Tag: isolation ward

  • ಕೊರೊನಾ ವರದಿ ನೆಗೆಟಿವ್ – ಐಸೊಲೋಷನ್ ವಾರ್ಡಿನಲ್ಲಿ ಇಡೀ ಕುಟುಂಬ ಡ್ಯಾನ್ಸ್

    ಕೊರೊನಾ ವರದಿ ನೆಗೆಟಿವ್ – ಐಸೊಲೋಷನ್ ವಾರ್ಡಿನಲ್ಲಿ ಇಡೀ ಕುಟುಂಬ ಡ್ಯಾನ್ಸ್

    – ಸುಶಾಂತ್ ನಟನೆಯ ಹಾಡಿಗೆ ನೃತ್ಯ

    ಭೋಪಾಲ್: ಕೊರೊನಾ ವರದಿ ನೆಗೆಟಿವ್ ಬಂದಿದಕ್ಕೆ ಇಡೀ ಕುಟುಂಬದ ಸದಸ್ಯರು ಐಸೊಲೇಷನ್ ವಾರ್ಡಿನಲ್ಲಿ ಮಸ್ತ್ ಡ್ಯಾನ್ಸ್ ಮಾಡಿರುವ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ.

    ಕೊರೊನಾ ಐಸೊಲೇಷನ್ ವಾರ್ಡಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 8 ಜನರು ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ವಿಶೇಷವೆಂದರೆ ಅವರು ಮೃತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಚಿಂಚೋರೆ ಸಿನಿಮಾದ ಹಾಡಿಗೆ ನೃತ್ಯ ಮಾಡಿದ್ದಾರೆ.

    https://twitter.com/Anurag_Dwary/status/1295622996694986752

    ಈ ವಿಚಾರದ ಬಗ್ಗೆ ಮಾತನಾಡಿರುವ ಕಟ್ನಿ ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಯಶವಂತ್ ವರ್ಮಾ, ಆಗಸ್ಟ್ 8ರಂದು ಈ ಕುಟುಂಬದ 19 ಮಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಅವರು ನಮ್ಮ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆಗಸ್ಟ್ 15ರಂದು ಅವರಿಗೆ ಕೊರೊನಾ ನೆಗೆಟಿವ್ ಬಂದ ಕಾರಣ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಕುಟುಂಬದವರು ಯಾವಾಗ ಈ ರೀತಿ ನೃತ್ಯ ಮಾಡಿದರು ಎಂಬುದು ನಮಗೆ ಗೊತ್ತಿಲ್ಲ ಎಂದಿದ್ದಾರೆ.

    ಮಧ್ಯಪ್ರದೇಶದಲ್ಲಿ ಈವರೆಗೆ 46 ಸಾವಿರಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಇವರ ಪೈಕಿ 35 ಸಾವಿರಕ್ಕೂ ಹೆಚ್ಚು ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಸೇರಿದಂತೆ ಅವರ ಮಂತ್ರಿ ಮಂಡಲದ ನಾಲ್ವರು ಮಂತ್ರಿಗಳು ಕೊರೊನಾ ಪಾಸಿಟಿವ್ ಬಂದಿದ್ದು, ಇದರಲ್ಲಿ ಮುಖ್ಯಮಂತ್ರಿ ಮತ್ತು ಮೂವರು ಮಂತ್ರಿಗಳು ಕೊರೊನಾದಿಂದ ಗುಣಮುಖರಾಗಿದ್ದಾರೆ.

  • ನಾನು ಆರೋಗ್ಯವಾಗಿದ್ದು, ಯಾರೂ ಗಾಬರಿ ಆಗೋದು ಬೇಡ: ಕಾಮೇಗೌಡರು

    ನಾನು ಆರೋಗ್ಯವಾಗಿದ್ದು, ಯಾರೂ ಗಾಬರಿ ಆಗೋದು ಬೇಡ: ಕಾಮೇಗೌಡರು

    ಮಂಡ್ಯ: ನಾನು ಆರೋಗ್ಯವಾಗಿದ್ದೇವೆ. ಹಾಗಾಗಿ ಯಾರೂ ಗಾಬರಿ ಆಗುವುದು ಬೇಡ ಎಂದು ಕಾಮೇಗೌಡರು ಕೈ ಮುಗಿದು ಮಾತನಾಡಿದ್ದಾರೆ.

    ಕಾಮೇಗೌಡರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಐಸೋಲೇಷನ್ ವಾರ್ಡಿನಲ್ಲಿ ಆರೈಕೆ ಮಾಡುವವರು ಇಲ್ಲದ ಕಾರಣ ಅನ್ನ ನೀರು ಸೇವಿಸುವುದನ್ನು ತ್ಯಜಿಸಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಆದರೆ ಇದೀಗ ಸ್ವತಃ ಕಾಮೇಗೌಡರೇ, ಆಸ್ಪತ್ರೆಯಲ್ಲಿ ನನ್ನನ್ನ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಗುಡ್ಡಗಾಡಿನಲ್ಲಿ 16 ಕೆರೆ- ಮಂಡ್ಯದ ಕಾಮೇಗೌಡರ ಸಾಧನೆಗೆ ಮೋದಿ ಮೆಚ್ಚುಗೆ

    ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಳೆದ ಐದು ದಿನಗಳಿಂದ ಮಂಡ್ಯದ ಕೋವಿಡ್ ಆಸ್ಪತ್ರೆಯ ಐಶೋಲೇಷನ್ ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಮಾತನಾಡಿರುವ ಕಾಮೇಗೌಡರು, ಆಸ್ಪತ್ರೆಯಲ್ಲಿ ನನ್ನನ್ನ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಆಗಾಗ ವೈದ್ಯರು ಬಂದು ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಊಟ ತಿಂಡಿಯ ವ್ಯವಸ್ಥೆಯೂ ಚೆನ್ನಾಗಿದೆ. ನಾನು ಶೌಚಾಲಯಕ್ಕೆ ಹೋಗಿ ಬರಲು ಒಬ್ಬರನ್ನ ನಿಯೋಜಿಸುತ್ತೀನಿ ಎಂದು ಹೇಳಿರುವುದಾಗಿ ತಿಳಿಸಿದರು.

    ನನಗೆ ಸ್ವಲ್ಪ ಕಾಲು ನೋವು ಇರುವುದು ಬಿಟ್ಟರೆ ಬೇರೆ ಯಾವುದೇ ರೀತಿಯ ಸಮಸ್ಯೆ ಇಲ್ಲ. ನಾನು ಆರೋಗ್ಯವಾಗಿದ್ದೇವೆ. ಹೀಗಾಗಿ ಯಾರೂ ಗಾಬರಿಯಾಗೋದು ಬೇಡ. ಇತರ ರೋಗಿಗಳಿಗೂ ಇಲ್ಲಿ ಎಲ್ಲಾ ಸೌಕರ್ಯ ಇದೆ ಎಂದು ಕೈ ಮುಗಿದು ಕಾಮೇಗೌಡರು ಮಾತನಾಡಿದ್ದಾರೆ. ಇದನ್ನೂ ಓದಿ:  ಹೊಗಳಿ ಹೊನ್ನಶೂಲಕ್ಕೆ ಏರಿಸಿದ್ರೆ ಸಾಲದು, ಕಾಮೇಗೌಡರಿಗೆ ಚಿಕಿತ್ಸೆ ಕೊಡಿಸಿ: ಹೆಚ್‍ಡಿಕೆ

    ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡು ಕೆರೆ ಕಟ್ಟೆಗಳು ನಿರ್ಮಿಸಿ ಪ್ರಖ್ಯಾತಿಯಾಗಿದ್ದಾರೆ. ಇತ್ತೀಚೆಗೆ ಕಾಲು ನೋವಿನಿಂದ ಬಳಲುತ್ತಿದ್ದ ಕಾಮೇಗೌಡರು ಮಳವಳ್ಳಿ ಮತ್ತು ಮಂಡ್ಯದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಕೊರೊನಾ ಸೋಂಕು ತಗುಲಿದ್ದು ದೃಢವಾಗಿದ್ದರಿಂದ ಕಾಮೇಗೌಡರನ್ನು ಮಂಡ್ಯದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

  • ಐಸೋಲೇಷನ್ ವಾರ್ಡ್‍ನಲ್ಲಿ ಆರೈಕೆಯಿಲ್ಲದೆ ಅನ್ನಾಹಾರ ತ್ಯಜಿಸಿದ ಕಾಮೇಗೌಡರು

    ಐಸೋಲೇಷನ್ ವಾರ್ಡ್‍ನಲ್ಲಿ ಆರೈಕೆಯಿಲ್ಲದೆ ಅನ್ನಾಹಾರ ತ್ಯಜಿಸಿದ ಕಾಮೇಗೌಡರು

    ಮಂಡ್ಯ: ಐಸೋಲೇಷನ್ ವಾರ್ಡ್ ನಲ್ಲಿ ಆರೈಕೆ ಮಾಡುವವರು ಇಲ್ಲದ ಕಾರಣ ಕಾಮೇಗೌಡರು ಅನ್ನ ನೀರು ಸೇವಿಸುವುದನ್ನು ತ್ಯಜಿಸಿದ್ದಾರೆ.

    ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡು ಕೆರೆ ಕಟ್ಟೆಗಳು ನಿರ್ಮಿಸಿ ಪ್ರಖ್ಯಾತಿಯಾಗಿದ್ದಾರೆ. ಇತ್ತೀಚೆಗೆ ಕಾಲು ನೋವಿನಿಂದ ಬಳಲುತ್ತಿದ್ದ ಕಾಮೇಗೌಡರು ಮಳವಳ್ಳಿ ಮತ್ತು ಮಂಡ್ಯದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಕೊರೊನಾ ಸೋಂಕು ತಗುಲಿದ್ದು ದೃಢವಾಗಿದ್ದರಿಂದ ಕಾಮೇಗೌಡರನ್ನು ಮಂಡ್ಯದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಲಿದ್ದಾರೆ ಕಾಮೇಗೌಡರು- ಸಿನಿಮಾ ಆಗಲಿದೆ ಸಾಧನೆ

    ಕಾಲು ನೋವಿನಿಂದ ಬಳಲುತ್ತಿದ್ದ ಕಾಮೇಗೌಡರು ಮನೆಯಲ್ಲಿ ಶೌಚಾಲಯ ಸೇರಿದಂತೆ ಎಲ್ಲದಕ್ಕೂ ಮಕ್ಕಳನ್ನೇ ಅವಲಂಬಿಸಿದ್ದರು. ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುತ್ತಿದ್ದು, ಇತರೆ ಕೆಲಸಗಳ ಆರೈಕೆ ಇಲ್ಲದೆ ಕಾಮೇಗೌಡರು ಸೊರಗಿದ್ದಾರೆ. ಅನ್ನ ಆಹಾರ ಸೇವಿಸಿದ್ರೆ ಶೌಚಾಲಯಕ್ಕೆ ಹೋಗಬೇಕಾಗುತ್ತೆ ಎಂಬ ಕಾರಣಕ್ಕೆ ಊಟವನ್ನು ಕಾಮೇಗೌಡರು ಸೇವಿಸುತ್ತಿಲ್ಲ. ಇತ್ತ ಕಾಮೇಗೌಡರ ಇಬ್ಬರು ಮಕ್ಕಳು ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಇದನ್ನೂ ಓದಿ: ಗುಡ್ಡಗಾಡಿನಲ್ಲಿ 16 ಕೆರೆ- ಮಂಡ್ಯದ ಕಾಮೇಗೌಡರ ಸಾಧನೆಗೆ ಮೋದಿ ಮೆಚ್ಚುಗೆ

  • ಊರಿಗೆ ತೆರಳಲೆಂದು 1,200 ಕಿ.ಮೀ ಪ್ರಯಾಣಿಸಿದ ನಂತ್ರ ಕೈ ಕೊಡ್ತು ಅದೃಷ್ಟ

    ಊರಿಗೆ ತೆರಳಲೆಂದು 1,200 ಕಿ.ಮೀ ಪ್ರಯಾಣಿಸಿದ ನಂತ್ರ ಕೈ ಕೊಡ್ತು ಅದೃಷ್ಟ

    – ಇನ್ನೂ 300 ಕಿ.ಮೀ ದೂರವಿರುವಾಗ್ಲೇ ಲಾಕ್
    – ಪ್ರತಿದಿನ 180-220 ಕಿ.ಮೀ. ಪ್ರಯಾಣ

    ಭುವನೇಶ್ವರ: ಲಾಕ್‍ಡೌನ್ ಆದ ಪರಿಣಾಮ ಅನೇಕ ಕಾರ್ಮಿಕರು ತಮ್ಮ ಸ್ವ-ಗ್ರಾಮಗಳಿಗೆ ನಡೆದುಕೊಂಡೇ ಹೋಗಿದ್ದಾರೆ. ಆದರೆ ಇಲ್ಲಿಬ್ಬರು ಸ್ನೇಹಿತರು ತಮ್ಮ ಗ್ರಾಮಕ್ಕೆ ತೆರಳು ಸೈಕಲ್ ಮೂಲಕ 1,200 ಕಿ.ಮೀ ದೂರ ಪ್ರಯಾಣ ಮಾಡಿದ್ದಾರೆ. ಆದರೆ ಅವರಿಗೆ ಅದೃಷ್ಟ ಕೈಕೊಟ್ಟಿದ್ದು, ಇದೀಗ ಅವರನ್ನು 14 ದಿನ ಐಸೋಲೇಷನ್‍ನಲ್ಲಿ ಇರಿಸಲಾಗಿದೆ.

    ದೀಪ್ತಿರಾಜನ್ ಮತ್ತು ಗಣೇಶ್ವರ್ ಸೈಕಲಿನಲ್ಲಿ 1500 ಕಿಲೋ ಮೀಟರ್ ಪ್ರಯಾಣಿಸಲು ಮುಂದಾಗಿದ್ದರು. ಇಬ್ಬರು ಯುವಕರು ಪುದುಚೇರಿಯಿಂದ ತಮ್ಮ ಜಗತ್‍ಸಿಂಗ್‍ಪುರ ಜಿಲ್ಲೆಯ ಗ್ರಾಮಗಳಿಗೆ ತಲುಪಲು ಸೈಕಲ್‍ನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಆದರೆ ಇವರಿಬ್ಬರು ತಮ್ಮ ಗ್ರಾಮ ತಲುಪುವ ಮುನ್ನವೇ ವಿಶಾಖಪಟ್ಟಣಂನಲ್ಲಿ ಐಸೋಲೇಷನ್ ವಾರ್ಡಿನಲ್ಲಿ ಬಂಧಿಯಾಗಿದ್ದಾರೆ.

    ದೀಪ್ತಿರಾಜನ್ ಮತ್ತು ಗಣೇಶ್ವರ್ ಇಬ್ಬರು ಸ್ನೇಹಿತರಾಗಿದ್ದು, ಪುದುಚೆರಿಯ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಲು ಫೆಬ್ರವರಿಯಲ್ಲಿ ಅಲ್ಲಿಗೆ ತೆರಳಿದ್ದರು. ಆದರೆ ಕೊರೊನಾದಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಹೀಗಾಗಿ ಅವರು ತಮ್ಮ ಗ್ರಾಮಕ್ಕೆ ಹಿಂದಿರುಗಲು ಸಾಧ್ಯವಾಗದೆ ಪುದುಚೆರಿಯಲ್ಲಿ ಸಿಲುಕಿಕೊಂಡಿದ್ದರು. ಹೀಗಾಗಿ ಮನೆ ಬಾಡಿಗೆ ಪಾವತಿಸಲು ಹಣವಿಲ್ಲದ ಕಾರಣ ಇಬ್ಬರು ತಮ್ಮ ಗ್ರಾಮಗಳಿಗೆ ವಾಪಸ್ ಆಗಲು ನಿರ್ಧರಿಸಿದ್ದರು.

    ಅದರಂತೆಯೇ ಇಬ್ಬರು ತಮ್ಮ ತಮ್ಮ ಸೈಕಲ್‍ನಲ್ಲಿ ಏಪ್ರಿಲ್ 12 ರಂದು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ತಮಿಳುನಾಡು, ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಮೂಲಕ ಸಂಚರಿಸಿದ್ದ ಅವರನ್ನು ವಿಶಾಖಪಟ್ಟಣಂನಲ್ಲಿ ಐಸೋಲೇಷನ್ ವಾರ್ಡಿಗೆ ಒಳಪಡಿಸಲಾಗಿದೆ.

    ಇಬ್ಬರು ಯುವಕರು ವಿಶಾಖಪಟ್ಟಣಂವರೆಗೆ ಸೈಕಲ್‍ಗಳಲ್ಲಿ 1,500 ಕಿ.ಮೀ ಪ್ರಯಾಣವನ್ನು ಕೈಗೊಂಡಿದ್ದರು. ಆದರೆ ವಿಶಾಖಪಟ್ಟಣಂನಲ್ಲಿ ಇಬ್ಬರು ಐಸೋಲೇಷನ್ ವಾರ್ಡಿಗೆ ಶಿಫ್ಟ್ ಆಗಿದ್ದಾರೆ. ಇಲ್ಲಿಯವರೆಗೂ ಅವರು 1,200 ಕಿ.ಮೀ. ಪ್ರಯಾಣ ಮಾಡಿದ್ದರು. ಪ್ರತಿದಿನ ಸುಮಾರು 12-14 ಗಂಟೆಗಳ ಕಾಲ ಸೈಕಲ್ ಮೂಲಕ 180-220 ಕಿ.ಮೀ. ಪ್ರಯಾಣ ಮಾಡುತ್ತಿದ್ದರು. ಇನ್ನೊಂದೆರಡು ದಿನಗಳು ಸೈಕಲ್ ನಲ್ಲಿ ಪ್ರಯಾಣಿಸಿದ್ದರೆ ಇಬ್ಬರೂ ಊರು ಸೇರಲು ಸಾಧ್ಯವಾಗುತ್ತಿತ್ತು.

    ಈ ವೇಳೆ ಮಾತನಾಡಿದ ಗಣೇಶ್ವರ, ನಾನು ಮತ್ತು ದೀಪ್ತಿರಾಜನ್ ಐಸೋಲೇಷನ್ ವಾರ್ಡಿಗೆ ಶಿಫ್ಟ್ ಮಾಡದಿದ್ದರೆ 2-3 ದಿನಗಳಲ್ಲಿ ತಮ್ಮ ಗ್ರಾಮಗಳನ್ನು ತಲುಪುತ್ತಿದ್ದೆವು. ತಮ್ಮನ್ನು ಕಾಲೇಜಿನಲ್ಲಿ ಸ್ಥಾಪಿಸಲಾದ ಪ್ರತ್ಯೇಕ ಐಸೋಲೇಷನ್ ಕೇಂದ್ರದಲ್ಲಿ ಇರಿಸಲಾಗಿದೆ ಎಂದು ಹೇಳಿದರು. ಲಾಕ್‍ಡೌನ್ ವೇಳೆ ನಮಗೆ ಊಟವೂ ಸಿಗುತ್ತಿರಲ್ಲಿ. ಹೀಗಾಗಿ ಸೈಕಲ್ ಮೂಲಕ ಹೊರಟ್ಟಿದ್ದೆವು. ನಾವು ರಾತ್ರಿಯಲ್ಲಿ ಪೆಟ್ರೋಲ್ ಪಂಪ್‍ಗಳಲ್ಲಿ ಮಲಗುತ್ತಿದ್ದೆವು ಎಂದು ದೀಪ್ತಿರಾಜನ್ ಹೇಳಿದರು.

  • ಸೋಂಕಿತ 3 ಮಕ್ಕಳೊಂದಿಗೆ ತಾಯಿಗೆ ಉಳಿಯಲು ಅವಕಾಶ ನೀಡಿದ ಜಿಲ್ಲಾಡಳಿತ

    ಸೋಂಕಿತ 3 ಮಕ್ಕಳೊಂದಿಗೆ ತಾಯಿಗೆ ಉಳಿಯಲು ಅವಕಾಶ ನೀಡಿದ ಜಿಲ್ಲಾಡಳಿತ

    ಹುಬ್ಬಳ್ಳಿ: ಕಳೆದ ಕೆಲವು ದಿನಗಳ ಹಿಂದೆಯಷ್ಟೇ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆತಂಕದ ವಾತಾವರಣ ಸೃಷ್ಟಿಸಿಯಾಗಿತ್ತು. ಒಂದೇ ಕುಟುಂಬದ ಐದು ಜನರಲ್ಲಿ ಕೊರೊನಾ ದೃಢಪಟ್ಟಿದ್ದು, ಅದರಲ್ಲಿ ಮೂವರು ಮಕ್ಕಳು ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮಹತ್ವದ ನಿರ್ಧಾರವೊಂದನ್ನು ಕೈಗೊಂಡು ತಾಯಿ ಹಾಗೂ ಮಕ್ಕಳನ್ನು ಒಂದುಗೂಡಿಸಿದೆ.

