Tag: Jaipur

  • ಹೋಂ ವರ್ಕ್ ಮಾಡದ ಮಗನ ಕೈ,ಕಾಲು ಕಟ್ಟಿ ಫ್ಯಾನಿಗೆ ನೇತು ಹಾಕಿದ ತಂದೆ

    ಹೋಂ ವರ್ಕ್ ಮಾಡದ ಮಗನ ಕೈ,ಕಾಲು ಕಟ್ಟಿ ಫ್ಯಾನಿಗೆ ನೇತು ಹಾಕಿದ ತಂದೆ

    ಜೈಪುರ್: ಹೋಂ ವರ್ಕ್ ಮಾಡದ ಮಗನನ್ನು ತಂದೆ ಕೈ, ಕಾಲು ಕಟ್ಟಿ ಫ್ಯಾನಿಗೆ ತಲೆಕೆಳಗಾಗಿ ನೇತು ಹಾಕಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ.

    8 ವರ್ಷದ ಬಾಲಕ ಶಾಲೆಯಿಂದ ಮನೆಗೆ ಬಂದು ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಆತನನ್ನು ತಂದೆ ತಲೆಕೆಳಗಾಗಿ ನೇತು ಹಾಕಿದ್ದಾನೆ. ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಉದಯ್‍ಪುರದ ಬುಂದಿ ಜಿಲ್ಲೆಯ ದಾಬಿಯಲ್ಲಿ ಈ ಘಟನೆ ನಡೆದಿದೆ.

    ಮಗ ಹೋಂ ವರ್ಕ್ ಮಾಡಿರಲಿಲ್ಲ. ಈ ವಿಚಾರವಾಗಿ ಕೋಪಗೊಂಡ ತಂದೆ ಮಗನನ್ನು ಕಟ್ಟಿ, ತಲೆಕೆಳಗಾಗಿ ನೇತು ಹಾಕಿದಲ್ಲದೆ ಆತನಿಗೆ ಹೊಡೆಯಲು ಹೋಗಿದ್ದ. ಈ ದೃಶ್ಯವನ್ನು ವೀಡಿಯೋ ಮಾಡಿಕೊಂಡ ಆ ಬಾಲಕನ ತಾಯಿ ಬಳಿಕ ಗಂಡನನ್ನು ತಡೆದಿದ್ದಾಳೆ. ಬೇಕಾದರೆ ನನ್ನನ್ನು ಇಲ್ಲೇ ಸಾಯಿಸಿಬಿಡಿ, ಆದರೆ ನನ್ನ ಮಗನನ್ನು ಹೀಗೆಲ್ಲ ನೇತು ಹಾಕಬೇಡ ಎಂದು ಆ ಬಾಲಕ ಅಪ್ಪನ ಬಳಿ ಜೋರಾಗಿ ಅಳುತ್ತಾ ಬೇಡಿಕೊಳ್ಳುತ್ತಿರುವುದು ವೀಡಿಯೋದಲ್ಲಿ ರೆಕಾರ್ಡ್ ಆಗಿದೆ.

    POLICE JEEP

    ಬಾಲಕನ ತಂದೆ ಗಣಿಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದು, ಪದೇ ಪದೆ ಮಗನನ್ನು ಹೊಡೆದು, ಹಿಂಸೆ ನೀಡುತ್ತಿದ್ದ. ಆದರೆ ಈ ಘಟನೆಯ ಬಗ್ಗೆ ಮನೆಯವರಾರೂ ಆತನ ವಿರುದ್ಧ ದೂರು ನೀಡಿಲ್ಲ. ವೀಡಿಯೋ ಆಧಾರದಲ್ಲಿ  ಪೊಲೀಸರೇ ಕೇಸ್ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಯಾವುದೇ ಭೂಕಂಪನ ಆಗಿಲ್ಲ – ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಸ್ಪಷ್ಟನೆ

    ಆರೋಪಿಯ ಹಿಂಸಾತ್ಮಕ ಸ್ವಭಾವದಿಂದಾಗಿ ಕುಟುಂಬದವರು ದೂರು ದಾಖಲಿಸಲು ಹೆದರುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಪ್ರಕರಣವನ್ನು ಗಮನಕ್ಕೆ ತಂದಿದ್ದು, ಕ್ರಮ ಕೈಗೊಂಡು 3 ದಿನಗಳಲ್ಲಿ ವರದಿ ಸಲ್ಲಿಸುವಂತೆ ಬಂಡಿ ಎಸ್‍ಪಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಐಪಿಎಲ್‍ನಲ್ಲಿ ಧೋನಿ CSK ಪರ ಆಡುವುದು ಕನ್ಫರ್ಮ್ – ರೈನಾ ಡೌಟ್?

  • ಬಾಲಕನಿಗೆ ಲೈಂಗಿಕ ಕಿರುಕುಳ; ನ್ಯಾಯಾಧೀಶ ಅರೆಸ್ಟ್‌

    ಬಾಲಕನಿಗೆ ಲೈಂಗಿಕ ಕಿರುಕುಳ; ನ್ಯಾಯಾಧೀಶ ಅರೆಸ್ಟ್‌

    ಜೈಪುರ: ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಮಾನತುಗೊಂಡಿದ್ದ ನ್ಯಾಯಾಧೀಶರೊಬ್ಬರನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.

    ಜಿತೇಂದ್ರ ಸಿಂಗ್‌ ಬಂಧಿತ ಆರೋಪಿ. ಇವರನ್ನು ಜೈಪುರದಿಂದ ಭಾರತ್‌ಪುರಕ್ಕೆ ಕರೆತರಲಾಗಿದೆ. ಸಿಂಗ್‌ ಅವರು ಭ್ರಷ್ಟಾಚಾರ ವಿರೋಧಿ ಪ್ರಕರಣಗಳ ವಿಶೇಷ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಗರ್ಲ್‍ಫ್ರೆಂಡ್ ಜೊತೆ ವಧು ಪರಾರಿ- ಪತಿಗೆ ಹೃದಯಾಘಾತ

    ಆರೋಪಿ ಸಿಂಗ್‌ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನ್ಯಾಯಾಧೀಶರ ಸ್ಟೆನೋಗ್ರಾಫರ್‌ ಅಂಶುಲ್‌ ಸೋನಿ ಹಾಗೂ ನ್ಯಾಯಾಲಯದ ಸಿಬ್ಬಂದಿ ರಾಹುಲ್‌ ಕತಾರ ಮತ್ತಿಬ್ಬರು ಆರೋಪಿಗಳಾಗಿದ್ದಾರೆ.

    ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಸಮ್ಮುಖದಲ್ಲಿ ಸಿಂಗ್‌ ಅವರನ್ನು ವಿಚಾರಣೆಗೊಳಪಡಿಸಲಾಯಿತು. ನಂತರ ಸುಪ್ರೀಂ ಕೋರ್ಟ್‌ ಮಾರ್ಗಸೂಚಿಯನ್ವಯ ಅವರನ್ನು ಬಂಧಿಸಲಾಯಿತು ಎಂದು ಭಾರತ್‌ಪುರ ಎಸ್‌ಪಿ ದೇವೇಂದ್ರ ಕುಮಾರ್‌ ಬಿಶ್ನೋಯ್‌ ತಿಳಿಸಿದ್ದಾರೆ. ಇದನ್ನೂ ಓದಿ: ಲಂಡನ್‍ನಿಂದ ಬರೋ ಉಡುಗೊರೆಗೆ ಆಸೆಪಟ್ಟು 4.49 ಲಕ್ಷ ರೂ. ಕಳ್ಕೊಂಡ್ರು!

    14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಜಿತೇಂದ್ರ ಸಿಂಗ್‌ ವಿರುದ್ಧ ಆರೋಪ ಕೇಳಿಬಂದಿತ್ತು. ಎಫ್‌ಐಆರ್‌ ಆಧರಿಸಿ ರಾಜಸ್ಥಾನ್‌ ಕೋರ್ಟ್‌ ಆರೋಪಿಯನ್ನು ಅಮಾನತುಗೊಳಿಸಿತ್ತು. ಅಲ್ಲದೇ ಪ್ರಕರಣದ ತನಿಖೆಗೆ ತಂಡವೊಂದನ್ನು ನೇಮಿಸಿತ್ತು.

    POLICE JEEP

    ಸಿಂಗ್‌ ಹಾಗೂ ಇಬ್ಬರು ಇತರೆ ಆರೋಪಿಗಳು ತನ್ನ ಮಗನಿಗೆ ಕಳೆದ ಒಂದು ತಿಂಗಳಿಂದ ಮಾದಕ ವಸ್ತುಗಳನ್ನು ನೀಡಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವಿಚಾರವನ್ನು ಯಾರೊಂದಿಗಾದರೂ ಹೇಳಿದರೆ ನಿನ್ನ ಕುಟುಂಬವನ್ನು ಸುಳ್ಳು ಪ್ರಕರಣಗಳಡಿ ಸಿಲುಕಿಸಲಾಗುವುದು ಎಂದು ಹೆದರಿಸಿದ್ದಾರೆಂದು ಸಂತ್ರಸ್ತ ಬಾಲಕನ ತಾಯಿ ದೂರು ನೀಡಿದ್ದರು.

    ಜಿತೇಂದ್ರ ಸಿಂಗ್‌ ಕೂಡ ಬಾಲಕನ ಕುಟುಂಬಸ್ಥರ ವಿರುದ್ಧ ಬ್ಲ್ಯಾಕ್‌ಮೇಲ್‌ ಮತ್ತು ಸುಲಿಗೆ ಪ್ರಕರಣವನ್ನು ದಾಖಲಿಸಿದ್ದಾರೆ.

    ಸಿಂಗ್‌ ಅವರು ಭಾರತ್‌ಪುರ ಜಿಲ್ಲಾ ಕ್ಲಬ್‌ನಲ್ಲಿ ಟೆನಿಸ್‌ ಆಡುವಾಗ ಹುಡುಗನಿಗೆ ಪರಿಚಯವಾಗಿದ್ದರು ಎನ್ನಲಾಗಿದೆ.

  • ಕಾಲು ಗೆಜ್ಜೆಗಾಗಿ ಕಾಲನ್ನೇ ಕತ್ತರಿಸಿದ ಹಂತಕರು

    ಕಾಲು ಗೆಜ್ಜೆಗಾಗಿ ಕಾಲನ್ನೇ ಕತ್ತರಿಸಿದ ಹಂತಕರು

    ಜೈಪುರ್: ಬೆಳ್ಳಿ ಕಾಲು ಗೆಜ್ಜೆಗಾಗಿ ಮಹಿಳೆಯ ಕಾಲನ್ನು ಹಂತಕರು ಕತ್ತರಿಸಿ ಕಳ್ಳತನ ಮಾಡಿರುವ ಘಟನೆ ರಾಜಸ್ಥಾನದ ಜೈಪುರ ಜಿಲ್ಲೆಯ ಜಮ್ವಾ ರಾಮಗಢದಲ್ಲಿ ನಡೆದಿದೆ.

    ಗೀತಾ ದೇವಿ ಶರ್ಮಾ(55) ಮೃತ ಮಹಿಳೆಯಾಗಿದ್ದಾಳೆ. ದರೋಡೆಕೋರರು ಆಕೆಯ ಕಾಲಿನಲ್ಲಿದ್ದ ಬೆಳ್ಳಿಯ ಗೆಜ್ಜೆಗಳನ್ನು ತೆಗೆಯಲಾಗದೆ ಪಾದಗಳನ್ನೇ ಕತ್ತರಿಸಿದ್ದಾರೆ. ಕಳ್ಳರು ಮನೆಯಲ್ಲಿದ್ದ ಹಣ, ಚಿನ್ನಾಭರಣಗಳನ್ನು ದೋಚಿಕೊಂಡು ಓಡಿಹೋಗುವ ಮುನ್ನ ಮನೆಯ ಪಕ್ಕದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಕೊಂದು ಆಕೆಯ ಸರ, ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿದ್ದಾರೆ.

