Tag: Israeli strikes

  • Israel-Iran Conflict | ಇಸ್ರೇಲ್‌ ಮಿಸೈಲ್‌ ದಾಳಿಗೆ ಇರಾನ್‌ನ 14 ಅಧಿಕಾರಿಗಳು ಬಲಿ

    Israel-Iran Conflict | ಇಸ್ರೇಲ್‌ ಮಿಸೈಲ್‌ ದಾಳಿಗೆ ಇರಾನ್‌ನ 14 ಅಧಿಕಾರಿಗಳು ಬಲಿ

    – ಇರಾನ್‌ನ 170ಕ್ಕೂ ಹೆಚ್ಚು ಸ್ಥಳ, 720 ಮಿಲಿಟರಿ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌

    ಟೆಲ್‌ ಅವಿವ್‌/ಟೆಹ್ರಾನ್‌: ಆಪರೇಷನ್‌ ʻರೈಸಿಂಗ್‌ ಲಯನ್‌ʼ ಬಳಿಕ ಇಸ್ರೇಲ್‌-ಇರಾನ್‌ ನಡುವಿನ ಸಂಘರ್ಷ (Israel-Iran Conflict) ತೀವ್ರ ಸ್ವರೂಪ ಪಡೆದುಕೊಂಡಿದೆ. ಇರಾನ್‌ ಮಿಸೈಲ್‌ ದಾಳಿಗೆ ಇಸ್ರೇಲ್‌ (Israel) ಕೂಡ ಮಿಸೈಲ್‌ಗಳ ಸುರಿಮಳೆಯನ್ನೇ ಸುರಿಸಿದೆ.

    ಅಣ್ವಸ್ತ್ರ (Nuclear Site), ಮಿಲಿಟರಿ ನೆಲೆಗಳ ಬಳಿಕ ಇರಾನ್‌ನ ಮೂಲ ಸೌಕರ್ಯಗಳನ್ನು ಗುರಿಯಾಗಿಸಿ ಇಸ್ರೇಲ್‌ ದಾಳಿ ಮಾಡಲು ಶುರು ಮಾಡಿದೆ. ಇರಾನ್‌ನಲ್ಲಿ ಒಟ್ಟು 170ಕ್ಕೂ ಹೆಚ್ಚು ಸ್ಥಳಗಳು 720 ಮಿಲಿಟರಿ ಮೂಲ ಸೌಕರ್ಯಗಳ ಮೇಲೆ ದಾಳಿ ಮಾಡಿದೆ. ಇದನ್ನೂ ಓದಿ: ನಮ್ಮ ತಂಟೆಗೆ ಬಂದ್ರೆ ಹಿಂದೆಂದೂ ನೋಡಿರದ ಮಿಲಿಟರಿ ಬಲವನ್ನು ಎದುರಿಸಬೇಕಾಗುತ್ತೆ – ಇರಾನ್‌ಗೆ ಟ್ರಂಪ್‌ ಬಿಗ್‌ ವಾರ್ನಿಂಗ್‌

    ಈವರೆಗಿನ ದಾಳಿಯಲ್ಲಿ ಇರಾನಿನ ಉನ್ನತ ಅಧಿಕಾರಿಗಳು ಮತ್ತು ಅಣ್ವಸ್ತ್ರ ವಿಜ್ಞಾನಿಗಳು ಸೇರಿದಂತೆ ಈವರೆಗೆ 14 ಹಿರಿಯ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಅತ್ತ ಇರಾನ್‌ ಕೂಡ ಇಸ್ರೇಲ್‌ ಮೇಲೆ 200 ಖಂಡಾಂತರ ಕ್ಷಿಪಣಿಗಳು ಹಾಗೂ 100 ಡ್ರೋನ್‌ಗಳಿಂದ ಭೀಕರ ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡಿದೆ. ಟೆಲ್‌ ಅವಿವ್‌, ಜೆರುಸಲೆಮ್‌ ಸೇರಿದಂತೆ ಮಿಲಿಟರಿ ಮತ್ತು ಸಾರ್ವಜನಿಕ ಸ್ಥಳಗಳ ಮೇಲೆ ದಾಳಿ ನಡೆಸಿದೆ. ಹೀಗಾಗಿ ಉಭಯ ರಾಷ್ಟ್ರಗಳ ನಡುವಿನ ಸಂಘರ್ಷ 4ನೇ ದಿನವೂ ಮುಂದುವರಿದಿದೆ. ಇದನ್ನೂ ಓದಿ: ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್‌ ಡ್ರೀಮ್‌ಲೈನರ್‌ನಲ್ಲಿ ತಾಂತ್ರಿಕ ದೋಷ – ಮರಳಿ ಲಂಡನ್‌ನಲ್ಲಿ ಲ್ಯಾಂಡಿಂಗ್‌!

    ಕದನ ವಿರಾಮ ಮಾತುಕತೆ ತಿರಸ್ಕಾರ
    ಇತ್ತ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು, ಟೆಹ್ರಾನ್‌ ಹೊತ್ತಿ ಉರಿಯಯತ್ತೆ, ನಿರಂತರ ದಾಳಿ ಇರಾನ್‌ ಮೇಲೆ ನಡೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಅತ್ತ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಸ್ರೇಲ್‌ ಮೇಲೆ ಬೃಹತ್‌ ದಾಳಿ ನಡೆಸುವ ಸೂಚನೆ ಕೊಟ್ಟಿದೆ. ಜೊತೆಗೆ ಇಸ್ರೇಲ್‌ನಿಂದ ದಾಳಿ ಮುಂದುವರಿಯುವವರೆಗೂ ನಾವು ಕದನ ವಿರಾಮದ ಬಗ್ಗೆ ಮಾತನಾಡುವುದಿಲ್ಲ ಎಂದು ಒಮನ್ ಮತ್ತು ಕತಾರ್‌ನ ಮಧ್ಯಸ್ಥಿಕೆಯನ್ನು ಇರಾನ್‌ ತಿರಸ್ಕರಿಸಿದೆ.

    ಇಸ್ರೇಲ್‌ ನಡೆಸಿದ ದಾಳಿಯಲ್ಲಿ 224 ಮಂದಿ ಸಾವನ್ನಪ್ಪಿದ್ದು, 1,277 ಜನರು ಗಾಯಗೊಂಡಿದ್ದಾರೆ. ಅದೇ ವೇಳೆ ಇರಾನ್‌ ನಡೆಸಿದ ದಾಳಿಯಲ್ಲಿ 14 ಇಸ್ರೇಲಿ ನಾಗರಿಕರು ಸಾವನ್ನಪ್ಪಿದ್ದು, 390 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಉತ್ತರಾಖಂಡ್‌ ಹೆಲಿಕಾಪ್ಟರ್‌ ಪತನ – 15 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಪೈಲಟ್‌ಗಿತ್ತು ಅಪಾರ ಅನುಭವ

  • ಇಸ್ರೇಲ್‌ ಭೀಕರ ವಾಯುದಾಳಿಗೆ 22 ಮಂದಿ ಬಲಿ – 117 ಮಂದಿಗೆ ಗಾಯ, ಹಿಜ್ಬುಲ್ಲಾ ಟಾಪ್‌ ಲೀಡರ್‌ ಸೇಫ್‌

    ಇಸ್ರೇಲ್‌ ಭೀಕರ ವಾಯುದಾಳಿಗೆ 22 ಮಂದಿ ಬಲಿ – 117 ಮಂದಿಗೆ ಗಾಯ, ಹಿಜ್ಬುಲ್ಲಾ ಟಾಪ್‌ ಲೀಡರ್‌ ಸೇಫ್‌

    ಬೈರೂತ್: ಇಸ್ರೇಲ್‌ ಸೇನೆಯು ಸೆಂಟ್ರಲ್‌ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ (Israeli Strikes) 22 ಮಂದಿ ಹತ್ಯೆಯಾಗಿದ್ದು, ಸುಮಾರು 117 ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್‌ ಈ ದಾಳಿಯಲ್ಲಿ ಹಿಜ್ಬುಲ್ಲಾದ (Hezbollah) ಉನ್ನತ ಅಧಿಕಾರಿಯೊಬ್ಬರು ಬದುಕುಳಿದಿದ್ದಾರೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯ ಹೇಳಿಕೊಂಡಿದೆ.

    ಕಳೆದ 1 ವರ್ಷದಲ್ಲಿ ಇಸ್ರೇಲ್‌ (Israel) ನಡೆಸಿದ ಮಾರಣಾಂತಿಕ ದಾಳಿಗಳಲ್ಲಿ ಇದು ಒಂದು ಎನ್ನಲಾಗಿದೆ. ದಾಳಿಯಿಂದ ಲೆಬನಾನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿ ಪಾಲಕರಿಗೆ ಅಪಾಯವುಂಟಾಗಿದ್ದು, ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಕೆಣಕಿ ತಪ್ಪು ಮಾಡಿತೇ ಇರಾನ್‌? – ಉಭಯ ರಾಷ್ಟ್ರಗಳ ಸೇನಾ ಸಾಮರ್ಥ್ಯ ನೋಡಿದ್ರೆ ಮೈ ನಡುಗುತ್ತೆ!

    ಸೆಂಟ್ರಲ್‌ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ, ಲೆಬನಾನ್‌ ಸೇನಾ ಟ್ಯಾಂಕರ್‌ಗಳನ್ನ ಗುರಿಯಾಗಿಸಿ ಇಸ್ರೇಲ್‌ ದಾಳಿ ನಡೆಸಿದೆ. ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾನನ್ನ ಹೊಡೆದುರುಳಿಸಿದ ನಂತರ ಉನ್ನತ ಅಧಿಕಾರಿಗಳ ಸರಣಿ ಹತ್ಯೆಯನ್ನೇ ಹೆಚ್ಚಾಗಿ ಗುರಿಯಾಗಿಸಿದೆ. ಆದ್ರೆ ಈ ದಾಳಿಯಲ್ಲಿ ಹಿಜ್ಬುಲ್ಲಾದ ಉನ್ನತಾಧಿಕಾರಿ ಬದುಕುಳಿದಿದ್ದಾರೆ. ಈ ದಾಳಿಯು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆ ಮಾಡಿದೆ ಎಂದು ಸ್ಪೇನ್‌ ಹಾಗೂ ಇಟಲಿ ದೇಶಗಳು ಆರೋಪಿಸಿವೆ.

    ಇತ್ತೀಚೆಗೆ ಇಸ್ರೇಲ್‌ ಹಿಜ್ಬುಲ್ಲಾದ 120 ಉಗ್ರ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿತ್ತು. ಆ ನಂತರ ನಡೆದ ಅತಿದೊಡ್ಡ ದಾಳಿಯಾಗಿದೆ. ಇದನ್ನೂ ಓದಿ: ಇಸ್ರೇಲ್‌ ಯುದ್ಧಕ್ಕೆ ಬೆಚ್ಚಿದ ಜನ – 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ

    2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ
    ಇತ್ತೀಚಿನ ದಿನಗಳಲ್ಲಿ ಇಸ್ರೇಲ್‌ನ ಯುದ್ಧ ವಿಮಾನಗಳು (Israeli Fighter Jets) ಲೆಬನಾನ್‌ನ ಬೆಕಾ ಪ್ರದೇಶ ಮತ್ತು ಬೈರೂತ್‌ನಲ್ಲಿ ವ್ಯಾಪಕವಾದ ವೈಮಾನಿಕ ದಾಳಿಗಳನ್ನು ನಡೆಸಿದೆ. ಮೂಲಸೌಕರ್ಯ ತಾಣಗಳು, ಲಾಂಚರ್‌ಗಳು, ಕಮಾಂಡ್ & ಕಂಟ್ರೋಲ್ ಸೆಂಟರ್‌ಗಳು ಹಾಗೂ ಶಸ್ತ್ರಾಸ್ತ್ರಗಳ ಸಂಗ್ರಹಣಾ ಸೌಲಭ್ಯ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಿವೆ. ಸದ್ಯಕ್ಕೆ ಕದನ ವಿರಾಮ ಘೋಷಣೆಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದರಿಂದ ಭಯಭೀತರಾಗಿರುವ 2.20 ಲಕ್ಷ ಮಂದಿ ಸಿರಿಯಾಕ್ಕೆ ಪಲಾಯನ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

  • ಇಸ್ರೇಲ್‌ ಯುದ್ಧಕ್ಕೆ ಬೆಚ್ಚಿದ ಜನ – 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ

    ಇಸ್ರೇಲ್‌ ಯುದ್ಧಕ್ಕೆ ಬೆಚ್ಚಿದ ಜನ – 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ

    ಬೈರೂತ್‌: ಇಸ್ರೇಲ್‌ ದಿನದಿಂದ ದಿನಕ್ಕೆ ಯುದ್ಧದ ತೀವ್ರತೆಯನ್ನು ಹೆಚ್ಚಿಸುತ್ತಿರುವ ಹಿನ್ನೆಲೆಯಲ್ಲಿ ಲೆಬನಾನ್‌ ಜನ ಸಂಕಷ್ಟಕ್ಕೀಡಾಗಿ ದೇಶ ತೊರೆದಿದ್ದಾರೆ. ಇಸ್ರೇಲ್‌ ಜೊತೆಗಿನ ಸಂಘರ್ಷದಿಂದಾಗಿ ಲೆಬನಾನ್‌ನ 12 ಲಕ್ಷ ಮಂದಿ ಸಂಕಷ್ಟಕ್ಕೀಡಾಗಿದ್ದಾರೆ. ಇದರಿಂದಾಗಿ ಸುಮಾರು 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ವಲಸೆ (Civilians Migrate) ಹೋಗಿದ್ದಾರೆ ಎಂದು ವರದಿಯಾಗಿದೆ.

    ಇತ್ತೀಚಿನ ದಿನಗಳಲ್ಲಿ ಇಸ್ರೇಲ್‌ನ ಯುದ್ಧ ವಿಮಾನಗಳು (Israeli Fighter Jets) ಲೆಬನಾನ್‌ನ ಬೆಕಾ ಪ್ರದೇಶ ಮತ್ತು ಬೈರೂತ್‌ನಲ್ಲಿ ವ್ಯಾಪಕವಾದ ವೈಮಾನಿಕ ದಾಳಿಗಳನ್ನು ನಡೆಸಿದೆ. ಮೂಲಸೌಕರ್ಯ ತಾಣಗಳು, ಲಾಂಚರ್‌ಗಳು, ಕಮಾಂಡ್ & ಕಂಟ್ರೋಲ್ ಸೆಂಟರ್‌ಗಳು ಹಾಗೂ ಶಸ್ತ್ರಾಸ್ತ್ರಗಳ ಸಂಗ್ರಹಣಾ ಸೌಲಭ್ಯ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಿವೆ. ಅಲ್ಲದೇ ಮೂರು ದಿನಗಳ ಹಿಂದೆಯಷ್ಟೇ ಕೇವಲ 1 ಗಂಟೆ ಅವಧಿಯಲ್ಲಿ 120ಕ್ಕೂ ಹೆಚ್ಚು ಹಿಜ್ಬುಲ್ಲಾ (Hezbollah) ಉಗ್ರ ನೆಲೆಗಳನ್ನು ಧ್ವಂಸ ಮಾಡಿದೆ. ಅಲ್ಲದೇ ಸದ್ಯಕ್ಕೆ ಕದನ ವಿರಾಮ ಘೋಷಣೆಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದರಿಂದ ಭಯಭೀತರಾಗಿರುವ 2.20 ಲಕ್ಷ ಮಂದಿ ಸಿರಿಯಾಕ್ಕೆ ಪಲಾಯನ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಯುದ್ಧದಿಂದ ಹಿಂದೆ ಸರಿಯುವಂತೆ ಲೆಬನಾನ್‌ಗೆ ಎಚ್ಚರಿಕೆ:
    ದಕ್ಷಿಣ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ನಡೆಸಿದ ಕೆಲ ಗಂಟೆಗಳ ನಂತರ ನೆತನ್ಯಾಹು (Benjamin Netanyahu) ವೀಡಿಯೋವೊಂದರಲ್ಲಿ ಮಾತನಾಡಿದ್ದಾರೆ. ಒಂದು ಕಾಲದಲ್ಲಿ ಪ್ರಾಕೃತಿಕ ಸೌಂದರ್ಯ, ಸಹಿಷ್ಣುತೆಗೆ ಹೆಸರುವಾಸಿಯಾಗಿದ್ದ ಮಧ್ಯಪ್ರಾಚ್ಯ ಈಗ ಹಿಜ್ಬುಲ್ಲಾ ಮದ್ದು ಗುಂಡುಗಳನ್ನು ಸಂಗ್ರಹಿಸಿದ್ದು, ಇರಾನಿನ ಮಿಲಿಟರಿ ನೆಲೆಯಾಗಿ ಮಾರ್ಪಟ್ಟಿದೆ. ಹಾಗಾಗಿ ಕೂಡಲೇ ನಿಮ್ಮ ದೇಶವನ್ನು ಕೂಡಲೇ ಹಿಂತೆಗೆದುಕೊಳ್ಳಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಈಗಲೂ ಸಮಯವಿದೆ ಹಿಂದೆ ಸರಿದುಬಿಡಿ – ಲೆಬನಾನ್‌ಗೆ ಇಸ್ರೇಲ್‌ ಪ್ರಧಾನಿ ಎಚ್ಚರಿಕೆ

    ಇದು ಲೆಬನಾನ್ ಜನತೆಗೆ ನಮ್ಮ ಸಂದೇಶ. ನಿಮ್ಮ ದೇಶವನ್ನು ಮಧ್ಯಪ್ರಾಚ್ಯದ ಮುತ್ತು ಎಂದು ಕರೆಯುತ್ತಿದ್ದದ್ದು ನೆನಪಿದೆಯಾ? ಈಗ ಲೆಬನಾನ್‌ಗೆ ಏನಾಯಿತು? ನಿರಂಕುಶಾಧಿಕಾರಿಗಳು ಮತ್ತು ಭಯೋತ್ಪಾದಕರ ಗುಂಪು ಅದನ್ನು ನಾಶಪಡಿಸಿದರು. ಒಂದು ಕಾಲದಲ್ಲಿ ಲೆಬನಾನ್ ಸಹನೆ, ಸೌಂದರ್ಯಕ್ಕೆ ಹೆಸರುವಾಸಿಯಾಗಿತ್ತು. ಇಂದು ಅದು ಅವ್ಯವಸ್ಥೆಯ ಸ್ಥಳವಾಗಿದೆ, ಯುದ್ಧದ ಕೇಂದ್ರವಾಗಿದೆ ಎಂದು ಹೇಳಿದ್ದಾರೆ.

    ನಾವು ಗಾಜಾದಲ್ಲಿ ನೋಡುವಂತೆ ವಿನಾಶ ಮತ್ತು ದುಃಖಕ್ಕೆ ಕಾರಣವಾಗುವ ಸುದೀರ್ಘ ಯುದ್ಧದ ಪ್ರಪಾತಕ್ಕೆ ಬೀಳುವ ಮೊದಲು ಎಚ್ಚೆತ್ತುಕೊಳ್ಳಬೇಕು. ಈಗಲೂ ಲೆಬನಾನ್‌ ತಮ್ಮ ರಾಷ್ಟ್ರವನ್ನು ಉಳಿಸಿಕೊಳ್ಳಬಹುದು. ನೀವು ನಿಮ್ಮ ಹಿಂತಿರುಗಿದರೆ, ಯುದ್ಧವನ್ನು ನಿಲ್ಲಿಸಿದ್ರೆ, ಶಾಂತಿ ಸಮೃದ್ಧ ಹಾದಿಗೆ ಮರಳಬಹುದು. ನೀವು ಮಾಡದಿದ್ದರೆ, ಹಿಜ್ಬುಲ್ಲಾ ಮಂದುವರಿಯುತ್ತದೆ. ನಿಮ್ಮ ನೇತೃತ್ವ ಖರ್ಚು ವೆಚ್ಚದಲ್ಲಿ ಇಸ್ರೇಲ್‌ ವಿರುದ್ಧ ಹೋರಾಡಲು ಪ್ರಯತ್ನಿಸಿ, ಲೆಬನಾನ್‌ ಅನ್ನು ಯುದ್ಧಕ್ಕೆ ಎಳೆದು ತರುತ್ತಾರೆ. ಆದ್ದರಿಂದ ಈಗಲೇ ಎಚ್ಚೆತ್ತುಕೊಳ್ಳಿ ಎಂದು ಖಡಕ್ಕಾಗಿ ಹೇಳಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಕೆಣಕಿ ತಪ್ಪು ಮಾಡಿತೇ ಇರಾನ್‌? – ಉಭಯ ರಾಷ್ಟ್ರಗಳ ಸೇನಾ ಸಾಮರ್ಥ್ಯ ನೋಡಿದ್ರೆ ಮೈ ನಡುಗುತ್ತೆ!

    ಇಸ್ರೇಲ್ ಯುದ್ಧವನ್ನು ಕೊನೆಗಾಣಿಸಲು ನಿರ್ಧರಿಸಿದೆ. ನಮ್ಮ ಜನರನ್ನು ಸುರಕ್ಷಿತವಾಗಿ ಅವರ ಮನೆಗಳಿಗೆ ಹಿಂದಿರುಗಿಸಲು ಅಗತ್ಯವಿರುವ ಎಲ್ಲವನ್ನೂ ಮಾಡಲು ನಾವು ನಿರ್ಧರಿಸಿದ್ದೇವೆ. ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ. ಇಸ್ರೇಲ್‌ಗೆ ಗೆಲ್ಲುವ ಛಲವೂ ಇದೆ, ಗೆಲ್ಲುತ್ತದೆ ಎಂದಿರುವ ಅವರು, ಹಿಜ್ಬುಲ್ಲಾವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಪ್ರತಿಜ್ಞೆ ಮಾಡಿದ್ದಾರೆ.

  • ಇಸ್ರೇಲ್‌ ರಾಕೆಟ್‌ ದಾಳಿಗೆ ಲೆಬನಾನ್‌ ಛಿದ್ರ ಛಿದ್ರ – ಸಾವಿನ ಸಂಖ್ಯೆ 492ಕ್ಕೆ ಏರಿಕೆ!

    ಇಸ್ರೇಲ್‌ ರಾಕೆಟ್‌ ದಾಳಿಗೆ ಲೆಬನಾನ್‌ ಛಿದ್ರ ಛಿದ್ರ – ಸಾವಿನ ಸಂಖ್ಯೆ 492ಕ್ಕೆ ಏರಿಕೆ!

    ಬೈರುತ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದ್ದು, ಲೆಬನಾನ್‌ – ಇಸ್ರೇಲ್‌ ನಡುವಿನ ಸಂಘರ್ಷ (Israel-Lebanon conflict) ತೀವ್ರ ಸ್ವರೂಪ ಪಡೆದುಕೊಂಡಿದೆ. ಲೆಬನಾನ್‌ನ ದಕ್ಷಿಣ ಹಾಗೂ ಪೂರ್ವ ಪ್ರಾಂತ್ಯದ ಮೇಲೆ ಇಸ್ರೇಲ್‌ ವಾಯುದಾಳಿಗೆ ಪ್ರತೀಕಾರವಾಗಿ ಉತ್ತರ ಇಸ್ರೇಲಿ ಸೇನಾ ನೆಲೆಗಳ ಮೇಲೆ ಲೆಬನಾನ್‌ ಪ್ರತಿ ದಾಳಿ ನಡೆಸಿದೆ.

    ಇತ್ತೀಚಿಗೆ ದೇಶದಲ್ಲಿ ನಡೆದ ಪೇಜರ್‌, ವಾಕಿಟಾಕಿ ಸ್ಫೋಟಕ್ಕೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದ ಇರಾನ್‌ ಬೆಂಬಲಿತ ಲೆಬನಾನ್‌ ಬಂಡುಕೋರ ಪಡೆಯ ಮೇಲೆ ಸೋಮವಾರ ಇಸ್ರೇಲ್‌ ಮಾರಣಾಂತಿಕ ದಾಳಿ (Israeli strikes) ನಡೆಸಿದೆ. ಹಿಜ್ಜುಲ್ಲಾ ಉಗ್ರರ 800 ಸ್ಥಳಗಳ ಮೇಲೆ ಇಸ್ರೇಲ್ 200 ರಾಕೆಟ್‌ ದಾಳಿ ನಡೆಸಿದೆ. ಸಾವಿನ ಸಂಖ್ಯೆ 492ಕ್ಕೆ ಏರಿಕೆಯಾಗಿದ್ದು, ಗಾಯಗೊಂಡವರ ಸಂಖ್ಯೆ ಸುಮಾರು 1,500ಕ್ಕೆ ತಲುಪಿದೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ತುಪ್ಪ ಪೂರೈಸುತ್ತಿದ್ದ ಎಆರ್ ಡೈರಿಗೆ ನೋಟಿಸ್

    ಇದು 2006ರಲ್ಲಿ ಇಸ್ರೇಲ್-ಹಿಜ್ಜುಲ್ಲಾ ಕದನ (Israel Hezbollah conflict) ಆರಂಭವಾದ ಬಳಿಕ 28 ವರ್ಷಗಳಲ್ಲೇ ದೇಶದ ಅತಿದೊಡ್ಡ ಕರಾಳ ದಿನ ಎಂದು ಲೆಬನಾನ್ ಉಲ್ಲೇಖಿಸಿದೆ. ಲೆಬನಾನ್‌ ದಕ್ಷಿಣ, ಪೂರ್ವ ಪ್ರಾಂತ್ಯಗಳ ಮೇಲೆ ದಾಳಿ ನಡೆಸಿದ ಇಸ್ರೇಲ್‌ ಉತ್ತರ ಭಾಗದ ಮೂರು ಸೇನಾ ನೆಲೆಗಳ ಮೇಲೆ ಬಂಡುಕೋರರ ಪ್ರತಿ ದಾಳಿ ನಡೆಸಿದ್ದಾರೆ. ಹೈಫಾದಲ್ಲಿರುವ ಇಸ್ರೇಲ್‌ ರಾಫೆಲ್‌ ಡಿಫೆನ್ಸ್‌ ಇಂಡಸ್ಟ್ರೀಸ್‌ ಸಂಕೀರ್ಣದ ಮೇಲೂ ಬಾಂಬ್‌ ದಾಳಿ ನಡೆಸಲಾಗಿದೆ ಎಂದು ಲೆಬನಾನ್‌ ಹೇಳಿಕೊಂಡಿದೆ.

    ಈ ದಾಳಿಯು ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಗುಡುಗಿರುವ ಇಸ್ರೇಲ್, ಹಿಜ್ಜುಲ್ಲಾ ಉಗ್ರರು ತಮ್ಮ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿರುವ ಮನೆಗಳು ಮತ್ತು ಕಟ್ಟಡಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಲೆಬನಾನ್ ನಾಗರಿಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಇದನ್ನೂ ಓದಿ: 5 ಲಕ್ಷ ಪಾವತಿಸಿ ಇಲ್ಲವೇ ದುರ್ಗಾ ಪೂಜೆ ಆಚರಿಸಬೇಡಿ: ಬಾಂಗ್ಲಾ ಹಿಂದೂ ದೇವಾಲಯಗಳಿಗೆ ಬೆದರಿಕೆ

    ಹಮಾಸ್ ಮೇಲಿನ ಇಸ್ರೇಲ್ ಯುದ್ಧದಲ್ಲಿ ಹಿಜ್ಜುಲ್ಲಾ ಉಗ್ರರು, ಹಮಾಸ್‌ಗೆ ನೇರ ಬೆಂಬಲ ಘೋಷಿಸಿದ್ದಾರೆ. ಅದರ ಭಾಗವಾಗಿ ಆಗಾಗ್ಗೆ ಇಸ್ರೇಲ್ ಸೇನಾ ನೆಲೆಗಳು ಮತ್ತು ನಾಗರಿಕ ಪ್ರದೇಶಗಳ ಮೇಲೆ ರಾಕೆಟ್, ಕ್ಷಿಪಣಿ ಬಳಸಿ ದಾಳಿ ನಡೆಸುತ್ತಿದೆ. ಇದರಿಂದ ಸಿಟ್ಟಿಗೆದ್ದಿರುವ ಇಸ್ರೇಲ್, ಕಳೆದೊಂದು ವಾರದಿಂದ ಲೆಬನಾನ್‌ನಲ್ಲಿರುವ ಹಿಜ್ಜುಲ್ಲಾ ಉಗ್ರರ ಮೇಲೆ ಹಲವು ರೀತಿಯಲ್ಲಿ ದಾಳಿ ನಡೆಸಿದೆ.

    ಇತ್ತೀಚೆಗೆ ಇಸ್ರೇಲ್ ದೇಶವು ಲೆಬನಾನ್‌ನ ಹಿಜ್ಜುಲ್ಲಾ ಉಗ್ರರು ಹೊಂದಿದ್ದ ಪೇಜರ್ ಹಾಗೂ ವಾಕಿಟಾಕಿಗಳನ್ನು ಸ್ಫೋಟಿಸಿದ ನಂತರ ಸಂಘರ್ಷ ತೀವ್ರಗೊಂಡಿದೆ. ಇದು ಅನಿರ್ದಿಷ್ಟ ಯುದ್ಧಕ್ಕೆ ನಾಂದಿ ಹಾಡಿದೆ ಎಂದು ಹಿಜ್ಜುಲ್ಲಾ ಉಗ್ರರು ಘೋಷಿಸಿದ್ದಾರೆ. ಇದನ್ನೂ ಓದಿ: ಪುಣೆ ಏರ್‌ಪೋರ್ಟ್ ಹೆಸರು ಬದಲಾವಣೆ – ಜಗದ್ಗುರು ಸಂತ ತುಕಾರಾಂ ನಿಲ್ದಾಣವಾಗಿ ಮರುನಾಮಕರಣ

    ಕಳೆದ ವರ್ಷ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ 5 ಸಾವಿರ ರಾಕೆಟ್‌ ಉಡಾಯಿಸಿದಾಗಿಂದ ಇಸ್ರೇಲ್‌-ಹಮಾಸ್‌ ಉಗ್ರರ ನಡುವಿನ ಯುದ್ಧ (Gaza war) ಆರಂಭವಾಗಿದೆ.