Tag: jammu kashmir

  • ಶೌಚಾಲಯ ನಿರ್ಮಿಸಿಕೊಳ್ಳದ ಸರ್ಕಾರಿ ನೌಕರರ ಸಂಬಳ ತಡೆಗೆ ಆದೇಶ

    ಶೌಚಾಲಯ ನಿರ್ಮಿಸಿಕೊಳ್ಳದ ಸರ್ಕಾರಿ ನೌಕರರ ಸಂಬಳ ತಡೆಗೆ ಆದೇಶ

    ಶ್ರೀನಗರ: ಬಹಿರ್ದೆಸೆಯ ವಿರುದ್ಧ ಸಮರ ಸಾರಿರುವ ಜಮ್ಮು ಕಾಶ್ಮೀರ ಸರ್ಕಾರ ಕಿಶ್ತ್ವಾರ್ ಜಿಲ್ಲೆಯ ಸುಮಾರು 600 ಸರ್ಕಾರಿ ನೌಕರರು ಮನೆಯಲ್ಲಿ ಶೌಚಾಲಯವನ್ನು ಕಟ್ಟಿಸಿಕೊಂಡಿಲ್ಲ ಎಂದು ಎಲ್ಲರ ಸಂಬಳವನ್ನು ತಡೆಹಿಡಿಯಲಾಗಿದೆ.

    ಸಹಾಯಕ ಕಮಿಷನರ್ ಅನಿಲ್ ಕುಮಾರ್ ಚಂದೈಲ್ ಅವರ ವರದಿಯಾನುಸಾರ ಪಡ್ಡರ್ ಬ್ಲಾಕ್ ನ 616 ಸರ್ಕಾರಿ ನೌಕರರ ಮನೆಯಲ್ಲಿ ಶೌಚಾಲಯವಿಲ್ಲ. ವರದಿಯಾನುಸಾರ ಜಿಲ್ಲಾ ಅಭಿವೃದ್ಧಿ ಆಯುಕ್ತರಾದ ಅಂಗ್ರೇಜ್ ಸಿಂಗ್ ರಾಣಾ ಅವರು ಸಂಬಳವನ್ನು ತಡೆಯುವಂತೆ ಆದೇಶವನ್ನು ನೀಡಿದ್ದಾರೆ.

    ಚಂದೈಲ್ ಅವರ ವರದಿ ಬಳಿಕ ಬಹಳ ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದೇನೆ. ಸ್ವಚ್ಚ ಭಾರತ ಯೋಜನೆ ಅಡಿಯಲ್ಲಿ ರಾಜ್ಯದ 71.95% ರಷ್ಟು ಮನೆಗಳಲ್ಲಿ ಶೌಚಾಲಯಗಳಿವೆ ಎಂದು ರಾಣಾ ತಿಳಿಸಿದರು.

     

    ಕಿಶ್ತ್ವಾರ್ ಜಿಲ್ಲೆಯಲ್ಲಿ 57.23%, ಲದಾಖ್ ನ ಲೇಹ್ ಮತ್ತು ಕಾರ್ಗಿಲ್ ಜಿಲ್ಲೆ, ದಕ್ಷಿಣ ಕಾಶ್ಮೀರದ ಶೋಪಿಯನ್ ಮತ್ತು ಶ್ರೀನಗರವನ್ನು ಬಯಲು ಮುಕ್ತ ನಗರಗಳಾಗಿ ಘೋಷಿಸಲಾಗಿದೆ. ಆದರೆ ದಕ್ಷಿಣ ಕಾಶ್ಮೀರದಲ್ಲಿ ಅನಂತ್ ನಾಗ್ ಮತ್ತು ಪುಲ್ವಾಮಾ ಜಿಲ್ಲೆಗಳನ್ನು ಏಪ್ರಿಲ್ ಅಂತ್ಯದ ವೇಳೆಗೆ ಬಯಲು ಮುಕ್ತ ನಗರಗಳಾಗಿ ಘೋಷಿಸುವ ಸಾಧ್ಯತೆಗಳಿವೆ.

    ಶೌಚಾಲಯ ನಿರ್ಮಾಣದಲ್ಲಿ ಪುಲ್ವಾಮಾ 98.64%, ಅನಂತ್ ನಾಗ್ 98.43%, ಕುಪ್ವಾರಾ 91.92%, ರಾಜೌರಿ 84.53% ಮತ್ತು 72.95% ಕುಲ್ಗಮ್, ದೋಡಾ 68.26%, ಬರಾಮುಲ್ಲಾ 67.59%, ಬಂಡಿಪೊರಾ 67.44%, ರಂಬನ್ 66.74%, ಸಾಂಬಾ 64.21%, ಜಮ್ಮು 63.93%, ಬಡ್ಗಮ್ 62.99%, ಗಂಡರ್ಬಲ್ 62.20%, ಪೂಂಚ್ 61.45%, ರಿಯಾಸಿ 56.09%, ಉಧಮ್ಪುರ್ 48.41%, ಕಥುವಾ ಜಿಲ್ಲೆಯಲ್ಲಿ 45.69% ರಷ್ಟು ಗುರಿ ಸಾಧಿಸಲಾಗಿದೆ ಎಂದು ಹೇಳಿದ್ದಾರೆ.

