Tag: Item Song

  • ‘ಬ್ರಹ್ಮರಾಕ್ಷಸ’ನಿಗಾಗಿ ಐಟಂ ಸಾಂಗ್: ಸಂಜೆ ಹೊತ್ನಾಗ ಮೈಪುಳಕ

    ‘ಬ್ರಹ್ಮರಾಕ್ಷಸ’ನಿಗಾಗಿ ಐಟಂ ಸಾಂಗ್: ಸಂಜೆ ಹೊತ್ನಾಗ ಮೈಪುಳಕ

    ನ್ನಡ ಚಿತ್ರರಂಗದಲ್ಲೀಗ ಹೊಸ ಆಶಾಭಾವನೆ ಮೂಡಿದೆ. ಇತ್ತೀಚೆಗೆ ತೆರೆಕಂಡ ಚಿತ್ರಗಳ ಗೆಲುವು ಹೊಸಬರಿಗೆ  ನವಚೇತನ‌ ನೀಡಿದೆ. ಅದೇ ನಿಟ್ಟಿನಲ್ಲಿ  ಮತ್ತಷ್ಟು ಚಿತ್ರತಂಡಗಳು ಬಿಡುಗಡೆಯ ಸಿದ್ದತೆ ಮಾಡಕೊಳ್ಳುತ್ತಿವೆ.  ಅಂತಹ ಸಿನಿಮಾಗಳಲ್ಲಿ  ಬ್ರಹ್ಮರಾಕ್ಷಸ (Brahmarakshasa) ಕೂಡ ಒಂದು.  ಲೈಟ್‌ಮ್ಯಾನ್ ಆಗಿ ಚಿತ್ರರಂಗಕ್ಕೆ ಬಂದು ಹಲವಾರು ನಿರ್ದೇಶಕರ ಬಳಿ ಕೆಲಸ ಕಲಿತ ಶಂಕರ್.ವಿ. ಮೊದಲಬಾರಿಗೆ ಆ್ಯಕ್ಷನ್‌ಕಟ್ ಹೇಳಿರುವ ಚಿತ್ರ ಇದಾಗಿದ್ದು, ಜ್ಯೋತಿ ಆರ್ಟ್ಸ್ ಮೂಲಕ ಕೆಎಂಪಿ. ಶ್ರೀನಿವಾಸ್  ಅವರು ಈ ಚಿತ್ರವನ್ನು  ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಐಟಂ ಸಾಂಗ್ (Item Song) ಬಿಡುಗಡೆ ಕಾರ್ಯಕ್ರಮ ನಡೆಯಿತು. 1980-90ರ ಕಾಲಘಟ್ಟದಲ್ಲಿ ನಡೆಯುವ ಕಥೆ ಈ ಚಿತ್ರದಲ್ಲಿದ್ದು, ಅಂಕುಶ್ ಏಕಲವ್ಯ ಹಾಗೂ ಪಲ್ಲವಿಗೌಡ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ, ವಿಶೇಷ ಪಾತ್ರದಲ್ಲಿ ವೈಜನಾಥ್ ಬಿರಾದಾರ್ ಕಾಣಿಸಿಕೊಂಡಿದ್ದಾರೆ. ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ  ಸೇರಿದಂತೆ 5 ಭಾಷೆಯಲ್ಲಿ ಈ ಚಿತ್ರ ತಯಾರಾಗಿದ್ದು, ಈಗ ಕನ್ನಡ ವರ್ಷನ್ ಗೀತೆ ಮಾತ್ರ ಬಿಡುಗಡೆಯಾಗಿದೆ.

    ಚಿತ್ರದ ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದಲ್ಲಿ 5 ಹಾಡುಗಳಿದ್ದು ಎಂ.ಎಸ್.ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಆ ಪೈಕಿ ಒಂದು ಹಾಡು ಇದೀಗ ರಿಲೀಸ್ ಆಗಿದೆ. ವೇದಿಕೆಯಲ್ಲಿ ಹಿರಿಯನಟ ಬಿರಾದಾರ್ ಮಾತನಾಡುತ್ತ ಸಿನಿಮಾ ಚನ್ನಾಗಿ ಬಂದಿದೆ. ಕಥೆಗೆ ತಕ್ಕಂತೆ ಪಾತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.. ನಿರ್ದೇಶಕರು ತುಂಬಾ ಶ್ರಮ ಹಾಕಿದ್ದಾರೆ. ಸಿನಿಮಾ  ಜನರಿಗೆ ಖಂಡಿತ  ಇಷ್ಟವಾಗುತ್ತದೆ ಎಂದು ಹೇಳಿದರು. ಮತ್ತೊಬ್ಬ‌ನಟ ಅರವಿಂದ್ ರಾವ್ ಮಾತನಾಡಿ ಅಂಕುಶ್ ಅದ್ಭುತವಾಗಿ ಡಾನ್ಸ್ ಮಾಡಿದ್ದಾರೆ. ಇಡೀ ಸಿನಿಮಾ ರೆಟ್ರೋ ಸ್ಟೈಲ್ ನಲ್ಲಿಯೇ ಇದ್ದು ಸಾಂಗ್ ಕೂಡ ಹಾಗೆ ಬಂದಿರುವುದು ವಿಶೇಷ‌  ಎಂದರು.

    ನಿರ್ಮಾಪಕ ಕೆಎಂಪಿ ಶ್ರೀನಿವಾಸ್  ಮಾತನಾಡುತ್ತ ನನ್ನ‌ ಮೊದಲ ಚಿತ್ರ ಕಲಿವೀರ. ಬ್ರಹ್ಮರಾಕ್ಷಸ ಎರಡನೇ ಚಿತ್ರ. ಎಲ್ಲರ ಸಹಕಾರದಿಂದ ಸಿನಿಮಾ ಚನ್ನಾಗಿ ಬಂದಿದೆ. ಯಾವುದೇ ತಪ್ಪುಗಳಿಲ್ಲದಂತೆ ಡೈರೆಕ್ಟರ್ ಸಿನಿಮಾ ಮಾಡಿದ್ದಾರೆ.‌ ಹೀರೋ ಸ್ಟಂಟ್ ಗಳನ್ನು ರಿಯಲ್ಲಾಗಿ ಮಾಡಿದ್ದರಿಂದ ಸಾಕಷ್ಟು ಪೆಟ್ಟು ತಿಂದಿದ್ದಾರೆ. ನಿರ್ದೇಶಕ, ನಾಯಕರ ಕಾಂಟ್ರಿಬ್ಯೂಷನ್ ನಿಂದ ಸಿನಿಮಾ ಕ್ವಾಲಿಟಿ ಇನ್ನೂ ಉತ್ತಮವಾಗಿದೆ. ಈ ಸಿನಿಮಾ  ನಮಗೆ ತೃಪ್ತಿ ಕೊಟ್ಟಿದೆ. ಬ್ರಹ್ಮ ಸೃಷ್ಟಿ ಮಾಡಿದ ಮನುಷ್ಯ ರಾಕ್ಷಸ ಹೇಗೆ ಆಗುತ್ತಾನೆ ಎಂಬುದನ್ನು ಚಿತ್ರದಲ್ಲಿ  ತೋರಿಸಿದ್ದೇವೆ ಎಂದರು.

        

    ನಿರ್ದೇಶಕ ಶಂಕರ್ ಮಾತನಾಡಿ ಒಬ್ಬ ನಿರ್ದೇಶಕ ಎಷ್ಟೇ ಕನಸು ಕಾಣಬಹುದು. ಆದರೆ ಅದಕ್ಕೆ ನಿರ್ಮಾಪಕರು ನೀಡುವ ಸಹಕಾರ ತುಂಬಾ ಮುಖ್ಯವಾಗಿರುತ್ತೆ. ಇದು ನನ್ನ  ಮೊದಲ‌ ಚಿತ್ರ. ಲಾಕ್ ಡೌನ್ ಸಂದರ್ಭದಲ್ಲಿ ಈ ಕಥೆ ಹೊಳೆಯಿತು. ಉಡುಪಿ, ಕುಂದಾಪುರ ಹಾಗೂ ಸೆಟ್ ಗಳಲ್ಲಿ ಹೆಚ್ಚಿನ ಭಾಗದ ಶೂಟಿಂಗ್ ಮಾಡಿದ್ದೇವೆ. ಚಿತ್ರಕ್ಕೆ 80% ಮಳೆ ಹಾಗೂ ರಾತ್ರಿ ವೇಳೆಯಲ್ಲೇ ಶೂಟಿಂಗ್ ಮಾಡಿದ್ದೇವೆ.  ಒಂದು ಸೋಶಿಯಲ್ ಮೆಸೇಜ್ ಚಿತ್ರದಲ್ಲಿದ್ದು, ತಪ್ಪು ಮಾಡದೆ ಇಬ್ಬರು ಜೈಲಿಗೆ ಹೋಗಿ ಶಿಕ್ಷೆ ಅನುಭವಿಸುತ್ತಾರೆ. ಅದೇ ಸೇಡಿನಿಂದ ಹೇಗೆ ದ್ವೇಷ ತೀರಿಸಿಕೊಳ್ಳಲು ಹೊರಡುತ್ತಾರೆ ಎನ್ನುವುದೇ ಈ ಚಿತ್ರ. ಸೆನ್ಸಾರ್ ನಿಂದ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಇಡೀ ಫ್ಯಾಮಿಲಿ ಕುಳಿತು ನೋಡುವಂತ ಸಿನಿಮಾವಿದು ಎಂದರು.

     

    ಸಂಗೀತ ನಿರ್ದೇಶಕ ಎಂ.ಎಸ್. ತ್ಯಾಗರಾಜ್ ಮಾತನಾಡಿ ಇದು ಅದ್ಭುತವಾದ ಸಿನಿಮಾ, ಕ್ರಿಯೆಟೀವ್ ಆಗಿ ಕೆಲಸ ಮಾಡಲು ಅವಕಾಶ ಸಿಕ್ಕಿತು. ಈ ಗೀತೆಯನ್ನು ಮಮತಾ ಶರ್ಮಾ ಸಂತೋಷ ಹಾಡಿದ್ದು, ನಾನೇ ಸಾಹಿತ್ಯ ಬರೆದಿದ್ದೇನೆ ಎಂದರು. ನಾಯಕ ಅಂಕುಶ್ ಏಕಲವ್ಯ ಮಾತನಾಡಿ  ಈ ಹಿಂದೆ ಕಲಿವೀರ ಚಿತ್ರದಲ್ಲಿ  ಅಭಿನಯಿಸಿದ್ದೆ.ಇದು ಎರಡನೇ ಪ್ರಯತ್ನ. ನನ್ನ  ಕಲಿವೀರ ಸಿನಿಮಾ ರಿಲೀಸ್ ಹಿಂದಿನ‌ ದಿನ  ಬೆಂಗಳೂರಿನಿಂದ ಹುಬ್ಬಳ್ಳಿವರೆಗೆ ನಾನೇ ಪೋಸ್ಟರ್ ಅಂಟಿಸಿಕೊಂಡು ಹೋಗಿದ್ದೆ ಎಂದು ಹೇಳಿದರು.  ನಿರ್ಮಾಪಕರ ಸಂಘದ ಆಧ್ಯಕ್ಷ ಉಮೇಶ್ ಬಣಕಾರ್, ಹಾಗೂ ನಾಗೇಂದ್ರ ಅರಸ್ ಮಾತನಾಡಿ ಚಿತ್ರಕ್ಕೆ ಶುಭ ಹಾರೈಸಿದರು. ಅನಿರುದ್ದ ಅವರ ಕ್ಯಾಮೆರಾವರ್ಕ್ ಈ ಚಿತ್ರದಲ್ಲಿದ್ದು, ಎಂ.ಎಸ್.ತ್ಯಾಗರಾಜ್ ಸಂಗೀತ, ಹಿನ್ನೆಲೆ ಸಂಗೀತ ಮಾಡಿದ್ದಾರೆ.  ಅರವಿಂದ್ ರಾವ್, ಸ್ವಪ್ನ, ಪುರುಷೋತ್ತಮ್, ಬಲ ರಾಜವಾಡಿ. ರಥಾವರ ದೇವು, ಭುವನ್‌ಗೌಡ, ಚಿಕ್ಕಹೆಜ್ಜಾಜಿ ಮಜದೇವ್, ಶಿವಾನಂದಪ್ಪ ಹಾವನೂರು ಸೇರಿದಂತೆ ಹಲವಾರು ಕಲಾವಿದರು  ಈ  ಚಿತ್ರದಲ್ಲಿ ನಟಿಸಿದ್ದಾರೆ,

  • ‘ಮೆಜೆಸ್ಟಿಕ್ 2’ ಚಿತ್ರಕ್ಕಾಗಿ ಐಟಂ ಸಾಂಗ್ ಶೂಟಿಂಗ್

    ‘ಮೆಜೆಸ್ಟಿಕ್ 2’ ಚಿತ್ರಕ್ಕಾಗಿ ಐಟಂ ಸಾಂಗ್ ಶೂಟಿಂಗ್

    ‘ಮೆಜೆಸ್ಟಿಕ್’ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ದೊಡ್ಡ ಹೆಸರು ತಂದುಕೊಟ್ಟ ಚಿತ್ರ. ದಶಕಗಳ‌ ನಂತರ  ಹೊಸ ಕಾನ್ಸೆಪ್ಟ್ ಇಟ್ಟುಕೊಂಡು  ‘ಮೆಜೆಸ್ಟಿಕ್-2’ ಹೆಸರಿನಡಿ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಆಗಿನ ಮೆಜೆಸ್ಟಿಕ್ ನಲ್ಲಿ ತೊಂಭತ್ತರ ದಶಕದಲ್ಲಿ ರೌಡಿಸಂ ಹೇಗೆ ನಡೆಯುತ್ತಿತ್ತು ಎಂದು ಹೇಳಿದ್ದರೆ, ಈಗಿನ ಮೆಜೆಸ್ಟಿಕ್-2, ಮೂಲಕ ಅಲ್ಲಿ ನಡೆಯುವ ಕರಾಳ ದಂಧೆಗಳು, ಅಕ್ರಮ ಚಟುವಟಿಕೆಗಳು, ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು ನಿರ್ದೇಶಕ ರಾಮು ಹೇಳ ಹೊರಟಿದ್ದಾರೆ. ಈ ಚಿತ್ರದ ಮೂಲಕ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್  ಅವರ ಪುತ್ರ ಭರತ್ ನಾಯಕನಾಗಿ ಪರಿಚಯವಾಗುತ್ತಿದ್ದಾರೆ.

    ಅಮ್ಮಾ ಎಂಟರ್‌ ಪ್ರೈಸಸ್ ಮೂಲಕ  ಚಿತ್ರದುರ್ಗದ ಹೆಚ್.ಹನುಮಂತಪ್ಪ ಅವರು ನಿರ್ಮಿಸುತ್ತಿರುವ ಈ ಚಿತ್ರದ ಐಟಂ ಸಾಂಗ್ ವೊಂದರ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಹಾಕಲಾಗಿರುವ ಕಲರ್ಫುಲ್ ಸೆಟ್ ನಲ್ಲಿ ನಡೆದಿದೆ.  ಚಿತ್ರದಲ್ಲಿ ನಾಯಕ ದರ್ಶನ್ ಅವರ ಫ್ಯಾನ್  ಆಗಿ ಕಾಣಿಸಿಕೊಂಡಿದ್ದು, ಅವರ ಮೇಲಿನ ಅಭಿಮಾನದಿಂದ  ಮಾಡುತ್ತಿರುವ, ಈಗಿನ ಟ್ರೆಂಡ್ ಗೆ ತಕ್ಕಂತೆ ಲಿರಿಕ್ ಹೆಣೆದಿರುವ ಹಾಡು ಇದಾಗಿದೆ, ‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ’ ಎಂದು ನಿರ್ದೇಶಕ ರಾಮು ಅವರು  ಬರೆದ ಸಾಹಿತ್ಯಕ್ಕೆ ಗಾಯಕಿ ಮೇಘನಾ ಹಳ್ಳಿಹಾಳ ದನಿಯಾಗಿದ್ದಾರೆ. ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಈ ಹಾಡಿನ ಚಿತ್ರೀಕರಣದಲ್ಲಿ ಐಟಂ ಡಾನ್ಸರ್ ಹಾಗೂ ನಾಯಕನ ಜೊತೆಗೆ ಸಹ ಕಲಾವಿದರುಗಳೂ ಸಹ  ಭಾಗವಹಿಸಿದ್ದರು. ಸಂತೋಷ್ ಈ ಹಾಡಿಗೆ  ಕೊರಿಯಾಗ್ರಾಫ್ ಮಾಡಿದ್ದಾರೆ.

