Tag: jai karnataka Organization

  • ಗಡಿ ಜಿಲ್ಲೆಯಲ್ಲಿ ಕನ್ನಡದ ಕಂಪು- 1 ಕಿ.ಮೀ ಉದ್ದದ ನಾಡ ಧ್ವಜದ ಝೇಂಕಾರ

    ಗಡಿ ಜಿಲ್ಲೆಯಲ್ಲಿ ಕನ್ನಡದ ಕಂಪು- 1 ಕಿ.ಮೀ ಉದ್ದದ ನಾಡ ಧ್ವಜದ ಝೇಂಕಾರ

    ಬೀದರ್: 1 ಕಿ.ಮೀ ಉದ್ದದ ನಾಡ ಧ್ವಜ ಮೆರವಣಿಗೆ ಮಾಡುವ ಮೂಲಕ ಇಂದು ಗಡಿ ಜಿಲ್ಲೆ ಬೀದರ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ಮತ್ತು ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸಲಾಯಿತು.

    ಜೈ ಕರ್ನಾಟಕ ಸಂಘಟನೆ ವತಿಯಿಂದ ಇಂದು ಬೀದರ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ಮತ್ತು ಕಲ್ಯಾಣ ಕರ್ನಾಟಕ ಉತ್ಸವವನ್ನು ಆಯೋಜಿಸಲಾಗಿತ್ತು. ಜೈ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಶ್ರೀಮಂತ ಸಪಾಟೆಯವರ ನೇತೃತ್ವದಲ್ಲಿ ಈ ಉತ್ಸವ ನಡೆಯುತ್ತಿದ್ದು, ಉತ್ಸವದ ನಿಮಿತ್ಯ ಕಾರ್ಯಕ್ರಮದಲ್ಲಿ 1 ಕಿ.ಮೀ ಉದ್ದದ ನಾಡ ಧ್ವಜದ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.

    ಬೀದರ್‍ನ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಆರಂಭವಾದ ಧ್ವಜ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕನ್ನಡದ ಕಂಪನ್ನು ಪಸರಿಸಿತು. ಶಾಲಾ ವಿದ್ಯಾರ್ಥಿಗಳು ನಾಡ ಧ್ವಜವನ್ನು ಹಿಡಿದು ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ರಸ್ತೆ ಉದ್ದಕ್ಕೂ ಮಕ್ಕಳು ಹಿಡಿದು ಹಾಗುತ್ತಿದ್ದ ನಾಡ ಧ್ವಜ, ಅದರ ಜೊತೆಗೆ ಕೋಲಾಟ, ಡೊಳ್ಳು ಕುಣಿತ, ಕನ್ನಡದ ಕುರಿತು ಗೀತೆಗಳು ಜನರ ಗಮನ ಸೆಳೆದವು.

  • ಯೋಧರನ್ನು ಬಲಿಪಡೆದ ಉಗ್ರ ಪಿಪಾಸುಗಳನ್ನ ಗಲ್ಲಿಗೇರಿಸಿ – ಯುವ ಕಾಂಗ್ರೆಸ್ಸಿನಿಂದ ಶ್ರದ್ಧಾಂಜಲಿ

    ಯೋಧರನ್ನು ಬಲಿಪಡೆದ ಉಗ್ರ ಪಿಪಾಸುಗಳನ್ನ ಗಲ್ಲಿಗೇರಿಸಿ – ಯುವ ಕಾಂಗ್ರೆಸ್ಸಿನಿಂದ ಶ್ರದ್ಧಾಂಜಲಿ

    ಬೆಂಗಳೂರು: ಪುಲ್ವಾಮದಲ್ಲಿ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ರಾಜಧಾನಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಹಾಗೆಯೇ ದುಷ್ಕೃತ್ಯ ಮೆರೆದ ಉಗ್ರ ಪಿಪಾಸುಗಳನ್ನ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಮಾಡಿದ್ದಾರೆ.

    ಯುವ ಕಾಂಗ್ರೆಸ್ ಕಾರ್ಯಕರ್ತರ ವತಿಯಿಂದ ಗುರುವಾರದಂದು ಪುಲ್ವಾಮದಲ್ಲಿ ವೀರ ಮರಣವನ್ನಪ್ಪಿದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಳಿಕ ಉಗ್ರರ ತವರು ಪಾಕಿಸ್ತಾನದ ರಾಕ್ಷಸಿತನಕ್ಕೆ ತಕ್ಕ ಉತ್ತರ ಕೋಡಲೇಬೇಕು. ವಿಶ್ವಸಂಸ್ಥೆ ಪಾಕಿಸ್ತಾನವನ್ನು ಉಗ್ರರಾಷ್ಟ್ರ ಎಂದು ಘೋಷಿಸಬೇಕು. ಯೋಧರನ್ನು ಬಲಿಪಡೆದ ಉಗ್ರ ಪಿಪಾಸುಗಳನ್ನ ಗಲ್ಲಿಗೇರಿಸಬೇಕು ಎಂದು ಘೋಷಣೆ ಕೂಗುತ್ತಾ ಆಕ್ರೋಶ ಹೊರಹಾಕಿದರು.

    ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಪಾಕಿಸ್ತಾನಕ್ಕೆ ಬೆಂಬಲ ಕೊಡುವ ದೇಶಗಳಿಗೂ ಎಚ್ಚರಿಕೆ ಕೊಡಬೇಕು. ನಮ್ಮ ಸೈನಿಕರನ್ನ ಮೋಸದಿಂದ ಬಲಿಪಡೆದ ಯಾರನ್ನೂ ಬಿಡಬಾರದು. ಈ ಬಗ್ಗೆ ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

    ಪುಲ್ವಾಮದಲ್ಲಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಜೈಕರ್ನಾಟಕ ಸಂಘಟನೆ ವತಿಯಿಂದ ಮೈಸೂರು ಸರ್ಕಲ್‍ನಲ್ಲಿ ಕೂಡ ಶ್ರದ್ದಾಂಜಲಿ ಸಲ್ಲಿಸಲಾಯಿತು. ಆತ್ಮಾಹುತಿ ದಾಳಿಯಲ್ಲಿ 47 ಯೋಧರ ಸಾವಿನ ಹಿನ್ನೆಲೆ ಪಾಕ್ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಸೈನಿಕರು ನಮ್ಮ ಹೆಮ್ಮೆ ಎಂದು ಘೋಷಣೆ ಕೂಗುತ್ತ ಆಕ್ರೋಶ ಹೊರಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv