Tag: Israel

  • ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳೆಂದು ಕರೆದ ಮಂಗಳೂರಿನ ಝಾಕಿರ್- ವೀಡಿಯೋ ವೈರಲ್

    ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳೆಂದು ಕರೆದ ಮಂಗಳೂರಿನ ಝಾಕಿರ್- ವೀಡಿಯೋ ವೈರಲ್

    ಮಂಗಳೂರು: ಇಸ್ರೇಲ್‌ನಲ್ಲಿ (Israel) ನರಮೇಧ ನಡೆಸಿದ ಹಮಾಸ್ ಉಗ್ರರಿಗೆ (Hamas Militants) ಮಂಗಳೂರಿನ (Mangaluru) ವ್ಯಕ್ತಿಯೊಬ್ಬ ಬೆಂಬಲ ನೀಡಿದ್ದು, ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳೆಂದು ಕರೆದಿದ್ದಾನೆ.

    ಮಂಗಳೂರು ಮೂಲದ ಝಾಕಿರ್ ಎಂಬಾತ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ (Social Media) ವೀಡಿಯೋ ಹರಿಬಿಟ್ಟಿದ್ದಾನೆ. ಹಮಾಸ್ ಉಗ್ರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ ಈತ ಪ್ಯಾಲೇಸ್ಟೈನ್, ಗಾಜಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸುವಂತೆ ಕರೆ ನೀಡಿದ್ದಾನೆ. ಅಲ್ಲದೇ ಹಮಾಸ್ ಉಗ್ರರನ್ನು ದೇಶ ಪ್ರೇಮಿ ಯೋಧರೆಂದು ಬಣ್ಣಿಸಿ ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ್ದಾನೆ. ಇದನ್ನೂ ಓದಿ: ಬೃಹತ್ ದಾಳಿಯ ಮುನ್ಸೂಚನೆ ನೀಡಿದ ಇಸ್ರೇಲ್

    ಈತನ ವಿವಾದಾತ್ಮಕ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಝಾಕಿರ್ ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬನ್ ಎಂಬ ಹೆಸರಿನಲ್ಲಿ ಗುರುತಿಸಿಕೊಂಡಿದ್ದಾನೆ. ಝಾಕಿರ್ ವೀಡಿಯೋಗೆ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಹಿಂದೂ ಸಂಘಟನೆಗಳಿಂದಲೂ ಭಾರೀ ವಿರೋಧ ವ್ಯಕ್ತವಾಗಿದೆ. ಝಾಕಿರ್‌ನನ್ನು ಈ ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಇದನ್ನೂ ಓದಿ: Operation Ajay- ಇಸ್ರೇಲಿನಿಂದ 9 ಮಂದಿ ಕನ್ನಡಿಗರು ದೆಹಲಿಗೆ ಆಗಮನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಮ್ಮ ಜೀವ ಉಳಿಸಿಕೊಳ್ಳಲು ದಕ್ಷಿಣಕ್ಕೆ ತೆರಳಿ- ಗಾಝಾ ನಿವಾಸಿಗಳಿಗೆ ಇಸ್ರೇಲ್ ಮಹತ್ವದ ಸೂಚನೆ

    ನಿಮ್ಮ ಜೀವ ಉಳಿಸಿಕೊಳ್ಳಲು ದಕ್ಷಿಣಕ್ಕೆ ತೆರಳಿ- ಗಾಝಾ ನಿವಾಸಿಗಳಿಗೆ ಇಸ್ರೇಲ್ ಮಹತ್ವದ ಸೂಚನೆ

    ಟೆಲ್ ಅವಿವ್: ಇಸ್ರೇಲ್ ರಕ್ಷಣಾ ಪಡೆಗಳು (IDF) ವಿಶ್ವಸಂಸ್ಥೆಗೆ ನಿರ್ಣಾಯಕ ನಿರ್ದೇಶನವನ್ನು ತಿಳಿಸಿದೆ. ಉತ್ತರ ಗಾಝಾದಲ್ಲಿರುವ ಪ್ಯಾಲೆಸ್ತೀನ್ ನಿವಾಸಿಗಳು 24 ಗಂಟೆಗಳ ಒಳಗಾಗಿ ದಕ್ಷಿಣ ಗಾಝಾಕ್ಕೆ ಸ್ಥಳಾಂತರಗೊಳ್ಳುವಂತೆ ತಿಳಿಸಿದ್ದಾಗಿ ಇಸ್ರೇಲ್ (Israel) ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

    ಇಸ್ರೇಲ್ ಗಾಝಾ (Gaza) ನಿವಾಸಿಗಳಿಗೆ ನೀಡಿರುವ ಮಹತ್ವದ ಸೂಚನೆ ಭಾರೀ ಆಕ್ರಮಣದ ಸುಳಿವು ನೀಡಿದೆ. ಸರಿಸುಮಾರು 11 ಲಕ್ಷ ಪ್ಯಾಲೆಸ್ತೀನಿಯನ್ನರು ಗಾಝಾದ ಉತ್ತರ ಭಾಗದಲ್ಲಿ ನೆಲೆಸಿದ್ದಾರೆ. ಈ ಹಿನ್ನೆಲೆ ಅಲ್ಲಿನ ನಿವಾಸಿಗಳಿಗೆ ಪ್ರಾಣಾಪಾಯದಿಂದ ಪಾರಾಗಲು ಸ್ಥಳಾಂತರಕ್ಕೆ ಮಹತ್ವದ ಸೂಚನೆ ನೀಡಲಾಗಿದೆ. ಇದನ್ನೂ ಓದಿ: 60 ಉಗ್ರರ ಕೊಂದು 250 ಒತ್ತೆಯಾಳುಗಳನ್ನು ಸುರಕ್ಷಿತವಾಗಿ ರಕ್ಷಿಸಿದ ಇಸ್ರೇಲ್ ಸೈನಿಕರು

    ಗಾಝಾ ನಗರದ ಸುರಂಗಗಳಲ್ಲಿ ಹಮಾಸ್ ಉಗ್ರರು ಅಡಗಿರುವ ಹಿನ್ನೆಲೆ ಐಡಿಎಫ್ ನಾಗರಿಕರಿಗೆ ಸ್ಥಳಾಂತರದ ಸೂಚನೆ ನೀಡಿದೆ. ಗಾಝಾ ನಿವಾಸಿಗಳೇ, ನಿಮ್ಮ ವೈಯಕ್ತಿಕ ಸುರಕ್ಷತೆ ಮತ್ತು ನಿಮ್ಮ ಕುಟುಂಬಗಳಿಗಾಗಿ ದಕ್ಷಿಣಕ್ಕೆ ತೆರಳಿ. ನಿಮ್ಮನ್ನು ಮಾನವ ಗುರಾಣಿಯಾಗಿ ಬಳಸುತ್ತಿರುವ ಹಮಾಸ್ ಭಯೋತ್ಪಾದಕರಿಂದ ದೂರವಿರಿ. ಮುಂಬರುವ ದಿನಗಳಲ್ಲಿ ಐಡಿಎಫ್ ಗಾಝಾ ನಗರದಲ್ಲಿ ದೊಡ್ಡ ಕಾರ್ಯಾಚರಣೆ ನಡೆಸುವುದನ್ನು ಮುಂದುವರಿಸಲಿದೆ. ಈ ಹಿನ್ನೆಲೆ ನಾಗರಿಕರಿಗೆ ಹಾನಿಯಾಗುವುದನ್ನು ತಡೆಯಲು ಈ ಸೂಚನೆ ನೀಡಲಾಗುತ್ತಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿದೆ. ಇದನ್ನೂ ಓದಿ: Operation Ajay: ಇಸ್ರೇಲ್‌ನಿಂದ 230 ಮಂದಿ ಭಾರತೀಯರ ಆಗಮನ – ಕನ್ನಡಿಗರಿಗೆ ಟಿ.ಬಿ ಜಯಚಂದ್ರ ಆತ್ಮೀಯ ಸ್ವಾಗತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 60 ಉಗ್ರರ ಕೊಂದು 250 ಒತ್ತೆಯಾಳುಗಳನ್ನು ಸುರಕ್ಷಿತವಾಗಿ ರಕ್ಷಿಸಿದ ಇಸ್ರೇಲ್ ಸೈನಿಕರು

    60 ಉಗ್ರರ ಕೊಂದು 250 ಒತ್ತೆಯಾಳುಗಳನ್ನು ಸುರಕ್ಷಿತವಾಗಿ ರಕ್ಷಿಸಿದ ಇಸ್ರೇಲ್ ಸೈನಿಕರು

    ಟೆಲ್ ಅವಿವ್: ಹಮಾಸ್ (Hamas) ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿ ಒತ್ತೆಯಾಳಾಗಿದ್ದ ಸುಮಾರು 250 ಜನರನ್ನು ಶುಕ್ರವಾರ ಇಸ್ರೇಲ್‌ನ ರಕ್ಷಣಾ ಪಡೆಗಳು (IDF) ಸುರಕ್ಷಿತವಾಗಿ ರಕ್ಷಿಸಿದ್ದಾರೆ.