     

    ಈಗಾಗಲೇ ರಾಮೋಹಳ್ಳಿ, ಹೆಚ್.ಎಂ.ಟಿ., ಮಾಕಳಿ ಬಳಿಯ ಸಕ್ರೆ ಅಡ್ಡ, ಆರ್.ಟಿ.ನಗರದ ನಿಸರ್ಗ ಹೌಸ್ ಸೇರಿದಂತೆ ಬೆಂಗಳೂರು ಸುತ್ತಮುತ್ತ ಶೇ.50ರಷ್ಟು ಭಾಗದ ಚಿತ್ರೀಕರಣ ಮುಗಿದಿದೆ. ಜೊತೆಗೆ ಚಿತ್ರದುರ್ಗದ ಮುರುಘಾ ಮಠದಲ್ಲಿ ಡ್ಯುಯೆಟ್ ಸಾಂಗ್ ವೊಂದನ್ನು ಸಹ ಶೂಟ್ ಮಾಡಲಾಗಿದೆ. ರೌಡಿಸಂ  ಹಾಗೂ ಆಕ್ಷನ್ ಬೇಸ್ ಕಥಾಹಂದರ ಹೊಂದಿರುವ “ಮೆಜೆಸ್ಟಿಕ್ 2” ಚಿತ್ರದಲ್ಲಿ ನಾಯಕಿಯಾಗಿ ನಟಿ ಸಂಹಿತಾ ವಿನ್ಯಾ ಅವರು ನಟಿಸಿದ್ದಾರೆ. ಹಿರಿಯನಟಿ ಶೃತಿ ಅವರು ತಾಯಿಯ ಪಾತ್ರದಲ್ಲಿ  ಕಾಣಿಸಿಕೊಳ್ಳುತ್ತಿದ್ದಾರೆ.   ಇನ್ನು  ಈ ಚಿತ್ರಕ್ಕೆ  ವಿನು ಮನಸು  ಅವರ ಸಂಗೀತ ನಿರ್ದೇಶನವಿದ್ದು,  ವೀನಸ್ ಮೂರ್ತಿ ಅವರು  ಛಾಯಾಗ್ರಹಣ ಕಾರ್ಯ ನಿರ್ವಹಿಸುತ್ತಿದ್ದಾರೆ.

  • ‘ಕಾದಾಡಿ’ದಲ್ಲಿ ಐಟಂ ಹಾಡಿಗೆ ಕುಣಿದ  ಆದಿತ್ಯ ಶಶಿಕುಮಾರ್

    ‘ಕಾದಾಡಿ’ದಲ್ಲಿ ಐಟಂ ಹಾಡಿಗೆ ಕುಣಿದ ಆದಿತ್ಯ ಶಶಿಕುಮಾರ್

    ಸುಪ್ರೀಂ ಹೀರೋ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ಈಗ ಆದಿತ್ಯ ಶಶಿಕುಮಾರ್ ಅಂತ ಹೆಸರು ಬದಲಾಯಿಸಿಕೊಂಡಿದ್ದು, ’ಕಾದಾಡಿ’ ಎನ್ನುವ ಚಿತ್ರದಲ್ಲಿ ನಟಿಸಿದ್ದಾರೆ. ಕನ್ನಡ, ತೆಲುಗು,ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಂಡಿರುವ ಸಿನಿಮಾವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಪ್ರಚಾರದ ಸಲುವಾಗಿ ಮೊನ್ನೆಯಷ್ಟೇ ಮೂರನೇ ಹಾಡು ಐಟಂ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಲಾಗಿದೆ.

    ಕೃಷ್ಣ ಸಾಹಿತ್ಯದ ’ನೂರು ಪುಟದ ಜೀವನ, ಒಂದು ಏಳೆಯ ಕಾಗದ. ಬರೆದುಕೋ ನಂದೇ ಜೀವನ, ತಪ್ಪು ತಿಳಿದುಕೋ, ತಿಳಿದ ಮೇಲೆ ಮರೆತು ತಪ್ಪು ಮಾಡಿದರೆ ಜನ್ಮ ಪಾವನ. ದಂ ಕಿರಿಕಿರಿ, ಗುಂಡಲ್ಲೂ ಕಿರಿಕಿರಿ’ ಹಾಡಿಗೆ ಅನನ್ಯ ಭಟ್ ಧ್ವನಿಯಾಗಿದ್ದು, ನಾಯಕನೊಂದಿಗೆ ಬಾಂಬೆ ನಟಿ  ಸೋನಿ ಚೇರಿಸ್ಟ ಹೆಜ್ಜೆ ಹಾಕಿದ್ದಾರೆ.

     

    ತ್ಯಾಗಮಯವಾಗುತ್ತಿರುವ ಜನರ ಜೀವನವು ದಿನದ ಅಂತ್ಯದಲ್ಲಿ ಪ್ರತಿಯೊಬ್ಬರು ತ್ಯಾಗಮಯಿರಾಗುತ್ತಾರೆ. ನಾವೆಲ್ಲರೂ ಕಾದಾಡುತ್ತಾ ಒಂದು ದಿನ ಸಾಯುತ್ತೇವೆ. ಆದರೆ ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡಬೇಕು. ಮಕ್ಕಳಿಗೆ ಏನಾದರೂ ಆಗಬೇಕು. ನಾವು ದಿನದಿಂದ ದಿನಕ್ಕೆ ಹೋರಾಟ ನಡೆಸುತ್ತಿದ್ದೆವೆ. ಇಂತಹ ಅಂಶಗಳನ್ನು ಥ್ರಿಲ್ಲರ್ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ.

    ಲಾವಣ್ಯ ಸಾಹುಕಾರ, ಚಾಂದಿನಿತಮಿಳರಸನ್ ನಾಯಕಿಯರು. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್‌ಮನೋಹರ್, ಶ್ರವಣ್‌ರಾಘವೇಂದ್ರ ಮುಂತಾದವರು ನಟಿಸಿದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಡಿ.ಯೋಗಿಪ್ರಸಾದ್, ಕಲೆ ಅರ್ಜುನ್‌ಸೂರಿಸೆಟ್ಟಿ, ಸಂಕಲನ ಪ್ರಕಾಶ್‌ತೋಟ, ನೃತ್ಯ ರಾಜ್‌ಪಿಡಿ-ರಾಜ್‌ಕೃಷ್ಣ, ಸಾಹಸ ಬಿ.ಎಲ್.ಸತೀಶ್-ವಿನ್‌ಚೇನ್‌ಆಂಜಿ-ಬಿಂಬಸಾರ-ರಾಮಕೃಷ್ಣ-ರಾಮಸುಂಕರ ಅವರದಾಗಿದೆ. ಗೋವಾ, ಚಿಕ್ಕಮಗಳೂರು, ಹೈದರಬಾದ್, ಚೆನ್ನೈ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಅಂದಹಾಗೆ ಸಿನಿಮಾವು ಜುಲೈ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

  • ‘ಪುಷ್ಪ 2’ ಚಿತ್ರದ ಐಟಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ದಿಶಾ ಪಠಾನಿ

    ‘ಪುಷ್ಪ 2’ ಚಿತ್ರದ ಐಟಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ದಿಶಾ ಪಠಾನಿ

    ಪುಷ್ಪ ಸಿನಿಮಾದ ‘ವೂಂ ಅಂಟಾವ ಮಾವ..’ ಹಾಡಿ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು. ಈ ಹಾಡೇ ಪಷ್ಪ ಸಿನಿಮಾಗೆ ಜನರನ್ನೂ ಕರೆತಂದಿದ್ದು. ಸೋಷಿಯಲ್ ಮೀಡಿಯಾದಲ್ಲಂತೂ ಕೋಟ್ಯಂತರ ಜನರು ರೀಲ್ಸ್ ಮಾಡಿದ್ದರು. ಈ ಹಾಡಿಗೆ ಸಮಂತಾ (Samantha) ಸಖತ್ತಾಗಿಯೇ ಸೊಂಟ ಬಳುಕಿಸಿದ್ದರು. ಈ ಯಶಸ್ಸನ್ನು ಮತ್ತೊಂದು ಬಾರಿ ಬಳಸಿಕೊಳ್ಳಲು ನಿರ್ದೇಶಕರು ಪ್ಲ್ಯಾನ್ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಪುಷ್ಪ 2  (Pushpa 2, ) ಸಿನಿಮಾದಲ್ಲೂ ಐಟಂ ಸಾಂಗ್ (Item Song) ವೊಂದಿದ್ದು, ಅದಕ್ಕೆ ಸಮಂತಾ ಅವರೇ ಡ್ಯಾನ್ಸ್ ಮಾಡಲಿದ್ದಾರೆ ಎಂದು ಹಿಂದೆ ಸುದ್ದಿ ಆಗಿತ್ತು. ಆದರೆ, ಸಮಂತಾ ಬದಲು ಮತ್ತೋರ್ವ ನಟಿಯನ್ನು ಚಿತ್ರತಂಡ ಆಯ್ಕೆ ಮಾಡಿಕೊಂಡಿದೆಯಂತೆ.

    ಸಮಂತಾ ಅವರೇ ಡಾನ್ಸ್ ಮಾಡಲಿದ್ದಾರೆ ಎನ್ನುವ ಸುದ್ದಿ ಭಾರೀ ಸದ್ದು ಮಾಡಿದ್ದರೂ, ಇದೀಗ ಬಾಲಿವುಡ್ ನಟಿ ದಿಶಾ ಪಠಾನಿ (Disha Pathani) ಹೆಸರು ಕೇಳಿ ಬಂದಿದೆ. ಸಮಂತಾ ಅವರ ಅನಾರೋಗ್ಯದ ಕಾರಣದಿಂದಾಗಿ ಈ ನಿರ್ಧಾರ ತಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅಧಿಕೃತವಾಗಿ ಚಿತ್ರತಂಡ ಈ ಕುರಿತು ಹೇಳಿಕೊಳ್ಳಬೇಕಿದೆ.

