Tag: israel embassy

  • ಬೆಂಗಳೂರಿನಲ್ಲಿರೊ ಇಸ್ರೇಲ್ ರಾಯಭಾರ ಕಚೇರಿ, ಹೈಕೋರ್ಟ್‌ಗೆ RDX ಇಟ್ಟಿರೋದಾಗಿ ಇ-ಮೇಲ್‌ ಬೆದರಿಕೆ

    ಬೆಂಗಳೂರಿನಲ್ಲಿರೊ ಇಸ್ರೇಲ್ ರಾಯಭಾರ ಕಚೇರಿ, ಹೈಕೋರ್ಟ್‌ಗೆ RDX ಇಟ್ಟಿರೋದಾಗಿ ಇ-ಮೇಲ್‌ ಬೆದರಿಕೆ

    ಬೆಂಗಳೂರು: ನಗರದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಗೆ ಹಾಗೂ ಹೈಕೋರ್ಟ್‌ಗೆ RDX ಇಟ್ಟಿರೋದಾಗಿ ಇ-ಮೇಲ್‌ ಮೂಲಕ ಬೆದರಿಕೆ ಸಂದೇಶ ಬಂದಿದೆ. ಶುಕ್ರವಾರ ಪ್ರಾರ್ಥನೆ ವೇಳೆ ಸ್ಫೋಟ ಆಗುತ್ತೆ ಎಂದೂ ಸಹ ಮೇಲ್​ನಲ್ಲಿ ತಿಳಿಸಲಾಗಿದೆ.

    ಸೆ.22 ರಂದು Cho_ramaswamy@hotmail ಎಂಬ ಐಡಿಯಿಂದ ಮೇಲ್ ಕಳಿಸಲಾಗಿದೆ. ಕೂಡಲೆ ಕಾರ್ಯಪ್ರವೃತ್ತರಾದ ಪೊಲೀಸರು ರಿಸ್ಕ್ ತೆಗೆದುಕೊಳ್ಳದೇ ಮೇಲ್ ಬಂದ ಬಳಿಕ ಸರ್ಚ್ ಆಪರೇಷನ್ ಕೈಗೊಂಡಿದ್ದಾರೆ. ತೀವ್ರ ತಪಾಸಣೆ ಬಳಿಕ ಇದು ಹುಸಿ ಬೆದರಿಕೆ ಮೇಲ್ ಎಂಬುದು ದೃಢವಾಗಿದೆ. IP ಅಡ್ರೆಸ್ ಮೂಲಕ ಆರೋಪಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

    ಪದೇ ಪದೇ ರಾಮಸ್ವಾಮಿ ಎಂಬ ಇ.ಮೇಲ್ ಐಡಿಯಿಂದ ಬೆದರಿಕೆ ಇ-ಮೇಲ್ ಬರುತ್ತಿದ್ದರಿಂದ ರಾಮಸ್ವಾಮಿ ಎಂಬ ಇ-ಮೇಲ್ ಐಡಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಅಜ್ಞಾತ ಸ್ಥಳದಿಂದ ಬೆದರಿಕೆ ಇ.ಮೇಲ್ ಮಾಡಿ ಬೆದರಿಕೆ ಹಾಕುತ್ತಿರುವುದರಿಂದ ಬೆಂಗಳೂರು ಪೊಲೀಸರಿಗೆ ಕಿಡಿಗೇಡಿಯನ್ನ ಪತ್ತೆ ಹಚ್ಚುವುದು ದೊಡ್ಡ‌ ಸವಾಲಾಗಿದೆ. ನಿರಂತರವಾಗಿ Cho_ramaswamy@hotmail ಎಂಬ ಮೇಲ್ ಐಡಿ ಹಿಂದೆ ಬಿದ್ದಿದ್ದರು ಪೊಲೀಸರಿಗೆ ಸಿಗದೇ ಚಳ್ಳೆಹಣ್ಣು ತಿನ್ನಿಸುತ್ತಿದ್ದಾನೆ.

