Tag: Jamia Nagar

  • ನಾಪತ್ತೆಯಾಗಿದ್ದ ಇಬ್ಬರು ಮಕ್ಕಳು ಮನೆಯಲ್ಲೇ ಇದ್ದ ಮರದ ಪೆಟ್ಟಿಗೆಯೊಳಗೆ ಶವವಾಗಿ ಪತ್ತೆ

    ನಾಪತ್ತೆಯಾಗಿದ್ದ ಇಬ್ಬರು ಮಕ್ಕಳು ಮನೆಯಲ್ಲೇ ಇದ್ದ ಮರದ ಪೆಟ್ಟಿಗೆಯೊಳಗೆ ಶವವಾಗಿ ಪತ್ತೆ

    – ಕಣ್ಣಾಮುಚ್ಚಾಲೆ ಆಡುತ್ತಾ ಸಿಲುಕಿಕೊಂಡಿರೋ ಶಂಕೆ

    ನವದೆಹಲಿ: ಇಬ್ಬರು ಮಕ್ಕಳು (Children) ನಾಪತ್ತೆಯಾದ ಕೆಲವೇ ಗಂಟೆಗಳ ಬಳಿಕ ಮನೆಯಲ್ಲೇ ಇದ್ದ ಮರದ ಪೆಟ್ಟಿಗೆಯೊಳಗೆ (Wooden Box) ಶವವಾಗಿ ಪತ್ತೆಯಾದ ಘಟನೆ ದೆಹಲಿಯ (Delhi) ಜಾಮಿಯಾ ನಗರ (Jamia Nagar) ಪ್ರದೇಶದಲ್ಲಿ ನಡೆದಿದೆ.

    ನೀರಜ್ (8) ಮತ್ತು ಆರತಿ (6) ಶವವಾಗಿ ಪತ್ತೆಯಾಗಿರುವ ಮಕ್ಕಳು. ಇಬ್ಬರೂ ಸಹೋದರ – ಸಹೋದರಿಯಾಗಿದ್ದು, ಅದೇ ಮನೆಯಲ್ಲಿ ವಾಚ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ತಮ್ಮ ತಂದೆ ಬಲ್ಬೀರ್ ಅವರೊಂದಿಗೆ ವಾಸಿಸುತ್ತಿದ್ದರು. ಮಕ್ಕಳಿಬ್ಬರೂ ಆಟವಾಡುತ್ತಾ ಪೆಟ್ಟಿಗೆಯೊಳಗೆ ಸೇರಿಕೊಂಡು ಬಳಿಕ ಹೊರಬರಲು ಸಾಧ್ಯವಾಗದೆ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.

    ಮಂಗಳವಾರ ಮಧ್ಯಾಹ್ನ ಮಕ್ಕಳು ತಮ್ಮ ಪೋಷಕರೊಂದಿಗೆ ಸುಮಾರು 3 ಗಂಟೆ ವೇಳಗೆ ಊಟ ಮುಗಿಸಿದ್ದು, 3:30ರ ವೇಳೆಗೆ ನಾಪತ್ತೆಯಾಗಿದ್ದಾರೆ. ಸ್ಥಳೀಯರು ಹಾಗೂ ಇತರ ಮಕ್ಕಳು ಅವರಿಬ್ಬರನ್ನೂ ಹುಡುಕಿದಾಗ ಮನೆಯಲ್ಲಿ ಇದ್ದ ಮರದ ಪೆಟ್ಟಿಗೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ಹೆಂಡತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ

    ಮಕ್ಕಳ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಇರಲಿಲ್ಲ. ಮಕ್ಕಳು ಆಟವಾಡುತ್ತಾ ಆಕಸ್ಮಿಕವಾಗಿ ಮರದ ಪೆಟ್ಟಿಗೆಯೊಳಗೆ ಸಿಲುಕಿಕೊಂಡು ಬಳಿಕ ಉಸಿರುಕಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಜಾಮಿಯಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಕ್ಕಳ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಇದನ್ನೂ ಓದಿ: ಗಂಡು ಮಗುವಾಯ್ತು ಅಂತ ಪಾರ್ಟಿ ಕೊಡಿಸಿದವನ ತಲೆ ಬುರುಡೆ ಓಪನ್ ಮಾಡಿದ ಸ್ನೇಹಿತರು!

  • ದೆಹಲಿ ಹಿಂಸಾಚಾರ ಪ್ರಚೋದನೆ- ಉಗ್ರ ಸಂಘಟನೆ ನಂಟು ಹೊಂದಿದ್ದ ಕಾಶ್ಮೀರಿ ದಂಪತಿ ಅರೆಸ್ಟ್

    ದೆಹಲಿ ಹಿಂಸಾಚಾರ ಪ್ರಚೋದನೆ- ಉಗ್ರ ಸಂಘಟನೆ ನಂಟು ಹೊಂದಿದ್ದ ಕಾಶ್ಮೀರಿ ದಂಪತಿ ಅರೆಸ್ಟ್

    ನವದೆಹಲಿ: ದೆಹಲಿ ಹಿಂಸಾಚಾರ ಪ್ರಚೋದನೆ ನೀಡಿದ್ದ ಹಾಗೂ ಉಗ್ರ ಸಂಘಟನೆ ನಂಟು ಹೊಂದಿದ್ದ ಕಾಶ್ಮೀರಿ ದಂಪತಿಯನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

    ಶ್ರೀನಗರದ ನಿವಾಸಿಗಳಾದ ಜಹಾಂಜೇಬ್ ಮತ್ತು ಹೀನಾ ಬಶೀರ್ ಬೇಗ್ ಬಂಧಿತರು. ಆರೋಪಿಗಳನ್ನು ಜಾಮಿಯಾ ನಗರದಿಂದ ಬಂಧಿಸಲಾಗಿದೆ ಎಂದು ದೆಹಲಿಯ ಒಪೊಲೀಸ್ ಹಿರಿಯ ಅಧಿಕಾರಿ ಪ್ರಮೋದ್ ಸಿಂಗ್  ಕುಶ್ವಾಹ್ ತಿಳಿಸಿದ್ದಾರೆ.