    ಮನೆಗೆ ನುಗ್ಗಿದ ದುಷ್ಕರ್ಮಿಗಳು ಮನೆಯಲ್ಲಿದ್ದ ಬೆಲೆ ಬಾಳುವ ವಸ್ತುಗಳು, ಹಣವನ್ನು ಬಾಚಿಕೊಂಡಿದ್ದಾರೆ. ನಂತರ ಶಬ್ದ ಕೇಳಿ ಮನೆಯತ್ತ ಬರುತ್ತಿದ್ದ ಆಕೆ ಮೇಲೆ ಹೊಲದಲ್ಲೇ ದಾಳಿ ಮಾಡಿದ ದರೋಡೆಕೋರರು ಆಕೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕಿತ್ತುಕೊಂಡಿದ್ದಾರೆ. ನಂತರ ಆಕೆಯನ್ನು ಕೊಲೆ ಮಾಡಿ ಓಡಿಹೋಗುವಾಗ ಕೆಳಗೆ ಬಿದ್ದಿದ್ದ ಆಕೆಯ ಕಾಲಿನಲ್ಲಿದ್ದ ಬೆಳ್ಳಿ ಗೆಜ್ಜೆ ಅವರ ಕಣ್ಣಿಗೆ ಬಿದ್ದಿದೆ. ಹೀಗಾಗಿ ಮಹಿಳೆಯ ಕಾಲು ಕತ್ತರಿಸಿ ಗೆಜ್ಜೆಯನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಾಧನೆ ಶೂನ್ಯ, ಅವಹೇಳನಕಾರಿ ಮಾತಾಡ್ತಿದ್ದಾರೆ: ಡಿಕೆಶಿ ಕಿಡಿ

    ಸಂತ್ರಸ್ತೆಯ ಕುಟುಂಬವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವನ್ನು ಕೋರಿದೆ. ಹಾಗೇ ರಾಜಸ್ಥಾನ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ಕೋರಿದೆ. ನನ್ನ ತಾಯಿ ಇಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಯಾರು ದಾಳಿ ಮಾಡಿದರು ಎಂದು ನಮಗೆ ತಿಳಿದಿಲ್ಲ. ತನಿಖೆಗಳ ಬಗ್ಗೆ ಪೊಲೀಸರು ನಮಗೆ ಇದುವರೆಗೂ ಯಾವುದೇ ಮಾಹಿತಿ ನೀಡಿಲ್ಲ.

  • ಲಸಿಕೆ ನೀಡಲು ಬಂದ ಸಿಬ್ಬಂದಿಗೆ ಹಾವು ತೋರಿಸಿ ಬೆದರಿಕೆ ಹಾಕಿದ ಮಹಿಳೆ

    ಲಸಿಕೆ ನೀಡಲು ಬಂದ ಸಿಬ್ಬಂದಿಗೆ ಹಾವು ತೋರಿಸಿ ಬೆದರಿಕೆ ಹಾಕಿದ ಮಹಿಳೆ

    ಜೈಪುರ್: ಹಳ್ಳಿಯೊಂದಕ್ಕೆ ಕೋವಿಡ್ 19 ಲಸಿಕೆ ಹಿಡಿದು ಬಂದ ಆರೋಗ್ಯ ಸಿಬ್ಬಂದಿಯನ್ನು ಹಿರಿಯ ಮಹಿಳೆಯೊಬ್ಬರು ಹಾವು ತೋರಿಸಿ ಹೆದರಿಸಿರುವ ಘಟನೆ ರಾಜಸ್ಥಾನದ ಅಜ್ಮೇರ್​​ನಲ್ಲಿ ನಡೆದಿದೆ.

    ಅಜ್ಮೇರ್ ಜಿಲ್ಲೆಯ ಪಿಸಂಗನ್‍ನ ನಾಗೇಲಾವ್ ಗ್ರಾಮಕ್ಕೆ ಆರೋಗ್ಯ ಸಿಬ್ಬಂದಿ ಮನೆಮನೆಗೆ ತೆರಳಿ ಲಸಿಕೆ ನೀಡುತ್ತಿದ್ದಾರೆ. ಅದರಂತೆ ಒಂದು ಮನೆಯ ಬಾಗಿಲಲ್ಲಿ ನಿಂತ ಅವರಿಗೆ ಅಕ್ಷರಶಃ ಶಾಕ್ ಕಾದಿತ್ತು. ಆ ಮನೆಯ ಮಹಿಳೆ ಕಮಲಾ ದೇವಿ ಕೈಯಲ್ಲೊಂದು ಚಿಕ್ಕ ಬುಟ್ಟಿ ಹಿಡಿದಿದ್ದರು. ಅದರಲ್ಲಿ ನಾಗರಹಾವು ಹೆಡೆಬಿಚ್ಚಿ ಕುಳಿತಿತ್ತು.  ಇದನ್ನೂ ಓದಿ: ಬೊಮ್ಮಾಯಿ ಆರ್‌ಎಸ್‍ಎಸ್‍ನವರು ಅಲ್ಲ: ಸಿದ್ದರಾಮಯ್ಯ

    ಕಮಲಾದೇವಿ ಕಲ್ಬೇಲಿಯಾ ಸಮುದಾಯಕ್ಕೆ ಸೇರಿದವರಾಗಿದ್ದು, ಹಾವು ಹಿಡಿಯುವುದು, ಅದನ್ನು ನಿಯಂತ್ರಿಸಿ, ಆಟ ಆಡಿಸುವುದು ಇವರ ಕಸುಬಾಗಿದೆ. ಆದರೆ ಆ ಹಾವನ್ನು ಲಸಿಕೆ ನೀಡಲು ಬಂದ ಆರೋಗ್ಯ ಕಾರ್ಯಕರ್ತರ ವಿರುದ್ಧ ಶಸ್ತ್ರವಾಗಿ ಆಕೆ ಬಳಸಿದ್ದಾಳೆ. ನನಗೆ ಲಸಿಕೆ ಬೇಡ. ಲಸಿಕೆ ಹಾಕಲು ಮುಂದೆ ಬಂದರೆ ನಿಮ್ಮ ಮೇಲೆ ಹಾವನ್ನು ಬಿಡುತ್ತೇನೆ ಎಂದು ಅವರು ಹೆದರಿಸುತ್ತಿದ್ದರು. ಇದನ್ನೂ ಓದಿ:  ಗೊಂಬೆಗಳ ಮಧ್ಯೆ ಪುಟ್ಟ ಗೊಂಬೆಯಂತೆ ಕುಳಿತ ರಾಯನ್

