Tag: it

  • 40 ಕೋಟಿ ರೂ. ಸಾಲ : ಪ್ರಶ್ನೆಗೆ ಯಶ್ ಖಡಕ್ ಪ್ರತಿಕ್ರಿಯೆ

    40 ಕೋಟಿ ರೂ. ಸಾಲ : ಪ್ರಶ್ನೆಗೆ ಯಶ್ ಖಡಕ್ ಪ್ರತಿಕ್ರಿಯೆ

    ಬೆಂಗಳೂರು: ಒಂದು ಇಲಾಖೆಯಿಂದ ಐಟಿ ರೇಡ್ ಆದ ಮೇಲೆ ಅಧಿಕಾರಿಗಳು ನಮ್ಮನ್ನು ಎಲ್ಲ ರೀತಿಯಲ್ಲೂ ವಿಚಾರಣೆ ಮಾಡುತ್ತಾರೆ. ನಾನು ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡಿದ್ದೇನೆ ಎಂದು ನಟ ಯಶ್ ಹೇಳಿದರು.

    ಐಟಿ ವಿಚಾರಣೆಗೆ ಹಾಜರಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯಶ್, ಒಂದು ಇಲಾಖೆಯಿಂದ ಐಟಿ ರೇಡ್ ಆದ ಮೇಲೆ ಅಧಿಕಾರಿಗಳು ನಮ್ಮನ್ನು ಎಲ್ಲ ರೀತಿಯಲ್ಲೂ ವಿಚಾರಣೆ ಮಾಡುತ್ತಾರೆ. ನಮ್ಮ ಆದಾಯ, ಖರ್ಚು ಏನು? ಇದೇ ರೀತಿಯ ಅನೇಕ ವಿಷಯಗಳ ಬಗ್ಗೆ ಕೇಳುತ್ತಾರೆ. ನಾವು ಅದಕ್ಕೆ ಉತ್ತರ ಕೊಡಬೇಕು. ಇದೊಂದು ಪ್ರಕ್ರಿಯೆ ರೀತಿಯಲ್ಲಿ ನಡೆಯುತ್ತದೆ. ಇಂದು ಮಾತ್ರವಲ್ಲಿ ಇನ್ನೂ ಎರಡು ವರ್ಷ ನಡೆಯುತ್ತದೆ ಎಂದು ಹೇಳಿದರು.

    ನಾವು ಸಾಮಾಜದಲ್ಲಿ ಏನೇ ಮಾಡಿದರೂ ಅದು ನಿಮಗೆ ಗೊತ್ತಾಗುತ್ತದೆ. 7-8 ಜನರು ಒಟ್ಟಿಗೆ ಸೇರಿ ಕೆಲಸ ಮಾಡಿದಾಗ, ಅವರ ವ್ಯವಹಾರ ಏನು? ಅವರ ಜೊತೆ ನಿಮ್ಮ ವ್ಯವಹಾರ ಏನು ಇಂತಹ ಕೆಲವು ಪ್ರಶ್ನೆಗಳು ಇರುತ್ತವೆ. ಇದೊಂದು ಪ್ರಕ್ರಿಯೆಯಾಗಿದ್ದು, ಇದನ್ನು ಅರ್ಥಮಾಡಿಕೊಂಡು ಗೌರವದಿಂದ ಮಾಡಿಕೊಂಡು ಹೋಗೋಣ. ಐಟಿ ಇಲಾಖೆಯಲ್ಲಿ ಯಾವ ರೀತಿ ಪ್ರಕ್ರಿಯೆ ಇರುತ್ತದೆ ಎಂದು ಅಧಿಕಾರಿಗಳು ನಮಗೆ ಎಲ್ಲವನ್ನು ಹೇಳಿದ್ದಾರೆ ಎಂದು ಯಶ್ ತಿಳಿಸಿದರು.

    ಆಡಿಟರ್ ಮನೆಯ ಮೇಲೆ ಅಲ್ಲ, ಅವರ ಕಚೇರಿಯ ಮೇಲೆ ಐಟಿ ರೇಡ್ ಆಗಿದೆ ಅಷ್ಟೇ. ಅದು ಬಿಟ್ಟು ಬೇರೆ ನನಗೆ ಗೊತ್ತಿಲ್ಲ. ನಾನು ಜನವರಿ 8-9ರಂದು ನನ್ನ ಹುಟ್ಟುಹಬ್ಬವಿದೆ ಅಂದು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ, ಆದ್ದರಿಂದ ದಿನಾಂಕ 10 ರಂದು ಬರುತ್ತೇನೆ ಎಂದು ಕೇಳಿದ್ದೆ, ಅದಕ್ಕೆ ಅವರು 11 ರಂದು ಬನ್ನಿ ಎಂದು ಹೇಳಿದ್ದರು. ಆದ್ದರಿಂದ ಇಂದು ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

    ಇನ್ನೂ 40 ಕೋಟಿ ಸಾಲದ ಬಗ್ಗೆ ಪ್ರಶ್ನೆ ಕೇಳಿದಾಗ, ನನಗೆ 40 ಕೋಟಿ ಸಾಲ ಯಾಕೆ ಕೊಡುತ್ತಾರೆ. ನನ್ನ ಪ್ರಕಾರ ನನಗೆ 15 ರಿಂದ 16 ಲೋನ್ ಇದೆ. 15-16 ಕೋಟಿ ಲೋನ್ ಕೊಡಬೇಕಾದರೆ, ತೆರಿಗೆ ಎಷ್ಟಿರಬೇಕು? ತೆರಿಗೆ ಕಟ್ಟಿಲ್ಲ ಅಂದರೆ ಯಾರಾದರೂ ಲೋನ್ ಕೊಡುತ್ತಾರಾ ಎನ್ನುವುದು ಒಬ್ಬ ಸಾಮಾನ್ಯ ವ್ಯಕ್ತಿಗೆ ಗೊತ್ತಾದರೆ ಸಾಕು. ಸಾರ್ವಜನಿಕ ವ್ಯಕ್ತಿ ಎಂದಾಕ್ಷಣ ಇಷ್ಟಬಂದಂತೆ ಒಬ್ಬರ ಬಗ್ಗೆ ಮಾತನಾಡಿಕೊಂಡು, ತೇಜೋವಧೆ ಮಾಡಿಕೊಂಡು ಇದ್ದರೆ ಅದನ್ನು ನೋಡಿಕೊಂಡು ನಾವು ಸುಮ್ಮನಿರುವವರಲ್ಲ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದರು.

    ಇಂದು ಬೆಳಗ್ಗೆ ನಟ ಯಶ್ ತಮ್ಮ ತಾಯಿ ಪುಷ್ಪಾ ಅವರ ಜೊತೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಗುರುವಾರವಷ್ಟೇ ಆಡಿಟರ್ ಬಸವರಾಜ್ ಮನೆಯಲ್ಲಿ ತಲಾಶ್ ನಡೆದಿತ್ತು. ಇತ್ತ ನಿರ್ಮಾಪಕ ಜಯಣ್ಣ ಕೂಡಾ ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಟ್ರಬಲ್ ಶೂಟರ್ ಸಚಿವ ಡಿಕೆ ಶಿವಕುಮಾರ್‌ಗೆ ದೊಡ್ಡದೊಂದು ಸಂಕಷ್ಟ!

    ಟ್ರಬಲ್ ಶೂಟರ್ ಸಚಿವ ಡಿಕೆ ಶಿವಕುಮಾರ್‌ಗೆ ದೊಡ್ಡದೊಂದು ಸಂಕಷ್ಟ!