    ನಿರ್ದೇಶಕ ಸುಕುಮಾರ್- ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಮತ್ತೊಮ್ಮೆ ಬಾಕ್ಸಾಫೀಸ್ ಬ್ಯಾಂಗ್ ಮಾಡೋದಿಕ್ಕೆ ಭರ್ಜರಿಯಾಗಿ ಸಜ್ಜಾಗ್ತಿದ್ದಾರೆ. ಪುಷ್ಪ ಮೂಲಕ ದಕ್ಷಿಣ ಧ್ರುವದಿಂದ ಉತ್ತರ ಧ್ರುವದವರೆಗೂ ಧಮಾಕ ಎಬ್ಬಿಸಿದ್ದ ಈ ಜೋಡಿ ಸೀಕ್ವೆಲ್ ಮೂಲಕ ಬೆಳ್ಳಿತೆರೆಯಲ್ಲಿ ಕಮಾಲ್ ಮಾಡಲು ಹೊರಟಿದೆ. ಪುಷ್ಪ 2 (Pushpa 2) ಸಣ್ಣ ಟೀಸರ್ ಹಂಗಾಮ ಕ್ರಿಯೇಟ್ ಮಾಡಿದೆ. ಕಾಣೆಯಾಗಿದ್ದ ಪುಷ್ಪ ಹೊಸ ಅವತಾರದಲ್ಲಿ ಪ್ರತ್ಯಕ್ಷನಾಗುವ ಮೂಲಕ ಇನ್ಮುಂದೆ ನನ್ನಂದೇ ರೂಲ್ ಎಂಬ ಸಂದೇಶ ರವಾನಿಸಿದ್ದಾನೆ. ಪುಷ್ಪ ಸೀಕ್ವೆಲ್ ಎಂಟ್ರಿ ಯಾವಾಗ ಎನ್ನುತ್ತಿದ್ದ ಫ್ಯಾನ್ಸ್‌ಗೆ ಚಿತ್ರತಂಡ ಸರ್ಪ್ರೈಸ್ ನೀಡಿದೆ.

    ‘ಪುಷ್ಪ 2’ ದಿ ರೂಲ್ಸ್ ಶೂಟಿಂಗ್ ಭರದಿಂದ ಸಾಗ್ತಿದೆ. ಈ ನಡುವೆಯೇ ಸೀಕ್ವೆಲ್ ರೈಟ್ಸ್ ಭಾರೀ ಮೊತ್ತಕ್ಕೆ ಸೇಲ್ ಆಗಿರುವ ಖಬರ್ ಹೊರಬಿದ್ದಿದೆ. ಹಿಂದಿ ಬೆಲ್ಟ್ ನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಹಕ್ಕು ಮಾರಾಟವಾಗಿದೆಯಂತೆ. ಪುಷ್ಪ ಮೊದಲ ಭಾಗ ಬಾಲಿವುಡ್ ಅಂಗಳದಲ್ಲಿ ಬಡಾ ಹಿಟ್ ಕಂಡಿತ್ತು. ಅಲ್ಲು ಆಕ್ಟಿಂಗ್ , ಸುಕುಮಾರ್ ಟೇಕಿಂಗ್ ಗೆ ಹಿಂದಿ ಮಂದಿ ಫಿದಾ ಆಗಿದ್ದರು.

     

    ಬಾಲಿವುಡ್ (Bollywood) ಚಿತ್ರಗಳಿಗೆ ಟಕ್ಕರ್ ಕೊಟ್ಟಿದ್ದ ಪುಷ್ಪ 2ಗಾಗಿ ಬಂಗಾರದ ಬೇಡಿಕೆ ಬಂದಿದೆ. 200 ಕೋಟಿ ಮೊತ್ತಕ್ಕೆ ಹಿಂದಿ ರೈಟ್ಸ್ ಮಾರಾಟವಾಗಿದ್ದು, 75 ಕೋಟಿಗೆ ಆಡಿಯೋ ರೈಟ್ಸ್ ಸೇಲ್ ಆಗಿರುವ ಬಗ್ಗೆ ಸಿನಿ ಜಜಾರ್ ನಲ್ಲಿ ಹೊಸ ಬಜ್ ಓಡಾಡ್ತಿದೆ. ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದಲ್ಲಿ ಅದ್ಧೂರಿಯಾಗಿ ತಯಾರಾಗ್ತಿರುವ ಪುಷ್ಪ-2 ಸಿನಿಮಾಗೆ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ.

  • ‘ಪುಷ್ಪ 2’ ಸಿನಿಮಾ ಐಟಂ ಹಾಡಿಗೆ ಸಮಂತಾ ಡಾನ್ಸ್

    ‘ಪುಷ್ಪ 2’ ಸಿನಿಮಾ ಐಟಂ ಹಾಡಿಗೆ ಸಮಂತಾ ಡಾನ್ಸ್

    ಪುಷ್ಪ ಸಿನಿಮಾದ ‘ವೂಂ ಅಂಟಾವ ಮಾವ..’ ಹಾಡಿ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು. ಈ ಹಾಡೇ ಪಷ್ಪ ಸಿನಿಮಾಗೆ ಜನರನ್ನೂ ಕರೆತಂದಿದ್ದು. ಸೋಷಿಯಲ್ ಮೀಡಿಯಾದಲ್ಲಂತೂ ಕೋಟ್ಯಂತರ ಜನರು ರೀಲ್ಸ್ ಮಾಡಿದ್ದರು. ಈ ಹಾಡಿಗೆ ಸಮಂತಾ (Samantha) ಸಖತ್ತಾಗಿಯೇ ಸೊಂಟ ಬಳುಕಿಸಿದ್ದರು. ಈ ಯಶಸ್ಸನ್ನು ಮತ್ತೊಂದು ಬಾರಿ ಬಳಸಿಕೊಳ್ಳಲು ನಿರ್ದೇಶಕರು ಪ್ಲ್ಯಾನ್ ಮಾಡಿದ್ದಾರೆ. ಪುಷ್ಪ 2 ಸಿನಿಮಾದಲ್ಲೂ ಐಟಂ ಸಾಂಗ್ (Item Song) ವೊಂದಿದ್ದು, ಅದಕ್ಕೆ ಸಮಂತಾ ಅವರೇ ಡ್ಯಾನ್ಸ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಈಗಾಗಲೇ ಡಾನ್ಸ್ ಮಾಸ್ಟರ್ ಮತ್ತು ನಿರ್ದೇಶಕರು ಸಮಂತಾ ಜೊತೆ ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಸಮಂತಾ ಕೂಡ ಆ ಹಾಡಿನಲ್ಲಿ ಭಾಗಿಯಾಗಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯದಲ್ಲೇ ಶೂಟಿಂಗ್ ಕೂಡ ಶುರು ಮಾಡಲಿದ್ದಾರಂತೆ ಸಮಂತ.

    ನಿರ್ದೇಶಕ ಸುಕುಮಾರ್- ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಮತ್ತೊಮ್ಮೆ ಬಾಕ್ಸಾಫೀಸ್ ಬ್ಯಾಂಗ್ ಮಾಡೋದಿಕ್ಕೆ ಭರ್ಜರಿಯಾಗಿ ಸಜ್ಜಾಗ್ತಿದ್ದಾರೆ. ಪುಷ್ಪ ಮೂಲಕ ದಕ್ಷಿಣ ಧ್ರುವದಿಂದ ಉತ್ತರ ಧ್ರುವದವರೆಗೂ ಧಮಾಕ ಎಬ್ಬಿಸಿದ್ದ ಈ ಜೋಡಿ ಸೀಕ್ವೆಲ್ ಮೂಲಕ ಬೆಳ್ಳಿತೆರೆಯಲ್ಲಿ ಕಮಾಲ್ ಮಾಡಲು ಹೊರಟಿದೆ. ಪುಷ್ಪ 2 (Pushpa 2) ಸಣ್ಣ ಟೀಸರ್ ಹಂಗಾಮ ಕ್ರಿಯೇಟ್ ಮಾಡಿದೆ. ಕಾಣೆಯಾಗಿದ್ದ ಪುಷ್ಪ ಹೊಸ ಅವತಾರದಲ್ಲಿ ಪ್ರತ್ಯಕ್ಷನಾಗುವ ಮೂಲಕ ಇನ್ಮುಂದೆ ನನ್ನಂದೇ ರೂಲ್ ಎಂಬ ಸಂದೇಶ ರವಾನಿಸಿದ್ದಾನೆ. ಪುಷ್ಪ ಸೀಕ್ವೆಲ್ ಎಂಟ್ರಿ ಯಾವಾಗ ಎನ್ನುತ್ತಿದ್ದ ಫ್ಯಾನ್ಸ್‌ಗೆ ಚಿತ್ರತಂಡ ಸರ್ಪ್ರೈಸ್ ನೀಡಿದೆ.