    ಗಾಝಾ (Gaza) ಭದ್ರತಾ ಬೇಲಿ ಪ್ರದೇಶದ ಬಳಿ 60ಕ್ಕೂ ಹೆಚ್ಚು ಹಮಾಸ್ ಭಯೋತ್ಪಾದಕರನ್ನು ಕೊಂದು ಒತ್ತೆಯಾಳುಗಳನ್ನು ಹೇಗೆ ರಕ್ಷಿಸಿದರು ಎಂಬುದನ್ನು ತೋರಿಸುವ ಹೆಡ್‌ಕ್ಯಾಮ್ ದೃಶ್ಯಗಳನ್ನು ಐಡಿಎಫ್ ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದೆ.

    ಈ ಬಗ್ಗೆ ಬರೆದಿರುವ ಐಡಿಎಫ್, ಫ್ಲೋಟಿಲ್ಲಾ 13 ಎಲೈಟ್ ಘಟಕವನ್ನು ಅಕ್ಟೋಬರ್ 7 ರಂದು ಸುಫಾ ಮಿಲಿಟರಿ ಪೋಸ್ಟ್‌ನ ನಿಯಂತ್ರಣವನ್ನು ಮರಳಿ ಪಡೆಯುವ ಜಂಟಿ ಪ್ರಯತ್ನದಲ್ಲಿ ಗಾಜಾ ಭದ್ರತಾ ಬೇಲಿಯ ಸುತ್ತಲಿನ ಪ್ರದೇಶಕ್ಕೆ ನಿಯೋಜಿಸಲಾಗಿದೆ.

    ಸೈನಿಕರು ಸುಮಾರು 250 ಒತ್ತೆಯಾಳುಗಳನ್ನು ಜೀವಂತವಾಗಿ ರಕ್ಷಿಸಿದ್ದಾರೆ. 60ಕ್ಕೂ ಹೆಚ್ಚು ಹಮಾಸ್ ಭಯೋತ್ಪಾದಕರನ್ನು ಕೊಲ್ಲಲಾಗಿದೆ ಮತ್ತು ಹಮಾಸ್ ದಕ್ಷಿಣ ನೌಕಾ ವಿಭಾಗದ ಉಪ ಕಮಾಂಡರ್ ಮುಹಮ್ಮದ್ ಅಬು ಅಲಿ ಸೇರಿದಂತೆ 26 ಮಂದಿಯನ್ನು ಬಂಧಿಸಲಾಗಿದೆ ಎಂದು ಐಡಿಎಫ್ ತಿಳಿಸಿದೆ.

    ಹಮಾಸ್ ಭಯೋತ್ಪಾದಕರು ಇಸ್ರೇಲ್ (Israel) ಮೇಲೆ ಮಾರಣಾಂತಿಕ ದಾಳಿ ನಡೆಸಿ ಅದರ ಭೂಪ್ರದೇಶಕ್ಕೆ ನುಸುಳಿದ ಕೂಡಲೇ ಐಡಿಫ್‌ನಿಂದ ಸೇನಾ ಕಾರ್ಯಾಚರಣೆ ನಡೆಸಲಾಯಿತು. ಹಮಾಸ್ ಉಗ್ರರನ್ನು ಎದುರಿಸಲು ಸುಮಾರು 13 ಸೈನಿಕರನ್ನು ಘಟನಾ ಸ್ಥಳಕ್ಕೆ ಹೆಲಿಕಾಪ್ಟರ್ ಮೂಲಕ ಕಳುಹಿಸಲಾಯಿತು. ಇದನ್ನೂ ಓದಿ: Operation Ajay: ಭಾರತ ಸರ್ಕಾರಕ್ಕೆ ಸಲಾಂ – ಇಸ್ರೇಲ್‌ ಯುದ್ಧ ಭೂಮಿಯ ಅನುಭವ ಬಿಚ್ಚಿಟ್ಟ ಕನ್ನಡಿಗರು

    ಸೈನಿಕರ ಹೆಡ್‌ಕ್ಯಾಮ್‌ನಲ್ಲಿ ಸೆರೆಯಾಗಿರುವ ವೀಡಿಯೋದಲ್ಲಿ ಫ್ಲೋಟಿಲ್ಲಾ 13 ಎಲೈಟ್ ಯುನಿಟ್ ಸಿಬ್ಬಂದಿ ಹಲವಾರು ಸುತ್ತು ಗುಂಡುಗಳನ್ನು ಹೊಡೆದು, ಭಯೋತ್ಪಾದಕರನ್ನು ಸೆರೆಹಿಡಿಯುವುದು ಕಂಡುಬಂದಿದೆ.

    ಇತ್ತೀಚಿನ ವರದಿಗಳ ಪ್ರಕಾರ, ಇಸ್ರೇಲ್‌ನಲ್ಲಿ ಹಮಾಸ್ ಭಯೋತ್ಪಾದಕರ ದಾಳಿಗೆ ಸಾವನ್ನಪ್ಪಿರುವವರ ಸಂಖ್ಯೆ 1,300 ದಾಟಿದೆ. 3,300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹಮಾಸ್ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲ್‌ನಿಂದ ಜನರನ್ನು ಅಪಹರಿಸಿ, ಅವರನ್ನು ಗಾಜಾದಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡಿತು. ಇನ್ನು ಇಸ್ರೇಲ್‌ನ ಪಡೆಗಳು ಪ್ರತಿದಾಳಿ ನಡೆಸಿದ್ದು, ಇಸ್ರೇಲ್ ಹಾಗೂ ಗಡಿ ಪ್ರದೇಶದಲ್ಲಿ 1,500ಕ್ಕೂ ಹೆಚ್ಚು ಹಮಾಸ್ ಭಯೋತ್ಪಾದಕರ ಮೃತದೇಹಗಳು ಪತ್ತೆಯಾಗಿವೆ. ಇದನ್ನೂ ಓದಿ: Operation Ajay: ಇಸ್ರೇಲ್‌ನಿಂದ 230 ಮಂದಿ ಭಾರತೀಯರ ಆಗಮನ – ಕನ್ನಡಿಗರಿಗೆ ಟಿ.ಬಿ ಜಯಚಂದ್ರ ಆತ್ಮೀಯ ಸ್ವಾಗತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Operation Ajay: ಭಾರತ ಸರ್ಕಾರಕ್ಕೆ ಸಲಾಂ – ಇಸ್ರೇಲ್‌ ಯುದ್ಧ ಭೂಮಿಯ ಅನುಭವ ಬಿಚ್ಚಿಟ್ಟ ಕನ್ನಡಿಗರು

    Operation Ajay: ಭಾರತ ಸರ್ಕಾರಕ್ಕೆ ಸಲಾಂ – ಇಸ್ರೇಲ್‌ ಯುದ್ಧ ಭೂಮಿಯ ಅನುಭವ ಬಿಚ್ಚಿಟ್ಟ ಕನ್ನಡಿಗರು

    ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ (Israel Hamas War) ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ (Operation Ajay) ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಮೊದಲ ಹಂತದಲ್ಲಿ 230 ಮಂದಿ ಭಾರತೀಯರನ್ನ ಕರೆತರಲಾಗಿದ್ದು, ಈ ಪೈಕಿ ಐವರು ಕನ್ನಡಿಗರೂ ಇದ್ದಾರೆ. ಅವರಿಂದು ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಯುದ್ಧಭೂಮಿಯ ಅನುಭವ ಬಿಚ್ಚಿಟ್ಟಿದ್ದಾರೆ.

    ಮಹಾರಾಷ್ಟ್ರ ಯುವತಿ ಕಂಡಂತೆ ಇಸ್ರೇಲ್‌ ಹೇಗಿತ್ತು?
    ಕಳೆದ 9 ತಿಂಗಳಿನಿಂದ ಇಸ್ರೇಲ್‌ನಲ್ಲಿ ಕೆಲಸ ಮಾಡಿಕೊಂಡಿರುವ ಮಹಾರಾಷ್ಟ್ರ ಮೂಲದ ಯುವತಿ ಪ್ರಿಯಾಂಕಾ ʻಪಬ್ಲಿಕ್‌ ಟಿವಿʼ (Public TV) ಜೊತೆಗೆ ಮಾತನಾಡಿ, ಯುದ್ಧಭೂಮಿಯ ಅನುಭವ ಹಂಚಿಕೊಂಡಿದ್ದಾರೆ. ನಾನು ಇದ್ದ ಅಷ್ಟೂ ದಿನಗಳಲ್ಲಿ ಇದೇ ಮೊದಲ ಬಾರಿಗೆ ದೊಡ್ಡಮಟ್ಟದ ಸಮಸ್ಯೆ ಆಗಿರೋದು. ನಾವು ಇಸ್ರೇಲ್‌ ಕೇಂದ್ರ ಭಾಗದಲ್ಲಿದ್ದೆವು. ದಕ್ಷಿಣಕ್ಕೆ 120 ಕಿಮೀ ದೂರದಲ್ಲಿದ್ದ ಗಾಜಾಪಟ್ಟಿಯಲ್ಲಿ ದಾಳಿ ನಡೆದಿತ್ತು. ಇದರಿಂದ ಸಾಕಷ್ಟು ಆತಂಕಕ್ಕೆ ಒಳಗಾಗಿದ್ದೆವು ಎಂದು ಹೇಳಿದ್ದಾರೆ.

