Tag: Jakarta

  • ಆಸಿಯಾನ್-ಭಾರತ ಶೃಂಗಸಭೆಯ ಸಹ ಅಧ್ಯಕ್ಷತೆ ಹೆಮ್ಮೆ, ಗೌರವ ತಂದಿದೆ: ಮೋದಿ

    ಆಸಿಯಾನ್-ಭಾರತ ಶೃಂಗಸಭೆಯ ಸಹ ಅಧ್ಯಕ್ಷತೆ ಹೆಮ್ಮೆ, ಗೌರವ ತಂದಿದೆ: ಮೋದಿ

    ಜಕಾರ್ತ: ಆಸಿಯಾನ್ (ASEAN)-ಭಾರತ (INDIA) ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ ಇಂಡೋನೇಷ್ಯಾಕ್ಕೆ (Indonesia) ಆಗಮಿಸಿದ್ದು, ಆಯಕಟ್ಟಿನ ಪ್ರಮುಖ ಪ್ರದೇಶದ ದೇಶಗಳೊಂದಿಗೆ ಭಾರತದ ಪಾಲುದಾರಿಕೆಯ ಭವಿಷ್ಯದ ಬಾಹ್ಯರೇಖೆಯನ್ನು ಚರ್ಚಿಸಲಿದ್ದಾರೆ.

    ಜಕಾರ್ತದಲ್ಲಿ (Jakarta) ನಡೆದ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ವರ್ಷ ನಾವು ಭಾರತ-ಆಸಿಯಾನ್ ಸ್ನೇಹ ದಿನವನ್ನು ಆಚರಿಸಿದ್ದೇವೆ ಮತ್ತು ಅದಕ್ಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ರೂಪವನ್ನು ನೀಡಿದ್ದೇವೆ ಎಂದರು.

    ನಮ್ಮ ಪಾಲುದಾರಿಕೆಯು ನಾಲ್ಕನೇ ದಶಕವನ್ನು ತಲುಪಿದೆ. ಈ ಶೃಂಗಸಭೆಯ ಸಹ ಅಧ್ಯಕ್ಷರಾಗಿರುವುದು ನನಗೆ ಹೆಮ್ಮೆ ತಂದಿದೆ. ಈ ಶೃಂಗಸಭೆ ಆಯೋಜಿಸಿದ್ದಕ್ಕಾಗಿ ಇಂಡೋನೇಷ್ಯಾದ ಅಧ್ಯಕ್ಷ ಜೋಕೋ ವಿಡೋಡೋ ಅವರನ್ನು ನಾನು ಅಭಿನಂದಿಸುತ್ತೇನೆ. ಭಾರತ ಮತ್ತು ಆಸಿಯಾನ್ ಮಧ್ಯೆ ಉತ್ತಮ ಬಾಂಧವ್ಯವಿದೆ. ಶಿಕ್ಷಣ, ರಕ್ಷಣೆ ಮತ್ತು ಪ್ರವಾಸೋದ್ಯಮ ವಿಷಯಗಳಲ್ಲಿ ಪರಸ್ಪರ ಸಹಕಾರವನ್ನು ನೀಡಿದೆ. ಆಸಿಯಾನ್ ದೇಶದ ಅಭಿವೃದ್ಧಿಗೆ ಭಾರತ ಸಹಕರಿಸಲಿದೆ ಎಂದು ಹೇಳಿದರು.

    ಇದಕ್ಕೂ ಮೊದಲು ಪ್ರಧಾನಿ ಮೋದಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಜಕಾರ್ತದಲ್ಲಿ ಬಂದಿಳಿದಿದ್ದೇನೆ. ಆಸಿಯಾನ್ ಸಂಬಂಧಿತ ಸಭೆಗಳನ್ನು ಎದುರು ನೋಡುತ್ತಿದ್ದೇನೆ. ವಿಶ್ವವನ್ನು ಉತ್ತಮವಾಗಿಸುವ ಸಲುವಾಗಿ ವಿವಿಧ ನಾಯಕರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಬರೆದು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲದೇ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಜಕಾರ್ತದಲ್ಲಿ ಪ್ರಧಾನಿ ಮೋದಿಯವರ ಫೋಟೋಗಳನ್ನು ತಮ್ಮ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

    ಆಸಿಯಾನ್-ಭಾರತ ಶೃಂಗಸಭೆಯ ಬಳಿಕ ಮೋದಿ 18ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ದೆಹಲಿಗೆ ಹಿಂದಿರುಗಲಿದ್ದು, ಸೆಪ್ಟೆಂಬರ್ 9 ಮತ್ತು 10ರಂದು ನಡೆಯುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

    ಪ್ರಧಾನಿ ಇಂಡೋನೇಷ್ಯಾ ಭೇಟಿ ವೇಳೆ ಜಕಾರ್ತ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೋದಿಗೆ ವಿಧ್ಯುಕ್ತ ಸ್ವಾಗತ ಕೋರಿದ್ದು, ಮಹಿಳಾ ಸಬಲೀಕರಣ ಮತ್ತು ಮಕ್ಕಳ ರಕ್ಷಣಾ ಸಚಿವರಾದ ಐ.ಗುಸ್ತಿ ಆಯು ಬಿಂಟಾಂಗ್ ದರ್ಮಾವತಿ ಅವರು ಪ್ರಧಾನಿಯನ್ನು ಬರಮಾಡಿಕೊಂಡರು. ಅಲ್ಲದೇ ವಿಮಾನ ನಿಲ್ದಾಣದಲ್ಲಿ ಇಂಡೋನೇಷ್ಯಾದ ಸಾಂಸ್ಕೃತಿಕ ನೃತ್ಯವನ್ನು ಪ್ರದರ್ಶಿಸಲಾಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂಡೋನೆಷ್ಯಾದಲ್ಲಿ ಭೂಕಂಪ 40ಕ್ಕೂ ಅಧಿಕ ಸಾವು – 300ಕ್ಕೂ ಹೆಚ್ಚು ಮಂದಿಗೆ ಗಾಯ