    ‘ಪುಷ್ಪ 2’ ದಿ ರೂಲ್ಸ್ ಶೂಟಿಂಗ್ ಭರದಿಂದ ಸಾಗ್ತಿದೆ. ಈ ನಡುವೆಯೇ ಸೀಕ್ವೆಲ್ ರೈಟ್ಸ್ ಭಾರೀ ಮೊತ್ತಕ್ಕೆ ಸೇಲ್ ಆಗಿರುವ ಖಬರ್ ಹೊರಬಿದ್ದಿದೆ. ಹಿಂದಿ ಬೆಲ್ಟ್ ನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಹಕ್ಕು ಮಾರಾಟವಾಗಿದೆಯಂತೆ. ಪುಷ್ಪ ಮೊದಲ ಭಾಗ ಬಾಲಿವುಡ್ ಅಂಗಳದಲ್ಲಿ ಬಡಾ ಹಿಟ್ ಕಂಡಿತ್ತು. ಅಲ್ಲು ಆಕ್ಟಿಂಗ್ , ಸುಕುಮಾರ್ ಟೇಕಿಂಗ್ ಗೆ ಹಿಂದಿ ಮಂದಿ ಫಿದಾ ಆಗಿದ್ದರು.

    ಬಾಲಿವುಡ್ (Bollywood) ಚಿತ್ರಗಳಿಗೆ ಟಕ್ಕರ್ ಕೊಟ್ಟಿದ್ದ ಪುಷ್ಪ 2ಗಾಗಿ ಬಂಗಾರದ ಬೇಡಿಕೆ ಬಂದಿದೆ. 200 ಕೋಟಿ ಮೊತ್ತಕ್ಕೆ ಹಿಂದಿ ರೈಟ್ಸ್ ಮಾರಾಟವಾಗಿದ್ದು, 75 ಕೋಟಿಗೆ ಆಡಿಯೋ ರೈಟ್ಸ್ ಸೇಲ್ ಆಗಿರುವ ಬಗ್ಗೆ ಸಿನಿ ಜಜಾರ್ ನಲ್ಲಿ ಹೊಸ ಬಜ್ ಓಡಾಡ್ತಿದೆ. ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದಲ್ಲಿ ಅದ್ಧೂರಿಯಾಗಿ ತಯಾರಾಗ್ತಿರುವ ಪುಷ್ಪ-2 ಸಿನಿಮಾಗೆ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ.

     

    ಪುಷ್ಪರಾಜ್‌ಗೆ ನಾಯಕಿ ರಶ್ಮಿಕಾ ಮಂದಣ್ಣ (Rashmika Mandanna) ಜೀವತುಂಬಿದ್ದಾರೆ. ಡಾಲಿ ಧನಂಜಯ್ (Daali Dhananjay), ಅನಸೂಯ ಭಾರದ್ವಾಜ್, ಫಹಾದ್ ಫಾಸಿಲ್ ಸೇರಿದಂತೆ ಹಲವು ನಟಿಸಿದ್ದಾರೆ.

  • ಪುಷ್ಪಾ 2 ಚಿತ್ರಕ್ಕೆ ರಶ್ಮಿಕಾ ನಾಯಕಿ, ಶ್ರೀಲೀಲಾ ಡಾನ್ಸರ್: ಏನಿದು ಹೊಸ ಸುದ್ದಿ?

    ಪುಷ್ಪಾ 2 ಚಿತ್ರಕ್ಕೆ ರಶ್ಮಿಕಾ ನಾಯಕಿ, ಶ್ರೀಲೀಲಾ ಡಾನ್ಸರ್: ಏನಿದು ಹೊಸ ಸುದ್ದಿ?

    ಪುಷ್ಪ ಸಿನಿಮಾ ಹಿಟ್ ಆಗಲು ‘ಹುಂ ಅಂಟವಾ ಮಾವ’ ಐಟಂ ಸಾಂಗ್ (Item Song) ಕೂಡ ಕಾರಣ ಎನ್ನುವುದನ್ನು ಅಲ್ಲಗಳೆಯುವಂತಿಲ್ಲ. ಸಮಂತಾ ಈ ಹಾಡಿಗೆ ಮೈಚಳಿ ಬಿಟ್ಟು ಕುಣಿದಿದ್ದರು. ಪಡ್ಡೆಗಳ ಹೃದಯದಲ್ಲಿ ಚಿಟ್ಟೆ ಹಾರಿಸಿದ್ದರು. ಈ ಹಾಡು ಹಿಟ್ ಆಗಿದ್ದರಿಂದ, ಚಿತ್ರದ ಗೆಲುವಿಗೂ ಅದು ಸಹಕಾರಿ ಆಯಿತು. ಪುಷ್ಪ 2ನಲ್ಲೂ ಅಂಥದ್ದೊಂದು ಫಾರ್ಮುಲಾವನ್ನು ಮತ್ತೆ ವರ್ಕ್ ಮಾಡುತ್ತಿದ್ದಾರೆ ನಿರ್ದೇಶಕರು. ಪುಷ್ಪ 2ನಲ್ಲೂ ಒಂದು ಐಟಂ ಸಾಂಗ್ ಇರಲಿದ್ದು, ಅದಕ್ಕೆ ಬಾಲಿವುಡ್ ನಟಿ ಊರ್ವಶಿ ರೌಟೇಲಾ (Urvashi Rautela) ಹೆಜ್ಜೆ ಹಾಕಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಊವರ್ಶಿ ಬದಲು ಕನ್ನಡದ ನಟಿ ಶ್ರೀಲೀಲಾ (Sreeleela)  ಡಾನ್ಸ್ ಮಾಡಲಿದ್ದಾರೆ ಎಂದು ವರದಿಯಾಗಿದೆ.

    ಸದ್ಯ ತೆಲುಗು ಚಿತ್ರೋದ್ಯಮದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಶ್ರೀಲೀಲಾ ಸ್ಪರ್ಧೆಗೆ ಬಿದ್ದಿದ್ದಾರೆ. ರಶ್ಮಿಕಾಗೆ ಸಿಗಬೇಕಿದ್ದ ಹಲವು ಅವಕಾಶಗಳನ್ನು ಶ್ರೀಲೀಲಾ ಕಿತ್ತುಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಪುಷ್ಪಾ 2 ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿದ್ದರೆ, ಶ್ರೀಲೀಲಾ ಕೇವಲ ಐಟಂ ಹಾಡಿಗೆ ಸೊಂಟ ಬಳುಕಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರತಂಡದಿಂದ ಯಾವುದೇ ಮಾಹಿತಿ ಅಧಿಕೃತವಾಗಿ ಹೊರ ಬೀಳದೇ ಇದ್ದರೂ, ಸುದ್ದಿಯಂತೂ ಸಖತ್ ಸೇಲ್ ಆಗುತ್ತಿದೆ.

    ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 ಸಿನಿಮಾದ ಶೂಟಿಂಗ್ ಕುಂಟುತ್ತಾ ಸಾಗಿದೆ. ಸದ್ಯ ಚಿತ್ರದ ಕ್ಲೈಮ್ಯಾಕ್ಸ್ (Climax) ದೃಶ್ಯದ ಚಿತ್ರೀಕರಣವನ್ನು ಮಾಡಲು ನಿರ್ದೇಶಕ ಸುಕುಮಾರನ್ (Sukumaran) ಪ್ಲ್ಯಾನ್ ಮಾಡಿದ್ದು, ಅದೊಂದು ರೋಮಾಂಚನಕಾರಿ ನೀಡುವಂತಹ ಸನ್ನಿವೇಶವಾಗಿದೆ ಎಂದು ಹೇಳಲಾಗುತ್ತಿದೆ. ಈ ದೃಶ್ಯವನ್ನು ತಿರುಪತಿ ಜಿಲ್ಲೆಯ ಪೂರ್ವ ಘಟ್ಟದಲ್ಲಿರುವ ಸ್ವರ್ಣಮುಖಿ (Swarnamukhi) ನದಿಯ ತೀರದಲ್ಲಿ ಶೂಟ್ ಮಾಡಲು ಚಿತ್ರತಂಡ ನಿರ್ಧರಿಸಿದೆ.