    ನಾವು ಬಂಕರ್‌ಗಳಲ್ಲಿ ಅಡಗಿ ಕೂರಬೇಕಿತ್ತು. ದಿನಕ್ಕೆ ಎರಡು ಬಾರಿ ಸೈರನ್‌ ಮಾಡುತ್ತಿದ್ದರು. ಆಗ 9 ನಿಮಿಗಳಷ್ಟೇ ಕಾಲಾವಕಾಶ ಸಿಗುತ್ತಿತ್ತು. ಅಷ್ಟರಲ್ಲೇ ನಾವು ಮತ್ತೊಂದು ಬಂಕರ್‌ ಸೇರಿಕೊಳ್ಳಬೇಕಿತ್ತು. ದಿನಕ್ಕೆ ಎರಡು ಬಾರಿ ಮಾತ್ರ ಸೈರನ್‌ ಆಗುತ್ತಿತ್ತು. ಕೆಲವೊಮ್ಮೆ ದಿನಕ್ಕೆ ಒಂದು ಬಾರಿ ಮಾತ್ರ ಆಗುತ್ತಿತ್ತು. ಬಂಕರ್‌ನಿಂದ ಆಚೆ ಬಂದಾಗ ರಾಕೆಟ್‌, ಗುಂಡಿನ ಶಬ್ಧ ಕಿವಿಗೆ ಅಪ್ಪಳಿಸುತ್ತಿತ್ತು, ಪರಿಸ್ಥಿತಿ ಸೂಕ್ಷ್ಮವಾಗಿ ಇದ್ದುದರಿಂದ ನಾವು ನೋಡಲು ಸಾಧ್ಯವಾಗಲಿಲ್ಲ. ಆದ್ರೆ ನಾವು ಬಂಕರ್‌ ನಿಂದ ಮತ್ತೊಂದು ಬಂಕರ್‌ಗೆ ತೆರಳುತ್ತಿದ್ದ ವೇಳೆ ಅನೇಕ ಇಸ್ರೇಲಿಯನ್ನರು ನನಗೆ ಸಹಾಯ ಮಾಡಿದರು, ಸೇಫ್‌ ಆಗಿ ಹೋಗಿ ಅಂತಾ ಹೇಳಿದರು. ಅವರ ಹೆಸರೂ ಕೂಡ ನನಗೆ ಗೊತ್ತಾಗಲಿಲ್ಲ ಎಂದು ಹೇಳಿಕೊಂಡಿದ್ದಾರೆ.

    ಇನ್ನೂ ಇಸ್ರೇಲ್‌ ಉತ್ತರ ಭಾಗದಲ್ಲಿ ಮತ್ತು ದಕ್ಷಿಣಕ್ಕೆ ಇರುವ ಗಾಜಾದಲ್ಲಿ ಸಮಸ್ಯೆ ತುಂಬಾ ಸಮಸ್ಯೆಯಾಗಿತ್ತು. ಭಾರತಕ್ಕೆ ಬಂದ ನಂತರ ಆತಂಕವೆಲ್ಲಾ ದೂರವಾಯಿತು. ನಮ್ಮನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಸೇರಿಸಿದ್ದಕ್ಕೆ ಭಾರತ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇವೆ. ಶೀಘ್ರದಲ್ಲೇ ಇಸ್ರೇಲ್‌ ಪರಿಸ್ಥಿತಿಯನ್ನು ನಿಯಂತ್ರಿಸಲಿದೆ ಎಂದೂ ವಿಶ್ವಾಸ ವ್ಯಕ್ತಪಡಿಸಿದರು.

    ನಾವಿದ್ದ ಜಾಗ ಸೇಫ್‌:
    ಕಳೆದ ಎರಡು ವರ್ಷಗಳಿಂದ ಟೆಲ್‌ ಅವೀವ್‌ನಿಂದ 40 ಕಿಮೀ ದೂರದಲ್ಲಿರುವ ಆರ್ಯಲ್‌ ನಗರದ ವಿಶ್ವವಿದ್ಯಾಲಯದಲ್ಲಿ PHD ಪದವಿ ಮಾಡುತ್ತಿರುವ ವಿಜಯಪುರ ಮೂಲದ ಈರಣ್ಣ ʻಪಬ್ಲಿಕ್‌ ಟಿವಿʼಯೊಂದಿಗೆ ಮಾತನಾಡಿದ್ದಾರೆ. ನಾವಿದ್ದ 300 ಕಿಮೀ ದೂರದಲ್ಲಿ ಯುದ್ಧ ಶುರುವಾಗಿತ್ತು. ಗಡಿ ಭಾಗಗಳಲ್ಲಿ ಮಾತ್ರ ಸಮಸ್ಯೆಯಿತ್ತು. ಆದ್ರೆ ನಾವಿದ್ದ ಕಡೆ ತುಂಬಾ ಸೇಫ್‌ ಇತ್ತು, ಯುದ್ಧದ ಅನುಭವವೇ ಆಗಲಿಲ್ಲ ಎಂದು ಹೇಳಿದ್ದಾರೆ.

    ಭಾರತ ಸರ್ಕಾರಕ್ಕೆ ಸಲಾಂ:
    ನಾವು ಕಳೆದ 2 ವರ್ಷಗಳಿಂದ ಇಸ್ರೇಲ್‌ನ ಅರಿಯಲ್‌ ನಗರದಲ್ಲಿ ಇದ್ದೇವೆ. ನಾವಿದ್ದ ಜಾಗದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇತ್ತು. ಎಂದಿನಂತೆ ಕೆಲಕ್ಕೆ ಹೋಗಿ ಬರುತ್ತಿದ್ದೆವು. ಕೆಲವು ಸಂದರ್ಭಗಳಲ್ಲಿ ಮಾತ್ರ ಹೊರಗಡೆ ಹೋಗಬೇಡಿ, ಬಂಕರ್‌ ವ್ಯವಸ್ಥೆ ಕಲ್ಪಿಸಿದ್ರೆ ಅಲ್ಲಿಗೆ ಸ್ಥಳಾಂತರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುತ್ತಿದ್ದರು. ಕೊನೆಗೆ ಭಾರತಕ್ಕೆ ಬಂದಿದ್ದು ನಿರಾಳ ಎನಿಸಿದೆ. ದೇಶಕ್ಕೆ ಬರಲು ಭಾರತ ಸರ್ಕಾರ ತುಂಬಾ ಸಹಕಾರ ನೀಡಿದ್ದಕ್ಕೆ ಧನ್ಯವಾದ ತಿಳಿಸುತ್ತೇವೆ. ಎಷ್ಟೇ ಆದ್ರೂ ನಮ್ಮ ದೇಶ ನಮ್ಮ ದೇಶವೇ ಎಂದು ಶ್ಲಾಘಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Operation Ajay: ಇಸ್ರೇಲ್‌ನಿಂದ 230 ಮಂದಿ ಭಾರತೀಯರ ಆಗಮನ – ಕನ್ನಡಿಗರಿಗೆ ಟಿ.ಬಿ ಜಯಚಂದ್ರ ಆತ್ಮೀಯ ಸ್ವಾಗತ

    Operation Ajay: ಇಸ್ರೇಲ್‌ನಿಂದ 230 ಮಂದಿ ಭಾರತೀಯರ ಆಗಮನ – ಕನ್ನಡಿಗರಿಗೆ ಟಿ.ಬಿ ಜಯಚಂದ್ರ ಆತ್ಮೀಯ ಸ್ವಾಗತ

    ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ (Israel Hamas War) ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ (Operation Ajay) ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಭಾರತೀಯರನ್ನು (Indians) ಹೊತ್ತ ಮೊದಲ ವಿಮಾನ ಇಸ್ರೇಲ್‌ನಿಂದ ದಹೆಲಿಗೆ ಬಂದಿಳಿದಿದೆ.

    ಒಟ್ಟು 230 ಮಂದಿ ಭಾರತೀಯರು ತವರಿಗೆ ಮರಳಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಸ್ವಾಗತಿಸಿದ್ದಾರೆ. 230 ಮಂದಿಯಲ್ಲಿ ಐವರು ಕನ್ನಡಿಗರು ಸಹ ಇದ್ದು, ಅವರನ್ನ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ (TB Jayachandra) ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಇದೇ ವೇಳೆ ದೆಹಲಿಯಿಂದ ಕರ್ನಾಟಕಕ್ಕೆ ತೆರಳಲು ಸಾರಿಗೆ ವೆಚ್ಚದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರನ್ನ ರೇಪ್‌ ಮಾಡ್ತಿದ್ದಾರೆ, ಮಕ್ಕಳನ್ನ ಕೊಲ್ತಿದ್ದಾರೆ- ಹಮಾಸ್‌ ಉಗ್ರರ ಕರಾಳ ಮುಖ ಬಿಚ್ಚಿಟ್ಟ ಭಾರತದ ಇಸ್ರೇಲ್‌ ಮಹಿಳೆ