    ಆರೋಪಿಗಳು ಮುಸ್ಲಿಂ ಯುವಕರನ್ನು ಪ್ರಚೋದಿಸುವ ಮೂಲಕ ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಆತ್ಮಾಹುತಿ ದಾಳಿಗೆ ಹಂಚು ರೂಪಿಸಿದ್ದರು ಎಂಬ ಸತ್ಯ ಬೆಳಕಿಗೆ ಬಂದಿದೆ. ಬಂಧಿತ ಬಳಿ ಇದ್ದ ಎಲೆಕ್ಟ್ರಾನಿಕ್ ಗ್ಯಾಜೆಟ್‍ಗಳು ಮತ್ತು ಜಿಹಾದಿ ದಾಖಲೆಗಳು ಪೊಲೀಸರಿಗೆ ಸಿಕ್ಕಿವೆ. ಅಷ್ಟೇ ಅಲ್ಲದೆ ಆರೋಪಿಗಳು ಅಫ್ಘಾನಿಸ್ತಾನದ ಉಗ್ರ ಸಂಘಟನೆ ಐಎಸ್‍ಕೆಪಿಯ ಉನ್ನತ ನಾಯಕರೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ತನಿಖೆಯ ವೇಳೆ ತಿಳಿದುಬಂದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

    ಐಎಸ್‍ಕೆಪಿ (ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಲೆವಂಟ್-ಖೊರಾಸಮ್) ಎಂಬ ಭಯೋತ್ಪಾದಕ ಸಂಘಟನೆಯೊಂದಿಗೆ ಜಹಾಂಜೇಬ್ ಭಾಗಿಯಾಗಿರುವ ಬಗ್ಗೆ ಭಾರತೀಯ ಗುಪ್ತಚರ ಸಂಸ್ಥೆಗೆ ಮಾಹಿತಿ ನೀಡಲಾಗಿತ್ತು. ಐಎಸ್‍ಕೆಪಿ ಅಫ್ಘಾನಿಸ್ತಾನದಲ್ಲಿ ಐಸಿಸ್ ಅಂಗಸಂಸ್ಥೆಯಾಗಿದೆ. ಜಹಾಂಜೇಬ್ ಆತ್ಮಾಹುತಿ ಬಾಂಬ್ ದಾಳಿ ನಡೆಸಲು ಯತ್ನಿಸುತ್ತಿದ್ದ. ಅದಕ್ಕಾಗಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ್ದ. ಅಷ್ಟೇ ಅಲ್ಲದೆ ಇಂಟರ್ನೆಟ್ ಮೂಲಕ ಭಯೋತ್ಪಾದಕ ಸಂಘಟನೆಗಳನ್ನು ಉತ್ತೇಜಿಸಿ, ಜಮ್ಮು ಮತ್ತು ಕಾಶ್ಮೀರದ ಹೊರಗೆ ಇಡೀ ದೇಶಕ್ಕೆ ಐಎಸ್‍ಕೆಪಿಯನ್ನು ಹರಡಲು ಅವರು ಬಯಸಿದ್ದ.

    ಜಹಾಂಜೇಬ್ ಪತ್ನಿ ಹೀನಾ ಬಶೀರ್ ಬೇಗ್ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಐಸಿಸ್ ಅನ್ನು ಬೆಂಬಲಿಸುವಲ್ಲಿ ಸಕ್ರಿಯವಾಗಿದ್ದಳು. ಭಯೋತ್ಪಾದಕ ಚಟುವಟಿಕೆಗಳಿಗೆ ಸೂಕ್ತ ಜನರನ್ನು ಗುರುತಿಸುವಲ್ಲಿ ಅವಳು ಭಾಗಿಯಾಗಿದ್ದಳು. ಪ್ರಾಥಮಿಕ ವಿಚಾರಣೆಯಲ್ಲಿ ಜಹಾಂಜೇಬ್, ಐಸಿಸ್ ನಿಯತಕಾಲಿಕೆಯ ಸ್ವಾತ್ ಅಲ್-ಹಿಂದ್‍ನ ಫೆಬ್ರವರಿ ಆವೃತ್ತಿಯನ್ನು ಪ್ರಕಟಿಸುವಲ್ಲಿ ತೊಡಗಿಸಿಕೊಂಡಿದ್ದ ಎಂದು ಹೇಳಿದ್ದಾನೆ. ಸಿಎಎಯನ್ನು ವಿರೋಧಿಸುವ ಜನರಿಗೆ ಜಿಹಾದಿ ಮಾರ್ಗವನ್ನು ತೆಗೆದುಕೊಳ್ಳುವಂತೆ ಆ ನಿಯತಕಾಲಿಕೆ ಮನವಿ ಮಾಡಿತ್ತು. ಫೆಬ್ರವರಿ 24ರಂದು ಪತ್ರಿಕೆ ಆನ್‍ಲೈನ್‍ನಲ್ಲಿ ಬಿಡುಗಡೆಯಾಗಿತ್ತು. ಪ್ರಜಾಪ್ರಭುತ್ವವು ನಿಮ್ಮನ್ನು ಜನರನ್ನು ಉಳಿಸುವುದಿಲ್ಲ ಎಂದು ಅದು ಬರೆದಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.