    ಬೆಂಗಳೂರು: ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಸಚಿವ ಡಿಕೆ ಶಿವಕುಮಾರ್‍ಗೆ ದೊಡ್ಡದೊಂದು ಸಂಕಷ್ಟ ಎದುರಾಗ್ತಿದೆ. ಬೇನಾಮಿ ವಿಚಾರಕ್ಕೆ ಈಗಾಗಲೇ ಡಿಕೆಶಿ ವಿಚಾರಣೆ ನಡೆಸಿರುವ ಐಟಿ ಅಧಿಕಾರಿಗಳು ಇನ್ನೊಂದು ವಾರದಲ್ಲಿ ದೆಹಲಿಯಲ್ಲಿರುವ ಟ್ರಿಬ್ಯೂನಲ್‍ಗೆ ವರದಿ ಸಲ್ಲಿಸಲಿದ್ದಾರೆ. ಇದ್ರಿಂದ ಡಿ.ಕೆ ಶಿವಕುಮಾರ್ ಅವರಿಗೆ ದೊಡ್ಡ ಗಂಡಾಂತರವೇ ಕಾದಿದೆ ಎಂದು ಹೇಳಲಾಗುತ್ತಿದೆ.

    ಬೇನಾಮಿ ಆಸ್ತಿಯ ವಿಚಾರವಾಗಿ ಐವರ ಹೇಳಿಕೆಯನ್ನು ದಾಖಲು ಮಾಡಿಕೊಂಡಿರುವ ಐಟಿ ಅಧಿಕಾರಿಗಳು ಚನ್ನೈ ಮೂಲದ ವ್ಯಕ್ತಿಯ ಹೆಸರಿನಲ್ಲಿದ್ದ ಆಸ್ತಿಯ ಬಗ್ಗೆಯೂ ತನಿಖೆ ಮಾಡಿ ಮುಗಿಸಿದ್ದಾರೆ. ಕೊನೆಯ ಹಂತದಲ್ಲಿ ಡಿ ಕೆ ಶಿವಕುಮಾರ್ ಮತ್ತು ಅವರ ತಾಯಿ ಗೌರಮ್ಮ ಅವರ ವಿಚಾರಣೆಯನ್ನು ಮಾಡಿದ್ದು, ಬೇನಾಮಿಯ ಬಗ್ಗೆ ನನಗೇನು ಗೊತ್ತಿಲ್ಲ ಅಂತ ಹೇಳಿಕೆ ಕೊಟ್ಟಿದ್ದಾರೆ. ಆದ್ರೆ, ಸಾಕ್ಷ್ಯ ಸಮೇತ ತನಿಖೆ ನಡೆಸುತ್ತಾ ಇರೋ ಐಟಿ ಸಾಕ್ಷಿಗಳು ದಾಖಲೆಗಳು ಎಲ್ಲವನ್ನು ಕೂಡ ಟ್ರಿಬ್ಯೂನಲ್ ಮುಂದೆ ಇಡಲು ತಯಾರಿ ಮಾಡಿಕೊಂಡಿದೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಭಾರತದಲ್ಲಿಯೇ ಅತಿ ಹೆಚ್ಚು ಬೇನಾಮಿ ಆಸ್ತಿಯನ್ನು ಹೊಂದಿರೋ ವ್ಯಕ್ತಿಗಳು ಇರೋದು ಕರ್ನಾಟಕದಲ್ಲಿಯೇ ಅಂತೆ. ಒಂದೇ ವರ್ಷಕ್ಕೆ 370 ಕೋಟಿಯಷ್ಟು ಬೇನಾಮಿ ಆಸ್ತಿಯನ್ನು ಈಗಾಗಲೇ ಐಟಿ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದೆ. ಉದ್ಯಮಿಗಳಿಗಿಂತ ಹೆಚ್ಚಾಗಿ ರಾಜಕಾರಣಿಗಳು ಬೇನಾಮಿ ಆಸ್ತಿಯನ್ನು ಮಾಡಿಕೊಂಡಿದ್ದಾರೆ. ಸದ್ಯ ಕರ್ನಾಟಕದ ಐಟಿ ಇಲಾಖೆ ಕಪ್ಪು ಕುಳಗಳಿಗೆ ಕೋಳ ಹಾಕುವುದಕ್ಕಾಗಿ ಬೇನಾಮಿ ಕೇಸನ್ನು ನೋಡಿಕೊಳ್ಳುತ್ತಿದೆ ಎನ್ನಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 109 ಕೋಟಿ ಅಘೋಷಿತ ಆಸ್ತಿ ಪತ್ತೆ – ಇಡಿ ಎಂಟ್ರಿಯಾದ್ರೆ ನಟರಿಗೆ ಸಂಕಷ್ಟ ಗ್ಯಾರಂಟಿ!

    109 ಕೋಟಿ ಅಘೋಷಿತ ಆಸ್ತಿ ಪತ್ತೆ – ಇಡಿ ಎಂಟ್ರಿಯಾದ್ರೆ ನಟರಿಗೆ ಸಂಕಷ್ಟ ಗ್ಯಾರಂಟಿ!

    ಬೆಂಗಳೂರು: ಸ್ಟಾರ್ ನಟರು ಮತ್ತು ನಿರ್ಮಾಪಕರ ಮನೆ ಮೇಲಿನ ಐಟಿ ದಾಳಿ ವೇಳೆ 109 ಕೋಟಿಯಷ್ಟು ಅಘೋಷಿತ ಆಸ್ತಿ ಪತ್ತೆಯಾಗಿದ್ದು, 2.85 ಕೋಟಿ ನಗದು ಸೇರಿದಂತೆ 11 ಕೋಟಿಯಷ್ಟು ಚಿನ್ನಾಭರಣ ಸೀಜ್ ಮಾಡಿದ್ದಾರೆ. ಈಗ ಈ ಐಟಿ ದಾಳಿಗೆ ಇಡಿ ಎಂಟ್ರಿಯಾದರೆ ನಟರಿಗೆ ಸಂಕಷ್ಟ ಗ್ಯಾರಂಟಿಯಾಗಿದೆ.

    ಐಟಿ ಅಧಿಕಾರಿಗಳು ಸತತ ಮೂರು ದಿನಗಳ ಕಾಲ ಸ್ಟಾರ್ ನಟರು ಮತ್ತು ನಿರ್ಮಾಪಕರು ಟ್ಯಾಕ್ಸ್ ಹೋಲ್ಡರ್ ಗಳಾದರೂ ತೆರಿಗೆ ವಂಚಿಸಿ ಆಸ್ತಿ ಮತ್ತು ಆದಾಯವನ್ನ ಮುಚ್ಚಿಟ್ಟಿರೋದನ್ನ ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಬ್ಯುಸಿನೆಸ್‍ನಲ್ಲಿ ಬಂದ ಆದಾಯ, ಥಿಯೇಟರ್ ಟಿಕೆಟ್‍ ನಲ್ಲಿ ವಂಚನೆ, ಆಡಿಯೊ ರೈಟ್ಸ್, ಡಿಜಿಟಲ್ ರೈಟ್ಸ್ ಮತ್ತು ಸ್ಯಾಟಲೈಟ್ ರೈಟ್ಸ್ ಗಳ ಅಕೌಂಟ್ಯಾಬಿಲಿಟಿ ಇಲ್ಲ ಅನ್ನೋದನ್ನ ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