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಚಂದ್ರ ಅವರು, ಇಸ್ರೆಲ್‌ನಿಂದ ಬಂದ ಕನ್ನಡಿಗರ ಜೊತೆ ಮಾತನಾಡಿದ್ದೇನೆ. ದೆಹಲಿಗೆ ಬಂದಿರುವ ಅವರ ಯೋಗಕ್ಷೇಮವನ್ನು ಕರ್ನಾಟಕ ಸರ್ಕಾರ ನೋಡಿಕೊಳ್ಳಲಿದೆ. ಪ್ರತಿಯತೊಬ್ಬರನ್ನು ಅವರ ಊರುಗಳಿಗೆ ಕ್ಷೇಮವಾಗಿ ತಲುಪಿಸುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಲಿದೆ. ರಷ್ಯಾ-ಉಕ್ರೇನ್‌ ಯುದ್ಧದ ಸಂಧರ್ಭದಲ್ಲಿ ಮಾಡಿದಂತೆ ಈ ಬಾರಿಯೂ ವ್ಯವಸ್ಥೆ ಮಾಡಲಾಗುವುದು. ಉಳಿದುಕೊಳ್ಳಲು ಕರ್ನಾಟಕ ಭವನದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: 10ನೇ ತರಗತಿ ವಿದ್ಯಾರ್ಥಿಯನ್ನ ಸೆಕ್ಸ್‌ಗೆ ಪೀಡಿಸುತ್ತಿದ್ದ ಟೀಚರ್‌; ಮತಾಂತರಕ್ಕೂ ಒತ್ತಾಯ – ಕೇಸ್‌ ದಾಖಲು

    ಕೇಂದ್ರ ಸರ್ಕಾರದ ಜೊತೆಗೆ ನಮ್ಮ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಹಂತ ಹಂತವಾಗಿ ಕನ್ನಡಿಗರು ವಾಪಸ್ ಬರಲಿದ್ದಾರೆ. ರಾಜ್ಯ ಸರ್ಕಾರ ಜೊತೆಗಿದೆ ಎನ್ನುವ ಸಂದೇಶ ನೀಡಲು ನಾನೇ ಅವರ ಸ್ವಾಗತಕ್ಕೆ ಬಂದಿದ್ದೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಇಸ್ರೇಲ್‍ನಿಂದ ಭಾರತೀಯರನ್ನು ಕರೆತರಲು ಅಪರೇಷನ್ ಅಜಯ್ ಆರಂಭಿಸಿದ ಕೇಂದ್ರ ಸರ್ಕಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಮಾಸ್ ದಾಳಿಯಿಂದ ಸಾವಿಗೀಡಾದ ಮಕ್ಕಳ ಚಿತ್ರ ಹಂಚಿಕೊಂಡ ಇಸ್ರೇಲ್ – ಶವಗಳ ಮೇಲೆ ಐಸಿಸ್ ಧ್ವಜ

    ಹಮಾಸ್ ದಾಳಿಯಿಂದ ಸಾವಿಗೀಡಾದ ಮಕ್ಕಳ ಚಿತ್ರ ಹಂಚಿಕೊಂಡ ಇಸ್ರೇಲ್ – ಶವಗಳ ಮೇಲೆ ಐಸಿಸ್ ಧ್ವಜ

    ಟೆಲ್ ಅವೀವ್: ಹಮಾಸ್ ಉಗ್ರರ (Hamas) ದಾಳಿಗೆ ಕ್ರೂರವಾಗಿ ಸಾವಿಗೀಡಾದ ಮಕ್ಕಳ ಚಿತ್ರಗಳನ್ನು ಇಸ್ರೇಲ್ (Israel) ಪ್ರಧಾನಿ ಕಚೇರಿ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಅಲ್ಲದೇ ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರಿಗೆ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಅವರು ಈ ಚಿತ್ರಗಳನ್ನು ತೋರಿಸಿ ಭೀಕರತೆಯನ್ನು ಹೇಳಿಕೊಂಡಿದ್ದಾರೆ.

    ಈ ಚಿತ್ರಗಳನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಇಸ್ರೇಲ್ ಪ್ರಧಾನಿ ಕಚೇರಿ, ಎಚ್ಚರಿಕೆ, ಇವು ಹಮಾಸ್ ರಾಕ್ಷಸರಿಂದ ಕೊಲ್ಲಲ್ಪಟ್ಟ ಮತ್ತು ಸುಟ್ಟುಹೋದ ಶಿಶುಗಳ ಭಯಾನಕ ಫೋಟೋಗಳಾಗಿವೆ. ಹಮಾಸ್ ಅಮಾನವೀಯವಾಗಿದೆ. ಹಮಾಸ್ ಐಸಿಸ್ ಆಗಿದೆ ಎಂದು ಬರೆದುಕೊಂಡಿದೆ. ಇದನ್ನೂ ಓದಿ: ಗಾಜಾ ಮೇಲೆ ಅಣ್ವಸ್ತ್ರ ಪ್ರಯೋಗವಾಗಬೇಕು ಎಂದ ಇಸ್ರೇಲ್‌ ಸಂಸದೆ – ಅಮೆರಿಕಕ್ಕೆ ಟರ್ಕಿ ಎಚ್ಚರಿಕೆ: 3ನೇ ಮಹಾಯುದ್ಧ ನಡೆಯುತ್ತಾ?

    ಈ ಯುದ್ಧದಲ್ಲಿ ನಡೆಯುತ್ತಿರುವ ಹಿಂಸಾಚಾರ, ರಕ್ತಪಾತ ಇಸ್ರೇಲ್ ಜನರ ಮೇಲೆ ಮಾತ್ರವಲ್ಲ. ಮಕ್ಕಳ ಮೇಲೆ ಮತ್ತು ಮಹಿಳೆಯರ ಮೇಲೂ ನಡೆಯುತ್ತಿದೆ. ಸುಮಾರು 40 ಮಕ್ಕಳನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಹಲವಾರು ಮಹಿಳೆಯರ ಮೇಲೆ ಉಗ್ರರು ಅತ್ಯಾಚಾರ ಎಸಗುತ್ತಿದ್ದಾರೆ ಎಂದು ವರದಿಯಾಗಿದೆ.

    ಇಸ್ರೇಲ್-ಹಮಾಸ್ ಉಗ್ರರ ನಡುವಿನ ಯುದ್ಧದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಯುದ್ಧ ಮುಂದುವರೆದಿದ್ದು ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಹಮಾಸ್ ಉಗ್ರರ ಕಪಿಮುಷ್ಠಿಯಲ್ಲಿರೋ ನೋವಾಗೆ 26ನೇ ವರ್ಷದ ಹುಟ್ಟುಹಬ್ಬ- ತಾಯಿ ಹೇಳಿದ್ದೇನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಾಜಾ ಮೇಲೆ ಅಣ್ವಸ್ತ್ರ ಪ್ರಯೋಗವಾಗಬೇಕು ಎಂದ ಇಸ್ರೇಲ್‌ ಸಂಸದೆ – ಅಮೆರಿಕಕ್ಕೆ ಟರ್ಕಿ ಎಚ್ಚರಿಕೆ: 3ನೇ ಮಹಾಯುದ್ಧ ನಡೆಯುತ್ತಾ?

    ಗಾಜಾ ಮೇಲೆ ಅಣ್ವಸ್ತ್ರ ಪ್ರಯೋಗವಾಗಬೇಕು ಎಂದ ಇಸ್ರೇಲ್‌ ಸಂಸದೆ – ಅಮೆರಿಕಕ್ಕೆ ಟರ್ಕಿ ಎಚ್ಚರಿಕೆ: 3ನೇ ಮಹಾಯುದ್ಧ ನಡೆಯುತ್ತಾ?

    ಟೆಲ್‌ ಅವೀವ್‌: ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯಿಂದ ಪಶ್ಚಿಮ ಏಷ್ಯಾ ರಣಾಂಗಣವಾಗಿ ಮಾರ್ಪಟ್ಟಿದ್ದು, ದಿನೇ ದಿನೇ ಯುದ್ಧದ ತೀವ್ರತೆ ಅಧಿಕವಾಗುತ್ತಿದೆ. ಈಗಾಗಲೇ ಗಾಜಾಪಟ್ಟಿಗೆ (Gaza Strip) ಅಷ್ಟದಿಗ್ಬಂಧನ ವಿಧಿಸಿರುವ ಇಸ್ರೇಲ್ (Israel) ಗಾಜಾ ನಗರದ ಮೇಲೆ ವೈಮಾನಿಕ ದಾಳಿ ಮೂಲಕ ಮುಗಿಬಿದ್ದಿದೆ.

    ಹಮಾಸ್ (Hamas) ಕೂಡ ನಿರಂತರವಾಗಿ ಇಸ್ರೇಲ್ ಕಡೆ ರಾಕೆಟ್ ದಾಳಿ ನಡೆಸುತ್ತಲೇ ಇದೆ. ಮತ್ತೊಂದು ಕಡೆ ಸಿರಿಯಾ, ಲೆಬನಾನ್ ಕಡೆಯಿಂದ ಉಗ್ರರು ಇಸ್ರೇಲ್ ಮೇಲೆ ಮುಗಿಬೀಳುತ್ತಿದ್ದಾರೆ. ಹೀಗಾಗಿ ಇಸ್ರೇಲ್‌ನಲ್ಲಿ ಸೈರನ್ ಮೊರೆತ ನಿಲ್ಲುತ್ತಲೇ ಇಲ್ಲ. ಇದರಿಂದ ಯುದ್ಧದ ಸ್ವರೂಪ ಮತ್ತು ವ್ಯಾಪ್ತಿ ಇನ್ನಷ್ಟು ವಿಸ್ತರಣೆ ಆಗುವ ಆತಂಕ ಎದುರಾಗಿದೆ.

    https://twitter.com/Israel/status/1712456473303826874

    ಇಸ್ರೇಲ್-ಪ್ಯಾಲೆಸ್ಟೈನ್‌ (Israel Palestine) ಯುದ್ಧದಲ್ಲಿ ಇತರರು ಮೂಗು ತೂರಿಸಬಾರದು ಎಂದು ಅಮೆರಿಕ (USA) ನೀಡುತ್ತಿರುವ ಎಚ್ಚರಿಕೆಯನ್ನು ಅರಬ್ ದೇಶಗಳು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಯಾರು ಮಧ್ಯಪ್ರವೇಶ ಮಾಡಬಾರದು ಎನ್ನುವ ಅಮೆರಿಕ ಸ್ವತಃ ಇಸ್ರೇಲ್‌ಗೆ ಒಂದು ವಿಮಾನ ಭರ್ತಿ ಶಸ್ತಾಸ್ತ್ರ ಕಳಿಸಿದೆ. ಅಷ್ಟೇ ಅಲ್ಲದೇ ಇಂದು ಟೆಲ್ ಅವೀವ್‌ಗೆ ಅಮೆರಿಕ ಮತ್ತು ಬ್ರಿಟನ್ ವಿದೇಶಾಂಗ ಮಂತ್ರಿ ಭೇಟಿ ನೀಡಿದ್ದಾರೆ.

