Tag: ITBP Police

  • 17,500 ಅಡಿ ಎತ್ತರದಲ್ಲಿ 55ರ ಐಟಿಬಿಪಿ ಅಧಿಕಾರಿಯ 65 ಪುಶ್ ಅಪ್ ವಿಡಿಯೋ ವೈರಲ್

    17,500 ಅಡಿ ಎತ್ತರದಲ್ಲಿ 55ರ ಐಟಿಬಿಪಿ ಅಧಿಕಾರಿಯ 65 ಪುಶ್ ಅಪ್ ವಿಡಿಯೋ ವೈರಲ್

    ನವದೆಹಲಿ: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ತಮ್ಮ ಕೇಂದ್ರ ಪರ್ವತಾರೋಹಣ ತಂಡದೊಂದಿಗೆ ಹಿಮಾಲಯ ಪರ್ವತವಾದ ಮೌಂಟ್ ಕಾರ್ಜೋಕ್ ಕಂಗ್ರಿಯನ್ನು ಏರಿದೆ. ಕಮಾಂಡೆಂಟ್ ರತನ್ ಸಿಂಗ್ ಸೋನಾಲ್ ನೇತೃತ್ವದ ಪಡೆಯ ಆರು ಉನ್ನತ ಪರ್ವತಾರೋಹಿಗಳ ತಂಡವು ಫೆಬ್ರವರಿ 20 ರಂದು 20,177 ಅಡಿ ಎತ್ತರದ ಶಿಖರವನ್ನು ಏರಿದೆ ಎಂದು ಐಟಿಬಿಪಿ ತಿಳಿಸಿದೆ.

    ಐಟಿಬಿಪಿ ಬಾರ್ಡರ್ ಪೊಲೀಸ್ ತಂಡವು ಮೌಂಟ್ ಕಾರ್ಜೋಕ್ ಕಾಂಗ್ರಿಯನ್ನು ಮೊದಲ ಬಾರಿ ಆರೋಹಣ ಮಾಡಿದ್ದಾರೆ. ಏಸ್ ಪರ್ವತಾರೋಹಿ ಕಮಾಂಡೆಂಟ್ ರತನ್ ಸಿಂಗ್ ಸೋನಾಲ್ ನೇತೃತ್ವದ ಐಟಿಬಿಪಿಯ 6 ಉನ್ನತ ದರ್ಜೆಯ ಪರ್ವತಾರೋಹಿಗಳ ತಂಡವು ಲಡಾಖ್‍ನ ಹಿಮಪರ್ವತವಾದ 20,177 ಅಡಿ ಎತ್ತರದ ಶಿಖರವನ್ನು ಏರಿತು ಎಂದು ಐಟಿಬಿಪಿ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

    ತೀವ್ರವಾದ ಚಳಿಗಾಲದಲ್ಲಿ ದೈಹಿಕ ಮತ್ತು ಮಾನಸಿಕ ಗಟ್ಟಿತನವನ್ನು ತಡೆದುಕೊಂಡು ತಂಡವು ಯಾವುದೇ ವಿಶೇಷ ಪರ್ವತಾರೋಹಣ ಉಪಕರಣಗಳು ಮತ್ತು ಬೆಂಬಲ ವ್ಯವಸ್ಥೆಯನ್ನು ಬಳಸಿಕೊಳ್ಳದೆ ಆರೋಹಣವನ್ನು ಪೂರ್ಣಗೊಳಿಸಿತು ಎಂದು ಐಟಿಬಿಪಿಯ ಅಧಿಕಾರಿ ತಿಳಿಸಿದರು.

    ಮೌಂಟ್ ಕಾರ್ಜೋಕ್ ಕಂಗ್ರಿಯನ್ನು ಏರುತ್ತಿರುವ ಕೆಲ ದೃಶ್ಯಗಳನ್ನು ಐಟಿಬಿಪಿ ತಂಡವು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

    ಮೈ ನಡುಗಿಸುವ ಚಳಿಯಲ್ಲಿ, ಮೈನಸ್ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ 17,500 ಅಡಿ ಎತ್ತರದಲ್ಲಿ ಒಂದೇ ಬಾರಿಗೆ 65 ಪುಷ್-ಅಪ್‍ಗಳನ್ನು ಪೂರ್ಣಗೊಳಿಸಿದ ಕಮಾಂಡೆಂಟ್ ಸೋನಾಲ್ ಅವರ ವೀಡಿಯೋ ಕೂಡ ವೈರಲ್ ಆಗುತ್ತಿದೆ. ಇದನ್ನೂ ಓದಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೃತೀಯಲಿಂಗಿ

    65 ಪುಷ್-ಅಪ್‍ಗಳನ್ನು ಹೊಡೆದ ಸೋನಾಲ್ 55 ವರ್ಷ ವಯಸ್ಸಿನ ಕಮಾಂಡೆಂಟ್ ಆಗಿದ್ದು, ಅವರ ಈ ಧಾಡಸಿ ವಾಯ್ಯಾಮವನ್ನು ನೋಡಿದ ನೆಟ್ಟಿಗರೊಬ್ಬರು ನಮ್ಮ ಸೇನಾ ಸಿಬ್ಬಂದಿ ಎಷ್ಟು ಪ್ರಬಲರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಸೋನಾಲ್ ಅವರ ಈ ಧಾಡಸಿ ವ್ಯಾಯಾಮದ ವೀಡಿಯೋವು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. 13,000 ಕ್ಕೂ ಹೆಚ್ಚು ಲೈಕ್‍ಗಳನ್ನು ಪಡೆದುಕೊಂಡಿದ್ದು, 1,800 ಕ್ಕೂ ಹೆಚ್ಚು ಜನರು ಶೇರ್ ಮಾಡಿಕೊಂಡಿದ್ದಾರೆ.

    1962 ರಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ರಚಿಸಲಾಯಿತು. ಹಿಮಾಲಯದ 3,488 ಕಿಮೀ ಉದ್ದದ ಗಡಿ ಅಲ್ಲದೇ ನಕ್ಸಲ್ ವಿರೋಧಿ ಕಾರ್ಯಾಚರಣೆ ಮತ್ತು ಇತರ ಆಂತರಿಕ ಭದ್ರತಾ ಕರ್ತವ್ಯಗಳಿಗೆ ಈ ಪಡೆಯನ್ನು ನಿಯೋಜಿಸಲಾಗಿದೆ.

  • ರಜೆ ಕೊಡದ್ದಕ್ಕೆ ಐಟಿಬಿಪಿ ಸಹೋದ್ಯೋಗಿಗಳ ಮೇಲೆಯೇ ಗುಂಡು – 5 ಮಂದಿ ಸಾವು, ಇಬ್ಬರು ಗಂಭೀರ

    ರಜೆ ಕೊಡದ್ದಕ್ಕೆ ಐಟಿಬಿಪಿ ಸಹೋದ್ಯೋಗಿಗಳ ಮೇಲೆಯೇ ಗುಂಡು – 5 ಮಂದಿ ಸಾವು, ಇಬ್ಬರು ಗಂಭೀರ

    ರಾಯಪುರ: ಸಹೋದ್ಯೋಗಿ ಗುಂಡು ಹಾರಿಸಿದ್ದರಿಂದ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) ಐದು ಸಿಬ್ಬಂದಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.

    ಬೆಳಗ್ಗೆ 9ಕ್ಕೆ ಛತ್ತೀಸ್‍ಗಢದ ನಾರಾಯಣಪುರ ಜಿಲ್ಲೆಯ ಕಡೇನಾರ್ ಶಿಬಿರದ ಐಟಿಬಿಪಿಯ 45 ಬೆಟಾಲಿಯನಿನಲ್ಲಿ ಘಟನೆ ನಡೆದಿದ್ದು, ಗುಂಡು ಹಾರಿಸಿದ ನಂತರ ಆರೋಪಿ ಕಾನ್ಸ್‍ಟೇಬಲ್ ತನಗೂ ಸಹ ಗುಂಡು ಹಾರಿಸಿ ಸಾವನ್ನಪ್ಪಿದ್ದಾನೆ ಎಂದು ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್(ಬಸ್ತಾರ್ ರೇಂಜ್) ಪಿ.ಸುಂದರ್ ರಾಜ್ ಮಹಿತಿ ನೀಡಿದ್ದಾರೆ.

    ಐಟಿಬಿಪಿ ಕಾನ್ಸ್‍ಟೇಬಲ್ ಮಸುದುಲ್ ರಹ್ಮಾನ್ ಸಹೋದ್ಯೋಗಿಗಳಿಗೆ ತನ್ನ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಇದರಲ್ಲಿ ಐವರು ಮೃತಪಟ್ಟಿದ್ದು, ಇಬ್ಬರಿಗೆ ಗಾಯಗಳಾಗಿವೆ. ಘಟನೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆತನಿಗೆ ರಜೆ ನೀಡಿಲ್ಲದ ಕಾರಣಕ್ಕೆ ಈ ರೀತಿ ಮಾಡಿದ್ದಾನೆ ಎಂದು ಶಂಕಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.

    ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಸುದುಲ್ ರಹ್ಮಾನ್‍ನನ್ನು ಹೊರತುಪಡಿಸಿ ಸಾವನ್ನಪ್ಪಿದ ಎಲ್ಲರನ್ನೂ ಹೆಡ್ ಕಾನ್ಸ್‍ಟೇಬಲ್‍ಗಳಾದ ಮಹೇಂದ್ರ ಸಿಂಗ್, ದಲಿಜಿತ್ ಸಿಂಗ್, ಕಾನ್ಸ್‍ಟೇಬಲ್‍ಗಳಾದ ಸುರ್ಜಿತ್ ಸರ್ಕಾರ್, ಬಿಸ್ವರೂಪ್ ಮ್ಯಾಹ್ತೊ ಹಾಗೂ ನಿಜೀಶ್ ಎಂದು ಗುರುತಿಸಲಾಗಿದೆ.

    ಕಾನ್ಸ್‍ಟೇಬಲ್‍ಗಳಾದ ಎಸ್.ಬಿ.ಉಲ್ಲಾಸ್ ಹಾಗೂ ಸೀತಾರಾಮ್ ದೂನ್ ಗಾಯಾಳುಗಳಾಗಿದ್ದಾರೆ. ಗುಂಡಿನ ಚಕಮಕಿ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಭೇಟಿ ನೀಡಿದ್ದಾರೆ ಎಂದು ಸುಂದರ್ ರಾಜ್ ತಿಳಿಸಿದ್ದಾರೆ.