    ಈಗಾಗಲೇ ನೋಟಿಸ್ ಸಿದ್ಧ ಮಾಡಿಕೊಂಡಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ನಟರು ಮತ್ತು ನಿರ್ಮಾಪರಕರನ್ನ ವಿಚಾರಣೆಗೆ ಕರೆಯಲಿದೆ. ಇವತ್ತಿನಿಂದ ನಾಲ್ವರು ಸ್ಟಾರ್ ನಟರು ಮತ್ತು ನಿರ್ಮಾಪರಕು ಐಟಿ ಬಾಗಿಲು ಕಾಯಬೇಕಾದ ಪರಿಸ್ಥಿತಿ ಬಂದೊದಗಿದೆ. ಕೆಲವೊಂದಿಷ್ಟು ಪ್ರಶ್ನೋತ್ತರಗಳನ್ನ ರೆಡಿ ಮಾಡಿಟ್ಟುಕೊಂಡಿರುವ ಅಧಿಕಾರಿಗಳು ಪ್ರತಿಯೊಂದು ಪ್ರಶ್ನೆಗೂ ಉತ್ತರ ಪಡೆಯಲಿದ್ದಾರೆ. ಉತ್ತರ ಸಮಂಜಸವಾಗಿಲ್ಲದಿದ್ದರೆ, ದಾಖಲಾತಿಗಳನ್ನ ಹಾಜರು ಪಡಿಸಬೇಕಾಗುತ್ತದೆ. 109 ಕೋಟಿಯ ಆದಾಯದ ಮೂಲ ಯಾವುದು, ತೆರಿಗೆಯಿಂದ ಈ ಆಸ್ತಿಯನ್ನ ಮುಚ್ಚಿಟ್ಟಿದ್ದೇಕೆ, ಥಿಯೇಟರ್ ಟಿಕೆಟ್‍ನಿಂದ ಹಿಡಿದು ಸ್ಯಾಟಲೈಟ್ ರೈಟ್ಸ್‍ವರೆಗೂ ಲೆಕ್ಕಪತ್ರಗಳು ಯಾಕಿಲ್ಲ? ತೆರಿಗೆ ವಂಚನೆ ಮಾಡುವ ಉದ್ದೇಶದಿಂದಲೇ ಹೀಗೆ ಮಾಡಿದ್ದೀರಿ ತಾನೆ? ಇದಕ್ಕಾಗಿ ಪೆನಾಲ್ಟಿ ಎಷ್ಟಿದೆ ಗೊತ್ತಾ.? ಹೀಗೆ ಪ್ರಶ್ನೆಗಳ ಸುರಿಮಳೆಗೈದು ನಟರು ಮತ್ತು ನಿರ್ಮಾಪಕರನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಗಳಿವೆ.

    ಬರೀ ಐಟಿ ವಿಚಾರಣೆಯಾದರೆ ಪರವಾಗಿಲ್ಲ. ತೆರಿಗೆ ಕಟ್ಟದಿದ್ದರೆ ಶೇ.100 ರಿಂದ 300ರಷ್ಟು ದಂಡ ಹಾಕಿ ಬಿಟ್ಟು ಕಳಿಸುತ್ತಾರೆ. 10 ಲಕ್ಷಕ್ಕಿಂತ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿದ್ದರೆ ಅಂಥಾ ಪ್ರಕರಣಗಳನ್ನ ಜಾರಿ ನಿರ್ದೇಶನಾಲಯಕ್ಕೆ ವರ್ಗಾವಣೆ ಮಾಡಬೇಕು. ಸ್ಟಾರ್ ನಟರ ಐಟಿ ದಾಳಿ ವೇಳೆ 109 ಕೋಟಿ ಅಘೋಷಿತ ಆಸ್ತಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನ ಇಡಿಗೆ ವರ್ಗಾಯಿಸಲು ಐಟಿ ಅಧಿಕಾರಿಗಳು ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗುತ್ತಿವೆ. ಒಮ್ಮೆ ಇಡಿ ಎಂಟ್ರಿಯಾದರೆ ನಟರು ಮತ್ತು ನಿರ್ಮಾಪಕರಿಗೆ ಸಂಕಷ್ಟ ಗ್ಯಾರಂಟಿಯಾಗಿದ್ದು, ವಿದೇಶಿ ವ್ಯವಹಾರ ಮತ್ತು ಮನಿ ಲಾಂಡ್ರಿಗ್ ಅಡಿ ಪ್ರಕರಣ ಕೈಗೆತ್ತಿಕೊಳ್ಳವ ಇಡಿ ಅಧಿಕಾರಿಗಳು ಎಫ್‍ಐಆರ್ ದಾಖಲು ಮಾಡಿಕೊಳ್ಳುತ್ತಾರೆ. ನಂತರ ಪ್ರತಿಯೊಬ್ಬರ ವಿಚಾರಣೆ ಮಾಡುತ್ತಾರೆ. ಹೀಗಾಗಿ ಐಟಿ ಮತ್ತು ಇಡಿ ಬಾಗಿಲುಗಳಿಗೆ ಪ್ರತಿ ದಿನ ಅಲೆಯಬೇಕಾದ ಪರಿಸ್ಥಿತಿ ನಟರು ಮತ್ತು ನಿರ್ಮಾಪಕರಿಗೆ ಬಂದೊದಗಿದೆ. ಅಗತ್ಯ ಬಿದ್ದರೆ ಅರೆಸ್ಟ್ ಮಾಡುವ ಅಧಿಕಾರ ಜಾರಿ ನಿರ್ದೇಶನಾಲಯಕ್ಕೆ ಇದೆ.

    ಸ್ಟಾರ್ ನಟರ ಆದಾಯ ಮತ್ತು ತೆರಿಗೆ ನಡುವಿನ ವ್ಯತ್ಯಾಸವನ್ನ ಐಟಿ ಅಧಿಕಾರಿಗಳು ಬಯಲು ಮಾಡಿದ್ದಾರೆ. ಈಗ ಮುಂದೆ ತನಿಖೆ ಯಾವ ರೀತಿ ಸವಾಲೊಡ್ಡುತ್ತದೆ ಅನ್ನೋದು ಸ್ವಲ್ಪ ದಿನಗಳಲ್ಲೇ ಗೊತ್ತಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಂಪಾ ಮೊಮ್ಮಕ್ಕಳು ಎಲ್ಲಿ ಓದುತ್ತಿದ್ದಾರೆ: ಸಿಎಂ ಎಚ್‍ಡಿಕೆ

    ಚಂಪಾ ಮೊಮ್ಮಕ್ಕಳು ಎಲ್ಲಿ ಓದುತ್ತಿದ್ದಾರೆ: ಸಿಎಂ ಎಚ್‍ಡಿಕೆ

    ಹುಬ್ಬಳ್ಳಿ: ರಾಜ್ಯದ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆ ಮುಚ್ಚಲು ನಾನು ಸಿದ್ಧನಿದ್ದೇನೆ. ಇದನ್ನೇ ನಾನು ಸಾಹಿತ್ಯ ಸಮ್ಮೇಳನದಲ್ಲಿ ಹೇಳಿದ್ದೇನೆ. ಆದರೆ ನನ್ನ ಬಗ್ಗೆ ಚಂಪಾ ಅವರು ಇಲ್ಲ ಸಲ್ಲದ ಮಾತುಗಳನ್ನು ಆಡಿದ್ದು, ಚಂಪಾ ಅವರ ಮೊಮ್ಮಕ್ಕಳು ಯಾವ ಶಾಲೆಯಲ್ಲಿ ಓದುತ್ತಾರೆ ಎಂದು ಸ್ಪಷ್ಟಪಡಿಸಲಿ ಎಂದು ಸಿಎಂ ಎಚ್‍ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