    ಕೊರೊನಾ ದೃಢಪಟ್ಟು ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಳೇ ಹುಬ್ಬಳ್ಳಿಯ ಮುಲ್ಲಾ ಓಣಿಯ ಮೂವರು ಮಕ್ಕಳ ಜೊತೆ ತಂಗಲು ಸೋಂಕು ಇಲ್ಲದ ಅವರ ತಾಯಿಗೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದ್ದು, ತಾಯಿ ಹಾಗೂ ಮಕ್ಕಳನ್ನು ಒಟ್ಟಿಗೆ ಸೇರಿಸಿದೆ.

    ಕೊರೊನಾ ಸೋಂಕಿತನ ಅಣ್ಣ ಹಾಗೂ ಅಣ್ಣನ ಮೂವರು ಮಕ್ಕಳಲ್ಲಿ ಸೋಂಕು ಇರುವುದು ಎರಡು ದಿನಗಳ ಹಿಂದೆ ಖಚಿತವಾಗಿತ್ತು. ಐದು ವರ್ಷದ ಗಂಡು ಮಗು, ಮೂರೂವರೆ ವರ್ಷದ ಗಂಡು ಮಗು ಮತ್ತು ಏಳು ವರ್ಷದ ಹೆಣ್ಣುಮಗುವಿಗೆ ಕಿಮ್ಸ್ ನಲ್ಲಿ ಐಸೊಲೇಷನ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮಕ್ಕಳ ಜೊತೆ ಇರಲು ಸೋಂಕಿತನ 32 ವರ್ಷದ ಪತ್ನಿಗೆ ಅನುಮತಿ ಕೊಡಲಾಗಿದೆ. ಸರ್ಕಾರದ ನಿಯಮಾವಳಿ ಪ್ರಕಾರ ಸೋಂಕು ದೃಢಪಡದವರು ಹೋಮ್ ಕ್ವಾರಂಟೈನ್ ಆಗಿರಬೇಕು.

    ಸೋಂಕು ಇರುವುದು ಖಚಿತವಾಗಿರುವ ರೋಗಿ ಹಾಗೂ ಅವರ ಅಣ್ಣನಿಗೆ ಮೂವರು ಮಕ್ಕಳನ್ನು ನೋಡಿಕೊಳ್ಳುವುದು ಕಷ್ಟವಾಗುತ್ತಿದೆ. ಅದರಲ್ಲೂ ಮೂರೂವರೆ ಮತ್ತು ಐದು ವರ್ಷದ ಮಕ್ಕಳನ್ನು ಸಮಾಧಾನಪಡಿಸಲು ವೈದ್ಯರು ಹಾಗೂ ಸಿಬ್ಬಂದಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದರೂ ಸಾಧ್ಯವಾಗುತ್ತಿಲ್ಲ ಎಂದು ಕುಟುಂಬದ ಸದಸ್ಯರು ಹೇಳಿದ್ದರಿಂದ ಅವರ ತಾಯಿ, ಮಕ್ಕಳೊಂದಿಗೆ ಇರಲು ಅನುಮತಿ ಕೊಡುವಂತೆ ವೈದ್ಯರು ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದರು.

    ಜಿಲ್ಲಾಧಿಕಾರಿ ಜೊತೆ ಚರ್ಚಿಸಿದ ಬಳಿಕ ಕಿಮ್ಸ್ ವೈದ್ಯರು ಮಕ್ಕಳೊಂದಿಗೆ ಇರಲು ತಾಯಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಆ ತಾಯಿಗೆ ವೈಯಕ್ತಿಕ ಸುರಕ್ಷಿತಾ ಸಾಧನ, ಕೈ ಗ್ಲೌಸ್ ಮತ್ತು ಮಾಸ್ಕ್ ನೀಡಲಾಗಿದೆ. ಸೋಂಕಿನ ಲಕ್ಷಣಗಳ ಬಗ್ಗೆ ಜಾಗೃತೆ ವಹಿಸಲು ನಿರಂತರವಾಗಿ ತಪಾಸಣೆ ಮಾಡಲಾಗುತ್ತಿದೆ.

    ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯಲ್ಲಿ ಪ್ರವೇಶ ಮಾಡಲು ವೈದ್ಯರು ಹಾಗೂ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರಿಗೂ ಅವಕಾಶವಿಲ್ಲ. ಇದರಲ್ಲಿ ಅತ್ಯಂತ ಕಟ್ಟುನಿಟ್ಟಾದ ನಿಯಮಗಳಿವೆ. ಐಸೊಲೇಷನ್ ವಾರ್ಡ್‍ಗಳಲ್ಲಿ ಯಾರನ್ನೂ ಬಿಡುವುದಿಲ್ಲ. ಮಕ್ಕಳ ಜೊತೆ ಅನಿವಾರ್ಯವಾಗಿ ಇರಲೇಬೇಕಾದ ಕಾರಣ ತಾಯಿಗೆ ಅವಕಾಶ ಕೊಡಲಾಗಿದೆ. ತಾಯಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ಕಿಮ್ಸ್ ನ ಹಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ.

  • ಐಸೋಲೇಷನ್ ವಾರ್ಡ್ ಬಾತ್‍ರೂಮಿನಲ್ಲಿ ಕೊರೊನಾ ಸೋಂಕಿತ ಆತ್ಮಹತ್ಯೆ

    ಐಸೋಲೇಷನ್ ವಾರ್ಡ್ ಬಾತ್‍ರೂಮಿನಲ್ಲಿ ಕೊರೊನಾ ಸೋಂಕಿತ ಆತ್ಮಹತ್ಯೆ

    – ಕತ್ತು ಕುಯ್ದುಕೊಂಡ ತಬ್ಲಿಘಿ

    ಮುಂಬೈ: ಕೊರೊನಾ ಸೋಂಕಿತ ತಬ್ಲಿಘಿಯೋರ್ವ ಐಸೋಲೇಷನ್ ವಾರ್ಡ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಕೋಲಾದಲ್ಲಿ ನಡೆದಿದೆ.

    30 ವರ್ಷದ ಸೋಂಕಿತ ಅಸ್ಸಾಂ ರಾಜ್ಯದ ನಾಗಾಂವ್ ಗ್ರಾಮದ ನಿವಾಸಿ. ಮೃತ ಸೋಂಕಿತ ಮಾರ್ಚ್ 6ರಿಂದ 8ರವರೆಗೆ ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದ ಜಮಾತ್ ನಲ್ಲಿ ಭಾಗಿಯಾಗಿದ್ದರು. ತದನಂತರ ಕೆಲ ಸದಸ್ಯರ ಜೊತೆ ಮಹಾರಾಷ್ಟ್ರದ ಅಕೋಲಾಗೆ ಬಂದಿದ್ದನು. ಅಕೋಲಾಗೂ ಮೊದಲು ಈ ತಂಡ ಬಲರಾಂಪುದಲ್ಲಿ ವಾಸ್ತವ್ಯ ಮಾಡಿತ್ತು.

    ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಜಿತೇಂದ್ರ ಪಾಪಲಕರ್, ಏಪ್ರಿಲ್ 7ರಂದು ಈ ಜಮಾತ್ ಸದಸ್ಯರು ತಾವೇ ಬಂದು ಆಸ್ಪತ್ರೆಗೆ ದಾಖಲಾಗಿದ್ದರು. ಎಲ್ಲರ ಆರೋಗ್ಯದಲ್ಲಿ ಬದಲಾವಣೆ ಕಂಡು ಬಂದಿದ್ದರಿಂದ ಸದಸ್ಯರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 10ರಂದು ಬಂದ ವರದಿಯಲ್ಲಿ ಓರ್ವ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು ಎಂದು ತಿಳಿಸಿದ್ದಾರೆ.

    ಮರುದಿನ ಅಂದ್ರೆ ಶನಿವಾರ (ಏಪ್ರಿಲ್ 11) ಓರ್ವನ ಶವ ವಾರ್ಡ್ ನಲ್ಲಿಯ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಸ್ಪತ್ರೆಯಲ್ಲಿ ಹರಿತವಾದ ವಸ್ತುವಿನಿಂದ ಆತ ಕತ್ತು ಕುಯ್ದುಕೊಂಡಿದ್ದಾನೆ ಎನ್ನಲಾಗುತ್ತಿದೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಇದೇ ಐಸೋಲೇಷನ್ ವಾರ್ಡ್ ನಲ್ಲಿ 12 ಜನರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಕುರಿತು 12 ಜನರಿಂದ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಪ್ರಕಾರ, ಸಾವನ್ನಪ್ಪಿದ ವ್ಯಕ್ತಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದನು. ಈತ ಕಳೆದ 10 ತಿಂಗಳಿನಿಂದ ಕುಟುಂಬಸ್ಥರಿಂದ ದೂರವಿದ್ದ ಕಾರಣ ನೊಂದಿದ್ದನು ಎಂದು ಹೇಳುತ್ತಾರೆ.

  • ಐಸೋಲೇಷನ್ ವಾರ್ಡಿನಲ್ಲಿದ್ದ ರೋಗಿಯ ಮೇಲೆ ಸತತ 2 ರಾತ್ರಿ ಅತ್ಯಾಚಾರ – ಸಂತ್ರಸ್ತೆ ಸಾವು

    ಐಸೋಲೇಷನ್ ವಾರ್ಡಿನಲ್ಲಿದ್ದ ರೋಗಿಯ ಮೇಲೆ ಸತತ 2 ರಾತ್ರಿ ಅತ್ಯಾಚಾರ – ಸಂತ್ರಸ್ತೆ ಸಾವು

    – ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

    ಪಟ್ನಾ: ಒಂದುಕಡೆ ದೇಶಾದ್ಯಂತ ಕೊರೊನಾ ವೈರಸ್ ಸೋಂಕಿತರನ್ನು ಗುಣಪಡಿಸುವಲ್ಲಿ ವೈದ್ಯಕೀಯ ಇಲಾಖೆ ಹಗಲಿರುಳು ಎನ್ನದೇ ಸೇವೆ ಮಾಡುತ್ತಿದ್ದಾರೆ. ಆದರೆ ಬಿಹಾರದಲ್ಲಿ ವೈದ್ಯರು ಐಸೋಲೇಷನ್ ವಾರ್ಡಿನಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಬಿಹಾರದ ಗಯಾದಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ ನಂತರ ಸಂತ್ರಸ್ತೆ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಅನುಗ್ರಹ ನಾರಾಯಣ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಸಂತ್ರಸ್ತೆಯ ಅತ್ತೆ ಅಧಿಕಾರಿಗಳಿಗೆ ದೂರು ನೀಡಿದ ಬಳಿಕ ಮಂಗಳವಾರ ಈ ದುಷ್ಕೃತ್ಯ ಬೆಳಕಿಗೆ ಬಂದಿದೆ.

    ಏನಿದು ಪ್ರಕರಣ?
    ಕೊರೊನಾದಿಂದ ಇಡೀ ದೇಶವೇ 21 ದಿನ ಲಾಕ್‍ಡೌನ್ ಆಗಿದೆ. 25 ವರ್ಷದ ಸಂತ್ರಸ್ತೆ ಪಂಜಾಬ್‍ನ ಲೂಧಿಯಾನದಿಂದ ಬಿಹಾರದ ಗಯಾಕ್ಕೆ ಮಾರ್ಚ್ 25ರಂದು ಪತಿಯೊಂದಿಗೆ ಬಂದಿದ್ದರು. ಮೃತ ಸಂತ್ರಸ್ತೆ ಎರಡು ತಿಂಗಳ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವಾಗಿತ್ತು. ಗರ್ಭಪಾತದ ಕಾರಣದಿಂದಾಗಿ ಸಂತ್ರಸ್ತೆಗೆ ಹೆಚ್ಚು ರಕ್ತಸ್ರಾವವಾಗುತ್ತಿತ್ತು. ಹೀಗಾಗಿ ಆಕೆಯನ್ನು ಗಯಾದ ಮಾರ್ಚ್ 27ರಂದು ಅನುಗ್ರಹ ನಾರಾಯಣ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಅಲ್ಲಿ ಸಂತ್ರಸ್ತೆಯನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಬಳಿಕ ಏಪ್ರಿಲ್ 1 ರಂದು ಕೊರೊನಾ ವೈರಸ್ ಶಂಕೆ ಇದೆ ಎಂದು ಸಂತ್ರಸ್ತೆಯನ್ನು ಪ್ರತ್ಯೇಕ ವಾರ್ಡಿನಲ್ಲಿ ಇರಿಸಲಾಗಿತ್ತು. ಪ್ರತ್ಯೇಕ ವಾರ್ಡಿನಲ್ಲಿ ಸಂತ್ರಸ್ತೆ ಒಬ್ಬಂಟಿಯಾಗಿದ್ದಳು. ಇದೇ ವೇಳೆ ತಪಾಸಣೆ ಮಾಡಲು ಬರುತ್ತಿದ್ದ ವೈದ್ಯರು ಏಪ್ರಿಲ್ 2 ಮತ್ತು 3ರಂದು ಸತತ ಎರಡು ರಾತ್ರಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬದವರು ಆರೋಪಿಸಿದ್ದಾರೆ.

    ಕೊರೊನಾ ಸೋಂಕು ಇಲ್ಲದಿರುವುದು ದೃಢಪಟ್ಟ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿತ್ತು. ಆದರೆ ಆಕೆ ಮನೆಯಲ್ಲಿ ಒಬ್ಬಳೇ ಮೌನವಾಗಿ ಇರುತ್ತಿದ್ದು, ಭಯಪಡುತ್ತಿದ್ದಳು. ಆಗ ಮನೆಯವರು ಪದೇ ಪದೇ ಕೇಳಿದಾಗ ಆಸ್ಪತ್ರೆಯಲ್ಲಿ ವೈದ್ಯರು ಅತ್ಯಾಚಾರ ಎಸಗಿರುವ ವಿಚಾರವನ್ನು ಹೇಳಿದ್ದಾಳೆ. ಆದರೆ ಚಿಕಿತ್ಸೆ ಪಡೆದರೂ ರಕ್ತಸ್ರಾವ ನಿಂತಿರಲಿಲ್ಲ. ಕೊನೆಗೆ ತೀವ್ರ ರಕ್ತಸ್ರಾವದಿಂದ ಏಪ್ರಿಲ್ 6 ರಂದು ಸೊಸೆ ಮೃತಪಟ್ಟಳು ಎಂದು ಅತ್ತೆ ತಿಳಿಸಿದ್ದಾರೆ.

    ಸಂತ್ರಸ್ತೆಯ ಅತ್ತೆ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಸ್ಪತ್ರೆಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಆದರೆ ಸಂತ್ರಸ್ತೆಯ ಅತ್ತೆಗೆ ಆರೋಪಿಗಳನ್ನು ಗುರುತಿಸಲು ಸಾಧ್ಯವಾಗಿಲ್ಲ. ಸದ್ಯಕ್ಕೆ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

    ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಸ್ಪತ್ರೆಯ ಅಧೀಕ್ಷಕ ಡಾ.ವಿ.ಕೆ.ಪ್ರಸಾದ್ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರಂತೆ ನಟಿಸಿ ಆಸ್ಪತ್ರೆಯ ಪ್ರತ್ಯೇಕವಾದ ವಾರ್ಡಿಗೆ ಹೋಗಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

  • ಹುಬ್ಬಳ್ಳಿಯಲ್ಲಿ ಐಸೋಲೇಶನ್ ವಾರ್ಡ್‍ಗಳಾಗುತ್ತಿವೆ ರೈಲ್ವೇ ಬೋಗಿಗಳು

    ಹುಬ್ಬಳ್ಳಿಯಲ್ಲಿ ಐಸೋಲೇಶನ್ ವಾರ್ಡ್‍ಗಳಾಗುತ್ತಿವೆ ರೈಲ್ವೇ ಬೋಗಿಗಳು

    ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಕೇಂದ್ರದ ಸೂಚನೆಗಳಂತೆ ರೈಲ್ವೆ ಬೋಗಿಗಳನ್ನೇ ಐಸೋಲೇಶನ್ ವಾರ್ಡ್‍ಗಳನ್ನಾಗಿ ಮಾಡಲಾಗುತ್ತಿದೆ. ಇದನ್ನು ನೈಋತ್ಯ ರೈಲ್ವೇ ವಲಯ ಸಹ ಜಾರಿಗೆ ತರುತ್ತಿದ್ದು, ಹುಬ್ಬಳ್ಳಿ ಜಂಕ್ಷನ್‍ನಲ್ಲಿ ಈಗಾಗಲೇ ಈ ಕಾರ್ಯ ಆರಂಭವಾಗಿದೆ.

    ಕೊರೊನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ನೈಋತ್ಯ ರೈಲ್ವೇ ವಲಯದಲ್ಲಿನ ರೈಲು ಬೋಗಿಗಳನ್ನು ಪ್ರತ್ಯೇಕ ವಾರ್ಡ್‍ಗಳಾಗಿ ಪರಿವರ್ತಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಪ್ರತ್ಯೇಕ ಸೌಲಭ್ಯಗಳಿಗಾಗಿ ದೇಶದ ಸಾಮಥ್ರ್ಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ರೈಲ್ವೆ ಸ್ಲೀಪರ್ ಕ್ಲಾಸ್ ಬೋಗಿಗಳನ್ನು ಕೋವಿಡ್-19 ಐಸೋಲೇಷನ್ ವಾರ್ಡ್‍ಗಳಾಗಿ ಪರಿವರ್ತಿಸಲಾತ್ತಿದೆ.

    ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ರೈಲ್ವೇ ಕಾರ್ಮಿಕರು ಐಸೋಲೆಟೆಡ್ ವಾರ್ಡ್ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ಬೋಗಿಗಳು ಸ್ವಚ್ಛವಾಗಿದ್ದು, ರೋಗಿಗಳು ಚೇತರಿಸಿಕೊಳ್ಳಲು ಆರೋಗ್ಯಕರ ಪರಿಸರವನ್ನು ಹೊಂದಿವೆ. ಅಗತ್ಯಕ್ಕನುಗುಣವಾಗಿ ಕೆಲವು ಕೋವಿಡ್-19 ರೋಗಿಗಳನ್ನು ಈ ಐಸೋಲೇಶನ್ ಭೋಗಿಗಳಲ್ಲಿರಿಸಿ ಚಿಕಿತ್ಸೆ ನೀಡಲಾಗುವುದು. ಆರಂಭದಲ್ಲಿ 5,000 ಪ್ರಯಾಣಿಕರ ಬೋಗಿಗಳನ್ನು ಐಸೋಲೇಶನ್ ವಾರ್ಡ್‍ಗಳನ್ನಾಗಿ ಮಾರ್ಪಡಿಸಲು ಯೋಜಿಸಲಾಗಿದೆ.

    ಮಾರ್ಚ್ 25 ರಂದು ಪ್ರಾರಂಭವಾದ ರಾಷ್ಟ್ರವ್ಯಾಪಿ ಲಾಕ್‍ಡೌನ್ ನಂತರ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಎಲ್ಲ ಪ್ರಯಾಣಿಕ ರೈಲು ಸೇವೆಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ. ಇವುಗಳಲ್ಲಿ ಕೆಲು ರೈಲುಗಳನ್ನು ಐಸೋಲೇಶನ್ ವಾರ್ಡ್‍ಗಳನ್ನಾಗಿ ಪರಿವರ್ತಿಸಲಾಗುತ್ತಿದೆ.

