Tag: IT department

  • ಕಾಂಗ್ರೆಸ್ ಬಿಚ್ಚಿಟ್ಟ ಡೈರಿಯ ಸತ್ಯಾಂಶವನ್ನು ಅಲ್ಲಗಳೆದ ಐಟಿ ಇಲಾಖೆ

    ಕಾಂಗ್ರೆಸ್ ಬಿಚ್ಚಿಟ್ಟ ಡೈರಿಯ ಸತ್ಯಾಂಶವನ್ನು ಅಲ್ಲಗಳೆದ ಐಟಿ ಇಲಾಖೆ

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂಪ್ಪ ಕೇಂದ್ರ ನಾಯಕರಿಗೆ ಕಪ್ಪ ನೀಡಿದ್ದಾರೆ ಎನ್ನಲಾದ ಡೈರಿಯೊಂದರ ಕೆಲ ಪುಟಗಳನ್ನು ಕಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿತ್ತು. ಇದೀಗ ಕಾಂಗ್ರೆಸ್ ಬಿಡುಗಡೆ ಮಾಡಿರುವ ಡೈರಿಯ ಸತ್ಯಾಂಶವನ್ನು ಐಟಿ ಇಲಾಖೆ ಅಲ್ಲಗಳೆಯುವ ಮೂಲಕ ಯಡಿಯೂರಪ್ಪರಿಗೆ ಕ್ಲೀನ್ ಚಿಟ್ ನೀಡಿದೆ.

    ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ವರ್ಷಾಂತ್ಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಜಿ ಬಿ.ಆರ್. ಬಾಲಕೃಷ್ಣನ್, ಕಾಂಗ್ರೆಸ್ ಬಿಡುಗಡೆ ಮಾಡಿರುವ ದಾಖಲೆಗಳೆಲ್ಲ ನಕಲಿ. ಒಂದು ಐಟಿ ದಾಳಿಯಲ್ಲಿ ನಮ್ಮ ಸಿಬ್ಬಂದಿಗೆ ಕೆಲ ದಾಖಲೆಗಳು ಸಿಕ್ಕಾಗ, ಅವನ್ನೆಲ್ಲ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಆ ದಾಖಲೆಗಳೆಲ್ಲ ಫೋಟೋ ಕಾಪಿಗಳು ಆಗಿದ್ದರಿಂದ ಹೈದರಾಬಾದ್ ಸಿಎಸ್‍ಎಫ್‍ಎಲ್ ಸತ್ಯಾಂಶ ಕಂಡು ಹಿಡಿಯಲಿಲ್ಲ. ನಮ್ಮ ಅಭಿಪ್ರಾಯದ ಪ್ರಕಾರ ಅದೊಂದು ಸುಳ್ಳು ದಾಖಲೆ ಎಂದು ಸ್ಪಷ್ಟಪಡಿಸಿದರು.

    ಶುಕ್ರವಾರ ಬಿಡುಗಡೆ ಮಾಡಿರುವ ದಾಖಲೆಗಳ ಮೊದಲ ಪುಟ ನಮಗೆ ಸಿಕ್ಕಿರಲಿಲ್ಲ. ಹಾಗಾಗಿ ಹಣ ವರ್ಗಾವಣೆಯ ಬಗ್ಗೆ ಬರೆದಿರುವ ಆ ಪುಟಗಳು ಶುದ್ಧ ಸುಳ್ಳು ಎಂದು ಬಾಲಕೃಷ್ಣನ್ ಖಚಿತಪಡಿಸಿದರು.

    ಸಚಿವ ಡಿ.ಕೆ.ಶಿವಕುಮಾರ್ ಅವರ ಮೇಲೆ ದಾಳಿ ನಡೆಸಿದಾಗ ಕೆಲ ದಾಖಲಾತಿಗಳು ಲಭ್ಯವಾಗಿದ್ದವು. ಆ ದಾಖಲೆಗಳನ್ನ ತೋರಿಸಿ ಡಿ.ಕೆ.ಶಿವಕುಮಾರ್ ತನಿಖೆಯಿಂದ ರಿಯಾಯಿತಿ ಪಡೆದುಕೊಳ್ಳಲು ಮುಂದಾಗಿದ್ದರು. ನಾವು ಯಾವುದೇ ಒಂದು ಪಕ್ಷದ ಪರವಾಗಿ ಕೆಲಸ ಮಾಡದ ಹಿನ್ನೆಲೆಯಲ್ಲಿ ನಮ್ಮ ಸಿಬ್ಬಂದಿ ಸಹಾಯ ಮಾಡಲಿಲ್ಲ. ಈ ವೇಳೆ ಲಭ್ಯವಾಗಿರುವ ಕೆಲ ದಾಖಲೆಗಳ ಲಾಭ ಪಡೆಯಲು ಸಚಿವರು ಮುಂದಾಗಿದ್ದರು. ಕಾನೂನು ಪ್ರಕಾರವಾಗಿ ಯಾವ ಕ್ರಮಕೈಗೊಳ್ಳಬೇಕು ಆ ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದೆ ಎಂದು ಬಾಲಕೃಷ್ಣನ್ ತಿಳಿಸಿದರು.

  • ನಾಳೆ ವಿಚಾರಣೆಗೆ ಹಾಜರಾಗಿ- ಡಿಕೆಶಿ ತಾಯಿಗೆ ಐಟಿ ಸೂಚನೆ

    ನಾಳೆ ವಿಚಾರಣೆಗೆ ಹಾಜರಾಗಿ- ಡಿಕೆಶಿ ತಾಯಿಗೆ ಐಟಿ ಸೂಚನೆ

    ಬೆಂಗಳೂರು: ಬೇನಾಮಿ ಆಸ್ತಿ ಪ್ರಕರಣ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ ಶಿವಕುಮಾರ್ ಅವರ ತಾಯಿಗೆ ಐಟಿ ಬೇನಾಮಿ ಸೆಲ್ ನಿಂದ ಮತ್ತೆ ನೋಟಿಸ್ ನೀಡಲಾಗಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

    ಕಳೆದ ನಾಲ್ಕು ದಿನದ ಹಿಂದೆಯೇ ಡಿಕೆಶಿ ಅವರ ತಾಯಿಗೆ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದ್ರೆ ಇಂದು ಮತ್ತೆ ಡಿಕೆಶಿ ಹಾಗೂ ಅವರ ತಾಯಿ ಗೌರಮ್ಮ ಇಬ್ಬರೂ ನಾಳೆ ವಿಚಾರಣೆಗೆ ಹಾಜರಾಬೇಕು ಎಂದು ಸೂಚಿಸಿ ನೋಟಿಸ್ ಜಾರಿಮಾಡಲಾಗಿದೆ.

    ಪ್ರಾಪರ್ಟಿ ಅಟ್ಯಾಚ್‍ಮೆಂಟ್ ನೋಟಿಸ್ ನೀಡಿ ಒಂದು ತಿಂಗಳಾಗಿದ್ದರೂ ಪದೇ ಪದೇ ಡಿಕೆಶಿ ಅವರು ಉತ್ತರ ನೀಡಲು ಕಾಲಾವಕಾಶ ಕೇಳಿತ್ತಿದ್ದಾರೆ. ಇದರಿಂದ ಐಟಿ ಬೇನಾಮಿ ಸೆಲ್ ಅಧಿಕಾರಿಗಳು ಗರಂ ಆಗಿದ್ದಾರೆ.

    ಬೇನಾಮಿ ಆಸ್ತಿ ಬಗ್ಗೆ ತನಿಖೆ ನಡೆಸುತ್ತಿರುವ ಐಟಿ 15 ದಿನಗಳ ಒಳಗಡೆ ಉತ್ತರ ನೀಡುವಂತೆ ನಿನ್ನೆ ಡಿಕೆಶಿಗೆ ಸೂಚಿಸಿತ್ತು. ಒಂದು ವೇಳೆ ಈ ನೋಟಿಸಿಗೆ ಸರಿಯಾದ ಉತ್ತರ ನೀಡದೇ ಇದ್ದಲ್ಲಿ ಡಿಕೆ ಶಿವಕುಮಾರ್ ಆಸ್ತಿ ಜಪ್ತಿಯಾಗುವ ಸಾಧ್ಯತೆಯಿದೆ.

    ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದ ಐಟಿ:
    2008 ರಲ್ಲಿ 75 ಕೋಟಿ ರೂ. 2013 ರಲ್ಲಿ 251 ಕೋಟಿ ರೂ. ಆದಾಯವನ್ನು ಡಿಕೆ ಶಿವಕುಮಾರ್ ಘೋಷಿಸಿದ್ದರೆ, 2018ರ ವಿಧಾನಸಭಾ ಚುನಾವಣೆ ವೇಳೆ 840 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ. ಸಚಿವರ ಆದಾಯ ಪ್ರತಿ 5 ವರ್ಷಗಳಿಗೊಮ್ಮೆ ಶೇ.230 ರಷ್ಟು ಹೆಚ್ಚಳ ಕಂಡಿದೆ. ಶಿವಕುಮಾರ್ ಅವರ ಸಂಪಾದನೆಗೂ ಅವರಲ್ಲಿರುವ ಆದಾಯಕ್ಕೆ ತಾಳೆ ಆಗುತ್ತಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಚುನಾವಣಾ ಆಯೋಗಕ್ಕೆ ಈ ಹಿಂದೆ ಐಟಿ ಪತ್ರ ಬರೆದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • Exclusive: ಲೋಕಸಭಾ ಚುನಾವಣೆಗೂ ಮುನ್ನ ಡಿಕೆಶಿ ಬಂಧನ ಆಗುತ್ತಾ?

    Exclusive: ಲೋಕಸಭಾ ಚುನಾವಣೆಗೂ ಮುನ್ನ ಡಿಕೆಶಿ ಬಂಧನ ಆಗುತ್ತಾ?

    ಬೆಂಗಳೂರು: ಲೋಕಸಭಾ ಚುನಾವಣೆಗೂ ಮುನ್ನ ಜಲ ಸಂಪನ್ಮೂಲ ಸಚಿವ, ಕನಕಪುರದ ಬಂಡೆ, ಕಾಂಗ್ರೆಸ್ಸಿನ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅರೆಸ್ಟ್ ಆಗ್ತಾರಾ ಎನ್ನುವ ಪ್ರಶ್ನೆ ಎದ್ದಿದೆ.

    ಹೌದು. ಡಿ.ಕೆ. ಶಿವಕುಮಾರ್ ಬರೋಬ್ಬರಿ 110 ಕೋಟಿಗೂ ಹೆಚ್ಚು ಬೇನಾಮಿ ಆಸ್ತಿ ಹೊಂದಿರುವ ಆದಾಯ ತೆರಿಗೆ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ದಾಳಿಯ ವೇಳೆ ಲಭ್ಯವಾದ ಆಸ್ತಿಗಿಂತಲೂ ಹೆಚ್ಚಿನ ಆಸ್ತಿ ತನಿಖೆ ವೇಳೆ ಬೆಳಕಿಗೆ ಬಂದಿದೆ ಎನ್ನುವ ವಿಚಾರ ಪಬ್ಲಿಕ್ ಟಿವಿಗೆ ಮೂಲಗಳಿಂದ ತಿಳಿದು ಬಂದಿದೆ. 

    ಬೆನ್ನು ಬಿಡದ ಬೇತಾಳನಂತೆ ಕಳೆದ ಸೆಪ್ಟೆಂಬರ್ ನಿಂದ ಮೊನ್ನೆವರೆಗೆ ತಾಯಿ ಗೌರಮ್ಮ, ಸಹೋದರ ಸುರೇಶ್ ಜೊತೆ ಡಿಕೆಶಿ ಸೇರಿದಂತೆ ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಅಧಿಕಾರಿಗಳು ಡ್ರಿಲ್ ಮಾಡಿದ್ದರು. ಈ ಹಿಂದೆ ಡಿಕೆಶಿ ಹೇಳಿದ ಉತ್ತರಕ್ಕೂ ತಾಯಿ ನೀಡಿದ ಉತ್ತರಕ್ಕೂ ಸಾಕಷ್ಟು ವ್ಯತ್ಯಾಸ ಕಂಡುಬಂದಿದೆಯಂತೆ.

    ಈ ಕುರಿತು ಐಟಿ ಅಧಿಕಾರಿಗಳು ದೆಹಲಿಯ ಪ್ರಧಾನ ಕಚೇರಿಗೆ ಮತ್ತು ಬೇನಾಮಿ ನ್ಯಾಯಾಧೀಕರಣಕ್ಕೆ ವರದಿ ಸಲ್ಲಿಕೆ ಮಾಡಿದ್ದಾರೆ. ಆದ್ದರಿಂದ ಯಾವುದೇ ಕ್ಷಣದಲ್ಲಾದರೂ ಡಿಕೆಶಿ ಅವರ ಸುಮಾರು 110 ಕೋಟಿ ರೂ. ಆಸ್ತಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

    ಪಿತ್ರಾರ್ಜಿತ ಆಸ್ತಿ ಎಷ್ಟಿದೆ? ಇದರಿಂದ ಎಷ್ಟೆಲ್ಲಾ ಸಂಪಾದನೆ ಆಗಿದೆ ಹೀಗೆ ವಿವಿಧ ಆದಾಯದ ಮೂಲಗಳ ಬಗ್ಗೆ ಗೌರಮ್ಮ ಅವರನ್ನು ಐಟಿ ಅಧಿಕಾರಿಗಳು ಪ್ರಶ್ನಿಸಿದ್ದರು. ಕೆಲವೊಂದು ಆದಾಯ ಕೃಷಿಯಿಂದ ಬಂದಿದೆ ಅಂತ ಡಿಕೆಶಿ ಹೇಳಿದ್ದರು. ಆದರೆ ತಾಯಿ ಕೃಷಿ ಆದಾಯದ ಮೂಲದ ಹೇಳಿದ ಮಾಹಿತಿಗೆ ಡಿಕೆಶಿ ಹೇಳಿಕೆಯಲ್ಲಿ ಸಾಕಷ್ಟು ವ್ಯತ್ಯಾಸ ಇರುವ ವಿಚಾರ ಐಟಿ ಮೂಲಗಳಿಂದ ತಿಳಿದು ಬಂದಿದೆ.

    ದೆಹಲಿಯ ಮನೆಯಲ್ಲಿನ ದುಡ್ಡು, ಈಗಲ್ಟನ್ ರೆಸಾರ್ಟ್ ನಲ್ಲಿ ಸಾಕ್ಷಿನಾಶ ಆರೋಪದ ಮೇಲೆ ಡಿಕೆ ಶಿವಕುಮಾರ್ ಅವರಿಗೆ ಈ ಹಿಂದೆ 108 ಪ್ರಶ್ನೆಗಳನ್ನು ಕೇಳಿ ಐಟಿ ಮಾಹಿತಿ ಕಲೆಹಾಕಿತ್ತು. ಇದೆಲ್ಲ ಮಾಹಿತಿ ಸಂಗ್ರಹಿಸಿರುವ ಆದಾಯ ತೆರಿಗೆ ಇಲಾಖೆ ಇದೀಗ ಶೀಘ್ರವೇ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆಯಿದೆ.

    ಬೇನಾಮಿ ಆಸ್ತಿ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರ ಪ್ರಕರಣದ ಆರೋಪ ಸಾಬೀತಾದರೆ ಬೇನಾಮಿ ಆಸ್ತಿ ತಿದ್ದುಪಡಿ ಕಾಯ್ದೆ 53(2) ನ ಅನ್ವಯ ಕನಿಷ್ಠ 1 ವರ್ಷದಿಂದ ಗರಿಷ್ಠ 7 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಇದೆ. ಅಲ್ಲದೇ ಮಾರುಕಟ್ಟೆ ಮೌಲ್ಯದ ಶೇ.25 ರಷ್ಟು ದಂಡ ಕೂಡ ವಿಧಿಸುವ ಆಗುವ ಸಾಧ್ಯತೆ ಇದೆ. ಒಂದು ವೇಳೆ 7 ವರ್ಷ ಶಿಕ್ಷೆಯಾದಲ್ಲಿ ಡಿಕೆಶಿ ರಾಜಕೀಯ ಜೀವನ ಅಂತ್ಯವಾಗುವ ಸಾಧ್ಯತೆಯೇ ಹೆಚ್ಚು ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸ್ಯಾಂಡಲ್‍ವುಡ್ ಐಟಿ ದಾಳಿ ಪ್ರಕರಣ – ಸಿಕ್ಕಿದ್ದು ಕೋಟಿ ಕೋಟಿ ಆಸ್ತಿ !

    ಸ್ಯಾಂಡಲ್‍ವುಡ್ ಐಟಿ ದಾಳಿ ಪ್ರಕರಣ – ಸಿಕ್ಕಿದ್ದು ಕೋಟಿ ಕೋಟಿ ಆಸ್ತಿ !

    ಬೆಂಗಳೂರು: ಚಂದನವನದ ನಟ, ನಿರ್ಮಾಪಕರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿದಂತೆ ಐಟಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಬರೋಬ್ಬರಿ 109 ಕೋಟಿ ರೂ. ಮೌಲ್ಯದ ಅಘೋಷಿತ ಆದಾಯದ ದಾಖಲೆ ಹಾಗೂ 25.3 ಕೆಜಿ ಚಿನ್ನಾಭರಣ, 2.85 ಕೋಟಿ ರೂ. ನಗದು ವಶಕ್ಕೆ ಪಡೆದಿರುವುದಾಗಿ ಮಾಹಿತಿ ನೀಡಿದ್ದಾರೆ.

    ಸಿನಿಮಾ ಕ್ಷೇತ್ರ ವಿವಿಧ ನಟ, ನಿರ್ಮಾಪಕರ ಮೇಲೆ ನಡೆದ ಈ ದಾಳಿಯಲ್ಲಿ ಕರ್ನಾಟಕ ಮತ್ತು ಗೋವಾ ಆದಾಯ ತೆರಿಗೆ ಇಲಾಖೆಗೆ ಸಂಬಂಧಿಸಿದ 180 ಅಧಿಕಾರಿಗಳು ಭಾಗವಹಿಸಿದ್ದು, 21 ಕಡೆ ದಾಳಿ ಮಾಡಿ ಇದರಲ್ಲಿ 5 ಸ್ಥಳಗಳಲ್ಲಿ ಹುಡುಕಾಟವನ್ನು ನಡೆಸಲಾಗಿದೆ.

    ದಾಳಿ ನಡೆಸಲು ಇಲಾಖೆ ಕಳೆದ 3 ತಿಂಗಳಿನಿಂದ ಕೂಡ ಮಾಹಿತಿ ಸಂಗ್ರಹಿಸಿದ್ದು, ಈ ವೇಳೆ ಗುರುತಿಸಲಾದ ವ್ಯಕ್ತಿಗಳು ಹಾಗೂ ಸ್ಥಳಗಳ ಮೇಲೆ ದಾಳಿ ನಡೆದಿದೆ. ಇದರಲ್ಲಿ ಸಿನಿಮಾ ನಿಮಾರ್ಪಕರು, ನಟರು, ಸಿನಿಮಾ ಸಂಸ್ಥೆಗಳು ಕೂಡ ಸೇರಿದೆ. ದಾಳಿಯ ವೇಳೆ ಆಘೋಷಿತ ಆಸ್ತಿ, ಹಣ ಸೇರಿದಂತೆ ವಿವಿಧ ಆದಾಯಕ್ಕೆ ಸಂಬಂಧಿಸಿದ ದಾಖಲೆಗಳು ಕೂಡ ಲಭ್ಯವಾಗಿದೆ. ಪ್ರಮುಖವಾಗಿ ಸಿನಿಮಾ ರಂಗದಲ್ಲಿ ಚಿತ್ರಮಂದಿರದಿಂದ ಬರುವ ಆದಾಯವನ್ನು ಬೇರೆಡೆ ವರ್ಗಾವಣೆ ಮಾಡಿ ಹೂಡಿಕೆ ಮಾಡಿರುವ ಬಗ್ಗೆ ತಿಳಿದುಬಂದಿದ್ದು, ಬಹು ದೊಡ್ಡ ಆರ್ಥಿಕ ಅವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

    ಸಿನಿಮಾ ಹಕ್ಕುಗಳ ಮಾರಾಟ, ಡಿಜಿಟಲ್ ರೈಟ್ಸ್, ಚಿತ್ರ ಮಂದಿರದ ಆದಾಯ, ಟಿವಿ ಹಕ್ಕುಗಳು, ಆಡಿಯೋ ಮತ್ತು ಸ್ಯಾಟಲೈಟ್ ಹಕ್ಕುಗಳು ಸೇರಿದಂತೆ ಇತರೇ ಮೂಲಗಳಿಂದ ಗಳಿಸಿದ ಆದಾಯದ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಲಾಗಿದೆ.

    ಸಿನಿಮಾದಿಂದ ಪಡೆದ ಆದಾಯದೊಂದಿಗೆ ಬೇರೆ ಬೇರೆ ವ್ಯವಹಾರಗಳಲ್ಲಿ ಹೂಡಿಕೆ ಮಾಡಿರುವ ಬಗ್ಗೆ ಸ್ಪಷ್ಟವಾಗಿದ್ದು, ಈ ಮೂಲಗಳಿಂದ ಬಂದ ಆದಾಯದ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಆದ್ದರಿಂದ ಒಟ್ಟು ಮೊತ್ತದಲ್ಲಿ ಹೆಚ್ಚಾಗುವ ಸಾಧ್ಯತೆಯ ಬಗ್ಗೆಯೂ ಐಟಿ ಇಲಾಖೆ ತಿಳಿಸಿದೆ. ಐಟಿ ಅಧಿಕಾರಿಗಳು ಸಂಗ್ರಹಿಸಿರುವ ಮಾಹಿತಿಯನ್ನು ಇಡಿ ಇಲಾಖೆಗೆ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಒಂದೊಮ್ಮೆ ಇಡಿ ಅಧಿಕಾರಿಗಳು ಪ್ರಕರಣಕ್ಕೆ ಪ್ರವೇಶ ಪಡೆದರೆ ಎಲ್ಲರಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ತೆರಿಗೆ ವಂಚನೆ ಮಾಡಲು ಹಣ ವರ್ಗಾವಣೆ ಮಾಡಿರುವುದು ಸಾಬೀತಾದರೆ ಇಡಿ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ. ಸದ್ಯ ಲಭ್ಯವಾಗಿರುವ ಮಾಹಿತಿ ಅನ್ವಯ ಐಟಿ ಕಾಯ್ದೆ 278 (ಡಿ) ಅಡಿ ಪ್ರಕರಣ ದಾಖಲಿಸಲು ಐಟಿ ಅಧಿಕಾರಿಗಳು ನಿರ್ಧಾರ ಮಾಡಿದ್ದಾರೆ.

    ಕಳೆದ 3 ದಿನಗಳಿಂದ ನಡೆದ ದಾಳಿಯ ವೇಳೆ ಪತ್ತೆಯಾದ ಆಸ್ತಿ, ಹಣ, ಆದಾಯದ ಒಟ್ಟು ಮಾಹಿತಿಯನ್ನು ಮಾತ್ರ ಐಟಿ ಅಧಿಕಾರಿಗಳು ನೀಡಿದ್ದಾರೆ. ಆದರೆ ವೈಯಕ್ತಿಕವಾಗಿ ಯಾವುದೇ ನಟ, ನಿರ್ಮಾಪಕರ ಮನೆಯಲ್ಲಿ ಎಷ್ಟು ಹಣ ಲಭಿಸಿದೆ ಎಂಬ ಬಗ್ಗೆ ಮಾಹಿತಿ ನೀಡಿಬೇಕಿದೆ. ಸದ್ಯ ಐಟಿ ಇಲಾಖೆ ವಶಕ್ಕೆ ಪಡೆದಿರುವ ಆದಾಯ ಹಾಗೂ ಹಣದ ಬಗ್ಗೆ ನಾಳೆಯಿಂದ ವಿಚಾರಣೆ ನಡೆಸುವ ಸಾಧ್ಯತೆ ಇದೆ. ನಟ ಹಾಗೂ ನಿರ್ಮಾಪಕರು ಐಟಿ ಇಲಾಖೆಗೆ ಆಗಮಿಸಿ ಸೂಕ್ತ ದಾಖಲೆ ಹಾಗೂ ಸ್ಪಷ್ಟನೆ ನೀಡಲು ಅವಕಾಶ ಇದೆ. ಜನವರಿ 3 ರಂದು ನಡೆದ ಐಟಿ ದಾಳಿಯಲ್ಲಿ ನಾಲ್ವರು ನಿರ್ಮಾಪಕರು ಹಾಗೂ ನಾಲ್ವರು ಸ್ಟಾರ್ ನಟರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾನೂನಿಗೆ ಗೌರವ ಕೊಟ್ಟು ಹೋಗಿದ್ವಿ – ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾನೊಬ್ಬ ರಾಜಕಾರಣಿ: ಡಿಕೆಶಿ

    ಕಾನೂನಿಗೆ ಗೌರವ ಕೊಟ್ಟು ಹೋಗಿದ್ವಿ – ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾನೊಬ್ಬ ರಾಜಕಾರಣಿ: ಡಿಕೆಶಿ

    ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಗಳು ನೀಡಿದ ನೋಟಿಸ್‍ಗೆ ಉತ್ತರವಾಗಿ ಕಾನೂನಿಗೆ ಗೌರವ ಕೊಟ್ಟು ನಾನು, ನನ್ನ ತಾಯಿ ಐಟಿ ಕಚೇರಿಗೆ ಹೋಗಿದ್ದೇವು ಎಂದು ಜಲಸಂಪ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಈ ಕುರಿತು ನಗರದ ಕ್ರೆಸೆಂಟ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಸಚಿವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾನೊಬ್ಬ ರಾಜಕಾರಣಿಯಾಗಿದ್ದು, ಮಾಧ್ಯಮಗಳಿಗೆ ಗೌರವ ಕೊಡಬೇಕಿದೆ. ನಮ್ಮ ತಾಯಿ ಅವರ ಬಳಿ ಐಟಿ ಅಧಿಕಾರಿಗಳು ಹೇಳಿಕೆ ಪಡೆದುಕೊಳ್ಳಲು ಊರಿಗೆ ಹೋಗಿದ್ದರು. ಆದರೆ ಅಂದು ನನ್ನ ತಾಯಿ ಊರಲ್ಲಿ ಇರಲಿಲ್ಲ. ಪರಿಣಾಮ ನೋಟಿಸ್ ಕೊಟ್ಟಿದ್ದರು. ಆದ್ದರಿಂದ ನಾನು ಮತ್ತು ನನ್ನ ತಾಯಿ ಕಾನೂನಿಗೆ ಗೌರವ ಕೊಟ್ಟು ಐಟಿ ಕಚೇರಿಗೆ ಹೋಗಿದ್ದೇವು ಎಂದು ತಿಳಿಸಿದರು.

    ವಿಚಾರಣೆಗೆ ನಡೆಸುವ ವೇಳೆ ನನಗೆ ಹೋಗಲು ಅವಕಾಶ ಇರಲಿಲ್ಲ. ಆದರೆ ನಮ್ಮ ತಾಯಿಗೆ 80 ವರ್ಷ ವಯಸ್ಸು ಆಗಿರುವ ಕಾರಣ, ತಾಯಿಗೆ ಸಹಕರಿಸಲು ಅಧಿಕಾರಿಗಳು ಅವಕಾಶ ಕೊಟ್ಟಿದ್ದರು. ಆದರೆ ನಾನು ತಪ್ಪು ಮಾಡಿಲ್ಲ, ಕಾನೂನಿನ ಪ್ರಕಾರವೇ ಎಲ್ಲವನ್ನು ಮಾಡಿದ್ದೇನೆ. ಇಂದು ನಡೆದ ವಿಚಾರಣೆ ವೇಳೆಯೂ ನನ್ನ ತಾಯಿಗೆ ತಿಳಿದಿದ್ದಷ್ಟು ಹೇಳಿದ್ದಾರೆ. ಅವರಿಗೆ ಅಧಿಕಾರಿಗಳು ಕೂಡ ಗೌರವ ಕೊಟ್ಟಿದ್ದಾರೆ. ಕಾನೂನಿನಲ್ಲಿ ನನಗೆ ನ್ಯಾಯ ಸಿಗುವ ವಿಶ್ವಾಸ ಇದೆ. ಆದರೆ 80 ವರ್ಷದ ತಾಯಿಯನ್ನ 6 ಗಂಟೆಗಳ ಕಾಲ ಕೂರಿಸಿಕೊಂಡಿದ್ದರು ಎಂಬುದು ನನಗೆ ನೋವು ತಂದಿದೆ. ಆದರೆ ನಾನು ಹೋರಾಟ ಮಾಡುತ್ತೇನೆ, ಎಲ್ಲದಕ್ಕೂ ಉತ್ತರ ನೀಡಬಲ್ಲೆ. ನನ್ನನ್ನು ವಿಚಾರಣೆಗೆ ಕರೆಯುವ ಸಂದರ್ಭಗಳು ಬರುತ್ತವೆ ಎಂದು ತಿಳಿಸಿದರು.

    ಈ ಹಿಂದೆಯೇ ನನಗೆ ಹಲವು ನೋಟಿಸ್ ಬಂದಿದೆ. ಆ ಬಗ್ಗೆ ಮಾಹಿತಿ ನೀಡಲು ಸದ್ಯ ಸಾಧ್ಯವಿಲ್ಲ. ಆದರೆ ನನ್ನನ್ನು ಇಂದು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದಾರೆ. ಪರಿಣಾಮ ನಾನು ಹೆಚ್ಚು ಮಾತನಾಡಲು ಸಾಧ್ಯವಿಲ್ಲ. ಈ ಹಿಂದೆ ಆಸ್ಪತ್ರೆಯಿಂದ ಬಿಡುಗಡೆಯಾದ ವೇಳೆಯೇ ಎಲ್ಲದಕ್ಕೂ ಉತ್ತರ ಕೊಟ್ಟಿದ್ದೇನೆ. ಈಗ ಹೆಚ್ಚೇನು ಮಾತನಾಡಲ್ಲ ಎಂದರು.

    ಇದೇ ವೇಳೆ ಸಿನಿಮಾ ನಟರ ಮೇಲೆ ಐಟಿ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಸಿನಿಮಾ ನಟರ ಪಕ್ಕದ ಮನೆಯ ನಿವಾಸಿ. ಬೆಳಗಾದರೆ ಒಬ್ಬರ ಮುಖ ಒಬ್ಬರು ನೋಡಬೇಕು. ಆದ್ದರಿಂದಲೇ ನಾನು ನಿನ್ನೆ ಅಲ್ಲಿ ನಿಂತು ಮಾತನಾಡಿಸಿದ್ದೆ. ಆದರೆ ಅಲ್ಲಿ ತನಿಖೆ ಪೂರ್ಣಗೊಳಿಸಿರಲಿಲ್ಲ. ವಿಷಯ ತಿಳಿಯುತ್ತಿದಂತೆ ವಾಪಸ್ ಮನೆಗೆ ಬಂದೆ ಅಷ್ಟೇ. ಕಾನೂನಿನಲ್ಲಿ ಇರುವಂತೆ ಅಧಿಕಾರಿಗಳು ಕ್ರಮಕೈಗೊಳ್ಳುತ್ತಿದ್ದಾರೆ. ಈ ಬಗ್ಗೆ ನಾನು ಏನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೌರಿಂಗ್ ಕ್ಲಬ್‍ನಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ರೋಚಕ ತಿರುವು

    ಬೌರಿಂಗ್ ಕ್ಲಬ್‍ನಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ರೋಚಕ ತಿರುವು

    ಬೆಂಗಳೂರು: ನಗರದ ಬೌರಿಂಗ್ ಇನ್‍ಸ್ಟಿಟ್ಯೂಟ್ ನಲ್ಲಿ ಪತ್ತೆಯಾದ ಕೋಟಿ ಕೋಟಿ ಹಣ ಹಿಂದಿರುಗಿಸುವಂತೆ ವ್ಯಕ್ತಿಯೊಬ್ಬರು 5 ಕೋಟಿ ರೂ, ಅಮಿಷ ನೀಡಿದ್ದರು ಎಂದು ಇನ್‍ಸ್ಟಿಟ್ಯೂಟ್ ಕಾರ್ಯದರ್ಶಿ ಹೆಚ್ ಎಸ್ ಶ್ರೀಕಾಂತ್ ಹೇಳಿದ್ದಾರೆ.

    ಲಾಕರ್ಸ್ ಗಳಲ್ಲಿ ಪತ್ತೆಯಾದ ಆಪಾರ ಹಣದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕ್ರೀಡಾ ಪರಿಕರಗಳನ್ನು ಇಡಲು ಬೌರಿಂಗ್ ಇನ್‍ಸ್ಟಿಟ್ಯೂಟ್ ಅನ್ನು ನಿರ್ಮಾಣ ಮಾಡಲಾಗಿತ್ತು. 38 ವರ್ಷಗಳಿಂದ ನಾನು ಸಂಸ್ಥೆಯ ಸದಸ್ಯನಾಗಿ, 2010 ರಿಂದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, 5000 ಕ್ಕೂ ಹಚ್ಚಿನ ಮೆಂಬರ್ಸ್ ಇದ್ದಾರೆ. ಇಲ್ಲಿ 670 ಲಾಕರ್ಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

    ಸಂಸ್ಥೆಯ ಫ್ಲಾಟ್‍ನಲ್ಲಿ ಕೆಲ ನವೀಕರಣ ಕಾರ್ಯಗಳು ನಡೆಯಬೇಕಾಗಿದ್ದರಿಂದ ಫೆಬ್ರವರಿಯಲ್ಲಿ ಸದಸ್ಯರಿಗೆ ನೊಟೀಸ್ ನೀಡಲಾಗಿತ್ತು. ಆದರೆ ಈ ನೋಟಿಸ್ ಯಾವುದೇ ಪ್ರತಿಕ್ರಿಯೆಬಾರದ ಕಾರಣ ನಮ್ಮ ಸಿಬ್ಬಂದಿಯೊಂದಿಗೆ ನಾವೇ ಲಾಕರ್ಸ್ ತೆರೆದು ನೋಡಿದಾಗ ಕಪ್ಪು ಬ್ಯಾಗ್ ಗಳು ಪತ್ತೆಯಾಗಿವೆ. ಈ ಕುರಿತು ಪೊಲೀಸ್ ಡಿಜಿಪಿ ಚಂದ್ರಹಾಸ್ ಗುಪ್ತ ಅವರಿಗೆ ಮಾಹಿತಿ ನೀಡಿ, ಬ್ಯಾಗ್ ಗಳನ್ನು ತೆಗೆದ ಎಲ್ಲಾ ದೃಶ್ಯಗಳನ್ನು ವಿಡಿಯೋ ಮಾಡಿ ಸೀಲ್ ಮಾಡಲಾಗಿದೆ. ಬಳಿಕ ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದರು.

    ಪ್ರಮುಖವಾಗಿ ಟೆನಿಸ್ ಕೋರ್ಟ್ ನಲ್ಲಿನ ಲಾಕರ್ ರೂಮ್‍ನ 79, 62 ಎಂಬ ಲಾಕರ್ ಗಳಲ್ಲಿ 6 ಬ್ಯಾಗ್ ಪತ್ತೆಯಾಗಿದೆ. ಇದರಲ್ಲಿ ಮೂರುವರೆ ಕೋಟಿ ದುಡ್ಡು, 8 ಕೋಟಿ ಮೌಲ್ಯದ ವಜ್ರಾಭರಣ, ಆಸ್ತಿ ದಾಖಲೆ ಪತ್ರ ಪತ್ತೆಯಾಗಿದೆ. ಒಟ್ಟಾರೆ ಸಂಸ್ಥೆಯ ಕಟ್ಟಡದಲ್ಲಿದ್ದ ಒಟ್ಟು 126 ಲಾಕರ್ ಓಪನ್ ಮಾಡಲಾಗಿತ್ತು ಎಂದು ತಿಳಿಸಿದರು.

    ಲಾಕರ್ ನಲ್ಲಿ ಸಿಕ್ಕಿದ್ದೇನು?
    * 2000 ರೂ. ನೋಟುಗಳ 18 ಬಂಡಲ್ (3 ಕೋಟಿ 90 ಲಕ್ಷ ರೂ.)
    * 7.8 ಕೋಟಿ ಮೌಲ್ಯದ ಡೈಮಂಡ್
    * ಗೋಲ್ಡ್ ಬಿಸ್ಕಟ್ 650 ಗ್ರಾಂ
    * 30 ರಿಂದ 40 ಲಕ್ಷ ರೂ. ಮೌಲ್ಯದ ಎರಡು ವಾಚ್
    * ನೂರಾರು ಕೋಟಿ ಮೌಲ್ಯದ ಆಸ್ತಿ ಪತ್ರ
    * ಹಲವು ಕೋಟಿ ರೂ. ಮೌಲ್ಯ ಚೆಕ್ ಹಾಗೂ ಸಹಿ ಮಾಡದ ಖಾಲಿ ಚೆಕ್‍ಗಳು ಪತ್ತೆ

    ಅಂದಹಾಗೇ ಪತ್ತೆಯಾದ ಅಪಾರ ಪ್ರಮಾಣದ ಹಣ ರಾಜ್ಯ ಪ್ರತಿಷ್ಠಿತ ಉದ್ಯಮಿ ಅವಿನಾಶ್ ಅಮರ್ ಲಾಲ್ ಅವರದ್ದು ಎಂದು ತಿಳಿಸಿದ್ದಾರೆ. ಅಮರ್ ಲಾಲ್ ಪ್ರೆಸ್ಟಿಜ್ ಗ್ರೂಪ್ ಆಫ್ ಕಂಪೆನಿಯಲ್ಲಿ ಪಾಲುದಾರರಾಗಿದ್ದು, ಮೂಲತಃ ರಾಜಸ್ಥಾನದವರಾಗಿದ್ದು, ಬೆಂಗಳೂರಲ್ಲಿ ಬಡ್ಡಿ ವ್ಯವಹಾರ ಮಾಡುತ್ತಿದ್ದು, 30% ರಷ್ಟು ಬಡ್ಡಿಗೆ ಸಾಲ ನೀಡುತ್ತಿದ್ದರು. ಸಾಲ ಕೊಟ್ಟು ಆಸ್ತಿ ಪತ್ರಗಳನ್ನು ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.

  • ಬೆಂಗ್ಳೂರಿನ ಬೌರಿಂಗ್ ಇನ್ಸ್ ಸ್ಟಿಟ್ಯೂಟ್ ಒಳಗೆ ಸಿಕ್ತು ಕೋಟಿ ಕೋಟಿ ನಿಧಿ

    ಬೆಂಗ್ಳೂರಿನ ಬೌರಿಂಗ್ ಇನ್ಸ್ ಸ್ಟಿಟ್ಯೂಟ್ ಒಳಗೆ ಸಿಕ್ತು ಕೋಟಿ ಕೋಟಿ ನಿಧಿ

    ಬೆಂಗಳೂರು: ನಗರದ ಬೌರಿಂಗ್ ಇನ್ಸ್ ಸ್ಟಿಟ್ಯೂಟ್ ಕ್ಲಾಬ್ ಒಳಗೆ ಕೋಟಿ ಕೋಟಿ ನಿಧಿ ಸಿಕ್ಕಿದೆ.

    ಅವಿನಾಶ್ ಅಮರ್ ಲಾಲ್ ಎಂಬ ಉದ್ಯಮಿ ಟೆನಿಸ್ ಕೋರ್ಟ್ ನಲ್ಲಿ ಕಳೆದ 1 ವರ್ಷದಿಂದ ನಿಧಿಯನ್ನು ಬಚ್ಚಿಟ್ಟಿದ್ದನು. ಬೌರಿಂಗ್ ಇನ್ಸ್ ಸ್ಟಿಟ್ಯೂಟ್ ಆಡಳಿತ ಮಂಡಳಿ ಆತ ಬಚ್ಚಿಟ್ಟಿದ್ದ ಲಾಕರ್ ಓಪನ್ ಮಾಡಿದ್ದಾರೆ. ಆಗ 2 ಲಾಕರ್ ಓಪನ್ ಮಾಡಿದಾಗ ಅದರಲ್ಲಿ 2 ಬ್ಯಾಗ್ ಪತ್ತೆಯಾಗಿದೆ. 2 ಬ್ಯಾಗಿನಲ್ಲಿ ಸುಮಾರು 3.90 ಕೋಟಿ ನಗದು, 5 ಕೋಟಿ ಮೌಲ್ಯದ ವಜ್ರಾಭರಣ ಮತ್ತು 100ಕೋಟಿ ರೂ. ಆಸ್ತಿ ಪತ್ರ ಪತ್ತೆಯಾಗಿದೆ.

    ಬೌರಿಂಗ್ ಆಡಳಿತ ಮಂಡಳಿ ಲಾಕರ್ ಓಪನ್ ಮಾಡಿ ಗಾಬರಿಯಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಬೌರಿಂಗ್ ಕ್ಲಬ್ ಸೆಕ್ರೆಟರಿ ಶ್ರೀಕಾಂತ್ ಮತ್ತು ಬ್ಯಾಡ್ಮಿಂಟನ್ ಕಮಿಟಿಯ ಸಂದೀಪ್‍ಗೆ ಉದ್ಯಮಿ ಆಮಿಷ ಒಡ್ಡಿದ್ದಾನೆ. ಹಣ ಮತ್ತು ವಜ್ರಾಭರಣ ನೀವೆ ಇಟ್ಟುಕೊಳ್ಳಿ. ಆದರೆ ಆಸ್ತಿ ಪತ್ರ ಮಾತ್ರ ಕೊಡಿ ಎಂದು ಆಮಿಷ ಒಡ್ಡಿದ್ದಾನೆ. ಆದರೆ ಉದ್ಯಮಿಯ ಆಮಿಷಕ್ಕೆ ಒಳಗಾಗದ ಬೌರಿಂಗ್ ಆಡಳಿತ ಮಂಡಳಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಮತ್ತು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಗುರುವಾರ ರಾತ್ರಿ 12 ಗಂಟೆವರೆಗೂ ಐಟಿ ಇಲಾಖೆ ಪರೀಶಿಲನೆ ನಡೆಸಿದ್ದಾರೆ.

    ಸಿಕ್ಕಿಬಿದ್ದಿದ್ದು ಹೇಗೆ?
    ಬೌರಿಂಗ್ ಇನ್ಸ್ ಸ್ಟಿಟ್ಯೂಟ್ ಆಡಳಿತ ಮಂಡಳಿ 15 ದಿನಗಳ ಹಿಂದೆ, ನೀವು ಲಾಕರ್ ನಲ್ಲಿ ಇಟ್ಟಿದ್ದ ಬ್ಯಾಗ್ ಗಳನ್ನು ತೆಗೆದುಕೊಂಡು ಹೋಗಿ ಒಂದು ವೇಳೆ ಲಾಕರ್ ನಲ್ಲಿರುವ ವಸ್ತುವನ್ನು ಕೊಂಡೊಯ್ಯದಿದ್ದರೆ ಲಾಕರ್ ಒಡೆಯುದಾಗಿ ಉದ್ಯಮಿಗೆ ನೋಟಿಸ್ ಕಳುಹಿಸಿದ್ದಾರೆ. ಸ್ವಲ್ಪ ಕೆಲಸ ಕಾರ್ಯಗಳಿವೆ. ಆದ್ದರಿಂದ ಅವುಗಳನ್ನು ಒಡೆದು ನವೀಕರಣಗೊಳಿಸಬೇಕಿದೆ ಎಂದು ಬೌರಿಂಗ್ ಆಡಳಿತ ಮಂಡಳಿ ತಿಳಿಸಿದೆ. ಆದರೆ ಉದ್ಯಮಿ ನೋಟಿಸ್ ಬಗ್ಗೆ ತಲೆ ತಲೆಕೆಸಿಕೊಂಡಿಲ್ಲ. ಕೊನೆಗೆ ಆಡಳಿತ ಮಂಡಳಿ 86, 87ರಲ್ಲಿ ಲಾಕರ್ ಹೊಡೆದಿದೆ. ಆಗ ಈ ಕೋಟಿ ಕೋಟಿ ಆಸ್ತಿ ಪತ್ತೆಯಾಗಿದೆ.

    ಅವಿನಾಶ್ ಅಮರ್ ಲಾಲ್ ಪ್ರೆಸ್ಟಿಜ್ ಗ್ರೂಪ್ ಆಫ್ ಕಂಪೆನಿಯಲ್ಲಿ ಪಾಲುದಾರನಾಗಿದ್ದು, ಮೂಲತಃ ರಾಜಸ್ಥಾನದವನು ಎಂದು ತಿಳಿದು ಬಂದಿದೆ. ಜೊತೆಗೆ ಬೆಂಗಳೂರಲ್ಲಿ ಬಡ್ಡಿ ವ್ಯವಹಾರ ಮಾಡುತ್ತಿದ್ದು, 30% ರಷ್ಟು ಬಡ್ಡಿಗೆ ಸಾಲ ನೀಡುತ್ತಿದ್ದನು. ಸಾಲ ಕೊಟ್ಟು ಆಸ್ತಿ ಪತ್ರಗಳನ್ನು ಪಡೆಯುತ್ತಿದ್ದನು ಎಂದು ತಿಳಿದು ಬಂದಿದೆ. ಸದ್ಯಕ್ಕೆ ಈ ಬಗ್ಗೆ ಐಟಿ ಇಲಾಖೆ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ.

  • ಸಚಿವ ಡಿ.ಕೆ ಶಿವಕುಮಾರ್ ಗೆ ಮತ್ತಷ್ಟು ಟೆನ್ಶನ್ ಶುರು

    ಸಚಿವ ಡಿ.ಕೆ ಶಿವಕುಮಾರ್ ಗೆ ಮತ್ತಷ್ಟು ಟೆನ್ಶನ್ ಶುರು

    ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ಬಲೆಗೆ ಸಿಲುಕಿಕೊಂಡಿರುವ ನೀರಾವರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಗೆ ಇದೀಗ ಮತ್ತಷ್ಟು ಟೆನ್ಶನ್ ಶುರುವಾಗಿದೆ.

    ಐಟಿ ದಾಳಿಯಲ್ಲಿ ಸಿಕ್ಕ ಸಂಪತ್ತಿನ ದಾಖಲೆಗಳು ಮತ್ತು ಹಣದ ಬಗ್ಗೆ ಇನ್ನೂ ಸ್ಪಷ್ಟ ಉತ್ತರ ನೀಡಲಿಲ್ಲ. ಶೋಧದ ಬಳಿಕ ಡಿಕೆಶಿ ಕುಟುಂಬವನ್ನು ಕರೆಸಿಕೊಂಡಿದ್ದ ಅಧಿಕಾರಿಗಳು ನಾನಾ ಪ್ರಶ್ನೆಗಳನ್ನು ಕೇಳಿದ್ದರು. ಇಷ್ಟೊಂದು ಸಂಪತ್ತು ಎಲ್ಲಿಂದ ಬಂತು..? ಇಷ್ಟೊಂದು ಹಣ ಎಲ್ಲಿತ್ತು? ಅನ್ನೋದ್ರ ಬಗ್ಗೆ ಡಿಕೆಶಿ ಸಮರ್ಪಕ ಉತ್ತರ ನೀಡಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸಚಿವ ಡಿಕೆಶಿ ಮೇಲೆ ಕೇಸ್ ದಾಖಲಾಗ್ತಿದ್ದಂತೆಯೇ ಆಪ್ತರು ಯೂಟರ್ನ್!

    ಅಷ್ಟೇ ಅಲ್ಲದೇ ಕರ್ನಾಟಕ ವಿಧಾನಸಭಾ ಚುನವಾಣೆ ಸಂದರ್ಭದಲ್ಲಿ ಗುಜರಾತ್ ನ ಕಾಂಗ್ರೆಸ್ ಶಾಸಕರನ್ನು ಇರಿಸಲಾಗಿದ್ದ ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಡಿ.ಕೆ ಶಿವಕುಮಾರ್ ಚೀಟಿ ಹರಿಯುತ್ತಿದ್ದಾಗ ಐಟಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ಆ ಚೀಟಿಯಲ್ಲಿ ಏನಿತ್ತು..? ಅನ್ನೋದನ್ನ ಕೂಡ ಡಿಕೆಶಿ ಇದುವರೆಗೂ ಸ್ಪಷ್ಟಪಡಿಸಿಲ್ಲ. 

    ರೆಸಾರ್ಟ್ ನಲ್ಲಿ ಸಿಕ್ಕ ಹಾಳೆಗಳಲ್ಲಿ ಹಲವು ಲೆಕ್ಕಗಳನ್ನು ಬರೆಯಲಾಗಿದೆ. ಅವೆಲ್ಲವೂ ಏನು ಅನ್ನೋದು ಪ್ರಶ್ನೆಯಾಗಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 2ರಂದು ಮತ್ತೊಮ್ಮೆ ವಿಚಾರಣೆ ಹಾಜರಾಗಿ ಉತ್ತರ ಕೊಡಿ ಎಂದು ಐಟಿ ಇಲಾಖೆ ಡಿಕೆಶಿಗೆ ಸೂಚಿಸಿದೆ. ಇದನ್ನೂ ಓದಿ: Exclusive: ಸಚಿವ ಡಿಕೆಶಿಗೆ ಭಾರೀ ಸಂಕಷ್ಟ – ಐಟಿ ಇಲಾಖೆ ಕೋರ್ಟ್ ಗೆ ಕೊಟ್ಟ ಕಂಪ್ಲೆಂಟ್‍ನಲ್ಲಿ ಏನಿದೆ ಗೊತ್ತಾ?

    ಈ ಹಿಂದೆ ಐಟಿ ಕೇಳಿದ್ದ ಹಲವು ಪ್ರಶ್ನೆಗಳಿಗೆ ಉತ್ತರಿಸಲು ಡಿ.ಕೆ.ಶಿವಕುಮಾರ್ ಸಮಯ ಕೇಳಿದ್ದರು. ಆದರೆ ಕೊಟ್ಟ ಸಮಯ ಮುಗಿದಿರುವ ಹಿನ್ನೆಲೆಯಲ್ಲಿ ವಿಚಾರಣೆ ಗೆ ಹಾಜರಾಗುವಂತೆ ಐಟಿ ನೋಟಿಸ್ ನೀಡಿತ್ತು. ಈಗ ಐಟಿ ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಡಿ.ಕೆ.ಶಿವಕುಮಾರ್ ಉತ್ತರಿಸಲೇಬೇಕಾದ ಅನಿವಾರ್ಯತೆ ಬಂದಿದೆ. ಒಂದು ವೇಳೆ ಉತ್ತರಿಸದೇ ಹೋದರೆ ಮತ್ತೆ ಕೇಸ್ ದಾಖಲಾಗುವ ಸಾಧ್ಯತೆ ಇದೆ.

    https://www.youtube.com/watch?v=LiyJYqJrqQs

  • Exclusive: ಸಚಿವ ಡಿಕೆಶಿಗೆ ಭಾರೀ ಸಂಕಷ್ಟ – ಐಟಿ ಇಲಾಖೆ ಕೋರ್ಟ್ ಗೆ ಕೊಟ್ಟ ಕಂಪ್ಲೆಂಟ್‍ನಲ್ಲಿ ಏನಿದೆ ಗೊತ್ತಾ?

    Exclusive: ಸಚಿವ ಡಿಕೆಶಿಗೆ ಭಾರೀ ಸಂಕಷ್ಟ – ಐಟಿ ಇಲಾಖೆ ಕೋರ್ಟ್ ಗೆ ಕೊಟ್ಟ ಕಂಪ್ಲೆಂಟ್‍ನಲ್ಲಿ ಏನಿದೆ ಗೊತ್ತಾ?

    ಬೆಂಗಳೂರು: ಐಟಿ ದಾಳಿಗೆ ಒಳಗಾಗಿರೋ ಸಚಿವ ಡಿಕೆ ಶಿವಕುಮಾರ್ ಅವರು ಸಂಕಷ್ಟಗಳ ಮೇಲೆ ಸಂಕಷ್ಟದಲ್ಲಿ ಸಿಲುಕಿದ್ದಾರೆ.

    `ಕನಕಪುರದ ಬಂಡೆ’ ವಿರುದ್ಧ ಐಟಿ ಅಧಿಕಾರಿಗಳು ಕೋರ್ಟ್ ಗೆ ಗುಪ್ತವಾಗಿ ದೂರು ನೀಡಿದ್ದಾರೆ. ಸಚಿವ ಡಿಕೆ ಶಿವಕುಮಾರ್ ವಿರುದ್ಧ ಐಟಿ ಅಧಿಕಾರಿಗಳು ಕೊಟ್ಟ ಕಂಪ್ಲೆಂಟ್ ಕಾಪಿ ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ.

    ಕಂಪ್ಲೇಂಟ್ ನಲ್ಲೇನಿದೆ?:
    ಮಾಧ್ಯಮಗಳಲ್ಲಿ ಪ್ರತ್ಯಕ್ಷವಾದ ವರದಿಯೇ ಬೇರೆ, ಕೋರ್ಟ್ ನಲ್ಲಿ ಇರೋ ಕಾಪಿಯೇ ಬೇರೆಯಾಗಿದೆ. ಡಿಕೆಶಿಯ ಅಸಲಿಯತ್ತು ಗುಪ್ತವಾಗಿ ಸಲ್ಲಿಸಿದ್ದ ದೂರಿನಲ್ಲಿ ದಾಖಲಾಗಿದೆ. ಹಣ ಸಾಗಾಟ ಮಾಡಲಿಕ್ಕಾಗಿಯೇ ಶಿವಕುಮಾರ್ ದೊಡ್ಡ ಟೀಂ ಕಟ್ಟಿದ್ದರು. ಆಪ್ತರು ಅನ್ನಿಸಿಕೊಂಡವರೆಲ್ಲಾ ಹಣ ಸಾಗಾಟ ಮಾಡಲಿಕ್ಕಾಗಿಯೇ ಇದ್ದವರಾಗಿದ್ದಾರೆ. ಒಟ್ಟಿನಲ್ಲಿ ಈ ಟೀಂ ಯಾರಿಗೂ ಅನುಮಾನ ಬಾರದಂತೆ ಕೆಲಸ ಮಾಡುತ್ತಿತ್ತು. ಅಲ್ಲದೇ ಡಿಕೆಶಿ ಅಂಡ್ ಟೀಂ ಮೂಲಕವೇ ಕರ್ನಾಟಕದಿಂದ ಹೈಕಮಾಂಡ್‍ಗೆ ಕಪ್ಪ ಕಾಣಿಕೆ ಸಲ್ಲಿಕೆಯಾಗುತ್ತಿತ್ತು. ಸಾಕಷ್ಟು ವರ್ಷದಿಂದ ಇದನ್ನು ಮಾಡ್ತಾ ಇದ್ದಿದ್ದು ನಿಜ. ಸರ್ಕಾರಕ್ಕೆ ಈ ಟೀಂ ಮೂಲಕವೇ ತೆರಿಗೆ ವಂಚನೆ ಆಗ್ತಾ ಇತ್ತು ಅಂತ ಕೋರ್ಟ್ ಗೆ ಕೊಟ್ಟ ದೂರಿನಲ್ಲಿ ಐಟಿ ಅಧಿಕೃತವಾಗಿ ತಿಳಿಸಿದೆ. ಇದನ್ನೂ ಓದಿ: ದೆಹಲಿಯಲ್ಲಿ ಡಬಲ್ ಬೆಡ್‍ರೂಂ ಫ್ಲ್ಯಾಟ್ ಇರೋದು ನಿಜ- ಡಿಕೆಶಿ

    ರೆಸಾರ್ಟ್ ನಲ್ಲಿ ಚೀಟಿ ಹರಿದು ರಾಜೇಂದ್ರನೇ ಗೊತ್ತಿಲ್ಲ ಅಂತ ಹೇಳಿದ್ದರು. ಅಲ್ಲದೇ ರಾಜೇಂದ್ರನಿಗು ನನಗೂ ಯಾವುದೇ ವ್ಯವಹಾರಿಕ ಸಂಬಂಧವೂ ಇಲ್ಲ ಅಂತಾನೂ ಹೇಳಿದ್ದರು. ಆದ್ರೆ, ಚೀಟಿಯಲ್ಲಿ ರಾಜೇಂದ್ರ-3 “ಡ್ಯೂ” ಅಂತ ಡಿಕೆಶಿ ಬರೆದಿದ್ದರು. ಇದ್ರಿಂದ ಬಲವಾದ ಸಾಕ್ಷಿಯಿದೆ. ಆದ್ರೆ, ಡಿಕೆಶಿ ಕಾಲಾವಕಾಶ ಪಡೆದು ಸಾಕ್ಷ್ಯ ನಾಶಪಡಿಸಿದ್ದಾರೆ ಎಂಬುದಾಗಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಐಟಿ ದಾಳಿಗೆ ಒಳಗಾಗಿರೋ ಡಿಕೆಶಿಗೆ ಹೊಸ ಸಂಕಷ್ಟ!

  • ಹವಾಲ ವ್ಯವಹಾರದಲ್ಲಿ ಡಿಕೆ ಶಿವಕುಮಾರ್ ಭಾಗಿ?

    ಹವಾಲ ವ್ಯವಹಾರದಲ್ಲಿ ಡಿಕೆ ಶಿವಕುಮಾರ್ ಭಾಗಿ?

    ಬೆಂಗಳೂರು: ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಹವಾಲ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪವೊಂದು ಈಗ ಕೇಳಿಬಂದಿದೆ.

    ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಐಟಿ ಇಲಾಖೆ ಹಿರಿಯ ಅಧಿಕಾರಿಗಳು ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ಸೋಮವಾರ ದೂರು ಸಲ್ಲಿಸಿದ್ದರು. ಐಟಿ ಕಾಯಿದೆ ಸೆಕ್ಷನ್ 277, 278, 193, 199, ಹಾಗೂ 120(ಬಿ) ಅಡಿ ಪ್ರಕರಣ ದಾಖಲಾಗಿತ್ತು.

    ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದದ ವಿವರವನ್ನು ಉಲ್ಲೇಖಿಸಿದ್ದಾರೆ. ಈ ದೂರಿನಲ್ಲಿ ಹವಾಲ ಹಣದ ಮೂಲಕ ಕೋಟಿ ಕೋಟಿ ಹಣವನ್ನು ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಕಳುಹಿಸಿಕೊಟ್ಟಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿದೆ ಎಂಬ ಮಾಹಿತಿ ಲಭಿಸಿದೆ.

    ಆರೋಪಗಳೇನು?
    ದೆಹಲಿಯ 4 ಫ್ಲಾಟ್ ಗಳ ಮೇಲೆ ನಡೆದ ದಾಳಿಯಲ್ಲಿ 8.59 ಕೋಟಿ ರೂ. ಹಣ ಪತ್ತೆಯಾಗಿದೆ. ಶರ್ಮಾ ಟ್ರಾನ್ಸ್ ಪೋರ್ಟ್ ವ್ಯವಹಾರ ನೋಡಿಕೊಳ್ಳುವ ರಾಜೇಂದ್ರ ಮನೆ ಮೇಲೆ ನಡೆದ ದಾಳಿಯಲ್ಲಿ ಡೈರಿ, ಟಿಪ್ಪಣಿಗಳು ಸಿಕ್ಕಿದೆ. ಎಷ್ಟು ಲಕ್ಷ ರೂ.ಗಳನ್ನು ನೀಡಲಾಗಿದೆ ಎನ್ನುವ ಲೆಕ್ಕದ ವಿಚಾರವನ್ನು ಕೆಜಿಗಳ ಲೆಕ್ಕದಲ್ಲಿ ಡೈರಿನಲ್ಲಿ ನಮೂದಿಸಲಾಗಿದೆ. ಮನೆಯಲ್ಲಿಟ್ಟಿದ್ದ ಹಣವನ್ನು ಎಐಸಿಸಿಗೆ ಕೊಡುವಂತೆ ವಿ.ಮುಳ್‍ಗುಂದ್‍ಗೆ 5 ಕೋಟಿ ರೂ. ಹಣವನ್ನು ರವಾನಿಸಿದ್ದ ಬಗ್ಗೆ ಡೈರಿಯಲ್ಲಿ ಉಲ್ಲೇಖಿಸಿದೆ. ಈ ಹಣವನ್ನು ಡಿಕೆ ಶಿವಕುಮಾರ್ ಸೂಚನೆ ಮೇರೆಗೆ 3.24 ಕೋಟಿ ರೂ. ಹಣವನ್ನು ಆಂಜನೇಯ ಪಾವತಿಸಿದ್ದಾರೆ. ಸಫ್ದರ್ ಜಂಗ್ ನ 3 ಫ್ಲಾಟ್‍ಗಳು ಅಘೋಷಿತ ಹಣ ಸಂಗ್ರಹಣೆಗೆ ಬಳಕೆಯಾಗಿದೆ ಎಂದು ಐಟಿ ತನ್ನ ದೂರಿನಲ್ಲಿ ಉಲ್ಲೇಖಿಸಿದೆ ಎಂದು ತಿಳಿದು ಬಂದಿದೆ.

    ಸ್ಪಷ್ಟ ಉತ್ತರ ಸಿಕ್ಕಿಲ್ಲ:
    ಐಟಿ ದಾಳಿಯಾದ ಬಳಿಕ ಪತ್ತೆಯಾದ ಡೈರಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಡಿಕೆ ಶಿವಕುಮಾರ್ ಮತ್ತು ಆರೋಪಿಗಳನ್ನು ವಿಚಾರಣೆ ನಡೆಸಿದ್ದರು. ಕೆಜಿ ಎಂಬ ಕೋಡ್ ವರ್ಡ್ ಬಳಸಿ ನಗದು ವ್ಯವಹಾರ ನಡೆಸುತ್ತಿದ್ದಾರೆ ಎನ್ನುವ ಅನುಮಾನದ ಮೇರೆಗೆ ಅಧಿಕಾರಿಗಳು ಆರೋಪಿಗಳಿಗೆ ಪ್ರಶ್ನೆ ಕೇಳಿದ್ದಾರೆ. ಆದರೆ ಈ ಪ್ರಶ್ನೆಗಳಿಗೆ ಆರೋಪಿಗಳಿಂದ ಸರಿಯಾದ ಉತ್ತರ ಸಿಕ್ಕಿಲ್ಲ ಎಂದು ಮೂಲಗಳು ತಿಳಿಸಿವೆ.

    ಅಕ್ರಮ ಹವಾಲ ಹಣ ಮೇಲೆ ಕಣ್ಣಿಟ್ಟಿರುವ ಐಟಿ ಇಲಾಖೆ ಸದ್ಯ ಲಭ್ಯವಾದ ಮಾಹಿತಿಯ ವರದಿಯನ್ನು ಜಾರಿ ನಿರ್ದೇಶನಾಲಯಗೆ (ಇಡಿ) ಮಂಗಳವಾರವಷ್ಟೇ ರವಾನೆ ಮಾಡಿದೆ.

    ಸಮನ್ಸ್ ಜಾರಿ:
    ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಆರ್ಥಿಕ ಅಪರಾಧ ನ್ಯಾಯಾಲಯದ ನ್ಯಾ.ಎಂ.ಎಸ್. ಆಳ್ವಾ ಅವರು ಡಿಕೆ ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಆಗಸ್ಟ್ 2 ರಂದು ಡಿಕೆಶಿ ಸೇರಿ ಎಲ್ಲಾ ಆರೋಪಿಗಳು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದೆ.

    ಈ ಹಿಂದೆ ಡಿ.ಕೆ. ಶಿವಕುಮಾರ್ ಐಟಿ ಇಲಾಖೆ ದಾಖಲಿಸಿದ್ದ ದೂರಿಗೆ ಜಾಮೀನು ಪಡೆದಿದ್ದರು. ಡಿ.ಕೆ.ಶಿವಕುಮಾರ್ ಜೊತೆ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ವಿರುದ್ಧವೂ ಸಮನ್ಸ್ ಜಾರಿಯಾಗಿದೆ.