    ಕ್ಲೈಮ್ಯಾಕ್ಸ್ ಸನ್ನಿವೇಶದಲ್ಲಿ ಅಲ್ಲು ಅರ್ಜುನ್ ಜೊತೆ ಫಾಸಿಲ್ ಕೂಡ ಭಾಗಿಯಾಗಲಿದ್ದಾರಂತೆ. ಈ ದೃಶ್ಯಕ್ಕೆ ಈಗಿನಿಂದಲೇ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ರಕ್ತ ಚಂದನವನ್ನು ಕಳ್ಳ ಮಾರ್ಗದಲ್ಲಿ ಸಾಗಿಸುವ ಪುಷ್ಪರಾಜನ ವಿರುದ್ಧ ಭನ್ವಿರ್ ಸಿಂಗ್ ಮಾಡುವ ದಾಳಿಯೇ ಕ್ಲೈಮ್ಯಾಕ್ಸ್ ದೃಶ್ಯ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ದುಲ್ಕರ್ ಸಲ್ಮಾನ್ ಚಿತ್ರಕ್ಕೆ ‘ಲಕ್ಕಿ ಬಾಸ್ಕರ್’ ಟೈಟಲ್ ಫಿಕ್ಸ್

    ಈ ನಡುವೆ ‘ಪುಷ್ಪ 2’ (Pushpa 2) ಸಿನಿಮಾದ ಆಡಿಯೋ (Audio) ಹಕ್ಕು (Right) ಭರ್ಜರಿ ಮೊತ್ತಕ್ಕೆ ಸೇಲ್ ಆಗಿದೆ. ಈವರೆಗೂ ದಾಖಲಾಗಿದ್ದ ಎಲ್ಲ ಮೊತ್ತವನ್ನೂ ಅದು ಹಿಂದಿಕ್ಕಿದ್ದು ಟಿ ಸೀರಿಸ್ ಕಂಪೆನಿಯು 65 ಕೋಟಿ ರೂಪಾಯಿ ಹಣ ನೀಡಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ ಎಂದು ವರದಿಯಾಗಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು ಸೇರಿದಂತೆ ರಿಲೀಸ್ ಆಗುವ ಅಷ್ಟು ಭಾಷೆಗಳಿಗೆ ಈ ಹಕ್ಕು ಅನ್ವಯಿಸಲಿದೆ.

     

    ಈ ಹಿಂದೆ ರಿಲೀಸ್ ಆಗಿರುವ ಬಾಹುಬಲಿ ಚಿತ್ರದ ಆಡಿಯೋ ಹಕ್ಕು ಹತ್ತು ಕೋಟಿ ಸೇಲ್ ಆಗಿತ್ತು. ಆರ್.ಆರ್.ಆರ್ ಆಡಿಯೋ ಹಕ್ಕು 25 ಕೋಟಿಗೆ ಬಿಕರಿ ಆಗಿತ್ತು. ಸಾಹೋ ಸಿನಿಮಾದ ಆಡಿಯೋ ಹಕ್ಕು ಕೂಡ 22 ಕೋಟಿಗೆ ಸೇಲ್ ಆಗಿತ್ತು. ಈ ಎಲ್ಲ ದಾಖಲೆಗಳನ್ನೂ ಪುಷ್ಪ 2 ಸಿನಿಮಾ ಮುರಿದಿದೆ. ಅಲ್ಲದೇ, ಓಟಿಟಿಗೂ ಭಾರೀ ಮೊತ್ತಕ್ಕೆ ಮಾತುಕತೆ ನಡೆಯುತ್ತಿದೆ ಎಂದು ವರದಿ ಆಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಂಗಲ್ ಸೇವಂತಿ ಐಟಂ ಸಾಂಗ್ ರಿಲೀಸ್

    ಸಿಂಗಲ್ ಸೇವಂತಿ ಐಟಂ ಸಾಂಗ್ ರಿಲೀಸ್

    ಕೆ.ನರೇಂದ್ರ ಬಾಬು (K. Narendra Babu) ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ರಾಘವೇಂದ್ರ ರಾಜ್ ಕುಮಾರ್, ಶ್ರುತಿ (Shruti) ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ‘13’  ಚಿತ್ರವೀಗ ಬಿಡುಗಡೆಯ ಹಂತ  ತಲುಪಿದೆ. ಓ ಗುಲಾಬಿ, ಪಲ್ಲಕ್ಕಿಯಂಥ ಪ್ರೇಮ ಕಥೆಗಳನ್ನೇ ಮಾಡಿಕೊಂಡು ಬಂದಿದ್ದ ನರೇಂದ್ರ ಬಾಬು ಅವರು 13 ಚಿತ್ರದಲ್ಲಿ ಭಾವೈಕ್ಯತೆಯ ಸಾಮಾಜಿಕ ಸಂದೇಶವಿರುವ  ಕಥೆಯೊಂದನ್ನು ನಿರೂಪಣೆ  ಮಾಡಿದ್ದಾರೆ.  ಮನರಂಜನೆಯ ಜೊತೆ ಸಸ್ಪೆನ್ಸ್, ಥ್ರಿಲ್ಲರ್ ಕಂಟೆಂಟ್ ಕೂಡ  ಸಿನಿಮಾದಲ್ಲಿದೆ.

    ಈ ಚಿತ್ರದ ‘ಸಿಂಗಲ್ ಸೇವಂತಿ’ ಎಂಬ ಐಟಂ ಸಾಂಗ್ (Item Song) ಬಿಡುಗಡೆ ಕಾರ್ಯಕ್ರಮ ನಡೆಯಿತು. ಲಕ್ಷ್ಮಿ ದಿನೇಶ್ ಸಾಹಿತ್ಯವಿರುವ ಈ ಹಾಡಿಗೆ ಇಂದೂ ನಾಗರಾಜ್ ದನಿಯಾಗಿದ್ದಾರೆ. ಫಿಲಂ ಚೇಂಬರ್ ಅಧ್ಯಕ್ಷ ಭಾ.ಮಾ ಹರೀಶ್, ವಿನಯ್ ರಾಜಕುಮಾರ್, ಮುಖ್ಯ ಅತಿಥಿಯಾಗಿ ಆಗಮಿಸಿ ತಂಡಕ್ಕೆ ಶುಭ ಕೋರಿದರು. ಇದನ್ನೂ ಓದಿ:‘ರಂಗಬಲಿ’ ಸಕ್ಸಸ್ ಮೀಟ್‌ನಿಂದ ನಾಗ ಶೌರ್ಯ ವಾಕ್ ಔಟ್

    ಈ ಸಂದರ್ಭದಲ್ಲಿ ಮಾತನಾಡಿದ ನರೇಂದ್ರ ಬಾಬು,  ನಾನು  ಈ ಕಥೆ ಬರೆದಾಗ ಮೋಹನ್ ಪಾತ್ರಕ್ಕೆ ರಾಘಣ್ಣ (Raghavendra Rajkumar) ಒಬ್ಬರೇ ಕಣ್ಣುಮುಂದೆ ಬಂದರು‌. ನಂತರ ಶ್ರುತಿ ಅವರು ಮುಸ್ಲಿಂ ಮಹಿಳೆಯ ಪಾತ್ರಕ್ಕೆ ಜೀವ ತುಂಬಿದ್ದಾರೆ, ಇಬ್ಬರೂ ನಮ್ಮ ಚಿತ್ರಕ್ಕೆ ಎರಡು ಕಣ್ಣಿನ ಥರ, ಚಿತ್ರ ಮಾಡುವಾಗ ನಾನಾ ಅಡೆ ತಡೆಗಳನ್ನು ದಾಟಿ ಬಂದಿದ್ದು ಮೊದಲ ಪ್ರತಿ ನೋಡಿದಾಗ ಎಲ್ಕಾ ಮರೆತು, ತುಂಬಾ ಖುಷಿಯಾಯ್ತು. ಇದು ತಂಡದ ಸಿನಿಮಾ. ಬಾಂಬೆ ಮೂಲದ ಪ್ರೀತಿ ಗೋಸ್ವಾಮಿ  ಅವರು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸ್ಲೋಗನ್ ಬಾಬು ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ ಎಂದರು.

    ನಂತರ ನಟ ರಾಘವೇಂದ್ರ ರಾಜಕುಮಾರ್ ಮಾತನಾಡಿ ಈ ಚಿತ್ರದ ಕಥೆ, ಟೈಟಲ್ ಕಥೆ  ನನಗೆ ತುಂಬಾ ಖುಷಿ ಕೊಡ್ತು. ಸಸ್ಪೆನ್ಸ್ ಇದೆ. ಚಿತ್ರ ಒಳ್ಳೆಯ ಅನುಭವ ಕೊಟ್ಟಿತು. 25 ವರ್ಷ ಆದಮೇಲೆ ಶ್ರುತಿ ಅವರ ಜೊತೆ ನಟಿಸಿದ್ದೇನೆ ಎಂದರು. ನಾಯಕಿ ಪಾತ್ರ ಮಾಡಿರುವ ಶ್ರುತಿ ಮಾತನಾಡುತ್ತ ಮೊದಲಬಾರಿಗೆ ಮುಸ್ಲಿಂ ಮಹಿಳೆಯ ಪಾತ್ರ ಮಾಡಿದ್ದೇನೆ. ನನ್ನ ಪಾತ್ರದ ಹೆಸರು  ಸಾಹಿರಾಬಾನು, ಸಿನಿಮಾ ತುಂಬಾ ಚೆನ್ನಾಗಿದೆ ಎಂದರು. ವಾಣಿಜ್ಯ ಮಂಡಳಿ ಅಧ್ಯಕ್ಷರಾದ  ಭಾಮಾ ಹರೀಶ್ ಅವರು  ಹಾಡನ್ನು ಬಿಡುಗಡೆ ಮಾಡಿದರು.  ಈ ಚಿತ್ರವನ್ನು ಅರ್ಪಿಸುತ್ತಿರುವ  ಅನಿಲ್ ಕುಮಾರ್ ಮಾತನಾಡಿ ಒಂದೊಳ್ಳೆಯ ಸಂದೇಶವಿರುವ ಸಿನಿಮಾ. ಇಡೀ ತಂಡ ಶ್ರಮಪಟ್ಟು ಒಳ್ಳೆಯ ಸಿನಿಮಾ ಮಾಡಿದ್ದಾರೆ ಎಂದರು.

