Tag: Jamia

  • ಶ್ರೀರಂಗಪಟ್ಟಣ ಜಾಮಿಯಾ ವಿವಾದಕ್ಕೆ ಪುಸ್ತಕದಿಂದ ಟ್ವಿಸ್ಟ್ – ಅರ್ಚಕರ ಕೈ ಕತ್ತರಿಸಿ ಕಾವೇರಿಗೆ ವಿಗ್ರಹ ಎಸೆಯಲಾಗಿತ್ತು!

    ಶ್ರೀರಂಗಪಟ್ಟಣ ಜಾಮಿಯಾ ವಿವಾದಕ್ಕೆ ಪುಸ್ತಕದಿಂದ ಟ್ವಿಸ್ಟ್ – ಅರ್ಚಕರ ಕೈ ಕತ್ತರಿಸಿ ಕಾವೇರಿಗೆ ವಿಗ್ರಹ ಎಸೆಯಲಾಗಿತ್ತು!

    – ಸಾಮಾಜಿಕ ಜಾಲತಾಣದಲ್ಲಿ ಪುಸ್ತಕದ ಪ್ರತಿಯ ಫೋಟೋ ವೈರಲ್
    – ವಿಜಯನಗರದ ದಂಡನಾಯಕ ತಿಮ್ಮಣ್ಣನಿಂದ ಕೋಟೆ ನಿರ್ಮಾಣ

    ಮಂಡ್ಯ: ದಿನದಿಂದ ದಿನಕ್ಕೆ ತಾರಕ್ಕೆ ಏರುತ್ತಿರುವ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಇದೀಗ ಪುಸ್ತಕದಿಂದ ಬಿಗ್ ಟ್ವಿಸ್ಟ್ ಸಿಕ್ಕಿದೆ.

    ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದದ ಹೋರಾಟದ ಕಾವು ಹೆಚ್ಚುತ್ತಿರುವುದರ ಜೊತೆಗೆ ದಿನಕ್ಕೊಂದು ಮಹತ್ವದ ತಿರುವನ್ನು ಪಡೆದುಕೊಳ್ಳುತ್ತಿದೆ. ಜಾಮಿಯಾ ಮಸೀದಿಗೂ ಮೊದಲೇ ಅಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಿತ್ತು. ಆ ದೇವಾಸ್ಥಾನ ನಾಶ ಮಾಡಿ ಟಿಪ್ಪು ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ. ಇಲ್ಲಿ ದೇವಸ್ಥಾನ ಇತ್ತು ಎಂಬ ಹಿಂದೂ ಸಂಘಟನೆಗಳ ಆರೋಪಕ್ಕೆ ಪೂರಕ ಎಂಬಂತೆ ಈ ಹಿಂದೆ ಪ್ರಕಟವಾದ ಪುಸ್ತಕ ಸಿಕ್ಕಿದೆ.

    ಬಾಲಗಣಪತಿಭಟ್ಟ ಎಂಬವರು ಬರೆದಿರುವ ಮೂಡಲ ಬಾಗಿಲು ಶ್ರೀ ಆಂಜನೇಯಸ್ವಾಮಿ ಸುಪ್ರಭಾತ ಎಂಬ ಪುಸ್ತಕ ದೊರೆತಿದೆ. ಈ ಪುಸ್ತಕದಲ್ಲಿ ಜಾಮಿಯಾ ಮಸೀದಿಯನ್ನು ಟಿಪ್ಪು ಸುಲ್ತಾನ್ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ನಾಶಮಾಡಿ ನಿರ್ಮಾಣ ಮಾಡಿದ್ದಾನೆ ಎಂದು ಉಲ್ಲೇಖ ಮಾಡಲಾಗಿದೆ. ಇದನ್ನೂ ಓದಿ: ಹಿಜಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಆಗ ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ: ಯು.ಟಿ.ಖಾದರ್ 

