Tag: Israel

  • ಒಂದೇ ಗಂಟೆಯೊಳಗೆ 120ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಇಸ್ರೇಲ್

    ಒಂದೇ ಗಂಟೆಯೊಳಗೆ 120ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಇಸ್ರೇಲ್

    ಟೆಲ್‌ ಅವೀವ್:‌ ಒಂದೇ ಗಂಟೆಯ ಅವಧಿಯಲ್ಲಿ 120ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರರ ಕಚೇರಿಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ವಾಯುಪಡೆ ದಾಳಿ ನಡೆಸಿದೆ.

    ದಕ್ಷಿಣ ಲೆಬನಾನ್‌ನಲ್ಲಿ ಒಂದು ಗಂಟೆಯೊಳಗೆ 120 ಕ್ಕೂ ಹೆಚ್ಚು ಭಯೋತ್ಪಾದಕರ ಅಡಗುದಾಣಗಳನ್ನು ಧ್ವಂಸ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿದೆ. ಸೋಮವಾರ ಉಗ್ರರ ವಿರುದ್ಧ ಕೈಗೊಂಡ ವ್ಯಾಪಕ ದಾಳಿಯ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ದಾಳಿಯಲ್ಲಿ ಸಾವು ನೋವಿನ ಬಗ್ಗೆ ಯಾವುದೇ ಮಾಹಿತಿಯನ್ನು ಇಸ್ರೇಲ್‌ ಹಂಚಿಕೊಂಡಿಲ್ಲ.

    ಉಗ್ರರ ವಿರುದ್ಧ ಐಎಎಫ್ (ವಾಯು ಪಡೆ) ವ್ಯಾಪಕವಾದ ವೈಮಾನಿಕ ಕಾರ್ಯಾಚರಣೆಯನ್ನು ನಡೆಸಿತು. ಈ ವೇಳೆ ದಕ್ಷಿಣ ಲೆಬನಾನ್‌ನಲ್ಲಿ ಒಂದು ಗಂಟೆಯೊಳಗೆ 120 ಕ್ಕೂ ಹೆಚ್ಚು ಭಯೋತ್ಪಾದಕರ ತಾಣಗಳನ್ನು ಹೊಡೆಯಲಾಗಿದೆ ಎಂದು ಇಸ್ರೇಲ್‌ ಸೇನೆ ತಿಳಿಸಿದೆ.

    ಇಸ್ರೇಲ್ ಮತ್ತು ಇರಾನ್ (Israel Iran War) ನಡುವೆ ಸೇಡು, ಪ್ರತೀಕಾರದ ದಾಳಿಗಳು ತೀವ್ರಗೊಳ್ಳುತ್ತಿವೆ. ಬೈರೂತ್‌ ನಗರದ ಮೇಲೆ ಇಸ್ರೇಲ್‌ನ ಪಡೆಗಳು ವೈಮಾನಿಕ ದಾಳಿ ಮುಂದುವರಿಸಿವೆ. ಇರಾನ್‌ ಸುಪ್ರೀಂ ಲೀಡರ್‌ ಇಸ್ರೇಲ್‌ ವಿರುದ್ಧ ಗುಡುಗಿದ ಬಳಿಕ ಇಸ್ರೇಲ್‌ ತನ್ನ ವಾಯುದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ.

    ಇನ್ನೂ ಗಾಜಾದಲ್ಲಿನ (Gaza) ಮಸೀದಿಯ (Mosque) ಮೇಲೆ ಇಸ್ರೇಲ್‌ (Israel) ವಾಯುಪಡೆ ಶುಕ್ರವಾರ ನಡೆಸಿದ್ದ ವೈಮಾನಿಕ ದಾಳಿಯಿಂದ 26 ಮಂದಿ ಸಾವಿಗೀಡಾಗಿದ್ದರು. ಈ ಬೆನ್ನಲ್ಲೇ ಹಮಾಸ್‌ ಕೂಡ ಕೌಂಟರ್‌ ಅಟ್ಯಾಕ್‌ ಮಾಡಿತ್ತು. ಇಸ್ರೇಲ್‌ ವೈಮಾನಿಕ ದಾಳಿ ಬೆನ್ನಲ್ಲೇ ಗಾಜಾದಿಂದ ರಾಕೆಟ್‌ಗಳನ್ನು (Rocket Fired) ಹಾರಿಸಿತ್ತು.

  • ವಾಯುದಾಳಿಗೆ ಕೌಂಟರ್‌ ಅಟ್ಯಾಕ್‌ – ದಕ್ಷಿಣ ಇಸ್ರೇಲ್‌ ಕಡೆಗೆ ಹೊರಟ ಸ್ಫೋಟಕ ತುಂಬಿದ ರಾಕೆಟ್‌

    ವಾಯುದಾಳಿಗೆ ಕೌಂಟರ್‌ ಅಟ್ಯಾಕ್‌ – ದಕ್ಷಿಣ ಇಸ್ರೇಲ್‌ ಕಡೆಗೆ ಹೊರಟ ಸ್ಫೋಟಕ ತುಂಬಿದ ರಾಕೆಟ್‌

    – ಇಸ್ರೇಲ್‌ ಮೇಲಿನ ದಾಳಿಗೆ 1 ವರ್ಷ

    ಬೈರೂತ್‌: ಗಾಜಾಪಟ್ಟಿಯಲ್ಲಿ (Gaza Strip) ನಿರಾಶ್ರಿತರ ಶಿಬಿರವಾಗಿ ಪರಿವರ್ತನೆಯಾಗಿದ್ದ ಮಸೀದಿಯೊಂದರ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, 26 ಮಂದಿ ಬಲಿಯಾಗಿದ್ದಾರೆ. ಈ ಬೆನ್ನಲ್ಲೇ ಹಮಾಸ್‌ ಕೂಡ ಕೌಂಟರ್‌ ಅಟ್ಯಾಕ್‌ ಮಾಡಿದೆ. ಇಸ್ರೇಲ್‌ ವೈಮಾನಿಕ ದಾಳಿ ಬೆನ್ನಲ್ಲೇ ಗಾಜಾದಿಂದ ರಾಕೆಟ್‌ಗಳನ್ನು (Rocket Fired) ಹಾರಿಸಿದೆ.

    ಅಕ್ಟೋಬರ್‌ 7ರ ದಾಳಿಗೆ ಒಂದು ವರ್ಷ ತುಂಬುವುದಕ್ಕೆ ಒಂದು ದಿನ ಮೊದಲು ಈ ಘಟನೆ ನಡೆದಿದೆ. ಹಲವಾರು ಸ್ಪೋಟಕಗಳನ್ನು ಹೊತ್ತ ರಾಕೆಟ್‌ವೊಂದು ಉತ್ತರ ಗಾಜಾಪಟ್ಟಿಯಿಂದ ಇಸ್ರೇಲ್‌ಗೆ Israel) ನುಗ್ಗುತ್ತಿರುವುದನ್ನು ಗುರುತಿಸಲಾಗಿದೆ. ಇದನ್ನೂ ಓದಿ: ಜಾತಿ ಗಣತಿ ವರದಿ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಲಿ ಆಮೇಲೆ ನೋಡೋಣ – ಪರಮೇಶ್ವರ್