    ಕನ್ನಡ ಸಾಹಿತ್ಯ ಸಮ್ಮೇಳದಲ್ಲಿ ಚಂಪಾ ಅವರ ಸಿಎಂ ಅವರ ವಿರುದ್ಧ ಆಡಿದ ಮಾತಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ಚಂಪಾ ಹಿರಿಯರಾಗಿ ನನ್ನ ಬಗ್ಗೆ ಇಲ್ಲ ಮಾತುಗಳನ್ನ ಆಡಬಾರದು. ನನಗೂ ಪದ ಬಳಕೆ ಮಾಡಲು ಬರುತ್ತದೆ. ಅವರು ತಮ್ಮ ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕು. ನಾನು ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆ ಮುಚ್ಚಲು ಸಿದ್ಧನಿದ್ದೇನೆ. ಸಾಹಿತ್ಯ ಸಮ್ಮೇಳನದಲ್ಲಿ ಕೂಡ ಇದನ್ನೆ ಹೇಳಿದ್ದು. ನನ್ನ ವಿರುದ್ಧ ಪದ ಬಳಕೆ ಮಾಡಿರುವ ಚಂಪಾ ಅವರ ಮೊಮ್ಮಕ್ಕಳು ಯಾವ ಶಾಲೆಯಲ್ಲಿ ಓದುತ್ತಾರೆ ಎಂದು ಅವರು ಸ್ಪಷ್ಟಪಡಿಸಲಿ. ಕನ್ನಡ ನೆಲ, ಭಾಷೆ ಉಳಿಸಿಕೊಳ್ಳಲು ನಾನು ರೆಡಿ ಇದ್ದೇನೆ ಎಂದರು.

    ಇದೇ ವೇಳೆ ಸಿನಿಮಾ ನಟರ ಮೇಲೆ ಐಟಿ ದಾಳಿ ಬಗ್ಗೆ ಪ್ರತಿಕ್ರಿಯಿಸಿ, ಐಟಿ ಅಧಿಕಾರಿಗಳು ತಮ್ಮ ದಿನಚರಿಯ ಮೇಲೆ ದಾಳಿ ಮಾಡಿದ್ದಾರೆ. ಅದು ಕೇಂದ್ರ ತೆರಿಗೆ ಇಲಾಖೆಯ ದಿನಚರಿ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ತೆರಿಗೆ ವಂಚನೆ ಮತ್ತು ತೆರಿಗೆ ಮೇಲೆ ಅನುಮಾನ ಬಂದರೆ ದಾಳಿ ಮಾಡುತ್ತಾರೆ ಎಂದರು. ಅಲ್ಲದೇ ವಿಧಾನಸಭೆ ವೆಸ್ಟ್ ಗೇಟ್ ಬಳಿ ಹಣ ಪತ್ತೆ ವಿಚಾರ ಪ್ರಶ್ನೆಗೆ ಉತ್ತರಿಸಿ, ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ಈ ರೀತಿಯ ವಿಚಾರಕ್ಕೆ ಪ್ರಭಾವ ಬೀರಲ್ಲ. ಪೊಲೀಸರು ಸ್ವತಂತ್ರ ತನಿಖೆ ಮಾಡಲಿ. ತನಿಖೆ ವರದಿ ಬಂದ ಮೇಲೆ ಕ್ರಮದ ಬಗ್ಗೆ ವಿಚಾರ ಮಾಡುತ್ತೇವೆ ಎಂದರು. ಇದನ್ನು ಓದಿ: ಕನ್ನಡ ಸಮ್ಮೇಳನದಲ್ಲಿ ಚಂಪಾ ಹೇಳಿಕೆಗೆ ಸಿಎಂ ಗರಂ!

    ರಾಜ್ಯ ಸರ್ಕಾರ ಇಂಧನ ಮೇಲಿನ ತೆರಿಗೆ ಬಗ್ಗೆ ಮಾಹಿತಿ ನೀಡಿದ ಸಿಎಂ, ಇಡೀ ದೇಶದಲ್ಲಿ ನಮ್ಮ ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ಕಡಿಮೆ ಇದೆ. ನಾವು ತೆರಿಗೆ ಏರಿಸಿದರೂ, ನಮ್ಮ ಪಕ್ಕದ ರಾಜ್ಯಗಳಿಗೆ ಹೋಲಿಕೆ ಮಾಡಿ ನೋಡಿದರೆ ಮತ್ತೆ ನಮ್ಮದೇ ಕಡಿಮೆಯಾಗುತ್ತೆ ಎಂದರು. ಅಲ್ಲದೇ ಸಾರಿಗೆ ದರ ಹೆಚ್ಚಳದ ಬಗ್ಗೆ ಬೇಡಿಕೆ ಇದೆ. ಈ ಬಗ್ಗೆ ಸಭೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಐಟಿ ದಾಳಿ – ಇತ್ತ ಅಭಿಮಾನಿಯಿಂದ ಯಶ್‍ಗೆ ರಿಜಿಸ್ಟರ್ ಪೋಸ್ಟ್

    ಐಟಿ ದಾಳಿ – ಇತ್ತ ಅಭಿಮಾನಿಯಿಂದ ಯಶ್‍ಗೆ ರಿಜಿಸ್ಟರ್ ಪೋಸ್ಟ್

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಐಟಿ ದಾಳಿ ಕೊನೆಯ ಹಂತ ತಲುಪಿದೆ. ಇತ್ತ ನಟ ಯಶ್ ಅವರಿಗೆ ಅಭಿಮಾನಿಯೊಬ್ಬರು ರಿಜಿಸ್ಟರ್ ಪೋಸ್ಟ್ ಮಾಡಿದ್ದಾರೆ.

    ನಟ ಯಶ್ ಅಭಿಮಾನಿಯೊಬ್ಬರು ಬೆಂಗಳೂರಿನ ಬನಶಂಕರಿ ವಿಳಾಸದಿಂದ ಯಶ್ ಮನೆಗೆ ರಿಜಿಸ್ಟರ್ ಪೋಸ್ಟ್ ಮಾಡಿದ್ದಾರೆ. ಅಭಿಮಾನಿ ತನ್ನ ನೆಚ್ಚಿನ ನಟನ ‘ಕೆಜಿಎಫ್’ ಸಿನಿಮಾವನ್ನು ನೋಡಿ ಅದರ ಬಗ್ಗೆ ರಿವ್ಯೂ ಬರೆದು ಪೋಸ್ಟ್ ಮೂಲಕ ಯಶ್ ಅವರಿಗೆ ತಲುಪಿಸಿದ್ದಾರೆ. ಸದ್ಯಕ್ಕೆ ಯಶ್ ಮನೆಯಲ್ಲಿ ಐಟಿ ದಾಳಿ ನಡೆಯುತ್ತಿರುವುದರಿಂದ ಅಭಿಮಾನಿಯ ಪೋಸ್ಟನ್ನು ಇನ್ನೂ ತೆಗೆದು ನೋಡಲು ಸಾಧ್ಯವಾಗಿಲ್ಲ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಐಟಿ ದಾಳಿ ಮುಗಿದರೂ ನಟರಿಗೆ ತಪ್ಪದ ಸಂಕಷ್ಟ

