Tag: Israel

  • ಜರ್ಮನಿಯಲ್ಲಿ ಹಮಾಸ್‌ ಚಟುವಟಿಕೆಗೆ ಸಂಪೂರ್ಣ ನಿಷೇಧ

    ಜರ್ಮನಿಯಲ್ಲಿ ಹಮಾಸ್‌ ಚಟುವಟಿಕೆಗೆ ಸಂಪೂರ್ಣ ನಿಷೇಧ

    ಬರ್ಲಿನ್: ಜರ್ಮನಿಯು (Germany) ಹಮಾಸ್‌ನ ಚಟುವಟಿಕೆಗಳ ಮೇಲೆ ಸಂಪೂರ್ಣ ನಿಷೇಧ ಘೋಷಿಸಿದೆ. ಇಸ್ರೇಲ್ (Israel) ವಿರೋಧಿ ಮತ್ತು ಯಹೂದ್ಯ ವಿರೋಧಿ ವಿಚಾರಗಳನ್ನು ಹರಡುತ್ತಿರುವ ಈ ಗುಂಪನ್ನು ವಿಸರ್ಜಿಸಲು ಆದೇಶಿಸಲಾಗಿದೆ.

    ಜರ್ಮನಿಯ ಆಂತರಿಕ ಸಚಿವ ನ್ಯಾನ್ಸಿ ಫೈಸರ್, ಹಮಾಸ್‌ (Hamas) ಅಥವಾ ಅದನ್ನು ಬೆಂಬಲಿಸುವ ಚಟುವಟಿಕೆಯ ಮೇಲೆ ನಿಷೇಧ ಹೇರಲಾಗಿದೆ. ಇದನ್ನು ದೇಶದಲ್ಲಿ “ಭಯೋತ್ಪಾದಕ” ಸಂಘಟನೆ ಎಂದು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ – 195 ಮಂದಿ ಸಾವು

    ಹಮಾಸ್‌ ಅಷ್ಟೇ ಅಲ್ಲ, ಇಸ್ರೇಲ್ ರಾಷ್ಟ್ರವನ್ನು ನಾಶಮಾಡುವ ಗುರಿ ಹೊಂದಿರುವ ಭಯೋತ್ಪಾದಕ ಸಂಘಟನೆಯ ಚಟುವಟಿಕೆಗಳನ್ನು ನಾವು ಸಂಪೂರ್ಣವಾಗಿ ನಿಷೇಧಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಹಮಾಸ್‌ ಅಧಿಕಾರಿಯೊಬ್ಬರು, ಪ್ಯಾಲೆಸ್ತೀನಿಯನ್‌ ಜನರ ವಿರುದ್ಧದ ಅಪರಾಧಗಳಲ್ಲಿ ಇಸ್ರೇಲ್‌ನೊಂದಿಗೆ ಜರ್ಮನಿ ಕೂಡ ಪಾಲುದಾರಿಕೆ ಹೊಂದಿದೆ ಎಂಬುದನ್ನು ಈ ನಿರ್ಧಾರ ತೋರಿಸುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಅ.7 ರಿಂದ ನಡೆಯುತ್ತಿರುವ ಸಂಘರ್ಷದಲ್ಲಿ ಕನಿಷ್ಠ 1,400 ಮಂದಿ ಹತ್ಯೆಯಾಗಿದ್ದಾರೆ. ಅದರಲ್ಲಿ ಹೆಚ್ಚಿನವರು ನಾಗರಿಕರೇ ಸೇರಿದ್ದಾರೆ. ಹಮಾಸ್‌ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳಲು ಇಸ್ರೇಲ್ ಗಾಜಾದ ಮೇಲೆ ಬಾಂಬ್ ದಾಳಿ ಮಾಡಿದೆ. ಪ್ರದೇಶದ ಮೇಲೆ ತನ್ನ ದಿಗ್ಬಂಧನವನ್ನು ಬಿಗಿಗೊಳಿಸಿದೆ. ಇಂಧನ, ಆಹಾರ, ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಿದೆ. ಇದನ್ನೂ ಓದಿ: ಇಸ್ರೇಲ್‌ಗೆ ಪಾಠ ಕಲಿಸದೇ ಬಿಡಲ್ಲ: ಗುಡುಗಿದ ಹಮಾಸ್‌

    ಗಾಜಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 3,760 ಮಕ್ಕಳು ಸೇರಿದಂತೆ 9,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾ ಅಧಿಕಾರಿಗಳು ತಿಳಿಸಿದ್ದಾರೆ. ಗಾಜಾದಲ್ಲಿ (Gaza) ಜನರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಹೀಗಾಗಿ ಇಸ್ರೇಲ್‌ ನಿಯಂತ್ರಣದಲ್ಲಿ ಇಲ್ಲದ ರಫಾ ಕ್ರಾಸಿಂಗ್‌ ಗಡಿ ದಾಟಿ ಈಜಿಪ್ಟ್‌ಗೆ ಜನರು ವಲಸೆ ಹೋಗುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ – 195 ಮಂದಿ ಸಾವು

    ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ – 195 ಮಂದಿ ಸಾವು

    ಟೆಲ್ ಅವೀವ್: ಹಮಾಸ್ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ (Israel) ನಡೆಸಿದ ವೈಮಾನಿಕ ದಾಳಿಯಿಂದ (Air Strike) ಕನಿಷ್ಠ 195 ಪ್ಯಾಲೆಸ್ತೀನ್‍ನ (Palestine) ನಾಗರೀಕರು ಸಾವನ್ನಪ್ಪಿದ್ದಾರೆ. ಇದರಲ್ಲಿ ಸುಮಾರು 770ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ದಾಳಿಯ ನಂತರ 120 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಈ ನಡುವೆ ಓರ್ವ ಇಸ್ರೇಲ್ ಸೈನಿಕ ಕೂಡ ಸಾವನ್ನಪ್ಪಿದ್ದಾನೆ ಎಂದು ಹಮಾಸ್ ಹೇಳಿದೆ. ಕಳೆದ ಎರಡು ದಿನಗಳ ದಾಳಿಯಲ್ಲಿ ಇಬ್ಬರು ಹಮಾಸ್ ಮಿಲಿಟರಿ ನಾಯಕರನ್ನು ಹೊಡೆದುರುಳಿಸಲಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಅಲ್ಲದೇ ಇನ್ನೂ ಅಡಗಿರುವ ಹಮಾಸ್ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿಯುತ್ತಿದೆ ಎಂದು ಇಸ್ರೇಲ್ ಸೇನೆ ಹೇಳಿಕೊಂಡಿದೆ. ಇದನ್ನೂ ಓದಿ: ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ; ಹಮಾಸ್‌ ಕಮಾಂಡರ್‌ ಸೇರಿ 60ಕ್ಕೂ ಹೆಚ್ಚು ಮಂದಿ ಬಲಿ

    ಇಸ್ರೇಲ್, ಈಜಿಪ್ಟ್ ಮತ್ತು ಹಮಾಸ್ ನಡುವಿನ ಒಪ್ಪಂದದ ಅಡಿಯಲ್ಲಿ 500 ಜನರ ಪಟ್ಟಿಯಲ್ಲಿ ಕನಿಷ್ಠ 320 ವಿದೇಶಿ ನಾಗರಿಕರನ್ನು ಈಜಿಫ್ಟ್‌ಗೆ ಕಳುಹಿಸಲಾಗಿದೆ. ಉಳಿದ ವಿದೇಶಿ ನಾಗರಿಕರನ್ನು ಯುದ್ಧ ಪ್ರದೇಶದಿಂದ ಕಳಿಸುವ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಉಳಿದ ವಿದೇಶಿ ಪ್ರಜೆಗಳನ್ನು ಸುರಕ್ಷಿತವಾಗಿ ಈಜಿಫ್ಟ್‍ಗೆ ಕಳುಹಿಸಲು ಕ್ರಮಕೈಗೊಳ್ಳಲಾಗಿದೆ.

    ಇದರ ನಡುವೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರು ಇಸ್ರೇಲ್‍ಗೆ ಒಂದು ತಿಂಗಳಲ್ಲಿ ತಮ್ಮ ಎರಡನೇ ಭೇಟಿಗಾಗಿ ಇಂದು ತೆರಳಲಿದ್ದಾರೆ. ಅಲ್ಲಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು (Benjamin Netanyahu) ಸೇರಿದಂತೆ ಇಸ್ರೇಲಿ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಮಸ್ಲಿಂ ರಾಷ್ಟ್ರಗಳ ಪ್ರತಿನಿಧಿಗಳು ಭಾಗಿಯಾಗಿ ಶಾಂತಿ ಮಾತುಕತೆ ನಡೆಸುವ ಸಾಧ್ಯತೆ ಇದೆ. ಇದನ್ನೂ ಓದಿ: ಇಸ್ರೇಲ್‌ ನಿಯಂತ್ರಣವಿಲ್ಲದ ಏಕೈಕ ಕ್ರಾಸಿಂಗ್‌ ದಾಟಿ ಈಜಿಪ್ಟ್‌ಗೆ ಹೊರಟ ವಿದೇಶಿಯರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ರೇಲ್‌ಗೆ ಪಾಠ ಕಲಿಸದೇ ಬಿಡಲ್ಲ: ಗುಡುಗಿದ ಹಮಾಸ್‌

    ಇಸ್ರೇಲ್‌ಗೆ ಪಾಠ ಕಲಿಸದೇ ಬಿಡಲ್ಲ: ಗುಡುಗಿದ ಹಮಾಸ್‌

    ಟೆಲ್‌ ಅವೀವ್‌: ಹಮಾಸ್‌ನ (Hamas) ಹಿರಿಯ ಸದಸ್ಯನೊಬ್ಬ ಇಸ್ರೇಲ್‌ (Israel) ಮೇಲಿನ ದಾಳಿಯನ್ನು ಶ್ಲಾಘಿಸಿದ್ದಾನೆ. ಇಸ್ರೇಲ್‌ ಅನ್ನು ನಿರ್ನಾಮ ಮಾಡುವವರೆಗೆ ಭವಿಷ್ಯದಲ್ಲಿ ಅನೇಕ ಬಾರಿ ಇದೇ ರೀತಿಯ ದಾಳಿಗಳನ್ನು ನಡೆಸಲಾಗುವುದು ಎಂದು ಎಚ್ಚರಿಸಿದ್ದಾನೆ.

    ಹಮಾಸ್‌ನ ರಾಜಕೀಯ ಬ್ಯೂರೋದ ಸದಸ್ಯ ಗಾಜಿ ಹಮದ್ ದೃಶ್ಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ದಾಳಿ ಕುರಿತು ತನ್ನ ನಿಲುವನ್ನು ವ್ಯಕ್ತಪಡಿಸಿದ್ದಾನೆ. ಈತನ ಹೇಳಿಕೆಯನ್ನು ಅನುವಾದಿಸಿ ಮಿಡಲ್ ಈಸ್ಟ್ ಮೀಡಿಯಾ ರಿಸರ್ಚ್ ಇನ್‌ಸ್ಟಿಟ್ಯೂಟ್ (MEMRI) ಪ್ರಕಟಿಸಿದೆ. ಇದನ್ನೂ ಓದಿ: ಗಾಜಾದಲ್ಲಿ ಹೋರಾಡುತ್ತಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಸಾವು

    ನಮ್ಮ ನೆಲದಲ್ಲಿ ಸ್ಥಾನವಿಲ್ಲದ ದೇಶ ಇಸ್ರೇಲ್. ನಾವು ಅದನ್ನು ತೆಗೆದುಹಾಕಬೇಕು. ಏಕೆಂದರೆ ಇದು ಅರಬ್ ಮತ್ತು ಇಸ್ಲಾಮಿಕ್ ರಾಷ್ಟ್ರಗಳಿಗೆ ಭದ್ರತೆ, ಮಿಲಿಟರಿ ಮತ್ತು ರಾಜಕೀಯ ದುರಂತಗಳಿಗೆ ಕಾರಣವಾಗಬಹುದು. ಇದನ್ನು ಹೇಳಲು ನಮಗೆ ಯಾವುದೇ ಹಿಂಜರಿಕೆ ಇಲ್ಲ ಎಂದು ಇಸ್ರೇಲ್‌ ಬಗೆಗಿನ ನಿಲುವನ್ನು ವ್ಯಕ್ತಪಡಿಸಿದ್ದಾರೆ.

    ನಿಮ್ಮ ಹೇಳಿಕೆ ಇಸ್ರೇಲ್‌ನ ಸಂಪೂರ್ಣ ವಿನಾಶವನ್ನು ಅರ್ಥೈಸುತ್ತದೆಯೇ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದಾಗ, ಖಂಡಿತ ಹೌದು. ನಾವು ಇಸ್ರೇಲ್‌ಗೆ ಪಾಠ ಕಲಿಸಬೇಕು. ಇದು ಇಲ್ಲಿಗೆ ನಿಲ್ಲುವುದಿಲ್ಲ ಎಂದು ಹಮಾಸ್‌ ಸದಸ್ಯ ತಮ್ಮ ನಿಲುವಿನ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ನಿಯಂತ್ರಣವಿಲ್ಲದ ಏಕೈಕ ಕ್ರಾಸಿಂಗ್‌ ದಾಟಿ ಈಜಿಪ್ಟ್‌ಗೆ ಹೊರಟ ವಿದೇಶಿಯರು

    ನಾವು ಬೆಲೆ ತೆರಲು ಸಿದ್ಧರಿದ್ದೇವೆ. ಅಷ್ಟೇ ಅಲ್ಲ ಅದನ್ನು ವಾಪಸ್‌ ಪಡೆಯುತ್ತೇವೆ. ನಮ್ಮನ್ನು ಹುತಾತ್ಮರ ರಾಷ್ಟ್ರದವರು ಎಂದು ಕರೆಯಲಾಗುತ್ತದೆ. ತ್ಯಾಗ ಮಾಡಲು ನಾವು ಹೆಮ್ಮೆಪಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ದಾಳಿ – ಭಟ್ಕಳದಲ್ಲಿ ಕ್ರಿಕೆಟ್ ಪಂದ್ಯಾವಳಿ ರದ್ದು ಮಾಡಿದ ಮುಸ್ಲಿಂ ಯೂಥ್ ಫೆಡರೇಶನ್

    ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ದಾಳಿ – ಭಟ್ಕಳದಲ್ಲಿ ಕ್ರಿಕೆಟ್ ಪಂದ್ಯಾವಳಿ ರದ್ದು ಮಾಡಿದ ಮುಸ್ಲಿಂ ಯೂಥ್ ಫೆಡರೇಶನ್

    – ಮದುವೆ, ಮನೋರಂಜನೆ ಖರ್ಚಿಗೆ ಮಿತಿ ಹೇರುವಂತೆ ಕರೆ

    ಕಾರವಾರ: ಪ್ಯಾಲೆಸ್ತೀನ್ (Palestine) ಮೇಲೆ ಇಸ್ರೇಲ್ (Israel) ದಾಳಿ ಖಂಡಿಸಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಐಪಿಎಲ್ ಮಾದರಿಯಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಲೀಗ್ ಪಂದ್ಯಾವಳಿ ರದ್ದು ಮಾಡಿದೆ. ಇದರ ಜೊತೆಗೆ ಯುದ್ಧ ಮುಗಿಯುವವರೆಗೆ ಭಟ್ಕಳದ ಮುಸ್ಲಿಮರಿಗೆ ಮದುವೆ, ಮನೋರಂಜನೆ ಖರ್ಚಿಗೆ ಮಿತಿ ಹೇರುವಂತೆ ಮುಸ್ಲಿಂ ಯೂಥ್ ಫೆಡರೇಶನ್ (Muslim Youth Federation) ಕರೆ ಕೊಟ್ಟಿದೆ.

    ಈ ಕುರಿತು ಭಟ್ಕಳದಲ್ಲಿ ಮುಸ್ಲಿಂ ಯೂಥ್ ಫೆಡರೇಶನ್‌ನ ಅಧ್ಯಕ್ಷ ಆಝೀಜ್ ಉರ್ರೆಹಮಾನ್ ಮಾಧ್ಯಮ ಹೇಳಿಕೆ ನೀಡಿದ್ದು, ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್‌ನವರು ನಮ್ಮ ಸಹೋದರ ಮುಸ್ಲಿಮರನ್ನು ಹತ್ಯೆ ಮಾಡುತ್ತಿದ್ದಾರೆ. ಈ ದುಃಖದ ಸಂದರ್ಭದಲ್ಲಿ ನಾವು ಮೋಜು ಮಾಡುವುದು ಸರಿಯಲ್ಲ. ಅವರಿಗೆ ಸಹಾಯ ಮಾಡಬೇಕಿದೆ. ಭಟ್ಕಳದಲ್ಲಿ ಮುಸ್ಲಿಮರು ಮದುವೆ, ಮನೋರಂಜನೆಗೆ ಖರ್ಚು ಮಾಡುವುದನ್ನು ಕಡಿಮೆ ಮಾಡಿ ಅವರಿಗೆ ಸಹಾಯ ಮಾಡಬೇಕೆಂದು ಕೇಳಿಕೊಂಡಿದ್ದಾರೆ.

    ಭಟ್ಕಳದಲ್ಲಿ ಪ್ರತಿ ವರ್ಷ ಐಪಿಎಲ್ ಮಾದರಿಯಲ್ಲಿ ಕ್ರಿಕೆಟ್ (Cricket) ಪಂದ್ಯಾವಳಿಯನ್ನು ಮುಸ್ಲಿಂ ಯೂಥ್ ಪೆಡರೇಷನ್ ಆಯೋಜನೆ ಮಾಡಿಕೊಂಡು ಬಂದಿದೆ. ನವೆಂಬರ್ 3 ರಿಂದ ಒಂದು ತಿಂಗಳ ಕಾಲ ಐಪಿಎಲ್ ಮಾದರಿಯಲ್ಲಿ ನಡೆಯುತ್ತಿತ್ತು. ಭಟ್ಕಳ ಕ್ರಿಕೆಟ್ ಲೀಗ್-5 ಪಂದ್ಯಾವಳಿಗಾಗಿ ಕಳೆದ ತಿಂಗಳು 200 ಆಟಗಾರರನ್ನು ತಾಲೂಕಿನಲ್ಲಿ ಗುರುತಿಸಿ, ಹರಾಜು ಹಾಕಿ 12 ತಂಡವನ್ನು ಮುಸ್ಲಿಂ ಯೂಥ್ ಫೆಡರೇಶನ್ ಆಯ್ಕೆ ಮಾಡಿತ್ತು. ಇದಕ್ಕಾಗಿ ಭಟ್ಕಳ ತಾಲೂಕು ಕ್ರೀಡಾಂಗಣವನ್ನು ಆಯ್ಕೆ ಮಾಡಿ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಇದನ್ನೂ ಓದಿ: ಕ್ರೀಡಾ ಉತ್ಸವದಲ್ಲಿ ಟ್ರ್ಯಾಕ್ಟರ್ ಅಡಿಗೆ ಸಿಲುಕಿ ವ್ಯಕ್ತಿ ಸಾವು – ಟ್ರ್ಯಾಕ್ಟರ್ ಸ್ಟಂಟ್ ಬ್ಯಾನ್ ಮಾಡಿದ ಪಂಜಾಬ್

    ಈಗ ಇಸ್ರೇಲ್ ದಾಳಿ ಖಂಡಿಸಿ ಈ ಪಂದ್ಯಾವಳಿಯನ್ನು ರದ್ದು ಮಾಡಿದ್ದು ಪ್ಯಾಲೆಸ್ತೀನ್ ಪರ ನಿಂತಿದೆ. ಹೀಗಾಗಿ ಪ್ಯಾಲೆಸ್ತೀನ್ ಮುಸ್ಲಿಂ ಜನರಿಗೆ ಸಹಾಯ ಮಾಡಲು ಭಟ್ಕಳದ ಮುಸ್ಲಿಮರು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ಭಾರತದ ನೆಲದಲ್ಲಿ ಹಮಾಸ್‌ ಕಾರ್ಯಕ್ರಮ ಬೇಕಿತ್ತಾ? – ಕೇರಳ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಭೇಟಿಯಾದ ನಟಿ ಕಂಗನಾ ರಣಾವತ್

    ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಭೇಟಿಯಾದ ನಟಿ ಕಂಗನಾ ರಣಾವತ್

    ನವದೆಹಲಿ: ಇಸ್ರೇಲ್ ರಾಯಭಾರಿ ನೌರ್ ಗಿಲೋನ್ (Naor Gilon) ಅವರನ್ನು ನಟಿ ಕಂಗನಾ ರಣಾವತ್ (Kangana Ranaut) ಭೇಟಿಯಾಗಿದ್ದಾರೆ. ನವದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಯಲ್ಲಿ (Israel Embassy) ಭೇಟಿಯಾಗಿ ಇಸ್ರೇಲ್ (Israel) ಹಮಾಸ್ (Hamas) ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.

    ಭೇಟಿ ಬಳಿಕ ನಟಿ ಕಂಗನಾ ರಣಾವತ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಿನ್ನೆ (ಮಂಗಳವಾರ) ನಾನು ರಾವಣ ದಹನಕ್ಕಾಗಿ ದೆಹಲಿಗೆ ಬಂದಿದ್ದೆ. ಈ ಸಮಯದಲ್ಲಿ ಇಂದಿನ ಆಧುನಿಕ ರಾವಣ ಮತ್ತು ಹಮಾಸ್‌ನಂತಹ ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಜನರನ್ನು ಭೇಟಿಯಾಗಬೇಕೆಂದು ನನಗೆ ಅನಿಸಿತು. ಈ ಹಿನ್ನಲೆ ಇಸ್ರೇಲ್ ರಾಯಭಾರ ಕಚೇರಿಗೆ ಭೇಟಿ ನೀಡಿದೆ ಎಂದು ಬರೆದುಕೊಂಡಿದ್ದಾರೆ.

    ಸಣ್ಣ ಮಕ್ಕಳು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡು ಹಮಾಸ್ ಭೀಕರವಾಗಿ ಹತ್ಯೆ ಮಾಡಿದೆ. ಭಯೋತ್ಪಾದನೆ ವಿರುದ್ಧದ ಈ ಯುದ್ಧದಲ್ಲಿ ಇಸ್ರೇಲ್ ಜಯಶಾಲಿಯಾಗಲಿದೆ ಎಂಬ ಸಂಪೂರ್ಣ ಭರವಸೆ ನನಗಿದೆ. ಭಾರತದ ಸ್ವಾವಲಂಬಿ ಯುದ್ಧ ವಿಮಾನ ತೇಜಸ್ ಮತ್ತು ನನ್ನ ಮುಂಬರುವ ಚಿತ್ರ ತೇಜಸ್ ಬಗ್ಗೆ ನಾನು ಅವರೊಂದಿಗೆ ಚರ್ಚಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾವಣನ ಪ್ರತಿಕೃತಿ ದಹಿಸಿದ ನಟಿ ಕಂಗನಾ ರಣಾವತ್

    ತೇಜಸ್‌ನಲ್ಲಿ ಕಂಗನಾ ರಣಾವತ್ ಅವರು ಭಯೋತ್ಪಾದನೆಯ ವಿರುದ್ಧ ಹೋರಾಡುವ ಕಾರ್ಯಾಚರಣೆಯಲ್ಲಿರುವ ವಾಯುಪಡೆಯ ಪೈಲಟ್‌ನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿಯ ಪ್ರಕಾರ ಕಂಗನಾ ತನ್ನ ಚಲನಚಿತ್ರಕ್ಕಾಗಿ ಭಾರತೀಯ ಪಡೆಗಳು ಬಳಸಿದ ವಿಶೇಷ ಯುದ್ಧ ತಂತ್ರಗಳನ್ನು ಕರಗತ ಮಾಡಿಕೊಳ್ಳಲು ಕಠಿಣ ತರಬೇತಿಗಾಗಿ 4 ತಿಂಗಳುಗಳನ್ನು ಮೀಸಲಿಟ್ಟಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಇನ್ನೂ ಯಾಕೆ ಭೂ ದಾಳಿ ನಡೆಸಿಲ್ಲ – ಪ್ರಶ್ನೆಗೆ ಸಿಕ್ಕಿತು ಉತ್ತರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ರೇಲ್‌ಗೆ ಆತ್ಮ ರಕ್ಷಣೆಯ ಹಕ್ಕಿದೆ – ಉಲ್ಟಾ ಹೊಡೆದ ಚೀನಾ

    ಇಸ್ರೇಲ್‌ಗೆ ಆತ್ಮ ರಕ್ಷಣೆಯ ಹಕ್ಕಿದೆ – ಉಲ್ಟಾ ಹೊಡೆದ ಚೀನಾ

    ಬೀಜಿಂಗ್: ಇಸ್ರೇಲ್ (Israel) ಹಾಗೂ ಹಮಾಸ್ (Hamas) ನಡುವಿನ ಯುದ್ಧದ ಬಗೆಗಿನ ನಿಲುವಿನ ಬಗ್ಗೆ ಭಾರೀ ಟೀಕೆಗೆ ಒಳಗಾದ ಚೀನಾ (China) ಇದೀಗ ತನ್ನ ನಿಲುವನ್ನು ಬದಲಿಸಿಕೊಂಡಿದೆ. ಹಮಾಸ್ ದಾಳಿಯ ವಿರುದ್ಧ ಇಸ್ರೇಲ್‌ಗೆ ಆತ್ಮ ರಕ್ಷಣೆಯ ಹಕ್ಕಿದೆ ಎನ್ನುವ ಮೂಲಕ ಚೀನಾ ಉಲ್ಟಾ ಹೊಡೆದಿದೆ.

    ಪ್ರತಿಯೊಂದು ದೇಶವೂ ಆತ್ಮರಕ್ಷಣೆಯ ಹಕ್ಕನ್ನು ಹೊಂದಿದೆ. ಆದರೆ ಅಂತಾರಾಷ್ಟ್ರೀಯ ಮಾನವೀಯ ಕಾನೂನಿಗೆ ಅದು ಬದ್ಧವಾಗಿರಬೇಕು ಮತ್ತು ನಾಗರಿಕರನ್ನು ರಕ್ಷಿಸಬೇಕು ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ (Wang Yi) ಹೇಳಿದ್ದಾರೆ.

    ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದಿಂದ ಭಯೋತ್ಪಾದಕ ಸಂಘಟನೆ ಎಂದು ಗುರುತಿಸಿಕೊಂಡಿರುವ ಹಮಾಸ್ ದಾಳಿಯ ವಿರುದ್ಧ ಕ್ರಮ ತೆಗೆದುಕೊಳ್ಳುವ ಹಕ್ಕನ್ನು ಇಸ್ರೇಲ್ ಹೊಂದಿದೆ ಎಂದು ಚೀನಾ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಇದನ್ನೂ ಓದಿ: ಇಬ್ಬರು ವೃದ್ಧ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

    ಕಳೆದ ವಾರ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ (Xi Jinping) ಈಜಿಪ್ಟ್ ಹಾಗೂ ಇತರ ಅರಬ್ ರಾಷ್ಟ್ರಗಳೊಂದಿಗೆ ಮಾತುಕತೆ ನಡೆಸಿ ಸಾಧ್ಯವಾದಷ್ಟು ಬೇಗ ಪ್ಯಾಲೆಸ್ತೀನಿಯರ ಸಮಸ್ಯೆಗೆ ಸಮಗ್ರ, ನ್ಯಾಯಯುತ ಮತ್ತು ಶಾಶ್ವತ ಪರಿಹಾರ ನೀಡಲು ಒತ್ತಾಯಿಸಿ ತಕ್ಷಣದ ಕದನ ವಿರಾಮಕ್ಕೆ ಕರೆ ನೀಡಿದ್ದರು. ಇದನ್ನೂ ಓದಿ: ಚೀನಾದ ಅಭಿವೃದ್ಧಿಗೆ ದೇಶಗಳು ದಿವಾಳಿ – ಡ್ರ್ಯಾಗನ್‌ ಟ್ರ್ಯಾಪ್‌ ಹೇಗೆ ಮಾಡುತ್ತೆ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಬ್ಬರು ವೃದ್ಧ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

    ಇಬ್ಬರು ವೃದ್ಧ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

    ಟೆಲ್ ಅವಿವ್: ಗಾಜಾ ಪಟ್ಟಿಯಲ್ಲಿ (Gaza Strip) ಇಬ್ಬರು ಇಸ್ರೇಲಿ ಒತ್ತೆಯಾಳುಗಳನ್ನು (Hostages) ಬಿಡುಗಡೆ ಮಾಡಿರುವುದಾಗಿ ಹಮಾಸ್ (Hamas) ತಿಳಿಸಿದೆ.

    ಮಾನವೀಯ ಕಾರಣಗಳಿಂದಾಗಿ ಇಬ್ಬರು ವೃದ್ಧ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ. ಮಾನವೀಯ ಹಾಗೂ ಅವರ ಆರೋಗ್ಯದ ಕಾಳಜಿಯ ಹಿನ್ನೆಲೆ ನಾವು ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ ಎಂದು ಹಮಾಸ್ ಸೋಮವಾರ ತಿಳಿಸಿದೆ.

    ಬಿಡುಗಡೆಯಾದ ಒತ್ತೆಯಾಳುಗಳನ್ನು ನೂರಿಟ್ ಕೂಪರ್ (79) ಹಾಗೂ ಯೋಚೆವೆಡ್ ಲಿಫ್‌ಶಿಟ್ಜ್ (85) ಎಂದು ಸ್ಥಳೀಯ ಮಾಧ್ಯಮಗಳು ಗುರುತಿಸಿವೆ. ಗಾಜಾ ಗಡಿಯ ಸಮೀಪವಿರುವ ನಿರ್ ಓಜ್‌ನ ಕಿಬ್ಜತ್ಜ್‌ನಲ್ಲಿ ಈ ಇಬ್ಬರು ವೃದ್ಧೆಯರನ್ನು ಅವರ ಪತಿಯರೊಂದಿಗೆ ತಮ್ಮ ಮನೆಗಳಿಂದ ಹಮಾಸ್ ಉಗ್ರರು ಒತ್ತೆಯಾಳಾಗಿ ತೆಗೆದುಕೊಂಡಿದ್ದರು. ಇದೀಗ ವೃದ್ಧ ಮಹಿಳೆಯರನ್ನು ಆರೋಗ್ಯದ ಹಾಗೂ ಮಾನವೀಯ ದೃಷ್ಟಿಯಿಂದ ಬಿಡುಗಡೆ ಮಾಡಿದರೂ ಅವರ ಪತಿಯರನ್ನು ಬಿಡುಗಡೆ ಮಾಡಲಾಗಿಲ್ಲ ಎನ್ನಲಾಗದೆ.

    ಇದಕ್ಕೆ ಸಂಬಂಧಿಸಿದಂತೆ ಇಂಟರ್‌ನ್ಯಾಷನಲ್ ಕಮಿಟಿ ಆಫ್ ದಿ ರೆಡ್‌ಕ್ರಾಸ್ ಒತ್ತೆಯಾಳುಗಳ ಬಿಡುಗಡೆಯನ್ನು ಸುಗಮಗೊಳಿಸಿದೆ ಎಂದು ತಿಳಿಸಿದೆ. ಬಿಡುಗಡೆಯಾದ ಒತ್ತೆಯಾಳುಗಳು ಈಜಿಪ್ಟಿನ ರಫಾ ಕ್ರಾಸಿಂಗ್‌ಗೆ ಆಗಮಿಸಿದ್ದಾರೆ ಎಂದು ಈಜಿಪ್ಟ್ ಸುದ್ದಿ ಸಂಸ್ಥೆ ಸೋಮವಾರ ತಡರಾತ್ರಿ ವರದಿ ಮಾಡಿದೆ. ಆದರೆ ಈ ಬಗ್ಗೆ ಇಸ್ರೇಲ್ (Israel) ಯಾವುದೇ ಅಧಿಕೃತ ಪ್ರಕಟಣೆಯನ್ನು ಮಾಡಿಲ್ಲ. ಇದನ್ನೂ ಓದಿ: ಹಮಾಸ್ ರಾಕೆಟ್ ಲಾಂಚರ್‌ಗಳು ಧ್ವಂಸ – ಇಸ್ರೇಲ್ ಬಳಸಿದ Iron Sting ಬಾಂಬ್ ಎಷ್ಟು ಪವರ್‌ಫುಲ್?

    ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಗಾಜಾ ಪಟ್ಟಿ ಬಳಿ ದಾಳಿ ನಡೆಸಿ ಇಸ್ರೇಲಿ ಪ್ರಜೆಗಳು ಸೇರಿದಂತೆ ನೂರಾರು ಜನರನ್ನು ಅಪಹರಿಸಿದ್ದರು. ಅವರನ್ನು ಒತ್ತೆಯಾಳಾಗಿ ಇಟ್ಟ 2 ವಾರಗಳ ಬಳಿಕ ಕಳೆದ ಶುಕ್ರವಾರ ಅಮೆರಿಕ ಮೂಲದ ಜುಡಿತ್ ಹಾಗೂ ನಟಾಲಿ ರಾನನ್ ಅವರನ್ನು ಹಮಾಸ್ ಬಿಡುಗಡೆ ಮಾಡಿದೆ. ಇಸ್ರೇಲಿ ಸೇನೆಯ ಅಂದಾಜಿನ ಪ್ರಕಾರ 220ಕ್ಕೂ ಹೆಚ್ಚು ಇಸ್ರೇಲಿ ನಾಗರಿಕರು ಹಮಾಸ್ ವಶದಲ್ಲಿದ್ದಾರೆ.

    ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೋಮವಾರ ಪ್ಯಾಲೆಸ್ತೀನ್ ಗುಂಪು ಮೊದಲು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದರೆ ಮಾತ್ರವೇ ಕದನ ವಿರಾಮದ ಬಗ್ಗೆ ಮಾತುಕತೆ ನಡೆಸಬಹುದು ಎಂದಿದ್ದಾರೆ. ಇಸ್ರೇಲ್ ಸೋಮವಾರ ಗಾಜಾದ ಮೇಲೆ ತನ್ನ ವೈಮಾನಿಕ ದಾಳಿಯನ್ನು ಹೆಚ್ಚಿಸಿದೆ. ಕಳೆದ 24 ಗಂಟೆಗಳಲ್ಲಿ ಬಾಂಬ್ ದಾಳಿಗೆ 436 ಜನರು ಸಾವನ್ನಪ್ಪಿರುವುದಾಗಿ ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: Israel Hamas War: ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತದಿಂದ ಮಾನವೀಯ ನೆರವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಮಾಸ್ ರಾಕೆಟ್ ಲಾಂಚರ್‌ಗಳು ಧ್ವಂಸ – ಇಸ್ರೇಲ್ ಬಳಸಿದ Iron Sting ಬಾಂಬ್ ಎಷ್ಟು ಪವರ್‌ಫುಲ್?

    ಹಮಾಸ್ ರಾಕೆಟ್ ಲಾಂಚರ್‌ಗಳು ಧ್ವಂಸ – ಇಸ್ರೇಲ್ ಬಳಸಿದ Iron Sting ಬಾಂಬ್ ಎಷ್ಟು ಪವರ್‌ಫುಲ್?

    ಟೆಲ್ ಅವೀವ್: ತನ್ನನ್ನು ಕೆಣಕಿದ ಹಮಾಸ್ ಉಗ್ರರ ಮೇಲೆ ಇಸ್ರೇಲ್ ಬಾಂಬ್ (Israel Bomb) ದಾಳಿಯನ್ನು ಮುಂದುವರಿಸಿದೆ. ಈ ನಡುವೆ ಇಸ್ರೇಲ್ ವಾಯುಪಡೆಯು ಇದೇ ಮೊದಲ ಬಾರಿಗೆ ಅತ್ಯಂತ ಶಕ್ತಿಶಾಲಿ `ಐರನ್ ಸ್ಟಿಂಗ್’ (Iron Sting) ಬಾಂಬ್ ಅನ್ನು ಪ್ರಯೋಗಿಸಿ ದಾಳಿ ಮಾಡಿದೆ.

    ಇಸ್ರೇಲ್ ವಾಯುಪಡೆಯ ಮ್ಯಾಗ್ಲಾನ್ ಘಟಕವು ಗಾಜಾ ಪಟ್ಟಿಯಲ್ಲಿರುವ ಹಮಾಸ್‌ನ ರಾಕೆಟ್ ಲಾಂಚರ್‌ಗಳನ್ನ ಗುರಿಯಾಗಿಸಲು ಮತ್ತು ಉಗ್ರರನ್ನ ಹತ್ಯೆಗೈಯಲು ಇಸ್ರೇಲ್ ಈ ಅಸ್ತ್ರ ಪ್ರಯೋಗಿಸಿರುವುದಾಗಿ ತಿಳಿಸಿದೆ. ಇದನ್ನೂ ಓದಿ: ಸಿಯಾಚಿನ್‌ನಲ್ಲಿ ಕರ್ತವ್ಯದಲ್ಲಿದ್ದ ಅಗ್ನಿವೀರ್‌ ಹುತಾತ್ಮ – ಸೇನೆಯಿಂದ ಗೌರವ

    ವಾಯುಪಡೆಯ ಸಹಕಾರದೊಂದಿಗೆ ಮ್ಯಾಗ್ಲಾನ್ ಘಟಕವು `ಸ್ಟೀಲ್ ಸ್ಟಿಂಗ್’ ಹೆಸರಿನಿಂದ ಕರೆಯಲ್ಪಡುವ ಮೋರ್ಟರ್ ಬಾಂಬ್ ಸೇರಿದಂತೆ ವಿವಿಧ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಡಜನ್‌ಗಟ್ಟಲೇ ಭಯೋತ್ಪಾದಕರನ್ನು ಹತ್ಯೆಗೈದಿದೆ. ಅಲ್ಲದೇ ಹಮಾಸ್ ಉಗ್ರರ (Hamas Terrorists) ದಾಳಿಯನ್ನು ಹಿಮ್ಮೆಟ್ಟಿಸುವಲ್ಲಿಯೂ ಯಶಸ್ವಿಯಾಗಿದೆ. ಇದರೊಂದಿಗೆ `ಸ್ಟೀಲ್ ಸ್ಟಿಂಗರ್’ ಬಳಸಿಕೊಂಡು ರಾಕೆಟ್ ಲಾಂಚರ್ ಮೇಲಿನ ದಾಳಿಯನ್ನು ಚಿತ್ರೀಕರಿಸಿ ಈ ವೀಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

    ಕೇವಲ 14 ಸೆಕೆಂಡುಗಳ ವೀಡಿಯೋದಲ್ಲಿ 120 MM ಪವರ್‌ಫುಲ್ ಮಾರ್ಟರ್ ಶತ್ರು ಸೇನೆಯ ರಾಕೆಟ್ ಲಾಂಚರ್‌ಗಳನ್ನ (Rocket Launchers) ಬ್ಲಾಸ್ಟ್ ಮಾಡುತ್ತಿರುವುದನ್ನು ತೋರಿಸಿದೆ. ಸದ್ಯ ಈ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: 25 ವರ್ಷಗಳ ಒಡನಾಟಕ್ಕೆ ಬ್ರೇಕ್‌ – BJPಗೆ ನಟಿ ಗೌತಮಿ ತಡಿಮಲ್ಲ ಗುಡ್‍ಬೈ

