Tag: it attack

  • ‘ಲೋಕ’ ಚುನಾವಣೆ ಹೊತ್ತಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಐಟಿ ಶಾಕ್

    ‘ಲೋಕ’ ಚುನಾವಣೆ ಹೊತ್ತಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಐಟಿ ಶಾಕ್

    ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಕುರುಡು ಕಾಂಚಾಣ ಹರಿದಾಡುತ್ತಿದೆ ಎಂಬ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಕ್ರಮಕ್ಕೆ ಬ್ರೇಕ್ ಹಾಕಲು ಬಳ್ಳಾರಿಯಲ್ಲಿ ಐಟಿ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ನಗರದ ನಕ್ಷತ್ರ ಹೋಟೆಲ್ ನಲ್ಲಿ ತಂಗಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ರೂಮ್‍ಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.

    ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಪುತ್ರನ ಆಪ್ತರು ಹಾಗೂ ಕಾಂಗ್ರೆಸ್ ಮುಖಂಡರು ವಾಸವಾಗಿದ್ದ ರೂಮ್‍ಗಳ ಮೇಲೆ ದಾಳಿ ನಡೆಸಿದ ಐಟಿ ಹಾಗೂ ಚುನಾವಣಾಧಿಕಾರಿಗಳು ಕೋಣೆಗಳನ್ನ ತಡಕಾಡಿ ಕೆಲ ದಾಖಲೆ ಸೇರಿದಂತೆ ಮಹತ್ವದ ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ. 6 ಐಟಿ ಅಧಿಕಾರಿಗಳ ನೇತೃತ್ವದ ತಂಡ ಸೇರಿದಂತೆ ಚುನಾವಣಾಧಿಕಾರಿಗಳು ಬಿಜೆಪಿ ಮುಖಂಡರ ರೂಂಗಳ ಮೇಲೆ ದಾಳಿ ನಡೆಸಿದ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಹೋಟೆಲ್ ಪ್ರವೇಶಿಸಿ ಪ್ರಶ್ನೆ ಮಾಡಲು ಮುಂದಾದರು.

    ಈ ವೇಳೆ ಐಟಿ ಅಧಿಕಾರಿಗಳು ಹೋಟೆಲ್ ಒಳಗೆ ಯಾರನ್ನೂ ಬಿಡದ ಪರಿಣಾಮ ದೇವೇಂದ್ರಪ್ಪ ವಾಪಾಸ್ ತೆರಳಿದರು. ಕಾಂಗ್ರೆಸ್ ನ ಮಾಜಿ ಶಾಸಕ, ಗಣಿ ಧಣಿ ಅನಿಲ್ ಲಾಡ್ ರೂಂನಲ್ಲಿದ್ದ ವೇಳೆ ಐಟಿ ಅಧಿಕಾರಿಗಳು ದಾಳಿ ನಡೆಸಿ ತಪಸಣೆ ನಡೆಸಲು ಮುಂದಾದರು. ಆದರೆ ಐಟಿ ಅಧಿಕಾರಿಗಳು ಕೋಣೆ ಪ್ರವೇಶಿಸುತ್ತಿದ್ದಂತೆ ಅನಿಲ್ ಲಾಡ್ ಬಾತ್ ರೂಂ ಸೇರಿಕೊಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಅನುಮಾನಗೊಂಡ ಐಟಿ ಅಧಿಕಾರಿಗಳು ಬಾತ್ ರೂಮ್ ಸಹ ಪರಿಶೀಲನೆ ನಡೆಸಿದರು ಎಂದು ಹೇಳಲಾಗುತ್ತಿದೆ.

    ಹೋಟೆಲ್ ನಿಂದ ಹೊರ ಬಂದು ಮಾಧ್ಯಮಗಳ ಜೊತೆ ಮಾತನಾಡಿದ ಅನಿಲ್ ಲಾಡ್, ನಾನು ಈಗ ತಾನೆ ಬೆಂಗಳೂರಿನಿಂದ ಕಾರ್ಯಕರ್ತರ ಸಭೆಗಾಗಿ ಬಂದಿದ್ದೇನೆ. ಐಟಿ ಅಧಿಕಾರಿಗಳು ಬಂದಾಗ ನಾನು ಬಾತ್ ರೂಮ್ ನಲ್ಲಿದ್ದೆ, ನಮಗೆ ಹಣ ಇದೆ ಅಂತ ಮಾಹಿತಿ ಬಂದಿದೆ ಅಂತ ಅಧಿಕಾರಿಗಳು ಕೋಣೆಯನ್ನು ಪರಿಶೀಲನೆ ನಡೆಸಿದರು. ಐಟಿ ಅಧಿಕಾರಿಗಳು ನನಗೆ ನೋಟಿಸ್ ನೀಡಿ ವಿಚಾರಣೆಗೆ ಬರಬೇಕು ಎಂದು ತಿಳಿಸಿದ್ದಾರೆ. ದಾಳಿಯಲ್ಲಿ ಬೆಂಗಳೂರು ಮತ್ತು ಬಳ್ಳಾರಿಯ ಐಟಿ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ಹೇಳಿದರು.

  • ಸಿಎಂ ಸಂಬಂಧಿ ಲಾಕರಿನಲ್ಲಿ ಕಂತೆ ಕಂತೆ ಹಣ – ಕೋಟಿಗಟ್ಟಲೇ ಹಣ ಕಂಡು ಐಟಿ ಅಧಿಕಾರಿಗಳು ಶಾಕ್

    ಸಿಎಂ ಸಂಬಂಧಿ ಲಾಕರಿನಲ್ಲಿ ಕಂತೆ ಕಂತೆ ಹಣ – ಕೋಟಿಗಟ್ಟಲೇ ಹಣ ಕಂಡು ಐಟಿ ಅಧಿಕಾರಿಗಳು ಶಾಕ್

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರ ಸಂಬಂಧಿ ಪರಮೇಶ್ ಅವರ ಲಾಕರ್ ನಲ್ಲಿ ಸುಮಾರು 6.50 ಕೋಟಿ ರೂ. ಹಣ ಪತ್ತೆಯಾಗಿದ್ದು, ಈ ಹಣ ಚುನಾವಣೆಗಾಗಿ ಹಂಚಿಕೆ ಮಾಡಲು ಸಂಗ್ರಹಿಸಿಡಲಾಗಿತ್ತಾ ಎನ್ನುವ ಪ್ರಶ್ನೆ ಎದ್ದಿದೆ.

    ಮಾರ್ಚ್ 28 ರಂದು ಶಿವಮೊಗ್ಗದ ಪರಮೇಶ್ ಅವರ ಮನೆ, ಶೋ ರೂಂ ಮೇಲೆ ಐಟಿ ದಾಳಿ ನಡೆಸಲಾಗಿತ್ತು. ಸತತ 20 ಗಂಟೆಗಳ ಸಮಯ 30 ಅಧಿಕಾರಿಗಳ ತಂಡ ಮನೆ ಶೋ ರೂಂನಲ್ಲಿ ಪರಿಶೀಲನೆ ನಡೆಸಿತ್ತು. ಈ ವೇಳೆ ಪತ್ತೆಯಾಗಿದ್ದ ಬ್ಯಾಂಕ್ ಲಾಕರಿನ ವಿವರಣೆ ಪಡೆದು ಐಟಿ ಅಧಿಕಾರಿಗಳು ತನಿಖೆ ನಡೆಸಿದ್ದರು.

    ಗುರುವಾರ ಐಟಿ ಅಧಿಕಾರಿಗಳು ರಾಷ್ಟ್ರಿಕೃತ ಬ್ಯಾಂಕಿಗೆ ತೆರಳಿ ಲಾಕರ್ ತೆರೆದ ಸಂದರ್ಭದಲ್ಲಿ ಕವರ್ ಗಳಲ್ಲಿ ತುಂಬಿದ್ದ ಹಣ ಪತ್ತೆಯಾಗಿದೆ. ಭಾರೀ ಹಣವನ್ನು ಕಂಡು ಐಟಿ ಆಧಿಕಾರಿಗಳು ಶಾಕ್ ಆಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಬ್ಯಾಂಕ್ ಲಾಕರ್ ಪಡೆದಿರುವ ಬಗ್ಗೆ ದಾಖಲೆ ಸಿಕ್ಕ ಬಳಿಕ ಅಧಿಕಾರಿಗಳ ಲಾಕರ್ ಕೀ ಬಗ್ಗೆ ಪ್ರಶ್ನೆ ಮಾಡಿದ್ದರು. ಈ ವೇಳೆ ಕೀ ಕಳೆದು ಹೋಗಿದ್ದಾಗಿ ಪರಮೇಶ್ವರ್ ತಿಳಿಸಿದ್ದರು ಎನ್ನಲಾಗಿದೆ. ಸದ್ಯ ಹಣವನ್ನು ಜಪ್ತಿ ಮಾಡಿರುವ ಐಟಿ ಇಲಾಖೆ ಸೂಕ್ತ ದಾಖಲೆ ನೀಡುವಂತೆ ನೋಟಿಸ್ ನೀಡಿದೆ.

    ಐಟಿ ದಾಳಿ: ರಾಜ್ಯ ಸರ್ಕಾರ ಕಾಮಗಾರಿಗಳು ಪೂರ್ಣಗೊಳ್ಳದೆಯೇ ಹಣ ಬಿಡುಗಡೆ ಮಾಡಿ ಚುನಾವಣೆಗೆ ಹಣ ಸಂಗ್ರಹ ಮಾಡಿದೆ ಎಂಬ ಆರೋಪ ಹೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಕೆಲ ಗುತ್ತಿಗೆದಾರರ ಮನೆ, ಕಚೇರಿ, ಕಟ್ಟಡಗಳ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಎಲ್ಲ ಗುತ್ತಿಗೆದಾರರ ಮನೆ ಮೇಲೆ ದಾಳಿ ನಡೆದಾಗ 10 ಕೋಟಿ ರೂ. ನಗದು ವಶಕ್ಕೆ ಪಡೆದಿತ್ತು. ಆ ಬಳಿಕ ಹೆಚ್ಚಿನ ವಿಚಾರಣೆ ವೇಳೆ ನಡೆಸಲಾಗಿದೆ.

  • ಮೋದಿ ವಿರುದ್ಧ ಪ್ರತಿಭಟನೆಗಿಳಿದ ದೋಸ್ತಿ

    ಮೋದಿ ವಿರುದ್ಧ ಪ್ರತಿಭಟನೆಗಿಳಿದ ದೋಸ್ತಿ

    – ‘ಜೋಡೆತ್ತು’ಗಳಿಗೆ ‘ಟಗರು’ ಸಾಥ್
    – ಮಾನಸಿಕ ಖಿನ್ನತೆಗೆ ಒಳಗಾದವರ ಮೇಲೆಯೇ ಯಾಕೆ ಐಟಿ ದಾಳಿ?
    – ಸಿಆರ್‌ಪಿಎಫ್ ನೆರವು ಪಡೆದಿದ್ದು ಯಾಕೆ- ಎಚ್‍ಡಿಕೆ ಪ್ರಶ್ನೆ

    ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಪ್ರೇರಿತ ಐಟಿ ದಾಳಿ ನಡೆಯುತ್ತಿದೆ ಎಂದು ಆರೋಪಿಸಿ ಮೈತ್ರಿ ಸರ್ಕಾರದ ನಾಯಕರು ಸೇರಿದಂತೆ ನೂರಾರು ಕಾರ್ಯಕರ್ತರು ನಗರದ ಆದಾಯ ತೆರಿಗೆ ಇಲಾಖೆ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿದರು.

    ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ, ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಬೆಂಬಲಕ್ಕೆ ನಿಂತ ಮುಖಂಡರ ಮೇಲೆ ಐಟಿ ದಾಳಿ ಮಾಡಲಾಗಿದೆ. ಕೇಂದ್ರದಲ್ಲಿ ಬಿಜೆಪಿ ಶಾಶ್ವತವಾಗಿ ಅಧಿಕಾರದಲ್ಲಿ ಇರುವುದಿಲ್ಲ. ನೀವು ಯಾಕೆ ಅವರ ಕೈಗೊಂಬೆ ರೀತಿ ಆಡುತ್ತಿರುವಿರಿ? ಚುನಾವಣೆ ಸಮಯದಲ್ಲಿ ಈ ರೀತಿ ಐಟಿ ದಾಳಿ ಮಾಡುವುದು ಸರಿಯಲ್ಲ. ರಾಜ್ಯದಲ್ಲಿ ಕೇವಲ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರನ್ನೇ ಟಾರ್ಗೆಟ್ ಮಾಡುತ್ತಿರುವಿರಿ. ಎಂದು ಐಟಿ ಅಧಿಕಾರಿಗಳಿಗೆ ಪ್ರಶ್ನಿಸಿದರು.

    ಬಿಜೆಪಿಗೆ ಸೋಲಿನ ಭಯವಿದೆ. ಹೀಗಾಗಿ ಕೇಂದ್ರ ಸರ್ಕಾರವು ಐಟಿ ಅಧಿಕಾರಿಗಳ ಮೂಲಕ ರಾಜ್ಯ ಕಾಂಗ್ರೆಸ್, ಜೆಡಿಎಸ್ ನಾಯಕರ ಮನೆಯ ಮೇಲೆ ದಾಳಿ ಮಾಡುತ್ತಿದೆ. ಆದರೆ ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಮಾಜಿ ಸಿಎಂ ಗುಡುಗಿದರು. ಈ ವೇಳೆ ಪ್ರತಿಭಟನಾನಿರತ ಕೆಲವರು ಮೋದಿ ಚೋರ್, ಚೌಕಿದಾರ್ ಜೋರ್ ಹೈ ಎಂದು ಕೂಗಿದರು.

    ಡಿಸಿಎಂ ಜಿ.ಪರಮೇಶ್ವರ್ ಮಾತನಾಡಿ, ಬಿಜೆಪಿಯವರು ದೇಶದ ಒಕ್ಕೂಟದ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೇಂದ್ರ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಿಜೆಪಿಯು ಐಟಿ, ಸಿಬಿಐ ಅಧಿಕಾರಿಗಳ ಮೇಲೆ ಹಿಡಿತ ಸಾಧಿಸಿದ್ದು, ರಾಜಕೀಯ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

    ಸಿಎಂ ಕುಮಾರಸ್ವಾಮಿ ಅವರು ಮಾತನಾಡಿ, ಐಟಿ ದಾಳಿಯ ಬಗ್ಗೆ ನಮ್ಮ ವಿರೋಧವಿಲ್ಲ. ಕೆಲವೇ ಕೆಲವು ಪಕ್ಷದ ಮುಖಂಡರು, ಕಾರ್ಯಕರ್ತರ ಮನೆಯ ಮೇಲೆ ದಾಳಿ ಮಾಡುತ್ತಿರುವುದು ಸರಿಯಲ್ಲ. ವಿರೋಧ ಪಕ್ಷದ ಕಾರ್ಯಕರ್ತರಲ್ಲಿ ಭಯ ಮೂಡಿಸಲು ಬಿಜೆಪಿಯವರು ಇಂತಹ ತಂತ್ರ ಅನುಸರಿಸುತ್ತಿದ್ದಾರೆ ಎಂದು ದೂರಿದರು.

    ಐಟಿ ಇಲಾಖೆಯ ಅಧಿಕಾರಿಯೊಬ್ಬರು ಮುಂಬೈನಲ್ಲಿ ಅಕ್ರಮ ಆಸ್ತಿ ಹೊಂದಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ಸಂಪಾದನೆ ಮಾಡಿರುವ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಐಟಿ ಅಧಿಕಾರಿಗಳು ಬಿಜೆಪಿಯ ಏಜೆಂಟ್ ಆಗಿ ಕೆಲಸ ಮಾಡುವುದನ್ನು ಬಿಡಬೇಕು ಎಂದು ತಿಳಿಸಿದರು.

    ಸಾಮಾನ್ಯವಾಗಿ ಐಟಿ ಅಧಿಕಾರಿಗಳು ಆಯಾ ರಾಜ್ಯಗಳ ಪೊಲೀಸರ ನೆರವು ಪಡೆದು ದಾಳಿ ಮಾಡುತ್ತಾರೆ. ಆದರೆ ಇಂದು ಸಿಆರ್‌ಪಿಎಫ್ ಯೋಧರ ನೆರವು ಪಡೆದು ದಾಳಿ ಮಾಡಿದ್ದೀರಿ. ಯಾವ ಉದ್ದೇಶಕ್ಕಾಗಿ ಹೀಗೆ ಮಾಡಿದ್ದು ಎನ್ನುವುದಕ್ಕೆ ಉತ್ತರ ನೀಡಬೇಕು ಎಂದು ಸಿಎಂ ಕುಮಾರಸ್ವಾಮಿ ಆಗ್ರಹಿಸಿದರು.

    ಬೃಹತ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ಬಿಜೆಪಿಯ ಒತ್ತಡದ ಮೇಲೆ ಕೇಂದ್ರ ಸಂಸ್ಥೆಯ ಅಧಿಕಾರಿಗಳು ಕೆಲಸ ಮಾಡಬಾರದು. ಬಿಜೆಪಿ ಕೇಂದ್ರದಲ್ಲಿ ಶಾಶ್ವತವಾಗಿ ಇರುವುದಿಲ್ಲ. ಭಾರತದ ಇತಿಹಾಸದಲ್ಲಿಯೇ ಐಟಿ ಅಧಿಕಾರಿಗಳು ರ್ನಾಟನಕದಲ್ಲಿ ಎರಡು ಬಾರಿ ಸಿಆರ್‌ಪಿಎಫ್ ನೆರವು ಪಡೆದು ದಾಳಿ ಮಾಡಿದ್ದಾರೆ. ಈ ಹಿಂದೆ ನನ್ನ ಮನೆಯ ಮೇಲೆ ದಾಳಿ ಮಾಡಿದ್ದಾಗ ಸಿಆರ್‍ಪಿಎಫ್ ಯೋಧರನ್ನು ಕರೆತಂದಿದ್ದರು. ಇಂದು ಕೂಡ ಅದೇ ರೀತಿ ನಡೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.

  • ಐಟಿ ದಾಳಿ ನಡೆಯಲಿದೆ ಸಿಎಂ ನಿಖರವಾಗಿ ಊಹಿಸಿದ್ದು ಹೇಗೆ: ರಹಸ್ಯ ರಿವೀಲ್ ಆಯ್ತು

    ಐಟಿ ದಾಳಿ ನಡೆಯಲಿದೆ ಸಿಎಂ ನಿಖರವಾಗಿ ಊಹಿಸಿದ್ದು ಹೇಗೆ: ರಹಸ್ಯ ರಿವೀಲ್ ಆಯ್ತು

    ಬೆಂಗಳೂರು: ಜೆಡಿಎಸ್ ನಾಯಕರು, ಆಪ್ತರ ಮನೆ ಮೇಲೆ ಗುರುವಾರ ಐಟಿ ದಾಳಿ ನಡೆಯಲಿದೆ ಮೊದಲೇ ಸಿಎಂ ಕುಮಾರಸ್ವಾಮಿ ನಿಖರವಾಗಿ ಹೇಳಿದ್ದು ಹೇಗೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.

    ಸಾಧಾರಣವಾಗಿ ಸರ್ಕಾರಿ ಅಧಿಕಾರಿಗಳ ದಾಳಿ ವಿಚಾರ ಗೌಪ್ಯವಾಗಿರುತ್ತದೆ. ಅದರಲ್ಲೂ ಕೇಂದ್ರ ಸರ್ಕಾರ ನಿಯಂತ್ರಣದಲ್ಲಿರುವ ಸಂಸ್ಥೆಗಳು ನಡೆಸುವ ದಾಳಿ ಗೌಪ್ಯವಾಗಿದ್ದು ರಾಜ್ಯ ಸರ್ಕಾರಕ್ಕೆ ತಿಳಿಸಿ ದಾಳಿ ನಡೆಸುವುದಿಲ್ಲ. ಆದರೆ ಸಿಎಂ ಮೊದಲೇ ದಾಳಿ ನಡೆಯಲಿದೆ ಎಂದು ಭವಿಷ್ಯ ನುಡಿದಾಗ ತೆರಿಗೆ ಇಲಾಖೆಯಲ್ಲೇ ಯಾರೋ ಸಿಎಂಗೆ ಮಾಹಿತಿ ನೀಡಿದ್ದಾರಾ ಎನ್ನುವ ಪ್ರಶ್ನೆ ಎದ್ದಿತ್ತು. ಆದರೆ ಈಗ ವಿಮಾನ ನಿಲ್ದಾಣದಲ್ಲಿರುವ ಚಾಲಕರು ಸಿಎಂಗೆ ಮಾಹಿತಿ ನೀಡಿದ್ದಾರೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

