Tag: Jahangirpuri violence

  • ಜಹಾಂಗೀರ್‌ಪುರಿ ಹಿಂಸಾಚಾರ- ಪ್ರಕರಣದ ಪ್ರಮುಖ ಆರೋಪಿಗಳ ವಿರುದ್ಧ ಇಡಿ ತನಿಖೆ

    ಜಹಾಂಗೀರ್‌ಪುರಿ ಹಿಂಸಾಚಾರ- ಪ್ರಕರಣದ ಪ್ರಮುಖ ಆರೋಪಿಗಳ ವಿರುದ್ಧ ಇಡಿ ತನಿಖೆ

    ನವದೆಹಲಿ: ಕಳೆದ ವಾರ ನಡೆದ ಜಹಾಂಗೀರ್‌ಪುರಿ ಕೋಮು ಘರ್ಷಣೆಯ ಪ್ರಮುಖ ಆರೋಪಿ ಅನ್ಸಾರ್ ಶೇಖ್ ಮತ್ತು ಇತರ ಶಂಕಿತರ ಆಸ್ತಿಗಳ ಮೂಲಗಳ ತನಿಖೆಗಾಗಿ ಜಾರಿ ನಿರ್ದೇಶನಾಲಯ (ಇಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ.

    ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ಥಾನಾ ಕೇಂದ್ರ ಏಜೆನ್ಸಿಗೆ ಪತ್ರ ಬರೆದ ಒಂದು ದಿನದ ನಂತರ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶೇಖ್ ಮತ್ತು ಇತರ ಶಂಕಿತರ ಎಲ್ಲಾ ಹಣಕಾಸು ವ್ಯವಹಾರಗಳನ್ನು ಇಡಿ ಪರಿಶೀಲಿಸುತ್ತಿದೆ. ಕೋಮು ಉದ್ವಿಗ್ನತೆಯನ್ನು ಉತ್ತೇಜಿಸಲು ವಿದೇಶಿ ನೆರವಿನ ಹಣವನ್ನು ಬಳಸಲಾಗಿದೆಯೇ ಎಂದು ತನಿಖೆ ಮಾಡುತ್ತದೆ.

    ಶೇಖ್ ವಿದೇಶದಿಂದ ಹಣ ರವಾನೆ ಮಾಡಿರಬಹುದು ಎಂದು ಶಂಕಿಸಲಾಗಿದೆ ಮತ್ತು ದೆಹಲಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ಅವರು ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ದೊಡ್ಡ ಭವನವನ್ನು ಹೊಂದಿದ್ದಾರೆ ಎಂದು ಪ್ರಕರಣದ ಪರಿಚಿತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಸಿಐಡಿ ತನಿಖೆ ಪೂರ್ಣವಾದ್ಮೇಲೆ 402 ಪಿಎಸ್‍ಐ ಹುದ್ದೆಗಳ ಪರೀಕ್ಷೆ

    ಘರ್ಷಣೆಯ ತನಿಖೆಯ ಭಾಗವಾಗಿ, ದೆಹಲಿ ಪೊಲೀಸರು ಈಗಾಗಲೇ ಕಳೆದ ವಾರ ಘರ್ಷಣೆಗೆ ಕಾರಣವಾದ ದಿನಗಳಲ್ಲಿ ಅವರ ಚಲನವಲನಗಳನ್ನು ಪತ್ತೆಹಚ್ಚುತ್ತಿದ್ದಾರೆ ಮತ್ತು ಅವರ ಫೋನ್ ಕರೆಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