    ವೈದ್ಯಕೀಯ ಸಿಬ್ಬಂದಿ, ಅದರಿಂದ ಏನೂ ಅಪಾಯವಿಲ್ಲ ಎಂದು ಹೇಳಿ ಆಕೆಯನ್ನು ಮನವೊಲಿಸಲು ಪ್ರಯತ್ನ ಮಾಡಿದರೂ ಆಕೆ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಹಾವನ್ನು ತೋರಿಸಿದಾಗ ಹೆದರಿದ ವೈದ್ಯಕೀಯ ಸಿಬ್ಬಂದಿ ತಮಗೆ ಸಹಾಯ ಮಾಡುವಂತೆ ಸ್ಥಳೀಯರನ್ನು ಕೇಳಿಕೊಂಡಿದ್ದಾರೆ. ನಂತರ ಇನ್ನೂ ಕೆಲವರು ಬಂದು ಎಲ್ಲರೂ ಸೇರಿ ಕಮಲಾ ದೇವಿಯಲ್ಲಿ ತಿಳಿವಳಿಕೆ ಮೂಡಿಸಿದರು. ಬಳಿಕ ಅವರು ಕೊವಿಡ್ 19 ಲಸಿಕೆ ಪಡೆದಿದ್ದಾರೆ. ಕಮಲಾ ದೇವಿ ಜತೆ ಇನ್ನೂ 20 ಮಂದಿ ತಮಗೆ ಲಸಿಕೆ ಬೇಡ ಎನ್ನುತ್ತಿದ್ದರು. ಆದರೆ ಈಕೆ ವ್ಯಾಕ್ಸಿನ್ ಪಡೆಯುತ್ತಿದ್ದಂತೆ ಅವರೂ ಕೂಡ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ:  ಭಯ ಹುಟ್ಟಿಸಲು ಉಗ್ರರು ಹತ್ಯೆಯನ್ನು ಗುರಿಯಾಗಿಸಿಕೊಂಡಿದ್ದಾರೆ: ಮೋಹನ್ ಭಾಗವತ್

  • ಮದುವೆಗೆ ಸ್ಥಳ ಹುಡುಕುತ್ತ ಜೈಪುರಗೆ ಬಂದ್ರು ಲವ್ ಬರ್ಡ್ಸ್

    ಮದುವೆಗೆ ಸ್ಥಳ ಹುಡುಕುತ್ತ ಜೈಪುರಗೆ ಬಂದ್ರು ಲವ್ ಬರ್ಡ್ಸ್

    ಮುಂಬೈ: ಬಾಲಿವುಡ್ ಪ್ರಣಯ ಪಕ್ಷಿಗಳು ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಮದುವೆಗೆ ಸ್ಥಳ ಹುಡುಕಲು ಜೈಪುರಕ್ಕೆ ಬಂದಿದ್ದಾರೆ.

    ಆಲಿಯಾ ಮತ್ತು ರಣಬೀರ್ ಈ ವಾರಾಂತ್ಯದಲ್ಲಿ ಜೈಪುರದ ಏರ್‌ರ್ಪೋಟ್ ನಲ್ಲಿ ಕಾಣಿಸಿಕೊಂಡಿದ್ದು, ಅವರ ಫ್ಯಾನ್ ಕ್ಲಬ್ ನಲ್ಲಿ ಈ ಪ್ರಣಯ ಪಕ್ಷಿಗಳ ಫೊಟೋವನ್ನು ಅಭಿಮಾನಿಗಳು ಹಂಚಿಕೊಂಡಿದ್ದಾರೆ. ಇವರಿಬ್ಬರು ಜೈಪುರದ ಜವಾಯ್ ಬಂದ್ ಗೆ ತಮ್ಮ ಮದುವೆಯ ಸ್ಥಳವನ್ನು ಹುಡುಕಿಕೊಂಡು ಬಂದಿದ್ದರು ಎಂದು ಅಭಿಮಾನಿಗಳು ಬರೆದು ಪೋಸ್ಟ್ ಮಾಡಿದ್ದಾರೆ. ಆದರೆ ಈ ಕುರಿತು ಪ್ರಣಯ ಪಕ್ಷಿಗಳು ಮಾತ್ರ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ. ಇದನ್ನೂ ಓದಿ:  ಒಳ ಉಡುಪು ಜಾಹೀರಾತಿನಲ್ಲಿ ಅಭಿನಯ – ಟ್ರೋಲ್ ಕೆಂಗಣ್ಣಿಗೆ ಗುರಿಯಾದ ರಶ್ಮಿಕಾ ಮಂದಣ್ಣ

     

    View this post on Instagram

     

    A post shared by ©pmd (@padharo_mahre_desh)

    ಆಲಿಯಾ ಮತ್ತು ರಣಬೀರ್ ಕ್ಯಾಶುಯಲ್ ಆಗಿ ಡ್ರೆಸ್ ಮಾಡಿಕೊಂಡಿದ್ದರು. ಆಲಿಯಾ ಕ್ಲಾಸಿಕ್ ಡೆನಿಮ್ ಮತ್ತು ವೈಟ್ ಟೀ ಶರ್ಟ್ ಹಾಕಿಕೊಂಡಿದ್ದು, ರಣಬೀರ್ ಲೌಂಜ್ ಸೆಟ್ ಧರಿಸಿದ್ದರು.

    2018ರಿಂದ ಡೇಟಿಂಗ್ ಮಾಡುತ್ತಿದ್ದ ಈ ಜೋಡಿ 2019ರ ಫಿಲ್ಮ್‍ಫೇರ್ ಪ್ರಶಸ್ತಿ ಸಮಾರಂಭದಲ್ಲಿ, ಆಲಿಯಾ ವೇದಿಕೆಯಲ್ಲಿ ರಣಬೀರ್ ಮೇಲಿನ ಪ್ರೀತಿಯನ್ನು ಹೇಳಿಕೊಳ್ಳುವುದರ ಮೂಲಕ ಅವರಿಬ್ಬರ ಪ್ರೀತಿಯ ವಿಷಯವನ್ನು ದೃಢಪಡಿಸಿದ್ದರು. ಅದು ಅಲ್ಲದೇ ರಣಬೀರ್ ಅವರ ತಾಯಿ ನೀತು ಕಪೂರ್ ಸಹ ಈ ಕುರಿತು ದೃಢಪಡಿಸಿದ್ದರು. ಅಂದಿನಿಂದ ಈ ಜೋಡಿಗಳ ಮದುವೆ ಯಾವಾಗ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ: 2022ರ ಪ್ರೇಮಿಗಳ ದಿನ ಬರಲಿದೆ ‘ಲಾಲ್ ಸಿಂಗ್ ಚಡ್ಡಾ’

     

    View this post on Instagram

     

    A post shared by neetu Kapoor. Fightingfyt (@neetu54)

    ಆಲಿಯಾ ಮತ್ತು ರಣಬೀರ್ ನಟನೆಯ ಬಹುನಿರೀಕ್ಷಿತ ‘ಬ್ರಹ್ಮಾಸ್ತ್ರ’ ಸಿನಿಮಾ ಬಿಡುಗಡೆಯ ನಂತರ ಮದುವೆಯಾಗಲು ಈ ಜೋಡಿ ನಿರ್ಧರಿಸಿದ್ದರೆ ಎಂದು ಕೆಲವು ಮೂಲಗಳ ಪ್ರಕಾರ ತಿಳಿದುಬರುತ್ತಿದೆ.

  • ಭೀಕರ ರಸ್ತೆ ಅಪಘಾತ – ಚಾಲಕ, 5 ಮಂದಿ ವಿದ್ಯಾರ್ಥಿಗಳು ದುರ್ಮರಣ

    ಭೀಕರ ರಸ್ತೆ ಅಪಘಾತ – ಚಾಲಕ, 5 ಮಂದಿ ವಿದ್ಯಾರ್ಥಿಗಳು ದುರ್ಮರಣ

    – ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು
    – ಘಟನೆಯಲ್ಲಿ ನಾಲ್ವರಿಗೆ ಗಾಯ

    ಜೈಪುರ:  REE (Rajasthan Eligibility Exam) ಪರೀಕ್ಷೆ ಬರೆಯಲು ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿ ವ್ಯಾನ್ ಚಾಲಕ ಹಾಗೂ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜೈಪುರದ ಚಕ್ಸು ಹೆದ್ದಾರಿಯಲ್ಲಿ ಇಂದು ನಡೆದಿದೆ.

    ಬರಾನ್‍ನಿಂದ ರೀಟ್ ಪರೀಕ್ಷೆ ಬರೆಯಲು 11 ಪರೀಕ್ಷಾರ್ಥಿಗಳು ವ್ಯಾನ್‍ನಲ್ಲಿ ತೆರಳುತ್ತಿದ್ದ ವೇಳೆ, ಚಕ್ಸುವಿನ ರಾಷ್ಟ್ರೀಯ ಹೆದ್ದಾರಿ 12ರ ನಿಮೋಡಿಯಾ ಬಳಿ ದುರಂತ ಸಂಭವಿಸಿದೆ. ದುರಂತದಲ್ಲಿ ನಾಲ್ವರು ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: Do not Disturb : ನಟಿ ರಾಗಿಣಿ ಪ್ರಜ್ವಲ್

    ವ್ಯಾನ್ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಚಕ್ಸು ಪೊಲೀಸರು, ತನಿಖೆ ಆರಂಭಿಸಿದ್ದಾರೆ.

  • ವೃದ್ಧೆಯ ಹತ್ಯೆ ಮಾಡಿ ಮೃತದೇಹದೊಂದಿಗೆ ಯುವಕ ಸೆಕ್ಸ್!

    ವೃದ್ಧೆಯ ಹತ್ಯೆ ಮಾಡಿ ಮೃತದೇಹದೊಂದಿಗೆ ಯುವಕ ಸೆಕ್ಸ್!

    ಜೈಪುರ್: 19 ವರ್ಷದ ಯುವಕನೊಬ್ಬ 60 ವರ್ಷದ ಮಹಿಳೆಯನ್ನು ಹತ್ಯೆಗೈದಿದ್ದಾನೆ. ಅಲ್ಲದೆ ಆಕೆಯ ಮೃತದೇಹದೊಂದಿಗೆ ಲೈಂಗಿಕ ಕ್ರಿಯೆ ನಡೆಸಿರುವ ಭಯಾನಕ ಘಟನೆ ನಡೆ ರಾಜಸ್ಥಾನದ ಹನುಮಾನ್‍ಗಢ್‍ನಲ್ಲಿ ನಡೆದಿದೆ.

    ಆರೋಪಿಯನ್ನು ಸುರೇಂದ್ರ (ಮಾಂಡಿಯಾ) ಎಂದು ಗುರುತಿಸಲಾಗಿದ್ದು, ಮಹಿಳೆ ವಿಧವೆಯಾಗಿದ್ದು, ದುಲ್ಮಾನಾ ಗ್ರಾಮದ ನಿವಾಸಿಯಾಗಿದ್ದರು. ಆರೋಪಿಯನ್ನು ಪಿಲಿಬಂಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಹತ್ಯೆ ಪ್ರಕರಣ ಮಾತ್ರವಲ್ಲದೆ, ನೆಕ್ರೋಫಿಲಿಯಾ ಕಾಯ್ದೆ (ಮೃತದೇಹದೊಂದಿಗೆ ಸೆಕ್ಸ್ ಮಾಡುವ ಅಪರಾಧ)ಯಡಿ ಕೇಸ್ ದಾಖಲಾಗಿದೆ. ಇದನ್ನೂ ಓದಿ:  ರಾಜೀವ್ ಗಾಂಧಿ ಹೆಸರನ್ನು ಬದಲಾಯಿಸಿ ಶಂಕರಾಚಾರ್ಯರ ಹೆಸರಿಡುವುದು ಸೂಕ್ತ: ಶೋಭಾ

    ಸುರೇಂದ್ರ ರಾತ್ರಿ ಮಹಿಳೆಯ ಮನೆಗೆ ಹೋಗಿದ್ದ. ಆಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಪ್ರಯತ್ನ ಪಟ್ಟ. ಆದರೆ ಮಹಿಳೆ ಅದನ್ನು ಪ್ರತಿರೋಧಿಸಿದಾಗ ಹತ್ಯೆ ಮಾಡಿದ್ದಾನೆ. ನಂತರ ತನ್ನ ಬಯಕೆ ಪೂರೈಸಿಕೊಂಡಿದ್ದಾನೆ. ನಂತರ ಮಹಿಳೆಯ ಸಂಬಂಧಿ ಬಳಿ ಹೋಗಿ ತಾನು ಮಾಡಿದ ಕೃತ್ಯ ಹೇಳಿದ್ದಾನೆ. ನಾವು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗಲೂ ಸತ್ಯವನ್ನಷ್ಟೂ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

     

  • ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿಗೆ ಕೀ ಆನ್ಸರ್- 8 ಜನರು ಅರೆಸ್ಟ್

    ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿಗೆ ಕೀ ಆನ್ಸರ್- 8 ಜನರು ಅರೆಸ್ಟ್