  • ಯುಗಾದಿಯಂದೇ ಪಾಕ್ ನಿಂದ ಗುಂಡಿನ ದಾಳಿ- ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ದುರ್ಮರಣ

    ಯುಗಾದಿಯಂದೇ ಪಾಕ್ ನಿಂದ ಗುಂಡಿನ ದಾಳಿ- ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ದುರ್ಮರಣ

    ಜಮ್ಮು-ಕಾಶ್ಮೀರ: ಯುಗಾದಿಯಂದೇ ಪಾಕಿಸ್ತಾನ ಭಾರತದ ಮೇಲೆ ಗುಂಡಿನ ದಾಳಿ ನಡೆಸಿದ್ದರ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.

    ಪೂಂಛ್ ಜಿಲ್ಲೆಯ ದೇವ್ಟಾ ಧರ್ ಗ್ರಾಮದಲ್ಲಿರುವ ಮನೆಗೆ ಪಾಕ್ ಸೇನೆ ಹಾರಿಸಿದ ಶೆಲ್‍ಗಳು ಅಪ್ಪಳಿಸಿವೆ. ದಾಳಿಯಲ್ಲಿ ಮನೆಯಲ್ಲಿದ್ದ ಚೌಧರಿ ಮೊಹ್ಮದ್ ರಂಜನ್, ಪತ್ನಿ ಮತ್ತು ಮೂವರು ಗಂಡು ಮಕ್ಕಳು ಪ್ರಾಣ ಬಿಟ್ಟಿದ್ದಾರೆ. ಘಟನೆಯಿಂದಾಗಿ ರಂಜನ್ ಅವರ ಇಬ್ಬರು ಹೆಣ್ಣು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಇಂದು ಬೆಳಗ್ಗೆ 7.45ರ ಸುಮಾರಿಗೆ ಪಾಕ್ ಗುಂಡಿನ ದಾಳಿ ನಡೆಸಿದೆ. ಸೇನೆಯ ಬದಲು ನಾಗರಿಕ ಪ್ರದೇಶಗಳನ್ನೇ ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ದಾಳಿ ನಡೆಸ್ತಿದೆ ಅಂತ ಸೇನಾ ವಕ್ತಾರ ದೇವೇಂದರ್ ಆನಂದ್ ತಿಳಿಸಿದ್ದಾರೆ.

    ಕಳೆದ ವಾರ ರಾಜ್ಯಸಭೆಯಲ್ಲಿ ಪ್ರಶ್ನೆಯ ವೇಳೆ ಪಾಕಿಸ್ತಾನ ಜನವರಿಯಿಂದ ಈವರೆಗೆ ಸುಮಾರು 209 ಬಾರಿ ಕದನ ವಿರಾಮ ಉಲ್ಲಂಘಿಸಿ ಭಾರತದ ಮೇಲೆ ದಾಳಿ ನಡೆಸಿದೆ. ಅದರಲ್ಲಿ ಫೆಬ್ರವರಿಯ 12 ದಿನದೊಳಗೆ ಸುಮಾರು 142 ಬಾರಿ ದಾಳಿ ನಡೆಸಿದೆ. ಒಟ್ಟಾರೆ ಕಳೆದ ವರ್ಷದಿಂದ ಈವರೆಗೆ ಸುಮಾರು 860 ಬಾರಿ ಪಾಕ್ ಭಾರತದ ಮೇಲೆ ದಾಳಿ ನಡೆಸಿದೆ ಅಂತ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ತಿಳಿಸಿದ್ದರು.

    ಕಳೆದ ತಿಂಗಳಷ್ಟೇ ಪೂಂಛ್ ಹಾಗೂ ರಾಜೌರಿ ಜಿಲ್ಲೆಯಲ್ಲಿ ಪಾಕ್ ನ ದಾಳಿಗೆ 22 ವರ್ಷದ ಯೋಧ ಸೇರಿ 4 ಮಂದಿ ಹುತಾತ್ಮರಾಗಿದ್ದರು. ಪಾಕ್‍ನ ಪ್ರತಿ ದಾಳಿಗೂ ಭಾರತೀಯ ಸೈನಿಕರು ಪ್ರತಿ ದಾಳಿ ನಡೆಸಿದ್ದಾರೆ ಎಂದು ಸೇನಾ ಮುಖ್ಯಸ್ಥ ಶರತ್ ಚಂದ್ ತಿಳಿಸಿದ್ದಾರೆ.

  • ಉಗ್ರರ ಗುಂಡೇಟಿನಿಂದ ಗಾಯಗೊಂಡ ನಂತರ ಮುದ್ದಾದ ಹೆಣ್ಣುಮಗುವಿಗೆ ಜನ್ಮ ನೀಡಿದ ಯೋಧನ ಪತ್ನಿ

    ಉಗ್ರರ ಗುಂಡೇಟಿನಿಂದ ಗಾಯಗೊಂಡ ನಂತರ ಮುದ್ದಾದ ಹೆಣ್ಣುಮಗುವಿಗೆ ಜನ್ಮ ನೀಡಿದ ಯೋಧನ ಪತ್ನಿ

    ಶ್ರೀನಗರ: ಜಮ್ಮು ಕಾಶ್ಮೀರದ ಸುಂಜುವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದ ಮಹಿಳೆಯೊಬ್ಬರು ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.

    ಶನಿವಾರದಂದು ನಾಲ್ವರು ಜೈಷ್ ಎ ಮಹಮ್ಮದ್ ಸಂಘಟನೆಯ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದರು. ಕೂಡಲೇ ಅಲ್ಲಿದ್ದ ನಿವಾಸಿಗಳನ್ನ ಸ್ಥಳಾಂತರ ಮಾಡಲಾಗಿತ್ತು. ಆದರೂ 11 ಜನ ಗಾಯಗೊಂಡಿದ್ದರು. ಇವರಲ್ಲಿ ಗರ್ಭಿಣಿಯಾಗಿದ್ದ 24 ವರ್ಷದ ಶಹ್‍ಝಾದಾ ಖಾನ್ ಎಂಬವರಿಗೂ ಗುಂಡೇಟು ಬಿದ್ದಿತ್ತು. ಆದ್ರೆ ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಇಲ್ಲಿನ ಸತ್ವಾರಿ ಮಿಲಿಟರಿ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

    ಸದ್ಯ ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದು, ಮಗು 2.5 ಕೆಜಿ ತೂಕವಿದೆ. ಶಹ್‍ಝಾದಾ ಅವರಿಗೆ ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿದೆ. ಇದೇ ಆಸ್ಪತ್ರೆಯಲ್ಲಿ ಸೇನಾಧಿಕಾರಿಯೊಬ್ಬರ ಮಗಳು ಹಾಗೂ ತಲೆಗೆ ಗುಂಡೇಟು ಬಿದ್ದು ಗಾಯಗೊಂಡ 14 ವರ್ಷದ ಬಾಲಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

    ಉಗ್ರರ ದಾಳಿಯಿಂದಾಗಿ ಐವರು ಯೋಧರು ಹುತಾತ್ಮರಾಗಿದ್ದಾರೆ. ಹಾಗೂ ಒಬ್ಬ ನಾಗರೀಕ ಕೂಡ ಮೃತಪಟ್ಟಿದ್ದಾರೆ. ಹುತಾತ್ಮ ಯೋಧರಲ್ಲೊಬ್ಬರಾದ ಸುಬೇದಾರ್ ಮದನ್ ಲಾಲ್ ಚೌಧರ್ ಬರಿಗೈಯಲ್ಲೇ ಯೋಧರನ್ನ ಎದುರಿಸಿದ್ರು. ತುಂಬಾ ಸನಿಹದಿಂದ ಅವರ ಮೇಲೆ ಹಲವು ಬಾರಿ ಗುಂಡಿನ ದಾಳಿ ನಡೆದು ಮೃತಪಟ್ಟರು.

    ಗರ್ಭಿಣಿ ಶಹ್‍ಝಾದಾ ಖಾನ್ ಅವರನ್ನ ಹೆಲಿಕಾಪ್ಟರ್ ಮೂಲಕ ಕ್ಯಾಂಪ್‍ನಿಂದ ಏರ್‍ಲಿಫ್ಟ್ ಮಾಡಿ ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿನ ವೈದ್ಯರು ರಾತ್ರಿಯಿಡೀ ಕಾರ್ಯ ನಿರ್ವಹಿಸಿ ತಾಯಿ-ಮಗುವಿನ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆಯ ಪತಿ ನಾಜಿರ್ ಅಹ್ಮದ್ ಕೂಡ ಗುಂಡೇಟಿನಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಭಾನುವಾರದಂದು ಭದ್ರತಾ ಪಡೆ ನಾಲ್ವರು ಉಗ್ರರನ್ನು ಸದೆಬಡಿದಿದ್ದಾರೆ. ಎಲ್ಲಾ ಉಗ್ರರು ಎಕೆ-56 ಆಯುಧಗಳನ್ನ ಹೊಂದಿದ್ದು, ಅವನ್ನು ದಾಳಿಗಾಗಿ ಬಳಸಿದ್ದರು ಎಂದು ವರದಿಯಾಗಿದೆ.

  • ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ – ಯೋಧ, ಮಗಳಿಗೆ ಗಾಯ

    ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ – ಯೋಧ, ಮಗಳಿಗೆ ಗಾಯ

    ಶ್ರೀನಗರ: ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಹೊಂದಿದ್ದ ಇಬ್ಬರು ಉಗ್ರರು ಜಮ್ಮು ಕಾಶ್ಮೀರದ ಸುಂಜ್ವಾನ ಪ್ರದೇಶದಲ್ಲಿ ಸೇನಾ ಶಿಬಿರದ ಮೇಲೆ ಇಂದು ದಾಳಿ ನಡೆಸಿದ್ದು, ಓರ್ವ ಯೋಧ ಹಾಗೂ ಅವರ ಮಗಳು ಗಾಯಗೊಂಡಿದ್ದಾರೆ.

    ಜಮ್ಮು ಪಠಾಣ್‍ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಶಿಬಿರವಿದ್ದು, ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಉಗ್ರರು ದಾಳಿ ನಡೆಸಿದ್ದಾರೆ. ಶಸ್ತ್ರಾಸ್ತ್ರಧಾರಿ ಉಗ್ರರು ಸೇನಾ ಪ್ರದೇಶದ ಒಳನುಗ್ಗಲು ಗುಂಡಿನ ದಾಳಿ ನಡೆಸಿದ್ದು, ಗ್ರೆನೇಡ್‍ಗಳನ್ನ ಎಸೆದಿದ್ದಾರೆ. ಉಗ್ರರ ಗುಂಡಿನ ದಾಳಿಯಿಂದ ಯೋಧ ಹಾಗೂ ಅವರ ಮಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸದ್ಯಕ್ಕೆ ಗುಂಡಿನ ದಾಳಿ ನಿಂತಿದ್ದು, ಸೇನೆ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆ ಮುಂದುವರೆದಿದೆ. ಈ ಪ್ರದೇಶದ 500 ಮೀಟರ್ ಒಳಗಿರುವ ಶಾಲೆಗಳನ್ನ ತೆರೆಯದಂತೆ ಜಿಲ್ಲಾಡಳಿತ ಸೂಚಿಸಿದೆ.

    ಇಂದು ಬೆಳಗ್ಗೆ 4.55ರ ಸುಮಾರಿಗೆ ಅನುಮಾನಾಸ್ಪದ ಓಡಾಟ ಕಂಡುಬಂತು. ಸೆಂಟ್ರಿ ಬಂಕರ್ ಫೈರ್ ಮಾಡಿದಾಗ ಅವರು ಪ್ರತಿದಾಳಿ ನಡೆಸಿದ್ರು. ಕಟ್ಟಡದೊಳಗೆ ಉಗ್ರರು ಅಡಗಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಜಮ್ಮು ಐಜಿಪಿ ಎಸ್‍ಡಿ ಸಿಂಗ್ ಜಮ್ವಾಲ್ ಹೇಳಿದ್ದಾರೆ. ಉಗ್ರರು ಜೈಷ್- ಎ- ಮಹಮ್ಮದ್ ಉಗ್ರ ಸಂಘಟನೆಯವರು ಎಂದು ಹೇಳಲಾಗಿದೆ. ಸದ್ಯ ಈ ಪ್ರದೇಶವನ್ನ ಪೊಲೀಸರು ಸುತ್ತುವರಿದಿದ್ದು, ಭದ್ರತಾ ಪಡೆ ಉಗ್ರರನ್ನ ಪತ್ತೆ ಮಾಡಲು ಡ್ರೋನ್ ಮತ್ತು ಹೆಲಿಕಾಪ್ಟರ್‍ಗಳನ್ನ ಬಳಸಿದೆ.

    2006ರಲ್ಲಿ ಕೂಡ ಇದೇ ಸೇನಾ ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಆಗ 12 ಯೋಧರು ಹುತಾತ್ಮರಾಗಿ, 7 ಯೋಧರು ಗಾಯಗೊಂಡಿದ್ದರು. ಆತ್ಮಾಹುತಿ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿತ್ತು.

  • ಪಾಕ್ ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದ ನಾಲ್ವರು ಕಾಶ್ಮೀರಿ ಕ್ರಿಕೆಟಿಗರ ಬಂಧನ

    ಪಾಕ್ ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದ ನಾಲ್ವರು ಕಾಶ್ಮೀರಿ ಕ್ರಿಕೆಟಿಗರ ಬಂಧನ

    ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ಮುನ್ನ ಪಾಕಿಸ್ತಾನದ ರಾಷ್ಟ್ರಗೀತೆಗೆ ಗೌರವ ಸೂಚಿಸಿದ ನಾಲ್ವರು ಕಾಶ್ಮೀರಿ ಕ್ರಿಕೆಟಿಗರನ್ನು ಬಂಧಿಸಲಾಗಿದೆ.

    ಆಟಗಾರರು ಇಲ್ಲಿನ ಅರಿನ್ ಗ್ರಾಮದಲ್ಲಿ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಅಲ್ಲದೆ ವಿಡಿಯೋ ಚಿತ್ರೀಕರಣದ ವ್ಯವಸ್ಥೆ ಮಾಡಿದ್ದ ಪಂದ್ಯದ ಆಯೋಜಕರಿಗಾಗಿ ಪೊಲೀಸರು ಹುಡಕುತ್ತಿದ್ದಾರೆ.

     

    2016ರಲ್ಲೂ ಕೂಡ ಗಂದೇರ್‍ಬಲ್ ಜಿಲ್ಲೆಯಲ್ಲಿ ಸ್ಥಳೀಯ ಕ್ರಿಕೆಟಿಗರು ಪಂದ್ಯಕ್ಕೂ ಮುನ್ನ ಸಾಲಾಗಿ ನಿಂತು ಪಾಕಿಸ್ತಾನದ ರಾಷ್ಟ್ರಗೀತೆಗೆ ಸಲ್ಯೂಟ್ ಮಾಡಿ ಗೌರವ ಸೂಚಿಸಿದ್ದರು. ಆಗ ಪೊಲೀಸರು ಕೆಲವು ಯುವಕರನ್ನು ಬಂಧಿಸಿ, ಪೋಷಕರು ಭರವಸೆ ನೀಡಿದ ನಂತರ ಬಿಟ್ಟು ಕಳಿಸಿದ್ದರು.

  • ಕಾಶ್ಮೀರದ CRPF ತರಬೇತಿ ಕೇಂದ್ರದ ಮೇಲೆ ಉಗ್ರರ ದಾಳಿ- ಐವರು ಯೋಧರು ಹುತಾತ್ಮ

    ಕಾಶ್ಮೀರದ CRPF ತರಬೇತಿ ಕೇಂದ್ರದ ಮೇಲೆ ಉಗ್ರರ ದಾಳಿ- ಐವರು ಯೋಧರು ಹುತಾತ್ಮ

    ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಮಾದಲ್ಲಿನ ಸಿಆರ್‍ಪಿಎಫ್ ತರಬೇತಿ ಕೇಂದ್ರದ ಮೇಲೆ ಮಧ್ಯರಾತ್ರಿ ಉಗ್ರರು ದಾಳಿ ನಡೆಸಿದ ಪರಿಣಾಮ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಉಗ್ರರನ್ನು ಯೋಧರು ಸದೆಬಡಿದಿದ್ದಾರೆ

    ಜೈಷ್-ಎ-ಮಹಮ್ಮದ್ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತಿದೆ. 4 ದಿನಗಳ ಹಿಂದೆ ಇದೇ ಜಿಲ್ಲೆಯಲ್ಲಿ ಜೈಷ್ ಉಗ್ರ ನೂರ್ ಮಹಮ್ಮದ್ ತಂತ್ರೇನನ್ನು ಎನ್‍ಕೌಂಟರ್ ಮಾಡಲಾಗಿತ್ತು. ನವೆಂಬರ್‍ನಲ್ಲಿ ಇದೇ ತಂಡದ ಮೂವರು ಉಗ್ರರನನ್ನು ಹತ್ಯೆ ಮಾಡಲಾಗಿತ್ತು. ಅವರಲ್ಲಿ ಜೈಷ್ ಮುಖ್ಯಸ್ಥ ಮಸೂದ್ ಸಝರ್‍ನ ಸಂಬಂಧಿಯೂ ಒಬ್ಬನಾಗಿದ್ದ.

    ಭಾನುವಾರ ಮಧ್ಯರಾತ್ರಿ ಸುಮಾರು 2 ಗಂಟೆ ವೇಳೆಯಲ್ಲಿ ಉಗ್ರರು ಸಿಆರ್‍ಪಿಎಫ್ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ. ತರಬೇತಿ ಕೇಂದ್ರದ 185ನೇ ಬೆಟಾಲಿಯನ್‍ನ ಆವರಣದೊಳಗೆ ನುಗ್ಗುವ ಮುನ್ನ ಗ್ರೆನೇಡ್ ಎಸೆದು ಗುಂಡಿನ ದಾಳಿ ಆರಂಭಿಸಿದ್ದರು ಸ್ಟೇಷನ್‍ನಲ್ಲಿ ಎಷ್ಟು ಮಂದಿ ಸಿಆರ್‍ಪಿಎಫ್ ಯೊಧರನ್ನು ನಿಯೋಜಿಸಲಾಗಿತ್ತು ಎಂಬುದು ತಿಳಿದುಬಂದಿಲ್ಲ. ಆದ್ರೆ ಕೆಲವೇ ಕ್ಷಣಗಳಲ್ಲಿ ಕಾರ್ಯಾಚರಣೆ ಶುರು ಮಾಡಲಾಯ್ತು.

    ಶೂಟೌಟ್‍ನ ಆರಂಭಿಕ ಗಂಟೆಗಳಲ್ಲಿ ಸಿಆರ್‍ಪಿಎಫ್ ಸಿಬ್ಬಂದಿ ಶರೀಫ್ ಉದ್ ದಿನ್ ಗನಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ರು. ನಂತರ ಎನ್‍ಕೌಂಟರ್‍ನಲ್ಲಿ ಯೋಧರಾದ ರಾಜೇಂದ್ರ ನೇನ್, ಪಿಕೆ ಪಾಂಡಾ ಬಲಿಯಾದ್ರು. ಕಟ್ಟಡದೊಳಗೆ ಸಿಲುಕಿದ್ದ ಅಧಿಕಾರಿ ಕುಲ್‍ದೀಪ್ ರೈ ಹೃದಯಾಘಾತದಿಂದ ಸಾವನ್ನಪ್ಪಿದ್ರು.

    ಉಗ್ರರು ಸಿಆರ್‍ಪಿಎಫ್ ಕೇಂದ್ರವನ್ನು ಟಾರ್ಗೆಟ್ ಮಾಡಿದ್ದಾರೆಂಬ ಎಚ್ಚರಿಕೆಯ ಮಧ್ಯೆಯೂ ಈ ದಾಳಿ ನಡೆಸಿದೆ. ದಾಳಿ ಬಗ್ಗೆ ಮೊದಲೇ ಗುಪ್ತಚರ ಮಾಹಿತಿ ಇತ್ತು ಎಂದು ಪೊಲೀಸರು ಹೇಳಿದ್ದಾರೆ.

    ಕಳೆದ 2-3 ದಿನಗಳಿಂದ ಉಗ್ರರು ದಾಳಿಗೆ ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಇತ್ತು. ಈ ಮುಂಚೆ ಅವರಿಗೆ ಸೂಕ್ತ ಸ್ಥಳ ಹಾಗೂ ಸಮಯ ಸಿಕ್ಕಿರಲಿಲ್ಲ. ಹೀಗಾಗಿ ನಿನ್ನೆ ರಾತ್ರಿ ದಾಳಿ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಎಸ್‍ಪಿ ವೈದ್ ಹೇಳಿದ್ದಾರೆ.

  • ಮದುವೆ ದಿನವೇ ಶಿಕ್ಷಕ ಜೋಡಿ ಕೆಲಸದಿಂದ ವಜಾ- ಅವರ ‘ರೊಮ್ಯಾನ್ಸ್’ ಮಕ್ಕಳ ಮೇಲೆ ಪರಿಣಾಮ ಬೀರುತ್ತೆ ಎಂದ ಶಾಲೆ

    ಮದುವೆ ದಿನವೇ ಶಿಕ್ಷಕ ಜೋಡಿ ಕೆಲಸದಿಂದ ವಜಾ- ಅವರ ‘ರೊಮ್ಯಾನ್ಸ್’ ಮಕ್ಕಳ ಮೇಲೆ ಪರಿಣಾಮ ಬೀರುತ್ತೆ ಎಂದ ಶಾಲೆ

    ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡ್ತಿದ್ದ ನವವಿವಾಹಿತ ದಂಪತಿಯನ್ನ ಮದುವೆಯ ದಿನವೇ ಕೆಲಸದಿಂದ ವಜಾ ಮಾಡಲಾಗಿದೆ. ಈ ಜೋಡಿಯ ರೊಮ್ಯಾನ್ಸ್ ನಿಂದ ಮಕ್ಕಳ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಶಾಲೆಯವರು ಹೇಳಿಕೆ ನೀಡಿದ್ದಾರೆ.

    ಪುಲ್ವಾಮಾದ ಟ್ರಾಲ್ ಟೌನ್‍ನವರಾದ ರಾತಿಖ್ ಭಟ್ ಹಾಗೂ ಸುಮಾಯಾ ಬಶೀರ್ ಕೆಲಸದಿಂದ ವಜಾಗೊಂಡಿರೋ ದಂಪತಿ. ಈ ಇಬ್ಬರೂ ಕಳೆದ ಹಲವು ವರ್ಷಗಳಿಂದ ಪಾಂಫೋರ್ ಮುಸ್ಲಿಂ ಎಜಿಕೇಷನಲ್ ಇನ್ಸ್‍ಟಿಟ್ಯೂಟ್‍ನಲ್ಲಿ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಕ್ರಮವಾಗಿ ಕೆಲಸ ಮಾಡುತ್ತಿದ್ದರು. ಆದ್ರೆ ಇದ್ದಕ್ಕಿದ್ದಂತೆ ನವೆಂಬರ್ 30 ರಂದು ನಮ್ಮ ಮದುವೆ ನಡೆದ ದಿನವೇ ಶಾಲೆಯವರು ನಮ್ಮನ್ನು ಕೆಲಸದಿಂದ ತೆಗೆದುಹಾಕಿದ್ದಾರೆಂದು ದಂಪತಿ ಹೇಳಿದ್ದಾರೆ.

    ಈ ಬಗ್ಗೆ ಶಾಲೆಯ ಪ್ರಿನ್ಸಿಪಲ್ ಯಾವುದೇ ಹೇಳಿಕೆ ನೀಡಿಲ್ಲ. ಆದರೆ ಶಾಲೆಯ ಅಧ್ಯಕ್ಷರಾದ ಬಶೀರ್ ಮಸೂದಿ ಪ್ರತಿಕ್ರಿಯೆ ನೀಡಿದ್ದು, ಇವರಿಬ್ಬರೂ ಮದುವೆಗೆ ಮುಂಚೆ ರೊಮ್ಯಾಂಟಿಕ್ ರಿಲೇಷನ್‍ಶಿಪ್‍ನಲ್ಲಿ ಇದ್ದ ಕಾರಣ ಕೆಲಸದಿಂದ ತೆಗೆಯಲಾಗಿದೆ ಎಂದು ಹೇಳಿದ್ದಾರೆ. ಶಾಲೆಯಲ್ಲಿ 2 ಸಾವಿರ ಮಕ್ಕಳಿದ್ದು, 200 ಸಿಬ್ಬಂದಿ ಕೆಲಸ ಮಾಡುತ್ತಾರೆ. ಈ ಜೋಡಿಯ ರೊಮ್ಯಾನ್ಸ್‍ನಿಂದ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಮಸೂದಿ ಹೇಳಿದ್ದಾರೆ.

    ಆದ್ರೆ ದಂಪತಿ ತಮ್ಮ ಮದುವೆ ಹಿರಿಯರು ನಿಶ್ಚಯಿಸಿದ್ದು ಎಂದು ಹೇಳಿದ್ದಾರೆ. ನಮ್ಮದು ಅರೇಂಜ್ಡ್ ಮ್ಯಾರೇಜ್. ಕೆಲವು ತಿಂಗಳ ಹಿಂದೆಯಷ್ಟೇ ನಮ್ಮ ನಿಶ್ಚಿತಾರ್ಥವಾಗಿತ್ತು. ನಂತರ ಸುಮಾಯಾ ಶಾಲಾ ಸಿಬ್ಬಂದಿಗೆ ಪಾರ್ಟಿ ಕೊಟ್ಟಿದ್ದರಿಂದ ಈ ವಿಷಯ ಶಾಲೆಯ ಎಲ್ಲಾ ಆಡಳಿತ ಮಂಡಳಿವರಿಗೆ ಗೊತ್ತಿತ್ತು ಎಂದು ರಾತಿಖ್ ಭಟ್ ಹೇಳಿದ್ದಾರೆ. ಒಂದು ವೇಳೆ ನಮ್ಮ ಸಂಬಂಧದಿಂದ ಈ ರೀತಿ ಆಗುತ್ತಿದೆ ಎಂದಾದರೆ ಆ ಬಗ್ಗೆ ವಿವರಣೆ ನೀಡಲು ಶಾಲೆಯವರು ಯಾಕೆ ಅವಕಾಶ ನೀಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಮದುವೆಗಾಗಿ ಒಂದು ತಿಂಗಳ ಹಿಂದೆಯೇ ರಜೆ ಕೋರಿದ್ದೆವು. ರಜೆಯನ್ನು ಮಂಜೂರು ಮಾಡಿದ್ದರು. ಒಂದು ವೇಳೆ ಅವರು ಹೇಳಿದಂತೆ ನಾವು ರೊಮ್ಯಾಂಟಿಕ್ ಸಂಬಂಧದಲ್ಲಿ ಇದ್ದಿದ್ದಾದ್ರೆ ಮದುವೆ ಬಗ್ಗೆ ಘೋಷಿಸಿದ ಮೇಲೆ ಅವರಿಗೆ ಇದು ಗೊತ್ತಾಯ್ತಾ? ಎಂದು ಹೇಳಿದ್ದಾರೆ. ಶಾಲೆಯವರು ನಮ್ಮ ಘನತೆಗೆ ಧಕ್ಕೆ ತಂದಿದ್ದಾರೆಂದು ದಂಪತಿ ಆರೋಪಿಸಿದ್ದಾರೆ. ನಾವು ಮದುವೆಯಾಗಿದ್ದೀವಿ. ಯಾವುದೇ ಪಾಪ ಅಥವಾ ಅಪರಾಧ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

  • ಜಮ್ಮು ಕಾಶ್ಮೀರದಲ್ಲಿ 36,34,78,500 ರೂ. ಮೌಲ್ಯದ ಹಳೆ ನೋಟು ಜಪ್ತಿ

    ಜಮ್ಮು ಕಾಶ್ಮೀರದಲ್ಲಿ 36,34,78,500 ರೂ. ಮೌಲ್ಯದ ಹಳೆ ನೋಟು ಜಪ್ತಿ

    ಶ್ರೀನಗರ: ನೋಟ್ ಬ್ಯಾನ್ ಗೆ ಒಂದು ವರ್ಷ ಪೂರ್ಣಗೊಳ್ಳುವ ಮುನ್ನ ದಿನವೇ ಜಮ್ಮು ಕಾಶ್ಮೀರದಲ್ಲಿ 36.34 ಕೋಟಿ ರೂ. ಮೌಲ್ಯದ ಹಳೆಯ ನೋಟುಗಳು ಪತ್ತೆಯಾಗಿದೆ.

    ರಾಷ್ಟ್ರೀಯ ತನಿಖಾ ದಳ(ಎನ್‍ಐಎ) 36,34,78,500 ಕೋಟಿ ರೂ. ಹಳೆಯ ನೋಟುಗಳನ್ನು ವಶ ಪಡಿಸಿಕೊಂಡಿಸಿ 9 ಮಂದಿಯನ್ನು ಬಂಧಿಸಿದ್ದಾರೆ.

    ಕಾಶ್ಮೀರಲ್ಲಿ ಉಗ್ರ ಚಟುವಟಿಕೆಗಳಿಗೆ ಆರ್ಥಿಕ ಸಹಕಾರ ನೀಡುತ್ತಿದ್ದ ವ್ಯಕ್ತಿಗಳನ್ನು ಬಂಧಿಸಿದಾಗ ಈ ಹಣ ಪತ್ತೆಯಾಗಿದೆ ಎಂದು ಎನ್‍ಐಎ ತಿಳಿಸಿದೆ ಎಂಬುದಾಗಿ ಮಾಧ್ಯಮಗಳು ವರದಿ ಮಾಡಿವೆ.

    ಪ್ರದೀಪ್ ಚೌಹಾಣ್, ಭಗವಾನ್ ಸಿಂಗ್, ವಿನೋದ್ ಶೆಟ್ಟಿ, ಶಹನವಾಜ್ ಮೀರ್, ದೀಪಕ್, ಮಜೀದ್ ಸೂಫಿ, ಇಜಲ್ ಹಸನ್, ಜಸ್ವಿಂದರ್ ಸಿಂಗ್, ಉಮೈರ್ ದಾರ್ ಬಂಧಿತ ಆರೋಪಿಗಳು.

    ಕೆಲ ದಿನಗಳ ಹಿಂದೆ ಉಗ್ರರಿಗೆ ಹಣಕಾಸು ಪೂರೈಕೆ ಮಾಡುತ್ತಿದ್ದ ಆರೋಪದಡಿ ಜಮ್ಮು ಕಾಶ್ಮೀರದ ಉದ್ಯಮಿಯನ್ನು ಬಂಧಿಸಿ ತಿಹಾರ್ ಜೈಲಿಗೆ ಅಟ್ಟಲಾಗಿತ್ತು. ಹೀಗಾಗಿ ಪತ್ತೆಯಾಗಿರುವ ಹಣ ಈ ವ್ಯಕ್ತಿಗೆ ಸೇರಿದ್ದಾ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇನ್ನೂ ಸಿಕ್ಕಿಲ್ಲ.

    ಸೋಮವಾರ ಜಮ್ಮು ಜಿಲ್ಲೆಯಲ್ಲಿ ಮೂವರನ್ನು ಬಂಧಿಸಿ 44 ಸಾವಿರ ರೂ. ಮೌಲ್ಯದ ನಕಲಿ ನೋಟುಗಳನ್ನು ವಶ ಪಡಿಸಲಾಗಿತ್ತು.

    ಪ್ರಧಾನಿ ನರೇಂದ್ರ ಮೋದಿಯವರು ಕಳೆದ ವರ್ಷದ ನವೆಂಬರ್ 8ರಂದು ನೋಟ್ ಬ್ಯಾನ್ ಭಾಷಣದಲ್ಲಿ, ಕಪ್ಪು ಹಣ ಮತ್ತು ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು 500, 1 ಸಾವಿರ ರೂ. ನೋಟುಗಳನ್ನು ನಿಷೇಧಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದರು. ನೋಟ್ ಬ್ಯಾನ್ ಬಳಿಕ ಜಮ್ಮು ಕಾಶ್ಮೀರದಲ್ಲಿ ಕಲ್ಲುತೂರಾಟ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿತ್ತು.

     

     

  • ಕತ್ತು ಸೀಳಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ

    ಕತ್ತು ಸೀಳಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ

    ಶ್ರೀನಗರ: ಜಮ್ಮು-ಕಾಶ್ಮೀರದ ಸೋಫಿಯಾಜ ಜಿಲ್ಲೆಯಲ್ಲಿ 30 ವರ್ಷದ ಬಿಜೆಪಿ ಯುವಮೋರ್ಚಾದ ನಾಯಕ ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯವನ್ನು ಉಗ್ರರು ನಡೆಸಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

    ಮೃತನನ್ನು ಗೌರ್ ಅಹ್ಮದ್ ಭಟ್ ಎನ್ನಲಾಗಿದೆ. ಇವರು ಶೋಫಿಯಾನಾದ ಬೊನಗಮ್ ಪ್ರದೇಶದ ನಿವಾಸಿ. ಕತ್ತು ಸೀಳಿದ ಸ್ಥಿತಿಯಲ್ಲಿ ಕಿಲೋರಾರಾದಲ್ಲಿನ ಆರ್ಚರ್ಡ್ ನಲ್ಲಿ ಗೌರ್ ಮೃತದೇಹ ಪತ್ತೆಯಾಗಿದೆ. ಭಟ್ ಭಾರತೀಯ ಜನತಾ ಯುವಮೋರ್ಚಾದ ಜಿಲ್ಲಾಧ್ಯಕ್ಷರಾಗಿದ್ದರು.

    ಗೌರ್ ಸಾವಿನ ಸುದ್ದಿ ಹಬ್ಬುತ್ತಿದ್ದಂತೆಯೇ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಅಂದಿದ್ದಾರೆ.

    ಭವಿಷ್ಯ ರೂಪಿಸುತ್ತಿರುವ ಯುವಕರನ್ನು ಉಗ್ರರು ಟಾರ್ಗೆಟ್ ಮಾಡುತ್ತಿರುವುದನ್ನು ನಿಲ್ಲಿಸಲ್ಲ. ಮೃತ ಗೌರ್ ಕುಟುಂಬದೊಂದಿಗೆ ಬಿಜೆಪಿ ಎಂದಿಗೂ ಇರುತ್ತದೆ ಅಂತಾ ಟ್ವಟ್ಟರ್ ನಲ್ಲಿ ಬರೆದಿದ್ದಾರೆ.

  • ಉಗ್ರರ ಎನ್ ಕೌಂಟರ್ ಗೆ ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಾಯ

    ಉಗ್ರರ ಎನ್ ಕೌಂಟರ್ ಗೆ ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಾಯ

    ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭಾರತೀಯ ಸೇನಾ ಯೋಧರು ಮತ್ತು ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಕ್ಯಾಪ್ಟನ್ ಸೇರಿ ಮೂವರು ಗಾಯಗೊಂಡಿದ್ದಾರೆ.

    ಜಿಲ್ಲೆಯ ಝೈನಪೋರಾ ಪ್ರದೇಶದ ಅವನೀರಾ ಪ್ರದೇಶದಲ್ಲಿ ಉಗ್ರರ ಇರುವಿಕೆಯ ಮಾಹಿತಿಯಿಂದ ಯೋಧರು ಶನಿವಾರದಿಂದಲೇ ಕಾರ್ಯಾಚರಣೆ ನಡೆಸಿದ್ದರು ಅಂತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಈ ವೇಳೆ ಸೈನಿಕರು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ಚಕಮಕಿಯಲ್ಲಿ ಐವರು ಯೋಧರು ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದರಲ್ಲಿ ಇಬ್ಬರು ಯೋಧರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ ಅಂತ ಅವರು ಮಾಹಿತಿ ನೀಡಿದ್ದಾರೆ.

    ಇನ್ನೊಂದೆಡೆ ಬಂಡೀಪುರ ಜಿಲ್ಲೆಯ ಸೊಪೊರ್ ಗಡಿ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸೇನಾ ಪಡೆಗಳು ಕಾರ್ಯಾಚರಣೆಗಿಳಿದಿದ್ದರು. ಈ ವೇಳೆ ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಯೋಧರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನಾ ಹಿರಿಯ ಅಧಿಕಾರಿಗಳು ತಿಳಿಸಿದರು.