Tag: jaishankar

  • ಅಮೆರಿಕ ನೆಲದಲ್ಲೇ ಅಮೆರಿಕಕ್ಕೆ ತಿರುಗೇಟು ನೀಡಿದ ಭಾರತ

    ಅಮೆರಿಕ ನೆಲದಲ್ಲೇ ಅಮೆರಿಕಕ್ಕೆ ತಿರುಗೇಟು ನೀಡಿದ ಭಾರತ

    ವಾಷಿಂಗ್ಟನ್‌: ಅಮೆರಿಕದ ಮಾನವ ಹಕ್ಕುಗಳ ಪರಿಸ್ಥಿತಿಯ ಮೇಲೆ ಭಾರತವೂ ಕಣ್ಣಿಟ್ಟಿದೆ ಎಂದು ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ ಹೇಳುವ ಮೂಲಕ ಅಮೆರಿಕ ನೆಲದಲ್ಲೇ ಅಮೆರಿಕ್ಕೆ ತಿರುಗೇಟು ನೀಡಿದ್ದಾರೆ.

    ಹೌದು. ಅಮೆರಿಕದ ಜನಪ್ರತಿನಿಧಿಗಳು ಭಾರತದ ಪರಿಸ್ಥಿತಿಯ ಬಗ್ಗೆ ಮಾತನಾಡುವುದು ಹೊಸದೆನಲ್ಲ. ಆದರೆ ಭಾರತ ಸರ್ಕಾರದ ಪ್ರತಿನಿಧಿಯಾದ ಜೈ ಶಂಕರ್‌ ಅವರು ಅಮೆರಿಕ ನೆಲದಲ್ಲೇ ಅಮೆರಿಕದ ಬಗ್ಗೆ ಮಾತನಾಡಿದ್ದಾರೆ. ಈ ಮೂಲಕ ನಮ್ಮ ದೇಶದ ವಿಷಯದ ಬಗ್ಗೆ ಪ್ರಸ್ತಾಪ ಮಾಡಿದರೆ ನಮಗೂ ನಿಮ್ಮ ಬಗ್ಗೆ ಧೈರ್ಯವಾಗಿ ಬಹಿರಂಗವಾಗಿ ಹೇಳಲು ಬರುತ್ತದೆ ಎಂಬ ಖಡಕ್‌ ಸಂದೇಶವನ್ನು ರವಾನಿಸಿದ್ದಾರೆ.

    ಬ್ಲಿಂಕನ್‌ ಹೇಳಿದ್ದೇನು?
    ಅಮೆರಿಕ, ಭಾರತ ಮಧ್ಯೆ ನಡೆದ 2+2 ಸಭೆಯ ನಂತರ ಜಂಟಿ ಸಮ್ಮೇಳನದಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಭಾರತದಲ್ಲಿನ ಕೆಲವು ರಾಜ್ಯಗಳಲ್ಲಿ ಪೊಲೀಸ್ ಮತ್ತು ಜೈಲು ಅಧಿಕಾರಿಗಳಿಂದ ಮಾನವ ಹಕ್ಕುಗಳ ಉಲ್ಲಂಘನೆ, ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯದಂತಹ ಕೆಲವು ಘಟನೆಗಳನ್ನು ನಾವು ಗಮನಿಸುತ್ತಿದ್ದೇವೆ ಎಂದು ಹೇಳಿದ್ದರು.

    ಜೈಶಂಕರ್‌ ಹೇಳಿದ್ದೇನು?
    ಭಾರತ ಮತ್ತು ಅಮೆರಿಕದ ಮಧ್ಯೆ ನಡೆದ ಮಾತುಕತೆಯಲ್ಲಿ ಮಾನವ ಹಕ್ಕುಗಳ ಬಗ್ಗೆ ಚರ್ಚಿಸಿಲ್ಲ. ಈ ಸಭೆಯಲ್ಲಿ ಮುಖ್ಯವಾಗಿ ರಾಜಕೀಯ-ಮಿಲಿಟರಿ ವಿಷಯಗಳ ಬಗ್ಗೆ ಮಾತುಕತೆ ನಡೆದಿದೆ ಎಂದು ಎಂದು ಸ್ಪಷ್ಟಪಡಿಸಿದರು. ಜನರು ಭಾರತದ ಬಗ್ಗೆ ಕಲ್ಪನೆಗಳನ್ನು ಹೊಂದಬಹುದು. ಅಮೆರಿಕದ ಮಾನವ ಹಕ್ಕುಗಳ ಪರಿಸ್ಥಿತಿಯ ಮೇಲೆ ಭಾರತವೂ ಕಣ್ಣಿಟ್ಟಿದೆ. ಭಾರತದ ಬಗ್ಗೆ ಒಂದು ರೀತಿಯ ಲಾಬಿ ಮತ್ತು ವೋಟ್ ಬ್ಯಾಂಕ್ ಇಂತಹ ಸಮಸ್ಯೆಗಳನ್ನು ಮುಂದಿಡುತ್ತದೆ ಎಂದು ನೇರವಾಗಿ ಜೈಶಂಕರ್‌ ಹೇಳಿದ್ದಾರೆ.  ಇದನ್ನೂ ಓದಿ: ಮುಸ್ಲಿಮರು ಬಿಜೆಪಿ ವಿರೋಧಿಸುವುದನ್ನು ನಿಲ್ಲಿಸಬೇಕು: ಮುಸ್ಲಿಂ ಧರ್ಮಗುರು ಸಲಹೆ