    ಇಂಡೋನೆಷ್ಯಾದಲ್ಲಿ ಭೂಕಂಪ 40ಕ್ಕೂ ಅಧಿಕ ಸಾವು – 300ಕ್ಕೂ ಹೆಚ್ಚು ಮಂದಿಗೆ ಗಾಯ

    ಜಕಾರ್ತ್: ಇಂಡೋನೆಷ್ಯಾದ (Indonesia) ಜಾವಾದಲ್ಲಿ ನಡೆದ 5.6 ತೀವ್ರತೆಯ ಭೂಕಂಪಕ್ಕೆ (Earthquake) 40ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

    ಸ್ಥಳೀಯ ಆಡಳಿತದ ಹಿರಿಯ ಅಧಿಕಾರಿ ನೀಡಿರುವ ಮಾಹಿತಿ ಪ್ರಕಾರ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೂಕಂಪಕ್ಕೆ ಹಲವು ಕಟ್ಟಡಗಳು ನೆಲಸಮವಾಗಿದ್ದು, 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈಗಾಗಲೇ 300ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿರುವುದಾಗಿ ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕುಕ್ಕರ್ ಬಾಂಬ್ ಬ್ಲಾಸ್ಟ್- ಜಾಗತಿಕ ಉಗ್ರ ಸಂಘಟನೆಯಿಂದ ಪ್ರಭಾವಿತನಾಗಿದ್ದ ಶಾರೀಕ್: ಅಲೋಕ್‌ಕುಮಾರ್

    ಜರ್ಕಾತ್‍ನ (Jakarta) ದಕ್ಷಿಣಆಗ್ನೇಯ ಭಾಗದ 75 ಕಿ.ಮೀ ವರೆಗೆ ಭೂಕಂಪ ಸಂಭವಿಸಿದ್ದು, ಆರಂಭದ 10 ಕಿ.ಮೀ ವ್ಯಾಪ್ತಿಯಲ್ಲಿ ಹೆಚ್ಚಿನ ಸಾವು ಸಂಭವಿಸಿದೆ. ನೂರಾರು ಮನೆ, ಶಾಲೆಗಳಿಗೆ ಹಾನಿಯಾಗಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಶ್ರದ್ಧಾ ವಾಕರ್ ಹತ್ಯೆ ಕೇಸ್ – CBIಗೆ ವರ್ಗಾಯಿಸುವಂತೆ ದೆಹಲಿ ಹೈಕೋರ್ಟ್‌ಗೆ ಅರ್ಜಿ

    https://twitter.com/gchahal/status/1594611651046952960

    ಭೂಕಂಪ ಸಂಭವಿಸಿ 2 ಗಂಟೆಗಳ ಕಾಲ ಜನ ಭಯಭೀತರಾಗಿ ಇದ್ದ ಜಾಗದಲ್ಲೇ ಕೂತಿದ್ದಾರೆ. ಭೂಕಂಪದ ಭಯಾನಕ ದೃಶ್ಯ ಸ್ಥಳೀಯ ಸಿಸಿಟಿವಿಗಳಲ್ಲಿ ಸೆರೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಫುಟ್ಬಾಲ್ ತಂಡ ಸೋತಿದಕ್ಕೆ ಸ್ಟೇಡಿಯಂನಲ್ಲೇ ಗಲಭೆ – ಸಾವಿನ ಸಂಖ್ಯೆ 174ಕ್ಕೆ ಏರಿಕೆ, 180 ಮಂದಿಗೆ ಗಾಯ

    ಫುಟ್ಬಾಲ್ ತಂಡ ಸೋತಿದಕ್ಕೆ ಸ್ಟೇಡಿಯಂನಲ್ಲೇ ಗಲಭೆ – ಸಾವಿನ ಸಂಖ್ಯೆ 174ಕ್ಕೆ ಏರಿಕೆ, 180 ಮಂದಿಗೆ ಗಾಯ

    ಜಕಾರ್ತ: ಇಂಡೋನೇಷ್ಯಾದಲ್ಲಿ (Indonesia) ಶನಿವಾರ ರಾತ್ರಿ ನಡೆದ ಫುಟ್ಬಾಲ್ (Football) ಪಂದ್ಯವೊಂದರಲ್ಲಿ ಉಂಟಾದ ಗಲಭೆಯಿಂದಾಗಿ 127 ಇದ್ದ ಮೃತರ ಸಂಖ್ಯೆ 174ಕ್ಕೆ ಏರಿಕೆಯಾಗಿದೆ.

    ಇಂಡೋನೇಷ್ಯಾದ (Indonesia) ಪೂರ್ವ ಜಾವಾದ ಪ್ರಾಂತ್ಯದ ಮಲಾಂಗ್‌ನಲ್ಲಿರುವ ಕಂಜುರುಹಾನ್ ಕ್ರೀಡಾಂಗಣದಲ್ಲಿ ಫುಟ್ಬಾಲ್ ಪಂದ್ಯ ಆಯೋಜಿಸಲಾಗಿತ್ತು. ಈ ವೇಳೆ ತವರು ಮೈದಾನದಲ್ಲಿ ಅರೆಮಾ ಫುಟ್ಬಾಲ್ ಅಕಾಡೆಮಿ (Arema Football Academy) ಅನ್ನು ಪ್ರತಿಸ್ಪರ್ಧಿ ತಂಡ ಪರ್ಸೆಬಾಯಾ ಸೋಲಿಸಿತು. ಈ ಸೋಲು ಅಭಿಮಾನಿಗಳು ರೊಚ್ಚಿಗೇಳಲು ಕಾರಣವಾಯಿತು. ಅರೆಮಾ ಫುಟ್ಬಾಲ್ ಅಕಾಡೆಮಿ ತಂಡದ ಅಭಿಮಾನಿಗಳು ಗ್ರೌಂಡ್‌ಗೆ ಇಳಿದು ಗಲಭೆ ನಡೆಸಿದ್ದಾರೆ. ಇದನ್ನೂ ಓದಿ: ನೆಚ್ಚಿನ ಫುಟ್‌ಬಾಲ್‌ ತಂಡ ಸೋತಿದ್ದಕ್ಕೆ ಸ್ಟೇಡಿಯಂನಲ್ಲಿ ಅಭಿಮಾನಿಗಳ ಗಲಭೆ – ಮಕ್ಕಳು, ಪೊಲೀಸರು ಸೇರಿ 127 ಮಂದಿ ಸಾವು