    ಜೈಪುರ: ಭಾನುವಾರ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್) ವೇಳೆ ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿಗೆ ಕೀ ಆನ್ಸರ್ ಹೇಳಿಕೊಟ್ಟ ಹಿನ್ನೆಲೆ ವಿದ್ಯಾರ್ಥಿನಿ ಸೇರಿ ಒಟ್ಟು 8 ಜನರನ್ನು ಪೊಲೀಸರು ಬಂಧಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

    ಈ ಕುರಿತು ಪ್ರತಿಕ್ರಿಯಿಸಿದ ಡಿಸಿಪಿ ರಿಚಾ ತೋಮರ್, ನೀಟ್ ಪರೀಕ್ಷೆ ಭಾನುವಾರ ನಡೆದಿದ್ದು, ನೀಟ್ ಪರೀಕ್ಷೆ ಪೇಪರ್ ಸೋರಿಕೆಯಾಗಿದೆ. ಈ ಹಿನ್ನೆಲೆ 18 ವರ್ಷದ ವಿದ್ಯಾರ್ಥಿನಿ ದಿನೇಶ್ವರಿ ಕುಮಾರಿ ಮತ್ತು ಪರೀಕ್ಷಾ ಕೇಂದ್ರ ಸಿಬ್ಬಂದಿ ರಾಮ್ ಸಿಂಗ್, ಪರೀಕ್ಷಾ ಕೊಠಡಿಯ ಸಿಬ್ಬಂದಿ, ಆಡಳಿತ ಘಟಕದ ಉಸ್ತುವಾರಿ ಮುಖೇಶ್, ದಿನೇಶ್ವರಿ ಚಿಕ್ಕಪ್ಪ ಮತ್ತು ಇತರ ನಾಲ್ವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಚಿಂತಾಮಣಿ ಬಳಿ ಭೀಕರ ಅಪಘಾತ – ಆಸ್ಪತ್ರೆಗೆ ಭೇಟಿ ನೀಡಿದ ಕೋಲಾರ ಎಸ್‍ಪಿ 

    ಪರೀಕ್ಷೆ ಪ್ರಾರಂಭವಾದ ಬಳಿಕ ಆರೋಪಿ ರಾಮ್ ಸಿಂಗ್ ಮತ್ತು ಮುಖೇಶ್ ಪರೀಕ್ಷೆ ಪತ್ರಿಕೆಯ ಫೋಟೋಗಳನ್ನು ಜೈಪುರ ಚಿತ್ರಕೂಟ್ ಪ್ರದೇಶದ ಅಪಾರ್ಟ್‍ಮೆಂಟ್‍ನಲ್ಲಿದ್ದ ಇಬ್ಬರು ವ್ಯಕ್ತಿಗಳಿಗೆ ವಾಟ್ಸಾಪ್ ಮೂಲಕ ಕಳುಹಿಸಿದ್ದರು. ಆ ವ್ಯಕ್ತಿಗಳು ಕೀ ಆನ್ಸರ್ ಅನ್ನು ಮುಖೇಶ್ ಅವರಿಗೆ ಕಳುಹಿಸಿದ್ದಾರೆ. ನಂತರ ರಾಮ್ ಸಿಂಗ್ ದಿನೇಶ್ವರಿ ಅವರು ಪ್ರೆಶ್ನೆಗಳಿಗೆ ಉತ್ತರ ಬರೆಯಲು ಸಹಾಯ ಮಾಡಿದ್ದಾರೆ. ದಿನೇಶ್ವರಿ ಚಿಕ್ಕಪ್ಪ ಪರೀಕ್ಷಾ ಕೇಂದ್ರದ ಹೊರಗೆ 10 ಲಕ್ಷ ರೂ. ಹಿಡಿದುಕೊಂಡು ಸಿಬ್ಬಂದಿಗೆ ಕೊಡಲು ಕಾಯುತ್ತಿದ್ದರು ಎಂದು ಹೇಳಿದರು. ಇದನ್ನೂ ಓದಿ:  ಬೆಂಗಳೂರು ಹೋಟೆಲಿನಲ್ಲಿ ಅಗ್ನಿ ಅವಘಡಕ್ಕೆ ಬೊಲೇರೋ ವಾಹನ ಕಾರಣ?

    ಅದು ಅಲ್ಲದೇ ಇ-ಮಿತ್ರ ಕೇಂದ್ರದ ಮಾಲೀಕ ಅನಿಲ್ ಮತ್ತು ಕೋಚಿಂಗ್ ಸೆಂಟರ್ ಮಾಲೀಕ ಅಲ್ವಾರ್ ಅವರನ್ನು ಬಂಧಿಸಲಾಗಿದೆ. ಅವರು 30 ಲಕ್ಷಕ್ಕೆ ಈ ಡೀಲ್ ಮುಗಿಸಿ ನಂತರ ಸಿಕಾರ್ ನಲ್ಲಿ ಕೀ ಆನ್ಸರ್ ಗಳನ್ನು ಪರೀಕ್ಷಾ ಕೊಠಡಿ ಮೇಲ್ವಿಚಾರಕರ ಮೂಲಕ ವಿದ್ಯಾರ್ಥಿನಿಗೆ ತಲುಪಿಸುತ್ತಿದ್ದರು ಎಂದು ತಿಳಿಸಿದರು. ಇದನ್ನೂ ಓದಿ:  ಕೆಲಸಕ್ಕೆ ಹಾಜರಾಗಿ – ಪೊಲೀಸರಿಗೆ ತಾಲಿಬಾನ್ ಕಮಾಂಡರ್​ಗಳಿಂದ ಕರೆ

  • ಮಹಿಳಾ ಪೇದೆ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಮಿಲನ

    ಮಹಿಳಾ ಪೇದೆ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಮಿಲನ

    – ಆಕೆಯ ಮೊಬೈಲಲ್ಲಿತ್ತು 50 ಅಶ್ಲೀಲ ವೀಡಿಯೋ

    ಜೈಪುರ: 6 ವರ್ಷದ ಮಗುವಿನ ಮುಂದೆಯೇ ಹಿರಿಯ ಪೊಲೀಸ್ ಅಧಿಕಾರಿ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಲೈಂಗಿಕ ಸಂಪರ್ಕ ನಡೆಸಿದ ಮಹಿಳಾ ಕಾನ್‍ಸ್ಟೇಬಲನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಮಧ್ಯಾಹ್ನ ಮಹಿಳಾ ಪೇದೆಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದು, ಸೆಪ್ಟೆಂಬರ್ 17ರವರೆಗೆ ಆಕೆಯನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ.

