Tag: jammu kashmir

  • ಎಲ್‌ಒಸಿಯಲ್ಲಿ ಭಾರತ-ಪಾಕ್ ಸಂಘರ್ಷ; ಭಾರತೀಯ ಯೋಧ ಹುತಾತ್ಮ

    ಎಲ್‌ಒಸಿಯಲ್ಲಿ ಭಾರತ-ಪಾಕ್ ಸಂಘರ್ಷ; ಭಾರತೀಯ ಯೋಧ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (LOC) ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ (Andhra Pradesh) ಮೂಲದ ಯೋಧ (Army Jawan) ಹುತಾತ್ಮರಾಗಿದ್ದಾರೆ.

    ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ (Sathya Sai) ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ಹುತಾತ್ಮರಾಗಿದ್ದಾರೆ. ಮುರಳಿ ನಾಯ್ಕ್ ಅವರ ಪಾರ್ಥಿವ ಶರೀರ ಮೇ 10ರ ವೇಳೆಗೆ ಸ್ವಗ್ರಾಮಕ್ಕೆ ತಲುಪುವ ನಿರೀಕ್ಷೆಯಿದೆ. ಇದನ್ನೂ ಓದಿ: ಗುಜರಾತ್ ಸಿಎಂ ಜೊತೆ ಗಡಿ ಜಿಲ್ಲೆಗಳ ಭದ್ರತೆ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ

    ಗುರುವಾರ ರಾತ್ರಿ ಭಾರತದ ವಿರುದ್ಧ ಪಾಕಿಸ್ತಾನ ಸೇನೆ ಜಮ್ಮು ಕಾಶ್ಮೀರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿತು. ಈ ವೇಳೆ ಭಾರತೀಯ ಸೇನೆಯೂ ಪ್ರತಿದಾಳಿ ನಡೆಸಿ ಪಾಕ್‌ಗೆ ತಿರುಗೇಟು ನೀಡಿದೆ. ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಮುರಳಿ ನಾಯ್ಕ್ ಅವರಿಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: India’s Strike | ಪಾಕ್‌ ಮೇಲೆ ಭಾರತ ಪ್ರಯೋಗಿಸಿದ 3 ರಾಷ್ಟ್ರಗಳ ಶಸ್ತ್ರಾಸ್ತ್ರಗಳು ಎಷ್ಟು ಪವರ್‌ಫುಲ್?‌

  • ನಾಳೆ ಜಮ್ಮು ಕಾಶ್ಮೀರದ ಸರ್ಕಾರಿ, ಖಾಸಗಿ ಶಾಲೆಗಳು ಕ್ಲೋಸ್

    ನಾಳೆ ಜಮ್ಮು ಕಾಶ್ಮೀರದ ಸರ್ಕಾರಿ, ಖಾಸಗಿ ಶಾಲೆಗಳು ಕ್ಲೋಸ್

    ಶ್ರೀನಗರ: ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆ ಜಮ್ಮು ಕಾಶ್ಮೀರದ (Jammu Kashmir) ಹಲವು ಭಾಗಗಳಲ್ಲಿ ಎರಡು ದಿನಗಳ ಕಾಲ ಶಾಲೆಗಳನ್ನು ಮುಚ್ಚಲಾಗುವುದು (School Close) ಎಂದು ಕಾಶ್ಮೀರದ ಶಾಲಾ ಶಿಕ್ಷಣ ನಿರ್ದೇಶಕರು ತಿಳಿಸಿದ್ದಾರೆ.

    ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಯೋಗಕ್ಷೇಮದ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮೇ 9 ಹಾಗೂ 10ರಂದು ಬಾರಾಮುಲ್ಲಾ, ಕುಪ್ವಾರಾ, ಉಪ-ವಿಭಾಗ (ಗುರೆಜ್) ಮತ್ತು ಶ್ರೀನಗರ ಮತ್ತು ಅವಂತಿಪೋರಾ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಎರಡು ದಿನಗಳವರೆಗೆ ಮುಚ್ಚಲಾಗುವುದು ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಪಾಕ್‌ನ ಸಿನಿಮಾ, ಹಾಡು, ಪಾಡ್‌ಕಾಸ್ಟ್ ಸ್ಟ್ರೀಮಿಂಗ್ ನಿಲ್ಲಿಸಿ: ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಸರ್ಕಾರ ಆದೇಶ

    ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್ ಜಿಲ್ಲೆಗಳಲ್ಲಿರುವ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು (ಖಾಸಗಿ ಮತ್ತು ಸರ್ಕಾರಿ) ಮೇ 9 ರಂದು ಮುಚ್ಚಲ್ಪಡುತ್ತವೆ ಎಂದು ಜಮ್ಮುವಿನ ವಿಭಾಗೀಯ ಆಯುಕ್ತರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಧ್ವಜಗಳನ್ನು ಇಳಿಸಿ ಬಲೂಚಿಸ್ತಾನ ಧ್ವಜ ಹಾರಾಟ

  • ಉಗ್ರರ ಮೇಲಿನ ದಾಳಿಗೆ ಭಾರತದ ಪ್ರಜೆಗಳ ಮೇಲೆ ಗುಂಡು – 7 ಸಾವು

    ಉಗ್ರರ ಮೇಲಿನ ದಾಳಿಗೆ ಭಾರತದ ಪ್ರಜೆಗಳ ಮೇಲೆ ಗುಂಡು – 7 ಸಾವು

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ (LOC) ಹಾಗೂ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ (Pakistan) ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ 7 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

    ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ (POK) ಭಯೋತ್ಪಾದಕ ತಾಣಗಳನ್ನು ಗುರಿಯಾಗಿರಿಸಿಕೊಂಡು ಭಾರತ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ನಡೆಸಿದೆ. ಸುಮಾರು 100ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಸಬ್‌, ಡೇವಿಡ್‌ ಹೆಡ್ಲಿ ತರಬೇತಿ ಪಡೆದ ಕ್ಯಾಂಪ್‌ ಧ್ವಂಸ: ಭಾರತ

    ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲೆ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಅನೇಕ ಕ್ರಮಗಳನ್ನು ಕೈಗೊಂಡಿತ್ತು. ಮಂಗಳವಾರ ತಡರಾತ್ರಿ 1:45ರ ಸುಮಾರಿಗೆ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ (Operation Sindoor) ಹೆಸರಲ್ಲಿ ಪ್ರಮುಖ ಉಗ್ರರ ತಾಣಗಳನ್ನು ಗುರಿಯಾಗಿಸಿ ಏರ್‌ಸ್ಟ್ರೈಕ್ ನಡೆಸಿತು. ಸುಮಾರು 100ಕ್ಕೂ ಹೆಚ್ಚು ಉಗ್ರರನ್ನು ಸೇನಾಪಡೆ ಹೊಡೆದುರುಳಿಸಿದೆ. ಇದನ್ನೂ ಓದಿ: Operation Sindoor | ತಲೆ ಕೆಡಿಸಿಕೊಂಡು ʻಸಿಂಧೂರʼ ಅರ್ಥ ಹುಡುಕಾಡ್ತಿದೆ ಪಾಕ್‌ – ಗೂಗಲ್‌ನಲ್ಲಿ ಟ್ರೆಂಡ್‌

    ಈ ಬೆನ್ನಲ್ಲೇ ಪಾಕಿಸ್ತಾನ ಎಲ್‌ಒಸಿಯಲ್ಲಿ ಶೆಲ್ ದಾಳಿ ನಡೆಸಿ 7 ನಾಗರಿಕರನ್ನು ಬಲಿ ತೆಗೆದುಕೊಂಡಿದೆ. ಶೆಲ್ ದಾಳಿಯಿಂದಾಗಿ ಪೂಂಚ್‌ನ ವಿವಿಧ ಪ್ರದೇಶಗಳಲ್ಲಿ 35ಕ್ಕೂ ಹೆಚ್ಚು ನಾಗರಿಕರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರದ ಮೂಲಕ ನರಮೇಧಕ್ಕೆ ಉತ್ತರ: ಅಮಿತ್ ಶಾ ಶ್ಲಾಘನೆ

  • ಕಾಶ್ಮೀರದಲ್ಲಿ ಮದ್ದುಗುಂಡುಗಳ ಸಹಿತ ಇಬ್ಬರು ಉಗ್ರರು ಅರೆಸ್ಟ್‌

    ಕಾಶ್ಮೀರದಲ್ಲಿ ಮದ್ದುಗುಂಡುಗಳ ಸಹಿತ ಇಬ್ಬರು ಉಗ್ರರು ಅರೆಸ್ಟ್‌

    ಶ್ರೀನಗರ: ಕಾಶ್ಮೀರದಲ್ಲಿ (Jammu Kashmir) ಮದ್ದುಗುಂಡುಗಳ ಸಹಿತ ಇಬ್ಬರು ಭಯೋತ್ಪಾದಕರನ್ನು (Terrorists) ಬಂಧಿಸಲಾಗಿದೆ.

    ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಬುಚ್‌ಪೋರಾ ಪಟ್ಟಣದಲ್ಲಿ ತಪಾಸಣೆ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರ ಸಹಚರರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ದಕ್ಷಿಣ ಏಷ್ಯಾ ಶಾಂತಿಗಾಗಿ ಪಾಕ್‌ಗೆ ನಮ್ಮ ಬೆಂಬಲವಿದೆ – ಚೀನಾ


    ಬಂಧಿತರಿಂದ ಪಿಸ್ತೂಲ್, ಗ್ರೆನೇಡ್ ಮತ್ತು 15 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ನರಮೇಧದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದ್ದು 10ಕ್ಕೂ ಹೆಚ್ಚು ಉಗ್ರರ ಮನೆಗಳನ್ನು ಸ್ಫೋಟಿಸಲಾಗಿದೆ.

  • ಕಾಶ್ಮೀರದಲ್ಲಿ 2 ಜಲವಿದ್ಯುತ್ ಯೋಜನೆಗಳಿಗೆ ಚಾಲನೆ – ಪಾಕ್‌ಗೆ ಶಾಕ್‌

    ಕಾಶ್ಮೀರದಲ್ಲಿ 2 ಜಲವಿದ್ಯುತ್ ಯೋಜನೆಗಳಿಗೆ ಚಾಲನೆ – ಪಾಕ್‌ಗೆ ಶಾಕ್‌

    ಶ್ರೀನಗರ (ರಾಂಬನ್): ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಎರಡು ಪ್ರಮುಖ ಜಲವಿದ್ಯುತ್ ಯೋಜನೆಗಳಾದ ಸಲಾಲ್ ಮತ್ತು ಬಾಗ್ಲಿಹಾರ್ ಡ್ಯಾಂಗಳಲ್ಲಿ (Salal And Baglihar Dam) ಜಲಾಶಯ ಸಾಮರ್ಥ್ಯವನ್ನು ಹೆಚ್ಚಿಸುವ ಕಾಮಗಾರಿಯನ್ನು ಭಾರತ ಆರಂಭಿಸಿದೆ. ಈ ಕಾಮಗಾರಿಯಿಂದ ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

    ಸಲಾಲ್ (690 ಮೆಗಾವ್ಯಾಟ್) ಮತ್ತು ಬಾಗ್ಲಿಹಾರ್ (900 ಮೆಗಾವ್ಯಾಟ್) ಜಲವಿದ್ಯುತ್ ಯೋಜನೆಗಳಲ್ಲಿ ಜಲಾಶಯದಲ್ಲಿ ಶೇಖರವಾದ ಹೂಳು ತೆಗೆದುಹಾಕಲು ʻಫ್ಲಶಿಂಗ್ʼ ಪ್ರಕ್ರಿಯೆಯನ್ನು ಮೇ 1 ರಿಂದ 3 ದಿನಗಳ ಕಾಲ ನಡೆಸಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ಬುಡಕ್ಕೆ `ಜಲ’ಬಾಂಬ್ ಹಾಕಿದ ಭಾರತ!

    ಈ ಕಾಮಗಾರಿಯನ್ನು ಭಾರತದ (India) ಅತಿದೊಡ್ಡ ಜಲವಿದ್ಯುತ್ ಕಂಪನಿಯಾದ ರಾಷ್ಟ್ರೀಯ ಜಲವಿದ್ಯುತ್ ನಿಗಮ (NHPC) ಹಾಗೂ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿಗಳು ಜಂಟಿಯಾಗಿ ನಿರ್ವಹಿಸಿದ್ದಾರೆ. ಈ ಪ್ರಕ್ರಿಯೆಯಿಂದ ಜಲಾಶಯದ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ, ಟರ್ಬೈನ್‌ಗಳಿಗೆ ಹಾನಿಯಾಗದಂತೆ ರಕ್ಷಿಸಿ, ವಿದ್ಯುತ್ ಉತ್ಪಾದನೆಯ ದಕ್ಷತೆಯನ್ನು ಸುಧಾರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ವಿದೇಶಿ ಕಂಪನಿಗಳಿಂದಲೂ ಶಾಕ್‌ – ಭಾರತಕ್ಕೆ ಬಿಸಿ ಮುಟ್ಟಿಸಲು ಹೋಗಿ ಕೈ ಸುಟ್ಟುಕೊಂಡ ಪಾಕ್‌!

    ಸಿಂಧೂ ನದಿ ಜಲ ಒಪ್ಪಂದದ ಪ್ರಕಾರ, ಭಾರತವು ಚಿನಾಬ್, ಝೇಲಂ ಮತ್ತು ಸಿಂಧೂ ನದಿಗಳಲ್ಲಿ ಜಲಾಶಯಗಳನ್ನು ಸಂಗ್ರಹಿಸುವ ಡ್ಯಾಂಗಳನ್ನು ನಿರ್ಮಿಸದೆ ಕೇವಲ ʻರನ್-ಆಫ್-ದಿ-ರಿವರ್ʼ ಜಲವಿದ್ಯುತ್ ಯೋಜನೆಗಳನ್ನು (Hydroelectric Projects) ನಿರ್ಮಿಸಬಹುದಾಗಿತ್ತು. ಆದರೆ, ಈ ಒಪ್ಪಂದವನ್ನು ಏಪ್ರಿಲ್ 2025ರಲ್ಲಿ ಭಾರತವು ಸ್ಥಗಿತಗೊಳಿಸಿದ ಬಳಿಕ, ಈ ಯೋಜನೆಗಳಲ್ಲಿ ಫ್ಲಶಿಂಗ್ ಕಾಮಗಾರಿಯನ್ನು ಆರಂಭಿಸಿದೆ. ಇದನ್ನೂ ಓದಿ: ಮೋದಿಯ ಪ್ರತೀಕಾರದ ಶಪಥಕ್ಕೆ ಬೆವರಿದ ಪಾಕ್ – ಭಾರತಕ್ಕೆ ಪರಮಾಣು ದಾಳಿಯ ಗೊಡ್ಡು ಬೆದರಿಕೆ

    ಪಾಕಿಸ್ತಾನದ ಕೃಷಿ ಮತ್ತು ಜಲವಿದ್ಯುತ್ ಉತ್ಪಾದನೆಗೆ ಭಾರತದ ಮೂಲಕ ಹರಿಯುವ ನದಿಗಳು ಅತಿ ಮುಖ್ಯವಾಗಿವೆ. ಒಪ್ಪಂದದ ಸ್ಥಗಿತಗೊಳಿಕೆಯಿಂದಾಗಿ ಪಾಕಿಸ್ತಾನದ 80% ಕೃಷಿ ಭೂಮಿಗೆ ನೀರಿನ ಪೂರೈಕೆ ಮೇಲೆ ದೀರ್ಘಕಾಲೀನ ಪರಿಣಾಮ ಬೀರಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಪಾಕಿಸ್ತಾನವು ಈ ಕ್ರಮವನ್ನು ಯುದ್ಧದ ಕೃತ್ಯ ಎಂದು ಕರೆದಿದ್ದು, ಅಂತಾರಾಷ್ಟ್ರೀಯ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದೆ.

    ಫ್ಲಶಿಂಗ್ ಪ್ರಕ್ರಿಯೆಯು ಜಲಾಶಯವನ್ನು ಬಹುತೇಕ ಖಾಲಿ ಮಾಡಿ, ಹೂಳು ತೆಗೆದುಹಾಕುವ ಕಾರ್ಯವಾಗಿದೆ. ಈ ಕೆಸರಿನ ಶೇಖರಣೆಯಿಂದಾಗಿ ಸಲಾಲ್ ಮತ್ತು ಬಾಗ್ಲಿಹಾರ್ ಯೋಜನೆಗಳ ವಿದ್ಯುತ್ ಉತ್ಪಾದನೆ ಸಾಮರ್ಥ್ಯವು ಗಣನೀಯವಾಗಿ ಕಡಿಮೆಯಾಗಿತ್ತು. ಈ ಪ್ರಕ್ರಿಯೆಯಿಂದ ವಿದ್ಯುತ್ ಉತ್ಪಾದನೆಯ ದಕ್ಷತೆ ಹೆಚ್ಚಾಗುತ್ತದೆ ಮತ್ತು ಟರ್ಬೈನ್‌ಗಳಿಗೆ ಹಾನಿಯಾಗದಂತೆ ರಕ್ಷಿಸಲಾಗುತ್ತದೆ ಎಂದು ಒಬ್ಬ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ಉಗ್ರರ ದಾಳಿ ಖಂಡಿಸಿ, ತನಿಖೆಗೆ ಸಹಕರಿಸಿ: ಪಾಕ್‌ಗೆ ಬುದ್ದಿಮಾತು ಹೇಳಿದ ಅಮೆರಿಕ