    ಯಶ್ ಮನೆಯಲ್ಲಿ ಸತತ 33 ಗಂಟೆಯಿಂದ ಶೋಧ ಕಾರ್ಯ ನಡೆಸಿದ್ದು, ಈಗ ಕೊನೆಯ ಹಂತಕ್ಕೆ ತಲುಪಿದೆ. ಶುಕ್ರವಾರ ರಾತ್ರಿ ಯಶ್ ಮನೆಗೆ ಜಂಟಿ ಆಯುಕ್ತ ರಮೇಶ್ ಅಂತಿಮವಾಗಿ ಭೇಟಿ ಕೊಟ್ಟು ದಾಖಲೆಗಳನ್ನ ಪರಿಶೀಲನೆ ಮಾಡಿದ್ದಾರೆ. ಬಳಿಕ ಯಶ್ ಮದುವೆ ಹಾಗೂ ರಾಧಿಕಾ ಸೀಮಂತದಲ್ಲಿ ಬಂದಿದ್ದ ದುಬಾರಿ ಉಡುಗೊರೆಗಳ ಬಗ್ಗೆ ವಿವರ ಕೇಳಿದ್ದಾರೆ. ಕೊನೆಗೆ ಇಬ್ಬರು ಅಧಿಕಾರಿಗಳು ಪಂಚನಾಮೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸಂಜೆ ವೇಳಗೆ ಎಲ್ಲವೂ ಬಹುತೇಕ ಅಂತ್ಯ ಸಾಧ್ಯತೆ ಇದೆ. ಕೊನೆಯ ಹಂತದ ವಿಚಾರಣೆಯಲ್ಲಿ ಯಶ್ ಮತ್ತು ಅವರ ತಾಯಿ ಪುಷ್ಪಾ ಭಾಗಿಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

    ಐಟಿ ದಾಳಿ ಹಿನ್ನೆಲೆಯಲ್ಲಿ ಮನೆಯ ಕಾಂಪೌಂಡ್ ಒಳಗೆ ಯಶ್ ಕಾಣಿಸಿಕೊಂಡಿದ್ದು, ಫುಲ್ ರಿಲ್ಯಾಕ್ಸ್ ಮೂಡಿನಲ್ಲಿ ಆಪ್ತರೊಂದಿಗೆ ನಿರಾಳವಾಗಿರುವಂತೆ ಕಾಣಿಸಿಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಟ ಪುನೀತ್, ಯಶ್ ಮನೆಯಲ್ಲಿ ಎಷ್ಟು ಆಸ್ತಿ ಪತ್ತೆಯಾಗಿದೆ?

    ನಟ ಪುನೀತ್, ಯಶ್ ಮನೆಯಲ್ಲಿ ಎಷ್ಟು ಆಸ್ತಿ ಪತ್ತೆಯಾಗಿದೆ?

    ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಸ್ಟಾರ್ ಗಳ ಮನೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು ಪುನೀತ್ ರಾಜ್ ಕುಮಾರ್ ಮನೆಯ ತಪಾಸಣೆ ಮುಗಿದಿದೆ.

    ಪ್ರತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದು, ಸಂಪಾದಿಸಿದ್ದ, ಸಂಪಾದನೆ ಮಾಡುತ್ತಿರುವ ಲೆಕ್ಕವನ್ನೆಲ್ಲಾ ಕ್ರೋಢೀಕರಿಸುತ್ತಿದ್ದಾರೆ. ಸ್ಟಾರ್ ನಟರು ಕೇವಲ ಆಕ್ಟಿಂಗ್‍ನಲ್ಲಿ ಮಾತ್ರ ತೊಡಗಿಸಿಕೊಂಡಿಲ್ಲ. ಆಕ್ಟರ್ ಕಮ್ ಬಿಸಿನೆಸ್‍ಮೆನ್‍ಗಳಾಗಿದ್ದೇ ಇವತ್ತಿನ ಐಟಿ ರೇಡ್‍ಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ತೆರಿಗೆ ಇಲಾಖೆಗೆ ನಾವು ನಾಗರಿಕರಾಗಿ ಸಹಕಾರ ನೀಡಿದ್ದೇವೆ – ಪುನೀತ್ ಮೊದಲ ಪ್ರತಿಕ್ರಿಯೆ

    ನಟ ಪುನೀತ್ ಮತ್ತು ಯಶ್ ಮನೆಯಲ್ಲಿ ದೊರೆತ ಆಸ್ತಿಯ ಲೆಕ್ಕಗಳನ್ನು ನೋಡುವುದಾದರೆ, ಬೆಂಗಳೂರಿನಲ್ಲಿ ಪುನೀತ್ ಹೆಸರಲ್ಲಿ 10 ಆಸ್ತಿ ಪತ್ತೆಯಾಗಿದೆ. ಗಾಂಧಿನಗರದ 6ನೇ ಕ್ರಾಸ್, ಹೆಣ್ಣೂರು, ಥಣಿಸಂದ್ರ, ಕೆಂಪಾಪುರ, ಚಿರಂಜೀವಿ ಲೇಔಟ್, ರಾಜಾಜಿನಗರದ 1ನೇ ಬ್ಲಾಕ್‍ನಲ್ಲಿ ಆಸ್ತಿ ಹೊಂದಿದ್ದು, ಕೆಂಪಾಪುರ, ಚಿರಂಜೀವಿ ಲೇಔಟ್‍ನಲ್ಲಿ 3, ಕೋರಮಂಗಲದಲ್ಲಿ ಕಮರ್ಷಿಯಲ್ ಪ್ರಾಪರ್ಟಿ ಮಾಡಿದ್ದಾರೆ. ಇನ್ನೂ ಪಿಆರ್ ಕೆ ಪ್ರೊಡಕ್ಷನ್, ಪಿಆರ್ ಕೆ ಆಡಿಯೋ ವ್ಯವಹಾರ ಬಗ್ಗೆ ಮಾಹಿತಿ ಸಂಗ್ರಹವಾಗಿದೆ. ಇಡೀ ವ್ಯವಹಾರದ ಬಗ್ಗೆ ಮಾಹಿತಿ ನೀಡಲು ನಟ ಪುನೀತ್ ಐಟಿ ಅಧಿಕಾರಿಗಳ ಬಳಿ ಕಾಲಾವಕಾಶ ಕೋರಿದ್ದಾರೆ. ಇದನ್ನೂ ಓದಿ: 20ಕೆಜಿ ಬೆಳ್ಳಿ, 450ಗ್ರಾಂ ಚಿನ್ನ, 1 ವಜ್ರದ ಸರ, 2 ಪ್ಲಾಟಿನಂ ಸರ- ಯಶ್ ಮನೆಯಲ್ಲಿ ಪತ್ತೆ..?

    ಇತ್ತ ಯಶ್ ಮನೆಯಲ್ಲಿ 20 ಕೆಜಿಗೂ ಅಧಿಕ ಬೆಳ್ಳಿ, ಸುಮಾರು 450 ಗ್ರಾಂ ಚಿನ್ನ, 1 ವಜ್ರದ ಸರ, 2 ಪ್ಲಾಟಿನಮ್ ಸರ ಪತ್ತೆಯಾಗಿವೆ. ಅಷ್ಟೇ ಅಲ್ಲದೇ 2 ಬ್ಯಾಂಕ್‍ಗಳಲ್ಲಿ 40 ಕೋಟಿ ಸಾಲ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭಿಸಿದೆ. 8 ಬ್ಯಾಂಕ್ ಖಾತೆ ಹೊಂದಿರುವ ಯಶ್, ತಾಯಿ ಜೊತೆ 4 ಜಂಟಿ ಖಾತೆಯನ್ನು ಹೊಂದಿದ್ದಾರೆ. ಮಂಡ್ಯದಲ್ಲಿ 8 ಎಕರೆ ಜಮೀನು ಖರೀದಿ ಮಾಡಿದ್ದಾರೆ. ಅಧಿಕಾರಿಗಳ ಪ್ರತಿ ಪ್ರಶ್ನೆಗೂ ಸಹನೆಯಿಂದ ಯಶ್ ತಾಯಿ ಉತ್ತರಿಸಿದ್ದಾರೆ ಐಟಿ ಮೂಲಗಳಿಂದ ತಿಳಿದು ಬಂದಿದೆ.