    ಘಟನೆಯಲ್ಲಿ ಇಂದು ಬೆಳಿಗ್ಗೆ 9:30ರ ವರೆಗೆ 158 ಮಂದಿ ಮೃತಪಟ್ಟಿದ್ದರು. ಆದರೆ 10:30ರ ವೇಳೆಗೆ 174 ಮಂದಿ ಮೃತಪಟ್ಟಿದ್ದಾರೆ. 180ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಪೊಲೀಸರು (Police), ಸಾರ್ವಜನಿಕರು ಹಾಗೂ ಮಕ್ಕಳೂ ಇದ್ದಾರೆ.

    ಜನರನ್ನು ಚದುರಿಸಲು ಘಟನಾ ಸ್ಥಳದಲ್ಲಿ ಅಶ್ರುವಾಯು ಸಿಡಿಸಲಾಯಿತು. ಸಾಕರ್ ಮೈದಾನದಲ್ಲಿ ಗಲಭೆ ಸಹಜ ಸ್ಥಿತಿಗೆ ಬರುತ್ತಿದ್ದಂತೆ ಬೀದಿಗಳಲ್ಲಿ ಜನ ಚೆಲ್ಲಾಪಿಲ್ಲಿಯಾಗಿ ಓಡಿದರು. ಈ ವೇಳೆ ಕಾಲ್ತುಳಿತಕ್ಕೆ ಸಾಕಷ್ಟು ಮಂದಿ ಸಾವನ್ನಪ್ಪಿದರು. ಇಬ್ಬರು ಪೊಲೀಸರು ದುರ್ಮರಣಕ್ಕೀಡಾದರು. ಇದನ್ನೂ ಓದಿ:  ಸಾನ್ಯ – ರೂಪೇಶ್ ಶೆಟ್ಟಿ ಮಧ್ಯೆ ಬರಲು ಕಾವ್ಯಶ್ರೀಗೆ ಸಲಹೆ ಕೊಟ್ಟಿದ್ಯಾರು ಗೊತ್ತಾ?‌ ದೊಡ್ಮನೆಯಲ್ಲಿ ಬಿಗ್‌ ಟ್ವಿಸ್ಟ್

    ಇಂಡೋನೇಷ್ಯಾ ಅಧ್ಯಕ್ಷ ಜೊಕೊ ವಿಡೊಡೊ (Joko Widodo) ಘಟನೆ ಸಂಬಂಧ ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೇ ಭದ್ರತಾ ಕ್ರಮಗಳು ಪೂರ್ಣಗೊಳ್ಳುವವರೆಗೂ ಇಲ್ಲಿ ನಡೆಯುವ ಎಲ್ಲಾ ಪಂದ್ಯಗಳನ್ನು ಅಮಾನತ್ತುಗೊಳಿಸುವಂತೆ ಫುಟ್ಬಾಲ್ ಫೆಡೆರೇಷನ್‌ಗೆ ನಿರ್ದೇಶನ ನೀಡಿದ್ದಾರೆ.

    ಅಲ್ಲದೇ ಈ ದುರಂತಕ್ಕೆ ನಾನು ತೀವ್ರವಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ಇದೇ ನಮ್ಮ ದೇಶದಲ್ಲಿ ಕೊನೆಯ ದುರಂತವಾಗಬೇಕು ಎಂದು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರವಾಹದಿಂದ ಕೆಂಪು ಬಣ್ಣಕ್ಕೆ ತಿರುಗಿದ ನೀರು – ವೈರಲ್ ಫೋಟೋ

    ಪ್ರವಾಹದಿಂದ ಕೆಂಪು ಬಣ್ಣಕ್ಕೆ ತಿರುಗಿದ ನೀರು – ವೈರಲ್ ಫೋಟೋ

    ಜಕಾರ್ತಾ: ನಿನ್ನೆ ಆಗಿರುವ ಪ್ರವಾಹದ ನಂತರ ಇಂಡೋನೇಷ್ಯಾ ರಸ್ತೆಗಳಲ್ಲಿ ಕೆಂಪು ಬಣ್ಣದ ನೀರು ಹರಿದು ಬರುತ್ತಿರುವ ವಿಚಿತ್ರ ಫೋಟೋ ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡುತ್ತಿವೆ.

    ಸೆಂಟ್ರಲ್ ಜಾವಾದ ಪೆಕಲಂಗಾನ್ ಸಮೀಪದ ಜೆನ್‍ಗಾಟ್ ಎಂಬ ಗ್ರಾಮದಲ್ಲಿ ಪ್ರವಾಹ ಅಪ್ಪಳಿಸಿದೆ. ಇಲ್ಲಿನ ಬಟೀಕ್ ಫ್ಯಾಕ್ಟರಿಯ ಡೈನೊಂದಿಗೆ ಬೆರೆತ ಪ್ರವಾಹದ ನೀರು ಕಡುಕೆಂಪು ಬಣ್ಣಕ್ಕೆ ತಿರುಗಿದೆ. ರಸ್ತೆಗಳ ಮೇಲೆ ಹರಿದು ಬಂದಿರುವ ನೀರು ರಕ್ತದಂತೆ ಭಾಸವಾಗಿದೆ. ಸಾವಿರಾರು ಮಂದಿ ಈ ಫೊಟೋ ಮತ್ತು ವೀಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

    ಈ ನಗರದ ಸುತ್ತಮುತ್ತಲಿನ ನದಿಗಳು ಬೇರೆ ಬೇರೆ ಬಣ್ಣಗಳಿಗೆ ತಿರುಗುವುದು ಹೊಸ ವಿಚಾರವಲ್ಲ. ಕಳೆದ ತಿಂಗಳು ಉಂಟಾದ ಪ್ರವಾಹದಿಂದ ನದಿಯೊಂದು ಹಸಿರು ಬಣ್ಣಕ್ಕೆ ತಿರುಗಿತ್ತು. ಹೀಗೆ ಕೆಂಪು ಬಣ್ಣದ ನೀರು ರಕ್ತದಂತೆ ಕಾಣುತ್ತಿದೆ. ಈ ಫೋಟೋವನ್ನು ಬಳಸಿಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರಾ..? ಎಂದೆಲ್ಲಾ ಸಾಮಾಜಿಕಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ.

  • ಟೇಕಾಫ್ ಆದ ನಾಲ್ಕೇ ನಿಮಿಷದಲ್ಲಿ ಸಮುದ್ರದಲ್ಲಿ ಪತನವಾದ ವಿಮಾನ

    ಟೇಕಾಫ್ ಆದ ನಾಲ್ಕೇ ನಿಮಿಷದಲ್ಲಿ ಸಮುದ್ರದಲ್ಲಿ ಪತನವಾದ ವಿಮಾನ

    – ಪ್ರಯಾಣಿಕರು ಮೃತಪಟ್ಟಿರುವ ಶಂಕೆ
    – ಮೀನುಗಾರರಿಗೆ ದೊರೆತ ವಿಮಾನದ ಅವಶೇಷಗಳು

    ಜಕಾರ್ತ: ರಾಜಧಾನಿ ಜಕಾರ್ತದಿಂದ ಹೊರಟಿದ್ದ ಖಾಸಗಿ ವಿಮಾನ ಟೇಕ್ ಆಫ್ ಆದ 4 ನಿಮಿಷದಲ್ಲೇ ನಾಪತ್ತೆಯಾಗಿದ್ದ ಬೋಯಿಂಗ್ 737-500 ವಿಮಾನ ಸಮುದ್ರದಲ್ಲಿ ಪತನವಾಗಿದೆ.

    ವಿಮಾನ ನಿಲ್ದಾಣದಿಂದ ಹೊರಟ ವಿಮಾನವೊಂದು ಹಾರಾಟ ಆರಂಭಿಸಿದ ನಾಲ್ಕೇ ನಿಮಿಷದಲ್ಲಿ ಸಂಪರ್ಕ ಕಡಿತವಾಗಿಸಿಕೊಂಡು ನಾಪತ್ತೆಯಾಗಿತ್ತು. ಇದೀಗ ಈ ವಿಮಾನ ಸಮುದ್ರದಲ್ಲ ಪತನವಾಗಿರುವ ಬಗ್ಗೆ ವರದಿಗಳು ಪ್ರಕಟವಾಗಿವೆ.

    10 ಸಾವಿರ ಅಡಿಯಿಂದ ವಿಮಾನ ಸಮುದ್ರಕ್ಕೆ ಬಿದ್ದಿದ್ದೆ ಎಂದು ಹೇಳಲಾಗುತ್ತಿದೆ. ಈ ವಿಮಾನದಲ್ಲಿ 62 ಜನ ಪ್ರಯಾಣಿಸುತ್ತಿದ್ದರು. ಸಮುದ್ರಕ್ಕೆ ವಿಮಾನ ಬಿದ್ದಿರುವ ಹಿನ್ನೆಲೆ ಬದುಕುಳಿದಿರುವುದು ಅನುಮಾನ ಎನ್ನಲಾಗುತ್ತಿದೆ. ಆದರೆ ಈ ಘಟನೆಯ ಕುರಿತಾಗಿ ಇಂಡೋನೇಷೀಯಾ ಸರ್ಕಾರವು ಅಧಿಕೃತವಾದ ಮಾಹಿತಿಯನ್ನು ನೀಡಿಲ್ಲ.

    ಮೀನುಗಾರರಿಗೆ ವಿಮಾನದ ಅವಶೇಷಗಳು ದೊರೆತಿವೆ. ಈ ಹೀಗಾಗಿ ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ. ಆದರೆ ಸಿಕ್ಕಿರುವ ಅವಶೇಷಗಳು ನಾಪತ್ತೆಯಾಗಿರುವ ವಿಮಾನಕ್ಕೆ ಸೇರಿದ ವಸ್ತುಗಳಾ ಎಂಬುದಕ್ಕೆ ನಿಖರವಾದ ಮಾಹಿತಿಲ್ಲ. ಕೇಬಲ್, ಹರಿದ ಜೀನ್ಸ್ ಪ್ಯಾಂಟಿನ ತುಂಡು, ಲೋಹದ ಅವಶೇಷಗಳು, ನೀರಿನಲ್ಲಿ ತೇಲುತ್ತಿದ್ದವು. ಹೀಗಾಗಿ ಮೀನಿಗಾರರಿಗೆ ನೂರ್ಹಾಸನ್ ದ್ವೀಪದಲ್ಲಿ ಪತ್ತೆಯಾಗಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಮಳೆ ಇರುವ ಕಾರಣದಿಂದಾಗಿ ವಿಮಾನ ನಿಲ್ದಾಣದಿಂದ 30 ನಿಮಿಷಗಳ ಕಾಲ ವಿಳಂಬವಾಗಿ ಹೊರಟ್ಟಿತ್ತು. ಕಾಲಿಮಂತನ್ ಪ್ರಾಂತ್ಯದಿಂದ ಪಾಂಟಿಯಾನಾಕ್‍ಗೆ ಹೊರಡಲು ಟೇಕ್ ಆಫ್ ಆಗಿರುವ ಕೆಲವೆ ನಿಮಿಷಗಳಲ್ಲಿ ನಾಪತ್ತೆಯಾದೆ. ಈ ವಿಮಾನ 26 ವರ್ಷ ಹಳೆಯ ವಿಮಾನವಾಗಿತ್ತು. 2018 ರಲ್ಲಿ ನಡೆದ ಜಕಾರ್ತ ಲಯನ್ ವಿಮಾನ ಪತನವಾಗಿ 189 ಮಂದಿ ಸಾವನ್ನಪ್ಪಿದ್ದರು. 2014ರಲ್ಲಿ ಇಂಡೋನೇಷ್ಯಾದ ಸುರಬಯಾದಿಂದ ಸಿಂಗಾಪುರಕ್ಕೆ ತೆರಳಿದ್ದ ಏರ್ ಏಷ್ಯಾ ವಿಮಾನ ಸಮುದ್ರಕ್ಕೆ ಅಪ್ಪಳಿಸಿ 162 ಮಂದಿ ಸಾವಿಗೀಡಾಗಿದ್ದರು.

  • ಕೊರೊನಾ ಹೆಂಡ್ತಿ ಇದ್ದಂತೆ, ಕಂಟ್ರೋಲ್ ಮಾಡೋದು ಕಷ್ಟ: ಸಚಿವ

    ಕೊರೊನಾ ಹೆಂಡ್ತಿ ಇದ್ದಂತೆ, ಕಂಟ್ರೋಲ್ ಮಾಡೋದು ಕಷ್ಟ: ಸಚಿವ

    – ನಿಯಂತ್ರಿಸಲು ಆಗದಿದ್ದಾಗ ಜೊತೆಯೇ ಬದುಕುತ್ತೀರಿ
    – ನೆಟ್ಟಿಗರಿಂದ ಸಚಿವರ ತರಾಟೆ

    ಜಕಾರ್ತಾ: ಇಡೀ ವಿಶ್ವವೇ ಕೊರೊನಾ ವೈರಸ್‍ಗೆ ಬೆಚ್ಚಿಬಿದ್ದಿದೆ. ಆದರೆ ಈ ನಡುವೆ ಇಂಡೋನೇಷ್ಯಾದ ರಕ್ಷಣಾ ಸಚಿವರು ಕೊರೊನಾ ವೈರಸ್ ಅನ್ನು ಪತ್ನಿಗೆ ಹೋಲಿಕೆ ಮಾಡಿ ಹೇಳಿಕೆಯೊಂದನ್ನು ನೀಡಿದ್ದಾರೆ. ಇದೀಗ ಇವರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

    ಇಂಡೋನೇಷ್ಯಾದ ಸಚಿವ ಮೊಹಮ್ಮದ್ ಮಹಫೂದ್ ಎಂ.ಡಿ ಕೊರೊನಾ ವೈರಸ್ ಅನ್ನು ಪತ್ನಿಗೆ ಹೋಲಿಕೆ ಮಾಡುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಇತ್ತೀಚೆಗೆ ಜಕಾರ್ತದ ಸ್ಥಳೀಯ ವಿಶ್ವವಿದ್ಯಾಲಯವೊಂದು ಆಯೋಜಿಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಎಡವಟ್ಟು ಹೇಳಿಕೆ ನೀಡಿದ್ದಾರೆ.

    ಈ ವಿಡಿಯೋ ಕಾನ್ಫರೆನ್ಸ್ ನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಕೊರೊನಾ ವೈರಸ್ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ ಮೀಮ್‍ವೊಂದನ್ನು ಪ್ರಸ್ತಾಪಿಸಿದ್ದರು. ಇದೀಗ ಆ ಮೀಮ್ ಟೀಕೆಗೆ ಕಾರಣವಾಗಿದೆ.

    ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡುವ ವೇಳೆ ಕೊರೊನಾ ವೈರಸ್ ಕುರಿತಂತೆ ಮೊಹಮ್ಮದ್ ಮಹಫೂದ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಮೊದಲಿಗೆ ಕೊರೊನಾ ಸಂದರ್ಭದಲ್ಲಿ ನಾವು ನಮ್ಮ ಆರೋಗ್ಯದ ಕಡೆ ಗಮನ ಹರಿಸುತ್ತಲೇ ಪರಿಸ್ಥಿತಿಗೆ ಹೊಂದಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ.

    ಒಂದು ದಿನ ನನ್ನ ಸಹೋದ್ಯೋಗಿವೊಬ್ಬರು ಮೀಮ್‍ವೊಂದನ್ನು ಕಳುಹಿಸಿದ್ದರು. “ಕೊರೊನಾ ನಿಮ್ಮ ಹೆಂಡತಿ ಇದ್ದಂತೆ. ಆರಂಭದಲ್ಲಿ ನೀವು ಅದನ್ನು ನಿಯಂತ್ರಿಸಲು ಪ್ರಯತ್ನಿಸುತ್ತೀರಿ. ಆದರೆ ಅದನ್ನು ನಿಯಂತ್ರಿಸಲು ಸಾಧ್ಯವಾಗಲ್ಲ ಎಂದು ತಿಳಿದುಕೊಳ್ಳುತ್ತೀರಿ. ನಂತರ ಅದರ ಜೊತೆಯೇ ಬದುಕಲು ಕಲಿಯುತ್ತೀರಿ. ಅದೇ ರೀತಿ ಕೊರೊನಾ ವೈರಸ್ ಜೊತೆಗೂ ಬದುಕಬೇಕು ಎಂಬುದು ಮೀಮ್‍ನಲ್ಲಿತ್ತು” ಎಂದು ಹೇಳಿದ್ದರು.

    ಸಚಿವ ಮೊಹಮ್ಮದ್ ಮಹಫೂದ್ ಈ ಹೇಳಿಕೆಯು ಸೋಶಿಯಲ್ ಮೀಡಿಯಾದಲ್ಲಿ ಟೀಕೆಗೆ ಗುರಿಯಾಗಿದ್ದು, ವಿದ್ಯಾರ್ಥಿಗಳು, ಮಹಿಳೆಯರು ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿರುವವರು ಸಚಿವರನ್ನು ತರಾಟೆ ತೆಗೆದುಕೊಂಡಿದ್ದಾರೆ. ಆದರೆ ಇದುವರೆಗೂ ಮಹಫೂದ್ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

  • ಕ್ವಾರಂಟೈನ್ ಬೇಡ ಮನೆಗೆ ಕಳುಹಿಸಿ- ಜಕಾರ್ತದಿಂದ ಬಂದವರ ಕಿರಿಕ್

    ಕ್ವಾರಂಟೈನ್ ಬೇಡ ಮನೆಗೆ ಕಳುಹಿಸಿ- ಜಕಾರ್ತದಿಂದ ಬಂದವರ ಕಿರಿಕ್

    ಬೆಂಗಳೂರು: ತಡರಾತ್ರಿ ಇಂಡೋನೇಷ್ಯಾದ ಜಕಾರ್ತದಿಂದ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 50 ಮಂದಿ ತಮಗೆ ಹೋಟೆಲ್ ಕ್ವಾರಂಟೈನ್ ಬೇಡ ಅಂತ ಕಿರಿಕ್ ನಡೆಸಿರುವ ಘಟನೆ ನಡೆದಿದೆ.

    ತಡರಾತ್ರಿ 1.40ಕ್ಕೆ ಎಐ-1311 ವಿಮಾನದಲ್ಲಿ 214 ಮಂದಿ ಆಗಮಿಸಿದ್ದಾರೆ. ಇವರಲ್ಲಿ ಬಹುತೇಕರು ಆರೋಗ್ಯ ತಪಾಸಣೆ ನಂತರ ಹೋಟೆಲ್ ಕ್ವಾರಂಟೈನ್‍ಗೆ ಒಳಗಾಗಿದ್ದರು. ಆದರೆ ಇವರಲ್ಲಿ 50 ಮಂದಿ ಮಾತ್ರ ನಮ್ಮ ಬಳಿ ದುಡ್ಡಿಲ್ಲ ಹೋಟೆಲ್ ಕ್ವಾರಂಟೈನ್ ಮಾಡಬೇಡಿ. ನಮ್ಮನ್ನು ಮನೆಗೆ ಕಳುಹಿಸಿ ಅಂತ ಪಟ್ಟುಹಿಡಿದಿದ್ದಾರೆ.

    ಕೊನೆಗೆ ಇಡೀ ರಾತ್ರಿ ವಿಮಾನ ನಿಲ್ದಾಣದಲ್ಲೇ ಹಠ ಹಿಡಿದು ಕುಳಿತಿದ್ದ 50 ಮಂದಿಯನ್ನು ಅಧಿಕಾರಿಗಳು ಮನವೊಲಿಸಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಗಳೂರಿನ ಹಜ್ ಭವನದಲ್ಲಿ ಕ್ವಾರಂಟೈನ್ ಮಾಡಲು ಶಿಫ್ಟ್ ಮಾಡಿದ್ದಾರೆ.

  • ಹೊಸ ವರ್ಷದ ಆರಂಭದಲ್ಲೇ ಪ್ರವಾಹದ ಹೊಡೆತಕ್ಕೆ ನಲುಗಿದ ಇಂಡೋನೇಷ್ಯಾ – 16 ಮಂದಿ ಸಾವು

    ಹೊಸ ವರ್ಷದ ಆರಂಭದಲ್ಲೇ ಪ್ರವಾಹದ ಹೊಡೆತಕ್ಕೆ ನಲುಗಿದ ಇಂಡೋನೇಷ್ಯಾ – 16 ಮಂದಿ ಸಾವು

    – ಹಾವು ಮೊಸಳೆಗಳು ರಸ್ತೆಯಲ್ಲಿ
    – 20 ಸಾವಿರ ಮಂದಿಗೆ ನೆರೆಯಿಂದ ಸಂಕಷ್ಟ

    ಜಕಾರ್ತ: ಇಡೀ ಜಗತ್ತು ಬುಧವಾರ ಹೊಸ ವರ್ಷದ ಸಂಭ್ರಮದಲ್ಲಿ ತೇಲಾಡಿದರೆ ದ್ವೀಪ ರಾಷ್ಟ್ರ ಇಂಡೋನೇಷ್ಯಾ ಮಾತ್ರ ಪ್ರವಾಹದ ಹೊಡೆತಕ್ಕೆ ಸಿಲುಕಿ ನಲುಗಿಹೋಗಿದೆ.

    ಇಂಡೋನೇಷ್ಯಾದಲ್ಲಿ ನೆರೆ ಆರ್ಭಟ ಮೈ ಜುಮ್ಮೆನಿಸುವಂತಿದ್ದು, ರಾಜಧಾನಿ ಜಕಾರ್ತವಂತೂ ನೀರಿನಲ್ಲಿ ಮುಳುಗಿ ಹೋಗಿದೆ. ಈವರೆಗೆ ನೆರೆ ಸಿಲುಕಿ ಸುಮಾರು 16 ಮಂದಿ ಸಾವನ್ನಪ್ಪಿದ್ದಾರೆ. 20 ಸಾವಿರಕ್ಕೂ ಹೆಚ್ಚು ಮಂದಿ ನಿರಾಶ್ರಿತರಾಗಿದ್ದಾರೆ. ಇನ್ನು ತಮ್ಮವರನ್ನು ಕಳೆದುಕೊಂಡವರ ಆಕ್ರಂದನ ಮುಗಿಲುಮುಟ್ಟಿದೆ. ಜನರ ಜೀವನವಂತೂ ಮೂರಾಬಟ್ಟೆಯಾಗಿದೆ.

    ಕೆಲವಡೆ ನೆರೆಯಿಂದ ಸಿಲುಕಿದವರನ್ನು ರಕ್ಷಣಾ ಸಿಬ್ಬಂದಿ ಬೋಟ್‍ಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ರವಾನಿಸುತ್ತಿದ್ದಾರೆ. ರಸ್ತೆಯಲ್ಲಿ ನಿಲ್ಲಿಸಿದಂತಹ ಕಾರುಗಳಂತೂ ಪ್ರವಾಹದ ರಭಸಕ್ಕೆ ತೇಲಿಹೋಗುತ್ತಿದ್ದರೆ, ಇತ್ತ ಹಾವು, ಮೊಸಳೆಗಳು ರಸ್ತೆಗೆ ಬಂದು ಬಿಟ್ಟಿವೆ. ಇನ್ನು ಕೆಲವರು ಪ್ರವಾಹದಲ್ಲಿ ಮನೆಗೆ ಬಂದ ಮೀನುಗಳನ್ನು ಹಿಡಿಯೋ ಕೆಲಸ ಮಾಡುತ್ತಿದ್ದಾರೆ.

    https://twitter.com/seungyouncloud/status/1212566923189178368

    ಬುಧವಾರ ಹೊಸ ವರ್ಷದ ಆಚರಣೆ ಸಂಭ್ರಮದಲ್ಲಿ ಇದ್ದ ಜಕಾರ್ತ ಜನರಿಗೆ ಮಳೆರಾಯ ಶಾಕ್ ಕೊಟ್ಟಿದ್ದಾನೆ. ಎಡಬಿಡದೆ ಸುರಿದ ಮಳೆಗೆ ನೆರೆ ಉಂಟಾಗಿದ್ದು, ಜಕಾರ್ತ ನಲುಗಿಹೋಗಿದೆ. ನೆರೆಯ ಹಿನ್ನೆಲೆ ಜಕಾರ್ತದ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಸ್ಥಗಿತಗೊಂಡಿದೆ. ಇತ್ತ ಸುಮಾರು 20 ಸಾವಿರ ಮಂದಿ ನೆರೆಯಿಂದ ಪರದಾಡುತ್ತಿದ್ದಾರೆ. ಎಡಬಿಡದೆ ಸುರಿದ ಮಳೆಯಿಂದ ಇಂಡೋನೇಷ್ಯಾದ ಬಹುತೇಕ ನದಿಗಳು ತುಂಬಿ ಹರಿಯುತ್ತಿರುವ ಪರಿಣಾಮ ಜಕಾರ್ತ ಹಾಗೂ ಇನ್ನಿತರೆ ಪ್ರದೇಶಗಳಲ್ಲಿ ನೆರೆ ಉಂಟಾಗಿದೆ. ಅಲ್ಲದೆ ಜಕಾರ್ತ ಹೊರವಲಯದಲ್ಲಿ ಕೋಟಾ ಡಿಪೋಕ್ ನಗರದಲ್ಲಿ ಭೂಕುಸಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಹಾಹ ಪೀಡಿತ ಪ್ರದೇಶಗಳಲ್ಲಿ ಬರೋಬ್ಬರಿ 370 ಮಿ.ಮಿ ಮಳೆಯಾಗಿದ್ದು, ಇಂಡೋನೇಷ್ಯಾದಲ್ಲಿ ಏಪ್ರಿಲ್‍ವರೆಗೂ ಹೀಗೆ ಹಲವೆಡೆ ಪ್ರವಾಹ ಸಂಭವಿಸುವ ಸಾಧ್ಯತೆ ಇರುವ ಬಗ್ಗೆ ಹವಮಾನ ಇಲಾಖೆ ತಿಳಿಸಿದೆ ಎಂದು ಜಕಾರ್ತ ರಾಜ್ಯಪಾಲರು ತಿಳಿಸಿದ್ದಾರೆ.

    ಈಗಾಗಲೇ ಜಕಾರ್ತದಲ್ಲಿ 8 ಮಂದಿ, ಕೋಟಾ ಡಿಪೋಕ್‍ನಲ್ಲಿ 3 ಮಂದಿ ಸೇರಿದಂತೆ ಇಂಡೋನೇಷ್ಯಾದ ಇತರೆ ನೆರೆ ಪೀಡಿತ ಪ್ರದೇಶಗಳಲ್ಲಿ ಒಟ್ಟು 16 ಮಂದಿ ಪ್ರವಾಹಕ್ಕೆ ಬಲಿಯಾಗಿದ್ದಾರೆ. ಹೊಸ ವರ್ಷಾಚರಣೆಯಲ್ಲಿದ್ದ ಮಂದಿ ಮಳೆರಾಯನ ಆರ್ಭಟದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

  • ಬಾಯಿ ಬಿಡಿಸಲು ಕಳ್ಳನಿಗೆ ಹಾವು ಬಿಟ್ಟ ಪೊಲೀಸರು – ವಿಡಿಯೋ ವೈರಲ್

    ಬಾಯಿ ಬಿಡಿಸಲು ಕಳ್ಳನಿಗೆ ಹಾವು ಬಿಟ್ಟ ಪೊಲೀಸರು – ವಿಡಿಯೋ ವೈರಲ್

    ಜಕಾರ್ತಾ: ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ. ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ.

    ಇಂಡೋನೇಷ್ಯಾದ ಪಪುವಾ ಪ್ರಾಂತ್ಯದ ಪೊಲೀಸರು ಹಾವನ್ನು ಬಿಟ್ಟು ವಿಭಿನ್ನವಾಗಿ ಕಳ್ಳನಿಂದ ಸತ್ಯ ಹೇಳಿಸಲು ಮಾಡಿದ್ದ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ವಿಡಿಯೋದಲ್ಲಿ ಏನಿದೆ?
    ಮೊಬೈಲ್ ಕಳ್ಳತನದ ಆರೋಪದಲ್ಲಿ ಒಬ್ಬಾತ ಬಂಧನಕ್ಕೆ ಒಳಗಾಗಿದ್ದ. ಬಂಧನಕ್ಕೆ ಒಳಗಾಗಿದ್ದ ಆತ ವಿಚಾರಣೆ ವೇಳೆ ಸರಿಯಾದ ಮಾಹಿತಿಯನ್ನು ನೀಡಿರಲಿಲ್ಲ. ಹೀಗಾಗಿ ಬಾಯಿ ಬಿಡಿಸಲು ಪೊಲೀಸರು ಆತನ ಎರಡು ಕೈಗಳನ್ನು ಕಟ್ಟಿ ಹಾಕಿ ಅವನ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ. ಇದರಿಂದ ಕಳ್ಳ ಭಯದಿಂದ ಕುಳಿತಿದ್ದ. ಬಳಿಕ ಅಧಿಕಾರಿಯೊಬ್ಬರು ಬಂದು ಹಾವಿನ ಬಾಲ ಹಿಡಿದು ಕಳ್ಳನ ಬಾಯಿ ಹತ್ತಿರ ತೆಗೆದುಕೊಂಡು ಹೋಗಿ ಹಿಂಸೆ ಕೊಟ್ಟಿದ್ದಾರೆ. ಇದರಿಂದ ಭಯಗೊಂಡ ಕಳ್ಳ ಚೀರಾಡಿದ್ದಾನೆ.

    ಅಷ್ಟಕ್ಕೂ ಸುಮ್ಮನಾಗದ ಪೊಲೀಸರ ಹಾವಿನ ಎಡೆಯನ್ನು ಹಿಡಿದುಕೊಂಡು ಕಳ್ಳನ ಮುಖದ ಬಳಿ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಕಳ್ಳ ತುಂಬಾ ಭಯಪಟ್ಟು ಕೂಗಾಡಿ, ಒದ್ದಾಡಿದ್ದಾನೆ. ಆದರೆ ಪೊಲೀಸ್ ಅಧಿಕಾರಿ ಮಾತ್ರ ನಗುತ್ತಾ ಮನರಂಜನೆ ರೀತಿಯಲ್ಲಿ ಕಳ್ಳನಿಗೆ ಹಿಂಸೆ ಕೊಟ್ಟಿದ್ದಾರೆ. ಇದೆಲ್ಲವನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.

    ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಟೀಕೆ ಕೇಳಿಬಂದಿದೆ. ಬಳಿಕ ಇಂಡೋನೇಷ್ಯಾದ ಪೊಲೀಸರು ನೆಟ್ಟಿಗರ ಬಳಿ ಕ್ಷಮೆ ಯಾಚಿಸಿದ್ದಾರೆ. ವಿಡಿಯೋ ವೈರಲ್ ಆದ ನಂತರ, ಪಪುವಾ ಪೊಲೀಸ್ ವಕ್ತಾರರು, ಅಧಿಕಾರಿಗಳಿಗೆ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಮುಂದಿನ ಸಹ ಈ ರೀತಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಬ್ಲಿಕ್ ಪ್ಲೇಸ್‍ನಲ್ಲಿ ಹಗ್ ಮಾಡಿದಕ್ಕೆ ಜೈಲು ಸೇರಿದ್ರು ಪ್ರೇಮಿಗಳು..!

    ಪಬ್ಲಿಕ್ ಪ್ಲೇಸ್‍ನಲ್ಲಿ ಹಗ್ ಮಾಡಿದಕ್ಕೆ ಜೈಲು ಸೇರಿದ್ರು ಪ್ರೇಮಿಗಳು..!

    ಜಕಾರ್ತಾ: ಸಾರ್ವಜನಿಕ ಸ್ಥಳದಲ್ಲಿ ತಬ್ಬಿಕೊಂಡಿದ್ದಕ್ಕೆ ಯುವ ಪ್ರೇಮಿಗಳಿಗೆ 17 ಬಾರಿ ಥಳಿಸಿ ಜೈಲಿಗಟ್ಟಿದ ಘಟನೆ ಇಂಡೋನೇಷ್ಯಾದ ಏಸೆ ಪ್ರಾಂತ್ಯದಲ್ಲಿ ನಡೆದಿದೆ.

    ಏಸೆ ಪ್ರಾಂತ್ಯದ ಮಹಿಳಾ ವಿಶ್ವವಿದ್ಯಾನಿಲಯದ 18 ವರ್ಷದ ವಿದ್ಯಾರ್ಥಿನಿ ಹಾಗೂ ಯುವಕನೊಬ್ಬನು ಸಾರ್ವಜನಿಕ ಸ್ಥಳದಲ್ಲಿ ತಬ್ಬಿಕೊಂಡಿದ್ದರು. ಆದರಿಂದ ಪ್ರೇಮಿಗಳು ಏಸೆ ಪ್ರಾಂತ್ಯದ ಕಾನೂನನ್ನು ಉಲ್ಲಂಘಸಿ ಕಾನೂನಿಗೆ ಅವಮಾನ ಮಾಡಿದ್ದಾರೆ ಎಂದು ಹೇಳಿ ಇಬ್ಬರಿಗೂ ಶಿಕ್ಷೆ ವಿಧಿಸಲಾಗಿದೆ.

    ಏಸೆ ಪ್ರಾಂತ್ಯದ ರಾಜಧಾನಿಯಾದ ಬಾಂಡಾ ಏಸೆಯಲ್ಲಿ ಪ್ರೇಮಿಗಳಿಬ್ಬರಿಗೂ ಮಸೀದಿಯ ಮುಂದೆ ಕೂರಿಸಿ ಸಾರ್ವಜನಿಕರ ಎದುರೇ ಅಲ್ಲಿನ ಧಾರ್ಮಿಕ ಮುಖಂಡರು 17 ಬಾರಿ ಬಿದಿರಿನ ಕೋಲಿನಿಂದ ಹೊಡೆದಿದ್ದಾರೆ. ಬಳಿಕ ಕಾನೂನನ್ನು ಉಲ್ಲಂಘಿಸಿದಕ್ಕೆ ಇಬ್ಬರಿಗೂ 1 ತಿಂಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಲು ಆದೇಶ ಹೊರಡಿಸಿದ್ದಾರೆ.

    ಏಸೆ ಪ್ರಾಂತ್ಯದಲ್ಲಿ ಇಸ್ಲಾಂ ಧರ್ಮವನ್ನು ಪಾಲಿಸುವ ಜನರ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿನ ಸರ್ಕಾರ ಹಾಗೂ ಧಾರ್ಮಿಕ ಮುಖಂಡರು ಮಾಡಿರುವ ಕಾನೂನನ್ನು ಎಲ್ಲರೂ ಚಾಚು ತಪ್ಪದೇ ಪಾಲಿಸುತ್ತಾರೆ. ಅಷ್ಟೇ ಅಲ್ಲದೆ ಇಲ್ಲಿ ಕಾನೂನನ್ನು ಉಲ್ಲಂಘಿಸಿದರೆ ಷರಿಯಾ ಕಾನೂನಿನ ಪ್ರಕಾರ ಕಠಿಣ ಹಾಗೂ ಕ್ರೂರ ಶಿಕ್ಷೆಯನ್ನು ನೀಡಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv