Tag: jaipura

  • ಹಸಿವಿನಿಂದ ಬಳಲಿದ್ದ ಮಂಗಗಳಿಗೆ ಹಾಲುಣಿಸಿದ ಕಾಮಧೇನು

    ಹಸಿವಿನಿಂದ ಬಳಲಿದ್ದ ಮಂಗಗಳಿಗೆ ಹಾಲುಣಿಸಿದ ಕಾಮಧೇನು

    ಜೈಪುರ: ರಾಜಸ್ಥಾನದ ಸಿರೊಹಿಯಲ್ಲಿ ಭಾರೀ ಬಿಸಿಲಿನಿಂದಾಗಿ ಜನಸಾಮಾನ್ಯರ ಜೊತೆಗೆ ಪ್ರಾಣಿಗಳು ತತ್ತರಿಸಿವೆ. ಹೀಗೆ ಒಂದೆಡೆ ಬಿಸಿಲು ಇನ್ನೊಂದೆಡೆ ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಬಳಲುತ್ತಿದ್ದ ಮಂಗಗಳಿಗೆ ಹಸುವೊಂದು ಹಾಲುಣಿಸಿ ತಾಯಿಯಾಗಿದೆ.

    ಹೌದು. ಸಿರೋಹಿ ಜಿಲ್ಲೆಯ ಪಿಂಡ್ವಾಲಾ ಪ್ರದೇಶದಲ್ಲಿ ವಿಪಿನ್ ಸಮೀಪದ ರೋಹಿಡಾದ ಜಬೇಶ್ವರ ಮಹಾದೇವ್ ದೇವಾಲಯದಲ್ಲಿ ಇರುವ ಹಸು ಈಗ ಭಾರೀ ಸುದ್ದಿಯಾಗಿದೆ. ಈ ಹಸು ಈ ದಿನಗಳಲ್ಲಿ ಇಡೀ ಜಿಲ್ಲೆಯಲ್ಲಿ ಚರ್ಚೆಯ ವಿಷಯವಾಗಿಬಿಟ್ಟಿದೆ. ಯಾಕೆಂದರೆ ಹಸು ಹಸಿವಿನ ಬೇಗೆಯಲ್ಲಿ ಬಳಲಿ, ರೋಸಿಹೋಗಿದ್ದ ಮಂಗಗಳಿಗೆ ಹಾಲು ನೀಡಿ ತಾಯಿಯಾಗಿ ಪೋಷಿಸುತ್ತಿದೆ.

    ಬಹಳ ವರ್ಷಗಳಿಂದ ರೋಹಿಡಾದ ಜಬೇಶ್ವರ ಮಹಾದೇವ್ ದೇವಾಲಯದಲ್ಲಿಯೇ ವಾಸಿಸುತ್ತಿರುವ ಈ ಹಸು ಪ್ರತಿನಿತ್ಯ ಮಂಗಗಳಿಗೆ ಹಾಲು ನೀಡಿ ಅವುಗಳ ಜೀವ ಉಳಿಸಿದೆ.

    ಬೇಸಿಗೆ ಬೇಗೆಗೆ ನೀರು, ಆಹಾರವಿಲ್ಲದೆ ಪ್ರಾಣಿಗಳು ಪರದಾಡುತ್ತಿವೆ. ಹೀಗೆ ಆಹಾರ, ನೀರಿಗಾಗಿ ಹಸಿವಿನಿಂದ ಬಳಲಿದ್ದ ದೇವಸ್ಥಾನದ ಸಮೀಪದಲ್ಲಿದ್ದ ಮಂಗಗಳಿಗೆ ಹಸು ಒಂದು ಬಾರಿ ಹಾಲು ನೀಡಿತ್ತು. ಆ ಬಳಿಕ ಈಗ ಪ್ರತಿದಿನವೂ ಈ ಮಂಗಗಳಿಗೆ ಹಾಲು ನೀಡಿ ಅವುಗಳ ಹೊಟ್ಟೆ ತುಂಬಿಸುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಈ ಮೂಲಕ ಈ ವಿಶೇಷ ಹಸು ಜಿಲ್ಲೆಯಲ್ಲಿ ಸಿಕ್ಕಪಟ್ಟೆ ಫೇಮಸ್ ಆಗಿಬಿಟ್ಟಿದೆ. ಹೀಗಾಗಿ ಇದನ್ನು ನೋಡಲು ಅಕ್ಕ-ಪಕ್ಕದ ಗ್ರಾಮದಿಂದ ಜನರು ದೇವಸ್ಥಾನದತ್ತ ಆಗಮಿಸುತ್ತಿದ್ದಾರೆ. ಹಾಗೆಯೇ ತಾಯಿಯ ಸ್ಥಾನದಲ್ಲಿ ನಿಂತು ಮಂಗಗಳಿಗೆ ಹಾಲು ನೀಡಿ ಪೋಷಿಸುತ್ತಿರುವ ಹಸುವನ್ನು ಕಂಡು ಖುಷಿಪಡುತ್ತಿದ್ದಾರೆ.

  • ಅಕ್ರಮ ಸಂಬಂಧ ಆರೋಪಕ್ಕೆ ಮನನೊಂದು ಸ್ವಾಮೀಜಿ `ಅದನ್ನೇ’ ಕಟ್ ಮಾಡ್ಕೊಂಡ!

    ಅಕ್ರಮ ಸಂಬಂಧ ಆರೋಪಕ್ಕೆ ಮನನೊಂದು ಸ್ವಾಮೀಜಿ `ಅದನ್ನೇ’ ಕಟ್ ಮಾಡ್ಕೊಂಡ!

    ಜೈಪುರ: 30 ವರ್ಷದ ಸ್ವಯಂಘೋಷಿತ ದೇವಮಾನವನೊಬ್ಬ ತನ್ನ ಗುಪ್ತಾಂಗವನ್ನು ತಾನೇ ಕತ್ತರಿಸಿಕೊಂಡ ವಿಚಿತ್ರ ಘಟನೆಯೊಂದು ರಾಜಸ್ಥಾನದಲ್ಲಿ ನಡೆದಿದೆ.

    ಈ ಘಟನೆ ರಾಜಸ್ಥಾನದ ಚುರು ಜಿಲ್ಲೆಯ ತಾರಾ ನಗರ್ ನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದ್ದು, ಮಂಗಳವಾರ ಸಂಜೆ ವೇಳೆ ಬೆಳಕಿಗೆ ಬಂದಿದೆ. ಕೃತ್ಯ ಎಸಗಿಕೊಂಡಿರೋ ಸ್ವಾಮೀಜಿಯನ್ನು ಸಂತೋಷ್ ದಾಸ್ ಎಂದು ಗುರುತಿಸಲಾಗಿದೆ.

    ಇದನ್ನೂ ಓದಿ: ರೇಪಿಸ್ಟ್ ಕಾಮಿ ಸ್ವಾಮೀಜಿಯ ಮರ್ಮಾಂಗವನ್ನೇ ಕಟ್ ಮಾಡಿದ್ಳು ಯುವತಿ!

    ಘಟನೆಗೆ ಕಾರಣವೇನು?: ಸ್ವಾಮೀಜಿ ಸಂತೋಷ್ ದಾಸ್ ತಾರ ನಗರ್ ಪ್ರದೇಶದಲ್ಲಿರುವ ತನ್ನ ಹರಿದಾಸ್ ಆಶ್ರಮದ ಪಕ್ಕದ ಮನೆಯ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಆರೋಪದಿಂದಲೇ ಸ್ವಾಮೀಜಿ ಈ ಕೃತ್ಯ ಎಸಗಿಕೊಂಡಿದ್ದಾರೆ ಅಂತ ಹೇಳಲಾಗುತ್ತಿದೆ.

    ಇದನ್ನೂ ಓದಿ:  ಯುವತಿ ಅಲ್ಲ, ನನ್ನ ಮರ್ಮಾಂಗವನ್ನು ನಾನೇ ಕತ್ತರಿಸಿದೆ: ಕಾಮಿ ಸ್ವಾಮೀಜಿ 

    ಮಂಗಳವಾರ ಬೆಳಗ್ಗೆ ಸ್ಥಳೀಯರ ಆರೋಪವನ್ನು ಸ್ವಾಮೀಜಿ ಒಪ್ಪಿಕೊಂಡಿದ್ದಾನೆ. ಈ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಾಗದ ಸ್ವಾಮೀಜಿ ಆಶ್ರಮಕ್ಕೆ ಬಂದು ತನ್ನ ಗುಪ್ತಾಂಗವನ್ನು ತಾನೇ ಕತ್ತರಿಸಿಕೊಂಡಿದ್ದಾನೆ. ಬಳಿಕ ನೋವಿನಿಂದ ಚೀರಾಡಿಕೊಂಡಿದ್ದಾನೆ. ಈ ವೇಳೆ ಆಶ್ರಮದಲ್ಲಿದ್ದ ಇತರ ಸ್ವಾಮೀಜಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ ದಾಸ್ ನನ್ನು ತಾರಾ ನಗರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಅಲ್ಲಿ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬಿಕನೇರ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಸದ್ಯ ಸ್ವಾಮೀಜಿ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದಾಗಿ ವರದಿಯಾಗಿದೆ.

    ಇದನ್ನೂ ಓದಿ: ಕೇರಳದ ಸ್ವಾಮೀಜಿಯ ಮರ್ಮಾಂಗ ಕತ್ತರಿಸಿದ್ದು ಮಗಳ ಬಾಯ್ ಫ್ರೆಂಡ್ – ತಾಯಿಯಿಂದ ದೂರು

    ಘಟನೆಗೆ ಸಂಬಂಧಿಸಿದಂತೆ ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ವಾಮೀಜಿಯಿಂದ ಹೇಳಿಕೆಯನ್ನು ಇನ್ನಷ್ಟೇ ಪಡೆದುಕೊಳ್ಳಬೇಕಾಗಿದೆ. ಕೆಲ ತಿಂಗಳ ಹಿಂದೆ ತೇರಳದ ತಿರುವನಂತಪುರಂನಲ್ಲಿ ಸ್ವಾಮೀಜಿಯೊಬ್ಬರ ಗುಪ್ತಾಂಗವನ್ನು ಕತ್ತರಿಸಿದ್ದು ಸುದ್ದಿಯಾಗಿತ್ತು. ಆರಂಭದಲ್ಲಿ ವಿದ್ಯಾರ್ಥಿನಿಯೊಬ್ಬಳು ಈ ಕೃತ್ಯ ಎಸಗಿದ್ದಾಳೆ ಎಂದಿದ್ದರೂ ನಂತರ ಸ್ವಾಮೀಜಿ ನಾನೇ ಗುಪ್ತಾಂಗವನ್ನು ಕತ್ತರಿಸಿಕೊಂಡೆ ಎಂದು ಸ್ಪಷ್ಟನೆ ನೀಡಿದ್ದರು. ಈ ಪ್ರಕರಣದ ಸತ್ಯಾಸತ್ಯತೆ ಇನ್ನಷ್ಟೇ ಬೆಳಕಿಗೆ ಬರಬೇಕಿದೆ.

    https://www.youtube.com/watch?v=Oul2v2F1DEM

  • ಮಾಟಗಾತಿಯೆಂದು 70ರ ವಿಧವೆಯನ್ನು ಬಡಿದು ಕೊಂದ್ರು!

    ಮಾಟಗಾತಿಯೆಂದು 70ರ ವಿಧವೆಯನ್ನು ಬಡಿದು ಕೊಂದ್ರು!

    ಜೈಪುರ: 70 ವರ್ಷದ ವಿಧವೆಯೊಬ್ಬರನ್ನು ಪಕ್ಕದ ಮನೆಯವರೇ ಹೊಡೆದು ಕೊಂದ ಘಟನೆ ರಾಜಸ್ಥಾನದ ಉದಯ್ ಪುರ ಜಿಲ್ಲೆಯಲ್ಲಿ ನಡೆದಿದೆ.

    ಮೃತ ವಿಧವೆಯನ್ನು ಚಂಪಾ ದೇವಿ ಎಂಬುವುದಾಗಿ ಗುರುತಿಸಲಾಗಿದ್ದು, ಮಾಟಗಾತಿ ಎಂದು ಆರೋಪಿಸಿ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

    ಚಂಪಾ ದೇವಿ ಹಲಿ ಘಟಿ ಗ್ರಾಮದಲ್ಲಿ ಭಾನುವಾರ ಎಂದಿನಂತೆ ತನ್ನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಪಕ್ಕದ ಮನೆಯವರು ಬಂದು ಆಕೆಯನ್ನು ನಿಂದಿಸಿ, ಕೋಲುಗಳಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾರೆ.

    ತಮ್ಮ ಪುತ್ರನ ಮೇಲೆ ಆಕೆ ಮಾಟ ಪ್ರಯೋಗಿಸಿದ ಕಾರಣ ಆತ ಅನಾರೋಗ್ಯಕ್ಕೀಡಾಗಿದ್ದು ಎಂದು ಶಂಕಿಸಿ ರೊಚ್ಚಿಗೆದ್ದ ಕುಟುಂಬ ಈ ಕೃತ್ಯ ಎಸಗಿದೆಯೆಂದು ಪೊಲೀಸರು ಹೇಳಿದ್ದಾರೆ. ಸದ್ಯ ಮೃತಳ ಪುತ್ರ ಮೋಹನ್ ಲಾಲ್ ನೀಡಿದ ದೂರಿನಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂಬುವುದಾಗಿ ಹಿರಿಯ ಪೊಲೀಸ್ ಅಧಿಕಾರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

    ರಾಜ್ಯದಲ್ಲಿ ಮಾಟಮಂತ್ರ ಮುಂತಾದವುಗಳನ್ನು ತಡೆಯುವ ನಿಟ್ಟಿನಲ್ಲಿ ಚಿತ್ತೋರ್ ಘರ್ ಹಾಗೂ ಭಿಲ್ವಾರ ಜಿಲ್ಲೆಯ ಕೆಲ ಪ್ರದೇಶಗಳಿಂದ ಕಳೆದೆರಡು ದಿನಗಳಿಂದ ಏಳು ಮಂದಿ ಮಾಟಗಾರರನ್ನು ಬಂಧಿಸಲಾಗಿದೆ.