     

    ನಿರ್ಮಾಪಕರಲ್ಕೊಬ್ಬರಾದ ಸಂಪತ್ ಕುಮಾರ್ ಮಾತನಾಡಿ ಸಿನಿಮಾ ಮೇಲಿನ  ಶ್ರದ್ಧೆ, ಭಕ್ತಿಯಿಂದ ಒಳ್ಳೆಯಚಿತ್ರ ನಿರ್ಮಿಸಿದ್ದೇವೆ,  ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ನಿರ್ದೇಶಕರ ಜೊತೆ ಈ ಹಿಂದೆ ಅಮೃತವಾಹಿನಿ ಎಂಬ ಸಿನಿಮಾ ಮಾಡಿದ್ದೆ ಎಂದರು. ಉಳಿದ  ನಿರ್ಮಾಪಕರುಗಳಾದ ಮಂಜುನಾಥ್ ಗೌಡ, ಹೆಚ್. ಎಸ್. ಮಂಜುನಾಥ್ ಹಾಗೂ ಕೇಶವ ಮೂರ್ತಿ ಮಾತನಾಡಿ ನಾವೆಲ್ಲ ಸೇರಿ ಬಹಳ ಪ್ರೀತಿಯಿಂದ ಈ ಸಿನಿಮಾ ಮಾಡಿದ್ದೇವೆ; ಕುತೂಹಲ ಮೂಡಿಸುವ ಕಥೆಯಿದೆ.ಪ್ರೇಕ್ಷಕರು ಚಿತ್ರದ  ಪ್ರತಿ ದೃಶ್ಯವನ್ನು ಎಂಜಾಯ್ ಮಾಡುತ್ತಾರೆ ಎಂದರು. ನಟ ವಿನಯ್ ರಾಜಕುಮಾರ್ ಮಾತನಾಡಿ  ಟೀಸರ್ ನೋಡಿದಾಗಲೇ ತುಂಬಾ ಖುಷಿ ಆಗಿತ್ತು, ಗೆಲುವಿನ ಸರ್ದಾರ ಆದ ಮೇಲೆ ಶ್ರುತಿ ಹಾಗೂ ಅಪ್ಪಾಜಿ ಒಟ್ಟಿಗೆ  ನಟಿಸಿದ್ದಾರೆ ಎಂದು ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪುಷ್ಪ 2 ಚಿತ್ರದ ಐಟಂ ಸಾಂಗ್: ಊರ್ವಶಿ ರೌಟೇಲಾ ಬಂದ್ರು ದಾರಿ ಬಿಡಿ

    ಪುಷ್ಪ 2 ಚಿತ್ರದ ಐಟಂ ಸಾಂಗ್: ಊರ್ವಶಿ ರೌಟೇಲಾ ಬಂದ್ರು ದಾರಿ ಬಿಡಿ

    ಪುಷ್ಪ ಸಿನಿಮಾ ಹಿಟ್ ಆಗಲು ‘ಹುಂ ಅಂಟವಾ ಮಾವ’ ಐಟಂ ಸಾಂಗ್ (Item Song) ಕೂಡ ಕಾರಣ ಎನ್ನುವುದನ್ನು ಅಲ್ಲಗಳೆಯುವಂತಿಲ್ಲ. ಸಮಂತಾ ಈ ಹಾಡಿಗೆ ಮೈಚಳಿ ಬಿಟ್ಟು ಕುಣಿದಿದ್ದರು. ಪಡ್ಡೆಗಳ ಹೃದಯದಲ್ಲಿ ಚಿಟ್ಟೆ ಹಾರಿಸಿದ್ದರು. ಈ ಹಾಡು ಹಿಟ್ ಆಗಿದ್ದರಿಂದ, ಚಿತ್ರದ ಗೆಲುವಿಗೂ ಅದು ಸಹಕಾರಿ ಆಯಿತು. ಪುಷ್ಪ 2ನಲ್ಲೂ ಅಂಥದ್ದೊಂದು ಫಾರ್ಮುಲಾವನ್ನು ಮತ್ತೆ ವರ್ಕ್ ಮಾಡುತ್ತಿದ್ದಾರೆ ನಿರ್ದೇಶಕರು. ಪುಷ್ಪ 2ನಲ್ಲೂ ಒಂದು ಐಟಂ ಸಾಂಗ್ ಇರಲಿದ್ದು, ಅದಕ್ಕೆ ಬಾಲಿವುಡ್ ನಟಿ ಊರ್ವಶಿ ರೌಟೇಲಾ (Urvashi Rautela) ಹೆಜ್ಜೆ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಬಾಲಿವುಡ್ ನ ಮಾದಕ ಬೆಡಗಿ ಅಂತಾನೇ ಫೇಮಸ್ ಈ ಊರ್ವಶಿ ರೌಟೇಲಾ. ಕನ್ನಡದಲ್ಲೂ ಈ ನಟಿ ಸಿನಿಮಾ ಮಾಡಿದ್ದಾರೆ. ಸದಾ ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಳ್ಳುವ ರೌಟೇಲಾ ಈ ಸಲ ಪುಷ್ಪ 2 ಚಿತ್ರಕ್ಕಾಗಿ ಕುಣಿಯಲಿದ್ದಾರಂತೆ. ಸಮಂತಾಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಕಾಸ್ಟ್ಯೂಮ್ ಹಾಕಲಿದ್ದಾರೆ ಎನ್ನುವುದು ತೆಲುಗು ಚಿತ್ರೋದ್ಯಮದಲ್ಲಿ ಕೇಳಿ ಬರುತ್ತಿರುವ ಮಾತು.

    ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 ಸಿನಿಮಾದ ಶೂಟಿಂಗ್ ಕುಂಟುತ್ತಾ ಸಾಗಿದೆ. ಸದ್ಯ ಚಿತ್ರದ ಕ್ಲೈಮ್ಯಾಕ್ಸ್ (Climax) ದೃಶ್ಯದ ಚಿತ್ರೀಕರಣವನ್ನು ಮಾಡಲು ನಿರ್ದೇಶಕ ಸುಕುಮಾರನ್ (Sukumaran) ಪ್ಲ್ಯಾನ್ ಮಾಡಿದ್ದು, ಅದೊಂದು ರೋಮಾಂಚನಕಾರಿ ನೀಡುವಂತಹ ಸನ್ನಿವೇಶವಾಗಿದೆ ಎಂದು ಹೇಳಲಾಗುತ್ತಿದೆ. ಈ ದೃಶ್ಯವನ್ನು ತಿರುಪತಿ ಜಿಲ್ಲೆಯ ಪೂರ್ವ ಘಟ್ಟದಲ್ಲಿರುವ ಸ್ವರ್ಣಮುಖಿ (Swarnamukhi) ನದಿಯ ತೀರದಲ್ಲಿ ಶೂಟ್ ಮಾಡಲು ಚಿತ್ರತಂಡ ನಿರ್ಧರಿಸಿದೆ. Urvashi Rautela

    ಕ್ಲೈಮ್ಯಾಕ್ಸ್ ಸನ್ನಿವೇಶದಲ್ಲಿ ಅಲ್ಲು ಅರ್ಜುನ್ ಜೊತೆ ಫಾಸಿಲ್ ಕೂಡ ಭಾಗಿಯಾಗಲಿದ್ದಾರಂತೆ. ಈ ದೃಶ್ಯಕ್ಕೆ ಈಗಿನಿಂದಲೇ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ರಕ್ತ ಚಂದನವನ್ನು ಕಳ್ಳ ಮಾರ್ಗದಲ್ಲಿ ಸಾಗಿಸುವ ಪುಷ್ಪರಾಜನ ವಿರುದ್ಧ ಭನ್ವಿರ್ ಸಿಂಗ್ ಮಾಡುವ ದಾಳಿಯೇ ಕ್ಲೈಮ್ಯಾಕ್ಸ್ ದೃಶ್ಯ ಎಂದು ಹೇಳಲಾಗುತ್ತಿದೆ.

