Tag: Jallianwala Bagh

  • ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರ ತ್ಯಾಗ ಮುಂದಿನ ಪೀಳಿಗೆಗೆ ಪ್ರೇರಣೆ: ಮೋದಿ

    ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರ ತ್ಯಾಗ ಮುಂದಿನ ಪೀಳಿಗೆಗೆ ಪ್ರೇರಣೆ: ಮೋದಿ

    ನವದೆಹಲಿ: ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರ ಅಪ್ರತಿಮ ಧೈರ್ಯ ಮತ್ತು ತ್ಯಾಗ ಮುಂದಿನ ಪೀಳಿಗೆಗೆ ಪ್ರೇರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

    1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ವಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: 1919ರಲ್ಲಿ ಜಲಿಯನ್ ವಾಲಾಬಾಗ್‍ನಲ್ಲಿ ಹುತಾತ್ಮರಾದವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಅಪ್ರತಿಮ ಧೈರ್ಯ ಮತ್ತು ತ್ಯಾಗ ಮುಂದಿನ ಪೀಳಿಗೆಯನ್ನು ಪ್ರೇರೆಪಿಸುತ್ತದೆ. ಕಳೆದ ವರ್ಷ ಜಲಿಯನ್ ವಾಲಾಬಾಗ್ ಸ್ಮಾರಕದ ನವೀಕೃತ ಸಂಕೀರ್ಣದ ಉದ್ಘಾಟನಾ ಸಮಾರಂಭದ ಭಾಷಣವನ್ನು ಹಂಚಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದರು.

    1919ರಲ್ಲಿ ರೌಲಟ್ ಕಾಯಿದೆಯ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ನೂರಾರು ಭಾರತೀಯರನ್ನು ಬ್ರಿಟಿಷ್ ಪಡೆಗಳು ಗುಂಡಿಕ್ಕಿ ಕೊಂದುಹಾಕಿದ್ದವು. ಇದು ಭಾರತದ ಬ್ರಿಟಿಷರು ಮಾಡಿದ ಆಕ್ರಮಣದಲ್ಲಿ ಅತ್ಯಂತ ಕ್ರೂರ ಘಟನೆಗಳಲ್ಲಿ ಒಂದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮುಖಾಮುಖಿ ಭೇಟಿಯಾದ ನಂತರವಷ್ಟೇ ಈಶ್ವರಪ್ಪ ರಾಜೀನಾಮೆ ನಿರ್ಧಾರ: ಬೊಮ್ಮಾಯಿ

    ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಟ್ವೀಟ್ ಮಾಡಿ, ಶ್ರದ್ಧಾಂಜಲಿ ಸಲ್ಲಿಸಿದರು. ಭಾರತದ ಇತಿಹಾಸದಲ್ಲಿ ಜಲಿಯನ್ ವಾಲಾಬಾಗ್ ಒಂದು ರಕ್ತಸಿಕ್ತ ಹತ್ಯಾಕಾಂಡವಾಗಿದೆ. ನಮ್ಮ ಮಹಾನ್ ಹುತಾತ್ಮರು ಮಾಡಿದ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಈ ಸ್ವಾತಂತ್ರ್ಯವನ್ನು ನೀಡಿದ ಈ ಹುತಾತ್ಮರಿಗೆ ನಾವು ನಮ್ಮ ಜೀವನದುದ್ದಕ್ಕೂ ಋಣಿಯಾಗಿರುತ್ತೇವೆ. ಕ್ರಾಂತಿ ಚಿರಾಯುವಾಗಲಿ ಎಂದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ಕೊಡಬಾರದು: ಸಚಿವ ನಿರಾಣಿ

  • ಭಾರತೀಯರು ಅಪಾಯದಲ್ಲಿದ್ದರೆ ದೇಶ ಅವರ ಸಹಾಯಕ್ಕೆ ಯಾವತ್ತು ನಿಲ್ಲುತ್ತದೆ: ಮೋದಿ

    ಭಾರತೀಯರು ಅಪಾಯದಲ್ಲಿದ್ದರೆ ದೇಶ ಅವರ ಸಹಾಯಕ್ಕೆ ಯಾವತ್ತು ನಿಲ್ಲುತ್ತದೆ: ಮೋದಿ

    ನವದೆಹಲಿ: ಭಾರತ ಕೊರೊನಾ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತ ಮುಂದುವರಿಯುತ್ತಿದ್ದರೂ ಕೂಡ ಅಘ್ಘಾನಿಸ್ತಾನದಂತಹ ಯುದ್ಧ ಪೀಡಿತ ಸನ್ನಿವೇಶದಲ್ಲಿರುವ ದೇಶದಿಂದ ಭಾರತೀಯರನ್ನು ರಕ್ಷಿಸಿದೆ. ಭಾರತೀಯರು ಅಪಾಯದಲ್ಲಿದ್ದರೆ ದೇಶ ಅವರ ಸಹಾಯಕ್ಕೆ ಯಾವತ್ತು ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

    ವಿಡೀಯೋ ಕಾನ್ಫರೆನ್ಸ್ ಮೂಲಕ ನವೀಕೃತ ಜಲಿಯನ್ ವಾಲಾಬಾಗ್ ಸ್ಮಾರಕ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಭಾರತ ಹಲವಾರು ಸವಾಲುಗಳನ್ನು ಮೆಟ್ಟಿನಿಂತು ಅಘ್ಘಾನಿಸ್ತಾನದಲ್ಲಿ ಅಪಾಯದಲ್ಲಿದ್ದ ಭಾರತೀಯರ ರಕ್ಷಣೆಗೆ ಮುಂದಾಗಿದೆ. ಈ ಕಾರ್ಯ ಇನ್ನೂ ಕೂಡ ಮುಂದುವರಿಯುತ್ತದೆ. ತಾಲಿಬಾನಿಗಳ ಅಟ್ಟಹಾಸದಿಂದಾಗಿ ಅಫ್ಘಾನಿಸ್ತಾನ ನಲುಗಿ ಹೋಗಿದೆ. ಈ ನಡುವೆ ಅಲ್ಲಿದ್ದ ನೂರಾರು ಭಾರತೀಯರನ್ನು ಸುರಕ್ಷಿತವಾಗಿ ಏರ್ ಲಿಫ್ಟ್ ಮಾಡುವ ಮೂಲಕ ದೇಶಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ ಎಂದರು. ಇದನ್ನೂ ಓದಿ: ಮಧ್ಯರಾತ್ರಿ ಆಪರೇಷನ್ ಇಂಡಿಯನ್ಸ್ – ಕಾಬೂಲ್‍ನಿಂದ ದೋಹಾ ಮೂಲಕ ದೆಹಲಿಗೆ ಭಾರತೀಯರು

    ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾವು ಈ ಸಂಭ್ರಮದ ಹಿಂದೆ ಹಲವಾರು ಮಹನೀಯರ ತ್ಯಾಗ, ಬಲಿದಾನವಿದೆ ಎಂಬುದನ್ನು ಮರೆಯಬಾರದು. ನಾವಿಂದು ಜಲಿಯನ್ ವಾಲಾ ಬಾಗ್‍ನ್ನು ನವೀಕೃತಗೊಳಿಸಿ ಲೋಕಾರ್ಪಣೆಗೊಳಿಸಿದ್ದೇವೆ. ಜಲಿಯನ್ ವಾಲಾಬಾಗ್ ದೇಶದ ಸ್ವಾತಂತ್ಯಕ್ಕಾಗಿ ತಮ್ಮ ಪ್ರಾಣವನ್ನೆ ಅರ್ಪಿಸಿದ ಸರ್ದಾರ್ ಉದ್ದಮ್ ಸಿಂಗ್, ಭಗತ್ ಸಿಂಗ್ ಸೇರಿದಂತೆ ಹಲವು ಸ್ವಾತಂತ್ರ್ಯ ಸೇನಾನಿಗಳಿಗೆ ಧೈರ್ಯ ಕೊಟ್ಟ ಸ್ಥಳವಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಕಾಬೂಲ್‍ನಲ್ಲಿ ಎಟಿಎಂಗಳ ಮುಂದೆ ಜನಸಾಗರ – ಬ್ಯಾಂಕ್ ಸಿಬ್ಬಂದಿಯಿಂದ ಪ್ರತಿಭಟನೆ