    ರೈಲ್ವೆ ಬೋಗಿಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಸಿಗಲಿದೆ. ವೈದ್ಯ ಸಿಬ್ಬಂದಿ, ಸೋಂಕಿತರು, ಶಂಕಿತರು ಸೇರಿದಂತೆ ಆಹಾರ ಪೂರೈಕೆಗೂ ಅವಕಾಶ ಕಲ್ಪಿಸಲಾಗಿದೆ. ದೇಶದಲ್ಲಿ ಕೊರೊನಾ ವೈರಸ್ ಉಲ್ಬಣಗೊಂಡ ನಂತರ ತಮ್ಮನ್ನು ತಾವೇ ಪ್ರತ್ಯೇಕಿಸಿಕೊಳ್ಳುವ, ಮತ್ತೊಬ್ಬರಿಂದ ಅಂತರ ಕಾಯ್ದುಕೊಳ್ಳುವ ಸೌಲಭ್ಯಗಳ ಅವಶ್ಯಕತೆಯಿದೆ. ಈ ಬೇಡಿಕೆ ಈಡೇರಿಸಲು ಭಾರತೀಯ ರೈಲ್ವೆ ಒಂದು ಚತುರ ಪರಿಹಾರವನ್ನು ಕಂಡುಹಿಡಿದಿದೆ.

    ವಿದ್ಯುತ್:
    ಪ್ರತ್ಯೇಕ ಸೌಲಭ್ಯಗಳಿಗಾಗಿ ದೇಶದ ಸಾಮಥ್ರ್ಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ರೈಲ್ವೆ ತನ್ನ ರೈಲು ಬೋಗಿಗಳನ್ನು ಕ್ವಾರಂಟೈನ್ ಹಬ್‍ಗಳಾಗಿ ಪರಿವರ್ತಿಸುವ ಯೋಜನೆಯನ್ನು ರೂಪಿಸುತ್ತಿದೆ. ಆದರೆ ವಿದ್ಯುತ್ ಸಂಪರ್ಕವಿರುವ ಸಮೀಪದಲ್ಲಿ ಬೋಗಿಗಳನ್ನು ನಿಲ್ಲಿಸಿದರೆ ಅನುಕೂಲವಾಗಲಿದೆ.

    ವಿನ್ಯಾಸ:
    ಕ್ವಾರಂಟೈನ್‍ಗಾಗಿ ರೈಲ್ವೆ ಇಲಾಖೆ ನಾನ್ ಎಸಿ ಕೋಚ್ ಆಯ್ಕೆ ಮಾಡಿಕೊಂಡಿದೆ. ಇದರಲ್ಲಿ 10 ಕ್ಯಾಬಿನ್‍ಗಳಿರುತ್ತವೆ. ಕೇವಲ ಒಂದು ಬರ್ತ್ ಬಿಟ್ಟು ಉಳಿದ ಮೂರು ಬರ್ತ್ ತೆಗೆದು ರೂಮ್ ರೀತಿ ಸಿದ್ಧಗೊಳಿಸಲಾಗಿದೆ. ಇದೇ ರೀತಿ ಸೋಂಕಿತ ವ್ಯಕ್ತಿಯ ಚಿಕಿತ್ಸೆಗೆ ಇರುವ ರೂಮ್ ವ್ವವಸ್ಥೆ ಮಾಡಲಾಗಿದ್ದು, ಪ್ಲಾಸ್ಟಿಕ್ ಕರ್ಟನ್‍ನಿಂದ ಕ್ಯಾಬಿನ್ ಕವರ್ ಮಾಡಲಾಗಿದೆ.

    ಶೌಚಾಲಯ:
    ಒಂದು ಕ್ಯಾಬಿನ್‍ನಲ್ಲಿ 3 ಭಾರತೀಯ ಶೈಲಿ 1 ವೆಸ್ಟರ್ನ್ ಟಾಯ್ಲೆಟ್‍ಗಳಿರುತ್ತವೆ. ಈ ಪೈಕಿ ಎರಡು ಟಾಯ್ಲೆಟ್‍ಗಳನ್ನು ಸ್ನಾನದ ಕೋಣೆಯಾಗಿ ಪರಿವರ್ತಿಸಲಾಗಿದೆ. ಬಾಥ್ ರೂಮ್‍ನಲ್ಲಿ ಟ್ಯಾಪ್‍ನ ಎತ್ತರವನ್ನು ಹೆಚ್ಚಿಸಲಾಗಿದೆ. ಜೊತೆಗೆ ಹ್ಯಾಂಡ್ ಶವರ್ ಗಳನ್ನ ಹಾಕಲಾಗಿದೆ.

    ವೈದ್ಯಕೀಯ ಸಿಬ್ಬಂದಿ:
    ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಡಾಕ್ಟರ್, ನರ್ಸ್ ಸೇರಿ ವೈದ್ಯಕೀಯ ಸಿಬ್ಬಂದಿಗೂ ಪ್ರತ್ಯೇಕ ಕ್ಯಾಬಿನ್ ವ್ಯವಸ್ಥೆ ಮಾಡಲಾಗಿದೆ. ರೋಗಿ ಮತ್ತು ವೈದ್ಯರ ಕ್ಯಾಬಿನ್ ಮಧ್ಯೆ ಅಡ್ಡವಾಗಿ ಪ್ಲಾಸ್ಟಿಕ್ ಕರ್ಟನ್ ಹಾಕಲಾಗಿದೆ.

    ಆಹಾರ:
    ಬೇಸ್ ಅಡಿಗೆಮನೆಗಳಿಲ್ಲದ ನಿಲ್ದಾಣಗಳಿಗೆ ಆಹಾರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಪ್ಯಾಂಟ್ರಿ ಕಾರುಗಳನ್ನು ಮೊಬೈಲ್ ಅಡುಗೆಮನೆಯನ್ನಾಗಿ ಪರಿವರ್ತಿಸಲು ರೈಲ್ವೆ ಯೋಜಿಸಿದೆ.

  • ನಿಮ್ಮೊಂದಿಗೆ ನಾವಿದ್ದೇವೆ – ಚಿಕಿತ್ಸೆ ಪಡೆಯುತ್ತಿರೋರಿಗೆ ಧೈರ್ಯ ತುಂಬಿದ ಶ್ರೀರಾಮುಲು

    ನಿಮ್ಮೊಂದಿಗೆ ನಾವಿದ್ದೇವೆ – ಚಿಕಿತ್ಸೆ ಪಡೆಯುತ್ತಿರೋರಿಗೆ ಧೈರ್ಯ ತುಂಬಿದ ಶ್ರೀರಾಮುಲು

    – ಸುರಕ್ಷತೆ ದೃಷ್ಟಿಯಿಂದ ನಿಮ್ಮನ್ನು ಐಸೋಲೇಶನ್ ವಾರ್ಡಿನಲ್ಲಿಟ್ಟಿದ್ದೇವೆ

    ಬಳ್ಳಾರಿ: ನೀವು ಧೈರ್ಯ ಕಳೆದುಕೊಳ್ಳಬೇಡಿ, ನಿಮಗೇನು ಆಗಿಲ್ಲ. ದೇವರ ದಯೆಯಿಂದ ನಿಮ್ಮದು ನೆಗೆಟಿವ್ ರಿಪೋರ್ಟ್ ಬರುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಐಸೋಲೇಶನ್ ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಧೈರ್ಯ ತುಂಬಿದ್ದಾರೆ.