  • ಪಹಲ್ಗಾಮ್‌ ದಾಳಿಗೂ ಮೊದಲೇ ಉಗ್ರರ ದಾಳಿ ಬಗ್ಗೆ ಎಚ್ಚರಿಸಿದ್ದ ಗುಪ್ತಚರ ಇಲಾಖೆ

    ಪಹಲ್ಗಾಮ್‌ ದಾಳಿಗೂ ಮೊದಲೇ ಉಗ್ರರ ದಾಳಿ ಬಗ್ಗೆ ಎಚ್ಚರಿಸಿದ್ದ ಗುಪ್ತಚರ ಇಲಾಖೆ

    ನವದೆಹಲಿ: ಪಹಲ್ಗಾಮ್‌ನಲ್ಲಿ ನರಮೇಧ (Pahalgam Attack) ಮಾಡುವ ಮೊದಲೇ ಉಗ್ರರು ಕಣವೆ ರಾಜ್ಯದಲ್ಲಿ ದಾಳಿ ನಡೆಸಬಹುದು ಎಂದು ಗುಪ್ತಚರ ಇಲಾಖೆ (Intelligence Report) ಎಚ್ಚರಿಕೆ ನೀಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

    ಹೌದು.ಶ್ರೀನಗರ (Srinagara) ಮತ್ತು ಸುತ್ತಮುತ್ತಲಿನ ಹೋಟೆಲ್‌ಗಳಲ್ಲಿ (Hotel) ತಂಗಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಭದ್ರತಾ ಪಡೆ ಮತ್ತು ಸರ್ಕಾರಕ್ಕೆ ಗುಪ್ತಚರ ಮಾಹಿತಿ ನೀಡಲಾಗಿತ್ತು ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಮಾಧ್ಯಮವೊಂದು ಸುದ್ದಿ ಪ್ರಕಟಿಸಿದೆ.

    ಕಾತ್ರಾದಿಂದ ಶ್ರೀನಗರವನ್ನು ಸಂಪರ್ಕಿಸುವ ಮೊದಲ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಏ.19 ರಂದು ಚಾಲನೆ ನೀಡಬೇಕಿತ್ತು. ಈ ದಿನವೇ ಉಗ್ರರು ಕೃತ್ಯ ಎಸಗಿಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಕೆಟ್ಟ ಹವಾಮಾನದಿಂದಾಗಿ ನಿಗದಿಯಾಗಿದ್ದ ಈ ಕಾರ್ಯಕ್ರಮ ರದ್ದಾಗಿತ್ತು.  ಇದನ್ನೂ ಓದಿ: ಭಾರತ-ಪಾಕ್‌ ಉದ್ವಿಗ್ನತೆ ನಡುವೆ ಪಾಕ್‌ ರೇಂಜರ್‌ನನ್ನ ಬಂಧಿಸಿದ ಬಿಎಸ್‌ಎಫ್‌

     

    ದಾಳಿಯ ಬೆದರಿಕೆಯನ್ನು ಪರಿಗಣಿಸಿ ಶ್ರೀನಗರದ ದಾಲ್ ಸರೋವರ ಮತ್ತು ಮೊಘಲ್ ಉದ್ಯಾನವನದ ಮೇಲಿರುವ ಜಬರ್ವಾನ್ ಶ್ರೇಣಿಯ ತಪ್ಪಲಿನಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿತ್ತು.

    ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಪೊಲೀಸ್ ಅಧಿಕಾರಿಗಳು ದಾಳಿಗೆ ಕೆಲವು ದಿನಗಳ ಮೊದಲು ಕಣಿವೆಯಲ್ಲಿ ಬೀಡುಬಿಟ್ಟಿದ್ದರು ಎಂದು ಹೆಸರು ಹೇಳಲು ಇಚ್ಛಿಸದ ಉನ್ನತ ಅಧಿಕಾರಿಯೊಬ್ಬರು ಹೇಳಿದರು.

    ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳಿಗೆ ಗುಪ್ತಚರ ಮಾಹಿತಿ ಸಿಕ್ಕಿತ್ತು. ಈ ಮಾಹಿತಿ ಅನ್ವಯ ಪಹಲ್ಗಾಮ್ ದಾಳಿಗೆ 10-15 ದಿನಗಳ ಮೊದಲು ಶ್ರೀನಗರದ ಹೊರವಲಯದಲ್ಲಿರುವ ಡಚಿಗಾಮ್, ನಿಶಾತ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗಿತ್ತು. ಆದರೆ ಯಾವುದೇ ಫಲಿತಾಂಶ ಸಿಗದ ಕಾರಣ ಏ. 22ರಂದು ಶೋಧ ಕಾರ್ಯಾಚರಣೆ ನಿಲ್ಲಿಸಲಾಯಿತು. ಅದೇ ದಿನ ಉಗ್ರರು ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ದಾಳಿ ನಡೆಸಿದ್ದರು.

  • ಉಗ್ರರ ದಾಳಿ ಮಧ್ಯೆ ಜಮ್ಮು-ಕಾಶ್ಮೀರದಲ್ಲಿ ಶಂಕರಾಚಾರ್ಯ ಜಯಂತಿ ಆಚರಣೆ

    ಉಗ್ರರ ದಾಳಿ ಮಧ್ಯೆ ಜಮ್ಮು-ಕಾಶ್ಮೀರದಲ್ಲಿ ಶಂಕರಾಚಾರ್ಯ ಜಯಂತಿ ಆಚರಣೆ

    – ಮೈಸೂರು & ಬೆಂಗಳೂರಿನಿಂದ ತೆರಳಿದ್ದ 13 ಜನರ ತಂಡದಿಂದ ವಿಶೇಷ ಪೂಜೆ

    ಶ್ರೀನಗರ: ಉಗ್ರರ ದಾಳಿ ಮಧ್ಯೆ ಜಮ್ಮು-ಕಾಶ್ಮೀರದಲ್ಲಿ (Jammu & Kashmir) ಆದಿ ಶಂಕರಾಚಾರ್ಯ (Shankaracharya Jayanti) ಅವರ ಜಯಂತಿ ಆಚರಿಸಲಾಗಿದೆ.

    ಸಿಆರ್‌ಪಿಎಫ್ ತಂಡದ ಸಹಾಯದಿಂದ ವಿಶೇಷ ಹೋಮ ನೆರವೇರಿಸಲಾಗಿದೆ. ಮೈಸೂರು ಮತ್ತು ಬೆಂಗಳೂರಿನಿಂದ ತೆರಳಿದ್ದ 13 ಜನರ ತಂಡ ಈ ವಿಶೇಷ ಪೂಜೆ ಮಾಡಿದೆ. ಇದನ್ನೂ ಓದಿ: ಶಿರಗಾವ್‌ ದೇವಸ್ಥಾನದಲ್ಲಿ ಕಾಲ್ತುಳಿತ; 6 ಸಾವು, 50 ಕ್ಕೂ ಹೆಚ್ಚು ಮಂದಿಗೆ ಗಾಯ

    ಜಮ್ಮು ಕಾಶ್ಮೀರದಲ್ಲಿ ಶಾಂತಿ, ನೆಮ್ಮದಿ ನೆಲೆಸಲೆಂದು ಪ್ರಾರ್ಥಿಸಲಾಗಿದೆ. ದೇಶ ರಕ್ಷಣೆಗಾಗಿ ಯೋಧರಿಗೆ ಹೆಚ್ಚು ಆರೋಗ್ಯ ಶಕ್ತಿ ಸಿಗಲೆಂದು ಆಶಿಸಿ ರುದ್ರಾಭಿಷೇಕ, ಮೃತ್ಯುಂಜಯ ಜಪ ಮಾಡಲಾಗಿದೆ.

    ಜಮ್ಮು-ಕಾಶ್ಮೀರ ತಂಡದಿಂದ ವಿಶೇಷ ವಾದ್ಯಗೋಷ್ಠಿ ಕೂಡ ನಡೆಯಿತು. ಜಿಲ್ಲಾ ಆಡಳಿತದಿಂದ ವಿಶೇಷ ಪೂಜೆ, ಹೋಮ-ಹವನ ನಡೆದಿದೆ. ಡಾಕ್ಟರ್ ನಾಗಲಕ್ಷ್ಮಿ ನಾಗಾರ್ಜುನ್ ಮೈಸೂರು ತಂಡವು ಭರತನಾಟ್ಯದ ಮೂಲಕ ಶಂಕರಾಚಾರ್ಯ ಜೀವನ ಕಥೆಯನ್ನು ಪ್ರಸ್ತುತ ಪಡಿಸಿತು. ಇದನ್ನೂ ಓದಿ: ಕಾಂಗ್ರೆಸ್‍ಗೆ ವೋಟ್ ಹಾಕಿದ್ರೆ ತಾಲಿಬಾನ್ ಸರ್ಕಾರ ಬರತ್ತೆ ಅಂತ ಅವತ್ತೇ ಹೇಳಿದ್ದೆ: ಪ್ರತಾಪ್ ಸಿಂಹ

  • ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕೆ ಪಣ – ಸೈಲೆಂಟ್ ಪ್ಲ್ಯಾನಿಂಗ್, ಮೋದಿ ನಿಗೂಢ ನಡೆ

    ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕೆ ಪಣ – ಸೈಲೆಂಟ್ ಪ್ಲ್ಯಾನಿಂಗ್, ಮೋದಿ ನಿಗೂಢ ನಡೆ

    ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ (Pahalgam Terror Attack) ಪ್ರತಿಕಾರ ಬೇಕು ಎಂದು ಇಡೀ ದೇಶ ಕೇಳುತ್ತಿದೆ. ಈ ನಡುವೆ ಊಹೆಗೂ ಮೀರಿದ ಪ್ರತಿಕಾರ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಘಟನೆ ನಡೆದು ಹತ್ತು ದಿನಗಳು ಕಳೆದರೂ ಮೋದಿ ಸೈಲೆಂಟ್ ಆಗಿ ಕೆಲಸ ಮಾಡುತ್ತಿದ್ದು, ಮೀಟಿಂಗ್‌ಗಳಿಗೆ ಸೀಮಿತವಾಗಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರ ಮುಂದಿನ ಹೆಜ್ಜೆ ಸಾಕಷ್ಟು ನಿಗೂಢತೆ ಮೂಡಿಸಿದೆ.

    ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದು ಹತ್ತು ದಿನಗಳು ಕಳೆದಿದೆ. ಇಡೀ ದೇಶ ಪ್ರತಿಕಾರದ ನಿರೀಕ್ಷೆಯಲ್ಲಿದೆ. ಸೇನೆ ಭಯೋತ್ಪಾದಕ ಬುಡ ಸುಟ್ಟು ಹಾಕುವುದು ಯಾವಾಗ ಎಂದು ಎದುರು ನೋಡುತ್ತಿದ್ದಾರೆ. ಆದರೆ ಪ್ರತಿಕಾರದ ಭರವಸೆ ನೀಡಿದ್ದ ಪ್ರಧಾನಿ ಮೋದಿ ಮಾತ್ರ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: ಫೈರಿಂಗ್ ಕೇಸ್ – ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟಿಸ್

    ಈ ಹಿಂದೆ 2016ರ ಸೆಪ್ಟೆಂಬರ್‌ 18ರಂದು ಉರಿ ಮತ್ತು ಫೆ.14 2019ರಂದು ಪುಲ್ವಾಮ ದಾಳಿ ನಡೆದ 12 ದಿನಗಳ ಅಂತರದಲ್ಲಿ ಪಾಕಿಸ್ತಾನ ಪೋಷಿತ ಭಯೋತ್ಪಾದಕರ ನೆಲೆಗಳಿಗೆ ಬಾಂಬ್ ಸ್ಫೋಟಿಸುವ ಮೂಲಕ ಬಿಸಿ ಮುಟ್ಟಿಸಿತ್ತು. ಆದರೆ ಈಗ ಪಹಲ್ಗಾಮ್ ದಾಳಿಯಾಗಿ ಹತ್ತು ದಿನಗಳ ನಡೆದರೂ ಮೋದಿ ಮೌನವಾಗಿದ್ದಾರೆ. ಸೇನಾ ಮುಖ್ಯಸ್ಥರು ಮತ್ತು ಹಿರಿಯ ಸಂಪುಟ ಸಹದ್ಯೋಗಿಗಳ ಜೊತೆಗೆ ಸಭೆ ನಡೆಸುತ್ತಿರುವ ಮೋದಿ ಈ ಬಾರಿ ದೊಡ್ಡ ಪ್ಲ್ಯಾನ್ ಮಾಡುತ್ತಿದ್ದಾರಾ ಎನ್ನುವ ಅನುಮಾನಗಳನ್ನು ಹುಟ್ಟು ಹಾಕಿದೆ. ಇದನ್ನೂ ಓದಿ: ಸತ್ತವರು ವಾಪಸ್ ಬರಲ್ಲ ಅಂತ ಬಿಟ್ರೆ ನಾಳೆ ನಿಮ್ಮನೆಗೂ ಉಗ್ರರು ಬರ್ತಾರೆ: ಸಿಎಂ ವಿರುದ್ಧ ಶಿವಾಚಾರ್ಯಶ್ರೀ ಕಿಡಿ

    ಘಟನೆ ನಡೆದು ಹತ್ತು ದಿನಗಳು ಕಳೆದರೂ ಭಾರತದಿಂದ ಯಾವುದೇ ದೊಡ್ಡ ಮಿಲಿಟರಿ ಕಾರ್ಯಾಚರಣೆಯ ಘೋಷಣೆಯಾಗಿಲ್ಲ. ಇದಕ್ಕೆ ಹಲವು ಕಾರಣಗಳು ಇರಬಹುದು ಎನ್ನಲಾಗುತ್ತಿದೆ. ಯುದ್ಧದಿಂದ ದೇಶದ ಆರ್ಥಿಕತೆ, ಜನಜೀವನದ ಮೇಲೆ ದೀರ್ಘ ಪರಿಣಾಮ ಬೀರುವ ಸಾಧ್ಯತೆ ಇದೆ. ಇದನ್ನು ತಪ್ಪಿಸಲು ಮೋದಿ ತಾತ್ಕಾಲಿಕ ಮೌನವಾಗಿರಬಹುದು. ಈಗಾಗಲೇ ಪಾಕ್ ವಿರುದ್ಧ ಭಾರತ ಹಲವು ಕ್ರಮಗಳನ್ನು ಕೈಗೊಂಡಿದೆ. ಸಿಂಧೂ ನದಿ ನೀರು ಒಪ್ಪಂದ ರದ್ದು, ವೀಸಾ ನಿರ್ಬಂಧ, ಪಾಕಿಸ್ತಾನದ ರಾಯಭಾರಿಗಳ ಸಂಖ್ಯೆ ಕಡಿಮೆ ಮಾಡುವುದು ಇವೆಲ್ಲ ‘ಯುದ್ಧವಿಲ್ಲದ ಯುದ್ಧ’ ತಂತ್ರವನ್ನು ಸೂಚಿಸುತ್ತವೆ. ಮಿಲಿಟರಿ ಕ್ರಮದ ಬದಲು, ಆರ್ಥಿಕ-ರಾಜತಾಂತ್ರಿಕ ಒತ್ತಡ ಹೇರಲು ಆದ್ಯತೆಯನ್ನು ನೀಡಲಾಗಿದೆ. ಇದರಿಂದ ಪಾಕಿಸ್ತಾನಕ್ಕೆ ದೀರ್ಘಕಾಲದ ಹಾನಿ ಉಂಟಾಗಬಹುದು. ಆದರೆ ತಕ್ಷಣದ ಯುದ್ಧದ ಅಪಾಯವನ್ನು ತಪ್ಪಿಸುತ್ತದೆ. ಯುದ್ಧ ಘೋಷಣೆ ಬದಲು ದಾಳಿಯ ಹಿಂದಿನ ಕುತಂತ್ರಕ್ಕೆ ಸಾಕ್ಷ್ಯ ಕಲೆ ಹಾಕುವ ಯೋಜನೆಯಿಂದ ಮೋದಿ ಮೌನವಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪೌರ ಕಾರ್ಮಿಕರ ಬದುಕಲ್ಲಿ ಬದಲಾವಣೆ ತಂದಿದೆ: ಡಿಕೆಶಿ

    ಯುದ್ದದಿಂದ ದೇಶಕ್ಕೆ ದೊಡ್ಡ ಆರ್ಥಿಕ ಪೆಟ್ಟು ಕೊಡಲಿದ್ದು, ಮೋದಿ ಸರ್ಕಾರದ ಐದು ಟ್ರಿಲಿಯನ್ ಆರ್ಥಿಕತೆ ಕನಸಿಗೆ ಭಂಗವೂ ತರಬಹುದು. ಹೀಗಾಗಿ ಯುದ್ಧ ಘೋಷಿಸುವ ಮುನ್ನ ಹಲವು ಬಾರಿ ಯೋಚನೆ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಈಗಾಗಲೇ ಹಲವು ರಾಜತಾಂತ್ರಿಕ ಪೆಟ್ಟು ಕೊಟ್ಟಿರುವ ಮೋದಿ ಸರ್ಕಾರ ಯುದ್ಧವನ್ನು ಕಡೆಯ ಆಯ್ಕೆ ಎಂದು ಭಾವಿಸಿದಂತೆ ಕಾಣಿಸುತ್ತಿದ್ದು, ಇದಕ್ಕಾಗಿ ಮೋದಿ ಮೌನವಾಗಿರಬಹುದು. ಇದಕ್ಕೆ ಪೂರಕವಾಗಿ ಸಭೆ ನಡೆಸುತ್ತಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ: ಎಎಸ್‍ಪಿಗೆ ಸಿಎಂ ಕೈ ಎತ್ತಿದ್ದಾರೆ, ಏಕವಚನದಲ್ಲಿ ಕರೆದಿದ್ದಾರೆ ಎಂಬುದು ಮಾಧ್ಯಮ ಸೃಷ್ಟಿ: ರಾಜಣ್ಣ

  • ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ, ಬುಡ ಸಮೇತ ಕಿತ್ತುಹಾಕ್ತೀವಿ: ಅಮಿತ್‌ ಶಾ ಗುಡುಗು

    ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ, ಬುಡ ಸಮೇತ ಕಿತ್ತುಹಾಕ್ತೀವಿ: ಅಮಿತ್‌ ಶಾ ಗುಡುಗು

    ನವದೆಹಲಿ: ನಮ್ಮ ಹೋರಾಟ ಮುಗಿಯುವುದಿಲ್ಲ, ಒಬ್ಬ ಭಯೋತ್ಪಾದಕನನ್ನೂ ಬಿಡುವುದಿಲ್ಲ ಎಂದು ಗೃಹ ಸಚಿವ ಅಮಿತ್‌ ಶಾ (Amit Shah) ಗುಡುಗಿದ್ದಾರೆ.

    ಪಹಲ್ಗಾಮ್‌ ದಾಳಿಯ (Pahalgam Terror Attack) ನಂತರ ಮೊದಲ ಬಾರಿಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಮಾತನಾಡಿ ಉಗ್ರರನ್ನು ಸಂಹಾರ ಮಾಡುತ್ತೇವೆ ಎಂದು ತಿಳಿಸಿದರು.

    ಯಾರಾದರೂ ಹೇಡಿತನದ ದಾಳಿ ಮಾಡಿ ಅದು ತಮಗೆ ಸಿಕ್ಕಿದ ದೊಡ್ಡ ಗೆಲುವು ಎಂದು ಭಾವಿಸಿದರೆ ಒಂದು ವಿಷಯವನ್ನು ಅರ್ಥಮಾಡಿಕೊಳ್ಳಿ. ಕೇಂದ್ರದಲ್ಲಿ ಇರುವುದು ನರೇಂದ್ರ ಮೋದಿ ಸರ್ಕಾರ. ಯಾರನ್ನೂ ಬಿಡುವುದಿಲ್ಲ. ಈ ದೇಶದ ಪ್ರತಿಯೊಂದು ಇಂಚಿನಿಂದಲೂ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತುಹಾಕುವುದು ನಮ್ಮ ಸಂಕಲ್ಪ ಮತ್ತು ಆ ಸಂಕಲ್ಪ ಈಡೇರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನಮ್ಮ ಪಡೆಗಳ ಆತ್ಮಸ್ಥೈರ್ಯ ಕುಗ್ಗಿಸ್ತೀರಾ? – ಪಹಲ್ಗಾಮ್‌ ಅರ್ಜಿದಾರರ ವಿರುದ್ಧ ಸುಪ್ರೀಂ ಕೆಂಡಾಮಂಡಲ


    ಭಯೋತ್ಪಾದನೆಯನ್ನು ಹರಡುವ ಎಲ್ಲರಿಗೂ ಇದು ಯುದ್ಧದ ಅಂತ್ಯವಲ್ಲ. ಪ್ರತಿಯೊಬ್ಬ ಉಗ್ರನಿಗೂ ಶಿಕ್ಷೆ ನೀಡಲಾಗುವುದು ಎಂದು ತಿಳಿಸಿದರು.

    140 ಕೋಟಿ ಭಾರತೀಯರು ಮಾತ್ರವಲ್ಲದೇ ಇಡೀ ಜಗತ್ತು ಈ ಹೋರಾಟದಲ್ಲಿ ಭಾರತದೊಂದಿಗೆ ನಿಂತಿದೆ. ಭಯೋತ್ಪಾದನೆಯ ವಿರುದ್ಧದ ಈ ಹೋರಾಟದಲ್ಲಿ ವಿಶ್ವದ ಎಲ್ಲಾ ದೇಶಗಳು ಒಗ್ಗೂಡಿ ಭಾರತದ ಜನರೊಂದಿಗೆ ನಿಂತಿವೆ. ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವವರೆಗೆ, ನಮ್ಮ ಹೋರಾಟ ಮುಂದುವರಿಯುತ್ತದೆ ಎಂದರು. ಇದನ್ನೂ ಓದಿ: ಯುದ್ಧ ಬೇಡ, ಯಾರೂ ಉದ್ಧಾರ ಆಗಲ್ಲ: ರಮ್ಯಾ

    ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ನಾವು ಎಲ್ಲದಕ್ಕೂ ಬಲವಾದ ಉತ್ತರ ನೀಡಿದ್ದೇವೆ, ಅದು ಈಶಾನ್ಯವಾಗಿರಬಹುದು, ಎಡಪಂಥೀಯ ನಕ್ಸಲ್‌ ವಾದದ ಪ್ರದೇಶಗಳಾಗಿರಬಹುದು ಅಥವಾ ಕಾಶ್ಮೀರದಲ್ಲಿ ಭಯೋತ್ಪಾದನೆಯ ನೆರಳಾಗಿರಬಹು. ಯಾರನ್ನೂ ನಾವು ಬಿಡುವುದಿಲ್ಲ. ಈ ದೇಶದ ಪ್ರತಿಯೊಂದು ಇಂಚಿನಿಂದಲೂ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತುಹಾಕುವುದು ನಮ್ಮ ಸಂಕಲ್ಪ ಎಂದು ಗುಡುಗಿದರು.

  • ಪಹಲ್ಗಾಮ್ ದಾಳಿ ಹಿಂದಿನ ‘ನೀನು ಹಿಂದೂನಾ’ ಅಂತ ಒಬ್ಬ ನನಗೆ ಕೇಳಿದ್ದ – ಉಗ್ರನ ಬಗ್ಗೆ ಪ್ರವಾಸಿಗರೊಬ್ಬರ ಸ್ಫೋಟಕ ಹೇಳಿಕೆ

    ಪಹಲ್ಗಾಮ್ ದಾಳಿ ಹಿಂದಿನ ‘ನೀನು ಹಿಂದೂನಾ’ ಅಂತ ಒಬ್ಬ ನನಗೆ ಕೇಳಿದ್ದ – ಉಗ್ರನ ಬಗ್ಗೆ ಪ್ರವಾಸಿಗರೊಬ್ಬರ ಸ್ಫೋಟಕ ಹೇಳಿಕೆ

    – ತನಿಖಾ ತಂಡ ರಿಲೀಸ್ ಮಾಡಿದ ರೇಖಾಚಿತ್ರದಲ್ಲಿ ಇರುವವರ ಪೈಕಿ ಒಬ್ಬ ನನ್ನ ಮಾತಾಡಿಸಿದ್ದ

    ಶ್ರೀನಗರ: ಆ ದಿನ ಉಗ್ರನೊಬ್ಬ ಇವತ್ತು ಜನದಟ್ಟಣೆ ಕಡಿಮೆ ಇದೆ ಎಂದು ನನ್ನ ಜೊತೆ ಮಾತನಾಡಿದ ಎಂದು ಮಹಾರಾಷ್ಟ್ರ (Maharashtra) ಪ್ರವಾಸಿಗ ಆದರ್ಶ್ ಸ್ಫೋಟಕ ಮಾಹಿತಿ ನೀಡಿದ್ದಾರೆ.

    ಏ.21ರಂದು ನಾನು ಕುದುರೆ ತೆಗೆದುಕೊಂಡು ಬೈಸರನ್ ವ್ಯಾಲಿಗೆ ಹೋಗಿದ್ದೆ. ಅಲ್ಲಿ ಮ್ಯಾಗಿ ಅಂಗಡಿ ಬಳಿ ನಿಂತಿದ್ದೆ. ಆಗ ನಾಲ್ಕೈದು ಜನ ಇದ್ದರು. ಆ ಪೈಕಿ ಓರ್ವ ಬಂದು, ನೀನು ಕಾಶ್ಮೀರದವನಾ? ಹಿಂದೂನಾ? ನೀನು ಇಲ್ಲಿಯವರಾ ಥರ ಕಾಣುವುದಿಲ್ಲ ಎಂದು ಕೇಳಿದ್ದ. ಆದರೆ ನಾನು ಇಲ್ಲಾ ನಾನು ಇಲ್ಲಿಯವನೇ ಎಂದು ಹೇಳಿದ್ದೆ. ಹಾಗೆಯೇ ಮಾತನಾಡುತ್ತಾ ಇವತ್ತು ಜನದಟ್ಟಣೆ ತುಂಬಾ ಕಡಿಮೆ ಇದೆ ಎಂದು ಹೇಳಿ ಅಲ್ಲಿಂದ ಹೊರಟುಹೋದರು ಎಂದರು.ಇದನ್ನೂ ಓದಿ: ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ – LOCಯಲ್ಲಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ

    ಅಲ್ಲಿ ನೆಟ್‌ವರ್ಕ್ ಇಲ್ಲದ ಕಾರಣ ಮ್ಯಾಗಿ ಅಂಗಡಿಯವರ ನಂಬರ್ ತೆಗೆದುಕೊಂಡು ಕೆಳಗೆ ಹೋಗಿ ಪೇಮೆಂಟ್ ಮಾಡಿದ್ದೆ. ಮಾರನೇ ದಿನ ಅಲ್ಲಿ ಉಗ್ರರ ದಾಳಿ ಆಯ್ತು. ಅದಾದ ನಂತರ ರೇಖಾಚಿತ್ರ ರಿಲೀಸ್ ಮಾಡಿದ್ದರು. ಈ ಬಗ್ಗೆ ನಾನು ನನ್ನ ತಂದೆಗೆ ಹೇಳಿದೆ. ತನಿಖಾ ತಂಡ ರಿಲೀಸ್ ಮಾಡಿದ ರೇಖಾಚಿತ್ರದ ಪೈಕಿ ಒಬ್ಬ ನನ್ನ ಜೊತೆ ಮಾತನಾಡಿದ್ದ. ಆಗ ನನ್ನ ತಂದೆ ತನಿಖಾ ಸಂಸ್ಥೆಗೆ ಮಾಹಿತಿ ನೀಡಬೇಕು ಎಂದರು. ಆಗ ನಾನು ಇ-ಮೇಲ್ ಮೂಲಕ ಎನ್‌ಐಎಗೆ ಮಾಹಿತಿ ನೀಡಿದೆ ಎಂದು ತಿಳಿಸಿದರು.

    ಏ.22 ರಂದು ಪಹಲ್ಗಾಮ್‌ನ ಬೈಸರನ್ ವ್ಯಾಲಿಯಲ್ಲಿ ನಡೆದ ಹಿಂದೂಗಳ ನರಮೇಧದಲ್ಲಿ ಒಟ್ಟು 26 ಜನರು ಪ್ರಾಣಕಳೆದುಕೊಂಡಿದ್ದರು. ಈ ಪೈಕಿ ಕರ್ನಾಟಕದ ಮೂವರು ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಸದ್ಯ ಈ ಕುರಿತು ಎನ್‌ಐಎ ತನಿಖೆ ನಡೆಸುತ್ತಿದೆ.ಇದನ್ನೂ ಓದಿ: Fashion | ನಾರಿಯರ ಮನಗೆದ್ದ ಚೋಕರ್ ನೆಕ್ಲೆಸ್!