Tag: jammu kashmir

  • ಜಮ್ಮು ಕಾಶ್ಮೀರದ ಉಧಂಪುರದಲ್ಲಿ ಎನ್‌ಕೌಂಟರ್ – ಓರ್ವ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ

    ಜಮ್ಮು ಕಾಶ್ಮೀರದ ಉಧಂಪುರದಲ್ಲಿ ಎನ್‌ಕೌಂಟರ್ – ಓರ್ವ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ

    ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ಉಧಂಪುರ (Udhampur) ಜಿಲ್ಲೆಯ ಬಸಂತಗಢದಲ್ಲಿ (Basantgarh) ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಓರ್ವ ಉಗ್ರನನ್ನು ಹೊಡೆದುರುಳಿಸಿದೆ.

    ‘ಆಪರೇಷನ್ ಬಿಹಾಲಿ’ (Operation Bihali) ಹೆಸರಿನಲ್ಲಿ ಬಸಂತಗಢ ಅರಣ್ಯಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದೆ. ಇದೇ ವೇಳೆ ಉಗ್ರರು ಹಾಗೂ ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರ ಹತ್ಯೆಯಾಗಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮ್ಯಾನೇಜರ್‌ನಿಂದಲೇ ಬ್ಯಾಂಕ್ ದರೋಡೆಗೆ ಸ್ಕೆಚ್ – 10.5 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಮೂವರು ಅರೆಸ್ಟ್

    ಅಮರನಾಥ ಯಾತ್ರೆ ಆರಂಭಗೊಳ್ಳುವ ಒಂದು ವಾರ ಮೊದಲೇ ಈ ಪ್ರದೇಶದಲ್ಲಿ ಉಗ್ರರು ಶಸ್ತ್ರಾಸ್ತ್ರಗಳೊಂದಿಗೆ ಅಡಗಿರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಜಮ್ಮು ವಲಯದ ಪೊಲೀಸ್ ಮಹಾನಿರ್ದೇಶಕ ಭೀಮ್ ಸೇನ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಕ್ಷಣಕ್ಕೆ ಭಾರತ ಸಾಕ್ಷಿ – ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಸೇರಿದ ಮೊದಲ ಭಾರತೀಯ ಶುಕ್ಲಾ

  • ಇರಾನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ – ದೆಹಲಿಗೆ ಬಂದ ನಂತ್ರ ಕಳಪೆ ಬಸ್ಸು ನೀಡಿದ್ದಕ್ಕೆ ಆಕ್ರೋಶ

    ಇರಾನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ – ದೆಹಲಿಗೆ ಬಂದ ನಂತ್ರ ಕಳಪೆ ಬಸ್ಸು ನೀಡಿದ್ದಕ್ಕೆ ಆಕ್ರೋಶ

    ನವದೆಹಲಿ: ಇರಾನ್‌ನಲ್ಲಿ (Iran) ಸಿಲುಕಿದ್ದ ಕಾಶ್ಮೀರದ ವಿದ್ಯಾರ್ಥಿಗಳು (Jammu Kashmir) ದೆಹಲಿಯಲ್ಲಿ ಇಳಿದ ಬೆನ್ನಲ್ಲೇ ಜಮ್ಮು ಕಾಶ್ಮೀರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಇರಾನ್‌ನ ಉರ್ಮಿಯಾ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ 110 ವಿದ್ಯಾರ್ಥಿಗಳು ಆಪರೇಷನ್ ಸಿಂಧು (Operation Sindhu) ಕಾರ್ಯಾಚರಣೆಯ ಮೂಲಕ ಗುರುವಾರ ಬೆಳಿಗ್ಗೆ ದೆಹಲಿಗೆ ಬಂದಿಳಿದರು.

    ದೆಹಲಿಗೆ ಆಗಮಿಸಿದ ವಿದ್ಯಾರ್ಥಿಗಳನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್‌ ಸಿಂಗ್‌ ಆತ್ಮೀಯವಾಗಿ ಬರಮಾಡಿಕೊಂಡರು. ಸಂಘರ್ಷ ಪೀಡಿತ ಇರಾನ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ಕರೆ ತಂದಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿಗಳು ಧನ್ಯವಾದ ಅರ್ಪಿಸಿದರು.

    ಈಗ ಈ ವಿದ್ಯಾರ್ಥಿಗಳು ಕಳಪೆ ಬಸ್ಸುಗಳನ್ನು ನೀಡಿದ್ದಕ್ಕೆ ಜಮ್ಮು ಕಾಶ್ಮೀರ ಸರ್ಕಾರವನ್ನು ದೂರಿದ್ದಾರೆ. ನಾವು ಬಹಳ ದೂರದಿಂದ ಬಂದಿದ್ದೇವೆ. ಆದರೆ ಸರ್ಕಾರ ಡಿಲಕ್ಸ್‌ ಬಸ್ಸು ನೀಡದೇ ಕಳಪೆ ಬಸ್ಸು ನೀಡಿದೆ. ವಿಮಾನ ವ್ಯವಸ್ಥೆಯನ್ನು ಸಹ ಮಾಡಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ

    ನಾಲ್ಕು ದಿನದಿಂದ ಪ್ರಯಾಣ ಮಾಡಿ ಸಾಕಷ್ಟು ಸುಸ್ತಾಗಿದ್ದೇವೆ. ಈಗ ಎಸ್‌ಆರ್‌ಟಿಸಿ ಬಸ್ಸಿನಲ್ಲಿ ಹೋಗಿ ಅಂದರೆ ಹೇಗೆ? ಅಷ್ಟೇ ಅಲ್ಲದೇ ಇಲ್ಲಿ ಜಮ್ಮು ಕಾಶ್ಮೀರ ಸರ್ಕಾರದ ಯಾವೊಬ್ಬ ಅಧಿಕಾರಿಯನ್ನು ಸಹ ನಿಯೋಜನೆ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಇಸ್ರೇಲ್‌ ಜೊತೆಗಿನ ಸಂಘರ್ಷದ ಕಾರಣದಿಂದ ಇರಾನ್‌ ತನ್ನ ವಾಯುನೆಲೆಯನ್ನು ಬಂದ್‌ ಮಾಡಿದೆ. ಹೀಗಾಗಿ ಭಾರತದ ವಿದ್ಯಾರ್ಥಿಗಳು ಇರಾನ್‌ನಿಂದ ಅರ್ಮೇನಿಯಾ ಮತ್ತು ದೋಹಾ ಪ್ರವೇಶಿಸಿ ಇಂಡಿಗೋ ವಿಶೇಷ ವಿಮಾನದ ಮೂಲಕ ದೆಹಲಿಗೆ ಬಂದಿದ್ದಾರೆ. ಇದನ್ನೂ ಓದಿ: ‌ಇರಾನ್‌ನಿಂದ ಖಂಡಾಂತರ ಕ್ಷಿಪಣಿ ದಾಳಿ – ದಕ್ಷಿಣ ಇಸ್ರೇಲ್‌ನ ಅತಿದೊಡ್ಡ ಆಸ್ಪತ್ರೆ ಉಡೀಸ್‌

    ವಿದ್ಯಾರ್ಥಿಗಳ ಆಕ್ರೋಶದ ಬೆನ್ನಲ್ಲೇ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಡಿಲಕ್ಸ್‌ ಬಸ್ಸು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


    ಸಾಮಾಜಿಕ ಜಾಲತಾಣದಲ್ಲಿ ಕಾಶ್ಮೀರ ವಿದ್ಯಾರ್ಥಿಗಳ ವಿರುದ್ಧ ನೆಟ್ಟಿಗರು  ಕಿಡಿಕಾರುತ್ತಿದ್ದಾರೆ. ನಿಮ್ಮನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆ ತಂದಿದ್ದೆ ದೊಡ್ಡ ಸಾಧನೆ. ಭಾರತಕ್ಕೆ ಬಂದ ನಂತರವೂ ನಿಮಗೆ ಡಿಲಕ್ಸ್‌ ಬಸ್ಸು ಬೇಕು, ವಿಮಾನ ವ್ಯವಸ್ಥೆ ಮಾಡಬೇಕು ಎಂದು ಕೇಳುವುದು ಎಷ್ಟು ಸರಿ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ.