    ಇಂದು ಶ್ರೀರಾಮುಲು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಹಿನ್ನೆಲೆ ಐಸೋಲೇಶನ್ ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿದ್ದರು. ತಾವು ಕೋವಿಡ್ ಸುರಕ್ಷಾ ಕಿಟ್ ಧರಿಸಿ ಒಳಗಡೆ ತೆರಳಿ ಬೆನ್ನುತಟ್ಟಿ ಅವರಿಗೆ ಧೈರ್ಯ ತುಂಬಿದರು.

    ನೀವು ಧೈರ್ಯ ಕಳೆದುಕೊಳ್ಳಬೇಡಿ, ನಿಮಗೇನು ಆಗಿಲ್ಲ. ದೇವರ ದಯೆಯಿಂದ ನಿಮ್ಮದು ನೆಗೆಟಿವ್ ರಿಪೋರ್ಟ್ ಬರುತ್ತದೆ. ಅಲ್ಲಿಯವರೆಗೆ ಐಸೋಲೇಶನ್ ವಾರ್ಡಿನಲ್ಲಿರಬೇಕು. ನಿಮ್ಮೊಂದಿಗೆ ನಾವಿದ್ದೇವೆ, ನಿಮಗೆ ಚಿಕಿತ್ಸೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ನಿಮ್ಮನ್ನು ದೂರವಿಟ್ಟಿದ್ದೇವೆ ಎಂದು ಅಂದುಕೊಳ್ಳಬೇಡಿ, ದೇಶ ಹಾಗೂ ಎಲ್ಲರ ಸುರಕ್ಷತೆ ದೃಷ್ಟಿಯಿಂದ ನಿಮ್ಮನ್ನು ಐಸೋಲೇಶನ್ ವಾರ್ಡಿನಲ್ಲಿಟ್ಟಿದ್ದೇವೆ ಎಂದು ಹೇಳಿದರು.

    ಜಿಲ್ಲಾ ಶಸ್ತ್ರಚಿಕಿತ್ಸಕ ಎನ್.ಬಸರೆಡ್ಡಿ ಅವರು ಐಸೋಲೇಶನ್ ವಾರ್ಡಿನಲ್ಲಿ ಎಷ್ಟು ದಿನಗಳಿಂದ ಇರಿಸಲಾಗಿದೆ ಎಂಬುದು ಸೇರಿದಂತೆ ಕಲ್ಪಿಸಲಾಗುತ್ತಿರುವ ಇನ್ನಿತರ ಚಿಕಿತ್ಸಾ ಕ್ರಮಗಳನ್ನು ವಿವರಿಸಿದರು. ಈ ಸಂದರ್ಭದಲ್ಲಿ ಶಾಸಕ ಸೋಮಶೇಖರ ರೆಡ್ಡಿ, ನಾಗೇಂದ್ರ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಇನ್ನಿತರ ವೈದ್ಯಾಧಿಕಾರಿಗಳು ಇದ್ದರು.

  • ರಾಜೀವ್ ಗಾಂಧಿ ಐಸೋಲೇಷನ್ ವಾರ್ಡ್‍ನಲ್ಲಿ ವೈದ್ಯರಿಗೆ ಆತಂಕ

    ರಾಜೀವ್ ಗಾಂಧಿ ಐಸೋಲೇಷನ್ ವಾರ್ಡ್‍ನಲ್ಲಿ ವೈದ್ಯರಿಗೆ ಆತಂಕ

    ಬೆಂಗಳೂರು: ಅಮೆರಿಕದಿಂದ ಬಂದ ಟೆಕ್ಕಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಐಸೋಲೇಷನ್ ವಾರ್ಡ್‍ನಲ್ಲಿ ಕೆಲಸ ಮಾಡುತ್ತಿರುವ ವೈದ್ಯರ ತಂಡ ಆತಂಕದಲ್ಲಿದೆ.

    ಇಷ್ಟು ದಿನ ಟ್ರಿಪಲ್ ಲೇಯರ್ ಮಾಸ್ಕ್ ಹಾಕಿಕೊಂಡು ಪ್ರಾಥಮಿಕ ಪರೀಕ್ಷೆ ಮಾಡುತ್ತಿದ್ದ ವೈದ್ಯರ ತಂಡ ಎನ್ 95 ಮಾಸ್ಕ್ ಬಳಸುತ್ತಿದ್ದಾರೆ. ಜೊತೆಗೆ ಐಸೋಲೇಷನ್ ವಾರ್ಡಿನಲ್ಲಿ ಕೆಲಸ ಮಾಡುವ ಎಲ್ಲರಿಗೂ ಎನ್ 95 ಮಾಸ್ಕ್ ಬಳಸುವಂತೆ ತಿಳಿಸಿದ್ದಾರೆ.

    ಪ್ರತಿ ಒಂದು ಗಂಟೆಗೆ ಐಸೋಲೇಷನ್ ವಾರ್ಡ್‍ಗೆ ಕ್ರಿಮಿನಾಶಕ ಬಳಸಿ ಸ್ವಚ್ಚತೆ ಮಾಡುವಂತೆ ಸೂಚಿಸಿದ್ದಾರೆ. ಐಸೋಲೇಷನ್ ವಾರ್ಡ್‍ನಲ್ಲಿ 5 ಜನ ಸೋಂಕು ಶಂಕಿತರು ಇದ್ದು ಇದರಲ್ಲಿ ಈಗಾಗಲೇ ಒಬ್ಬರಿಗೆ ಪಾಸಿಟಿವ್ ಇರುವುದು ದೃಢವಾಗಿತ್ತು. ಟೆಕ್ಕಿಯ ಸ್ನೇಹಿತನಿಗೂ ಪಾಸಿಟಿವ್ ಇರುವುದು ಪಕ್ಕಾ ಆಗಿದ್ದು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಈ ಇಬ್ಬರು ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಉಳಿದ ಮೂವರನ್ನು ಬೇರೆ ಬೇರೆ ವಾರ್ಡ್‍ಗಳಲ್ಲಿ ದಾಖಲು ಮಾಡಿಕೊಂಡಿದ್ದಾರೆ. ಕೊರೊನಾ ಈಗ ವೈದ್ಯರಿಗೂ ಆತಂಕ ಉಂಟು ಮಾಡಿದೆ.

    ಮಹಾಮಾರಿ ಕೊರೊನಾ ವೈರಸ್ ದಿನೇ ದಿನೇ ಜನರಲ್ಲಿ ಭಯವನ್ನ ಹೆಚ್ಚು ಮಾಡ್ತಿದೆ. ಈಗಾಗಲೇ ಕರ್ನಾಟಕದಲ್ಲಿ 4 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಟ್ವೀಟ್ ಮಾಡಿ ಸ್ಪಷ್ಟಪಡಿಸಿದರು. ಹಾಗೆಯೇ ಬೆಂಗಳೂರಿನಲ್ಲಿ ಮೂರು ಕೊರೊನಾ ಪಾಸಿಟಿವ್ ಕೇಸ್‍ಗಳು ವರದಿಯಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ಐಸಿಎಂಆರ್) ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.