    ವಿಮಾನ ನಿಲ್ದಾಣದಲ್ಲಿರುವ ಕಾರು ಚಾಲಕರ ಪೈಕಿ ಯಾರೊ ಒಬ್ಬರು ಸಿಎಂ ಆಪ್ತರಿಗೆ ಕರೆ ಮಾಡಿ, ಸಿಆರ್‌ಪಿಎಫ್‌ನ 2 ತುಕಡಿಗಳು ಬೆಂಗಳೂರಿಗೆ ಬಂದಿವೆ. ಅವರು ಇಲ್ಲಿ 100 ಟ್ಯಾಕ್ಸಿಗಳನ್ನು ಒಟ್ಟಿಗೆ ಬಾಡಿಗೆಗೆ ತೆಗೆದುಕೊಳ್ಳುತ್ತಿದ್ದಾರೆ. ನಮಗೆ ಸೂಕ್ತ ಮಾಹಿತಿ ಲಭ್ಯವಾಗುತ್ತಿಲ್ಲ. ನೀವೇ ಚೆಕ್ ಮಾಡಿಕೊಳ್ಳಿ ಎಂದು ತಿಳಿಸಿದ್ದರಂತೆ.

    ಈ ಮಾಹಿತಿ ಮಾಹಿತಿಯಿಂದ ತಕ್ಷಣವೇ ಎಚ್ಚೆತ್ತುಕೊಂಡ ಕುಮಾರಸ್ವಾಮಿ ಅವರು, ಗುಪ್ತಚರ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ಫುಲ್ ಕ್ಲಾಸ್ ತೆಗೆದುಕೊಂಡಿದ್ದರು. ವಿಮಾನ ನಿಲ್ದಾಣದ ಬಳಿ ಈ ರೀತಿಯ ಬೆಳವಣಿಗೆ ನಡೆಯುತ್ತಿದೆ. ನೀವು ಏನ್ ಮಾಡುತ್ತಿದ್ದೀರಿ ಪರಿಶೀಲನೆ ಮಾಡಿ ಕೂಡಲೇ ಮಾಹಿತಿ ನೀಡಿ ಎಂದು ತಾಕೀತು ಮಾಡಿದ್ದರು.

    ಸಿಎಂ ಸೂಚನೆಯಿಂದ ಎಚ್ಚೆತ್ತುಕೊಂಡು ಗುಪ್ತಚರ ಇಲಾಖೆಯು ಪರಿಶೀಲನೆ ಆರಂಭಿಸಿತ್ತು. ಈ ವೇಳೆ ಗುಪ್ತಚರ ಇಲಾಖೆಗೆ ಐಟಿ ದಾಳಿಯ ಮಾಹಿತಿ ಲಭ್ಯವಾಗಿದೆ. ಅಷ್ಟೇ ಅಲ್ಲದೆ ವಿವಿಧ ನಾಯಕರ ಮನೆಯ ಮೇಲೆ ದಾಳಿ ಮಾಡಲು ಐಟಿ ಅಧಿಕಾರಿಗಳು 200 ಕ್ಯಾಬ್ ಬುಕ್ ಮಾಡಿರುವುದು ತಿಳಿದಿದೆ. ತಕ್ಷಣವೇ ಸಿಎಂಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

    ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದು ಮಂಡ್ಯದಲ್ಲಿ ಬುಧವಾರ ಸುದ್ದಿಗೋಷ್ಠಿದ ಮಾತನಾಡಿದ್ದ ಸಿಎಂ, ಐಟಿ ಅಧಿಕಾರಿಗಳಿಗೆ ಜೆಡಿಎಸ್, ಕಾಂಗ್ರೆಸ್ ನಾಯಕರೇ ಟಾರ್ಗೆಟ್ ಆಗಿದ್ದು, ಒಬ್ಬರಿಗೆ ಅನುಕೂಲ ಮಾಡಿಕೊಳ್ಳಲು ದಾಳಿಗೆ ಸಿದ್ಧತೆ ನಡೆಸಲಾಗಿದೆ. ಬಿಜೆಪಿಯ ಆಪ್ತ ಮೂಲಗಳಿಂದ ನನಗೆ ಫೋನ್ ಕರೆ ಬಂದಿದ್ದು, ಕಾಂಗ್ರೆಸ್, ಜೆಡಿಎಸ್ ಅಭಿಮಾನಿಗಳನ್ನು ಗುರಿ ಮಾಡಿ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿದೆ. ಪಕ್ಷ ಬೆಂಬಲಿಗರ ಮೇಲೆ ದಾಳಿ ನಡೆಸಿ ಎಷ್ಟು ಹಣ ತೆಗೆದುಕೊಂಡು ಹೋಗುತ್ತಾರೆ ನೋಡುತ್ತೇನೆ. ಆದರೆ ನಮ್ಮ ಮೇಲೆ ದಬ್ಬಾಳಿಕೆ ನಡೆಸಿದರೆ ನಾನು ಕೂಡ ಪಶ್ಚಿಮ ಬಂಗಾಳ ಸಿಎಂರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

    ಐಟಿ ದಾಳಿ ನಡೆಸುವ ಅಧಿಕಾರಿಯ ಹೆಸರನ್ನು ಪ್ರಸ್ತಾಪ ಮಾಡಿದ ಅವರು, ಐಟಿ ಇಲಾಖೆಯ ಬಾಲಕೃಷ್ಣ (ಐಆರ್‍ಎಸ್ ಅಧಿಕಾರಿ) ಎಂಬವರ ನೇತೃತ್ವದಲ್ಲಿ 250ಕ್ಕೂ ಹೆಚ್ಚು ಅಧಿಕಾರಿಗಳನ್ನು ಕರೆಸಿಕೊಂಡು ದಾಳಿ ಮಾಡಲು ಸಿದ್ಧತೆ ನಡೆಸಿದ್ದಾರೆ. ಐಟಿ ದಾಳಿಯಲ್ಲಿ ರಾಜ್ಯ ಸರ್ಕಾರದ ಪೊಲೀಸ್ ಇಲಾಖೆಯ ನೆರವು ತೆಗೆದುಕೊಳ್ಳುತ್ತಾರೆ. ಆದರೆ ಅದನ್ನು ಬಿಟ್ಟು ಕೇಂದ್ರದ ಸಿಆರ್ ಪಿಎಫ್ ಕರೆಸಿಕೊಂಡು ದಾಳಿ ಮಾಡಲು ಹೊರಟಿರುವುದು ಬಹಳ ದಿನ ನಡೆಯಲ್ಲ. ಕೇಂದ್ರ ಸರ್ಕಾರದ ಬಿಜೆಪಿ ಪರ ಬಾಲಕೃಷ್ಣ ಅವರು ಬೆಳಗ್ಗೆ 5 ಗಂಟೆಗೆ ದಾಳಿ ಮಾಡಲು ಸಿದ್ಧರಾಗಿದ್ದು, ಇಂತಹ ದಾಳಿಗಳು ನಡೆದರೆ ಪ್ರಾಯಶ್ಚಿತ್ತ ಪಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

  • ‘ಲೋಕಸಭೆ ಚುನಾವಣೆ ಮುಂದೂಡಲು ಐಟಿ ದಾಳಿ’

    ‘ಲೋಕಸಭೆ ಚುನಾವಣೆ ಮುಂದೂಡಲು ಐಟಿ ದಾಳಿ’

    – ಐಟಿಯನ್ನು ಮುಂದಿಟ್ಟುಕೊಂಡು ಬಿಜೆಪಿಯಿಂದ ಪ್ಲಾನ್
    – ಶಾಂತಿಯಿಂದ ಇರುವಂತೆ ಕಾರ್ಯಕರ್ತರಲ್ಲಿ ಜೆಡಿಎಸ್ ಮನವಿ

    ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲಿಷ್ಠವಾಗಿಲ್ಲ. ಹೀಗಾಗಿ ಈ ಭಾಗದಲ್ಲಿ ಚುನಾವಣೆ ಮುಂದೂಡಲು ಬಿಜೆಪಿ ಐಟಿ ದಾಳಿ ನಡೆಸಿದೆ ಎನ್ನುವ ಗಂಭೀರ ಆರೋಪ ಈಗ ಕೇಳಿ ಬಂದಿದೆ.

    ಜೆಡಿಎಸ್ ಹಿರಿಯ ನಾಯಕರ ಸೂಚನೆ ಹಿನ್ನೆಲೆಯಲ್ಲಿ ಸ್ಥಳೀಯ ನಾಯಕರು ಕಾರ್ಯಕರ್ತರ ಜೊತೆ ಸಂಯಮದಿಂದ ಇರಿ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಸೋಲಿಸಲು ಮೋದಿ ಸರ್ಕಾರ ಷಡ್ಯಂತ್ರ ರೂಪಿಸಿದೆ. ಹೀಗಾಗಿ ಈ ವಿಚಾರವನ್ನು ಮುಂದಿಟ್ಟುಕೊಂಡು ಕಾನೂನು ಉಲ್ಲಂಘನೆ ಮಾಡಬೇಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.

    ಜೆಡಿಎಸ್ ಆರೋಪ ಏನು?
    ಮಂಡ್ಯ, ಮೈಸೂರು, ಮತ್ತು ಹಾಸನದಲ್ಲಿ ಈ ಬಾರಿ ಗೆಲ್ಲುವುದಿಲ್ಲ ಎನ್ನುವುದು ಬಿಜೆಪಿಗೆ ಗೊತ್ತಾಗಿದೆ. ಇದರಿಂದ ಸೋಲಿನ ಭೀತಿಗೆ ತುತ್ತಾಗಿ ಬಿಜೆಪಿ ಐಟಿ ರೇಡ್ ಮಾಡಿಸಿದೆ. ಈಗ ಐಟಿ ದಾಳಿ ನಡೆದ ಕೂಡಲೇ ಜೆಡಿಎಸ್ ಕಾರ್ಯಕರ್ತರು ದಂಗೆ ಏಳುತ್ತಾರೆ. ಆಗ ಗಲಾಟೆ ನಡೆಯುತ್ತೆ. ಅದನ್ನು ತೋರಿಸಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಂಬಿಸಲು ಬಿಜೆಪಿ ಪ್ಲಾನ್ ಮಾಡಿದ್ದು, ನಂತರ ಇದನ್ನೆ ನೆಪವಾಗಿಟ್ಟುಕೊಂಡು ಲೋಕಸಭಾ ಚುನಾವಣೆಯನ್ನು ಮುಂದೂಡುವ ತಂತ್ರ ಮಾಡಿದೆ.

    ಈಗಾಗಲೇ ಬಿಜೆಪಿ, ಮಂಡ್ಯದಲ್ಲಿ ಸಿಎಂ ಅಧಿಕಾರವನ್ನು ದುರ್ಬಳಕೆ ಮಾಡುತ್ತಿದ್ದಾರೆ. ಸುಮಲತಾ, ಯಶ್, ದರ್ಶನ್ ಅವರ ಮೇಲೆ ಜೆಡಿಎಸ್ಸಿನಿಂದ ಬೆದರಿಕೆ ಬಂದಿದೆ. ಹೀಗಾಗಿ ಕೇಂದ್ರ ಸರ್ಕಾರ ಇವರಿಗೆ ಭದ್ರತೆ ನೀಡಬೇಕು. ಚುನಾವಣಾ ಆಯೋಗ ಸಹ ಮಂಡ್ಯದಲ್ಲಿ ವಿಶೇಷ ಅಧಿಕಾರಿಗಳನ್ನು ನೇಮಿಸಬೇಕು ಎಂದು ಮನವಿ ಮಾಡಿಕೊಂಡಿದೆ. ಒಂದು ವೇಳೆ ಈ ದಾಳಿಯನ್ನು ಖಂಡಿಸಿ ಕಾರ್ಯಕರ್ತರು ದಂಗೆ ಎದ್ದು ಕಾನೂನು ಸುವ್ಯವಸ್ಥೆ ಹಾಳಾದರೆ ಬಿಜೆಪಿ ಇದನ್ನೇ ನೆಪವಾಗಿಟ್ಟುಕೊಂಡು ದೂರು ನೀಡಿದರೆ ಚುನಾವಣೆ ಮುಂದೂಡುವ ಸಾಧ್ಯತೆಯಿದೆ. ಹೀಗಾಗಿ ಈ ರೀತಿಯ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ ಎಂದು ಕಾರ್ಯಕರ್ತರಲ್ಲಿ ಜೆಡಿಎಸ್ ಮನವಿ ಮಾಡಿಕೊಳ್ಳುತ್ತಿದೆ.

  • ಐಟಿ ದಾಳಿ ನಡೆಸಲು 300 ಕ್ಯಾಬ್ ರೆಡಿಯಾಗಿವೆ: ಸಿಎಂ

    ಐಟಿ ದಾಳಿ ನಡೆಸಲು 300 ಕ್ಯಾಬ್ ರೆಡಿಯಾಗಿವೆ: ಸಿಎಂ

    – ಜೆಡಿಎಸ್, ಕಾಂಗ್ರೆಸ್ ಅಭಿಮಾನಿಗಳೇ ಐಟಿ ದಾಳಿಗೆ ಟಾರ್ಗೆಟ್
    – ಸಿಆರ್‌ಪಿಎಫ್ ಕರೆದುಕೊಂಡು ಬಂದು ದಾಳಿ

    ಮಂಡ್ಯ: ಕೇಂದ್ರದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಜೆಡಿಎಸ್, ಕಾಂಗ್ರೆಸ್ ಅಭಿಮಾನಿಗಳೇ ಟಾರ್ಗೆಟ್ ಆಗಿದ್ದು, ಒಬ್ಬರಿಗೆ ಅನುಕೂಲ ಮಾಡಿಕೊಳ್ಳಲು ದಾಳಿಗೆ ಸಿದ್ಧತೆ ನಡೆಸಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.

    ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಆಪ್ತ ಮೂಲಗಳಿಂದ ನನಗೆ ಫೋನ್ ಕರೆ ಬಂದಿದ್ದು, ಕಾಂಗ್ರೆಸ್, ಜೆಡಿಎಸ್ ಅಭಿಮಾನಿಗಳನ್ನು ಗುರಿ ಮಾಡಿ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿದೆ. ಪಕ್ಷ ಬೆಂಬಲಿಗರ ಮೇಲೆ ದಾಳಿ ನಡೆಸಿ ಎಷ್ಟು ಹಣ ತೆಗೆದುಕೊಂಡು ಹೋಗುತ್ತಾರೆ ನೋಡುತ್ತೇನೆ. ಆದರೆ ನಮ್ಮ ಮೇಲೆ ದಬ್ಬಾಳಿಕೆ ನಡೆಸಿದರೆ ನಾನು ಕೂಡ ಪಶ್ಚಿಮ ಬಂಗಾಳ ಸಿಎಂರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಐಟಿ ದಾಳಿ ನಡೆಸುವ ಅಧಿಕಾರಿಯ ಹೆಸರನ್ನು ಪ್ರಸ್ತಾಪ ಮಾಡಿದ ಅವರು, ಐಟಿ ಇಲಾಖೆಯ ಬಾಲಕೃಷ್ಣ (ಐಆರ್ ಎಸ್ ಅಧಿಕಾರಿ) ಎಂಬವರ ನೇತೃತ್ವದಲ್ಲಿ 250ಕ್ಕೂ ಹೆಚ್ಚು ಅಧಿಕಾರಿಗಳನ್ನು ಕರೆಸಿಕೊಂಡು ದಾಳಿ ಮಾಡಲು ಸಿದ್ಧತೆ ನಡೆಸಿದ್ದಾರೆ. ಐಟಿ ದಾಳಿಯಲ್ಲಿ ರಾಜ್ಯ ಸರ್ಕಾರದ ಪೊಲೀಸ್ ಇಲಾಖೆಯ ನೆರವು ತೆಗೆದುಕೊಳ್ಳುತ್ತಾರೆ. ಆದರೆ ಅದನ್ನು ಬಿಟ್ಟು ಕೇಂದ್ರದ ಸಿಆರ್ ಪಿಎಫ್ ಕರೆಸಿಕೊಂಡು ದಾಳಿ ಮಾಡಲು ಹೊರಟಿರುವುದು ಬಹಳ ದಿನ ನಡೆಯಲ್ಲ. ಕೇಂದ್ರ ಸರ್ಕಾರದ ಬಿಜೆಪಿ ಪರ ಬಾಲಕೃಷ್ಣ ಅವರು ಬೆಳಗ್ಗೆ 5 ಗಂಟೆಗೆ ದಾಳಿ ಮಾಡಲು ಸಿದ್ಧರಾಗಿದ್ದು, ಇಂತಹ ದಾಳಿಗಳು ನಡೆದರೆ ಪ್ರಾಯಶ್ಚಿತ್ತ ಪಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ರಾಜ್ಯದ ಮುಖ್ಯಮಂತ್ರಿಯಾಗಿ ಒಂದೇ ಒಂದು ಪ್ರಕರಣದಲ್ಲಿ ನಾನು ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ. ಶಿವಮೊಗ್ಗದ ಹೊಸನಗರದ ಬಳಿ ಎರಡು ಕೋಟಿ ರೂ. ಹಣ ಜಪ್ತಿ ಮಾಡಿದ್ದರು. ಆದರೆ ಈ ಬಗ್ಗೆ ಮಾಹಿತಿ ನೀಡಿಲ್ಲ. ಇವರ ನಡವಳಿಕೆ ನಾವು ಹೇಳಿದಂತೆ ನಡೆಯುತ್ತದೆ ಎಂಬಂತಾಗಿದೆ. ಕೇಂದ್ರ ಸರ್ಕಾರದ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ, ಇವರು ಎಚ್ಚರಿಕೆಯಿಂದ ನಡೆದುಕೊಳ್ಳುವುದು ಸೂಕ್ತ ಎಂದರು. ಈಗಾಗಲೇ ಬೇರೆ ಬೇರೆ ರಾಜ್ಯಗಳಿಂದ ಕರೆಯಿಸಿಕೊಂಡಿದ್ದು, ಈಗಾಗಲೇ ಅಧಿಕಾರಿಗಳನ್ನು ಕರೆತರಲು ಬೆಂಗಳೂರು ವಿಮಾನ ನಿಲ್ದಾಣದಲ್ಲಿ 300 ಕ್ಯಾಬ್‍ಗಳು ಸಿದ್ಧವಾಗಿದೆ. ಇಷ್ಟು ಕೀಳು ಮಟ್ಟದಲ್ಲಿ ರಾಜಕೀಯ ಮಾಡಿ ನಮ್ಮನ್ನು ಹೆದರಿಸುತ್ತಿದ್ದಾರೆ. ನಾವು ಯಾವುದೇ ದರೋಡೆ ಕೆಲಸ ಮಾಡಿಲ್ಲ. ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇವೆ. ಚುನಾವಣೆಯ ಸಮಯದಲ್ಲಿ ಐಟಿಯವರು ಆಡುವ ಆಟ ನಮಗೆ ಗೊತ್ತಿದೆ. ನಾನು ಸಂಪೂರ್ಣ ಅಧಿಕಾರ ನಮ್ಮ ಎಸಿಬಿ ಅಧಿಕಾರಿಗಳಿಗೆ ಕೊಟ್ಟಿದ್ದೇನೆ ಎಂದು ತಿಳಿಸಿದರು.

  • ಟಾರ್ಗೆಟ್ ಮಾಡಿಲ್ಲ, ಐಟಿ ದಾಳಿಗೆ ಕಾರಣ ಇರುತ್ತೆ: ನಟ ಸುದೀಪ್

    ಟಾರ್ಗೆಟ್ ಮಾಡಿಲ್ಲ, ಐಟಿ ದಾಳಿಗೆ ಕಾರಣ ಇರುತ್ತೆ: ನಟ ಸುದೀಪ್

    ಬೆಂಗಳೂರು: ಸ್ಯಾಂಡಲ್‍ವುಡ್‍ನ ನಟ, ನಿರ್ಮಾಪಕರ ಮೇಲೆ ನಡೆದ ಐಟಿ ದಾಳಿಯಾದ ಬಳಿಕ ಇದೇ ಮೊದಲ ಬಾರಿಗೆ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ಯಾರೂ ಟಾರ್ಗೆಟ್ ಮಾಡಿಲ್ಲ ಅವರು ಮಾಡಿರೋದನ್ನು ಪ್ರಶಂಸೆ ಮಾಡಬೇಕು ಎಂದು ಹೇಳಿದ್ದಾರೆ.

    ನಿರ್ದೇಶಕರ ಸಂಘದ ಉದ್ಘಾಟನೆಗೆ ತಡವಾಗಿ ಆಗಮಿಸಿದ ಸುದೀಪ್, ಕಾರ್ಯಕ್ರಮ ಇದೆ ಎನ್ನುವುದನ್ನೇ ಮರೆತುಬಿಟ್ಟು ಊರಿಗೆ ಹೊರಟಿದ್ದೆ. ಎರಡು ದಿನಗಳಿಂದ ತುಂಬಾ ಬ್ಯುಸಿ ಇದ್ದೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ಬಳಿಕ ಕಾರ್ಯಕ್ರಮಕ್ಕೆ ಬರುವುದಾಗಿ ಮಾತು ಕೊಟ್ಟಿದ್ದೆ ಆದರೆ ತಡವಾಗಿದೆ. ಮರೆತಿದ್ದಕ್ಕೆ ಕ್ಷಮೆಯಿರಲಿ ಎಂದರು.

    ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಹಿಂದೆ ಏನೋ ಕಾರಣ ಇರುತ್ತದೆ. ರೈಡ್ ಮಾಡಿದ ತಕ್ಷಣ ಅವರನ್ನು ವಿಲನ್ ಗಳಾಗಿ ನೋಡಲು ಆಗುವುದಿಲ್ಲ. ಆದರೆ ಸದ್ಯ ಊಹಾಪೋಹಗಳು ಹೆಚ್ಚಾಗಿದ್ದು, ನನಗೆ ಇದು ಮೊದಲ ಅನುಭವ.  ನಾವು ಸರಿಯಾಗಿದ್ದರೆ ಭಯ ಪಡುವ ಅವಶ್ಯಕತೆಯೇ ಇಲ್ಲ ಎಂದು ತಿಳಿಸಿದರು.

    ಇದೇ ವೇಳೆ ನಿರ್ದೇಶಕ ಸಂಘದ ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡಲು ಸಿದ್ಧ ಎಂದು ತಿಳಿಸಿದ ಸುದೀಪ್, ಚಿತ್ರರಂಗದಲ್ಲಿ ಯಾವುದೇ ಸಿನಿಮಾ ಗೆದ್ದರು ಆದರ ಕ್ರೆಡಿಟ್ ಸಿಗಬೇಕಾಗಿದ್ದು ನಿರ್ದೇಶಕರಿಗೆ. ಆದರೆ, ನಿರ್ದೇಶಕರಿಗೆ ಆದರ ಕ್ರೆಡಿಟ್ ಸಿಗುವುದಿಲ್ಲ. ನನಗೂ ನಿರ್ದೇಶಕರ ಸಂಘದ ಕಾರ್ಡ್ ಇರುವುದು ಹೆಮ್ಮೆ ಎನಿಸಿದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶ್ರೀರಾಮನಿಗಿಂತ ಆಂಜನೇಯನನ್ನು ಹೆಚ್ಚು ಜನ ಪೂಜಿಸ್ತಾರೆ: ಸಚಿವ ಡಿಕೆಶಿ

    ಶ್ರೀರಾಮನಿಗಿಂತ ಆಂಜನೇಯನನ್ನು ಹೆಚ್ಚು ಜನ ಪೂಜಿಸ್ತಾರೆ: ಸಚಿವ ಡಿಕೆಶಿ

    ಬೆಂಗಳೂರು: ಹೆಚ್ಚು ವಿವಾದ ಮಾಡಿಕೊಂಡ ವ್ಯಕ್ತಿಗಳು, ಧೈರ್ಯ ಇದ್ದವರು ಮಾತ್ರ ನಾಯಕರಾಗುತ್ತಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಇಲ್ಲಿನ ಅರಮನೆ ಮೈದಾನದಲ್ಲಿ ರಾಷ್ಟ್ರೀಯ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀನಿವಾಸ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸೇರಿದ್ದ ಯುವ ಕಾರ್ಯಕರ್ತರಿಗೆ ತಮ್ಮ ಮಾತುಗಳನ್ನು ಉದಾಹರಣೆ ಕೊಡುತ್ತ ಮಾತನಾಡಿದ ಅವರು, ನಾಯಕರಾದವರು ಹೆಚ್ಚು ವಿವಾದ ಮಾಡಿಕೊಳ್ಳುತ್ತಾರೆ. ಇನ್ನು ರಾಮ-ಆಂಜನೇಯರ ಉದಾಹರಣೆ ಕೊಟ್ಟ ಅವರು, ಸೇವೆ, ಭಕ್ತಿಗೆ ಹೆಸರಾದ ಆಂಜನೇಯನನ್ನು ಹೆಚ್ಚು ಜನರು ಪೂಜಿಸುತ್ತಾರೆ. ಅಲ್ಲದೇ ರಾಮನ ದೇವಸ್ಥಾನಕ್ಕಿಂತ ಆಂಜನೇಯನ ದೇವಸ್ಥಾನಗಳೇ ಹೆಚ್ಚಾಗಿವೆ ಎಂದು ಹೇಳಿದರು. ಇದನ್ನು ಓದಿ: ಕಾಂಗ್ರೆಸ್ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಆರೋಪಿ ನಲಪಾಡ್ ಮಿಂಚಿಂಗ್!

    ಬಂಡೆ ಕಲ್ಲು ಹೆಚ್ಚು ಪೆಟ್ಟು ತಿಂದು ಸುಂದರ ಶಿಲೆಯಾಗುತ್ತದೆ. ಹಾಗೆಯೇ ಪರಿಶ್ರಮದಿಂದ ಕೆಲಸ ಮಾಡಿದರೆ ಪ್ರತಿಫಲ ಸಿಕ್ಕೇ ಸಿಗುತ್ತದೆ. ಕಾಂಗ್ರೆಸ್ ಕಚೇರಿಯಲ್ಲಿ ಕಸ ಗುಡಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಗುರುತಿಸಿ ನಮ್ಮ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯಸಭಾ ಸದಸ್ಯರಾಗಿ ಮಾಡಿದ್ದಾರೆ. ಹೀಗೆ ಪಕ್ಷದ ಸೇವೆಯಲ್ಲಿ ಶ್ರದ್ಧೆವಹಿಸುವ ಪ್ರತಿಯೊಬ್ಬರಿಗೂ ಪಕ್ಷ ಗೌರವ ನೀಡುತ್ತದೆ ಎಂದು ಹೇಳಿದರು.

  • ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಕೆಶಿ ಪರ ಸಿಎಂ ಎಚ್‍ಡಿಕೆ ಬ್ಯಾಟಿಂಗ್

    ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಕೆಶಿ ಪರ ಸಿಎಂ ಎಚ್‍ಡಿಕೆ ಬ್ಯಾಟಿಂಗ್

    ಬೆಂಗಳೂರು: ಆದಾಯ ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಕಾನೂನು ಹೋರಾಟ ನಡೆಸುತ್ತಿದ್ದು ಅವರಿಗೆ ನಮ್ಮ ಬೆಂಬಲವಿದೆ. ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

    ಗೃಹ ಕಚೇರಿ ಕೃಷ್ಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ, ಬಿಜೆಪಿ ನಾಯಕರು ಹಾಗೂ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ ಎನ್ನುವ ಕಾರಣಕ್ಕೆ ರಾಜೀನಾಮೆ ನೀಡುವ ಮಾತೇ ಇಲ್ಲ. ಬಿಜೆಪಿಯ ಅನೇಕ ನಾಯಕರ ಮೇಲೆ ಆರೋಪಗಳಿವೆ, ಹಾಗಂತ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

    ಇತ್ತ ಸಚಿವ ಡಿ.ಕೆ.ಶಿವಕುಮಾರ್ ಅವರ ಮೇಲಿನ ಐಟಿ ದಾಳಿ ಕುರಿತು ಸಿಎಂ ಕುಮಾರಸ್ವಾಮಿ ತಲೆಕೆಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ಇದ್ದರೂ, ಮಾರ್ಗ ಬದಲಿಸಿ ದೇವೇಗೌಡರನ್ನು ಭೇಟಿ ಮಾಡಲು ತೆರಳಿದ್ದರು ಎಂದು ಪಕ್ಷದ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    https://youtu.be/TENmbOhG14k

  • ಬಿಎಸ್‍ವೈ ದುಡ್ಡು ಇಟ್ಟಿರೋ ಕರಂದ್ಲಾಜೆ ನಿವಾಸದ ಮೇಲೆ ಐಟಿ ದಾಳಿಯಾಗಬೇಕು: ಬೇಳೂರು ಗೋಪಾಲಕೃಷ್ಣ

    ಬಿಎಸ್‍ವೈ ದುಡ್ಡು ಇಟ್ಟಿರೋ ಕರಂದ್ಲಾಜೆ ನಿವಾಸದ ಮೇಲೆ ಐಟಿ ದಾಳಿಯಾಗಬೇಕು: ಬೇಳೂರು ಗೋಪಾಲಕೃಷ್ಣ

    ಶಿವಮೊಗ್ಗ: ಸಂಸದೆ ಶೋಭಾ ಕರಂದ್ಲಾಜೆ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯವರು ದಾಳಿ ನಡೆಸಬೇಕೆಂದು ಮಾಜಿ ಬಿಜೆಪಿ ಶಾಸಕ, ಹಾಲಿ ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದ್ದಾರೆ.

    ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಸಮಯದಲ್ಲಿ ಟಿಕೆಟ್ ನೀಡಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅನೇಕ ಅಭ್ಯರ್ಥಿಗಳಿಂದ ಹಣ ಪಡೆದಿದ್ದಾರೆ. ಅಲ್ಲದೇ ಆ ಹಣವನ್ನು ಸಂಸದೆ ಶೋಭಾ ಕರಂದ್ಲಾಜೆ ಮನೆಯಲ್ಲಿ ಬಚ್ಚಿಟ್ಟಿದ್ದಾರೆ. ಹೀಗಾಗಿ ಶೋಭಾ ಅವರ ಮನೆ ಮೇಲೆ ಐಟಿ ದಾಳಿಯಾಬೇಕು ಎಂದು ಒತ್ತಾಯಿಸಿದರು.

    ಟಿಕೆಟ್ ಹಂಚಲು ಎ, ಬಿ ಹಾಗೂ ಸಿ ಅಂತಾ ಸೀಟ್ ಎಂದು ವಿಂಗಡನೆ ಮಾಡಿದ್ದರು. ಎ ಸೀಟ್‍ಗೆ 3 ಕೋಟಿ ರೂ., ಬಿ ಸೀಟ್‍ಗೆ 5 ಕೋಟಿ ರೂ. ಹಾಗೂ ಸಿ ಸೀಟ್‍ಗೆ 8 ಕೋಟಿ ರೂ. ಪಡೆದಿದ್ದಾರೆ. ಅಭ್ಯರ್ಥಿಗಳಿಂದ ಪಡೆದ ಹಣವನ್ನು ಶೋಭಾ ಕರಂದ್ಲಾಜೆ ಅವರ ಮನೆಯಲ್ಲಿ ಇಟ್ಟಿದ್ದಾರೆ. ಐಟಿ ಅಧಿಕಾರಿಗಳು ದಾಳಿ ನಡೆಸಿದರೆ ಸತ್ಯ ಬೆಳಕಿಗೆ ಬರಲಿದೆ ಎಂದು ತಿಳಿಸಿದರು.

    ಸದ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರನ್ನೇ ಐಟಿ ಹಾಗೂ ಇಡಿ ಅಧಿಕಾರಿಗಳು ಸುತ್ತುವರಿಯುತ್ತಿದ್ದಾರೆ. ಇದರಿಂದ ಬಿಜೆಪಿ ನಾಯಕರು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ. ಒಂದು ಬಾರಿ ಸಂಸದೆ ಶೋಭಾ ಕರಂದ್ಲಾಜೆ ಮನೆ ಮೇಲೆ ದಾಳಿ ಮಾಡಲಿ. ಆಗ ಯಾವ ರಾಜಕೀಯ ನಾಯಕರ ಬಳಿ ಹೆಚ್ಚು ಹಣವಿದೆ ಎನ್ನುವುದು ಗೊತ್ತಾಗುತ್ತದೆ ಎಂದರು.

    ನನಗೆ ಮೋಸ ಮಾಡಿದ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯದ ಜನತೆಯೂ ಮೋಸ ಮಾಡಿದ್ದಾರೆ. ಹೀಗಾಗಿ ನನ್ನ ಹರಕೆ ಈಡೇರಿದೆ ಎನ್ನುವ ತೃಪ್ತಿಯಿದೆ. ರಾಜ್ಯ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಪ್ರಚಾರಕ್ಕೆ ಬಾರದೇ ಹೋಗಿದ್ದರೆ ಬಿಜೆಪಿ 70 ಸ್ಥಾನ ಕೂಡಾ ಪಡೆಯುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಪವಿತ್ರ ಮೈತ್ರಿ ಎನ್ನುತ್ತಿದ್ದಾರೆ. ಹಾಗಾದರೆ ಈ ಹಿಂದೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕಾಲು ಬಿದ್ದು ಉಪಮುಖ್ಯಮಂತ್ರಿ ಸ್ಥಾನ ನೀಡಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂದು ಬೇಡಿಕೊಂಡಿದ್ದನ್ನು ಬಿಎಸ್‍ವೈ ಮರೆತಿದ್ದಾರೆ. ತಮ್ಮಲ್ಲಿ ಉಂಟಾದ ಹತಾಶೆ ಭಾವನೆಯಿಂದ ಹೀಗೆ ಮಾತನಾಡುತ್ತಿದ್ದಾರೆ ಎಂದು ಬೇಳೂರು ಗೇಲಿ ಮಾಡಿದರು.