Tag: ISS

  • ಬಾಹ್ಯಾಕಾಶದಲ್ಲಿ 18 ದಿನ – ಭೂಮಿಯಲ್ಲಿ ಮತ್ತೆ ನಡೆಯುವುದನ್ನ ಕಲಿಯುತ್ತಿದ್ದಾರೆ ಶುಭಾಂಶು ಶುಕ್ಲಾ

    ಬಾಹ್ಯಾಕಾಶದಲ್ಲಿ 18 ದಿನ – ಭೂಮಿಯಲ್ಲಿ ಮತ್ತೆ ನಡೆಯುವುದನ್ನ ಕಲಿಯುತ್ತಿದ್ದಾರೆ ಶುಭಾಂಶು ಶುಕ್ಲಾ

    ನವದೆಹಲಿ: ಬಾಹ್ಯಾಕಾಶದಲ್ಲಿ 18 ದಿನ ಕಳೆದು ವಾಪಸ್‌ ಆದ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ (Shubhanshu Shukla) ಭೂಮಿಗೆ ಹೊಂದಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ.

    ಕಳೆದ ವಾರ ಯಶಸ್ವಿ ಬಾಹ್ಯಾಕಾಶ ಯಾನದಿಂದ ಹಿಂದಿರುಗಿದ ಭಾರತೀಯ ಗಗನಯಾತ್ರಿ ಶುಕ್ಲಾ, ಭೂಮಿಯ ಮೇಲೆ ನಡೆಯಲು ಕಲಿಯುತ್ತಿದ್ದಾರೆ. ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿ ಜೂನ್ 25 ರಂದು ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಹಾರಾಟ ನಡೆಸಿದ ನಾಲ್ವರು ಗಗನಯಾತ್ರಿಗಳು ಶುಕ್ಲಾ ಕೂಡ ಒಬ್ಬರು. ಐಎಸ್‌ಎಸ್‌ನಲ್ಲಿ ಸುಮಾರು 18 ದಿನಗಳನ್ನು ಕಳೆದ ನಂತರ ಅವರು ಜುಲೈ 15 ರಂದು ಸುರಕ್ಷಿತವಾಗಿ ಭೂಮಿಗೆ ಮರಳಿದರು. ಇದನ್ನೂ ಓದಿ: ಬಾಹ್ಯಾಕಾಶದಿಂದ ಮರಳಿದ ಶುಭಾಂಶು ಶುಕ್ಲಾ – ಮಗನನ್ನು ಕಂಡು ಪೋಷಕರು ಭಾವುಕ

     

    View this post on Instagram

     

    A post shared by Shubhanshu Shukla (@gagan.shux)

    ಶುಕ್ಲಾ ಅವರು ಮತ್ತೆ ನಡೆಯಲು ಪ್ರಯತ್ನಿಸುತ್ತಿರುವ ಮತ್ತು ಗುರುತ್ವಾಕರ್ಷಣೆಗೆ ಒಗ್ಗಿಕೊಳ್ಳುತ್ತಿರುವ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಪುಟ್ಟ ಮಕ್ಕಳು ಆಗ ತಾನೆ ನಡೆಯುವುದನ್ನು ಕಲಿಯುತ್ತಿರುವಂತೆ ಇರುವ ದೃಶ್ಯ ವೀಡಿಯೋದಲ್ಲಿದೆ. ಶುಕ್ಲಾ ಅವರು ನಡೆಯಲು ಇಬ್ಬರು ಸಹಾಯ ಮಾಡುತ್ತಿದ್ದಾರೆ.

    ಬೇಗ ಚೇತರಿಸಿಕೊಳ್ಳಿ ಎಂದು ನನಗೆ ಅನೇಕರು ಸಂದೇಶ ಕಳುಹಿಸುತ್ತಿದ್ದಾರೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ ನಿಮಗೆಲ್ಲರಿಗೂ ಧನ್ಯವಾದ. ಗುರುತ್ವಾಕರ್ಷಣೆ ಇಲ್ಲದ ವಾತಾವರಣಕ್ಕೆ ನನ್ನ ದೇಹ ಒಗ್ಗಿಕೊಂಡಿತ್ತು. ಈಗ ಗುರುತ್ವಾಕರ್ಷಣೆಗೆ ಮರಳಿದಾಗ, ಇಲ್ಲಿಗೆ ಮತ್ತೆ ಹೊಂದಿಕೊಳ್ಳಬೇಕು. ನನ್ನ ದೇಹ ಬಹುಬೇಗ ಭೂಮಿ ವಾತಾವರಣಕ್ಕೆ ಹೊಂದಿಕೊಳ್ಳುತ್ತಿರುವುದನ್ನು ಕಂಡು ನನಗೆ ಅಚ್ಚರಿಯಾಯಿತು ಎಂದು ಶುಕ್ಲಾ ತಿಳಿಸಿದ್ದಾರೆ.

    ಶುಕ್ಲಾ ಮತ್ತು ಇತರ ಮೂವರು ಗಗನಯಾತ್ರಿಗಳು ವೈದ್ಯಕೀಯ ಮತ್ತು ಮರು-ಹೊಂದಾಣಿಕೆ ಕಾರ್ಯವಿಧಾನಗಳನ್ನು ಪೂರ್ಣಗೊಳಿಸಲು ಜುಲೈ 23 ರವರೆಗೆ ಕ್ವಾರಂಟೈನ್‌ನಲ್ಲಿ ಇರಲಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರನ್ನು ಉಲ್ಲೇಖಿಸಿ ಅಧಿಕೃತ ಹೇಳಿಕೆ ತಿಳಿಸಿದೆ. ಇದನ್ನೂ ಓದಿ: ಭೂಮಿಗೆ ವಾಪಸ್‌ ಆದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿ ಸ್ವಾಗತ

    ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಶುಕ್ಲಾ ಅವರ ಮೂರು ವಾರಗಳ ವಾಸ್ತವ್ಯವು ಭಾರತವು ತನ್ನದೇ ಆದ ಗಗನಯಾನ ಯೋಜನೆಗೆ ತಯಾರಿ ನಡೆಸುತ್ತಿರುವಾಗ ಬಾಹ್ಯಾಕಾಶ ಕಾರ್ಯಾಚರಣೆಗಳನ್ನು ನಿರ್ವಹಿಸಲು ಕೊಡುಗೆ ನೀಡಿದೆ ಎಂದು ಜಿತೇಂದ್ರ ಸಿಂಗ್‌ ತಿಳಿಸಿದ್ದಾರೆ.

  • ಭೂಮಿಗೆ ಮರಳಿದ ಶುಕ್ಲಾಗೆ ಪತ್ನಿ, ಪುತ್ರನಿಂದ ಅಪ್ಪುಗೆಯ ಸ್ವಾಗತ

    ಭೂಮಿಗೆ ಮರಳಿದ ಶುಕ್ಲಾಗೆ ಪತ್ನಿ, ಪುತ್ರನಿಂದ ಅಪ್ಪುಗೆಯ ಸ್ವಾಗತ

    ನ್ಯೂಯಾರ್ಕ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (ISS) ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿ ಭೂಮಿಗೆ ಮರಳಿರುವ ಶುಭಾಂಶು ಶುಕ್ಲಾ (Shubanshu Shukla) ಅವರನ್ನು ಪತ್ನಿ ಹಾಗೂ ಪುತ್ರ ಅಪ್ಪುಗೆಯ ಮೂಲಕ ಸ್ವಾಗತ ಕೋರಿದ್ದಾರೆ.

    18 ದಿನಗಳ ಬಾಹ್ಯಾಕಾಶ ವಾಸದ ನಂತರ ಟೆಕ್ಸಾಸ್‌ನ (Texas) ಹೂಸ್ಟನ್‌ನಲ್ಲಿ (Houston) ಶುಭಾಂಶು ಶುಕ್ಲಾ ಅವರು ತಮ್ಮ ಪತ್ನಿ ಕಾಮ್ನಾ (Kamna) ಹಾಗೂ ಪುತ್ರ ಕಿಯಾಶ್ (Kiyas) ಅವರನ್ನು ಭೇಟಿಯಾದರು. ಎರಡು ತಿಂಗಳ ಬಳಿಕ ಶುಕ್ಲಾ ಅವರು ತಮ್ಮ ಕುಟುಂಬಸ್ಥರನ್ನು ಭೇಟಿಯಾಗಿದ್ದು, ಈ ಕುರಿತು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸಂತಸವನ್ನು ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಕಿರಣ್ ರಾಜ್‌ಗೆ ನಾಯಕಿಯಾದ ಉಡಾಳ ಹುಡುಗಿ ಹೃತಿಕಾ

    ಪೋಸ್ಟ್‌ನಲ್ಲಿ, ಇಷ್ಟು ದಿನಗಳ ಬಳಿಕ ಭೂಮಿಗೆ ಹಿಂತಿರುಗಿ ನನ್ನ ಕುಟುಂಬವನ್ನು ಬಿಗಿದಪ್ಪಿಕೊಂಡಿದ್ದು, ನನ್ನ ಮನೆಯನ್ನೇ ನೋಡಿದಂತೆ ಭಾಸವಾಯಿತು. ಬಾಹ್ಯಾಕಾಶದಲ್ಲಿನ ಹಾರಾಟ ಎಷ್ಟು ಅದ್ಭುತವೋ, ಹಾಗೆಯೇ ಬಹಳ ದಿನಗಳ ನಂತರ ನಮ್ಮ ಪ್ರೀತಿ ಪಾತ್ರರನ್ನು ನೋಡುವುದು ಅಷ್ಟೇ ಅದ್ಭುತ. ಬಹುದಿನಗಳ ಬಳಿಕ ನಿಮ್ಮ ಪ್ರೀತಿಪಾತ್ರರನ್ನು ನೋಡಿದಾಗಲೇ ಅವರು ನಿಮಗೆಷ್ಟು ಮುಖ್ಯ ಎನ್ನುವುದು ಗೊತ್ತಾಗುತ್ತದೆ ಎಂದು ತಿಳಿಸಿದ್ದಾರೆ.

    ಸೋಮವಾರ (ಜು.14) ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಡ್ರ್ಯಾಗನ್‌ ಕ್ಯಾಪ್ಸುಲ್ ಪ್ರವೇಶಿಸಿ, ಸಂಜೆ 4:35ಕ್ಕೆ ಅನ್‌ಡಾಕಿಂಗ್ (ಬೇರ್ಪಡಿಸುವಿಕೆ) ಪ್ರಕ್ರಿಯೆ ಯಶಸ್ವಿಯಾಗಿತ್ತು. ಒಟ್ಟು 22.5 ಗಂಟೆಗಳ ಪ್ರಯಾಣ ಬಳಿಕ ಮಂಗಳವಾರ (ಜು.15) ) ಭಾರತೀಯ ಕಾಲಮಾನ ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ 4 ಪ್ಯಾರಾಚೂಟ್‌ಗಳು ಕ್ಯಾಪ್ಸುಲ್ ವೇಗವನ್ನು ತಗ್ಗಿಸಿತ್ತು. ಯಶಸ್ವಿ ಸ್ಪ್ಯಾಷ್‌ ಡೌನ್ ಬಳಿಕ ಸುರಕ್ಷಿತವಾಗಿ ಶುಭಾಂಶು ಶುಕ್ಲಾ ಹಾಗೂ ಇನ್ನುಳಿದ ಮೂವರು ಗಗನಯಾತ್ರಿಗಳು ಭೂಮಿಗೆ ಬಂದಿಳಿದಿದ್ದಾರೆ.

     

    View this post on Instagram

     

    A post shared by Shubhanshu Shukla (@gagan.shux)

    ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳುವ ಮುನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಾವನಾತ್ಮಕ ಬೀಳ್ಕೊಡುಗೆ ಸಿಕ್ಕಿತು. ಶುಭಾಂಶು ಶುಕ್ಲಾ ಸಾರೇ ಜಹಾನ್ ಸೆ ಅಚ್ಚಾ ಎಂದು ಬಾಹ್ಯಾಕಾಶದಲ್ಲಿ ಭಾರತವನ್ನು ಭಾವನಾತ್ಮಕವಾಗಿ ಹೊಗಳಿದರು. ಈ ವೇಳೆ ರಾಕೇಶ್ ಶರ್ಮಾ 41 ವರ್ಷಗಳ ಹಿಂದೆ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಸಮಯವನ್ನು ನೆನಪಿಸಿಕೊಂಡು, ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ವಿವರಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಭಾರತದ ಧ್ವಜ ಹಾರಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದ ಶುಭಾಂಶು ಶುಕ್ಲಾ ಸ್ವಾಗತಿಸಲು ಭಾರತೀಯರು ಉತ್ಸುಕರಾಗಿದ್ದಾರೆ.ಇದನ್ನೂ ಓದಿ: Uttara Kannada | ಮೊಬೈಲ್ ನೋಡಬೇಡ ಎಂದಿದ್ದಕ್ಕೆ 13ರ ಬಾಲಕ ಆತ್ಮಹತ್ಯೆ

  • ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಕೈಬೀಸಿದ ಶುಭಾಂಶು ಶುಕ್ಲಾ

    ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಕೈಬೀಸಿದ ಶುಭಾಂಶು ಶುಕ್ಲಾ

    ಕ್ಯಾಲಿಫೋರ್ನಿಯಾ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (ISS) ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿರುವ ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubanshu Shukla) ಸೇರಿ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಆಗಿದ್ದಾರೆ. ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಶುಭಾಂಶು ಶುಕ್ಲಾ ಕೈಬೀಸಿದರು.

    ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 3ಕ್ಕೆ ಕ್ಯಾಲಿಫೋರ್ನಿಯಾ (California) ಕರಾವಳಿಯಲ್ಲಿ ಯಶಸ್ವಿಯಾಗಿ ಸ್ಪ್ಯಾಷ್‌ ಡೌನ್ ಮಾಡಲಾಯಿತು. ಬಳಿಕ ಕ್ಯಾಪ್ಸುಲ್‌ ಸುರಕ್ಷಿತವಾಗಿದೆಯೇ ಎಂದು ಪರಿಶೀಲಿಸಿದ ಬಳಿಕ ಕೆಳಗಡೆ ಇರುವ ಬಾಗಿಲು(ಹ್ಯಾಚ್) ತೆರೆಯಲಾಯಿತು. ಈ ಬಾಗಿಲಿನ ಮೂಲಕ ಯಾನಿಗಳನ್ನು ಸ್ಪೇಸ್ ಎಕ್ಸ್ ಸಿಬ್ಬಂದಿ ಹೊರಗೆ ನಿಧಾನವಾಗಿ ಎಳೆದು ಕೈಹಿಡಿದು ಕರೆದುಕೊಂಡು ಹೋದರು. ಈ ವೇಳೆ ಎರಡನೇಯದಾಗಿ ಹೊರಬಂದ ಶುಭಾಂಶು ಶುಕ್ಲಾ ನಗುಮುಖದಿಂದ ಕೈಬೀಸಿ ಸಂತೋಷ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಭುವಿಗೆ ಶುಭಾಂಶು ಶುಕ್ಲಾ – ಕ್ಯಾಲಿಫೋರ್ನಿಯಾ ಕಡಲ ತೀರದಲ್ಲಿ ಸ್ಪ್ಲ್ಯಾಷ್‌ ಡೌನ್

    ಕ್ಯಾಪ್ಸುಲ್‌ನಿಂದ ಹೊರಬಂದ ಬಳಿಕ ವೈದ್ಯಕೀಯ ತಪಾಸಣೆ ಮಾಡಿ ಕ್ವಾರಂಟೈನ್ ಮಾಡಲಾಗುತ್ತದೆ. ಸಾಮಾನ್ಯವಾಗಿ ಗಗನಯಾತ್ರಿಗಳಿಗೆ ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು 7 ದಿನಗಳ ವಿಶ್ರಾಂತಿಯ ಅವಶ್ಯಕತೆಯಿರುತ್ತದೆ. ಇನ್ನೂ ಯಶಸ್ವಿ ಲ್ಯಾಂಡಿಂಗ್ ಬಳಿಕ ಶುಭಾಂಶು ಶುಕ್ಲಾ ಕುಟುಂಬಸ್ಥರು ಸಂಭ್ರಮಿಸಿದ್ದಾರೆ.

    ಪ್ರಕ್ರಿಯೆ ಹೇಗಿತ್ತು?
    ಸೋಮವಾರ (ಜು.14) ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಡ್ರ್ಯಾಗನ್‌ ಕ್ಯಾಪ್ಸುಲ್ ಪ್ರವೇಶಿಸಿ, ಸಂಜೆ 4:35ಕ್ಕೆ ಅನ್‌ಡಾಕಿಂಗ್ (ಬೇರ್ಪಡಿಸುವಿಕೆ) ಪ್ರಕ್ರಿಯೆ ಯಶಸ್ವಿಯಾಗಿತ್ತು. ಒಟ್ಟು 22.5 ಗಂಟೆಗಳ ಪ್ರಯಾಣ ಬಳಿಕ ಇಂದು ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ 4 ಪ್ಯಾರಾಚೂಟ್‌ಗಳು ಕ್ಯಾಪ್ಸುಲ್ ವೇಗವನ್ನು ತಗ್ಗಿಸಿತ್ತು. ಯಶಸ್ವಿ ಸ್ಪ್ಯಾಷ್‌ ಡೌನ್ ಬಳಿಕ ಸುರಕ್ಷಿತವಾಗಿ ಶುಭಾಂಶು ಶುಕ್ಲಾ ಹಾಗೂ ಇನ್ನುಳಿದ ಮೂವರು ಗಗನಯಾತ್ರಿಗಳು ಭೂಮಿಗೆ ಬಂದಿಳಿದಿದ್ದಾರೆ.

    ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳುವ ಮುನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಾವನಾತ್ಮಕ ಬೀಳ್ಕೊಡುಗೆ ಸಿಕ್ಕಿತು. ಶುಭಾಂಶು ಶುಕ್ಲಾ ಸಾರೇ ಜಹಾನ್ ಸೆ ಅಚ್ಚಾ ಎಂದು ಬಾಹ್ಯಾಕಾಶದಲ್ಲಿ ಭಾರತವನ್ನು ಭಾವನಾತ್ಮಕವಾಗಿ ಹೊಗಳಿದರು. ಈ ವೇಳೆ ರಾಕೇಶ್ ಶರ್ಮಾ 41 ವರ್ಷಗಳ ಹಿಂದೆ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಸಮಯವನ್ನು ನೆನಪಿಸಿಕೊಂಡು, ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ವಿವರಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಭಾರತದ ಧ್ವಜ ಹಾರಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದ ಶುಭಾಂಶು ಶುಕ್ಲಾ ಸ್ವಾಗತಿಸಲು ಭಾರತೀಯರು ಉತ್ಸುಕರಾಗಿದ್ದಾರೆ.

    ಜೂ.25ರಂದು ಆಕ್ಸಿಯಂ-4 ಮಿಷನ್ ಮೂಲಕ ಭಾರತದ ಶುಭಾಂಶು ಶುಕ್ಲಾ, ಅಮೆರಿಕ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು ಹಾಗೂ ಪೋಲೆಂಡ್ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್‌ಸ್ಕಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಯಾನಕ್ಕೆ ತೆರಳಿದ್ದರು. ಬಾಹ್ಯಾಕಾಶದಲ್ಲಿ 18 ದಿನಗಳ ಕಾಲ ಉಳಿದು ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ಮಾಡಿದ್ದರು.ಇದನ್ನೂ ಓದಿ: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನ ಪತ್ನಿ ನದಿಗೆ ತಳ್ಳಿದ ಆರೋಪ ಕೇಸ್‌ – ಪರಸ್ಪರ ವಿಚ್ಛೇದನಕ್ಕೆ ಮುಂದಾದ ದಂಪತಿ

  • ಭುವಿಗೆ ಶುಭಾಂಶು ಶುಕ್ಲಾ – ಕ್ಯಾಲಿಫೋರ್ನಿಯಾ ಕಡಲ ತೀರದಲ್ಲಿ ಸ್ಪ್ಲ್ಯಾಷ್‌ ಡೌನ್

    ಭುವಿಗೆ ಶುಭಾಂಶು ಶುಕ್ಲಾ – ಕ್ಯಾಲಿಫೋರ್ನಿಯಾ ಕಡಲ ತೀರದಲ್ಲಿ ಸ್ಪ್ಲ್ಯಾಷ್‌ ಡೌನ್

    ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (ISS) ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿರುವ ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubanshu Shukla) ಸೇರಿ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಆಗಿದ್ದು, ಕ್ಯಾಲಿಫೋರ್ನಿಯಾ ಕಡಲ ತೀರದಲ್ಲಿ ಬಂದಿಳಿದಿದ್ದಾರೆ.