    ಭಾನುವಾರ ಮಧ್ಯಾಹ್ನವಷ್ಟೇ ಗಾಜಾ ಪಟ್ಟಿಯ ದೀರ್ ಅಲ್ – ಬಾಲಾಹ್ ನಗರದ ಕೇಂದ್ರ ಭಾಗದಲ್ಲಿ ಇದ್ದ ಮಸೀದಿ ಮೇಲೆ ಇಸ್ರೇಲ್‌ ದಾಳಿ ನಡೆಸಿ 26 ಜನರ ಹತ್ಯೆಗೈದಿತ್ತು. ಈ ಮಸೀದಿಯ ಒಳಗೆ ಹಮಾಸ್ ಉಗ್ರರ ಕಮಾಂಡ್ ಹಾಗೂ ನಿಯಂತ್ರಣ ಕೇಂದ್ರ ಇತ್ತು ಎಂದು ಇಸ್ರೇಲ್ ಸೇನೆ ಹೇಳಿಕೊಂಡಿತ್ತು. ಇದೇ ಕಾರಣಕ್ಕಾಗಿ ದಾಳಿ ನಡೆಸಿದ್ದಾಗಿ ಸಮರ್ಥನೆ ಮಾಡಿಕೊಂಡಿತ್ತು. ಈ ಬೆನ್ನಲ್ಲೇ ಗಾಜಾದಿಂದ ರಾಕೆಟ್‌ಗಳು ಇಸ್ರೇಲ್‌ ಕಡೆಗೆ ಹೊರಟಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ನನ್ನ ಬದುಕು ಇರೋದು ನಿಮ್ಮ ಋಣ ತೀರಿಸೋಕೆ, ನಿಮ್ಮ ಮನೆ ಮಗನಿಗೆ ಹಾಲಾದ್ರೂ ಕೊಡಿ, ವಿಷವಾದ್ರೂ ಕೊಡಿ: ಹೆಚ್‌ಡಿಕೆ ಭಾವುಕ

    ಮಸೀದಿಯಲ್ಲಿ ಗಾಯಾಳುಗಳ ಆಕ್ರಂದನ!
    ಇಸ್ರೇಲ್ ನಡೆಸಿದ ದಾಳಿಯಲ್ಲಿ 26 ಮಂದಿ ಬಲಿಯಾಗುವ ಜೊತೆಯಲ್ಲೇ ನೂರಾರು ಮಂದಿ ಗಾಯಗೊಂಡಿದ್ದಾರೆ. ಮಸೀದಿಯಲ್ಲಿ ಇದ್ದ ಗಾಯಾಳುಗಳನ್ನು ಸಮೀಪದ ಅಲ್ – ಅಕ್ಸಾ ಹುತಾತ್ಮರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಾಂಬ್ ದಾಳಿಯಿಂದ ಧ್ವಂಸಗೊಂಡ ಮಸೀದಿಯ ಒಳಗಿನಿಂದ ಗಾಯಾಳುಗಳನ್ನ ಹೊರ ತೆಗೆಯೋದೇ ಹರ ಸಾಹಸ ಆಗಿತ್ತು ಎಂದು ಆಸ್ಪತ್ರೆಯ ವಕ್ತಾರ ಮೊಹಮ್ಮದ್ ಬಸ್ಸಾಲ್ ಹೇಳಿದ್ದಾರೆ. ಬಹುತೇಕ ಗಾಯಾಳುಗಳಿಗೆ ಆಸ್ಪತ್ರೆಯ ಒಳಗೆ ಬೆಡ್ ಸಿಗದ ಕಾರಣ ಆಸ್ಪತ್ರೆಯ ಮುಂಭಾಗದ ಗೇಟ್‌ ಬಳಿಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

    ಇಸ್ರೇಲ್ ಮೇಲೆ ಹಮಾಸ್ ದಾಳಿಗೆ 1 ವರ್ಷ:
    2023ರ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ನೂರಾರು ಹಮಾಸ್ ಉಗ್ರರು ದಾಳಿ ನಡೆಸಿದ್ದರು. ಈ ಕರಾಳ ಘಟನೆ 1 ವರ್ಷ ಒಂದು ವರ್ಷ ಪೂರೈಸಿದಂತಾಗಿದೆ. ಒಂದು ವರ್ಷಗಳ ಅವಧಿಯಲ್ಲಿ ಗಾಜಾ ಪಟ್ಟಿಯಲ್ಲಿ ಸುಮಾರು 50 ಸಾವಿರ ಮಂದಿ ಸಾವನ್ನಪ್ಪಿದಂತಾಗಿದೆ. ಅಕ್ಟೋಬರ್ 7ರ ದಾಳಿಯ ಕಹಿ ನೆನಪಿನ ಹಿನ್ನೆಲೆಯಲ್ಲಿ ವಿಶ್ವ ಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟರೆಸ್‌ ಕೂಡಾ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ಹಿಂಸಾಚಾರದ ಕಹಿ ನೆನಪನ್ನು ಈ ವಿಡಿಯೋದಲ್ಲಿ ಬಿಂಬಿಸಲಾಗಿದೆ.

    ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಇಸ್ರೇಲ್ ಕೂಡಾ ಪ್ರತಿ ದಾಳಿ ನಡೆಸಿ ಗಾಜಾ ಪಟ್ಟಿಯಲ್ಲಿ ಹಮಾಸ್ ಉಗ್ರರ ನೆಲೆಗಳನ್ನು ಧ್ವಂಸ ಮಾಡುತ್ತಾ ಬಂದಿದೆ. ಈ ಸಮರದಲ್ಲಿ ಸಾವಿರಾರು ಪ್ಯಾಲಸ್ತೀನ್ ಪ್ರಜೆಗಳು ಸಾವನ್ನಪ್ಪಿದ್ದಾರೆ. ಈ ಹಿಂಸಾಚಾರ ನಿಲ್ಲಬೇಕು ಎಂದು ಆಗ್ರಹಿಸಿರುವ ವಿಶ್ವ ಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟರೆಸ್‌ ಶಾಂತಿಯ ಸಂದೇಶ ಸಾರಿದ್ದಾರೆ. ಇದನ್ನೂ ಓದಿ: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮಿಸ್ಸಿಂಗ್; ನಾಪತ್ತೆ ಹಿಂದಿದ್ಯಾ ಮಹಿಳೆ ಕೈವಾಡ? ಬ್ಲ್ಯಾಕ್‌ಮೇಲ್‌ಗೆ ಬಲಿಯಾದ್ರಾ?

  • ಗಾಜಾದ ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ – 26 ಮಂದಿ ಸಾವು

    ಗಾಜಾದ ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ – 26 ಮಂದಿ ಸಾವು

    ಬೈರೂತ್‌: ಗಾಜಾದಲ್ಲಿನ (Gaza) ಮಸೀದಿಯ (Mosque) ಮೇಲೆ ಇಸ್ರೇಲ್‌ (Israel) ವಾಯುಪಡೆ ನಡೆಸಿದ ವೈಮಾನಿಕ ದಾಳಿಯಿಂದ 26 ಮಂದಿ ಸಾವಿಗೀಡಾಗಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯವು ತಿಳಿಸಿದೆ.

    ಸೆಂಟ್ರಲ್ ಡೀರ್ ಅಲ್-ಬಲಾಹ್‌ನಲ್ಲಿನ ಮಸೀದಿಯೊಂದರಲ್ಲಿ ಜನರು ಆಶ್ರಯ ಪಡೆದಿದ್ದರು. ಇದರ ಮೇಲೆ ಇಸ್ರೇಲ್‌ ದಾಳಿ ನಡೆಸಿದೆ. ಪರಿಣಾಮ ಅದರಲ್ಲಿದ್ದ 26 ಮಂದಿ ಸಾವಿಗೀಡಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಇಸ್ರೇಲ್‌ ವಾಯುದಾಳಿ ಬೆನ್ನಲ್ಲೇ ಬಿಗ್‌ ಅಪ್ಡೇಟ್‌ – ನಸ್ರಲ್ಲಾನ ಸಂಭಾವ್ಯ ಉತ್ತರಾಧಿಕಾರಿಯೇ ನಾಪತ್ತೆ

    ಈ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೇಲ್‌, ನಾವು ಹಮಾಸ್ ಉಗ್ರರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದೇವೆ ಎಂದು ಹೇಳಿಕೊಂಡಿದೆ. ಮಸೀದಿಯಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಮಾಸ್ (Hamas) ಭಯೋತ್ಪಾದಕರ ಮೇಲೆ ನಿಖರವಾದ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ‌

    ಶನಿವಾರ ಬೈರೂತ್ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಗೆ ಹಿಜ್ಬುಲ್ಲಾ ಬಂಡುಕೋರ ಸಂಘಟನೆಯ ನಾಯಕ ಹಾಗೂ ನಸ್ರಲ್ಲಾನ ಸಂಭಾವ್ಯ ಉತ್ತರಾಧಿಕಾರಿ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿತ್ತು.

    ಈ ಹಿಂದೆ ಹಿಜ್ಬುಲ್ಲಾ ಕಮಾಂಡರ್ ನಬಿಲ್ ಕೌಕ್, ಸಂವಹನ ಘಟಕದ ಕಮಾಂಡರ್ ಮೊಹಮ್ಮದ್ ರಶೀದ್ ಸಕಾಫಿ, ನಸ್ರಲ್ಲಾ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಹಶೆಮ್ ಸಫೀದ್ದೀನ್ ಇಸ್ರೇಲ್ ವಾಯುದಾಳಿಯಲ್ಲಿ ಹತರಾಗಿದ್ದರು. ಇದರ ಬೆನ್ನಲ್ಲೇ ಹಿಜ್ಬುಲ್ಲಾದ ಮತ್ತೋರ್ವ ಕಮಾಂಡರ್ ಹಾಗೂ ನಸ್ರಲ್ಲಾನ ಸಂಭಾವ್ಯ ಉತ್ತರಾಧಿಕಾರಿ ಕೂಡ ಕಣ್ಮರೆಯಾಗಿದ್ದು, ಆತ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ವರದಿಯಾಗಿತ್ತು. ಇದನ್ನೂ ಓದಿ: ಉತ್ತರ ಲೆಬನಾನ್‌ ಮೇಲೆ ಇಸ್ರೇಲ್‌ ವಾಯುದಾಳಿ – ಹಮಾಸ್‌ ಟಾಪ್‌ ಕಮಾಂಡರ್‌ ಹತ್ಯೆ

  • ಇಸ್ರೇಲ್‌ ವಾಯುದಾಳಿ ಬೆನ್ನಲ್ಲೇ ಬಿಗ್‌ ಅಪ್ಡೇಟ್‌ – ನಸ್ರಲ್ಲಾನ ಸಂಭಾವ್ಯ ಉತ್ತರಾಧಿಕಾರಿಯೇ ನಾಪತ್ತೆ

    ಇಸ್ರೇಲ್‌ ವಾಯುದಾಳಿ ಬೆನ್ನಲ್ಲೇ ಬಿಗ್‌ ಅಪ್ಡೇಟ್‌ – ನಸ್ರಲ್ಲಾನ ಸಂಭಾವ್ಯ ಉತ್ತರಾಧಿಕಾರಿಯೇ ನಾಪತ್ತೆ

    ಬೈರೂತ್:‌ ನಗರದಲ್ಲಿ ಇಸ್ರೇಲ್ ನಡೆಸುತ್ತಿರುವ ವಾಯುದಾಳಿ ದಿನೇ ದಿನೇ ತೀವ್ರವಾಗುತ್ತಿದ್ದು, ಅತ್ತ ಹಿಜ್ಬುಲ್ಲಾ ಬಂಡುಕೋರ ಸಂಘಟನೆಯ ನಾಯಕರೆಲ್ಲ ಕಣ್ಮರೆಯಾಗುತ್ತಿದ್ದಾರೆ. ಶನಿವಾರ ಉತ್ತರ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಬೆನ್ನಲ್ಲೇ ನಸ್ರಲ್ಲಾನ ಸಂಭಾವ್ಯ ಉತ್ತರಾಧಿಕಾರಿಯೂ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಈ ಹಿಂದೆ ಹಿಜ್ಬುಲ್ಲಾ ಕಮಾಂಡರ್ ನಬಿಲ್ ಕೌಕ್, ಸಂವಹನ ಘಟಕದ ಕಮಾಂಡರ್ ಮೊಹಮ್ಮದ್ ರಶೀದ್ ಸಕಾಫಿ, ನಸ್ರಲ್ಲಾ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಹಶೆಮ್ ಸಫೀದ್ದೀನ್ ಇಸ್ರೇಲ್ ವಾಯುದಾಳಿಯಲ್ಲಿ ಹತರಾಗಿದ್ದರು. ಇದೀಗ ಹಿಜ್ಬುಲ್ಲಾ ಮತ್ತೋರ್ವ ಕಮಾಂಡರ್ ಹಾಗೂ ನಸ್ರಲ್ಲಾನ ಸಂಭಾವ್ಯ ಉತ್ತರಾಧಿಕಾರಿ ಕೂಡ ಕಣ್ಮರೆಯಾಗಿದ್ದು, ಆತ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ವರದಿಯಾಗಿದೆ. ಶುಕ್ರವಾರದಿಂದಲೇ ಅಂದರೆ ಇಸ್ರೇಲಿ ವೈಮಾನಿಕ ದಾಳಿಯ ಆತನ ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದು ಲೆಬನಾನಿನ ಭದ್ರತಾ ಮೂಲಗಳು ತಿಳಿಸಿವೆ ಎನ್ನಲಾಗಿದೆ.

    ಹಮಾಸ್‌ ಟಾಪ್‌ ಕಮಾಂಡರ್‌ ಉಡೀಸ್‌:
    ದಕ್ಷಿಣ ಲೆಬನಾನ್‌ ಬಳಿಕ ಹಿಜ್ಬುಲ್ಲಾ (Hezbollah) ಭಯೋತ್ಪಾದಕರ ಗುಂಪನ್ನು ಗುರಿಯಾಗಿಸಿ ಉತ್ತರ ಲೆಬನಾನ್‌ (North Lebanon) ಮೇಲೆ ಇಸ್ರೇಲ್‌ ವಾಯುದಾಳಿ ನಡೆಸಿದೆ. ಟ್ರಿಪೋಲಿ ಶನಿವಾರ ಟ್ರಿಪೋಲಿ ನಗರದ ಮೇಲೆ ದಾಳಿ ನಡೆಸಿ, ಹಮಾಸ್‌ನ ಚೀಫ್‌ ಕಮಾಂಡರ್‌ ಹಾಗೂ ಆತನ ಕುಟುಂಬವನ್ನು ಹತ್ಯೆಗೈದಿದೆ. ಈ ಬೆನ್ನಲ್ಲೇ ಇಸ್ರೇಲ್‌ ಸೇನೆಯು ಇನ್ನಷ್ಟು ಪ್ರದೇಶಗಳ ಮೇಲೆ ದಾಳಿ ನಡೆಸುವ ಎಚ್ಚರಿಕೆ ನೀಡಿದ್ದು, ತಕ್ಷಣವೇ ಆ ಪ್ರದೇಶದ ನಿವಾಸಿಗಳು ಸ್ಥಳದಿಂದ ಎತ್ತಂಗಡಿ ಮಾಡುವಂತೆ ಎಚ್ಚರಿಸಿದೆ.

    250 ಹಿಜ್ಬುಲ್ಲಾ ಭಯೋತ್ಪಾದಕರ ಹತ್ಯೆ:
    ಶುಕ್ರವಾರವಷ್ಟೇ ಹಿಜ್ಬುಲ್ಲಾ ಭಯೋತ್ಪಾದಕರನ್ನು ಹತ್ಯೆಗೈದಿರುವ ಬಗ್ಗೆ ಇಸ್ರೇಲ್‌ ಮಾಹಿತಿ ಹಂಚಿಕೊಂಡಿತ್ತು. ಕಳೆದ ಒಂದು ವಾರದಲ್ಲಿ ಇಸ್ರೇಲ್‌ ಹಿಜ್ಬುಲ್ಲಾದ 2,000ಕ್ಕೂ ಹೆಚ್ಚು ಸೇನಾ ನೆಲೆಗಳ ಗುರಿಯಾಗಿಸಿ ದಾಳಿ ನಡೆಸಿದ್ದು, 250ಕ್ಕೂ ಹೆಚ್ಚು ಮಂದಿಯನ್ನು ಹತ್ಯೆಗೈದಿದೆ. ಇದರಲ್ಲಿ 5 ಬೆಟಾಲಿಯನ್‌ ಕಮಾಂಡರ್‌, 10 ಕಂಪನಿ ಕಮಾಂಡರ್‌ ಹಾಗೂ 6 ಪ್ಲಟೂನ್‌ ಕಮಾಂಡರ್‌ಗಳನ್ನ ಕೊಂದಿರುವುದಾಗಿ ಹೇಳಿಕೊಂಡಿತ್ತು.

    ಇರಾನ್ ಸುಪ್ರೀಂ ಲೀಡರ್ ಯುದ್ಧಕ್ಕೆ ಕರೆ
    ಟೆಗ್ರಾನ್ ನಗರದ ಕೇಂದ್ರ ಭಾಗದಲ್ಲಿರುವ ಇಮಾಮ್ ಖೊಮೇನಿ ಗ್ರ‍್ಯಾಂಡ್ ಮೊಸಲ್ಲಾ ಮಸೀದಿಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ವೇಳೆ ಮಾತನಾಡಿದ ಇರಾನ್ ಸರ್ವೋಚ್ಛ ನಾಯಕ ಹಾಗೂ ಧರ್ಮ ಗುರು ಅಯತೊಲ್ಲಾ ಅಲಿ ಖಮೇನಿ, ‘ವಿಶ್ವಾದ್ಯಂತ ಇರುವ ಮುಸ್ಲಿಮರಿಗೆ ಶತ್ರುಗಳು ಇದ್ದಾರೆ. ನಾವೆಲ್ಲರೂ ಒಂದಾಗಿ ಸೇರಿ ಆ ಶತ್ರುವನ್ನು ಮಣಿಸಬೇಕು. ಎಲ್ಲರೂ ಒಂದಾಗಿ ನಮ್ಮ ಶತ್ರುವನ್ನು ಮಣಿಸೋಣ ಎಂದು ಕರೆ ಕೊಟ್ಟಿದ್ದರು.

    ಇಸ್ರೇಲ್ ಮೇಲಿನ ದಾಳಿಗೆ ಖಮೇನಿ ಸಮರ್ಥನೆ!
    ಇಸ್ಲಾಮಿಕ್ ರಿಪಬ್ಲಿಕ್ ದೇಶವಾದ ಇರಾನ್ ಕೆವು ದಿನಗಳ ಹಿಂದೆ ಇಸ್ರೇಲ್ ಮೇಲೆ ನಡೆಸಿದ ಖಂಡಾಂತರ ಕ್ಷಿಪಣಿ ದಾಳಿಗಳನ್ನು ‘ಕಾನೂನುಬದ್ದ’ ಎಂದು ಪ್ರತಿಪಾದಿಸಿದ ಖಮೇನಿ, 2023ರ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯನ್ನೂ ‘ನ್ಯಾಯಸಮ್ಮತ’ ಎಂದು ಪ್ರತಿಪಾದಿಸಿದ್ದರು.

  • ಉತ್ತರ ಲೆಬನಾನ್‌ ಮೇಲೆ ಇಸ್ರೇಲ್‌ ವಾಯುದಾಳಿ – ಹಮಾಸ್‌ ಟಾಪ್‌ ಕಮಾಂಡರ್‌ ಹತ್ಯೆ

    ಉತ್ತರ ಲೆಬನಾನ್‌ ಮೇಲೆ ಇಸ್ರೇಲ್‌ ವಾಯುದಾಳಿ – ಹಮಾಸ್‌ ಟಾಪ್‌ ಕಮಾಂಡರ್‌ ಹತ್ಯೆ

    – ಈವರೆಗೆ 2,000ಕ್ಕೂ ಹೆಚ್ಚು ಸೇನಾ ನೆಲೆಗಳ ಗುರಿಯಾಗಿಸಿ ದಾಳಿ; ಐಡಿಎಫ್‌

    ಬೈರೂತ್: ಇಸ್ರೇಲ್ ಮತ್ತು ಇರಾನ್ (Israel Iran War) ನಡುವೆ ಸೇಡು, ಪ್ರತೀಕಾರದ ದಾಳಿಗಳು ತೀವ್ರಗೊಳ್ಳುತ್ತಿವೆ. ಬೈರೂತ್‌ ನಗರದ ಮೇಲೆ ಇಸ್ರೇಲ್‌ನ ಪಡೆಗಳು ವೈಮಾನಿಕ ದಾಳಿ ಮುಂದುವರಿಸಿವೆ. ಇರಾನ್‌ ಸುಪ್ರೀಂ ಲೀಡರ್‌ ಇಸ್ರೇಲ್‌ ವಿರುದ್ಧ ಗುಡುಗಿದ ಬಳಿಕ ಇಸ್ರೇಲ್‌ ತನ್ನ ವಾಯುದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ.

    ದಕ್ಷಿಣ ಲೆಬನಾನ್‌ ಬಳಿಕ ಹಿಜ್ಬುಲ್ಲಾ (Hezbollah) ಭಯೋತ್ಪಾದಕರ ಗುಂಪನ್ನು ಗುರಿಯಾಗಿಸಿ ಉತ್ತರ ಲೆಬನಾನ್‌ (North Lebanon) ಮೇಲೆ ಇಸ್ರೇಲ್‌ ವಾಯುದಾಳಿ ನಡೆಸಿದೆ. ಟ್ರಿಪೋಲಿ ಶನಿವಾರ ಟ್ರಿಪೋಲಿ ನಗರದ ಮೇಲೆ ದಾಳಿ ನಡೆಸಿ, ಹಮಾಸ್‌ನ ಚೀಫ್‌ ಕಮಾಂಡರ್‌ ಹಾಗೂ ಆತನ ಕುಟುಂಬವನ್ನು ಹತ್ಯೆಗೈದಿದೆ.