  • ಅಮರನಾಥ ಯಾತ್ರಿಕರಿಗಾಗಿ ‘ಆಪರೇಷನ್ ಶಿವ’

    ಅಮರನಾಥ ಯಾತ್ರಿಕರಿಗಾಗಿ ‘ಆಪರೇಷನ್ ಶಿವ’

    ಶ್ರೀನಗರ: ಪಹಲ್ಗಾಮ್ ದಾಳಿ ಬೆನ್ನಲ್ಲೇ ಅಮರನಾಥ ಯಾತ್ರಿಕರಿಗೆ ಬಹುಪದರದ ಗರಿಷ್ಠ ಭದ್ರತೆ ಕಲ್ಪಿಸುವ ಉದ್ದೇಶದಿಂದ ಭಾರತೀಯ ಸೇನೆ, ಸಿಆರ್‌ಪಿಎಫ್ ಹಾಗೂ ಕಾಶ್ಮೀರ ಪೊಲೀಸ್ ಇಲಾಖೆ ಜಂಟಿಯಾಗಿ `ಆಪರೇಷನ್ ಶಿವ’ (Operation Shiva) ಯೋಜನೆಯನ್ನು ಜಾರಿಗೆ ತಂದಿದೆ.

    ‘ಆಪರೇಷನ್ ಶಿವ’ ಅಮರನಾಥ ಯಾತ್ರಿಕರಿಗೆ ಹೆಜ್ಜೆ ಹೆಜ್ಜೆಗೂ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಮಾಡಲು ಅನುಕೂಲ ಮಾಡಿಕೊಡಲಿದೆ. ಇನ್ನೂ ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭಗೊಳ್ಳಲಿದ್ದು ಆಗಸ್ಟ್ 9ಕ್ಕೆ ಮುಗಿಯಲಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 14 ದಿನಗಳು ಯಾತ್ರೆ ಅವಧಿ ತಗ್ಗಲಿದೆ. ಭದ್ರತಾ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕಾಮೆಡ್‌-ಕೆ: ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ‍್ಯಾಂಕ್

    ಸುಧಾರಿತ ಭದ್ರತಾ ತಂತ್ರಜ್ಞಾನ, ಸಿಸಿಟಿವಿ, ಜಾಮರ್‌ಗಳ ಅಳವಡಿಕೆ, ಡ್ರೋನ್ ಕ್ಯಾಮೆರಾ, ಸಶಸ್ತ್ರ ಪಡೆ ಕಣ್ಗಾವಲು ಸೇರಿದಂತೆ ಗರಿಷ್ಠ ಮಟ್ಟದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭದ್ರತೆಯ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂಗೆ ಸಿಐಡಿ ತಂಡ ಭೇಟಿ – ಕಾಲ್ತುಳಿತ ಸ್ಥಳದಲ್ಲಿ ಪರಿಶೀಲನೆ

    ಸುಮಾರು 50,000 ಅರೆಸೆನಾಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ನಿತ್ಯ ಸ್ಫೋಟಕಗಳ ಪತ್ತೆ ಕಾರ್ಯಾಚರಣೆ ನಡೆಸಲಿದ್ದಾರೆ. ನೋಂದಾಯಿತ ಯಾತ್ರಿಕರಿಗೆ ‘ಆರ್‌ಎಫ್‌ಐಡಿ’ ಟ್ಯಾಗ್ ನೀಡಲಾಗಿದ್ದು, ಅಮರನಾಥ ಯಾತ್ರೆಯ ಪ್ರತಿಯೊಂದು ಕ್ಷಣದ ಮೇಲೂ ಇದರ ಮೂಲಕ ನಿಗಾವಹಿಸಬಹುದಾಗಿದೆ. ಇದನ್ನೂ ಓದಿ: ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ

  • ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ 17 ವರ್ಷ ಕಳೆದ IISC ಪ್ರೊಫೆಸರ್ ಮಾಧವಿ ಲತಾ

    ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ 17 ವರ್ಷ ಕಳೆದ IISC ಪ್ರೊಫೆಸರ್ ಮಾಧವಿ ಲತಾ

    ನವದೆಹಲಿ: ಜಮ್ಮು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ‘ಚೆನಾಬ್’ ರೈಲ್ವೆ ಸೇತುವೆಯನ್ನು (Chenab Railway Bridge) ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಚೆನಾಬ್ ಸೇತುವೆ ನಿರ್ಮಾಣ ಕಾರ್ಯದಲ್ಲಿ ಅನೇಕ ತಂತ್ರಜ್ಞರು ಕೊಡುಗೆ ನೀಡಿದ್ದಾರೆ. ಈ ಪೈಕಿ ಐಐಎಸ್‌ಸಿ ಪ್ರೊಫೆಸರ್ (IISC) ಮಾಧವಿ ಲತಾ (Madhavi Latha) ಕೂಡ ಒಬ್ಬರು. ಚೆನಾಬ್ ನಿರ್ಮಾಣ ಕಾರ್ಯದಲ್ಲಿ ಮಾಧವಿ ಲತಾ 17 ವರ್ಷಗಳನ್ನು ಕಳೆದಿದ್ದಾರೆ.

    ಹೌದು, ಚೆನಾಬ್ ಸೇತುವೆ ನಿರ್ಮಾಣ ಕಾರ್ಯದಲ್ಲಿ ಮಾಧವಿ ಲತಾ ಅವರ ಕೊಡಗೆ ಅಪಾರವಾದದ್ದು. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್‌ಸಿ) ಪ್ರಾಧ್ಯಾಪಕರಾಗಿರುವ ಅವರು, ಚೆನಾಬ್ ಸೇತುವೆ ಯೋಜನೆಯಲ್ಲಿ ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ತೊಡಗಿಸಿಕೊಂಡಿದ್ದರು. ಈ ಸೇತುವೆ ರಚನೆಯ ಯೋಜನೆ, ವಿನ್ಯಾಸ ಮತ್ತು ನಿರ್ಮಾಣದಲ್ಲಿ ಭೂಪ್ರದೇಶದಿಂದ ಉಂಟಾಗುವ ಅಡೆತಡೆಗಳ ಮೇಲೆ ಗಮನ ಕೇಂದ್ರೀಕರಿಸಿದ್ದರು.

    ಮಾಧವಿ ಲತಾ ಸಾಧನೆಗಳೇನು?
    ಮಾಧವಿ ಲತಾ 1992ರಲ್ಲಿ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಬಿ.ಟೆಕ್ ಪದವಿ ಗಳಿಸಿದರು. ನಂತರ ತೆಲಂಗಾಣದ ವಾರಂಗಲ್‌ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಭೂತಾಂತ್ರಿಕ ಎಂಜಿನಿಯರಿಂಗ್‌ನಲ್ಲಿ ಎಂ.ಟೆಕ್ ವಿದ್ಯಾರ್ಥಿನಿಯಾಗಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಅಲ್ಲದೇ 2000ನೇ ಇಸವಿಯಲ್ಲಿ ಐಐಟಿ ಮದ್ರಾಸ್‌ನಿಂದ ಜಿಯೋಟೆಕ್ನಿಕಲ್ ಎಂಜಿನಿಯರಿಂಗ್‌ನಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.

    ತಮ್ಮ ಸಾಧನೆಗಾಗಿ ಮಾಧವಿ ಲತಾ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. 2021ರಲ್ಲಿ ಅವರಿಗೆ ಭಾರತೀಯ ಭೂತಾಂತ್ರಿಕ ಸೊಸೈಟಿಯಿಂದ ಅತ್ಯುತ್ತಮ ಮಹಿಳಾ ಭೂತಾಂತ್ರಿಕ ಸಂಶೋಧಕಿ ಪ್ರಶಸ್ತಿಯನ್ನು ನೀಡಲಾಯಿತು. ಬಳಿಕ 2022ರಲ್ಲಿ ಅವರು ಭಾರತದ ಸ್ಟೀಮ್‌ನಲ್ಲಿ ಟಾಪ್ 75 ಮಹಿಳೆಯರಲ್ಲಿ ಒಬ್ಬರಾಗಿ ಗುರುತಿಸಲ್ಪಟ್ಟರು. ಪ್ರಸ್ತುತ ಮಾಧವಿ ಲತಾ ಅವರು ಪ್ರಸ್ತುತ ಐಐಎಸ್‌ಸಿಯಲ್ಲಿ HAG ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    ಚೆನಾಬ್ ಸೇತುವೆ ಕಾರ್ಯದಲ್ಲಿ ಮಾಧವಿ ಲತಾ ಪಾತ್ರ:
    1,315 ಮೀಟರ್ ಉದ್ದದ ಈ ಬ್ರಿಡ್ಜ್ ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲ್ವೆ ಸಂಪರ್ಕದ ಪ್ರಮುಖ ಭಾಗವಾಗಿದೆ. ಅಷ್ಟೇ ಅಲ್ಲದೆ, ಭಾರತೀಯ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಿದೆ.

    ಚೆನಾಬ್ ಸೇತುವೆಯ ಗುತ್ತಿಗೆಪಡೆದ ಆಫ್ಕಾನ್ಸ್ ಸಂಸ್ಥೆಯ ಮನವಿಯ ಮೇರೆಗೆ ಮಾಧವಿ ಲತಾ ನಿರ್ಮಾಣ ಕಾಮಗಾರಿಗೆ ಮಾರ್ಗದರ್ಶನ ಮಾಡಿದ್ದಾರೆ. ಇಳಿಜಾರು ಸ್ಥಿರೀಕರಣ ಮತ್ತು ಸೇತುವೆಯ ಅಡಿಪಾಯದ ಕುರಿತು ಮಾಧವಿ ಲತಾ ಮಾರ್ಗದರ್ಶನ ಮಾಡಿದ್ದಾರೆ. 1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಈ ಸೇತುವೆ ಒಂದು ಶತಮಾನಕ್ಕೂ ಹೆಚ್ಚು ಕಾಲ ಅತ್ಯಂತ ಕಠಿಣ ನೈಸರ್ಗಿಕ ಪರಿಸ್ಥಿತಿಗಳನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದೆ.

    ಸೇತುವೆಯ ಅಡಿಭಾಗದಲ್ಲಿ ಬರುವ ಬಂಡೆಗಳ ನಡುವೆ ಹೆಚ್ಚಿನ ಅಂತರವಿದ್ದು, ಇಳಿಜಾರುಗಳು ತುಂಬಾ ಕಡಿದಾಗಿರುವುದರಿಂದ ಸ್ಥಿರತೆಯ ಬಗ್ಗೆ ಕಳವಳಗಳಿದ್ದವು. ಹೀಗಾಗಿ ಇಳಿಜಾರುಗಳಲ್ಲಿ ಕಮಾನು ಆಧಾರಸ್ತಂಭಗಳು ಮತ್ತು ಕಂಬಗಳಿಗೆ ಅಡಿಪಾಯಗಳ ನಿರ್ಮಾಣವು ಪ್ರಾಥಮಿಕ ಸವಾಲುಗಳಲ್ಲಿ ಒಂದಾಗಿತ್ತು. ಗಂಟೆಗೆ 220 ಕಿ.ಮೀ. ವೇಗದಲ್ಲಿ ಬೀಸುವ ಗಾಳಿಯನ್ನು ತಡೆದುಕೊಳ್ಳಲು ಸೇತುವೆಯ ಅಡಿಪಾಯವನ್ನು ದೊಡ್ಡದಾಗಿ ಮತ್ತು ಹೆಚ್ಚು ಆಳದಿಂದಲೇ ಮಾಡಲಾಗಿತ್ತು. ಅಲ್ಲದೆ ಈ ಸೇತುವೆ ಇರುವ ಪ್ರದೇಶ ಭೂಕಂಪನ ವಲಯದಲ್ಲಿ ಬರುತ್ತಿದ್ದು, ಎಂಜಿನಿಯರ್‌ಗಳಿಗೆ ಹೆಚ್ಚಿನ ಸವಾಲು ಒಡ್ಡಿತ್ತು. ಈ ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಂಡು ನಾವು ವಿನ್ಯಾಸ ಮಾರ್ಪಾಡುಗಳನ್ನು ಮಾಡಿದ್ದೇವೆ ಎಂದು ಮಾಧವಿ ಲತಾ ತಿಳಿಸಿದ್ದಾರೆ.

  • ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ – ವಂದೇ ಭಾರತ್ ರೈಲಿಗೂ ಚಾಲನೆ

    ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ – ವಂದೇ ಭಾರತ್ ರೈಲಿಗೂ ಚಾಲನೆ

    ಶ್ರೀನಗರ: ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆಯನ್ನು (Chenab Bridge) ಉದ್ಘಾಟಿಸಿದರು.

    ಜೊತೆಗೆ ಅಂಜಿ ನದಿಯ ಮೇಲೆ ನಿರ್ಮಿಸಲಾದ ಭಾರತದ ಮೊಟ್ಟ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆಯನ್ನೂ (Anji bridge) ಉದ್ಘಾಟಿಸಿದರು. ಈ ವೇಳೆ ಜಮ್ಮು-ಕಾಶ್ಮೀರ ಸಿಎಂ ಒಮರ್‌ ಅಬ್ದುಲ್ಲಾ (Omar Abdullah) ಹಾಗೂ ರಾಜ್ಯಪಾಲ ಮನೋಜ್‌ ಸಿನ್ಹಾ ಉಪಸ್ಥಿತರಿದ್ದರು. ಚೆನಾಬ್‌ ಸೇತುವೆಯನ್ನು ಉದ್ಘಾಟಿಸಿದ ಬಳಿಕ ರಾಷ್ಟ್ರಧ್ವಜ ಹಿಡಿದು ಒಂದು ಸುತ್ತು ಪ್ರದಕ್ಷಿಣೆ ಹಾಕಿದರು.

    ಚೆನಾಬ್‌ ಸೇತುವೆ ಬಳಿಕ ಜಮ್ಮು ಮತ್ತು ಕಾಶ್ಮೀರದ ಕತ್ರಾ-ಶ್ರೀನಗರ (Katra To Srinagar) ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿದರು. ಹಾಗೂ ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಸಂವಾದ ಸಹ ನಡೆಸಿದರು. ಇದನ್ನೂ ಓದಿ: ತನ್ನ ಬಾಯ್‌ಫ್ರೆಂಡ್‌ನಿಂದ ಮಗಳ ಮೇಲೆಯೇ ರೇಪ್‌ ಮಾಡಿಸಿದ್ದ ಬಿಜೆಪಿ ನಾಯಕಿ ಅರೆಸ್ಟ್‌

    ವಿವಿಧ ಅಭಿವೃದ್ಧಿ ಕಾಮಗಾರಿ ಯೋಜನೆಗಳಿಗೆ ಚಾಲನೆ ನೀಡುವ ಹಿನ್ನೆಲೆ ಜಮ್ಮು ಕಾಶ್ಮೀರಕ್ಕಿಂದು ಪ್ರಧಾನಿ ಮೋದಿ ಪ್ರವಾಸ ಕೈಗೊಂಡಿದ್ದಾರೆ. ಮಾತಾ ವೈಷ್ಣೋದೇವಿ ದೇವಾಲಯದ ನೆಲೆಯಾದ ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಮೋದಿ ಚಾಲನೆ ನೀಡಲಿದ್ದಾರೆ. ಕತ್ರಾದಲ್ಲಿ 350 ಕೋಟಿ ರೂ.ಗಿಂತಲೂ ಹೆಚ್ಚು ವೆಚ್ಚದ ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಸಂಸ್ಥೆಯ ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಸತತ 3ನೇ ಬಾರಿ ರೆಪೋ ದರ ಇಳಿಕೆ – ಗೃಹ ಸಾಲ, ಇಎಂಐ ಸೌಲಭ್ಯದಾರರಿಗೆ ಗುಡ್‌ನ್ಯೂಸ್‌

    ಚೆನಾಬ್‌ ಸೇತುವೆ ವಿಶೇಷತೆ ಏನು?
    ಜಮ್ಮು ಕಾಶ್ಮೀರದ ಚೇನಾಬ್ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಚೆನಾಬ್‌ ಸೇತುವೆ ಐಫೆಲ್ ಟವರ್‌ಗಿಂತಲೂ ಎತ್ತರವಾಗಿ ನಿರ್ಮಾಣವಾಗಿರುವ, ವಿಶ್ವದಲ್ಲೇ ಅತಿ ಎತ್ತರದ ರೈಲ್ವೆ ಸೇತುವೆ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. 2021ರಲ್ಲಿ ಸೇತುವೆಯ ಕಮಾನು ಕೆಲಸ ಪೂರ್ಣಗೊಂಡಿತ್ತು. ಇದನ್ನೂ ಓದಿ: ಇನ್ಮುಂದೆ ಭಾರತದಲ್ಲೇ ತಯಾರಾಗುತ್ತೆ ರಫೇಲ್ ಬಿಡಿಭಾಗಗಳು – ಟಾಟಾ ಜೊತೆ ಡಸಾಲ್ಟ್ ಒಪ್ಪಂದ

    ಈ ಸೇತುವೆಯನ್ನು ಅಂದಾಜು 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಪ್ಯಾರಿಸ್‌ನ ಐಫೆಲ್ ಟವರ್‌ಗಿಂತಲೂ 35 ಮೀ. ಎತ್ತರದಲ್ಲಿ ನಿರ್ಮಾಣವಾಗಿದೆ. ಚೆನಾಬ್ ಸೇತುವೆ ಚೆನಾಬ್ ನದಿ ಮಟ್ಟದಿಂದ 359 ಮೀ. ಎತ್ತರದಲ್ಲಿ ನಿರ್ಮಾಣವಾಗಿದ್ದು, 1.3 ಕಿ.ಮೀ. ಉದ್ದವಿದೆ. ಇದರ ಉಕ್ಕಿನ ಕಮಾನುಗಳು ಭೂಕಂಪನ, ಬಲವಾದ ಗಾಳಿಯನ್ನೂ ತಡೆಯುವ ಸಾಮರ್ಥ್ಯ ಹೊಂದಿದೆ, ಆ ರೀತಿ ಕಮಾನುಗಳನ್ನು ವಿನ್ಯಾಸಗೊಳಿಸಲಾಗಿದೆ.

    ರೈಲ್ವೇ ಸೇತುವೆ ನಿರ್ಮಾಣಕ್ಕೆ ಕಮಾನು ಸ್ಥಾಪನೆ ಎಂಜಿನಿಯರುಗಳಿಗೆ ದೊಡ್ಡ ಸವಾಲಾಗಿತ್ತು. ರೈಲ್ವೇ ಮಾರ್ಗದ 111 ಕಿ.ಮೀ ನಲ್ಲಿ 97 ಕಿ.ಮೀ ನಷ್ಟು ಸುರಂಗ ಮಾರ್ಗವೇ ಇದೆ. ಇಷ್ಟು ದೂರದ ಸುರಂಗ ಮಾರ್ಗ ದೇಶದ ಬೇರೆ ಯಾವ ಭಾಗಗಳಲ್ಲೂ ಮಾಡಲಾಗಿಲ್ಲ. ಇದನ್ನೂ ಓದಿ: ದೆಹಲಿ ನಿವಾಸದ ಎದುರು ಸಿಂದೂರ ಸಸಿ ನೆಟ್ಟ ಮೋದಿ

    ಸೇತುವೆ ನಿರ್ಮಾಣಕ್ಕೆ 17 ಕಂಬಗಳನ್ನು ನಿರ್ಮಿಸಲಾಗಿದ್ದು, ಒಟ್ಟು 28,660 ಮೆಟ್ರಿಕ್ ಟನ್‌ನಷ್ಟು ಉಕ್ಕನ್ನು ಬಳಸಲಾಗಿದೆ. ಕಮಾನಿನ ತೂಕ 10,619 ಮೆಟ್ರಿಕ್ ಟನ್ ಇದೆ. ಸೇತುವೆಗೆ ಬಳಸಲಾದ ಉಕ್ಕು 10 ಡಿಗ್ರಿ ಸೆಲ್ಸಿಯಸ್‌ನಿಂದ ಮೈನಸ್ 40 ಡಿಗ್ರಿ ಸೆಲ್ಸಿಯಸ್‌ವರೆಗಿನ ತಾಪಮಾನಕ್ಕೆ ಸೂಕ್ತವಾಗಿದೆ. ಕನಿಷ್ಠ 120 ವರ್ಷಗಳ ಜೀವಿತಾವಧಿ ಈ ರಚನೆಗಿದ್ದು, ಗಂಟೆಗೆ 266 ಕಿ.ಮೀ ವೇಗದ ಗಾಳಿಯನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ.

    ಕಾಶ್ಮೀರಕ್ಕೆ ರೈಲು ಮಾರ್ಗವನ್ನು ಹಾಕುವ ಯೋಜನೆಯನ್ನು 1990ರ ದಶಕದಲ್ಲಿ ಆಗಿನ ಪ್ರಧಾನಿ ಪಿ.ವಿ ನರಸಿಂಹರಾವ್ ಅವರು ಪ್ರಕಟಿಸಿದ್ದರು. 2002ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಕರೆದಿದ್ದರು. ಇದನ್ನೂ ಓದಿ: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ | ಇದು ಹೃದಯ ವಿದ್ರಾವಕ ಘಟನೆ – ಮೃತರಿಗೆ ಮೋದಿ ಸಂತಾಪ

  • ಆರ್ಟಿಕಲ್‌-370 ರದ್ದತಿ ಬಳಿಕ ಕಾಶ್ಮೀರ ಸಮೃದ್ಧಿ ಕಂಡಿದೆ – ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್

    ಆರ್ಟಿಕಲ್‌-370 ರದ್ದತಿ ಬಳಿಕ ಕಾಶ್ಮೀರ ಸಮೃದ್ಧಿ ಕಂಡಿದೆ – ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್

    – ಇಂಡೋನೇಷ್ಯಾದಲ್ಲಿ ಪಾಕ್‌ ಮುಖವಾಡ ಬಯಲುಮಾಡಿದ ಭಾರತ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ (Article 370) ರದ್ದತಿಯನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಸಲ್ಮಾನ್‌ ಖುರ್ಷಿದ್‌ (Salman Khurshid) ಸ್ವಾಗತಿಸಿದ್ದಾರೆ.

    ಪಾಕಿಸ್ತಾನ (Pakistan) ಪ್ರಚೋದಿತ ಭಯೋತ್ಪಾದನೆ ಬಗ್ಗೆ ವಾಸ್ತವಾಂಶ ತಿಳಿಸಲು ಭಾರತವು ಜೆಡಿ (U) ಸಂಸದ ಸಂಜಯ್ ಝಾ ನೇತೃತ್ವದ ಸರ್ವಪಕ್ಷ ನಿಯೋಗವನ್ನು ಇಂಡೋನೇಷ್ಯಾಗೆ (Indonesia) ಕಳುಹಿಸಿದೆ. ಇದರ ಭಾಗವಾಗಿರುವ ಖುರ್ಷಿದ್‌ ಮಾತನಾಡುವಾಗ ಆರ್ಟಿಕಲ್‌ 370 ರದ್ದತಿಯನ್ನ ಶ್ಲಾಘಿಸಿದ್ದಾರೆ.

    2019ರ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ಮೋದಿ ಸರ್ಕಾರ ರದ್ದುಗೊಳಿಸಿದ ನಂತರ ಕಾಶ್ಮೀರ ಸಮೃದ್ಧಿಯನ್ನು ಕಂಡಿದೆ ಅಂತ ಹೇಳಿದ್ದಾರೆ. ಅಲ್ಲದೇ 370ನೇ ವಿಧಿ ರದ್ದತಿಯಿಂದ ಜಮ್ಮು ಮತ್ತು ಕಾಶ್ಮೀರ ಭಾರತದ ಉಳಿದ ಭಾಗಗಳಿಂದ ಪ್ರತ್ಯೇಕವಾದ ಪ್ರದೇಶ ಎಂಬ ಗ್ರಹಿಕೆಯನ್ನೂ ಕೊನೆಗೊಳಿಸಿದೆ ಅಂತ ಮೋದಿ ಸರ್ಕಾರದ ಸಾಧನೆಯನ್ನ ಗುಣಗಾನ ಮಾಡಿದ್ದಾರೆ. ಇದನ್ನೂ ಓದಿ: ಭಾರತದ ಬ್ರಹ್ಮೋಸ್‌ ನಮ್ಮ ಪ್ಲ್ಯಾನ್‌ಗಳನ್ನೆಲ್ಲಾ ತಲೆಕೆಳಗೆ ಮಾಡಿತು – ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

    ಕಾಶ್ಮೀರವು ದೀರ್ಘಕಾಲದ ವರೆಗೆ ಒಂದು ಪ್ರಮುಖ ಸಮಸ್ಯೆ ಎದುರಿಸುತ್ತಿತ್ತು. ಸಂವಿಧಾನದ 370ನೇ ವಿಧಿಯಿಂದಾಗಿ ಅದು ದೇಶದ ಉಳಿದ ಭಾಗಗಳಿಂದ ಪ್ರತ್ಯೇಕವಾಗಿದೆ ಎಂಬ ಭಾವನೆ ಸೃಷ್ಟಿಸಿತ್ತು. ಆದ್ರೆ 2019ರಲ್ಲಿ ಈ ವಿಧಿಯನ್ನ ರದ್ದುಪಡಿಸಲಾಯಿತು. ಈ ಮೂಲಕ ಪ್ರತ್ಯೇಕ ಎನ್ನುವ ಗ್ರಹಿಕೆಯನ್ನು ದೂರಮಾಡಲಾಗಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿ; ಭಾರತದ ನಿಲುವು ಸ್ಪಷ್ಟಪಡಿಸಿದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

    370ನೇ ವಿಧಿ ರದ್ದತಿ ಬಳಿಕ ಅಲ್ಲಿ ಚುನಾವಣೆಯೂ ನಡೆಯಿತು. ಈಗ ಜನರಿಂದ ಆಯ್ಕೆಯಾದ ಸರ್ಕಾರ ಇದೆ. ಇದನ್ನು ಸಹಿಸದ ಕಿಡಿಗೇಡಿಗಳು ಸಮೃದ್ಧಿಯನ್ನು ಹಾಳುಮಾಡಲು ಬಯಸುತ್ತಿದ್ದಾರೆ ಅಂತ ಪಾಕ್‌ ವಿರುದ್ಧ ಕಿಡಿ ಕಾರಿದ್ದಾರೆ.  ಇದನ್ನೂ ಓದಿ: ಭಯೋತ್ಪಾದನೆ ತೊಡೆದು ಹಾಕಲು ನಾವು ಸಿದ್ಧ: ಪಾಕ್‌ ವಿರುದ್ಧ ಅಮೆರಿಕದಲ್ಲಿ ಗುಡುಗಿದ ಶಶಿ ತರೂರ್‌

  • ಪಾಕ್‌ ಶೆಲ್‌ ದಾಳಿಗೆ ಒಳಗಾಗಿದ್ದ ಪೂಂಚ್‌ ಗುರುದ್ವಾರಕ್ಕೆ ರಾಹುಲ್‌ ಗಾಂಧಿ ಭೇಟಿ

    ಪಾಕ್‌ ಶೆಲ್‌ ದಾಳಿಗೆ ಒಳಗಾಗಿದ್ದ ಪೂಂಚ್‌ ಗುರುದ್ವಾರಕ್ಕೆ ರಾಹುಲ್‌ ಗಾಂಧಿ ಭೇಟಿ

    ಶ್ರೀನಗರ: ಪಾಕಿಸ್ತಾನದ ಶೆಲ್‌ ದಾಳಿಗೆ ಒಳಗಾಗಿದ್ದ ಪ್ರಮುಖ ಧಾರ್ಮಿಕ ಸ್ಥಳ ಪೂಂಚ್‌ (Poonch) ಜಿಲ್ಲೆಯ ಗುರುದ್ವಾರಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ (Rahul Gandhi) ಶನಿವಾರ ಭೇಟಿ ನೀಡಿದ್ದಾರೆ.

    ಇಂದು ಸಂಜೆ ಜಮ್ಮು & ಕಾಶ್ಮೀರದ ಪೂಂಚ್‌ ಜಿಲ್ಲೆಯ ಗುರುದ್ವಾರ ಶ್ರೀ ಗುರು ಸಿಂಗ್‌ ಸಭಾಗೆ ರಾಹುಲ್‌ ಗಾಂಧಿ ಭೇಟಿಕೊಟ್ಟರು. ಭಾರತದ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು. ಈ ವೇಳೆ ಭಾರತದ ಪ್ರಮುಖ ಧಾರ್ಮಿಕ ಸ್ಥಳವಾದ ಗುರುದ್ವಾರವನ್ನು ಟಾರ್ಗೆಟ್‌ ಮಾಡಿ ಪಾಕಿಸ್ತಾನ ಶೆಲ್‌ ದಾಳಿ ನಡೆಸಿತ್ತು. ಇದನ್ನೂ ಓದಿ: ಟ್ರಂಪ್‌ 25% ಸುಂಕ ಹೇರಿದ್ರೂ ಭಾರತದ ಐಫೋನ್‌ ಚೀಪ್‌ – ಅಮೆರಿಕದ್ದು ದುಬಾರಿ

    ಪೂಂಚ್‌ನಲ್ಲಿ ಪಾಕಿಸ್ತಾನಿ ದಾಳಿಗೆ ಒಳಗಾಗಿದ್ದ ದೇವಾಲಯ, ಗುರುದ್ವಾರ ಮತ್ತು ಮದರಸಾಗಳಿಗೆ ಇಂದು ಭೇಟಿ ನೀಡಿದ್ದೇನೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಆ ಪ್ರದೇಶಕ್ಕೆ ಭೇಟಿ ನೀಡಿದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

    ಶನಿವಾರ ಬೆಳಗ್ಗೆ ಜಮ್ಮು ವಿಮಾನ ನಿಲ್ದಾಣಕ್ಕೆ ಬಂದು ಹೆಲಿಕಾಪ್ಟರ್‌ನಲ್ಲಿ ಪೂಂಚ್‌ಗೆ ತೆರಳಿದರು. ಪಾಕಿಸ್ತಾನಿ ಶೆಲ್ ದಾಳಿಯಿಂದ ತೀವ್ರವಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ದುಃಖತಪ್ತ ಕುಟುಂಬಗಳನ್ನು ಭೇಟಿ ಮಾಡಿದರು. ಮೇ 7 ರಂದು ಪೂಂಚ್ ಪಟ್ಟಣದಲ್ಲಿ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ತಮ್ಮ ಇಬ್ಬರು ಸ್ನೇಹಿತರಾದ ಜೈನ್ ಅಲಿ ಮತ್ತು ಉರ್ವಾ ಫಾತಿಮಾ ಅವರನ್ನು ಕಳೆದುಕೊಂಡ ಶಾಲಾ ವಿದ್ಯಾರ್ಥಿಗಳನ್ನು ಸಹ ಇದೇ ವೇಳೆ ಭೇಟಿಯಾದರು. ಇದನ್ನೂ ಓದಿ: ಮೋದಿ ನೇತೃತ್ವದ ನೀತಿ ಆಯೋಗದ ಸಭೆಗೆ ಸಿದ್ದರಾಮಯ್ಯ ಗೈರು

    ಮೇ 7 ಮತ್ತು 10 ರ ನಡುವೆ ಪಾಕಿಸ್ತಾನದ ಶೆಲ್ ದಾಳಿಯಿಂದ ಅತಿ ಹೆಚ್ಚು ಹಾನಿಗೊಳಗಾದ ಪೂಂಚ್ ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಹದಿಮೂರು ನಾಗರಿಕರು ಸಾವನ್ನಪ್ಪಿದ್ದರು.

    ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ರಾಹುಲ್ ಗಾಂಧಿಯವರು ಕೇಂದ್ರಾಡಳಿತ ಪ್ರದೇಶಕ್ಕೆ ಎರಡನೇ ಬಾರಿಗೆ ಭೇಟಿ ನೀಡಿದ್ದಾರೆ. ಇದಕ್ಕೂ ಮೊದಲು, ಏಪ್ರಿಲ್ 25 ರಂದು ಶ್ರೀನಗರಕ್ಕೆ ಭೇಟಿ ನೀಡಿ ಭಯೋತ್ಪಾದಕ ದಾಳಿಯ ಸಮಯದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದರು.

  • ಜಮ್ಮು & ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ – ಓರ್ವ ಯೋಧ ಹುತಾತ್ಮ

    ಜಮ್ಮು & ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ – ಓರ್ವ ಯೋಧ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu & Kashmir) ಕಿಶ್ತ್ವಾರ್‌ನಲ್ಲಿ ಗುರುವಾರ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಒಬ್ಬ ಸೈನಿಕ ಹುತಾತ್ಮರಾಗಿದ್ದಾರೆ.

    ಕಾರ್ಯಾಚರಣೆಯ ಸಮಯದಲ್ಲಿ ಭೀಕರ ಗುಂಡಿನ ಚಕಮಕಿ ನಡೆಯಿತು. ನಮ್ಮ ಧೈರ್ಯಶಾಲಿಗಳಲ್ಲಿ ಒಬ್ಬರು ಗುಂಡಿನ ಚಕಮಕಿಯಲ್ಲಿ ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ವೈಟ್ ನೈಟ್ ಕಾರ್ಪ್ಸ್ ಪೋಸ್ಟ್ ಮಾಡಿದೆ. ಇದನ್ನೂ ಓದಿ: ಪಾಕ್‌ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

    ಕಣಿವೆಯಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ನಾಲ್ವರು ಭಯೋತ್ಪಾದಕರು ಈ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಮೂರರಿಂದ ನಾಲ್ಕು ಭಯೋತ್ಪಾದಕರ ಗುಂಪಿನ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಪಡೆದ ನಂತರ ಜಂಟಿ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು (CASO) ಪ್ರಾರಂಭಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭಯೋತ್ಪಾದಕರನ್ನು ಎದುರಿಸಲು ಮತ್ತು ಅವರು ತಪ್ಪಿಸಿಕೊಳ್ಳಲು ಸಾಧ್ಯವಾಗದಂತೆ ನೋಡಿಕೊಳ್ಳಲು ಸೇನೆಯನ್ನು ಸಜ್ಜುಗೊಳಿಸಲಾಗಿದೆ. ಜಂಟಿ ಪಡೆಗಳು ಹತ್ತಿರವಾಗುತ್ತಿದ್ದಂತೆ ಅಡಗಿಕೊಂಡಿದ್ದ ಭಯೋತ್ಪಾದಕರು ಗುಂಡು ಹಾರಿಸಿದರು. ಇದು ಪರಸ್ಪರರ ನಡುವೆ ಗುಂಡಿನ ಚಕಮಕಿಗೆ ಕಾರಣವಾಯಿತು. ಮೂರರಿಂದ ನಾಲ್ಕು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ನಾನು ಶಾಂತವಾಗಿದ್ದರೂ ನನ್ನ ರಕ್ತ ನಾಳಗಳಲ್ಲಿ ʻಸಿಂಧೂರʼ ಕುದಿಯುತ್ತಲೇ ಇರುತ್ತೆ – ಪಾಕ್‌ಗೆ ಮೋದಿ ಖಡಕ್‌ ಸಂದೇಶ

    ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು, ಭೂಗತ ಪಾತಕಿಗಳು ಮತ್ತು ಸಹಾನುಭೂತಿ ಹೊಂದಿರುವವರ ವಿರುದ್ಧ ಜಂಟಿ ಪಡೆಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.

  • ಜಮ್ಮು & ಕಾಶ್ಮೀರದಲ್ಲಿ 2 ಎನ್‌ಕೌಂಟರ್‌ – ಭಾರತೀಯ ಸೇನೆ 6 ಉಗ್ರರನ್ನು ಹೊಡೆದುರುಳಿಸಿದ್ದು ಹೇಗೆ?

    ಜಮ್ಮು & ಕಾಶ್ಮೀರದಲ್ಲಿ 2 ಎನ್‌ಕೌಂಟರ್‌ – ಭಾರತೀಯ ಸೇನೆ 6 ಉಗ್ರರನ್ನು ಹೊಡೆದುರುಳಿಸಿದ್ದು ಹೇಗೆ?

    ನವದೆಹಲಿ: ಜಮ್ಮು & ಕಾಶ್ಮೀರದಲ್ಲಿ (Jammu & Kashmir) ನಡೆದ ಎರಡು ಎನ್‌ಕೌಂಟರ್‌ಗಳಲ್ಲಿ 6 ಉಗ್ರರನ್ನು ಭಾರತೀಯ ಸೇನೆ ಯಶಸ್ವಿಯಾಗಿ ಹೊಡೆದುರುಳಿಸಿತು. ಭಯೋತ್ಪಾದಕರನ್ನು ಮಟ್ಟ ಹಾಕಿದ್ದೇ ರಣರೋಚಕ.

    ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ 48 ಗಂಟೆಗಳ ಒಳಗೆ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಆರು ಭಯೋತ್ಪಾದಕರನ್ನು ಭಾರತೀಯ ಸೇನೆ ಯಶಸ್ವಿಯಾಗಿ ಹೊಡೆದುರುಳಿಸಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: IMF ಸಾಲವನ್ನು ಪಾಕ್ ಪರೋಕ್ಷವಾಗಿ ಭಯೋತ್ಪಾದನೆಗೆ ಬಳಸ್ತಿದೆ – ರಾಜನಾಥ್ ಸಿಂಗ್

    ಮಾರ್ಚ್‌ನಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ಸರ್ಪಚ್ ಹತ್ಯೆಯಲ್ಲಿ, ಎನ್‌ಕೌಂಟರ್‌ ಆದ ಭಯೋತ್ಪಾದಕರಲ್ಲಿ ಒಬ್ಬ ಭಾಗಿಯಾಗಿದ್ದ. ಭಯೋತ್ಪಾದಕರು ಎಲ್ಲೇ ಅಡಗಿಕೊಂಡರೂ, ನಾವು ಅವರನ್ನು ಪತ್ತೆಹಚ್ಚಿ ನಾಶಪಡಿಸುತ್ತೇವೆ ಎಂದು ಜಿಒಸಿ ವಿ ಫೋರ್ಸ್‌ನ ಮೇಜರ್ ಜನರಲ್ ಧನಂಜಯ್ ಜೋಶಿ ಹೇಳಿದ್ದಾರೆ.

    ಉಗ್ರರ ಎನ್‌ಕೌಂಟರ್‌ ನಡೆದಿದ್ಹೇಗೆ?‌
    ಆಪರೇಷನ್‌ ಕೆಲ್ಲಾರ್‌
    ಕೆಲ್ಲಾರ್‌ನ ಎತ್ತರದ ಪ್ರದೇಶಗಳಲ್ಲಿ ಭಯೋತ್ಪಾದಕ ಗುಂಪು ಇರುವ ಬಗ್ಗೆ ಮೇ 12 ರಂದು ಸೇನೆಗೆ ಮಾಹಿತಿ ಸಿಕ್ಕಿತ್ತು. ಮರುದಿನ ಬೆಳಗ್ಗೆ, ಕೆಲವು ಚಲನವಲನಗಳನ್ನು ಕಂಡ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದವು. ಆದರೆ, ಉಗ್ರರು ಗುಂಡು ಹಾರಿಸುವ ಮೂಲಕ ಪ್ರತಿಕ್ರಿಯಿಸಿದರು. ಟ್ರಾಲ್‌ನಲ್ಲಿ ಎರಡನೇ ಕಾರ್ಯಾಚರಣೆಯನ್ನು ಗಡಿ ಗ್ರಾಮದಲ್ಲಿ ನಡೆಸಲಾಯಿತು. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಬಳಿಕ ಭಾರತೀಯ ಸೇನೆಗೆ ಬೂಸ್ಟ್‌ – ರಕ್ಷಣಾ ಇಲಾಖೆಗೆ 50,000 ಕೋಟಿ ಹೆಚ್ಚುವರಿ ಬಜೆಟ್

    ನಾವು ಈ ಹಳ್ಳಿಯನ್ನು ಸುತ್ತುವರೆದಾಗ, ಭಯೋತ್ಪಾದಕರು ಬೇರೆ ಬೇರೆ ಮನೆಗಳಲ್ಲಿ ನೆಲೆಸಿ ನಮ್ಮ ಮೇಲೆ ಗುಂಡು ಹಾರಿಸಿದರು. ಈ ಸಮಯದಲ್ಲಿ ನಾಗರಿಕ ಗ್ರಾಮಸ್ಥರನ್ನು ರಕ್ಷಿಸುವುದು ನಮಗೆ ಸವಾಲಾಗಿತ್ತು. ಕೊನೆಗೂ ಭಯೋತ್ಪಾದಕರನ್ನು ಎನ್‌ಕೌಂಟರ್‌ ಮಾಡಿದೆವು. ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬ ಶಾಹಿದ್ ಕುಟ್ಟೆ, ಜರ್ಮನ್ ಪ್ರವಾಸಿಯ ಮೇಲಿನ ದಾಳಿ ಸೇರಿದಂತೆ ಎರಡು ಪ್ರಮುಖ ದಾಳಿಗಳಲ್ಲಿ ಭಾಗಿಯಾಗಿದ್ದ. ಹಣಕಾಸು ಚಟುವಟಿಕೆಗಳಲ್ಲಿಯೂ ಕೈಜೋಡಿಸಿದ್ದ ಎಂದು ಮೇಜರ್ ಜನರಲ್ ಜೋಶ್‌ಜಿ ಹೇಳಿದ್ದಾರೆ.

    ಆಪರೇಷನ್ ಟ್ರಾಲ್‌
    ಕಠಿಣ ಭೂಪ್ರದೇಶದಲ್ಲಿ ನಡೆದ ಟ್ರಾಲ್ ಕಾರ್ಯಾಚರಣೆಯಲ್ಲಿ ಸೇನೆಯು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಅಧಿಕಾರಿಗಳು ಇಂದು ನಡೆದ ಬ್ರೀಫಿಂಗ್‌ನಲ್ಲಿ ತಿಳಿಸಿದ್ದಾರೆ.

    ಪುಲ್ವಾಮಾದಲ್ಲಿ ಒಂದು ಹಳ್ಳಿಯಲ್ಲಿ ಮೂವರು ಭಯೋತ್ಪಾದಕರು ಅಡಗಿಕೊಂಡಿರುವ ಬಗ್ಗೆ ಸೇನೆಗೆ ಮಾಹಿತಿ ಸಿಕ್ಕಿತು. ಸೇನೆಯು ಮೊದಲು ಎಲ್ಲಾ ನಾಗರಿಕರನ್ನು ಸ್ಥಳಾಂತರಿಸಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಟ್ರಾಲ್ ಕಾರ್ಯಾಚರಣೆ ಅರಣ್ಯದ ಎತ್ತರದ ಪ್ರದೇಶದಲ್ಲಿ ನಡೆದರೆ, ಪುಲ್ವಾಮಾ ಕಾರ್ಯಾಚರಣೆ ಗ್ರಾಮದಲ್ಲಿ ತುಲನಾತ್ಮಕವಾಗಿ ಸಮತಟ್ಟಾದ ಭೂಪ್ರದೇಶದಲ್ಲಿ ನಡೆಯಿತು. ಪುಲ್ವಾಮಾ ಗ್ರಾಮದಲ್ಲಿ ಮೂವರು ಭಯೋತ್ಪಾದಕರನ್ನು ಸೇನೆ ಬಗ್ಗುಬಡಿಯಿತು. ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಭಾರತದ ಬ್ರಹ್ಮೋಸ್ ದಾಳಿಯಾಗಿದೆ: ಪಾಕ್ ನಿವೃತ್ತ ಏರ್ ಮಾರ್ಷಲ್ ಮಸೂದ್ ಅಕ್ತರ್

    ಪುಲ್ವಾಮಾದಲ್ಲಿ ಹತ್ಯೆಗೀಡಾದ ಮೂವರು ಭಯೋತ್ಪಾದಕರು ಜೈಶ್-ಎ-ಮೊಹಮ್ಮದ್ (ಜೆಇಎಂ) ಗೆ ಸೇರಿದವರು. ಉಗ್ರರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ.

  • ತ್ರಾಲ್ ಸೇನಾ ಕಾರ್ಯಾಚರಣೆ – ಎನ್‌ಕೌಂಟರ್‌ಗೂ ಮುನ್ನ ಮನೆಗೆ ವಿಡಿಯೋ ಕಾಲ್, ಶರಣಾಗುವಂತೆ ಬೇಡಿಕೊಂಡಿದ್ದ ತಾಯಿ

    ತ್ರಾಲ್ ಸೇನಾ ಕಾರ್ಯಾಚರಣೆ – ಎನ್‌ಕೌಂಟರ್‌ಗೂ ಮುನ್ನ ಮನೆಗೆ ವಿಡಿಯೋ ಕಾಲ್, ಶರಣಾಗುವಂತೆ ಬೇಡಿಕೊಂಡಿದ್ದ ತಾಯಿ

    ಶ್ರೀನಗರ: ಜಮ್ಮು ಕಾಶ್ಮೀರದ (Jammu And Kashmir) ತ್ರಾಲ್ (Tral) ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ. ಈ ಪೈಕಿ ಓರ್ವ ಉಗ್ರ ಸಾಯುವ ಮುನ್ನ ತನ್ನ ಕುಟುಂಬಸ್ಥರಿಗೆ ವಿಡಿಯೋ ಕಾಲ್ ಮಾಡಿದ್ದು, ಆತನ ತಾಯಿ ಶರಣಾಗುವಂತೆ ಬೇಡಿಕೊಂಡಿದ್ದಾರೆ.

    ಪುಲ್ವಾಮಾ ಜಿಲ್ಲೆಯ ಉಪನಗರವಾದ ಅವಂತಿಪೋರಾದ ನಾಡರ್ ಮತ್ತು ತ್ರಾಲ್ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಮೂವರು ಜೈಶ್ ಉಗ್ರರನ್ನು ಹೊಡೆದುರುಳಿಸಿದೆ. ಈ ಎನ್‌ಕೌಂಟರ್ ಮುನ್ನ ಜೈಶ್ ಎ ಮೊಹಮ್ಮದ್ ಉಗ್ರ ಅಮೀರ್ ನಜೀರ್ (Amir Nazir Wani) ತನ್ನ ಕುಟುಂಬಸ್ಥರಿಗೆ ವಿಡಿಯೋ ಕಾಲ್ ಮಾಡಿದ್ದು, ಈ ವೇಳೆ ಆತನ ತಾಯಿ ನೀನು ಶರಣಾಗು, ನಿನ್ನ ಜೀವ ಉಳಿಸಿಕೋ ಎಂದು ಬೇಡಿಕೊಂಡಿದ್ದಾರೆ.ಇದನ್ನೂ ಓದಿ: ಮೋದಿಗೆ ಟಕ್ಕರ್‌ ಕೊಡಲು ಹೋಗಿ ನಗೆಪಾಟಲು – ಧ್ವಂಸಗೊಂಡ ಏರ್‌ಫೀಲ್ಡ್‌ ಮುಚ್ಚಿಕೊಳ್ಳಲು ಮೈದಾನದಲ್ಲಿ ಪಾಕ್‌ ಪ್ರಧಾನಿ ಸಂವಾದ

    ವೈರಲ್ ಆಗಿರುವ ವಿಡಿಯೋದಲ್ಲಿ, ಉಗ್ರ ಅಮೀರ್ ನಜೀರ್ ಎಕೆ-47 ಗನ್ ಹಿಡಿದುಕೊಂಡು ಮನೆಯೊಂದರಲ್ಲಿ ಅಡಗಿ ಕುಳಿತಿದ್ದ. ಈ ವೇಳೆ ಮನೆಗೆ ವಿಡಿಯೋ ಕಾಲ್ ಮಾಡಿದ್ದಾನೆ. ತಾಯಿ ಹಾಗೂ ಸಹೋದರಿ ಜೊತೆ ಮಾತನಾಡಿದ್ದು, ಸಹೋದರನ ಬಗ್ಗೆ ವಿಚಾರಿಸಿದ್ದಾನೆ. ಈ ವೇಳೆ ತಾಯಿ ನೀನು ಶರಣಾಗಿ, ನಿನ್ನ ಜೀವ ಉಳಿಸಿಕೋ ಎಂದು ಬೇಡಿಕೊಂಡಿದ್ದಾರೆ. ಜೊತೆಗೆ ಆತನ ಕುಟುಂಬಸ್ಥರು ಕೂಡ ಮನವಿ ಮಾಡಿಕೊಂಡಿದ್ದಾರೆ. ಆದರೆ ಅಮೀರ್, ಸೇನೆ ಮುಂದೆ ಬರಲಿ ನಾನು ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾನೆ.

    ಕಳೆದ ಮೂರು ದಿನಗಳಲ್ಲಿ ನಡೆದ 2ನೇ ಎನ್‌ಕೌಂಟರ್ ಇದಾಗಿದೆ. ಹತರಾದ ಮೂವರನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಿವಾಸಿಗಳಾದ ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಜೊತೆಗೆ ಮೂವರು ಜೈಶ್ ಎ ಮೊಹಮ್ಮದ್ ಸಂಘಟನೆಗೆ ಸೇರಿದವರು ಎಂದು ಮೂಲಗಳು ತಿಳಿಸಿವೆ.

    ಈ ವಿಡಿಯೋ ಅಲ್ಲದೇ ಉಗ್ರರು ಕಟ್ಟಡದಲ್ಲಿ ಅವಿತಿದ್ದ ಕೊನೆ ಕ್ಷಣದ ವಿಡಿಯೋ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಇದನ್ನೂ ಓದಿ: ಸೋನು ನಿಗಮ್‍ಗೆ ಬಿಗ್ ರಿಲೀಫ್ – ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್