    ಪುಸ್ತಕದಲ್ಲಿ ಏನಿದೆ?
    ಶ್ರೀರಂಗಪಟ್ಟಣ ಈ ಹಿಂದೆ ದಟ್ಟ ಅರಣ್ಯ ಪ್ರದೇಶವಾಗಿತ್ತು. ಗೋಹತ್ಯೆಯ ಪಾಪಕ್ಕೊಳಗಾದ ಗೌತಮ ಋಷಿಗಳು ಇಲ್ಲಿಗೆ ಬಂದು ದೇವಸ್ಥಾನಗಳನ್ನು ಸ್ಥಾಪಿಸಿ ಪೂಜಿಸಿದ್ದರು. ಆ ವೇಳೆ ಶ್ರೀರಂಗಪಟ್ಟಣವನ್ನು ಗೌತಮ ಕ್ಷೇತ್ರ ಎಂದು ಕರೆಯಲಾಗುತ್ತಿತ್ತು. ಆ ವೇಳೆ ಮೂಡಲ ದಿಕ್ಕಿಗೆ ಗೌತಮ ಋಷಿಗಳೇ ಆಂಜನೇಯಸ್ವಾಮಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಆರಾಧನೆ ಮಾಡುತ್ತಿದ್ದರು. ಇದಾದ ನಂತರ ರಾಜಾಡಳಿತದ ರಾಜಧಾನಿಯಾದಗ ಗೌತಮ ಕ್ಷೇತ್ರ ಶ್ರೀರಂಗಪಟ್ಟಣವೆಂದು ಬದಲಾಗುತ್ತದೆ.

    ಶ್ರೀರಂಗಪಟ್ಟಣದ ಸುತ್ತ ಇರುವ ಕೋಟೆಯನ್ನು ವಿಜಯನಗರದ ದಂಡನಾಯಕ ತಿಮ್ಮಣ್ಣ ಹೆಬ್ಬಾರನಿಂದ ನಿರ್ಮಿತವಾಗಿದೆ. ಈ ವೇಳೆ ತಿಮ್ಮಣ್ಣ ಹೆಬ್ಬಾರ ಕೇವಲ ಆಂಜನೇಯಸ್ವಾಮಿ ಮೂರ್ತಿ ಇದ್ದ ಜಾಗದಲ್ಲಿ ಭವ್ಯವಾದ ಮಂದಿರವೊಂದನ್ನು ಕಟ್ಟಿಸಿದ್ದರು. ಬಳಿಕ ಇಲ್ಲಿ ಪ್ರತಿನಿತ್ಯ ಆಂಜನೇಯಸ್ವಾಮಿಯನ್ನು ಜನರು ಆರಾಧನೆ ಮಾಡುತ್ತಿದ್ದರು. ಇಂತಹ ದೇವಸ್ಥಾನಕ್ಕೆ ವಿನಾಶಕಾಲ ಬಂದಿದ್ದು, ಟಿಪ್ಪು ಸುಲ್ತಾನ್ ಕಾಲದಲ್ಲಿದೆ.

    ಅರ್ಚಕರ ಕೈ ಕತ್ತರಿಸಲಾಗಿತ್ತು
    ಟಿಪ್ಪು ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ನಾಶ ಮಾಡಿ ಅರ್ಚಕರಾಗಿದ್ದ ನಾರಾಯಣಸ್ವಾಮಿ ಅವರ ಕೈಯನ್ನು ಕತ್ತರಿಸಿ, ದೇವಸ್ಥಾನದ ಒಳಭಾಗದಲ್ಲಿ ಇದ್ದ ಏಳು ಕೊಪ್ಪರಿಗೆ ಹಣ ಹಾಗೂ ಅಮೂಲ್ಯವಾದ ರತ್ನಾಭರಣಗಳನ್ನು ದೋಚಲಾಗಿದೆ. ಆ ಹಣದಿಂದಲೇ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾನೆ. ಇಲ್ಲಿದ್ದ ಮೂಡಲಬಾಗಿಲು ಆಂಜನೇಯಸ್ವಾಮಿ ಮೂಲ ವಿಗ್ರಹವನ್ನು ಕಾವೇರಿ ನದಿಗೆ ಎಸೆದಿದ್ದಾನೆ.

    ನಾನು ನಿನ್ನ ಜೊತೆ ಬರುತ್ತೇನೆ
    ಟಿಪ್ಪು ಮರಣದ ನಂತರ ಅರ್ಚಕರಾದ ನಾರಾಯಣಸ್ವಾಮಿ ಅವರು ಕಾವೇರಿ ನದಿಯಲ್ಲಿ ಹೋಗುವ ವೇಳೆ ದಿವ್ಯವಾಣಿಯೊಂದು ‘ನಾನು ನಿನ್ನ ಜೊತೆ ಬರುತ್ತೇನೆ’ ಎಂದು ಕೇಳಿಬಂದಿದೆ. ಅದೇನೂ ಎಂದು ನೋಡಿದ ವೇಳೆ ಅಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿಯ ಮೂಲ ವಿಗ್ರಹ ಪತ್ತೆಯಾಗುತ್ತೆ. ನಂತರ ಶ್ರೀರಂಗಪಟ್ಟಣದ ಪೇಟೆ ಬೀದಿಯಲ್ಲಿ ಮರುಪ್ರತಿಷ್ಠಾಪನೆ ಮಾಡಿ ಆರಾಧನೆ ಮಾಡಿದರು ಎಂದು ಬಾಲಗಣಪತಿಭಟ್ಟ ಅವರು ಈ ಪುಸ್ತಕದಲ್ಲಿ ಬರೆದಿದ್ದಾರೆ.

    ಜಾಮಿಯಾ ಮಸೀದಿಯಲ್ಲಾ, ಮಂದಿರಾ ಎಂದು ಹೋರಾಟ ನಡೆಸುತ್ತಿರುವ ವೇಳೆ ಈ ಪುಸ್ತಕ ದೊರೆತಿರುವುದು ಸಂಚಲನ ಮೂಡಿಸಿದೆ. ದೊರೆತಿರುವ ಪುಸ್ತಕವಾದ್ರು ಯಾವ ಕಾಲ ಘಟ್ಟದ್ದೂ, ಆ ಪುಸ್ತಕದಲ್ಲಿ ಬರೆದಿರುವ ವಿಚಾರಗಳ ಸತ್ಯ ಸತ್ಯತೆಗಳ ಬಗ್ಗೆ ಸರ್ಕಾರ ಪರೀಶಿಲಸಬೇಕಿದೆ. ಇದನ್ನೂ ಓದಿ:  ಬೈಕರ್ ಗುಂಪಿನೊಂದಿಗೆ ಮಾತಿನ ಚಕಮಕಿ – ಸವಾರನಿಗೆ ಬೇಕೆಂದು ಸ್ಕಾರ್ಪಿಯೋ ಡಿಕ್ಕಿ 

    ಇಲ್ಲಿರುವ ದೇವಸ್ಥಾನದ ಮಾದರಿಯ ಕಂಬಗಳು, ಕೆತ್ತನೆಗಳು, ಕಲ್ಯಾಣಿ, ಬಾವಿ, ಗೋಪುರದ ಕಳಶಗಳನ್ನು ನೋಡಿ ಇದು ದೇವಸ್ಥಾನ ಎಂದು ತಿಳಿಯುತ್ತದೆ. ಹೀಗಾಗಿ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನಮಗೆ ಮತ್ತೆ ಜಾಮಿಯಾ ಬಳಿ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ಪ್ರತಿಷ್ಠಾಪನೆ ಮಾಡಬೇಕೆಂದು ಹಿಂದೂಪರ ಸಂಘಟನೆಗಳು ಹೋರಾಟಗಳನ್ನು ಆರಂಭಿಸಿದೆ. ಈ ಹೋರಾಟವನ್ನು ನ್ಯಾಯಾಲಯದ ಜೊತೆಗೆ ಪ್ರತಿಭಟನೆಯ ರೂಪದಲ್ಲಿ ಹೋರಾಟ ನಡೆಸುತ್ತಿವೆ.