    ಸದ್ಯಕ್ಕೆ ಇಬ್ಬರ ನಟರ ಆಸ್ತಿ ಮಾಹಿತಿ ಲಭ್ಯವಾಗಿದ್ದು, ಇನ್ನಿಬ್ಬರ ಮಾಹಿತಿಯನ್ನು ಐಟಿ ಅಧಿಕಾರಿಗಳು ಕಲೆಹಾಕಲಾಗುತ್ತಿದೆ. ನಟ ಪುನೀತ್ ರಾಜ್‍ಕುಮಾರ್ ಮನೆಯ ಮೇಲಿನ ಐಟಿ ರೇಡ್ ಮುಗಿದಿದ್ದು, ನಟ ಯಶ್, ಸುದೀಪ್ ಮತ್ತು ಶಿವರಾಜ್‍ಕುಮಾರ್ ಮನೆಯಲ್ಲಿ ಮೂರನೇ ದಿನವೂ ಐಟಿ ದಾಳಿ ಮುಂದುವರಿದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತೆರಿಗೆ ಇಲಾಖೆಗೆ ನಾವು ನಾಗರಿಕರಾಗಿ ಸಹಕಾರ ನೀಡಿದ್ದೇವೆ – ಪುನೀತ್ ಮೊದಲ ಪ್ರತಿಕ್ರಿಯೆ

    ತೆರಿಗೆ ಇಲಾಖೆಗೆ ನಾವು ನಾಗರಿಕರಾಗಿ ಸಹಕಾರ ನೀಡಿದ್ದೇವೆ – ಪುನೀತ್ ಮೊದಲ ಪ್ರತಿಕ್ರಿಯೆ

    – 1984ರಲ್ಲಿಯೇ ನಮ್ಮ ಮನೆಯ ಮೇಲೆ ಐಟಿ ದಾಳಿ ನಡೆದಿತ್ತು
    – ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದೇವೆ

    ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಮನೆಯಲ್ಲಿ ಐಟಿ ರೇಡ್ ಶುಕ್ರವಾರ ರಾತ್ರಿ 11.30ಕ್ಕೆ ಅಂತ್ಯವಾಗಿದ್ದು, ಈ ಬಗ್ಗೆ ಮೊದಲ ಬಾರಿಗೆ ನಟ ಪುನೀತ್ ಪ್ರತಿಕ್ರಿಯೆ ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತೆರಿಗೆ ಇಲಾಖೆ ಅವರು ಬಂದು ನಮ್ಮ ಮನೆಯನ್ನು ರೇಡ್ ಮಾಡಿದ್ದಾರೆ. ನಾವು ನಾಗರಿಕರಾಗಿ ಅವರಿಗೆ ಸಹಕರಿಸಬೇಕು. ಈಗ ರೇಡ್ ಮುಗಿದಿದ್ದು, ಅದರ ಪ್ರಕ್ರಿಯೆ ಇನ್ನೂ ಒಂದು ಗಂಟೆ ನಡೆಯುತ್ತದೆ. ನಾವು ಅವರಿಗೆ ಏನು ತೊಂದರೆ ಕೊಟ್ಟಿಲ್ಲ. ಅದೇ ರೀತಿ ಅವರು ಕೂಡ ನಮಗೆ ಯಾವುದೇ ರೀತಿಯ ತೊಂದರೆ ಮಾಡಿಲ್ಲ. ತೆರಿಗೆ ಇಲಾಖೆಗೆ ನಾಗರಿಕರಾಗಿ ಸಹಕರಿಸಿದ್ದೇವೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಂತಿಮ ಹಂತಕ್ಕೆ ತಲುಪಿದ ಪುನೀತ್, ಶಿವಣ್ಣ ಮನೆ ರೇಡ್

    ಯಾರೇ ಆಗಲಿ ಅವರ ಅಕೌಂಟ್ ವಿಚಾರದಲ್ಲಿ ವ್ಯತ್ಯಾಸ ಕಂಡು ಬಂದರೆ ತೆರಿಗೆ ಇಲಾಖೆ ಅವರು ರೇಡ್ ಮಾಡುತ್ತಾರೆ. ಅವರಿಗೆ ಬಂದಿದ್ದ ಮಾಹಿತಿ ಮೇರೆಗೆ ನಮ್ಮ ಮನೆಯ ಮೇಲೆ ರೇಡ್ ಮಾಡಿದ್ದಾರೆ. ಅವರು ಕೇಳಿದ ಎಲ್ಲ ಪ್ರಶ್ನೆಗಳಿಗೂ ನಾವು ಸಂಪೂರ್ಣವಾಗಿ ಉತ್ತರ ಕೊಟ್ಟಿದ್ದೇವೆ. ನಮ್ಮ ಮನೆಯ ಮೇಲೆ 1984ರಲ್ಲಿ ಚೆನ್ನೈ, ಬೆಂಗಳೂರು ಮತ್ತು ನಮ್ಮ ಫಾರ್ಮ್ ಹೌಸ್ ನಲ್ಲಿ ನಡೆದಿತ್ತು. ಅದೇ ರೀತಿ ಈಗಲೂ ಮಾಡಿದ್ದಾರೆ ಅಷ್ಟೇ ಎಂದು ಪುನೀತ್ ಐಟಿ ದಾಳಿಯ ಬಗ್ಗೆ ಹೇಳಿದ್ದಾರೆ. ಇದನ್ನೂ ಓದಿ: ಐಟಿ ಅಧಿಕಾರಿಗಳ ಬಳಿ ಕಾಲಾವಕಾಶ ಕೇಳಿದ ಪುನೀತ್

    ಇಂದು ಹುಬ್ಬಳ್ಳಿಯಲ್ಲಿ ಪುನೀತ್ ಅಭಿನಯದ ‘ನಟಸಾರ್ವಭೌಮ’ ಸಿನಿಮಾದ ಧ್ವನಿಸುರುಳಿ ಬಿಡುಗಡೆಯಾಗುತ್ತಿದೆ. ಪುನೀತ್ ಮನೆಯ ಐಟಿ ದಾಳಿ ಶುಕ್ರವಾರ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಇಂದು ಕಾರ್ಯಕ್ರಮಕ್ಕೆ ಹೋಗಲು ಅಧಿಕಾರಿಗಳು ಅವಕಾಶ ನೀಡಿದ್ದಾರೆ. ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಸಂಜೆ ಸುಮಾರು 5 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

    ಜಯಂತ್ ಕಾಯ್ಕಿಣಿ, ಯೋಗರಾಜ್ ಭಟ್, ಕವಿರಾಜ್ ಮತ್ತು ಪವನ್ ವಡೆಯರ್ ಅವರ ಸಾಹಿತ್ಯದಲ್ಲಿ ಹಾಡುಗಳು ಮೂಡಿಬಂದಿವೆ. ಹೀಗಾಗಿ ಧ್ವನಿ ಸುರುಳಿ ಬಿಡುಗಡೆಗಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಇನ್ನು ಕಾರ್ಯವನ್ನು ಕಣ್ತುಂಬಿಕೊಳ್ಳಲು ಇಡೀ ಹುಬ್ಬಳ್ಳಿಯ ಜನತೆ ಕಾದು ಕುಳಿತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾಲ್ವರು ಸ್ಟಾರ್‌ಗಳ ಮೇಲಿನ ಐಟಿ ದಾಳಿಗೆ ಜಿಎಸ್‍ಟಿ ಕಾರಣ?

    ನಾಲ್ವರು ಸ್ಟಾರ್‌ಗಳ ಮೇಲಿನ ಐಟಿ ದಾಳಿಗೆ ಜಿಎಸ್‍ಟಿ ಕಾರಣ?

    ಬೆಂಗಳೂರು: ಸ್ಯಾಂಡಲ್‍ವುಡ್ ನ ನಾಲ್ವರು ಸ್ಟಾರ್ ಗಳ ಮೇಲಿನ ಐಟಿ ದಾಳಿಗೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಕಾರಣವೇ ಎನ್ನುವ ಪ್ರಶ್ನೆ ಎದ್ದಿದೆ.

    ಕನ್ನಡದಲ್ಲಿ ವರ್ಷಕ್ಕೆ 300 ಸಿನಿಮಾಗಳು ರಿಲೀಸ್ ಆಗುತ್ತವೆ. ಆದರೆ ಟಾಲಿವುಡ್, ಮಾಲಿವುಡ್, ಕಾಲಿವುಡ್ ಸಿನಿಮಾ ಉದ್ಯಮಕ್ಕೆ ಹೋಲಿಸಿದರೆ ಸ್ಯಾಂಡಲ್‍ವುಡ್‍ನಿಂದ ತೆರಿಗೆ ಸಂಗ್ರಹ ಕಡಿಮೆ. ಇದರ ಜೊತೆಯಲ್ಲೇ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕನ್ನಡದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಸಿನಿಮಾಗಳು ತೆರೆಕಾಣುತ್ತಿವೆ. ಇಷ್ಟೆಲ್ಲಾ ಆದರೂ ತೆರಿಗೆ ಸಂಗ್ರಹ ಕಡಿಮೆ ಯಾಕೆ ಆಗುತ್ತಿದೆ ಎನ್ನುವ ಅನುಮಾನ ಆದಾಯ ತೆರಿಗೆ ಇಲಾಖೆಗೆ ಬಂದಿದೆ. ಈ ಅನುಮಾನ ಪರಿಹರಿಸಿಕೊಳ್ಳಲು ಜಿಎಸ್‍ಟಿಯ ಗುಪ್ತಚರ ವಿಭಾಗ ವಿವಿಧ ಮೂಲಗಳಿಂದ ಮಾಹಿತಿಯನ್ನು ಸಂಗ್ರಹಿಸಿಕೊಂಡಿತ್ತು. ಇದನ್ನೂ ಓದಿ: ಆ ಒಂದು ಡೈರಿಯಿಂದ ಸ್ಟಾರ್ ನಟರ ಮನೆ ಮೇಲೆ ದಾಳಿ!

    ಚಿತ್ರದ ಮೇಕಿಂಗ್ ಹಾಗೂ ನಟರ ಸಂಭಾವನೆ ಬಗ್ಗೆ ನಿರ್ಮಾಪಕರು ಮಾಹಿತಿ ನೀಡಿರಲಿಲ್ಲ. ಕೊನೆಗೆ ಮಲ್ಟಿಪ್ಲೆಕ್ಸ್ ಗಳಿಂದಲೇ ಅಧಿಕಾರಿಗಳು ಚಿತ್ರದ ಕಲೆಕ್ಷನ್ ಬಗ್ಗೆ ಮಾಹಿತಿ ಪಡೆದಿದ್ದರು. ಸಿನಿಮಾ ಎಷ್ಟು ದಿನ ಓಡಿದೆ, ಎಷ್ಟು ಆದಾಯ ಬಂದಿದೆ ಎಂಬುದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದರು. ಆದರೆ ನಿರ್ಮಾಪಕರು ಮತ್ತು ವಿತರಕರು ನೀಡಿದ ಡೇಟಾಕ್ಕೂ ಇದಕ್ಕೂ ತಾಳೆ ಆಗುತ್ತಿರಲಿಲ್ಲ. ಅಷ್ಟೇ ಅಲ್ಲದೇ ನಟರಿಗೆ ಮಾರುಕಟ್ಟೆಯಲ್ಲಿ ಇರುವ ಸಂಭಾವನೆ ಹಾಗೂ ನಟರು ಹೇಳಿರುವ ಸಂಭಾವನೆಗೂ ತಾಳೆ ಆಗದ ವಿಚಾರ ಪ್ರಾಥಮಿಕ ಪರಿಶೀಲನೆಯಲ್ಲಿ ಐಟಿ ಗಮನಕ್ಕೆ ಬಂದಿದೆ. ಇದನ್ನೂ ಓದಿ: ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಖಡಕ್ ಆಗಿ ಉತ್ತರಿಸಿದ ಸ್ಟಾರ್ ನಟರು


    ಕನ್ನಡದಲ್ಲಿ ಕೆಲ ನಟರಿಗೆ ಮುಂಗಡ ಸಂಭಾವನೆಯಾಗಿ ಒಂದು ವಿಲ್ಲಾ ಮತ್ತು ಫ್ಲಾಟ್‍ಗಳನ್ನು ನೀಡಲಾಗುತ್ತಿದೆ ಎನ್ನುವ ವಿಚಾರ 2017ರಲ್ಲಿ ನಡೆದಿದ್ದ ಐಟಿ ದಾಳಿ ವೇಳೆ ಬೆಳಕಿಗೆ ಬಂದಿತ್ತು. ಈ ಅನುಮಾನಗಳು ಮೂಡಿದ ಹಿನ್ನೆಲೆಯಲ್ಲಿ ಐಟಿ ಗುರುವಾರ ಸ್ಯಾಂಡಲ್‍ವುಡ್ ಸ್ಟಾರ್ ಗಳ ಮೇಲೆ ದಾಳಿ ನಡೆಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಐಟಿ ದಾಳಿ ಆಗಿದೆ ಗೊತ್ತು, ಆದ್ರೆ ಯಾಕೆ ದಾಳಿ ನಡೆದಿದೆ ಅಂತ ಗೊತ್ತಿಲ್ಲ – ಡಿಸಿಎಂ

    ಐಟಿ ದಾಳಿ ಆಗಿದೆ ಗೊತ್ತು, ಆದ್ರೆ ಯಾಕೆ ದಾಳಿ ನಡೆದಿದೆ ಅಂತ ಗೊತ್ತಿಲ್ಲ – ಡಿಸಿಎಂ

    ಬೆಂಗಳೂರು: ಗುರುವಾರ ಬೆಳ್ಳಂಬೆಳಗ್ಗೆಯಿಂದ ಸ್ಯಾಂಡಲ್‍ವುಡ್ ನಟರು ಮತ್ತು ನಿರ್ಮಾಪಕರ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಿದ್ದು, ಎಲ್ಲ ಮಾಧ್ಯಮಗಳಲ್ಲೂ ಈ ಸುದ್ದಿ ಪ್ರಸಾರವಾಗುತ್ತಿದೆ. ಆದರೆ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಸ್ಯಾಂಡಲ್‍ವುಡ್ ಸ್ಟಾರ್ ಗಳ ಮೇಲೆ ಐಟಿ ದಾಳಿ ಆಗಿದೆ ಎಂದು ಗೊತ್ತು. ಆದರೆ ಯಾಕೆ ದಾಳಿ ಆಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

    ಡಿಸಿಎಂ ಪರಮೇಶ್ವರ್ ಅವರು, ಐಟಿ ಅಧಿಕಾರಿಗಳು ಸ್ಯಾಂಡಲ್‍ವುಡ್ ನಟರ ಮೇಲೆ ದಾಳಿ ಮಾಡಿದ್ದಾರೆ. ದಾಳಿಗಾಗಿ ಅಧಿಕಾರಿಗಳು ಪೊಲೀಸರ ನೆರವು ಕೇಳುತ್ತಿದ್ದಾರೆ. ಹೀಗಾಗಿ ಡಿಜಿ ಬಳಿ ಪೊಲೀಸರ ಬಳಕೆಯ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಪೊಲೀಸರ ಭದ್ರತೆ ನೆರವು ಮಾತ್ರ ಕೇಳಿದ್ದಾರೆ. ಆದರೆ ಅವರು ಯಾರ ಮೇಲೆ, ಯಾಕೆ ಅಂತ ಮಾಹಿತಿ ಕೊಡಲಿಲ್ಲ ಎಂದು ಡಿಸಿಎಂ ಹೇಳಿದ್ದಾರೆ.

