ ಕ್ರಿಕೆಟ್ ರಾಷ್ಟ್ರಗಳಿಗೆ ಅಗತ್ಯ. ಏಕೆಂದರೆ ಕೋವಿಡ್ ಬಳಿಕ ನಡೆಯಬೇಕಾದ ಪ್ರಮುಖ ಹಾಗೂ ಮೊದಲ ಟೂರ್ನಿ ಇದಾಗಿದೆ. ಏಷ್ಯಾ ಕ್ರಿಕೆಟ್ ಕೌನ್ಸಿಲ್‍ನಲ್ಲಿ ಸದಸ್ಯರಾಗಿರುವ ಎಲ್ಲಾ ರಾಷ್ಟ್ರಗಳಿಗೂ ಟೂರ್ನಿ ಮಹತ್ವದಾಗಿದೆ. ಟೂರ್ನಿ ಆಯೋಜಿಸುವುದು ಕೂಡ ಬಹುದೊಡ್ಡ ಸವಾಲು ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ವಿಶ್ವದಲ್ಲಿ ಉಂಟಾಗಿರುವ ಸಂದಿಗ್ಧ ಪರಿಸ್ಥಿತಿ ನಿವಾರಣೆಯಾದ ಬಳಿಕ ಯುಎಇ ಅಥವಾ ಬಾಂಗ್ಲಾದೇಶದಲ್ಲಿ ಟೂರ್ನಿ ಆಯೋಜಿಸುವ ಸಾಧ್ಯಗಳು ಇದೆ. ಕೊರೋನಾ ಅತೋಟಿಗೆ ಬಂದ ಕೂಡಲೇ ನಾವು ಟೂರ್ನಿ ಆಯೋಜಿಸಬಹುದಾಗಿದೆ. ವಿಶ್ವದ ಬೇರೆ ಬೇರೆ ರಾಷ್ಟ್ರಗಳಲ್ಲಿ ವಿಧಿಸಿರುವ ನಿರ್ಬಂಧಗಳು ನಿವಾರಣೆಯಾದ ಬಳಿಕ ಟೂರ್ನಿ ಆಯೋಜಿಸಿದರೆ ಸದಸ್ಯ ರಾಷ್ಟ್ರಗಳಿಗೆ ಆರ್ಥಿಕವಾಗಿ ಸಮರ್ಥವಾಗಲಿದೆ ಎಂದಿದ್ದಾರೆ.

    ಇದೇ ವೇಳೆ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ರದ್ದಾದರೆ ಕ್ರಿಕೆಟ್ ಸಂಸ್ಥೆಗಳಿಗೆ ಭಾರೀ ನಷ್ಟವಾಗಲಿದೆ. ಇಂತಹ ಸ್ಥಿತಿಯಲ್ಲೂ ಐಸಿಸಿ ಒಪ್ಪಂದದಂತೆ ಹಣ ಸಂದಾಯ ಮಾಡಿದೆ. ಪಾಕ್ ಕೂಡ 7ರಿಂದ 8 ಮಿಲಿಯನ್ ಮೊತ್ತವನ್ನು ಪಡೆದುಕೊಂಡಿದ್ದೇವೆ. ಸಂಸ್ಥೆ ಆರ್ಥಿಕವಾಗಿ ಸದೃಢವಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ಕ್ರೀಡಾಂಗಣದಲ್ಲಿ ಅಭಿಮಾನಿಗಳಿಲ್ಲದೇ ಟೂರ್ನಿ ನಡೆಸುವ ಐಸಿಸಿ ಚಿಂತನೆಯನ್ನು ಎಹ್ಸಾನ್ ಮನಿ ತಿರಸ್ಕರಿಸಿದ್ದಾರೆ. 2023 ರಿಂದ 2031ರ ವೇಳೆಯ ಐಸಿಸಿ ಅಂತಾರಾಷ್ಟ್ರೀಯ ಟೂರ್ನಿಗಳನ್ನು ಪಾಕ್ ನೆಲದಲ್ಲಿ ನಡೆಸುವ ಚಿಂತನೆಯೂ ಇದೆ ಎಂದಿದ್ದಾರೆ.

  • 3 ದಿನಗಳಿಂದ ವೆಂಟಿಲೇಟರ್‌ನಲ್ಲಿದ್ದ ಪಾಕ್ ಮಾಜಿ ಕ್ರಿಕೆಟಿಗ ಕೊರೊನಾಗೆ ಬಲಿ

    3 ದಿನಗಳಿಂದ ವೆಂಟಿಲೇಟರ್‌ನಲ್ಲಿದ್ದ ಪಾಕ್ ಮಾಜಿ ಕ್ರಿಕೆಟಿಗ ಕೊರೊನಾಗೆ ಬಲಿ

    – ವಿಶ್ವದಲ್ಲಿ ಮೊದಲ ಕ್ರಿಕೆಟ್ ಆಟಗಾರ ಸೋಂಕಿಗೆ ಬಲಿ

    ಇಸ್ಲಾಮಾಬಾದ್: ಕೊರೊನಾ ವೈರಸ್ ಸೋಂಕಿನಿಂದ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಜಾಫರ್ ಸರ್ಫರಾಜ್ ಮೃತಪಟ್ಟಿದ್ದಾರೆ.

    ಕೊರೊನಾ ಸೋಂಕಿಗೆ ತುತ್ತಾಗಿ ಗಂಭೀರ ಸ್ಥಿತಿ ತಲುಪಿದ್ದ ಜಾಫರ್ ಕಳೆದ ಮೂರು ದಿನಗಳಿಂದ ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ 50 ವರ್ಷದ ಜಾಫರ್ ಸರ್ಫರಾಜ್ ಪೇಶಾವರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

    ಪಾಕಿಸ್ತಾನ ಪ್ರಥಮ ದರ್ಜೆ ಕ್ರಿಕೆಟರ್ ಆಗಿದ್ದ ಜಾಫರ್ ಸರ್ಫರಾಜ್, ಪಾಕಿಸ್ತಾನದ ಅಂಡರ್-19 ಮತ್ತು ಅಂತಾರಾಷ್ಟ್ರೀಯ ಎರಡು ತಂಡಕ್ಕೂ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿಗೆ ತುತ್ತಾಗಿ ಬಳಲುತ್ತಿದ್ದರು. ಅವರನ್ನು ಪೇಶಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಅವರು ವೆಂಟಿಲೇಟರ್ ಮೇಲೆಯೇ ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದ ಮೊದಲ ಕ್ರಿಕೆಟರ್ ಆಗಿದ್ದಾರೆ.