  • ಮದರಸಾ ತೆರವು ಮಾಡದೆ ಇದ್ದರೆ ನಾವೇ ಅವರ ಕೊರಳಪಟ್ಟಿ ಹಿಡಿದು ಹೊರ ಹಾಕ್ತಿವಿ: ಹಿಂದೂ ಸಂಘಟನೆಗಳು

    ಮದರಸಾ ತೆರವು ಮಾಡದೆ ಇದ್ದರೆ ನಾವೇ ಅವರ ಕೊರಳಪಟ್ಟಿ ಹಿಡಿದು ಹೊರ ಹಾಕ್ತಿವಿ: ಹಿಂದೂ ಸಂಘಟನೆಗಳು

    ಮಂಡ್ಯ: ಜಾಮೀಯಾ ಮಸೀದಿ ವಿವಾದದಲ್ಲಿ ಸ್ಪಷ್ಟೀಕರಣ ಬಾರದೇ ಇದ್ದರೆ ಪ್ರತಿಭಟನೆ ಉಗ್ರ ರೂಪ ಪಡೆಯುತ್ತೆ ಎಂದು ಜಿಲ್ಲಾಡಳಿತಕ್ಕೆ 25 ದಿನಗಳ ಗಡುವು ನೀಡಿ, ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

    ಸಂರಕ್ಷಿತಾ ಪ್ರದೇಶದಲ್ಲಿನ ಮದರಸಾ ಇನ್ನೂ 25 ದಿನದಲ್ಲಿ ತೆರವಾಗದೇ ಇದ್ದರೆ ನಾವೇ ಅವರ ಕೊರಳಪಟ್ಟಿ ಹಿಡಿದು ಹೊರ ಹಾಕುತ್ತೇವೆ. ಇದು ಹಿಂದೂ ಪರ ಸಂಘಟನೆಗಳ ಎಚ್ಚರಿಕೆಯ ಮಾತು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಹಿಂದೂ ಪರ ಸಂಘಟನೆಗಳ ಮುಖಂಡರು, ಇವತ್ತಿನ ಪೊಲೀಸ್ ಬ್ಯಾರಿಕೇಡ್‍ಗೆ ನಾವು ಹೆದರಿಲ್ಲ. ನಮ್ಮ ಬೇಡಿಕೆ ಈಡೇರದಿದ್ದರೆ 25 ದಿನದ ನಂತರದ ಹೋರಾಟದಲ್ಲಿ ನಮ್ಮ ಕಿಚ್ಚು ತೋರಿಸುತ್ತೇವೆ ಎಂದಿದ್ದಾರೆ.

  • ಶ್ರೀರಂಗಪಟ್ಟಣ ಮಸೀದಿ ವಿವಾದ – ಹಿಂದೂ, ಮುಸ್ಲಿಮರ ವಾದ ಏನು?

    ಶ್ರೀರಂಗಪಟ್ಟಣ ಮಸೀದಿ ವಿವಾದ – ಹಿಂದೂ, ಮುಸ್ಲಿಮರ ವಾದ ಏನು?

    ಮಂಡ್ಯ: ಕಾಶಿಯ ಜ್ಞಾನವಾಪಿ ಮಸೀದಿ ವಿವಾದ ಆರಂಭವಾದ ಬೆನ್ನಲ್ಲೇ ಈಗ ಶ್ರೀರಂಗಪಟ್ಟಣ ಮಸೀದಿ ವಿವಾದ ಎದ್ದಿದೆ. ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಅಲ್ಲ, ಹನುಮಾನ್ ಮಂದಿರ ಅಂತ ಪಟ್ಟು ಹಿಡಿದಿರುವ ಹಿಂದೂ ಸಂಘಟನೆಗಳು ಇಂದು `ಶ್ರೀರಂಗಪಟ್ಟಣ ಚಲೋ’ ಹಮ್ಮಿಕೊಂಡಿವೆ.

    ಇತ್ತ ಮುಸ್ಲಿಂ ಸಂಘಟನೆಗಳು ಈ ಮಸೀದಿಯನ್ನು ಟಿಪ್ಪು ಸುಲ್ತಾನ್ ನಿರ್ಮಿಸಿದ್ದಾನೆ. ದೇವಸ್ಥಾನವನ್ನು ನಾಶ ಮಾಡಿ ಮಸೀದಿ ನಿರ್ಮಾಣ ಮಾಡಿಲ್ಲ ಎಂದು ವಾದಿಸುತ್ತಿವೆ.

    ಹಿಂದೂ ಪರರ ವಾದವೇನು?
    1659ರಲ್ಲಿ ವಿಜಯನಗರದ ಸಾಮ್ರಾಜ್ಯವಿತ್ತು. ದೊಡ್ಡ ದೇವರಾಜ ಒಡೆಯರ್ ಅವಧಿಯಲ್ಲಿ ದೇವಸ್ಥಾನವೊಂದನ್ನು ಕಟ್ಟಲಾಗಿದೆ. ಬಾಗಿಲು ವೆಂಕಟರಮಣ ದೇವಸ್ಥಾನ ಎಂದು ದೇಗುಲದ ಹೆಸರು ಇತ್ತು. ವೆಂಕಟೇಶ್ವರಸ್ವಾಮಿ, ಆಂಜನೇಯಸ್ವಾಮಿ ಅಲ್ಲಿನ ಪ್ರಧಾನ ದೇವರುಗಳು. ಮಾಧ್ವ ಯತಿಗಳು ಬಂದಾಗ ಉಳಿದುಕೊಳ್ಳಲು ಈ ದೇವಸ್ಥಾನ ಇತ್ತು. 1784ರಲ್ಲಿ ಟಿಪ್ಪು ಈ ದೇವಸ್ಥಾನ ಕೆಡವಿ ಅಲ್ಲಿ ಮಸೀದಿ ಕಟ್ಟಿದ್ದಾನೆ. ಸಾಫ್ಟ್ ಟಾರ್ಗೆಟ್ ರೂಪದಲ್ಲಿ ಈ ದೇವಸ್ಥಾನವನ್ನು ಕೆಡವಿ ಮಸೀದಿ ಕಟ್ಟಲಾಯ್ತು ಎಂದು ಆರೋಪಿಸಲಾಗುತ್ತಿದೆ. ಇದನ್ನೂ ಓದಿ: ಇಂದು ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ – 144 ಸೆಕ್ಷನ್ ಜಾರಿ 

    ಜಾಮಿಯಾ ಮಸೀದಿ.. ಟಿಪ್ಪು ಪರರ ವಾದವೇನು..?
    ದೇವಸ್ಥಾನ ಇದ್ದಿದ್ದು ಸತ್ಯ, ರಾಜ್ಯ ರಕ್ಷಣೆಗಾಗಿ ವಾಚ್ ಟವರ್ ಕಟ್ಟಬೇಕಾಗಿತ್ತು. ಶತ್ರುಗಳಿಗೆ ಗೊತ್ತಾಗದಿರಲಿ ಎಂದು ಮಸೀದಿ ರೂಪದಲ್ಲಿ ವಾಚ್ ಟವರ್ ನಿರ್ಮಾಣ ಮಾಡಲಾಗಿತ್ತು. ಗೋಪುರದ ತುದಿಯಲ್ಲಿ ನಿಂತರೆ 40 ಕಿ.ಮೀ. ದೂರದ ಮಳವಳ್ಳಿಯೂ ಕಾಣುತ್ತೆ. ಟಿಪ್ಪು ದೇವಸ್ಥಾನ ನಾಶ ಮಾಡಲಿಲ್ಲ. ಅಲ್ಲಿದ್ದ ದೇವಸ್ಥಾನವನ್ನು ಸ್ಥಳಾಂತರ ಮಾಡಿದ್ದ. ಶ್ರೀರಂಗಪಟ್ಟಣದ ಕ್ಷಣಾಂಬಿಕಾ ದೇವಿ ದೇಗುಲದ ಆವರಣದೊಳಗೆ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಪ್ರತಿಷ್ಠಾಪನೆ ಆಗಿದೆ. ದೇವಾಲಯ ನಾಶ ಮಾಡುವ ಉದ್ದೇಶ ಇದ್ದಿದ್ದರೆ ಮೂರ್ತಿಯನ್ನು ಯಾಕೆ ಸ್ಥಳಾಂತರ ಮಾಡಬೇಕಿತ್ತು ದೇವಾಲಯದ ಕಂಬಗಳನ್ನು ಎಲ್ಲರಿಗೂ ತಿಳಿಯುವಂತೆ ಹೊರಗಡೆ ಯಾಕೆ ಬಿಡುತ್ತಿದ್ದ ಎಂದು ಪ್ರಶ್ನೆ ಕೇಳಿದ್ದಾರೆ.

  • 12 ಸಾವಿರ NGOಗಳ ವಿದೇಶಿ ದೇಣಿಗೆ ಸ್ವೀಕಾರ ಪರವಾನಿಗೆ ರದ್ದು

    12 ಸಾವಿರ NGOಗಳ ವಿದೇಶಿ ದೇಣಿಗೆ ಸ್ವೀಕಾರ ಪರವಾನಿಗೆ ರದ್ದು

    ನವದೆಹಲಿ: ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ(FCRA) ನಿಯಮವನ್ನು ಪಾಲನೆ ಮಾಡದ್ದಕ್ಕೆ ಐಐಟಿ ದೆಹಲಿ ಹಳೆ ವಿದ್ಯಾರ್ಥಿಗಳ ಸಂಘ, ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಮದರ್ ತೆರೇಸಾ ಮಿಷನರೀಸ್ ಆಫ್ ಚಾರಿಟಿ ಸೇರಿದಂತೆ ದೇಶದ 12,000ಕ್ಕೂ ಹೆಚ್ಚು ಸರ್ಕಾರೇತರ ಸಂಸ್ಥೆ(NGO)ಗಳ ನೋಂದಣಿಯನ್ನು ರದ್ದು ಗೊಳಿಸಲು ಕೇಂದ್ರ ಗೃಹ ಸಚಿವಾಲಯ ತೀರ್ಮಾನಿಸಿದೆ.

    FCRA ಪರವಾನಿಗೆಯನ್ನು ನವೀಕರಣಗೊಳಿಸುವ ಸಂಬಂಧ 29 ಸೆಪ್ಟೆಂಬರ್ 2020 ರಿಂದ 31 ಡಿಸೆಂಬರ್ 2021ರ ಅವಧಿ ಒಳಗಡೆ 18,778 ಎನ್‍ಜಿಒಗಳು ಅರ್ಜಿ ಸಲ್ಲಿಸಿದ್ದವು. ಆದರೆ 6 ಸಾವಿರಕ್ಕೂ ಹೆಚ್ಚು ಎನ್‍ಜಿಒಗಳು ಅರ್ಜಿ ಸಲ್ಲಿಸಿರಲಿಲ್ಲ. ಇದನ್ನು ಹೊರತು ಪಡಿಸಿ ಉಳಿದಂತೆ ಈಗಾಗಲೇ 5,789 ಎನ್‍ಜಿಒ ಮತ್ತು ಸಂಘ ಸಂಸ್ಥೆಗಳ FCRA ನೋಂದಣಿ ಪರವಾನಿಗೆ ರದ್ದಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಬೆಲೆ ಏರಿಕೆಯ ಬಿಸಿ – ಯಾವ ವಸ್ತುಗಳು ಎಷ್ಟು ಏರಿಕೆ?

    ಐಐಟಿ ದೆಹಲಿ ಹಳೆ ವಿದ್ಯಾರ್ಥಿಗಳ ಸಂಘ, ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಭಾರತೀಯ ವೈದ್ಯಕೀಯ ಸಂಘ, ನೆಹರು ಮೆಮೊರಿಯಲ್ ಮ್ಯೂಸಿಯಮ್ ಹಾಗೂ ಗ್ರಂಥಾಲಯಗಳು, ಮದರ್ ತೆರೇಸಾ ಮಿಷನರೀಸ್ ಆಫ್ ಚಾರಿಟಿ ಸೇರಿ 12,000 ಸಂಸ್ಥೆಗಳ FCRA ನೋಂದಣಿ ಭದ್ರತೆ ಕಾರಣದಿಂದ ರದ್ದಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಜನವರಿ 1 ರಿಂದ ಜಿಎಸ್‍ಟಿ ನಿಯಮಗಳ ಬದಲಾವಣೆ – ಹೀಗಿದೆ ಮುಖ್ಯ ಬೆಲೆ ಏರಿಕೆಗಳ ಪಟ್ಟಿ

    ಈ ಸಂಸ್ಥೆಗಳು ಒಂದೋ FCRA ಪರವಾನಿಗೆ ನವೀಕರಣಗೊಳಿಸಲು ಅರ್ಜಿ ಸಲ್ಲಿಸದಿದ್ದ ಕಾರಣ ಅಥವಾ ಗೃಹಸಚಿವಾಲಯ ನಿಗದಿ ಪಡಿಸಿದ್ದ ಮಾನದಂಡಕ್ಕೆ ಅನುಗುಣವಾಗಿ ಮಾಹಿತಿ ನೀಡದ ಕಾರಣ ಅರ್ಜಿಗಳನ್ನು ತಿರಸ್ಕರಿಸಿದೆ.

    FCRA ಸಿಂಧುತ್ವ ಕಳೆದುಕೊಂಡಿರುವ ಪಟ್ಟಿಯಲ್ಲಿ ಆಕ್ಸ್ಫಾಮ್ ಇಂಡಿಯಾ ಸಂಸ್ಥೆಗಳು, ಇಂದಿರಾಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್, ಲಾಲ್ ಬಹದ್ದೂರ್ ಶಾಸ್ತ್ರಿ ಮೆಮೊರಿಯಲ್ ಫೌಂಡೇಷನ್, ಲೇಡಿ ಶ್ರೀರಾಮ್ ಕಾಲೇಜು, ದೆಹಲಿ ಕಾಲೇಜ್ ಆಫ್ ಇಂಜಿನಿಯರಿಂಗ್ ಸೇರಿ ಹಲವು ಪ್ರತಿಷ್ಠಿತ ಸಂಘ ಸಂಸ್ಥೆ ಗಳಿವೆ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಇದನ್ನೂ ಓದಿ: ಗುಡ್‍ನ್ಯೂಸ್ – ಜವಳಿ ಮೇಲಿನ ಜಿಎಸ್‍ಟಿ ಏರಿಕೆ ಇಲ್ಲ

    ಪ್ರಸ್ತುತ 16,829 ಎನ್‍ಜಿಒಗಳ FCRA ಪರವಾನಿಗೆ ಜಾಲ್ತಿಯಲ್ಲಿದ್ದು, ಈಗಾಗಲೇ 1,800 ಕ್ರಿಶ್ಚಿಯನ್, 250 ಹಿಂದೂ ಮತ್ತು 250 ಮುಸ್ಲಿಂ ಎನ್‍ಜಿಒಗಳ ಪರವಾನಿಗೆ ರದ್ದಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ವಿದೇಶದಿಂದ ನೆರವು ಪಡೆದು ದೇಶದ ಒಳಗಡೆ ಉಗ್ರ ಚಟುವಟಿಕೆ ಸೇರಿದಂತೆ ದುಷ್ಟ ಚಟುವಟಿಕೆಗಳಿಗೆ ಎನ್‍ಜಿಒಗಳ ಹಣ ಬಳಕೆಯಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ FCRA ಗೆ ತಿದ್ದುಪಡಿ ತಂದಿತ್ತು. ವಿದೇಶದಿಂದ ಹಣ ಪಡೆಯುವ ಎನ್‍ಜಿಒಗಳು ಕಡ್ಡಾಯವಾಗಿ ದೆಹಲಿಯ ಎಸ್‍ಬಿಐ ಕಚೇರಿಯಲ್ಲಿ ಖಾತೆ ತೆರೆಯುವುದನ್ನು ಕಡ್ಡಾಯಗೊಳಿಸಿತ್ತು. ಅಲ್ಲದೇ ಹಣದ ಲೆಕ್ಕಪತ್ರ ಸಂಬಂಧ ಹಲವು ಬಿಗಿ ನಿಯಮಗಳನ್ನು ಪಾಲನೆ ಮಾಡಬೇಕೆಂದು ಎನ್‍ಜಿಒಗಳಿಗೆ ಸೂಚಿಸಿತ್ತು.

  • ಹಿಂಸಾಚಾರ ನಿಂತ ಬಳಿಕವಷ್ಟೇ ಅರ್ಜಿ ವಿಚಾರಣೆ – ಸುಪ್ರೀಂ ಕೋರ್ಟ್

    ಹಿಂಸಾಚಾರ ನಿಂತ ಬಳಿಕವಷ್ಟೇ ಅರ್ಜಿ ವಿಚಾರಣೆ – ಸುಪ್ರೀಂ ಕೋರ್ಟ್

    ನವದೆಹಲಿ: ಹಿಂಸಾಚಾರ ನಿಲ್ಲಿಸಿದ ಬಳಿಕವಷ್ಟೇ ಬಳಿಕವಷ್ಟೇ ವಿದ್ಯಾರ್ಥಿಗಳ ಕುರಿತಾಗಿ ಸಲ್ಲಿಸಲಾದ ಅರ್ಜಿ ವಿಚಾರಣೆಯನ್ನು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾ. ಎಸ್.ಎ.ಬೊಬ್ಡೆ ಹೇಳಿದ್ದಾರೆ.

    ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಉತ್ತರ ಪ್ರದೇಶದ ಅಲಿಗಡ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಪೊಲೀಸರ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂನಲ್ಲಿ ನಡೆಯಿತು.

    ವಿಚಾರಣೆ ಸಂದರ್ಭದಲ್ಲಿ ಮೊದಲು ಹಿಂಸಾಚಾರದ ಪ್ರತಿಭಟನೆ ನಿಲ್ಲಬೇಕು. ಹಿಂಸಾಚಾರ ನಿಂತ ನಂತರವೇ ಅರ್ಜಿ ವಿಚಾರಣೆ ಮಾಡಲಾಗುವುದು. ಹಿಂಸಾಚಾರ ನಿಲ್ಲದೇ ಇದ್ದರೆ ಅರ್ಜಿ ವಿಚಾರಣೆ ನಡೆಸುವುದಿಲ್ಲ ಎಂದು ಸೂಚಿಸಿದೆ.

    ಪ್ರತಿಭಟನೆ ನಡೆಸುತ್ತಿರುವವರು ವಿದ್ಯಾರ್ಥಿಗಳು ಎನ್ನುವ ಒಂದೇ ಕಾರಣಕ್ಕೆ ಕಾನೂನನ್ನು ಕೈಗೆತ್ತುಕೊಳ್ಳುವಂತಿಲ್ಲ. ಪ್ರತಿಭಟನೆ ನಿಂತ ಬಳಿಕ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು ಎಂದು ಹೇಳಿ ನಾಳೆಗೆ ಮುಂದೂಡಿತು.

    ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಅಲಿಗಡ ವಿಶ್ವವಿದ್ಯಾಲಯದ ಪರವಾಗಿ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ವಾದ ಮಂಡಿಸಿದ್ದರು. ವಕೀಲ ಕಾಲಿನ್ ಗೊನ್ಸಾಲ್ವ್ಸ್ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ಜಾಮಿಯಾ ಮಿಲಿಯಾ ಪ್ರಕರಣದ ತನಿಖೆ ನಡೆಸಬೇಕೆಂದು ಮನವಿ ಮಾಡಿದರು. ಈ ವೇಳೆ ಹಿರಿಯ ವಕೀಲರು, ಪೊಲೀಸರ ದೌರ್ಜನ್ಯದ ವಿಡಿಯೋ ನೋಡಿ ನಿಮಗೆ ಪ್ರಕರಣದ ತೀವ್ರತೆ ತಿಳಿಯುತ್ತದೆ ಎಂದಾಗ ಬೊಬ್ಡೆ, ನಾವು ಯಾವುದೇ ವಿಡಿಯೋ ವೀಕ್ಷಿಸುವುದಿಲ್ಲ. ಸಾರ್ವಜನಿಕ ಆಸ್ತಿಯನ್ನು ಹಾಳು ಮಾಡಿದರೆ ಅರ್ಜಿ ವಿಚಾರಣೆ ನಡೆಸುವುದೇ ಇಲ್ಲ ಎಂದು ಖಡಕ್ ಆಗಿ ಸೂಚಿಸಿದರು.