Tag: Jaipur

  • ಕಾರಿಗೆ ನಾಯಿಯನ್ನು ಕಟ್ಟಿ ರಸ್ತೆಯಲ್ಲಿ ಧರಧರನೇ ಎಳೆದುಕೊಂಡು ಹೋದ: ವಿಡಿಯೋ ವೈರಲ್

    ಕಾರಿಗೆ ನಾಯಿಯನ್ನು ಕಟ್ಟಿ ರಸ್ತೆಯಲ್ಲಿ ಧರಧರನೇ ಎಳೆದುಕೊಂಡು ಹೋದ: ವಿಡಿಯೋ ವೈರಲ್

    ಜೈಪುರ: ಚಾಲಕನೊಬ್ಬ ನಾಯಿಯನ್ನು ರಸ್ತೆಯಲ್ಲಿ ತನ್ನ ಕಾರಿನಿಂದ ಧರಧರನೇ ಎಳೆದುಕೊಂಡು ಹೋಗಿರುವ ಘಟನೆಯೊಂದು ರಾಜಸ್ಥಾನದ ಉದಯ್‌ಪುರ್‌ನಲ್ಲಿ ನಡೆದಿದ್ದು, ಇದೀಗ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ.

    ಬಾಬು ಖಾನ್ ನಾಯಿಯನ್ನು ಎಳೆದುಕೊಂಡು ಹೋದ ಚಾಲಕ. ಬಾಬು ಖಾನ್ ನಾಯಿಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋದ ಪರಿಣಾಮ ಅದು ಮೃತಪಟ್ಟಿದೆ. ಪ್ರಾಣಿಗಳ ಹತ್ಯೆ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ಬಾಬು ಖಾನ್‌ನನ್ನು ಬಂಧಿಸಿಲಾಗಿತ್ತು. ಸ್ಥಳೀಯ ನ್ಯಾಯಾಲಯ ಈಗ ಬಾಬು ಖಾನ್‌ಗೆ ಜಾಮೀನು ಮಂಜೂರು ಮಾಡಿದೆ.

    ಈ ವಿಡಿಯೋ ವೈರಲ್ ಆದ ನಂತರ ಈ ವಿಷಯವನ್ನು ಪೊಲೀಸರ ಗಮನಕ್ಕೆ ತರಲಾಯಿತು. ಈ ವೈರಲ್ ವಿಡಿಯೋವನ್ನು ಉದಯ್‌ಪುರದ ಶೋಭಾಪುರದಲ್ಲಿ ಐದು ದಿನಗಳ ಹಿಂದೆ ಸೆರೆ ಹಿಡಿಯಲಾಗಿತ್ತು. ಶುಕ್ರವಾರ ರಾತ್ರಿ ಅದೇ ಸ್ಥಳದಲ್ಲಿ ನಾಯಿಯ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, ಬಾಬು ಖಾನ್‌ನ ಗ್ಯಾರೇಜಿನ ಹೊರಗೆ ನಾಯಿಯ ಮೃತದೇಹ ಪತ್ತೆಯಾಗಿತ್ತು. ಬಳಿಕ ಅದನ್ನು ಎಸೆಯಲು ಹತ್ತಿರದ ಅರಣ್ಯಕ್ಕೆ ಕರೆದುಕೊಂಡು ಹೋಗುತ್ತಿದ್ದನು ಎಂದು ಹೇಳಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಸ್ಥಳೀಯರು, ಬಾಬು ನಾಯಿಯನ್ನು ಕಾರಿಗೆ ಕಟ್ಟುವಾಗ ಅದು ಜೀವಂತವಾಗಿಯೇ ಇತ್ತು ಎಂದು ಹೇಳಿದ್ದಾರೆ. ಆದರೆ ಪೊಲೀಸರ ಪ್ರಕಾರ, ಮರಣೋತ್ತರ ಪರೀಕ್ಷೆಯ ವರದಿ ಪ್ರಕಾರ ನಾಯಿ ಆಘಾತದಿಂದ ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಅಲ್ಲದೆ ರಸ್ತೆಯಲ್ಲಿ ಎಳೆದುಕೊಂಡು ಹೋದ ಪರಿಣಾಮ ನಾಯಿಯ ದೇಹಕ್ಕೆ ಸಾಕಷ್ಟು ಗಾಯಗಳಾಗಿತ್ತು. ಶೀಘ್ರದಲ್ಲೇ ಬಾಬು ಖಾನ್ ವಿರುದ್ಧ ಚಾರ್ಚ್ಶೀಟ್ ದಾಖಲಿಸುತ್ತೇವೆ ಎಂದು ಕೇಲ್ವಾ ಪೊಲೀಸರು ತಿಳಿಸಿದ್ದಾರೆ.

  • ಭಿಕ್ಷೆ ಬೇಡುವ ಮಕ್ಕಳಿಗಾಗಿ ಶಾಲೆ ತೆರೆದ ಪೊಲೀಸರು – 450 ಮಕ್ಕಳಿಗೆ ವಿದ್ಯಾಭ್ಯಾಸ

    ಭಿಕ್ಷೆ ಬೇಡುವ ಮಕ್ಕಳಿಗಾಗಿ ಶಾಲೆ ತೆರೆದ ಪೊಲೀಸರು – 450 ಮಕ್ಕಳಿಗೆ ವಿದ್ಯಾಭ್ಯಾಸ

    ಜೈಪುರ: ಭಿಕ್ಷೆ ಬೇಡುವ ಮಕ್ಕಳಿಗಾಗಿ ರಾಜಸ್ಥಾನ ಪೊಲೀಸರು ಶಾಲೆ ತೆರೆದಿದ್ದು, 450 ಮಕ್ಕಳು ಈಗ ಈ ಶಾಲೆಯಲ್ಲಿ ಓದುತ್ತಿದ್ದಾರೆ.

    ಧರ್ಮವೀರ್ ಜಖರ್ ಅವರು 2016ರಲ್ಲಿ ರಾಜಸ್ಥಾನದ ಚುರುವಿನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಈ ವೇಳೆ ಅವರು ಭಿಕ್ಷೆ ಬೇಡುವ ಮಕ್ಕಳಿಗಾಗಿ ಶಾಲೆ ತೆರೆದಿದ್ದಾರೆ. ಈಗ ಇವರ ಶಾಲೆಯಲ್ಲಿ 450 ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ.

    ಧರ್ಮವೀರ್ ಚುರು ಜಿಲ್ಲೆಯ ಮಹಿಳಾ ಪೊಲೀಸ್ ಠಾಣೆ ಬಳಿ ಈ ಶಾಲೆಯನ್ನು ತೆರೆದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ಬೀದಿಯಲ್ಲಿ ಭಿಕ್ಷೆ ಬೇಡುವ ಮಕ್ಕಳ ಕೈಯಲ್ಲಿ ತಟ್ಟೆ ಬದಲು ಪೆನ್ಸಿಲ್ ಹಾಗೂ ಪುಸ್ತಕಗಳಿರಬೇಕು. ಮಕ್ಕಳು ಓದುವ ಹಾಗೂ ಬರೆಯುವ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಸಹಾಯ ಮಾಡಲು ಸಾಧ್ಯವಾಗುತ್ತದೆ. ಪೊಲೀಸ್ ಠಾಣೆಯ ಸುತ್ತಮುತ್ತ ಅನೇಕ ಮಕ್ಕಳು ಭಿಕ್ಷೆ ಬೇಡುವುದನ್ನು ನಾನು ನೋಡಿದ್ದೇನೆ. ಅವರನ್ನು ಪ್ರಶ್ನಿಸಿದಾಗ ಅವರು ಅನಾಥರು ಎಂಬ ವಿಷಯ ತಿಳಿಯಿತು. ಸತ್ಯವನ್ನು ತಿಳಿಯಲು ಅವರು ವಾಸಿಸುತ್ತಿದ್ದ ಸ್ಲಂಗೆ ಹೋಗಿದ್ದೆ. ಈ ಕಾರಣಕ್ಕೆ ನಾನು ಈ ನಿರ್ಧಾರ ತೆಗೆದುಕೊಂಡೆ ಎಂದು ಹೇಳಿದರು.

    ಶಾಲೆ ಶುರು ಮಾಡುವ ಮೊದಲು ಧರ್ಮವೀರ್ ಒಂದು ಗಂಟೆಗಳ ಕಾಲ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಇದೇ ರೀತಿ ನಿಧಾನವಾಗಿ ‘ಅಪ್ನಿ ಪಾಠಶಾಲಾ'(ನಮ್ಮ ಶಾಲೆ) ಶಾಲೆಯ ರೂಪವನ್ನು ಪಡೆಯಿತು. ಮಹಿಳಾ ಪೇದೆಗಳು ಹಾಗೂ ಸಮಾಜ ಸೇವೆ ಮಾಡುವವರು ಧರ್ಮವೀರ್ ಅವರ ಸಹಾಯ ಮಾಡುತ್ತಾರೆ. ಈ ಶಾಲೆಯಲ್ಲಿ ಓದುವ ಸುಮಾರು 200 ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ದಾಖಲಿಸಲಾಗಿದೆ. ಇದರಲ್ಲಿ 90 ಮಕ್ಕಳು ಆರನೇ ಹಾಗೂ ಎಂಟನೇ ತರಗತಿ ಓದುತ್ತಿದ್ದಾರೆ.

    ಶಾಲೆಯ ಹತ್ತಿರದಲ್ಲೇ ನಮ್ಮದೊಂದು ವಾಹನವಿದ್ದು, ಅದರಲ್ಲಿ ಮಕ್ಕಳನ್ನು ಸ್ಲಂನಿಂದ ಸ್ಕೂಲ್‍ಗೆ ಕರೆದುಕೊಂಡು ಹೋಗಲಾಗುತ್ತದೆ. ಇದಲ್ಲದೆ ಮಕ್ಕಳಿಗಾಗಿ ಸ್ಕೂಲ್ ಡ್ರೆಸ್, ಶೂ, ಊಟ ಹಾಗೂ ಪುಸ್ತಕಗಳನ್ನು ಸಹ ನೀಡುತ್ತೇವೆ. ಇದೆಲ್ಲಾ ಉಚಿತವಾಗಿದ್ದು, ಇದಕ್ಕಾಗಿ ಇಲಾಖೆಯಲ್ಲಿರುವ ಸಮಾಜ ಸೇವಕರು ಹಾಗೂ ಕೆಲವು ಸಂಸ್ಥೆಗಳು ಸಹಾಯ ಮಾಡುತ್ತದೆ. ಮಕ್ಕಳನ್ನು ಶಾಲೆಗೆ ಕರೆತರುವುದು ಬಹಳ ಕಷ್ಟದ ಕೆಲಸವಾಗಿತ್ತು. ಏಕೆಂದರೆ ಮೂಲಭೂತ ಸೌಕರ್ಯ ಸಿಗದ್ದಕ್ಕೆ ಅವರು ಭಿಕ್ಷೆ ಬೇಡುತ್ತಿದ್ದರು. ಹಾಗಾಗಿ ನಾವು ಮೊದಲು ಊಟದ ವ್ಯವಸ್ಥೆ ಮಾಡಿದ್ದೆವು ಎಂದು ಧರ್ಮವೀರ್ ಹೇಳಿದರು.

    ಉತ್ತರ ಪ್ರದೇಶ ಹಾಗೂ ಬಿಹಾರ ರಾಜ್ಯದ ಕೆಲವು ಕುಟುಂಬಗಳು ಕೆಲಸ ಹುಡುಕಲು ಇಲ್ಲಿಗೆ ಬರುತ್ತಾರೆ. ನಾವು ಅವರಿಗೂ ಹಾಗೂ ಅವರ ಮಕ್ಕಳಿಗೂ ಶಾಲೆಗೆ ಬರುವಂತೆ ಪ್ರೇರೇಪಿಸಿದ್ದೆವು. ಕೆಲವು ಮಕ್ಕಳಿಗೆ ರಸ್ತೆಯಲ್ಲಿ ಕಸ ಎತ್ತಬೇಕೆಂದು ಹೇಳಲಾಗಿತ್ತು. ಏಕೆಂದರೆ ಅವರು ಈ ರೀತಿ ಮಾಡದಿದ್ದರೆ ಅವರ ಪೋಷಕರು ಶಾಲೆಗೆ ಕಳುಹಿಸಲು ನಿರಾಕರಿಸುತ್ತಿದ್ದರು. ಹಾಗಾಗಿ ಮಕ್ಕಳು ಶಾಲೆ ಮುಗಿದ ನಂತರ ಈ ಕೆಲಸವನ್ನು ಮಾಡುತ್ತಿದ್ದರು ಎಂದು ಧರ್ಮವೀರ್ ತಿಳಿಸಿದ್ದಾರೆ.

    ಈ ಶಾಲೆ ನಡೆಸಲು ಪ್ರತಿ ತಿಂಗಳು ಒಂದೂವರೆ ಲಕ್ಷ ರೂ. ಖರ್ಚು ಆಗುತ್ತದೆ. ಈ ಹಣವನ್ನು ಜನರ ದೇಣಿಗೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನದ ಮೂಲಕ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಸರ್ಕಾರದಿಂದ ನಮಗೆ ಯಾವುದೇ ಸಹಾಯವಾಗಿಲ್ಲ. ಪೊಲೀಸ್, ಸಮಾಜ ಹಾಗೂ ಶಿಕ್ಷಣ ವಿಭಾಗದ ಸಹಾಯದಿಂದ ನಾವು ಬದಲಾವಣೆ ತರಲು ಪ್ರಯತ್ನಿಸುತ್ತಿದ್ದೇವೆ. ಈ ಮಕ್ಕಳಿಗಾಗಿ ವಿಶೇಷ ಶಾಲೆ ಹಾಗೂ ಬೇರೆ ಸಿಬ್ಬಂದಿ ವ್ಯವಸ್ಥೆ ಮಾಡುವುದು ಮುಖ್ಯ. ಈ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಇವರು ಮತ್ತೆ ಯಾವತ್ತೂ ಶಾಲೆಗೆ ಬರುವುದಿಲ್ಲ ಎಂದು ಧರ್ಮವೀರ್ ತಿಳಿಸಿದ್ದಾರೆ.

  • ಪ್ರೇಯಸಿ ಬೇರೆ ಯುವಕನ ಜೊತೆ ಮಾತನಾಡಿದ್ದಕ್ಕೆ ಪ್ರಿಯಕರ ಆತ್ಮಹತ್ಯೆ

    ಪ್ರೇಯಸಿ ಬೇರೆ ಯುವಕನ ಜೊತೆ ಮಾತನಾಡಿದ್ದಕ್ಕೆ ಪ್ರಿಯಕರ ಆತ್ಮಹತ್ಯೆ

    ಜೈಪುರ: ಪ್ರೇಯಸಿ ಬೇರೆ ಯುವಕನ ಜೊತೆ ಮಾತನಾಡಿದ್ದಕ್ಕೆ ಪ್ರಿಯಕರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ಡುಂಗರಪುರದಲ್ಲಿ ನಡೆದಿದೆ.

    ಜಯೇಶ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಜಯೇಶ್ ಕಾತುರಾತ್ ಗ್ರಾಮದವನಾಗಿದ್ದು, ಎರಡು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಯುವತಿ ಬೇರೆ ಯುವಕನ ಜೊತೆ ಮಾತನಾಡಿದ್ದಕ್ಕೆ ಮನನೊಂದು ಜಯೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಪೊಲೀಸರ ಪ್ರಕಾರ ಜಯೇಶ್ ಮೃತದೇಹ ಆತನ ಮನೆ ಸಮೀಪದಲ್ಲಿದ್ದ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಯುವಕನ ಮೃತದೇಹವನ್ನು ಕೆಳಗಿಳಿಸಿ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದರು.

    ಪೊಲೀಸರು ಯುವಕ ಮೃತದೇಹವನ್ನು ಪರಿಶೀಲಿಸಿದ್ದಾಗ ಡೆತ್‍ನೋಟ್‍ವೊಂದು ಪತ್ತೆಯಾಗಿದೆ. ಡೆತ್‍ನೋಟ್‍ನಲ್ಲಿ, “ನಾನು ಎರಡು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದೇನೆ. ಆದರೆ ಆಕೆ ಬೇರೆ ಯುವಕನ ಜೊತೆ ಮಾತನಾಡುತ್ತಿರುತ್ತಾಳೆ. ಇದರಿಂದ ಮನನೊಂದು ನಾನು ಆತ್ಮಹತ್ಯೆ ಮಾಡಿಕೊಂಡಿದ್ದೇನೆ” ಎಂದು ಬರೆದಿದ್ದಾನೆ.

    ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • ತಾಯಿಯ ಹುಟ್ಟುಹಬ್ಬಕ್ಕೆ ಗಿಫ್ಟ್ ನೀಡಲು 12 ವರ್ಷದಿಂದ ನಾಣ್ಯ ಸಂಗ್ರಹಿಸ್ದ

    ತಾಯಿಯ ಹುಟ್ಟುಹಬ್ಬಕ್ಕೆ ಗಿಫ್ಟ್ ನೀಡಲು 12 ವರ್ಷದಿಂದ ನಾಣ್ಯ ಸಂಗ್ರಹಿಸ್ದ

    ಜೈಪುರ: ಮಗನೊಬ್ಬ 12 ವರ್ಷದಿಂದ ನಾಣ್ಯಗಳನ್ನು ಸಂಗ್ರಹ ಮಾಡಿ 13,500 ರೂ. ಜೋಡಿಸಿ ತನ್ನ ತಾಯಿಯ ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಿದ ಅಪರೂಪದ ಘಟನೆಯೊಂದು ರಾಜಸ್ಥಾನದ ಜೋಧ್‍ಪುರದಲ್ಲಿ ನಡೆದಿದೆ.

    17 ವರ್ಷದ ರಾಮ್ ಸಿಂಗ್ ತನ್ನ ತಾಯಿಯ ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಲು 12 ವರ್ಷದಿಂದ ನಾಣ್ಯ ಸಂಗ್ರಹಿಸಿದ್ದಾನೆ. ರಾಮ್ 13,500 ರೂ. ಸಂಗ್ರಹಿಸಿದ್ದು, ಅದು ಒಟ್ಟು 35 ಕೆ.ಜಿ ಇತ್ತು. ಈ ನಾಣ್ಯಗಳಿಂದ ರಾಮ್ ತನ್ನ ತಾಯಿಗಾಗಿ ಫ್ರಿಡ್ಜ್ ಖರೀದಿಸಿ ಉಡುಗೊರೆಯಾಗಿ ನೀಡಿದ್ದಾನೆ.

    ರಾಮ್ ಮನೆಯಲ್ಲಿದ್ದ ಫ್ರಿಡ್ಜ್ ತುಂಬಾ ಹಳೆಯದಾಗಿತ್ತು. ಅಲ್ಲದೆ ಆತನ ತಾಯಿ ಹೊಸ ಫ್ರಿಡ್ಜ್ ಖರೀದಿಸಬೇಕು ಎಂದು ಪದೇಪದೇ ಹೇಳುತ್ತಿದ್ದರು. ಇದನ್ನು ತಿಳಿದ ರಾಮ್, ತನ್ನ ತಾಯಿಗೆ ಫ್ರಿಡ್ಜ್ ನೀಡಲು ನಿರ್ಧರಿಸಿದ್ದನು. ಇದೇ ವೇಳೆ ಪತ್ರಿಕೆಯಲ್ಲಿ ಜಾಹೀರಾತು ನೋಡಿದ ರಾಮ್, ಶೋರೂಮಿಗೆ ಕರೆ ಮಾಡಿ ನನ್ನ ತಾಯಿಯ ಹುಟ್ಟುಹಬ್ಬಕ್ಕೆ ಫ್ರಿಡ್ಜ್ ನೀಡಬೇಕೆಂದು ನಿರ್ಧರಿಸಿದ್ದೇನೆ. ಆದರೆ ನಾನು ಹಣವನ್ನು ನಾಣ್ಯದ ರೂಪದಲ್ಲಿ ನೀಡುತ್ತೇನೆ ಎಂದು ಹೇಳಿದ್ದಾನೆ. ಶೋರೂಂ ಮಾಲೀಕ ಹರಿಕಿಶಿನ್ ಈ ಬಗ್ಗೆ ಚರ್ಚಿಸಿ ನಂತರ ಒಪ್ಪಿಕೊಂಡಿದ್ದಾರೆ.

    ಮಾಲೀಕ ಒಪ್ಪಿಗೆ ನೀಡುತ್ತಿದ್ದಂತೆ ರಾಮ್ 35 ಕೆಜಿಯಿದ್ದ ನಾಣ್ಯದ ಬ್ಯಾಗನ್ನು ಶೋರೂಮಿಗೆ ತೆಗೆದುಕೊಂಡು ಹೋಗಿದ್ದಾನೆ. ಬ್ಯಾಗಿನಲ್ಲಿ ಒಂದು, ಎರಡು, ಐದು ಹಾಗೂ ಹತ್ತು ರೂ. ನಾಣ್ಯಗಳಿದ್ದು, ಇದನ್ನು ಎಣಿಸಲು 4 ಗಂಟೆ ಬೇಕಾಯಿತು. ಶಿವಶಕ್ತಿನಗರದ ಎಲೆಕ್ಟ್ರಾನಿಕ್ಸ್ ಶೋರೂಮಿನ ಮಾಲೀಕ ಹಣವನ್ನು ಎಣಿಸಿದಾಗ ಅದರಲ್ಲಿ 2 ಸಾವಿರ ರೂ. ಕಡಿಮೆ ಇತ್ತು. ಬಳಿಕ ರಾಮ್ ಭಾವನೆಯನ್ನು ತಿಳಿದ ಮಾಲೀಕ 2 ಸಾವಿರ ರೂ.ಯ ಡಿಸ್ಕೌಂಟ್ ಹಾಗೂ ಒಂದು ಉಡುಗೊರೆಯನ್ನು ನೀಡಿದ್ದಾರೆ.

    ಬಾಲ್ಯದಿಂದಲೂ ರಾಮ್ ಸಿಂಗ್‍ಗೆ ಹುಂಡಿಯಲ್ಲಿ ಹಣ ಸಂಗ್ರಹಿಸುವ ಆಸಕ್ತಿ ಇತ್ತು. ಹುಂಡಿ ತುಂಬುತ್ತಿದ್ದಂತೆ ರಾಮ್ ಅದರಲ್ಲಿದ್ದ ನೋಟು ತೆಗೆದು ತನ್ನ ತಾಯಿ ಪಪ್ಪುದೇವಿಗೆ ನೀಡುತ್ತಿದ್ದನು ಹಾಗೂ ನಾಣ್ಯಗಳನ್ನು ತನ್ನ ಬಳಿಯೇ ಇಟ್ಟುಕೊಳ್ಳುತ್ತಿದ್ದನು. ರಾಮ್ 12 ವರ್ಷದಿಂದ ಈ ರೀತಿ ಮಾಡುತ್ತಿರುವುದರಿಂದ 13,500 ಹಣ ಸಂಗ್ರಹಿಸಿದ್ದಾನೆ. ರಾಮ್ ತನಗೆ ಫ್ರಿಡ್ಜ್ ಉಡುಗೊರೆಯನ್ನಾಗಿ ನೀಡಿದ್ದನ್ನು ನೋಡಿದ ತಾಯಿ ಖುಷಿ ಆಗಿದ್ದಾರೆ. ಅಲ್ಲದೆ ದೇವರು ಎಲ್ಲರಿಗೂ ಇಂತಹ ಮಗ ನೀಡಲಿ ಎಂದು ಹೇಳಿದ್ದಾರೆ.

  • 75ನೇ ವಯಸ್ಸಿಗೆ ಹೆಣ್ಣು ಮಗುವಿಗೆ ಜನ್ಮಕೊಟ್ಟ ಮಹಾತಾಯಿ

    75ನೇ ವಯಸ್ಸಿಗೆ ಹೆಣ್ಣು ಮಗುವಿಗೆ ಜನ್ಮಕೊಟ್ಟ ಮಹಾತಾಯಿ

    ಜೈಪುರ: ರಾಜಸ್ಥಾನ ಮೂಲದ 75 ವರ್ಷದ ಮಹಿಳೆಯೊಬ್ಬರು ಐವಿಎಫ್ ವಿಧಾನದ ಮೂಲಕ ಶನಿವಾರ ತಡರಾತ್ರಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿಯನ್ನು ಕೋಟಾದ ಕಿಂಕರ್ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ಮಗುವಿನ ತೂಕ ಕೇವಲ 600 ಗ್ರಾಂ ಇದ್ದು, ನವಜಾತ ಶಿಶುವನ್ನು ಮತ್ತೊಂದು ಆಸ್ಪತ್ರೆಯ ನವಜಾತ ತೀವ್ರ ನಿಗಾ ಘಟಕಕ್ಕೆ ಕರೆದೊಯ್ಯಲಾಗಿದೆ, ಶಿಶುವೈದ್ಯರ ತಂಡ ಹೆಣ್ಣು ಮಗುವನ್ನು ನೋಡಿಕೊಳ್ಳುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ತಾಯಿಯ ವಯಸ್ಸಿನಿಂದಾಗಿ, ಅವರು ಗರ್ಭಧರಿಸಿದ 6.5 ತಿಂಗಳ ನಂತರ ಸಿಸೇರಿಯನ್ ಮಾಡಿದ್ದಕ್ಕೆ ಮಗು ಅಕಾಲಿಕವಾಗಿ ಜನ್ಮ ಪಡೆದಿದೆ.

    ಒಂದೆಡೆ ತಾಯಿ ದೈಹಿಕವಾಗಿ ದುರ್ಬಲರಾಗಿದ್ದು, ಇನ್ನೊಂದೆಡೆ ಅವರಿಗೆ ಕೇವಲ ಒಂದು ಶ್ವಾಸಕೋಶವಿತ್ತು ಹೀಗಾಗಿ ಈ ವಯಸ್ಸಿನಲ್ಲಿ ಅವರು ಮಗುವನ್ನು ಹೆರುವುದು ಅವರಿಗೆ ಮಾತ್ರವಲ್ಲ ವೈದ್ಯ ತಂಡಕ್ಕೂ ಸವಾಲಾಗಿತ್ತು ಎಂದು ಖಾಸಗಿ ಆಸ್ಪತ್ರೆಯ ವೈದ್ಯರಾದ ಅಭಿಲಾಶಾ ಕಿಂಕರ್ ತಿಳಿಸಿದರು.

    ಮಹಿಳೆ ಗ್ರಾಮೀಣ ಕೃಷಿ ಕುಟುಂಬಕ್ಕೆ ಸೇರಿದವರಾಗಿದ್ದು, ಮಕ್ಕಳಿಲ್ಲದ ಕಾರಣ ಮಹಿಳೆ ಈ ಮೊದಲು ಮಗುವನ್ನು ದತ್ತು ಪಡೆದಿದ್ದಾರೆ. ಆದರೆ ಅವರಿಗೆ ತಮ್ಮ ಸಂತಾನ ಪಡೆಯಬೇಕು ಎಂಬ ಆಸೆ ಇತ್ತು. ಹೀಗಾಗಿ ವೈದ್ಯರನ್ನು ಸಂಪರ್ಕಿಸಿ ತಾವು ತಾಯಿ ಆಗುವ ಸಾಧ್ಯತೆಗಳ ಬಗ್ಗೆ ತಪಾಸಣೆ ನಡೆಸಿದ್ದರು. ಬಳಿಕ ಐವಿಎಫ್ ವಿಧಾನವನ್ನು ಪ್ರಯತ್ನಿಸಿ ಮಗು ಪಡೆಯಲು ಮುಂದಾದರು. ಇದು ನಮ್ಮೆಲ್ಲರಿಗೂ ಒಂದು ರೀತಿಯ ಸವಾಲಾಗಿತ್ತು ಎಂದು ವೈದ್ಯರು ಹೇಳಿದರು.

    ಈ ಹಿಂದೆ ಆಂಧ್ರಪ್ರದೇಶದ ಗುಂಟೂರು ನಗರದಲ್ಲಿ 74 ವರ್ಷದ ವೃದ್ಧೆಯೊಬ್ಬರು ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಇಳಿ ವಯಸ್ಸಿನಲ್ಲಿ 2 ಮಕ್ಕಳಿಗೆ ಜನ್ಮನೀಡಿ ತಾವು ತಾಯಿಯಾಗುವ ಬಯಕೆಯನ್ನು ತೀರಿಸಿಕೊಂಡಿದ್ದರು.

    ಹೌದು, ಈ ವಯಸ್ಸಿನಲ್ಲೂ ಮಗುವಿಗೆ ಜನ್ಮ ನೀಡೋದಾ ಎಂದು ಅಚ್ಚರಿಯಾಗಬಹುದು. ಆದರೂ ಇದು ಸತ್ಯ. ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ನೆಲ್ಲಪಾರ್ತಿಪಾಡು ಗ್ರಾಮದ ನಿವಾಸಿ ಎರ್ರಮಟ್ಟಿ ಮಂಗಯಮ್ಮ(74) ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಎರ್ರಾಮಟಿ ರಾಜ ರಾವ್(80) ಹಾಗೂ ಮಂಗಯಮ್ಮ ಅವರು ಮಾರ್ಚ್ 22, 1962 ರಂದು ಮದುವೆಯಾಗಿದ್ದರು. ಆದರೆ ರಾಜ ರಾವ್ ಮತ್ತು ಮಂಗಯಮ್ಮ ದಂಪತಿಗೆ ಮಕ್ಕಳಿರಲಿಲ್ಲ. ಬಹುವರ್ಷದಿಂದ ಮಕ್ಕಳನ್ನು ಪಡೆಯುವ ಆಸೆ ಹೊತ್ತಿದ್ದ ದಂಪತಿಯ ಕನಸು ಈಗ ನನಸಾಗಿದೆ. ಈ ಮೂಲಕ ಮಂಗಯಮ್ಮ ಹೊಸ ದಾಖಲೆ ಬರೆದಿದ್ದರು.

  • ಗರ್ಬಾ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವು

    ಗರ್ಬಾ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವು

    ಜೈಪುರ: ಗರ್ಬಾ ಡ್ಯಾನ್ಸ್(ಗುಜರಾತಿ ಶೈಲಿಯ ನೃತ್ಯ) ಮಾಡುತ್ತಿದ್ದ ವೇಳೆ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟ ಘಟನೆ ರಾಜಸ್ಥಾನದ ಮೌಂಟ್ ಅಬುದಲ್ಲಿ ನಡೆದಿದೆ.

    ಜಗದೀಶ್ ಮೃತಪಟ್ಟ ವ್ಯಕ್ತಿ. ಜಗದೀಶ್ ಮೂಲತಃ ಗುಜರಾತ್‍ನ ಸುರತ್ ನಿವಾಸಿಯಾಗಿದ್ದು, ತಮ್ಮ ಪತ್ನಿ ಹಾಗೂ ಐವರು ದಂಪತಿ ಜೊತೆ ವೀಕೆಂಡ್ ಕಳೆಯಲು ರಾಜಸ್ಥಾನದ ಮೌಂಟ್ ಅಬುಗೆ ತೆರಳಿದ್ದರು. ಇಲ್ಲಿ ಅವರು ಗರ್ಬಾ ಮಾಡುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.

    ಈ ವೀಕೆಂಡ್ ಕಳೆಯಲು ನಾವು ಸುರತ್‍ನಿಂದ ಮೌಂಟ್ ಅಬುಗೆ ಬಂದಿದ್ದೇವು. ಭಾನುವಾರ ನಾವು ಹೊರಗೆ ಸುತ್ತಾಡಿ ನಮ್ಮ ಹೋಟೆಲಿಗೆ ಹಿಂತಿರುಗಿದ್ದೇವು. ಹೋಟೆಲಿಗೆ ಹಿಂತಿರುಗಿದ್ದಾಗ ಅಲ್ಲಿ ಗರ್ಬಾ ನೃತ್ಯವನ್ನು ಆಯೋಜಿಸಲಾಗಿತ್ತು. ಆಗ ನಾವು ಕೂಡ ಗರ್ಬಾ ಡ್ಯಾನ್ಸ್ ಮಾಡಲು ಶುರು ಮಾಡಿದ್ದೇವೆ ಎಂದು ಜಗದೀಶ್ ಸ್ನೇಹಿತರೊಬ್ಬರು ತಿಳಿಸಿದ್ದಾರೆ.

    ಇದೇ ವೇಳೆ ಗರ್ಬಾ ಡ್ಯಾನ್ಸ್ ಮಾಡುತ್ತಿದ್ದ ಜಗದೀಶ್ ಏಕಾಏಕಿ ಕುಸಿದು ಬಿದ್ದರು. ತಕ್ಷಣ ನಾವು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದೇವು. ಆದರೆ ಅಷ್ಟರಲ್ಲಿ ಜಗದೀಶ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದರು ಎಂದು ಜಗದೀಶ್ ಸ್ನೇಹಿತ ಹೇಳಿದ್ದಾರೆ.

    ಹೊರಗೆ ಸುತ್ತಾಡಿ ಬಂದ ನಂತರ ಇಡೀ ಕುಟುಂಬ ಹೋಟೆಲಿನಲ್ಲಿ ಗರ್ಬಾ ನೃತ್ಯ ಮಾಡುವ ಮೂಲಕ ಎಂಜಾಯ್ ಮಾಡಿದ್ದಾರೆ. ಸದ್ಯ ಜಗದೀಶ್ ಕುಸಿದು ಬಿದ್ದ ದೃಶ್ಯವನ್ನು ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

  • ವಿಧವೆ ತಾಯಿಯ, ಪ್ರಿಯಕರನ ತಲೆ ಕೂದಲು ಕತ್ತರಿಸಿದ ಮಕ್ಕಳು

    ವಿಧವೆ ತಾಯಿಯ, ಪ್ರಿಯಕರನ ತಲೆ ಕೂದಲು ಕತ್ತರಿಸಿದ ಮಕ್ಕಳು

    -ಹಲ್ಲೆ ಮಾಡಿ ಮೂತ್ರ ಕುಡಿಸಲು ಯತ್ನ

    ಜೈಪುರ: ಮಕ್ಕಳೇ ತನ್ನ ವಿಧವೆ ತಾಯಿ ಹಾಗೂ ಆಕೆಯ ಪ್ರಿಯಕರನ ತಲೆ ಕೂದಲು ಕತ್ತರಿಸಿ ಹಲ್ಲೆ ಮಾಡಿದ ಘಟನೆ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ನಡೆದಿದೆ.

    ಮಂಗಳವಾರ 45 ವರ್ಷದ ಮಹಿಳೆಯ ಇಬ್ಬರು ಮಕ್ಕಳು ಆಕೆಯ ಪ್ರಿಯಕರನಿಗೆ ಮೂತ್ರ ಕುಡಿಸಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನಾವು ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಹುಡುಕಲು ಶುರು ಮಾಡಿದ್ದೇವು. ಮಂಗಳವಾರ ಮಹಿಳೆ ನಿಂಬಿ ಜೋಧ ಗ್ರಾಮದಲ್ಲಿ ಪತ್ತೆಯಾಗಿದ್ದಳು. ಮಹಿಳೆಗೆ 35 ವರ್ಷದ ಅವಿವಾಹಿತ ವ್ಯಕ್ತಿ ಜೊತೆ ಪ್ರೇಮವಿತ್ತು. ವ್ಯಕ್ತಿ ಮಹಿಳೆ ದೂರದ ಸಂಬಂಧಿಯಾಗಿದ್ದು, 10 ದಿನದ ಮೊದಲು ಇಬ್ಬರು ಮನೆಯಿಂದ ಓಡಿ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಮಹಿಳೆಯ ಮಕ್ಕಳು ಹಾಗೂ ಕೆಲವು ಸಂಬಂಧಿಕರು ನಾಲ್ಕು ದಿನಗಳ ಹಿಂದೆ ನಿಂಬಿ ಜೋಧ ಗ್ರಾಮದಲ್ಲಿ ಆಕೆಯನ್ನು ಹುಡುಕಿ ಮೆನೆಗೆ ಕರೆದುಕೊಂಡು ಬಂದಿದ್ದರು. ಮನೆಗೆ ಕರೆದುಕೊಂಡು ಬಂದ ಬಳಿಕ ಆಕೆಯ ತಲೆ ಕೂದಲನ್ನು ಕತ್ತರಿಸಿ, ಹಲ್ಲೆ ಮಾಡಿದ್ದಾರೆ. ಅಲ್ಲದೆ ಆ ವ್ಯಕ್ತಿಗೆ ಮೂತ್ರ ಕುಡಿಸಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ನಿತೇಶ್ ಆರ್ಯ ತಿಳಿಸಿದ್ದಾರೆ.

    ಸದ್ಯ ಮಹಿಳೆಯ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆಕೆಯ ಮಕ್ಕಳನ್ನು ಬಂಧಿಸಿದ್ದಾರೆ.

  • ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಅರ್ಧ ಕಿ.ಮೀ ನಗ್ನಳಾಗಿ ಓಡಿದ ಬಾಲಕಿ

    ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಅರ್ಧ ಕಿ.ಮೀ ನಗ್ನಳಾಗಿ ಓಡಿದ ಬಾಲಕಿ

    ಜೈಪುರ: ಮೂವರು ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಬಾಲಕಿ ಅರ್ಧ ಕಿ.ಮೀವರೆಗೂ ನಗ್ನಳಾಗಿ ಓಡಿದ ಘಟನೆ ರಾಜಸ್ಥಾನದ ಬಿಲ್‍ವಾರಾದಲ್ಲಿ ನಡೆದಿದೆ.

    ಬಾಲಕಿ ತನ್ನ ಸಹೋದರ ಸಂಬಂಧಿ ಹಾಗೂ ಸಹೋದರಿ ಜೊತೆ ಜಾತ್ರೆಯಿಂದ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮೂವರು ಯುವಕರು ಅವರನ್ನು ಅಡ್ಡ ಹಾಕಿದ್ದಾರೆ. ಯುವಕರನ್ನು ನೋಡುತ್ತಿದ್ದಂತೆ ಬಾಲಕಿಯ ಜೊತೆಯಲ್ಲಿ ಇದ್ದವರು ಓಡಿ ಹೋಗಿದ್ದಾರೆ. ಆದರೆ ಯುವಕರು ಬಾಲಕಿಯನ್ನು ಅಪಹರಿಸಿ ಮರುಭೂಮಿಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಿದ್ದಾರೆ. ಬಳಿಕ ಆಕೆಯನ್ನು ಅತ್ಯಾಚಾರ ಮಾಡಿದ್ದಾರೆ.

    ಬಾಲಕಿಯನ್ನು ಅಪಹರಿಸುತ್ತಿದ್ದಂತೆ ಆಕೆಯ ಸಹೋದರ ಹತ್ತಿರದಲ್ಲಿದ್ದ ಮಾರ್ಕೆಟ್‍ಗೆ ಓಡಿ ಹೋಗಿದ್ದಾನೆ. ಬಳಿಕ ಅಲ್ಲಿದ ಅಂಗಡಿ ಮಾಲೀಕನಿಗೆ ನಡೆದ ಘಟನೆಯನ್ನು ವಿವರಿಸಿ ಸಹಾಯ ಮಾಡುವಂತೆ ಬೇಡಿಕೊಂಡಿದ್ದಾನೆ. ಯುವಕನ ಮಾತು ಕೇಳಿದ ಅಂಗಡಿ ಮಾಲೀಕ ಸ್ಥಳಕ್ಕೆ ತಲುಪಿದ್ದಾಗ ಮೂವರು ಅತ್ಯಾಚಾರಿಗಳು ಬಾಲಕಿಯನ್ನು ಥಳಿಸುತ್ತಿದ್ದರು. ಬಳಿಕ ಆರೋಪಿಗಳು ಅಂಗಡಿ ಮಾಲೀಕನನ್ನು ನೋಡುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದಾರೆ.

    ಈ ಘಟನೆಯಿಂದ ಆಘಾತಗೊಂಡಿದ್ದ ಬಾಲಕಿ ನನ್ನನ್ನು ನೋಡಿ ಹೆದರಿಕೊಂಡು ನಗ್ನಳಾಗಿ ಓಡಲು ಶುರು ಮಾಡಿದ್ದಾಳೆ. ಬಾಲಕಿ ಅರ್ಧ ಕಿ.ಮೀವರೆಗೂ ನಗ್ನಳಾಗಿ ಓಡಿ ಹೋಗಿದ್ದಾಳೆ. ಬಳಿಕ ಸ್ವಲ್ಪ ದೂರ ಹೋದ ಬಳಿಕ ನಾನು ನೀಡಿದ್ದ ಉಡುಪನ್ನು ತೆಗೆದುಕೊಂಡಳು ಎಂದು ಅಂಗಡಿ ಮಾಲೀಕ ಪೊಲೀಸರ ಬಳಿ ತಿಳಿಸಿದ್ದಾರೆ.

    ಆರೋಪಿಗಳ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ಅಪರಾಧ ಮತ್ತು ಪರಿಶಿಷ್ಟ ಜಾತಿ ವಿರುದ್ಧದ ದೌರ್ಜನ್ಯದ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಪೊಲೀಸರು ಮೂವರು ಅತ್ಯಾಚಾರಿಗಳನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು ಅಂಗಡಿ ಮಾಲೀಕ, ಬಾಲಕಿಯ ಸಹೋದರ ಹಾಗೂ ಸಹೋದರಿಯ ಹೇಳಿಕೆಯನ್ನು ಪಡೆದಿದ್ದಾರೆ.

  • ನರಿಬುದ್ಧಿ ಬಿಡದ ಪಾಕಿಸ್ತಾನ – ಪಾಕ್ ಗೂಢಾಚಾರಿ ಅರೆಸ್ಟ್

    ನರಿಬುದ್ಧಿ ಬಿಡದ ಪಾಕಿಸ್ತಾನ – ಪಾಕ್ ಗೂಢಾಚಾರಿ ಅರೆಸ್ಟ್

    ಜೈಪುರ: ರಾಜಸ್ಥಾನದ ಬಾರ್ಮೆರ್ ಪ್ರದೇಶದಲ್ಲಿ ಪಾಕಿಸ್ತಾನದ ಗೂಢಾಚಾರಿಯನ್ನು ರಕ್ಷಣಾ ಪಡೆಗಳು ಬಂಧಿಸಲಾಗಿದೆ.

    ರಾಜಸ್ಥಾನದ ಬಾರ್ಮೆರ್ ಗಡಿ ಪ್ರದೇಶವನ್ನು ದಾಟಿ ಬರುತ್ತಿದ್ದ ವೇಳೆ ಬೇಹುಗಾರಿಕಾ ವ್ಯಕ್ತಿಯನ್ನು ಬಂಧಿಸಲಾಗಿದೆ. ಪಾಕಿಸ್ತಾನ ಸೈನ್ಯಕ್ಕೆ ಸಹಾಯ ಮಾಡುವ ಉದ್ದೇಶದಿಂದ ಭಾರತೀಯ ಸೇನೆ ಹಾಗೂ ಗಡಿ ಭದ್ರತಾ ಪಡೆ (ಬಿಎಸ್‍ಎಫ್)ಯ ಮಾಹಿತಿಯನ್ನು ಆರೋಪಿ ಸಂಗ್ರಹಿಸುತ್ತಿದ್ದ ಎಂಬ ಮಾಹಿತಿ ಲಭಿಸಿದೆ.

    ಮಾಧ್ಯಮ ವರದಿಯ ಅನ್ವಯ, ಪಾಕಿಸ್ತಾನದಿಂದ ಬಂದ ವ್ಯಕ್ತಿಯನ್ನು ಕಿಶೋರ್ ಎಂದು ಗುರುತಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಜೈಪುರಕ್ಕೆ ಕಳುಹಿಸಿಕೊಡಲಾಗಿದೆ. ಗಡಿಯಲ್ಲಿ ಅಳವಡಿಸಿದ್ದ ಬೇಲಿಯ ಕೆಳಗೆ ತೆವಳಿಕೊಂಡು ಗಡಿದಾಟಿದ್ದ ಎನ್ನಲಾಗಿದ್ದು, ಸ್ಥಳೀಯ ಗ್ರಾಮಸ್ಥರು ಗಮನಿಸಿ ರಕ್ಷಣಾ ಪಡೆಗೆ ಮಾಹಿತಿ ನೀಡಿದ್ದಾರೆ.

    ಕಿಶೋರ್ ಬಾಯ್ಬಿಟ್ಟಿರುವ ಮಾಹಿತಿಯ ಅನ್ವಯ, ಆತನನ್ನು ಬಿಎಸ್‍ಎಫ್ ಹಾಗೂ ಭಾರತದ ಸೈನ್ಯದ ಮಾಹಿತಿಯನ್ನು ಸಂಗ್ರಹಿಸಿ ತರುವಂತೆ ಗೂಢಾಚಾರಿಯಂತೆ ಕಳುಹಿಸಲಾಗಿತ್ತು ಎಂದು ತಿಳಿಸಿದ್ದಾನೆ. ಮೊದಲ ಆತನ ಹಳ್ಳಿಯಿಂದ ಭಾರತ ಗಡಿ ಪ್ರದೇಶದ ಬಳಿಗೆ ರೈಲಿನ ಮೂಲಕ ಕರೆ ತಂದಿದ್ದು, ಆ ಬಳಿಕ ಪಾಕ್ ಸೇನೆ ಆತನಿಗೆ ಗಡಿ ದಾಟಲು ಸಹಾಯ ಮಾಡಿದೆ ತಿಳಿಸಿದ್ದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಗಡಿ ದಾಟುವ ಸಂದರ್ಭದಲ್ಲಿ ಹಸಿರು ಬಣ್ಣದ ಬಟ್ಟೆ ಧರಿಸಿದ್ದ ಕಾರಣ ಆತ ರಕ್ಷಣಾ ಪಡೆಯ ಕಣ್ಣಿಗೆ ಕಾಣದಂತೆ ಬಂದಿರುವ ಕುರಿತು ಮಾಹಿತಿ ಲಭಿಸಿದೆ. ಅಲ್ಲದೇ ಪಾಕಿಸ್ತಾನ ಸೇನೆ ಹಾಗೂ ಐಎಸ್‍ಐ ಸಹಾಯದಿಂದ ಉಗ್ರರು ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಬಂಧಿತ ತಿಳಿಸಿದ್ದಾನೆ. ಈಗಾಗಲೇ ಭಾರತದ ಜಮ್ಮು ಕಾಶ್ಮೀರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಭಾರತೀಯ ಗೂಢಾಚಾರ ಇಲಾಖೆ ಎಚ್ಚರಿಕೆ ನೀಡಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಕೇಂದ್ರ ಈಗಾಗಲೇ ಸೂಚನೆ ನೀಡಿದೆ.

  • ಜೈಲಿನ ಆವರಣದಲ್ಲೇ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರ

    ಜೈಲಿನ ಆವರಣದಲ್ಲೇ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರ

    ಜೈಪುರ: ತಪ್ಪು ಮಾಡುವ ಅಪರಾಧಿಗಳಿಗೆ ಶಿಕ್ಷೆ ನೀಡಿ, ತಪ್ಪು ತಿದ್ದುವ ಜೈಲಿನಲ್ಲೇ ತಪ್ಪು ನಡೆದಿದೆ. ಜೈಲಿನ ಭದ್ರತಾ ಸಿಬ್ಬಂದಿಯೇ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.

    ರಾಜಸ್ಥಾನದ ಬನ್ಸ್ವಾರ ಜೈಲಿನ ಅವರಣದಲ್ಲೇ ಈ ಘಟನೆ ನಡೆದಿದೆ. ಸಾಮಾನ್ಯವಾಗಿ ಕೈದಿಗಳನ್ನು ಸುಧಾರಿಸಲು ಜೈಲಿನಲ್ಲಿ ಇರಿಸಲಾಗುತ್ತದೆ. ಆದರೆ ತಪ್ಪು ತಿದ್ದುವ ಜಾಗದಲ್ಲಿಯೇ ತಪ್ಪು ನಡೆದಿದೆ. ಜೈಲಿನಲ್ಲೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಸೆಪ್ಟೆಂಬರ್ 8ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬನ್ಸ್ವಾರ ಜೈಲಿನ ಭದ್ರತಾ ಸಿಬ್ಬಂದಿ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಅಲ್ಲಿನ ಮಹಿಳಾ ಸಿಬ್ಬಂದಿಯೊಬ್ಬರು ದೂರು ದಾಖಲಿಸಿದ್ದಾರೆ.

    ಮಂಗಳವಾರ ಎಸ್‌ಪಿ ಭೇಟಿ ಮಾಡಿದ ಸಂತ್ರಸ್ತೆ, ಸಹೋದ್ಯೋಗಿ ಮೇಲೆ ದೂರು ನೀಡಿದ್ದಾರೆ. ಘಟನೆ ನಡೆದ ದಿನ ಕೆಲಸ ಮುಗಿಸಿ ಜೈಲಿನ ಆವರಣದಲ್ಲಿರುವ ಕ್ವಾರ್ಟರ್ಸ್ ಗೆ ಸಂತ್ರಸ್ತೆ ತೆರಳಿದ್ದರು. ಈ ವೇಳೆ ಸಂತ್ರಸ್ತೆಯ ಮನೆಗೆ ಆರೋಪಿ ಹಿಂದಿನ ಬಾಗಿಲಿನಿಂದ ನುಗ್ಗಿ, ಆಕೆಗೆ ಚಾಕು ತೋರಿಸಿ ಅತ್ಯಾಚಾರ ಮಾಡಿದ್ದಾನೆ. ಅಲ್ಲದೆ ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೆ ಕೊಲೆ ಮಾಡುತ್ತೇನೆ ಎಂದು ಹೆದರಿಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಈ ಸುದ್ದಿ ಕೇಳಿದ ಜೈಲಿನ ಕೆಲ ಸಿಬ್ಬಂದಿ ಇದು ಸತ್ಯಕ್ಕೆ ದೂರವಾದದ್ದು, ಮಹಿಳೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. ಆರೋಪಿ ಹಾಗೂ ಸಂತ್ರಸ್ತೆ ಇಬ್ಬರ ಮಧ್ಯೆ ಅನೇಕ ದಿನಗಳಿಂದ ಪ್ರೇಮ ಸಂಬಂಧವಿತ್ತು. ಇಬ್ಬರು ಒಟ್ಟಿಗೆ ಓಡಾಡುತ್ತಿದ್ದದನ್ನು ಹಲವು ಬಾರಿ ನೋಡಿದ್ದೇವೆ. ತನ್ನ ಮಾನ ಉಳಿಸಿಕೊಳ್ಳಲು ಮಹಿಳಾ ಸಿಬ್ಬಂದಿ ಅತ್ಯಾಚಾರದ ಆರೋಪ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.