Tag: jammu kashmir

  • ಉಗ್ರರನ್ನ ಚೆಂಡಾಡಿದ ಸೇನೆ- ಮನೆಯಿಂದ ಹೊರಬರದೇ ಸತ್ತೇ ಹೋದ ಹಿಜ್ಬುಲ್ ಕಮಾಂಡರ್

    ಉಗ್ರರನ್ನ ಚೆಂಡಾಡಿದ ಸೇನೆ- ಮನೆಯಿಂದ ಹೊರಬರದೇ ಸತ್ತೇ ಹೋದ ಹಿಜ್ಬುಲ್ ಕಮಾಂಡರ್

    – ತಾಯಿಯನ್ನ ಭೇಟಿಯಾಗಲು ಬಂದು ಸೇನೆಯ ಬೇಟೆಗೆ ಬಲಿ
    – ಭಾರತೀಯ ಸೇನೆಗೆ ಹೆದರಿ ಮನೆಯಲ್ಲಿ ಅಡಗಿ ಕುಳಿತಿದ್ದ ಉಗ್ರರು
    – ನಾಯ್ಕು ತಲೆಗೆ 12 ಲಕ್ಷ ರೂ. ಬೆಲೆ ಕಟ್ಟಿದ್ದ ಸೇನೆ

    ಶ್ರೀನಗರ: ಕಾಶ್ಮೀರದ ಭಯೋತ್ಪಾದನೆ ಸಂಘಟನೆಯ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ರಿಯಾಜ್ ನಾಯ್ಕುನನ್ನು ಭಾರತೀಯ ಭದ್ರತಾ ಪಡೆ ಬುಧವಾರ ಹತ್ಯೆಗೈದಿದೆ.

    ಪುಲ್ವಾಮಾದ ಬೈಗ್‍ಪೂರಾ ಗ್ರಾಮದ ಸಮೀಪದಲ್ಲಿ ನಡೆದ ದಾಳಿಯಲ್ಲಿ ಭಾರತೀಯ ಭದ್ರತಾ ಪಡೆ ಉಗ್ರ ರಿಯಾಜ್‍ನನ್ನು ಕೊಂದು ಹಾಕಿದೆ. ಬೈಗ್‍ಪೂರಾದಲ್ಲಿ ರಿಯಾಜ್ ನಾಯ್ಕು ಮತ್ತು ಅವನ ಕೆಲವು ಸಹಚರರು ಇರುವ ಬಗ್ಗೆ ಭದ್ರತಾ ಪಡೆಗೆ ಮಾಹಿತಿ ಲಭ್ಯವಾಗಿತ್ತು. ಆದರೆ ನಾಯ್ಕು ತಲೆಮರೆಸಿಕೊಂಡಿದ್ದಾನೆ ಎಂದು ಹೇಳುತ್ತಿದ್ದಂತೆ ಮಂಗಳವಾರ ಉಗ್ರರಿದ್ದ ಮನೆಗೆ ಭದ್ರತಾ ಪಡೆ ಮುತ್ತಿಗೆ ಹಾಕಿತ್ತು. ಆರಂಭದಲ್ಲಿ ಸೇನೆಯ ಮೇಲೆ ಉಗ್ರರು ಯಾವುದೇ ಗುಂಡಿನ ದಾಳಿ ನಡೆಸಲಿಲ್ಲ. ಜೊತೆಗೆ ಮನೆಗೆ ಹಾಕಿದ್ದ ಮುತ್ತಿಗೆಯನ್ನು ತೆಗೆದು ಹಾಕದೇ ದಿನವಿಡೀ ಕಾರ್ಯಾಚರಣೆ ಮುಂದುವರಿಸಿತ್ತು.

    ಬಹಳ ಸಮಯ ಕಳೆದರೂ ಉಗ್ರರು ಮನೆಯಿಂದ ಆಚೆಗೆ ಬರಲೇ ಇಲ್ಲ. ಉಗ್ರರು ಬುಧವಾರ ಬೆಳಗ್ಗೆ ಗುಂಡು ಹಾರಿಸಲಾರಂಭಿಸಿದ್ದರು. ನಾಯ್ಕುನನ್ನು ಮೊದಲು ಮನೆಯ ಛಾವಣಿಯ ಮೇಲೆ ನಿರ್ಮಿಸಲಾದ ಅಡಗುತಾಣದಲ್ಲಿ ಮರೆಮಾಡಲಾಗಿತ್ತು. ನಂತರ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ಆರಂಭಿಸಿದರು. ಹೀಗಾಗಿ ಭದ್ರತಾ ಪಡೆಯು 40 ಕೆಜಿ ಸುಧಾರಿತ ಸ್ಫೋಟಕ ಸಾಮಗ್ರಿ ಬಳಿಸಿ ಸ್ಫೋಟಿಸಿತು. ಇದರಲ್ಲಿ ರಿಯಾಜ್ ಮತ್ತು ಆತನ ಸಹಚರ ಆದಿಲ್ ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ.

    ಉಗ್ರ ರಿಯಾಜ್‍ನ ಹತ್ಯೆ ಭದ್ರತಾ ಪಡೆಗೆ ದೊಡ್ಡ ಯಶಸ್ಸು ತಂದುಕೊಟ್ಟಿದೆ. ಇದು ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧದ ಅಭಿಯಾನದ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ. ರಿಯಾಜ್ ನಾಯ್ಕು ಕಾಶ್ಮೀರದಲ್ಲಿ ಅತ್ಯಂತ ಸಕ್ರಿಯ ಭಯೋತ್ಪಾದಕನಾಗಿದ್ದ. ಅವನು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಪರ ಕೆಲಸ ಮಾಡುತ್ತಿದ್ದ. ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಎ++ ವಿಭಾಗದಲ್ಲಿ ಅವನ ಹೆಸರಿತ್ತು. ಅಷ್ಟೇ ಅಲ್ಲದೆ ಅವನನ್ನು ಹತ್ಯೆಗೈದವರಿಗೆ ಇಲ್ಲವೆ ಅವನ ಬಗ್ಗೆ ಸುಳಿವು ನೀಡಿದವರಿಗೆ 12 ಲಕ್ಷ ರೂಪಾಯಿ ಬಹುಮಾನ ಕೂಡ ಭದ್ರತಾ ಪಡೆ ಘೋಷಿಸಿತ್ತು. ಕ್ರೂರಿ ರಿಯಾಜ್ ಅನೇಕ ಪೊಲೀಸರನ್ನು ಅಪಹರಿಸಿ ಕೊಲೆ ಮಾಡಿದ್ದ.

    ಕಾಶ್ಮೀರದ ಪುಲ್ವಾಮಾ ನಿವಾಸಿ 35 ವರ್ಷದ ನಾಯ್ಕು ಗಣಿತ ಶಿಕ್ಷಕನಾಗಿದ್ದ. ನಂತರ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಘಟನೆಯ ಕಮಾಂಡರ್ ಆಗಿ ಸಕ್ರಿಯನಾಗಿದ್ದ. 2016ರಲ್ಲಿ ಬುರ್ಹಾನ್ ವಾನಿ ಸಂಘಟನೆ ಸೇರಿದ ನಂತರ ಹಿಜ್ಬುಲ್‍ನ ಕಮಾಂಡರ್ ಆಗಿದ್ದ. ಭಯೋತ್ಪಾದನೆಯನ್ನು ಹರಡಲು ಸಾಮಾಜಿಕ ಜಾಲತಾಣವನ್ನು ವ್ಯಾಪಕವಾಗಿ ಬಳಸಿಕೊಂಡ. ಹೀಗಾಗಿ ಭದ್ರತಾ ಪಡೆಯ ಹಿಟ್‍ಲಿಸ್ಟ್ ನಲ್ಲಿ ಟಾಪ್‍ನಲ್ಲಿದ್ದ.

    ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ನೋಡಲು ನಾಯ್ಕು ತನ್ನ ಗ್ರಾಮಕ್ಕೆ ಬಂದಿದ್ದ. ಈ ವೇಳೆ ತಾನು ಆಯ್ಕೆ ಮಾಡಿದ ಆಪ್ತರನ್ನು ಹೊರತುಪಡಿಸಿ ಯಾರನ್ನೂ ನಂಬಲಿಲ್ಲ ಎಂದು ಹೇಳಲಾಗುತ್ತಿದೆ. ಒಂದು ವೇಳೆ ತಾನು ಎಲ್ಲರನ್ನೂ ಪರಿಗಣನೆ ತೆಗೆದುಕೊಂಡು ತಾಯಿಯ ಭೇಟಿಗೆ ಬಂದಿದ್ದರೆ ಬಹುಶಃ ಆತ ಪರಾರಿಯಾಗುವ ಸಾಧ್ಯತೆಯಿತ್ತು. ಗ್ರಾಮಕ್ಕೆ ಬಂದಿದ್ದ ನಾಯ್ಕು ಅಲ್ಲಿನ ಸ್ಥಳೀಯ ಜನರಿಗೆ ಭೀತಿ ಮೂಡಿಸಿದ್ದ. ಇದೇ ಆತನಿಗೆ ಮಾರಕವಾಯಿತು ಎಂದು ವರದಿಯಾಗಿದೆ.

    ಕಾಶ್ಮೀರದಲ್ಲಿ 35 ಭಯೋತ್ಪಾದಕ ಸಂಘಟನೆಗಳು ಸಕ್ರಿಯವಾಗಿವೆ. ಈ ವರ್ಷ 10ಕ್ಕೂ ಹೆಚ್ಚು ಜನರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸೇರಿದ್ದಾರೆ ಎಂದು ವರದಿಯಾಗಿದೆ.

    ನಾಯ್ಕು 2018-19ರ ನಡುವೆ ಎನ್‍ಕೌಂಟರ್ ವೇಳೆ ನಾಯ್ಕು ಅನೇಕ ಬಾರಿ ತಪ್ಪಿಸಿಕೊಂಡಿದ್ದ. ಈ ವೇಳೆ ತಪ್ಪಿಸಿಕೊಳ್ಳಲು ಅವಕಾಶ ನೀಡದೇ ಭಾರತೀಯ ಸೇನೆಯು ಉಗ್ರನನ್ನು ಎನ್‍ಕೌಂಟರ್ ಮಾಡಿ ಬಿಸಾಕಿದೆ.

  • ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಇಬ್ಬರು ಉಗ್ರರು ಮಟಾಶ್

    ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಇಬ್ಬರು ಉಗ್ರರು ಮಟಾಶ್

    ಶ್ರೀನಗರ: ದಕ್ಷಿಣ ಕಾಶ್ಮೀರ ಜಿಲ್ಲೆಯ ಶೋಪಿಯಾನ್‍ನಲ್ಲಿ ಇಂದು ಮುಂಜಾನೆ ಭಾರತೀಯ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಸೇನೆಯ ಗುಂಡೇಟಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ.

    ಶೋಪಿಯಾನ್‍ನಲ್ಲಿ ಉಗ್ರರು ಅಡಗಿ ಕೂತಿರುವ ಬಗ್ಗೆ ಭಾರತೀಯ ಸೇನೆಗೆ ಮಾಹಿತಿ ಲಭ್ಯವಾಗಿತ್ತು. ಇದನ್ನು ಆಧರಿಸಿ ಜಮ್ಮು-ಕಾಶ್ಮೀರ ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್‌ನ ವಿಶೇಷ ಕಾರ್ಯಾಚರಣೆ ತಂಡ(ಎಸ್‍ಒಜಿ) ಶೋಪಿಯಾನ್‍ನ ಪ್ರದೇಶದಲ್ಲಿ ಜಂಟಿ ಶೋಧಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಸದೆಬಡೆದಿದ್ದಾರೆ.

    ಭದ್ರತಾ ಪಡೆಗಳನ್ನು ಕಂಡ ತಕ್ಷಣ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡಿನ ದಾಳಿ ಆರಂಭಿಸಿದರು. ಇದಕ್ಕೆ ಭದ್ರತಾ ಪಡೆಗಳು ಕೂಡ ಪ್ರತ್ಯುತ್ತರ ನೀಡಿದ್ದು, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

    ಘಟನಾ ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳು ಧಾವಿಸಿದ್ದು, ಈ ಪ್ರದೇಶದ ಅಕ್ಕಪಕ್ಕದ ಗ್ರಾಮಗಳನ್ನು ಸುತ್ತುವರೆದು ಜಂಟಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಳೆದ 21 ದಿನಗಳ ಲಾಕ್‍ಡೌನ್ ಅವಧಿಯಲ್ಲಿ ಉಗ್ರರು ಸಾಕಷ್ಟು ಬಾರಿ ಸೇನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಗಳಲ್ಲಿ ಹಲವು ಉಗ್ರರನ್ನು ಸೇನೆ ಸದೆಬಡೆದಿದೆ.

    ಅಲ್ಲದೇ ಕೆಲ ದಿನಗಳ ಹಿಂದೆ ಸೊಪೋರ್‍ನಲ್ಲಿ ನಡೆದ ಗುಂಡಿನ ಕಾಳಗದಲ್ಲಿ 23 ವರ್ಷದ ಜೈಷ್-ಇ-ಮೊಹ್ಮದ್ ಉಗ್ರ ಸಂಘಟನೆಯ ಕಮಾಂಡರ್ ಸೇನೆಯ ಗುಂಡೇಟಿಗೆ ಹತನಾಗಿದ್ದಾನೆ. ಈತ 2018ರಿಂದ ಭಯೋತ್ಪಾದನೆಯಲ್ಲಿ ಸಕ್ರಿಯನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

  • ವಿಶ್ವಕ್ಕೆ ಕೊರೊನಾ ಚಿಂತೆ – ಪಾಕ್ ಪ್ರೇಮಿ ಚೀನಾಗೆ ಜಮ್ಮುಕಾಶ್ಮೀರ ಚಿಂತೆ

    ವಿಶ್ವಕ್ಕೆ ಕೊರೊನಾ ಚಿಂತೆ – ಪಾಕ್ ಪ್ರೇಮಿ ಚೀನಾಗೆ ಜಮ್ಮುಕಾಶ್ಮೀರ ಚಿಂತೆ

    ನವದೆಹಲಿ: ಕೊರೊನಾ ವೈರಸ್ ಹರಡಿಸಿ ವಿಶ್ವದ ಕೆಂಗಣ್ಣಿಗೆ ಗುರಿಯಾಗಿರುವ ಪಾಕ್ ಸ್ನೇಹಿತ ಚೀನಾ ಈಗ ಜಮ್ಮು ಕಾಶ್ಮೀರ ವಿಚಾರವನ್ನು ಮತ್ತೆ ಕೆದಕಿದೆ. ಚೀನಾದ ಈ ಬುದ್ಧಿಗೆ ಭಾರತ, ಜಮ್ಮು ಕಾಶ್ಮೀರ ನಮ್ಮ ಆಂತರಿಕ ವಿಚಾರ. ಈ ಬಗ್ಗೆ ಯಾರೂ ಮಾತನಾಡುವ ಅಗತ್ಯವಿಲ್ಲ ಎಂದು ಹೇಳಿ ತಿರುಗೇಟು ನೀಡಿದೆ.

    ವಿಶ್ವಸಂಸ್ಥೆಯ ಚೀನಾದ ಶಾಶ್ವತ ಪ್ರತಿನಿಧಿತ್ವ ಮಿಶನ್ ವಕ್ತಾರರು, ಜಮ್ಮು ಕಾಶ್ಮೀರ ವಿಶ್ವಸಂಸ್ಥೆಯ ಭದ್ರತಾ ಕಾರ್ಯಸೂಚಿಯಲ್ಲಿ ಉಳಿದಿದೆ. ಕಾಶ್ಮೀರ ವಿಚಾರವನ್ನು ಚೀನಾ ಸೂಕ್ಷ್ಮವಾಗಿ ಗಮನಿಸುತ್ತದೆ. ಈ ವಿಚಾರವನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು ಎಂದು ಹೇಳಿದ್ದರು.

    ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ ಇಲಾಖೆಯ ವಕ್ತಾರ ಶ್ರೀವತ್ಸವ, ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಮುಂದೆಯೂ ಇದು ಭಾರತ ದೇಶದ ಭಾಗವಾಗಿಯೇ ಮುಂದುವರಿಯುತ್ತದೆ. ಜಮ್ಮು ಕಾಶ್ಮೀರ ಭಾರತದ ಆಂತರಿಕ ವಿಚಾರ ಎಂದು ಹೇಳಿ ತಿರುಗೇಟು ನೀಡಿದ್ದಾರೆ.

    ಲಡಾಖ್ ಪ್ರದೇಶದ ಹಲವು ಭಾಗ ತನಗೆ ಸೇರಿದ್ದು ಎಂದು ಚೀನಾ ವಾದಿಸುತ್ತಿದೆ. ಈ ಮಧ್ಯೆ ಕಳೆದ ವರ್ಷ ಕೇಂದ್ರಾಡಳಿತ ಪ್ರದೇಶವನ್ನಾಗಿ ಲಡಾಖ್ ಘೋಷಣೆ ಮಾಡಿದ್ದು ಚೀನಾದ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕಾರಣಕ್ಕಾಗಿ ಆಗಾಗ ಜಮ್ಮು ಕಾಶ್ಮೀರ ವಿಚಾರವನ್ನು ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪ ಮಾಡುತ್ತಿದೆ.

    ಕಳೆದ ಆಗಸ್ಟ್ ತಿಂಗಳಿನಲ್ಲಿ ಚೀನಾ ವಿಶ್ವಸಂಸ್ಥೆಯ ಭದ್ರತಾ ಸಭೆಯಲ್ಲಿ ಕಾಶ್ಮೀರ ವಿಚಾರವನ್ನು ಪ್ರಸ್ತಾಪ ಮಾಡಲು ಇನ್ನಿಲ್ಲದ ಪ್ರಯತ್ನ ನಡೆಸಿತ್ತು. ಆದರೆ ಭಾರತ ಭದ್ರತಾ ಸಮಿತಿಯ ಉಳಿದ ರಾಷ್ಟ್ರಗಳ ಜೊತೆ ಉತ್ತಮ ಸಂಪರ್ಕ ಹೊಂದಿದ್ದ ಕಾರಣ ಚೀನಾದ ಪ್ರಯತ್ನ ಸಫಲವಾಗಲಿಲ್ಲ.

  • ಅನಾರೋಗ್ಯದಿಂದ ಬಳಲುತ್ತಿರೋ ತಂದೆ ನೋಡಲು ಸೈಕಲಿನಲ್ಲೇ 2,100 ಕಿ.ಮೀ ದೂರ ಪಯಣ

    ಅನಾರೋಗ್ಯದಿಂದ ಬಳಲುತ್ತಿರೋ ತಂದೆ ನೋಡಲು ಸೈಕಲಿನಲ್ಲೇ 2,100 ಕಿ.ಮೀ ದೂರ ಪಯಣ

    – ತಂದೆಯನ್ನ ನಾನು ಕೊನೆಯ ಕ್ಷಣದಲ್ಲಿ ನೋಡಲೇಬೇಕು

    ಮುಂಬೈ: ವಾಚ್‍ಮೆನ್ ಒಬ್ಬ ಅನಾರೋಗ್ಯದಿಂದ ಬಳಲುತ್ತಿರುವ ತನ್ನ ತಂದೆಯನ್ನು ನೋಡಲು ಜಮ್ಮು ಮತ್ತು ಕಾಶ್ಮೀರದ ರಾಜೌರಿವರೆಗೂ ಸುಮಾರು 2,100 ಕಿ.ಮೀ. ದೂರ ಸೈಕಲ್ ಮೂಲಕವೇ ಪ್ರಯಾಣ ಬೆಳೆಸಿದ್ದಾರೆ.

    ಮೊಹಮ್ಮದ್ ಆರಿಫ್ ತಂದೆಗಾಗಿ ಸೈಕಲ್ ಸವಾರಿ ಮಾಡುತ್ತಿರುವ ಮಗ. ಇವರ ಮುಂಬೈನಲ್ಲಿ ವಾಚ್‍ಮೆನ್ ಆಗಿ ಕೆಲಸ ಮಾಡುತ್ತಿದ್ದಾರೆ. ಮಂಗಳವಾರ ಆರಿಫ್‍ಗೆ ಮನೆಯಿಂದ ಫೋನ್ ಬಂದಿದ್ದು, ತಂದೆ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ ಮತ್ತು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ತಕ್ಷಣ ತಂದೆಯನ್ನು ನೋಡಲು ಹೊರಟ್ಟಿದ್ದಾರೆ. ಆದರೆ ಕೊರೊನಾದಿಂದ ಯಾವುದೇ ರೈಲು ಅಥವಾ ಬಸ್ ಇರಲಿಲ್ಲ. ಕೊನೆಗೆ ಆರಿಫ್ ತನ್ನ ಜೊತೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿಗೆ 500 ರೂ. ಕೊಟ್ಟು ಸೈಕಲ್ ಖರೀದಿಸಿದ್ದಾರೆ.

    ನನ್ನ ತಂದೆಯನ್ನು ನಾನು ನೋಡಬೇಕಾಗಿದೆ. ಆದ್ದರಿಂದ ನಾನು ಮನೆಗೆ ಸೈಕ್ಲಿಂಗ್ ಮಾಡಿಕೊಂಡೆ ಹೋಗಬೇಕು. ಗುರುವಾರ ಬೆಳಗ್ಗೆ 10 ಗಂಟೆಗೆ ಮುಂಬೈನಿಂದ ಹೊರಟೆ. ಮಾರ್ಗದಲ್ಲಿ ನನಗೆ ಪೊಲೀಸರು ಸಿಕ್ಕಿದರು. ಅವರಿಗೆ ನನ್ನ ಪರಿಸ್ಥಿತಿಯ ಬಗ್ಗೆ ಹೇಳಿದೆ. ಅವರು ಯಾವುದೇ ಸಹಾಯವನ್ನು ಮಾಡಲಿಲ್ಲ. ಆದರೆ ಪೊಲೀಸರು ನನ್ನ ಪ್ರಯಾಣವನ್ನು ಮುಂದುವರಿಸಲು ಅವಕಾಶ ನೀಡಿದ್ದಾರೆ ಎಂದು ಆರಿಫ್ ತಿಳಿಸಿದರು.

    ರಾಜೌರಿಯನ್ನು ತಲುಪಲು ಎಷ್ಟು ದಿನಗಳು ಬೇಕೋ ಗೊತ್ತಿಲ್ಲ. ಆದರೆ ನಮ್ಮ ತಂದೆಯನ್ನ ನಾನು ಕೊನೆಯ ಕ್ಷಣದಲ್ಲಿ ನೋಡಬೇಕು. ಅವರನ್ನು ನೋಡಿಕೊಳ್ಳಲು ಯಾರೂ ಇಲ್ಲ. ನನಗೆ ಸಹೋದರ ಅಥವಾ ಸಹೋದರಿ ಇಲ್ಲ. ನಾನು ಹೋಗಲೇಬೇಕಾಗಿದೆ. ನಾನು ಮುಂಬೈನಿಂದ 800 ರೂ. ಮತ್ತು ಸ್ವಲ್ಪ ನೀರಿನೊಂದಿಗೆ ಹೊರಟೆ. ಈಗ ನನ್ನ ಬಳಿ 600 ರೂ. ಮತ್ತು ಎರಡು ಬಾಟಲಿ ನೀರು ಉಳಿದಿದೆ. ನನ್ನ ಫೋನ್ ಸಹ ಸ್ವಿಚ್ ಆಫ್ ಆಗಿದೆ ಎಂದರು.

    ಅಂಗಡಿಯೊಂದರಲ್ಲಿ ನನ್ನ ಫೋನ್ ಚಾರ್ಜ್ ಮಾಡಿ ಮನೆಗೆ ಫೋನ್ ಮಾಡಿದ್ದೆ. ತಂದೆಯ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ಹೇಳಿದರು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಯಾರೂ ಇಲ್ಲ ಎಂದು ನೋವಿನಿಂದ ಹೇಳಿಕೊಂಡರು.

    ಆರಿಫ್ ರಾತ್ರಿ ರಸ್ತೆಯಲ್ಲಿ ಮಲಗುತ್ತಾರೆ. ಬೆಳಗ್ಗೆ ಎದ್ದು ತಮ್ಮ ಪಯಣವನ್ನು ಮುಂದುರಿಸುತ್ತಾರೆ. ಲಾಕ್‍ಡೌನ್ ಇದ್ದರೂ ದಿನಸಿ ಅಂಗಡಿಗಳು ತೆರೆದಿರುತ್ತವೆ. ಹೀಗಾಗಿ ಅಲ್ಲಿ ಬಿಸ್ಕೆಟ್ ಮತ್ತು ಮಾತ್ರ ಸಿಗುತ್ತದೆ. ಆದ್ದರಿಂದ ಅವುಗಳನ್ನು ಮಾತ್ರ ಖರೀದಿಸುತ್ತಿದ್ದಾರೆ. ಸದ್ಯಕ್ಕೆ ಆರಿಫ್ ಮಹಾರಾಷ್ಟ್ರ-ಗುಜರಾತ್ ಗಡಿಯ ಗ್ರಾಮವೊಂದರಲ್ಲಿದ್ದಾರೆ. ಆರಿಫ್ ಮೂಲತಃ ನಾವರ್ ಭ್ರಾಮ್ನಾ ಗ್ರಾಮದ ನಿವಾಸಿಯಾಗಿದ್ದು, ಕೆಲಸ ಹುಡುಕಿಕೊಂಡು ಮುಂಬೈಗೆ ಬಂದಿದ್ದರು. ಪತ್ನಿ ಮತ್ತು ಮಕ್ಕಳು ಅವರ ತಂದೆಯನ್ನು ನೋಡಿಕೊಳ್ಳುತ್ತಿದ್ದಾರೆ.

    ಆರಿಫ್ ಬಗ್ಗೆ ತಿಳಿದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಹಾಯ ಮಾಡಲು ಮುಂದಾಗಿದ್ದಾರೆ. ಸದ್ಯಕ್ಕೆ ಆರಿಫ್ ಯಾವ ಸ್ಥಳದಲ್ಲಿ ಪ್ರಯಾಣಿಸುತ್ತಿದ್ದಾನೆ ಎಂದು ಹುಡುಕಲಾಗುತ್ತಿದೆ. ಆತ ಲಖನ್‍ಪುರಕ್ಕೆ ಬಂದರೆ ಅಲ್ಲಿಂದ 4 ಗಂಟೆಗಳಲ್ಲಿ ರಾಜೌರಿಗೆ ಬಿಡಬಹುದು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಇಬ್ಬರು ಉಗ್ರರ ಹತ್ಯೆ, 17 ವರ್ಷ ಸೇನೆಯಲ್ಲಿ ಸೇವೆ – ಊರಿಗೆ ಬಂದ ಯೋಧನಿಗೆ ಅದ್ಧೂರಿ ಸ್ವಾಗತ

    ಇಬ್ಬರು ಉಗ್ರರ ಹತ್ಯೆ, 17 ವರ್ಷ ಸೇನೆಯಲ್ಲಿ ಸೇವೆ – ಊರಿಗೆ ಬಂದ ಯೋಧನಿಗೆ ಅದ್ಧೂರಿ ಸ್ವಾಗತ

    ಧಾರವಾಡ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಮರಳಿದ ಯೋಧನಿಗೆ ಗ್ರಾಮಸ್ಥರು ಅದ್ಧೂರಿ ಸ್ವಾಗತ ಕೋರಿದ್ದಾರೆ.

    ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಇಂದು ಹಬ್ಬದ ವಾತಾವರಣವೇ ಸೃಷ್ಟಿಯಾಗಿತ್ತು. ಗ್ರಾಮದಲ್ಲಿನ ಈರವ್ವ ಹಾಗೂ ನಾರಾಯಣ ಗಡಾದ ದಂಪತಿಯ ಪುತ್ರ ಬಸವರಾಜ ಗಡಾದ ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿ ವಾಪಸ್ಸಾಗಿದ್ದಕ್ಕೆ ಗ್ರಾಮಸ್ಥರು ಅವರನ್ನು ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿದರು.

    ಮದ್ರಾಸ್ ರಿಜೆಮೆಂಟ್ ನಲ್ಲಿ ಹವಾಲ್ದಾರ್ ಆಗಿದ್ದ ಯೋಧ ಬಸವರಾಜ, ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ಪಂಚಗಾಂವ್ ನಲ್ಲಿ ಉಗ್ರರ ಜೊತೆ ಸೆಣಸಾಡಿ, ಇಬ್ಬರು ಉಗ್ರರನ್ನ ಹೊಡೆದಿದ್ದಾರೆ. ಅಲ್ಲದೆ ನೌಶೇರಾ ಜಿಲ್ಲೆಯಲ್ಲಿ ಕೂಡ ಉಗ್ರರ ಮೇಲೆ ದಾಳಿ ಮಾಡಿದ ಕಿರ್ತಿ ಇವರದ್ದು. ಜಮ್ಮು ಕಾಶ್ಮೀರ, ಸಿಯಾಚಿನ್, ಲೇಹ್, ಲಡಾಖ್ ಸೇರಿದಂತೆ ಇತರೆ ಪ್ರದೇಶಗಳಲ್ಲಿ 17 ವರ್ಷ ಸೇವೆ ಸಲ್ಲಿಸಿದ ಬಳಿಕ ಇದೀಗ ತವರಿಗೆ ವಾಪಾಸ್ಸಾಗಿದ್ದಾರೆ.

    ಗ್ರಾಮದ ಅಪ್ನಾದೇಶ ಬಳಗ, ಶಾಲಾ ಮಕ್ಕಳು, ಹೆಬ್ಬಳ್ಳಿ ಗ್ರಾಮದ ಗುರು ಹಿರಿಯರು, ಗಡಾದ ಅವರ ಸ್ನೇಹಿತರ ಬಳಗದಿಂದ ತೆರದ ಜೀಪಿನಲ್ಲಿ ಮೆರವಣಿಗೆ ಮಾಡಲಾಯಿತು. 5 ಶಾಲೆಯ ಮಕ್ಕಳು ಕಾಲೇಜಿನ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ನಂತರ ಗ್ರಾಮ ಪಂಚಾಯತ್ ವತಿಯಿಂದ ಯೋಧನನ್ನು ಸನ್ಮಾನಿಸಿ ಗೌರವಿಸಲಾಯಿತು. ಯೋಧನ ಮೆರವಣಿಯುದ್ದಕ್ಕೂ ಭಾರತ ಮಾತಾಕೀ ಜೈ, ಒಂದೇ ಮಾತರಂ ಎನ್ನುವ ದೇಶಭಕ್ತಿಯ ಜಯ ಘೋಷಗಳು ಕೇಳಿಬಂದವು.

  • ಹುಟ್ಟೂರಿನಲ್ಲಿ ಸಕಲ-ಸರ್ಕಾರಿ ಗೌರವಗಳೊಂದಿಗೆ ಇಂದು ಯೋಧನ ಅಂತ್ಯಕ್ರಿಯೆ

    ಹುಟ್ಟೂರಿನಲ್ಲಿ ಸಕಲ-ಸರ್ಕಾರಿ ಗೌರವಗಳೊಂದಿಗೆ ಇಂದು ಯೋಧನ ಅಂತ್ಯಕ್ರಿಯೆ

    ಬೆಂಗಳೂರು: ಕೋಲಾರ ಮೂಲದ ಯೋಧರೊಬ್ಬರು ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ಜೊತೆ ಕಾಳಗದಲ್ಲಿ ಹುತಾತ್ಮರಾಗಿದ್ದಾರೆ.

    ಬಂಗಾರ ಪೇಟೆ ಗ್ರಾಮದ 26 ವರ್ಷದ ವೀರ ಯೋಧ ಪ್ರಶಾಂತ್ ಹುತಾತ್ಮ ಯೋಧರಾಗಿದ್ದು, ಸೆವೆಂಟೀನ್ ಮದ್ರಾಸ್ ರೆಜಿಮೆಂಟ್‍ನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಪ್ರಶಾಂತ್ ಎರಡು ದಿನಗಳ ಹಿಂದೆ ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರೊಂದಿಗಿನ ಕಾಳಗದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ.

    ಶುಕ್ರವಾರ ರಾತ್ರಿ ಸುಮಾರು 11 ಗಂಟೆಗೆ ವಿಮಾನ ನಿಲ್ದಾಣ ತಲುಪಿದ್ದ ಪಾರ್ಥಿವ ಶರೀರವನ್ನು ಪೊಲೀಸರು ಮತ್ತು ಅಧಿಕಾರಿಗಳು ಸ್ವೀಕರಿಸಿದರು. ಈ ವೇಳೆ ವೀರ ಯೋಧನ ಪಾರ್ಥಿವ ಶರೀರಕ್ಕೆ ಪುಷ್ಪಮಾಲೆಯನ್ನಿಟ್ಟು ವಿಮಾನ ನಿಲ್ದಾಣದ ಪೊಲೀಸ್ ಸಿಬ್ಬಂದಿ ನಮಿಸಿದರು. ಅಂಬುಲೆನ್ಸ್ ಮುಂದೆ ವೀರಯೋಧನ ಭಾವಚಿತ್ರದ ಬ್ಯಾನರ್ ಕಟ್ಟಿ ಗೌರವಿಸಿದರು. ಬಳಿಕ ವಿಮಾನ ನಿಲ್ದಾಣದಿಂದ ನೇರವಾಗಿ ಕೋಲಾರದ ಬಂಗಾರಪೇಟೆ ಕಡೆ ಅಂಬುಲೆನ್ಸ್ ಮೂಲಕ ಪೊಲೀಸರು ತೆಗೆದುಕೊಂಡು ಹೋದರು.

    ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಶಾಂತ್ ಪಾರ್ಥಿವ ಶರೀರವನ್ನು ತಡರಾತ್ರಿ ಕೋಲಾರದ ಬಂಗಾರಪೇಟೆಗೆ ಕೊಂಡೊಯ್ಯಲಾಯಿತು. ಬಂಗಾರಪೇಟೆ ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಮುಂಜಾನೆ 5 ಗಂಟೆಯಿಂದಲೇ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಬಳಿಕ ಬೆಳಗ್ಗೆ ಬಂಗಾರಪೇಟೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ನಂತರ ಪ್ರಶಾಂತ್ ಸ್ವಗ್ರಾಮ ಕಣ್ಣಿಂಬೆಲೆ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಲಿದೆ.

  • ಉಗ್ರರ ಗುಂಡಿನ ದಾಳಿಗೆ ಕೋಲಾರದ ಯೋಧ ಹುತಾತ್ಮ

    ಉಗ್ರರ ಗುಂಡಿನ ದಾಳಿಗೆ ಕೋಲಾರದ ಯೋಧ ಹುತಾತ್ಮ

    – ಕೋಲಾರದ ಕಣಿಂಬೆಲೆಯಲ್ಲಿ ಶುಕ್ರವಾರ ಅಂತ್ಯಕ್ರಿಯೆ

    ಕೋಲಾರ: ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ಕಾಳಗದಲ್ಲಿ ಕೋಲಾರ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

    ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಣಿಂಬೆಲೆ ಗ್ರಾಮದ ವೀರ ಯೋಧ ಪ್ರಶಾಂತ್(26) ಹುತಾತ್ಮರಾಗಿದ್ದಾರೆ. ಪ್ರಶಾಂತ್ 17ನೇ ಮದ್ರಾಸ್ ರೆಜಿಮೆಂಟ್‍ನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಎರಡು ದಿನಗಳ ಹಿಂದೆ ಜಮ್ಮು- ಕಾಶ್ಮೀರದಲ್ಲಿ ನಡೆದ ಉಗ್ರರ ಗುಂಡಿನ ಕಾಳಗದಲ್ಲಿ ವೀರ ಮರಣಹೊಂದಿದ್ದಾರೆ.

    ತಂದೆ ನಾರಾಯಣಸ್ವಾಮಿ ಹಾಗೂ ತಂಗಿಯನ್ನು ಕಳೆದುಕೊಂಡಿದ್ದ ಪ್ರಶಾಂತ್ ಅವರು ತಮ್ಮ ತಾಯಿ ಲಕ್ಷ್ಮಮ್ಮ ಜೊತೆಗೆ ವಾಸವಿದ್ದರು. ಪ್ರಶಾಂತ್ ಅವರ ಅಣ್ಣ ಮದುವೆಯಾಗಿ ತಮಿಳುನಾಡಿನ ಹೊಸೂರಿನಲ್ಲಿದ್ದು, ಅವರ ಅಕ್ಕನಿಗೂ ಮದುವೆಯಾಗಿದೆ.

    ಶುಕ್ರವಾರ ಬಂಗಾರಪೇಟೆಯ ಸ್ವಗ್ರಾಮ ಕಣಿಂಬೆಲೆಗೆ ಹುತಾತ್ಮ ಯೋಧನ ಪಾರ್ಥಿವ ಶರೀರ ಆಗಮಿಸಲಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಸಂಸ್ಕಾರ ನಡೆಯಲಿದೆ.

  • ತಿಹಾರ್ ಜೈಲಿನಲ್ಲಿ ಡಿಕೆಶಿ ಹಾಜರಾತಿ ಕೂಗ್ತಿದ್ದಾರೆ: ಕಟೀಲ್ ವ್ಯಂಗ್ಯ

    ತಿಹಾರ್ ಜೈಲಿನಲ್ಲಿ ಡಿಕೆಶಿ ಹಾಜರಾತಿ ಕೂಗ್ತಿದ್ದಾರೆ: ಕಟೀಲ್ ವ್ಯಂಗ್ಯ

    ಬೆಂಗಳೂರು: ಒಂದು ಕಾಲದಲ್ಲಿ ತಿಹಾರ್ ಜೈಲಿನಲ್ಲಿ ಕಸಬ್, ಅಫ್ಜಲ್ ಗುರು, ಚೋಟಾ ಶಕೀಲ್ ಎಂದು ಹಾಜರಾತಿ ಕೂಗುತ್ತಿದ್ದರು. ಇಂದು ಅದೇ ಜೈಲಿನಲ್ಲಿ ಚಿದಂಬರಂ, ರಾಜಾ, ಡಿ.ಕೆ ಶಿವಕುಮಾರ್ ಎಂದು ಹಾಜರಾತಿ ಕೂಗುತ್ತಿದ್ದಾರೆ. ಇದು ಕಾಂಗ್ರೆಸ್ಸಿನ ಸ್ಥಿತಿ ಅಂತ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

    ಬಸವನಗುಡಿಯ ಮರಾಠ ಭವನದಲ್ಲಿ ಬೆಂಗಳೂರು ನಗರ ದಕ್ಷಿಣ ಭಾಗದ ಬಿಜೆಪಿ ಜಿಲ್ಲಾಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಕಟೀಲ್ ಡಿಕೆಶಿ ವಿರುದ್ಧ ವ್ಯಂಗ್ಯವಾಗಿ ವಾಗ್ದಾಳಿ ನಡೆಸಿದರು. ಪಾಕ್ ಪರವಾಗಿ ಘೋಷಣೆ ಮಾಡಿದ ಯುವತಿ ಪರವಾಗಿ ಡಿ.ಕೆ ಶಿವಕುಮಾರ್ ಮಾತನಾಡುತ್ತಾರೆ. ಡಿಕೆಶಿ ನೀವು ತಿಹಾರ್ ಜೈಲಿನಲ್ಲಿ ಓದಿದ್ದು ಭಾರತದ ಇತಿಹಾಸವಾ ಅಥವಾ ಪಾಕಿಸ್ತಾನದ ಇತಿಹಾಸವಾ ಎಂದು ಪ್ರಶ್ನಿಸಿ ಕಿಡಿಕಾರಿದರು.

    ಇನ್ನು ಮೂರು ವರ್ಷದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗುತ್ತದೆ. ರಾಮನ ಪಾದದ ಮೇಲಾಣೆ ಮಂದಿರವನ್ನು ಕಟ್ಟೇ ಕಟ್ಟುತ್ತೇವೆ ಎಂದು ಆಣೆ ಮಾಡಿದ್ದ ನಾವು ನಮ್ಮ ಶಪಥ ಈಡೇರಿಸುತ್ತಿದ್ದೇವೆ ಎಂದರು. ಬಳಿಕ ಜಮ್ಮು ಕಾಶ್ಮೀರದ ಬಗ್ಗೆ ಮಾತನಾಡಿ, ಈದ್ಗಾ ಮೈದಾನಗಳಲ್ಲಿ ಭಾರತದ ರಾಷ್ಟ್ರ ಧ್ವಜಾರೋಹಣ ಮಾಡಲು ಬಿಡುತ್ತಿರಲಿಲ್ಲ. ಆದರೆ ಇಂದು ಕಾಶ್ಮೀರದಲ್ಲಿ ಹಾಗೂ ಭಾರತದ ಎಲ್ಲಾ ಕಡೆ ರಾಷ್ಟ್ರಧ್ವಜ ಹಿಡಿಯುವಂತೆ ಮಾಡಿದವರು ಪ್ರಧಾನಿ ನರೇಂದ್ರ ಮೋದಿ ಅಂತ ವಿರೋಧಿಗಳಿಗೆ ಕಟೀಲ್ ಟಾಂಗ್ ಕೊಟ್ಟರು.

  • ಜಮ್ಮು-ಕಾಶ್ಮೀರ ವಿರುದ್ಧ ಭರ್ಜರಿ ಬ್ಯಾಟಿಂಗ್- ಸೆಮಿಯತ್ತ ಕರ್ನಾಟಕ?

    ಜಮ್ಮು-ಕಾಶ್ಮೀರ ವಿರುದ್ಧ ಭರ್ಜರಿ ಬ್ಯಾಟಿಂಗ್- ಸೆಮಿಯತ್ತ ಕರ್ನಾಟಕ?

    ಜಮ್ಮು: ಆರ್.ಸಿದ್ದಾರ್ಥ್, ಮನೀಶ್ ಪಾಂಡೆ ಹಾಗೂ ದೇವದತ್ತ ಪಡಿಕ್ಕಲ್ ಉತ್ತಮ ಬ್ಯಾಟಿಂಗ್‍ನಿಂದ ಕರ್ನಾಟಕ ತಂಡವು ಸೆಮಿ ಫೈನಲ್ ಪ್ರವೇಶದ ಭರವಸೆಯನ್ನು ಮೂಡಿಸಿದೆ.

    ರಣಜಿಯ ಟ್ರೋಫಿ 2019-20ರ ಭಾಗವಾಗಿ ಜಮ್ಮುವಿನ ಗಾಂಧಿ ಮೆಮೊರಿಯಲ್ ಸರ್ಕಾರಿ ಸೈನ್ಸ್ ಕಾಲೇಜಿನ ಮೈದಾನದಲ್ಲಿ ನಡೆಯುತ್ತಿರುವ ಜಮ್ಮು-ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ಉತ್ತಮ ಮುನ್ನಡೆ ಸಾಧಿಸಿದೆ.

    ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಕರ್ನಾಟಕ ತಂಡವು 69.1 ಓವರಿಗೆ 206 ರನ್ ಗಳಿಸಿ ಸರ್ವಪತನ ಕಂಡಿತ್ತು. ಈ ವೇಳೆ ಕರ್ನಾಟಕದ ಕೆ.ವಿ.ಸಿದ್ದಾರ್ಥ್ 76 ರನ್ (189 ಎಸೆತ, 9 ಬೌಂಡರಿ), ಮನೀಶ್ ಪಾಂಡೆ 37 ರನ್ (26 ಎಸೆತ, 7 ಬೌಂಡರಿ) ಗಳಿಸಿದ್ದರು.

    ಬಳಿಕ ಬ್ಯಾಟಿಂಗ್ ಆರಂಭಿಸಿದ ಜಮ್ಮು-ಕಾಶ್ಮೀರ ತಂಡವು ಆರಂಭದಲ್ಲೇ ಆಘಾತಕ್ಕೆ ತುತ್ತಾಗಿತ್ತು. ಪ್ರಮುಖ ಬ್ಯಾಟ್ಸ್‌ಮನ್‌ ಸೂರ್ಯಾಂಶ್ ರೈನಾ 12 ರನ್‍ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು. ಬಳಿಕ ಬಂದ ಬ್ಯಾಟ್ಸ್‌ಮನ್‌ಗಳು ಬಹುಬೇಗ ವಿಕೆಟ್ ಒಪ್ಪಿಸಿ ಪೆವಿಲಿಯನ್ ಕಡೆಗೆ ಪರೇಡ್ ನಡೆಸಿದರು. ಪರಿಣಾಮ ಜಮ್ಮು-ಕಾಶ್ಮೀರ 62.4 ಓವರ್‌ಗಳಲ್ಲಿ 192 ಆಲೌಟ್ ಆಯಿತು. ಈ ಮೂಲಕ ಕರ್ನಾಟಕ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ 14 ರನ್ ಮುನ್ನಡೆ ಸಾಧಿಸಿತ್ತು.

    ಈ ಸಮಯದಲ್ಲಿ ಜಮ್ಮು-ಕಾಶ್ಮೀರದ ಪರ ಶುಭಂ ಖಜುರಿಯಾ 62 ರನ್ (155 ಎಸೆತ, 10 ಬೌಂಡರಿ) ಹಾಗೂ ಅಬ್ದುಲ್ ಸಾಮದ್ 43 ರನ್ (50 ಎಸೆತ, 6 ಬೌಂಡರಿ, 1 ಸಿಕ್ಸ್) ಗಳಿಸಿದ್ದರು. ಕರ್ನಾಟಕದ ಪರ ಪ್ರಸಿದ್ಧ ಕೃಷ್ಣ 4 ವಿಕೆಟ್ ಪಡೆದು ಮಿಂಚಿದರೆ, ರೋನಿತ್ ಮೊರೆ ಹಾಗೂ ಸುಚಿತ್ ಜಿ ತಲಾ ಎರಡು ವಿಕೆಟ್ ಕಿತ್ತಿದ್ದರು. ಉಳಿದಂತೆ ಗೌತಮ್ ಕೆ ಒಂದು ವಿಕೆಟ್ ಪಡೆದರೆ, ಅಭಿಮನ್ಯು ಮಿಥುನ್ ಯಾವುದೇ ವಿಕೆಟ್ ಪಡೆಯದಿದ್ದರೂ ಕನಿಷ್ಠ 25 ರನ್ ನೀಡಿದ್ದರು.

    ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ ಉತ್ತಮ ಆರಂಭ ನೀಡಿತು. ಆರ್.ಸಮರ್ಥ್ ಹಾಗೂ ದೇವದತ್ತ ಪಡಿಕ್ಕಲ್ ಜೋಡಿಯು ಮೊದಲ ವಿಕೆಟ್‍ಗೆ 53 ರನ್‍ಗಳ ಕೊಡುಗೆ ನೀಡಿತು. ದೇವದತ್ತ 34 ರನ್ (33 ಎಸೆತ, 8 ಬೌಂಡರಿ) ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಮೈದಾನಕ್ಕಿಳಿ ನಾಯಕ ಕರುಣ್ ನಾಯರ್ 15 ರನ್ (33 ಎಸೆತ, 2 ಬೌಂಡರಿ) ದಾಖಲಿಸಿ ವಿಕೆಟ್ ಕಳೆದುಕೊಂಡರು. ಈ ಬೆನ್ನಲ್ಲೇ ಮೈದಾಕ್ಕಿಳಿದ ಸಿದ್ದಾರ್ಥ್ ಆರಂಭಿಕ ಬ್ಯಾಟ್ಸ್‌ಮನ್ ಸಮರ್ಥ್ ಜೊತೆ ಸೇರಿ ಉತ್ತಮ ಇನ್ನಿಂಗ್ಸ್ ಕಟ್ಟಿದರು. ಈ ಜೋಡಿಯು ಮೂರನೇ ವಿಕೆಟ್‍ಗೆ 98 ರನ್ ಕೊಡುಗೆ ನೀಡಿತು. ಸಮರ್ಥ್ 74 ರನ್ (133 ಎಸೆತ, 7 ಬೌಂಡರಿ) ಗಳಿಸಿ ವಿಕೆಟ್ ಒಪ್ಪಿಸಿದರು.

    5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಮನೀಶ್ ಪಾಂಡೆ 35 ರನ್ (35 ಎಸೆತ, 5 ಬೌಂಡರಿ, 1 ಸಿಕ್ಸ್) ಗಳಿಸಿ ವಿಕೆಟ್ ಒಪ್ಪಿಸಿದರು. 4ನೇ ದಿನದ ಮುಕ್ತಾಯದ ವೇಳೆಗೆ ಕರ್ನಾಟಕ ತಣಡವು 4 ವಿಕೆಟ್ ನಷ್ಟಕ್ಕೆ 245 ರನ್ ಪೇರಿಸಿದೆ. ಸಿದ್ದಾರ್ಥ್ 75 ರನ್ (136 ಎಸೆತ, 6 ಬೌಂಡರಿ, 2 ಸಿಕ್ಸರ್) ಹಾಗೂ ಎಸ್.ಶರತ್ 9 ರನ್ (33 ಎಸೆತ) ಗಳಿಸಿ ಅಜೇಯರಾಗಿ ಉಳಿದಿದ್ದಾರೆ.

    ಕರ್ನಾಟಕ ಈಗ 259 ರನ್ ಗಳ ಭರ್ಜರಿ ಮುನ್ನಡೆ ಸಾಧಿಸಿದೆ. ಮೊದಲ ಎರಡು ದಿನ ಆಟ ನಡೆಯದ ಕಾರಣ ಮತ್ತೆ ಮೂರು ದಿನ ಪಂದ್ಯ ನಡೆಯದೇ ಇದ್ದಲ್ಲಿ ಲೀಗ್ ಪಂದ್ಯ ಅಂಕದ ಆಧಾರದಲ್ಲಿ ಜಮ್ಮು ಕಾಶ್ಮೀರ ಸೆಮಿಫೈನಲ್ ಸುಲಭವಾಗಿ ಪ್ರವೇಶಿಸುತಿತ್ತು. ಆದರೆ ಈಗ ಕರ್ನಾಟಕ ಮೊದಲ ಇನ್ನಿಂಗ್ಸ್ ನಲ್ಲಿ 14 ರನ್ ಗಳ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಸೆಮಿ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ. ಜಮ್ಮು ಕಾಶ್ಮೀರ ಸೆಮಿ ಪ್ರವೇಶಿಸಬೇಕಾದರೆ ಸೋಮವಾರ ಕರ್ನಾಟಕವನ್ನು ಬೇಗನೇ ಆಲ್ ಔಟ್ ಮಾಡಿ ಚೇಸಿಂಗ್ ಮಾಡಿ ಜಯಗಳಿಸುವ ಅನಿವಾರ್ಯತೆ ಎದುರಾಗಿದೆ.

  • ಹುತಾತ್ಮ ಯೋಧನ ಪಾರ್ಥಿವ ಶರೀರ ಇಂದು ಮಾಗಡಿಗೆ ಆಗಮನ

    ಹುತಾತ್ಮ ಯೋಧನ ಪಾರ್ಥಿವ ಶರೀರ ಇಂದು ಮಾಗಡಿಗೆ ಆಗಮನ

    – ಶುಕ್ರವಾರ ಸಕಲ ಸರ್ಕಾರಿ ಗೌರವದ ಅಂತ್ಯಕ್ರಿಯೆ

    ರಾಮನಗರ: ಜಮ್ಮುವಿನ ಉಧಂಪುರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಸಿಎಲ್‍ಎಸ್‍ಎಫ್‍ನ ಯೋಧ ವೆಂಕಟ ನರಸಿಂಹಮೂರ್ತಿಯ ಪಾರ್ಥಿವ ಶರೀರ ಇಂದು ಹುಟ್ಟೂರು ಮಾಗಡಿಗೆ ಆಗಮಿಸಲಿದೆ.

    ಕಳೆದ 14ರಂದು ಜಮ್ಮುವಿನ ಉಧಂಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧ ವೆಂಕಟ ನರಸಿಂಹಮೂರ್ತಿ ಹುತಾತ್ಮರಾಗಿದ್ದರು. ಇಂದು ಬೆಂಗಳೂರಿಗೆ 4:30ಕ್ಕೆ ಪಾರ್ಥಿವ ಶರೀರ ಆಗಮಿಸಲಿದೆ. ಯೋಧನ ಹುಟ್ಟೂರು ಮಾಗಡಿಯ ಹೊಂಬಾಳಮ್ಮನ ಪೇಟೆಗೆ ಸುಮಾರು 6.30ಕ್ಕೆ ಪಾರ್ಥಿವ ಶರೀರ ಆಗಮಿಸಲಿದೆ ಎನ್ನಲಾಗಿದೆ. ಇದನ್ನೂ ಓದಿ: ಉಗ್ರರ ದಾಳಿಯಲ್ಲಿ ಮಾಗಡಿಯ ಯೋಧ ಹುತಾತ್ಮ

    ವೆಂಕಟ ನರಸಿಂಹಮೂರ್ತಿ ಅವರ ಪಾರ್ಥಿವ ಶರೀರ ರಾತ್ರಿಯ ಒಳಗಾಗಿ ಬಂದಲ್ಲಿ ಇಂದೇ ಅಂತ್ಯಕ್ರಿಯೆ ನೆರವೇರಲಿದೆ. ಒಂದು ವೇಳೆ ಪಾರ್ಥಿವ ಶರೀರ ಸಂಜೆ ಬಳಿಕ ಬಂದಲ್ಲಿ ಶುಕ್ರವಾರ ಬೆಳಗ್ಗೆ 10.30ರ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

    ಹೊಂಬಾಳಮ್ಮನ ಪೇಟೆಯ ಪಾಪಣ್ಣ- ಲಕ್ಷ್ಮಮ್ಮ ದಂಪತಿಯ ಪುತ್ರನಾಗಿದ್ದ ಹುತಾತ್ಮ ಯೋಧ ವೆಂಕಟ ನರಸಿಂಹ ಮೂರ್ತಿ ಕಳೆದ 2013ರಲ್ಲಿ ಸೇನೆ ಸೇರ್ಪಡೆಯಾಗಿ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚಿಗೆ ಮನೆಗೆ ಬಂದಿದ್ದ ಯೋಧನ ಮದುವೆ ವಿಚಾರವಾಗಿ ಪ್ರಸ್ತಾಪ ಕೂಡ ನಡೆದಿತ್ತು. ಪೋಷಕರು ಕನ್ಯೆಯ ಹುಡುಕಾಟದಲ್ಲಿ ನಿರತರಾಗಿದ್ದರು. ಆದರೆ ದುರಾದೃಷ್ಟವಶಾತ್ ಗುಂಡಿನ ದಾಳಿಯಲ್ಲಿ ಯೋಧ ಹುತಾತ್ಮರಾಗಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.