    ಸೋಮವಾರ (ಜು.14) ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಡ್ರ್ಯಾಗನ್ ಕ್ಯಾಪ್ಸುಲ್ ಪ್ರವೇಶಿಸಿ, ಸಂಜೆ 4:35ಕ್ಕೆ ಅನ್‌ಡಾಕಿಂಗ್ (ಬೇರ್ಪಡಿಸುವಿಕೆ) ಪ್ರಕ್ರಿಯೆ ಯಶಸ್ವಿಯಾಗಿತ್ತು. ಒಟ್ಟು 22.5 ಗಂಟೆಗಳ ಪ್ರಯಾಣ ಬಳಿಕ ಇಂದು ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಸ್ಪ್ಲ್ಯಾಷ್‌ ಡೌನ್ ಯಶಸ್ವಿಯಾಗಿದ್ದು, ಸುರಕ್ಷಿತವಾಗಿ ಶುಭಾಂಶು ಶುಕ್ಲಾ ಹಾಗೂ ಇನ್ನುಳಿದ ಮೂವರು ಗಗನಯಾತ್ರಿಗಳು ಭೂಮಿಗೆ ಬಂದಿಳಿದಿದ್ದಾರೆ.ಇದನ್ನೂ ಓದಿ: ಕೇಂದ್ರ ಶಿಷ್ಟಾಚಾರ ಪಾಲನೆ ಮಾಡದಿದ್ರೆ ಗಣತಂತ್ರ ವ್ಯವಸ್ಥೆಗೆ ಕಪ್ಪು ಚುಕ್ಕಿ – ಮಹದೇವಪ್ಪ

    ಕ್ಯಾಪ್ಸುಲ್ ಲ್ಯಾಂಡ್ ಆಗುವ ಮುನ್ನ ಅದರ ವೇಗ ನಿಯಂತ್ರಿಸಿ ಪ್ಯಾರಾಚೂಟ್ ಮೂಲಕ ಸಮುದ್ರದಲ್ಲಿ ಸ್ಪ್ಲ್ಯಾಷ್‌ ಡೌನ್ ಮಾಡಲಾಯಿತು. ಕ್ಯಾಪ್ಸುಲ್ ಲ್ಯಾಂಡ್ ಆಗಿ 2 ಗಂಟೆಗಳ ಅದನ್ನು ಓಪನ್ ಮಾಡುವುದಿಲ್ಲ. ಆನಂತರ ಸ್ಟ್ರೇಚ್ಚರ್‌ನಲ್ಲಿ ಮಲಗಿಸಿ ಕರೆತಂದು ವೈದ್ಯಕೀಯ ತಪಾಸಣೆ ಮಾಡಿ ಕ್ವಾರಂಟೈನ್ ಮಾಡಲಾಗುತ್ತದೆ. ಗಗನಯಾತ್ರಿಗಳಿಗೆ ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು 7 ದಿನಗಳ ವಿಶ್ರಾಂತಿಯ ಅವಶ್ಯಕತೆಯಿರುತ್ತದೆ.

    ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳುವ ಮುನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಾವನಾತ್ಮಕ ಬೀಳ್ಕೊಡುಗೆ ಸಿಕ್ಕಿತು. ಶುಭಾಂಶು ಶುಕ್ಲಾ ಸಾರೇ ಜಹಾನ್ ಸೆ ಅಚ್ಚಾ ಎಂದು ಬಾಹ್ಯಾಕಾಶದಲ್ಲಿ ಭಾರತವನ್ನು ಭಾವನಾತ್ಮಕವಾಗಿ ಹೊಗಳಿದರು. ಈ ವೇಳೆ ರಾಕೇಶ್ ಶರ್ಮಾ 41 ವರ್ಷಗಳ ಹಿಂದೆ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಸಮಯವನ್ನು ನೆನಪಿಸಿಕೊಂಡು, ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ವಿವರಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಭಾರತದ ಧ್ವಜ ಹಾರಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದ ಶುಭಾಂಶು ಶುಕ್ಲಾ ಸ್ವಾಗತಿಸಲು ಭಾರತೀಯರು ಉತ್ಸುಕರಾಗಿದ್ದಾರೆ.

    ಜೂ.25ರಂದು ಆಕ್ಸಿಯಂ-4 ಮಿಷನ್ ಮೂಲಕ ಭಾರತದ ಶುಭಾಂಶು ಶುಕ್ಲಾ, ಅಮೆರಿಕ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು ಹಾಗೂ ಪೋಲೆಂಡ್ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್‌ಸ್ಕಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಯಾನಕ್ಕೆ ತೆರಳಿದ್ದರು. ಬಾಹ್ಯಾಕಾಶದಲ್ಲಿ 18 ದಿನಗಳ ಕಾಲ ಉಳಿದು ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ಮಾಡಿದ್ದು, ಎಲ್ಲಾ ಪರೀಕ್ಷೆಗಳು ಯಶಸ್ವಿಯಾಗಿವೆ.

    ಟಚ್‌ಡೌನ್ ಪ್ರಕ್ರಿಯೆ ಹೇಗಾಯ್ತು?
    ಕ್ರ‍್ಯೂ ಡ್ರ‍್ಯಾಗನ್ ಕ್ಯಾಪ್ಸೂಲ್ ಫ್ಲೋರಿಡಾದ ಸಮುದ್ರದ ಮೇಲೆ ಟಚ್‌ಡೌನ್ ಆಗಿದೆ. ಆಕಾಶದಿಂದ ವೇಗವಾಗಿ ಬರುವ ಕ್ಯಾಪ್ಸೂಲ್ ನಿಧಾನವಾಗಿ ಲ್ಯಾಂಡ್ ಆಯ್ತು. ಭೂಮಿ ಪ್ರವೇಶದ ಬಳಿಕ ಕ್ಯಾಪ್ಸೂಲ್‌ನಲ್ಲಿರುವ 4 ಪ್ಯಾರಾಚೂಟ್‌ಗಳು ತೆರೆದುಕೊಂಡಿತ್ತು. ಈ ಪ್ಯಾರಾಚೂಟ್‌ಗಳು ಕ್ಯಾಪ್ಸೂಲ್ ವೇಗವನ್ನು ತಗ್ಗಿಸಿತ್ತು. ವೇಗ ತಗ್ಗಿದಂತೆ ಕ್ಯಾಪ್ಸೂಲ್ ನಿಧನವಾಗಿ ಸಮುದ್ರದಲ್ಲಿ ಟಚ್‌ಡೌನ್ ಆಯ್ತು.

    ನಂತರ ವಿಶೇಷ ದೋಣಿಯಲ್ಲಿ ಸ್ಪೇಸ್ ಎಕ್ಸ್ ಸಿಬ್ಬಂದಿ ನೌಕೆಯನ್ನು ರೋಪ್ ಬಳಸಿ ಹತ್ತಿರದಲ್ಲೇ ಇದ್ದ ದೊಡ್ಡ ಬೋಟ್ ಬಳಿ ತಂದರು. ಈ ನೌಕೆಯನ್ನು ಕ್ರೇನ್ ಬಳಸಿ ಬೋಟ್ ಒಳಗಡೆ ಇಡಲಾಯಿತು. ಬೋಟ್‌ ಒಳಗಡೆ ಇಟ್ಟ ನಂತರ ಕ್ಯಾಪ್ಸೂಲ್‌ ಸುರಕ್ಷಿತವಾಗಿದೆಯೇ ಎಂದು ಪರಿಶೀಲಿಸಿದ ಬಳಿಕ ಕೆಳಗಡೆ ಇರುವ ಬಾಗಿಲು(ಹ್ಯಾಚ್) ತೆರೆಯಲಾಯಿತು. ಈ ಬಾಗಿಲಿನ ಮೂಲಕ ಯಾನಿಗಳನ್ನು ಸ್ಪೇಸ್‌ ಎಕ್ಸ್‌ ಸಿಬ್ಬಂದಿ ಹೊರಗೆ ನಿಧಾನವಾಗಿ ಎಳೆದು ಕರೆದೊಯ್ಯಲಾಯಿತು. ಇದನ್ನೂ ಓದಿ: ವಿದ್ಯಾರ್ಥಿನಿ ಮೇಲೆ ರೇಪ್‌,ಬ್ಲ್ಯಾಕ್‌ಮೇಲ್‌ – ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್‌

  • ISSನಿಂದ ಅನ್‌ಡಾಕಿಂಗ್ ಯಶಸ್ವಿ: ಭುವಿಯತ್ತ ಶುಕ್ಲಾ, ಮಂಗಳವಾರ ಮಧ್ಯಾಹ್ನ ಕ್ಯಾಲಿಫೋರ್ನಿಯಾ ತೀರಕ್ಕೆ ವಾಪಸ್

    ISSನಿಂದ ಅನ್‌ಡಾಕಿಂಗ್ ಯಶಸ್ವಿ: ಭುವಿಯತ್ತ ಶುಕ್ಲಾ, ಮಂಗಳವಾರ ಮಧ್ಯಾಹ್ನ ಕ್ಯಾಲಿಫೋರ್ನಿಯಾ ತೀರಕ್ಕೆ ವಾಪಸ್

    ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (International Space Station) ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿರುವ ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubanshu Shukla) ಸೇರಿ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಆಗುತ್ತಿದ್ದಾರೆ.

    ಜೂ.25ರಂದು ಆಕ್ಸಿಯಂ-4 (Axiom-4) ಮಿಷನ್ ಮೂಲಕ ಭಾರತದ ಶುಭಾಂಶು ಶುಕ್ಲಾ, ಅಮೆರಿಕ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು ಹಾಗೂ ಪೋಲೆಂಡ್ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್‌ಸ್ಕಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಯಾನಕ್ಕೆ ತೆರಳಿದ್ದರು. ಬಾಹ್ಯಾಕಾಶದಲ್ಲಿ 18 ದಿನಗಳ ಕಾಲ ಉಳಿದು ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ಮಾಡಿದ್ದು, ಎಲ್ಲಾ ಪರೀಕ್ಷೆಗಳು ಯಶಸ್ವಿಯಾಗಿವೆ.ಇದನ್ನೂ ಓದಿ:ಸಿಎಂಗೆ ಆಹ್ವಾನ ಕೊಡೋ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ನಿತಿನ್ ಗಡ್ಕರಿ

    ಸದ್ಯ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಮರಳುತ್ತಿದ್ದು, ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಡ್ರ್ಯಾಗನ್ ಕ್ಯಾಪ್ಸುಲ್ ಪ್ರವೇಶಿಸಿ, ಸಂಜೆ 4:35ಕ್ಕೆ ಅನ್‌ಡಾಕಿಂಗ್ (ಬೇರ್ಪಡಿಸುವಿಕೆ) ಪ್ರಕ್ರಿಯೆ ಯಶಸ್ವಿಯಾಗಿದೆ. ಒಟ್ಟು 22.5 ಗಂಟೆಗಳ ಕಾಲ ಪ್ರಯಾಣ ಬೆಳೆಸಲಿದ್ದು, ನಾಳೆ ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಬಂದಿಳಿಯಲಿದ್ದಾರೆ.

    ಕ್ಯಾಪ್ಸುಲ್ ಲ್ಯಾಂಡ್ ಆಗುವ ಮುನ್ನ ಅದರ ವೇಗ ನಿಯಂತ್ರಿಸಿ ಪ್ಯಾರಾಚೂಟ್ ಮೂಲಕ ಸಮುದ್ರದಲ್ಲಿ ಸಾಫ್ಟ್ಲ್ಯಾಂಡ್ ಮಾಡಲಾಗುತ್ತದೆ. ಕ್ಯಾಪ್ಸುಲ್ ಲ್ಯಾಂಡ್ ಆಗಿ 2 ಗಂಟೆಗಳ ಅದನ್ನು ಓಪನ್ ಮಾಡುವುದಿಲ್ಲ. ಆನಂತರ ಸ್ಟೆçಚ್ಚರ್‌ನಲ್ಲಿ ಮಲಗಿಸಿ ಕರೆತಂದು ವೈದ್ಯಕೀಯ ತಪಾಸಣೆ ಮಾಡಿ ಕ್ವಾರಂಟೈನ್ ಮಾಡಲಾಗುತ್ತದೆ.

    ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳುವ ಮುನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಾವನಾತ್ಮಕ ಬೀಳ್ಕೊಡುಗೆ ಸಿಕ್ಕಿತು. ಶುಭಾಂಶು ಶುಕ್ಲಾ ಸಾರೇ ಜಹಾನ್ ಸೆ ಅಚ್ಚಾ ಎಂದು ಬಾಹ್ಯಾಕಾಶದಲ್ಲಿ ಭಾರತವನ್ನು ಭಾವನಾತ್ಮಕವಾಗಿ ಹೊಗಳಿದರು. ಈ ವೇಳೆ ರಾಕೇಶ್ ಶರ್ಮಾ 41 ವರ್ಷಗಳ ಹಿಂದೆ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಸಮಯವನ್ನು ನೆನಪಿಸಿಕೊಂಡು, ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ವಿವರಿಸಿದ್ದಾರೆ.

    ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಭಾರತದ ಧ್ವಜ ಹಾರಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದ ಶುಭಾಂಶು ಶುಕ್ಲಾ ಸ್ವಾಗತಿಸಲು ಭಾರತೀಯರು ಉತ್ಸುಕರಾಗಿದ್ದಾರೆ.ಇದನ್ನೂ ಓದಿ: ಇನ್ಮುಂದೆ ಸಮೋಸ, ಜಿಲೇಬಿ ತಿನ್ನುವವರಿಗೂ ಸಿಗರೇಟ್ ಪ್ಯಾಕೆಟ್‌ನಲ್ಲಿರುವಂತೆ ವಾರ್ನಿಂಗ್

  • ಬಾಹ್ಯಾಕಾಶದಲ್ಲಿ ಮಲ, ಮೂತ್ರ ವಿಸರ್ಜನೆ ಮಾಡಿದರೆ ಏನಾಗುತ್ತೆ?

    ಬಾಹ್ಯಾಕಾಶದಲ್ಲಿ ಮಲ, ಮೂತ್ರ ವಿಸರ್ಜನೆ ಮಾಡಿದರೆ ಏನಾಗುತ್ತೆ?

    ಅಂತರಿಕ್ಷದಲ್ಲಿ ಮಾನವನ ಜೀವನ ಹೇಗೆ ಇರುತ್ತದೆ ಎನ್ನುವ ಕುರಿತು ಯೋಚಿಸಿದಾಗ ಹಲವು ಪ್ರಶ್ನೆಗಳು ಮುಂದೆ ಬರುತ್ತವೆ. ಮಾನವನಿಗೆ ಉಸಿರಾಟ, ಆಹಾರ ಹಾಗೂ ನೀರು ಹೇಗೆ ಮೂಲಭೂತ ಅವಶ್ಯಕತೆಗಳೋ ಹಾಗೆಯೇ ಮಲ, ಮೂತ್ರ ವಿಸರ್ಜನೆಯು ಮಾನವನ ಜೀವನ ಶೈಲಿ ಆರೋಗ್ಯಕರವಾಗಿರಿಸಲು ಸಹಾಯಮಾಡುತ್ತದೆ.

    ಹೌದು, ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೂ ತನ್ನದೇ ಆದ ಜೀವನ ಶೈಲಿ ಹಾಗೂ ದೈನಂದಿನ ಕ್ರಿಯೆಗಳು ಇರುತ್ತವೆ. ಆ ಕ್ರಿಯೆಗಳಲ್ಲಿ ಯಾವುದಾದರೂ ಒಂದು ಏರುಪೇರು ಆದರೂ ಕೂಡ ಜೀವನ ಶೈಲಿಯ ಮೇಲೆ ಪರಿಣಾಮ ಬೀರುತ್ತದೆ. ಹೀಗಿರುವಾಗ ಬಾಹ್ಯಾಕಾಶಕ್ಕೆ ಹೋಗುವ ಗಗನಯಾತ್ರಿಗಳು ಅಂತರಿಕ್ಷದಲ್ಲಿ ಮಲ, ಮೂತ್ರ ವಿಸರ್ಜನೆಯ ನಿರ್ವಹಣೆ ಹೇಗೆ ಮಾಡುತ್ತಾರೆ ಎನ್ನುವುದು ಪ್ರಶ್ನೆಯಾಗಿದೆ. ಬಾಹ್ಯಾಕಾಶದಲ್ಲಿ ಮಾನವನ ತ್ಯಾಜ್ಯ ನಿರ್ವಹಣೆ ಒಂದು ದೊಡ್ಡ ಸವಾಲು. ಗುರುತ್ವಾಕರ್ಷಣೆ ಇಲ್ಲದ ಈ ಪರಿಸರದಲ್ಲಿ ಮಾನವನ ತ್ಯಾಜ್ಯ ಹೇಗೆ ನಿರ್ವಹಿಸಲಾಗುತ್ತದೆ. ಅದಲ್ಲದೆ ಭೂಮಿಯಿಂದ ಬಾಹ್ಯಾಕಾಶಕ್ಕೆ ವಸ್ತುಗಳ ಮರುಪೂರೈಕೆ ತುಂಬಾ ಕಷ್ಟಕರವಾದದ್ದು. ಆದರೆ ಯಾವುದೇ ಪೂರೈಕೆ ಇದ್ದರೂ ಕೂಡ ಅದರ ವೆಚ್ಚ ಕೂಡ ಜಾಸ್ತಿ.

    ಬಾಹ್ಯಾಕಾಶದಲ್ಲಿ ಗುರುತ್ವಾಕರ್ಷಣೆ ಇಲ್ಲದಿರುವ ಕಾರಣ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಸಾಮಾನ್ಯವಾಗಿ ಭೂಮಿಯ ಮೇಲಿರುವ ಪ್ರತಿಯೊಬ್ಬ ಮಾನವ ಹಾಗೂ ಪ್ರಾಣಿಗಳು ನಡೆದುಕೊಂಡು ಜೀವನ ನಡೆಸುತ್ತವೆ. ಇನ್ನೂ ಕೆಲವು ನಡೆದುಕೊಂಡು ಹಾಗೂ ಹಾರಾಟ ನಡೆಸಿ ಜೀವನ ನಡೆಸುತ್ತವೆ. ಹೀಗಿರುವಾಗ ಬಾಹ್ಯಾಕಾಶಕ್ಕೆ ತೆರಳುವ ಗಗನಯಾತ್ರಿಗಳು ತೇಲಾಡಿಕೊಂಡು ಜೀವನ ನಡೆಸುವ ಅಭ್ಯಾಸ ಮಾಡಿಕೊಳ್ಳುತ್ತಾರೆ. ನಡೆಯುತ್ತಿರುವ ಮನುಷ್ಯ ದಿಡೀರನೆ ತೇಲಾಡಿಕೊಂಡು ಬದುಕುವ ಅಭ್ಯಾಸ ಮಾಡಿದಾಗ ದೇಹದ ಮೇಲೆ ಅಥವಾ ದಿನನಿತ್ಯದ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಅಂತರಿಕ್ಷಕ್ಕೆ ತೆರಳಿದ ಪ್ರಾರಂಭದ ದಿನಗಳಲ್ಲಿ ಮನುಷ್ಯನಿಗೆ ವಾಂತಿ, ಮಲ, ಮೂತ್ರ ವಿಸರ್ಜನೆಯಲ್ಲಿ ಪರಿಣಾಮ ಬೀರಬಹುದು. ಹೀಗಾಗಿ ಕೆಲವು ವ್ಯವಸ್ಥೆಗಳನ್ನು ಮಾಡಲಾಗಿರುತ್ತದೆ.

    ವಿಮಾನದಲ್ಲಿ ಪ್ರಯಾಣಿಸುವಾಗ ಅಥವಾ ಇನ್ನಿತರೆ ದೇಶಗಳಲ್ಲಿ ವಾಂತಿ ಮಾಡುವಾಗ ಕೆಲವು ಪ್ಲಾಸ್ಟಿಕ್ ಚೀಲಗಳನ್ನು ಬಳಸುತ್ತಾರೆ. ಅದೇ ರೀತಿ ಬಾಹ್ಯಾಕಾಶದಲ್ಲಿಯೂ ಕೂಡ ವಾಂತಿಗಾಗಿ `ಸ್ಪೇಸ್ ಸಿಕ್ನೆಸ್ ಬ್ಯಾಗ್’ ಗಳನ್ನು ಬಳಸುತ್ತಾರೆ. ಇವುಗಳಿಗೆ ಸೋರಿಕೆಯಾಗದಂತೆ ಬಿಗಿಯಾದ ಮುಚ್ಚುವಿಕೆಯನ್ನು ನೀಡಲಾಗಿರುತ್ತದೆ. ಬಳಿಕ ಇವುಗಳನ್ನು ತ್ಯಾಜ್ಯ ಸಂಗ್ರಹಿಸುವ ಜಾಗದಲ್ಲಿ ಇಡಲಾಗುತ್ತದೆ.

    ಪ್ರಸ್ತುತ ಅಂತಾರಾಷ್ಟ್ರೀಯ ಬಾಹ್ಯಾಕಾಶದಲ್ಲಿ ವಿಶೇಷ ಶೌಚಾಲಯಗಳ ಬಳಕೆ ಮಾಡಲಾಗುತ್ತಿದೆ. ಮಲ, ಮೂತ್ರ ವಿಸರ್ಜನೆಗಾಗಿ ಪ್ರತ್ಯೇಕ ಕೊಠಡಿಯ ರೀತಿಯಲ್ಲಿ ನಿರ್ಮಿಸಲಾಗಿರುತ್ತದೆ. ಇದರಲ್ಲಿ ಚಿಕ್ಕದಾದ ಕಮೋಡ್ ರೀತಿಯಲ್ಲಿರುತ್ತದೆ. ಅದರಲ್ಲಿ ಒಂದು ಚಿಕ್ಕದಾದ ಕೊಳವೆಯನ್ನು ನಿರ್ಮಿಸಿರುತ್ತಾರೆ. ಇನ್ನು ಅದರ ಮೇಲೆ ಕುಳಿತಾಗ ಕಾಲುಗಳಿಡಲು ಎರಡು ಹೋಲ್ಡರ್ ಗಳ ರೀತಿಯಲ್ಲಿ ನಿರ್ಮಿಸಲಾಗಿರುತ್ತದೆ. ತ್ಯಾಜ್ಯವನ್ನು ತೇಲದಂತೆ ಮಾಡಲು ಹಾಗೂ ವಾಸನೆಯನ್ನು ನಿಯಂತ್ರಿಸಲು ಶೌಚಾಲಯದ ಕೊಳವೆಯ ಮೇಲೆ ಬಿಗಿಯಾದ ಮುಚ್ಚಳವನ್ನು ನಿರ್ಮಿಸಲಾಗಿರುತ್ತದೆ. ಇದರ ಪಕ್ಕದಲ್ಲಿ ಎರಡು ಗಾಳಿ ನಿಯಂತ್ರಿತ ಪೈಪ್‌ಗಳನ್ನು ನಿರ್ಮಿಸಲಾಗಿರುತ್ತದೆ. ಇವುಗಳನ್ನು ಬಳಸಿ ಮಲ ಹಾಗೂ ಮೂತ್ರದ ವಾಸನೆ ಬರದಂತೆ ಉಪಯೋಗಿಸಲಾಗುತ್ತದೆ.

    ಪ್ರತಿ ಬಾರಿ ಮಲ,ಮೂತ್ರ ವಿಸರ್ಜನೆಗೆ ಹೋದಾಗ ಈ ಗಾಳಿಯ ಪೈಪನ್ನು ತೆರೆದು ಬಿಡುತ್ತಾರೆ. ಆಗ ಅದು ಗಾಳಿ ಸೂಸಲು ಪ್ರಾರಂಭಿಸುತ್ತದೆ. ಬಳಿಕ ಮಲ ವಿಸರ್ಜನೆಗೆ ಹೋಗುವ ಮುನ್ನ ಸಂಗ್ರಹಿಸಿಟ್ಟಿರುವ ಪ್ಲಾಸ್ಟಿಕ್ ಕವರ್ ನ್ನು ಚಿಕ್ಕ ಕೊಳವೆಯೊಳಗೆ ತೆರದು ಹಾಕುತ್ತಾರೆ. ಬಳಿಕ ತಮ್ಮ ಕೆಲಸ ಮುಗಿದ ನಂತರ ಆ ಪ್ಲಾಸ್ಟಿಕ್ ಅನ್ನು ಚೆನ್ನಾಗಿ ಬಿಗಿಗೊಳಿಸಿ, ಅದೇ ಕೊಳವೆಯೊಳಗೆ ಹಾಕಿ ಪ್ರೆಸ್ ಮಾಡಲಾಗುತ್ತದೆ. ಬಳಿಕ ಅದು ಮಲ ಸಂಗ್ರಹ ಜಾಗಕ್ಕೆ ಹೋಗುತ್ತದೆ. ಇನ್ನು ಮೂತ್ರ ವಿಸರ್ಜನೆಗೆ ಗಾಳಿಯ ಪೈಪ್ ಇರುತ್ತದೆ. ಆ ಪೈಪ್ ಅನ್ನು ತೆರೆದು ಆ ಪೈಪ್ ಮೂಲಕ ಮೂತ್ರ ವಿಸರ್ಜನೆ ಮಾಡಲಾಗುತ್ತದೆ.

    ಮಲ ಹಾಗೂ ಇನ್ಯಾವುದೇ ತ್ಯಾಜ್ಯಗಳನ್ನು ಪ್ರತಿ 30 ರಿಂದ 90  ದಿನಗಳಲ್ಲಿ ಭೂಮಿಗೆ ಕಳುಹಿಸಲಾಗುತ್ತದೆ. ಇನ್ನು ಮೂತ್ರವನ್ನು ಶುದ್ಧೀಕರಿಸಿ ಮರುಬಳಕೆ ಮಾಡಲಾಗುತ್ತದೆ. ಜೊತೆಗೆ ಬೆವರನ್ನು ಕೂಡ ಶುದ್ಧೀಕರಣ ಮಾಡಲಾಗುತ್ತದೆ. ಮೂತ್ರದ ಹಾಗೂ ಮಲದ ವಿಸರ್ಜನೆಯ ನಂತರ ಪ್ರತ್ಯೇಕ ಭಾಗದಲ್ಲಿ ಸಂಗ್ರಹಗೊಳ್ಳುತ್ತದೆ. ಈ ಮೂಲಕ ಮಲವನ್ನು ಭೂಮಿಗೆ ಕಳುಹಿಸಿದರೆ, ಮೂತ್ರವು ಇನ್ನೊಂದು ಭಾಗದಲ್ಲಿ ಶುದ್ಧೀಕರಣಗೊಂಡು ಮರು ಬಳಕೆಗೆ ಸಹಾಯಕವಾಗುತ್ತದೆ.

    ನಾಸಾ ಮಾಹಿತಿಯ ಪ್ರಕಾರ, ಮೂತ್ರ ಶುದ್ಧೀಕರಣದ ಬಳಿಕ ಭೂಮಿಯ ಮೇಲೆ ಸಿಗುವ ನೀರಿಗಿಂತ ಹೆಚ್ಚು ಶುದ್ಧವಾಗಿರುತ್ತದೆ ಎಂದು ತಿಳಿಸಿದೆ. ಇದೇ ರೀತಿ ಮಲ, ವಾಂತಿ ಹಾಗೂ ಇನ್ಯಾವುದೇ ತ್ಯಾಜ್ಯವನ್ನು ಬಿಗಿಯಾಗಿ ಸಂಗ್ರಹಿಸಿದಲಾಗುವ ಪ್ಲಾಸ್ಟಿಕ್ ಗಳಲ್ಲಿ ಸಂಗ್ರಹಿಸಿ, ಬಳಿಕ ಅದನ್ನು ಭೂಮಿಗೆ ತಂದು ಸುಟ್ಟು ಹಾಕಲಾಗುತ್ತದೆ. ಈ ರೀತಿ ಅಂತರಾಷ್ಟ್ರೀಯ ಬಾಹ್ಯಾಕಾಶದಲ್ಲಿ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತದೆ. ಸದ್ಯ ಮಲವನ್ನು ಸುಟ್ಟು ಹಾಕಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮರುಬಳಕೆ ಮಾಡಬೇಕು ಎನ್ನುವ ಉದ್ದೇಶದಿಂದ ಅಭಿವೃದ್ಧಿ ಕಾರ್ಯ ನಡೆಸುತ್ತಿದೆ.