    ಈ ಬೆನ್ನಲ್ಲೇ ಇಸ್ರೇಲ್‌ ಸೇನೆಯು ಇನ್ನಷ್ಟು ಪ್ರದೇಶಗಳ ಮೇಲೆ ದಾಳಿ ನಡೆಸುವ ಎಚ್ಚರಿಕೆ ನೀಡಿದ್ದು, ತಕ್ಷಣವೇ ಆ ಪ್ರದೇಶದ ನಿವಾಸಿಗಳು ಸ್ಥಳದಿಂದ ಎತ್ತಂಗಡಿ ಮಾಡುವಂತೆ ಎಚ್ಚರಿಸಿದೆ. ಇದನ್ನೂ ಓದಿ: ಎಲ್ಲರೂ ಒಟ್ಟಾಗಿ ಇಸ್ರೇಲ್‌ ಸೋಲಿಸೋಣ – ಇರಾನ್‌ ಸುಪ್ರೀಂ ಲೀಡರ್‌ ಕರೆ

    250 ಹಿಜ್ಬುಲ್ಲಾ ಭಯೋತ್ಪಾದಕರ ಹತ್ಯೆ:
    ಶುಕ್ರವಾರವಷ್ಟೇ ಹಿಜ್ಬುಲ್ಲಾ ಭಯೋತ್ಪಾದಕರನ್ನು ಹತ್ಯೆಗೈದಿರುವ ಬಗ್ಗೆ ಇಸ್ರೇಲ್‌ ಮಾಹಿತಿ ಹಂಚಿಕೊಂಡಿತ್ತು. ಕಳೆದ ಒಂದು ವಾರದಲ್ಲಿ ಇಸ್ರೇಲ್‌ ಹಿಜ್ಬುಲ್ಲಾದ 2,000ಕ್ಕೂ ಹೆಚ್ಚು ಸೇನಾ ನೆಲೆಗಳ ಗುರಿಯಾಗಿಸಿ ದಾಳಿ ನಡೆಸಿದ್ದು, 250ಕ್ಕೂ ಹೆಚ್ಚು ಮಂದಿಯನ್ನು ಹತ್ಯೆಗೈದಿದೆ. ಇದರಲ್ಲಿ 5 ಬೆಟಾಲಿಯನ್‌ ಕಮಾಂಡರ್‌, 10 ಕಂಪನಿ ಕಮಾಂಡರ್‌ ಹಾಗೂ 6 ಪ್ಲಟೂನ್‌ ಕಮಾಂಡರ್‌ಗಳನ್ನ ಕೊಂದಿರುವುದಾಗಿ ಹೇಳಿಕೊಂಡಿತ್ತು. ಇದನ್ನೂ ಓದಿ: 9 ವರ್ಷಗಳ ನಂತ್ರ ಇದೇ ಮೊದಲು – ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

    ಇರಾನ್ ಸುಪ್ರೀಂ ಲೀಡರ್ ಯುದ್ಧಕ್ಕೆ ಕರೆ
    ಟೆಗ್ರಾನ್ ನಗರದ ಕೇಂದ್ರ ಭಾಗದಲ್ಲಿರುವ ಇಮಾಮ್ ಖೊಮೇನಿ ಗ್ರ‍್ಯಾಂಡ್ ಮೊಸಲ್ಲಾ ಮಸೀದಿಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ವೇಳೆ ಮಾತನಾಡಿದ ಇರಾನ್ ಸರ್ವೋಚ್ಛ ನಾಯಕ ಹಾಗೂ ಧರ್ಮ ಗುರು ಅಯತೊಲ್ಲಾ ಅಲಿ ಖಮೇನಿ, ‘ವಿಶ್ವಾದ್ಯಂತ ಇರುವ ಮುಸ್ಲಿಮರಿಗೆ ಶತ್ರುಗಳು ಇದ್ದಾರೆ. ನಾವೆಲ್ಲರೂ ಒಂದಾಗಿ ಸೇರಿ ಆ ಶತ್ರುವನ್ನು ಮಣಿಸಬೇಕು. ಎಲ್ಲರೂ ಒಂದಾಗಿ ನಮ್ಮ ಶತ್ರುವನ್ನು ಮಣಿಸೋಣ ಎಂದು ಕರೆ ಕೊಟ್ಟಿದ್ದರು. ಇದನ್ನೂ ಓದಿ: ಲೆಬನಾನ್‌ ಮೇಲೆ ಇಸ್ರೇಲ್‌ ಆಕ್ರಮಣ ತೀವ್ರ – ಹಿಜ್ಬುಲ್ಲಾ ಸಂಘಟನೆಯ 15 ಮಂದಿ ಹತ್ಯೆ!

    ಇಸ್ರೇಲ್ ಮೇಲಿನ ದಾಳಿಗೆ ಖಮೇನಿ ಸಮರ್ಥನೆ!
    ಇಸ್ಲಾಮಿಕ್ ರಿಪಬ್ಲಿಕ್ ದೇಶವಾದ ಇರಾನ್ ಕೆವು ದಿನಗಳ ಹಿಂದೆ ಇಸ್ರೇಲ್ ಮೇಲೆ ನಡೆಸಿದ ಖಂಡಾಂತರ ಕ್ಷಿಪಣಿ ದಾಳಿಗಳನ್ನು ‘ಕಾನೂನುಬದ್ದ’ ಎಂದು ಪ್ರತಿಪಾದಿಸಿದ ಖಮೇನಿ, 2023ರ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯನ್ನೂ ‘ನ್ಯಾಯಸಮ್ಮತ’ ಎಂದು ಪ್ರತಿಪಾದಿಸಿದ್ದರು.

  • ಎಲ್ಲರೂ ಒಟ್ಟಾಗಿ ಇಸ್ರೇಲ್‌ ಸೋಲಿಸೋಣ – ಇರಾನ್‌ ಸುಪ್ರೀಂ ಲೀಡರ್‌ ಕರೆ

    ಎಲ್ಲರೂ ಒಟ್ಟಾಗಿ ಇಸ್ರೇಲ್‌ ಸೋಲಿಸೋಣ – ಇರಾನ್‌ ಸುಪ್ರೀಂ ಲೀಡರ್‌ ಕರೆ

    – ಹಿಜ್ಬುಲ್ಲಾಗೆ ನಸ್ರಲ್ಲಾ ಸಹೋದರ ಬಾಸ್
    – ಮುಸ್ಲಿಮರ ಶತ್ರುಗಳನ್ನ ಸದೆಬಡಿಯಬೇಕು ಎಂದ ಖಮೇನಿ

    ಬೈರೂತ್‌: ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧದ ಕಾರ್ಮೋಡ ದಟ್ಟವಾಗುತ್ತಿದೆ. ಸೇಡು, ಪ್ರತೀಕಾರದ ದಾಳಿಗಳು ತೀವ್ರಗೊಳ್ಳುತ್ತಿವೆ. ಬೇರೂತ್ ನಗರದ ಮೇಲೆ ಇಸ್ರೇಲ್‌ನ ಪಡೆಗಳು ವೈಮಾನಿಕ ದಾಳಿ ಮುಂದುವರಿಸಿವೆ. ಇಸ್ರೇಲ್ ವಿರುದ್ಧ ಮತ್ತಷ್ಟು ದಾಳಿಗಾಗಿ ಇರಾನ್ ಸಿದ್ಧತೆ ನಡೆಸಿದೆ.

    ಈ ಬೆನ್ನಲ್ಲೇ ಹಿಜ್ಬುಲ್ಲಾದ ಸಾರಥ್ಯವನ್ನು ನಸ್ರಲ್ಲಾ ಸಹೋದರ ಹಶೀಂ ಸೈಫುದ್ದೀನ್ ವಹಿಸಿದ್ದಾನೆ ಅಂತ ತಿಳಿದುಬಂದಿದೆ. ಇನ್ನು, ನಸ್ರಲ್ಲಾ ಹತ್ಯೆ ಬಳಿಕ ಇಸ್ರೇಲ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾರ್ವಜನಿಕವಾಗಿ ಧರ್ಮ ಪ್ರವಚನ ನೀಡಿದ್ದಾರೆ. ಇಸ್ರೇಲ್ ಮೇಲಿನ ಹಮಾಸ್ ದಾಳಿ ನ್ಯಾಯಸಮ್ಮತವಾಗಿದೆ ಅಂದಿದ್ದಾರೆ. ಇದನ್ನೂ ಓದಿ: ಲೆಬನಾನ್‌ ಮೇಲೆ ಇಸ್ರೇಲ್‌ ಆಕ್ರಮಣ ತೀವ್ರ – ಹಿಜ್ಬುಲ್ಲಾ ಸಂಘಟನೆಯ 15 ಮಂದಿ ಹತ್ಯೆ!

    ಎಲ್ಲರೂ ಒಟ್ಟಾಗಿ ಇಸ್ರೇಲ್‌ ಸೋಲಿಸೋಣ:
    ಇಸ್ರೇಲ್ ದೇಶದ ಮೇಲೆ ನೂರಾರು ಕ್ಷಿಪಣಿಗಳನ್ನಾರಿಸಿ ಶಕ್ತಿ ಪ್ರದರ್ಶನ ಮೆರೆದ ಇರಾನ್‌, ಇದೀಗ ಯುದ್ಧ ಭೀತಿಯಲ್ಲಿದೆ. ಆದಾಗ್ಯೂ ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಲಕ್ಷಾಂತರ ಜನರನ್ನುದ್ದೇಶಿಸಿ ಧರ್ಮೋಪದೇಶ ನೀಡಿದ್ದಾರೆ. ಬರೋಬ್ಬರಿ 5 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಶುಕ್ರವಾರದ ಬೃಹತ್ ಧರ್ಮೋಪದೇಶ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಖಮೇನಿ, ‘ಎಲ್ಲರೂ ಒಂದಾಗಿ ನಮ್ಮ ಶತ್ರುವನ್ನು ಮಣಿಸೋಣ’ ಎಂದು ಕರೆ ಕೊಟ್ಟಿದ್ದಾರೆ.

    ಟೆಗ್ರಾನ್‌ ನಗರದ ಕೇಂದ್ರ ಭಾಗದಲ್ಲಿರುವ ಇಮಾಮ್ ಖೊಮೇನಿ ಗ್ರ್ಯಾಂಡ್ ಮೊಸಲ್ಲಾ ಮಸೀದಿಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ವೇಳೆ ಮಾತನಾಡಿದ ಇರಾನ್ ಸರ್ವೋಚ್ಛ ನಾಯಕ ಹಾಗೂ ಧರ್ಮ ಗುರು ಅಯತೊಲ್ಲಾ ಅಲಿ ಖಮೇನಿ, ‘ವಿಶ್ವಾದ್ಯಂತ ಇರುವ ಮುಸ್ಲಿಮರಿಗೆ ಶತ್ರುಗಳು ಇದ್ದಾರೆ. ನಾವೆಲ್ಲರೂ ಒಂದಾಗಿ ಸೇರಿ ಆ ಶತ್ರುವನ್ನು ಮಣಿಸಬೇಕು ಎಂದು ಇಸ್ರೇಲ್‌ನ ಹೆಸರು ಹೇಳದೇ ಸಮರದ ಕರೆ ನೀಡಿದರು. ಇದನ್ನೂ ಓದಿ: ಇರಾನ್‌ ತೈಲ ಕೇಂದ್ರಗಳ ಮೇಲೆ ದಾಳಿಗೆ ಇಸ್ರೇಲ್‌ ಪ್ಲ್ಯಾನ್‌ – ಜೋ ಬೈಡನ್‌ ಹೇಳಿದ್ದೇನು?

    ಇಸ್ರೇಲ್ ಮೇಲಿನ ದಾಳಿಗೆ ಖಮೇನಿ ಸಮರ್ಥನೆ!
    ಇಸ್ಲಾಮಿಕ್ ರಿಪಬ್ಲಿಕ್ ದೇಶವಾದ ಇರಾನ್ ಕೆವು ದಿನಗಳ ಹಿಂದೆ ಇಸ್ರೇಲ್ ಮೇಲೆ ನಡೆಸಿದ ಖಂಡಾಂತರ ಕ್ಷಿಪಣಿ ದಾಳಿಗಳನ್ನು ‘ಕಾನೂನುಬದ್ದ’ ಎಂದು ಪ್ರತಿಪಾದಿಸಿದ ಖಮೇನಿ, 2023ರ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯನ್ನೂ ‘ನ್ಯಾಯಸಮ್ಮತ’ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: 9 ವರ್ಷಗಳ ನಂತ್ರ ಇದೇ ಮೊದಲು – ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

  • ಲೆಬನಾನ್‌ ಮೇಲೆ ಇಸ್ರೇಲ್‌ ಆಕ್ರಮಣ ತೀವ್ರ – ಹಿಜ್ಬುಲ್ಲಾ ಸಂಘಟನೆಯ 15 ಮಂದಿ ಹತ್ಯೆ!

    ಲೆಬನಾನ್‌ ಮೇಲೆ ಇಸ್ರೇಲ್‌ ಆಕ್ರಮಣ ತೀವ್ರ – ಹಿಜ್ಬುಲ್ಲಾ ಸಂಘಟನೆಯ 15 ಮಂದಿ ಹತ್ಯೆ!

    – ಗಾಜಾದಲ್ಲಿ ಹಮಾಸ್‌ ಮುಖ್ಯಸ್ಥನ ರೈಡ್‌ಹ್ಯಾಂಡ್‌ ಸೇರಿ ಮೂವರ ಹತ್ಯೆ

    ಬೈರೂತ್‌: ದಕ್ಷಿಣ ಲೆಬನಾನ್ ಮೇಲೆ ನಡೆಸಿದ ವಾಯು ದಾಳಿಯಲ್ಲಿ (IDF Airstrike) ಹಿಜ್ಜುಲ್ಲಾ (Hezbollah) ಸಂಘಟನೆಯ 15 ಮಂದಿಯನ್ನು ಹತ್ಯೆ ಮಾಡಲಾಗಿದೆ. ಇರಾನ್ ಬೆಂಬಲಿತ ಹಿಜ್ಜುಲ್ಲಾ ಸಂಘಟನೆಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.

    ಬೈರೂತ್‌ ಮೇಲೆ ಬಾಂಬ್ ದಾಳಿ:
    ಮತ್ತೊಂದುಕಡೆ ಲೆಬನಾನ್ ರಾಜಧಾನಿ ಹಾಗೂ ಅತಿ ದೊಡ್ಡ ನಗರ ಬೈರೂತ್ ಮೇಲೆ ʻಎನಿಮಿʼ ಜೆಟ್‌ ಮೂಲಕ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಹಲವು ಕಟ್ಟಡಗಳು ಧ್ವಂಸಗೊಂಡಿವೆ.

    ಲೆಬನಾನ್‌ನ (Lebanon) ರಾಜಧಾನಿಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಹಮಾಸ್ ಮತ್ತು ಹಿಬ್ಬುಲ್ಲಾ ಸಂಘಟನೆಗಳನ್ನು ಗುರಿಯಾಗಿಸಿ ಇಸ್ರೇಲ್ ಕ್ಷಿಪಣಿ ದಾಳಿ ಮುಂದುವರಿಸಿದೆ. ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಆದರೆ ಇಸ್ರೇಲ್ ದಾಳಿ ನಡೆಸಿದರೆ ಇದಕ್ಕಿಂತಲೂ ದೊಡ್ಡ ಮಟ್ಟದಲ್ಲಿ ಪ್ರತಿದಾಳಿ ನಡೆಸುವುದಾಗಿ ಇಸ್ರೇಲ್ ಎಚ್ಚರಿಸಿದೆ.

    ಗಾಜಾದಲ್ಲಿ ಹಮಾಸ್‌ ಮುಖ್ಯಸ್ಥನ ರೈಟ್‌ಹ್ಯಾಂಡ್‌ ಹತ್ಯೆ:
    ಇಸ್ರೇಲ್‌-ಇರಾನ್‌ ನಡುವಿನ ಯುದ್ಧದ ತೀವ್ರತೆ ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ಇಸ್ರೇಲ್‌ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದೆ. ಮೂರು ತಿಂಗಳ ಹಿಂದೆ ಗಾಜಾದ ಮೇಲೆ ನಡೆಸಿದ ವಾಯುದಾಳಿಯಲ್ಲಿ ಹಮಾಸ್‌ ಮುಖ್ಯಸ್ಥನ ರೈಟ್‌ಹ್ಯಾಂಡ್‌ ರಾವ್ಹಿ ಮುಶ್ತಾಹಾ ಇತರ ಇಬ್ಬರು ಲೀಡರ್‌ಗಳನ್ನ ಹತ್ಯೆಗೈದಿರುವುದಾಗಿ ಘೋಷಿಸಿದೆ.

  • ಅನಗತ್ಯ ಪ್ರಯಾಣ ಬೇಡ, ಸುರಕ್ಷಿತ ಸ್ಥಳದಲ್ಲಿರಿ; ಇರಾನ್ – ಇಸ್ರೇಲ್ ಸಂಘರ್ಷದ ಬೆನ್ನಲ್ಲೇ ಭಾರತದ ಎಚ್ಚರಿಕೆ

    ಅನಗತ್ಯ ಪ್ರಯಾಣ ಬೇಡ, ಸುರಕ್ಷಿತ ಸ್ಥಳದಲ್ಲಿರಿ; ಇರಾನ್ – ಇಸ್ರೇಲ್ ಸಂಘರ್ಷದ ಬೆನ್ನಲ್ಲೇ ಭಾರತದ ಎಚ್ಚರಿಕೆ

    ನವದೆಹಲಿ: ಇಸ್ರೇಲ್ (Israel) ಮೇಲೆ ಇರಾನ್ ಕ್ಷಿಪಣಿ ದಾಳಿ (Iran Missile Attack) ನಡೆಸಿದ ಬಳಿಕ ಮಧ್ಯಪ್ರಾಚ್ಯದಲ್ಲಿ ಯುದ್ಧ ಕಾರ್ಮೋಡ ಕವಿದಿದ್ದು,ಇರಾನ್‌ಗೆ ಪ್ರಯಾಣಿಸದಂತೆ ಸರ್ಕಾರವು ಭಾರತೀಯ ನಾಗರಿಕರಿಗೆ ಸಲಹೆ ನೀಡಿದೆ.

    ಅಧಿಕಾರಿಗಳು ಇರಾನ್‌ನಲ್ಲಿರುವ ಭಾರತೀಯರಿಗೆ ಜಾಗರೂಕರಾಗಿರಲು ಮತ್ತು ಟೆಹ್ರಾನ್‌ನಲ್ಲಿರುವ ರಾಯಭಾರ ಕಚೇರಿಯೊಂದಿಗೆ (Embassy) ಸಂಪರ್ಕದಲ್ಲಿರಲು ಸೂಚಿಸಿದ್ದಾರೆ. ನಾವು ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿಯಲ್ಲಿ ಇತ್ತೀಚಿನ ಉಲ್ಬಣವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಲು ಭಾರತೀಯ ಪ್ರಜೆಗಳಿಗೆ ಸೂಚಿಸಲಾಗಿದೆ. ಪ್ರಸ್ತುತ ಇರಾನ್‌ನಲ್ಲಿ ನೆಲೆಸಿರುವವರು ಜಾಗರೂಕರಾಗಿರಲು ಮತ್ತು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ವಿನಂತಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ಮೂಲಕ ತಿಳಿಸಿದೆ. ಇದನ್ನೂ ಓದಿ: Iran Attacks Israel | ದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ ಭದ್ರತೆ ಹೆಚ್ಚಳ

    ದಯವಿಟ್ಟು ಜಾಗರೂಕರಾಗಿರಿ, ದೇಶದೊಳಗೆ ಅನಗತ್ಯ ಪ್ರಯಾಣವನ್ನು ತಪ್ಪಿಸಿ ಮತ್ತು ಸುರಕ್ಷತಾ ಆಶ್ರಯಕ್ಕೆ ಹತ್ತಿರದಲ್ಲಿರಿ. ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಮ್ಮ ಎಲ್ಲಾ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇಸ್ರೇಲಿ ಅಧಿಕಾರಿಗಳೊಂದಿಗೆ ನಿಯಮಿತ ಸಂಪರ್ಕದಲ್ಲಿದೆ ಎಂದು ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿದೆ. ಇದನ್ನೂ ಓದಿ: ಪ್ರವಾಹ ಪೀಡಿತ ರಾಜ್ಯಗಳಿಗೆ ಗೃಹ ಇಲಾಖೆಯಿಂದ 5858.60 ಕೋಟಿ ಪರಿಹಾರ ಬಿಡುಗಡೆ

  • Iran Attacks Israel | ದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ ಭದ್ರತೆ ಹೆಚ್ಚಳ

    Iran Attacks Israel | ದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ ಭದ್ರತೆ ಹೆಚ್ಚಳ

    ನವದೆಹಲಿ: ಇಸ್ರೇಲ್ ಮೇಲೆ ಇರಾನ್ (Iran) ಕ್ಷಿಪಣಿ ದಾಳಿ ನಡೆಸಿದ ನಂತರ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ (Israel Embassy) ಭದ್ರತೆಯನ್ನು ಹೆಚ್ಚಿಸಲಾಗಿದೆ.

    ಇರಾನ್, ಇಸ್ರೇಲ್ ಮೇಲೆ 181 ಕ್ಷಿಪಣಿಗಳ ದಾಳಿ ಮಾಡಿದ ನಂತರ ಈ ಕ್ರಮಕೈಗೊಳ್ಳಲಾಗಿದೆ. ಕಚೇರಿಯ ಸುತ್ತಮುತ್ತ ಪೊಲೀಸರ ಗಸ್ತು ಹೆಚ್ಚಿಸಲಾಗಿದೆ. ಕಚೇರಿಯಲ್ಲೂ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

    2021 ಮತ್ತು 2023 ರಲ್ಲಿ ರಾಯಭಾರ ಕಚೇರಿ ಬಳಿ ಶಂಕಿತ ಸ್ಫೋಟಗಳು ಸಂಭವಿಸಿದ್ದವು. ಇದನ್ನೂ ಓದಿ: ಇಸ್ರೇಲ್‌ ಮೇಲೆ ಫಸ್ಟ್‌ ಟೈಂ ಹೈಪರ್‌ಸಾನಿಕ್‌ ಕ್ಷಿಪಣಿ ಪ್ರಯೋಗಿಸಿದ ಇರಾನ್‌

    ಮಂಗಳವಾರ ತಡರಾತ್ರಿ ಮಧ್ಯ ಇಸ್ರೇಲ್‍ನ ಟೆಲ್ ಅವಿವ್‍ನ ಜಾಫಾ ಪಟ್ಟಣದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದರು.

    ಈ ಇಬ್ಬರು ದಾಳಿಕೋರರು ಮನ ಬಂದಂತೆ ಗುಂಡು ಹಾರಿಸಿದ್ದಾರೆ. ಇಬ್ಬರನ್ನು ಭದ್ರತಾ ಪಡೆ ಹತ್ಯೆ ಮಾಡಿದೆ. ಈ ಇಬ್ಬರು ವೆಸ್ಟ್‌ಬ್ಯಾಂಕ್‌ನ ಹೆಬ್ರಾನ್‍ನಿಂದ ಆಗಮಿಸಿದ್ದರು ಎಂದು ರಕ್ಷಣಾ ಪಡೆ ತಿಳಿಸಿತ್ತು. ಇದನ್ನೂ ಓದಿ: Israel | ಜಾಫಾದಲ್ಲಿ ಉಗ್ರರಿಂದ ಮನ ಬಂದಂತೆ ಗುಂಡಿನ ದಾಳಿಗೆ 8 ಬಲಿ

  • ಇಸ್ರೇಲ್‌ ಮೇಲೆ ಫಸ್ಟ್‌ ಟೈಂ ಹೈಪರ್‌ಸಾನಿಕ್‌ ಕ್ಷಿಪಣಿ ಪ್ರಯೋಗಿಸಿದ ಇರಾನ್‌

    ಇಸ್ರೇಲ್‌ ಮೇಲೆ ಫಸ್ಟ್‌ ಟೈಂ ಹೈಪರ್‌ಸಾನಿಕ್‌ ಕ್ಷಿಪಣಿ ಪ್ರಯೋಗಿಸಿದ ಇರಾನ್‌

    ಟೆಹರಾನ್‌: ಇಸ್ರೇಲ್‌ (Israel) ಮೇಲೆ ಇರಾನ್‌ (Iran) ಇದೇ ಮೊದಲ ಬಾರಿಗೆ ಹೈಪರ್‌ಸಾನಿಕ್‌ ಕ್ಷಿಪಣಿ (Hypersonic Missiles) ಪ್ರಯೋಗಿಸಿ ದಾಳಿ ನಡೆಸಿದೆ.

    ಇಸ್ರೇಲ್‌ ಮೇಲೆ ನಾವು ಹೈಪರ್‌ಸಾನಿಕ್‌ ಕ್ಷಿಪಣಿ ಪ್ರಯೋಗಿಸಿದ್ದೇವೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್(IRGC) ತಿಳಿಸಿದೆ. ಇಸ್ರೇಲಿನ ಐರನ್‌ಡೋಮ್‌ ತಪ್ಪಿಸಲು ಫತಾಹ್ ಹೈಪರ್‌ಸಾನಿಕ್‌ ಕ್ಷಿಪಣಿಯನ್ನು ಇರಾನ್‌ ಬಳಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ಶಬ್ದಕ್ಕಿಂತ ವೇಗವಾಗಿ ಚಲಿಸುವ ಸಾಮರ್ಥ್ಯ ಹೈಪರ್‌ಸಾನಿಕ್‌ ಕ್ಷಿಪಣಿಗಳಿಗಿದ್ದು ಇರಾನ್‌ ಕಳೆದ ವರ್ಷದ ಜೂನ್‌ನಲ್ಲಿ ಫತಾಹ್-1, ನವೆಂಬರ್‌ನಲ್ಲಿ ಫತಾಹ್- 2 ಕ್ಷಿಪಣಿ ಪರೀಕ್ಷೆ ನಡೆಸಿತ್ತು. ಬಳಸಲಾದ 80-90% ಕ್ಷಿಪಣಿಗಳು ನಿಗದಿತ ಗುರಿಯನ್ನು ಹೊಡೆದು ಹಾಕಿವೆ ಎಂದು IRGC ಹೇಳಿಕೊಂಡಿದೆ.  ಇದನ್ನೂ ಓದಿ: Israel | ಜಾಫಾದಲ್ಲಿ ಉಗ್ರರಿಂದ ಮನ ಬಂದಂತೆ ಗುಂಡಿನ ದಾಳಿಗೆ 8 ಬಲಿ

    ಇಸ್ರೇಲ್‌ ರಾಜಧಾನಿ ಟೆಲ್‌ ಅವೀವ್‌ನಲ್ಲಿರುವ ಗುಪ್ತಚರ ಸಂಸ್ಥೆ ಮೊಸ್ಸಾದ್ ಕೇಂದ್ರ ಕಚೇರಿ, ಅಮೆರಿಕ ನಿರ್ಮಿಸಿದ ಎಫ್‌ 16 ವಿಮಾನಗಳನ್ನು ನಿಲ್ಲಿಸಿರುವ ಏರ್‌ಬೇಸ್‌ ಹೌಸ್‌ಗಳನ್ನು ಗುರಿಯಾಗಿಸಿ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಗಳು ಪ್ರಕಟವಾಗಿದೆ. ಇದನ್ನೂ ಓದಿ: ಇರಾನ್‌ನಿಂದ ಕ್ಷಿಪಣಿ ದಾಳಿ – ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು, ಟರ್ಕಿಯಲ್ಲಿ ಲ್ಯಾಂಡಿಂಗ್‌

    ಫತಾಹ್-1 ಕ್ಷಿಪಣಿ 350-450 ಕೆಜಿ ಸಿಡಿತಲೆಯನ್ನು ಹೊತ್ತೊಯ್ಯುವುದರ ಜೊತೆ 13-15 ಮ್ಯಾಕ್‌ ವೇಗದಲ್ಲಿ ಚಲಿಸುವು ಸಾಮರ್ಥ್ಯವನ್ನು ಹೊಂದಿದೆ. ಅಷ್ಟೇ ಅಲ್ಲದೇ 1,400 ಕಿಲೋಮೀಟರ್‌ ದೂರದಲ್ಲಿರುವ ಗುರಿಯನ್ನು ಛಿದ್ರಗೊಳಿಸುವಂತೆ ಅಭಿವೃದ್ಧಿ ಪಡಿಸಲಾಗಿದೆ.