Tag: jamaat

  • ದೆಹಲಿಯಿಂದ ಬಂದ 8 ಮಂದಿಯಲ್ಲಿ ಓರ್ವನಿಗೆ ಕೊರೊನಾ ಸೋಂಕು

    ದೆಹಲಿಯಿಂದ ಬಂದ 8 ಮಂದಿಯಲ್ಲಿ ಓರ್ವನಿಗೆ ಕೊರೊನಾ ಸೋಂಕು

    ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರಿನಲ್ಲಿ ಮತ್ತೊಂದು ಹೊಸ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 11ಕ್ಕೆ ಏರಿದೆ. ಅಂದಹಾಗೆ ಈಗಾಗಲೇ ಗೌರಿಬಿದನೂರು ನಗರದ 10 ಮಂದಿಗೆ ಸೋಂಕು ದೃಢವಾಗಿ ಓರ್ವ ವೃದ್ಧೆ ಮೃತಪಟ್ಟಿದ್ದರು.

    ಈಗ ದೆಹಲಿಯಿಂದ ವಾಪಸ್ ಆದ 23 ವರ್ಷದ ಯುವಕನಿಗೆ ಕೊರೊನಾ ಸೋಂಕು ತಗುಲಿದ್ದು ಸೋಂಕಿತರ ಸಂಖ್ಯೆ 11ಕ್ಕೆ ಏರಿದೆ. ಈ ಹೊಸ ಪ್ರಕರಣದಿಂದ ಗೌರಿಬಿದನೂರಿನಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ. ಮಾರ್ಚ್ 6 ರಂದು ದೆಹಲಿಯ ನಿಜಾಮುದ್ದೀನ್ ನಿಂದ ರೈಲಿನ ಮೂಲಕ ಗೌರಿಬಿದನೂರು ಗಡಿಭಾಗ ಆಂಧ್ರದ ಹಿಂದೂಪುರಕ್ಕೆ ಆಗಮಿಸಿ, ಅಲ್ಲಿಂದ ಬಸ್ ಮೂಲಕ ಗೌರಿಬಿದನೂರು ನಗರಕ್ಕೆ ಆಗಮಿಸಿದ್ದಾನೆ.

    ತನ್ನ ಮನೆಗೆ ಬಂದು ತನ್ನ ತಾಯಿ ಜೊತೆ ವಾಸವಾಗಿದ್ದ ಯುವಕನ ಮನೆಗೆ ಈತನ ಅಕ್ಕ-ಬಾವ ಹಾಗೂ ಇಬ್ಬರು ಮಕ್ಕಳ ಸಹ ಬಂದು ಹೋಗಿದ್ದಾರೆ. ಮತ್ತೊಂದೆಡೆ ಈತ ತನ್ನ ಸ್ನೇಹಿತನ ಜೊತೆಗೂಡಿ ಆಂಧ್ರದ ಹಿಂದೂಪುರಕ್ಕೆ ನಾಲ್ಕೈದು ಬಾರಿ ಹೋಗಿ ಬಂದಿದ್ದಾನೆ. ದೆಹಲಿಯ ನಿಜಾಮುದ್ದೀನ್ ಪ್ರಕರಣ ಬಯಲಾದ ನಂತರ ಈತನನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಇಂದು ಈತನ ವರದಿ ಲಭ್ಯವಾಗಿದ್ದು ಪಾಸಿಟಿವ್ ಬಂದಿದೆ.

    ಹೀಗಾಗಿ ಯುವಕನ ತಾಯಿ, ಅಕ್ಕ-ಬಾವ ಹಾಗೂ ಅವರ ಇಬ್ಬರು ಮಕ್ಕಳು ಸೇರಿದಂತೆ ಸ್ನೇಹಿತ ಹಾಗೂ ಸ್ನೇಹಿತನ ತಾಯಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಈ ಯುವಕ ಸೇರಿದಂತೆ 8 ಮಂದಿ ದೆಹಲಿಯ ಜಮಾತ್ ಗೆ ಹೋಗಿ ಬಂದಿದ್ದು, ಇವರಲ್ಲಿ ಈತನಿಗೆ ಬಿಟ್ಟು ಬೇರೆ ಯಾರಿಗೂ ಸೋಂಕು ತಗುಲಿಲ್ಲ. ಹೀಗಾಗಿ ಈತನಿಗೆ ದೆಹಲಿಯಲ್ಲೇ ಸೋಂಕು ತಗಲಿದೆಯಾ ಅಥವಾ ಹಿಂದೂಪುರದಲ್ಲಿ ಸಹ ಸಾಕಷ್ಟು ಪಾಸಿಟಿವ್ ಪ್ರಕರಣಗಳಿದ್ದು ಅಲ್ಲಿ ಏನಾದ್ರೂ ಸೋಂಕು ತಗುಲಿದೆಯಾ ಅನ್ನೋ ಅನುಮಾನ ಜಿಲ್ಲಾಡಳಿತಕ್ಕೆ ಮೂಡಿದೆ.

    ಹೀಗಾಗಿ ಪೇಷೆಂಟ್ ನಂಬರ್ 180ರ ಮತ್ತಷ್ಟು ಟ್ರಾವೆಲ್ ಹಿಸ್ಟರಿ ಕಲೆ ಹಾಕುವಲ್ಲಿ ಪೊಲೀಸರು ನಿರತರಾಗಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ವಹಿಸಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ತಿಳಿಸಿದ್ದಾರೆ.

  • ಜಮಾತ್‍ನಿಂದ ಮರಳಿದ್ದ ವೃದ್ಧ ಕೊರೊನಾದಿಂದ ಸಾವನ್ನಪ್ಪಿದ್ದಕ್ಕೆ ದಾಖಲೆ ಇಲ್ಲ: ಬೀದರ್ ಡಿಸಿ

    ಜಮಾತ್‍ನಿಂದ ಮರಳಿದ್ದ ವೃದ್ಧ ಕೊರೊನಾದಿಂದ ಸಾವನ್ನಪ್ಪಿದ್ದಕ್ಕೆ ದಾಖಲೆ ಇಲ್ಲ: ಬೀದರ್ ಡಿಸಿ

    ಬೀದರ್: ಜಮಾತ್‍ನಲ್ಲಿ ನಡೆದ ಸಮಾವೇಶದಲ್ಲಿ ಭಾಗಿಯಾಗಿದ್ದ ಬೀದರ್ ಮೂಲದ ವೃದ್ಧ ಕೊರೊನಾ ವೈರಸ್‍ನಿಂದ ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಬೀದರ್ ಡಿಸಿ ಎಚ್.ಆರ್ ಮಹಾದೇವ್ ಅವರು, ಕೊರೊನಾ ಸೋಂಕು ತಗುಲಿ ವೃದ್ಧ ಸಾವನ್ನಪ್ಪಿದ್ದಾರೆ ಎನ್ನಲು ಯಾವುದೇ ದಾಖಲೆಗಳಿಲ್ಲ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಈ ಬಗ್ಗೆ ನಮಗೆ ಮಾಹಿತಿ ಇಲ್ಲ. ಅವರಿಗೆ ಎರಡು ಬಾರಿ ನಾವು ಟೆಸ್ಟ್ ಮಾಡಿದ್ದೇವೆ. ಎರಡು ಬಾರಿಯೂ ನೆಗೆಟಿವ್ ಬಂದಿದೆ. ಅವರು ಕೊರೊನಾ ಪಾಸಿಟಿವ್‍ಯಿಂದ ಸಾವನ್ನಪ್ಪಿದ್ದಾರೆ ಎಂಬುದಕ್ಕೆ ನಮ್ಮಲ್ಲಿ ಯಾವುದೇ ದಾಖಲಾತಿ ಇಲ್ಲ. 28 ಜನರ ಮಾದರಿ ತಪಾಸಣೆ ಬಳಿಕವೇ 11 ಮಂದಿಗೆ ಕೊರೊನಾ ಪಾಸಿಟಿವ್ ಇರುವ ವರದಿ ಬಂದಿದೆ ಎಂದು ಮಾಹಿತಿ ನೀಡಿದರು.

    ಸೋಂಕಿತರ ಸಂರ್ಪಕದಲ್ಲಿರುವವರ ಮಾಹಿತಿ ಪಡೆಯಲಾಗುತ್ತಿದೆ. ಸೋಂಕಿತರು ಎಲ್ಲೆಲ್ಲಿ ಓಡಾಡಿದ್ದಾರೆ ಅದರ ಮಾಹಿತಿ ಕೂಡಾ ಪಡೆಯಲಾಗುತ್ತಿದೆ. ಸೋಂಕಿತರ ಸಂಪರ್ಕದಲ್ಲಿ ಇರುವವರಲ್ಲಿ ಸೋಂಕಿತ ಲಕ್ಷಣಗಳು ಕಂಡು ಬಂದಿದೆಯಾ ಎಂದು ನಮ್ಮ ತಂಡ ನಿಗಾ ವಹಿಸುತ್ತಿದೆ. ಇನ್ನು ಎರಡು ದಿನಗಳಲ್ಲಿ ಎಲ್ಲರನ್ನು ಗುರುತಿಸುವ ಕೆಲಸ ಮಾಡುತ್ತೇವೆ. ಲಕ್ಷಣಗಳು ಕಂಡು ಬಂದರೆ ಅವರ ರಕ್ತ ಹಾಗೂ ಗಂಟಲಿನ ಧ್ರವದ ಮಾದರಿಯನ್ನ ಪ್ರಯೋಗಾಲಯಕ್ಕೆ ರವಾನಿಸುತ್ತೇವೆ.

    ಬಸವಕಲ್ಯಾಣ, ಮನ್ನಾಏಖೇಳ್ಳಿ ಹಾಗೂ ಬೀದರ್ ನ ಓಲ್ಡ್ ಸಿಟಿಯನ್ನ 28 ದಿನಗಳ ಕಾಲ ಸಂಪೂರ್ಣ ಬಂದ್ ಮಾಡಲಾಗಿದೆ. ಲಾಕ್‍ಡೌನ್ ಮತ್ತಷ್ಟು ಬೀಗಿ ಮಾಡುತ್ತೇವೆ. ಆದರೆ ಅಗತ್ಯ ವಸ್ತುಗಳನ್ನ ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದು ಡಿಸಿ ಹೇಳಿದರು.

  • ಜಮಾತ್‍ಗೆ ಹೋಗಿಬಂದಿದ್ದ ದಂಪತಿ ಕ್ವಾರಂಟೈನ್ – 17 ಮಂದಿಗೆ ಕೊರೊನಾ ಟೆಸ್ಟ್

    ಜಮಾತ್‍ಗೆ ಹೋಗಿಬಂದಿದ್ದ ದಂಪತಿ ಕ್ವಾರಂಟೈನ್ – 17 ಮಂದಿಗೆ ಕೊರೊನಾ ಟೆಸ್ಟ್

    ಚಿಕ್ಕಬಳ್ಳಾಪುರ: ಜಿಲ್ಲೆಯಿಂದ ದೆಹಲಿಯ ಜಮಾತ್‍ಗೆ ಹೋಗಿ ಬಂದ 17 ಮಂದಿ ಪತ್ತೆಯಾಗಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್‍ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

    ಮಾರ್ಚ್ 05ರಿಂದ ಮಾರ್ಚ್ 10ರ ಒಳಗಾಗಿ ಆಗ್ರಾ, ಅಜ್ಮೀರ್ ಹಾಗೂ ದೆಹಲಿ ಪ್ರವಾಸಕ್ಕೆ ತೆರಳಿ ವಾಪಸ್ಸಾಗಿದ್ದ ದಂಪತಿಯನ್ನ ಪತ್ತೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಂಪತಿಯನ್ನ ಹಾಸ್ಪಿಟಲ್ ಕ್ವಾರಂಟೈನ್ ಮಾಡಲಾಗಿದೆ. ಇದಲ್ಲದೇ ಫೆಬ್ರವರಿ 08ರಿಂದ ಫೆಬ್ರವರಿ 15ರ ಮಧ್ಯೆ ಜಮಾತ್‍ಗೆ ಹೋಗಿಬಂದಿದ್ದ 15 ಮಂದಿಯನ್ನ ಪತ್ತೆ ಮಾಡಲಾಗಿದೆ.

    ಈಗಾಗಲೇ ಅವರು ವಾಪಸ್ಸಾಗಿ 45 ದಿನಗಳು ಕಳೆದಿದ್ದು, ಇದುವರೆಗೂ ಯಾರಲ್ಲಿಯೂ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಆದರೂ ಅನುಮಾನದ ಮೇರೆಗೆ 15 ಮಂದಿಯನ್ನ ಪತ್ತೆ ಮಾಡಿ ಪರೀಕ್ಷೆಗೆ ಒಳಪಡಿಸಲಾಗಿದೆ. ಸದ್ಯ 17 ಮಂದಿಯ ಬ್ಲಡ್ ಸ್ಯಾಂಪಲ್ ಹಾಗೂ ಗಂಟಲು ದ್ರವ ಪಡೆದುಕೊಂಡು ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ಎಸ್‍ಪಿ ಅವರು ತಿಳಿಸಿದರು.

  • ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ – ಎಮ್ಮೆಮಾಡು ಜಮಾಅತ್ ಅಧ್ಯಕ್ಷ ಅರೆಸ್ಟ್

    ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ – ಎಮ್ಮೆಮಾಡು ಜಮಾಅತ್ ಅಧ್ಯಕ್ಷ ಅರೆಸ್ಟ್

    ಮಡಿಕೇರಿ: ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಜಮಾಅತ್ ಅಧ್ಯಕ್ಷನನ್ನು ಕೊಡಗು  ಪೊಲೀಸರು ಬಂಧಿಸಿದ್ದಾರೆ.

    ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡುವಿನ ಜಮಾಅತ್ ಅಧ್ಯಕ್ಷ ಖಾದರ್ ಹಾಜಿ ಬಂಧಿತ ಆರೋಪಿ. ಖಾದರ್ ಹಾಜಿಯ ಮನೆಯಲ್ಲೇ ಬಾಡಿಗೆಗೆ ಇರುವ ಸಂತ್ರಸ್ತ ಮಹಿಳೆ ಫೆ.12 ರಂದು ಊಟಕೊಡಲು ಹೋಗಿದ್ದಾರೆ.

    ಈ ವೇಳೆ ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಖಾದರ್ ಹಾಜಿ ಮಹಿಳೆಯನ್ನು ಹಿಡಿದು ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ತಕ್ಷಣವೇ ಮಹಿಳೆ ಚೀರಾಡಿ ಅಲ್ಲಿಂದ ತಪ್ಪಿಸಿಕೊಂಡು ಹೊರ ಬಂದಿದ್ದಾರೆ.

    ಬಳಿಕ ಆರೋಪಿ ಖಾದರ್ ಹಾಜಿ ಈ ವಿಷಯವನ್ನು ಯಾರಿಗಾದ್ರೂ ತಿಳಿಸಿದ್ರೆ ನಿನ್ನನ್ನು ಊರಿನಿಂದ ಬಹಿಷ್ಕರಿಸುವುದಾಗಿ, ಜೊತೆಗೆ ಕೊಲೆ ಮಾಡುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

    ಸಂತ್ರಸ್ತ  ಮಹಿಳೆ ಜಮಾಅತ್‍ಗೆ ವಿಷಯ ತಿಳಿಸಿದ್ರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಇಂದು ಪೊಲೀಸ್  ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ನಾಪೋಕ್ಲು ಪೊಲೀಸರು ಖಾದರ್ ಹಾಜಿಯನ್ನು ಬಂಧಿಸಿದ್ದು ಕೋರ್ಟ್ ನ್ಯಾಯಾಂಗ ವಶಕ್ಕೆ ನೀಡಿದೆ.