    ಶೇಖ್, ಸ್ಕ್ರ್ಯಾಪ್ ವ್ಯಾಪಾರಿಯಾಗಿದ್ದು, ಜಹಾಂಗೀರ್‌ಪುರಿಯಲ್ಲಿ ತನ್ನ ಕುಟುಂಬದೊಂದಿಗೆ ವಾಸವಾಗಿದ್ದಾನೆ. ಏಪ್ರಿಲ್ 16 ರಂದು ನಡೆದ ಹಿಂಸಾತ್ಮಕ ಘರ್ಷಣೆಯ ನಂತರ ಪೊಲೀಸರು ಅನ್ಸಾರ್ ಶೇಖ್ ಮತ್ತು ಇತರ ನಾಲ್ವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್‍ಎಸ್‍ಎ) ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಲಾದ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‍ಐಆರ್) ಪೊಲೀಸರು ಶೇಖ್ ಮತ್ತು ಇತರ ನಾಲ್ವರು ಪ್ರಮುಖ ಆರೋಪಿಗಳು ಎಂದು ಹೇಳಲಾಗಿದೆ. ಇದನ್ನೂ ಓದಿ: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

  • ದೆಹಲಿಯಲ್ಲಿ ಜೆಸಿಬಿ ಘರ್ಜನೆ- ಜಹಾಂಗೀರ್‌ಪುರಿಯಲ್ಲಿ ಅಕ್ರಮ ಆಸ್ತಿಗಳ ಧ್ವಂಸ

    ದೆಹಲಿಯಲ್ಲಿ ಜೆಸಿಬಿ ಘರ್ಜನೆ- ಜಹಾಂಗೀರ್‌ಪುರಿಯಲ್ಲಿ ಅಕ್ರಮ ಆಸ್ತಿಗಳ ಧ್ವಂಸ

    ನವದೆಹಲಿ: ಇತ್ತೀಚೆಗೆ ಹನುಮ ಜಯಂತಿ ವೇಳೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ಬುಧವಾರ ಬೆಳಗ್ಗೆ ಪೊಲೀಸ್ ಹಾಗೂ ಅರೆಸೇನಾ ಪಡೆಗಳ ನಿಯೋಜನೆಯಲ್ಲಿ ಪ್ರಾರಂಭವಾಗಿದ್ದು, ಬುಲ್ಡೋಜರ್ ಬಳಸಿ ಅಕ್ರಮ ಕಟ್ಟಡಗಳನ್ನು ಒಡೆದು ಹಾಕಿದ್ದಾರೆ.

    ರಸ್ತೆ ಬದಿಯ ಆಹಾರ ಮಳಿಗೆಗಳು ಮತ್ತು ಅಂಗಡಿಗಳನ್ನು ಬುಲ್ಡೋಜರ್ ಮೂಲಕವಾಗಿ ಕೆಡವಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಸಾರ್ವಜನಿಕರು ಭಾರೀ ಪ್ರಮಾಣದಲ್ಲಿ ನೆರೆದಿದ್ದು, ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು  ಹತೋಟಿಯಲ್ಲಿಡಲು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು

    ಈ ಬಗ್ಗೆ ಜಹಾಂಗೀರ್‌ಪುರಿಯ ಸ್ಥಳೀಯರೊಬ್ಬರು ಮಾತನಾಡಿ, ಕಳೆದ 15 ವರ್ಷಗಳಿಂದ ನನ್ನ ಅಂಗಡಿ ಇಲ್ಲೇ ಇತ್ತು. ಅಕ್ರಮದ ಬಗ್ಗೆ ಮೊದಲು ಯಾರೂ ಚಕಾರ ಎತ್ತಲಿಲ್ಲ, ಈಗ ಎರಡು ಕೋಮುಗಳ ನಡುವೆ ಹಿಂಸಾಚಾರದ ಘಟನೆಯ ನಂತರ ಇದು ನಡೆಯುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಕೆಂಪಣ್ಣ ಕನಕಪುರದ ಕಾಂಗ್ರೆಸ್ ಏಜೆಂಟ್, ಕಾಂಗ್ರೆಸ್ ದಾಸ: ಈಶ್ವರಪ್ಪ

    ಈ ಹಿಂದೆ ದೆಹಲಿ ಉತ್ತರ ಮಹಾನಗರ ಪಾಲಿಕೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿತ್ತು. ಈ ಮನವಿಯಲ್ಲಿ ಏ.20 ಮತ್ತು 21ರಂದು ಅಕ್ರಮ ಕಟ್ಟಗಳನ್ನು ತೆರವುಗೊಳಿಸಲಾಗುತ್ತದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 400 ಪೊಲೀಸರ ಭದ್ರತೆ ಒದಗಿಸಬೇಕು ಎಂದು ಕೇಳಿಕೊಂಡಿತ್ತು. ಇದರ ಪ್ರಕಾರ ಅಧಿಕ ಪೊಲೀಸ್‌ ಭದ್ರೆತೆ ನೀಡಲಾಗಿತ್ತು.

  • ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು

    ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು

    ನವದೆಹಲಿ: ಇತ್ತೀಚೆಗೆ ಹನುಮ ಜಯಂತಿ ವೇಳೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ದೆಹಲಿಯ ಜಹಾಂಗೀರ್‌ಪುರಿಗೂ ಸರ್ಕಾರ ಬುಲ್ಡೋಜರ್ ಶಾಕ್ ನೀಡಿದ್ದು, ದೆಹಲಿಯಲ್ಲಿ ನಿರ್ಮಾಣ ಮಾಡಲಾಗಿರುವ ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್ ಬಳಸಿ ಒಡೆದು ಹಾಕಲು ನಗರ ಪಾಲಿಕೆ ಆದೇಶ ನೀಡಿದೆ.

    ಹನುಮ ಜಯಂತಿಯಂದು ದೆಹಲಿಯಲ್ಲಿ ನಡೆದ ಜಹಾಂಗೀರ್‌ಪುರಿ ಹಿಂಸಾಚಾರದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಉತ್ತರ ಮಹಾನಗರ ಪಾಲಿಕೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದೆ. ಈ ಮನವಿಯಲ್ಲಿ ಏ.20 ಮತ್ತು 21ರಂದು ಅಕ್ರಮ ಕಟ್ಟಗಳನ್ನು ತೆರವುಗೊಳಿಸಲಾಗುತ್ತದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 400 ಪೊಲೀಸರ ಭದ್ರತೆ ಒದಗಿಸಬೇಕು ಎಂದು ಕೇಳಿಕೊಂಡಿದೆ.

    ಹಿಂಸಾಚಾರಕ್ಕೂ ಈ ಆದೇಶಕ್ಕೂ ನೇರ ಸಂಬಂಧ ಇಲ್ಲವಾದರೂ, ಇದು ದಾಳಿಕೋರರಿಗೆ ನೇರ ಸಂದೇಶ ನೀಡುವ ಉದ್ದೇಶ ಹೊಂದಿದೆ ಎನ್ನಲಾಗಿದೆ. ಇದನ್ನೂ ಓದಿ: ಅಂಗಡಿ ದೋಚಿದ ಖುಷಿಯಲ್ಲಿ ಡ್ಯಾನ್ಸ್ ಮಾಡಿದ ಕಳ್ಳ – ವೀಡಿಯೋ ವೈರಲ್

    ಘಟನೆಯಲ್ಲಿ 8 ಪೊಲೀಸ್ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಸೇರಿದಂತೆ ಒಂಬತ್ತು ಮಂದಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಒಟ್ಟು 23 ಜನರನ್ನು ಬಂಧಿಸಲಾಗಿದೆ ಮತ್ತು ಇಬ್ಬರು ಬಾಲಾಪರಾಧಿಗಳನ್ನು ಬಂಧಿಸಲಾಗಿದೆ.

    DELHI POLICE

    ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಮಾತನಾಡಿ, ತಪ್ಪಿತಸ್ಥರ ವಿರುದ್ಧ ವರ್ಗ, ಧರ್ಮ, ಸಮುದಾಯ ಮತ್ತು ಧರ್ಮವನ್ನು ಲೆಕ್ಕಿಸದೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಚಹಾ ಅಂಗಡಿ ತೆರೆದು ಬದುಕು ಕಟ್ಟಿಕೊಂಡ ಅರ್ಥಶಾಸ್ತ್ರ ಪದವೀಧರೆ