    ಈ ನಡುವೆ ‘ಪುಷ್ಪ 2’ (Pushpa 2) ಸಿನಿಮಾದ ಆಡಿಯೋ (Audio) ಹಕ್ಕು (Right) ಭರ್ಜರಿ ಮೊತ್ತಕ್ಕೆ ಸೇಲ್ ಆಗಿದೆ. ಈವರೆಗೂ ದಾಖಲಾಗಿದ್ದ ಎಲ್ಲ ಮೊತ್ತವನ್ನೂ ಅದು ಹಿಂದಿಕ್ಕಿದ್ದು ಟಿ ಸೀರಿಸ್ ಕಂಪೆನಿಯು 65 ಕೋಟಿ ರೂಪಾಯಿ ಹಣ ನೀಡಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ ಎಂದು ವರದಿಯಾಗಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು ಸೇರಿದಂತೆ ರಿಲೀಸ್ ಆಗುವ ಅಷ್ಟು ಭಾಷೆಗಳಿಗೆ ಈ ಹಕ್ಕು ಅನ್ವಯಿಸಲಿದೆ.

     

    ಈ ಹಿಂದೆ ರಿಲೀಸ್ ಆಗಿರುವ ಬಾಹುಬಲಿ ಚಿತ್ರದ ಆಡಿಯೋ ಹಕ್ಕು ಹತ್ತು ಕೋಟಿ ಸೇಲ್ ಆಗಿತ್ತು. ಆರ್.ಆರ್.ಆರ್ ಆಡಿಯೋ ಹಕ್ಕು 25 ಕೋಟಿಗೆ ಬಿಕರಿ ಆಗಿತ್ತು. ಸಾಹೋ ಸಿನಿಮಾದ ಆಡಿಯೋ ಹಕ್ಕು ಕೂಡ 22 ಕೋಟಿಗೆ ಸೇಲ್ ಆಗಿತ್ತು. ಈ ಎಲ್ಲ ದಾಖಲೆಗಳನ್ನೂ ಪುಷ್ಪ 2 ಸಿನಿಮಾ ಮುರಿದಿದೆ. ಅಲ್ಲದೇ, ಓಟಿಟಿಗೂ ಭಾರೀ ಮೊತ್ತಕ್ಕೆ ಮಾತುಕತೆ ನಡೆಯುತ್ತಿದೆ ಎಂದು ವರದಿ ಆಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬುರ್ಕಾ ಧರಿಸಿ ಐಟಂ ಸಾಂಗ್‌ಗೆ ಸ್ಟೆಪ್ – ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳು ಅಮಾನತು

    ಬುರ್ಕಾ ಧರಿಸಿ ಐಟಂ ಸಾಂಗ್‌ಗೆ ಸ್ಟೆಪ್ – ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳು ಅಮಾನತು

    ಮಂಗಳೂರು: ಬುರ್ಕಾ (Burkha) ಧರಿಸಿ ಹಿಂದಿ ಐಟಂ ಸಾಂಗ್‌ಗೆ (Item Song) ಸ್ಟೆಪ್ ಹಾಕಿದ ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವ ಘಟನೆ ಮಂಗಳೂರಿನ ವಾಮಂಜೂರು ಸೇಂಟ್‌ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.

    ಮುಸ್ಲಿಂ ವಿದ್ಯಾರ್ಥಿಗಳು (Muslim Students) ಕಾಲೇಜಿನ ವಿದ್ಯಾರ್ಥಿ ಘಟಕ ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ನೃತ್ಯ ಮಾಡಿದ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಪಿಜಿ ಯುವತಿಯರ ನಗ್ನ ದೃಶ್ಯ ಸೆರೆ ಹಿಡಿದು ಟಾರ್ಚರ್ – ಸೆಕ್ಸ್ ಆಫರ್‌ ಕೊಟ್ಟು ಖೆಡ್ಡಾಕ್ಕೆ ಬೀಳಿಸಿದ ಖಾಕಿ

    ಸಾಮಾಜಿಕ ಜಾಲತಾಣದಲ್ಲಿ (Social Media) ಮುಸ್ಲಿಂ ವಿದ್ಯಾರ್ಥಿಗಳ ನೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪ್ರಾಂಶುಪಾಲ ಡಾ.ಸುಧೀರ್ ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌- ಬಿಜೆಪಿ ನಡುವಿನ ಮತದ ಅಂತರ ಕೇವಲ ಶೇ.0.9 – ಇಲ್ಲಿದೆ ಹಿಮಾಚಲದ ವೋಟ್‌ ಲೆಕ್ಕ

    ಕೆಲ ದಿನಗಳ ಹಿಂದೆಯಷ್ಟೇ ಹಿಜಬ್ (Hijab) ಹೋರಾಟ ವ್ಯಾಪಿಸಿದ ಬಳಿಕ ಶಾಲಾ ಕಾಲೇಜುಗಳಲ್ಲಿ ಹಿಜಬ್ ಹಾಗೂ ಬುರ್ಕಾ ಧರಿಸುವುದನ್ನು ನಿಷೇಧಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಪೊಲೀಸರ ಮಸ್ತ್ ಡ್ಯಾನ್ಸ್: ಪರ,ವಿರೋಧ ಚರ್ಚೆ

    ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಪೊಲೀಸರ ಮಸ್ತ್ ಡ್ಯಾನ್ಸ್: ಪರ,ವಿರೋಧ ಚರ್ಚೆ

    ಚಾಮರಾಜನಗರ: ಐಟಂ ಸಾಂಗ್‍ಗೆ ಪೊಲೀಸ್ ಅಧಿಕಾರಿಗಳು ಕುಣಿದು ಕುಪ್ಪಳಿಸಿರುವ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಡ್ಯಾನ್ಸ್‌ ಬಗ್ಗೆ ಪರ-ವಿರೋಧದ ಬಗ್ಗೆ ಚರ್ಚೆ ನಡೆಯುತ್ತಿದೆ. ಕೊಳ್ಳೇಗಾಲ DYSP ನಾಗರಾಜು, ಪೊಲೀಸ್ ಇನ್ಸ್‌ಪೆಕ್ಟರ್ ಶಿವರಾಜ್ ಮುದೋಳ್ PSI ಚೇತನ್ ಹಾಗು ಸಹೋದ್ಯೋಗಿ ಪೊಲೀಸ್ ಸಿಬ್ಬಂದಿಗಳು ನೃತ್ಯ ಮಾಡಿದ್ದಾರೆ.

    ಐಟಂ ಸಾಂಗ್ ಕುಣಿತದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಸಬ್ ಇನ್ಸ್‍ಪೆಕ್ಟರ್ ಅಶೋಕ್ ವರ್ಗಾವಣೆ ಹಿನ್ನೆಲೆ, ಖಾಸಗಿ ರೆಸಾರ್ಟ್‍ನಲ್ಲಿ ಬೀಳ್ಕೊಡುಗೆ ಪಾನಗೋಷ್ಠಿ ನಡೆಸಲಾಗಿದೆ. ಈ ಬೀಳ್ಕೊಡುಗೆ ಪಾರ್ಟಿಯಲ್ಲಿ ಮದ್ಯದ ನಶೆಯಲ್ಲಿ ಪೊಲೀಸ್ ಅಧಿಕಾರಿಗಳು ತೇಲಾಡಿದ್ದಾರೆ. ಇದನ್ನೂ ಓದಿ: ಉಕ್ರೇನ್ ನಿರಾಶ್ರಿತರಿಗಾಗಿ ಅಪ್ಲಿಕೇಶನ್ ರೆಡಿ ಮಾಡಿದ 15ರ ಭಾರತೀಯ ಬಾಲಕ

    ಪೊಲೀಸ್ ಅಧಿಕಾರಿಗಳಿಂದ ಅಸಭ್ಯ ರೀತಿಯಲ್ಲಿ ನೃತ್ಯ ಮಾಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಸರ್ಕಾರಿ ನೌಕರರಿಗೆ ತರವಲ್ಲದ ವರ್ತನೆ ಮಾಡಿದ್ದಾರೆಂಬ ಆರೋಪವಿದೆ. ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಪೊಲೀಸ್ ಮ್ಯಾನುವೆಲ್ ಪ್ರಕಾರ ಶಿಸ್ತು ಪಾಲಿಸದೆ ಅಶಿಸ್ತು ಪ್ರದರ್ಶನ ಮಾಡಿದ್ದಾರೆ. ಕರ್ನಾಟಕ ಸೇವಾ ನಡೆತೆ ನಿಯಮ ಉಲ್ಲಂಘನೆಯಾಗಿದೆ ಎಂದು ಪರ ವಿರೋಧ ಚರ್ಚೆಯಾಗ್ತಿದೆ.