    ಮಹಿಳಾ ಪೇದೆ ಜೊತೆ ದೈಹಿಕ ಸಂಪರ್ಕ ನಡೆಸಿದ್ದ ಹಿರಿಯ ಅಧಿಕಾರಿಯನ್ನು ಇದಕ್ಕೂ ಮುನ್ನವೇ ಪೊಲೀಸರು ಬಂಧಿಸಿದ್ದಾರೆ. ಇಬ್ಬರ ಬಂಧನ ಬೆನ್ನಲ್ಲೇ ವೀಡಿಯೋದಲ್ಲಿದ್ದ ಅಜ್ಮಲ್ ಬೇವಾರ್ ಸರ್ಕಲ್ ಆಫೀಸರ್ ಹೀರಾಲಾಲ್ ಸೈನಿ ಹಾಗೂ ಪೊಲೀಸ್ ಕಮೀಷನರ್ ಕಚೇರಿಯ ಮಹಿಳಾ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: ‘ಚಿಂತಾಮಣಿ ಅಪಘಾತ – 8 ಮಂದಿಯ ಸಾವಿಗೆ ರಮೇಶ್‍ಕುಮಾರ್ ನೇರ ಹೊಣೆ’

    ಕೈ ತಪ್ಪಿದ ವೀಡಿಯೋ ವಾಟ್ಸಪ್ ಸ್ಟೇಟಸ್ ಆಯ್ತು!: ಮಹಿಳಾ ಪೇದೆಯ ಬರ್ತ್ ಡೇ ಸಂಭ್ರಮಾಚರಣೆ ಮಾಡಲು ಹಿರಿಯ ಅಧಿಕಾರಿ ಅಜ್ಮೇರ್ ನ ರೆಸಾರ್ಟ್ ಗೆ ಆಗಮಿಸಿದ್ದರು. ಬರ್ತ್ ಡೇ ಸಂಭ್ರಮದಲ್ಲಿ ಸ್ವಿಮ್ಮಿಂಗ್ ಪೂಲ್‍ಗಿಳಿದ ಜೋಡಿಗಳು ಮೊಬೈಲಲ್ಲಿ ದೃಶ್ಯಗಳನ್ನು ರೆಕಾರ್ಡ್ ಮಾಡಿದ್ದರು. ಈ ವೇಳೆ ಮಹಿಳಾ ಪೇದೆಯ 6 ವರ್ಷದ ಮಗ ಕೂಡಾ ಜೊತೆಯಲ್ಲಿದ್ದ. ಈ ವೀಡಿಯೋ ಅಚಾನಕ್ ಆಗಿ ಮಹಿಳಾ ಪೇದೆಯ ವಾಟ್ಸಪ್ ಸ್ಟೇಟಸ್ ಆಗಿದೆ. ಆದರೆ ಈ ವಿಚಾರ ಅರಿವಿಗೆ ಬರುವ ಮುನ್ನವೇ ಈ ವೀಡಿಯೋ ವೈರಲ್ ಆಗಿತ್ತು. ಇದನ್ನು ನೋಡಿದ ಮಹಿಳಾ ಪೇದೆಯ ಪತಿ ಹಿರಿಯ ಅಧಿಕಾರಿ ಮಗನ ಜೊತೆ ಅಸಭ್ಯವಾಗಿ ವರ್ತಿಸಿದ ಎಂದು ಪೊಲೀಸರಿಗೆ ದೂರು ನೀಡಿದ್ದರು. ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ ಪೊಲೀಸರು ಹಿರಿಯ ಅಧಿಕಾರಿಯನ್ನು ಬಂಧಿಸಿದ್ದಾರೆ.

    ಮಹಿಳಾ ಪೇದೆ ಮೊಬೈಲಲ್ಲಿ ಸಿಕ್ಕಿದೆ 50 ವೀಡಿಯೋ!: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು, ಮಹಿಳಾ ಪೇದೆಯ ಮೊಬೈಲಲ್ಲಿ ಈ ರೀತಿಯ ಸುಮಾರು 50 ವೀಡಿಯೋಗಳು ಪತ್ತೆಯಾಗಿವೆ. ಇದನ್ನು ಆಕೆ ಮೊಬೈಲಿನಲ್ಲಿ ಪ್ರತ್ಯೇಕ ಫೋಲ್ಡರ್‍ನಲ್ಲಿ ಸೇವ್ ಮಾಡಿದ್ದರು. ಆದರೆ ಈ ವೀಡಿಯೋ ಅಚಾನಕ್ ಆಗಿ ಆಕೆಯ ವಾಟ್ಸಪ್ ಸ್ಟೇಟಸ್ ಆಗಿದೆ. ಇದನ್ನು ಆಕೆಯ ಪತಿ ಹಾಗೂ ಕುಟುಂಬಸ್ಥರು ನೋಡಿದ್ದಾರೆ. ಬಳಿಕ ದೂರು ನೀಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇನ್ನೂ ಸಮಯ ಇದೆ, ಅರ್ಜೆಂಟ್ ಏನೂ ಇಲ್ಲ: ಹೆಚ್‍ಡಿಕೆ 

    5 ವರ್ಷದಿಂದ ಇತ್ತಂತೆ ಅಫೇರ್: ಈ ಮಹಿಳೆ ಹಾಗೂ ಡಿಎಸ್‍ಪಿ ಸೈನಿ ನಡುವೆ ಕಳೆದ 5 ವರ್ಷದಿಂದ ಅಫೇರ್ ಇತ್ತು. ಈ ಹಿನ್ನೆಲೆಯಲ್ಲಿ ಆಕೆ ಪತಿಯನ್ನು ಬಿಟ್ಟು ಪ್ರತ್ಯೇಕ ವಾಸವಾಗಿದ್ದಳು ಎಂದು ತನಿಖೆ ವೇಳೆ ಮಾಹಿತಿ ನೀಡಿದ್ದಾಳೆ.  ಇದನ್ನೂ ಓದಿ: ಮಹಿಳೆಯನ್ನು ನಗ್ನ ಮಾಡಿ ಪೈಶಾಚಿಕ ಹಲ್ಲೆ ನಡೆಸಿದ ಕಿರಾತಕರು

    ಇನ್ನಷ್ಟು ಅಧಿಕಾರಿಗಳಿಗೆ ಸಂಕಷ್ಟ: ಈ ಮಹಿಳೆಯ ಬಂಧನದಿಂದಾಗಿ ಇನ್ನಷ್ಟು ಪ್ರಕರಣಗಳು ಬೆಳಕಿಗೆ ಬಂದಿದೆ. ಮಹಿಳಾ ಪೇದೆಯ ವಿರುದ್ಧ ದೂರು ನೀಡಲು ಪತಿ ಆಗಮಿಸಿದ ವೇಳೆ ಪೊಲೀಸರು ದೂರು ನಿರ್ಲಕ್ಷ್ಯ ತೋರಿದ್ದಾರೆ ಹಾಗೂ ದೂರು ಸ್ವೀಕರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಜೈಪುರ ಹಾಗೂ ನಾಗೌರ್ ಠಾಣೆಯ ಅಧಿಕಾರಿಗಳನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತು ಮಾಡಲಾಗಿದೆ. ಹಲವು ಹಿರಿಯ ಅಧಿಕಾರಿಗಳಿಗೆ ಇವರಿಬ್ಬರ ಸಂಬಂಧದ ಬಗ್ಗೆ ಮಾಹಿತಿ ಇದ್ದರೂ ಕೈಗೊಂಡಿರಲಿಲ್ಲ ಎಂದು ತನಿಖೆ ವೇಳೆ ತಿಳಿದುಬಂದಿದೆ.  

  • ಮದುವೆ ಮನೆಗೆ ಹೋಗಿ ಪ್ರಾಣಕ್ಕೆ ಆಪತ್ತು ತಂದುಕೊಂಡ 100ಕ್ಕೂ ಹೆಚ್ಚು ಜನರು

    ಮದುವೆ ಮನೆಗೆ ಹೋಗಿ ಪ್ರಾಣಕ್ಕೆ ಆಪತ್ತು ತಂದುಕೊಂಡ 100ಕ್ಕೂ ಹೆಚ್ಚು ಜನರು

    ಜೈಪುರ: ಮದುವೆ ಮನೆಗೆ ಹೋಗಿ ತಮ್ಮ ಪ್ರಾಣಕ್ಕೆ 100ಕ್ಕೂ ಹೆಚ್ಚು ಮಂದಿ ಆಪತ್ತು ತಂದುಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

    ರಾಜಸ್ಥಾನದ ಚುರು ಎಂಬಲ್ಲಿ ಬುಧವಾರ ಮದುವೆ ನಡೆಯುತ್ತಿದ್ದು, ಸಮಾರಂಭದಲ್ಲಿ ಊಟ ಮಾಡಿದ 100ಕ್ಕೂ ಹೆಚ್ಚು ಜನರು ಆಸ್ಪತ್ರೆಯನ್ನು ಸೇರಿದ್ದಾರೆ. ಈ ಗುಂಪಿನಲ್ಲಿ 45 ಮಕ್ಕಳಿದ್ದು, ಇನ್ನೂ ಕೆಲವರು ಮನೆಗೆ ಹೋಗಿ ವಾಂತಿಯಾದ ನಂತರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ 90 ಮಂದಿಗೆ ಚಿಕಿತ್ಸೆಯಾಗಿದ್ದು, ಅವರು ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ:ತಂದೆ ಸಮಾಧಿ ಬಳಿ ಬಾಲಕಿ ಹುಟ್ಟುಹಬ್ಬ ಆಚರಣೆ

    ಈ ಕುರಿತು ಪ್ರತಿಕ್ರಿಯಿಸಿದ ವೈದ್ಯರು, ಒಂದೇ ಸರಿ ಜನರು ಬಂದ ಕಾರಣ ಹಾಸಿಗೆ ಇಲ್ಲದೇ ಕೆಲವರನ್ನು ನೆಲದ ಮೇಲೆ ಮಲಗಿಸಲಾಗಿತ್ತು. ಅದು ಅಲ್ಲದೇ ಜನರ ಪರಿಸ್ಥಿತಿ ಅಸ್ತವ್ಯಸ್ತವಾಗಿತ್ತು. ಈ ನಡುವೆ ನಮ್ಮ ಆಸ್ಪತ್ರೆಯ ಸಿಬ್ಬಂದಿಯಲ್ಲಿ ಕೆಲವರಿಗೆ ಗಾಯವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ತಂದಿಟ್ಟು ತಮಾಷೆ ನೋಡೋದಕ್ಕೆ ಹೇಳಿರ್ತಾರೆ – ಉಮಾಪತಿ ಬಳಿ ಕ್ಷಮೆ ಕೇಳಿದ್ದ ಭೂಗತ ಪಾತಕಿ ರವಿ

    ಏನಿದು ಘಟನೆ?
    ಕಾಲು ಕುಚಮನಿ ಎನ್ನುವವರು ಸರ್ದಾರ್‍ಶಹರ್‍ನ ವಾರ್ಡ್ ನಂ.44 ತಮ್ಮ ನಾಲ್ವರು ಹೆಣ್ಣುಮಕ್ಕಳನ್ನು ಒಂದೇ ದಿನ ಮದುವೆ ಮಾಡಲಾಗುತ್ತಿತ್ತು. ಬುಧವಾರ ಈ ವಿವಾಹ ಸಮಾರಂಭವನ್ನು ಮುಂಜಾನೆ 4 ಗಂಟೆಯವರೆಗೂ ಮಾಡಲಾಗಿತ್ತು. ಈ ವೇಳೆ ಮದುವೆಗೆ ಬಂದಿದ್ದ ಜನರು ಊಟ ಸೇವಿಸಿ ತಮಗೆ ವಾಂತಿಯಾಗುತ್ತಿರುವುದರ ಬಗ್ಗೆ ತಿಳಿಸಿದ್ದಾಗ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಇದನ್ನೂ ಓದಿ:ಹುಬ್ಬಳ್ಳಿಗೆ ಅಮಿತ್ ಶಾರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿಎಂ

    ಕೆಲವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ವಿಷಯ ತಿಳಿದ ಸರ್ದಾರ್‍ಶಹರ್ ಪೊಲೀಸರು ಆಸ್ಪತ್ರೆಗೆ ಆಗಮಿಸಿದ್ದು, ನಂತರ ಈ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.