    ಇನ್ನು ಮುಂದಿನ ದಿನಗಳಲ್ಲಿ ಚಂದ್ರ ಅಥವಾ ಮಂಗಳ ಗ್ರಹಕ್ಕೆ ದೀರ್ಘಕಾಲದ ಕಾರ್ಯಾಚರಣೆಗಾಗಿ ನಾಸಾ ತೆರಳಿದರೆ, ಆ ಸಮಯದಲ್ಲಿ ತ್ಯಾಜ್ಯ ವಿಲೇವಾರಿಗೆ ಇನ್ನಿತರ ವಿಧಾನಗಳನ್ನು ಅಭಿವೃದ್ಧಿಪಡಿಸುತ್ತಿದೆ. ಈ ಮೂಲಕ ತ್ಯಾಜ್ಯಗಳನ್ನ ಸಂಪೂರ್ಣವಾಗಿ ಮರುಬಳಕೆ ಮಾಡುವಂತಹ ಗುರಿಯನ್ನು ನಾಸಾ ಹೊಂದಿದ್ದು, ಹೊಸ ಮಾರ್ಗಗಳನ್ನು ಕಂಡುಹಿಡಿಯುವಲ್ಲಿ ತೊಡಗಿಕೊಂಡಿದೆ.

    ನಾಸಾ ಲೂನಾರ್ ಲೂ ಚಾಲೆಂಜ್ ಎಂಬ ಜಾಗತಿಕ ಸ್ಪರ್ಧೆಯ ಮೂಲಕ ಇಂಜಿನಿಯರ್ ಗಳು, ವಿಜ್ಞಾನಿಗಳು ಹಾಗೂ ನವ ಉದ್ಯಮಿಗಳನ್ನು ಬಾಹ್ಯಾಕಾಶದಲ್ಲಿ ಬಳಸಲಾಗುವ ಶೌಚಾಲಯಗಳು ವಿವಿಧ ವಿನ್ಯಾಸಗಳನ್ನು ತಯಾರಿಸಲು ತೊಡಗಿಸಿದೆ. ಈ ಮೂಲಕ ಮಲ, ಮೂತ್ರ ಹಾಗೂ ವಾಂತಿಯನ್ನು ನೀರು, ಶಕ್ತಿ ಹಾಗೂ ಗೊಬ್ಬರದಂತಹ ಉಪಯುಕ್ತ ವಸ್ತುವನ್ನಾಗಿ ಪರಿವರ್ತಿಸಬೇಕು ಎಂಬ ಸವಾಲನ್ನು ನೀಡಿದೆ. ಈ ರೀತಿ ತಯಾರಾದರೆ ಮೂರು ಮಿಲಿಯನ್ ಡಾಲರ್ ( ಸುಮಾರು 25 ರಿಂದ 26 ಕೋಟಿ ರೂ.ಷ್ಟು) ಬಹುಮಾನ ನೀಡಲಿದೆ.

  • ಭೂಮಿಗೆ ಮರಳುವ ಶುಭಾಂಶು ಶುಕ್ಲಾಗೆ ISSನಲ್ಲಿ ಅದ್ಧೂರಿ ಬೀಳ್ಕೊಡುಗೆ – ಸಾರೇ ಜಹಾನ್‌ ಸೇ ಅಚ್ಚಾ ಎಂದ ಶುಕ್ಲಾ

    ಭೂಮಿಗೆ ಮರಳುವ ಶುಭಾಂಶು ಶುಕ್ಲಾಗೆ ISSನಲ್ಲಿ ಅದ್ಧೂರಿ ಬೀಳ್ಕೊಡುಗೆ – ಸಾರೇ ಜಹಾನ್‌ ಸೇ ಅಚ್ಚಾ ಎಂದ ಶುಕ್ಲಾ

    ನವದೆಹಲಿ: ಭೂಮಿಗೆ ವಾಪಸ್‌ ಆಗಲಿರುವ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ (Shubhanshu Shukla) ಸೇರಿ ನಾಲ್ವರು ಗಗನಯಾತ್ರಿಗಳಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು.

    ಇಂದು ಭಾರತವು (India) ಬಾಹ್ಯಾಕಾಶದಿಂದ ಮಹತ್ವಾಕಾಂಕ್ಷೆಯ, ನಿರ್ಭೀತ, ಆತ್ಮವಿಶ್ವಾಸ ಮತ್ತು ಹೆಮ್ಮೆಯಂತೆ ಕಾಣುತ್ತದೆ. ಭಾರತವು ಇನ್ನೂ ಸಾರೇ ಜಹಾನ್ ಸೆ ಅಚ್ಚಾ ಎಂದು ಶುಕ್ಲಾ ತಿಳಿಸಿದ್ದಾರೆ. ಆಕ್ಸಿಯಮ್ -4 (Axiom-4) ಸಿಬ್ಬಂದಿಗೆ ಔಪಚಾರಿಕ ವಿದಾಯ ಭಾನುವಾರ (ಭಾರತೀಯ ಸಮಯ) ಸಂಜೆ 7:20 ರ ಸುಮಾರಿಗೆ ಪ್ರಾರಂಭವಾಯಿತು. ಆಕ್ಸಿಯಮ್ ಸ್ಪೇಸ್‌ನ ಎಕ್ಸ್ ಹ್ಯಾಂಡಲ್ ವಿದಾಯ ಸಮಾರಂಭದ ನೇರಪ್ರಸಾರವನ್ನು ಒದಗಿಸಿದೆ. ಇದನ್ನೂ ಓದಿ: ಗಾಜಾ ಮೇಲೆ ಇಸ್ರೇಲ್‌ ದಾಳಿ – ನೀರು ತರಲು ತೆರಳಿದ್ದ 8 ಮಕ್ಕಳು ಸೇರಿ 43 ಮಂದಿ ಸಾವು

    ವಿಶೇಷ ವಿದಾಯ ಸಮಾರಂಭವು ಆಕ್ಸಿಯಮ್ ಮಿಷನ್ 4 (ಆಕ್ಸ್-4) ಭಾಗವಾಗಿ ಶುಕ್ಲಾ ಅವರ ಐತಿಹಾಸಿಕ ಕಾರ್ಯಾಚರಣೆಯ ಮುಕ್ತಾಯವನ್ನು ಗುರುತಿಸಿತು. ಐಎಸ್‌ಎಸ್‌ಗೆ ಕಾಲಿಟ್ಟ ಮೊದಲ ಭಾರತೀಯ ಎಂಬ ಇತಿಹಾಸ ನಿರ್ಮಿಸಿದ ಶುಕ್ಲಾ, ತಮ್ಮ ಸಹವರ್ತಿ ಆಕ್ಸ್-4ನ ಸದಸ್ಯರಾದ ಕಮಾಂಡರ್ ಪೆಗ್ಗಿ ವಿಟ್ಸನ್ (ಯುಎಸ್ಎ), ಮಿಷನ್ ಸ್ಪೆಷಲಿಸ್ಟ್ ಸಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ (ಪೋಲೆಂಡ್) ಮತ್ತು ಟಿಬೋರ್ ಕಾಪು (ಹಂಗೇರಿ) ಅವರೊಂದಿಗೆ ನಾಸಾದ ಎಕ್ಸ್‌ಪೆಡಿಶನ್ 73 ಸಿಬ್ಬಂದಿಯೊಂದಿಗೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

    2025 ರ ಜೂ.26 ರಂದು ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಆಕ್ಸ್-4 ಕಾರ್ಯಾಚರಣೆಯು, ಆರು ಮಿಲಿಯನ್ ಮೈಲುಗಳಿಗಿಂತ ಹೆಚ್ಚು ಪ್ರಯಾಣಿಸಿದೆ. ಭೂಮಿಯ ಸುತ್ತ 250 ಕ್ಕೂ ಹೆಚ್ಚು ಕಕ್ಷೆಗಳನ್ನು ಪೂರ್ಣಗೊಳಿಸಿದೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಸ್ಥಾಪನೆಯಾಗುತ್ತಿದೆ ತಾಯಿ ಎದೆಹಾಲಿನ ಬ್ಯಾಂಕ್

    ತಮ್ಮ 17 ದಿನಗಳ ವಾಸ್ತವ್ಯದ ಅವಧಿಯಲ್ಲಿ ಗಗನಯಾತ್ರಿಗಳು 60 ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಿದ್ದಾರೆ. ಇದು ಅಂತರರಾಷ್ಟ್ರೀಯ ಸಂಶೋಧನಾ ಪ್ರಯತ್ನಗಳಿಗೆ ಅಮೂಲ್ಯವಾದ ಡೇಟಾವನ್ನು ಕೊಡುಗೆ ನೀಡಿದೆ.

    ಆಕ್ಸ್-4 ಗಗನಯಾತ್ರಿಗಳು ಜುಲೈ 14, ಸೋಮವಾರ ಸಂಜೆ 4:34 ಕ್ಕೆ ಭಾರತೀಯ ಕಾಲಮಾನದ ಪ್ರಕಾರ ಅನ್‌ಡಾಕಿಂಗ್‌ಗೆ ಸಿದ್ಧತೆಗಳನ್ನು ಅಂತಿಮಗೊಳಿಸಲಿದ್ದಾರೆ. ಭೂಮಿಗೆ ಹಿಂತಿರುಗುವ ಮೊದಲು ಪೂರ್ವ ಹಾರಾಟ ತಪಾಸಣೆ ನಡೆಸಲು ಗಗನಯಾತ್ರಿಗಳು ಭಾರತೀಯ ಕಾಲಮಾನ ಮಧ್ಯಾಹ್ನ 2:25 ಕ್ಕೆ ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಹತ್ತಲಿದ್ದಾರೆ.

    ಜುಲೈ 15 ರಂದು ಭಾರತೀಯ ಕಾಲಮಾನ ಮಧ್ಯಾಹ್ನ ಸರಿಸುಮಾರು 3:00 ಗಂಟೆಗೆ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಚಂಡಮಾರುತ ಬೀಸುವ ನಿರೀಕ್ಷೆಯಿದೆ. ಹಿಂದಿರುಗಿದ ನಂತರ, ಶುಕ್ಲಾ ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು ಏಳು ದಿನಗಳ ಪುನರ್ವಸತಿ ಕಾರ್ಯಕ್ರಮಕ್ಕೆ ಒಳಗಾಗಲಿದ್ದಾರೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದೃಢಪಡಿಸಿದೆ. ಪುತ್ರನನ್ನು ಹೆಮ್ಮೆಯಿಂದ ಸ್ವಾಗತಿಸಲು ಕುಟುಂಬದವರು ಕಾತರದಿಂದ ಕಾಯುತ್ತಿದ್ದಾರೆ. ತವರಲ್ಲಿ ಭವ್ಯ ಸ್ವಾಗತ ಕೋರಲು ಯೋಜಿಸಲಾಗಿದೆ.

  • ಅಂತರಿಕ್ಷದಲ್ಲಿ ಮೊಳಕೆಯೊಡೆದ ಮೆಂತ್ಯ, ಹೆಸರುಕಾಳು – ಭಾರತದ ಶುಭಾಂಶು ಶುಕ್ಲಾ ಪ್ರಯೋಗ ಸಕ್ಸಸ್

    ಅಂತರಿಕ್ಷದಲ್ಲಿ ಮೊಳಕೆಯೊಡೆದ ಮೆಂತ್ಯ, ಹೆಸರುಕಾಳು – ಭಾರತದ ಶುಭಾಂಶು ಶುಕ್ಲಾ ಪ್ರಯೋಗ ಸಕ್ಸಸ್

    – ಗಗನಯಾನ ಪ್ರೊಪಲ್ಷನ್ ಸಿಸ್ಟಮ್ ಹಾಟ್ ಟೆಸ್ಟ್ ಯಶಸ್ವಿ

    ನವದೆಹಲಿ: ಆಕ್ಸಿಯಮ್-4 ಮಿಷನ್‌ನಡಿ ವಿವಿಧ ಪ್ರಯೋಗಗಳನ್ನು ನಡೆಸಲು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ತೆರಳಿರುವ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla), ಅಂತರಿಕ್ಷದಲ್ಲಿ ಹೆಸರುಕಾಳು ಹಾಗೂ ಮೆಂತ್ಯ ಬೀಜಗಳನ್ನು ನೆಟ್ಟು ಮೊಳಕೆಯೊಡೆಸುವ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಇದಕ್ಕೆ ಸಂಬಂಧಿತ ಚಿತ್ರಗಳನ್ನು ಶುಭಾಂಶು ಶುಕ್ಲಾ ಹಂಚಿಕೊಂಡಿದ್ದಾರೆ.

    ಬಾಹ್ಯಾಕಾಶ ಕೇಂದ್ರದಲ್ಲಿ ಮೊಳಕೆ ಪ್ರಯೋಗಕ್ಕೆ ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ರವಿಕುಮಾರ್ ಹೊಸಮನಿ ಮತ್ತು ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆಯ ಸುಧೀರ್ ಸಿದ್ಧಾಪುರರೆಡ್ಡಿ ಎಂಬ ಇಬ್ಬರು ವಿಜ್ಞಾನಿಗಳು ನೇತೃತ್ವ ವಹಿಸಿದ್ದಾರೆ. ಶುಕ್ಲಾ ಹಾಗೂ ಇತರ ನಾಲ್ವರು ಗಗನಯಾತ್ರಿಗಳು ಕಕ್ಷೆಯ ಪ್ರಯೋಗಾಲಯದಲ್ಲಿ 12 ದಿನಗಳನ್ನು ಕಳೆದಿದ್ದಾರೆ. ನಾಳೆಯ ಬಳಿಕ ಯಾವಾಗಾ ಬೇಕಾದ್ರೂ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಬರಬಹುದು. ಇದನ್ನೂ ಓದಿ: ವಿಜಯಪುರ | ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

    ಇನ್ನೂ, ಗಗನಯಾನ ಪ್ರೊಪಲ್ಷನ್ ಸಿಸ್ಟಮ್‌ನ ಹಾಟ್ ಟೆಸ್ಟ್ ಯಶಸ್ವಿಯಾಗಿದೆ. ಈ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ತಿಳಿಸಿದೆ. ಜುಲೈ 3ರಂದು ಮಹೇಂದ್ರಗಿರಿಯಲ್ಲಿರುವ ಪ್ರೊಪಲ್ಷನ್ ಕಾಂಪ್ಲೆಕ್ಸ್‌ನಲ್ಲಿ ಮಾನವಸಹಿತ ಬಾಹ್ಯಾಕಾಶ ಕಾರ್ಯಕ್ರಮ `ಗಗನಯಾನದ’ `ಸರ್ವೀಸ್ ಮಾಡ್ಯೂಲ್ ಪ್ರೊಪಲ್ಷನ್ ಸಿಸ್ಟಮ್’ನ ಮತ್ತೆ ಎರಡು ಹಾಟ್ ಟೆಸ್ಟ್‌ಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಕ್ರಮವಾಗಿ 30 ಹಾಗೂ 10 ಸೆಕೆಂಡುಗಳ ಕಾಲ ನಡೆದ ಈ ಅಲ್ಪಾವಧಿಯ ಪರೀಕ್ಷೆಗಳು, ಸಂರಚನೆಯ ಕ್ಷಮತೆಯನ್ನು ಹೊಂದಿದ್ದವು ಎಂದು ಇಸ್ರೋ ತಿಳಿಸಿದೆ. ಈ ಪರೀಕ್ಷೆಗಳ ಯಶಸ್ಸಿನೊಂದಿಗೆ ಸದ್ಯದಲ್ಲೇ ಪೂರ್ಣ ಪ್ರಮಾಣದ ಹಾಟ್ ಟೆಸ್ಟ್ ನಡೆಸುವುದಾಗಿ ಇಸ್ರೋ ತಿಳಿಸಿದೆ. ಇದನ್ನೂ ಓದಿ: Rajasthan | ಐಎಎಫ್ ಜಾಗ್ವಾರ್ ಯುದ್ಧ ವಿಮಾನ ಪತನ – ಇಬ್ಬರು ಪೈಲೆಟ್ ದುರ್ಮರಣ

  • ಅಂತರಿಕ್ಷ ನಿಲ್ದಾಣದಲ್ಲಿ ಶುಭಾಂಶು ಶುಕ್ಲಾ – ಭಾರತದಿಂದ ‘ಸಪ್ತ ಸಂಶೋಧನೆ’

    ಅಂತರಿಕ್ಷ ನಿಲ್ದಾಣದಲ್ಲಿ ಶುಭಾಂಶು ಶುಕ್ಲಾ – ಭಾರತದಿಂದ ‘ಸಪ್ತ ಸಂಶೋಧನೆ’

    ನವದೆಹಲಿ: ಬಹುನಿರೀಕ್ಷಿತ ಆಕ್ಸಿಯಮ್-4 ಮಿಷನ್‌ನ (Axiom-4 Mission) ಸ್ಪೇಸ್‌ಎಕ್ಸ್ ಫಾಲ್ಕನ್-9 ರಾಕೆಟ್ ಸುದೀರ್ಘ ಪ್ರಯಾಣದ ಬಳಿಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ತಲುಪಿದೆ. ಭಾರತೀಯ ಕಾಲಮಾನ ಸಂಜೆ 5:50ರ ಹೊತ್ತಿಗೆ ನಾಲ್ವರು ಗಗನಯಾತ್ರಿಗಳು ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸಿದ ಮೊದಲ ಭಾರತೀಯನೆಂಬ ಹೆಗ್ಗಳಿಕೆಗೆ ಶುಭಾಂಶು ಶುಕ್ಲಾ (Shubhanshu Shukla) ಪಾತ್ರವಾಗಿದ್ದಾರೆ.

    ಅಂತರಿಕ್ಷ ತಲುಪಿದ ಗಗನಯಾತ್ರಿಗಳಿಗೆ ವೆಲ್‌ಕಮ್ ಡ್ರಿಂಕ್ ಕೊಟ್ಟು ಬರ ಮಾಡಿಕೊಳ್ಳಲಾಯಿತು. ನಾಲ್ವರು ಗಗನಯಾತ್ರಿಗಳು 14 ದಿನ ಅಂತರಿಕ್ಷದಲ್ಲಿ ಉಳಿಯಲಿದ್ದಾರೆ. ಈ ಅವಧಿಯಲ್ಲಿ ವೈಜ್ಞಾನಿಕ ಸಂಶೋಧನೆ, ತಂತ್ರಜ್ಞಾನ ಪ್ರದರ್ಶನ, ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಿದೆ. ಈ ತಂಡವು 31 ದೇಶಗಳನ್ನು ಒಳಗೊಂಡ 60ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲಿದೆ. ಇದನ್ನೂ ಓದಿ: ಇಲ್ಲಿಂದ ಭೂಮಿಯನ್ನು ನೋಡುವುದೇ ಸೌಭಾಗ್ಯ – ಬಾಹ್ಯಾಕಾಶ ನಿಲ್ದಾಣದಿಂದ ಶುಭಾಂಶು ಮೊದಲ ಸಂದೇಶ!

    ಇವುಗಳಲ್ಲಿ ಜೈವಿಕ ವಿಜ್ಞಾನ, ಭೂಮಿಯ ವೀಕ್ಷಣೆ, ಮತ್ತು ವಸ್ತು ವಿಜ್ಞಾನ ಸೇರಿವೆ. ಭಾರತ ಇಲ್ಲಿ ಏಳು ಸಂಶೋಧನೆಗಳನ್ನು ಮಾಡಲಿದ್ದು ಇದು ಭಾರತಕ್ಕೆ ಅತ್ಯಂತ ನಿರ್ಣಾಯಕವಾಗಿದೆ. ಇದನ್ನೂ ಓದಿ: ಐತಿಹಾಸಿಕ ಕ್ಷಣಕ್ಕೆ ಭಾರತ ಸಾಕ್ಷಿ – ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಸೇರಿದ ಮೊದಲ ಭಾರತೀಯ ಶುಕ್ಲಾ

    ಆಕ್ಸಿಯಮ್-4 ಭಾರತದ ಮೈಕ್ರೋಗ್ರಾವಿಟಿ ಪ್ರಯೋಗಗಳು
    1.ತಿನ್ನಬಹುದಾದ ಸೂಕ್ಷ್ಮಪಾಚಿ ಅಧ್ಯಯನ (ಐಸಿಜಿಇಬಿ& ಬ್ರಿಕ್-ನವದೆಹಲಿ)
    *ತಿನ್ನಬಹುದಾದ ಸೂಕ್ಷ್ಮಪಾಚಿ ಜಾತಿಗಳ ಬೆಳವಣಿಗೆ ಅಧ್ಯಯನ
    *ಆಹಾರ ಉತ್ಪಾದನೆ, ಇಂಗಾಲ, ಆಮ್ಲಜನಕ ಉತ್ಪಾದನೆ ಸಾಮರ್ಥ್ಯಗಳ ಪರೀಕ್ಷೆ

    2.ಮೊಳಕೆ ಕಾಳುಗಳ ಅಧ್ಯಯನ (ಯುಎಸ್, ಐಐಟಿ ಧಾರವಾಡ)
    *ಮೊಳಕೆ ಕಾಳುಗಳ ಬೆಳವಣಿಗೆ & ಪೋಷಕಾಂಶಗಳ ಅಧ್ಯಯನ
    *ಚಂದ್ರ, ಇತರೆ ಗ್ರಹಗಳಲ್ಲಿ ಬೆಳೆ ಬೆಳೆಯುವ ಸಾಧ್ಯತೆಯ ಅನ್ವೇಷಣೆ

    3.ಸ್ನಾಯುಗಳ ಅಧ್ಯಯನ (ಬ್ರಿಕ್,ಇನ್‌ಸ್ಟೆಮ್ ಬೆಂಗಳೂರು)
    *ಸ್ನಾಯುಗಳ ಅಧ್ಯಯನ & ಸ್ನಾಯು ನಷ್ಟ ಪರಿಹಾರಗಳ ಅಭಿವೃದ್ಧಿ
    *ದೀರ್ಘಕಾಲೀನ ಬಾಹ್ಯಾಕಾಶ ಪ್ರಯಾಣದಲ್ಲಿ ಸಂಭವಿಸುವ ಸ್ನಾಯು ಕ್ಷಯ ಅಧ್ಯಯನ

    4.ಟಾರ್ಡಿಗ್ರೇಡ್ಸ್ – ನೀರಿನ ಕರಡಿಗಳು (ಐಐಎಸ್‌ಸಿ ಬೆಂಗಳೂರು)
    *ನೀರಿನ ಕರಡಿಗಳ ಜೀವನ ಮತ್ತು ಪ್ರಯೋಜನ ಸಾಮರ್ಥ್ಯ ಅಧ್ಯಯನ
    *ಮಾನವರ ಬಾಹ್ಯಾಕಾಶ ಉಳಿವಿಗೆ ತಂತ್ರಗಳ ಅಭಿವೃದ್ಧಿಗೆ ಸಹಾಯ

    5.ಎಲೆಕ್ಟ್ರಾನಿಕ್ ಡಿಸ್‌ಪ್ಲೇ (ಐಐಎಸ್‌ಸಿ, ಬೆಂಗಳೂರು)
    *ಮಾನವ-ಯಂತ್ರ ಸಂವಾದ & ಎಲೆಕ್ಟಾçನಿಕ್ ಡಿಸ್‌ಪ್ಲೇಗಳ ಪರಿಣಾಮ ಅಧ್ಯಯನ
    *ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸುವಾಗ ಎದುರಿಸುವ ಸವಾಲುಗಳ ಅನ್ವೇಷಣೆ

    6.ಸಯಾನೋಬ್ಯಾಕ್ಟೀರಿಯಾ – ನೀಲಿ, ಹಸಿರು ಪಾಚಿ (ಐಸಿಜಿಇಬಿ, ನವದೆಹಲಿ)
    *ಸಯಾನೋಬ್ಯಾಕ್ಟೀರಿಯಾ ಬೆಳವಣಿಗೆ & ನೈಟ್ರೋಜನ ಮೂಲದೊಂದಿಗೆ ಸಂವಾದ
    *ಬಾಹ್ಯಾಕಾಶದಲ್ಲಿ ನೈಟ್ರೋಜನ ಚಕ್ರೀಕರಣದ ಸಾಮರ್ಥ್ಯವನ್ನು ಅನ್ವೇಷಿಸುತ್ತದೆ

    7.ಆಹಾರ ಬೀಜಗಳು (ಐಐಎಸ್‌ಟಿ&ಕೆಎಯು, ತಿರುವನಂತಪುರ)
    *ಮೆಣಸು, ಕಾಳು, ಟೊಮೋಟೋ, ಬೀಜಗಳ ಬೆಳವಣಿಗೆ ಅಧ್ಯಯನ
    *ಬಾಹ್ಯಾಕಾಶ ಕೃಷಿಗೆ ಮಾರ್ಗ ತೋರಿಸುವ ಅಧ್ಯಯನ

  • ತಾಂತ್ರಿಕ ದೋಷ – ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ

    ತಾಂತ್ರಿಕ ದೋಷ – ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ

    ನವದೆಹಲಿ: ಇಂದು (ಬುಧವಾರ) ಅಂತರ ರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ (ISS) ತೆರಳಬೇಕಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಸೇರಿ ನಾಲ್ವರ ಯಾನ ಮತ್ತೆ ಮುಂದೂಡಿಕೆಯಾಗಿದೆ.

    ಫಾಲ್ಕನ್ 9 ಉಡಾವಣಾ ವಾಹನದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆ ಬಾಹ್ಯಾಕಾಶ ಯಾನ ಮುಂದೂಡಿಕೆಯಾಗಿದೆ. ಉಡಾವಣೆಗೂ ಮುನ್ನ ಉಡಾವಣಾ ಪ್ಯಾಡ್‌ನಲ್ಲಿ ಏಳು ಸೆಕೆಂಡುಗಳ ಬಿಸಿ ಪರೀಕ್ಷೆಯನ್ನು ನಡೆಸಲಾಯಿತು. ಪರೀಕ್ಷೆಯ ಸಮಯದಲ್ಲಿ ಪ್ರೊಪಲ್ಷನ್ ಬೇಯಲ್ಲಿ LOX ಸೋರಿಕೆ ಪತ್ತೆಯಾಗಿದೆ. ಇಸ್ರೋ ತಂಡ ಆಕ್ಸಿಯಮ್ ಮತ್ತು ಸ್ಪೇಸ್ ಎಕ್ಸ್‌ನ ತಜ್ಞರೊಂದಿಗೆ ಈ ವಿಷಯದ ಕುರಿತು ನಡೆಸಿದ ಚರ್ಚೆಯ ಆಧಾರದ ಮೇಲೆ ಸೋರಿಕೆಯನ್ನು ಸರಿಪಡಿಸಲು ಮತ್ತು ಉಡಾವಣೆಗೆ ತೆರವುಗೊಳಿಸುವ ಮೊದಲು ಅಗತ್ಯ ಮೌಲ್ಯೀಕರಣ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನಲೆ ಇಂದು ನಡೆಬೇಕಿದ್ದ ಉಡಾವಣೆ ವಿಳಂಬವಾಗಿದೆ. ಮುಂದಿನ ಉಡಾವಣೆ ದಿನಾಂಕವನ್ನು ಇನ್ನಷ್ಟೇ ಘೋಷಿಸಬೇಕಿದೆ. ಇದನ್ನೂ ಓದಿ: Bengaluru | ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಭೀಕರ ಹತ್ಯೆ

    ಏನಿದು ಕಾರ್ಯಾಚರಣೆ?
    ಸ್ಪೇಸ್ ಎಕ್ಸ್‌ಗೆ ಸೇರಿದ ಫಾಲ್ಕಂ 9 ರಾಕೆಟ್ ಈ ಗಗನನೌಕೆಯನ್ನು ಆಗಸಕ್ಕೆ ಹೊತ್ತಯ್ಯಲಿದೆ. ಆಕ್ಸಿಯಮ್ ಮಿಷನ್-4 (Axiom-4), 28 ಗಂಟೆ ಕಾಲ ಆಗಸದಲ್ಲಿ ಪ್ರಯಾಣಿಸಲಿದ್ದು, ನಂತರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಲಿದೆ. ಈ ಗಗನನೌಕೆಯಲ್ಲಿ ಶುಭಾಂಶು ಶುಕ್ಲಾ, ಅಮೆರಿಕಾ, ಹಂಗೇರಿ ಹಾಗೂ ಪೋಲೆಂಡ್‌ನ ನಾಲ್ವರು ಗಗನಯಾತ್ರಿಗಳು ಅಂತಾರಾಷ್ಟ್ರೀಯ ಬ್ಯಾಹಾಕಾಶಕ್ಕೆ ಪಯಣ ಬೆಳೆಸಲಿದ್ದಾರೆ. ಮಂಗಳವಾರ ನಡೆಯಬೇಕಿದ್ದ ಈ ಉಪಗ್ರಹ ಉಡಾವಣೆ ಹವಮಾನ ವೈಪರೀತ್ಯದಿಂದ ಬುಧವಾರಕ್ಕೆ ಮುಂದೂಡಲಾಗಿತ್ತು. ಇದೀಗ ತಾಂತ್ರಿಕ ಸಮಸ್ಯೆಯಿಂದ ಮತ್ತೆ ಯಾನ ಮುಂದೂಡಿಕೆಯಾಗಿದೆ. 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಪ್ರಯೋಗಗಳನ್ನು ನಡೆಸಲಿದ್ದಾರೆ. ಪ್ರಮುಖವಾಗಿ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಬಗ್ಗೆ ಅಧ್ಯಯನ, ಸಂಶೋಧನೆ ನಡೆಯಲಿದೆ. ಇದನ್ನೂ ಓದಿ: ಜೆಎನ್‌1 ಬೆನ್ನಲ್ಲೇ ಕೊರೊನಾ ಹೊಸ ರೂಪಾಂತರಿ XFG ಸೋಂಕು ಪತ್ತೆ – ಎಷ್ಟು ಅಪಾಯಕಾರಿ?