    ಜಾಫರ್ ಸರ್ಫರಾಜ್ ಅವರು ಪಾಕಿಸ್ತಾನದ ಮಾಜಿ ಅಂತರರಾಷ್ಟ್ರೀಯ ಆಟಗಾರ ಅಖ್ತರ್ ಸರ್ಫರಾಜ್ ಅವರ ಸಹೋದರನಾಗಿದ್ದಾರೆ. ಆದರೆ ಇವರು ಕೂಡ ದೊಡ್ಡ ಕರುಳಿನ ಕ್ಯಾನ್ಸರ್ ಸಮಸ್ಯೆಯಿಂದ 10 ತಿಂಗಳ ಹಿಂದೆ ಇದೇ ಪೇಶಾವರದಲ್ಲಿ ನಿಧನ ಹೊಂದಿದ್ದರು. ಪೇಶಾವರ ನಗರದಲ್ಲಿ ಒಟ್ಟು 744 ಕೊರೊನಾ ಪ್ರಕರಣಗಳಿವೆ. ಪಾಕಿಸ್ತಾನದಲ್ಲಿ ಒಟ್ಟು 5,500 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

  • ರಹಸ್ಯ ಬಯಲಾಗುತ್ತೆಂದು ಬಾಕ್ಸ್‌ನಲ್ಲಿ ಯುವಕ ಲಾಕ್ – ಖುಷಿಯಲ್ಲಿ ಮರೆತು ಮಲಗಿದ್ಳು

    ರಹಸ್ಯ ಬಯಲಾಗುತ್ತೆಂದು ಬಾಕ್ಸ್‌ನಲ್ಲಿ ಯುವಕ ಲಾಕ್ – ಖುಷಿಯಲ್ಲಿ ಮರೆತು ಮಲಗಿದ್ಳು

    – ಸಂಬಂಧಿ ಸೋದರನೊಂದಿಗೆ ಮಹಿಳೆ ಸಂಬಂಧ
    – ಉಸಿರುಗಟ್ಟಿ ಯುವಕ ಸಾವು

    ಇಸ್ಲಾಮಾಬಾದ್: ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಯುವಕನೊಬ್ಬ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರದೇಶದಲ್ಲಿ ನಡೆದಿದೆ.

    ಅಹ್ಮದ್ (22) ಮೃತ ಯುವಕ. ಈತ ತನ್ನ ಸಂಬಂಧಿ ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದನು. ಆದರೆ ಮನೆಯವರ ಕೈಗೆ ಸಿಕ್ಕಿಬೀಳುವ ಭಯದಲ್ಲಿ ಮರದ ಬಾಕ್ಸ್‌ನಲ್ಲಿ ಅವಿತು ಕುಳಿತಿದ್ದನು. ಇದರಿಂದ ಉಸಿರುಗಟ್ಟಿ ಮೃತಪಟ್ಟಿದ್ದಾನೆ.

    ಏನಿದು ಪ್ರಕರಣ?
    ಬೀಬಿ ಕೆಲವು ವರ್ಷಗಳ ಹಿಂದೆ ಪಂಜಾಬ್ ಪ್ರದೇಶದ ಹುಡುಗನೊಂದಿಗೆ ಮದುವೆಯಾಗಿದ್ದಳು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತಿ ಉದ್ಯೋಗಕ್ಕಾಗಿ ವಿದೇಶದಲ್ಲಿದ್ದನು. ಬೇಬಿ ಮತ್ತು ಮಕ್ಕಳು ಪತಿಯ ಮನೆಯಲ್ಲಿದ್ದರು. ಅಹ್ಮದ್ ಮತ್ತು ಬೇಬಿ ಸಂಬಂಧಿಕರಾಗಿದ್ದು, ಸಂಬಂಧದಲ್ಲಿ ಸಹೋದರಿ-ಸಹೋದರ ಆಗಿದ್ದರು. ದಿನ ಕಳೆದಂತೆ ಇವರಿಬ್ಬರು ಅನೈತಿಕ ಸಂಬಂಧ ಹೊಂದಿದ್ದರು.

    ಬೇಬಿ ಅವಿಭಕ್ತ ಕುಟುಂಬದಲ್ಲಿ ವಾಸಿಸುತ್ತಿದ್ದಳು. ಹೀಗಾಗಿ ಇವರಿಬ್ಬರು ಭೇಟಿ ಮಾಡಲು ತುಂಬಾ ಕಷ್ಟವಾಗುತ್ತಿತ್ತು. ಅದಕ್ಕಾಗಿ ಮನೆಯಲ್ಲಿ ಎಲ್ಲರೂ ನಿದ್ದೆ ಮಾಡಿದ ನಂತರ ಅಹ್ಮದ್, ಬೇಬಿಯ ರೂಮಿಗೆ ಬಂದು ಅನೈತಿಕ ಸಂಬಂಧ ಹೊಂದುತ್ತಿದ್ದನು. ಪ್ರತಿದಿನ ಇದೇ ರೀತಿ ಇವರಿಬ್ಬರು ಸಂಬಂಧ ಹೊಂದುತ್ತಿದ್ದರು.

    ಒಂದು ದಿನ ಬೇಬಿಯ ರೂಮಿನಲ್ಲಿ ಏನೋ ಶಬ್ದ ಕೇಳಿಬಂದಿದೆ. ಈ ವೇಳೆ ಅಹ್ಮದ್ ಮತ್ತು ಬೇಬಿ ರೂಮಿನಲ್ಲಿದ್ದರು. ತಕ್ಷಣ ಕುಟುಂಬದ ಎಲ್ಲ ಸದಸ್ಯರು ಎಚ್ಚರಗೊಂಡು ಮನೆಯೆಲ್ಲಾ ಹುಡುಕಾಡಲು ಶುರು ಮಾಡಿದ್ದಾರೆ. ಆಗ ಬೇಬಿ ತನ್ನ ಅನೈತಿಕ ಸಂಬಂಧ ಮನೆಯವರ ಮುಂದೆ ಬಹಿರಂಗವಾಗುತ್ತದೆ ಎಂಬ ಭಯದಿಂದ ಗೆಳೆಯ ಅಹ್ಮದ್‍ನನ್ನು ಮರದ ಪೆಟ್ಟಿಗೆಯಲ್ಲಿ ಅಡಗಿಸಿದ್ದಾಳೆ. ಬೇಬಿ ರೂಮಿನಲ್ಲೂ ಹುಡುಕಾಟ ಮಾಡಿದ್ದಾರೆ. ಆದರೆ ಎಲ್ಲೂ ಪತ್ತೆಯಾಗಿಲ್ಲ. ಇತ್ತ ಬೇಬಿ ತನ್ನ ಅನೈತಿಕ ಸಂಬಂಧದ ಬಗ್ಗೆ ಯಾರಿಗೂ ಗೊತ್ತಾಗಿಲ್ಲ ಎಂಬ ಖುಷಿಯಲ್ಲಿ ಅಹ್ಮದ್‍ನ ಬಾಕ್ಸ್‌ನಲ್ಲಿ ಲಾಕ್ ಮಾಡಿರುವುದನ್ನು ಮರೆತು ಮಲಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆದರೆ ಆ ಮರದ ಬಾಕ್ಸ್‌ನಲ್ಲಿ ಒಂದು ಸಣ್ಣ ರಂಧ್ರವೂ ಇರಲಿಲ್ಲ. ಹೀಗಾಗಿ ಅಹ್ಮದ್‍ಗೆ ಉಸಿರಾಟಕ್ಕೆ ತೊಂದರೆಯಾಗಿದೆ. ಆಗ ಅಹ್ಮದ್ ಕಿರುಚಿಕೊಂಡಿದ್ದಾನೆ. ಆದರೆ ಆ ಶಬ್ದ ಬೇಬಿಗೆ ಕೇಳಿಸಲಿಲ್ಲ. ಕೊನೆಗೆ ಉಸಿರುಗಟ್ಟಿ ಅಹ್ಮದ್ ಬಾಕ್ಸ್‌ನಲ್ಲಿಯೇ ಮೃತಪಟ್ಟಿದ್ದಾನೆ. ಸ್ವಲ್ಪ ಸಮಯದ ನಂತರ ಬೇಬಿ ತಕ್ಷಣ ಬಾಕ್ಸ್‌ನಲ್ಲಿ ಅಹ್ಮದ್‍ನ ಲಾಕ್ ಮಾಡಿರುವ ಬಗ್ಗೆ ನೆನಪಾಗಿದೆ. ಓಡಿ ಹೋಗಿ ಬಾಕ್ಸ್ ಓಪನ್ ಮಾಡಿದ್ದಾಳೆ. ಅಷ್ಟರಲ್ಲಿ ಅಹ್ಮದ್ ಸಾವನ್ನಪ್ಪಿದ್ದನು.

    ಸದ್ಯಕ್ಕೆ ಈ ಕುರಿತು ಮಾಹಿತಿ ತಿಳಿದು ಪಂಜಾಬ್ ಪ್ರದೇಶದ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಹೆಂಡ್ತಿಗಾಗಿ ಒಪ್ಪಂದ ಮಾಡ್ಕೊಂಡ ಇಬ್ಬರು ಗಂಡಂದಿರು!

    ಹೆಂಡ್ತಿಗಾಗಿ ಒಪ್ಪಂದ ಮಾಡ್ಕೊಂಡ ಇಬ್ಬರು ಗಂಡಂದಿರು!

    – ಮೊದ್ಲ ಪತಿ, 4 ಮಕ್ಕಳ ಜೊತೆ ಕಳುಹಿಸಿದ 2ನೇ ಪತಿ
    – ಪೊಲೀಸರು ಮುಂದೆ ಒಪ್ಪಂದಕ್ಕೆ ಸಹಿ

    ಇಸ್ಲಾಮಾಬಾದ್: ಸಾಮಾನ್ಯವಾಗಿ ಕೆಲವರು ಇಬ್ಬರು ಪತ್ನಿಯರನ್ನು ಹೊಂದಿರುವ ಬಗ್ಗೆ ಕೇಳಿದ್ದೇವೆ. ಆದರೆ ಇಲ್ಲೊಬ್ಬ ಮಹಿಳೆ ಇಬ್ಬರು ಪತಿಯನ್ನು ಹೊಂದಿದ್ದಾಳೆ. ಇದೀಗ ಆ ಇಬ್ಬರು ಗಂಡಂದಿರು ತಮ್ಮ ಪತ್ನಿಗಾಗಿ ಒಪ್ಪಂದ ಮಾಡಿಕೊಂಡಿದ್ದಾರೆ.

    ಇಂತಹದೊಂದು ಘಟನೆ ಪಾಕಿಸ್ತಾನದ ಲಾಹೋರ್ ನಲ್ಲಿ ನಡೆದಿದೆ. ರೈವಿಂದ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ರುಬಿನಾಳನ್ನು ಆಕೆಯ ಮಾಜಿ ಪತಿಗೆ ಒಪ್ಪಿಸಿದ್ದಾರೆ. ಇದೀಗ ರುಬಿನಾ ಗರ್ಭಿಣಿಯಾಗಿದ್ದು, 2ನೇ ಪತಿ ತನ್ನ ಪತ್ನಿಯನ್ನು ಆಕೆಯ ಮೊದಲನೇ ಗಂಡನಿಗೆ ಒಪ್ಪಿಸಿದ್ದಾರೆ. ಓರ್ವ ಪತ್ನಿಗಾಗಿ ಒಪ್ಪಂದ ಮಾಡಿಕೊಂಡಿದ್ದಾರೆ. ಅಲ್ಲದೇ ತಮ್ಮ ಒಪ್ಪಂದದ ಬಗ್ಗೆ ಪೊಲೀಸ್ ಠಾಣೆಗೆ ಹೋಗಿ ಮಾಹಿತಿ ನೀಡಿದ್ದಾರೆ.

    ಏನಿದು ಪ್ರಕರಣ?
    ರುಬಿನಾ ಮತ್ತು ಮೊದಲ ಪತಿಗೆ ನಾಲ್ಕು ಮಕ್ಕಳಿದ್ದವು. ಈಗ ಎರಡನೇ ಪತಿಯ ಮಗುವಿಗೆ ರುಬಿನಾ ಗರ್ಭಿಣಿಯಾಗಿದ್ದಾಳೆ. ಆದರೆ ತನ್ನ ನಾಲ್ಕು ಮಕ್ಕಳನ್ನು ಸರಿಯಾಗಿ ನೋಡಿಕೊಂಡಿಲ್ಲ, ಕಾಳಜಿ ಮಾಡಿಲ್ಲ ಎಂದು ಚಿಂತೆ ಮಾಡುತ್ತಿದ್ದಳು. ಇದನ್ನು ನೋಡಿದ ಪತಿ ರುಬಿನಾಳನ್ನು ಖುಷಿಯಿಂದ ನೋಡಿಕೊಳ್ಳಬೇಕು ಎಂದುಕೊಂಡಿದ್ದರು. ಹೀಗಾಗಿ ಆಕೆಯನ್ನು ಮೊದಲನೇ ಪತಿಯ ಮನೆಗೆ ಕಳುಹಿಸಿದ್ದಾರೆ.

    ಪೊಲೀಸರಿಗೆ ನೀಡಿದ ಒಪ್ಪಿಗೆ ಪತ್ರದಲ್ಲಿ, ರುಬಿನಾ ಗರ್ಭಿಣಿಯಾಗಿದ್ದು ಒಪ್ಪಂದದ ಪ್ರಕಾರ ನಾನು ಯಾವಾಗ ಬೇಕಾದರೂ ಪತ್ನಿ ರುಬಿನಾಳನ್ನು ಭೇಟಿ ಮಾಡಬಹುದು. ಅಲ್ಲದೆ ಒಂದು ವರ್ಷದವರೆಗೂ ಆಕೆ ಮೊದಲನೇ ಪತಿ ಮತ್ತು ಮಕ್ಕಳ ಜೊತೆ ವಾಸಿಸುತ್ತಾಳೆ. ಈ ವೇಳೆ ಮಗುವಾದರೆ ನಾನು ಆ ಮಗುವನ್ನು ತೆಗೆದುಕೊಳ್ಳುತ್ತೇನೆ ಎಂದು ಎರಡನೇ ಪತಿ ತಿಳಿಸಿದ್ದಾರೆ.

    ಇನ್ನೂ ಮೊದಲ ಪತಿ, ಪತ್ನಿ ರುಬಿಳಾನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನಿಂದ ಸಾಧ್ಯವಿರುವ ಎಲ್ಲ ಸಂತೋಷವನ್ನು ಆಕೆಗೆ ನೀಡಲು ಪ್ರಯತ್ನಿಸುತ್ತೇನೆ. ಮಕ್ಕಳ ಬಗ್ಗೆ ಆಕೆ ಚೆನ್ನಾಗಿ ಕಾಳಜಿ ವಹಿಸುತ್ತಾಳೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದ್ದಾನೆ.

    ಇದೀಗ ಈ ಇಬ್ಬರು ಗಂಡಂದಿರು ಒಪ್ಪಂದ ಮಾಡಿಕೊಂಡಿರುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

  • ಡಿಕ್ಕಿ ಹೊಡೆದ ಬಸ್ಸನ್ನ ಎಳೆದ್ಕೊಂಡು ಹೋದ ರೈಲು – 30 ಮಂದಿ ದುರ್ಮರಣ

    ಡಿಕ್ಕಿ ಹೊಡೆದ ಬಸ್ಸನ್ನ ಎಳೆದ್ಕೊಂಡು ಹೋದ ರೈಲು – 30 ಮಂದಿ ದುರ್ಮರಣ

    – ಡಿಕ್ಕಿಯ ರಭಸಕ್ಕೆ ಬಸ್ 3 ಭಾಗ

    ಇಸ್ಲಾಮಾಬಾದ್: ರೈಲು ಮತ್ತು ಬಸ್ ನಡುವೆ ಡಿಕ್ಕಿಯಾದ ಪರಿಣಾಮ 30 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಭೀಕರ ಅಪಘಾತ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ.

    ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದ ರೋಹ್ರಿ ರೈಲ್ವೆ ನಿಲ್ದಾಣದ ಬಳಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 30 ಜನರು ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುಕ್ಕೂರ್ ಆಯುಕ್ತ ಶಫೀಕ್ ಅಹ್ಮದ್ ಮಹೇಸರ್ ಹೇಳಿದರು.

    ರೋಹ್ರಿ ರೈಲ್ವೆ ನಿಲ್ದಾಣದ ಸಮೀಪವಿರುವ ಕಂಧ್ರಾ ರೈಲ್ವೆ ಕ್ರಾಸಿಂಗ್‍ನಲ್ಲಿ ರಾವಲ್ಪಿಂಡಿಯಿಂದ ಕರಾಚಿ ಕಡೆಗೆ ಬರುತ್ತಿದ್ದ 45 ಅಪ್ ಪಾಕಿಸ್ತಾನ್ ಎಕ್ಸ್ ಪ್ರೆಸ್ ರೈಲು ಪ್ರಯಾಣಿಕರ ಬಸ್‍ಗೆ ಡಿಕ್ಕಿ ಹೊಡೆದಿದೆ. ಇನ್ನೂ ಬಸ್ಸಿನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಸುಕ್ಕೂರ್ ನಿಂದ ಪಂಜಾಬ್‍ಗೆ ಹೋಗುತ್ತಿದ್ದರು ಎಂದು ಪೊಲೀಸ್ ಅಧಿಕಾರಿ ಜಮೀಲ್ ಅಹ್ಮದ್ ತಿಳಿಸಿದರು.

    ಇದೊಂದು ಭೀಕರ ಅಪಘಾತವಾಗಿದೆ. ರೈಲು ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಮೂರು ಭಾಗಗಳಾಗಿ ವಿಂಗಡಣೆಯಾಗಿದೆ. ಅಲ್ಲದೇ ಬಸ್ಸನ್ನು ಸುಮಾರು 150-200 ಅಡಿಗಳಷ್ಟು ರೈಲಿನಿಂದ ಎಳೆದುಕೊಂಡು ಹೋಗಿದೆ. ಅಪಘಾತದಲ್ಲಿ ಕೆಲವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನೂ ಕೆಲವರು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಕೊನೆಯುಸಿರೆಳೆದಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದರು.

    ರೈಲು ಅತಿ ವೇಗವಾಗಿ ಬರುತ್ತಿತ್ತು. ಇದೇ ವೇಳೆ ಚಾಲಕ ರೈಲ್ವೇ ಮಾರ್ಗವನ್ನು ದಾಟಲು ಪ್ರಯತ್ನಿಸಿದ್ದಾನೆ. ಆಗ ಈ ಅಪಘಾತ ಸಂಭವಿಸಿದೆ. ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪಾಕಿಸ್ತಾನ ರೈಲ್ವೆ ವಕ್ತಾರರು ಹೇಳಿದರು.

    ಡಿಕ್ಕಿಯ ರಭಸಕ್ಕೆ ರೈಲಿನ ಎಂಜಿನ್ ಹಾನಿಯಾಗಿದೆ. ರೈಲಿನ ಸಹಾಯಕ ಚಾಲಕ ಗಾಯಗೊಂಡಿದ್ದಾನೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಗಾಯಾಳುಗಳನ್ನು ರೋಹ್ರಿ ಮತ್ತು ಸುಕ್ಕೂರ್ ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದು ತಕ್ಷಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಮಾಡುತ್ತಿದ್ದಾರೆ.

  • ಹೂತಿದ್ದ ಮಹಿಳೆ ಶವವನ್ನು ಹೊರ ತೆಗೆದು ಅತ್ಯಾಚಾರಗೈದ ದುಷ್ಕರ್ಮಿಗಳು

    ಹೂತಿದ್ದ ಮಹಿಳೆ ಶವವನ್ನು ಹೊರ ತೆಗೆದು ಅತ್ಯಾಚಾರಗೈದ ದುಷ್ಕರ್ಮಿಗಳು

    ಇಸ್ಲಾಮಾಬಾದ್: ಸ್ಮಶಾನದಲ್ಲಿ ಹೂತಿಟ್ಟಿದ್ದ ಮಹಿಳೆಯ ಶವವನ್ನು ಹೊರ ತೆಗೆದು ದುಷ್ಕರ್ಮಿಗಳು ಅತ್ಯಾಚಾರಗೈದ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ.

    ಮಹಿಳೆಯ ಶವವನ್ನು ಕುಟುಂಬಸ್ಥರು ಶನಿವಾರ ರಾತ್ರಿ ಇಸ್ಮಾಯಿಲ್ ಗೋಥ್ ಸ್ಮಶಾನದಲ್ಲಿ ಸಮಾಧಿ ಮಾಡಿದ್ದರು. ಸಮಾಧಿ ಮಾಡಿದ ಮರುದಿನವೇ ದುಷ್ಕರ್ಮಿಗಳು ಮಹಿಳೆಯ ಶವವನ್ನು ಹೊರತೆಗೆದು ಅತ್ಯಾಚಾರ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಮೃತ ಮಹಿಳೆಯ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಈ ವಿಷಯ ತಿಳಿದ ತಕ್ಷಣ ಕುಟುಂಬಸ್ಥರು ಸ್ಥಳಕ್ಕೆ ಭೇಟಿ ನೀಡಿದ್ದು, ಈ ವೇಳೆ ಮಹಿಳೆ ಮೃತದೇಹ ಸಮಾಧಿಯಿಂದ ಹೊರಗೆ ತೆಗೆಯಲಾಗಿತ್ತು.

    ಕುಟುಂಬಸ್ಥರು ಈ ಬಗ್ಗೆ ಸ್ಮಶಾನದ ಉಸ್ತುವಾರಿಯನ್ನು ಪ್ರಶ್ನಿಸಿದಾಗ, ನಾಯಿಯೊಂದು ಸಮಾಧಿ ಮೇಲಿದ್ದ ಚಪ್ಪಡಿಯನ್ನು ತೆಗೆದಿದೆ ಎಂದು ಹೇಳಿದ್ದಾನೆ. ಆದರೆ ನಾಯಿ ತೆಗೆಯುವಷ್ಟು ಆ ಚಪ್ಪಡಿ ಹಗುರವಾಗಿ ಇರಲಿಲ್ಲ ಎಂದು ಮಹಿಳೆಯ ಕುಟುಂಬಸ್ಥರು ವಾದ ಮಾಡಿದ್ದಾರೆ.

    ಸ್ಮಶಾನ ಉಸ್ತುವಾರಿಯ ಮಾತು ಕೇಳಲು ಕುಟುಂಬಸ್ಥರು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೆ ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಮೃತಪಟ್ಟ ಮಹಿಳೆಯ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂಬುದು ಸಾಬೀತಾಗಿದೆ. ಈ ವಿಷಯ ಸಾಬೀತು ಆಗುತ್ತಿದ್ದಂತೆ ಸ್ಮಶಾನದಲ್ಲಿದ್ದ ವ್ಯಕ್ತಿ ಪರಾರಿಯಾಗಿದ್ದಾನೆ.

    ಈ ಕೃತ್ಯದಲ್ಲಿ ಎಷ್ಟು ಮಂದಿ ಭಾಗಿಯಾಗಿದ್ದರು ಎಂಬುದರ ಬಗ್ಗೆ ಪೊಲೀಸರು ಇನ್ನು ಪತ್ತೆ ಹಚ್ಚಿಲ್ಲ. ಆದರೆ ಈ ಬಗ್ಗೆ ದೂರು ನೀಡಲು ಮೃತ ಮಹಿಳೆಯ ಕುಟುಂಬಸ್ಥರು ಹಿಂದೇಟು ಹಾಕುತ್ತಿದ್ದಾರೆ.

  • ಪ್ರೈವೇಟ್  ಫೋಟೋ ಲೀಕ್ – ಮೋದಿಗೆ ಬೆದರಿಕೆ ಹಾಕಿದ್ದ ಗಾಯಕಿ ಚಿತ್ರರಂಗ ಬಿಡಲು ನಿರ್ಧಾರ

    ಪ್ರೈವೇಟ್ ಫೋಟೋ ಲೀಕ್ – ಮೋದಿಗೆ ಬೆದರಿಕೆ ಹಾಕಿದ್ದ ಗಾಯಕಿ ಚಿತ್ರರಂಗ ಬಿಡಲು ನಿರ್ಧಾರ

    ಇಸ್ಲಾಮಾಬಾದ್: ಪಾಕಿಸ್ತಾನ ಗಾಯಕಿ ರಬಿ ಫಿರ್ಜಾದಾ ಪ್ರೈವೇಟ್ ಫೋಟೋ ಲೀಕ್ ಆಗುತ್ತಿದ್ದಂತೆ ಚಿತ್ರರಂಗ ಬಿಡಲು ನಿರ್ಧರಿಸಿದ್ದೇನೆ ಎಂದು ಸೋಮವಾರ ಟ್ವೀಟ್ ಮಾಡಿದ್ದಾಳೆ.

    ರಬಿ ಪಿರ್ಜಾದಾ ತಮ್ಮ ಟ್ವಿಟ್ಟರಿನಲ್ಲಿ, “ನಾನು ರಬಿ ಫಿರ್ಜಾದಾ ಶೋಗಳನ್ನು ತ್ಯಜಿಸುತ್ತಿದ್ದೇನೆ. ಅಲ್ಲಾ ನನ್ನ ಎಲ್ಲಾ ಪಾಪಗಳನ್ನು ಕ್ಷಮಿಸಲಿ ಮತ್ತು ನನ್ನ ಪರವಾಗಿ ಜನರನ್ನು ನಿಲ್ಲುವಂತೆ ಮಾಡಲಿ” ಎಂದು ಟ್ವೀಟ್ ಮಾಡಿದ್ದಾಳೆ.

    ಕಳೆದ ವಾರ ಸಾಮಾಜಿಕ ಜಾಲತಾಣಗಳಲ್ಲಿ ರಬಿಯ ಪ್ರೈವೇಟ್ ಫೋಟೋಗಳು ಲೀಕ್ ಆಗಿತ್ತು. ಫೋಟೋ ಲೀಕ್ ಆಗಿ ವೈರಲ್ ಆಗುತ್ತಿದ್ದಂತೆ ಜನರು ಆಕೆಯನ್ನು ಟ್ರೋಲ್ ಮಾಡಲು ಶುರು ಮಾಡಿದ್ದರು. ವರದಿಗಳ ಪ್ರಕಾರ, ಈ ಬಗ್ಗೆ ರಬಿ ಫೆಡೆರಲ್ ಇನ್‌ವೆಸ್ಟಿಗೇಶನ್ ಏಜೆನ್ಸಿಗೆ ದೂರು ನೀಡಿದ್ದಾಳೆ ಎನ್ನಲಾಗಿದೆ.

    ಸೆಪ್ಟೆಂಬರ್ ತಿಂಗಳಿನಲ್ಲಿ ರಬಿ ಲಹೋರ್‌ನಲ್ಲಿರುವ ತನ್ನ ಬ್ಯೂಟಿ ಪಾರ್ಲರ್ ನಲ್ಲಿ ಹೆಬ್ಬಾವು ಮತ್ತು ಮೊಸಳೆ ಜೊತೆ ವಿಡಿಯೋ ಮಾಡಿ ಮೋದಿಗೆ ನಿಂದಿಸಿದ್ದಳು. ಆ ವಿಡಿಯೋ ವೈರಲ್ ಆಗುತ್ತಿದ್ದಂತೆ ರಬಿ ಫಿರ್ಜಾದಾವಿರುದ್ಧ ದೂರು ದಾಖಲಾಗಿತ್ತು.

    ಹೆಬ್ಬಾವು ಮತ್ತು ಮೊಸಳೆಯನ್ನು ಹಿಡಿದು ವಿಡಿಯೋ ಮಾಡಿದ್ದ ರಬಿ, ನಾನು ಕಾಶ್ಮೀರಿ ಮಹಿಳೆ, ಭಾರತಕ್ಕಾಗಿ ನಾವು ಹಾವುಗಳೊಂದಿಗೆ ಸಿದ್ಧವಾಗಿದ್ದೇವೆ. ಈ ಉಡುಗೊರೆಗಳು ನಿಜಕ್ಕೂ ಮೋದಿಯವರಿಗೆ. ನೀವು ಕಾಶ್ಮೀರಿಗಳಿಗೆ ತೊಂದರೆ ನೀಡುತ್ತಿದ್ದೀರಿ. ಆದ್ದರಿಂದ ನಾನು ನಿಮಗಾಗಿ ಈ ವಿಶೇಷ ಉಡುಗೊರೆಯನ್ನು ಸಿದ್ಧಪಡಿಸಿದ್ದೇನೆ. ನೀವು ನರಕದಲ್ಲಿ ಸಾಯಲು ಸಿದ್ಧರಾಗಿ. ನನ್ನ ಸ್ನೇಹಿತರು ನರಕದಲ್ಲಿ ನಿಮ್ಮ ಜೊತೆ ಹಬ್ಬವನ್ನು ಮಾಡುತ್ತಾರೆ ಎಂದು ಹೇಳಿ ನಾಲಿಗೆ ಹರಿಬಿಟ್ಟಿದ್ದಳು.

    ಇದಾದ ತನ್ನ ಟ್ವಿಟ್ಟರ್ ಖಾತೆಯಲ್ಲಿ ಆತ್ಮಹತ್ಯೆ ಬಾಂಬರ್ ರೀತಿಯಲ್ಲಿ ಉಡುಪು ಧರಿಸಿರುವ ಫಿರ್ಜಾದಾ, `ಮೋದಿ ಹಿಟ್ಲರ್’ ಹಾಗೂ `ಕಾಶ್ಮೀರದ ಭೇಟಿ’ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಳು.

    ಈ ಫೋಟೋ ಹಂಚಿಕೊಳ್ಳುತ್ತಿದಂತೆ ಹಲವು ನೆಟ್ಟಿಗರು ಗಾಯಕಿಯನ್ನು ಟ್ರೋಲ್ ಮಾಡಿ ಟೀಕೆ ಮಾಡಲು ಆರಂಭಿಸಿದ್ದರು. ಅಲ್ಲದೇ ಪಾಕಿಸ್ತಾನದ ಹಲವು ಮಂದಿ ಗಾಯಕಿ ವಿರುದ್ಧವೇ ಕಿಡಿಕಾರಿದ್ದು, ಗಾಯಕಿಯ ಈ ನಡೆ ಪಾಕಿಸ್ತಾನದ ವಿರುದ್ಧ ವಿಶ್ವ ಸಮುದಾಯಕ್ಕೆ ಋಣಾತ್ಮಕ ಭಾವನೆ ಮೂಡಲು ಕಾರಣವಾಗುತ್ತದೆ ಎಂದು ದೂರಿದ್ದಾರೆ.

    ಇತ್ತ ಭಾರತೀಯ ನೆಟ್ಟಿಗರು ಗಾಯಕಿಯ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿ ಖುಷಿ ವ್ಯಕ್ತಪಡಿಸಿದ್ದರು. ಅಲ್ಲದೇ ಪೋಸ್ಟನ್ನು ಮತ್ತಷ್ಟು ವೈರಲ್ ಮಾಡಿ ಗಾಯಕಿಯ ಕಾಲೆಳೆಯುತ್ತಿದ್ದರು. ವಾವ್..! ನೀವು ಈ ಉಡುಗೆಯಲ್ಲಿ ಅದ್ಭುತವಾಗಿ ಕಾಣುತ್ತಿದ್ದು, ಪಾಕಿಸ್ತಾನಿ ಸಾಂಪ್ರದಾಯಕ ಉಡುಪು ಧರಿಸಿದಕ್ಕೆ ಧನ್ಯವಾದ. ಪಾಕ್ ರಾಷ್ಟ್ರೀಯ ಉಡುಗೆಯಲ್ಲಿ ಬಹಳ ಸುಂದರವಾಗಿ ಕಾಣುತ್ತಿದ್ದೀರಿ ಎಂದು ಕಾಲೆಳೆದಿದ್ದರು.

  • ಪಾಕಿಸ್ತಾನದಲ್ಲಿ ಹೊತ್ತಿ ಉರಿದ ರೈಲು – 65ಕ್ಕೂ ಹೆಚ್ಚು ಪ್ರಯಾಣಿಕರು ಸಾವು

    ಪಾಕಿಸ್ತಾನದಲ್ಲಿ ಹೊತ್ತಿ ಉರಿದ ರೈಲು – 65ಕ್ಕೂ ಹೆಚ್ಚು ಪ್ರಯಾಣಿಕರು ಸಾವು

    ಇಸ್ಲಾಮಾಬಾದ್: ಕರಾಚಿ- ರಾವಲ್ಪಿಂಡಿ ತೇಜ್ಗಾಮ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ರೈಲಿನ ಮೂರು ಬೋಗಿಗಳು ಬೆಂಕಿಗೆ ಧಗಧಗನೆ ಹೊತ್ತಿ ಉರಿದಿದೆ. ಈ ಅಗ್ನಿ ಅವಘಡದಲ್ಲಿ 65ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

    ಇಂದು ಬೆಳಗ್ಗೆ ಈ ಅಗ್ನಿ ಅವಘಡ ಸಂಭವಿಸಿದೆ. ರೈಲಿನಲ್ಲಿ ತೆರಳುತ್ತಿದ್ದ ಪ್ರಯಾಣಿಕರು ರೈಲಿನಲ್ಲಿ ಗ್ಯಾಸ್ ಸ್ಟವ್ ಹೊತ್ತಿಸಿ ಅಡುಗೆ ಮಾಡುತ್ತಿದ್ದರು. ದಕ್ಷಿಣ ಪಂಜಾಬ್ ಪ್ರಾಂತ್ಯದ ರಹೀಮ್ ಯಾರ್ ಖಾನ್ ಪ್ರದೇಶದ ಸಮೀಪ ರೈಲು ಬರುತ್ತಿದ್ದ ವೇಳೆ ಸ್ಟವ್ ಸ್ಫೋಟಗೊಂಡಿದ್ದು, ಒಂದು ಬೋಗಿಗೆ ಬೆಂಕಿ ಹೊತ್ತಿಕೊಂಡಿತು. ಬಳಿಕ ಈ ಬೆಂಕಿ ರೈಲಿನ ಇತರೆ ಬೋಗಿಗಳಿಗೂ ತಗುಲಿ ಒಟ್ಟು ಮೂರು ಬೋಗಿಗಳು ಬೆಂಕಿ ಕೆನ್ನಾಲಿಗೆಯಲ್ಲಿ ಹೊತ್ತಿ ಉರಿದವು. ಈ ವೇಳೆ ಈ ಬೋಗಿಗಳಲ್ಲಿ ಇದ್ದ 65 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತಪಟ್ಟ ಪ್ರಯಾಣಿಕರಲ್ಲಿ ಅನೇಕರು ಬೆಂಕಿ ಕಂಡು ಭಯದಿಂದ ರೈಲಿನಿಂದ ಹಾರಿ ಜೀವ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

    ಈ ಬಗ್ಗೆ ಪಾಕಿಸ್ತಾನ ರೈಲ್ವೆ ಸಚಿವ ಶೇಖ್ ರಶೀದ್ ಅಹ್ಮದ್ ಪ್ರತಿಕ್ರಿಯಿಸಿ, ರೈಲಿನಲ್ಲಿ ಪ್ರಯಾಣಿಕರು ಅಡುಗೆ ಮಾಡುತ್ತಿದ್ದರು. ಈ ವೇಳೆ ಅವರ ಅಡುಗೆ ಎಣ್ಣೆಯಿಂದ ಸ್ಟವ್‍ಗೆ ಬೆಂಕಿ ಹರಡಿ ಅದು ಸ್ಫೋಟಗೊಂಡಿತು. ಬಳಿಕ ರೈಲು ಹೊತ್ತಿ ಉರಿಯಿತು ಎಂದರು. ಹಾಗೆಯೇ ಸಾವನ್ನಪ್ಪಿದವರಲ್ಲಿ ಅನೇಕರು ಬೆಂಕಿ ಕಂಡು ಭಯದಿಂದ ಚಲಿಸುತ್ತಿದ್ದ ರೈಲಿನಿಂದ ಹೊರಹಾರಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

    ಜಿಲ್ಲಾ ರಕ್ಷಣಾ ಸೇವೆಯ ಮುಖ್ಯಸ್ಥರಾದ ಬಕೀರ್ ಹುಸ್ಸೇನ್ ಅವರು ಮಾತನಾಡಿ, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈಗಾಗಲೇ 15 ಮಂದಿ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಹಾಗೆಯೇ ದೂರ ಪ್ರಯಾಣ ಮಾಡುವ ಪ್ರಯಾಣಿಕರು ಆಹಾರವನ್ನು ತಯಾರಿಸಲು ರೈಲಿನಲ್ಲಿ ಗ್ಯಾಸ್ ಸ್ಟವ್ ಬಳಸುತ್ತಾರೆ. ಇದು ಇಲ್ಲಿನ ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದರು.

    ದೀರ್ಘಕಾಲದ ಹೂಡಿಕೆ ಹಾಗೂ ಕಳಪೆ ನಿರ್ವಹಣೆಯಿಂದ ಇತ್ತೀಚಿನ ದಶಕಗಳಲ್ಲಿ ಪಾಕಿಸ್ತಾನದ ರೈಲ್ವೆ ಜಾಲವು ದುಸ್ಥಿತಿಗೆ ತಲುಪಿದೆ. ಈ ಹಿಂದೆ ಪಾಕಿಸ್ತಾನದಲ್ಲಿ ಜುಲೈನಲ್ಲಿ ನಡೆದ ರೈಲು ಅಪಘಾತದಲ್ಲಿ 11 ಮಂದಿ ಪ್ರಯಾಣಿಕರು ಮೃತಪಟ್ಟಿದ್ದರು. ಹಾಗೆಯೇ ಸೆಪ್ಟೆಂಬರ್‍ನಲ್ಲಿ ನಡೆದಿದ್ದ ಅಪಘಾತದಲ್ಲಿ 4 ಮಂದಿ ಜೀವ ಕಳೆದುಕೊಂಡಿದ್ದರು. 2005ರಲ್ಲಿ ಸಿಂಧ್ ಪ್ರಾಂತ್ಯದಲ್ಲಿ ನಡೆದಿದ್ದ ರೈಲು ಅಪಘಾತದಲ್ಲಿ 130 ಮಂದಿ ಪ್ರಯಾಣಿಕರು ಬಲಿಯಾಗಿದ್ದರು.

  • ಮೋದಿಯನ್ನು ಟೀಕಿಸಲು ಸೂಸೈಡ್ ಬಾಂಬರ್ ಆದ ಪಾಕ್ ಗಾಯಕಿ

    ಮೋದಿಯನ್ನು ಟೀಕಿಸಲು ಸೂಸೈಡ್ ಬಾಂಬರ್ ಆದ ಪಾಕ್ ಗಾಯಕಿ

    – ಇನ್ನು ನಿಮ್ಮ ಸಾಂಪ್ರದಾಯಿಕ ಉಡುಪು
    – ಭಾರತೀಯರಿಂದ ಟ್ರೋಲ್‍ಗೆ ಟ್ವೀಟ್ ಡಿಲೀಟ್
    – ಫೋಟೋಗೆ ಪಾಕ್ ನೆಟ್ಟಿಗರಿಂದದ ಆಕ್ಷೇಪ

    ಇಸ್ಲಾಮಾಬಾದ್: ಕಳೆದ ತಿಂಗಳು ಹಾವಿನೊಂದಿಗಿರುವ ವಿಡಿಯೋ ಪೋಸ್ಟ್ ಮಾಡಿ ಮೋದಿ ವಿರುದ್ಧ ಕಿಡಿಕಾರಿದ್ದ ಪಾಕಿಸ್ತಾನದ ಗಾಯಕಿ ರಬಿ ಫಿರ್ಜಾದಾ ಸದ್ಯ ಹೊಸ ರೂಪದಲ್ಲಿ ಮತ್ತೊಂದು ಫೋಟೋವನ್ನು ಹಂಚಿಕೊಂಡು ಟ್ರೋಲಾಗಿದ್ದಾಳೆ.

    ತನ್ನ ಟ್ವಿಟ್ಟರ್ ಖಾತೆಯಲ್ಲಿ ಆತ್ಮಹತ್ಯೆ ಬಾಂಬರ್ ರೀತಿಯಲ್ಲಿ ಉಡುಪು ಧರಿಸಿರುವ ಫಿರ್ಜಾದಾ, ‘ಮೋದಿ ಹಿಟ್ಲರ್’ ಹಾಗೂ ‘ಕಾಶ್ಮೀರದ ಭೇಟಿ’ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾಳೆ.

    ಈ ಫೋಟೋ ಹಂಚಿಕೊಳ್ಳುತ್ತಿದಂತೆ ಹಲವು ನೆಟ್ಟಿಗರು ಗಾಯಕಿಯನ್ನು ಟ್ರೋಲ್ ಮಾಡಿ ಟೀಕೆ ಮಾಡಲು ಆರಂಭಿಸಿದ್ದಾರೆ. ಅಲ್ಲದೇ ಪಾಕಿಸ್ತಾನದ ಹಲವು ಮಂದಿ ಗಾಯಕಿ ವಿರುದ್ಧವೇ ಕಿಡಿಕಾರಿದ್ದು, ಗಾಯಕಿಯ ಈ ನಡೆ ಪಾಕಿಸ್ತಾನದ ವಿರುದ್ಧ ವಿಶ್ವ ಸಮುದಾಯಕ್ಕೆ ಋಣಾತ್ಮಕ ಭಾವನೆ ಮೂಡಲು ಕಾರಣವಾಗುತ್ತದೆ ಎಂದು ದೂರಿದ್ದಾರೆ.

    ಇತ್ತ ಭಾರತೀಯ ನೆಟ್ಟಿಗರು ಗಾಯಕಿಯ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿ ಖುಷಿ ವ್ಯಕ್ತಪಡಿಸಿದ್ದರು. ಅಲ್ಲದೇ ಪೋಸ್ಟನ್ನು ಮತ್ತಷ್ಟು ವೈರಲ್ ಮಾಡಿ ಗಾಯಕಿಯ ಕಾಲೆಳೆಯುತ್ತಿದ್ದಾರೆ. ವಾವ್..! ನೀವು ಈ ಉಡುಗೆಯಲ್ಲಿ ಅದ್ಭುತವಾಗಿ ಕಾಣುತ್ತಿದ್ದು, ಪಾಕಿಸ್ತಾನಿ ಸಾಂಪ್ರದಾಯಕ ಉಡುಪು ಧರಿಸಿದಕ್ಕೆ ಧನ್ಯವಾದ. ಪಾಕ್ ರಾಷ್ಟ್ರೀಯ ಉಡುಗೆಯಲ್ಲಿ ಬಹಳ ಸುಂದರವಾಗಿ ಕಾಣುತ್ತಿದ್ದೀರಿ ಎಂದು ಕಾಲೆಳೆದಿದ್ದಾರೆ.

    ಈ ಟ್ರೋಲ್ ಗಳಿಗೆ ಪ್ರತಿಕ್ರಿಯೆ ನೀಡಿ ಮತ್ತೊಂದು ಟ್ವೀಟ್ ಮಾಡಿರುವ ಫಿರ್ಜಾದಾ, ಈ ಫೋಟೋವನ್ನು ನಾನು ಇಂತಹ ದಾಳಿಗಳನ್ನು ಖಂಡಿಸಲು ಧರಿಸಿದ್ದು, ಶಾಂತಿ ಹಾಗೂ ಮಾನವೀಯತೆಯನ್ನು ಬಯಸುತ್ತೇನೆ. ಮೋದಿ ಸುರಕ್ಷತೆಯ ಬಗ್ಗೆ ನನಗೆ ಉಪನ್ಯಾಸ ನೀಡುವ ಭಾರತೀಯರು ಆಹಾರ, ಔಷಧಿ ಇಲ್ಲದೇ 3 ತಿಂಗಳು ವಿಧಿಸಿದ್ದ ಕಫ್ರ್ಯೂವನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ? ಭಾರತದ ಕ್ರೌರ್ಯವನ್ನು ನಿಲ್ಲಿಸಬೇಕೆಂದು ನೆನಪಿಸಲು ಈ ರೀತಿ ಪೋಸ್ಟ್ ಮಾಡಿದ್ದಾಗಿ ಸ್ಪಷ್ಟನೆ ನೀಡಿದ್ದಾಳೆ.

    ಈ ಹಿಂದೆಯೂ ಮೊಸಳೆ, ಹಾವುಗಳೊಂದಿಗೆ ಇರುವ ವಿಡಿಯೋ ಮಾಡಿದ್ದ ಫಿರ್ಜಾದಾ, ಇವುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆ ಎಂದು ಹೇಳಿದ್ದಳು. ಆದರೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಎಚ್ಚೆತ್ತ ಪಾಕ್‍ನ ಅಧಿಕಾರಿಗಳು ಹಾವು, ಮೊಸಳೆಗಳನ್ನು ಬಳಿಸಿ ವಿಡಿಯೋ ಮಾಡಿದ್ದಕ್ಕೆ ದೂರು ದಾಖಲಿಸಿದ್ದರು. ಇದರಿಂದಲೂ ಬುದ್ಧಿ ಕಲಿಯದ ಫಿರ್ಜಾದಾ ಮತ್ತೆ ಹೊಸ ರೀತಿ ಬಂದು ಟ್ರೋಲ್ ಗಳಿಗೆ ಗುರಿಯಾಗಿದ್ದಾಳೆ.

    https://twitter.com/HinduAmericans/status/1186843816487194629