Tag: Jamiat Ulema-e-Hind

  • ಮಾನ್ಯತೆ ಪಡೆಯದ ಮದರಸಾಗಳ ಸಮೀಕ್ಷೆ – ಯುಪಿ ಸರ್ಕಾರದ ನಿರ್ಧಾರ ಸ್ವಾಗತಿಸಿದ ಮುಸ್ಲಿಂ ಮಂಡಳಿ

    ಮಾನ್ಯತೆ ಪಡೆಯದ ಮದರಸಾಗಳ ಸಮೀಕ್ಷೆ – ಯುಪಿ ಸರ್ಕಾರದ ನಿರ್ಧಾರ ಸ್ವಾಗತಿಸಿದ ಮುಸ್ಲಿಂ ಮಂಡಳಿ

    ಲಕ್ನೋ: ಉತ್ತರ ಪ್ರದೇಶದಲ್ಲಿ ಮಾನ್ಯತೆ ಪಡೆಯದಿರುವ ಮದರಸಾಗಳ ಮೇಲೆ ಸಮೀಕ್ಷೆ ನಡೆಸುವ ನಿರ್ಧಾರವನ್ನು ಯೋಗಿ ಆದಿತ್ಯನಾಥ್ ಅವರ ಸರ್ಕಾರ ತೆಗೆದುಕೊಂಡಿದೆ. ಈ ನಡೆಯನ್ನು ಇಸ್ಲಾಮಿಕ್ ಪ್ರಮುಖ ಸಂಸ್ಥೆ ಜಮಿಯತ್ ಉಲೇಮಾ-ಎ-ಹಿಂದ್ ಬೆಂಬಲಿಸಲು ನಿರ್ಧರಿಸಿದೆ.

    ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಲೇಮಾ-ಎ-ಹಿಂದ್ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಮೊಹಮ್ಮದ್ ಅಸದ್ ಮದನಿ ಅವರು, ಇಂದು ಮದರಸಾಗಳನ್ನು ಉತ್ತಮ ರೀತಿಯಲ್ಲಿ ನೋಡಲಾಗುತ್ತಿಲ್ಲ. ನಮ್ಮನ್ನು ಅರ್ಥಮಾಡಿಕೊಳ್ಳುವಂತೆ ನಾನು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ನಾವು ಯಾವಾಗಲೂ ನಮ್ಮ ಕರ್ತವ್ಯವನ್ನು ಅನುಸರಿಸುತ್ತೇವೆ. ನಾವು ಈ ಬಗ್ಗೆ ಮಾತನಾಡಲು ಸದಾ ಸಿದ್ಧರಿದ್ದೇವೆ, ಆದರೆ ಬಲವಂತದಿಂದಲ್ಲ. ನಮಗೆ ಸಮಯ ನೀಡಿ, ನಾವು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡುತ್ತೇವೆ ಎಂದು ತಿಳಿಸಿದರು.

    yogi adithyanath

    ಅಸ್ಸಾಂನಲ್ಲಿ ಮದರಸಾಗಳ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಅಸ್ಸಾಂನಲ್ಲಿ ಏನಾಗುತ್ತಿದೆ ಎಂಬುದನ್ನು ನೀವು ನೋಡಿದ್ದೀರಿ. ಆ ವಿಧಾನ ಕಾನೂನುಬಾಹಿರವಾಗಿದೆ. ನಮಗೆ ಸ್ವಲ್ಪ ಸಮಯ ನೀಡಿದರೆ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿಯನ್ನು ಕಳುಹಿಸುತ್ತೇವೆ ಎಂದರು.

    ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದ್ದರೂ ಅದನ್ನು ತಪ್ಪು ರೀತಿಯಲ್ಲಿ ಮಾಡಬಾರದು. ಏನನ್ನಾದರೂ ಸುಧಾರಿಸಲು ಯಾವಾಗಲೂ ಅವಕಾಶವಿದೆ. ಆದರೆ ಅದನ್ನು ಚಿತ್ರಿಸುವ ರೀತಿ ತಪ್ಪು ಎಂದು ಮೌಲಾನಾ ಹೇಳಿದರು. ಇದನ್ನೂ ಓದಿ: ಹಿಂಬದಿ ಸವಾರರಿಗೂ ಸೀಟ್‌ಬೆಲ್ಟ್ ಕಡ್ಡಾಯ, ತಪ್ಪಿದರೆ ದಂಡ

    ಉತ್ತರ ಪ್ರದೇಶದ ಸರ್ಕಾರ ಮಾನ್ಯತೆ ಪಡೆಯದೇ ಇರುವ ಮದರಸಾಗಳಲ್ಲಿ ವಿದ್ಯಾರ್ಥಿಗಳು ಶಿಕ್ಷಕರು, ಪಠ್ಯಕ್ರಮ ಹಾಗೂ ಯಾವುದೇ ಸರ್ಕಾರೇತರ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿದೆಯೇ ಎಂಬುದನ್ನು ತಿಳಿದುಕೊಳ್ಳಲು ಸೆಪ್ಟೆಂಬರ್ 1 ರಂದು ಸಮೀಕ್ಷೆ ನಡೆಸುವುದಾಗಿ ಘೋಷಿಸಿದೆ. ಇದನ್ನೂ ಓದಿ: ಮಳೆ; ನಾಳೆ ಬೆಂಗಳೂರು ಪೂರ್ವ ಭಾಗದ ಶಾಲೆಗಳಿಗೆ ರಜೆ

    Live Tv
    [brid partner=56869869 player=32851 video=960834 autoplay=true]

  • ಜಹಾಂಗೀರ್‌ಪುರಿ ಹಿಂಸಾಚಾರ – ಆರೋಪಿಗಳನ್ನು ಮುಗ್ದರೆಂದ ಜಮಿಯತ್ ನಿಯೋಗ

    ನವದೆಹಲಿ: ಜಹಾಂಗೀರ್‌ಪುರಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಬಂಧನದ ಹಿನ್ನೆಲೆ ಕಳವಳ ವ್ಯಕ್ತಪಡಿಸಿರುವ ಜಮಿಯತ್ ಉಲೇಮಾ-ಎ-ಹಿಂದ್ ನಿಯೋಗ ಭಾನುವಾರ ಪ್ರಮುಖ ಆರೋಪಿಗಳನ್ನು ಮುಗ್ದರೆಂದು ಕರೆದಿದೆ.

    ಭಾನುವಾರ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ನಿಯೋಗ, ಕಲ್ಲು ತೂರಾಟಗಾರರು ಎಂಬ ಪದವನ್ನು ಬಳಸಿಕೊಂಡು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಜವಾಬ್ದಾರಿಯುತ ಪಾತ್ರ ವಹಿಸಬೇಕು. ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ತಿಳಿಸಿದೆ. ಇದನ್ನೂ ಓದಿ: ನಾನು ಬಾಬರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದೆ, ಶಿವಸೇನೆ ನಾಯಕರು ಯಾರೂ ಇರಲಿಲ್ಲ : ಫಡ್ನವೀಸ್

    ಜಮಿಯತ್ ನಿಯೋಗ ಜಹಾಂಗೀರ್‌ಪುರಿಯಲ್ಲಿ ನಿರ್ಗತಿಕರಿಗೆ 500 ಈದ್ ಕಿಟ್‌ಗಳನ್ನು ವಿತರಿಸಿದ್ದು, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿ ಕೊಡುವುದಾಗಿ ಪ್ರತಿಜ್ಞೆ ಮಾಡಿದೆ. ಕಳೆದ ತಿಂಗಳು ಜಹಾಂಗೀರ್‌ಪುರಿಯಲ್ಲಿ ನಡೆದ ಹನುಮಾನ್ ಜಯಂತಿ ಶೋಭಾಯಾತ್ರೆ ಸಂದರ್ಭ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದ್ದು, 8 ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರಿಗೆ ಗಾಯಗಳಾಗಿದ್ದವು. ಇದನ್ನೂ ಓದಿ: ಖಲೀಸ್ತಾನ ಬೇಡಿಕೆ ಸಾಂವಿಧಾನಿಕ ಹಕ್ಕು ಎಂದ ಆಪ್ ನಾಯಕ ಹರ್‌ಪ್ರೀತ್‌ಸಿಂಗ್

     

  • ಅಯೋಧ್ಯೆ ತೀರ್ಪು- 217 ಪುಟಗಳ ಮೇಲ್ಮನವಿ ಸಲ್ಲಿಕೆ

    ಅಯೋಧ್ಯೆ ತೀರ್ಪು- 217 ಪುಟಗಳ ಮೇಲ್ಮನವಿ ಸಲ್ಲಿಕೆ

    ನವದೆಹಲಿ: ಅಯೋಧ್ಯೆ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿ ಜಮಿಯತ್- ಉಲಮಾ-ಎ ಹಿಂದ್ 217 ಪುಟಗಳ ಮೇಲ್ಮನವಿ ಸಲ್ಲಿಸಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಮಿಯತ್-ಉಲಮಾ-ಎ ಹಿಂದ್ ಪರ ವಕೀಲರೊಬ್ಬರು, ಅಯೋಧ್ಯೆ ಪ್ರಕರಣದ ಬಗ್ಗೆ ಸೂಕ್ಷ್ಮವಾಗಿ ಯೋಚನೆ ಮಾಡಿದ್ದೇವೆ ಹಾಗೂ ಅರ್ಥ ಮಾಡಿಕೊಂಡಿದ್ದೇವೆ. ದೇಶದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ. ಸುಪ್ರೀಂಕೋರ್ಟ್ ನೀಡಿದ ತೀರ್ಪಿನಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ರಾಮನಿಗೆ `ಪುರಾತತ್ವ’ ಆಧಾರ – 5 ಶತಮಾನಗಳ ವಿವಾದಕ್ಕೆ ಷರಾ ಬರೆದ ಸುಪ್ರೀಂ

    ಸುಪ್ರೀಂಕೋರ್ಟ್ ಬಾಬ್ರಿ ಮಸೀದಿಯ ನಾಶಕ್ಕೆ ಅವಕಾಶ ನೀಡಿದೆ. ಮುಸ್ಲಿಮರಿಗೆ 5 ಎಕರೆ ಜಾಗವನ್ನು ನೀಡುವ ನಿಟ್ಟಿನಲ್ಲಿ ಸಂವಿಧಾನದ 142 ವಿಧಿಯನ್ನು ತಪ್ಪಾಗಿ ಬಳಸಲಾಗಿದೆ. ಹೀಗೆ ಅನೇಕ ವಿಚಾರವಾಗಿ ಒಟ್ಟು 217 ಪುಟಗಳ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಅಶೋಕ್ ಸಿಂಘಾಲ್‍ಗೆ ‘ಭಾರತ ರತ್ನ’ ನೀಡಿ: ಸುಬ್ರಮಣಿಯನ್ ಸ್ವಾಮಿ

    ಇದೇ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸುನ್ನಿ ವಕ್ಫ್ ಬೋರ್ಡ್ ವಕೀಲರಾದ ಜಫ್ರಯಾಬ್ ಗಿಲಾನಿ, ಸುಪ್ರೀಂಕೋರ್ಟ್ ಮುಂದೆ ಇಂದೇ ಮೇಲ್ಮನವಿ ಸಲ್ಲಿಸುವುದಿಲ್ಲ. ಆದರೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದು, ಡಿಸೆಂಬರ್ 9ರೊಳಗಾಗಿ ಅರ್ಜಿ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಶಿಯಾ ಮತ್ತು ನಿರ್ಮೋಹಿ ಅಖಾಡ ಸಲ್ಲಿಸಿದ್ದ ಅರ್ಜಿ ವಜಾ – ಸುಪ್ರೀಂ ಆದೇಶದಲ್ಲಿ ಏನಿದೆ?