    ಒಫಾಕಿಮ್‌ನಲ್ಲಿ ಕೇಳಿಬಂದ ಸೈರನ್ ಸದ್ದು ಮತ್ತು ರಾಕೆಟ್ ನುಗ್ಗಿ ಬಂದಿದ್ದನ್ನು ನೋಡಿ ಬ್ರಿಟನ್ ಮಂತ್ರಿ ಜೇಮ್ಸ್ ಪ್ರಾಣಭಯದಿಂದ ದಿಕ್ಕೆಟ್ಟು ಓಡಿದ್ದಾರೆ. ಈ ಮೂಲಕ ಇಸ್ರೇಲ್ ಬೆಂಬಲಕ್ಕೆ ನಿಂತಿದ್ದಾರೆ. ಇದೀಗ ಇಸ್ರೇಲ್‌ನಲ್ಲಿ ಸರ್ವಪಕ್ಷ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.  ಇದನ್ನೂ ಓದಿ: ಹೊಸಪೇಟೆಯಲ್ಲಿ ಹಮಾಸ್ ಉಗ್ರರ ಪರ ಸ್ಟೇಟಸ್ ಹಾಕಿದ್ದ ಯುವಕ ವಶಕ್ಕೆ

    ಇಸ್ರೇಲ್ ಸಂಸದೆ ತಾಲಿ ಗಾಟ್ಲಿಟ್ ಟ್ವೀಟ್ ಮಾಡಿ, ಗಾಜಾ ಮೇಲೆ ಅಣ್ವಸ್ತ್ರ ಪ್ರಯೋಗ ಆಗ್ಬೇಕು ಅಂತಿದ್ದಾರೆ. ಪ್ರಳಯವನ್ನು ಸೃಷ್ಟಿಸುವ ಆಯುಧವನ್ನು ವಿನಿಯೋಗಿಸಬೇಕು. ಈಗ ಡೂಮ್ಸ್ ಡೇಯನ್ನು ಮುದ್ದಾಡುವ ಸಮಯ ಬಂದಿದೆ. ದೇವರೇ ನಮ್ಮ ಶಕ್ತಿಯನ್ನು ಕಾಪಾಡು ಎಂದು ಟ್ವೀಟ್‌ ಮಾಡಿದ್ದಾರೆ. ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ ಈ ಯುದ್ಧ ಮೂರನೇ ಮಹಾ ಯುದ್ಧಕ್ಕೆ ದಾರಿ ಮಾಡಿಕೊಡಬಹುದಾ ಎಂಬ ಚರ್ಚೆಗಳು ಶುರುವಾಗಿವೆ.

     

    ಮೂರನೇ ಮಹಾ ಯುದ್ಧ ನಡೆಯುತ್ತಾ?
    ಇಸ್ರೇಲ್ ಮೇಲೆ ಪ್ಯಾಲೆಸ್ಟೈನ್‌, ಸಿರಿಯಾ, ಲೆಬನಾನ್ ಕಡೆಯಿಂದ ದಾಳಿ ಆರಂಭವಾಗಿದೆ. ಪ್ಯಾಲೆಸ್ಟೈನ್‌ ಬೆಂಬಲಕ್ಕೆ ಇರಾನ್, ಸೌದಿ, ಕತಾರ್‌, ಕುವೈತ್, ದಕ್ಷಿಣ ಆಫ್ರಿಕಾ ಬೆಂಬಲ ನೀಡಿದೆ. ಇಸ್ರೇಲ್ ಬೆಂಬಲಕ್ಕೆ ಅಮೆರಿಕ, ಐರೋಪ್ಯ ಒಕ್ಕೂಟ, ಬ್ರಿಟನ್, ಭಾರತ, ಆಸ್ಟ್ರೇಲಿಯಾ ನಿಂತಿದೆ.

    ಅಮೆರಿಕ ಯುದ್ಧ ವಿಮಾನ, ಯುದ್ಧನೌಕೆ ಕಳಿಸಿದ್ದಕ್ಕೆ ಟರ್ಕಿ ಗರಂ ಆಗಿದ್ದು ಮಾರಣಕಾಂಡಕ್ಕೆ ದಾರಿ ಆಗಲಿದೆ ಎಂದು ಎಚ್ಚರಿಕೆ ನೀಡಿದೆ. ಅಮೆರಿಕದ ಸ್ಥಾವರಗಳ ಮೇಲೆ ದಾಳಿ ನಡೆಸುವ ಎಚ್ಚರಿಕೆ ನೀಡಿದ ಇರಾಕ್‌ನ ಉಗ್ರ ಸಂಘಟನೆ ಕತೈಬ್ ಹೆಜ್ಬುಲ್ಲಾ ಮಿಲಿಷಿಯಾ. ಇಸ್ರೇಲ್-ಪ್ಯಾಲೆಸ್ಟೈನ್‌ ಯುದ್ಧ ತಡೆಯುವ ಸಂಬಂಧ ಇರಾನ್-ಸೌದಿ ನಾಯಕರು ಮಾತುಕತೆ ನಡೆಸಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಪರೇಷನ್ ಅಜಯ್ – ಇಂದು ರಾತ್ರಿ ಇಸ್ರೇಲ್‌ನಿಂದ ಆಗಮಿಸಲಿದೆ ಭಾರತೀಯರನ್ನು ಹೊತ್ತ ಮೊದಲ ವಿಮಾನ

    ಆಪರೇಷನ್ ಅಜಯ್ – ಇಂದು ರಾತ್ರಿ ಇಸ್ರೇಲ್‌ನಿಂದ ಆಗಮಿಸಲಿದೆ ಭಾರತೀಯರನ್ನು ಹೊತ್ತ ಮೊದಲ ವಿಮಾನ

    ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ (Operation Ajay) ಅನ್ನು ಪ್ರಾರಂಭಿಸಲಾಗಿದೆ. ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಂದು ರಾತ್ರಿ ಟೆಲ್ ಅವಿವ್‌ನ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.

    ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಲ್ ಅವಿವ್‌ನಿಂದ ದೆಹಲಿಗೆ ಚಾರ್ಟರ್ಡ್ ಫ್ಲೈಟ್ ಅನ್ನು ಕಳುಹಿಸಿರುವುದಾಗಿ ವಿದ್ಯಾರ್ಥಿಗಳಿಗೆ ಮೇಲ್ ಸಂದೇಶ ಕಳುಹಿಸಿದೆ. ಈ ವಿಮಾನ ಇಂದು ಇಸ್ರೇಲ್ (Israel) ಕಾಲಮಾನ ರಾತ್ರಿ ಸುಮಾರು 9 ಗಂಟೆಗೆ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.

    ಭಾರತೀಯ ವಿದ್ಯಾರ್ಥಿಗಳಿಗೆ ಮೇಲ್‌ನಲ್ಲಿ ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಲು ಕೇಳಲಾಗಿದೆ. ನಂತರ ಅವರು ದೃಢೀಕರಣ ಸಂದೇಶವನ್ನು ಸ್ವೀಕರಿಸುತ್ತಾರೆ. ಒಂದು ಚೆಕ್ ಇನ್ ಲಗೇಜ್ 23 ಕೆ.ಜಿ ಗಿಂತ ಹೆಚ್ಚಿರಬಾರದು ಮತ್ತು ಒಂದು ಕ್ಯಾಬಿನ್ ಲಗೇಜ್ ಅನ್ನು ಅನುಮತಿಸಲಾಗುವುದು ಎಂದು ಮೇಲ್‌ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಮಹಿಳೆಯರನ್ನ ರೇಪ್‌ ಮಾಡ್ತಿದ್ದಾರೆ, ಮಕ್ಕಳನ್ನ ಕೊಲ್ತಿದ್ದಾರೆ- ಹಮಾಸ್‌ ಉಗ್ರರ ಕರಾಳ ಮುಖ ಬಿಚ್ಚಿಟ್ಟ ಭಾರತದ ಇಸ್ರೇಲ್‌ ಮಹಿಳೆ

    ಇಸ್ರೇಲ್ ಮೇಲೆ ಹಮಾಸ್ (Hamas) ಉಗ್ರರು ದಾಳಿ ನಡೆಸಿದ ಬಳಿಕ ಎರಡೂ ಪ್ರದೇಶಗಳಲ್ಲಿ ಯುದ್ಧದ ಸ್ಥಿತಿ ತೀವ್ರಗೊಂಡಿದೆ. ಸಾವಿನ ಸಂಖ್ಯೆ 4,000ಕ್ಕೆ ಹತ್ತಿರವಾಗುತ್ತಿದ್ದಂತೆ ಭಾರತೀಯ ನಾಗರಿಕರನ್ನು ಇಸ್ರೇಲ್‌ನಿಂದ ಏರ್‌ಲಿಫ್ಟ್ ಮಾಡಲು ಭಾರತ ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಿದೆ. ಇದನ್ನೂ ಓದಿ: ಗಾಝಾ ನಗರಕ್ಕೆ ಇಸ್ರೇಲ್ ದಿಗ್ಬಂಧನ – ಅನ್ನ, ನೀರಿಗೂ ಪ್ಯಾಲೆಸ್ತೀನಿಯರ ಪರದಾಟ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಳೆಯರನ್ನ ರೇಪ್‌ ಮಾಡ್ತಿದ್ದಾರೆ, ಮಕ್ಕಳನ್ನ ಕೊಲ್ತಿದ್ದಾರೆ- ಹಮಾಸ್‌ ಉಗ್ರರ ಕರಾಳ ಮುಖ ಬಿಚ್ಚಿಟ್ಟ ಭಾರತದ ಇಸ್ರೇಲ್‌ ಮಹಿಳೆ

    ಮಹಿಳೆಯರನ್ನ ರೇಪ್‌ ಮಾಡ್ತಿದ್ದಾರೆ, ಮಕ್ಕಳನ್ನ ಕೊಲ್ತಿದ್ದಾರೆ- ಹಮಾಸ್‌ ಉಗ್ರರ ಕರಾಳ ಮುಖ ಬಿಚ್ಚಿಟ್ಟ ಭಾರತದ ಇಸ್ರೇಲ್‌ ಮಹಿಳೆ

    ಜೆರುಸಲೇಂ: ಇಸ್ರೇಲ್‌-ಹಮಾಸ್‌ ಉಗ್ರರ ನಡುವಿನ ಯುದ್ಧದಲ್ಲಿ (Israel Hamas war) ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದ್ರೆ ಈ ಯುದ್ಧದಲ್ಲಿ ನಡೆಯುತ್ತಿರುವ ಹಿಂಸಾಚಾರ, ರಕ್ತಪಾತ ಇಸ್ರೇಲ್‌ (Israel) ಜನರ ಮೇಲೆ ಮಾತ್ರವಲ್ಲ. ಭಾರತದಲ್ಲಿರುವ ಅವರ ಸಂಬಂಧಿಕರ ಮೇಲೂ ಪರಿಣಾಮ ಬೀರಿದೆ. ಭಾರತದಲ್ಲಿರುವ ಇಸ್ರೇಲ್‌ ಮಹಿಳೆಯರು ಹಮಾಸ್‌ ಉಗ್ರರ ಕರಾಳ ಮುಖವನ್ನು ಬಿಚ್ಚಿಟ್ಟಿದ್ದಾರೆ.

    ಭೀಕರ ಯುದ್ಧದ (War) ಪರಿಣಾಮದಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಭಾರತದಲ್ಲಿರುವ ಇಸ್ರೇಲಿ ಪ್ರಜೆಗಳು (Indian Israelis) ಅಲ್ಲಿನ ಸ್ಥಿತಿಯನ್ನು ಕಂಡು ಆತಂಕಕ್ಕೊಳಗಾಗಿದ್ದಾರೆ. ಹಮಾಸ್‌ ಉಗ್ರರ ಹಠಾತ್‌ ದಾಳಿಯಿಂದ ಕೋಪಗೊಂಡಿರುವ ಭಾರತದಲ್ಲಿರುವ ಇಸ್ರೇಲಿಗಳು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಕೆಲವರು ಸ್ವಲ್ಪ ಸಮಯದಿಂದ ಭಾರತದಲ್ಲಿ ಉಳಿದುಕೊಂಡಿದ್ದರೆ, ಇನ್ನೂ ಕೆಲವರು ಶೀಘ್ರವೇ ತಮ್ಮ ತಾಯ್ನಾಡಿಗೆ ಮರಳಲು ಸಿದ್ಧರಾಗಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಇದನ್ನೂ ಓದಿ: ಭಯೋತ್ಪಾದಕರು ಮಕ್ಕಳ ಶಿರಚ್ಛೇದನ  ಮಾಡೋ ಚಿತ್ರಗಳನ್ನು ಯಾವತ್ತೂ ನೋಡುತ್ತೇನೆ ಎಂದುಕೊಂಡಿರಲಿಲ್ಲ: ಆಘಾತ ವ್ಯಕ್ತಪಡಿಸಿದ ಬೈಡನ್

    ಭಾರತದ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ವಾಸಿಸುತ್ತಿರುವ ಇಸ್ರೇಲಿ ಮಹಿಳೆ ಕೆನೆರಿಯಾತ್, ಹಮಾಸ್‌ ಉಗ್ರರ ದಾಳಿ ಬಳಿಕ ಇಸ್ರೇಲ್‌ನಲ್ಲಿರುವ ತಮ್ಮ ಕುಟುಂಬದೊಂದಿಗೆ ನಡೆಸಿದ ಸಂಭಾಷಣೆಯನ್ನು ವಿವರಿಸಿದ್ದಾರೆ. ಇದನ್ನೂ ಓದಿ: ನನ್ನ ಮಗಳು ಬದುಕಿದ್ದಾಳೆ, ಆಕೆಯನ್ನು ರಕ್ಷಿಸಿ – ಅರೆಬೆತ್ತಲೆ ಮೆರವಣಿಗೆಯಾಗಿದ್ದ ಶಾನಿ ಲೌಕ್ ತಾಯಿ ಮನವಿ

    ನಮ್ಮ ಮನೆ ಉಗ್ರರ ಬಾಂಬ್‌ ಸ್ಫೋಟದಿಂದ ಧ್ವಂಸವಾಗಿದೆ. ನನ್ನ ಸೋದರ ಸಂಬಂಧಿ ಗುಂಡಿನ ದಾಳಿಯಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಇಸ್ರೇಲ್‌ನಲ್ಲಿ ವಾಸಿಸುತ್ತಿರುವ ನಮ್ಮ ಮನೆ ಬಾಂಬ್‌ ದಾಳಿಗೆ ಧ್ವಂಸವಾಗಿದೆ. ಆದ್ರೆ ನನ್ನ ಸಹೋದರನೊಂದಿಗೆ ಸಂಪರ್ಕದಲ್ಲಿದ್ದೇನೆ. ನಾನು ಭಾರತದಲ್ಲಿ ಸುರಕ್ಷಿತವಾಗಿರುವುದರಿಂದ, ಹೆದರುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.

    ಕುಲು ಜಿಲ್ಲಿಯರುವ ಮತ್ತೊಬ್ಬರು ಇಸ್ರೇಲಿ ಪ್ರವಾಸಿ ಶಿರಾ ಮಾತನಾಡಿದ್ದು, ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರ ದಾಳಿಯೂ ಅತ್ಯಂತ ಕ್ರೂರ ಮತ್ತು ಭೀಕರವಾಗಿದೆ. ಖಂಡಿತವಾಗಿಯೂ ಇಷ್ಟೊಂದು ಕ್ರೂರವಾಗಿರುತ್ತೆ ಅಂತಾ ನಾನು ನಿರೀಕ್ಷೆ ಮಾಡಿರಲಿಲ್ಲ. ಸದ್ಯ ಭಾರತ ಬೆಂಬಲಕ್ಕೆ ನಿಂತಿರುವುದಕ್ಕೆ ಧನ್ಯವಾದ ತಿಳಿಸುತ್ತೇನೆ. ವಿಶ್ವದ ಇತರ ರಾಷ್ಟ್ರಗಳು ಇಸ್ರೇಲ್‌ ಬೆಂಬಲಿಸುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಕ್ಕಳನ್ನೂ ಬಿಡದೇ ಗಲ್ಲಿಗೇರಿಸುತ್ತಿದ್ದಾರೆ – ಝೊಂಬಿ ವೈರಸ್‌ನಂತೆ ನರಕಯಾತನೆ ಅನುಭವಿಸ್ತಿದ್ದಾರೆ; ಇಸ್ರೇಲ್ ರಕ್ಷಣಾ ಪಡೆ ವಿಷಾದ

    ರಾಜಸ್ಥಾನದ ಪುಷ್ಕರ್‌ನಲ್ಲಿರುವ ಇಸ್ರೇಲಿ ಪ್ರವಾಸಿ ಅಮತ್ ಮಾತನಾಡಿ, ತನ್ನ ದೇಶಕ್ಕೆ ಹಿಂತಿರುಗಿ ಇಸ್ರೇಲಿ ರಕ್ಷಣಾ ಪಡೆಗಳೊಂದಿಗೆ ಯುದ್ಧಭೂಮಿಯಲ್ಲಿ ತಾಯ್ನಾಡಿಗಾಗಿ ಹೋರಾಡಬೇಕೆಂದು ಬಯಸುತ್ತೇನೆ. ಹಮಾಸ್‌ ಉಗ್ರರು ಮಹಿಳೆಯರ ಮೇಲೆ ಅತ್ಯಾಚಾರ ಮಾಡ್ತಿದ್ದಾರೆ, ಮಕ್ಕಳನ್ನು ಹಿಂಸೆ ಮಾಡಿ ಕೊಲ್ಲುತ್ತಿದ್ದಾರೆ. ಮಕ್ಕಳು ಮತ್ತು ಸೈನಿಕರ ಮೇಲೆ ಹಮಾಸ್‌ನ ಅಪ್ರಚೋದಿತ ದಾಳಿಯಿಂದಾಗಿ ಅನುಭವಿಸುತ್ತಿರುವ ಹಿಂಸೆಯನ್ನು ತಪ್ಪಿಸಲು ನಾನು ಹೋರಾಟಕ್ಕಿಳಿಯಲು ಬಯಸುತ್ತೇನೆ ಎಂದು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಾಜಾ ನಗರಕ್ಕೆ ಇಸ್ರೇಲ್ ದಿಗ್ಬಂಧನ – ಅನ್ನ, ನೀರಿಗೂ ಪ್ಯಾಲೆಸ್ತೀನಿಯರ ಪರದಾಟ

    ಗಾಜಾ ನಗರಕ್ಕೆ ಇಸ್ರೇಲ್ ದಿಗ್ಬಂಧನ – ಅನ್ನ, ನೀರಿಗೂ ಪ್ಯಾಲೆಸ್ತೀನಿಯರ ಪರದಾಟ

    – ವಿದ್ಯುತ್, ಪೆಟ್ರೋಲ್, ಔಷಧ ಪೂರೈಕೆಗೂ ಬಂದ್

    ಟೆಲ್ ಅವಿವ್: ಗಾಜಾದ (Gaza) ಮೇಲೆ ಸಂಪೂರ್ಣ ಮುತ್ತಿಗೆ ಹಾಕಿರುವ ಇಸ್ರೇಲ್ (Israel), ಪ್ರತೀಕಾರದ ಬಾಂಬ್ ದಾಳಿಯಾಗಿ ರಾತ್ರೋರಾತ್ರಿ ಗಾಜಾದಾದ್ಯಂತ ವೈಮಾನಿಕ ದಾಳಿ (Air Strike) ನಡೆಸಿತು. ಗಾಜಾದ ಆರೋಗ್ಯ ಸಚಿವಾಲಯದ ಪ್ರಕಾರ, ದಾಳಿಯಲ್ಲಿ ಕನಿಷ್ಠ 900 ಜನರು ಸಾವನ್ನಪ್ಪಿದ್ದಾರೆ ಮತ್ತು 4,600 ಜನರು ಗಾಯಗೊಂಡಿದ್ದಾರೆ. ವಾರಾಂತ್ಯದ ಹಮಾಸ್ ದಾಳಿಯಲ್ಲಿ (Hamas Attack) ಸಾವನ್ನಪ್ಪಿದವರ ಸಂಖ್ಯೆ 1,200 ಮೀರಿದೆ ಎಂದು ವಾಷಿಂಗ್ಟನ್‌ನಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ತಿಳಿಸಿದೆ.

    ಗಾಜಾದಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 15 ಪ್ಯಾಲೇಸ್ತೀನಿಯರು ಸಾವನ್ನಪ್ಪಿದ್ದರೆ, ಇನ್ನೂ ಹಲವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದೆ. ಬುಧವಾರ ರಾತ್ರಿ, ಇಸ್ರೇಲ್ ಗಾಜಾದಾದ್ಯಂತ ವೈಮಾನಿಕ ದಾಳಿ ನಡೆಸಿದ ಪರಿಣಾಮ 900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಬಹುತೇಕ ಯುದ್ಧ ವಾಯು ಮಾರ್ಗದ ಮೂಲಕವೇ ನಡೆಯುತ್ತಿದೆ. ಒಂದು ಕಡೆ ಹಮಾಸ್ ನಿರಂತರ ರಾಕೆಟ್ ದಾಳಿ ನಡೆಸುತ್ತಿದ್ದರೆ ಮತ್ತೊಂದು ಕಡೆ ಇಸ್ರೇಲ್ ಯುದ್ಧ ವಿಮಾನಗಳ ಏರ್ ಸ್ಟ್ರೈಕ್ ಮಾಡುತ್ತಿದೆ. ಬುಧವಾರ ರಾಕೆಟ್ ದಾಳಿಗೆ ಪ್ರಯತ್ನಿಸಿ ಹಮಾಸ್ ಪ್ರಯತ್ನಗಳನ್ನು ಐರನ್ ಡೋಮ್ ರಕ್ಷಣಾ ಕ್ಷಿಪಣಿ ತಡೆದಿದೆ. ಇಸ್ರೇಲ್‌ನ ಅಶ್ಕೆಲೋನ್ ಮೇಲೆ ನಿನ್ನೆ ಹಮಾಸ್ ರಾಕೆಟ್ ದಾಳಿ ಮಾಡಿತ್ತು. ಆದರೆ ಇಸ್ರೇಲ್‌ನ ಐರನ್ ಡೋಮ್ ರಕ್ಷಣಾ ಕ್ಷಿಪಣಿ ವ್ಯವಸ್ಥೆಯಿಂದ ರಾಕೆಟ್‌ಗಳನ್ನು ತಡೆದು ಗಾಳಿಯಲ್ಲಿ ಅವುಗಳನ್ನು ನಾಶ ಮಾಡಿತು. ಇದನ್ನೂ ಓದಿ: ಮಕ್ಕಳನ್ನೂ ಬಿಡದೇ ಗಲ್ಲಿಗೇರಿಸುತ್ತಿದ್ದಾರೆ – ಝೊಂಬಿ ವೈರಸ್‌ನಂತೆ ನರಕಯಾತನೆ ಅನುಭವಿಸ್ತಿದ್ದಾರೆ; ಇಸ್ರೇಲ್ ರಕ್ಷಣಾ ಪಡೆ ವಿಷಾದ

    ಗಾಜಾದಲ್ಲಿರುವ ಏಕೈಕ ವಿದ್ಯುತ್ ಕೇಂದ್ರವು ಕೆಲಸ ಮಾಡುವುದನ್ನು ನಿಲ್ಲಿಸಿದ ನಂತರ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಇಸ್ರೇಲ್ ಗಾಜಾದ ಮೇಲೆ ಸಂಪೂರ್ಣ ದಿಗ್ಬಂಧನ ವಿಧಿಸುವುದಾಗಿ ಹೇಳಿದ ಎರಡು ದಿನಗಳ ನಂತರ ವಿದ್ಯುತ್ ಪೂರೈಕೆ ನಿಂತಿದೆ. ಇದಲ್ಲದೇ ಈ ಪ್ರದೇಶಕ್ಕೆ ಆಹಾರ ಮತ್ತು ಇಂಧನವನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

    ಪ್ಯಾಲೇಸ್ತೀನ್ ಇಸ್ರೇಲ್ ಯುದ್ಧದ ಬಗ್ಗೆ ಮಾತನಾಡಿರುವ ಅಮೆರಿಕ ಅಧ್ಯಕ್ಷ ಜೊ ಬೈಡನ್, ನಾವು ಇಸ್ರೇಲ್ ಪರವಾಗಿ ನಿಲ್ಲಲ್ಲಿದ್ದೇವೆ ಎಂದು ಮತ್ತೊಮ್ಮೆ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಇಸ್ರೇಲ್ ತನ್ನ ಮತ್ತು ನಾಗರಿಕರ ಸುಕರಕ್ಷತೆಗಾಗಿ ಪ್ರತಿದಾಳಿ ಆರಂಭಿಸಿದೆ. ಭಯೋತ್ಪಾದನೆ ವಿಚಾರದಲ್ಲಿ ಯಾವುದೇ ಸಮರ್ಥನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕರು ಮಕ್ಕಳ ಶಿರಚ್ಛೇದನ ಮಾಡೋ ಚಿತ್ರಗಳನ್ನು ಯಾವತ್ತೂ ನೋಡುತ್ತೇನೆ ಎಂದುಕೊಂಡಿರಲಿಲ್ಲ: ಆಘಾತ ವ್ಯಕ್ತಪಡಿಸಿದ ಬೈಡನ್

    ಪ್ಯಾಲೇಸ್ತೀನಿಯನ್ ಇಸ್ಲಾಮಿಸ್ಟ್ ಗುಂಪು ಹಮಾಸ್ ಅನ್ನು ಕಿತ್ತುಹಾಕಲು ಇಸ್ರೇಲ್ ಈ ಯುದ್ಧ ಮಾಡುತ್ತಿದೆ. ನಮ್ಮ ಪ್ರತಿ ದಾಳಿಯಿಂದ ವಿಶ್ವದಾದ್ಯಂತ ದಾಳಿಗಳನ್ನು ಇಂತಹ ಸಂಘಟನೆಗಳು ದಾಳಿ ನಡೆಸುವುದನ್ನು ತಡೆಯಬಹುದು ಎಂದು ದೇಶದ ಗುಪ್ತಚರ ಸಚಿವ ಗಿಲಾ ಗ್ಯಾಮ್ಲಿಯೆಲ್ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ. ನಾವು ಅದನ್ನು ಬೇರು ಸಹಿತ ಕಿತ್ತುಹಾಕಬೇಕು ಇದರಂದ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಸಂಭವಿಸುವುದಿಲ್ಲ. ಭವಿಷ್ಯದ ದಾಳಿಗಳಿಗೆ ಇಸ್ರೇಲ್‌ನಲ್ಲಿ ಏನಾಯಿತು ಎಂಬುದನ್ನು ಉದಾಹರಣೆಯಾಗಿರಲಿದೆ ಎಂದು ಗ್ಯಾಮ್ಲಿಯೆಲ್ ಹೇಳಿದರು.

    ಗಾಜಾದ ನಬ್ಲಸ್‌ನ ದಕ್ಷಿಣದಲ್ಲಿರುವ ಕುಸ್ರಾ ಗ್ರಾಮದಲ್ಲಿ ಇಸ್ರೇಲ್ ಸೈನಿಕರು ಪ್ಯಾಲೆಸ್ತೀನಿಯನ್ನರ ಮೇಲೆ ನೇರ ಗುಂಡು ಹಾರಿಸುತ್ತಿದ್ದಾರೆ. ಗಾಯಾಳುಗಳನ್ನು ತಲುಪಲು ಸೇನೆಯು ಅಂಬುಲೆನ್ಸ್ಗಳನ್ನು ಅನುಮತಿಸುತ್ತಿಲ್ಲ ಎಂದು ಗ್ರಾಮದ ಕಾರ್ಯಕರ್ತ ಫುವಾದ್ ಹಸನ್ ಹೇಳಿದ್ದಾರೆ. ಇಲ್ಲಿಯವರೆಗೆ ಗ್ರಾಮದಲ್ಲಿ ಮೂರು ಪ್ಯಾಲೆಸ್ತೀನಿಯರನ್ನು ಕೊಲ್ಲಲಾಗಿದೆ ಮತ್ತು ಆರು ಜನರು ಗಾಯಗೊಂಡಿದ್ದಾರೆ. 24 ವರ್ಷದ ಯುವಕನ ಹೊಟ್ಟೆಗೆ ಜೀವಂತ ಗುಂಡುಗಳಿಂದ ಹೊಡೆದಿದ್ದಾರೆ. ಆರು ವರ್ಷದ ಬಾಲಕಿಯ ಭುಜಕ್ಕೆ ಜೀವಂತ ಗುಂಡುಗಳು ತಾಗಿದೆ. ಎಲ್ಲರನ್ನು ಸಾಲ್ಫಿಟ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಇಸ್ರೇಲ್‍ನಲ್ಲಿ ಕಿರುತೆರೆ ನಟಿ ಮಧುರಾ ನಾಯ್ಕ್ ಕುಟುಂಬಸ್ಥರ ಹತ್ಯೆ

    ಇಸ್ರೇಲ್‌ನಲ್ಲಿ ಮೂವರು ಕೆನಡಿಯನ್ನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ ಮೂವರು ನಾಪತ್ತೆಯಾಗಿದ್ದಾರೆ ಎಂದು ಕೆನಡಾದ ವಿದೇಶಾಂಗ ಸಚಿವ ಮೆಲಾನಿ ಜೋಲಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೋಲಿ, ಇಸ್ರೇಲ್, ಗಾಜಾ ಮತ್ತು ವೆಸ್ಟ್ ಬ್ಯಾಂಕ್‌ನಲ್ಲಿ 4,700 ಕ್ಕೂ ಹೆಚ್ಚು ಕೆನಡಾದ ನಾಗರಿಕರು ಮತ್ತು ಖಾಯಂ ನಿವಾಸಿಗಳು ಸರ್ಕಾರದಲ್ಲಿ ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ ಆರು ಜನರ ಸಂಪರ್ಕ ಇಲ್ಲ ಎಂದಿದ್ದಾರೆ.

    ಹಮಾಸ್ ರಾಕೆಟ್ ದಾಳಿಯಲ್ಲಿ ಇಸ್ರೇಲ್‌ನ ಅಶ್ಕೆಲಾನ್ ಆಸ್ಪತ್ರೆಗೆ ಹಾನಿಯಾಗಿದ್ದು, ಯಾವುದೇ ಸಾವು-ನೋವುಗಳು ವರದಿಯಾಗಿಲ್ಲ. ಗಾಜಾದಿಂದ ದಕ್ಷಿಣ ಇಸ್ರೇಲ್ ಕಡೆಗೆ ರಾಕೆಟ್ ದಾಳಿಯಾಗಿದೆ. ಆಸ್ಪತ್ರೆಯೊಂದಕ್ಕೆ ಹಾನಿಯಾಗಿದೆ ಆದರೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಅಶ್ಕೆಲೋನ್ ನಗರದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಅಶ್ಕೆಲೋನ್‌ನ ಬಾರ್ಜಿಲೈ ಆಸ್ಪತ್ರೆಯಲ್ಲಿರುವ ಮಕ್ಕಳ ಅಭಿವೃದ್ಧಿ ಕೇಂದ್ರವು ಗಾಜಾದಿಂದ ಬಂದ ಉತ್ಕ್ಷೇಪಕದಿಂದ ನೇರ ಹೊಡೆತವನ್ನು ಅನುಭವಿಸಿದೆ ಎಂದು ಆರೋಗ್ಯ ಸೌಲಭ್ಯದ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿ ರಾಕೆಟ್ ಹಾರಿಸಿರುವುದಾಗಿ ಹಮಾಸ್ ಹೇಳಿದೆ. ಆದರೆ ಈವರೆಗೂ ಯಾವುದೇ ದಾಳಿಯಾಗಿಲ್ಲ. ಇದನ್ನೂ ಓದಿ: ನನ್ನ ಮಗಳು ಬದುಕಿದ್ದಾಳೆ, ಆಕೆಯನ್ನು ರಕ್ಷಿಸಿ – ಅರೆಬೆತ್ತಲೆ ಮೆರವಣಿಗೆಯಾಗಿದ್ದ ಶಾನಿ ಲೌಕ್ ತಾಯಿ ಮನವಿ

    ಪ್ಯಾಲೇಸ್ತೀನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧ ಇತರೆ ದೇಶಗಳಿಗೆ ವ್ಯಾಪಿಸುತ್ತಿದೆ. ಹಮಾಸ್‌ಗೆ ಇರಾನ್, ಲೆಬನಾನ್‌ಗೆ ಬೆಂಬಲ ನೀಡಿದ್ದು ಇಸ್ರೇಲ್ ಗಡಿಯಲ್ಲಿ ದಾಳಿ ಮಾಡುತ್ತಿವೆ. ಇದಕ್ಕೆ ತಿರುಗೇಟು ನೀಡುತ್ತಿರುವ ಇಸ್ರೇಲ್ ದಕ್ಷಿಣ ಲೆಬನಾನ್‌ನಲ್ಲಿರುವ ಧೈರಾ ಗ್ರಾಮದಲ್ಲಿ ಶೆಲ್ ದಾಳಿ ನಡೆಸಿತು. ಬಳಿಕ ಲೆಬನಾನಿನ ಸೇನೆಯ ಸದಸ್ಯರು ಹಾನಿಗೊಳಗಾದ ಕಟ್ಟಡದ ಬಳಿ ಪರಿಶೀಲನೆ ನಡೆಸಿದ್ದಾರೆ. ಉಗ್ರಗಾಮಿ ಗುಂಪು ಹೆಜ್ಬೊಲ್ಲಾ ಇಸ್ರೇಲ್ ಮೇಲಿನ ದಾಳಿಯ ಜವಬ್ದಾರಿ ವಹಿಸಿಕೊಂಡಿದೆ.

    ಪ್ಯಾಲೇಸ್ತೀನ್ ಉಗ್ರಗಾಮಿ ಗುಂಪು ಹಮಾಸ್‌ನ ದಾಳಿಯ ನಂತರ ಇಸ್ರೇಲಿ ಜನರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಬ್ರಿಟಿಷ್ ವಿದೇಶಾಂಗ ಸಚಿವ ಜೇಮ್ಸ್ ಇಸ್ರೇಲ್‌ಗೆ ತಲುಪಿದ್ದಾರೆ. ಹಮಾಸ್‌ನ ಭಯೋತ್ಪಾದಕ ದಾಳಿಯ ನಂತರ ಇಸ್ರೇಲಿ ಜನರೊಂದಿಗೆ ಬ್ರಿಟನ್ ಅಚಲವಾದ ಒಗ್ಗಟ್ಟನ್ನು ಪ್ರದರ್ಶಿಸಲು ಈ ಭೇಟಿ ನೀಡಲಾಗುತ್ತಿದೆ ಎಂದು ಎಂದು ವಿದೇಶಾಂಗ ಕಚೇರಿಯ ವಕ್ತಾರರು ತಿಳಿಸಿದ್ದಾರೆ. ಭೇಟಿ ವೇಳೆ ಅವರು ದಾಳಿಯಿಂದ ಬದುಕುಳಿದವರನ್ನು ಮತ್ತು ಹಿರಿಯ ಇಸ್ರೇಲಿ ನಾಯಕರನ್ನು ಭೇಟಿ ಮಾಡಿದ್ದಾರೆ. ಇದನ್ನೂ ಓದಿ: ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್ ಪಾಕಿಸ್ತಾನದಲ್ಲಿ ಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]