    ಪತ್ರಕರ್ತೆಗೆ ಪಾಠ:
    ವಿದೇಶಾಂಗ ಇಲಾಖೆಯಲ್ಲಿ ಅಪಾರ ಅನುಭವ ಇರುವ ಜೈಶಂಕರ್‌ ಈ ಮೊದಲು ವಿದೇಶಿ ಪತ್ರಕರ್ತೆಗೆ ಸುದ್ದಿಗೋಷ್ಠಿಯಲ್ಲೇ ಪಾಠ ಮಾಡಿದ್ದರು. ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವ ರಷ್ಯಾದಿಂದ ಭಾರತ ತೈಲವನ್ನು ಖರೀದಿಸುತ್ತಿರುವ ಬಗ್ಗೆ ಆಕ್ಷೇಪ ಎತ್ತಿ ಪ್ರತಕರ್ತೆ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಜೈ ಶಂಕರ್‌, ನೀವು ತೈಲ ಖರೀದಿಯ ಬಗ್ಗೆ ಉಲ್ಲೇಖಿಸಿದ್ದನ್ನು ನಾನು ಗಮನಿಸಿದ್ದೇನೆ. ರಷ್ಯಾದಿಂದ ಇಂಧನ ಖರೀದಿಗೆ ಸಂಬಂಧಿಸಿದಂತೆ ನಿಮ್ಮ ಗಮನವನ್ನು ಯುರೋಪ್ ಕಡೆಗೆ ಕೇಂದ್ರೀಕರಿಸಬೇಕೆಂದು ನಾನು ಸಲಹೆ ನೀಡುತ್ತೇನೆ. ನಾವು ಅಗತ್ಯವಿರುವಷ್ಟನ್ನು ಮಾತ್ರ ಖರೀದಿಸುತ್ತೇವೆ. ಆದರೆ ಅಂಕಿಅಂಶಗಳನ್ನು ನೋಡುವಾಗ, ಬಹುಶಃ ತಿಂಗಳಿಗೆ ನಮ್ಮ ಒಟ್ಟು ಖರೀದಿಯು ಯುರೋಪ್‌ನ ಅರ್ಧ ದಿನದಲ್ಲಿ ಬಳಕೆ ಆಗುತ್ತಿರುವ ತೈಲ ಪ್ರಮಾಣಕ್ಕಿಂತ ಕಡಿಮೆಯಿರಬಹುದು. ಆದ್ದರಿಂದ ನೀವು ಯುರೋಪ್‌ ಬಗ್ಗೆ ಗಮನ ಹರಿಸುವುದು ಉತ್ತಮ ಎಂದು ತಿರುಗೇಟು ನೀಡಿದ್ದರು. ಇದನ್ನೂ ಓದಿ: ಪ್ರಧಾನಮಂತ್ರಿಗಳ ಮ್ಯೂಸಿಯಂ ಉದ್ಘಾಟನೆ: ವಿಶೇಷತೆ ಏನು? ಟಿಕೆಟ್‌ ದರ ಎಷ್ಟು?

    ವಿದೇಶಿ ಮಾಧ್ಯಮಗಳು ಭಾರತದ ವಿರುದ್ಧ ಸುದ್ದಿ ಮಾಡುವುದರ ಜೊತೆ ಪಾಶ್ಚಿಮಾತ್ಯ ಸರ್ಕಾರಗಳ ತಾಳಕ್ಕೆ ಭಾರತ ಕುಣಿಯಬೇಕು ಎಂದು ಬಯಸುತ್ತಿರುತ್ತವೆ. ಈ ಕಾರಣಕ್ಕೆ ರಷ್ಯಾದಿಂದ ಭಾರತ ತೈಲ ಖರೀದಿ, ಎಸ್‌400 ವಾಯು ರಕ್ಷಣಾ ವ್ಯವಸ್ಥೆ ಖರೀದಿಗೆ ಆಕ್ಷೇಪ ವ್ಯಕ್ತಪಡಿಸಿ ವರದಿ ಪ್ರಕಟಿಸುತ್ತಿವೆ. ಆದರೆ ಭಾರತ ಈ ಕುತಂತ್ರಕ್ಕೆ ಬಗ್ಗದೇ ರಷ್ಯಾದ ಜೊತೆ ವ್ಯವಹಾರ ಮಾಡುವುದರ ಜೊತೆಗೆ ವಿದೇಶಿ ವೇದಿಕೆಗಳಲ್ಲೇ ಪ್ರಶ್ನೆಗಳಿಗೆ ಖಡಕ್‌ ಉತ್ತರ ನೀಡುತ್ತಿದೆ. ಯುರೋಪ್‌ ದೇಶಗಳು ರಷ್ಯಾದ ಜೊತೆ ವ್ಯವಹಾರ ನಡೆಸುತ್ತಿರುವಾಗಲೇ ನಮ್ಮ ನಡೆಯ ಬಗ್ಗೆ ಪ್ರಶ್ನೆ ಮಾಡುವುದು ಎಷ್ಟು ಸರಿ ಎನ್ನುವುದು ಭಾರತದ ನಿಲುವು.

  • ರಷ್ಯಾ ತೈಲ ಖರೀದಿ ಯಾಕೆ – ವಿದೇಶಿ ಮಾಧ್ಯಮಕ್ಕೆ ಪಾಠ ಮಾಡಿ ಉತ್ತರ ಕೊಟ್ಟ ಜೈಶಂಕರ್

    ರಷ್ಯಾ ತೈಲ ಖರೀದಿ ಯಾಕೆ – ವಿದೇಶಿ ಮಾಧ್ಯಮಕ್ಕೆ ಪಾಠ ಮಾಡಿ ಉತ್ತರ ಕೊಟ್ಟ ಜೈಶಂಕರ್

    ವಾಷಿಂಗ್ಟನ್‌: ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವ ರಷ್ಯಾದಿಂದ ಭಾರತ ತೈಲವನ್ನು ಖರೀದಿಸುತ್ತಿರುವ ಕುರಿತು ಪ್ರಶ್ನಿಸಿದ ವಿದೇಶಿ ಪತ್ರಕರ್ತೆಗೆ  ಭಾರತ ವಿದೇಶಾಂಗ ಸಚಿವ ಜೈಶಂಕರ್ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.

    ಯೂರೋಪ್ ರಷ್ಯಾದಿಂದ ಅರ್ಧ ದಿನಕ್ಕೆ ಖರೀದಿಸುವಷ್ಟು ಪ್ರಮಾಣದ ತೈಲವನ್ನು ಭಾರತ ಒಂದು ತಿಂಗಳ ಅವಧಿಗೆ ಖರೀದಿಸುತ್ತದೆ ಎಂದು ಉತ್ತರಿಸುವ ಮೂಲಕ ಪತ್ರಕರ್ತನಿಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ನಾ ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದಿದ್ದ ಪ್ರಧಾನಿ ಮೋದಿ ಏನ್ಮಾಡ್ತಿದ್ದಾರೆ: ನಾಸೀರ್ ಹುಸೇನ್ ಪ್ರಶ್ನೆ

    ಭಾರತ ಮತ್ತು ಅಮೆರಿಕ ನಡುವೆ ನಡೆದ 2+2 ಸಭೆಯಲ್ಲಿ ಮಾತನಾಡಿದ ಅವರು, ನೀವು ತೈಲ ಖರೀದಿಯನ್ನು ಉಲ್ಲೇಖಿಸುವುದನ್ನು ನಾನು ಗಮನಿಸಿದ್ದೇನೆ. ರಷ್ಯಾದಿಂದ ಇಂಧನ ಖರೀದಿಗೆ ಸಂಬಂಧಿಸಿದಂತೆ ನಿಮ್ಮ ಗಮನವನ್ನು ಯುರೋಪ್ ಕಡೆಗೆ ಕೇಂದ್ರೀಕರಿಸಬೇಕೆಂದು ನಾನು ಸಲಹೆ ನೀಡುತ್ತೇನೆ. ಬಹುಶಃ ನಾವು ಅಗತ್ಯವಿರುವಷ್ಟನ್ನು ಮಾತ್ರ ಖರೀದಿಸುತ್ತೇವೆ. ಆದರೆ ಅಂಕಿಅಂಶಗಳನ್ನು ನೋಡುವಾಗ, ಬಹುಶಃ ತಿಂಗಳಿಗೆ ನಮ್ಮ ಒಟ್ಟು ಖರೀದಿಯು ಯುರೋಪ್‌ನ ಅರ್ಧ ದಿನಕ್ಕಿಂತಲೂ ಕಡಿಮೆಯಿರಬಹುದು. ಆದ್ದರಿಂದ ನೀವು ಅದರ ಬಗ್ಗೆ ಯೋಚಿಸಬೇಕಿದೆ ಎಂದು ತಿರುಗೇಟು ನೀಡಿದ್ದಾರೆ.

    ರಷ್ಯಾವನ್ನು ಭಾರತ ಯಾಕೆ ಖಂಡಿಸುವುದಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೈಶಂಕರ್, ನಾವು ಯುಎನ್‌ನಲ್ಲಿ, ನಮ್ಮ ಸಂಸತ್ತಿನಲ್ಲಿ ಮತ್ತು ಇತರ ವೇದಿಕೆಗಳಲ್ಲಿ ನಮ್ಮ ನಿಲುವನ್ನು ತಿಳಿಸಿದ್ದೇವೆ. ನಾವು ಸಂಘರ್ಷಕ್ಕೆ ವಿರುದ್ಧವಾಗಿದ್ದೇವೆ. ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಭಿನ್ನಾಭಿಪ್ರಾಯವನ್ನು (ರಷ್ಯಾ-ಉಕ್ರೇನ್) ಬಗೆಹರಿಸಿಕೊಳ್ಳಬೇಕು ಎಂದು ಈಗಾಗಲೇ ತಿಳಿಸಿದ್ದೇವೆ. ಆ ನಿಟ್ಟಿನಲ್ಲಿ ನಡೆಯುವುದಾದರೆ ಸೂಕ್ತ ಸಹಕಾರ ನೀಡಲು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ತಿರುಪತಿ ದೇಗುಲದಲ್ಲಿ ಕಾಲ್ತುಳಿತ – ವೆಂಕಟೇಶ್ವರನ ದರ್ಶನಕ್ಕೆ ಭಕ್ತಾದಿಗಳ ನೂಕುನುಗ್ಗಲು

    russia 1

    ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಜೆ ಬ್ಲಿಂಕೆನ್ ಮಾತನಾಡಿ, ಎಸ್-400 ಮಿಸೈಲ್ ಡಿಫೆನ್ಸ್ ಸಿಸ್ಟಮ್ ಖರೀದಿಸಲು ಕಾಟ್ಸಾ ಕಾನೂನಿನಡಿಯಲ್ಲಿ ಅಮೆರಿಕವು ತನ್ನ ಪ್ರಮುಖ ಪಾಲುದಾರರಲ್ಲಿ ಒಂದಾದ ಭಾರತದ ಮೇಲೆ ನಿರ್ಬಂಧಗಳನ್ನು ವಿಧಿಸಬೇಕೇ ಅಥವಾ ನಿರ್ಬಂಧವನ್ನು ಮನ್ನಾ ಮಾಡಬೇಕೇ ಎಂಬ ಬಗ್ಗೆ ಅಮೆರಿಕ ಯಾವುದೇ ನಿರ್ಣಯ ಮಾಡಿಲ್ಲ ಎಂದು ಹೇಳಿದ್ದಾರೆ.

    ಭಾರತದಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿಯ ಕುರಿತು ಬ್ಲಿಂಕೆನ್ ಮಾತನಾಡಿ, ಮಾನವ ಹಕ್ಕುಗಳನ್ನು ರಕ್ಷಿಸುವಂತಹ ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಾವು ಬದ್ಧರಾಗಿದ್ದೇವೆ. ನಾವು ಈ ಮೌಲ್ಯಗಳೊಂದಿಗೆ ನಮ್ಮ ಪಾಲುದಾರ ಭಾರತದೊಂದಿಗೆ ನಿಯಮಿತವಾಗಿ ತೊಡಗಿಸಿಕೊಳ್ಳುತ್ತೇವೆ. ಸರ್ಕಾರ, ಪೋಲೀಸ್ ಮತ್ತು ಜೈಲು ಅಧಿಕಾರಿಗಳಿಂದ ಮಾನವ ಹಕ್ಕುಗಳ ಉಲ್ಲಂಘನೆಯ ಹೆಚ್ಚಳ ಸೇರಿದಂತೆ ಭಾರತದಲ್ಲಿನ ಇತ್ತೀಚಿನ ಕೆಲವು ಬೆಳವಣಿಗೆಗಳನ್ನು ನಾವು ಮೇಲ್ವಿಚಾರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಡುಗಡೆಯಾದ ಕೈದಿಗಳ ಶಿಕ್ಷಣ ಖರ್ಚನ್ನು ಭರಿಸುತ್ತಿದೆ ಇಂದೋರ್ ಜೈಲು

  • ಅತ್ಯಂತ ಸವಾಲಿನ ಕಾರ್ಯಾಚರಣೆಯಲ್ಲೂ 22,500 ಭಾರತೀಯರು ತಾಯ್ನಾಡಿಗೆ: ಜೈಶಂಕರ್

    ನವದೆಹಲಿ: ಉಕ್ರೇನ್-ರಷ್ಯಾ ಯುದ್ಧದ ಸಂದರ್ಭದಲ್ಲಿ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರುವ ಕಾರ್ಯಾಚರಣೆ ಅತ್ಯಂತ ಸವಾಲಿನದ್ದಾಗಿದ್ದರೂ 22,500 ಭಾರತೀಯರನ್ನು ಸ್ಥಳಾತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮಂಗಳವಾರ ಸಂಸತ್ತಿನಲ್ಲಿ ತಿಳಿಸಿದರು.

    ಉಕ್ರೇನ್ ರಷ್ಯಾದ ಮೇಲೆ ದಾಳಿ ಮಾಡುವುದಕ್ಕೂ ಮೊದಲು ಅಲ್ಲಿದ್ದ ಭಾರತೀಯರನ್ನು ರಕ್ಷಿಸಲು ಭಾರತ ತೆಗೆದುಕೊಂಡ ಕ್ರಮಗಳನ್ನು ಜೈಶಂಕರ್ ಸಂಸತ್ತಿನಲ್ಲಿ ವಿವರಿಸಿದರು.

    ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರುವ ಬಗ್ಗೆ ಸುಳಿವು ಸಿಗುತ್ತಿದ್ದಂತೆ ಜನವರಿ ತಿಂಗಳಿನಿಂದಲೇ ಉಕ್ರೇನ್‌ನ ಭಾರತೀಯ ರಾಯಭಾರ ಕಚೇರಿ ಅಲ್ಲಿದ್ದ ಭಾರತೀಯ ವಿದ್ಯಾರ್ಥಿಗಳಿಗಾಗಿ ನೋಂದಣಿ ಕಾರ್ಯವನ್ನು ಪ್ರಾರಂಭಿಸಿತು. ಇದರ ಪರಿಣಾಮವಾಗಿ ಉಕ್ರೇನ್‌ನಲ್ಲಿದ್ದ 20 ಸಾವಿರ ಭಾರತೀಯರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು ಎಂಬ ಮಾಹಿತಿ ನೀಡಿದರು. ಇದನ್ನೂ ಓದಿ: ಮಲಯಾಳಂ ಸುದ್ದಿ ವಾಹಿನಿ ನಿಷೇಧಿಸಿ ಕೇಂದ್ರ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ತಡೆ

    ಸಲಹೆಯ ಹೊರತಾಗಿಯೂ ಸಾವಿರಾರು ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋದಾಯಿಸಿಕೊಳ್ಳಲು ಹಿಂದೇಟು ಹಾಕಿದರು. ಉಕ್ರೇನ್ ವಿಶ್ವವಿದ್ಯಾಲಯಗಳು ಆನ್‌ಲೈನ್ ತರಗತಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಯಾವುದೇ ಮಾಹಿತಿ ನೀಡಿರದ ಕಾರಣ ಹೆಚ್ಚಿನ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರಲಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಭೀಕರ ಯುದ್ಧದ ಸಂದರ್ಭದಲ್ಲಿ ಅಲ್ಲಿದ್ದ ಭಾರತೀಯರು ಉಕ್ರೇನ್‌ನಾದ್ಯಂತ ಚದುರಿ ಹೋಗಿದ್ದರು. ಅವರನ್ನು ಒಟ್ಟಾಗಿಸಿ, ಉಕ್ರೇನ್ ಗಡಿ ದಾಟಿಸಿ ದೇಶಕ್ಕೆ ಕರೆತರುವುದು ಅತ್ಯಂತ ಸವಾಲಿನ ಕೆಲಸವೇ ಆಗಿತ್ತು. ಈ ಕಾರ್ಯಕ್ಕಾಗಿ ಆಪರೇಷನ್ ಗಂಗಾ ಯೋಜನೆಯನ್ನು ಕಾರ್ಯ ರೂಪಕ್ಕೆ ತರಲಾಯಿತು ಎಂದು ಜೈಶಂಕರ್ ತಿಳಿಸಿದರು. ಇದನ್ನೂ ಓದಿ: ಹಿಜಬ್‌- ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ

    ಶೆಲ್ ದಾಳಿಗೆ ಮೃತಪಟ್ಟ ಭಾರತೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಮೃತದೇಹವನ್ನು ಭಾರತಕ್ಕೆ ತರುವಲ್ಲಿ ಎಲ್ಲಾ ಪ್ರಯತ್ನಗಳೂ ನಡೆಯುತ್ತಿವೆ. ಯುದ್ಧದ ಸಂದರ್ಭದಲ್ಲಿ ಗುಂಡು ತಗುಲಿ ಗಾಯಗೊಂಡಿದ್ದ ವಿದ್ಯಾರ್ಥಿ ಹರ್ಜೋತ್ ಸಿಂಗ್‌ನ ಎಲ್ಲಾ ವೈದ್ಯಕೀಯ ಚಿಕಿತ್ಸೆಗೆ ಸರ್ಕಾರ ಖರ್ಚನ್ನು ಭರಿಸಿದೆ ಹಾಗೂ ಅವರನ್ನು ಕೀವ್‌ನಿಂದ ಪೋಲಿಷ್ ಗಡಿಗೆ ತೆರಳಲು ವ್ಯವಸ್ಥೆ ಮಾಡಿ, ವಿಮಾನದಲ್ಲಿ ಭಾರತಕ್ಕೆ ಕರೆ ತರಲಾಗಿದೆ ಎಂದರು.

  • ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು: ಭಾರತ

    ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು: ಭಾರತ

    ನವದೆಹಲಿ: ಅಘ್ಘಾನಿಸ್ತಾನದಲ್ಲಿ ದಾಳಿ ನಡೆಸಿರುವ ಐಸಿಸ್-ಕೆ ಉಗ್ರರ ಸಂಘಟನೆ ವಿರುದ್ಧ ಭಾರತ ಕಿಡಿಕಾರಿದೆ. ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು ಎಂದು ಕರೆ ನೀಡಿದೆ.

    ಅಘ್ಘಾನಿಸ್ತಾನದ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆಯಿಂದ ಮಧ್ಯರಾತ್ರಿವರೆಗೆ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಭೀಕರ ಭಯೋತ್ಪಾದಕ ದಾಳಿಗೆ ಭಾರತ ಖಂಡನೆ ಸೂಚಿಸಿದೆ. ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು. ಉಗ್ರರಿಗೆ ಆಶ್ರಯ ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ವಿದೇಶಾಂಗ ಸಚಿವಾಲಯದಿಂದ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ಕಾಬೂಲ್‍ನಲ್ಲಿ 7 ಸರಣಿ ಬಾಂಬ್ ಸ್ಫೋಟ – 90ಕ್ಕೂ ಹೆಚ್ಚು ಬಲಿ, 150ಕ್ಕೂ ಹೆಚ್ಚು ಮಂದಿಗೆ ಗಾಯ

    ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್, ಸರ್ವಪಕ್ಷ ಸಭೆ ಕರೆದು ಮಾತನಾಡಿದ್ದು, ಅಘ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಸ್ಥಿತಿಗತಿಗಳನ್ನು ಭಾರತ ಗಮನಿಸುತ್ತಿದೆ. ಅಘ್ಘಾನಿಸ್ತಾನದಲ್ಲಿ ತಾಲಿಬಾನಿಗಳು ನಡೆಸುತ್ತಿರುವ ದಬ್ಬಾಳಿಕೆ ಗಮನಿಸುತ್ತಿದ್ದು, ಕಾಬೂಲ್‍ನಲ್ಲಿ ಹಲವು ಘಟನೆಗಳು ಸಂಭವಿಸುತ್ತಿದೆ. ಅಲ್ಲಿನ ಜನ ದೇಶ ಬಿಟ್ಟು ತೆರಳಲು ಕಾತರರಾಗಿದ್ದಾರೆ. ಭಾರತ, ಅಮೆರಿಕ ಸಹಿತ ಇತರ ದೇಶ ಕಾಬೂಲ್‍ನಲ್ಲಿ ಐಸಿಸ್ ಸಂಘಟನೆಯ ದಾಳಿಯನ್ನು ಖಂಡಿಸಿದೆ ಮತ್ತು ಎಚ್ಚರಿಕೆ ನೀಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಐಸಿಸ್-ಕೆ ಉಗ್ರರ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಗುಡುಗು

  • ಕೊರೊನಾ ಚೀನಾ ವೈರಸ್ ಅನ್ನಬೇಡಿ: ಭಾರತಕ್ಕೆ ಚೀನಾ ಮನವಿ

    ಕೊರೊನಾ ಚೀನಾ ವೈರಸ್ ಅನ್ನಬೇಡಿ: ಭಾರತಕ್ಕೆ ಚೀನಾ ಮನವಿ

    ನವದೆಹಲಿ: ಕೊರೊನಾ ವೈರಸ್ ಅನ್ನು ಚೀನಾ ವೈರಸ್ ಎಂದು ಕರೆಯಬೇಡಿ ಇದು ನಮ್ಮ ದೇಶದ ಮುಂದಿನ ಭವಿಷ್ಯಕ್ಕೆ ಒಳ್ಳೆಯದಲ್ಲ ಎಂದು ಚೀನಾ ಭಾರತಕ್ಕೆ ಮನವಿ ಮಾಡಿಕೊಂಡಿದೆ.

    ಇಂದು ವಿಶ್ವವನ್ನೇ ಆತಂಕಕ್ಕೆ ತಳ್ಳಿರುವ ಕೊರೊನಾ ವೈರಸ್ ಮೊದಲಿಗೆ ಕಾಣಿಸಿಕೊಂಡಿದ್ದು, ಚೀನಾದ ವುಹಾನ್ ಪ್ರಾಂತ್ಯದಲ್ಲಿ. ಇಲ್ಲಿ ಮೊದಲಿಗೆ ಕಂಡುಬಂದ ಕೊರೊನಾ ಇಂದು ಇಡೀ ವಿಶ್ವವನ್ನೇ ಆವರಿಸಿದೆ. ಹೀಗಾಗಿ ಇದಕ್ಕೆ ಜಾಗತಿಕ ಮಟ್ಟದಲ್ಲಿ ಚೀನಾ ವೈರಸ್ ಎಂದು ಕರೆಯಲಾಗುತ್ತಿದೆ. ಈ ಕಾರಣಕ್ಕೆ ಮುಜುಗರಕ್ಕೆ ಒಳಗಾಗಿರುವ ಚೀನಾ, ಭಾರತ ಕೊರೊನಾ ವೈರಸ್ ಅನ್ನು ಚೀನಾ ವೈರಸ್ ಎಂದು ಕರೆಯುವುದಿಲ್ಲ ಎಂದು ನಾವು ಭಾವಿಸುತ್ತೇವೆ ಎಂದು ಹೇಳಿದೆ.

    ಮಂಗಳವಾರ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಮತ್ತು ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರ ನಡುವೆ ನಡೆದ ಫೋನ್ ಸಂಭಾಷಣೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ. ಜೈಶಂಕರ್ ಅವರ ಜೊತೆಯಲ್ಲಿ ಮಾತನಾಡಿದ ವಾಂಗ್ ಯಿ ಅವರು, ಕೊರೊನಾ ವೈರಸ್ ಅನ್ನು ಚೀನಾ ವೈರಸ್ ಎಂದು ಕರೆಯುವ ಸಂಕುಚಿತ ಮನಸ್ಥಿತಿ ಭಾರತಕ್ಕೆ ಇಲ್ಲ ಎಂದು ನಾವು ಭಾವಿಸುತ್ತೇವೆ ಎಂದು ಹೇಳಿದ್ದಾರೆ.

    ಕೊರೊನಾ ವೈರಸ್‍ಗೆ ಚೀನಾ ವೈರಸ್ ಎಂದು ಬಳಸದಂತೆ ಬೇರೆ ದೇಶಗಳಿಗೆ ಮನವರಿಕೆ ಮಾಡಿಕೊಡಲು ಚೀನಾದ ರಾಜತಾಂತ್ರಿಕರು ವಿಶ್ವದದ್ಯಾಂತ ಅಭಿಯಾನ ನಡೆಸುತ್ತಿದ್ದಾರೆ. ಕೊರೊನಾ ವೈರಸ್ ಅನ್ನು ಚೀನಾ ವೈರಸ್ ಎಂದು ಕರೆದು, ನಮ್ಮ ದೇಶಕ್ಕೆ ಕಳಂಕ ಅಂಟಿಸುವ ಸಂಕುಚಿತ ಮನೋಭಾವನೆಯನ್ನು ಭಾರತ ವಿರೋಧ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಮಂಗಳವಾರ ವಾಂಗ್ ಯಿ ಅವರು ಹೇಳಿದ್ದಾರೆ.

    ಈ ವಿಚಾರವಾಗಿ ಮಂಗಳವಾರ ಸಂಜೆ ಟ್ವೀಟ್ ಮಾಡಿರುವ ಭಾರತದ ಚೀನಾ ರಾಯಭಾರಿ ಸನ್ ವೀಡಾಂಗ್ ಅವರು, ಕೊರೊನಾ ವೈರಸ್ ಅನ್ನು ಚೀನಾ ವೈರಸ್ ಎಂದು ಲೇಬಲ್ ಮಾಡದೇ ಇರಲು ಭಾರತದ ವಿದೇಶಾಂಗ ಸಚಿವ ಡಾ.ಜೈಶಂಕರ್ ಅವರು ಒಪ್ಪಿಕೊಂಡಿದ್ದಾರೆ. ಈ ಮೂಲಕ ಅಂತರಾಷ್ಟ್ರೀಯ ಸಮುದಾಯಕ್ಕೆ ಒಗ್ಗಟ್ಟಿನ ಬಿಗಿ ಸಂದೇಶವನ್ನು ರವಾನಿಸಿದ್ದೇವೆ ಎಂದು ಹೇಳಿದ್ದಾರೆ.

    ಅಮೆರಿಕದಲ್ಲಿ ಕೆಲವು ವ್ಯಕ್ತಿಗಳು ಉದ್ದೇಶಪೂರ್ವಕವಾಗಿಯೇ ಕೊರೊನಾ ವೈರಸ್ ಅನ್ನು ಚೀನಾ ವೈರಸ್ ಎಂದು ಕರೆಯುತ್ತಿದ್ದಾರೆ ಎಂದು ಚೀನಾ ಆರೋಪಿಸಿದೆ. ಕೊರೊನಾ ವೈರಸ್ ಅನ್ನು ಚೀನಾಗೆ ಲೇಬೆಲ್ ಮಾಡುವುದನ್ನು ನಾವು ವಿರೋಧಿಸುತ್ತೇವೆ. ಡಬ್ಲ್ಯುಎಚ್‍ಒ ಮತ್ತು ಅಂತರರಾಷ್ಟ್ರೀಯ ಸಮುದಾಯಗಳು ಎರಡೂ, ನಿರ್ದಿಷ್ಟ ದೇಶಗಳು ಮತ್ತು ಪ್ರದೇಶಗಳಿಗೆ ವೈರಸ್‍ಗಳನ್ನು ಲೇಬಲ್ ಮಾಡುವುದನ್ನು ಸ್ಪಷ್ಟವಾಗಿ ವಿರೋಧಿಸುತ್ತವೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗೆಂಗ್ ಶುವಾಂಗ್ ಮಂಗಳವಾರ ನಿಯಮಿತ ಸಚಿವಾಲಯದ ಸಮಾವೇಶದಲ್ಲಿ ಹೇಳಿದ್ದಾರೆ.

    ವಾಂಗ್ ಮತ್ತು ಜೈಶಂಕರ್ ನಡುವಿನ ದೂರವಾಣಿ ಸಂಭಾಷಣೆಯ ಬಗ್ಗೆ ಟ್ವೀಟ್ ಮಾಡಿರುವ ರಾಯಭಾರಿ ಸನ್, ಕೊರೊನಾ ವೈರಸ್ ವಿರುದ್ಧದ ಯುದ್ಧವನ್ನು ಭಾರತ ನಿಭಾಯಿಸಬಲ್ಲದು ಮತ್ತು ಗೆಲ್ಲಬಲ್ಲದು ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಚೀನಾ ಮತ್ತು ಭಾರತ ಪರಸ್ಪರ ಬೆಂಬಲಿಸಬೇಕು ಮತ್ತು ಜಂಟಿಯಾಗಿ ಜಾಗತಿಕ ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡಬೇಕು ಎಂದು ತಿಳಿಸಿದ್ದಾರೆ.

    ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ನಾವು ಇದ್ದೇವೆ ಎಂದು ಸಹಾನುಭೂತಿ ಮತ್ತು ಒಗ್ಗಟ್ಟನ್ನು ವ್ಯಕ್ತಪಡಿಸಿದ್ದಾರೆ. ಚೀನಾ ಭಾರತದೊಂದಿಗೆ ತಮ್ಮ ಅನುಭವವನ್ನು ಹಂಚಿಕೊಳ್ಳಲು ಸಿದ್ಧವಾಗಿದೆ. ನಮ್ಮ ಸಾಮಥ್ರ್ಯದೊಳಗೆ ನಾವು ಸಹಾಯವನ್ನು ಒದಗಿಸುತ್ತೇವೆ ಎಂದು ವಾಂಗ್ ಅವರು ಜೈಶಂಕರ್ ಹೇಳಿದ್ದಾರೆ. ಚೀನಾದ ಸಹಾನುಭೂತಿ ಸಂದೇಶ ಮತ್ತು ಭಾರತಕ್ಕೆ ವೈದ್ಯಕೀಯ ಸಾಮಗ್ರಿಗಳ ಸಹಾಯಕ್ಕಾಗಿ ಜೈಶಂಕರ್ ಧನ್ಯವಾದ ಅರ್ಪಿಸಿದ್ದಾರೆ.

  • ವಿದೇಶಾಂಗ ಸಚಿವ ಜೈಶಂಕರ್ ಬಿಜೆಪಿಗೆ ಸೇರ್ಪಡೆ

    ವಿದೇಶಾಂಗ ಸಚಿವ ಜೈಶಂಕರ್ ಬಿಜೆಪಿಗೆ ಸೇರ್ಪಡೆ

    ನವದೆಹಲಿ: ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಔಪಚಾರಿಕವಾಗಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

    ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಡಾ.ಜೈಶಂಕರ್ ಅವರು ರಾಜತಾಂತ್ರಿಕ ಮತ್ತು ಮಾಜಿ ವಿದೇಶಾಂಗ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಎರಡನೇ ಅವಧಿಯಲ್ಲಿ ಅಚ್ಚರಿ ಎಂಬಂತೆ ಮೋದಿ ಅವರು ಜೈ ಶಂಕರ್ ಅವರಿಗೆ ಮಹತ್ವದ ವಿದೇಶಾಂಗ ಇಲಾಖೆಯನ್ನು ನೀಡಿದ್ದರು. ಮೇ 30ರಂದು ಕೇಂದ್ರ ಸಚಿವರೊಂದಿಗೆ ಜೈಶಂಕರ್ ಅವರೂ ಸಹ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

    ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಆರು ತಿಂಗಳ ಒಳಗಡೆ ಜೈಶಂಕರ್ ಸಂಸತ್ ಸದಸ್ಯರಾಗಬೇಕಿದೆ. ಜೈಶಂಕರ್ ಅವರನ್ನು ಗುಜರಾತ್‍ನಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆ ಇದ್ದು, ಈ ಹಿನ್ನೆಲೆ ಔಪಚಾರಿಕವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

  • ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಜೈಲಿನಲ್ಲೇ ಸೈಕೋ ಜೈಶಂಕರ್ ಆತ್ಮಹತ್ಯೆ

    ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಜೈಲಿನಲ್ಲೇ ಸೈಕೋ ಜೈಶಂಕರ್ ಆತ್ಮಹತ್ಯೆ

    ಬೆಂಗಳೂರು: ಅತ್ಯಾಚಾರಿ, ಸೈಕೋ ಕಿಲ್ಲರ್ ಜೈಶಂಕರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

    24 ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಸೈಕೋ ಜೈಶಂಕರ್, 2013ರ ಸೆಪ್ಟೆಂಬರ್‍ನಲ್ಲಿ ಜೈಲಿನಿಂದ ಪರಾರಿಯಾಗಿದ್ದನು. ಕಾಲಿಗೆ ಗಾಯ ಮಾಡಿಕೊಂಡಿದ್ದ ಆತ, ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ. ಜೈಲಿನಿಂದ ಸ್ವಲ್ಪ ದೂರದಲ್ಲೇ ನಡುಮುರಿದುಕೊಂಡು ಬಿದ್ದಿದ್ದ ಜೈಶಂಕರನನ್ನ ಬಂಧಿಸಲಾಗಿತ್ತು. ಬಳಿಕ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಶಂಕರನಿಗೆ ಪ್ರತ್ಯೇಕ ಸೆಲ್ ನೀಡಲಾಗಿದ್ದು, ಜೈಲಿನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದನು.

    ಇದೀಗ ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ ಬ್ಲೆಡ್ ನಿಂದ ಕತ್ತು ಕೊಯ್ದುಕೊಂಡು ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಕೂಡಲೇ ವಿಕ್ಟೋರಿಯಾ ಅಸ್ಪತ್ರಗೆ ಕರೆತರಲಾಗುತಿತ್ತು. ಈ ವೇಳೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ.

    ಪ್ರಕರಣಗಳು: ತುಮಕೂರಿನ ಗಿರಿಯನಹಳ್ಳಿಯಲ್ಲಿ ದೊಡ್ಡಯ್ಯ, ಪುಟ್ಟಮ್ಮ ದಂಪತಿಗಳು ಹಾಗೂ ಅವರ ಪುತ್ರಿ ರಾಜಮ್ಮ ಕೊಲೆ ಮಾಡಿದ ಆರೋಪ ಸೈಕೋ ಜಯಶಂಕರ್ ಮೇಲಿತ್ತು. 2011ರ ಮಾರ್ಚ್ 29ರಂದು ಈ ತ್ರಿವಳಿ ಕೊಲೆ ಪ್ರಕರಣದಲ್ಲಿ ಜೈಶಂಕರ್ ಖುಲಾಸೆಗೊಂಡಿದ್ದನು. ಸೂಕ್ತ ಸಾಕ್ಷಿಗಳು ದೊರೆಯದ ಹಿನ್ನೆಲೆಯಲ್ಲಿ ಖುಲಾಸೆಗೊಳಿಸಲಾಗಿದೆ ಎಂದು ಹೇಳಲಾಗಿತ್ತು.

    2011ರ ಏಪ್ರಿಲ್ 27ರಂದು ಚಿತ್ರದುರ್ಗದ ಎಂ.ಕೆ.ಹಟ್ಟಿಯಲ್ಲಿ ಚಂದ್ರಮ್ಮ ಎಂಬವರ ಮೇಲೆ ಜೈಶಂಕರ್ ಅತ್ಯಾಚಾರ ನಡೆಸಿದ್ದನು. ಈ ವೇಳೆ ಅಲ್ಲಿಗೆ ಆಕೆಯ ಪತಿ ಹನುಮಂತಪ್ಪ ಬಂದಿದ್ದರು. ಇಬ್ಬರನ್ನು ಕೊಲೆ ಮಾಡಿದ ಆರೋಪ ಜೈಶಂಕರ್ ಮೇಲಿತ್ತು. ಈ ಜೋಡಿ ಕೊಲೆ ಪ್ರಕರಣವನ್ನೂ 2017ರ ಸೆಪ್ಟೆಂಬರ್‍ನಲ್ಲಿ ಬೆಂಗಳೂರು ಗ್ರಾಮಾಂತರ ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿತ್ತು.


    ವಿಜಯಪುರದಲ್ಲಿ ಜೈ ಶಂಕರ್ ನನ್ನು ಪೊಲೀಸರು ಬಂಧಿಸಿದಾಗ ಹಲವು ಕೊಲೆ ಪ್ರಕರಣಗಳು ಹೊರಬಂದಿದ್ದವು. ಕರ್ನಾಟಕದ ಮೂರು ಪ್ರಕರಣಗಳಲ್ಲಿ ಜೈ ಶಂಕರ್ ಈಗಾಗಲೇ ಖುಲಾಸೆಗೊಂಡಿದ್ದು, ಇನ್ನೂ 2 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ತಮಿಳುನಾಡಿನಲ್ಲಿಯೂ ಜೈ ಶಂಕರ್ ಮೇಲೆ ಹಲವು ಕೇಸುಗಳಿವೆ ಎಂಬುದಾಗಿ ತಿಳಿದುಬಂದಿತ್ತು.

    ಸದ್ಯ ಶಂಕರ್ ಆತ್ಮಹತ್ಯೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಮಾಡಿಕೊಳ್ಳಲಾಗಿದೆ.

    https://www.youtube.com/watch?v=MdCVv0MV_Fc&feature=youtu.be