    ಮುಖ್ಯವಾಗಿ `ಐರನ್ ಸ್ಟಿಂಗ್’ ಎಂಬುದು 120 MM ಯುದ್ಧ ಸಾಮಗ್ರಿಯಾಗಿದ್ದು, ಲೇಸರ್ ಮತ್ತು ಜಿಪಿಎಸ್ ನಿಂದ ಮಾರ್ಗದರ್ಶನ ಮಾಡಬಹುದಾಗಿದೆ (ಕಮಾಂಡಿಂಗ್ ಅಥವಾ ಗೈಡ್). 12 ಕಿಮೀವರೆಗಿನ ದಾಳಿ ಸಾಮರ್ಥ್ಯಗಳನ್ನು ಹೊಂದಿದೆ. 2021ರಲ್ಲಿ ಅಮೆರಿಕದ ಪ್ರತಿಷ್ಠಿತ ಎಲ್ಬಿಟ್ ಸಿಸ್ಟಮ್ಸ್ ಕಂಪನಿ ಈ ಅಸ್ತ್ರವನ್ನು ಅಭಿವೃದ್ಧಿಪಡಿಸಿ, ಮೊದಲಬಾರಿಗೆ ಬಹಿರಂಗಪಡಿಸಿತ್ತು. ಇದೀಗ ಇಸ್ರೇಲ್ ದಾಳಿಯಲ್ಲೂ ಈ ಪವರ್ ಫುಲ್ ಅಸ್ತ್ರವನ್ನು ಬಳಸಲಾಗುತ್ತಿದೆ. ಇದನ್ನೂ ಓದಿ: Israel Hamas War: ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತದಿಂದ ಮಾನವೀಯ ನೆರವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಾಜಾ ಮೇಲೆ ಇಸ್ರೇಲ್ ಮಹಾಯುದ್ಧ – 30 ಪ್ಯಾಲೆಸ್ತೀನಿಯರು ಸಾವು

    ಗಾಜಾ ಮೇಲೆ ಇಸ್ರೇಲ್ ಮಹಾಯುದ್ಧ – 30 ಪ್ಯಾಲೆಸ್ತೀನಿಯರು ಸಾವು

    – ಕಳೆದ 24 ಗಂಟೆಯಲ್ಲಿ 266 ಮಂದಿ ದುರ್ಮರಣ

    ಟೆಲ್ ಅವಿವ್: ಇಸ್ರೇಲ್ (Israel) ಸೋಮವಾರ ಮುಂಜಾನೆ ಗಾಜಾದ (Gaza) ಮೇಲೆ ಬಾಂಬ್ ದಾಳಿಯನ್ನು ಮುಂದುವರಿಸಿದ್ದು, ದಕ್ಷಿಣ ಲೆಬನಾನ್ (Southern Lebanon) ಅನ್ನು ರಾತ್ರಿಯಿಡೀ ಹೊಡೆದಿದೆ. ದಾಳಿಗಳು ಕೇಂದ್ರ ಮತ್ತು ಉತ್ತರದ ಮೇಲೆ ಕೇಂದ್ರೀಕೃತವಾಗಿವೆ ಎಂದು ವರದಿಗಳು ತಿಳಿಸಿವೆ.

    ಸೋಮವಾರ ಮುಂಜಾನೆ ಗಾಜಾ ಪಟ್ಟಿಯಲ್ಲಿರುವ ಮೂರು ಆಸ್ಪತ್ರೆಗಳ (Hospital) ಸಮೀಪದಲ್ಲಿ ಇಸ್ರೇಲ್ ಬಾಂಬ್ ದಾಳಿ ನಡೆಸಿದೆ ಎಂದು ಪ್ಯಾಲೇಸ್ತೀನಿಯನ್ ಮಾಧ್ಯಮ ವರದಿ ಮಾಡಿದೆ. ಆದರೆ ಬಾಂಬ್ ದಾಳಿಯಿಂದ ಆಸ್ಪತ್ರೆ ಹಾನಿಗೊಳಗಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಇಸ್ರೇಲ್ ಗಾಜಾ ನಗರದ ಶಿಫಾ ಮತ್ತು ಅಲ್-ಕುದ್ಸ್ ಆಸ್ಪತ್ರೆಗಳ ಬಳಿ ಮತ್ತು ಎನ್‌ಕ್ಲೇವ್‌ನ ಉತ್ತರದಲ್ಲಿರುವ ಇಂಡೋನೇಷಿಯನ್ ಆಸ್ಪತ್ರೆಯ ಬಳಿ ದಾಳಿ ಮಾಡಿದೆ ಎಂದು ವರದಿ ಹೇಳಿದೆ. ಇದನ್ನೂ ಓದಿ: Israel Hamas War: ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತದಿಂದ ಮಾನವೀಯ ನೆರವು

    ಇದಕ್ಕೂ ಮೊದಲು, ಅಲ್-ಕುಡ್ಸ್ ಆಸ್ಪತ್ರೆಯನ್ನು ಸ್ಥಳಾಂತರಿಸಲು ಇಸ್ರೇಲ್ ಆದೇಶಿಸಿದೆ ಎಂದು ಪ್ಯಾಲೆಸ್ತೀನಿಯನ್ ರೆಡ್ ಕ್ರೆಸೆಂಟ್ ಸೊಸೈಟಿ ಹೇಳಿದೆ. ಗಾಜಾದಲ್ಲಿನ ವಸತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 30 ಪ್ಯಾಲೆಸ್ತೀನಿಯಾದವರು (Palestinians) ಸಾವನ್ನಪ್ಪಿದ್ದಾರೆ. ಜಬಾಲಿಯಾ ನಿರಾಶ್ರಿತರ ಶಿಬಿರದ ಅಲ್-ಶುಹಾದಾ ಪ್ರದೇಶದಲ್ಲಿ ಈ ಕಟ್ಟಡವಿತ್ತು. ಇದನ್ನೂ ಓದಿ: ಸಂಬಂಧವನ್ನು ಮರುಸ್ಥಾಪಿಸುತ್ತೇವೆ – NRIಗಳಿಗೆ ಕೆನಡಾ ವಿರೋಧ ಪಕ್ಷ ಭರವಸೆ

    ಎನ್‌ಕ್ಲೇವ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ವೈಮಾನಿಕ ದಾಳಿಯಿಂದ 117 ಮಕ್ಕಳು ಸೇರಿದಂತೆ 266 ಪ್ಯಾಲೆಸ್ತೀನಿಯಾದವರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಹಮಾಸ್‌ನ ರಾಜಕೀಯ ಬ್ಯೂರೋ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಮತ್ತು ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಅವರು ಗಾಜಾದ ಮೇಲೆ ಇಸ್ರೇಲಿ ದಾಳಿಯನ್ನು ಹೇಗೆ ನಿಲ್ಲಿಸಬೇಕು ಎಂಬುದರ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಗಾಜಾಪಟ್ಟಿಗೆ ಜಾಗತಿಕ ನೆರವು – ಪ್ಯಾಲೆಸ್ತೇನಿಗಳಿಗೆ ಆಶ್ರಯ ನೀಡದ ನೆರೆ ದೇಶಗಳು

    ಅಕ್ಟೋಬರ್ 7 ರಂದು ಪ್ಯಾಲೇಸ್ತೀನಿಯನ್ ಗುಂಪು ಹಮಾಸ್ ಇಸ್ರೇಲ್ ಮೇಲೆ ಹಠಾತ್ ದಾಳಿಯನ್ನು ಪ್ರಾರಂಭಿಸಿ 1,400 ಜನರನ್ನು ಕೊಂದ ನಂತರ ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದೆ. ಎರಡು ವಾರಗಳ ಬಾಂಬ್ ದಾಳಿಯಲ್ಲಿ ಕನಿಷ್ಠ 4,600 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗೆಲುವಿನ ತನಕ ವಿರಮಿಸುವುದಿಲ್ಲ: ಇಸ್ರೇಲ್ ಪ್ರಧಾನಿ ಪ್ರತಿಜ್ಞೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Israel Hamas War: ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತದಿಂದ ಮಾನವೀಯ ನೆರವು

    Israel Hamas War: ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತದಿಂದ ಮಾನವೀಯ ನೆರವು

    ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ (Israel Hamas War) ನಡುವೆ ಗಾಜಾ ಪಟ್ಟಿಯಲ್ಲಿ ಸಿಲುಕಿ ನಲುಗುತ್ತಿರುವ ಪ್ಯಾಲೆಸ್ತೀನಿಯರಿಗೆ (Palestinian) ಭಾರತ ಭಾನುವಾರ (ಅ.22) ಮಾನವೀಯ ನೆರವು ಕಳುಹಿಸಿದೆ.

    ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್ ಅಬ್ಬಾಸ್ (Mahmoud Abbas) ಅವರೊಂದಿಗೆ ಮಾತನಾಡಿ ಮಾನವೀಯ ನೆರವು ಕಳಿಸುವ ಭರವಸೆ ನೀಡಿದ್ದರು. ಅಲ್ಲದೇ ಈ ನೆರವು ದೀರ್ಘಕಾಲ ಮುಂದುವರಿಯಲಿದೆ ಎಂದು ಭರವಸೆ ನೀಡಿದ್ದರು. ಅದರಂತೆ ಮೊದಲ ಹಂತವಾಗಿ ಸುಮಾರು 6.5 ಟನ್ ವೈದ್ಯಕೀಯ ಸಾಮಗ್ರಿಗಳ ನೆರವು ಮತ್ತು 32 ಟನ್ ವಿಪತ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸಲಾಗಿದೆ. ಅದು ಈಜಿಪ್ಟ್ ಮೂಲಕ ದೇಶವನ್ನು ತಲುಪಲಿದೆ. ಇದನ್ನೂ ಓದಿ: ಹಮಾಸ್‌ ಉಗ್ರರ ಕೃತ್ಯ ಖಂಡಿಸಿದ್ದಕ್ಕೆ ಬಹರೇನ್‌ನಲ್ಲಿ ಮಂಗಳೂರಿನಲ್ಲಿ ಓದಿದ ವೈದ್ಯ ಅರೆಸ್ಟ್‌

    ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 6.5 ಟನ್ ವೈದ್ಯಕೀಯ ಸಾಮಗ್ರಿಗಳ ನೆರವು ಮತ್ತು 32 ಟನ್ ವಿಪತ್ತು ಪರಿಹಾರ ಸಾಮಗ್ರಿಗಳನ್ನು ಹೊತ್ತ ಭಾರತೀಯ ವಾಯುಪಡೆಯ C-17 ವಿಮಾನವು ಈಜಿಪ್ಟ್‌ನ ಎಲ್-ಅರಿಶ್ ವಿಮಾನ ನಿಲ್ದಾಣಕ್ಕೆ ಹೊರಟಿದೆ. ವಸ್ತುಗಳನ್ನು ಈಜಿಪ್ಟ್ ಮತ್ತು ಗಾಜಾ ನಡುವಿನ ರಫಾ ಗಡಿಯ ಮೂಲಕ ಪ್ಯಾಲೆಸ್ತೀನ್‌ಗೆ ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿಂದು ದಸರಾ ಏರ್‌ಶೋ ರಿಹರ್ಸಲ್‌ – ಸಾರ್ವಜನಿಕರಿಗೆ ಇಂದು ಉಚಿತ, ನಾಳೆ ಪಾಸ್‌ ಖಚಿತ

    ಭಾರತದಿಂದ ನೀಡಲಾಗುತ್ತಿರುವ ಮಾನವೀಯ ನೆರವು ಜೀವ ಉಳಿಸುವ ಅಗತ್ಯ ಔಷಧಗಳು, ಶಸ್ತ್ರಚಿಕಿತ್ಸಾ ಸಾಮಗ್ರಿಗಳು, ಟೆಂಟ್‌ಗಳು, ಮಲಗುವ ಚೀಲಗಳು, ಟಾರ್ಪಾಲಿನ್‌ಗಳು, ನೈರ್ಮಲ್ಯ ಉಪಯುಕ್ತತೆಯ ವಸ್ತುಗಳು ಹಾಗೂ ನೀರು ಶುದ್ಧೀಕರಣ ಮಾತ್ರೆಗಳು ಇತರ ಅಗತ್ಯ ವಸ್ತುಗಳನ್ನು ಒಳಗೊಂದಿದೆ. ಇದನ್ನೂ ಓದಿ: ಇಶಾನ್‌ಗೆ ಜೇನುಹುಳು ಕಂಟಕ, ಸೂರ್ಯನಿಗೆ ಮೊಣಕೈ ಗಾಯ – ಪಂದ್ಯ ಆರಂಭಕ್ಕೂ ಮುನ್ನವೇ ಭಾರತಕ್ಕೆ ತ್ರಿಬಲ್‌ ಶಾಕ್‌

    ಇತ್ತೀಚೆಗೆ ಗಾಜಾ ಪಟ್ಟಿಯ ಆಸ್ಪತ್ರೆಯೊಂದರ ಮೇಲೆ ನಡೆದ ಬಾಂಬ್ ದಾಳಿಗೆ ಸಾಕಷ್ಟು ಜೀವಗಳು ಬಲಿಯಾಗಿದ್ದವು. ದಾಳಿಯಲ್ಲಿ ಮೃತರಿಗೆ ಸಂತಾಪ ಸೂಚಿಸಿದ್ದ ಪ್ರಧಾನಿ ಮೋದಿ ಅವರು, ಮಾನವೀಯ ನೆರವು ನೀಡುವುದಾಗಿ ಭರವಸೆ ನೀಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]