    ಸದ್ಯ ಪೊಲೀಸರು ಹಾಟ್ ಮೇಲ್‌ಗೆ ಪತ್ರ ಬರೆದು ಮಾಹಿತಿ ಕೇಳಿದ್ದು, ಹಾಟ್ ಮೇಲ್ ನಿಂದ ಯಾವುದೇ ರೆಸ್ಪಾನ್ಸ್ ಸಿಕ್ಕಿಲ್ಲ. ಹೀಗಾಗಿ IP ಅಡ್ರೆಸ್ ಮೂಲಕ ಆರೋಪಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಘಟನೆ ಬಗ್ಗೆ ವಿಧಾನಸೌಧ ಹಾಗು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದ್ದು, 10 ತಂಡಗಳನ್ನ ಮಾಡಿ ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

  • ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ

    ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ

    ನವದೆಹಲಿ: ದೆಹಲಿಯ (New Delhi) ಚಾಣಕ್ಯಪುರಿಯಲ್ಲಿರುವ (Chanakyapuri) ಇಸ್ರೇಲ್ ರಾಯಭಾರಿ ಕಚೇರಿಗೆ (Israel Embassy) ಇಂದು ಬಾಂಬ್ ಬೆದರಿಕೆ ಕರೆ (Bomb Threat Call) ಬಂದಿದ್ದು, ದೆಹಲಿ ಪೊಲೀಸರು (Delhi Police) ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

    ಇಂದು ಸಂಜೆ 6 ಗಂಟೆ ಸುಮಾರಿಗೆ ದೆಹಲಿ ಪೊಲೀಸರಿಗೆ ಅಪರಿಚಿತ ಕರೆ ಬಂದಿದೆ. ಕರೆಯಲ್ಲಿ ಸ್ಫೋಟದ ಬಗ್ಗೆ ಅಧಿಕಾರಿಗಳಿಗೆ ವರದಿಯಾಗಿದೆ. ಇಸ್ರೇಲಿ ರಾಯಭಾರ ಕಚೇರಿಯ ಹಿಂದೆ ಖಾಲಿ ಜಾಗದಲ್ಲಿ ಸ್ಫೋಟ ಸಂಭವಿಸಿದೆ ಎಂದು ಕರೆ ಮಾಡಿದ ಅನಾಮಿಕ ವ್ಯಕ್ತಿ ತಿಳಿಸಿದ್ದಾನೆ. ಇದನ್ನೂ ಓದಿ: ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮವನ್ನು ಬಹಿಷ್ಕರಿಸಿದ ಸಿಪಿಎಂ

    ಬೆದರಿಕೆ ಕರೆ ಬಂದ ತಕ್ಷಣ ಬಾಂಬ್ ಸ್ಕ್ವಾಡ್‌ನೊಂದಿಗೆ ಪೊಲೀಸರ ವಿಶೇಷ ಸೆಲ್ ತಂಡ ಸ್ಥಳಕ್ಕೆ ಆಗಮಿಸಿ ಪರಿಶಿಲನೆ ನಡೆಸಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆ. ಕರೆ ಮಾಡಿದವರ ಗುರುತು, ಮತ್ತು ಉದ್ದೇಶವನ್ನು ತನಿಖೆ ಮಾಡಲಾಗುತ್ತಿದೆ. ಈ ಕುರಿತು ವಿವರವಾದ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮುಂಬೈನಲ್ಲಿ ಲ್ಯಾಂಡ್‌ ಆಯ್ತು ಫ್ರಾನ್ಸ್‌ ವಶದಲ್ಲಿದ್ದ 303 ಭಾರತೀಯರಿದ್ದ ವಿಮಾನ

  • ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಭೇಟಿಯಾದ ನಟಿ ಕಂಗನಾ ರಣಾವತ್

    ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಭೇಟಿಯಾದ ನಟಿ ಕಂಗನಾ ರಣಾವತ್

    ನವದೆಹಲಿ: ಇಸ್ರೇಲ್ ರಾಯಭಾರಿ ನೌರ್ ಗಿಲೋನ್ (Naor Gilon) ಅವರನ್ನು ನಟಿ ಕಂಗನಾ ರಣಾವತ್ (Kangana Ranaut) ಭೇಟಿಯಾಗಿದ್ದಾರೆ. ನವದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಯಲ್ಲಿ (Israel Embassy) ಭೇಟಿಯಾಗಿ ಇಸ್ರೇಲ್ (Israel) ಹಮಾಸ್ (Hamas) ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.

    ಭೇಟಿ ಬಳಿಕ ನಟಿ ಕಂಗನಾ ರಣಾವತ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಿನ್ನೆ (ಮಂಗಳವಾರ) ನಾನು ರಾವಣ ದಹನಕ್ಕಾಗಿ ದೆಹಲಿಗೆ ಬಂದಿದ್ದೆ. ಈ ಸಮಯದಲ್ಲಿ ಇಂದಿನ ಆಧುನಿಕ ರಾವಣ ಮತ್ತು ಹಮಾಸ್‌ನಂತಹ ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಜನರನ್ನು ಭೇಟಿಯಾಗಬೇಕೆಂದು ನನಗೆ ಅನಿಸಿತು. ಈ ಹಿನ್ನಲೆ ಇಸ್ರೇಲ್ ರಾಯಭಾರ ಕಚೇರಿಗೆ ಭೇಟಿ ನೀಡಿದೆ ಎಂದು ಬರೆದುಕೊಂಡಿದ್ದಾರೆ.

    ಸಣ್ಣ ಮಕ್ಕಳು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡು ಹಮಾಸ್ ಭೀಕರವಾಗಿ ಹತ್ಯೆ ಮಾಡಿದೆ. ಭಯೋತ್ಪಾದನೆ ವಿರುದ್ಧದ ಈ ಯುದ್ಧದಲ್ಲಿ ಇಸ್ರೇಲ್ ಜಯಶಾಲಿಯಾಗಲಿದೆ ಎಂಬ ಸಂಪೂರ್ಣ ಭರವಸೆ ನನಗಿದೆ. ಭಾರತದ ಸ್ವಾವಲಂಬಿ ಯುದ್ಧ ವಿಮಾನ ತೇಜಸ್ ಮತ್ತು ನನ್ನ ಮುಂಬರುವ ಚಿತ್ರ ತೇಜಸ್ ಬಗ್ಗೆ ನಾನು ಅವರೊಂದಿಗೆ ಚರ್ಚಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾವಣನ ಪ್ರತಿಕೃತಿ ದಹಿಸಿದ ನಟಿ ಕಂಗನಾ ರಣಾವತ್

    ತೇಜಸ್‌ನಲ್ಲಿ ಕಂಗನಾ ರಣಾವತ್ ಅವರು ಭಯೋತ್ಪಾದನೆಯ ವಿರುದ್ಧ ಹೋರಾಡುವ ಕಾರ್ಯಾಚರಣೆಯಲ್ಲಿರುವ ವಾಯುಪಡೆಯ ಪೈಲಟ್‌ನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿಯ ಪ್ರಕಾರ ಕಂಗನಾ ತನ್ನ ಚಲನಚಿತ್ರಕ್ಕಾಗಿ ಭಾರತೀಯ ಪಡೆಗಳು ಬಳಸಿದ ವಿಶೇಷ ಯುದ್ಧ ತಂತ್ರಗಳನ್ನು ಕರಗತ ಮಾಡಿಕೊಳ್ಳಲು ಕಠಿಣ ತರಬೇತಿಗಾಗಿ 4 ತಿಂಗಳುಗಳನ್ನು ಮೀಸಲಿಟ್ಟಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಇನ್ನೂ ಯಾಕೆ ಭೂ ದಾಳಿ ನಡೆಸಿಲ್ಲ – ಪ್ರಶ್ನೆಗೆ ಸಿಕ್ಕಿತು ಉತ್ತರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೆಹಲಿಯಲ್ಲಿ ಸ್ಫೋಟ – ಮೂರು ಕಾರುಗಳಿಗೆ ಹಾನಿ

    ದೆಹಲಿಯಲ್ಲಿ ಸ್ಫೋಟ – ಮೂರು ಕಾರುಗಳಿಗೆ ಹಾನಿ

    ನವದೆಹಲಿ: ರಾಜಧಾನಿ ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಶುಕ್ರವಾರ ಸಂಜೆ  ಬ್ಲಾಸ್ಟ್‌ ಸಂಭವಿಸಿದೆ. ಕಡಿಮೆ ಪ್ರಮಾಣ ಐಇಡಿ ಸ್ಫೋಟಗೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

    ದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ ಬಳಿ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಕನ್ನಡಿಗಳು ಮುರಿ ಬಿದ್ದಿದೆ. ಯಾವುದೇ ಗಾಯಗಳು ವರದಿಯಾಗಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

    ರಾಷ್ಟ್ರಪತಿ ರಾಮನಾಥ್‌ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿರುವ ಸೇನೆಯ ಬೀಟಿಂಗ್ ರಿಟ್ರೀಟ್ ಸಮಾರಂಭ ನಡೆಯುತ್ತಿರುವ ವಿಜಯ್‌ ಚೌಕ್‌ನಿಂದ 1.8 ಕಿ.ಮೀ ದೂರದಲ್ಲಿ ಈ ಸ್ಫೋಟ ಸಂಭವಿಸಿದೆ.

    ಸ್ಥಳಕ್ಕೆ ರಾಷ್ಟ್ರೀಯ ಭದ್ರತಾ ದಳ(ಎನ್‌ಎಸ್‌ಜಿ) ಆಗಮಿಸಿದೆ. ಸ್ಫೋಟದಿಂದ ಮೂರು ಕಾರುಗಳಿಗೆ ಹಾನಿಯಾಗಿದೆ.