    ಕಳೆದ ದಿನದಿಂದ ನಟ ಸುದೀಪ್, ಯಶ್, ಪುನೀತ್ ರಾಜ್‍ಕುಮಾರ್, ಶಿವರಾಜ್‍ಕುಮಾರ್ ಸೇರಿದಂತೆ ನಿರ್ಮಾಪಕರ ಮನೆಯ ಮೇಲೆ ಐಟಿ ಅಧಿಕಾರಿಗಳು ಏಕಕಾಲಕ್ಕೆ 20ಕ್ಕೂ ಹೆಚ್ಚು ಕಡೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

    ಇತ್ತ ಸಚಿವ ಡಿ.ಕೆ. ಶಿವಕುಮಾರ್ ಅವರು ಕೂಡ ಐಟಿ ದಾಳಿಯ ಬಗ್ಗೆ ತಿಳಿದು ರಾತ್ರಿ ನಟ ಪುನೀತ್ ಮನೆ ಬಳಿ ಹೋಗಿ ಅಭಿಮಾನಿಗಳು ಜೊತೆ ಮಾತನಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮನೆಯ ಬಾಲ್ಕನಿಯಲ್ಲೇ ನಟ ಶಿವಣ್ಣ ದಂಪತಿ ವಾಕಿಂಗ್

    ಮನೆಯ ಬಾಲ್ಕನಿಯಲ್ಲೇ ನಟ ಶಿವಣ್ಣ ದಂಪತಿ ವಾಕಿಂಗ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟರ ಮನೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಅಧಿಕಾರಿಗಳ ಪರಿಶೀಲನೆ ಕಾರ್ಯಾಚರಣೆ ಮುಂದುವರಿದಿದ್ದು, ಪರಿಣಾಮ ನಟ ಶಿವರಾಜ್‍ಕುಮಾರ್ ದಂಪತಿಯಿಂದ ಮನೆಯ ಬಾಲ್ಕನಿಯಲ್ಲೇ ವಾಕಿಂಗ್ ಮಾಡಿದ್ದಾರೆ.

    ಐಟಿ ಅಧಿಕಾರಿಗಳು ದಾಳಿ ಮಾಡುವಾಗ ಸದಸ್ಯರು ಮನೆಯಿಂದ ಹೊರಗಡೆ ಹೋಗಲು ಅವಕಾಶ ಇರುವುದಿಲ್ಲ. ಆದರೆ ಶಿವಣ್ಣ ಅವರು ಆರೋಗ್ಯ ದೃಷ್ಟಿಯಿಂದ ಪ್ರತಿನಿತ್ಯ ಮನೆಯ ಸಮೀಪದ ಪಾರ್ಕಿನಲ್ಲಿ ವಾಕಿಂಗ್ ಮಾಡುತ್ತಿದ್ದರು. ಆದರೆ ಐಟಿ ದಾಳಿಯಿಂದ ಮನೆಯಿಂದ ಹೊರಗೆ ಹೋಗಲು ಸಾಧ್ಯವಾಗದಿದ್ದರಿಂದ ಮಾನ್ಯತಾ ಟೆಕ್‍ಪಾರ್ಕಿನಲ್ಲಿರುವ ನಿವಾಸದ ಬಾಲ್ಕನಿಯಲ್ಲಿ ನಟ ಶಿವರಾಜ್‍ಕುಮಾರ್ ತಮ್ಮ ಪತ್ನಿ ಗೀತಾ ಅವರ ಜೊತೆ ವಾಕಿಂಗ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಹಿಂದಿನ ಚಿತ್ರದ ಸಂಭಾವನೆ ಎಷ್ಟು? – ಶಿವಣ್ಣರನ್ನು ವಿಚಾರಿಸುತ್ತಿರುವ ಐಟಿ ಅಧಿಕಾರಿಗಳು

    ಗುರುವಾರ ತಡರಾತ್ರಿ 12 ಗಂಟೆವರೆಗೆ ಐಟಿ ಅಧಿಕಾರಿಗಳಿಂದ ತಪಾಸಣೆ ಮಾಡಿದ್ದಾರೆ. ಒಟ್ಟು ಎಂಟು ಮಂದಿ ಐಟಿ ಅಧಿಕಾರಿಗಳ ತಂಡ ಶಿವರಾಜ್ ಕುಮಾರ್ ಮನೆಯಲ್ಲಿ ತಡರಾತ್ರಿವರೆಗೂ ಪರಿಶೀಲನೆ ನಡೆಸಿ ವಾಪಸ್ಸಾಗಿದ್ದರು. ಬಳಿಕ ರಾತ್ರಿ ಮೂವರು ಐಟಿ ಅಧಿಕಾರಿಗಳು ಶಿವಣ್ಣನ ಮನೆಯಲ್ಲೇ ತಂಗಿದ್ದು, ಉಳಿದ ಅಧಿಕಾರಿಗಳು ವಾಪಸ್ ಹೋಗಿದ್ದರು. ಅವರು ಇಂದು ಬೆಳಗ್ಗೆ ಬಂದ ನಂತರ ಮತ್ತೆ ಶೋಧ ಕಾರ್ಯಚರಣೆ ಮುಂದುವರಿಯಲಿದೆ.

    ನಟರು ಮತ್ತು ನಿರ್ಮಾಕಪಕರು ಮನೆಯಲ್ಲಿ ಸಿಕ್ಕಿದ್ದ ಆಸ್ತಿಪಾಸ್ತಿ ಪತ್ರ, ಇನ್ನಿತರ ದಾಖಲೆಗಳ ಬಗ್ಗೆ ಪ್ರಶ್ನೆ ಮೇಲೆ ಪ್ರಶ್ನೆ ಮಾಡಿ ಐಟಿ ಅಧಿಕಾರಿಗಳು ಉತ್ತರ ಪಡೆದುಕೊಂಡಿದ್ದಾರೆ. ಇನ್ನೂ ಕೆಲವು ಪ್ರಶ್ನೆಗಳಿಗೆ ಉತ್ತರ ಕೊಡಲು ನಟರು ಮತ್ತು ನಿರ್ಮಾಪಕರು ಸಮಯ ಬೇಕೆಂದಿದ್ದರು. ಇಂದೂ ಕೂಡ ಪರಿಶೀಲನೆ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆ ಇದೆ. ಎಲ್ಲಾ ಸಂಪೂರ್ಣ ದಾಖಲೆಗಳಿಗೆ ಉತ್ತರ ಪಡೆಯಲು ಇಂದು ಕೂಡ ಪರಿಶೀಲನೆ ಮಾಡಲಿದ್ದಾರೆ. ದೊಡ್ಡ ದೊಡ್ಡ ಬ್ಯಸಿನೆಸ್ ಜಾಲ ಮತ್ತು ತೆರಿಗೆ ವಂಚನೆ ಪತ್ತೆ ಹಚ್ಚಲು ಐಟಿ ದಾಳಿ ನಡೆಸಲಾಗಿದೆ ಎಂಬುದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv