Tag: it

  • ನನ್ನ ಅಕೌಂಟ್‍ನಲ್ಲಿ ದುಡ್ಡೇ ಇಲ್ಲ ಎಂದಿದ್ದ 5 ದಿನದಲ್ಲೇ ರಶ್ಮಿಕಾಗೆ ಐಟಿ ಶಾಕ್

    ನನ್ನ ಅಕೌಂಟ್‍ನಲ್ಲಿ ದುಡ್ಡೇ ಇಲ್ಲ ಎಂದಿದ್ದ 5 ದಿನದಲ್ಲೇ ರಶ್ಮಿಕಾಗೆ ಐಟಿ ಶಾಕ್

    – ವೆಬ್ ಸಿರೀಸ್ ಕಾರ್ಯಕ್ರಮದಲ್ಲಿ ರಶ್ಮಿಕಾ ಮಾತು
    – ಸಂಭಾವನೆ ಬಗ್ಗೆ ಕೇಳಲಾದ ಪ್ರಶ್ನೆಗೆ ಕಿರಿಕ್ ನಟಿಯ ಉತ್ತರ

    ಬೆಂಗಳೂರು: ದಕ್ಷಿಣ ಭಾರತದ ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದರೆ ಕೋಟಿಗಟ್ಟಲೇ ಸಂಭಾವನೆ ಪಡೆಯುತ್ತಾರೆ ಎನ್ನಲಾಗುವ ರಶ್ಮಿಕಾ, “ನನ್ನ ಬ್ಯಾಂಕ್ ಅಕೌಂಟ್‍ನಲ್ಲಿ ದುಡ್ಡೇ ಇಲ್ಲ ಗುರು” ಎಂದಿದ್ದಾರೆ.

    ಯೂಟ್ಯೂಬ್ ಚಾನೆಲಿಗೆ ನೀಡಿದ ನೀಡಿದ ಸಂದರ್ಶನದಲ್ಲಿ ರಶ್ಮಿಕಾ ಈ ರೀತಿ ಕೇಳಿದ್ದಾರೆ. ನಿರೂಪಕ, “ನೀವು ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಅಲ್ವಾ” ಎಂದು ಪ್ರಶ್ನೆ ಕೇಳಿದ್ದಾರೆ. ಆಗ ರಶ್ಮಿಕಾ, “ಇದೆಲ್ಲ ಸುಳ್ಳು, ನನ್ನ ಬ್ಯಾಂಕ್ ಆಕೌಂಟ್‍ನಲ್ಲಿ ದುಡ್ಡೇ ಇಲ್ಲ. ನನ್ನ ಅಕೌಂಟ್ ಖಾಲಿ ಇದೆ, ಇದೆಲ್ಲಾ ಗಾಸಿಪ್ ಅಷ್ಟೇ” ಎಂದಿದ್ದರು. ರಶ್ಮಿಕಾ ಅವರ ಕಾರ್ಯಕ್ರಮದ ವಿಡಿಯೋ ಜ.11 ರಂದು ಯೂಟ್ಯೂಬ್ ನಲ್ಲಿ ಅಪ್ಲೋಡ್ ಆಗಿತ್ತು. ಈ ವಿಡಿಯೋ ಅಪ್ಲೋಡ್ ಆದ 5 ದಿನದಲ್ಲೇ ಐಟಿ ಅಧಿಕಾರಿಗಳು ರಶ್ಮಿಕಾ ಮನೆಯ ಮೇಲೆ ದಾಳಿ ಮಾಡಿದ್ದಾರೆ.

    ಸಿನಿಮಾದಿಂದ ದುಡ್ಡು ಬರುವುದಿಲ್ಲ ಎಂದು ಕಿರಿಕ್ ಹುಡುಗಿ ಹೇಳಿದ್ದಾರೆ. ಬೇರೆಯವರು ನನ್ನ ಬಗ್ಗೆ ವಿವಾದ ಮಾಡಿ ಯೂಟ್ಯೂಬ್‍ನಲ್ಲಿ ದುಡ್ಡು ಮಾಡುತ್ತಾರೆ. ಅದಕ್ಕೆ ನಾನು ಯೂಟ್ಯೂಬ್ ಚಾನೆಲ್ ಮಾಡಿ ಅದರಲ್ಲಿ ವಿವಾದಾತ್ಮಕ ಮಾತು ಹಾಕಿ ದುಡ್ಡು ಮಾಡೋಣ ಎಂದು ವೆಬ್ ಸಿರಿಸ್ ನ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ತಮಾಷೆಯಾಗಿ ಹೇಳಿದ್ದಾರೆ. ಕೈಯಲ್ಲಿ ಸಾಲು ಸಾಲು ಸಿನಿಮಾವಿದ್ದರೂ ಬ್ಯಾಂಕ್‍ನಲ್ಲಿ ದುಡ್ಡೇ ಇಲ್ಲ ಎಂದಿದ್ದ ರಶ್ಮಿಕಾ ಮಂದಣ್ಣಗೆ ಈಗ ಐಟಿ ಶಾಕ್ ಕೊಟ್ಟಿದೆ.

    “ಯಾರೇ ಕೆಲಸ ಮಾಡಿದರೂ ಪ್ರಮೋಷನ್ ಬೇಕಾಗುತ್ತದೆ. ನಾನು ಫ್ರೀಯಾಗಿ ಸಿನಿಮಾ ಮಾಡಲೇ? ನಿದ್ದೆ, ಊಟ ಇಲ್ಲದೆ ಕಷ್ಟ ಪಡುತ್ತಿದ್ದೇನೆ. ಎಲ್ಲಾ ತಯಾರಿ ಮಾಡಿಕೊಂಡಿದ್ದೇನೆ. ಹೀಗಾಗಿ ಸಂಭಾವನೆ ಹೆಚ್ಚು ಮಾಡಿಕೊಂಡರೆ ತಪ್ಪೇನು ಎಂದು ಪ್ರಶ್ನಿಸಿದ್ದರು. 2017ರಲ್ಲಿ ಮೊದಲ ಸಿನಿಮಾ ಮಾಡಿದೆ, ಅಲ್ಲಿಂದ ನಾನು ಕೂಡ ಬೆಳೆಯಬೇಕಲ್ಲವೆ ಎಂದಿದ್ದರು.

     

    ಐಟಿ ದಾಳಿ ಮಾಡಿದ್ದೇಕೆ?
    ಮೊದಲನೆಯದು ರಶ್ಮಿಕಾ ಕುಟುಂಬ ಇತ್ತೀಚೆಗೆ ವಿರಾಜಪೇಟೆ ಗೋಣಿಕೊಪ್ಪದಲ್ಲಿ 3 ಎಕರೆ ಜಾಗ ಖರೀದಿಸಿ ರೆಸಿಡೆನ್ಸಿಯಲ್ ಸ್ಕೂಲ್ ಪ್ರಾರಂಭ ಮಾಡುವ ಉದ್ದೇಶ ಹೊಂದಿದ್ದರು ಎಂಬ ಮಾಹಿತಿ ಹೊರಬಿದ್ದಿದೆ. ವಿರಾಜಪೇಟೆ ಸುತ್ತಮುತ್ತ ಸುಮಾರು 50 ಎಕರೆಯಷ್ಟು ಕಾಫಿ ತೋಟ ಖರೀದಿಯ ಬಗ್ಗೆಯೂ ಐಟಿ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಹಲವು ವ್ಯವಹಾರಗಳಲ್ಲಿ ಹೂಡಿಕೆಯನ್ನು ಮಾಡಿದ್ದಾರೆ.

    ಮೂರು ತಿಂಗಳ ಹಿಂದೆ ಕೋಟ್ಯಂತರ ಬೆಲೆ ಬಾಳುವ ಕಾರು ಖರೀದಿ ಮಾಡಿದ್ದಾರೆ. ಜೊತೆಗೆ ಭೂಮಿ ಖರೀದಿ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇಷ್ಟೆ ಅಲ್ಲದೇ ನಗದು ರೂಪದಲ್ಲಿ ಸಂಭಾವನೆ ಪಡೆದಿರುವ ಕಾರಣ ತೆರಿಗೆ ಪಾವತಿಸಿಲ್ಲ ಎನ್ನಲಾಗುತ್ತಿದೆ. ಈ ಎಲ್ಲಾ ಮಾಹಿತಿಯ ಆಧಾರದ ಮೇರೆಗೆ ಐಟಿ ಅಧಿಕಾರಿಗಳು ರಶ್ಮಿಕಾ ಮನೆಯ ಮೇಲೆ ದಾಳಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

  • ಮೂರು ಕಾರಣಗಳಿಂದ ರಶ್ಮಿಕಾ ಮನೆ ಮೇಲೆ ಐಟಿ ದಾಳಿ

    ಮೂರು ಕಾರಣಗಳಿಂದ ರಶ್ಮಿಕಾ ಮನೆ ಮೇಲೆ ಐಟಿ ದಾಳಿ

    ಬೆಂಗಳೂರು: ಬೆಳ್ಳಂಬೆಳಗ್ಗೆ ಸ್ಯಾಂಡಲ್‍ವುಡ್ ನಟಿ ರಶ್ಮಿಕಾ ಮಂದಣ್ಣ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಐಟಿ ಅಧಿಕಾರಿಗಳು ಮೂರು ಕಾರಣಗಳಿಂದ ನಟಿ ರಶ್ಮಿಕಾ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಟ್ಯಾಕ್ಸಿ ಮೂಲಕ ಆಗಮಿಸಿದ ಅಧಿಕಾರಿಗಳು ನಟಿ ಕುಟುಂಬಸ್ಥರಿಗೆ ಶಾಕ್ ನೀಡಿದ್ದಾರೆ.

    ಮೊದಲನೆಯದಾಗಿ ನಟಿ ರಶ್ಮಿಕಾ ಪಡೆಯುತ್ತಿರುವ ಸಂಭಾವನೆಯ ಬಗ್ಗೆ ತಪ್ಪು ಮಾಹಿತಿ ನೀಡಿರುವುದು. ಜಾಹೀರಾತು ಏಜೆನ್ಸಿಗಳ ಜೊತೆಯೂ ರಶ್ಮಿಕಾ ಷೇರು ವ್ಯವಹಾರ ನಡೆಸುತ್ತಿದ್ದಾರೆ. ಜೊತೆಗೆ ರಶ್ಮಿಕಾ ಟಾಲಿವುಡ್‍ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಮಾಹಿತಿ ಐಟಿ ಅಧಿಕಾರಿಗಳಿಗೆ ಲಭ್ಯವಾಗಿದೆ. ಹೀಗಾಗಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ರಶ್ಮಿಕಾ ಮನೆಯ ಮೇಲೆ ದಾಳಿ ನಡೆಸಿದ್ದಾರೆ.

    10ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಮನೆಯಲ್ಲಿ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದೆ. ಶೂಟಿಂಗ್ ಗಾಗಿ ರಶ್ಮಿಕಾ ಹೈದರಾಬಾದಿಗೆ ಹೋಗಿದ್ದಾರೆ. ಸ್ಯಾಂಡಲ್‍ವುಡ್ ಮತ್ತು ಟಾಲಿವುಡ್ ಬಹುಬೇಡಿಕೆಯ ನಟಿಯಾಗಿರುವ ರಶ್ಮಿಕಾ ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಾ ಬಂದಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಮನೆ ಮಾತಾಗಿರುವ ರಶ್ಮಿಕಾ ಮಂದಣ್ಣ ಆದಾಯದಲ್ಲಿ ಹೆಚ್ಚಳವಾಗಿದೆ. ಹಾಗಾಗಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • ಒಂದೇ ಗಂಟೆಯಲ್ಲಿ ಪರಂ ಐಟಿ ವಿಚಾರಣೆ ಅಂತ್ಯ

    ಒಂದೇ ಗಂಟೆಯಲ್ಲಿ ಪರಂ ಐಟಿ ವಿಚಾರಣೆ ಅಂತ್ಯ

    ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರ ಮೊದಲ ದಿನದ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳ ವಿಚಾರಣೆ ಕೇವಲ ಒಂದು ಗಂಟೆಯಲ್ಲಿಯೇ ಅಂತ್ಯವಾಗಿದೆ.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ವಶಕ್ಕೆ ಪಡೆದಿದ್ದ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಅವರಿಗೂ ಸ್ವಲ್ಪ ಕಾಲಾವಕಾಶ ಬೇಕು. ಅದಕ್ಕಾಗಿ ನಾನು ಕೂಡ ಮೂರು ದಿನ ಸಮಯ ಕೇಳಿದ್ದೇನೆ. ಮೂರು ದಿನದ ಬಳಿಕ ಸಮನ್ಸ್ ನೀಡಿದರೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದರು.

    ಇದೇ ವೇಳೆ ತಮ್ಮ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಣಬಂಧಿಸಿದಂತೆ ಪ್ರತಿಕ್ರಿಯಿಸಿದ ಪರಂ, ಈ ಪ್ರಕರಣದ ಬಗ್ಗೆ ವಿಶೇಷ ತನಿಖೆಯ ಅವಶ್ಯಕತೆ ಇದೆ. ಕೆಲವೊಬ್ಬರು ನಾನೇ ಕೊಲೆ ಮಾಡಿಸಿದ್ದೇನೆ ಎಂದು ಹೇಳುತ್ತಾರೆ. ನಾನು ಅವನ ಹೆಸರಲ್ಲಿ ಬೇನಾಮಿ ಮಾಡಿದ್ದೇನೆ ಅಂತಾನೂ ಹೇಳುತ್ತಾರೆ. ಅದಕ್ಕೆ ಭಯ ಪಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುದ್ದಿ ಬರುತ್ತಿದೆ. ಈ ಸಂಬಂಧ ನನ್ನ ಮೇಲೆ ಈ ಆರೋಪಗಳು ಬೇಡ. ಸತ್ಯಾಸತ್ಯತೆ ತಿಳಿದುಕೊಳ್ಳಲು ತನಿಖೆಯ ಅಗತ್ಯತೆ ಇದೆ. ಅವನು ಯಾವ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡ ಅನ್ನೋದನ್ನ ನಾನು ತಿಳಿದುಕೊಳ್ಳಬೇಕು ಎಂದು ಅವರು ತಿಳಿಸಿದರು.

    ಇಂದು ಹನ್ನೊಂದು ಗಂಟೆ ಸುಮಾರಿಗೆ ಪರಮೇಶ್ವರ್ ಬೆಂಗಳೂರಿನ ಐಟಿ ಕಚೇರಿಗೆ ಹಾಜರಾಗುವಂತೆ ಐಟಿ ಇಲಾಖೆ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಐಡಿ ಕಾರ್ಡ್, ಆಧಾರ್ ಕಾರ್ಡ್ ಮೊದಲಾದ ಪಂಚನಾಮೆಯ ದಾಖಲಾತಿಯೊಂದಿಗೆ ಪರಮೇಶ್ವರ್ ಇಂದು ಬೆಳಗ್ಗೆ 10 ಗಂಟೆಗೆ ಐಟಿ ಅಧಿಕಾರಿಗಳ ಮುಂದೆ ಹಾಜರಾಗಿದ್ದರು. 11 ಗಂಟೆಗೆ ವಿಚಾರಣೆ ಅಂತ್ಯವಾಗಿದೆ.

  • ಪರಂ ಪಿಎ ರಮೇಶ್ ಸಾವು ಸಹಜವಲ್ಲ, ಆತನನ್ನು ಮುಗಿಸಲಾಗಿದೆ: ರೇಣುಕಾಚಾರ್ಯ

    ಪರಂ ಪಿಎ ರಮೇಶ್ ಸಾವು ಸಹಜವಲ್ಲ, ಆತನನ್ನು ಮುಗಿಸಲಾಗಿದೆ: ರೇಣುಕಾಚಾರ್ಯ

    ದಾವಣಗೆರೆ: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಸಾವು ಸಹಜ ಸಾವು ಅಲ್ಲ. ಆತನನ್ನು ಮುಗಿಸಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.

    ನಗರದ ನಾಯಕರ ವಿಧ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿಗೆ ಆಗಮಿಸಿ, ಶ್ರೀಗಳ ಫೋಟೋಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ಇದಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಸಾವು ಸಹಜ ಸಾವು ಅಲ್ಲ. ಆತನನ್ನು ಮುಗಿಸಲಾಗಿದೆ. ಆತನ ಸಾವಿಗೆ ಬೇರೆ ಬೇರೆ ಕಾರಣಗಳು ಇವೆ. ಇದಕ್ಕೆಲ್ಲ ಡಾ.ಜಿ.ಪರಮೇಶ್ವರ್ ಅವರೇ ಉತ್ತರಿಸಬೇಕು ಎಂದರು.

    ರಮೇಶ್ ಸಾವಿಗೆ ಐಟಿ ಅಥವಾ ಕೇಂದ್ರ ಸರ್ಕಾರ ಕಾರಣ ಎಂದು ಆರೋಪ ಮಾಡುತ್ತಿದ್ದಾರೆ. ಐಟಿ ಇಲಾಖೆಗೂ ಕೇಂದ್ರ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಮೇಲಾಗಿ ಪರಮೇಶ್ವರ್ ಅವರು ಬೆಂಗಳೂರಿನಲ್ಲಿಯೇ ಇದ್ದರು. ಆದರು ಸಹ ಅಧಿವೇಶನದಲ್ಲಿ ಏಕೆ ಭಾಗವಹಿಸಲಿಲ್ಲ. ಸದನದಲ್ಲಿ ಭಾಗವಹಿಸಿ ಈ ಬಗ್ಗೆ ಮಾತಾಡಬಹುದಿತ್ತು. ರಮೇಶ್ ಸಾವಿನ ಬಗ್ಗೆ ನಾನಾ ಸಂಶಯಗಳಿವೆ. ಇದು ತನಿಖೆಯಿಂದ ಬೆಳಕಿಗೆ ಬರಲಿದೆ ಎಂದು ಆರೋಪ ಮಾಡಿದರು.

    ರಮೇಶ್ ಆತ್ಮಹತ್ಯೆ:
    ಡಾ. ಜಿ ಪರಮೇಶ್ವರ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ರಮೇಶ್ ಅವರ ಬಳಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದರು ಎನ್ನಲಾಗುತ್ತಿದೆ. ಇದರಿಂದ ನೊಂದಿದ್ದ ರಮೇಶ್ ನನ್ನ ಮರ್ಯಾದೆ ಹೋಯಿತು. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಶನಿವಾರ ಬೆಳಗ್ಗೆ ತನ್ನ ಆಪ್ತರಿಬ್ಬರಿಗೆ ಕರೆ ಮಾಡಿ ತಿಳಿಸಿ, ತನ್ನ ಮೊಬೈಲನ್ನು ಸ್ವಿಚ್ಚ್ ಆಫ್ ಮಾಡಿಕೊಂಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ರಮೇಶ್ ಅವರು ಬೆಂಗಳೂರಿನ ಜ್ಞಾನ ಭಾರತಿ ಕ್ಯಾಂಪಸ್ ನಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

    ರಮೇಶ್ ಆತ್ಮಹತ್ಯೆ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಮನೆಯವರು ಸ್ಥಳಕ್ಕೆ ದೌಡಾಯಿಸಿದ್ದು, ಆಕ್ರಂದನ ಮುಗಿಲುಮುಟ್ಟಿತ್ತು. ಅಲ್ಲದೆ ಇದೇ ವೇಳೆ ಪರಮೇಶ್ವರ್, ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ನಾಯಕರು ಕೂಡ ಘಟನಾ ಸ್ಥಳಕ್ಕೆ ಬಂದು ರಮೇಶ್ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಪ್ರಯತ್ನ ಮಾಡಿದ್ದರು. ರಮೇಶ್ ಸ್ವಗೃಹ ರಾಮನಗರದ ಮೇಳಹಳ್ಳಿಯಲ್ಲಿ ಇಂದು ಒಕ್ಕಲಿಗರ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.

  • ಮಾಜಿ ಡಿಸಿಎಂ ಪರಮೇಶ್ವರ್​ಗೆ ಇಡಿ ಸಂಕಷ್ಟ?

    ಮಾಜಿ ಡಿಸಿಎಂ ಪರಮೇಶ್ವರ್​ಗೆ ಇಡಿ ಸಂಕಷ್ಟ?

    ಬೆಂಗಳೂರು: ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳ ಇಕ್ಕಳದಲ್ಲಿರುವ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರಿಗೆ ಇದೀಗ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ಸಂಕಷ್ಟ ಎದುರಾಗಿದೆ.

    ಮೂರು ದಿನಗಳಿಂದ ಪರಮೇಶ್ವರ್ ಒಡೆತನದ ವಿದ್ಯಾಸಂಸ್ಥೆಗಳಿಂದ ಐಟಿ ದಾಳಿ ನಡೆಯುತ್ತಿದೆ. ಶುಕ್ರವಾರ ಐಟಿ ಇಲಾಖೆ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಹವಾಲಾ ಹಣದ ಬಗ್ಗೆ ಉಲ್ಲೇಖ ಮಾಡಿದೆ. ಹೀಗಾಗಿ ಹವಾಲಾ ವ್ಯವಹಾರ ಕಂಡು ಬಂದ ಹಿನ್ನೆಲೆಯಲ್ಲಿ ಇ.ಡಿ ಪ್ರಕರಣವನ್ನ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಪಿಎಂಎಲ್ ಎ ಕಾಯ್ದೆಯ ಅಡಿಯಲ್ಲಿ ಹವಾಲಾ ಹಣದ ತನಿಖೆಯನ್ನ ಇಡಿ ಮಾಡುತ್ತದೆ. ಹೀಗಾಗಿ ಪರಮೇಶ್ವರ್ ಗೆ ಇಡಿ ಸಂಕಷ್ಟ ಖಚಿತವಾಗಿದೆ. ಪರಮೇಶ್ವರ್ ಪ್ರಕರಣ ಇಡಿಗೆ ಹೋಗಬಹುದಾ ಎಂಬ ಚರ್ಚೆಗಳು ನಡೆದಿದ್ದವು. ಈ ಮಧ್ಯೆಯೇ ಐಟಿ ಅಧಿಕಾರಿಗಳು ತಮ್ಮ ಪ್ರಾಥಮಿಕ ತನಿಖಾ ವರದಿಗಳನ್ನು ಇಡಿ ಅಧಿಕಾರಿಗಳಿಗೆ ಸಲ್ಲಿಕೆ ಮಾಡಿದ್ದಾರೆ.

    ಮೆಡಿಕಲ್ ಕಾಲೇಜಿನ ಸೀಟ್ ಬ್ಲಾಕ್ ಮಾಡಿ ಅಕ್ರಮ ವಸೂಲಿ, ಹಣ ವರ್ಗಾವಣೆ ಮಾಡಿರುವುದು, ಜೊತೆಗೆ ಭೂಮಿ ಖರೀದಿ ಮಾಡುವಲ್ಲಿ ಮುನಿರಾಮಯ್ಯ ಅವರಿಗೆ 2 ಕೋಟಿ ರೂ. ಹಣ ನೀಡಿರುವ ಎಲ್ಲಾ ಅಂಶಗಳನ್ನು ಐಟಿಯವರು ಇಡಿ ಅಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮೆಡಿಕಲ್ ಕಾಲೇಜಿಗೆ 500 ಕೋಟಿ ರೂ. ಸುರಿದು ತಗ್ಲಾಕ್ಕೊಂಡ ಮಾಜಿ ಡಿಸಿಎಂ

    ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಕೂಡ ಪ್ರಾಥಮಿಕ ತನಿಖೆಯನ್ನು ಮಾಡುತ್ತಾರೆ. ಜಾರಿ ಪ್ರಕರಣ ಮಾಹಿತಿ ವರದಿ(ಇಸಿಐಆರ್) ನ್ನು ದಾಖಲಿಸಿಕೊಂಡು ಪರಮೇಶ್ವರ್ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆಗಳಿವೆ. ಇದಕ್ಕೂ ಮೊದಲೇ ಇಡಿ ಅಧಿಕಾರಿಗಳು ಕೂಡ ದಾಳಿ ನಡೆಸಿದರೆ ಅಚ್ಚರಿಯಿಲ್ಲ.

  • ಸಮನ್ಸ್ ಬಂದರೆ ತಕ್ಷಣ ವಿಚಾರಣೆಗೆ ಹಾಜರಾಗ್ತೇನೆ – ಡಿ.ಕೆ.ಸುರೇಶ್

    ಸಮನ್ಸ್ ಬಂದರೆ ತಕ್ಷಣ ವಿಚಾರಣೆಗೆ ಹಾಜರಾಗ್ತೇನೆ – ಡಿ.ಕೆ.ಸುರೇಶ್

    – ನನಗೆ ಯಾವ ನೋಟಿಸ್ ಬಂದಿಲ್ಲ

    ನವದೆಹಲಿ: ಈವರೆಗೆ ಜಾರಿ ನಿರ್ದೇಶನಾಲಯದಿಂದ ಯಾವುದೇ ಸಮನ್ಸ್ ಬಂದಿಲ್ಲ. ನನಗೆ ಸಮನ್ಸ್ ನೀಡಿದರೆ ಬಂದು ಕ್ಷಣವೂ ತಡಮಾಡದೇ ಸಂಬಂಧಪಟ್ಟ ಅಧಿಕಾರಿಗಳ ಬಳಿ ಹಾಜರಾಗುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಈವರೆಗೆ ಯಾವುದೇ ನೋಟಿಸ್ ಬಂದಿಲ್ಲ. ಸಮನ್ಸ್ ಜಾರಿಯಾಗಿರುವ ಬಗ್ಗೆ ಮಾಹಿತಿ ಇಲ್ಲ. ಒಂದು ವೇಳೆ ಸಮನ್ಸ್ ಜಾರಿಯಾದರೆ ಒಂದು ಕ್ಷಣವೂ ತಡ ಮಾಡದೆ ವಿಚಾರಣೆಗೆ ಹಾಜರಾಗುತ್ತೇನೆ. ನನ್ನ ಬಳಿ ಮುಚ್ಚಿಡುವ ವ್ಯವಸ್ಥೆಗಳೇನು ಇಲ್ಲ ಎಂದು ತಿಳಿಸಿದರು.

    ಸಮನ್ಸ್ ಜಾರಿಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಸುಮಾರು ದಿನಗಳಿಂದಲೂ ವರದಿಯಾಗುತ್ತಿದೆ. ನನಗೆ ಈ ಕುರಿತು ಯಾವ ಮಾಹಿತಿಯೂ ಇಲ್ಲ ಎಂದು ದೆಹಲಿಯಲ್ಲಿ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದರು.

    ಡಿ.ಕೆ.ಶಿವಕುಮಾರ್ ಅವರನ್ನು ಈಗತಾನೆ ಭೇಟಿ ಮಾಡಿ ಬಂದಿದ್ದೇನೆ. ಅವರೂ ಆರೋಗ್ಯವಾಗಿದ್ದಾರೆ. ಎಲ್ಲ ಎದುರಿಸಲು ಮನಸಿಕವಾಗಿ ಸಿದ್ಧವಾಗಿದ್ದಾರೆ. ಇವು ಕಷ್ಟದ ದಿನಗಳು ಎಂದು ತಿಳಿದುಕೊಂಡು ಇದರಿಂದ ಆದಷ್ಟು ಬೇಗ ಹೊರ ಬರುವ ಪ್ರಯತ್ನವನ್ನು ಮಾಡುತ್ತೇವೆ. ಅ. 9ರವರೆಗೆ ನ್ಯಾಯಾಲಯಕ್ಕೆ ರಜೆ ಇದೆ. ಹೀಗಾಗಿ 14ನೇ ತಾರೀಖಿಗೆ ವಿಚಾರಣೆಗೆ ತೆಗೆದುಕೊಂಡಿದ್ದಾರೆ. 10ರಂದು ವಿಚಾರಣೆ ನಡೆಸಲು ನ್ಯಾಯಾಧೀಶರು ಸಿದ್ಧರಿದ್ದರು. ಆದರೆ ರಜೆ ಇರುವುದರಿಂದ ವಕೀಲರು ಅಧಿಕಾರಿಗಳು ರಜೆ ಬೇಕು ಎಂದು ಕೇಳಿದರು ಹೀಗಾಗಿ 14ಕ್ಕೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದ್ದಾರೆ ಎಂದು ಮಾಹಿತಿ ನೀಡಿದರು. ಡಿ.ಕೆ.ಸುರೇಶ್ ನಿವಾಸಕ್ಕೆ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ಶಾಸಕ ಹ್ಯಾರಿಸ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

    ಸಂಸದ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ ಎನ್ನುವ ವಿಚಾರ ಇಡಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

  • ಕಾನೂನು ಹೋರಾಟದಲ್ಲಿ ಡಿಕೆಶಿ ಗೆಲ್ಲಲಿ, ಅವರಿಗೆ ಒಳ್ಳೆಯದಾಗಲಿ – ಬಿ.ವೈ.ರಾಘವೇಂದ್ರ

    ಕಾನೂನು ಹೋರಾಟದಲ್ಲಿ ಡಿಕೆಶಿ ಗೆಲ್ಲಲಿ, ಅವರಿಗೆ ಒಳ್ಳೆಯದಾಗಲಿ – ಬಿ.ವೈ.ರಾಘವೇಂದ್ರ

    ಚಿತ್ರದುರ್ಗ: ನೋವಾದಾಗ ಇದೆಲ್ಲ ಸಹಜ. ಡಿ.ಕೆ.ಶಿವಕುಮಾರ್ ವಿಚಾರದಲ್ಲಿ ಕಾನೂನು ಹೋರಾಟ ನಡೆಯುತ್ತಿದೆ. ಇದರಲ್ಲಿ ಡಿಕೆಶಿ ಗೆಲ್ಲಲಿ, ಅವರಿಗೆ ಒಳ್ಳೆಯದಾಗಲಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹಾರೈಸಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ, ಇಡಿ ಇವೆಲ್ಲ ಸ್ವತಂತ್ರ ಸಂಸ್ಥೆಗಳು. ಬಿಜೆಪಿ ಇದರಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ಸಹ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ದ್ವೇಷ ರಾಜಕೀಯ ಮಾಡಲ್ಲ, ಡಿ.ಕೆ.ಶಿವಕುಮಾರ್ ಅವರು ಕಾನೂನು ಹೋರಾಟವನ್ನು ಗೆದ್ದು ಬರಲಿ ಎಂದು ಸಿಎಂ ತಿಳಿಸಿದ್ದಾರೆ. ಹೀಗಾಗಿ ಬಿಜೆಪಿಯನ್ನು ಆರೋಪಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ತಿಳಿಸಿದರು.

    ಉಪ ಚುನಾವಣೆ ಭೀತಿಯಿಂದ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಲಾಗಿದೆ ಎಂಬುದರ ಕುರಿತು ಪ್ರತಿಕ್ರಿಯಿಸಿದ ಅವರು, ಇಂದಿರಾಗಾಂಧಿ ಕಾಲದಲ್ಲಿ ಬಹುದೊಡ್ಡ ಪಕ್ಷವಾಗಿದ್ದ ಕಾಂಗ್ರೆಸ್ ಇದೀಗ ಹೀನಾಯ ಸ್ಥಿತಿ ತಲುಪಿದೆ. ಇಡೀ ದೇಶದಲ್ಲಿ ವಿರೋಧ ಪಕ್ಷದ ಸ್ಥಾನಮಾನ ಸಹ ಕಾಂಗ್ರೆಸ್‍ಗೆ ಸಿಕ್ಕಿಲ್ಲ. ಹೀಗಿರುವಾಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲು ಹೇಗೆ ಸಾಧ್ಯ ಅಂದಮೇಲೆ ಇದೇ ಉದ್ದೇಶಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ್ದಾರೆ ಎಂದು ಹೇಳುವುದರಲ್ಲಿ ಅರ್ಥವಿಲ್ಲ ಎಂದು ಸ್ಪಷ್ಟಪಡಿಸಿದರು.

    ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಪಿಎಸ್‍ಐ ವರ್ಗಾವಣೆಯಲ್ಲಿ ನನ್ನ ಹಸ್ತಕ್ಷೇಪ ಇದೆ ಎಂಬುದು ಸುಳ್ಳು. ಶಾಸಕರು ತಪ್ಪು ತಿಳುವಳಿಕೆಯಿಂದ ಮಾತನಾಡಿದ್ದಾರೆ. ಎಲ್ಲಾ ಸರಿಯಾಗಿದೆ, ನಾವು ಯಾವುದೇ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ತಿಳಿಸಿದರು.

  • ಮೈಂಡ್ ಟ್ರೀ ಷೇರು ವಶಕ್ಕೆ ಪಡೆದಿದ್ದು ಯಾಕೆ? – ಸಹಿ ಸಿದ್ದಾರ್ಥ್ ಅವರದ್ದಲ್ಲ ಎಂದ ಐಟಿ

    ಮೈಂಡ್ ಟ್ರೀ ಷೇರು ವಶಕ್ಕೆ ಪಡೆದಿದ್ದು ಯಾಕೆ? – ಸಹಿ ಸಿದ್ದಾರ್ಥ್ ಅವರದ್ದಲ್ಲ ಎಂದ ಐಟಿ

    ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಅವರ ನಿಗೂಢ ನಾಪತ್ತೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿದ್ಧಾರ್ಥ್ ಅವರು ಬರೆದಿದ್ದಾರೆ ಎನ್ನಲಾದ ವಿದಾಯ ಪತ್ರದಲ್ಲಿ ಸಹಿಗೂ, ವಾರ್ಷಿಕ ದಾಖಲೆ ಸಲ್ಲಿಕೆ ವೇಳೆ ಸಲ್ಲಿಸಿದ್ದ ಸಹಿಗೂ ಹೊಂದಾಣಿಕೆ ಆಗುತ್ತಿಲ್ಲ ಎಂದು ಆದಾಯ ಇಲಾಖೆ ಇಲಾಖೆ ಸ್ಪಷ್ಟನೆ ನೀಡಿದೆ.

    ಐಟಿ ಕಿರುಕುಳದಿಂದಲೇ ಸಿದ್ಧಾರ್ಥ್ ಅವರು ಮನನೊಂದಿದ್ದರು ಎನ್ನುವ ವಿಚಾರಕ್ಕೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಐಟಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಇದರಲ್ಲಿ ಐಟಿಯಿಂದ ಕಿರುಕುಳ ಎಂದು ಹೇಳಿಕೊಂಡಿದ್ದ ಸಿದ್ಧಾರ್ಥ್ ಅವರದ್ದೇ ಎನ್ನಲಾದ ಪತ್ರದ ಬಗ್ಗೆ ಹಾಗೂ ದಾಳಿ ನಡೆಸಿದಾಗ ಬೆಳಕಿಗೆ ಬಂದ ವಿಚಾರದ ಬಗ್ಗೆ ಮಾಹಿತಿ ನೀಡಿದೆ.

    ಹೇಳಿಕೆಯಲ್ಲಿ ಏನಿದೆ?
    ಐಟಿ ದಾಳಿಯ ವೇಳೆ ಕರ್ನಾಟಕದಲ್ಲಿ ಸಕ್ರಿಯವಾಗಿ ರಾಜಕಾರಣದಲ್ಲಿ ಇರುವ ವ್ಯಕ್ತಿಯ ಜೊತೆ ಕೆಫೆ ಕಾಫಿ ಡೇ(ಸಿಸಿಡಿ) ಆರ್ಥಿಕ ವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಇದರ ಜೊತೆ ಸಿಂಗಾಪುರ ಪೌರತ್ವವನ್ನು ಹೊಂದಿರುವ ವ್ಯಕ್ತಿ ಬಳಿ 1.2 ಕೋಟಿ ರೂ. ಪತ್ತೆಯಾಗಿತ್ತು. ಆ ವ್ಯಕ್ತಿ ಈ ಹಣ ಸಿದ್ಧಾರ್ಥ್ ಅವರಿಗೆ ಸೇರಿದ್ದಾಗಿ ಒಪ್ಪಿಕೊಂಡಿದ್ದರು. ದಾಳಿ ವೇಳೆ ದಾಖಲೆ ಇಲ್ಲದ 362.11 ಕೋಟಿ ರೂ. ಮತ್ತು 118.02 ಕೋಟಿ ರೂ. ಹಣ ಸಿಕ್ಕಿತ್ತು. ವಿಚಾರಣೆ ವೇಳೆ ಈ ಹಣ ಕ್ರಮವಾಗಿ ತನಗೆ ಮತ್ತು ಸಿಸಿಡಿಗೆ ಸೇರಿದ ಹಣ ಎಂದು ಒಪ್ಪಿಕೊಂಡಿದ್ದರು. ಇದನ್ನು ಓದಿ: ಮೈಂಡ್ ಟ್ರೀಯಲ್ಲಿ ಸಿದ್ಧಾರ್ಥ್ ಷೇರು ಎಷ್ಟಿತ್ತು? ಕೋಕಾ ಕೋಲಾ ಡೀಲ್ ಎಲ್ಲಿಯವರೆಗೆ ಬಂದಿತ್ತು? ಸಾಲ ಎಷ್ಟಿತ್ತು?

    ಸಿದ್ಧಾರ್ಥ್ ಅವರು ವಾರ್ಷಿಕ ತೆರಿಗೆಯನ್ನು ಪಾವತಿ ಮಾಡಿದ್ದರೂ ದಾಖಲೆ ಇಲ್ಲದ ಹಣಕ್ಕೆ ತೆರಿಗೆಯನ್ನು ಪಾವತಿ ಮಾಡಿರಲಿಲ್ಲ. ಈ ಎರಡು ಪ್ರಕರಣ ಹೊರತು ಪಡಿಸಿ 35 ಕೋಟಿ ರೂ. ತೆರಿಗೆ ಹಣವನ್ನು ಪಾವತಿಸಿದ್ದರು. ಉಳಿದಂತೆ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಕಂಪನಿ ಸ್ವಯಂ ಮೌಲ್ಯ ಮಾಪನ ತೆರಿಗೆಯಾದ 14.5 ಕೋಟಿ ರೂ. ಪಾವತಿಸಿರಲಿಲ್ಲ.

    2019ರ ಜನವರಿ 21 ರಂದು ಮಾಧ್ಯಮಗಳಲ್ಲಿ ಸಿದ್ಧಾರ್ಥ್ ಅವರು ಮೈಂಡ್ ಟ್ರೀ ಕಂಪನಿಯಲ್ಲಿದ್ದ ಷೇರನ್ನು ಮಾರಾಟ ಮಾಡಲು ಮುಂದಾಗುತ್ತಿದ್ದಾರೆ ಎನ್ನುವ ಸುದ್ದಿ ಪ್ರಕಟವಾಗಿತ್ತು. ಕಾಫಿ ಡೇ ಎಂಟರ್‌ಪ್ರೈಸಸ್, ಕಾಫಿ ಡೇ ಟ್ರೇಡಿಂಗ್ ಲಿಮಿಟೆಡ್ ಮತ್ತು ಸಿದ್ಧಾರ್ಥ್ ಹೆಸರಿನಲ್ಲಿದ್ದ ಹತ್ತಿರ ಹತ್ತಿರ ಶೇ.21 ಷೇರನ್ನು ಜನವರಿಯಲ್ಲೇ ಮಾರಾಟಕ್ಕೆ ಸಿದ್ಧತೆ ನಡೆದಿತ್ತು. ಇದನ್ನು ಓದಿ: ಸಿದ್ದಾರ್ಥ್ ಕೊನೆಯ ಮೊಬೈಲ್ ಲೊಕೇಷನ್ ಪತ್ತೆ

    ದಾಳಿ ಸಂದರ್ಭದಲ್ಲಿ ದಾಖಲೆ ಇಲ್ಲದ ಹಣ, ತೆರಿಗೆ ವಂಚನೆ, ತೆರಿಗೆ ವಂಚಿಸಿದ್ದಕ್ಕೆ ದಂಡ ಎಲ್ಲವೂ ಸೇರಿದಾಗ ಈ ಮೊತ್ತ 100 ಕೋಟಿ ಆಗಿತ್ತು. ಇದರ ಜೊತೆಯಲ್ಲೇ ಆದಾಯ ತೆರಿಗೆ ಪ್ರಕ್ರಿಯೆ ನಡೆಯುತ್ತಿದ್ದಾಗ ತನ್ನ ಬಳಿಯಿದ್ದ ಆಸ್ತಿಯನ್ನು ಬೇರೆ ಕಂಪನಿಗೆ ಮಾರಾಟ ಮಾಡಬೇಕಾದರೆ ಕೆಲ ಅನುಮತಿಯನ್ನು ಪಡೆದುಕೊಳ್ಳಬೇಕಾಗುತ್ತದೆ. ಆದರೆ ಸಿದ್ಧಾರ್ಥ್ ಅವರು ಯಾವುದೇ ಅನುಮತಿಯನ್ನು ಪಡೆಯದೇ ಮಾರಾಟ ಮಾಡಲು ಮುಂದಾಗಿದ್ದರು. ಈ ಕಾರಣಕ್ಕೆ ಮೈಂಡ್ ಟ್ರೀಯಲ್ಲಿದ್ದ 74,90,000 ಶೇರುಗಳನ್ನು ಆದಾಯ ತೆರಿಗೆ ಇಲಾಖೆ ವಶಕ್ಕೆ ಪಡೆದಿತ್ತು. ಷೇರು ವಶಕ್ಕೆ ಪಡೆದ ಬಳಿಕ ಸಿದ್ಧಾರ್ಥ್ ಅವರು ಷೇರು ಮಾರಾಟಕ್ಕೆ ಅನುಮತಿ ಕೇಳಿದ್ದರು. ಈ ಪ್ರಕ್ರಿಯೆಯಾದ ಬಳಿಕ ಅನುಮತಿ ನೀಡಲಾಯಿತು. 2019ರ ಏಪ್ರಿಲ್ 24 ರಂದು 3200 ಕೋಟಿ ರೂ.ಗೆ ಸಿದ್ಧಾರ್ಥ್ ಅವರಲ್ಲಿದ್ದ ಷೇರು ಲಾರ್ಸನ್ ಆಂಡ್ ಟ್ಯಾಬ್ರೋ ಕಂಪನಿಗೆ ಮೈಂಡ್ ಟ್ರೀ ಕಂಪನಿಯ ವರ್ಗಾವಣೆ ಆಯಿತು.

    https://www.youtube.com/watch?v=f5o2MLo1zXM

  • ಭಾನುವಾರ ಕರೆ ಮಾಡಿ ಭೇಟಿಯಾಗುವಂತೆ ಸಿದ್ಧಾರ್ಥ್ ಕೇಳಿಕೊಂಡಿದ್ರು- ಡಿಕೆಶಿ

    ಭಾನುವಾರ ಕರೆ ಮಾಡಿ ಭೇಟಿಯಾಗುವಂತೆ ಸಿದ್ಧಾರ್ಥ್ ಕೇಳಿಕೊಂಡಿದ್ರು- ಡಿಕೆಶಿ

    ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಅವರು ಭೇಟಿಯಾಗುವಂತೆ ಕೇಳಿಕೊಂಡಿದ್ದರು ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಚಿವರು, ಭಾನುವಾರ ಅಂದ್ರೆ ಜುಲೈ 28ರಂದು ಸಿದ್ಧಾರ್ಥ್ ಫೋನ್ ಮಾಡಿದ್ದರು. ಆಗ ನಿಮ್ಮನ್ನು ಆದಷ್ಟು ಬೇಗ ಭೇಟಿಯಾಗಬೇಕಿದೆ. ನನ್ನನ್ನು ಭೇಟಿಯಾಗುತ್ತೀರಾ ಅಂತ ಕೇಳಿಕೊಂಡಿದ್ದರು ಎಂದು ಹೇಳಿದ್ದಾರೆ.

    ಈ ಸಂಬಂಧ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ನನ್ನ ಜೊತೆಗೆ ಚೆನ್ನಾಗಿ ಮಾತನಾಡಿದ ಸಿದ್ಧಾರ್ಥ್ ಭೇಟಿಯಾಗಬೇಕು ಅಂತ ಕೇಳಿದ್ದರು. ಆದರೆ ನಾನು ರಾಜಕೀಯದಲ್ಲಿ ಸ್ವಲ್ಪ ಬ್ಯುಸಿ ಆಗಿದ್ದೇನೆ. ಎರಡು ದಿನ ಬಿಟ್ಟು ಭೇಟಿಯಾಗುತ್ತೇನೆ ಅಂತ ತಿಳಿಸಿದ್ದೆ. ಆದರೆ ಸಿದ್ಧಾರ್ಥ್ ಇಂತಹ ನಿರ್ಧಾರ ಕೈಗೊಳ್ಳುತ್ತಾರೆ ಅಂತ ನಾನು ಊಹೆ ಕೂಡ ಮಾಡಿಕೊಂಡಿರಲಿಲ್ಲ ಎಂದು ಹೇಳಿದರು.

    ಐಟಿ ದಾಳಿಯಿಂದ ಹೀಗೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಸಿದ್ಧಾರ್ಥ್ ಅತ್ಯಂತ ಧೈರ್ಯಶಾಲಿ ವ್ಯಕ್ತಿ. ಸಾಲ ಮಾಡಿಕೊಂಡಿದ್ದಾರೆ ಅಂತ ಹೇಳಿದರೆ ಅವರಿಗೆ ಅದು ದೊಡ್ಡ ಹೊರೆಯಲ್ಲ. ಸಾಲಕ್ಕಿಂತ ಅವರ ಆಸ್ತಿಯೇ ಹೆಚ್ಚಿತ್ತು. ಅದನ್ನು ಚನ್ನಾಗಿ ನಿಭಾಯಿಸುವ ಸಾಮಥ್ರ್ಯ ಸಿದ್ಧಾರ್ಥ್ ಅವರಿಗೆ ಇತ್ತು ಎಂದು ಹೇಳಿದರು.

    ಅವರಿಗೆ ಸಂಬಂಧಿಸಿದ ಅನೇಕ ವಿಚಾರಗಳು ನನಗೆ ಗೊತ್ತಿದೆ. ಆದರೆ ಅವುಗಳನ್ನು ಎದುರಿಸುವ ಶಕ್ತಿ ಅವರಿಗಿತ್ತು. ಸಿದ್ಧಾರ್ಥ್ ಅವರು ಅನೇಕ ಜನರಿಗೆ ಕೆಲಸ ಕೊಟ್ಟು, ಭಾರೀ ಎತ್ತರಕ್ಕೆ ಬೆಳೆದ ವ್ಯಕ್ತಿ. ಅವರು ರಾಜ್ಯಕ್ಕೆ ದೊಡ್ಡ ಕೀರ್ತಿ ತಂದಿದ್ದರು ಎಂದು ತಿಳಿಸಿದರು.

    ಸಿದ್ಧಾರ್ಥ್ ಅವರನ್ನು ಯಾರಾದರು ಕರೆದುಕೊಂಡು ಹೋಗಿದ್ದಾರಾ? ಬೆದರಿಕೆ ಕರೆ ಬಂದಿತ್ತಾ? ಅವರನ್ನು ಯಾರಾದರೂ ಸೇತುವೆಯಿಂದ ನದಿಗೆ ತಳ್ಳಿದ್ದಾರಾ? ಅವರನ್ನು ಅಲ್ಲಿಗೆ ಕರೆಸಿಕೊಂಡು, ಅಲ್ಲಿಂದ ಅಪಹರಿಸಿದ್ದಾರಾ ಎಂಬ ಅನುಮಾನ ಎದ್ದಿದೆ. ಹೀಗಾಗಿ ತನಿಖೆ ನಡೆಯಬೇಕು ಅಂತ ಒತ್ತಾಯಿಸಿದ್ದೇನೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವಂತ ವ್ಯಕ್ತಿಯಲ್ಲ ಎಂದು ಹೇಳಿದರು.

    ಸಿದ್ಧಾರ್ಥ್ ಬರೆದಿದ್ದಾರೆ ಎನ್ನಲಾದ ಪತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಡಿಕೆಶಿ ಈ ಪತ್ರದ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.